ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿ ತರಬೇತಿ ನಿರತ ಪಶು ವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಸಾವಿಗೆ ಕಾರಣವಾಗಿದ್ದ ನೀರಾನೆ ಹಂಸಿಣಿ ಅನಾರೋಗ್ಯದಿಂದ ಇಂದು ಸಾವನ್ನಪ್ಪಿದೆ. ಎಂಟು ತಿಂಗಳ ಗರ್ಭಧಾರಣೆಯ ಅವಧಿಯು ಮಾರ್ಚ್ ಮಧ್ಯಭಾಗದಲ್ಲೇ ಪೂರ್ಣಗೊಂಡಿದ್ದರೂ, ಅದರಲ್ಲಿ ಪ್ರಸವದ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಇನ್ನೂ ಭ್ರೂನ ಹೊಟ್ಟೆಯಲ್ಲಿಯೇ ಸಾವನ್ನಪ್ಪಿತ್ತು. ಇನ್ನೂ ಕಳೆದ ಕೆಲ ದಿನಗಳಿಂದ ಹಂಸಿಣಿ ಆಹಾರವನ್ನು ಕಡಿಮೆ ಸೇವನೆ ಮಾಡುತ್ತಿತ್ತು.
ಬೆಂಗಳೂರು: ಪಕ್ಷಕ್ಕೆ ಶಿಸ್ತು ತುಂಬಾನೇ ಮುಖ್ಯವಾಗಿದ್ದು, ಆದರೆ ಜಮೀರ್ ಅಹ್ಮದ್ ಮಾತ್ರ ಶಿಸ್ತನ್ನು ಪಾಲನೆ ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ ಹೊರಹಾಕಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷಕ್ಕೂ ಶಿಸ್ತು ತುಂಬಾನೇ ಮುಖ್ಯವಾಗಿದ್ದು, ಎಲ್ಲರನ್ನು ವಿಶ್ವಾಸಕ್ಕೆ ಪಡೆದೆ ಅಭ್ಯರ್ಥಿಯನ್ನಾ ಆಯ್ಕೆ ಮಾಡಿದ್ದೇವೆ ಎಂದರು. ನಂತರ ನಾವು ಎಲ್ಲಾ ನಾಯಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದೆವು. ನಮ್ಮ ನಾಯಕರ ವರದಿಗಳ ಆಧಾರದ ಮೇಲೆ, ತಮ್ಮದೇ
ವಿಜಯಪುರ: ಮಗ ನೋಡಲು ತನ್ನ ಹಾಗೇ ಇಲ್ಲವೆಂದು ಪಾಪಿ ತಂದೆಯೊಬ್ಬ ಮಗನನ್ನೇ ಕೊಂದ ಆಘಾತಕಾರಿ ಘಟನೆ ವಿಜಯಪುರಲ್ಲಿ ವರದಿಯಾಗಿದೆ. ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದ ಸಿದ್ದಾರ್ಥ ಮಲ್ಲಿಕಾರ್ಜುನ ಅರಕೇರಿ (6) ತಂದೆಯಿಂದಲೇ ಹತ್ಯೆಯಾದ ಬಾಲಕ. ಮಲ್ಲಿಕಾರ್ಜುನ ಅರಕೇರಿ ಮಗನನ್ನೇ ಹತ್ಯೆ ಮಾಡಿದ ತಂದೆ. ಕಳೆದ ಮಾರ್ಚ್ 16ರಂದು ಪುತ್ರನನ್ನು ಕೃಷ್ಣಾ ನದಿಗೆ ತಳ್ಳಿ ಹತ್ಯೆ ಮಾಡಿದ್ದಾನೆ ಮಲ್ಲಿಕಾರ್ಜುನ. 6 ವರ್ಷದ ಪುತ್ರ ಸಿದ್ದಾರ್ಥ ನೋಡಲು ತನ್ನ ಹಾಗೇ ಇಲ್ಲವೆಂದು ಮಲ್ಲಿಕಾರ್ಜುನ್ಗೆ ಕೆಲವರು
ನವದೆಹಲಿ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದು, ನಿತೀಶ್ ಕುಮಾರ್ ಅವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಬಳಿಕ ರಾಜ್ಯದಲ್ಲಿ ಸಿಎಂ ಹುದ್ದೆಯನ್ನು ಅಲಂಕರಿಸಿದ ಮೊದಲ ಬಿಜೆಪಿ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನಿತೀಶ್ ಕುಮಾರ್ ಅವರು ಎರಡು ದಶಕಗಳಿಗೂ ಹೆಚ್ಚು ಕಾಲ ಆಡಳಿತದಲ್ಲಿ ಸಿಎಂ ಆಗಿದ್ದರು. ಚೌಧರಿ ಅವರು ಮಂಗಳವಾರ ಬಿಹಾರದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದರು, ಅವರ ಉನ್ನತಿಗೆ ದಾರಿ ಮಾಡಿಕೊಟ್ಟರು.ಎನ್ಡಿಎ ಶಾಸಕಾಂಗ ಪಕ್ಷದ ಸಭೆ ಶೀಘ್ರದಲ್ಲೇ ನಡೆಯಲಿದೆ. ಈ ಸಭೆಯಲ್ಲಿ ಸಾಮ್ರಾಟ್ ಚೌಧರಿ ಅವರನ್ನು ಔಪಚಾರಿಕವಾಗಿ
ಉಜ್ಜಯಿನಿ: ದೆಹಲಿ ಕ್ಯಾಪಿಟಲ್ಸ್ (DC) ಬ್ಯಾಟರ್ ನಿತೀಶ್ ರಾಣಾ ಮಂಗಳವಾರ ಉಜ್ಜಯಿನಿಯ ಶ್ರೀ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು ಮತ್ತು ಭಸ್ಮ ಆರತಿಯಲ್ಲಿ ಪಾಲ್ಗೊಂಡರು.ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026 ರ ಋತುವಿನಲ್ಲಿ ನಿತೀಶ್ ರಾಣಾ ಅವರ ಕಳಪೆ ಫಾರ್ಮ್ ನಡುವೆ ದೇವಸ್ಥಾನಕ್ಕೆ ಭೇಟಿ ನೀಡಲಾಗಿದೆ. ಪ್ರಸಕ್ತ ಐಪಿಎಲ್ ಋತುವಿನಲ್ಲಿ ರಾಣಾ ಡಿಸಿ ಪರ ಬ್ಯಾಟ್ ಮಾಡಿದ ಮೂರು ಪಂದ್ಯಗಳಲ್ಲಿ, ಅವರು ಡಕ್ ಸೇರಿದಂತೆ ಕೇವಲ 20 ರನ್ ಗಳಿಸಿದ್ದಾರೆ.ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಡಿಸಿ ಸೀಸನ್ ಆರಂಭಿಕ ಪಂದ್ಯದಲ್ಲಿ ರಾಣಾ 17 ಎಸೆತಗಳಲ್ಲಿ 15 ರನ್ ಗಳಿಸಿದರು. ನಂತರ
ಬೆಂಗಳೂರು: ಕಾಂಗ್ರೆಸ್ಸಿನವರು, ಸಿದ್ದರಾಮಯ್ಯನವರು ಎಷ್ಟೇ ಪುಂಗಿ ಬಾರಿಸಿದರೂ ಉಪ ಚುನಾವಣೆ ನಡೆದ ರಾಜ್ಯದ ಎರಡೂ ಕ್ಷೇತ್ರಗಳಲ್ಲಿ ಅವರು ಗೆಲುವು ಸಾಧಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದೇ ಗೆಲ್ಲಲಿದೆ ಎಂದರು. ಕಾಂಗ್ರೆಸ್ ಸರಕಾರದ ಬಗ್ಗೆ ಜನರು ಇವತ್ತು ಬೇಸತ್ತಿದ್ದಾರೆ. ಆಡಳಿತ ಯಂತ್ರ ಕುಸಿದಿದೆ. ಮುಖ್ಯಮಂತ್ರಿ ಕುರ್ಚಿಗೆ ಬೀದಿಕಾಳಗ ನಡೆಯುತ್ತಿದೆ. ಅಭಿವೃದ್ಧಿ ಇಲ್ಲವಾಗಿದೆ ಎಂದು ಟೀಕಿಸಿದರು.
ತಿರುವನಂತಪುರಂ: ಅಭಿಮಾನಿಯೊಬ್ಬರು ತನ್ನ ಜೊತೆ ಒಡೆದ ಫೋನ್ ನಲ್ಲಿ ಫೋಟೋ ತೆಗೆಯುತ್ತಿರುವುದನ್ನು ಗಮನಿಸಿ ಕ್ರಿಕೆಟಿಗ ಸಂಜು ಸ್ಯಾಮ್ಸನ್ ತನ್ನ ಬಳಿಯಿದ್ದ 40 ಸಾವಿರ ಮೌಲ್ಯದ ಫೋನ್ ಗಿಫ್ಟ್ ಕೊಟ್ಟ ಘಟನೆ ನಡೆದಿದೆ. ಸಂಜು ಸ್ಯಾಮ್ಸನ್ ಗೆ ಅಭಿಮಾನಿಗಳ ಬಳಗ ದೊಡ್ಡದು. ಎಲ್ಲೇ ಹೋದರೂ ಅವರನ್ನು ಚೇಟ ಎಂದು ಜನ ಪ್ರೀತಿಯಿಂದ ಕರೆಯುತ್ತಾರೆ. ಅಭಿಮಾನಿಗಳ ಪ್ರೀತಿಗೆ ಸಂಜು ಕೂಡಾ ಅಷ್ಟೇ ಪ್ರೀತಿಯಿಂದ ಪ್ರತಿಕ್ರಿಯಿಸುತ್ತಾರೆ. ಆದರೆ ಇಲ್ಲಿ ಅವರು ಅಭಿಮಾನಿಯೊಬ್ಬರಿಗೆ ಮಾಡಿದ ಸಹಾಯ ನೋಡಿ ನೆಟ್ಟಿಗರು ಅಚ್ಚರಿಪಟ್ಟಿದ್ದಾರೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) "ದ್ವೇಷ ತುಂಬಿದ ಚಿಂತನೆ" ಯನ್ನು ಉತ್ತೇಜಿಸುತ್ತಿದೆ ಮತ್ತು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದ ಪ್ರಚಾರವನ್ನು ಪ್ರಾರಂಭಿಸಿದಾಗ ಸಂವಿಧಾನವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಗಂಭೀರ ಆರೋಪ ಮಾಡಿದರು.ಉತ್ತರ ದಿನಾಜ್ಪುರದ ರಾಯ್ಗಂಜ್ನಲ್ಲಿ ಚುನಾವಣೆ ಎದುರಿಸುತ್ತಿರುವ ರಾಜ್ಯದಲ್ಲಿ ತಮ್ಮ ಮೊದಲ ಪ್ರಚಾರದ ಸಂದರ್ಭದಲ್ಲಿ, ಬಿಜೆಪಿ ಮತ ಕಳ್ಳತನದಲ್ಲಿ ತೊಡಗಿದೆ ಎಂದು ಗಾಂಧಿ ಆರೋಪಿಸಿದರು.
ಐಪಿಎಲ್ನಲ್ಲಿ ಕ್ರಿಕೆಟಿಗ ಸಂಜು ಸ್ಯಾಮ್ಸನ್ ತಮ್ಮ ಲಯವನ್ನು ಕಂಡುಕೊಳ್ಳಲು ವಿಫಲವಾಗಿದ್ದರು, ಆದರೆ ಅವರು ಇದೀಗ ತಮ್ಮ ಉದಾರ ಮನಸ್ಸಿನ ಬಗ್ಗೆ ಸುದ್ದಿಯಾಗಿದ್ದಾರೆ. ಕೇರಳದಲ್ಲಿ ರಸ್ತೆಬದಿಯ ವಿರಾಮದ ಸಮಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಆಟಗಾರನು ಬೆಂಬಲಿಗರಿಗೆ ಹೊಚ್ಚಹೊಸ ಸ್ಮಾರ್ಟ್ಫೋನ್ ಅನ್ನು ಉಡುಗೊರೆಯಾಗಿ ನೀಡಿದ್ದಾನೆ. ತನ್ನ ಆರಂಭಿಕ ಮೂರು ಪಂದ್ಯಗಳಲ್ಲಿ 6, 7, ಮತ್ತು 9 ಸ್ಕೋರ್ಗಳನ್ನು ದಾಖಲಿಸಿದ ಅವರು IPL ಋತುವಿಗೆ ಸವಾಲಿನ ಆರಂಭವನ್ನು ಎದುರಿಸುತ್ತಿರುವಾಗ ಈ ನಡೆ ಕಂಡುಬಂದಿದೆ. ಕ್ವಿಕ್ ಸ್ಟಾಪ್ ಸಮಯದಲ್ಲಿ ಸಂಜು ಸ್ಯಾಮ್ಸನ್ ಅವರಿಗೆ ಹೊಸ ಸಾಧನವನ್ನು ಪ್ರಸ್ತುತಪಡಿಸಿದಾಗ ಸ್ಥಳೀಯ ಅಭಿಮಾನಿಗಳಿಗೆ
ಬೆಂಗಳೂರು: ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಕಾಲಾತೀತ ನಾಯಕ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು.ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸಂವಿಧಾನ ಕರ್ತೃ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತ್ಯುತ್ಸವವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಲವರು ಕಾಲಕ್ಕೆ ಸೀಮಿತವಾದ ನಾಯಕರಿರುತ್ತಾರೆ. ಆದರೆ, ಅಂಬೇಡ್ಕರ್ ಅವರು ಹಾಗಲ್ಲ ಎಂದು ನುಡಿದರು.ಮಹಾನ್ ಚಿಂತಕರು ಸದಾ ಜೀವಂತರಾಗಿರುತ್ತಾರೆ. ಅಂಥವರಲ್ಲಿ ಡಾ.ಅಂಬೇಡ್ಕರ್ ಅವರೂ ಒಬ್ಬರು ಎಂದು ತಿಳಿಸಿದರು. ಬುದ್ಧನ ಪ್ರೇರಣೆ, ಬಸವಣ್ಣನ ಸಮಾನತೆ ಇವೆರಡನ್ನೂ ಪಡೆದವರು ಡಾ. ಅಂಬೇಡ್ಕರ್ ಅವರು ಎಂದು ವಿಶ್ಲೇಷಿಸಿದರು.
ಬೆಂಗಳೂರು: ಐಪಿಎಲ್ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ 15 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರು ಶೀಘ್ರದಲ್ಲೇ ಭಾರತ ತಂಡಕ್ಕೆ ಪದಾರ್ಪಣೆ ಮಾಡಲಿದ್ದಾರೆ.ವೈಭವ್ ಅವರು ತಮ್ಮ ಅಮೋಘ ಆಟದ ಮೂಲಕವೇ ಗಮನಸೆಳೆಯುತ್ತಿರುವ ಅವರು ತಾರಾ ಬೌಲರ್ಗಳ ವಿರುದ್ಧ ಮೇಲುಗೈ ಸಾಧಿಸಿದ್ದಾರೆ. ಐಪಿಎಲ್ ಪಂದ್ಯಗಳಲ್ಲಿ ಪ್ರಮುಖ ಬೌಲರ್ಗಳನ್ನು ಅವರು ದಂಡಿಸಿ ಗಮನ ಸೆಳೆದಿದ್ದಾರೆ.ಇತ್ತೀಚೆಗೆ ಮುಕ್ತಾಯಗೊಂಡ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ ಹಾಗೂ ಈಗ ನಡೆಯುತ್ತಿರುವ ಐಪಿಎಲ್ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಅವರನ್ನು ಇದೇ ವರ್ಷದ ಜೂನ್ನಲ್ಲಿ ನಡೆಯಲಿರುವ ಐರ್ಲೆಂಡ್ ಪ್ರವಾಸದಲ್ಲಿ ಭಾರತ ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ
ಪಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರನ್ನು ಇಂದು ಭೇಟಿ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ನಿತೀಶ್ ಕುಮಾರ್ ಅವರು ಈಚೆಗೆ ರಾಜ್ಯಸಭೆ ಸದಸ್ಯರಾಗಿದ್ದರು.ಮಧ್ಯಾಹ್ನ 3.15ನಿಮಿಷದ ಸುಮಾರಿಗೆ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ನಿರ್ಧಾರ ತಿಳಿಸಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಅದಕ್ಕೂ ಮುನ್ನ ಇಂದು ಬೆಳಗ್ಗೆ ತಮ್ಮ ಕೊನೆಯ ಸಚಿವ ಸಂಪುಟ ಸಭೆ ನಡೆಸಿರುವ ನಿತೀಶ್ ಕುಮಾರ್, ತಮ್ಮ ಸ್ಥಾನದ ರಾಜೀನಾಮೆ ಮತ್ತು ಸಂಪುಟ ವಿಸರ್ಜನೆಯ ಬಗ್ಗೆ ಸಹೋದ್ಯೋಗಿಗಳಿಗೆ ತಿಳಿಸಿದ್ದಾರೆ.ಬಿಹಾರದ ಸುದೀರ್ಘ ಕಾಲದ ಮುಖ್ಯಮಂತ್ರಿಯಾಗಿರುವ ನಿತೀಶ್ ಕುಮಾರ್ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸುವ ಮುನ್ನ ಅನುಸರಿಸಬೇಕಾದ ಸಾಂವಿಧಾನಿಕ ವಿಧಾನಗಳ ಭಾಗವಾಗಿ ಸಚಿವ ಸಂಪುಟ ವಿಸರ್ಜಿಸುವ ನಿರ್ಧಾರವನ್ನು ಸಹೋದ್ಯೋಗಿಗಳಿಗೆ ತಿಳಿಸಿದ್ದಾರೆ.
ಬೆಂಗಳೂರು: ಪ್ರತಿಭಟನಾನಿರತ ಯುವಜನರನ್ನು ಬಂಧಿಸಿ ಜೈಲಿಗೆ ಕಳಿಸಿದ್ದು ನೀಚಕೃತ್ಯ; ಇದು ಖಂಡನೀಯ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸರಕಾರ ನಿರುದ್ಯೋಗಿ ಯುವಜನರಿಗೆ ನಿರುದ್ಯೋಗ ಭತ್ಯೆಯನ್ನೂ ನೀಡಿಲ್ಲ ಎಂದು ಟೀಕಿಸಿದರು. ಸುಮಾರು 3 ಲಕ್ಷ ಹುದ್ದೆಗಳು ಖಾಲಿ ಇದ್ದರೂ ಅವನ್ನು ಭರ್ತಿ ಮಾಡಿಲ್ಲ; ಪ್ರತಿಭಟನೆಯ ಅವಕಾಶವನ್ನೂ ಕೊಡದೇ ಬಂಧಿಸಿದ್ದನ್ನು ಖಂಡಿಸುವುದಾಗಿ ಹೇಳಿದರು.ಧಾರವಾಡದಲ್ಲಿ ರೂಂ ಮಾಡಿ ಕೋಚಿಂಗ್ ಪಡೆದು ಅವರೆಲ್ಲರೂ ಮೂರು ವರ್ಷ ಕಾದಿದ್ದಾರೆ.
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಬಿಎಂಆರ್ಸಿಎಲ್ ಗುಡ್ನ್ಯೂಸ್ ನೀಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳು ಇರುವ ದಿನ ನಮ್ಮ ಮೆಟ್ರೋ ಸೇವೆಯನ್ನು ಮಧ್ಯರಾತ್ರಿ 2 ಗಂಟೆತನಕ ವಿಸ್ತರಿಸಲಾಗಿದೆ. ಆರ್ಸಿಬಿ ಪಂದ್ಯಗಳು ಏ.15 ಹಾಗೂ ಏ.24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಹಿನ್ನೆಲೆ ಏ.15, 24ರಂದು ರಾತ್ರಿ 2 ಗಂಟೆವರೆಗೆ ನಮ್ಮ ಮೆಟ್ರೋ ಕಾರ್ಯನಿರ್ವಹಿಸಲಿದೆ.ಆದರೆ, ಏ.18ರಂದು ನಡೆಯಲಿರುವ ಪಂದ್ಯದ ದಿನದಂದು ಮೆಟ್ರೋ ರೈಲು ಸೇವೆಗಳ ಅವಧಿಯಲ್ಲಿ ಯಾವುದೇ ವಿಸ್ತರಣೆ ಇರುವುದಿಲ್ಲ. ರೈಲುಗಳು ನಿಗದಿತ ವೇಳಾಪಟ್ಟಿಯಂತೆ ಸಂಚರಿಸಲಿವೆ.
ಬೆಂಗಳೂರು: ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿರುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಸದಾಶಿವನಗರದ ತಮ್ಮ ನಿವಾಸ ಹಾಗೂ ಕೆಪಿಸಿಸಿ ಕಚೇರಿ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ಬಿಡುಗಡೆ ಮಾಡಿ ಮುಖ್ಯಮಂತ್ರಿಗಳು ಆದೇಶ ಹೊರಡಿಸಿರುವ ಬಗ್ಗೆ ಕೇಳಿದಾಗ, “ನಜೀರ್ ಅವರಿಗೆ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರಕ್ಕೆ ಹೋಗಿ ಬಂಡಾಯ ಅಭ್ಯರ್ಥಿ ಹಿಂದೆ ಸರಿಯುವಂತೆ ಮಾಡಲು ಪಕ್ಷ ಸೂಚಿಸಿತ್ತು. ಅವರು ಈ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ.
ಮೆಂತ್ಯ ಕಾಳುಗಳನ್ನು ಪೌಡರ್ ಮಾಡಿ ಹಾಲಿಗೆ ಮಿಕ್ಸ್ ಮಾಡಿಕೊಂಡು ಪ್ರತಿನಿತ್ಯ ಸೇವನೆ ಮಾಡುವುದರಿಂದ ಎಷ್ಟು ಆರೋಗ್ಯಕರ ಉಪಯೋಗವಿದೆ ಎಂದು ತಿಳಿದುಕೊಳ್ಳಿ. ಮೆಂತ್ಯದ ಕಾಳುಗಳಲ್ಲಿ ಅಪಾರ ಆರೋಗ್ಯಕರ ಪ್ರಯೋಜನಗಳಿವೆ. ಇದನ್ನು ಪ್ರತಿನಿತ್ಯ ಅಡುಗೆಗಳಲ್ಲಿ ಬಳಸುತ್ತೇವೆ. ಕಹಿ ರುಚಿಯಿದ್ದರೂ ದೇಹಕ್ಕೆ ತಂಪು, ಶಕ್ತಿವರ್ಧಕ. ಈ ಕಾಳುಗಳನ್ನು ಪೌಡರ್ ಮಾಡಿಕೊಂಡು ಪ್ರತಿನಿತ್ಯ ಹಾಲಿಗೆ ಬೆರೆಸಿ ಕುಡಿದರೆ ಸಾಕಷ್ಟು ಪ್ರಯೋಜನಗಳಿವೆ. ಎಲುಬು ಗಟ್ಟಿಯಾಗುತ್ತದೆಮೆಂತ್ಯದಲ್ಲಿರುವ ಉರಿಯೂತ ನಿರೋಧಕ ಅಂಶಗಳು ಕೀಲು ನೋವು ತಡೆಯುವ ಗುಣ ಹೊಂದಿದೆ. ಹಾಲಿನಲ್ಲಿ ವಿಟಮಿನ್ ಡಿ ಅಂಶವಿರುವುದರಿಂದ ಎಲುಬುಗಳ ಆರೋಗ್ಯಕ್ಕೆ ಉತ್ತಮ.
ಬೆಂಗಳೂರು: ದಾವಣಗೆರೆ ಉಪ ಚುನಾವಣೆಯಲ್ಲಿ ಉಂಟಾಗಿದ್ದ ಅಸಮಾಧಾನ ಅಲೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸುತ್ತಿದೆ. ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ತಲೆದಂಡವಾಗಿದೆ. ಸಚಿವ ಜಮೀರ್ ಅಹ್ಮದ್ ಜೊತೆಗೆ ಸಿಎಂ ಸಿದ್ದರಾಮಯ್ಯ ಈಗಷ್ಟೇ ಮಾತುಕತೆ ನಡೆಸಿದ್ದಾರೆ. ದಾವಣಗೆರೆ ಉಪಚುನಾವಣೆಯಲ್ಲಿ ತಮ್ಮ ಸಮುದಾಯದವರಿಗೆ ಟಿಕೆಟ್ ಕೊಡಲಿಲ್ಲ ಎಂದು ಮುಸ್ಲಿಂ ನಾಯಕರು ಅಸಹಕಾರ ತೋರಿದ್ದರು. ಇದು ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದೆ. ಈ ಕಾರಣಕ್ಕೆ ಈಗಾಗಲೇ ಒಬ್ಬೊಬ್ಬರಾಗಿ ಅಲ್ಪಸಂಖ್ಯಾತ ಸಮುದಾಯದ ನಾಯಕರ ತಲೆದಂಡವಾಗುತ್ತಿದೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ಮೊನ್ನೆ ಕೊಂಚ ಇಳಿಕೆಯಾಗಿತ್ತು. ಹೊಸ ಅಡಿಕೆ ಬೆಲೆ 490 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 555 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 555 ರೂ.ಗಳಷ್ಟಾಗಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದ್ದು ಮತ್ತುಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,55,165.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,54,770.00 ರೂ.ಗಳಷ್ಟಿದೆ.
ಬೆಂಗಳೂರು: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ಜಯಂತಿ ಪ್ರಯುಕ್ತ ಸಂದೇಶ ನೀಡಿರುವ ಸಿಎಂ ಸಿದ್ದರಾಮಯ್ಯ ಜಾತಿ ಕಂದಾಚಾರವನ್ನು ಹೊಡೆದೋಡಿಸೋಣ ಎಂದು ಕರೆ ನೀಡಿದ್ದಾರೆ. ಇಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135 ನೇ ಜನ್ಮ ಜಯಂತಿ. ಈ ಪ್ರಯುಕ್ತ ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ಬರೆದಿರುವ ಸಿಎಂ ಸಿದ್ದರಾಮಯ್ಯ ಬಾಬಾ ಸಾಹೇಬರ ಹುಟ್ಟು ನಮ್ಮೆಲ್ಲರ ಹುಟ್ಟನ್ನು ಅರ್ಥಪೂರ್ಣಗೊಳಿಸಿತು ಎಂದಿದ್ದಾರೆ. ‘ಶತಮಾನಗಳ ಕಾಲ ಶಿಕ್ಷಣ, ಧಾರ್ಮಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯ ಮುಂತಾದವುಗಳಿಂದ ವಂಚಿತವಾಗಿದ್ದ ಕೋಟ್ಯಂತರ ಶೋಷಿತ ಜನರಿಗೆ ಸ್ವಾಭಿಮಾನ, ಸ್ವಾವಲಂಬನೆ ಮತ್ತು ಘನತೆಯ ಬದುಕನ್ನು ನೀಡಿದ್ದು ಬಾಬಾ ಸಾಹೇಬರ ಸಂವಿಧಾನ.
ಜಾತಕದಲ್ಲಿ ಕಾಳ ಸರ್ಪ ದೋಷವಿದ್ದಾಗ ಜೀವನದಲ್ಲಿ ಏಳು-ಬೀಳುಗಳು, ಮಾನಸಿಕವಾಗಿ ನೆಮ್ಮದಿ ಕಳೆದುಕೊಳ್ಳುವ ಸಂದರ್ಭಗಳು ಇರುತ್ತವೆ. ಕಾಳ ಸರ್ಪ ದೋಷವಿದ್ದಾಗ ಅದಕ್ಕೆ ಯಾವೆಲ್ಲಾ ಪರಿಹಾರ ಮಾಡಬೇಕು ನೋಡಿ. ಕಾಲಸರ್ಪ ದೋಷವು ಏಳು ಪ್ರಾಥಮಿಕ ಗ್ರಹಗಳು ರಾಹು (ಸರ್ಪದ ತಲೆ) ಮತ್ತು ಕೇತು (ಬಾಲ) ನಡುವೆ ಸುತ್ತುವರೆದಾಗ ಸಂಭವಿಸುತ್ತದೆ. ಕಾಳ ಸರ್ಪ ದೋಷವಿದ್ದಾಗ ರಾಹು ಬೀಜ ಮಂತ್ರ, ಕೇತು ಬೀಜ ಮಂತ್ರ, ಹನುಮಾನ್ ಚಾಲೀಸಾ ಮಂತ್ರವನ್ನು ಓದುತ್ತಿರಬೇಕು. ಮಹಾ ಮೃತ್ಯುಂಜಯ ಹೋಮ ನಡೆಸುವುದು, ಶಿವ ಪೂಜೆ, ರುದ್ರಾಭಿಷೇಕಗಳನ್ನು ಮಾಡಿಸುತ್ತಿರಬೇಕು.
ಲಕ್ನೋ ಸೂಪರ್ ಜೈಂಟ್ಸ್ ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ನಾಯಿಯೊಂದು ನೆರೆದಿದ್ದ ಜನರಿಗೆ ಮತ್ತು ಆಟಗಾರರಿಗೆ ಫುಲ್ ಮನರಂಜನೆ ನೀಡಿದೆ. ಈ ವೈರಲ್ ವಿಡಿಯೋ ಇಲ್ಲಿದೆ ನೋಡಿ. ಕ್ರಿಕೆಟ್ ಪಂದ್ಯ ನಡೆಯುವಾಗ ಹಲವು ಬಾರಿ ಇದೇ ರೀತಿ ನಾಯಿ ಮೈದಾನಕ್ಕೆ ನುಗ್ಗಿ ಅವಾಂತರ ಸೃಷ್ಟಿಸಿದ್ದು ಇದೆ. ಮೈದಾನ ಸಿಬ್ಬಂದಿಗಳಿಗೆ ಇವುಗಳನ್ನು ಹ್ಯಾಂಡಲ್ ಮಾಡುವುದೇ ಕೆಲಸ. ಪಾಪ ಅವುಗಳಿಗೆ ಏನು ಗೊತ್ತು ಇಲ್ಲಿ ನುಗ್ಗಬಾರದು ಎಂದು. ಇದೇ ರೀತಿ ಲಕ್ನೋ ಸೂಪರ್ ಜೈಂಟ್ಸ್ ಪಂದ್ಯದ ವೇಳೆ ನಾಯಿಯೊಂದು ಮೈದಾನಕ್ಕೆ ನುಗ್ಗಿದೆ. ಮೊದಲು ಇದರ ಜೊತೆ ಆಟಗಾರರು ಆಟವಾಡುತ್ತಲೇ ಹೊರಗೆ ನೂಕುವ ಪ್ರಯತ್ನ ಮಾಡಿದ್ದಾರೆ.
ಹೈದರಾಬಾದ್: ಐಪಿಎಲ್ 2026 ರಲ್ಲಿ ನಿನ್ನೆ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗೋಲ್ಡನ್ ಡಕ್ ಔಟಾಗಿದ್ದ ವೈಭವ್ ಸೂರ್ಯವಂಶಿ ಕ್ಯಾಮರಾ ಕಡೆ ನೋಡುತ್ತಾ ಮಾಡಿದ ಮುಖಭಾವ ಎಲ್ಲರ ಗಮನ ಸೆಳೆದಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಿನ್ನೆ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 57 ರನ್ ಗಳ ಸೋಲು ಅನುಭವಿಸಿದೆ. ಈ ಕೂಟದಲ್ಲಿ ಇದೇ ಮೊದಲ ಸೋಲು ಇದಾಗಿತ್ತು. ವಿಶೇಷವೆಂದರೆ ಹೈದರಾಬಾದ್ ಪರ ಪದಾರ್ಪಣೆ ಮಾಡಿದ ಪ್ರಫುಲ್ ಹಿಂಗೆ ಮೊದಲ ಓವರ್ ನಲ್ಲೇ ಮೂವರನ್ನು ಡಕೌಟ್ ಮಾಡಿ ದಾಖಲೆ ಮಾಡಿದರು.
ನಾಯಿಯೊಂದು ತನ್ನ ಸೂಕ್ಷ್ಮ ಬುದ್ಧಿಯಿಂದ ಆಕೆಯನ್ನು ಕಾಪಾಡಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಾಯಿಗಳು ವಿಧೇಯ ಮಾತ್ರವಲ್ಲ, ಬುದ್ಧಿವಂತ ಪ್ರಾಣಿಗಳೂ ಹೌದು. ಅವುಗಳಿಗೆ ಅಪಾಯ ಮೊದಲೇ ಗೊತ್ತಾಗಿಬಿಡುತ್ತದೆ. ಅದರಲ್ಲೂ ತನ್ನ ಒಡೆಯನಿಗೆ ಏನಾದರೂ ಅಪಾಯವಾಗುತ್ತದೆ ಎಂದು ತಿಳಿದರೆ ಪ್ರಾಣದ ಹಂಗೂ ತೊರೆದು ಕಾಪಾಡುತ್ತದೆ. ಈ ನಾಯಿಯೂ ಇದೇ ರೀತಿ ಒಡತಿಯನ್ನು ಕಾಪಾಡಿದೆ. ವಿದೇಶವೊಂದರಲ್ಲಿ ನಡೆದ ಘಟನೆ ಇದಾಗಿದೆ. ರಸ್ತೆ ಬದಿಯಲ್ಲಿ ಕೆಫೆಯೊಂದರ ಟೇಬಲ್ ಬಳಿ ಮಹಿಳೆಯೊಬ್ಬರು ಕುಳಿತಿರುತ್ತಾರೆ. ಆಕೆಯ ಪಕ್ಕದಲ್ಲೇ ಆಕೆಯ ಸಾಕು ನಾಯಿಯೂ ಕುಳಿತಿರುತ್ತದೆ.
ಹೈದರಾಬಾದ್: ಬುಮ್ರಾ ಆದ್ರೂ ಸರಿ, ಹೇಝಲ್ ವುಡ್ ಆದ್ರೂ ಸರಿ, ನನಗೆ ಬೌಲರ್ ಮುಖ್ಯ ಅಲ್ಲ, ಬಾಲ್ ಮಾತ್ರ ನೋಡ್ತೀನಿ ಎಂದಿದ್ದ ವೈಭವ್ ಸೂರ್ಯವಂಶಿ ಮುಂದಿನ ಪಂದ್ಯದಲ್ಲೇ ಡಕೌಟ್ ಆಗಿದ್ದು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಿನ್ನೆ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 57 ರನ್ ಗಳ ಸೋಲು ಅನುಭವಿಸಿದೆ. ಈ ಕೂಟದಲ್ಲಿ ಇದೇ ಮೊದಲ ಸೋಲು ಇದಾಗಿತ್ತು. ವಿಶೇಷವೆಂದರೆ ಹೈದರಾಬಾದ್ ಪರ ಪದಾರ್ಪಣೆ ಮಾಡಿದ ಪ್ರಫುಲ್ ಹಿಂಗೆ ಮೊದಲ ಓವರ್ ನಲ್ಲೇ ಮೂವರನ್ನು ಡಕೌಟ್ ಮಾಡಿ ದಾಖಲೆ ಮಾಡಿದರು.
ನ್ಯೂಯಾರ್ಕ್: ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇರಾನ್ ಮತ್ತು ಅಮೆರಿಕಾ ನಡುವೆ ನಡೆದ ಶಾಂತಿ ಮಾತುಕತೆ ವಿಫಲವಾಗಿದ್ದು ಯಾಕೆ ಎಂದು ಅಮೆರಿಕಾ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಬಹಿರಂಗಪಡಿಸಿದ್ದಾರೆ. ಪಾಕಿಸ್ತಾನದಲ್ಲಿ ನಡೆದ ಶಾಂತಿ ಮಾತುಕತೆ ವಿಫಲವಾಗಿದ್ದು ಎರಡೂ ದೇಶಗಳೂ ಯಾವುದೇ ಒಪ್ಪಂದಕ್ಕೆ ಬರಲು ಸಾಧ್ಯವಾಗಿಲ್ಲ. ಇದರ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ನಾವು ಇನ್ನು ಇರಾನ್ ನಮ್ಮ ಬಳಿ ಬಂದರೂ ಕೇರ್ ಮಾಡಲ್ಲ ಎಂದಿದ್ದಾರೆ. ಜೊತೆಗೆ ಮತ್ತೆ ಯುದ್ಧೋನ್ಮಾದದ ಮಾತನಾಡುತ್ತಿದ್ದಾರೆ. ಇದರ ನಡುವೆ ಜೆಡಿ ವ್ಯಾನ್ಸ್ ಮಾತುಕತೆ ವಿಫಲವಾಗಿದ್ದು ಯಾಕೆ ಎಂಬುದಕ್ಕೆ ಕಾರಣ ವಿವರಿಸಿದ್ದಾರೆ.
ಯಾರೋ ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಬಲಿಪಶುವಾದ ನಾಯಿಯೊಂದು ಕಣ್ಣು ಕಾಣದೇ ತಿನ್ನಲು ಬಾಯಿಯೂ ಹಾಕಲಾಗದೇ ಸಂಕಟ ಅನುಭವಿಸುತ್ತಿರುವ ವಿಡಿಯೋವೊಂದು ಮನಕಲಕುವಂತಿದೆ. ಮನುಷ್ಯ ಎಷ್ಟು ಸ್ವಾರ್ಥಿಯೆಂದರೆ ಈ ಭೂಮಿ ಇರುವುದು ತನಗೆ ಮಾತ್ರ ಎನ್ನುವ ಕಲ್ಪನೆಯಲ್ಲಿರುತ್ತಾನೆ. ಪ್ರಾಣಿಗಳನ್ನು ತನಗೆ ಬೇಕಾದಂತೆ ಆಟವಾಡಿಸುತ್ತಾನೆ. ಇದೇ ರೀತಿ ಬೀದಿಗಳಲ್ಲಿ ಓಡಾಡುವ ನಾಯಿಯೊಂದಕ್ಕೆ ಚಿತ್ರ ಹಿಂಸೆ ನೀಡಿರುವ ವಿಡಿಯೋವೊಂದು ವೈರಲ್ ಆಗಿದೆ. ಕೆಲವೊಮ್ಮೆ ನಾಯಿಗಳು ಯಾವುದೋ ಬಾಟಲಿಗೆ ಬಾಯಿ ಹಾಕಲು ಹೋಗಿ ತಲೆ ಸಿಕ್ಕಿ ಹಾಕಿಕೊಂಡಿರುವ ಸಂದರ್ಭಗಳಿರುತ್ತವೆ. ಆದರೆ ಇಲ್ಲಿ ಯಾರೋ ಕಿಡಿಗೇಡಿಗಳು ಬೀದಿ ನಾಯಿಯೊಂದಕ್ಕೆ ಕಣ್ಣು ಮತ್ತು ಬಾಯಿ ಮುಚ್ಚುವಂತೆ ಬಿಗಿಯಾಗಿ ಬಟ್ಟೆ ಕಟ್ಟಿಬಿಟ್ಟಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಈಗ ಉರಿಬಿಸಿಲು ತಾಂಡವವಾಡುತ್ತಿದೆ. ಇಂದು ರಾಜ್ಯದ ಈ ಕೆಲವು ಜಿಲ್ಲೆಗಳಲ್ಲಿ ಈ ವರ್ಷದ ಗರಿಷ್ಠ ಮಟ್ಟದ ತಾಪಮಾನ ದಾಖಲಾಗಲಿದೆ ಎನ್ನುತ್ತಿದೆ ಹವಾಮಾನ ವರದಿಗಳು. ಕಳೆದ ವಾರ ಬಿಸಿಲಿನ ನಡುವೆಯೂ ಕೆಲವು ಕಡೆಗಳಲ್ಲಿ ಮಳೆ ತಂಪು ನೀಡಿತ್ತು. ಆದರೆ ಈ ವಾರ ತಾಪಮಾನದಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ. ಜನರು ಉರಿಬಿಸಿಲಿಗೆ ತತ್ತರಿಸಿ ಹೋಗುತ್ತಿದ್ದಾರೆ. ಇಂದಂತೂ ತಾಪಮಾನ ವಿಪರೀತ ಏರಿಕೆಯಾಗಲಿದೆ. ವಿಶೇಷವಾಗಿ ರಾಯಚೂರು, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಇಂದು ಗರಿಷ್ಠ ತಾಪಮಾನ 41 ಡಿಗ್ರಿಗೆ ಏರಿಕೆಯಾಗಲಿದೆ ಎಂದು ತಿಳಿದುಬಂದಿದೆ.
ಇಂದು ಮಂಗಳವಾರವಾಗಿದ್ದು ದುರ್ಗಾ ದೇವಿಗೆ ವಿಶೇಷವಾದ ದಿನವಾಗಿದೆ. ಮಾನಸಿಕ ಧೈರ್ಯ, ಶತ್ರು ಭಯ ನಾಶವಾಗಬೇಕೆಂದರೆ ದುರ್ಗಾದೇವಿಯ ನಕ್ಷತ್ರ ಮಾಲಿಕಾ ಸ್ತೋತ್ರವನ್ನು ತಪ್ಪದೇ ಓದಿ.ವಿರಾಟನಗರಂ ರಮ್ಯಂ ಗಚ್ಛಮಾನೋ ಯುಧಿಷ್ಠಿರಃ ।ಅಸ್ತುವನ್ಮನಸಾ ದೇವೀಂ ದುರ್ಗಾಂ ತ್ರಿಭುವನೇಶ್ವರೀಮ್ ॥ 1 ॥ ಯಶೋದಾಗರ್ಭಸಂಭೂತಾಂ ನಾರಾಯಣವರಪ್ರಿಯಾಮ್ ।ನಂದಗೋಪಕುಲೇಜಾತಾಂ ಮಂಗಳ್ಯಾಂ ಕುಲವರ್ಧನೀಮ್ ॥ 2 ॥ ಕಂಸವಿದ್ರಾವಣಕರೀಂ ಅಸುರಾಣಾಂ ಕ್ಷಯಂಕರೀಮ್ ।ಶಿಲಾತಟವಿನಿಕ್ಷಿಪ್ತಾಂ ಆಕಾಶಂ ಪ್ರತಿಗಾಮಿನೀಮ್ ॥ 3 ॥ ವಾಸುದೇವಸ್ಯ ಭಗಿನೀಂ ದಿವ್ಯಮಾಲ್ಯ ವಿಭೂಷಿತಾಮ್ ।ದಿವ್ಯಾಂಬರಧರಾಂ ದೇವೀಂ ಖಡ್ಗಖೇಟಕಧಾರಿಣೀಮ್ ॥ 4 ॥
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಏಪ್ರಿಲ್ 15 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಆದಿ ಚುಂಚನಗಿರಿ ಮಠಾಧೀಶರಾದ ಬಾಲಗಂಗಾಧರನಾಥ ಸ್ವಾಮಿಗಳ ಸ್ಮಾರಕ ಶ್ರೀಗುರು ಭೈರವ್ಯಕ್ಯ ಮಂದಿರವನ್ನು ಉದ್ಘಾಟಿಸಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯ ಮಠದ ಆವರಣದಲ್ಲಿರುವ ಕಾಲಭೈರವೇಶ್ವರ ದೇವಸ್ಥಾನದ ಬಳಿ ಈ ಸ್ಮಾರಕವಿದೆ.ಡಿಸಿ ಕುಮಾರ ಶುಕ್ರವಾರ ಭೇಟಿಯ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಭದ್ರತೆ, ಶಿಷ್ಟಾಚಾರ ಮತ್ತು ವ್ಯವಸ್ಥೆಗಳ ಪರಿಶೀಲನೆ
ಬೆಂಗಳೂರು: ಇದೇ ವರ್ಷ ನಡೆಯಲಿರುವ ಮಹಿಳಾ ಟಿ20 ವಿಶ್ವಕಪ್ ಟೂರ್ನಿಗೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ದಾಖಲೆಯ ಬಹುಮಾನ ಘೋಷಿಸಿದೆ. ಟೂರ್ನಿಯು ಇಂಗ್ಲೆಂಡ್ ಮತ್ತು ವೇಲ್ಸ್ ಆತಿಥ್ಯದಲ್ಲಿ ನಡೆಯಲಿದೆ.ಈ ಬಾರಿಯ ಮಹಿಳಾ ಟಿ20 ವಿಶ್ವಕಪ್ ಟೂರ್ನಿಗೆ ₹82 ಕೋಟಿ ಬಹುಮಾನ ಮೊತ್ತವನ್ನು ಘೋಷಿಸಲಾಗಿದೆ. ಹಿಂದಿನ ಆವೃತ್ತಿಗಿಂತ ಒಟ್ಟು ಬಹುಮಾನ ಮೊತ್ತದಲ್ಲಿ ಶೇ 10 ರಷ್ಟು ಹೆಚ್ಚಿಸಲಾಗಿದೆ. ಟೂರ್ನಿಯಲ್ಲಿ ಒಟ್ಟು 12 ತಂಡಗಳು ಸ್ಪರ್ಧಿಸಲಿವೆ. ಜೂನ್ 12ರಿಂದ ಜುಲೈ5 ರವರೆಗೆ ಏಳು ತಾಣಗಳಲ್ಲಿ ಪಂದ್ಯಗಳು ನಡೆಯಲಿದೆ. ಜೂನ್ 12ರಂದು ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ನಲ್ಲಿ ಆತಿಥೇಯ ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳ ನಡುವೆ
ಚೆನ್ನೈ: ಕೇಂದ್ರ ಸಚಿವ ಮತ್ತು ತಮಿಳುನಾಡು ಬಿಜೆಪಿ ಚುನಾವಣಾ ಉಸ್ತುವಾರಿ ಪಿಯೂಷ್ ಗೋಯಲ್ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಕೌಶಲ್ಯವನ್ನು ಶ್ಲಾಘಿಸಿದ್ದಾರೆ.ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಎನ್ಡಿಎ ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ‘ಭ್ರಷ್ಟ ಡಿಎಂಕೆ’ಯನ್ನು ಸೋಲಿಸಲು ಪ್ರಧಾನಿಯವರ ಕಾರ್ಯಕ್ರಮ ಪಕ್ಷದ ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯವನ್ನು ಹೆಚ್ಚಿಸಲಿದೆ ಎಂದರು.
ನವದೆಹಲಿ: ಎಲ್ಪಿಜಿ ಅಥವಾ ಇತರ ಯಾವುದೇ ಇಂಧನದ ಕೊರತೆಯಿಲ್ಲದೆ, ರಾಜಧಾನಿಯಲ್ಲಿ ದೇಶೀಯ ಮತ್ತು ವಾಣಿಜ್ಯ ಎಲ್ಪಿಜಿ ಪೂರೈಕೆ ಸ್ಥಿರ, ಸಮರ್ಪಕ ಮತ್ತು ನಿಯಂತ್ರಣದಲ್ಲಿದೆ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸೋಮವಾರ ನಿವಾಸಿಗಳಿಗೆ ಭರವಸೆ ನೀಡಿದ್ದಾರೆ. ಜನರು ವದಂತಿಗಳು ಅಥವಾ ಗಾಬರಿಯಿಂದ ಪ್ರಭಾವಿತರಾಗಬೇಡಿ ಮತ್ತು ಶಾಂತವಾಗಿರಲು ಅವರು ಜನರನ್ನು ಒತ್ತಾಯಿಸಿದರು. ದೇಶೀಯ ಎಲ್ಪಿಜಿ ಕುರಿತು ನವೀಕರಣವನ್ನು ಹಂಚಿಕೊಂಡ ಮುಖ್ಯಮಂತ್ರಿ, ಏಪ್ರಿಲ್ 12 ರಂದು ಒಟ್ಟು 1,11,766
ದಾವಣಗೆರೆ: ತಮ್ಮನ್ನು ಹರಿಹರ ಪಂಚಮಸಾಲಿ ಪೀಠದಿಂದ ಪದಚ್ಯುತಿಗೊಳಿಸಿದ ಬೆನ್ನಲ್ಲೇ ಟ್ರಸ್ಟಿಗಳ ವಿರುದ್ಧ ವಚನಾನಂದ ಸ್ವಾಮೀಜಿ ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕದಲ್ಲಿ ಪಂಚಮಸಾಲಿ ಸಮಾಜ ದಿನದಿಂದ ದಿನಕ್ಕೆ ಬಲಿಷ್ಠವಾಗುತ್ತಿದೆ. ಅದರಲ್ಲೂ ಪಂಚಮಸಾಲಿ ನಾಯಕರು ತುಂಬಾ ಪ್ರಭಾವಿಗಳಾಗುತ್ತಿದ್ದಾರೆ. ಹೀಗಾಗಿ, ಬೇಕಂತಲೇ ನಮ್ಮ ಪಂಚಮಸಾಲಿ ನಾಯಕರೊಂದಿಗೆ ನಮ್ಮ ಸಮಾಜದ ಸ್ವಾಮೀಜಿಗಳನ್ನೂ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳಿದರು. ಈ ಸಂಬಂಧ ಮಾಧ್ಯಮದವರ ಜತೆ ಮಾತನಾಡಿದ ಅವರು, ನಾವು 2018ರಲ್ಲಿ ಪಂಚಮಸಾಲಿ ಪೀಠಕ್ಕೆ ಬಂದ ಮೇಲೆ ನಮ್ಮ
ಬೆಂಗಳೂರು: ಭಾರತೀಯ ರೈಲ್ವೇ ವಂದೇ ಭಾರತ್ ಸ್ಲೀಪರ್ ಸೇವೆಯನ್ನು ಅನುಮೋದಿಸುವುದರೊಂದಿಗೆ ಬೆಂಗಳೂರು ಮತ್ತು ಮುಂಬೈ ನಡುವಿನ ರೈಲು ಪ್ರಯಾಣಕ್ಕೆ ಅನುಮೋದನೆ ಸಿಕ್ಕಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು ಸೆಂಟ್ರಲ್ ಸಂಸದ ಪಿಸಿ ಮೋಹನ್ ಅವರಿಗೆ ಹೊಸ ಸ್ಲೀಪರ್ ರೈಲಿಗೆ ಅನುಮೋದನೆ ಕುರಿತು ಪತ್ರದಲ್ಲಿ ತಿಳಿಸಿದ್ದಾರೆ. ರೈಲ್ವೆಯು ಈ ಪ್ರಸ್ತಾವನೆಯನ್ನು ಸಕ್ರಿಯವಾಗಿ ಪರಿಗಣಿಸುತ್ತಿದೆ ಎಂದು ಜನವರಿ 6 ರಂದು ವರದಿ ಮಾಡಿದೆ.
ಮುಂಬೈ: ಪ್ರಸಿದ್ಧ ಗಾಯಕಿ ಆಶಾ ಭೋಂಸ್ಲೆ ಅವರ ಪಾರ್ಥಿವ ಶರೀರವನ್ನು ಶಿವಾಜಿ ಪಾರ್ಕ್ ಸ್ಮಶಾನದಲ್ಲಿ ಅಂತಿಮ ವಿಧಿವಿಧಾನಗಳಿಗಾಗಿ ಕೊಂಡೊಯ್ಯುವ ಸಂದರ್ಭದಲ್ಲಿ ಸೋಮವಾರ ಮುಂಬೈನ ಬೀದಿಗಳಲ್ಲಿ ಜನಸಾಗರವೇ ಜಮಾಯಿಸಿ ಅವರಿಗೆ ಅಂತಿಮ ವಿದಾಯ ಹೇಳಿದರು. ಅಭಿಮಾನಿಗಳು ಮತ್ತು ಸಂಗೀತ ಮತ್ತು ಚಲನಚಿತ್ರ ಭ್ರಾತೃತ್ವದ ಸದಸ್ಯರು ಭಾರತದ ಶ್ರೇಷ್ಠ ಗಾಯಕಿಗೆ ಗೌರವ ನೀಡಿತು. ರಾಜಕೀಯ ನಾಯಕರು, ನಟರು, ಸಂಗೀತಗಾರರು ಮತ್ತು ಆತ್ಮೀಯ ಸ್ನೇಹಿತರು ಅಂತಿಮ ನಮನ ಸಲ್ಲಿಸಿದರು.
ವಿಜಯನಗರ: ಆಂಧ್ರಪ್ರದೇಶದ 26 ವರ್ಷದ ಸಾಫ್ಟ್ವೇರ್ ಇಂಜಿನಿಯರ್ ಅಮೆರಿಕದಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಅವರ ಹುಟ್ಟುಹಬ್ಬದ ದಿನವಾದ ಶನಿವಾರ ಈ ಘಟನೆ ನಡೆದಿದೆ. ಅವರು ಸ್ನೇಹಿತರ ಗುಂಪಿನೊಂದಿಗೆ ಕ್ಯಾಲಿಫೋರ್ನಿಯಾದ ಜಲಪಾತಕ್ಕೆ ಸಂಭ್ರಮಾಚರಣೆಗೆ ತೆರಳಿದ್ದರು. ಇದು ಅಪಾಯಕಾರಿ ನೀರಿನ ಪರಿಸ್ಥಿತಿಯಿಂದ ಉಂಟಾದ ಅಪಘಾತ ಎಂದು ಅಧಿಕಾರಿಗಳು ವಿವರಿಸಿದ್ದಾರೆ.ಸಿಂಗಿರೆಡ್ಡಿ ಸಾಯಿ ಶ್ರೀಹರಿಕೃಷ್ಣ ಅವರು ಅಮೇರಿಕಾದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿ ಇತ್ತೀಚೆಗಷ್ಟೇ ಸೇಂಟ್
ಪಶ್ಚಿಮ ಬಂಗಾಳ: ಪ್ರಧಾನಿ ನರೇಂದ್ರ ಮೋದಿ ಮತ್ತು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವರಿಷ್ಠ (ಟಿಎಂಸಿ) ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು "ಒಂದೇ ನಾಣ್ಯದ ಎರಡು ಮುಖಗಳು" ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೋಮವಾರ ಆರೋಪ ಮಾಡಿದ್ದಾರೆ.ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಗಾಗಿ ಮುರ್ಷಿದಾಬಾದ್ನ ರಘುನಾಥ್ಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಈ ಆರೋಪಗಳನ್ನು ಮಾಡಲಾಗಿದೆ.ಬಂಗಾಳದ ಮುಸ್ಲಿಮರ ಹಿತಾಸಕ್ತಿಗಳನ್ನು ಮಜ್ಲಿಸ್ ಸಹಿಸುವುದಿಲ್ಲ ಎಂದು ನಾನು ಘೋಷಿಸಿದ್ದೇನೆ.
ರಾಯ್ಪುರ: ಎನ್ಕೌಂಟರ್ನಲ್ಲಿ ಉನ್ನತ ನಕ್ಸಲ್ ಕಮಾಂಡ್ ಒಬ್ಬರನ್ನು ಹತ್ಯೆಗೈಯ್ಯಲಾಗಿದೆ ಎಂದು ಛತ್ತೀಸ್ಗಢದ ಕಂಕೇರ್ ಜಿಲ್ಲೆಯ ದಟ್ಟ ಅರಣ್ಯದಲ್ಲಿ ನಡೆದಿದೆ.ಹತ್ಯೆಯಾದ ನಕ್ಸಲ್ ಕಮಾಂಡರ್ನ್ನು ರೂಪಿ ಎಂದು ಗುರುತಿಸಲಾಗಿದೆ. ಟೆಬೆಥಿಯಾ-ಪರ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಚ್ಪಲ್ಲಿ-ಅರಾಮ್ಜೋರಾ-ಹಿದೂರ್ ಬೆಲ್ಟ್ನಲ್ಲಿ ಶಸ್ತ್ರಸಜ್ಜಿತ ನಕ್ಸಲರಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು.
ಬೆಂಗಳೂರು: ರಾಜಕೀಯ ವಲಯದಲ್ಲಿ ಎಂಎಲ್ಸಿ ನಜೀರ್ ಅಹ್ಮದ್ಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಸ್ಥಾನಕ್ಕೆ ರಾಜೀನಾಮೆ ನೀಡಲು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಡೆಡ್ಲೈಲ್ ನೀಡಿದ್ದಾರೆ ಎನ್ನಲಾಗಿದೆ. ಇಂದು ಸಂಜೆಯೊಳಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಸೂಚನೆ ನೀಡಿದ್ದಾರೆ. ಒಂದು ವೇಳೆ ಸಂಜೆಯೊಳಗೆ ನಜೀರ್ ಅಹಮ್ಮದ್ ರಾಜೀನಾಮೆ ನೀಡದಿದ್ದರೆ ಅವರನ್ನು ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಲು ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಭ್ರಷ್ಟಾಚಾರ ನಿಯಂತ್ರಣ ಮತ್ತು ಪಾರದರ್ಶಕತೆ ತರಲು ಉದ್ಯೋಗ ಖಾತ್ರಿ ಯೋಜನೆಗೆ ಒಂದಿಷ್ಟು ಪರಿಷ್ಕರಣೆ ಮಾಡುವ ಕೆಲಸವನ್ನು ನರೇಂದ್ರ ಮೋದಿಯವರ ಸರಕಾರ ಮಾಡಿದೆ. ಇದರ ಕುರಿತು ಜನಸಾಮಾನ್ಯರಲ್ಲಿ ತಪ್ಪು ಗ್ರಹಿಕೆ ಬರುವಂತೆ ರಾಜ್ಯ ಸರಕಾರದ ಗ್ರಾಮೀಣಾಭಿವೃದ್ಧಿ ಇಲಾಖೆ ಮಾಡುತ್ತಿರುವುದು ದುರದೃಷ್ಟಕರ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ.ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯ ಸರಕಾರವು ಬಜೆಟ್ನಡಿ ಕೇಂದ್ರಕ್ಕೆ ಪೂರಕವಾದ ನಿಮ್ಮ ಪಾಲಿನ ಅನುದಾನ ಕಾದಿರಿಸಿ ಯೋಜನೆಯನ್ನು ಯಶಸ್ವಿ ಮಾಡಿದರೆ ಜನಸಾಮಾನ್ಯರಿಗೆ ಅನುಕೂಲ ಆಗಲಿದೆ. ಕಾರ್ಮಿಕರಿಗೆ ಹೆಚ್ಚು ವೇತನ ಬೇಗನೆ ಸಿಗಲಿದೆ. ಅಪಪ್ರಚಾರ ಕೈಬಿಟ್ಟು ಕೇಂದ್ರ ಸರಕಾರದ ಜೊತೆ ಸಹಭಾಗಿತ್ವದಿಂದ ಕೆಲಸ ಮಾಡಬೇಕೆಂದು ಆಗ್ರಹಿಸಿದರು.
ಬೆಂಗಳೂರು: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ರಾಜ್ಯದಾದ್ಯಂತ ನಾಳೆಯಿಂದ (ಏ.13) ರಿಂದ 20 ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ಅವರು ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಬಾಬಾ ಸಾಹೇಬ್ ಅವರ ಜಯಂತಿ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಇಡೀ ರಾಜ್ಯಕ್ಕೆ ಎಲ್ಲ ಜಿಲ್ಲೆ ಮತ್ತು ತಾಲೂಕುಗಳಿಗೇ ಭಾರತೀಯ ಜನತಾ ಪಕ್ಷ ವತಿಯಿಂದ ಸೂಚನೆ ನೀಡಲಾಗಿದೆ ಎಂದರು.
ಬೆಂಗಳೂರು: ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ಆಟೋ ಚಾಲಕರ ಸಹಾಯಕ್ಕೆ ಬಂದಿದ್ದಾರೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಆಟೋ ಚಾಲಕರು ಎದುರಿಸುತ್ತಿರುವ ಎಲ್ಪಿಜಿ ಗ್ಯಾಸ್ ಸಮಸ್ಯೆಯ ಬಗ್ಗೆ ಧ್ವನಿ ಎತ್ತಿದ್ದಾರೆ. ಸದ್ಯ ಆಟೋಗಳಿಗೆ ಎಲ್ಪಿಜಿ ಗ್ಯಾಸ್ ಸಿಗದೇ ಆಟೋ ನಂಬಿ ಜೀವನ ನಡೆಸುತ್ತಿರುವವರು ಕಷ್ಟಪಡುತ್ತಿದ್ದಾರೆ. ಇವರ ಕಷ್ಟಕ್ಕೆ ಮರುಗಿರುವ ಧ್ರುವ ಆಟೋ ಚಾಲಕರ ಕುಟುಂಬಗಳಿಗೆ ಸಹಾಯವಾಗುವಂತೆ 25 ಲಕ್ಷ ರೂಪಾಯಿಯನ್ನು ನೀಡಿದ್ದಾರೆ. ಜೊತೆಗೆ ಈ ಸಮಸ್ಯೆಯನ್ನು ಬೇಗ ಬಗೆಹರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಮನವಿ ಮಾಡಿದ್ದಾರೆ.ಆಟೋ ಚಾಲಕರು ನಮ್ಮ ದೇಶದ ಬೆನ್ನೆಲುಬು. ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ಆದರೆ, ಅವರೇ ಈಗ ಕಷ್ಟದಲ್ಲಿದ್ದಾರೆ. ಎಲ್ಲಿಯೂ ಎಲ್ಪಿಜಿ ಗ್ಯಾಸ್ ಸಿಗುತ್ತಿಲ್ಲ.
ದಾವಣಗೆರೆ: ಇಂದು ಬೆಳಿಗ್ಗೆಯಿಂದಲೇ ಪಂಚಮಸಾಲಿ ಗುರುಪೀಠದ ಧರ್ಮದರ್ಶಿ ಮಂಡಳಿ ಹಾಗೂ ಭಕ್ತರ ನಡುವಿನ ಸಂಘರ್ಷ ಮಠದ ಆವರಣದಲ್ಲಿ ಹೈಡ್ರಾಮಾ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ವಚನಾನಂದ ಸ್ವಾಮೀಜಿಗೆ ಬಿಗ್ ಶಾಕ್ ನೀಡಲಾಗಿದೆ.ಲೆಕ್ಕ ಕೊಡಿ ಅಭಿಯಾನ ತೀವ್ರ ಸ್ವರೂಪ ಪಡೆದ ಬೆನ್ನಲ್ಲೇ ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ. ಗುರುಪೀಠದಲ್ಲಿ ನಡೆದ ಧರ್ಮದರ್ಶಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.ಒಟ್ಟು 15 ಜನ ಇರುವ ಧರ್ಮದರ್ಶಿ ಸಮಿತಿ ಸಭೆಯಲ್ಲಿ 12 ಜನ ಈ ನಿರ್ಧಾರಕ್ಕೆ ಸಹಮತ ಸೂಚಿಸಿದ್ದಾರೆ ಎಂದು ಧರ್ಮದರ್ಶಿ ಸಮಿತಿ ಸದಸ್ಯರಾದ ಬಸವರಾಜ್ ದಿಂಡೂರ ಹಾಗೂ ಬಾವಿ ಬೆಟ್ಟಪ್ಪ ತಿಳಿಸಿದ್ದಾರೆ.
ಬಾಗಲಕೋಟೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಎಸಗಿದ್ದ ಸಂತ್ರಸ್ತ ಮಹಿಳೆ ಇದೀಗ ಉಲ್ಟಾ ಹೊಡೆದಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈಚೆಗೆ ಸ್ವಾಮೀಜಿ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದರು. ಇದೀಗ ಈ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ನಾನು ಶ್ರೀಗಳ ವಿರುದ್ಧ ದೂರು ನೀಡಿಲ್ಲ. ನನ್ನ ಮತ್ತು ಸ್ವಾಮೀಜಿ ಮೇಲಿರುವ ಆರೋಪಗಳೆಲ್ಲವೂ ಸುಳ್ಳು. ಇನ್ನೂ ನನ್ನ ಹೆಸರಿನಲ್ಲಿ
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ಸಿನವರು ಮಹಿಳಾ ಮೀಸಲಾತಿ ಒಂದು ರಾಜಕೀಯ ಗಿಮಿಕ್ ಎಂದಿದ್ದಾರೆ. ಈ ಹೇಳಿಕೆಯ ಮೂಲಕ ದೇಶದ ನಾರಿಶಕ್ತಿಗೆ ಅಪಮಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷದವರು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಮಹಿಳಾ ಮೀಸಲಾತಿಯು ನರೇಂದ್ರ ಮೋದಿಜಿ ಅವರು ತೆಗೆದುಕೊಂಡ ಐತಿಹಾಸಿಕ ನಿರ್ಣಯ ಎಂದು ತಿಳಿಸಿದರು. ಉಪ ಚುನಾವಣೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಳು ವಿಧಾನಸೌಧ ಮತ್ತು ಆಡಳಿತವನ್ನು ಸಂಪೂರ್ಣ ಮರೆತು ಬಾಗಲಕೋಟೆಯಲ್ಲಿ 8-9 ದಿನಗಳ ಕಾಲ ಇದ್ದರು. ದಾವಣಗೆರೆ ಬಗ್ಗೆ ಮುಖ್ಯಮಂತ್ರಿಗಳು ತಲೆ ಕೆಡಿಸಿಕೊಂಡಂತೆ ಕಾಣಲಿಲ್ಲ ಎಂದು ತಿಳಿಸಿದರು.
ಬೆಂಗಳೂರು: ಪಕ್ಷದ ಹಿರಿಯ ಶಾಸಕರು ಸಚಿವ ಸ್ಥಾನ ಕೇಳುವುದ್ರಲ್ಲಿ ಯಾವುದೇ ತಪ್ಪಿಲ್ಲ, ಅದೇನು ಗ್ಯಾಬ್ಲಿಂಗ್ ಅಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಈ ವಿಚಾರದಲ್ಲಿ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಎರಡೂ ಮೂರು ಬಾರಿ ಶಾಸಕರಾಗು ಗೆದ್ದಿರುವವರು, ಸಚಿವರಾಗಲು ಸಮರ್ಥರಾದವರು. ಅವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ. ಆದರೆ ಇದನ್ನು ಹೈಕಮಾಂಡ್ ತೀರ್ಮಾನವನ್ನು ಕೈಗೊಳ್ಳುತ್ತದೆಂದು ಹೇಳಿದರು. ಅದೇನು ಗ್ಯಾಂಬ್ಲಿಂಗ್ ಅಲ್ಲ. ಅವರಿಗೆ ಅರ್ಹತೆ ಇದೆ ಕೇಳ್ತಾರೆ. ನಾಯಕತ್ವ ವಿಚಾರ ಇರಲಿ, ಪುನಾರಚನೆ ಇರಲಿ ಹೈಕಮಾಂಡ್
ಸೋನ್ ಭದ್ರ: ಆಕ್ಸಿಡೆಂಟ್ ಆದ ಟ್ರಕ್ ನಲ್ಲಿ ಸಿಲುಕಿದ ಚಾಲಕ ಕಾಪಾಡಿ ಎಂದು ಕೂಗುತ್ತಿದ್ದರೂ ಸಹಾಯ ಮಾಡಲಾಗದೇ ಜನ ಅಸಹಾಯಕರಾಗಿ ನಿಂತಿದ್ದರೆ ಆತ ಕಣ್ಣೆದುರೇ ಬೆಂಕಿಗೆ ಆಹುತಿಯಾದ ಭೀಕರ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಸೋನ್ ಭದ್ರದ ರೇಣುಕೂಟ್ ನಲ್ಲಿ ಈ ಘಟನೆ ನಡೆದಿದೆ. ಅಪಘಾತವಾದಾಗ ಸಾವು ನೋವುಗಳಾಗುವುದು ಸಹಜ. ಆದರೆ ಇಲ್ಲಿ ಸಾಕಷ್ಟು ಜನರಿದ್ದರೂ ಓರ್ವ ಚಾಲಕನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಇದಕ್ಕೆ ಕಾರಣವೂ ಇದೆ. ರೇಣುಕೂಟ್ ನಲ್ಲಿ ಎರಡು ಟ್ರಕ್ ಗಳ ನಡುವೆ ಭೀಕರ ಅಪಘಾತವಾಗಿತ್ತು. ಬೃಹತ್ ಗಾತ್ರದ ಟ್ರಕ್ ಗಳೆರಡು ಎದುರು ಬದರಾಗಿ ಢಿಕ್ಕಿ ಹೊಡೆದಿದ್ದವು.
ಬೆಂಗಳೂರು: ಮಂತ್ರಿಗಿರಿಗಾಗಿ ಬೇಡಿಕೆಯಿಟ್ಟಿರುವ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದು ಮೀಡಿಯಾ ನಿಮ್ಮ ಭವಿಷ್ಯ ಅಲ್ಲ, ಪಾರ್ಟಿ ನಿಮ್ಮ ಭವಿಷ್ಯ ಎಂದಿದ್ದಾರೆ. ಬೈ ಎಲೆಕ್ಷನ್ ಮುಕ್ತಾಯವಾಗುತ್ತಿದ್ದಂತೇ ಈಗ ಕರ್ನಾಟಕ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿವೆ. ಮತ್ತೆ ಸಂಪುಟ ಪುನರಾರಚನೆ ವಿಚಾರ ಸದ್ದು ಮಾಡುತ್ತಿವೆ. ಕೆಲವು ಶಾಸಕರು ಮಂತ್ರಿಗಿರಿಗಾಗಿ ದೆಹಲಿಗೆ ತೆರಳುವ ಸಿದ್ಧತೆಯಲ್ಲಿದ್ದಾರೆ. ಇನ್ನು ಕೆಲವರು ಈ ಬಗ್ಗೆ ಬಹಿರಂಗವಾಗಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡುತ್ತಿದ್ದಾರೆ. ಇದು ಡಿಕೆ ಶಿವಕುಮಾರ್ ಸಿಟ್ಟಿಗೆ ಕಾರಣವಾಗಿದೆ.