ಅಕ್ರಮ ಆಸ್ತಿ ಆರೋಪ ಎದುರಿಸುತ್ತಿರುವ ಸಿರಗುಪ್ಪ ಶಾಸಕ ಎಂ.ಕೆ. ಸೋಮಲಿಂಗಪ್ಪ ಇದೀಗ ಲೋಕಾಯುಕ್ತ ಪೊಲೀಸರ ಬಂಧನದ ಭೀತಿ ಎದುರಿಸುತ್ತಿದ್ದಾರೆ.
ಏಕೆಂದರೆ, ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ತಮ್ಮನ್ನು ಯಾವುದೇ ಕ್ಷಣದಲ್ಲಿ ಬಂಧಿಸಬಹುದು ಎಂಬ ಕಾರಣಕ್ಕೆ ಸೋಮಲಿಂಗಪ್ಪ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಆದರೆ, ಈ ಅರ್ಜಿಯ ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಾಧೀಶ ಸುಧೀಂದ್ರ ರಾವ್ 'ಆರೋಪಿಯನ್ನು ಇಲ್ಲಿವರೆಗೆ ಏಕೆ ಬಂಧಿಸಿಲ್ಲ?' ಎಂದು ಪ್ರಶ್ನಿಸಿದ್ದಾರೆ. ಇದು ಆರೋಪಿ ಸೋಮಲಿಂಗಪ್ಪನಿಗೆ ಬಂಧನದ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
ಈ ಬಗ್ಗೆ ನ್ಯಾಯಾಧೀಶರು, ಲೋಕಾಯುಕ್ತ ಪೊಲೀಸರಿಗೆ ವಿವರಣೆ ಕೋರಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಬಗ್ಗೆ ಆರೋಪಿ ವಿರುದ್ಧ ತನಿಖೆ ನಡೆಯುತ್ತಿದೆ. ಆದರೆ, ಇಲ್ಲಿವರೆಗೂ ಆರೋಪಿಯನ್ನು ಬಂಧಿಸಿಲ್ಲ. ಆದರೆ, ಯಾವ ಕಾರಣಕ್ಕೆ ಆರೋಪಿಯನ್ನು ಬಂಧಿಸಿಲ್ಲ ಎಂದು ನ್ಯಾಯಾಧೀಶರು ತನಿಖಾಧಿಕಾರಿಗಳನ್ನು ಕೇಳಿದ್ದಾರೆ.