Webdunia - Bharat's app for daily news and videos

Install App

ಬೆಂಕಿ ಅನಾಹುತ: ಕೂದಲೆಳೆ ಅಂತರದಲ್ಲಿ ಪಾರಾದ ಮಮತಾ ಬ್ಯಾನರ್ಜಿ

Webdunia
ಶುಕ್ರವಾರ, 18 ಏಪ್ರಿಲ್ 2014 (18:30 IST)
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಏಪ್ರಿಲ್ 24 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಮಾಲ್ಡಾ ಜಿಲ್ಲೆಯ ಹೋಟೆಲ್ ಕೋಣೆಯೊಂದರಲ್ಲಿ ಉಳಿದುಕೊಂಡಿದ್ದು,, ಕೋಣೆಯಲ್ಲಿ ಸಂಭವಿಸಿದ ಬೆಂಕಿ ಅನಾಹುತದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ ಎಂದು ವರದಿಯಾಗಿದೆ.
PTI

ಸಂಜೆ ಸುಮಾರು 6,40ರ ಸುಮಾರಿಗೆ ಅವರು ಶೌಚಾಲಯದ ಒಳಗೆ ಇದ್ದ ಸಂದರ್ಭದಲ್ಲಿ ಕೋಣೆಯಲ್ಲಿದ್ದ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ವ್ಯಾಪಿಸಿದ ಹೊಗೆಗೆ ಉಸಿರಾಡಲು ಕಷ್ಟವಾದಾಗ ಆಕೆ ತನ್ನ ಸಹಾಯಕ ಜೈದೀಪ್‌ರನ್ನು ಕೂಗಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಕೆಯ ಕೂಗನ್ನು ಕೇಳಿ ಸಹಾಯಕ್ಕೆ ಧಾವಿಸಿದ ಜೈದೀಪ್ ಅವರಿಗೆ ಬ್ಲಾಂಕೆಟ್‌ನ್ನು ಸುತ್ತಿಕೋಣೆಯಿಂದ ಎಳೆದು ತಂದರು. ಕೋಣೆ ಹೊಗೆಯಿಂದ ತುಂಬಿತ್ತು ಎಂದು ರಾಜ್ಯ ಸಾರಿಗೆ ಸಚಿವ ಮದನ್ ಮಿತ್ರ ಜೊತೆಗಿದ್ದ ಬಾಲಿವುಡ್ ನಟ ಕಂ ರಾಜ್ಯಸಭಾ ಸದಸ್ಯ ಮಿಥುನ್ ಚಕ್ರವರ್ತಿ ತಿಳಿಸಿದ್ದಾರೆ.

ತಕ್ಷಣ ಸ್ಥಳಕ್ಕಾಗಮಿಸಿದ ವೈದ್ಯರು ಅವರನ್ನು ಪರೀಕ್ಷಿಸಿದ್ದಾರೆ. ಅಗ್ನಿಶಾಮಕದಳದವರು ಬೇಗ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬ್ಯಾನರ್ಜಿಯವರು ಆರೋಗ್ಯವಾಗಿದ್ದಾರೆ ಎಂದು ಮಿತ್ರ ತಿಳಿಸಿದ್ದಾರೆ.

ಘಟನೆಯನ್ನು ತನಿಖೆಗೊಳಪಡಿಸಿರುವ ಪೋಲಿಸರು ಶಾರ್ಟ್ ಶರ್ಕ್ಯೂಟಿಂದ ಬೆಂಕಿ ಹತ್ತಿಕೊಂಡಿದೆ ಎಂದು ತಿಳಿಸಿದ್ದಾರೆ. ಬೆಂಕಿ ಹತ್ತಿಕೊಂಡಿರುವುದರ ಹಿಂದೆ ಸಂಚಿನ ಕೈವಾಡವಿದೆ ಎಂದು ಮದನ್ ಮಿತ್ರ ಶಂಕೆ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments