Select Your Language

Notifications

webdunia
webdunia
webdunia
webdunia

ಕರುಣಾನಿಧಿ ವಿರುದ್ಧ ಜಯಾ ಮಾನನಷ್ಟ ಮೊಕದ್ದಮೆ

ಕರುಣಾನಿಧಿ ವಿರುದ್ಧ ಜಯಾ ಮಾನನಷ್ಟ ಮೊಕದ್ದಮೆ
ಚೆನ್ನೈ , ಶನಿವಾರ, 1 ಸೆಪ್ಟಂಬರ್ 2012 (12:52 IST)
PTI
ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಡಿಎಂಕೆ ಅಧ್ಯಕ್ಷ ಎಂ.ಕರುಣಾನಿಧಿ ವಿರುದ್ಧ ತಮಿಳುನಾಡು ಸರಕಾರ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದೆ ಎಂದು ಮೂಲಗಳು ತಿಳಿಸಿವೆ.

ಪ್ರಿನ್ಸಿಪಲ್ ಸೆಷನ್ಸ್‌ ಕೋರ್ಟ್‌ನ ಸರಕಾರಿ ವಕೀಲರು ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಡಿಎಂಕೆ ಅಧ್ಯಕ್ಷ ಕರುಣಾನಿಧಿ ಹೇಳಿಕೆಯನ್ನು ಪ್ರಕಟಿಸಿದ ಮುರಸೋಳಿ ಪತ್ರಿಕೆಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ದಾಖಲಿಸಿದ್ದಾರೆ.

ಕಳೆದ ಆಗಸ್ಚ್ 8 ರಂದು ಡಿಎಂಕೆ ಅಧ್ಯಕ್ಷ ಎಂ.ಕರುಣಾನಿಧಿ ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಅವಮಾನಕಾರಿ ಮತ್ತು ಅವಹೇಳನಕಾರಿಯಾಗಿ ನೀಡಿರುವ ಹೇಳಿಕೆ ಮುರಸೋಳಿ ಪತ್ರಿಕೆಯಲ್ಲಿ ಪ್ರಕಟವಾಗಿತ್ತು ಎಂದು ಸರಕಾರದ ಪರ ವಕೀಲರು ತಿಳಿಸಿದ್ದಾರೆ.

Share this Story:

Follow Webdunia kannada