2 ಜಿ ಹಗರಣದಲ್ಲಿ ಗೃಹಸಚಿವ ಪಿ.ಚಿದಂಬರಂ ಅವರು ಭಾಗಿಯಾಗಿರುವ ಆರೋಪವನ್ನು ತಳ್ಳಿಹಾಕಿರುವ ದೂರಸಂಪರ್ಕ ಸಚಿವ ಕಪಿಲ್ ಸಿಬಲ್, ವಿನಾಕಾರಣ ಎನ್ಡಿಎ ಸದಸ್ಯರು ಚಿದಂಬರಂ ಹೆಸರಿಗೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆಂದು ಕಿಡಿಕಾರಿದ್ದಾರೆ.
2 ಜಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ದೂರಸಂಪರ್ಕ ಸಚಿವ ಎ.ರಾಜ, ಆ ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದ ಪಿ.ಚಿದಂಬರಂ ಅವರೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ ಎಂದಿದ್ದಾರೆ.
ಅಲ್ಲದೆ, ಜನವರಿ 10, 2008 ರಂದು 2ಜಿ ತರಂಗಾಂತರ ಹಂಚಿಕೆಯ ಕುರಿತು ದೂರಸಂಪರ್ಕ ಇಲಾಖೆಯಿಂದ ನೀಡಲಾಗಿದೆ ಎನ್ನಲಾಗಿರುವ ಪತ್ರದ ಕುರಿತು ಹಣಕಾಸು ಇಲಾಖೆಗೆ ಯಾವುದೇ ಮಾಹಿತಿ ಇಲ್ಲ ಎಂದು ದಾಖಲೆಗಳು ಸ್ಪಷ್ಟಪಡಿಸುತ್ತಿರುವುದಾಗಿ ತಿಳಿಸಿದ್ದಾರೆ.
ಹಣಕಾಸು ಸಚಿವರಾಗಿದ್ದ ಪಿ.ಚಿದಂಬರಂ ಸೇರಿದಂತೆ ಇಲಾಖೆಯ ಯಾವೊಬ್ಬ ಅಧಿಕಾರಿಯೂ 2ಜಿ ಹಗರಣದಲ್ಲಿ ತಪ್ಪೆಸಗಿಲ್ಲ ಎಂದು ಪುನರುಚ್ಚರಿಸಿದ್ದಾರೆ.