ಸಾರಾಯಿ ಜಾರಿ: ಖರ್ಗೆ ಅಸಮಾಧಾನ

Webdunia
ಮಂಗಳವಾರ, 6 ಮೇ 2008 (17:02 IST)
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಾರಾಯಿ ನಿಷೇಧ ಹಿಂತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜರ್ನಾರ್ಧನ ಪೂಜಾರಿ ಇತ್ತೀಚೆಗೆ ನೀಡಿರುವ ಹೇಳಿಕೆಗೆ ಪಕ್ಷದ ಮುಖಂಡರೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಸಾರಾಯಿ ಜಾರಿಗೊಳಿಸುವುದಾಗಿ ಹೇಳಿರುವುದು ಪೂಜಾರಿ ಅವರವೈಯಕ್ತಿಕ ವಿಚಾರ ವಿನಃ ಪಕ್ಷದ ವಿಚಾರವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರಣಾಳಿಕೆಯಲ್ಲಿ ತಿಳಿಸಿರುವ ಅಂಶಗಳನ್ನು ಜಾರಿಗೆ ತರುತ್ತೇವೆ. ಪ್ರಣಾಳಿಕೆ ಅಂಶಗಳನ್ನು ಬಿಟ್ಟು ನಾಯಕರು ಇತರ ಯಾವುದೇ ವಿಷಯವನ್ನೂ ಪ್ರಸ್ತಾಪಿಸಿದರೂ, ಅದು ಅವರ ವೈಯಕ್ತಿಕ ಅಭಿಪ್ರಾಯಗಳಾಗುತ್ತವೆಯೇ ಹೊರತು ಪಕ್ಷದ್ದಾಗುವುದಿಲ್ಲ ಎಂದು ತಿಳಿಸಿದರು.

ಪಕ್ಷದ ಪ್ರಣಾಳಿಕೆಯನ್ನು ಸಿದ್ದಪಡಿಸುವುದಕ್ಕಾಗಿ ಹಿರಿಯ ಮುಖಂಡ ಸಿ.ಕೆ. ಜಾಫರ್ ಶರೀಫ್ ನೇತೃತ್ವದಲ್ಲಿ ಉನ್ನತ ಸಮಿತಿ ರಚಿಸಲಾಗಿದ್ದು, ರಾಜ್ಯದ ಸಮಗ್ರ ಅಭಿವೃದ್ದಿಯನ್ನು ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆ ಸಿದ್ದಪಡಿಸಲಾಗಿದೆ. ಪ್ರಣಾಳಿಕೆಯಲ್ಲಿ ಸಾರಾಯಿ ನಿಷೇಧ ಕುರಿತು ಪ್ರಸ್ತಾಪ ಮಾಡದೇ ಇರುವುದರಿಂದ ಯಾವುದೇ ಗೊಂದಲ ಬೇಡ ಎಂದು ಅವರು ತಿಳಿಸಿದರು.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

Show comments