ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ನಿನ್ನೆ ವಾರದ ಆರಂಭದಲ್ಲೇ ಅಡಿಕೆ ಬೆಲೆ ಕೊಂಚ ಇಳಿಕೆಯಾಗಿತ್ತು. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಕೆಯಾಗಿತ್ತು. ಇದು ಬೆಳೆಗಾರರಿಗೆ ಸಮಾಧಾನ ತಂದಿತ್ತು. ಆದರೆ ಕಳೆದ ಎರಡು ದಿನಗಳಿಂದ ಸತತವಾಗಿ ಬೆಲೆ ಇಳಿಕೆ ಕಂಡುಬರುತ್ತಿದೆ. ಇಂದು ಕೆಲವು ವರ್ಗದ ಅಡಿಕೆ ಬೆಲೆಯಲ್ಲಿ ಇಳಿಕೆಯಾಗಿದ್ದರೆ ಮತ್ತೆ ಕೆಲವು ವರ್ಗದ ಅಡಿಕೆ ಬೆಲೆ ಏರಿಕೆಯಾಗಿದೆ. ಇಂದು ಹೊಸ ಅಡಿಕೆ ಬೆಲೆ 485 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 5 ರೂ. ಇಳಿಕೆಯಾಗಿದ್ದು 535 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 5 ರೂ. ಇಳಿಕೆಯಾಗಿದ್ದು 535 ರೂ.ಗಳಷ್ಟಾಗಿದೆ.
ನವದೆಹಲಿ: ಎಐ ಶೃಂಗದಲ್ಲಿ ಯೂತ್ ಕಾಂಗ್ರೆಸ್ ನಾಯಕರು ಅರೆಬೆತ್ತಲೆ ಪ್ರತಿಭಟನೆ ಮಾಡಿರುವ ಬಗ್ಗೆ ಇಂಡಿ ಒಕ್ಕೂಟದ ನಾಯಕರಲ್ಲೇ ಕೆಲವರು ಅಸಮಾಧಾನ ಹೊರಹಾಕಿದ್ದರೂ ಇತ್ತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದು ದೇಶಕ್ಕಾಗಿ ನಡೆದ ಪ್ರತಿಭಟನೆ ಎಂದು ಸಮರ್ಥಿಸಿಕೊಂಡಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿದ್ದ ಜಾಗತಿಕ ಮಟ್ಟದ ಎಐ ಶೃಂಗ ಸಭೆಗೆ ನುಗ್ಗಿದ್ದ ಯೂತ್ ಕಾಂಗ್ರೆಸ್ಸಿಗರು ಅರೆಬೆತ್ತಲೆಯಾಗಿ ಹೋಗಿ ಮೋದಿ ವಿರುದ್ಧ ಘೋಷಣೆ ಕೂಗಿದ್ದರು. ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಮೋದಿ ವಿರುದ್ಧ ಏನೇ ಅಸಮಾಧಾನಗಳಿದ್ದರೂ ಅದನ್ನು ಜಾಗತಿಕ ವೇದಿಕೆಯಲ್ಲಿ ಈ ರೀತಿ ತೋರಿಸುವುದಲ್ಲ. ಇದರಿಂದ ಹೋಗುವುದು ದೇಶದ ಮಾನ ಎಂದು ಹಲವರು ಆಕ್ರೋಶ ಹೊರಹಾಕಿದ್ದರು.
ಬೆಂಗಳೂರು: ಬಾಲಿವುಡ್, ಟಾಲಿವುಡ್ ಸೆಲೆಬ್ರಿಟಿಗಳು, ಕ್ರಿಕೆಟಿಗರು, ಉದ್ಯಮಿಗಳು ಉದಯಪುರದಲ್ಲೇ ಮದುವೆಯಾಗುತ್ತಾರೆ. ಅಷ್ಟಕ್ಕೂ ಸೆಲೆಬ್ರಿಟಿಗಳು ಉದಯಪುರದಲ್ಲೇ ಮದುವೆಯಾಗುವುದು ಯಾಕೆ, ಕಾರಣ ಇಲ್ಲಿದೆ. ಉದಯಪುರದಲ್ಲಿ ಮದುವೆಯಾಗುತ್ತಿರುವ ಸೆಲೆಬ್ರಿಟಿಗಳ ಲಿಸ್ಟ್ ಗೆ ಲೇಟೆಸ್ಟ್ ಆಗಿ ಸೇರ್ಪಡೆಯಾಗುತ್ತಿರುವುದು ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ. ಇಬ್ಬರೂ ಫೆಬ್ರವರಿ 26 ರಂದು ಉದಯಪುರದಲ್ಲಿ ತೀರಾ ಖಾಸಗಿಯಾಗಿ ಆಪ್ತರ ಸಮ್ಮುಖದಲ್ಲಿ ಮದುವೆಯಾಗಲಿದ್ದಾರೆ. ಈ ಮದುವೆಯ ಫೋಟೋಗಳು ಎಲ್ಲೂ ಲೀಕ್ ಆಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಈ ಹಿಂದೆ ನಟ ರಣಬೀರ್ ಕಪೂರ್-ಅಲಿಯಾ ಭಟ್, ಪರಿಣಿತಿ ಚೋಪ್ರಾ-ರಾಘವ್ ಛಡ್ಡಾ, ಇಶಾ ಅಂಬಾನಿ-ಆನಂದ್ ಪಿರಾಮಿಲ್ ಸೇರಿದಂತೆ ಬಹುತೇಕ ಸೆಲೆಬ್ರಿಟಿಗಳು ಉದಯಪುರದಲ್ಲೇ ಮದುವೆಯಾಗಿದ್ದಾರೆ.
ಸಂಜೆ ಹಾಗೂ ರಾತ್ರಿ ಸಮಯದಲ್ಲಿ ಉಗುರನ್ನು ಕತ್ತರಿಸಬಾರದೆಂದು ಮನೆಯಲ್ಲಿನ ಹಿರಿಯವರು ಹೇಳುತ್ತಾರೆ. ಇನ್ನೂ ಇದರ ಹಿಂದೆ ಧಾರ್ಮಿಕ ಮತ್ತು ವೈಜ್ಞಾನಿಕ ಎಂಬ ಎರಡು ಮಗ್ಗಲುಗಳಿವೆ. ಅದರ ವಿವರ ಇಲ್ಲಿದೆ:1. ವೈಜ್ಞಾನಿಕ ಮತ್ತು ಪ್ರಾಯೋಗಿಕ ಕಾರಣಹಳೆಯ ಕಾಲದಲ್ಲಿ ಈಗಿನಂತೆ ವಿದ್ಯುತ್ ದೀಪಗಳ ಸೌಲಭ್ಯ ಇರಲಿಲ್ಲ. ಕತ್ತಲೆಯಲ್ಲಿ ಅಥವಾ ಮಂದ ಬೆಳಕಿನಲ್ಲಿ ಉಗುರು ಕತ್ತರಿಸುವಾಗ ಈ ಕೆಳಗಿನ ತೊಂದರೆಗಳಾಗುವ ಸಾಧ್ಯತೆ ಇತ್ತು. ಗಾಯವಾಗುವ ಭಯ: ಬೆಳಕು ಸರಿಯಾಗಿ ಇಲ್ಲದಿದ್ದಾಗ ಚರ್ಮ ಕತ್ತರಿಸಿ ಗಾಯವಾಗುವ ಸಾಧ್ಯತೆಯಿದೆ. ಈ ಸಂಬಂಧನೂ
ನ್ಯೂಯಾರ್ಕ್: ಅಮೆರಿಕದ ಈಶಾನ್ಯ ಭಾಗದಲ್ಲಿ ಮೇರಿಲ್ಯಾಂಡ್ನಿಂದ ಮೈನೆವರೆಗೆ ಭಾರಿ ಹಿಮಬಿರುಗಾಳಿ ಅಪ್ಪಳಿಸಿದೆ. ಈ ಹಿನ್ನೆಲೆಯಲ್ಲಿ ಹಲವೆಡೆ ತುರ್ತು ಪರಿಸ್ಥಿತಿ ಘೊಷಿಸಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.ಹಿಮಪಾತದ ಕಾರಣದಿಂದಾಗಿ 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಹಲವೆಡೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ತೀವ್ರವಾದ ಗಾಳಿ ಮತ್ತು ಹಿಮಪಾತದ ಪರಿಣಾಮ ಸಾರಿಗೆ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ವ್ಯಾಪಾರ-ವಹಿವಾಟಿಗೆ ಅಡ್ಡಿಯುಂಟಾಗಿದೆ. ದಶಕದಲ್ಲೇ ಅತ್ಯಂತ ಪ್ರಬಲವಾದ ಚಂಡಮಾರುತ ಇದು ಎಂದು ಹವಾಮಾನ ತಜ್ಞರು ವಿಶ್ಲೇಷಿಸಿದ್ದಾರೆ. ಇದು ಮಹಾನಗರದ ಈಶಾನ್ಯದ ಕೆಲವು ಭಾಗಗಳಲ್ಲಿ 2 ಅಡಿ (60 ಸೆಂಟಿಮೀಟರ್) ಗಿಂತ ಹೆಚ್ಚು ಹಿಮವನ್ನು ಸುರಿಸಿದೆ. ಅಧಿಕಾರಿಗಳು ತುರ್ತು ಪರಿಸ್ಥಿತಿಗಳನ್ನು ಘೋಷಿಸಿದ್ದಾರೆ.
ತಿರುವನಂತಪುರಂ: ಕೇರಳ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ, ಹ್ಯಾಟ್ರಿಕ್ ವಿಜಯದ ಕನಸು ಕಾಣುತ್ತಿರುವ ಪಿಣರಾಯಿ ವಿಜಯನ್ ಅವರು ಅಚ್ಚರಿಯ ನಿರ್ಧಾರ ಕೈಗೊಂಡಿದ್ದಾರೆ.ವಿಧಾನಸಭೆ ಚುನಾವಣೆಗೆ ಮೊದಲು ಕೇರಳ ರಾಜ್ಯದ ಹೆಸರು ಬದಲಾಗುವ ಸಾಧ್ಯತೆ ದಟ್ಟವಾಗಿದೆ. ಮಂಗಳವಾರ ನಡೆಯುವ ಕೇಂದ್ರ ಸಚಿವ ಸಂಪುಟ ಸಭೆಯು ಕೇರಳದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಮಸೂದೆಯನ್ನು ಅನುಮೋದಿಸುವ ನಿರೀಕ್ಷೆಯಿದೆ. ಹೀಗಾದಲ್ಲಿ ಇನ್ನು ಮುಂದೆ ಕೇರಳವನ್ನು ಕೇರಳಂ ಎಂದು ಕರೆಯಬೇಕಾಗುತ್ತದೆ.ಕೇಂದ್ರ ಸಚಿವ ಸಂಪುಟ ಇದನ್ನು ಅನುಮೋದಿಸಿದರೆ, ಸಂವಿಧಾನದ ಎಂಟನೇ ವೇಳಾಪಟ್ಟಿಯನ್ನು ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರಕ್ಕೆ ಅಂತಿಮ ಶಿಫಾರಸನ್ನು ಕಳುಹಿಸಲಾಗುತ್ತದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ 2024ರಲ್ಲಿ ರಾಜ್ಯದ ಹೆಸರನ್ನು ಬದಲಾಯಿಸುವ ಪ್ರಸ್ತಾಪವನ್ನು ಮಾಡಿದ್ದರು.
ಬೆಂಗಳೂರು: ಶರ್ಟ್ ರಹಿತ ಪ್ರತಿಭಟನೆಗೆ ಸಂಬಂಧಿಸಿದಂತೆ ಭಾರತೀಯ ಯುವ ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ಹಲವು ಸುತ್ತಿನ ವಿಚಾರಣೆಯ ನಂತರ ಬಂಧಿಸಲಾಗಿದೆ.ಎಐ ಸಭೆಯಲ್ಲಿ ಶರ್ಟ್ ರಹಿತ ಪ್ರತಿಭಟನೆಗೆ ಸಂಬಂಧಿಸಿದಂತೆ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಸುಮಾರು 15 ಗಂಟೆಗಳ ವಿಚಾರಣೆಯ ನಂತರ ಚಿಬ್ ಅವರನ್ನು ಬಂಧಿಸಲಾಯಿತು. ಪೊಲೀಸ್ ಮೂಲಗಳ ಪ್ರಕಾರ, ಚಿಬ್ ವಿಚಾರಣೆಯ ಸಮಯದಲ್ಲಿ ಸಹಕರಿಸಲಿಲ್ಲ ಮತ್ತು ತನಿಖಾಧಿಕಾರಿಗಳನ್ನು ದಾರಿತಪ್ಪಿಸಲು
ನವದೆಹಲಿ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭಾರತ ಭೇಟಿಗೂ ಮುನ್ನ ಕೆನಡಾ ಸರ್ಕಾರ ದಿಟ್ಟ ನಿರ್ಧಾರವೊಂದನ್ನು ತೆಗೆದುಕೊಂಡಿದೆ. 2008ರ ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾ ಪೌರತ್ವವನ್ನು ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಿದೆ.ಪಾಕಿಸ್ತಾನ ಮೂಲದ ಉದ್ಯಮಿ ತಹಾವ್ವೂರ್ ರಾಣಾ ಅವರ ಕೆನಡಾ ಪೌರತ್ವವನ್ನು ರದ್ದುಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. 2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ರಾಣಾ ಪ್ರಮುಖ ಪಾತ್ರ ವಹಿಸಿದ್ದಾರೆ. ತಮ್ಮ ಪ್ರಧಾನಿ ಭಾರತ ಭೇಟಿಗೆ ಮುನ್ನ ಕೆನಡಾ ಸರ್ಕಾರ ಒಂದು ಪ್ರಮುಖ ಹೆಜ್ಜೆ ಇಟ್ಟಿದೆ. ತಹಾವ್ವೂರ್ ರಾಣಾ 1997 ರಲ್ಲಿ ಕೆನಡಾಕ್ಕೆ ವಲಸೆ ಬಂದು 2001 ರಲ್ಲಿ ಕೆನಡಾದ ಪೌರತ್ವವನ್ನು ಪಡೆದಿದ್ದ.
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯರು ಮಾರ್ಚ್ 11 ರಿಂದ 15 ರವರೆಗೆ ಹೊರ ರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಹೀಗಾಗಿ, ಅಂದು ರೋಗಿಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ವರ್ಗಾವಣೆ ನೀತಿ ಬದಲಾವಣೆ, ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ಬೇಡಿಕೆಗಳನ್ನು ಸರ್ಕಾರದ ಈಡೇರಿಸದಿದ್ದರೆ ಮಾರ್ಚ್ 16 ರಿಂದ ಆರೋಗ್ಯ ಇಲಾಖೆಯ ಎಲ್ಲಾ ವೈದ್ಯರು, ಅಧಿಕಾರಿ-ನೌಕರರು ಕರ್ತವ್ಯಕ್ಕೆ ಅನಿರ್ದಿಷ್ಟಾವಧಿವರೆಗೆ ಗೈರಾಗುವ ಮೂಲಕ ಮುಷ್ಕರ ಮುಂದುವರೆಸುತ್ತೇವೆ ಎಂದು ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ.ರವೀಂದ್ರನಾಥ್ ಎಂ.ಮೇಟಿ ಎಚ್ಚರಿಕೆ ನೀಡಿದ್ದಾರೆ.ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಉಂಟಾಗುತ್ತಿದ್ದು ಸಮರ್ಪಕವಾಗಿ ಔಷಧ ಸರಬರಾಜು ಮಾಡಬೇಕು.
ಬೆಂಗಳೂರು: ಸಿಲಿಕಾನ್ ಸಿಟಿ ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯೋ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ ಎಂಬ ಆಘಾತಕಾರಿ ಅಂಶವನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ದೃಢಪಟ್ಟಿದೆ.ಇನ್ನೂ ಬೆಂಗಳೂರಿನಲ್ಲಿ ಮಾರಾಟವಾಗುವ ತರಕಾರಿಗಳಲ್ಲಿ ಸೀಸದ(ಲೆಡ್) ಪ್ರಮಾಣ ಹೆಚ್ಚಿದೆ ಎಂದು ತಿಳಿಸಿದೆ. ಈ ತರಕಾರಿಗಳನ್ನು ಸೇವನೆ ಮಾಡಿದ್ದಲ್ಲಿ ಕಿಡ್ನಿ ಹಾಗೂ ಮೆದುಳಿನ ಸಮಸ್ಯೆಯಾಗುತ್ತದೆ. ಸಂಗ್ರಹಿಸಿದ 72 ಮಾದರಿಗಳ ಪೈಕಿ 10 ಮಾದರಿಗಳಲ್ಲಿ 8 ಕೀಟನಾಶಕ ಅವಶೇಷಗಳು ಪತ್ತೆಯಾಗಿದೆ. ನಗರದ ವಿವಿಧ
ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟ್ರೆಂಡ್ ಸೆಟ್ ಮಾಡಿರುವ ಜಪಾನ್ನ ಮೃಗಾಲಯದಲ್ಲಿ ಮಂಗದ ಮರಿ ಮಕಾಕ್ ಪಂಚ್ ಅನ್ನು ನೋಡಲು ಬರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ತಿಂಗಳ ಹಿಂದೆ ತನ್ನ ತಾಯಿಯಿಂದ ತಳ್ಳಲ್ಪಟ್ಟ ಮಂಗದ ಮರಿ ಮಕಾಕ್, ಆಟಿಕೆಯಾದ ಮಂಗದ ಗೊಂಬೆಯನ್ನೇ ಅನ್ನೇ ತನ್ನ ತಾಯಿಯಂತೆ ಅನುಭವಿಸುತ್ತಿದೆ. ಪಂಚ್ ಜತೆಗಿನ ಮಕಾಕ್ ಭಾಂದವ್ಯ, ಅದರ ಭಾವನೆ, ತುಂಟಾಟ ನೋಡುಗರ ಮನಸ್ಸನ್ನು ಕದಲಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಆರು ತಿಂಗಳ ಮಂಗದ ಮರಿ ತನ್ನ ತಾಯಿಂದ್ದ ತಳ್ಳಲ್ಪಟ್ಟ ಬಳಿಕ ಆಟಿಕೆ ಮಂಗದ ಗೊಂಬೆಯೊಂದಿಗೆ ಆಟವಾಡುತ್ತಿರುವುದನ್ನು ಕಾಣಬಹುದು.
ಲಕ್ನೋ: 21ರ ಹರೆಯದ ಮಗನೊಬ್ಬ ತನ್ನ ತಂದೆಯನ್ನು ಕೋಪದ ಭರದಲ್ಲಿ ಗುಂಡಿಕ್ಕಿ ಕೊಂದು, ಕೊಲೆಯನ್ನು ಮರೆಮಾಚಲು ಮೃತದೇಹವನ್ನು ತುಂಡರಿಸಿ ಡ್ರಮ್ನಲ್ಲಿ ಬಚ್ಚಿಟ್ಟು ಎಸೆದಿರುವ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ಮನ್ವೇಂದ್ರ ಸಿಂಗ್ (50) ಎಂದು ಗುರುತಿಸಲಾಗಿದ್ದು, ಆತನ ಮಗ ಅಕ್ಷತ್ ಸಿಂಗ್ (21) ಎಂಬಾತನಿಂದಲೇ ಹತ್ಯೆ ಮಾಡಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ಕೇಂದ್ರ) ವಿಕ್ರಾಂತ್ ವೀರ್ ಸೋಮವಾರ ತಿಳಿಸಿದ್ದಾರೆ.ಆಶಿಯಾನಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ನಾಪತ್ತೆಯಾದ ವ್ಯಕ್ತಿಯ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ ಎಂದು ಶ್ರೀ ವೀರ್ ಹೇಳಿದರು.
ಬೆಂಗಳೂರು: ದೇಶದ ಖ್ಯಾತ ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ ಸಂಬಂಧ ಬಹುತೇಕ ತನಿಖೆ ಮುಗಿದಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಹಿಂದಿನ ಕಾರಣಗಳು ಬಯಲಾಗಿದೆ. ಎಸ್ಐಟಿ ಸಾವಿನ ತನಿಖೆಯಲ್ಲಿ ಸಿಜೆ ರಾಯ್ ಆತ್ಮಹತ್ಯೆಯ ಹಿಂದಿನ ಕಾರಣಗಳು ಬಯಲಾಗಿದೆ. ಒಂದೇ ಕಾರಣಗಳಿಂದ ರಾಯ್ ಅವರು ಆತ್ಮಹತ್ಯೆಗೆ ಶರಣಾಗಿಲ್ಲ ಬದಲಾಗಿ ಬೇರೆ ಬೇರೆ ಕಾರಣಗಳಿಂದಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಲ್ಯಾವೀಸ್ ಲೈಫ್, ಮಾನಸಿಕ ಒತ್ತಡ, ವ್ಯವಹಾರಿ ಸಮಸ್ಯೆಗಳು ಹೀಗೆ ಹಲವು ಕಾರಣಗಳಿಂದ ನೊಂದು ಆತ್ಮಹತ್ಯೆ
ರಾಜ್ಯದ ದಿನದಿಂದ ದಿನಕ್ಕೆ ಬೀಸಿಲ ಬೇಗೆ ಏರುತ್ತಲೇ ಇದೆ. ಈ ಸಮಯದಲ್ಲಿ ಹೆಚ್ಚು ಜ್ಯೂಸ್ ಹಾಗೂ ಪಾನೀಯಗಳನ್ನು ಸೇವಿಸಬೇಕೆನಿಸುತ್ತದೆ. ಆದರೆ ಫ್ರಿಡ್ಜ್ನಲ್ಲಿರುವ ಸಕ್ಕರೆಯನ್ನು ಬೆರೆಸಿರುವ ಪಾನೀಯಗಳನ್ನು ಸೇವನೆ ಮಾಡುವುದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರುವ ಸಾಧ್ಯತೆಯೂ ಇದೆ. ಇನ್ನೂ ಆರೋಗ್ಯದ ದೃಷ್ಟಿಯಿಂದ ಬೇಸಿಗೆಯ ಬಿಸಿಲಿನಲ್ಲಿ ಬೆಲ್ಲ ಮತ್ತು ನೀರು ಸೇವಿಸುವುದು ಕೇವಲ ಸಂಪ್ರದಾಯವಲ್ಲ, ಇದು ವಿಜ್ಞಾನಪೂರ್ವಕವಾಗಿ ದೇಹಕ್ಕೆ ತುಂಬಾ ಒಳ್ಳೆಯದು. ಬಿಸಿಲಿಗೆ ಇದು ಹೇಗೆ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ ಎಂಬುದಕ್ಕೆ ಇಲ್ಲಿದೆ ಮಾಹಿತಿ. ತ್ವರಿತ ಶಕ್ತಿ: ಬಿಸಿಲಿನಲ್ಲಿ ಓಡಾಡಿದಾಗ ದೇಹ ಬೇಗನೆ ಸುಸ್ತಾಗುತ್ತದೆ. ಸಕ್ಕರೆಗಿಂತ ಬೆಲ್ಲದಲ್ಲಿ ಸಂಕೀರ್ಣ
ಬುಧವಾರದಂದು ವಿಶೇಷವಾಗಿ ಜ್ಞಾನ, ಬುದ್ಧಿ ಮತ್ತು ಚಾತುರ್ಯದ ಅಧಿದೇವತೆಯಾದ ಶ್ರೀ ಮಹಾವಿಷ್ಣು ಮತ್ತು ಬುಧ ಗ್ರಹಕ್ಕೆ ಸಮರ್ಪಿತವಾಗಿರುವ ದಿನವಾಗಿದೆ. ಈ ದಿನದಂದು ನಾವು ಕೆಲವು ಸ್ತೋತ್ರಗಳನ್ನು ಪಠಣೆ ಮಾಡುವುದರಿಂದ ಜೀವನದಲ್ಲಿ ಸಾಕಷ್ಟು ಬದಲಾವಣೆಯನ್ನು ತರಬಹುದಾಗಿದೆ. 1. ಬುಧ ಗ್ರಹ ಸ್ತೋತ್ರ ಜಾತಕದಲ್ಲಿ ಬುಧ ದೋಷವಿದ್ದರೆ ಅಥವಾ ವಿದ್ಯಾಭ್ಯಾಸದಲ್ಲಿ ಪ್ರಗತಿ ಹೊಂದಲು ಈ ಮಂತ್ರವನ್ನು ಪಠಿಸಿ:
ಬೆಂಗಳೂರು: ಕಳೆದ ಕೆಲ ದಿನಗಳಿಂದ ಬಿಸಿಲ ಬೇಗೆಗೆ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಕೆಲ ಜಿಲ್ಲೆಗಳಲ್ಲಿ ವರುಣನ ಆಗಮನವಾಗಿರುವುದು ತಂಪನ್ನು ನೀಡಿದೆ. ಇನ್ನೂ ರಾಜ್ಯದಲ್ಲಿ ದಿಡೀರ್ ಹವಾಮಾನ ಬದಲಾವಣೆಗೆ ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಎನ್ನಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಿದೆ. ಅಲ್ಲದೇ ರಾಜ್ಯದ ಕೆಲವೆಡೆ ಧಾರಕಾರ ಗುಡುಗು ಸಹಿತ ಭಾರೀ ಮಳೆ ಆಗಿದೆ.
ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ವನಿತೆಯರ ತಂಡದ ನಡುವೆ ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಈ ಪಂದ್ಯವನ್ನು ಎಷ್ಟು ಗಂಟೆಗೆ, ಎಲ್ಲಿ ಲೈವ್ ವೀಕ್ಷಿಸಬಹುದು ಇಲ್ಲಿದೆ ವಿವರ. ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಮಹಿಳಾ ಕ್ರಿಕೆಟ್ ತಂಡ ಈಗಾಗಲೇ ಟಿ20 ಸರಣಿ ಗೆದ್ದು ಶುಭಾರಂಭ ಮಾಡಿದೆ. ಆಸ್ಟ್ರೇಲಿಯಾವನ್ನು ಅದರದ್ದೇ ನೆಲದಲ್ಲಿ ಬಗ್ಗು ಬಡಿಯುವುದು ಸುಲಭದ ಮಾತಲ್ಲ. ಆದರೆ ಕಳೆದ ಏಕದಿನ ವಿಶ್ವಕಪ್ ಬಳಿಕ ಭಾರತ ಮಹಿಳಾ ತಂಡ ಆಸ್ಟ್ರೇಲಿಯಾವನ್ನೇ ಸೋಲಿಸುವ ಸಾಮರ್ಥ್ಯ ಪಡೆದುಕೊಂಡಿದೆ.
ಇಂದು ಮಂಗಳವಾರವಾಗಿದ್ದು ಆಂಜನೇಯ ಸ್ವಾಮಿಗೆ ವಿಶೇಷವಾದ ದಿನವಾಗಿದೆ. ಆಂಜನೇಯನ ಅನುಗ್ರಹಕ್ಕಾಗಿ ಇಂದು ತಪ್ಪದೇ ಹನುಮತ್ಕವಚ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.ಅಸ್ಯ ಶ್ರೀ ಹನುಮತ್ ಕವಚಸ್ತೋತ್ರಮಹಾಮಂತ್ರಸ್ಯ ವಸಿಷ್ಠ ಋಷಿಃ ಅನುಷ್ಟುಪ್ ಛಂದಃ ಶ್ರೀ ಹನುಮಾನ್ ದೇವತಾ ಮಾರುತಾತ್ಮಜ ಇತಿ ಬೀಜಂ ಅಂಜನಾಸೂನುರಿತಿ ಶಕ್ತಿಃ ವಾಯುಪುತ್ರ ಇತಿ ಕೀಲಕಂ ಹನುಮತ್ಪ್ರಸಾದ ಸಿದ್ಧ್ಯರ್ಥೇ ಜಪೇ ವಿನಿಯೋಗಃ ॥ ಉಲ್ಲಂಘ್ಯ ಸಿಂಧೋಸ್ಸಲಿಲಂ ಸಲೀಲಂಯಶ್ಶೋಕವಹ್ನಿಂ ಜನಕಾತ್ಮಜಾಯಾಃ ।ಆದಾಯ ತೇನೈವ ದದಾಹ ಲಂಕಾಂನಮಾಮಿ ತಂ ಪ್ರಾಂಜಲಿರಾಂಜನೇಯಮ್ ॥ 1 ಮನೋಜವಂ ಮಾರುತತುಲ್ಯವೇಗಂಜಿತೇಂದ್ರಿಯಂ ಬುದ್ಧಿಮತಾಂ ವರಿಷ್ಠಮ್ ।ವಾತಾತ್ಮಜಂ ವಾನರಯೂಥಮುಖ್ಯಂಶ್ರೀರಾಮದೂತಂ ಶಿರಸಾ ನಮಾಮಿ ॥ 2
ಛತ್ರಾ (ಜಾರ್ಖಂಡ್): ಜಾರ್ಖಂಡ್ನ ಚತ್ರಾ ಜಿಲ್ಲೆಯಲ್ಲಿ ಸಂಭವಿಸಿದ ಏರ್ ಆಂಬ್ಯುಲೆನ್ಸ್ ದುರಂತದಲ್ಲಿ ಇಬ್ಬರು ಸಿಬ್ಬಂದಿ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಏಳು ಜನರು ಸಾವನ್ನಪ್ಪಿದ್ದಾರೆ. ಎಎನ್ಐ ಜತೆ ಮಾತನಾಡಿದ ಎಸ್ಪಿ ಸುಮಿತ್ ಕುಮಾರ್ ಅಗರ್ವಾಲ್ ಅವರು ಸಾವಿನ ಸಂಖ್ಯೆಯನ್ನು ಖಚಿತಪಡಿಸಿದ್ದಾರೆ. 10ರ ಸುಮಾರಿಗೆ ಅವಘಡ ಸಂಭವಿಸಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಭೂಪ್ರದೇಶವನ್ನು ಪರಿಗಣಿಸಿ ಇಲ್ಲಿಗೆ ಬರುವುದು ಕಷ್ಟಕರವಾಗಿತ್ತು. ದೆಹಲಿ ತಂಡ ಇಲ್ಲಿಗೆ ಬಂದು ತನಿಖೆ ನಡೆಸಿ ಬ್ಲಾಕ್ ಬಾಕ್ಸ್ ಹಿಂಪಡೆಯಲು ಪ್ರಯತ್ನಿಸಲಿದೆ. ದುರ್ಘಟನೆಯಲ್ಲಿ ಒಟ್ಟು 7ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿದರು.
ಉತ್ತರಾಖಂಡ್ನ ಕೋಟ್ದ್ವಾರ್ನಲ್ಲಿ ಮುಸ್ಲಿಂ ಅಂಗಡಿಯವನನ್ನು ಸಮರ್ಥಿಸಿ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಮೂಡಿಸಿದ್ದ ಜಿಮ್ ಟ್ರೈನರ್ ದೀಪಕ್ ಸೋಮವಾರ ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ಎಲ್ಪಿ ರಾಹುಲ್ ಗಾಂಧಿಯನ್ನು ಭೇಟಿಯಾದರು.ಭೇಟಿ ವೇಳೇ ರಾಹುಲ್ ಗಾಂಧಿ ಅವರು ದೀಪಕ್ ಅವರ ಜಿಮ್ನ ಸದಸ್ಯತ್ವವನ್ನು ತೆಗೆದುಕೊಳ್ಳುವುದಾಗಿ ಹೇಳಿದರು.ಈಗ ಜನಪ್ರಿಯವಾಗಿ 'ಮೊಹಮ್ಮದ್ ದೀಪಕ್' ಎಂದೂ ಕರೆಯಲ್ಪಡುವ ದೀಪಕ್ ಕುಮಾರ್, ಜನವರಿ 26 ರಂದು ತನ್ನ ಅಂಗಡಿಯ
ಬೆಂಗಳೂರು: ಭಾಷಣ ಮಾಡುವ ವೇಳೆ ತನ್ನ ಬೆನ್ನ ಹಿಂದೆ ನಿಂತಿದ್ದ ಶಾಸಕ ಪ್ರದೀಪ್ ಈಶ್ವರ್ ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ ತಳ್ಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾರ್ಯಕ್ರಮವೊಂದರಲ್ಲಿ ಡಿಕೆ ಶಿವಕುಮಾರ್ ಹಾಗೂ ಪ್ರದೀಪ್ ಈಶ್ವರ್ ಅವರು ವೇದಿಕೆಯೊಂದರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಭಾಷಣ ಮಾಡುತ್ತಿದ್ದಾಗ ಪ್ರದೀಪ್ ಈಶ್ವರ್ ಹಿಂದೆಯೇ ಬಂದು ನಿಂತಿದ್ದಾರೆ. ಇದನ್ನು ನೋಡಿದ ಡಿಸಿಎಂ ಬೆನ್ನು ತಟ್ಟಿ ಹೋಗಿ ಕುಳಿತುಕೊಳ್ಳಿ ಎಂದು ತಳ್ಳಿದ್ದಾರೆ. ಕೂಡಲೇ ಪ್ರದೀಪ್ ಈಶ್ವರ್ ವೇದಿಕೆಯಲ್ಲಿದ್ದ ಕುರ್ಚಿಯಲ್ಲಿ ಕೂತಿದ್ದಾರೆ.
ಬೆಂಗಳೂರು: ಸಿಎಂ ಕುರ್ಚಿಗಾಗಿ ಹೆಚ್ಚಿದ ಪೈಪೋಟಿ ಬೆನ್ನಲ್ಲೇ ಸಚಿವ ಸಂಪುಟ ಪುನರ್ರಚನೆಗೆ ಭಾರೀ ಬೇಡಿಕೆ ಹೆಚ್ಚಾಗಿದೆ. ಸಚಿವ ಸಂಪುಟ ಪುನರ್ರಚನ್ಗೆ ಬೇಡಿಕೆಯಿಟ್ಟು 31 ಶಾಸಕರು ಹೈಕಮಾಂಡ್ ನಾಯಕರಿಗೆ ಪತ್ರವನ್ನು ಬರೆದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಈ ಪತ್ರವನ್ನು ಬರೆಯಲಾಗಿದೆ.31 ಶಾಸಕರ ಸಹಿ ಪತ್ರದಲ್ಲಿದೆ. ಆದರೆ, ಪತ್ರದಲ್ಲಿ ದಿನಾಂಕ ಉಲ್ಲೇಖ ಮಾಡಿಲ್ಲ. ಹೈಕಮಾಂಡ್ ನಾಯಕರಿಗೆ ಈ ಪತ್ರ
ಚಿಕ್ಕಮಗಳೂರು: ಆನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಭಾನುವಾರ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಆರೋಪಿಸಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆಂದು ಮಲೆನಾಡಿನ ಹಲವು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸ್ಥಳೀಯರು ಬಂದ್ ನಡೆಸಿದ್ದಾರೆ.ಬಾಳೆಹೊನ್ನೂರು, ಜಯಪುರ, ಕಡಬಗೆರೆ, ಕೊಪ್ಪದಲ್ಲಿ ಅಂಗಡಿ ಮುಂಗಟ್ಟುಗಳು ಸೋಮವಾರ ಬೆಳಿಗ್ಗೆಯಿಂದ ಸಂಜೆ ತನಕ ಮುಚ್ಚಿಲಾಗಿತ್ತು. ಶೃಂಗೇರಿ ಮತ್ತು ಎನ್.ಆರ್.ಪುರ ಪಟ್ಟಣದಲ್ಲೂ ಬೆಳಿಗ್ಗೆ ಬಂದ್ ವಾತಾವರಣ ಇತ್ತು. ಮಧ್ಯಾಹ್ನದ ನಂತರ ಕೆಲ ಅಂಗಡಿಗಳು
ರಾಮನಗರ: ತಮ್ಮ ಕರ್ತವ್ಯವನ್ನೂ ಸರಿಯಾಗಿ ನಿಭಾಯಿಸದ ಸಚಿವರ ಮೇಲೆ ನನಗೆ ಅಸಮಾಧಾನವಿರುವುದು ನಿಜ. ಆದರೆ ಅವರ ಹೆಸರನ್ನೂ ಹೇಳಲು ನಾನು ತಯಾರಿಲ್ಲ. ನಾನು ಶಾಸಕನಾಗಿದ್ದು, ಸಚಿವರಿಗಿಂತ ಉತ್ತಮವಾದ ಕೆಲಸ ಮಾಡಿದ್ದೇನೆಂದು ಡಿಸಿಎಂ ಆಪ್ತ ಶಾಸಕ ಎಚ್ಎ ಇಕ್ಬಾಲ್ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಸಚಿವರು ಶಾಸಕರ ಭೇಟಿಗೂ ಸಿಗುತ್ತಿಲ್ಲ. ಕೆಲಸ–ಕಾರ್ಯಗಳಿಗೂ ಸ್ಪಂದಿಸುತ್ತಿಲ್ಲ. ಸಚಿವರ ಈ ನಡೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಗಮನಕ್ಕೆ ತಂದಿದ್ದೇನೆಂದು ಹೇಳಿದರು. ನಾವ್ಯಾರು ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ. ಚುನಾವಣೆಗಳು ಹತ್ತಿರವಾಗುತ್ತಿರುವುದರಿಂದ ಒಳ್ಳೆಯ ಆಡಳಿತ ಆಗಬೇಕಿದೆ.
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು, ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸುವ ವಿಚಾರದ ಬಗ್ಗೆ ಚರ್ಚೆಯಲ್ಲಿದೆ ಎಂದು ಹೇಳಿದರು. ಈ ಸಂಬಂಧ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಬಗ್ಗೆ ಪೋಷಕರಿಂದಲೂ ಒತ್ತಡವಿದ್ದು, ಅನೇಕ ದೇಶಗಳಲ್ಲಿ ಈ ಕ್ರಮವನ್ನು ಕೈಗೊಂಡಿದ್ದು, ಇಲ್ಲೂ ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು. ಶಾಲೆಗಳಲ್ಲಿ ಮಕ್ಕಳು ಮೊಬೈಲ್ ಬಳಕೆಗೆ ಕಡಿವಾಣ ಹಾಕುವ ವಿಚಾರವಾಗಿ ಕೇಳಿದಾಗ, ನಮ್ಮ ಶಾಲೆಗಳಲ್ಲಿ ಮೊಬೈಲ್ ನಿಷೇಧ
ರಾಯಚೂರು: ಕಾಂಗ್ರೆಸ್ನಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಹಾಗೂ ಪರಮೇಶ್ವರ್ ಅವರು ಯಾವತ್ತೋ ಸಿಎಂ ಆಗಬೇಕಿತ್ತು. ದಲಿತರು ಸಿಎಂ ಆಗುವುದನ್ನು ತಪ್ಪಿಸಿದ್ದೆ ಸಿದ್ದರಾಮಯ್ಯನವರೆಂದು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ‘ಪಾಪ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಗೆ ಓಡಿಸಿ, ಪರಮೇಶ್ವರ ಅಧ್ಯಕ್ಷರಿದ್ದರೂ ಅವರನ್ನು ಸೋಲಿಸಿ ಮನೆಗೆ ಕಳುಹಿಸಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರು. ದಲಿತರು ಮುಖ್ಯಮಂತ್ರಿ ಆಗುವುದಿದ್ದರೆ ಯಾವುತ್ತೋ ಆಗುತ್ತಿತ್ತು. 75 ವರ್ಷ ಆದರೂ ಏಕೆ ಆಗಲಿಲ್ಲ ಎಂದು ಪ್ರಶ್ನೆ ಮಾಡಿದರು. ನಾನು ಕೇಂದ್ರದಲ್ಲಿ ಕೈಗಾರಿಕೆ ಸಚಿವನಾಗಿರುವ ಕಾರಣ ಗೃಹ ಸಚಿವ ಪರಮೇಶ್ವರ ಅವರು ವೈಯಕ್ತಿಕ ಕೆಲಸಕ್ಕೆ ಭೇಟಿ
ಚಿಕ್ಕಬಳ್ಳಾಪುರ: ಬಿಜೆಪಿ ನೇತೃತ್ವದ ಕೇಂದ್ರವು ಎಂಜಿಎನ್ಆರ್ಇಜಿಎಯನ್ನು ಕಿತ್ತುಹಾಕುತ್ತಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಆರೋಪಿಸಿದ್ದು, ಅದನ್ನು ಪುನಃಸ್ಥಾಪಿಸುವವರೆಗೆ ನಿರಂತರ ಹೋರಾಟ ನಡೆಸುವುದಾಗಿ ಪ್ರತಿಜ್ಞೆ ಮಾಡಿದರು.ಇಲ್ಲಿ ನಡೆದ 'ಎಂಜಿಎನ್ಆರ್ಇಜಿಎ ಬಚಾವೋ ಸಂಗ್ರಾಮ್' ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ತಂದಿರುವ ಹೊಸ ಕಾನೂನು ಮೂಲಕ ಗ್ರಾಮೀಣ ಉದ್ಯೋಗ ಯೋಜನೆಯನ್ನು ಬದಲಿಸುವುದರ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ ಹೋರಾಟ ನಡೆಸಲಿದೆ ಎಂದು ಹೇಳಿದರು.ಇಂದು ಇಡೀ ದೇಶಾದ್ಯಂತ ‘ಸೇವ್ ಎಂಜಿಎನ್ಆರ್ಇಜಿಎ’ ಅಭಿಯಾನ ಆರಂಭಿಸಿದ್ದು, ಕರ್ನಾಟಕದಲ್ಲಿಯೂ ಆರಂಭವಾಗಿದೆ’
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಗೆ ಗನ್ ಲೈಸೆನ್ಸ್ ಅಮಾನತಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ನಿಂದ ಸಣ್ಣ ನಿರಾಳತೆ ನೀಡಿದೆ. ಈ ಹಿಂದೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ನಂತರ ನಟ ಹಲವು ತಿಂಗಳುಗಳ ಕಾಲ ಮತ್ತೆ ಜೈಲು ಸೇರಿದ್ದಾರೆ. ವಿಚಾರಣೆ ಮುಂದುವರೆದಂತೆ, ಸಾಕ್ಷಿಗಳ ಪರೀಕ್ಷೆ ನಿಧಾನಗತಿಯನ್ನು ಉಲ್ಲೇಖಿಸಿ ದರ್ಶನ್ ಅವರು ತ್ವರಿತ ಅಥವಾ ದಿನದಿಂದ ದಿನಕ್ಕೆ ವಿಚಾರಣೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ಗಳು ಈ ಮನವಿಗೆ ಆಕ್ಷೇಪಣೆಗಳನ್ನು ಸಲ್ಲಿಸುವ ನಿರೀಕ್ಷೆಯಿದೆ.
ನವದೆಹಲಿ: ಮುಂಬರುವ ದಿನಗಳಲ್ಲಿ ಯುಎಸ್ ದಾಳಿಗಳ ನಡುವೆ ಇರಾನ್ನಲ್ಲಿರುವ ಭಾರತೀಯರಿಗೆ ತೆರಳುವಂತೆ ಸೂಚಿಸಲಾಗಿದೆ. ತನ್ನ ಇತ್ತೀಚಿನ ಸಲಹೆಯಲ್ಲಿ, ಭಾರತದ ರಾಯಭಾರ ಕಚೇರಿಯು ತನ್ನ ನಾಗರಿಕರಿಗೆ "ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವಿಧಾನಗಳ ಮೂಲಕ ಇರಾನ್ನಿಂದ ಹೊರಹೋಗುವಂತೆ" ಕೇಳಿದೆ. ಸಲಹೆಯು ಇರಾನ್ನಲ್ಲಿರುವ ಪ್ರತಿಯೊಬ್ಬರಿಗೂ ಅನ್ವಯಿಸುತ್ತದೆ - ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರ ವ್ಯಕ್ತಿಗಳು ಮತ್ತು ಪ್ರವಾಸಿಗರಿಗೆ ಎಂದು ಸೂಚಿಸಲಾಗಿದೆ."ಎಲ್ಲಾ ಭಾರತೀಯ ನಾಗರಿಕರು ಮತ್ತು ಭಾರತೀಯ ಮೂಲದ ವ್ಯಕ್ತಿಗಳು (PIOs) ಸೂಕ್ತ ಎಚ್ಚರಿಕೆ ವಹಿಸಬೇಕು,
ಬೆಂಗಳೂರು: ಕೇಂದ್ರ ಸರ್ಕಾರಕ್ಕೆ ಮನ್ರೇಗಾ ಯೋಜನೆಯನ್ನು ರದ್ದುಪಡಿಸುವ ಅಗತ್ಯವೇ ಇರಲಿಲ್ಲ. ಇದನ್ನು ಮರುಸ್ಥಾಪಿಸಲು ಹೋರಾಡುವುದೇ ಕಾಂಗ್ರೆಸ್ ಗುರಿಯಾಗಿರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಕಾಂಗ್ರೆಸ್ ಮನ್ರೇಗಾ ಉಳಿಸಿ ಹೋರಾಟ ಸಮಾವೇಶವನ್ನು ಆಯೋಜಿಸಿತ್ತು. ಈ ವೇಳೆ ಮಾತನಾಡಿದ ಅವರು ಮನ್ರೇಗಾ ಯೋಜನೆ ಹೆಸರು ಬದಲಿಸಿ ವಿಬಿ ರಾಮ್ ಜಿ ಎಂದು ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪನೆಯಾಗುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ.
ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣದಲ್ಲಿ ಆರೋಪಿಯಾಗಿರುವ ಯುವತಿ ತನ್ನ ಸ್ನೇಹಿತರ ವಿರುದ್ಧ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪವನ್ನು ಮಾಡಿದ್ದಾರೆ. ಈ ಹಿಂದೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಫೆ.21ರಂದು ಇದೇ ಯುವತಿ ವಿರುದ್ಧ ಹನಿಟ್ರ್ಯಾಪ್ ಪ್ರಕರಣ ದಾಖಲಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಯುವತಿ ತನ್ನದೇ ಸ್ನೇಹಿತರ ವಿರುದ್ಧ ಗ್ಯಾಂಗ್ ರೇಪ್ ದೂರು ದಾಖಲಿಸಿದ್ದಾಳೆ.ಬೆಂಗಳೂರಿನ ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಆರ್ಥಿಕವಾಗಿ ದಿವಾಳಿ ಆಗಿದೆ. ರಾಜ್ಯ ಸರಕಾರದಲ್ಲಿ 2.85 ಲಕ್ಷ ಹುದ್ದೆಗಳು ಖಾಲಿ ಇದ್ದು, ಹಣ ಇಲ್ಲದುದಕ್ಕಾಗಿ, ಖಜಾನೆ ಖಾಲಿ ಆದುದರಿಂದ ಮೀಸಲಾತಿಯ ಗೊಂದಲ ಸೃಷ್ಟಿಸಿ ನೇಮಕಾತಿ ಮುಂದೂಡುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ಆರೋಪಿಸಿದ್ದಾರೆ.ಕರ್ನಾಟಕದಲ್ಲಿ ಇನ್ನೂ ಒಳ ಮೀಸಲಾತಿ ಜಾರಿಯಾಗಿಲ್ಲ ಎಂದು ಬಿಜೆಪಿ ನಿಯೋಗವು ಇಂದು ಮಾನ್ಯ ರಾಜ್ಯಪಾಲರನ್ನು ಭೇಟಿ ಮಾಡಿ ಗಮನ ಸೆಳೆಯಿತು. ಬಳಿಕ ಗೋವಿಂದ ಕಾರಜೋಳ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.
ಬೆಂಗಳೂರು: ಕಾಂಗ್ರೆಸ್ಸಿನವರು ಹೆಚ್ಚು ಬಟ್ಟೆ ಬಿಚ್ಚಿಕೊಂಡರೂ ವಿಬಿ ಜಿ ರಾಮ್ ಜಿ ಯೇ ಊರ್ಜಿತವಾಗಲಿದೆ; ಆದ್ದರಿಂದ ವ್ಯರ್ಥ ಪ್ರಯತ್ನ ಮಾಡಬೇಡಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಲಹೆ ನೀಡಿದ್ದಾರೆ.ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿ ಪ್ರಶ್ನೆಗೆ ಉತ್ತರಿಸಿದರು. ವಿಬಿ ಜಿ ರಾಮ್ ಜಿ ಜಾಗೃತಿಗಾಗಿ ಎಲ್ಲ ಕಡೆ ಕಾರ್ಯಕ್ರಮಗಳನ್ನು ನಡೆಸಿದ್ದೇವೆ. ಇಡೀ ದೇಶವ್ಯಾಪಿ ಬೆಂಬಲವೂ ಅದಕ್ಕೆ ವ್ಯಕ್ತವಾಗಿದೆ. ಅದನ್ನು ವಾಪಸ್ ಪಡೆಯುವ ಸಂದರ್ಭ ಒದಗಿಬರಲಾರದು ಎಂದು ತಿಳಿಸಿದರು.
ಬೆಂಗಳೂರು: ಎಲ್ಸಿಎ ತೇಜಸ್ ವಿಮಾನ ಅಪಘಾತ ಸಂಭವಿಸಿದೆ ಎಂದು ಸೂಚಿಸುವ ವರದಿಗಳಿಗೆ ಪ್ರತಿಕ್ರಿಯಿಸಿದ ಎಚ್ಎಎಲ್, ಘಟನೆಯು ನೆಲದ ಮೇಲಿನ ಸಣ್ಣ ತಾಂತ್ರಿಕ ಸಮಸ್ಯೆಗೆ ಸೀಮಿತವಾಗಿದೆ ಮತ್ತು ಯಾವುದೇ ವಾಯುಗಾಮಿ ಅಪಘಾತ ಸಂಭವಿಸಿಲ್ಲ ಎಂದು ಸೋಮವಾರ ಹೇಳಿದೆ. LCA ತೇಜಸ್ನ ಯಾವುದೇ ಕ್ರ್ಯಾಶ್ನ ವರದಿಯಾಗಿಲ್ಲ ಯುದ್ಧ ವಿಮಾನ (LCA) ಮಾರ್ಕ್ 1A ಪ್ರೋಗ್ರಾಂ, ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ಅವರು ಶುಕ್ರವಾರ ಐದು ಎಂಜಿನ್ಗಳು ಪ್ರಸ್ತುತ ಲಭ್ಯವಿದೆ; ಏತನ್ಮಧ್ಯೆ, ಐದು ವಿಮಾನಗಳು ಈಗಾಗಲೇ ಹಾರಾಟ ನಡೆಸುತ್ತಿವೆ. ಎಎನ್ಐಯೊಂದಿಗೆ ಮಾತನಾಡಿದ ಅವರು, ಉತ್ಪಾದನೆಯು ಭಾರತೀಯ ಮಾರಾಟಗಾರರಿಗೆ ಮತ್ತು ಪ್ರಮುಖ ತಯಾರಕರಾದ
ತಮಿಳುನಾಡು: ತಮಿಳುನಾಡು ಜನರೊಂದಿಗಿನ ಅವರ ಸಂಬಂಧವು "ಮಾಂಸ ಮತ್ತು ರಕ್ತ" ಕ್ಕೆ ಸಮಾನವಾಗಿದೆ ಎಂದು ಬಣ್ಣಿಸಿರುವ ತಮಿಳಗ ವೆಟ್ರಿ ಕಜಘಂ ಮುಖ್ಯಸ್ಥ ವಿಜಯ್ ಸೋಮವಾರ, ರಾಜ್ಯದಲ್ಲಿ ನಂತರ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ವಿರುದ್ಧ ಹೋರಾಡಲು ಎಲ್ಲಾ ಪಕ್ಷಗಳು ಕೈಜೋಡಿಸಿದಂತೆ ತೋರುತ್ತಿವೆ ಎಂದು ಹೇಳಿದರು. ವೆಲ್ಲೂರಿನಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಟಿವಿಕೆ ಮುಖ್ಯಸ್ಥರು ಮುಂಬರುವ ಚುನಾವಣೆಗಳು ರಾಜ್ಯದ ಜನತೆಗೆ "ಭ್ರಷ್ಟಾಚಾರದ ವಿರುದ್ಧದ ಯುದ್ಧ" ಎಂದು ಹೇಳಿದರು."ಇದು 50 ವರ್ಷಕ್ಕೊಮ್ಮೆ ಬರುವ ಚುನಾವಣೆಯಂತೆ. ಈ ಚುನಾವಣೆಯಲ್ಲಿ ವಿಜಯ್ ಅವರನ್ನು ವಿರೋಧಿಸಲು ಎಲ್ಲರೂ
ಹಾಸನ: ಬುಲೆಟ್ ಬೈಕ್ ಚಲಾಯಿಸುವಾಗ ಹಂಪ್ಸ್ ಕಾಣದೇ ಯುವತಿಯವರು ರಸ್ತೆಗೆ ಬಿದ್ದಿದ್ದು, ಪರಿಣಾಮ ಒಬ್ಬ ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ನಗರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಮತ್ತೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದಾಳೆ. ಈ ಘಟನೆ ಹಾಸನ ನಗರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ ಯುವತಿ. ಮತ್ತೋರ್ವ ಯುವತಿ ಸ್ವಾತಿ (24) ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಪ್ರಿಯಾ ಖಾಸಗಿ ಕಾಲೇಜಿನಲ್ಲಿ ಎಂಸಿಎ ಅಂತಿಮ ವರ್ಷದಲ್ಲಿ ಓದುತ್ತಿದ್ದರು. ಸ್ವಾತಿಗೆ ಕಳೆದ ನವೆಂಬರ್ನಲ್ಲಿ ಮದುವೆಯಾಗಿತ್ತು.ಇಬ್ಬರು ಯುವತಿಯರು ಹೆಲ್ಮೆಟ್ ಧರಿಸದೇ ಬುಲೆಟ್ ಬೈಕ್ನಲ್ಲಿ ಹೊರಟಿದ್ದರು. ಪ್ರಿಯಾ ಬೈಕ್ ಚಲಾಯಿಸುತ್ತಿದ್ದು, ಸ್ವಾತಿ ಹಿಂಬದಿ ಸೀಟ್ನಲ್ಲಿ ಕುಳಿತಿದ್ದಳು. ಈ ವೇಳೆ ಹಂಪ್ಸ್ ಕಾಣದೇ ಇಬ್ಬರೂ ರಸ್ತೆಗೆ ಚಿಮ್ಮಿ ಬಿದ್ದಿದ್ದಾರೆ.
ಜೈಪುರ: ನೀವು ಮೋದಿಗೇ ಬೈತೀರಿ. ನಿಮಗೆಲ್ಲಾ ಕಂಬಳಿ ಕೊಡಲ್ಲ ಮುಂದೆ ಹೋಗಮ್ಮ ಎಂದು ಮುಸ್ಲಿಂ ಮಹಿಳೆಗೆ ಬಿಜೆಪಿ ಮಾಜಿ ಸಂಸದ ಸುಖಬೀರ್ ಸಿಂಗ್ ಕಂಬಳಿ ಕೊಡಲು ನಿರಾಕರಿಸಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿರುವುದು ರಾಜಸ್ಥಾನದ ಟೋಂಕ್ ಸವಾಯಿ ಮಾಧೋಪುರ್ ನಲ್ಲಿ. ಬಿಜೆಪಿ ಮಾಜಿ ಸಂಸದ ಸುಖಬೀರ್ ಸಿಂಗ್ ಇಲ್ಲಿ ಬಡವರಿಗೆ ಕಂಬಳಿ ವಿತರಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಓರ್ವ ಮಹಿಳೆಗೆ ಕಂಬಳಿ ನೀಡಿದ ಬಳಿಕ ನಿನ್ನ ಹೆಸರೇನು ಎಂದು ಸುಖಬೀರ್ ಸಿಂಗ್ ಕೇಳಿದ್ದಾರೆ.
ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ಚಿಂತನೆ ನಡೆದಿದೆ. 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಕೊಟ್ಟರೆ ವಿದ್ಯಾಭ್ಯಾಸದ ಮೇಲೆ ಬೇರೆ ರೀತಿಯ ಪರಿಣಾಮ ಬೀರುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.ಬಹಳಷ್ಟು ಅಧ್ಯಯನ ನಡೆಸಿ ದೇಶಗಳಲ್ಲಿ ಹಲವೆಡೆ ಮೊಬೈಲ್ ಬ್ಯಾನ್ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಚಿಂತನೆ ಹರಿಸಿದ್ದಾರೆ. ಇದರ ಸಾಧಕ ಬಾಧಕಗಳನ್ನು ಅಧ್ಯಯನ ನಡೆಸಿ ತೀರ್ಮಾನ ಮಾಡುತ್ತಾರೆ ಎಂದು ಪರಮೇಶ್ವರ್ ಹೇಳಿದರು.ರಂಜಾನ್ ಹಬ್ಬ ಹಾಗೂ ಹೋಳಿ ಹಬ್ಬ ಆಚರಣೆ ವೇಳೆ ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಕೊಡಬಾರದು. ಸಂತೋಷದಿಂದ ಹಬ್ಬ ಆಚರಿಸಬೇಕು. ಅದನ್ನು ಬಿಟ್ಟು ಬೇರೆ ರೀತಿಯಲ್ಲಿ ನಡೆಸಲು ಆವಕಾಶವಿಲ್ಲ ಎಂದು ತಿಳಿಸಿದರು.
ಹೈದರಾಬಾದ್: ಟಾಲಿವುಡ್ನ ಪ್ರಣಯಪಕ್ಷಿಗಳಾದ ನಟ ವಿಜಯ್ ದೇವರಕೊಂಡ ಮತ್ತು ನ್ಯಾಷನಲ್ ಕ್ರಷ್ ಖ್ಯಾತಿಯ ನಟಿ ರಶ್ಮಿಕಾ ಮಂದಣ್ಣ ಇದೇ 26ರಂದು ಹಸೆಮಣೆಯೇರಲಿದ್ದಾರೆ. ಹೀಗಾಗಿ ಇಂದು ಇಬ್ಬರೂ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ವಿವಾಹ ಪೂರ್ವ ವಿವಾಹ ಸಮಾರಂಭಗಳು ಮತ್ತುಅದ್ಧೂರಿ ವಿವಾಹಕ್ಕಾಗಿ ಕುಟುಂಬದ ಸದಸ್ಯರೊಂದಿಗೆ ಅವರು ಉದಯಪುರಕ್ಕೆ ತೆರಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ವಿಜಯ್ ಅವರು ಸಹೋದರ ಆನಂದ್ ದೇವರಕೊಂಡ, ಅವರ ಸ್ನೇಹಿತರು ಮತ್ತು ಅವರ ತಂಡದ ಸದಸ್ಯರು ಅವರೊಂದಿಗೆ ಇದ್ದರು. ನಟ ಬಿಳಿ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿದ್ದರು. ರಶ್ಮಿಕಾ ಬೂದು ಬಣ್ಣದ ಬ್ಲೇಜರ್ ಮತ್ತು ಪ್ಯಾಂಟ್ ಮತ್ತು ಬಿಳಿ ಶರ್ಟ್ ಧರಿಸಿದ್ದರು.
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬಂಜಾರ ಸಮಾಜದ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.ಅವರು ಇಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಕಚೇರಿ ಸಂಖ್ಯೆ 160ರಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಪ್ರಶ್ನೆಗೆ ಉತ್ತರಿಸಿದರು. ಕಾಂಗ್ರೆಸ್ಸಿನವರು ಯಾವ ನೈತಿಕತೆ ಇಟ್ಟುಕೊಂಡು ಭ್ರಷ್ಟಾಚಾರದ ಕುರಿತು ಮಾತನಾಡುತ್ತಾರೆ ಎಂದು ಪ್ರಶ್ನಿಸಿದರು. ಭ್ರಷ್ಟಾಚಾರದ ಬಗ್ಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಪ್ರಿಯಾಂಕ್ ಖರ್ಗೆಯವರು ಮಾತನಾಡುತ್ತಿದ್ದಾರೆ. ಭ್ರಷ್ಟಾಚಾರದ ಕುರಿತು ಮಾತನಾಡುವ ಯೋಗ್ಯತೆ ಕಾಂಗ್ರೆಸ್ಸಿನವರಿಗೆ ಇದೆಯೇ ಎಂದು ಕೇಳಿದರು.
ಬೆಂಗಳೂರು: ಗಂಡನಿಗೆ ಹೆಂಡತಿ ಚಪಾತಿ ರೋಲರ್ ನಲ್ಲಿ ಹೊಡೆದ ಪ್ರಕರಣವೊಂದರ ವಿಚಾರಣೆ ಕೈಗೆತ್ತಿಕೊಂಡಾಗ ಕರ್ನಾಟಕ ಹೈಕೋರ್ಟ್ ನಲ್ಲಿ ನಗುವೋ ನಗು. ಈ ವಿಡಿಯೋ ಈಗ ವೈರಲ್ ಆಗಿದೆ. ಕರ್ನಾಟಕ ಹೈಕೋರ್ಟ್ ನಲ್ಲಿ ಗಂಡ-ಹೆಂಡತಿ ನಡುವಿನ ಜಗಳದ ಕೇಸ್ ಒಂದರ ವಿಚಾರಣೆ ನಡೆಯುತ್ತಿತ್ತು. ಈ ವೇಳೆ ಮಹಿಳಾ ವಕೀಲರು ಕೇಸ್ ಬಗ್ಗೆ ನ್ಯಾಯಾಧೀಶರಿಗೆ ಮನವರಿಕೆ ಮಾಡುತ್ತಿದ್ದಾರೆ. ಕೇಸ್ ಬಗ್ಗೆ ಹೇಳುವಾಗ ಮಹಿಳಾ ವಕೀಲೆಗೆ ನಗುವೋ ನಗು. ಇದಕ್ಕೆ ನ್ಯಾಯಾಧೀಶರೂ ‘ಗಂಡನಿಗೆ ಹೆಂಡತಿ ಮಾರಣಾಂತಿಕ ವಸ್ತುವಿನಲ್ಲಿ ಹೊಡೆದಿದ್ದಾಳೆ. ಚಪಾತಿ ರೋಲರ್’ ಎಂದು ಓದಿ ತಾವೂ ನಕ್ಕಿದ್ದಾರೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ನಿನ್ನೆ ವಾರದ ಆರಂಭದಲ್ಲೇ ಅಡಿಕೆ ಬೆಲೆ ಕೊಂಚ ಇಳಿಕೆಯಾಗಿತ್ತು. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಕೆಯಾಗಿತ್ತು. ಇದು ಬೆಳೆಗಾರರಿಗೆ ಸಮಾಧಾನ ತಂದಿತ್ತು. ಮತ್ತೆ ಅಡಿಕೆ ಬೆಲೆಯಲ್ಲಿ ಚೇತರಿಕೆ ಕಂಡುಬರುತ್ತಿದೆ. ಆದರೆ ಇಂದು ಕೆಲವು ವರ್ಗದ ಅಡಿಕೆ ಬೆಲೆಯಲ್ಲಿ ಇಳಿಕೆಯಾಗಿದೆ. ಇಂದು ಹೊಸ ಅಡಿಕೆ ಬೆಲೆ 485 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 10 ರೂ. ಇಳಿಕೆಯಾಗಿದ್ದು 540 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 10 ರೂ. ಇಳಿಕೆಯಾಗಿದ್ದು 540 ರೂ.ಗಳಷ್ಟಾಗಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ದಾಖಲೆಯ ಏರಿಕೆ ಕಂಡಿತ್ತು. ಈ ವಾರ ಅದೇ ರೀತಿ ಬೆಲೆ ಏರಿಳಿಕೆಯಾಗುವ ಲಕ್ಷಣವಿದೆ. ಇಂದು ಪರಿಶುದ್ಧ ಚಿನ್ನದ ದರ ಇಂದು ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,59,765.00 ರೂ.ಗಳಿತ್ತು. ಇಂದೂ 1,61,665.00 ರೂ.ಗಳಷ್ಟಿದೆ.
ನವದೆಹಲಿ: ದೇಶದ ಬಡವರಿಗೆ ಕೇಂದ್ರ ಸರ್ಕಾರ ಮತ್ತೊಂದು ಬಂಪರ್ ಯೋಜನೆ ಹೊರತಂದಿದೆ. ಪಿಎಂ ರಾಹತ್ ಎನ್ನುವ ಹೊಸ ಯೋಜನೆ ಜಾರಿಗೆ ಬರಲಿದ್ದು ಇದರ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ. ಪಿಎಂ ರಾಹತ್ ಯೋಜನೆ ಎಂದರೆ ರಸ್ತೆ ಅಪಘಾತದಲ್ಲಿ ಸಂತ್ರಸ್ತರಾದವರಿಗೆ ಆರ್ಥಿಕವಾಗಿ ಸಹಾಯ ಮಾಡಲು ಕೇಂದ್ರ ಸರ್ಕಾರ ಆರಂಭಿಸಿರುವ ಯೋಜನೆ ಇದಾಗಿದೆ. ರಸ್ತೆ ಅಪಘಾತವಾದವರಿಗೆ ನಗದು ರಹಿತ ಚಿಕಿತ್ಸಾ ಯೋಜನೆಯನ್ನು ಫೆಬ್ರವರಿ 14 ರಿಂದ ಜಾರಿಗೆ ತರಲಾಗಿದೆ. ಆರ್ಥಿಕವಾಗಿ ದುರ್ಬಲರಾದವರಿಗೆ ಮತ್ತು ಬಡತನ ರೇಖೆಗಿಂತ ಕೆಳಗಿರುವವರು ಈ ಯೋಜನೆಯ ನೆರವು ಪಡೆಯಬಹುದಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗ ಡಿಕೆ ಶಿವಕುಮಾರ್ ಬಣದ ವಿರುದ್ಧ ಸಿದ್ದರಾಮಯ್ಯ ಪ್ರಮುಖ ಅಸ್ತ್ರ ಹೊರಹಾಕಿದ್ದಾರೆ. ಇತ್ತೀಚೆಗೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿರುವ ಡಿಕೆ ಶಿವಕುಮಾರ್ ತಮಗೆ ಸೂಕ್ತ ಸಮಯದಲ್ಲಿ ಸಿಎಂ ಪಟ್ಟ ಸಿಗಲಿದೆ ಎಂಬ ವಿಶ್ವಾಸದಲ್ಲಿದ್ದಾರೆ. ಇದಕ್ಕೆ ತಕ್ಕಂತೆ ಅಸ್ಸಾಂ ಚುನಾವಣೆ ಹೊಣೆಯೂ ಡಿಕೆಶಿಗೆ ಹೆಗಲಿಗೊಪ್ಪಿಸಲಾಗಿದೆ. ಇದರ ನಡುವೆಯೇ ಈಗ ಸಿದ್ದರಾಮಯ್ಯನವರು ಜಾತಿ ಅಸ್ತ್ರ ಪ್ರಯೋಗಿಸಿದ್ದಾರೆ. ತಮ್ಮದು ಕುರಿ ಕಾಯುವ ಸಮುದಾಯ ಎಂದು ಸಿಎಂ ಮೊನ್ನೆ ಟ್ವೀಟ್ ಮಾಡಿದ್ದರು.
ಅಹ್ಮದಾಬಾದ್: ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ಟೀಂ ಇಂಡಿಯಾ ಸೋಲಿಗೆ ಈ ಮೂರು ತಪ್ಪುಗಳೇ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಅಕ್ಷರ್ ಪಟೇಲ್ ರನ್ನು ಸತತವಾಗಿ ಕಳೆದ ಎರಡು ಪಂದ್ಯಗಳಲ್ಲಿ ಟೀಂ ಇಂಡಿಯಾ ಆಡುವ ಬಳಗದಲ್ಲಿ ಸೇರಿಸಿಲ್ಲ. ಅವರ ಬದಲಿಗೆ ಟಿ20 ಮಾದರಿಗೆ ಅಷ್ಟೇನೂ ಸೂಟ್ ಆಗದ ವಾಷಿಂಗ್ಟನ್ ಸುಂದರ್ ಗೆ ಮಣೆ ಹಾಕಲಾಗುತ್ತಿದೆ. ಗಂಭೀರ್ ಕೋಚ್ ಆದ ಬಳಿಕ ವಾಷಿಂಗ್ಟನ್ ಸುಂದರ್ ಗೆ ಇನ್ನಿಲ್ಲದ ಆದ್ಯತೆ ಸಿಗುತ್ತಿರುವುದೇ ಯಕ್ಷ ಪ್ರಶ್ನೆಯಾಗಿದೆ. ಉಪನಾಯಕನಾಗಿದ್ದರೂ, ಟಿ20 ಮಾದರಿಗೆ ಹೇಳಿ ಮಾಡಿಸಿದ ಆಟಗಾರನಾಗಿದ್ದರೂ ಅಕ್ಷರ್ ಪಟೇಲ್ ರನ್ನು ಸತತವಾಗಿ ಹೊರಗಿಡುತ್ತಿರುವುದೇ ಮೊದಲ ತಪ್ಪು.
ಅಹ್ಮದಾಬಾದ್: ರೋಹಿತ್ ಶರ್ಮಾರನ್ನು ಕಾಪಿ ಮಾಡಲು ಹೋಗಿ ಸೂರ್ಯಕುಮಾರ್ ಯಾದವ್ ಈಗ ಫುಲ್ ಟ್ರೋಲ್ ಆಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಸೋಲಿನ ಬಳಿಕ ಸೂರ್ಯ ಗತ್ತಿನ ಬಗ್ಗೆ ನೆಟ್ಟಿಗರು ಟ್ರೋಲ್ ಮಾಡಿದ್ದಾರೆ. ರೋಹಿತ್ ಶರ್ಮಾ ಕ್ಯಾಪ್ಟನ್ ಆಗಿ ಪತ್ರಿಕಾಗೋಷ್ಠಿಗಳಲ್ಲಿ, ಸಂದರ್ಶಕರ ಮುಂದೆ ತಮ್ಮದೇ ಶೈಲಿಯಲ್ಲಿ ಮಾತನಾಡುತ್ತಾರೆ. ಅವರ ವರ್ತನೆ ಅತಿರೇಕ ಎಂದು ಎಂದೂ ಅನಿಸಿದ್ದಿಲ್ಲ. ತಮಾಷೆ ಮಾಡುತ್ತಲೇ ಎಲ್ಲರನ್ನೂ ನಗಿಸುತ್ತಿದ್ದರು. ಇದೀಗ ಪತ್ರಿಕಾಗೋಷ್ಠಿಗಳಲ್ಲಿ ಸೂರ್ಯ ಕೂಡಾ ಅವರನ್ನೇ ಕಾಪಿ ಮಾಡಲು ಪ್ರಯತ್ನಿಸುತ್ತಿದ್ದಾರೇನೋ ಎಂಬ ಅನುಮಾನವಾಗುತ್ತಿದೆ.
ಮುಂಬೈ: ಟಿ20 ವಿಶ್ವಕಪ್ ಸೂಪರ್ 8 ಮೊದಲ ಪಂದ್ಯದಲ್ಲೇ ದಕ್ಷಿಣ ಆಫ್ರಿಕಾ ವಿರುದ್ಧ ಸೋತ ಟೀಂ ಇಂಡಿಯಾಗೆ ಈಗ ಸೆಮಿಫೈನಲ್ ಹಾದಿ ಕಠಿಣವಾಗಿದೆ. ಸೆಮಿಫೈನಲ್ ಗೆ ತಲುಪಲು ಏನು ಮಾಡಬೇಕು ಇಲ್ಲಿದೆ ಲೆಕ್ಕಾಚಾರ. ಟಿ20 ವಿಶ್ವಕಪ್ ನಲ್ಲಿ ಸೂಪರ್ 8 ಹಂತದಲ್ಲಿ ಮೂರು ಪಂದ್ಯಗಳಿವೆ. ಆ ಪೈಕಿ ದಕ್ಷಿಣ ಆಫ್ರಿಕಾ ವಿರುದ್ಧ ನಿನ್ನೆಯ ಪಂದ್ಯವನ್ನು ಟೀಂ ಇಂಡಿಯಾ 76 ರನ್ ಗಳಿಂದ ಸೋತಿದೆ. ಇದರೊಂದಿಗೆ ದಕ್ಷಿಣ ಆಫ್ರಿಕಾ 2 ಅಂಕಗಳೊಂದಿಗೆ +3.800 ರನ್ ರೇಟ್ ಪಡೆದಿದ್ದು ಅಗ್ರ ಸ್ಥಾನದಲ್ಲಿದೆ.
ಹೈದರಾಬಾದ್: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಈಗ ತಮ್ಮ ಮದುವೆಯನ್ನು ಅಧಿಕೃತಗೊಳಿಸಿದ್ದಾರೆ. ರಶ್ಮಿಕಾ ಕ್ಯೂಟ್ ಪೋಸ್ಟ್ ನಲ್ಲಿ ಏನಿದೆ ನೋಡಿ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆಯಾಗುತ್ತಿದ್ದಾರೆ ಎಂದು ಕೆಲವು ದಿನಗಳಿಂದ ಸುದ್ದಿ ಹರಿದಾಡುತ್ತಲೇ ಇತ್ತು. ಅವರ ಮದುವೆಯ ಎಲ್ಲಾ ವಿವರಗಳೂ ಹೊರಬೀಳುತ್ತಲೇ ಇತ್ತು. ಆದರೆ ಇದುವರೆಗೆ ಅವರಿಬ್ಬರೂ ಮದುವೆ ವಿಚಾರವನ್ನು ಅಧಿಕೃತಗೊಳಿಸಿರಲಿದ್ದಾರೆ. ಅಭಿಮಾನಿಗಳೇ ನಮ್ಮಿಬ್ಬರ ಸಂಬಂಧಕ್ಕೆ ವಿರೋಶ್ ಎಂದು ಹೆಸರಿಟ್ಟಿದ್ದಾರೆ. ನಾವು ನಮ್ಮ ಮದುವೆಗೆ ಅದೇ ಹೆಸರಿಡುತ್ತಿದ್ದೇವೆ. ನಿಮ್ಮ ಪ್ರೀತಿಯೇ ನಮ್ಮಿಬ್ಬರ ಸಂಬಂಧವನ್ನು ಗಟ್ಟಿಗೊಳಿಸಿದೆ.