Webdunia - Bharat's app for daily news and videos

Install App

ಪ್ರಧಾನಿಯಾಗೋ ಕನಸಿಗಾಗಿ ಆಡ್ವಾಣಿ ರಥಯಾತ್ರೆ: ಮೊಯ್ಲಿ

Webdunia
ಭಾನುವಾರ, 20 ನವೆಂಬರ್ 2011 (17:34 IST)
ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ ರಥಯಾತ್ರೆ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ, ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ, ತಾವು ಮುಂದಿನ ಪ್ರಧಾನಿಯಾಗಬೇಕೆಂಬ ವೈಯಕ್ತಿಕ ಅಜೆಂಡಾದ ಮೇಲೆ ಅವರು ರಥಯಾತ್ರೆ ನಡೆಸಿರುವುದಾಗಿ ಆರೋಪಿಸಿದರು.

ಈ ಮೊದಲು ಪ್ರಧಾನಿ ಗದ್ದುಗೆಗೆ ಏರಬೇಕೆಂಬ ಅವರ ಕನಸು ಭಗ್ನವಾಗಿತ್ತು. ಇದೀಗ ರಥಯಾತ್ರೆ ಮಾಡುವ ಮೂಲಕ ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ಹೊರಟಿದ್ದಾರೆಂದು ಭಾನುವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದರು.

ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರ ಹೋರಾಟ ನೋಡಿದ ಮೇಲೆ ಆಡ್ವಾಣಿಯವರಿಗೆ ಈ ರಥಯಾತ್ರೆಯ ಕಲ್ಪನೆ ಬಂದಿದೆ. ಅಲ್ಲದೇ ಆಡ್ವಾಣಿಯವರು ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯಷ್ಟು ದೊಡ್ಡ ಮನುಷ್ಯ ಕೂಡ ಅಲ್ಲ ಎಂದು ಅಭಿಪ್ರಾಯವ್ಯಕ್ತಪಡಿಸಿದರು. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಬಿಜೆಪಿ ಮುಖಂಡರು ಮೊದಲು ತಮ್ಮ ಪಕ್ಷದಲ್ಲಿನ ಭ್ರಷ್ಟಾಚಾರವನ್ನು ತಡೆಗಟ್ಟಲಿ ಎಂದು ಸಲಹೆ ನೀಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments