ಬೆಂಗಳೂರು: ಕಳೆದ ನವೆಂಬರ್ನಲ್ಲಿ ಬಂಡೀಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಬಗ್ಗೆ ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಅವರು ಸಮರ್ಥಿಸಿಕೊಂಡಿದ್ದಾರೆ. ಇಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಖಂಡ್ರೆ, ರಾಜ್ಯ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿ, ವನ್ಯಜೀವಿಗಳ ಸರಣಿ ದಾಳಿಯ ನಂತರ ಮಾನವ ಜೀವಗಳನ್ನು ರಕ್ಷಿಸಲು ಈ ಕ್ರಮ ತೆಗೆದುಕೊಳ್ಳಲಾಗಿತ್ತು ಎಂದರು.ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು, ಸಫಾರಿಗಳ ಅಮಾನತುಗೊಳಿಸುವಿಕೆಯಿಂದ 4,000ಕ್ಕೂ ಹೆಚ್ಚು ಜನ ತಮ್ಮ
ಬೆಂಗಳೂರು: ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ.ಅದರಂತೆ ಶುಕ್ರವಾರ ಪರಪ್ಪನ ಅಗ್ರಹಾರ ಜೈಲಿನಿಂದ 14 ಮಂದಿ, ಮೈಸೂರು 2, ಬೆಳಗಾವಿ 2, ಕಲಬುರಗಿ 2, ಶಿವಮೊಗ್ಗ 1, ವಿಜಯಪುರ 5, ಬಳ್ಳಾರಿ 3, ಧಾರವಾಡ 1, ಶಿವಮೊಗ್ಗ ಮಹಿಳಾ ಬ್ಯಾರೆಕ್ನಿಂದ ಒಬ್ಬರನ್ನು ಬಿಡುಗಡೆಗೆ ಆದೇಶ ಮಾಡಲಾಗಿದೆ. 54 ಜೀವಾವಧಿ ಶಿಕ್ಷಾ ಬಂಧಿಗಳ ವ್ಯಕ್ತಿತ್ವ & ನಡತೆ ಪರಿಶೀಲಿಸಿ 31 ಜನ ಕೈದಿಗಳ ಬಿಡುಗಡೆಗೆ ಆದೇಶಿಸಲಾಗಿದೆ.
ಬೆಂಗಳೂರು: ಎಲ್ಪಿಜಿ ಸಿಲಿಂಡರ್ ಕೊರತೆ ಸಂಬಂದ ರಾಜ್ಯದ ಸಂಸದರು ನ್ಯಾಯ ಒದಗಿಸಲಿ ಎಂದು ಡಿಕೆ ಶಿವಕುಮಾರ್ ಹೇಳಿದರು. ಈ ಸಂಬಂಧ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಲ್ಪಿಜಿ ಸಿಲಿಂಡರ್ ಕೊರತೆಯಿಂದ ಸಾರ್ವಜನಿಕರು ತೊಂದರೆ ಎದುರಿಸುತ್ತಿದ್ದಾರೆ. ಈ ವಿಚಾರವಾಗಿ ಬಿಜೆಪಿಯ ಯಾವುದೇ ಸಂಸದರು ಬಾಯಿ ಬಿಡುತ್ತಿಲ್ಲ ಎಂದರು.ಇಂಧನ ಬೆಲೆ ಏರಿಕೆಯಿಂದ ಜನರು ಪರದಾಡುತ್ತಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಏನೂ ಮಾಡಲು ಆಗುವುದಿಲ್ಲ. ಕೇಂದ್
ಕನ್ನಡದ ಹಿರಿಯ ಪತ್ರಕರ್ತ ಕೆ.ಜೆ.ಕುಮಾರ್ ನಿಧನಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಭಾವುಕ ಸಂದೇಶವನ್ನು ಬರೆದುಕೊಂಡು ಹಂಚಿಕೊಂಡಿದ್ದಾರೆ. ತಮ್ಮ ಬಣ್ಣದ ಬದುಕಿನ ಆರಂಭಿಕ ಪ್ರಯಾಣದದಲ್ಲಿ ಕುಮಾರ್ ಅವರ ಬೆಂಬಲವನ್ನು ನೆನಪಿಸಿಕೊಂಡು ರಜನಿಕಾಂತ್ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಕನ್ನಡದಲ್ಲಿ ತಮ್ಮ ಗೌರವವನ್ನು ಪೋಸ್ಟ್ ಮಾಡಿದ್ದಾರೆ.ಕುಮಾರ್ ಅವರು 74 ನೇ ವಯಸ್ಸಿನಲ್ಲಿ ತೀವ್ರ ಹೃದಯಾಘಾತದಿಂದ ಬುಧವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರ
ಡಿಸೆಂಬರ್ 4, 2022 ರಂದು ಉದ್ಯಮಿ ಸೊಹೈಲ್ರನ್ನು ಕೈಹಿಡಿದ ನಟಿ ಹನ್ಸಿಕಾ ಮೋಟ್ವಾನಿ ಅವರು ದಾಂಪತ್ಯ ಜೀವನದಲ್ಲಿ ಬಿರುಕು ಹಿನ್ನೆಲೆ ಇದೀಗ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದಾರೆ.ಕಳೆದ ವರ್ಷ ಆಗಸ್ಟ್ನಲ್ಲಿ ಹನ್ಸಿಕಾ ತನ್ನ ಇನ್ಸ್ಟಾಗ್ರಾಮ್ ಖಾತೆಯಿಂದ ತನ್ನ ಮದುವೆಯ ಫೋಟೋಗಳನ್ನು ಅಳಿಸಿಹಾಕಿದ್ದರು. ಇದು ಅವರ ಮದುವೆಯಲ್ಲಿ ತೊಂದರೆಯ ಬಗ್ಗೆ ವದಂತಿಗಳನ್ನು ಹುಟ್ಟುಹಾಕಿತು. ದಂಪತಿಗಳು ಸ್ವಲ್ಪ ಸಮಯದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ವರದಿಗಳು ಸೂಚಿಸಿವೆ.
ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣ ಆರೋಪಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ್ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ವಜಾ ಬಳಿಕ ಅವರನ್ನು ಬಂಧಿಸಲಾಗಿತ್ತು. ಫೆ.12 ರಂದು ಅಹಮದಾಬಾದ್ನಿಂದ ಬೆಂಗಳೂರಿಗೆ ಆಗಮಿಸಿದ್ದ ಬೈರತಿ ಬಸವರಾಜ್ ಅವರನ್ನು ಪೊಲೀಸರು ಬಂಧಿಸಿದ್ದರು.
ನವದೆಹಲಿ: ಹಾರ್ದಿಕ್ ಪಾಂಡ್ಯ ಅವರಿಗೆ ಭಾರತ ಧ್ವಜಕ್ಕೆ ಅವಮಾನ ಮಾಡಿದ್ದಾರೆಂದು ಪುಣೆಯ ವಕೀಲ ವಾಜಿದ್ ಖಾನ್ ಅವರು ಆರೋಪ ಮಾಡಿದ್ದಾರೆ. ಧ್ವಜವನ್ನು ಹೆಗಲ ಮೇಲೆ ಇಟ್ಟುಕೊಂಡು ಗೆಳತಿ ಜತೆಗೆ ಅನುಚಿತ ಸನ್ನೆಗಳನ್ನು ಮಾಡುವ ಮೂಲಕ ಅಗೌರವ ತೋರಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪುಣೆಯ ವಕೀಲ ವಾಜಿದ್ ಖಾನ್ ಆರೋಪ ಮಾಡಿದ್ದಾರೆ.T20 ವಿಶ್ವಕಪ್ ಫೈನಲ್ನಲ್ಲಿ ನ್ಯೂಜಿಲೆಂಡ್ ರಾಷ್ಟ್ರೀಯ ಕ್ರಿಕೆಟ್ ತಂಡದ ವಿರುದ್ಧ ಐತಿಹಾಸಿಕ ವಿಜಯದ ನಂತರ, ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಜರಿದ್ದ ಆಟಗಾರರ ಕುಟುಂಬಗಳು ಸಹ ಮೈದಾನಕ್ಕೆ ಬಂದವು.
ಬೆಂಗಳೂರು: ರಕ್ಷಿತ್ ಶೆಟ್ಟಿ ಜತೆಗಿನ ಮದುವೆ ಮುರಿದು ಬೀಳಲು ಕಾರಣ ಹೇಳಿರುವ ಬಗ್ಗೆ ರಶ್ಮಿಕಾ ಮಂದಣ್ಣರ ತಾಯಿ ಮಾತನಾಡಿದ್ದು ಎನ್ನಲಾದ ಆಡಿಯೋ ಬಗ್ಗೆ ನಟಿ ಗರಂ ಆಗಿದ್ದಾರೆ. ಮಾನಹಾನಿಕರ ಅಥವಾ ಗೌಪ್ಯತೆಯನ್ನು ಉಲ್ಲಂಘಿಸುವ ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ "ವ್ಯಕ್ತಿಗಳು, ಪ್ರಭಾವಿಗಳು ಮತ್ತು ವೇದಿಕೆಗಳ" ಮೇಲೆ ರಶ್ಮಿಕಾ ಮಂದಣ್ಣ ವಾಗ್ದಾಳಿ ನಡೆಸಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಈ ಸಂಬಂಧ ಆಕ್ರೋಶ ಹೊರಹಾಕಿ ಬರೆದುಕೊಂಡಿದ್ದಾರೆ.
ನವದೆಹಲಿ: ಭಾರತದ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಕರ್ನಲ್ ಸಿಕೆ ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ಸ್ವೀಕರಿಸುವ ಸಾಧ್ಯತೆಯಿದೆ.ಆದರೆ ಮಾರ್ಚ್ 15 ರಂದು ರಾಷ್ಟ್ರ ರಾಜಧಾನಿಯಲ್ಲಿ ಬಿಸಿಸಿಐ ಪ್ರಶಸ್ತಿ ಪ್ರದಾನ ನಡೆಯುವಾಗ ಟೆಸ್ಟ್ ಮತ್ತು ಏಕದಿನ ತಂಡದ ನಾಯಕ ಶುಭಮನ್ ಗಿಲ್ ಅವರನ್ನು ವರ್ಷದ ಪುರುಷರ ಕ್ರಿಕೆಟಿಗ ಎಂದು ಹೆಸರಿಸಬಹುದು.‘ನಮನ್’ ಹೆಸರಿನ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಇತ್ತೀಚಿನ ಪುರುಷರ T20 ವಿಶ್ವಕಪ್ ವಿಜೇತ ತಂಡ, 2025 ಪುರುಷರ
ಮಡಿಕೇರಿ: ಈಚೆಗೆ ಕೊಡಗಿನಲ್ಲಿ ಕಾಡಾನೆ ದಾಳಿ ಹೆಚ್ಚುತ್ತಿರುವ ಬೆನ್ನಲ್ಲೇ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪ ಹೈಸ್ಕೂಲ್ ಪೈಸಾರಿಯಲ್ಲಿ ಕಾಫಿ ತೋಟಕ್ಕೆ ತೆರಳಿದ್ದ ಕಾಫಿ ಬೆಳೆಗಾರನ ಮೇಲೆ ಆನೆ ದಾಳಿ ನಡೆದಿದೆ.ಆನೆ ದಾಳಿಗೆ ರೈತ ಗಣಪತಿ(49) ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಡಹಗಲೇ ಕಾಫಿ ತೋಟದಲ್ಲಿ ಕಾಡಾನೆ ಕಾಣಿಸಿಕೊಂಡ ಪರಿಣಾಮ ಸ್ಥಳಕ್ಕೆ ಪೊಲೀಸರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಹಸಿದವರಿಗೆ ಅತಿ ಕಡಿಮೆ ಬೆಲೆಯಲ್ಲಿ ಊಟ ಹಾಗೂ ತಿಂಡಿ ಒದಗಿಸುತ್ತಿದ್ದ ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಅನ್ನು ಇದೀಗ ಬಂದ್ ಮಾಡಲಾಗಿದೆ. ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆ ಇದೀಗ ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ಹೇಳಲಾಗಿದೆ. ಈ ಸಂಬಂಧ ಜೆಡಿಎಸ್ ವಿಧಾನ ಪರಿಷತ್ ಸದಸ್ಯರಾದ ಟಿಎ ಶರವಣ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ
ನವದೆಹಲಿ: ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ನಡುವೆಯೂ ಭಾರತದ ತೈಲ ಟ್ಯಾಂಕರ್ ಮುಂಬೈಗೆ ಬಂದಿದೆ. ಇದು ವಿಶ್ವಮಟ್ಟದಲ್ಲಿ ದೊರೆದ ದೊಡ್ಡ ರಾಜತಾಂತ್ರಿಕ ಗೆಲುವು ಎಂದು ಬಣ್ಣಿಸಲಾಗುತ್ತಿದೆ. ಕಂಟೈನರ್ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯ ಮೂಲಕ ಸಂಚರಿಸಲು ಇರಾನ್ ಅನುಮತಿ ನೀಡಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಾಗ್ಚಿ ನಡುವಿನ ದೂರವಾಣಿ ಮಾತುಕತೆಯ ನಂತರ ಅನುಮತಿ ಸಿಕ್ಕಿದೆ. ಇದಾದ ನಂತರ ಭಾರತೀಯ ಟ್ಯಾಂಕರ್ಗಳು ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತವಾಗಿ ಹಾದುಹೋಗುತ್ತಿವೆ ಎಂದು ವರದಿಯಾಗಿದೆ. ಈ ಮಧ್ಯೆ ಹಾರ್ಮುಜ್ ಜಲಸಂಧಿಯಿಂದ ಕಚ್ಚಾ ತೈಲ ಹೊತ್ತ ಹಡಗು ಭಾರತಕ್ಕೆ ಆಗಮಿಸಿದೆ. ಸೌದಿ ಅರೇಬಿಯಾದಿಂದ ಕಚ್ಚಾ ತೈಲವನ್ನು ಹೊತ್ತ ಲೈಬೀರಿಯನ್ ಧ್ವಜದ ಟ್ಯಾಂಕರ್ ಮುಂಬೈ ಬಂದರಿಗೆ ಬಂದಿದೆ.
ತನ್ನ ಪುಟಾಣಿ ಮಗುವನ್ನು ಸ್ಕೂಟಿ ಡಿಕ್ಕಿಯಲ್ಲಿಟ್ಟುಕೊಂಡು ಈ ಮಹಾತಾಯಿ ಸ್ಕೂಟಿ ಚಲಾಯಿಸಿದ್ದಾಳೆ. ಇಂತಹದ್ದೊಂದು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ತಾಯಿ ಬಗ್ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಕ್ಕಳನ್ನು ಸ್ಕೂಟಿಯಲ್ಲಿ ಏಕಾಂಗಿಯಾಗಿ ಕರೆದುಕೊಂಡು ಹೋಗುವುದು ಸುಲಭವಲ್ಲ. ಒಂದು ವೇಳೆ ಕರೆದುಕೊಂಡು ಹೋಗುವುದಿದ್ದರೂ ಮಕ್ಕಳ ಸುರಕ್ಷತೆ ಬಗ್ಗೆ ಹೆಚ್ಚು ಗಮನ ಕೊಡಬೇಕಾಗಿರುವುದು ಪೋಷಕರ ಕರ್ತವ್ಯ. ಆದರೆ ಈ ಹೆಣ್ಣುಮಗಳು ಅದನ್ನು ಮರೆತಿದ್ದಾಳೆ. ಓರ್ವ ಮಹಿಳೆ ತನ್ನ ಮಗುವನ್ನು ಎತ್ತಿಕೊಂಡು ಸ್ಕೂಟಿ ಚಲಾಯಿಸಲು ಬರುತ್ತಾಳೆ. ಆ ಮಗುವಿಗೆ ಇನ್ನೂ ಒಂದು ವರ್ಷವೂ ತುಂಬಿದಂತಿಲ್ಲ.
ನವದೆಹಲಿ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವನ್ನು ಬುಧವಾರ ಧ್ವನಿ ಮತದ ಮೂಲಕ ಸೋಲಿಸಲಾಯಿತು. ಇದರಿಂದ ಪ್ರತಿಪಕ್ಷಗಳಿಗೆ ತೀವ್ರ ಮುಖಭಂಗವಾಗಿದೆ.ಇದರಿಂದ ಆತ್ಮವಿಶ್ವಾಸ ವೃದ್ಧಿಸಿಕೊಂಡಿರುವ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ವಿಪಕ್ಷಗಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಯಾರು ಒಪ್ಪಿದರೂ, ಒಪ್ಪದೇ ಹೋದರೂ ನಿಯಮಗಳ ಪ್ರಕಾರವೇ ಲೋಕಸಭೆ ಕಾರ್ಯನಿರ್ವಹಿಸಲಿದೆ. ಭವಿಷ್ಯದಲ್ಲೂ ಹಾಗೆಯೇ ಮುಂದುವರೆಯುತ್ತದೆ ಎಂದುಹೇಳಿದ್ದಾರೆ.ಲೋಕಸಭೆಯ ಕಾರ್ಯವೈಖರಿ ನಿಯಮಾನುಸಾರ ನಡೆಯುತ್ತಿದೆ. ಮುಂದೆಯೂ ಇದೇ ರೀತಿಯಲ್ಲಿ ನಡೆಯಲಿದೆ. ನಾನು ನನ್ನ ಕರ್ತವ್ಯವನ್ನು ಪೂರ್ಣ ನಿಷ್ಠೆ, ನ್ಯಾಯಪೂರ್ಣತೆ ಮತ್ತು ಪಾರದರ್ಶಕತೆಯಿಂದ ನಿರ್ವಹಿಸುತ್ತೇನೆಂದು ತಿಳಿಸಿದರು.
ನವದೆಹಲಿ: ನ್ಯಾಷನಲ್ ಕಾನ್ಫರೆನ್ಸ್ನ ಮುಖಂಡ ಫಾರೂಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಕೊಲೆ ಯತ್ನ ನಡೆದಿದೆ. ಅದರ ಬೆನ್ನಲ್ಲೇ ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಗಿಬಿದ್ದಿದ್ಧರೆ. ಕಾಶ್ಮೀರದ ಜನರು ನಿಮ್ಮ ಆಡಳಿತದಲ್ಲಿ ಸುರಕ್ಷಿತವಾಗಿಲ್ಲ ಎಂದು ರಾಜ್ಯ ಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ರಾಜ್ಯಸಭೆಯಲ್ಲಿ ಗುರುವಾರ ಆರೋಪಿಸಿದ್ದಾರೆ. ಮದುವೆ ಸಮಾರಂಭಕ್ಕೆ ತೆರಳಿದ್ದ ವೇಳೆ ನ್ಯಾಷನಲ್ ಕಾನ್ಫರೆನ್ಸ್(ಎನ್ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹಾಗೂ ಜಮ್ಮು–ಕಾಶ್ಮೀರದ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರ ಮೇಲೆ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಲು ಯತ್ನಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.
ನವದೆಹಲಿ: ಸಂಸತ್ ಭವನದ ಮುಂಭಾಗ ವಿಪಕ್ಷ ಸದಸ್ಯರೊಂದಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಚಹಾ, ಬಿಸ್ಕತ್ ಸೇವಿಸುತ್ತಾ ದೇಶದಲ್ಲಿ ಎಲ್ ಪಿಜಿ ಸಿಲಿಂಡರ್ ಅಭಾವದ ವಿರುದ್ದ ಪ್ರತಿಭಟನೆ ನಡೆಸಿದರು. ಇಂದು ಸಂಸತ್ ಕಲಾಪಕ್ಕೆ ಮುನ್ನ ಎಲ್ ಪಿಜಿ ಅಭಾವ ಸೃಷ್ಟಿಯಾಗಿರುವುದರ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ರಾಹುಲ್ ಗಾಂಧಿ ಬಳಿಕ ಸಂಸತ್ ಭವನದ ಹೊರಗೆ ವಿಪಕ್ಷ ಸದಸ್ಯರೊಂದಿಗೆ ಧರಣಿ ಕೂತಿದ್ದಾರೆ. ಮುಂದೆ ಎಲ್ ಪಿಜಿ ಅಭಾವದಿಂದ ಮತ್ತಷ್ಟು ಸಮಸ್ಯೆಗಳು ಎದುರಾಗಲಿವೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.
ಮುಂಬೈ: ವಿಶ್ವ ಶ್ರೇಷ್ಠ ಬೌಲರ್ ಎನಿಸಿದ ಜಸ್ಪ್ರೀತ್ ಬೂಮ್ರಾ ಅವರು ತನ್ನ ವಿಭಿನ್ನ ಬೌಲಿಂಗ್ ಶೈಲಿಯಿಂದಲೇ ಎಲ್ಲರ ಗಮನ ಸೆಳೆದವರು. ಹಲವು ಟೂರ್ನಿಗಳಲ್ಲಿ ಮಿಂಚಿರುವ ಅವರು ಟಿ20 ವಿಶ್ವಕಪ್ನ ಫೈನಲ್ನಲ್ಲಿ ನಾಲ್ಕು ವಿಕೆಟ್ ಪಡೆದು ಮಿಂಚಿದ್ದರು.ತಾರಾ ಬೌಲರ್ ಬೂಮ್ರಾ ಅವರಿಗೆ ನಿಧಾನಗತಿಯ ಎಸೆತಗಳನ್ನು ಬೌಲಿಂಗ್ ಮಾಡಲು ಹೇಳಿಕೊಟ್ಟಿರುವುದು ನಾನೇ ಎಂದು ಪಾಕಿಸ್ತಾನ ಮೂಲದ ಯುಎಇ ಬೌಲರ್ ಜಹೂರ್ ಖಾನ್ ಶಾಕಿಂಗ್ ಮಾಹಿತಿ ಹೊರಹಾಕಿದ್ದಾರೆ. ಈ ಕುರಿತ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ಬೆಂಗಳೂರು: ಮಾನ್ಯ ಮುಖ್ಯಮಂತ್ರಿಗಳು ಮಂಡಿಸಿದ 2026-27ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.ವಿಧಾನಸಭೆಯಲ್ಲಿ ಇಂದು ಸಂಬಂಧ ಮಾತನಾಡಿದ ಅವರು, ಈ ಬಜೆಟ್ ಗಮನಿಸಿದರೆ ಈ ಸರಕಾರದ ಆರ್ಥಿಕ- ಬೌದ್ಧಿಕ ದಿವಾಳಿತನವು ಕೂಡ ಪ್ರದರ್ಶನಗೊಂಡಿದೆ. ಹಣಕಾಸಿನ ಸಚಿವರಾದ ಮುಖ್ಯಮಂತ್ರಿಗಳು ತನ್ನ ರಾಜಕೀಯ ಸಂಧ್ಯಾಕಾಲದಲ್ಲಿರುವ ಈ ಸಂದರ್ಭದಲ್ಲಿ 17ನೇ ಬಜೆಟ್ ಮಂಡಿಸಿದ್ದಾರೆ. ಅವರಿಗೆ ಒಂದು ಸುವರ್ಣಾವಕಾಶ ಇತ್ತು. ತಮ್ಮ ರಾಜಕೀಯ ಜೀವನದ ಸುದೀರ್ಘ ಅನುಭವದ ಆಧಾರದ ಮೇಲೆ ರಾಜ್ಯದ ಸಂಕಷ್ಟಗಳಿಗೆ ನಾಡಿನ ಜನರ ಅಪೇಕ್ಷೆಗೆ ತಕ್ಕಂತೆ ಉತ್ತರ ಕಂಡುಕೊಳ್ಳುವ ಅವಕಾಶ ಇತ್ತು.
ನವದೆಹಲಿ: ದೇಶದ ಜನರಿಗೆ ಎಲ್ ಪಿಜಿ ಅಭಾವದ ಬಗ್ಗೆ ಭಯ ಬೇಡ ಎಂದು ಹೇಳುತ್ತಾರೆ, ಆದರೆ ತಾವೇ ಬೇರೊಂದು ಕಾರಣಕ್ಕೆ ಹೆದರಿದ್ದಾರೆ ಎಂದು ಪ್ರಧಾನಿ ಮೋದಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಟಾಂಗ್ ಕೊಟ್ಟಿದ್ದಾರೆ. ಲೋಕಸಭೆ ಕಲಾಪಕ್ಕೆ ಮುನ್ನ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೋದಿಗೆ ಎಪ್ ಸ್ಟೀನ್, ಅದಾನಿ ಮೇಲಿರುವ ಕೇಸ್ ನ ಭಯ ಎಂದು ವ್ಯಂಗ್ಯ ಮಾಡಿದ್ದಾರೆ. ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ಸನ್ನಿವೇಶದಿಂದ ದೇಶದಾದ್ಯಂತ ಎಲ್ ಪಿಜಿ ಸಿಲಿಂಡರ್ ಅಭಾವ ಎದುರಾಗಿದೆ.
ಸ್ಕೂಟಿಗೆ ಡಿಕ್ಕಿ ಹೊಡೆದು ಚೈನು ಕದ್ದು ಕಳ್ಳನೊಬ್ಬ ಓಡಲೆತ್ನಸಿದಾಗ ಆತನನ್ನು ಬೆನ್ನಟ್ಟಿ ನೆರೆಮನೆಯ ಯುವಕ ಮಾಡಿದ ಕೆಲಸಕ್ಕೆ ನೀವು ಶಹಬ್ಬಾಶ್ ಹೇಳಲೇಬೇಕು. ಇಲ್ಲಿದೆ ಆ ವೈರಲ್ ವಿಡಿಯೋ.ಸಾಮಾನ್ಯವಾಗಿ ಬೈಕ್ ನಲ್ಲಿ ಬರುವ ಕಳ್ಳರು ರಸ್ತೆ ಪಕ್ಕದಲ್ಲಿ ಓಡಾಡುವ ಮಹಿಳೆಯರ ಸರಗಳ್ಳತನ ಮಾಡುವ ಸಾಕಷ್ಟು ಘಟನೆಗಳನ್ನು ನೋಡಿದ್ದೇವೆ. ಆದರೆ ಈ ಕಳ್ಳ ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯನ್ನೇ ಅಡ್ಡಗಟ್ಟಿ ಕಳ್ಳತನ ಮಾಡಿದ್ದಾನೆ. ಮಹಿಳೆಯೊಬ್ಬರು ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬೈಕ್ ನಲ್ಲಿ ಬರುವ ಕಳ್ಳ ಢಿಕ್ಕಿ ಹೊಡೆದು ಬೀಳಿಸುತ್ತಾನೆ.
ಬೆಂಗಳೂರು: ಪೊಲೀಸರಾಗಿ ಇಂಥಾ ಕೆಲಸ ಮಾಡಲು ನಾಚಿಕೆಯಾಗಲ್ವಾ ಎಂದು ಜನರೇ ಪ್ರಶ್ನೆ ಮಾಡುವಂತಹ ಕೆಲಸ ಮಾಡಿದ್ದಾರೆ ಉತ್ತರ ಪ್ರದೇಶದ ಈ ಪೊಲೀಸರು. ಇದು ನಡೆದಿರುವುದು ಉತ್ತರ ಪ್ರದೇಶದ ಅಮ್ರೋಹದಲ್ಲಿ. ನಮ್ಮಲ್ಲಿಯೂ ಬೀದಿ ವ್ಯಾಪಾರಿಗಳಿಂದ ಪೊಲೀಸರು ಸುಲಿಗೆ ಮಾಡುವ ಅನೇಕ ಘಟನೆಗಳನ್ನು ನೋಡಿದ್ದೇವೆ. ಕೆಲವು ಬಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಹಾಕಿಕೊಂಡು ಸಸ್ಪೆಂಡ್ ಆದ ಅಧಿಕಾರಿಗಳೂ ಇದ್ದಾರೆ. ಆದರೆ ಎಲ್ಲಾ ಪೊಲೀಸರೂ ಹೀಗೇ ಅಂತಲ್ಲ. ಆದರೆ ಕೆಲವರು ಪೊಲೀಸ್ ಪದವಿಗೇ ನಾಚಿಕೆಯಾಗುವಂತೆ ನಡೆದುಕೊಳ್ಳುತ್ತಾರೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ಈ ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ಭಾರೀ ಏರಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ನಿನ್ನೆ 1,66,165.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,66,060.00 ರೂ.ಗಳಷ್ಟಿದೆ.
ಟೆಹ್ರಾನ್: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧಕ್ಕೆ ಮಹತ್ವದ ಟ್ವಿಸ್ಟ್ ಸಿಕ್ಕಿದೆ. ನಾವು ಯುದ್ಧ ಕೊನೆಗೊಳಿಸಲು ರೆಡಿ ಎಂದು ಇರಾನ್ ಹೇಳಿದೆ. ಆದರೆ ಇದಕ್ಕೆ ಷರತ್ತೂ ವಿಧಿಸಿದೆ. ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕಾ ಜಂಟಿಯಾಗಿ ನಡೆಸುತ್ತಿರುವ ದಾಳಿಯಿಂದ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಯುದ್ಧದ ಪರಿಣಾಮ ಭಾರತ ಸೇರಿದಂತೆ ಜಗತ್ತಿನ ಬಹುತೇಕ ರಾಷ್ಟ್ರಗಳಿಗೆ ತಟ್ಟಿದೆ. ಈ ನಡುವೆ ಮೊನ್ನೆ ಡೊನಾಲ್ಡ್ ಟ್ರಂಪ್ ಯುದ್ಧ ಸದ್ಯದಲ್ಲೇ ಕೊನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಇದೀಗ ಇರಾನ್ ಇದಕ್ಕೆ ಪ್ರತ್ಯುತ್ತರ ನೀಡಿದ್ದು ಯುದ್ಧ ಕೊನೆಗೊಳಿಸಲು ನಾವು ರೆಡಿ, ಆದರೆ ಮೂರು ಷರತ್ತುಗಳನ್ನು ಒಪ್ಪಿಬೇಕು ಎಂದು ಬೇಡಿಕೆ ಮುಂದಿಟ್ಟಿದೆ.
ಬೆಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ಸನ್ನಿವೇಶದಿಂದಾಗಿ ಭಾರತದಲ್ಲಿ ಅಡುಗೆ ಅನಿಲ ಕೊರತೆ ಉಂಟಾಗಿದೆ. ಇದೀಗ ಇದೇ ವಿಚಾರವಾಗಿ ಬೆಂಗಳೂರಿನ ಹೋಟೆಲ್ ಒಂದು ವಿಶಿಷ್ಟವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಈಗ ಕಮರ್ಷಿಯಲ್ ಮತ್ತು ಗೃಹಬಳಕೆ ಸಿಲಿಂಡರ್ ಕೊರತೆ ಎದುರಾಗಿದೆ. ಸೂಕ್ತ ಪ್ರಮಾಣದಲ್ಲಿ ಎಲ್ ಪಿಜಿ ಪೂರೈಕೆಯಾಗದೇ ಬಹುತೇಕ ಹೋಟೆಲ್ ಗಳು ಎಂದಿನಂತೆ ಗ್ರಾಹಕರಿಗೆ ಆಹಾರ ತಯಾರಿಸಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣಕ್ಕೆ ಬೆಂಗಳೂರಿನ ಹೋಟೆಲ್ ಮಾಲಿಕರು ಸಂಕಷ್ಟಕ್ಕೀಡಾಗಿದ್ದಾರೆ. ಈ ನಿಟ್ಟಿನಲ್ಲಿ ಹೋಟೆಲ್ ಒಂದರಲ್ಲಿ ಮುಂಭಾಗದಲ್ಲಿಯೇ ಖಾಲಿ ಸಿಲಿಂಡರ್ ಗಳನ್ನು ಇಡಲಾಗಿದ್ದು ಇದರ ಮೇಲೆ ಎಲ್ ಪಿಜಿ ಇಲ್ಲ..
ಈ ಪೆಟ್ರೋಲ್ ಬಂಕ್ ಸಿಬ್ಬಂದಿಯದ್ದು ಎಂಥಾ ಧೈರ್ಯ ನೋಡಿ. ದೊಡ್ಡ ಅನಾಹುತವಾಗುತ್ತಿದ್ದ ವೇಳೆ ಕೂಲ್ ಆಗಿ ಪರಿಸ್ಥಿತಿ ನಿಭಾಯಿಸಿದ ವೈರಲ್ ವಿಡಿಯೋ ಇಲ್ಲಿದೆ ನೋಡಿ. ಕೆಲವೊಮ್ಮೆ ನಾವು ಅವಘಡಗಳಾದಾಗ ಆತಂಕ ಪಡುವುದರಿಂದಲೇ ಅನಾಹುತಗಳಾಗುತ್ತವೆ. ಆದರೆ ಆ ಸಮಯದಲ್ಲಿ ನಮ್ಮ ಸಮಯ ಪ್ರಜ್ಞೆ, ಧೈರ್ಯವೇ ನಮ್ಮನ್ನು ಉಳಿಸುತ್ತದೆ. ಅಂತಹದ್ದೇ ಒಂದು ಘಟನೆಯ ವಿಡಿಯೋವೊಂದು ಇಲ್ಲಿದೆ ನೋಡಿ. ಪೆಟ್ರೋಲ್ ಬಂಕ್ ಒಂದರಲ್ಲಿ ಓರ್ವ ಬೈಕ್ ಸವಾರ ಪೆಟ್ರೋಲ್ ತುಂಬಿಸಲು ಬರುತ್ತಾನೆ. ಪೆಟ್ರೋಲ್ ತುಂಬುತ್ತಿರುವಾಗಲೇ ಇದ್ದಕ್ಕಿದ್ದಂತೆ ಬೈಕ್ ನ ಟ್ಯಾಂಕ್ ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತದೆ.
ತಿರುವನಂತಪುರಂ: ಕುಂಭಮೇಳ ಖ್ಯಾತಿಯ ಮೊನಾಲಿಸಾ ಮದುವೆ ಆಕೆಯ ಗೆಳೆಯ ಫರ್ಮಾನ್ ಖಾನ್ ಜೊತೆ ನಡೆದಿದೆ. ಇದಕ್ಕೆ ನೆಟ್ಟಿಗರು ಕಾಮೆಂಟ್ ಮಾಡಿದ್ದು ಕೇರಳ ಸ್ಟೋರಿ 2 ಎಂದು ಟಾಂಗ್ ಕೊಟ್ಟಿದ್ದಾರೆ. ಕುಂಭಮೇಳದಲ್ಲಿ ರುದ್ರಾಕ್ಷಿಗಳನ್ನು ಮಾರುವಾಗ ಕ್ಯಾಮರಾ ಕಣ್ಣಿಗೆ ಬಿದ್ದು ರಾತ್ರೋ ರಾತ್ರಿ ಫೇಮಸ್ ಆಗಿದ್ದ ಮೊನಾಲಿಸಾ ಬಳಿಕ ಬಾಲಿವುಡ್ ಗೂ ಹೋಗಿ ಬಂದಿದ್ದಾಳೆ. ಆದರೆ ಎಲ್ಲೂ ಆಕೆ ಸ್ಥಿರವಾಗಿ ನಿಂತಿಲ್ಲ. ಇದೀಗ ದಿಡೀರ್ ಮದುವೆಯಾಗುವ ಮೂಲಕ ಸುದ್ದಿಯಾಗಿದ್ದಾಳೆ. ಅನ್ಯಧರ್ಮೀಯನ ಜೊತೆ ಮದುವೆಯಾಗಿದ್ದು ಇದಕ್ಕೆ ಕುಟುಂಬದವರಿಂದ ವಿರೋಧವಿತ್ತು ಎನ್ನಲಾಗಿದೆ.
ಅಹ್ಮದಾಬಾದ್: ಟಿ20 ವಿಶ್ವಕಪ್ ಗೆಲುವಿನ ಬಳಿಕ ಗರ್ಲ್ ಫ್ರೆಂಡ್ ಜೊತೆ ಮೈದಾನದಲ್ಲಿ ಕುಣಿದ ಹಾರ್ದಿಕ್ ಪಾಂಡ್ಯಗೆ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಈಗ ದೂರು ದಾಖಲಾಗಿದೆ. ಭಾನುವಾರ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಟೀಂ ಇಂಡಿಯಾ ಟಿ20 ವಿಶ್ವಕಪ್ ಚಾಂಪಿಯನ್ ಆಗಿತ್ತು. ಗೆಲುವಿನ ಬಳಿಕ ಅಹ್ಮದಾಬಾದ್ ಮೈದಾನದಲ್ಲಿ ಟೀಂ ಇಂಡಿಯಾ ಆಟಗಾರರು ತಮ್ಮ ಕುಟುಂಬದವರ ಜೊತೆ ಸೆಲೆಬ್ರೇಷನ್ ಮಾಡಿದ್ದರು. ಹಾರ್ದಿಕ್ ಪಾಂಡ್ಯ ಗೆಳತಿ ಮಹಿಕಾ ಶರ್ಮಾ ಕೂಡಾ ಮೈದಾನಕ್ಕೆ ಬಂದಿದ್ದರು. ಅಷ್ಟೇ ಅಲ್ಲಹಾರ್ದಿಕ್ ಜೊತೆ ಕುಣಿದು ಕುಪ್ಪಳಿಸಿದ್ದರು.
ಮುಂಬೈ: ಐಪಿಎಲ್ 2026 ರ ಮೊದಲ ಹಂತದ ವೇಳಾಪಟ್ಟಿ ಪ್ರಕಟವಾಗಿದ್ದು ಸಂಪ್ರದಾಯ ಬದಲಿಸಿದ ಐಪಿಎಲ್ ಆಡಳಿತ ಮಂಡಳಿ ವಿರುದ್ಧ ಪಂಜಾಬ್ ಕಿಂಗ್ಸ್ ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾರ್ಚ್ 28 ರಿಂದ ಐಪಿಎಲ್ 2026 ಆರಂಭವಾಗಲಿದೆ. ಆರಂಭಿಕ ಹಂತದ ಪಂದ್ಯಗಳ ವೇಳಾಪಟ್ಟಿಯನ್ನು ಐಪಿಎಲ್ ಆಡಳಿತ ಮಂಡಳಿ ನಿನ್ನೆ ಪ್ರಕಟಿಸಿತ್ತು. ಅದರಂತೆ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್ ಸಿಬಿ, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಸಾಮಾನ್ಯವಾಗಿ ಪ್ರತೀ ಬಾರಿ ಐಪಿಎಲ್ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ವಿರುದ್ಧ ರನ್ನರ್ ಅಪ್ ಆಗಿದ್ದ ತಂಡವೇ ಕಣಕ್ಕಿಳಿಯುತ್ತದೆ.
ಬೆಂಗಳೂರು: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಶಾಸಕರು ಮತ್ತು ಸಚಿವರು ಕಿತ್ತಾಡಿಕೊಂಡಿದ್ದಾರೆ. ಸಚಿವರುಗಳ ಮೇಲೆ ಶಾಸಕರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಈ ರೀತಿ ಆಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವು ಬಾರಿ ಸಚಿವರುಗಳ ಬಗ್ಗೆ ಶಾಸಕರು ಎಐಸಿಸಿ ನಾಯಕರ ಮುಂದೆಯೂ ದೂರು ನೀಡಿದ ಉದಾಹರಣೆಯಿದೆ. ನಿನ್ನೆಯ ಸಭೆಯಲ್ಲಿ ಸಚಿವರು ನಮ್ಮ ಕೈಗೆ ಸಿಗುತ್ತಿಲ್ಲ, ನಮ್ಮ ಕ್ಷೇತ್ರದ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ತಮ್ಮ ಅಭಿಪ್ರಾಯವನ್ನು ಕೇಳುತ್ತಿಲ್ಲ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದನಕ್ಕೂ ಸಚಿವರು ಗೈರಾಗುತ್ತಿದ್ದಾರೆ.
ಮುಂಬೈ: ಭಾನುವಾರ ಟಿ20 ವಿಶ್ವಕಪ್ 2026 ಗೆಲುವಿನ ಬಳಿಕ ಟೀಂ ಇಂಡಿಯಾ ಕ್ರಿಕೆಟಿಗ ಶಿವಂ ದುಬೆ ಮುಖಕ್ಕೆ ಮಾಸ್ಕ್ ಹಾಕಿಕೊಂಡು ರೈಲಿನಲ್ಲಿ ಪ್ರಯಾಣ ಮಾಡಿದ್ದರು. ಈ ಇಂಟ್ರೆಸ್ಟಿಂಗ್ ಕಹಾನಿ ಇಲ್ಲಿದೆ ನೋಡಿ. ಸಾಮಾನ್ಯವಾಗಿ ನಮ್ಮ ದೇಶದಲ್ಲಿ ಕ್ರಿಕೆಟಿಗರು ಎಂದರೆ ದೇವರಂತೆ ಅಭಿಮಾನಿಗಳು ಕಾಣುತ್ತಾರೆ. ಹೊರಗೆ ಹೋಗುವಾಗ ಅವರಿಗೆ ಭದ್ರತೆಯಿಲ್ಲದೇ ಹೋದರೆ ಅಭಿಮಾನಿಗಳಿಂದ ಬಿಡಿಸಿಕೊಳ್ಳೋದು ಅಷ್ಟು ಸುಲಭವಲ್ಲ. ಆದರೆ ಶಿವಂ ದುಬೆ ವಿಶ್ವಕಪ್ ಗೆದ್ದ ಬಳಿಕವೂ ರೈಲಿನಲ್ಲಿ ಪ್ರಯಾಣಿಸಿದ್ದೇ ಅಚ್ಚರಿಯ ಕಹಾನಿ.
ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೆಲವು ಜಿಲ್ಲೆಗಳಲ್ಲಂತೂ ತಾಪಮಾನ ಅಬ್ಬಬ್ಬಾ ಎನ್ನುವಂತಿದೆ. ಇಂದಿನ ಹವಾಮಾನ ವರದಿ ಇಲ್ಲಿದೆ ನೋಡಿ. ರಾಜ್ಯದಲ್ಲಿ ಈಗ ಕೆಲವು ಕಡೆ ಭಾಗಶಃ ಮೋಡ ಕವಿದ ವಾತಾವರಣ ಬಿಟ್ಟರೆ ಬಹುತೇಕ ಬಿಸಿಲಿನ ಝಳವಿದೆ. ಇಂದೂ ಕೂಡಾ ರಾಜ್ಯದ ಬಹುತೇಕ ಕಡೆ ಬಿಸಿಲಿನ ವಾತಾವರಣವಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಇಂದು ಮಳೆಯ ಸಾಧ್ಯತೆಯೇ ಇಲ್ಲ. ಇಂದು ರಾಜ್ಯದ ಗರಿಷ್ಠ ತಾಪಮಾನದಲ್ಲಿ ಕೊಂಚ ಏರಿಕೆಯಾಗಲಿದ್ದು, 33 ಡಿಗ್ರಿಯಷ್ಟು ಕಂಡುಬರಲಿದೆ. ಇಂದು ರಾಜ್ಯದ ಕನಿಷ್ಠ ತಾಪಮಾನ 19 ಡಿಗ್ರಿಯಷ್ಟು ಕಂಡುಬರಲಿದೆ. ಮುಂದಿನ ಎರಡು ದಿನ ಇದೇ ರೀತಿ ತಾಪಮಾನವಿರಲಿದೆ.
ಗುರುವಾರ ಶ್ರೀ ಗುರು ರಾಘವೇಂದ್ರರಿಗೆ ವಿಶೇಷವಾದ ದಿನವಾಗಿದೆ. ಇಂದು ರಾಯರ ಆರಾಧನೆ ಮಾಡುವುದರಿಂದ ಜೀವನದ ಸಕಲ ಕಷ್ಟಗಳೂ ಪರಿಹಾರವಾಗುತ್ತದೆ. ಇಂದು ಓದಲೇಬೇಕಾದ ಗುರು ರಾಯರ ಶ್ರೀ ರಾಘವೇಂದ್ರ ಆಪಾದಮೌಲಿ ಪರ್ಯಂತವರ್ಣನ ಸ್ತೋತ್ರ ಇಲ್ಲಿದೆ ನೋಡಿ.ತನ್ನಮಾಮಿ ಮುನಿವೃಂದವಂದಿತಂಮಂದಹಾಸ ಮುಖ ಸುಂದರ ದ್ಯುತಿಂಕುಂದ ಕೋಕನದ ಕಾಂತಿ ಬಂಧುರಂವಂದಿತಾಮರ ಸುಭೂಜ ಸನ್ನಿಭಂ || 1|| ಕಂಜಲೋಚನ ಸುಫಾಲ ನಾಸಿಕಂಮಂಜುಲೋಕ್ತಿ ಜನರಂಜಕಂ ಸದಾಸೂರ್ಯಪುಂಜ ಸಮಕಾಂತಿ ಸಂಯುತಂಕಂಬುತುಲ್ಯ ಶುಭಕಂಠ ರಂಜಿತಂ || 2|| ವಾರಿಜಾಕ್ಷ ಮಣಿಹಾರ ಕಂಧರಂಚಾರು ದಿವ್ಯ ತುಲಸೀ ವಿಭೂಷಿತಂಸಾರ ಫುಲ್ಲಸುಮನೋಭಿ ಶೋಭಿತಂಸೀರಜಾಧವ ಸುಪಾದ ಮಾನಸಂ || 3||
ತಮಿಳುನಾಡು: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಸುಮಾರು ₹5,650 ಕೋಟಿಗಳ ಬಹು ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಿದರು."ಅಭಿವೃದ್ಧಿ ಹೊಂದಿದ ರಾಷ್ಟ್ರಕ್ಕಾಗಿ ಅಭಿವೃದ್ಧಿ ಹೊಂದಿದ ತಮಿಳುನಾಡು ರಚಿಸುವುದು" ತಮ್ಮ ಸರ್ಕಾರದ ಗುರಿಯಾಗಿದೆ ಎಂದು ಹೇಳಿದರು.370 ಕಿ.ಮೀ ವ್ಯಾಪ್ತಿಯ ರಸ್ತೆಗಳು ಈ ಪ್ರತಿಯೊಂದು ರಸ್ತೆಗಳು ಕೇವಲ ಭೌತಿಕ ಮೂಲಸೌಕರ್ಯವಲ್ಲ, ವಿದ್ಯಾರ್ಥಿಗಳು ಆರಾಮವಾಗಿ ಶಾಲೆಗಳು ಮತ್ತು ಕಾಲೇಜುಗಳಿಗೆ ಪ್ರಯಾಣಿಸಬಹುದು ಮತ್ತು ಪ್ರತಿಯೊಂದೂ ಉತ್ತಮವಾದ
ನವದೆಹಲಿ: ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯ ವೇಳೆ ಬುಧವಾರ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಹರಿಹಾಯ್ದರು.ಕಾಂಗ್ರೆಸ್ ನಾಯಕನಿಗೆ ಮಾತನಾಡಲು ಅವಕಾಶ ಸಿಕ್ಕಾಗ ಅವರು "ಜರ್ಮನಿ, ಇಂಗ್ಲೆಂಡ್ಗೆ ಹಾರುತ್ತಾರೆ ಎಂದು ಲೇವಡಿ ಮಾಡಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಅಮಿತ್ ಶಾ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಮದುವೆಗೆ ಒತ್ತಾಯ ಮಾಡುತ್ತಿದ್ದಾರೆಂದು ತಂದೆಯ ವಿರುದ್ಧವೇ ಠಾಣೆ ಮೆಟ್ಟಿಲೇರಿದ ಬೆನ್ನಲ್ಲೇ ಮಹಾಕುಂಭಮೇಳದ ವೇಳೆ ವೈರಲ್ ಆಗಿದ್ದ ಮೊನಲಿಸಾ ತನ್ನ ಬಾಯ್ಫ್ರೆಂಡ್ ಅನ್ನು ಮದುವೆಯಾಗಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೊನಾಲಿಸಾ ಭೋಸ್ಲೆ ಬುಧವಾರ ಅರುಮನೂರಿನ ದೇವಸ್ಥಾನದಲ್ಲಿ ತನ್ನ ಗೆಳೆಯನನ್ನು ವಿವಾಹವಾದರು.ದೇವಸ್ಥಾನದಲ್ಲಿ ನೆರೆದಿದ್ದ ವೀಕ್ಷಕರು, ಮಾಧ್ಯಮದವರು ಮತ್ತು ರಾಜಕೀಯ ಮುಖಂಡರ ಗುಂಪಿನ ನಡುವೆ ಸಮಾರಂಭ
2025 ರ ಮಹಾಕುಂಭಮೇಳದ ಸಮಯದಲ್ಲಿ ಖ್ಯಾತಿ ಗಳಿಸಿದ ಮೊನಾಲಿಸಾ ಭೋಸ್ಲೆ ಅವರು ಇದೀಗ ದಿಢೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ತನಗೆ ಮದುವೆಯಾಗುವಂತೆ ತನ್ನ ತಂದೆ ಒತ್ತಾಯ ಮಾಡುತ್ತಿದ್ದಾರೆಂದು ಆರೋಪ ಮಾಡಿ ಮೊನಲಿಸಾ ಅವರು ತಿರುವನಂತಪುರಂನ ತಂಪನೂರು ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದಾರೆ.ಬೆಳಗ್ಗೆ ತನ್ನ ಗೆಳೆಯ ಫರ್ಮಾನ್ ಖಾನ್ನೊಂದಿಗೆ ಮೊನಲಿಸಾ ಪೊಲೀಸ್ ಠಾಣೆಗೆ ಬಂದಿದ್ದಾಳೆ. ತನ್ನ ದೂರಿನಲ್ಲಿ, ತನ್ನ ತಂದೆ
ನವದೆಹಲಿ: ನಡೆಯುತ್ತಿರುವ ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಗಲ್ಫ್ ಪ್ರದೇಶದಲ್ಲಿ ಸಿಲುಕಿರುವ ಭಾರತೀಯ ನಾಗರಿಕರಿಗೆ ಕೇಂದ್ರವು ಎಲ್ಲ ರೀತಿಯ ನೆರವು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಭರವಸೆ ನೀಡಿದರು.ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಪಶ್ಚಿಮ ಏಷ್ಯಾದ ಭಾರತೀಯರನ್ನು ಬೆಂಬಲಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು. ಪಶ್ಚಿಮ ಏಷ್ಯಾದಲ್ಲಿರುವ ಭಾರತೀಯರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳಲು ನಾವು
ಟೀಂ ಇಂಡಿಯಾ ಕ್ರಿಕೆಟರ್ ಇಶಾನ್ ಕಿಶನ್ ಇತ್ತೀಚಿನ ಐಸಿಸಿ T20I ಬ್ಯಾಟರ್ ರ್ಯಾಂಕಿಂಗ್ನಲ್ಲಿ ಗಮನಾರ್ಹ ಜಿಗಿತವನ್ನು ಮಾಡಿದ್ದಾರೆ. ಈ ಮೂಲಕ ವಿಶ್ವದ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಅವರು ಈಗ ತಮ್ಮ T20I ವೃತ್ತಿಜೀವನದ ಅತ್ಯುತ್ತಮ ಶ್ರೇಯಾಂಕವನ್ನು ತಲುಪುವ ಮೂಲಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ತಮ್ಮ ಭಾರತ ತಂಡದ ಸಹ ಆಟಗಾರ ಅಭಿಷೇಕ್ ಶರ್ಮಾ ಅವರ ಹಿಂದೆ ಕುಳಿತಿದ್ದಾರೆ.ಕಿಶನ್ ಒಂಬತ್ತು ಪಂದ್ಯಗಳಿಂದ 317 ರನ್ ಗಳಿಸುವ ಮೂಲಕ ಪಂದ್ಯಾವಳಿಯಲ್ಲಿ ಭಾರತದ ಎರಡನೇ ಅತಿ ಹೆಚ್ಚು ರನ್ ಗಳಿಸಿದ
ಬೆಂಗಳೂರು: ಏರ್ ಇಂಡಿಯಾ ಎಕ್ಸ್ಪ್ರೆಸ್ ಬೋಯಿಂಗ್ 737 ಮ್ಯಾಕ್ಸ್ ವಿಮಾನವು ಬುಧವಾರ ಫುಕೆಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಮುಂಭಾಗದ ಚಕ್ರಗಳು ಕಳಚಿದ ಘಟನೆ ನಡೆಯಿತು. ವಿಮಾನ, VT-BWQ, ಹೈದರಾಬಾದ್ನಿಂದ ಫುಕೆಟ್ಗೆ IX938 ವಿಮಾನವನ್ನು ನಿರ್ವಹಿಸಿತು.ಪ್ರಯಾಣಿಕರನ್ನು ಕೆಳಗಿಳಿಸಿ ಟರ್ಮಿನಲ್ ಕಟ್ಟಡಕ್ಕೆ ಕರೆದೊಯ್ಯಲಾಯಿತು. ನಾಗರಿಕ ವಿಮಾನಯಾನ ನಿರ್ದೇಶನಾಲಯದ (ಡಿಜಿಸಿಎ) ಹಿರಿಯ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ವರದಿಯ ಪ್ರಕಾರ ಯಾವುದೇ ವ್ಯಕ್ತಿಗೆ ಯಾವುದೇ ಗಾಯವಾಗಿಲ್ಲ.
ನವದೆಹಲಿ: ಭಾರತ 2026 ರ ಟಿ20 ವಿಶ್ವಕಪ್ ಗೆದ್ದ ನಂತರ, ಹೆಚ್ಚಿನ ಜನರು ಆಟಗಾರರು ಚಾರ್ಟರ್ಡ್ ವಿಮಾನಗಳಲ್ಲಿ ಮನೆಗೆ ಪ್ರಯಾಣಿಸುತ್ತಿದ್ದಾರೆ. ಆದರೆ ಆಲ್ರೌಂಡರ್ ಶಿವಂ ದುಬೆ ಅವರು ಅಹಮದಾಬಾದ್ನಿಂದ ಮುಂಬೈಗೆ ತುಂಬಾ ವಿಭಿನ್ನವಾದ ಪ್ರಯಾಣವನ್ನು ಹೊಂದಿದ್ದರು. ವಿಮಾನಗಳು ಸಂಪೂರ್ಣವಾಗಿ ಬುಕ್ ಆಗುವುದರೊಂದಿಗೆ, ಅವರು ತಮ್ಮ ಪತ್ನಿ ಮತ್ತು ಸ್ನೇಹಿತನೊಂದಿಗೆ ರೈಲಿನಲ್ಲಿ ಪ್ರಯಾಣ ಬೆಳೆಸಿದರು, ಸಾಮಾನ್ಯ ಪ್ರಯಾಣಿಕರಂತೆ 3 ನೇ AC ಟಿಕೆಟ್ ಅನ್ನು ತೆಗೆದುಕೊಂಡರು. ದುಬೆ ಅವರು ತನಗೆ ಮತ್ತು ಅವರ ಕುಟುಂಬಕ್ಕೆ ವಿಮಾನ ಟಿಕೆಟ್ಗಳನ್ನು ಪಡೆಯಲು ಮೊದಲು ಪ್ರಯತ್ನಿಸಿದರು ಆದರೆ ಯಾವುದೇ
ರಾಮನಗರ: ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಗ್ಯಾಸ್ ಸಿಲಿಂಡರ್ ಅಭಾವ ಉದ್ಭವ ಹಿನ್ನೆಲೆ ಸಿಲಿಂಡರ್ಗೆ ಕನ್ನ ಹಾಕುತ್ತಿರುವ ಘಟನೆಗಳು ವರದಿಯಾಗಿದೆ. ಇದೀಗ ಇಂತಹದ್ದೇ ಘಟನೆ ಚನ್ನಪಟ್ಟಣದ ಕನಕನಗರದ ಕೃಷ್ಣಪ್ಪ ಎಂಬುವವ ಮನೆಯಲ್ಲಿ ಸಿಲಿಂಡರ್ ಕಳ್ಳತನ ಮಾಡಲಾಗಿದೆ.ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಬಂದ ಖದೀಮ ಕಾಂಪೌಂಡ್ ಒಳಗೆ ಇದ್ದ ಸಿಲಿಂಡರ್ ಕದ್ದು ಎಸ್ಕೇಪ್ ಆಗಿದ್ದಾನೆ. ಫುಲ್ ಗ್ಯಾಸ್ ಇದ್ದ ಸಿಲಿಂಡರ್ ಅನ್ನು ಕಳ್ಳ ಹೊತ್ತೊಯ್ದ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೆಂಗಳೂರು: ದಲಿತರಿಗೆ ಮೀಸಲಾಗಿರುವ ಹಣವನ್ನು ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗೆ ಬಳಸಿಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಕಲಾಪದಲ್ಲಿ ಈ ಬಗ್ಗೆ ಪ್ರಶ್ನಿಸಿರುವ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನ ಪರಿಷತ್ತಿನ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಈ ದಲಿತ ವಿರೋಧಿ ನೀತಿಯನ್ನು ತೀವ್ರವಾಗಿ ಖಂಡಿಸಿದೆ. SCSP/TSP ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಅನುದಾನದಲ್ಲಿ ಬರೋಬ್ಬರಿ 15,000 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವುದು ಈ ಸರ್ಕಾರದ ಮೋಸದ ಮುಖವನ್ನು ಬಯಲು ಮಾಡಿದೆ.
ಮಂಡ್ಯ: ಅರ್ಚಕ ಸಿದ್ದಲಿಂಗಪ್ಪ ಅವರ ಅನುಮಾನಸ್ಪದ ಸಾವು ಪ್ರಕರಣ ಸಂಬಂಧ ಇದೀಗ ಆತನ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನಿಖೆಯ ಜಾಡು ಹಿಡಿದ ಹೊರಟ ಪೊಲೀಸರು ಅರ್ಚಕನ ಸಾವಿನ ಹಿಂದಿನ ಅರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಮರಳಗಾಲ ಗ್ರಾಮದ ಬಳಿ ಅರ್ಚಕ ಸಿದ್ದಲಿಂಗಪ್ಪನನ್ನು ಹತ್ಯೆ ಮಾಡಲಾಗುತ್ತದೆ. ಅವರನ್ನು ಹತ್ಯೆಗೈದ ಆರೋಪದ ಮೇರೆಗೆ ಪತ್ನಿ ಶಾಲಿನಿ, ಲವರ್ ಹರೀಶ ಹಾಗೂ ಎಂಆರ್ ಸಂತೋಷ್ ಕುಮಾರ್, ಬಿ. ಗಣೇಶ್ ಎಂಬುವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನವದೆಹಲಿ: ನಡೆಯುತ್ತಿರುವ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಪೂರೈಕೆ ವ್ಯತ್ಯಯ ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಬುಧವಾರ ಕರೆ ನೀಡಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ, ಹಣದುಬ್ಬರ, ನಿರುದ್ಯೋಗ ಮತ್ತು ಸಿಲಿಂಡರ್ಗಳ ಮೇಲಿನ ಇತ್ತೀಚಿನ ಬೆಲೆ ಏರಿಕೆಯ ಒತ್ತಡವನ್ನು ಸಾರ್ವಜನಿಕರು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಬೆಲೆಗಳು ಏರಿಕೆಯಾಗಿದೆ, ನಿರುದ್ಯೋಗ ಹೆಚ್ಚಾಗಿದೆ, ಎಲ್ಪಿಜಿ ಪರಿಸ್ಥಿತಿಯನ್ನು ನೋಡಿ, ಅವರ ನೀತಿಗಳು ಮತ್ತು ಯೋಜನೆಗಳಿಂದಾಗಿ. ಸಂಸತ್ತಿನಲ್ಲಿ ಚರ್ಚೆ ನಡೆಯುತ್ತಿದ್ದರೆ, ಅದು ಒಳ್ಳೆಯದು, ಕನಿಷ್ಠ ಸಾರ್ವಜನಿಕ ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಬಹುದಿತ್ತು.
ನವದೆಹಲಿ: ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯದ ಬಗ್ಗೆ ಚರ್ಚೆ ನಡೆಸುತ್ತಿರುವಾಗ ಮಾತನಾಡಿರುವ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್, ರಾಹುಲ್ ಗಾಂಧಿಯವರ ಜಿಲೇಬಿ ಫ್ಯಾಕ್ಟರಿ ಹೇಳಿಕೆ ಬಗ್ಗೆ ಉಲ್ಲೇಖಿಸಿ ವ್ಯಂಗ್ಯ ಮಾಡಿದ್ದಾರೆ. ಸ್ಪೀಕರ್ ವಿರುದ್ಧ ಅವಿಶ್ವಾಸ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ ಮತ್ತು ವಿಪಕ್ಷ ನಾಯಕರ ವಿರುದ್ಧ ಅವರು ಇಂದು ವಾಗ್ದಾಳಿ ನಡೆಸಿದ್ದಾರೆ. ಈ ನಡೆ ವಿಪಕ್ಷ ನಾಯಕರ ಒಣ ಪ್ರತಿಷ್ಠೆಯ ಫಲವಾಗಿದೆ ಎಂದಿದ್ದಾರೆ. ಇನ್ನು, ಪ್ರಧಾನಿ ಮೋದಿ ಕಾಂಪ್ರಮೈಸ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ರಾಹುಲ್ ಗಾಂಧಿಗೆ ತಿರುಗೇಟು ಕೊಟ್ಟ ರವಿಶಂಕರ್ ಪ್ರಸಾದ್, ಭಾರತದ ಪ್ರಧಾನಿ ಯಾವತ್ತೂ ಕಾಂಪ್ರಮೈಸ್ ಆಗಲು ಸಾಧ್ಯವಿಲ್ಲ ಎಂದಿದ್ದಾರೆ.
ನವದೆಹಲಿ: ಕಳೆದ 13ವರ್ಷಗಳಿಂದ ಕೋಮಾದಲ್ಲಿರುವ ಮಗನಿಗೆ ದಯಾಮರಣ ನೀಡಬೇಕೆಂದು ತಂದೆ ಸಲ್ಲಿಸಿದ್ದ ಅರ್ಜಿಗೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ತನ್ನ ಮಗನಿಗೆ ದಯಾಮರಣಕ್ಕೆ ಕೋರಿ ತಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ.ಘನತೆ ಕಾಪಾಡಿಕೊಳ್ಳುವುದರ ಜತೆಗೆ ಸೂಕ್ತ ಯೋಜನೆಯೊಂದಿಗೆ ಹರೀಶ್ ರಾಣಾ ಅವರ ವೈದ್ಯಕೀಯ ಚಿಕಿತ್ಸೆಯನ್ನು
ಬೆಂಗಳೂರು: ಬುಧವಾರ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಡಿಎಕ್ಸ್ಬಿ) ಬಳಿ ಎರಡು ಡ್ರೋನ್ಗಳು ಬಿದ್ದಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಘಟನೆಯ ಹೊರತಾಗಿಯೂ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗಳು ಎಂದಿನಂತೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ದುಬೈನ ಮಾಧ್ಯಮ ಕಚೇರಿಯು X ನಲ್ಲಿ ಹಂಚಿಕೊಂಡಿದೆ, "ಸ್ವಲ್ಪ ಸಮಯದ ಹಿಂದೆ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (DXB) ಸಮೀಪದಲ್ಲಿ ಎರಡು ಡ್ರೋನ್ಗಳು ಬಿದ್ದಿವೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ, ಇದರ ಪರಿಣಾಮವಾಗಿ ಇಬ್ಬರು
ತಿರುಚಿರಾಪಳ್ಳಿ: ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸರ್ಕಾರದ ಅಧಿಕಾರಾವಧಿಯನ್ನು ಪರಿಣಾಮಕಾರಿಯಾಗಿ ಕೊನೆಗೊಳಿಸುವ ಮೂಲಕ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಬುಧವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಂದಿನ ಚುನಾವಣೆ, ಭ್ರಷ್ಟ ಸ್ಟಾಲಿನ್ ಸರ್ಕಾರವನ್ನು ತೊಡೆದುಹಾಕಲು ತಮಿಳುನಾಡಿನ ಜನರು ಎಂದಿಗೂ ತಮ್ಮ ಮುಖ್ಯಮಂತ್ರಿಯಾಗಿ ಸ್ವೀಕರಿಸುವುದಿಲ್ಲ ಮತ್ತು ಇದು ಸ್ಟಾಲಿನ್ ಕುಟುಂಬದ ಭ್ರಷ್ಟ ಆಚರಣೆಗಳಿಂದ ತಮಿಳುನಾಡಿನ ಹೆಮ್ಮೆ, ಸಂಸ್ಕೃತಿ ಮತ್ತು ಜನರನ್ನು ಉಳಿಸುವ ಸ್ಪರ್ಧೆಯಾಗಿದೆ.
ಮುಂಬೈ: ಭಾರತ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ಪ್ರಶಸ್ತಿ ಗೆದ್ದಿದೆ. ಭಾರತ ತಂಡದಲ್ಲಿದ್ದ ಸ್ಪಿನ್ನರ್ ಕುಲದೀಪ್ ಯಾದವ್ ಅವರು ಜೀವನದಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ. 2026ರ ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಕುಲದೀಪ್ ಯಾದವ್ ಅವರು ಹಸೆಮಣೆ ಏರಿಲಿದ್ದಾರೆ. ಅವರು ಮಾರ್ಚ್ 14ರಂದು ತಮ್ಮ ಬಾಲ್ಯದ ಗೆಳತಿಯೊಂದಿಗೆ ಮಸೂರಿಯ ರೆಸಾರ್ಟ್ನಲ್ಲಿ ಮದುವೆಯಾಗಲಿದ್ದಾರೆ.ಮದುವೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೂ ಆಹ್ವಾನ ನೀಡಿದ್ದಾರೆ. ಕುಲದೀಪ್ ವಿವಾಹ ಕಾರ್ಯಕ್ರಮಕ್ಕೆ ಸಹ ಆಟಗಾರರು ಹಾಗೂ ಕ್ರಿಕೆಟ್ ಲೋಕದ ದಿಗ್ಗಜರು ಭಾಗಿಯಾಗುವ ಸಾಧ್ಯತೆ ಇದೆ.
ಕೋಲ್ಕತ್ತ: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಬಂಗಾಳಿಯ ಬಿಗ್ಬಾಸ್ ಶೋ ಅನ್ನು ನಿರೂಪಣೆ ಮಾಡಲಿದ್ದಾರೆ. ಈ ಮೂಲಕ ಸೌರವ್ ಗಂಗೂಲಿ ಅವರು ಹೊಸ ಇನ್ನಿಂಗ್ಸ್ ಅನ್ನು ಶುರು ಮಾಡಿದ್ದಾರೆ. ಕ್ರೀಡಾಲೋಕದಲ್ಲಿ ಛಾಪು ಮೂಡಿಸಿದ್ದ ಸೌರಬ್ ಗಂಗೂಲಿ ಅವರು ಇದೀಗ ಬಣ್ಣದ ಲೋಕದಲ್ಲಿ ಹೊಸ ಹೆಜ್ಜೆಯನ್ನು ಇಟ್ಟಿದ್ದಾರೆ. ಭಾರತದ ಮಾಜಿ ನಾಯಕ ಬಿಗ್ ಬಾಸ್ ಬಾಂಗ್ಲಾವನ್ನು ಹೋಸ್ಟ್ ಮಾಡಲಿದ್ದಾರೆ, ಇದು ಅತ್ಯಂತ ಜನಪ್ರಿಯ ರಿಯಾಲಿಟಿ ಶೋನ ಬಂಗಾಳಿ ಆವೃತ್ತಿಯಾಗಿದ್ದು, ಬಂಗಾಳದಲ್ಲಿ ಬಿಗ್ ಬಾಸ್ ಫ್ರಾಂಚೈಸಿಯ ಮರಳುವಿಕೆಯನ್ನು ಗುರುತಿಸುತ್ತದೆ.