Webdunia - Bharat's app for daily news and videos

Install App

ಸಂಸದರ ಕ್ಷಮೆ ಕೇಳಿದ ರಾಯಭಾರಿ

Webdunia
ಮಂಗಳವಾರ, 21 ಆಗಸ್ಟ್ 2007 (17:09 IST)
ಅಣು ಒಪ್ಪಂದಕ್ಕೆ ಸಂಬಂಧಪಟ್ಟಂತೆ ಮಾಧ್ಯಮವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ತಾನು ಉಪಯೋಗಿಸಿದ ವಾಕ್ಯ, ಮಾಧ್ಯಮ ಮಿತ್ರರಿಗೆ ಅನ್ವಯಿಸುತ್ತದೆ ವಿನಃ ಭಾರತೀಯ ಸಂಸದರಿಗಲ್ಲ ಎಂದು ಭಾರತೀಯ ರಾಯಭಾರಿ ರೋನ್ ಸೇನ್ ಹೇಳಿಕೆ ನೀಡಿದ್ದು, ಭಾರತೀಯ ಸಂಸದರ ಮನಸ್ಸಿಗೆ ಬೇಸರವಾಗಿದ್ದಲ್ಲಿ ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ.

ಮಾಧ್ಯಮಗಳು ಅಣು ಒಪ್ಪಂದಕ್ಕೆ ಸಂಬಂಧ ಪಟ್ಟಂತೆ ತಲೆ ಇಲ್ಲದೇ ಜನಪ್ರತಿನಿಧಿಗಳ ಮತ್ತು ಉನ್ನತ ಅಧಿಕಾರವರ್ಗದ ಹೇಳಿಕೆಗಳತ್ತ ತಿರುಗುತ್ತಿದ್ದು ಅದೇ ಮಾತನ್ನೇ ಸಂದರ್ಶನದಲ್ಲಿ ಹೇಳಿದ್ದೆ. ಈ ಹೇಳಿಕೆಯಲ್ಲಿ ಸಂಸದರ ಅಭಿಪ್ರಾಯ ಮತ್ತು ನಿಲುವುಗಳಿಗೆ ಸಂಬಂಧಿಸಿದ್ದಲ್ಲ ಎಂದು ರೋನ್ ಸೇನ್ ನೀಡಿದ ಸ್ಪಷ್ಟೀಕರಣವನ್ನು ಲೋಕಸಭೆಯಲ್ಲಿ ಇಂದು ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಪ್ರಣಬ್ ಮುಖರ್ಜಿ ಓದಿದರು.

ಅಮೆರಿಕದಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ರಾಯಭಾರಿ ರೋನ್ ಸೇನ್ ಅವರು, ಅಲ್ಲಿನ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಭಾರತ- ಅಮೆರಿಕದ ನಡುವಿನ ನಾಗರಿಕ ಅಣು ಒಪ್ಪಂದದ ವಿಚಾರದಲ್ಲಿ ಕೆಲವರು ತಲೆ ಇಲ್ಲದೆ ಸುಮ್ಮನೆ ಬಿಕ್ಕಟ್ಟು ಹುಟ್ಟು ಹಾಕುತ್ತಿದ್ದಾರೆ ಎನ್ನುವ ಅರ್ಥದಲ್ಲಿ ಪ್ರತಿಕ್ರಿಯೆ ನೀಡಿದ್ದರು.

ರೋನ್ ಸೇನ್ ಹೇಳಿಕೆಗೆ ಭಾರತೀಯ ಸಂಸತ್ತಿನಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಎಡಪಕ್ಷಗಳು, ಭಾರತವನ್ನು ಪ್ರತಿನಿಧಿಸಬೇಕಾದ ವ್ಯಕ್ತಿ, ಜಾರ್ಜ್ ಬುಷ್‌ರನ್ನು ಪ್ರತಿನಿಧಿಸುತ್ತಿದ್ದಾರೆ. ಭಾರತ ಮತ್ತು ಅಮೆರಿಕ ನಡುವೆ ನಾಗರಿಕ ಅಣು ಒಪ್ಪಂದದ ಕುರಿತು ಬಿಕ್ಕಟ್ಟು ಉಂಟಾಗಿರುವ ಸಮಯದಲ್ಲಿ ಇಂತಹ ವಿವಾದಾತ್ಮಕ ಹೇಳಿಕೆ ನೀಡಬಾರದಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿ. ರೋನ್‌ ಸೇನ್‌ರನ್ನು ತಕ್ಷಣ ಹಿಂದಕ್ಕೆ ಕರೆಸಿಕೊಳ್ಳಬೇಕು ಎಂದು ಸರಕಾರಕ್ಕೆ ಒತ್ತಾಯ ಮಾಡಿದ್ದವು.

ತಾನು ನೀಡಿರುವ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಲೇ, ರೋನ್ ಸೇನ್ ಸ್ಪಷ್ಟೀಕರಣ ನೀಡಿದ್ದಾರೆ. ಅವರು ನೀಡಿರುವ ಸ್ಪಷ್ಟೀಕರಣದಲ್ಲಿ, ವ್ಯಕ್ತಪಡಿಸಿರುವ ಹೇಳಿಕೆಗಳು ವೈಯಕ್ತಿಕವಾಗಿದ್ದು ಸರಕಾರದ ನಿಲುವು ಅಲ್ಲ ಎಂದು ಹೇಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕ್ಯಾಪ್ಟನ್ ಅಭಿಮನ್ಯುಗೆ ರಾಜೋಚಿತ ಬೀಳ್ಕೋಡುಗೆ ನೀಡಲು ಹೆಚ್ಚಿದ ಒತ್ತಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನಿವೇಶನ ಪಡೆದಿದ್ದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌

ಅಂಬಾರಿಯಿಂದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ಹೊರಗಿಡದಂತೆ ರಾಮಲಿಂಗಾರೆಡ್ಡಿಗೆ ಈಶ್ವರ್ ಖಂಡ್ರೆ ಪತ್ರ

ಮುಖ್ಯಮಂತ್ರಿಗಳು ಹೊಣೆ ಹೊರುವವರೆಗೂ ಹೇಳಿಕೆ ನೀಡುವುದಿಲ್ಲ: ತೇಜಸ್ವಿ ಯಾದವ್ ಮೊದಲ ರಿಯಾಕ್ಷನ್

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಾಗೇಂದ್ರ ರಾಜೀನಾಮೆ ಪಡೆಯಲಿ: ವಿಜಯೇಂದ್ರ

Show comments