Select Your Language

Notifications

webdunia
webdunia
webdunia
webdunia

ಜಿಲ್ಲೆಯಾದ್ಯಂತ ಮೋದಿ ಹಾಗೂ ಶ್ರೀರಾಮುಲು ಪರ ಅಲೆ ಎದ್ದಿದೆ : ಸೋಮಶೇಖರ ರೆಡ್ಡಿ

ಜಿಲ್ಲೆಯಾದ್ಯಂತ ಮೋದಿ ಹಾಗೂ ಶ್ರೀರಾಮುಲು ಪರ ಅಲೆ ಎದ್ದಿದೆ : ಸೋಮಶೇಖರ ರೆಡ್ಡಿ
ಬಳ್ಳಾರಿ , ಸೋಮವಾರ, 14 ಏಪ್ರಿಲ್ 2014 (17:51 IST)
ಜಿಲ್ಲೆಯಾದ್ಯಂತ ಮೋದಿ ಹಾಗೂ ಶ್ರೀರಾಮುಲು ಅವರ ಪರವಾಗಿ ಅಲೆ ಕಂಡು ಬಂದಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಗೆಲುವು ಸಾಧಿಸಿ ಕೇಂದ್ರದಲ್ಲಿ ಮಂತ್ರಿಯಾಗುವುದು ಖಚಿತ, ಮೋದಿ ಭಾರತದ ಮುಂದಿನ ಪ್ರಧಾನಿ ಆಗುವುದರಲ್ಲಿ ಎಳ್ಳಷ್ಟೂ ಸಂದೇಹವಿಲ್ಲ ಎಂದು ಕೆಎಂಎಫ್ ರಾಜ್ಯಾಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಹೇಳಿದರು.
PR

ಕಾಂಗ್ರೆಸ್ ಸರ್ಕಾರದ 10 ವರ್ಷದ ದುರಾಡಳಿತ ಮತ್ತು ಭ್ರಷ್ಠಾಚಾರದಿಂದ ಜನ ರೋಸಿ ಹೋಗಿದ್ದಾರೆ ಎಂದು ಅವರು ಅನೇಕ ಕಾಂಗ್ರಸ್ ನಾಯಕರು ಪಕ್ಷ ತೊರೆದು ಹೊರಬರುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕರ್ತರ ನಿವಾಸಗಳ ಮೇಲೆ ಜಿಲ್ಲಾಧಿಕಾರಿಗಳು ಕಾರಣವಿಲ್ಲದೇ ದಾಳಿ ನಡೆಸುತ್ತಿದ್ದಾರೆ ಎಂದು ಕೆಎಂಎಫ್ ರಾಜ್ಯಾಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಆರೋಪಿಸಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಕಾಂಗ್ರೆಸ್ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವ ಜಿಲ್ಲಾಧಿಕಾರಿಗಳು ಪಕ್ಷದ ಕಾರ್ಯಕರ್ತರ ಮತ್ತು ನಾಯಕರ ಮನೆಗಳ ಮೇಲೆ ತಪಾಸಣೆ ಹೆಸರಿನಲ್ಲಿ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.

Share this Story:

ವೆಬ್ದುನಿಯಾವನ್ನು ಓದಿ

ಸುದ್ದಿಗಳು ಸ್ಯಾಂಡಲ್ ವುಡ್ ಕ್ರಿಕೆಟ್‌ ಸುದ್ದಿ ಜ್ಯೋತಿಷ್ಯ ಜನಪ್ರಿಯ..

Follow Webdunia kannada