ಕಲಾಪ ಮುಗಿಸಿದ ನಂತರ ಸಂಜೆ ಕಚೇರಿಯಲ್ಲಿ ಉಪಾಹಾರ ಸೇವಿಸುತ್ತಿದ್ದ ಸಂದರ್ಭದಲ್ಲಿ ಅವರಿಗೆ ಎದೆನೋವು ಕಾಣಿಸಿಕೊಂಡಿತು. ಕೋರ್ಟ್ ಸಿಬ್ಬಂದಿ ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಒಂದು ತಿಂಗಳ ಹಿಂದೆ ಸಭಾಹಿತ್ ಅವರಿಗೆ ಹೃದಯಾಘಾತವಾಗಿದ್ದು, ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದರೂ ಬಾಕಿ ಇರುವ ಹಲವಾರು ಪ್ರಕರಣಗಳ ವಿಚಾರಣೆ ಪೂರ್ಣಗೊಳಿಸಲು ಕಚೇರಿಗೆ ಆಗಮಿಸಿದ್ದರು ಎಂದು ಕಚೇರಿ ಸಿಬ್ಬಂದಿ ತಿಳಿಸಿದ್ದಾರೆ. ಕೋರ್ಟ್ ಗೆ ರಜೆ
ನ್ಯಾಯಮೂರ್ತಿ ವಿ.ಜಿ. ಸಭಾಹಿತ್ ಅವರ ನಿಧನದ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸೂಚಿಸಲು ರಾಜ್ಯ ಹೈಕೋರ್ಟ್, ಧಾರವಾಡ ಹಾಗೂ ಗುಲ್ಬರ್ಗ ಸಂಚಾರಿ ಪೀಠಗಳಿಗೂ ಮಂಗಳವಾರ ರಜೆ ನೀಡಲಾಗಿದೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ತಿಳಿಸಿದ್ದಾರೆ.