Select Your Language

Notifications

webdunia
webdunia
webdunia
webdunia

ರಾಹುಲ್ ಯಾತ್ರೆಗೆ ಎಸ್‌ಪಿ ಕಾರ್ಯಕರ್ತರು ಅಡ್ಡಿ: ಬಂಧನ

ರಾಹುಲ್ ಯಾತ್ರೆಗೆ ಎಸ್‌ಪಿ ಕಾರ್ಯಕರ್ತರು ಅಡ್ಡಿ: ಬಂಧನ
ಫುಲ್ಪುರ್ , ಸೋಮವಾರ, 14 ನವೆಂಬರ್ 2011 (13:06 IST)
PTI
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಹಿವ್ವೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ನಡೆಸುತ್ತಿರುವ ಯಾತ್ರೆಗೆ ಅಡ್ಡಿಪಡಿಸಿದ ಸಮಾಜವಾದಿ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲಕ್ನೋ-ಅಹಮದಾಬಾದ್ ರಸ್ತೆಯಲ್ಲಿ ಪ್ರಯಾಗ್ ಸ್ಟೇಶನ್ ಬಳಿ ಸಮಾಜವಾದಿ ಪಕ್ಷದ ಕಾರ್ಯಕರ್ತರು, ರಸ್ತೆ ತಡೆ ನಡೆಸಿ ರಾಹುಲ್ ಯಾತ್ರೆಗೆ ಅಡ್ಡಿಪಡಿಸುವ ಸಂದರ್ಭದಲ್ಲಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಪ್ರಕಾಶ್ .ಡಿ ತಿಳಿಸಿದ್ದಾರೆ.

ಸಮಾಜವಾದಿ ಪಕ್ಷದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಅಲಹಾಬಾದ್‌ನಿಂದ 30 ಕಿ.ಮೀ ದೂರದಲ್ಲಿರುವ ಫುಲ್ಪುರ್‌ ಪಟ್ಟಣದಲ್ಲಿ ರಾಹುಲ್ ಗಾಂಧಿ ಯಾತ್ರೆಯನ್ನು ಆರಂಭಿಸಲಿದ್ದಾರೆ ಎಂದು ಡಿಐಜಿ ಪ್ರಕಾಶ್ ತಿಳಿಸಿದ್ದಾರೆ.

ಫುಲ್ಪುರ್‌ ಪಟ್ಟಣದಲ್ಲಿ ನಡೆಯಲಿರುವ ಕಾಂಗ್ರೆಸ್ ಯಾತ್ರೆಗಾಗಿ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ. ದಿವಂಗತ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಫುಲ್ಪುರ್ ಕ್ಷೇತ್ರದಿಂದ ಲೋಕಸಭೆಗೆ ಹಲವು ಬಾರಿ ಆಯ್ಕೆಯಾಗಿರುವುದನ್ನು ಸ್ಮರಿಸಬಹುದು.

Share this Story:

Follow Webdunia kannada