Select Your Language

Notifications

webdunia
webdunia
webdunia
webdunia

ಮಾಯಾವತಿಯಿಂದ ಅಧಿಕಾರಿಗಳಿಗೆ ಕಿರುಕುಳ: ಬಿಜೆಪಿ

ಮಾಯಾವತಿಯಿಂದ ಅಧಿಕಾರಿಗಳಿಗೆ ಕಿರುಕುಳ: ಬಿಜೆಪಿ
ಲಕ್ನೋ , ಶನಿವಾರ, 10 ಡಿಸೆಂಬರ್ 2011 (16:20 IST)
PTI
ಮುಖ್ಯಮಂತ್ರಿ ಮಾಯಾವತಿ ನೇತೃತ್ವದ ಸರಕಾರದ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಿದ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಬಿಎಸ್‌ಪಿ ಸರಕಾರದ ಅವಧಿಯ ಕಾಲ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಬಿಜೆಪಿ ವಕ್ತಾರ ವಿಜಯ್ ಬಹಾದ್ದೂರ್ ಪಾಠಕ್ ಹೇಳಿದ್ದಾರೆ.

ಉನ್ನತ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ ಪ್ರೋಮಿಳಾ ಶಂಕರ್ ಅವರನ್ನು ಅಮಾನತ್ತಿನಲ್ಲಿಡಲಾಗಿದೆ. ಮಾಜಿ ಮುಖ್ಯ ಕಾರ್ಯದರ್ಶಿ ಪ್ರಶಾಂತ್ ಮಿಶ್ರಾ ಅವರು ಸ್ವಯಂ ನಿವೃತ್ತಿ ಪಡೆದಿದ್ದಾರೆ. ಮತ್ತೊಬ್ಬ ಐಪಿಎಸ್ ಅಧಿಕಾರಿಯನ್ನು ಹುಚ್ಚಾಸ್ಪತ್ರೆಗೆ ಸೇರಿಸಲಾಗಿದೆ ಎಂದು ಕಿಡಿಕಾರಿದ್ದಾರೆ.

ಮತ್ತೊಬ್ಬ ಐಎಎಸ್ ಅಧಿಕಾರಿ ಹರ್ಮಿಂದರ್ ರಾಜ್ ಸಿಂಗ್ ಸಾವಿನ ಬಗ್ಗೆ ಹಲವಾರು ಅನುಮಾನಗಳಿವೆ. ಐಪಿಎಸ್ ಅಧಿಕಾರಿ ಅಮಿತಾಬ್ ಠಾಕೂರ್ ಕೂಡಾ ನ್ಯಾಯಕ್ಕಾಗಿ ಕೋರ್ಟ್ ಮೆಟ್ಟಲೇರಿದ್ದಾರೆ ಎಂದು ವಿವರಣೆ ನೀಡಿದ್ದಾರೆ.

ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ, ಅಧಿಕಾರಿಗಳ ವರ್ಗಾವಣೆ ಬಗ್ಗೆ ಚುನಾವಣಾ ಆಯೋಗ ಕಟ್ಟು ನಿಟ್ಟಿನ ಕ್ರಮಗಳನ್ನು ಅನುಸರಿಸಬೇಕು ಎಂದು ಬಿಜೆಪಿ ವಕ್ತಾರ ವಿಜಯ್ ಬಹಾದ್ದೂರ್ ಪಾಠಕ್ ಹೇಳಿದ್ದಾರೆ.

Share this Story:

Follow Webdunia kannada