Webdunia - Bharat's app for daily news and videos

Install App

ಆಪ್ ಕಾರ್ಯಕರ್ತರ ಮೇಲೆ 'ಕೈ' ಹಲ್ಲೆ: ರಸ್ತೆಯಲ್ಲೇ ಕುಳಿತು ಅಹೋರಾತ್ರಿ ಪ್ರತಿಭಟನೆ

Webdunia
ಶುಕ್ರವಾರ, 18 ಏಪ್ರಿಲ್ 2014 (11:25 IST)
PR
PR
ರಾಮನಗರ: ರಾಮನಗರದಲ್ಲಿ ಆಪ್ ಕಾರ್ಯಕರ್ತರ ಮೇಲೆ ಕೈ ಕಾರ್ಯಕರ್ತರ ಹಲ್ಲೆಯನ್ನು ಖಂಡಿಸಿ ರವಿಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಆಪ್ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ರಾಮನಗರದಲ್ಲಿ ಕೈಕಾರ್ಯಕರ್ತರು ಹಣ ಹಂಚುತ್ತಿದ್ದ ಫೋಟೊವನ್ನು ತೆಗೆಯಲು ಹೋದಾಗ ಕಾಂಗ್ರೆಸ್ ಕಾರ್ಯಕರ್ತರು ಆಪ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿ ಗೂಂಡಾಗಿರಿ ಪ್ರದರ್ಶಿಸಿದ್ದರು. ಈ ಕುರಿತು ರವಿಕೃಷ್ಣಾ ರೆಡ್ಡಿ ಮಾತನಾಡುತ್ತಾ, ಕಾರ್ಯಕರ್ತರ ಮೇಲೆ ಹಲ್ಲೆಯಾಗಿ 24 ಗಂಟೆಗಳಾಗಿವೆ. ಹಲ್ಲೆ ಮಾಡಿದ ಮತ್ತು ಹಣ ಹಂಚಿದ ಆರೋಪಿಯನ್ನು ಪೊಲೀಸರು ಇಲ್ಲಿಯವರೆಗೆ ಬಂಧಿಸಿಲ್ಲ.

ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿಗರು ಬಹಿರಂಗವಾಗಿ ಹಣವನ್ನು ಹಂಚಿದ್ದಾರೆ. ರಾಜ್ಯದಲ್ಲಿ ಇದೊಂದೇ ಕ್ಷೇತ್ರವಲ್ಲ. ಎಲ್ಲಾ ಕ್ಷೇತ್ರಗಳಲ್ಲೂ ಅಕ್ರಮ ಚುನಾವಣೆ ನಡೆದಿದೆ. ಇದೊಂದು ಪ್ರಜಾಪ್ರಭುತ್ವದ ಅಣಕ. ಚುನಾವಣೆ ಆಯೋಗ ನಿರ್ವೀರ್ಯ ಸಂಸ್ಥೆ. ಅದು ಸರಿಯಾಗಿ ಕೆಲಸ ನಿರ್ವಹಿಸಿಲ್ಲ ಎಂದು ರವಿಕೃಷ್ಣ ರೆಡ್ಡಿ ಆರೋಪಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments