ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅನಂತಕುಮಾರ್, ಪಕ್ಷವು ಸದಾನಂದಗೌಡರ ಪರವಾಗಿರುವುದರಿಂದ ಅವರ ಗೆಲುವಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಹೇಳಿದ್ದಾರೆ.
ಅಣ್ಣಾ ಹೋರಾಟಕ್ಕೆ ಬೆಂಬಲ ಸಶಕ್ತ ಲೋಕಪಾಲ ಮಸೂದೆಗೆ ಆಗ್ರಹಿಸಿ ಅಣ್ಣಾ ಹಜಾರೆ ಅವರು ನವದೆಹಲಿಯ ಜಂತರ್ಮಂತರ್ನಲ್ಲಿ ನಡೆಸುತ್ತಿರುವ ಒಂದು ದಿನದ ಸಂಕೇತಿಕ ಮುಷ್ಕರಕ್ಕೆ ಬಿಜೆಪಿ ಬೆಂಬಲಿಸಲಿದೆ ಎಂದು ಅನಂತ ಕುಮಾರ್ ಹೇಳಿದರು.
ಲೋಕಪಾಲ ವ್ಯಾಪ್ತಿಗೆ ಪ್ರಧಾನಿ ಹಾಗೂ ಸಿಬಿಐ ಸೇರಿಸಬೇಕು ಎಂದು ಪ್ರತಿಪಕ್ಷಗಳು ನಿರ್ಣಯ ಮಂಡಿಸಿದ್ದರೂ ಸಹಾ ಲೋಕಪಾಲ ಮಸೂದೆ ಸ್ಥಾಯಿ ಸಮಿತಿ ಇದನ್ನು ಪರಿಗಣಿಸಿಲ್ಲ. ಹಾಗಾಗಿ ಬಿಜೆಪಿ ಲೋಕಪಾಲ ಮದೂದೆ ಕರಡಿಗೆ ವಿರೋಧ ವ್ಯಕ್ತಪಡಿಸಿದೆ ಎಂದು ಅನಂತ ಕುಮಾರ್ ತಿಳಿಸಿದರು.