ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ನಡೆಯುತ್ತಿದ್ದ ಅಧಿಕಾರ ಹಂಚಿಕೆ ಫೈಟ್ ಈಗ ಮತ್ತೊಂದು ಹಂತಕ್ಕೆ ಹೋಗಿದೆ. ಡಿಕೆಶಿ ಟ್ವೀಟ್ ಗೆ ಪ್ರತಿಯಾಗಿ ಈಗ ಸಿದ್ದರಾಮಯ್ಯ ಹೊಸ ಟ್ವೀಟ್ ಮಾಡಿದ್ದಾರೆ. ಇಂದು ಬೆಳಿಗ್ಗೆಯೇ ಡಿಸಿಎಂ ಡಿಕೆ ಶಿವಕುಮಾರ್ ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ಇದು ಸಿದ್ದರಾಮಯ್ಯ ಬಗ್ಗೆಯೇ ಪರೋಕ್ಷವಾಗಿ ಕುಟುಕಿರಬಹುದೇ ಎಂದು ಹಲವರು ವಿಶ್ಲೇಷಿಸಿದ್ದರು. ಇದರ ಬೆನ್ನಲ್ಲೇ ಇದೀಗ ಸಂಜೆ ವೇಳೆಗೆ ಸಿಎಂ ಸಿದ್ದರಾಮಯ್ಯ ಕೂಡಾ ಸೋಷಿಯಲ್ ಮೀಡಿಯಾದಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದು ಇದು ಡಿಕೆಶಿಗೆ ಕೊಟ್ಟ ಕೌಂಟರ್ ಇರಬಹುದೇ ಎಂದು ವಿಶ್ಲೇಷಿಸಲಾಗುತ್ತಿದೆ.

ಭಗವಾನ್ ಕೃಷ್ಣನ ಕುರಿತಾದ ಬಾಲ ಮುಕುಂದಾಷ್ಟಕಂ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ. ಇದರಿಂದ ಅವರಿಗೆ ಏಕಾಗ್ರತೆ, ಆರೋಗ್ಯ, ಯಶಸ್ಸು ಎಲ್ಲವೂ ವೃದ್ಧಿಯಾಗುತ್ತದೆ. ಕನ್ನಡದಲ್ಲಿ ಇಲ್ಲಿದೆ.ಕರಾರವಿಂದೇನ ಪದಾರವಿಂದಂ ಮುಖಾರವಿಂದೇ ವಿನಿವೇಶಯಂತಮ್ ।ವಟಸ್ಯ ಪತ್ರಸ್ಯ ಪುಟೇ ಶಯಾನಂ ಬಾಲಂ ಮುಕುಂದಂ ಮನಸಾ ಸ್ಮರಾಮಿ ॥ 1 ॥ ಸಂಹೃತ್ಯ ಲೋಕಾನ್ವಟಪತ್ರಮಧ್ಯೇ ಶಯಾನಮಾದ್ಯಂತವಿಹೀನರೂಪಮ್ ।ಸರ್ವೇಶ್ವರಂ ಸರ್ವಹಿತಾವತಾರಂ ಬಾಲಂ ಮುಕುಂದಂ ಮನಸಾ ಸ್ಮರಾಮಿ ॥ 2 ॥ ಇಂದೀವರಶ್ಯಾಮಲಕೋಮಲಾಂಗಂ ಇಂದ್ರಾದಿದೇವಾರ್ಚಿತಪಾದಪದ್ಮಮ್ ।ಸಂತಾನಕಲ್ಪದ್ರುಮಮಾಶ್ರಿತಾನಾಂ ಬಾಲಂ ಮುಕುಂದಂ ಮನಸಾ ಸ್ಮರಾಮಿ ॥ 3 ॥ ಲಂಬಾಲಕಂ ಲಂಬಿತಹಾರಯಷ್ಟಿಂ ಶೃಂಗಾರಲೀಲಾಂಕಿತದಂತಪಂಕ್ತಿಮ್ ।ಬಿಂಬಾಧರಂ ಚಾರುವಿಶಾಲನೇತ್ರಂ ಬಾಲಂ ಮುಕುಂದಂ ಮನಸಾ ಸ್ಮರಾಮಿ ॥ 4 ॥

ಬೆಂಗಳೂರು: ಕರ್ನಾಟಕದ ಪ್ರಸಿದ್ಧ ಬ್ರ್ಯಾಂಡ್‌ ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಈ ಜಾಲದ ಕಿಂಗ್‌ ಪಿನ್‌ ದಂಪತಿ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಪ್ರಮುಖ ಆರೋಪಿಗಳಾದ ಶಿವಕುಮಾರ್‌ ಮತ್ತು ರಮ್ಯ ಎಂಬಾಕೆಯನ್ನು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತ ದಂಪತಿ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಒಡೆತನದ ನಂದಿನಿ ಹೆಸರಿನಲ್ಲಿ ನಕಲಿ ತುಪ್ಪವನ್ನು ತಯಾರಿಸುವ ಘಟಕವನ್ನು ಹೊಂದಿದ್ದಾರೆ.ಸೆಂಟ್ರಲ್‌ ಕ್ರೈಂ ಬ್ರ್ಯಾಂಚ್‌ ಪೊಲೀಸರು ಬುಧವಾರ ನಕಲಿ ತುಪ್ಪ ತಯಾರಿಕಾ ಘಟಕದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಅಪಾರ ಪ್ರಮಾಣದ ನಕಲಿ ನಂದಿನಿ ತುಪ್ಪ, ಅತ್ಯಾಧುನಿಕ ಯಂತ್ರಗಳನ್ನು ಬಳಸಿಕೊಂಡಿರುವುದು ಪತ್ತೆಯಾಗಿತ್ತು.

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್‌ ನಾಯಕರ ಸ್ವಯಂಕೃತ ಅಪರಾಧದಿಂದ ರಾಜ್ಯದಲ್ಲಿ ಸರ್ಕಾರ ಬಿದ್ದು ಹೋದರೆ ಬಿಜೆಪಿ ವರಿಷ್ಠರು ನೀಡುವ ಆದೇಶ ಜಾರಿಗೊಳಿಸುತ್ತೇವೆ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಆಗಬಾರದು, ಏನಾದರೂ ಮಾಡಿ ಎಂದು ಪಕ್ಷದ ವರಿಷ್ಠರು ಸೂಚನೆ ನೀಡಿದರೆ ನಾವು ಸರ್ಕಾರ ರಚನೆಗೆ ಪ್ರಯತ್ನಿಸುತ್ತೇವೆ ಎಂದರು.ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಸತ್ತು ಹೋಗಿದೆ. ರಾಜ್ಯದ ಜನರು ಕಂಗಾಲಾಗಿದ್ದಾರೆ. ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವುದು ಸೇರಿದಂತೆ ರೈತರ ಹಲವು ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕೆ ಸರ್ಕಾರ ಮುಂದಾಗುತ್ತಿಲ್ಲ. ಆದ್ದರಿಂದ ಈ ಸರ್ಕಾರ ಇರಬಾರದು ಎಂದು ಹೇಳಿದರು.

ಗುಜರಾತ್: ಮೀನುಗಾರಿಕಾ ವಲಯವು ಅಭೂತಪೂರ್ವ ಬೆಳವಣಿಗೆಯನ್ನು ಅನುಭವಿಸುತ್ತಿದೆ, ಇದು ಉತ್ಪಾದನೆ, ವಿಸ್ತರಣೆಯ ರಫ್ತು ಮತ್ತು ಗಮನಾರ್ಹ ರಾಜ್ಯ ಬೆಂಬಲಿತ ಹೂಡಿಕೆಯಿಂದ ಗುರುತಿಸಲ್ಪಟ್ಟಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ ಗುಜರಾತ್‌ನಿಂದ ಮೀನು ರಫ್ತು ಮೌಲ್ಯವು 2001 ರಲ್ಲಿ 625 ಕೋಟಿ ರೂಪಾಯಿಗಳಿಂದ 2023-24 ರಲ್ಲಿ 6,000 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ, ಇದು ಭಾರತದ ಸಮುದ್ರ ಆರ್ಥಿಕತೆಯಲ್ಲಿ ರಾಜ್ಯದ ಹೆಚ್ಚುತ್ತಿರುವ ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತದೆ, ಇದು ಸುಮಾರು ಹತ್ತು ಪಟ್ಟು ಹೆಚ್ಚಳವಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಸರಾಸರಿ 8.56 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯನ್ನು ಸಾಧಿಸಿದೆ.'ಭಾರತದ ಸಮುದ್ರ ಆರ್ಥಿಕತೆಯಲ್ಲಿ ರಾಜ್ಯದ ಹೆಚ್ಚುತ್ತಿರುವ ಪ್ರಾಮುಖ್ಯತೆಯನ್ನು ಒತ್ತಿಹೇಳುವ ಸುಮಾರು ಹತ್ತು ಪಟ್ಟು