Newsworld News Regional 1005 24 1100524036_1.htm

Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ ಯಡಿಯೂರಪ್ಪ ರಾವಣ: ದೇವೇಗೌಡ ವಾಗ್ದಾಳಿ

ದೇವೇಗೌಡ
ನೆರೆ ಸಂತ್ರಸ್ತರ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ರಾಜ್ಯ ಸರ್ಕಾರದ ಜನಪ್ರತಿನಿಧಿಗಳಿಗೆ ಒದೆಯಿರಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ನೀಡಿದ ಬೆನ್ನಲ್ಲೇ, ನೈಸ್ ವಿಚಾರದಲ್ಲಿ ಮೌನವಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾವಣ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಇಂದು ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನೈಸ್ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದ್ದು, ನೈಸ್ ಯೋಜನೆಯ ವಿಷಯದಲ್ಲಿ ರೈತರಿಗೆ ಮತ್ತು ಬಡವರಿಗೆ ಅನ್ಯಾಯ ಮಾಡಬಾರದು ಎಂದು ವಿನಂತಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದಾಗಿ ಹೇಳಿದರು.

ಅಲ್ಲದೇ ನೈಸ್ ವಿಚಾರದಲ್ಲಿ ತಾನು ಒಂದಿಂಚೂ ಹೆಚ್ಚಿನ ಭೂಮಿಯನ್ನು ನೀಡುವುದಿಲ್ಲ ಎಂದು ಮುಖ್ಯಮಂತ್ರಿಗಳು ವಿಧಾನಮಂಡಲದಲ್ಲಿ ಹೇಳಿದ್ದರೂ ಕೂಡ, ಹೆಚ್ಚುವರಿಯಾಗಿ ಮೂರು ಸಾವಿರ ಎಕರೆ ಜಮೀನನ್ನು ನೀಡುತ್ತಿರುವ ಬಗ್ಗೆಯೂ ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಿರುವುದಾಗಿ ಹೇಳಿದರು.

ಹಾಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಸೀತೆಯನ್ನು ಅಪಹರಿಸಿದ ರಾವಣ ಎಂದು ಪತ್ರದಲ್ಲಿ ಜರೆದಿರುವುದಾಗಿಯೂ ಹೇಳಿದರು. ಯಾಕೆಂದರೆ ಸೀತೆಯಂದೆರೆ ಭೂಮಿ, ವಸುಂಧರೆಯಾಗಿದ್ದಾಳೆ. ಬಡವರ, ರೈತರ ಭೂಮಿ(ಸೀತೆ)ಯನ್ನು ಅಪಹರಿಸಿದ ರಾವಣ ಎಂದು ಬಣ್ಣಿಸಿರುವುದಾಗಿ ಹೇಳಿದರು.

ಕೇವಲ ರಾಜ್ಯದ ಜನರ ದಿಕ್ಕು ತಪ್ಪಿಸುವ ಹೇಳಿಕೆ ನೀಡುತ್ತಿರುವ ಮುಖ್ಯಮಂತ್ರಿಗಳು, ಸುಳ್ಳು ಆಶ್ವಾಸನೆ, ಘೋಷಣೆಗಳನ್ನೇ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ನೈಸ್ ವಿಚಾರದಲ್ಲಿ ಯಡಿಯೂರಪ್ಪ ಕುಮ್ಮಕ್ಕು ನೀಡುತ್ತಿದ್ದಾರೆ ಎಂದರು. ನೈಸ್ ವಿಚಾರದಲ್ಲಿ ಮಾತಿಗೆ ತಪ್ಪಿ ಹೆಚ್ಚುವರಿಯಾಗಿ ಮೂರು ಸಾವಿರ ಎಕರೆ ಭೂಮಿ ನೀಡುತ್ತಿರುವುದು ಸರಿಯೇ ಎಂದು ಪ್ರಶ್ನಿಸಿದರು.

ಯಾವುದೇ ಕಾರಣಕ್ಕೂ ನೈಸ್ ವಿರುದ್ಧದ ಹೋರಾಟ ಕೈಬಿಡುವುದಿಲ್ಲ ಎಂದು ಗುಡುಗಿರುವ ಗೌಡರು, ಜೂನ್ 7ರಿಂದ ಮತ್ತೆ ನೈಸ್ ವಿರುದ್ಧ ಬೀದಿ ಹೋರಾಟ ಮಾಡುವುದಾಗಿ ತಿಳಿಸಿದರು.

Share this Story:

Follow Webdunia kannada