ಕಾಂಗ್ರೆಸ್ ಸರ್ಕಾರದ 10 ವರ್ಷದ ದುರಾಡಳಿತ ಮತ್ತು ಭ್ರಷ್ಠಾಚಾರದಿಂದ ಜನ ರೋಸಿ ಹೋಗಿದ್ದಾರೆ ಎಂದು ಅವರು ಅನೇಕ ಕಾಂಗ್ರಸ್ ನಾಯಕರು ಪಕ್ಷ ತೊರೆದು ಹೊರಬರುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕರ್ತರ ನಿವಾಸಗಳ ಮೇಲೆ ಜಿಲ್ಲಾಧಿಕಾರಿಗಳು ಕಾರಣವಿಲ್ಲದೇ ದಾಳಿ ನಡೆಸುತ್ತಿದ್ದಾರೆ ಎಂದು ಕೆಎಂಎಫ್ ರಾಜ್ಯಾಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಆರೋಪಿಸಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಕಾಂಗ್ರೆಸ್ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವ ಜಿಲ್ಲಾಧಿಕಾರಿಗಳು ಪಕ್ಷದ ಕಾರ್ಯಕರ್ತರ ಮತ್ತು ನಾಯಕರ ಮನೆಗಳ ಮೇಲೆ ತಪಾಸಣೆ ಹೆಸರಿನಲ್ಲಿ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.