Webdunia - Bharat's app for daily news and videos

Install App

ಡಿಎಂಕೆ, ಎಐಡಿಎಂಕೆಗೆ ಬದ್ಧತೆಯಿಲ್ಲ: ಕೃಷ್ಣಗಿರಿಯಲ್ಲಿ ಸಿದ್ದರಾಮಯ್ಯ ಪ್ರಚಾರ

Webdunia
ಶನಿವಾರ, 19 ಏಪ್ರಿಲ್ 2014 (16:32 IST)
PR
PR
ಕೃಷ್ಣಗಿರಿ: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮತದಾನ ಮುಗಿದ ಬಳಿಕ ಈಗ ತಮಿಳುನಾಡಿನ ಕೃಷ್ಣಗಿರಿಯಲ್ಲಿ ಕಾಂಗ್ರೆಸ್ ಪರ ಪ್ರಚಾರವನ್ನು ಸಿಎಂ ಸಿದ್ದರಾಮಯ್ಯ ಆರಂಭಿಸಿದರು. ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು ಎಂಬ ನಿರೀಕ್ಷೆಯಿಂದ ಇಲ್ಲಿಗೆ ಬಂದಿರುವುದಾಗಿ ಸಿದ್ದರಾಮಯ್ಯ ಹೇಳಿದರು. ಕೃಷ್ಣಗಿರಿ, ಸೇಲಂನಲ್ಲಿ ಶೇ. 60ರಷ್ಟು ಜನರಿಗೆ ಕನ್ನಡ ಗೊತ್ತಿದೆ.ಆದ್ದರಿಂದ ಕನ್ನಡದಲ್ಲಿ ಮಾತನಾಡಿದರೆ ಅವರಿಗೆ ಉತ್ತೇಜನ ಸಿಗುವುದರಿಂದ ಕನ್ನಡದಲ್ಲೇ ಭಾಷಣ ಮಾಡಿದ್ದಾಗಿ ಸಿಎಂ ತಿಳಿಸಿದರು. ಕಳೆದ ಬಾರಿ ಡಿಎಂಕೆ ಜತೆ ಮೈತ್ರಿಯಿತ್ತು.

ಮೈತ್ರಿ ಇಲ್ಲದಿದ್ದರೂ ಕೆಲವು ಸ್ಥಾನಗಳನ್ನು ನಾವು ಗೆದ್ದಿದ್ದೆವು.ಆದರೆ ಈಗ ಡಿಎಂಕೆ ಮತ್ತು ಎಐಡಿಎಂಕೆ ಯಾವ ಪಕ್ಷಕ್ಕೂ ಬದ್ಧತೆಯಿಲ್ಲ. ಒಂದು ಕಾಲದಲ್ಲಿ ಕೃಷ್ಣಗಿರಿ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಇಲ್ಲಿ ಕಾಂಗ್ರೆಸ್ ಅಭಿಮಾನಿಗಳು ಇರುವುದರಿಂದ ನಮ್ಮ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಿದರು. ಕೃಷ್ಣಗಿರಿಯಲ್ಲಿ ರಾಗಿ ಮುದ್ದೆ ಹಾಗೂ ನಾಟಿ ಕೋಳಿ ಸಾರನ್ನು ಮಧ್ಯಾಹ್ನ ಸವಿದು ಸಿಎಂ ಸಂತಸಪಟ್ಟರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ