ಬೆಂಗಳೂರು: ಮಂಗಳೂರಿನಲ್ಲಿ ಕೋಮುವಾದಿ ಸಂಘಟನೆಗಳಿಂದಾಗಿಯೇ ಐಟಿ-ಬಿಟಿ ಕಂಪನಿಗಳಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿರುವುದು ಸಾರ್ವಜನಿಕರ ಟೀಕೆಗೆ ಕಾರಣವಾಗಿದೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೋಮುವಾದಿಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಂತಹ ಕರಾವಳಿ ಜಿಲ್ಲೆಗಳಲ್ಲಿ ಐಟಿ ಬಿಟಿ ಕಂಪನಿಗಳು ಬಂಡವಾಳ ಹೂಡಲು ಹಿಂದೇಟು ಹಾಕುತ್ತಿದ್ದಾರೆ ಎಂದಿದ್ದರು. ಅವರ ಹೇಳಿಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಕೆಲವರು ಸಚಿವರನ್ನು ಪ್ರಶ್ನೆ ಮಾಡಿದ್ದು ಹಾಗಿದ್ದರೆ ಕಲ್ಬುರ್ಗಿಯಲ್ಲಿ ಎಷ್ಟು ಐಟಿ ಬಿಟಿ ಕಂಪನಿಗಳಿವೆ ಎಂದಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕಳೆದ ವಾರ ವಿಪರೀತ ಬಿಸಿಲಿನ ಜೊತೆಗೆ ಚಳಿಯೂ ಕಂಡುಬಂದಿತ್ತು. ಈ ವಾರ ಬಿಸಿಲಿರುತ್ತಾ, ಚಳಿ ಇರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ. ಕಳೆದ ವಾರದಲ್ಲಿ ಹವಾಮಾನದಲ್ಲಿ ಸಾಕಷ್ಟು ಏರಿಳಿತಗಳು ಕಂಡುಬಂದಿತ್ತು. ರಾತ್ರಿ ಚಳಿಯಿದ್ದರೂ ಹಗಲು ವಿಪರೀತ ಬಿಸಿಲಿನ ವಾತಾವರಣವಿತ್ತು. ವಾರಂತ್ಯದ ವೇಳೆಗೆ ಗರಿಷ್ಠ ತಾಪಮಾನದಲ್ಲಿ ಏರಿಕೆ ಕಂಡು 30 ಡಿಗ್ರಿ ದಾಟಿತ್ತು. ಈ ವಾರವೂ ಬಿಸಿಲು ಮತ್ತು ಚಳಿ ಮುಂದುವರಿಯಲಿದೆ. ಈ ವಾರ ವಾರಂತ್ಯದವರೆಗೂ ಗರಿಷ್ಠ ತಾಪಮಾನ 30 ಡಿಗ್ರಿ ಆಸುಪಾಸಿನಲ್ಲೇ ಇರಲಿದೆ. ವಾರಂತ್ಯದಲ್ಲಿ ಗರಿಷ್ಠ ತಾಪಮಾನ ಕೊಂಚ ಕಡಿಮೆಯಾದರೂ ಬಿಸಿಲಿನ ಝಳ ಮುಂದುವರಿಯಲಿದೆ.
ಇಂದು ಸೋಮವಾರವಾಗಿದ್ದು ಶಿವನಿಗೆ ವಿಶೇಷವಾದ ದಿನವಾಗಿದೆ. ಅದರಲ್ಲೂ ಶಿವರಾತ್ರಿಯ ಸಂದರ್ಭ. ಈ ದಿನ ಶಿವನನ್ನು ಪೂಜೆ ಮಾಡುವಾಗ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.ನಮಾಮೀಶಮೀಶಾನ ನಿರ್ವಾಣರೂಪಂವಿಭುಂ ವ್ಯಾಪಕಂ ಬ್ರಹ್ಮವೇದ-ಸ್ವರೂಪಮ್ ।ನಿಜಂ ನಿರ್ಗುಣಂ ನಿರ್ವಿಕಲ್ಪಂ ನಿರೀಹಂಚಿದಾಕಾಶ-ಮಾಕಾಶವಾಸಂ ಭಜೇಽಹಮ್ ॥ 1 ॥ ನಿರಾಕಾರಮೋಂಕಾರಮೂಲಂ ತುರೀಯಂಗಿರಾಜ್ಞಾನಗೋತೀತಮೀಶಂ ಗಿರೀಶಮ್ ।ಕರಾಲಂ ಮಹಾಕಾಲಕಾಲಂ ಕೃಪಾಲುಂಗುಣಾಗಾರ-ಸಂಸಾರಪಾರಂ ನತೋಽಹಮ್ ॥ 2 ॥ತುಷಾರಾದ್ರಿ-ಸಂಕಾಶಗೌರಂ ಗಭೀರಂಮನೋಭೂತಕೋಟಿ-ಪ್ರಭಾಸೀ ಶರೀರಮ್ ।ಸ್ಫುರನ್ಮೌಲಿಕಲ್ಲೋಲಿನೀ ಚಾರುಗಂಗಾಲಸದ್ಭಾಲ-ಬಾಲೇಂದು ಕಂಠೇ ಭುಜಂಗಮ್ ॥ 3 ॥ಚಲತ್ಕುಂಡಲಂ ಶುಭ್ರನೇತ್ರಂ ವಿಶಾಲಂ [ಭೄಸುನೇತ್ರಂ ವಿಶಾಲಂ]ಪ್ರಸನ್ನಾನನಂ ನೀಲಕಂಠಂ ದಯಾಲುಮ್ ।ಮೃಗಾಧೀಶ-ಚರ್ಮಾಂಬರಂ ಮುಂಡಮಾಲಂಪ್ರಿಯಂ ಶಂಕರಂ ಸರ್ವನಾಥಂ ಭಜಾಮಿ ॥ 4 ॥
ಕೊಲೊಂಬೊ: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಎದುರು ಮತ್ತೊಮ್ಮೆ ಪಾಕಿಸ್ತಾನ ಮಕಾಡೆ ಮಲಗಿದೆ. ಇಂದು ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ ಗಳ ಮುಂದೆ ಉಸಿರೆತ್ತದ ಪಾಕ್ ಬ್ಯಾಟಿಗರು ಸುಲಭವಾಗಿ ಸೋಲೊಪ್ಪಿಕೊಂಡಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 20 ಓವರ್ ಗಳಲ್ಲಿ 175 ರನ್ ಗಳ ಗುರಿ ನೀಡಿತ್ತು. ಪಾಕಿಸ್ತಾನ 18 ಓವರ್ ಗಳಲ್ಲಿ 114 ರನ್ ಗಳಿಗೆ ಆಲೌಟ್ ಆಗುವ ಮೂಲಕ 61 ರನ್ ಗಳ ಸೋಲು ಕಂಡಿದೆ. ಇದು ಟಿ20 ಮಾದರಿಯಲ್ಲಿ ದೊಡ್ಡ ಮೊತ್ತವೇನೂ ಅಲ್ಲ. ಹಾಗಿದ್ದರೂ ಟೀಂ ಇಂಡಿಯಾ ಗುಣಮಟ್ಟದ ಬೌಲಿಂಗ್ ಎದುರು ಪಾಕಿಸ್ತಾನ ಬ್ಯಾಟಿಗರೂ ಸ್ವಲ್ಪವೂ ಪ್ರತಿರೋಧ ತೋರದೇ ಶರಣಾದರು.
ಕೊಲೊಂಬೋ: ಇಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಲೀಗ್ ಪಂದ್ಯದಲ್ಲಿ ಪಾಕಿಸ್ತಾನದ ಪ್ರಮುಖ ಬೌಲರ್ ಗಳನ್ನೇ ಗುರಿಯಾಗಿಸಿಕೊಂಡು ಟೀಂ ಇಂಡಿಯಾ ಓಪನರ್ ಇಶಾನ್ ಕಿಶನ್ ಆಕ್ರಮಣ ಮಾಡಿದ್ದಾರೆ. ಇಂದು ಟಾಸ್ ಗೆದ್ದ ಪಾಕಿಸ್ತಾನ ಮೊದಲು ಭಾರತವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು. ಭಾರತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿ ಪಾಕಿಸ್ತಾನಕ್ಕೆ 176 ರನ್ ಗಳ ಗೆಲುವಿನ ಗುರಿ ನೀಡಿದೆ. ಆರಂಭಿಕ ಅಭಿಷೇಕ್ ಶರ್ಮಾ ಶೂನ್ಯಕ್ಕೆ ನಿರ್ಗಮಿಸಿದರೂ ಇಶಾನ್ ಕಿಶನ್ ಸಿಡಿದರು.
ಬೆಂಗಳೂರು: ನಾಳೆಯಿಂದ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್ ದರ ಹೆಚ್ಚಳವಾಗಲಿದ್ದು, ನೂತನ ಪರಿಷ್ಕ್ರತ ದರ ಜಾರಿಯಾಗಲಿದೆ.ಈ ಬಗ್ಗೆ ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷಾರಿಂದ ಮಾಹಿತಿ ನೀಡಿದ್ದು, ನಾಳೆಯಿಂದ (ಫೆ.16) ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್ಗೆ ನೂತನ ಪರಿಷ್ಕ್ರತ ದರ ಜಾರಿಗೆಯಾಗಲಿದೆ ಎಂದು ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.ಡಿಸೇಲ್, ಸಿಬ್ಬಂದಿ ಹಾಗೂ ಇತರೆ ಖರ್ಚುಗಳ ಹಿನ್ನೆಲೆ ಲಗೇಜ್ ದರ ಏರಿಕೆ ಮಾಡಲಾಗಿದೆ. ಈ ಮೊದಲು 2021ರಲ್ಲಿ ಲಗೇಜ್
ಚಾಮರಾಜನಗರ: ಮಹಾಶಿವರಾತ್ರಿ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಪತ್ನಿ ಉಷಾ ಶಿವಕುಮಾರ್ ಅವರು ಮಾದಪ್ಪನ ದರ್ಶನ ಪಡೆದಿದ್ದಾರೆ.ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಪೈಪೋಟಿ ನಡುವೆ ಡಿಕೆಶಿ ಕುಟುಂಬ ದೇವರ ಮೊರೆ ಹೋಗಿರುವುದು ಭಾರೀ ಕುತೂಹಲವನ್ನು ಮೂಡಿಸಿದೆ. ಇನ್ನೂ ಸಾಲೂರು ಮಠಕ್ಕೂ ಕೂಡ ಭೇಟಿ ನೀಡಿದ ಉಷಾ ಶಿವಕುಮಾರ್ ಸಾಲೂರು ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಸಾಲೂರು ಶ್ರೀಗಳ ಗದ್ದುಗೆಗೂ ಕೂಡ ಪೂಜೆ ಸಲ್ಲಿಸಿದ್ದಾರೆ. ಕನಕಪುರ ಭಾಗದ ಮುಖಂಡರು ಕೂಡ ಭಾಗಿಯಾಗಿದ್ದರು.
ಸಿಡ್ನಿಯಲ್ಲಿ ನಡೆದ ಮೊದಲ ಮಹಿಳಾ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತವು ಡಕ್ವರ್ತ್ ಲೂಯಿಸ್-ಸ್ಟರ್ನ್ (ಡಿಎಲ್ಎಸ್) ವಿಧಾನದ ಅಡಿಯಲ್ಲಿ ಆಸ್ಟ್ರೇಲಿಯಾವನ್ನು ಒಂಬತ್ತು ವಿಕೆಟ್ಗಳಿಂದ ಸೋಲಿಸಿತು.ಮಹಿಳಾ ಟಿ20 ವಿಶ್ವಕಪ್ಗೆ ಸಿದ್ಧತೆಯಾಗಿ ಭಾರತ ತಂಡವು, ಆಸ್ಟ್ರೇಲಿಯಾ ವಿರುದ್ಧ ಮೂರು ಟಿ20 ಪಂದ್ಯಗಳ ಸರಣಿಯನ್ನು ಆಡಲಿದ್ದು, ಮೊದಲನೇ ಪಂದ್ಯ ಇಂದು ನಡೆಯಿತು. ಈ ಪಂದ್ಯದಲ್ಲಿ ಟೀಂ ಇಂಡಿಯಾ , ಆಸ್ಟ್ರೀಲಿಯಾವನ್ನು ಒಂಬತ್ತು ವಿಕೇಟ್ಗಳಿಂದ ಸೋಲಿಸಿತು.ಭಾರತ ತಂಡವು ಆಸ್ಟ್ರೇಲಿಯಾ ಪ್ರವಾಸದಲ್ಲಿ ಮೂರೂ ಮಾದರಿಗಳ ಸರಣಿಯಲ್ಲಿ ಆಡಲಿದೆ. ಟಿ20 ಸರಣಿಯ ನಂತರ,
ಬೆಂಗಳೂರು: ಶಾಸಕರು ಅವರ ಪಾಡಿಗೆ ವಿದೇಶ ಪ್ರವಾಸ ಮಾಡಿದರೆ ಬೇಡ ಎನ್ನಲೂ ಆಗುತ್ತಾ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಖಾಸಗಿಯಾಗಿ ಟೂರ್ ಮಾಡೋದು ತಪ್ಪಾ? ನಾವು ಎಲ್ಲೂ ಹೋಗಬಾರದಾ? ಇನ್ನೂ ಪಕ್ಷದ ವಿಚಾರ ಅಂತಾ ಬಂದಾಗ ನಾವೆಲ್ಲರೂ ಒಂದೇ. ಕಳೆದ ವರ್ಷ ಕೆಲವರು ಹೋಗಿದ್ರು. ಅವತ್ತಿಲ್ಲದ ವಿಚಾರ ಮತ್ತೇ ಈಗ ಯಾಕೆ. ವಿದೇಶಕ್ಕೆ ಹೋಗುವವರನ್ನು ತಡೆಯಲು ಸಾಧ್ಯವೇ ಅಂತ ಶಾಸಕರ ಟೂರ್ ವಿಚಾರ ಸಂಬಂಧ ಸಮರ್ಥನೆ ನೀಡಿದರು. ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಗೊಂದಲದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರ ಒಳ ಜಗಳದ ವಿಚಾರ
ಮಂಡ್ಯ: ತಾಲ್ಲೂಕಿನ ಬಸರಾಳು ಹೋಬಳಿಯ ಕಾರೇಕಟ್ಟೆ ಗ್ರಾಮದ ಸಮೀಪ ಕೀರ್ತಿ ಕೆಮಿಕಲ್ ಕಾರ್ಖಾನೆಯನ್ನು ಸ್ಥಳಾಂತರ ವೇಳೆ ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಬಿಹಾರ ಮೂಲದ ಕಲೂಹ್ಖಾನ್ (27) ಮತ್ತು ಅಶೋಕ್ (26) ಎಂದು ಗುರುತಿಸಲಾಗಿದೆ. ಟ್ಯಾಂಕ್ ಸ್ಫೋಟಗೊಂಡ ತೀವ್ರತೆಗೆ ಇಬ್ಬರು ಕಾರ್ಮಿಕರ ದೇಹಗಳು ಛಿದ್ರಛಿದ್ರವಾಗಿವೆ. ಇನ್ನೂ ಈ ಘಟನೆಯಲ್ಲಿ ಖಾಸಿಂ, ರವಿ, ಮಹಾಂತೇಶ್, ರಾಜೀವ್ಕುಮಾರ್ ಈ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡು ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊಲೊಂಬೋ: ಪಾಕಿಸ್ತಾನ ವಿರುದ್ಧ ಇಂದು ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಎದುರಾಳಿಗಳನ್ನು ಇನ್ನಿಲ್ಲದಂತೆ ರೋಸ್ಟ್ ಮಾಡಿದ್ದಾರೆ. ನಿನ್ನೆ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ಸೂರ್ಯಕುಮಾರ್ ಯಾದವ್ ಗೆ ಈ ಬಾರಿ ನೀವು ಪಾಕಿಸ್ತಾನ ಆಟಗಾರರ ಕೈ ಕುಲುಕುತ್ತೀರಾ ಎಂದು ಪತ್ರಕರ್ತರು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸೂರ್ಯ 'ಇನ್ನೂ ಸಾಕಷ್ಟು ಸಮಯವಿದೆ. ಚೆನ್ನಾಗಿ ಊಟ ಮಾಡೋಣ, ನಿದ್ರೆ ಮಾಡೋಣ.. ಆಮೇಲೆ ಮುಂದಿನದ್ದು ನೋಡೋಣ’ ಎಂದು ರೋಸ್ಟ್ ಮಾಡಿದ್ದಾರೆ.
ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಮತ್ತು ಮತದಾನವನ್ನು ಮಾರ್ಚ್ 9 ರಂದು ನಡೆಸಲು ವೇದಿಕೆ ಸಜ್ಜಾಗಿದೆ. ಮಾರ್ಚ್ 9 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಬಜೆಟ್ ಅಧಿವೇಶನದ ಎರಡನೇ ಹಂತವು ಅತ್ಯಂತ ಕುತೂಹಲಕಾರಿ ಆಗಿರಲಿದೆ. ಏಕೆಂದರೆ ಹಲವಾರು ಪ್ರಮುಖ ಕಾನೂನುಗಳು ಮತ್ತು ನಿರ್ಣಾಯಕ ಮಸೂದೆಗಳನ್ನು ಚರ್ಚೆ ಮತ್ತು ಅಂಗೀಕಾರಕ್ಕಾಗಿ ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ ತಿಳಿಸಿದ್ದಾರೆ.ವಿರೋಧ ಪಕ್ಷಗಳು ಅಧಿವೇಶನದ ಮೊದಲ ಹಂತದಲ್ಲಿ ಮಾಡಿದಂತೆ ಪ್ರತಿಭಟನೆಯನ್ನು ಮುಂದುವರಿಸಿದರೆ, ಅದು ಅಂತಿಮವಾಗಿ ಅವರಿಗೆ ನಷ್ಟ ಎಂದು ಕಿರಣ್ ರಿಜಿಜು ಎಚ್ಚರಿಸಿದ್ದಾರೆ.
ಬೆಂಗಳೂರು:ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿರುವ ಶಾಸಕ ಬೈರತಿ ಬಸವರಾಜ್ಗೆ ನ್ಯಾಯಾಲಯ 7 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದೆ.ಬೈರತಿ ಬಸವರಾಜ್ ಅವರನ್ನು ಕೋರಮಂಗಲದಲ್ಲಿರುವ 42ನೇ ಎಸಿಜೆಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಶಾಸಕರ ಆಂಜಿಯೋಗ್ರಾಮ್ ರಿಪೋರ್ಟ್ನ್ನು ನ್ಯಾಯಾಧೀಶರಿಗೆ ತನಿಖಾಧಿಕಾರಿ ಡಿವೈಎಸ್ಪಿ ಗೌತಮ್ ಸಲ್ಲಿಸಿದರು. ವರದಿಯನ್ನು ಪರಿಶೀಲಿಸಿ, ವಿಚಾರಣೆ ನಡೆಸಿದ ನ್ಯಾಯಾಧೀಶರು, ಭೈರತಿ ಬಸವರಾಜ್ ಅವರನ್ನು 7 ದಿನಗಳ ಸಿಐಡಿ ಕಸ್ಟಡಿಗೆ
ಮುಂಬೈ (ಮಹಾರಾಷ್ಟ್ರ): ಪಾಕಿಸ್ತಾನ ವಿರುದ್ಧದ ಭಾರತದ ಕ್ರಿಕೆಟ್ ಪಂದ್ಯಗಳಿಂದ ಭಾರತೀಯ ಜನತಾ ಪಕ್ಷವು (ಬಿಜೆಪಿ) ಲಾಭ ಪಡೆಯುತ್ತಿದೆ ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್ ಭಾನುವಾರ ಆರೋಪಿಸಿದ್ದಾರೆ.ಈ ಪಂದ್ಯಗಳು ಭಾರಿ ಬೆಟ್ಟಿಂಗ್ ಮತ್ತು ಜೂಜಾಟವನ್ನು ಸೃಷ್ಟಿಸುತ್ತವೆ ಎಂದು ಹೇಳಿಕೊಂಡಿವೆ, ಅಂತಿಮವಾಗಿ ಹಣವು ಪಾಕಿಸ್ತಾನಕ್ಕೆ ಹರಿಯುತ್ತದೆ. ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿನ ನಿಗದಿತ ಟಿ20 ವಿಶ್ವಕಪ್ 2026 ಭಾರತ ಮತ್ತು ಪಾಕಿಸ್ತಾನ
ಹಿಂದೂಗಳ ಪವಿತ್ರಾ ಹಬ್ಬಗಳಲ್ಲಿ ಒಂದಾಗಿರುವ ಮಹಾಶಿವರಾತ್ರಿಯನ್ನು ಭಕ್ತಿಯಿಂದ ಆಚರಿಸಲಾಗುತ್ತದೆ. ಈ ದಿನದಂದು ಶಿವನಿಗೆ ವಿಶೇಷವಾದ ಪೂಜೆಯನ್ನು ಸಲ್ಲಿಸುವುದರಿಂದ ಅಜ್ಞಾನವೆಂಬ ಕತ್ತಲೆ ದೂರವಾಗಿ ಜ್ಞಾನದ ಬೆಳಕು ಮೂಡುತ್ತದೆ ಎಂಬ ನಂಬಿಕೆಯಿದೆ.ಈ ದಿನ ಕೇವಲ ಉಪವಾಸ ಮಾಡುವುದು ಮಾತ್ರವಲ್ಲ, ರಾತ್ರಿಯ ಅವಧಿಯನ್ನು ಜಾಗೃತವಾಗಿ ಕಳೆಯುವುದು ಅತ್ಯಂತ ತುಂಬಾ ಮುಖ್ಯಇಲ್ಲಿ ಶಿವರಾತ್ರಿಯಂದು ರಾತ್ರಿ ಮಾಡಲೇಬೇಕಾದ ಪ್ರಮುಖ ಕೆಲ ಅಂಶಗಳ ಬಗ್ಗೆ ಮಾಹಿತಿಯಿದೆ:
ದೆಹಲಿಯ ತ್ರಿ ನಗರ ಪ್ರದೇಶದಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ತಮ್ಮ ಮನೆಯಲ್ಲಿ ಎಲೆಕ್ಟ್ರಿಕ್ ಬೆಡ್ನಲ್ಲಿ ಮಲಗಿದ್ದ ವೇಳೆ ವಿದ್ಯುತ್ ಆಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಫೆಬ್ರವರಿ 12 ರಂದು ಕೇಶವ್ ಪುರಂ ಪೊಲೀಸ್ ಠಾಣೆಗೆ ಪಿಸಿಆರ್ ಕರೆ ಬಂದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ತನ್ನ ಸಹೋದರ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾನೆ ಎಂದು ಕರೆ ಮಾಡಿದವರು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ತ್ರಿನಗರದಲ್ಲಿರುವ ನಿವಾಸಕ್ಕೆ ಪೊಲೀಸ್ ತಂಡ ಧಾವಿಸಿದೆ. ಕೊಠಡಿಯೊಳಗೆ ವಿದ್ಯುತ್ ಹಾಸಿಗೆಯ ಮೇಲೆ ವ್ಯಕ್ತಿ ಶವವಾಗಿ
ಚೆನ್ನೈ: ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಅಶ್ಲೀಲ ಹೇಳಿಕೆ ನೀಡಿದ್ದ ಡಿಎಂಕೆ ಪಕ್ಷದ ಅಮಾನತುಗೊಂಡ ನಾಯಕ ಶಿವಾಜಿ ಕೃಷ್ಣಮೂರ್ತಿಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಶಿವಾಜಿ ಕೃಷ್ಣಮೂರ್ತಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಶಿವಾಜಿ ಕೃಷ್ಣಮೂರ್ತಿ ಅವರು ರಾಜ್ಯಪಾಲ ಆರ್.ಎನ್. ರವಿ, ಬಿಜೆಪಿ ನಾಯಕಿ ಖುಷ್ಬು ಸುಂದರ್, ಅಣ್ಣಾಮಲೈ ಹಾಗೂ ಎಐಎಡಿಎಂಕೆ ಮುಖಂಡ ಪಳನಿಸ್ವಾಮಿ ವಿರುದ್ಧಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಸಂಬಂಧ ರಾಜ್ಯಪಾಲರು, ಬಿಜೆಪಿ ನಾಯಕರು ಸೇರಿ ಮೂರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.ಎಗ್ಮೋರ್ ನ್ಯಾಯಾಲಯ ಮೂರು ಪ್ರಕರಣಗಳಲ್ಲಿ ಶಿವಾಜಿ ಕೃಷ್ಣಮೂರ್ತಿಗೆ ₹20,000 ದಂಡ ಹಾಗೂ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈಗಾಗಲೇ ಅನುಭವಿಸಿರುವ ನ್ಯಾಯಾಂಗ ಬಂಧನಾವಧಿಯನ್ನು ಶಿಕ್ಷೆಯಲ್ಲಿ ಕಡಿತಗೊಳಿಸಲಾಗುತ್ತದೆ.
ಮಂಡ್ಯ: ಡಿಸಿಎಂ ಡಿ.ಕೆ.ಶಿವಕುಮಾರ್ ಪರ ಬ್ಯಾಸ್ ಬೀಸುತ್ತಿರುವ ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಅವರು, ನಮ್ಮದು ಐರ್ಲೆಂಡ್ ಟೀಂ ಅಲ್ಲ, ಬಲಿಷ್ಠ ಭಾರತ ಟೀಂ ಎಂದು ರಾಜ್ಯ ರಾಜಕಾರಣವನ್ನು ಭಾರತದ ಕ್ರಿಕೆಟ್ ಟೀಂಗೆ ಹೋಲಿಸಿದರು. ಡಿಕೆಶಿ ರಾಜಕಾರಣವನ್ನು ಅರೆದು ಕುಡಿದಿದ್ದಾರೆ. ಯಾವಾಗ, ಯಾವ ಪಾನ್ ಮೂ ಮಾಡಿದ್ರೆ ಗೇಮ್ ಗೆಲ್ಲಬಹುದು ಅಂತ ಗೊತ್ತಿದೆ. ರಾಜಕೀಯ ತಂತ್ರಗಾರಿಕೆ, ಚಾಣಾಕ್ಷತನ ಅವರಿಗಿದೆ ಎಂದು ಹೇಳಿದರು.ಗೆಲ್ಲುವ ಬುದ್ಧಿವಂತಿಕೆ ಇರೋದಕ್ಕೆ ಸೈಲೆಂಟಾಗಿ ಕಾಯಿನ್ ಮೂ ಮಾಡುತ್ತಿದ್ದಾರೆ. ರಾಜಕಾರಣ ಅಂದಮೇಲೆ ಆಟ ಇರಲೇಬೇಕು. ಆಟವನ್ನು ಬಿಟ್ಟು ಬಿಡಲು ಆಗಲ್ಲ. ನಮ್ಮದು ಐರ್ಲೆಂಡ್ ಟೀಂ ಅಲ್ಲ, ಬಲಿಷ್ಠ ಭಾರತ ಟೀಂ ಎಂದು ಡಿಕೆಶಿ ಟೀಂ ಅನ್ನು ಭಾರತದ ಕ್ರಿಕೆಟ್ ಟೀಂಗೆ ಹೋಲಿಸಿದರು.
ಅಹಮದಾಬಾದ್: ವೇಗಿ ಮಾರ್ಕೊ ಯಾನ್ಸನ್ ಅವರ ಮಾರಕ ದಾಳಿ ಮತ್ತು ನಾಯಕ ಏಡನ್ ಮರ್ಕರಂ ಅವರ ಅಮೋಘ ಬ್ಯಾಟಿಂಗ್ ಬಲದಿಂದ ದಕ್ಷಿಣ ಆಫ್ರಿಕಾ ತಂಡವು ಹ್ಯಾಟ್ರಿಕ್ ಗೆಲುವು ದಾಖಲಿಸಿದೆ.ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಏಳು ವಿಕೆಟ್ಗಳಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿತು. ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ತಂಡವು ಮೊದಲ ತಂಡವಾಗಿ ಸೂಪರ್ ಎಂಟರ ಘಟ್ಟಕ್ಕೆ ಲಗ್ಗೆ ಹಾಕಿತು. ಮಾರ್ಕೊ ಯಾನ್ಸೆನ್ ಅವರ ಮಾರಕ ಬೌಲಿಂಗ್ (4/40) ನೆರವಿನಿಂದ ದಕ್ಷಿಣ ಆಫ್ರಿಕಾ ನ್ಯೂಜಿಲೆಂಡ್ ತಂಡವನ್ನು 7 ವಿಕೆಟ್ಗೆ 175 ರನ್ ಗಳಿಗೆ ನಿಯಂತ್ರಿಸಿ, ಸುಲಭವಾಗಿ ಜಯಗಳಿಸಿತು
ನವದೆಹಲಿ: ಅಮೆರಿಕದಲ್ಲಿ ಭಾರತೀಯ ಮೂಲದವರ ಸಾವಿನ ಸರಣಿ ಮುಂದುವರೆದಿದೆ. ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕ ಮೂಲದ ಸಾಕೇತ್ ಶ್ರೀನಿವಾಸಯ್ಯ ನಿಗೂಢವಾಗಿ ಸಾವನ್ನಪ್ಪಿದ್ದಾರೆ.ಕಳೆದ ಆರು ದಿನಗಳಿಂದ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ನಾಪತ್ತೆಯಾಗಿದ್ದರು. ಅವರು ಕಳೆದ ಸೋಮವಾರರಂದು ಬರ್ಕ್ಲಿ ವಿಶ್ವವಿದ್ಯಾಲಯದ ಕ್ಯಾಂಪಸ್ನಿಂದ ಒಂದು ಕಿ.ಮೀ. ದೂರದಲ್ಲಿ ಕೊನೆಯ ಬಾರಿ ಕಾಣಿಸಿಕೊಂಡಿದ್ದರು. ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಆರು ದಿನಗಳ ಬಳಿಕ, 22 ವರ್ಷದ ಕರ್ನಾಟಕ ಮೂಲದ ಭಾರತೀಯ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಕರ್ನಾಟಕದ ಸಾಕೇತ್ ಶ್ರೀನಿವಾಸಯ್ಯ ಅವರು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಬರ್ಕ್ಲಿಯಲ್ಲಿ ರಾಸಾಯನಿಕ ಮತ್ತು ಬಯೋಮಾಲಿಕ್ಯುಲರ್ ಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿದ್ದರು. ಅವರು ಫೆಬ್ರವರಿ 9 ರಂದು ಕಾಣೆಯಾಗಿದ್ದರು.
ಢಾಕಾ: ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಬಳಿಕ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ ಮುಖಂಡ ತಾರಿಕ್ ರಹ್ಮಾನ್ ಪ್ರಧಾನಿಯಾಗುವುದು ಖಚಿತವಾಗಿದೆ. ಅವರು ಫೆ.17ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಪ್ರಾದೇಶಿಕ ಮುಖಂಡರನ್ನು ಆಹ್ವಾನಿಸಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ನೂತನ ಸರ್ಕಾರದ ಉದ್ಘಾಟನೆಗೆ ನೆರೆಯ ರಾಷ್ಟ್ರದ ನಾಯಕರನ್ನು ಆಹ್ವಾನಿಸಲಾಗುತ್ತಿದೆ ಎಂದು ತಾರಿಕ್ ಹೇಳಿಕೆ ನೀಡಿದ ಬೆನ್ನಲ್ಲೇ, ಶನಿವಾರ ತಡರಾತ್ರಿ ಭಾರತಕ್ಕೆ ಈ ಆಮಂತ್ರಣವನ್ನು ನೀಡಲಾಗಿದೆ.ಉಭಯ ದೇಶಗಳ ನಡುವಿನ ಸಂಬಂಧ ಹದಗೆಟ್ಟಿರುವುದನ್ನು ಸರಿಪಡಿಸಲು ಭಾರತ ಆದ್ಯತೆ ನೀಡಲಿದ್ದರೂ, ಬಾಂಗ್ಲಾದೇಶ ವಿಚಾರದಲ್ಲಿ ಧಾವಂತದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಬೆಳವಣಿಗೆಯ ಮಾಹಿತಿ ಇರುವ ಉನ್ನತ ಅಧಿಕಾರಿಗಳು ವಿವರಿಸಿದ್ದಾರೆ.
ಕೊಲಂಬೊ: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಇಂದು ಟಿ20 ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ‘ಎ’ ಗುಂಪಿನ ಪಂದ್ಯಕ್ಕೆ ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ರವಿವಾರ ನಡೆಯಲಿದೆ. ಬಹು ನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ–20 ವಿಶ್ವಕಪ್ ಪಂದ್ಯಕ್ಕೆ ಗುಡುಗು ಸಹಿತ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಭಾನುವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಗಳು ಲಭಿಸಿವೆ. ಮಧ್ಯಾಹ್ನ ಹಾಗೂ ಸಂಜೆ ಮಳೆಯಾಗುವ ಸಾಧ್ಯತೆಯು ಸುಮಾರು 55ರಿಂದ 60 ಪ್ರತಿಶತದಷ್ಟು ಇದೆ.ಹಲವು ಪ್ರಹಸನಗಳ ಬಳಿಕ ಭಾರತ–ಪಾಕ್ ಪಂದ್ಯ ನಡೆಯುತ್ತಿದೆ. ಬಾಂಗ್ಲಾದೇಶ ತಂಡವನ್ನು ಟೂರ್ನಿಯಿಂದ ಹೊರಹಾಕಿದ್ದನ್ನು ವಿರೋಧಿಸಿ ಪಾಕ್ ತಂಡವು ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿತ್ತು.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಂಪುಟ ಸಭೆಯಲ್ಲಿ ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗದ ಯೋಜನೆಗೆ ಒಪ್ಪಿಗೆ ನೀಡಿದೆ.₹2372 ಕೋಟಿ ವೆಚ್ಚದ ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗಕ್ಕೆ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮಾಹಿತಿ ಈ ಸಂಬಂಧ ಮಾಹಿತಿಯನ್ನು ನೀಡಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ.
ಪ್ರೇಮಿಗಳ ದಿನದಂದು, ವ್ಯಕ್ತಿಯೊಬ್ಬ ತನ್ನ ಗೆಳತಿಯನ್ನು ಆಕೆಯ ಕಾರಿನೊಳಗೆ ಗುಂಡಿಕ್ಕಿ ಕೊಂದು ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡು ಆಘಾತಕಾರಿ ಘಟನೆ ವರದಿಯಾಗಿದೆ. ಗುಂಡಿನ ಸದ್ದು ಕೇಳಿ ಅಕ್ಕಪಕ್ಕದ ಜನರು ಸ್ಥಳಕ್ಕೆ ಆಗಮಿಸಿದ್ದಾರೆ. ಕಾರು ಒಳಗಿನಿಂದ ಲಾಕ್ ಆಗಿರುವುದನ್ನು ನೋಡಿದರು. ನಂತರ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪೊಲೀಸರು ಟಾಟಾ ಆಲ್ಟ್ರೋಜ್ ಕಾರಿನ ಕಿಟಕಿಯನ್ನು ಒಡೆದು ನೋಡಿದಾಗ ಎರಡೂ ಶವಗಳು ಮುಂಭಾಗದ ಸೀಟಿನಲ್ಲಿ ಬಿದ್ದಿರುವುದು ಕಂಡುಬಂದಿದೆ.
ಭಾರತದ ಬದ್ಧ ವೈರಿ ಪಾಕಿಸ್ತಾನದ ಜತೆ ಟೀಂ ಇಂಡಿಯಾ ಮೊದಲ ಟೀ20 ವಿಶ್ವಕಪ್ ಪಂದ್ಯಾಟವನ್ನು ಎದುರಿಸಲಿದೆ. T20 ವಿಶ್ವಕಪ್ ಟೂರ್ನಿಯಲ್ಲಿ ನಾಳೆ ನಡೀತಾ ಇರೋದು ಸೂಪರ್ ಸಂಡೇಯ ಸೂಪರ್ ಕದನವಾಗಿದ್ದು, ಭಾರೀ ಕುತೂಹಲವನ್ನು ಮೂಡಿಸುತ್ತಿರುವ ಬೆನ್ನಲ್ಲೇ ಟೀಂ ಇಂಡಿಯಾ ಕ್ಯಾಪ್ಟನ್ ಪಾಕ್ ಜತೆಗಿನ ಶೇಕ್ ಹ್ಯಾಂಡ್ ಬಗ್ಗೆ ಮೌನ ಮುರಿದಿದ್ದಾರೆ. ಇಂದು ನಡೆದ ಪ್ರೆಸ್ಮೀಟ್ನಲ್ಲಿ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ಗೆ ಪಾಕ್ ಜತೆಗೆ ಶೇಕ್ ಹ್ಯಾಂಡ್ ಮಾಡಲಾಗುವುದೆ ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಟೀಮ್ ಇಂಡಿಯಾ ತಮ್ಮ T20 ವಿಶ್ವಕಪ್ 2026 ಪಂದ್ಯದ ಟಾಸ್ ಸಮಯದಲ್ಲಿ ಪಾಕಿಸ್ತಾನದೊಂದಿಗೆ ಕೈಕುಲುಕಲು
ಜೈಪುರ: ಆರತಕ್ಷತೆ ವೇಳೆ ವೇದಿಕೆಯಲ್ಲಿ ವಧುವಿನ ಬ್ಯಾಗ್ ಅನ್ನು ಎಗಸಿರುವ ಘಟನೆ ಜೈಪುರದಲ್ಲಿ ನಡೆದಿದೆ. ಮಧು ಮಕ್ಕಳು ಶುಭಹಾರೈಕೆಯನ್ನು ಪಡೆಯುತ್ತಿರುವ ವೇಳೆ ಹಿಂದಿನಿಂದ ಬಂದ ಕಳ್ಳ, ವಧುವಿನ ಬ್ಯಾಗ್ ಅನ್ನು ಎಗರಿಸಿದ್ದಾನೆ. ಈ ಬ್ಯಾಗ್ನಲ್ಲಿ ₹4ಲಕ್ಷ ಮೌಲ್ಯದ ಚಿನ್ನಾಭರಣಗಳ ಜೊತೆಗೆ ಸುಮಾರು ಹಣವಿತ್ತು ಎಂದು ವರದಿಯಾಗಿದೆ. ಫೆಬ್ರವರಿ 7 ರಂದು ಜಗತ್ಪುರ ಪ್ರದೇಶದ ಚಂದನ್ ವ್ಯಾನ್ನಲ್ಲಿ ಈ ಘಟನೆ ಸಂಭವಿಸಿದೆ. ಸಂಭ್ರಮಾಚರಣೆ ಜೋರಾಗಿದ್ದರೆ, ಚೆಂದದ ವಸ್ತ್ರಧಾರಿ ಯುವಕನೊಬ್ಬ ಅತಿಥಿಗಳೊಂದಿಗೆ ಬೆರೆತು ವೇದಿಕೆ ತಲುಪಿದ.
ಯಾದಗಿರಿ: ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಕ್ರೂಸರ್ ವಾಹನ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ 3ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಜಡಚರ್ಲಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.ಮೃತರನ್ನು ಯಾದಗಿರಿ ಜಿಲ್ಲೆಯ ಶಾಹಪುರ ತಾಲೂಕಿನ ಗೋಗಿ ಗ್ರಾಮದ ನಿವಾಸಿಗಳಾದ ರಾಮರೆಡ್ಡಿ (52), ಅವರ ಪತ್ನಿ ಮೇಘಾ (50) ಹಾಗೂ ರಾಮರೆಡ್ಡಿಯ ಅತ್ತೆ, ವಿಜಯಪುರ ಜಿಲ್ಲೆ ಮೂಲದ ಮಹಾದೇವಪ್ಪ (65) ಎಂದು ಗುರುತಿಸಲಾಗಿದೆ.ಮೃತ ರಾಮರೆಡ್ಡಿ ಕುಟುಂಬಸ್ಥರು ಹಾಗೂ ಸಂಬಂಧಿಕರೊಂದಿಗೆ ಕ್ರೂಸರ್ ವಾಹನದಲ್ಲಿ ಯಾದಗಿರಿಯಿಂದ ಶ್ರೀಶೈಲ
ಹಾವೇರಿ: ವಿಧಾನಸಭೆ ಚುನಾವಣೆ ಮುನ್ನಾ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡುತ್ತಿದೆ. ಕೇಂದ್ರ ಸರ್ಕಾರ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ಎತ್ತಿನಹೊಳೆಗೆ ಅನುಮತಿ ಕೊಟ್ಟರೆ ಏಳನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಘೋಷಣೆ ಮಾಡಿದರು.ಹಾವೇರಿಯಲ್ಲಿ ಶನಿವಾರ ನಡೆದ ಜನಸೇವೆಯಲ್ಲಿ ಸಾರ್ಥಕ ಸಾವಿರ ದಿನ, ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.
ಉಡುಪಿ: ಕಳೆದ ತಿಂಗಳ ಕೊನೆಯಲ್ಲಿ ಮಣಿಪಾಲದ ಹೋಟೆಲ್ನಲ್ಲಿ ನಡೆದ ಹಿಂಸಾತ್ಮಕ ಘಟನೆಯಲ್ಲಿ NSUI ಉಪಾಧ್ಯಕ್ಷರ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಇಂದು ಐವರನ್ನು ಅರೆಸ್ಟ್ ಮಾಡಲಾಗಿದೆ. ಪೊಲೀಸರ ಪ್ರಕಾರ, 25 ವರ್ಷದ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಉಡುಪಿ ಜಿಲ್ಲಾ ಉಪಾಧ್ಯಕ್ಷ ಮತ್ತು ಬೈಲೂರು-ಚಿಟ್ಪಾಡಿ ನಿವಾಸಿ ಶರತ್ ಕುಂದರ್ ಅವರ ಮೇಲೆ ಜನವರಿ 30ರ ರಾತ್ರಿ ಹೋಟೆಲ್ನಲ್ಲಿ ನಡೆದ ತೀವ್ರ ವಾಗ್ವಾದದ ನಂತರ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.ಇದೀಗ ಬಂಧಿತರನ್ನು ಅಕ್ಷತ್ ಪೈ(27), ಸುಶಾಂತ್ (25), ರಮಾನಂದ ಪೈ (42), ಸಂತೋಷ್ ಕೊರಗ (38), ಮತ್ತು
ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು 2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು, ಅವರ ಶೌರ್ಯ ಮತ್ತು ಶೌರ್ಯವನ್ನು ಗುರುತಿಸಿದರು.X ನಲ್ಲಿನ ಪೋಸ್ಟ್ನಲ್ಲಿ, "2019 ರಲ್ಲಿ ಪುಲ್ವಾಮಾದಲ್ಲಿ ನಡೆದ ಧೈರ್ಯಶಾಲಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ನಮ್ಮ ವೀರ ಸೈನಿಕರಿಗೆ ನನ್ನ ಹೃತ್ಪೂರ್ವಕ ಶ್ರದ್ಧಾಂಜಲಿಗಳು. ಭಾರತ ಮಾತೆಯ ರಕ್ಷಣೆಯಲ್ಲಿ ಅವರ ಅತ್ಯುನ್ನತ ತ್ಯಾಗಕ್ಕಾಗಿ ರಾಷ್ಟ್ರವು ಅವರಿಗೆ ಋಣಿಯಾಗಿರಲಿದೆ" ಎಂದು ಹೇಳಿದ್ದಾರೆ.
ಪುದುಚೇರಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ಪದೇ ಪದೇ ಸುಳ್ಳು ಹೇಳುತ್ತಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಅವರು ಆರೋಪ ಮಾಡಿದರು. ತಮಿಳುನಾಡು ಮತ್ತು ಪುದುಚೇರಿಗೆ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಅದರ ಪ್ರಧಾನ ಕಛೇರಿಯಿಂದ 140 ಕಿಮೀ ದಕ್ಷಿಣದಲ್ಲಿರುವ ಕಾರೈಕಲ್ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾ, ರಾಹುಲ್ ಗಾಂಧಿ ಆರೋಪಗಳನ್ನು ತಳ್ಳಿಹಾಕಿದರು ಮತ್ತು ಒಪ್ಪಂದದಲ್ಲಿ ರೈತರು ಮತ್ತು ಮೀನುಗಾರರ ಹಿತಾಸಕ್ತಿಗಳನ್ನು "100% ರಕ್ಷಿಸಲಾಗಿದೆ" ಎಂದು ಸಮರ್ಥಿಸಿಕೊಂಡರು. ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಮಾತ್ರ ರೈತರ ಹಿತಾಸಕ್ತಿಗಳಿಗೆ ಧಕ್ಕೆಯಾಗಿತ್ತು. ಸುಳ್ಳು ಹೇಳುವುದು, ಜೋರಾಗಿ
ನವದೆಹಲಿ: ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಮೂಲಕ ಮೋದಿ ಸರ್ಕಾರವು "ಗೊಂದಲವನ್ನು ಹರಡುವ" ಮೂಲಕ ಭಾರತದ ಹತ್ತಿ ರೈತರು ಮತ್ತು ಜವಳಿ ರಫ್ತುದಾರರನ್ನು ವಂಚಿಸುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಆರೋಪಿಸಿದ್ದಾರೆ.ಎಕ್ಸ್ನಲ್ಲಿ ಪೋಸ್ಟ್ನಲ್ಲಿ, ಅವರು ಸಂಸತ್ತಿನಲ್ಲಿ ಭಾರತೀಯ ಉಡುಪುಗಳ ಮೇಲೆ 18% ಸುಂಕದ ವಿಷಯವನ್ನು ಪ್ರಸ್ತಾಪಿಸಿದರು, ಬಾಂಗ್ಲಾದೇಶವು USನಿಂದ ಯಾವುದೇ ಸುಂಕದ ಪ್ರಯೋಜನವನ್ನು ಪಡೆದಾಗ ಮತ್ತು ಸಚಿವರೊಬ್ಬರ ಉತ್ತರವು ಅದೇ ಲಾಭವನ್ನು ಬಯಸಿದರೆ ಭಾರತವು ಅಮೆರಿಕಾದಿಂದ ಹತ್ತಿ ಆಮದು ಮಾಡಿಕೊಳ್ಳಬೇಕಾಗುತ್ತದೆ ಎಂದು ಹೇಳಿದರು.
ಸೂರಗೊಂಡನಕೊಪ್ಪ: ಇಲ್ಲಿನ ಭಾಯಾಗಡ್ದಲ್ಲಿ ನಡೆಯುತ್ತಿರುವ ಸಂತ ಸೇವಾಲಾಲ್ ಅವರ 287ನೇ ಜಯಂತಿಗೆ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದ ಘಟನೆ ನಡೆಯಿತು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಒಳಮೀಸಲಾತಿಯಿಂದ ಬಂಜಾರ ಸಮುದಾಯದ ಜನರು ಕಪ್ಪು ಬಟ್ಟೆ ಪ್ರದರ್ಶಿಸಿದರು. ಡಿ.ಕೆ.ಶಿವಕುಮಾರ್ ಅವರು ವೇದಿಕೆಗೆ ಬರುತ್ತಿದ್ದಂತೆ ಸಭಾಂಗಣದಲ್ಲಿದ್ದ ಬಹುತೇಕ ಯುವಕರು ಎದ್ದು ನಿಂತು ಕಪ್ಪು ಬಟ್ಟೆ ಪ್ರದರ್ಶನ ಮಾಡಿದರು. ಈ ಮೂಲಕ ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಒಳಮೀಸಲಾತಿ ನೀತಿಯಿಂದ ಸಮುದಾಯಕ್ಕೆ ದೊಡ್ಡ ಅನ್ಯಾಯ ಆಗಿದೆ
ನವದೆಹಲಿ: ಬಾಂಗ್ಲಾದೇಶದ 13ನೇ ಸಾರ್ವತ್ರಿಕ ಚುನಾವಣೆಯಲ್ಲಿ, ಬಾಂಗ್ಲಾದೇಶ ರಾಷ್ಟ್ರೀಯ ಪಕ್ಷ (ಬಿಜೆಪಿ) ಒಂದೇ ಸ್ಥಾನವನ್ನು ಪಡೆದುಕೊಂಡಿತು, ಭೋಲಾ-1 ಕ್ಷೇತ್ರದಿಂದ ಅಂಡಲೀವ್ ರೆಹಮಾನ್ ಪಾರ್ಥೋ ಗೆಲುವು ಸಾಧಿಸಿದರು.ಚುನಾವಣಾ ಆಯೋಗ (EC) 297 ಸ್ಥಾನಗಳಲ್ಲಿ ಪ್ರಕಟಿಸಿದ ಫಲಿತಾಂಶಗಳ ಪ್ರಕಾರ, BNP ಮತ್ತು ಅದರ ಮಿತ್ರಪಕ್ಷಗಳು 212 ಸ್ಥಾನಗಳನ್ನು ಗಳಿಸಿವೆ. ಬಿಎನ್ಪಿ ಏಕಾಂಗಿಯಾಗಿ 209 ಸ್ಥಾನಗಳನ್ನು ಗೆದ್ದಿದೆ.ಅದರ ಮಿತ್ರಪಕ್ಷಗಳಲ್ಲಿ, ಗಣೋಸಂಹತಿ ಆಂದೋಲನ್, ಬಾಂಗ್ಲಾದೇಶ ರಾಷ್ಟ್ರೀಯ ಪಕ್ಷ (ಬಿಜೆಪಿ), ಮತ್ತು ಗೊನೊ ಓಧಿಕಾರ್
ಬೆಂಗಳೂರು: ಕೇಂದ್ರ ಸರಕಾರ ನೀಡಿದ ವಿಶೇಷ ಅನುದಾನವನ್ನು ರಾಜ್ಯ ಸರಕಾರವು ಆಯಾ ಯೋಜನೆಗಳಿಗೆ ಬಳಸದೇ ತನ್ನ ಇಚ್ಛಾನುಸಾರವಾಗಿ ಬೇರೆ ಯೋಜನೆಗಳಿಗೆ, ಇತರ ಇಲಾಖೆಗಳಿಗೆ ಬಳಸಿಕೊಂಡಿದೆ. ರಾಜ್ಯ ಸರಕಾರಕ್ಕೆ ಆ ಅಧಿಕಾರ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ನನಗಿರುವ ಮಾಹಿತಿ ಪ್ರಕಾರ ರಾಜ್ಯ ಸರಕಾರ ಮತ್ತು ಸಂಬಂಧಿತ ಇಲಾಖೆಯು ಆ ಹಣವನ್ನು ಸದ್ಬಳಕೆ ಮಾಡದೇ ಹಣಕಾಸು ಇಲಾಖೆ ಒತ್ತಾಯದ ಮೇರೆಗೆ ಹಣಬಳಕೆ ಸಂಬಂಧ ನಕಲಿ (ಫ್ಯಾಬ್ರಿಕೇಟೆಡ್) ದೃಢಪತ್ರವನ್ನು ಕೇಂದ್ರಕ್ಕೆ ಕಳುಹಿಸಿದ್ದಾರೆ ಎಂದು ಅವರು ದೂರಿದರು.
ಮುಂಬೈ: ಮಹಾರಾಷ್ಟ್ರದ ಮುಲುಂಡ್ನ ಎಲ್ಬಿಎಸ್ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಮುಂಬೈ ಮೆಟ್ರೋ ಪಿಲ್ಲರ್ನ ಒಂದು ಭಾಗವು ಶನಿವಾರ ಕುಸಿದು ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಮೃತರು ಮತ್ತು ಗಾಯಾಳುಗಳು ಜಾನ್ಸನ್ ಮತ್ತು ಜಾನ್ಸನ್ ಕಂಪನಿ ಬಳಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಪಿಲ್ಲರ್ನ ಭಾಗವು ಅವರ ಮೇಲೆ ಕುಸಿದಿದೆ.ಮುಂಬೈ ಪೊಲೀಸರು, ಮೆಟ್ರೋ ಸಿಬ್ಬಂದಿ, ಎಂಎಫ್ಬಿ, ವಾರ್ಡ್ ಸಿಬ್ಬಂದಿ ಮತ್ತು ಆಂಬ್ಯುಲೆನ್ಸ್ ಸೇವೆಗಳು ಸೇರಿದಂತೆ ತುರ್ತು ಪ್ರತಿಕ್ರಿಯೆ ತಂಡಗಳು ಪರಿಸ್ಥಿತಿಯನ್ನು ನಿಭಾಯಿಸಲು ಮತ್ತು ಅವಶೇಷಗಳನ್ನು ತೆರವುಗೊಳಿಸಲು ಸ್ಥಳಕ್ಕೆ ಧಾವಿಸಿದವು.ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮೃತರನ್ನು ರಾಮಧನ್ ಯಾದವ್ ಎಂದು ಗುರುತಿಸಿದ್ದು, ಮೂವರು
ಬರ್ಕ್ಲಿಯ ಕ್ಯಾಲಿಫೋರ್ನಿಯ ವಿಶ್ವವಿದ್ಯಾಲಯದಲ್ಲಿ ಅಭ್ಯಾಸ ಮಾಡುತ್ತಿದ್ದ ಕರ್ನಾಟಕ ಮೂಲದ ಸಾಕೇತ್ ಶ್ರೀನಿವಾಸಯ್ಯ (22) ಎಂಬಾತ ನಾಪತ್ತೆಯಾಗಿರುವ ವರದಿಯಾಗಿದೆ. ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ, ಪಾರ್ಕ್ ಹಿಲ್ಸ್ ಪ್ರದೇಶದ ಮನೆ ಬಾಗಿಲಿನಲ್ಲಿ ಅವರ ಪಾಸ್ಪೋರ್ಟ್, ಲ್ಯಾಪ್ಟಾಪ್ ಮತ್ತು ಬ್ಯಾಗ್ ಪತ್ತೆಯಾಗಿದೆ. ಸಾಕೇತ್ ಶ್ರೀನಿವಾಸಯ್ಯ ಅವರು ನಾಪತ್ತೆಯಾದ ಬಗ್ಗೆ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸ ಕಚೇರಿ ತೀವ್ರ ಕಳವಳ ವ್ಯಕ್ತಪಡಿಸಿದೆ.
ಬೆಂಗಳೂರು: ಭಾನುವಾರ ನಾಡಿನಾದ್ಯಂತ ಮಹಾಶಿವರಾತ್ರಿಯ ಆಚರಣೆಯನ್ನು ಸಂಭ್ರಮದೊಂದಿಗೆ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಭಾನುವಾರದಂದು ಸಂಪೂರ್ಣವಾಗಿ ಮಾಂಸ ಮಾರಾಟವನ್ನು ನಿಷೇಧ ಮಾಡಲಾಗಿದೆ.ಈ ಕುರಿತು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಆದೇಶದ ಪ್ರತಿಯನ್ನು ಹಂಚಿಕೊಳ್ಳಲಾಗಿದೆ. ಮಹಾ ಶಿವರಾತ್ರಿ ಆಚರಿಸಲ್ಪಡುವುದರಿಂದ ಆ ದಿನವಿಡಿ ಜಿಬಿಎ ವ್ಯಾಪ್ತಿಯ ಎಲ್ಲಿಯೂ ಪ್ರಾಣಿ ವಧೆ, ಮಾಂಸ ಮಾರಾಟ ಮಾಡಲು ಯಾವುದೇ ಅವಕಾಶ ಇರುವುದಿಲ್ಲ. ಅಲ್ಲದೇ ಸೂಪರ್ ಮಾರ್ಕೆಟ್, ಇನ್ನಿತರ ಮಳಿಗೆಗಳಲ್ಲಿಯೂ ಮಾಂಸ ಮಾರಾಟಕ್ಕೆ ಅವಕಾಶ ಇಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದ ಮತ್ತೊಂದು ಬಡ್ತಿ ಎಡವಟ್ಟು ಈಗ ಬಯಲಾಗಿದೆ. ನಿನ್ನೆಯಷ್ಟೇ ಆರೋಗ್ಯ ಇಲಾಖೆ ಅಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಿ ವಿವಾದವಾಗಿತ್ತು. ಇದೀಗ ಸರ್ಕಾರೀ ಅಧಿಕಾರಿಗಳ ಬಡ್ತಿ ಪಟ್ಟಿಯಲ್ಲಿ ನಿಶ್ಚಲಾನಂದ ಸ್ವಾಮೀಜಿ ಹೆಸರೂ ನಮೂದಾಗಿರುವುದು ವಿಪಕ್ಷಗಳ ಟೀಕೆಗೆ ಗುರಿಯಾಗಿದೆ. ರಾಜ್ಯ ಸರ್ಕಾರ 20 ಕೆಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡುವ ಆದೇಶ ನೀಡಿದೆ. ವಿಚಿತ್ರವೆಂದರೆ ಈ ಪಟ್ಟಿಯಲ್ಲಿ ಶ್ರೀ ಎಚ್ಎಲ್ ನಾಗರಾಜ ಹೆಸರೂ ಇದೆ. ಈ ಎಚ್ ಎಲ್ ನಾಗರಾಜ ಅವರು ಬೇರೆ ಯಾರೂ ಅಲ್ಲ. ನಿಶ್ಚಲಾನಂದ ಸ್ವಾಮೀಜಿಗಳು. ಅವರು ಈಗಾಗಲೇ ಸರ್ಕಾರೀ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದು ಸನ್ಯಾಸತ್ವದಲ್ಲಿದ್ದಾರೆ.
ಬೆಂಗಳೂರು: ಈ ದೇಶದ ಬಡವರು, ರೈತರು, ಮಹಿಳೆಯರು ಮತ್ತು ಯುವಕರ ಬದುಕು ಕಟ್ಟಿಕೊಡುವ ಕೆಲಸವನ್ನು ಮೋದಿಜೀ ಅವರು ಮಾಡುತ್ತಿದ್ದರೆ ನಮ್ಮ ರಾಜ್ಯದಲ್ಲಿ ಒಬ್ಬ ಅನುಭವಿ ಮುಖ್ಯಮಂತ್ರಿಗಳು, 16 ದಾಖಲೆ ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರ ಯೋಜನೆಗಳು ಹೇಗಿವೆ ಎಂದರೆ, ರಾಜ್ಯದ ಜನರಿಗೆ ಕಾಯುವುದೇ ಕೈಲಾಸ ಎಂಬಂತೆ ಸತಾಯಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು.ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ" ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು 1000 ದಿನ ಪೂರೈಸಿ ಹಾವೇರಿಯಲ್ಲಿ ಬೃಹತ್ ಸಮಾವೇಶ, ಸಂಭ್ರಮಾಚರಣೆಯನ್ನು ಹಮ್ಮಿಕೊಂಡಿದೆ.
ನವದೆಹಲಿ: ರಾಜ್ಯಸಭೆಯಲ್ಲಿ ಪದೇ ಪದೇ ತನ್ನ ಮಾತಿನ ನಡುವೆ ಕೂಗಾಡುತ್ತಿದ್ದ ಜಯಾ ಬಚ್ಚನ್ ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಖಡಕ್ ಉತ್ತರ ನೀಡಿ ಬಾಯಿ ಮುಚ್ಚಿಸಿದ್ದಾರೆ. ನಿರ್ಮಲಾ ರೋಷಾವೇಷದ ವಿಡಿಯೋ ಇಲ್ಲಿದೆ ನೋಡಿ. ರಾಜ್ಯಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಮಾತನಾಡುತ್ತಿದ್ದರು. ಈ ವೇಳೆ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಪತ್ನಿಯೂ ಆಗಿರುವ ಸಂಸದೆ ಜಯಾ ಬಚ್ಚನ್ ಪದೇ ಪದೇ ಮಧ್ಯೆ ಜೋರಾಗಿ ಕೂಗಾಡುತ್ತಿದ್ದರು. ಇದು ನಿರ್ಮಲಾ ಪಿತ್ತ ಕೆರಳಿಸಿದೆ. ‘ನಿಮಗೆ ಮಾತ್ರ ಧ್ವನಿ ಪೆಟ್ಟಿಗೆ ಇರೋದಲ್ಲ. ಮಾತನಾಡಲು ನಮಗೆಲ್ಲರಿಗೂ ಬರುತ್ತದೆ. ನೀವು ಇಲ್ಲಿ ಪದೇ ಪದೇ ಕೂಗಾಡುವ ಅಗತ್ಯವಿಲ್ಲ’ ಎಂದು ನಿರ್ಮಲಾ ಹೇಳಿದ್ದಾರೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಆದರೆ ಮೊನ್ನೆ ಅಡಿಕೆ ದರದಲ್ಲಿ ಏರಿಕೆಯಾಗಿರುವುದು ಖಷಿಯ ಸಂಗತಿ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಏರಿಕೆಯಾಗಬಹುದೇನೋ ಎಂಬ ನಿರೀಕ್ಷೆ ಬೆಳೆಗಾರರಲ್ಲಿತ್ತು. ಮೊನ್ನೆಯಷ್ಟೇ ಅಡಿಕೆಗೆ ಕೊಂಚ ಬೆಲೆ ಏರಿಕೆಯಾಗಿತ್ತು. ಆದರೆ ಈಗ ಮತ್ತೆ ಯಥಾಸ್ಥಿತಿಯಲ್ಲಿದೆ. ಇಂದು ಹೊಸ ಅಡಿಕೆ ಬೆಲೆ 480 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 550 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 550 ರೂ.ಗಳಷ್ಟಾಗಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದೆ ಮತ್ತುಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ದಾಖಲೆಯ ಏರಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಇಳಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಇಂದು ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,61,110.00 ರೂ.ಗಳಿತ್ತು. ಇಂದೂ 1,58,200.00 ರೂ.ಗಳಷ್ಟಿದೆ.
ನವದೆಹಲಿ: ಗೆಳೆಯನ ಜೊತೆ ಹೋಟೆಲ್ ಗೆ ತಂಗಲು ಬಂದಿದ್ದ ಯುವತಿ ಇದ್ದಕ್ಕಿದ್ದಂತೆ ನಾಲ್ಕನೇ ಮಹಡಿಯಿಂದ ಹಾರಿದ ಭಯಾನಕ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದೆ. ಇತ್ತೀಚೆಗಿನ ದಿನಗಳಲ್ಲಿ ಕ್ಷುಲ್ಲುಕ ಕಾರಣಕ್ಕೆ ಪ್ರೇಮಿಗಳು ಕಿತ್ತಾಡುವುದು ಜೀವವನ್ನೇ ಕಳೆದುಕೊಳ್ಳುವ ಹಂತಕ್ಕೆ ಹೋಗುವುದು ಸಾಮಾನ್ಯವಾಗಿದೆ. ಇನ್ನೇನು ವ್ಯಾಲೆಂಟೈನ್ಸ್ ಡೇ ಹತ್ತಿರ ಬರುತ್ತಿದ್ದು ಇಂತಹ ಸಂದರ್ಭದಲ್ಲೇ ಇಂತಹ ಘಟನೆಗಳು ಕೇಳಿಬರುತ್ತಿದೆ. ದೆಹಲಿಯ ಹೋಟೆಲ್ ಒಂದಕ್ಕೆ ಯುವತಿ ತನ್ನ ಗೆಳೆಯನ ಜೊತೆ ಬಂದಿದ್ದಳು. ಅಲ್ಲಿ ವಾಸ್ತವ್ಯವಿದ್ದ ವೇಳೆ ಇಬ್ಬರ ನಡುವೆ ಅದೇನು ಮನಸ್ತಾಪವಾಯ್ತೋ ಗೊತ್ತಿಲ್ಲ.
ಮುಂಬೈ: ಟೀಂ ಇಂಡಿಯಾದ ಯಾವ ಕ್ರಿಕೆಟಿಗರು ಮತ್ತು ಪತ್ನಿಯರಿಗೂ ಇಲ್ಲದ ಭಾಗ್ಯ ವೇಗಿ ಜಸ್ಪ್ರೀತ್ ಬುಮ್ರಾಗಿದೆ. ಅದೆನಪ್ಪಾ ಅಂಥಾ ಭಾಗ್ಯ ಈ ಸ್ಟೋರಿ ಓದಿ. ಟಿ20 ವಿಶ್ವಕಪ್ ವೇಳೆ ಟೀಂ ಇಂಡಿಯಾಗೆ ಭಾರತದಲ್ಲೇ ಇದ್ದರೂ ಪತ್ನಿಯನ್ನು ಜೊತೆಗೆ ಕರೆದೊಯ್ಯುವ ಅವಕಾಶವಿಲ್ಲ. ಆಟದ ಮೇಲೆ ಗಮನವಿರಲ್ಲ ಎಂಬ ಕಾರಣಕ್ಕೆ ಟೀಂ ಇಂಡಿಯಾ ಆಟಗಾರರಿಗೆ ಪತ್ನಿಯರನ್ನು ಜೊತೆಗೆ ಕರೆದೊಯ್ಯಲು ಬಿಸಿಸಿಐ ಅವಕಾಶ ಕೊಡುತ್ತಿಲ್ಲ. ಸುದೀರ್ಘ ಪ್ರವಾಸವಿದ್ದಾಗ ಮಾತ್ರ ಎರಡು ವಾರ ಕಾಲ ಪತ್ನಿಯರನ್ನು ಜೊತೆಗೆ ಕರೆದೊಯ್ಯಲು ಅವಕಾಶವಿದೆ. ಆದರೆ ಜಸ್ಪ್ರೀತ್ ಬುಮ್ರಾಗೆ ಮಾತ್ರ ಸ್ಪೆಷಲ್ ಅವಕಾಶವಿದೆ.
ಕೊಲೊಂಬೋ: ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನದ ವಿರುದ್ಧ ಪಂದ್ಯವಾಡಲು ಟೀಂ ಇಂಡಿಯಾ ಕೊಲೊಂಬೋಗೆ ಬಂದಿಳಿದಿದೆ. ಕೊಲೊಂಬೋದಲ್ಲಿ ಟೀಂ ಇಂಡಿಯಾಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಇದರ ಬೆನ್ನಲ್ಲೇ ಈಗ ಮೊನ್ನೆಯಷ್ಟೇ ಪಾಕಿಸ್ತಾನ ಕ್ರಿಕೆಟಿಗರಿಗೆ ಸಿಕ್ಕ ಸ್ವಾಗತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗುತ್ತಿದೆ. ನಿನ್ನೆ ಕೊಲೊಂಬೋ ವಿಮಾನ ನಿಲ್ದಾಣಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರು ಬಂದಿಳಿದಿದ್ದಾರೆ. ಭಾರತ ಕ್ರಿಕೆಟಿಗರನ್ನು ನೋಡಲು ಕೊಲೊಂಬೋ ವಿಮಾನ ನಿಲ್ದಾಣದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಭದ್ರತೆಯೂ ಉನ್ನತ ಮಟ್ಟದಲ್ಲಿತ್ತು.
ಬೆಂಗಳೂರು: ಹಿಂದೂ ಸಂಘಟನೆಗಳಿಗೆ ಕೇರ್ ಮಾಡಬೇಡಿ, ಬಿಂದಾಸ್ ಆಗಿ ಪ್ರೇಮಿಗಳ ದಿನಾಚರಣೆ ಸಂಭ್ರಮಾಚರಣೆ ಮಾಡಿ ಎಂದು ಯೂತ್ ಕಾಂಗ್ರೆಸ್ ಯುವ ಪ್ರೇಮಿಗಳಿಗೆ ಅಭಯ ನೀಡಿದೆ. ‘ಪ್ರತಿ ವರ್ಷ ಫೆ.14ರ ಪ್ರೇಮಿಗಳ ದಿನದಂದು ಸಂಸ್ಕೃತಿ ರಕ್ಷಣೆಯ ಹೆಸರಿನಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಶ್ರೀರಾಮಸೇನೆಯಂತಹ ಆರ್ಎಸ್ಎಸ್ನ ಸಂತತಿಗಳು ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಲು ಯತ್ನಿಸುತ್ತಾರೆ. ಈ ಬಾರಿಯೂ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ, ಪೊಲೀಸರ ಮೂಗಿನ ಕೆಳಗೇ ಬಜರಂಗದಳದಂತಹ ಸಂಘಟನೆಗಳ ದಾಂಧಲೆ ಶುರುವಾಗಿದೆ.
ನವದೆಹಲಿ: ಜಗತ್ತಿಡೀ ಪ್ರೇಮಿಗಳ ದಿನ ಆಚರಣೆ ಮಾಡುತ್ತಿದ್ದರೆ ಭಾರತಕ್ಕೆ ಮಾತ್ರ ಇಂದು ಕರಾಳ ದಿನ. ಯಾಕೆಂದರೆ ಇದೇ ದಿನ 6 ವರ್ಷಗಳ ಹಿಂದೆ ಪುಲ್ವಾಮದಲ್ಲಿ ನಮ್ಮ ಸೈನಿಕರ ಮೇಲೆ ಉಗ್ರರು ದಾಳಿ ನಡೆಸಿದ್ದರು. 2019 ರ ಫೆಬ್ರವರಿ 14 ರಂದು ಪುಲ್ವಾಮದಲ್ಲಿ ನಮ್ಮ ವೀರ ಯೋಧರು ಪ್ರಯಾಣಿಸುತ್ತಿದ್ದ ಎರಡು ಬಸ್ ಗಳನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ದಾಳಿ ನಡೆಸಲಾಗಿತ್ತು. ಈ ದಾಳಿಯ ಹೊಣೆಯನ್ನು ಜೈಶ್ ಇ ಮೊಹಮ್ಮದ್ ಸಂಘಟನೆ ಹೊತ್ತುಕೊಂಡಿತ್ತು. ಘಟನೆಯಲ್ಲಿ 40 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು. ಪಾಕಿಸ್ತಾನ ಪ್ರೇರಿತ ಉಗ್ರರ ದಾಳಿಯಿಂದ ಭಾರತ ಆಕ್ರೋಶದಲ್ಲಿ ಕುದ್ದು ಹೋಗಿತ್ತು.
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಕೆಆರ್ ಪುರಂ ಶಾಸಕ ಬೈರತಿ ಬಸವರಾಜುಗೆ ಎದೆನೋವು ಕಾಣಿಸಿಕೊಂಡಿದ್ದು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಕ್ಲು ಶಿವು ಮರ್ಡರ್ ಕೇಸ್ ನಲ್ಲಿ ಆರೋಪಿಯಾಗಿರುವ ಬೈರತಿ ಬಸವರಾಜು ಅವರನ್ನು ಮೊನ್ನೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದರು. ಸುಪ್ರೀಂಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ರದ್ದಾದ ಬೆನ್ನಲ್ಲೇ ಪೊಲೀಸರು ಅವರನ್ನು ಅರೆಸ್ಟ್ ಮಾಡಿದ್ದರು. ಮೊನ್ನೆ ರಾತ್ರಿ ಅವರನ್ನು ಪೊಲೀಸ್ ಠಾಣೆಯಲ್ಲೇ ಇರಿಸಿಕೊಂಡು ವಿಚಾರಣೆ ನಡೆಸಲಾಗಿತ್ತು. ನಿನ್ನೆ ಕೋರ್ಟ್ ಗೆ ಹಾಜರುಪಡಿಸುವ ಮುನ್ನ ಶಾಸಕರನ್ನು ಆರೋಗ್ಯ ತಪಾಸಣೆ ಮಾಡಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಈಗ ತಾಪಮಾನದಲ್ಲಿ ದಿನೇ ದಿನೇ ಏರಿಕೆ ಕಂಡುಬರುತ್ತಿದೆ. ಈಗ ರಾಜ್ಯದ ಹವಾಮಾನ ಹೇಗಿದೆ ಎಂದರೆ ಬಿಸಿಲೂ ಹೆಚ್ಚು, ಚಳಿಯೂ ಹೆಚ್ಚು ಎಂಬಂತಾಗಿದೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಕನಿಷ್ಠ ತಾಪಮಾನದಲ್ಲಿ ಕೊಂಡ ಏರಿಕೆ ಕಂಡುಬರುತ್ತಿದೆ. ಚಳಿಯೂ ತಕ್ಕಮಟ್ಟಿಗೆ ಕಡಿಮೆಯಾಗಿದ್ದರೂ ಪೂರ್ತಿ ಕಡಿಮೆಯಾಗಿಲ್ಲ. ರಾತ್ರಿ ಹೊತ್ತು ಚಳಿ ಕಂಡುಬರುತ್ತಿದೆ. ಶುಷ್ಕ ಹವೆ ಮುಂದುವರಿದಿದೆ. ಈ ವಾರಂತ್ಯಕ್ಕೆ ರಾಜ್ಯದಲ್ಲಿ ಗರಿಷ್ಠ ತಾಪಮಾನ 30-31 ಡಿಗ್ರಿಯಷ್ಟು ಕಂಡುಬರುವ ಸಾಧ್ಯತೆಯಿದೆ. ಕನಿಷ್ಠ ತಾಪಮಾನ 17 ಡಿಗ್ರಿಯಷ್ಟು ಕಂಡುಬರುವುದು. ರಾತ್ರಿ ಚಳಿಯಿರಲಿದ್ದು, ಹಗಲು ವಿಪರೀತ ಬಿಸಿಲಿನ ವಾತಾವರಣವಿರಲಿದೆ.