ಪುಣೆ ಜಿಲ್ಲೆಯ ಬಾರಾಮತಿ ಕ್ಷೇತ್ರದಲ್ಲಿರುವ ಮಸಾಲವಾಡಿ ಎಂಬ ಗ್ರಾಮದಲ್ಲಿ 16 ಎಪ್ರೀಲ್ ನಂದು ಚುನಾವಣಾ ಪ್ರಚಾರವನ್ನು ನಡೆಸುತ್ತಿದ್ದ ವೇಳೆ ಅಜಿತ್ ಪವಾರ್ ಮೋಟ್ ನೀಡದಿದ್ದರೆ ನೀರಿನ ಸರಬರಾಜನ್ನು ನಿಲ್ಲಿಸುತ್ತೇವೆ ಎಂದಿದ್ದು ದೂರದರ್ಶನದಲ್ಲಿ ಕೂಡ ಪ್ರಸಾರವಾಗಿದೆ ಎಂದು ಆಪ್ ಅಭ್ಯರ್ಥಿ ಸುರೇಶ ಥೋಪಡೆ ವಡಗಾಂವ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತ "ಈ ಊರಿನಲ್ಲಿ ಯಾರಾದರೂ ಸುಪ್ರೀಯಾ ಸುಳೆಗೆ ಮತ ಚಲಾಯಿಸದಿದ್ದರೆ ನಾನು ಅವರಿಗೆ ನೀಡಲಾಗಿರುವ ನೀರಿನ ಸಂಪರ್ಕವನ್ನು ಕತ್ತರಿಸುತ್ತೇನೆ" ಎಂದು ಪವಾರ್ ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
' ಜನರು ಪವಾರ್ ಬಳಿ ನಮಗೆ ಅಗತ್ಯವಿದ್ದಷ್ಟು ನೀರು ಸಿಗುತ್ತಿಲ್ಲ' ಎಂದು ಸಮಸ್ಯೆಯನ್ನು ಹೇಳಿಕೊಂಡಾಗ ಅವರು ಈ ಉತ್ತರವನ್ನು ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಹಾಯಕ ಪೋಲಿಸ್ ನಿರೀಕ್ಷಕರಾದ ವಿಲಾಸ್ ಭೋಸ್ಲೆ, "ಥೋಪಡೆ ಅವರ ದೂರನ್ನು ಸ್ವೀಕರಿಸಲಾಗಿದೆ. ಆದರೆ ಪವಾರ್ ಮೇಲೆ ಇನ್ನೂ ಪ್ರಕರಣವನ್ನು ದಾಖಲಿಸಲಾಗಿಲ್ಲ. ಚುನಾವಣಾ ಆಯೋಗದ ಅಧಿಕಾರಿಗಳು ಆ ವಿಡಿಯೋ ಅಸಲಿಯೋ ಅಥವಾ ನಕಲಿಯೋ ಎಂದು ತನಿಖೆ ನಡೆಸಬೇಕಾಗಿದೆ" ಎಂದಿದ್ದಾರೆ.