Select Your Language

Notifications

webdunia
webdunia
webdunia
webdunia

ಸಚಿವ ರೇಣುಕಾ ಮೌಲ್ಯಗಳಿಲ್ಲದ ವ್ಯಕ್ತಿ: ಸಂತೋಷ್ ಹೆಗ್ಡೆ

ಸಚಿವ ರೇಣುಕಾ ಮೌಲ್ಯಗಳಿಲ್ಲದ ವ್ಯಕ್ತಿ: ಸಂತೋಷ್ ಹೆಗ್ಡೆ
ಬೆಂಗಳೂರು , ಭಾನುವಾರ, 13 ನವೆಂಬರ್ 2011 (13:38 IST)
PR
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸುಳ್ಳು ಆರೋಪಗಳನ್ನು ಸೃಷ್ಟಿಸಿ ಹಲವು ಪ್ರಕರಣಗಳಲ್ಲಿ ಸಿಲುಕಿಸಿದ ಕಾಂಗ್ರೆಸ್ ಏಜೆಂಟ್ ಎಂದು ಆರೋಪಿಸಿದ್ದ ಅಬಕಾರಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಮೌಲ್ಯಗಳನ್ನು ಹೊಂದಿರದ ವ್ಯಕ್ತಿಗಳ ಆರೋಪಗಳಿಗೆ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಮಾನಸ ಪುತ್ರರಾದ ರೇಣುಕಾಚಾರ್ಯ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿ, ಅಕ್ರಮ ಗಣಿಗಾರಿಕೆಯ ಅಂತಿಮ ವರದಿಯಲ್ಲಿ ಪಕ್ಷಪಾತ ತೋರಿದ್ದಾರೆ. ಮಧ್ಯಂತರ ವರದಿಯಲ್ಲಿ ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಮತ್ತು ಇತರ ಕಾಂಗ್ರೆಸ್ ನಾಯಕರ ಹೆಸರುಗಳು ಅಂತಿಮ ವರದಿಯಲ್ಲಿ ಹೇಗೆ ಕಾಣೆಯಾಗುತ್ತವೆ ಎಂದು ಪ್ರಶ್ನಿಸಿದ್ದರು.

ಅಕ್ರಮ ಗಣಿಗಾರಿಕೆಯಲ್ಲಿ ಯಡಿಯೂರಪ್ಪ ಭಾಗಿಯಾಗಿಲ್ಲ. ಕೆಲ ವ್ಯಕ್ತಿಗಳ ಶಿಫಾರಸ್ಸಿನಂತೆ ನಡೆದುಕೊಂಡಿದ್ದಾರೆ. ಕೇವಲ ಯಡಿಯೂರಪ್ಪ ಮತ್ತು ಬಿಜೆಪಿ ಸರಕಾರವನ್ನು ಗುರಿಯಾಗಿಸಿಕೊಂಡು ಅಂತಿಮ ವರದಿಯನ್ನು ತಯಾರಿಸಲಾಗಿದೆ ಎಂದು ಬಿಜೆಪಿ ಸಂಸತ್ ಸದಸ್ಯ ಡಿ.ಬಿ.ಚಂದ್ರೇಗೌಡ ಪುಸ್ತಕ ಬಿಡುಗಡೆ ಮಾಡಿದ್ದಾರೆ.

Share this Story:

Follow Webdunia kannada