Select Your Language

Notifications

webdunia
webdunia
webdunia
webdunia

ಯಡಿಯೂರಪ್ಪ ಆಸೆ ಈಡೇರಲು ಸಾಧ್ಯವಿಲ್ಲ: ಈಶ್ವರಪ್ಪ

ಯಡಿಯೂರಪ್ಪ ಆಸೆ ಈಡೇರಲು ಸಾಧ್ಯವಿಲ್ಲ: ಈಶ್ವರಪ್ಪ
ಬೆಂಗಳೂರು , ಭಾನುವಾರ, 25 ಡಿಸೆಂಬರ್ 2011 (16:09 IST)
PR
ಮತ್ತೆ ಮುಖ್ಯಮಂತ್ರಿಯಾಗಬೇಕು, ಮುಂದಿನ ಚುನಾವಣೆ ನನ್ನ ನೇತೃತ್ವದಲ್ಲಿ ಎದುರಿಸಬೇಕು ಎನ್ನುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಆಸೆ ಈಡೇರುವುದು ಕಷ್ಟ ಎಂದು ಬಿಜೆಪಿ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕನಸುಗಳನ್ನು ಹೈಕಮಾಂಡ್ ಈಡೇರಿಸುವ ಸಾಧ್ಯತೆಗಳು ತೀರಾ ಕಡಿಮೆಯಾಗಿವೆ. ಸದಾನಂದ ಗೌಡರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಸಾಮೂಹಿಕ ನಾಯಕತ್ವದಲ್ಲಿಯೇ ಚುನಾವಣೆಗೆ ಹೋಗಲು ಸಿದ್ಧತೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಮತ್ತೆ ಮುಖ್ಯಮಂತ್ರಿ ಮಾಡುವುದಾಗಲಿ, ಮುಂದಿನ ಚುನಾವಣೆಯನ್ನು ಎದುರಿಸುವುದಾಗಿ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು, ಅವಧಿ ಮುಗಿಯುವವರೆಗೆ ಸದಾನಂದ ಗೌಡರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಸೋಮವಾರದಂದು ನವದೆಹಲಿಗೆ ತೆರಳುತ್ತಿದ್ದು, ಯಡಿಯೂರಪ್ಪನವರ ಹೇಳಿಕೆಗಳನ್ನು ಹೈಕಮಾಂಡ್ ಗಮನಕ್ಕೆ ತರುತ್ತೇನೆ. ಇಂತಹ ಹೇಳಿಕೆಗಳಿಂದ ಸರಕಾರ ಅಸ್ಥಿರಗೊಳ್ಳಲು ಕಾರಣವಾಗುತ್ತದೆ ಎನ್ನುವುದು ಯಡಿಯೂರಪ್ಪನವರಿಗೆ ಅರ್ಥವಾಗಬೇಕು ಎಂದು ಛೇಡಿಸಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ವಿರುದ್ಧ ಮಾಡಿರುವ ಟೀಕೆಗಳನ್ನು ಆಶೀರ್ವಾದ ಎಂದು ಕೊಳ್ಳುತ್ತೇನೆ. ಅವರನ್ನು ಟೀಕಿಸಲು ನಾನು ತುಂಬಾ ಚಿಕ್ಕವನು ಎಂದು ತಿರುಗೇಟು ನೀಡಿದರು.

Share this Story:

Follow Webdunia kannada