Shorts

ಬೆಂಗಳೂರು: ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ ಪ್ರಸ್ತುತ ಕೇಂದ್ರದಲ್ಲಿ ಸಚಿವರಾಗಿರುವ ಎಚ್‌.ಡಿ. ಕುಮಾರಸ್ವಾಮಿ ಅವರು ಮತ್ತೆ ರಾಜ್ಯ ರಾಜಕಾರಣ ಬರುವ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ಮಕರ ಸಂಕ್ರಾಂತಿ ಹಬ್ಬದ ದಿನವೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಶೀಘ್ರದಲ್ಲೇ ರಾಜ್ಯ ರಾಜಕೀಯಕ್ಕೆ ನಾನು ಬರುತ್ತೇನೆ ಎಂದು ಹೇಳಿದ್ದಾರೆ.ಕೇಂದ್ರದಲ್ಲಿ ಪ್ರಧಾನಿಗಳು ಹುದ್ದೆ ಕೊಟ್ಟಿದ್ದಾರೆ. ಆ ಎರಡು ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಉತ್ತಮ ಕೆಲಸ ಮಾಡೋಕೆ ಈಗಾಗಲೇ ಅಡಿಗಲ್ಲು ಹಾಕಿದ್ದೇನೆ. ರಾಜ್ಯ ರಾಜಕೀಯಕ್ಕೆ ಯಾವ ಸಮಯದಲ್ಲಿ ಬರಬೇಕು ಅಂತ ತೀರ್ಮಾನ ಮಾಡ್ತೀನಿ. ರಾಜ್ಯ ರಾಜಕೀಯಕ್ಕೆ ಬರಲೇಬೇಕಾಗುತ್ತದೆ. ಯಾವಾಗ ಅಂತ ತೀರ್ಮಾನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ರಾಯಚೂರು: ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಅವರು ಇಂದು ಬೆಳಿಗ್ಗೆ ಹೃದಯಘಾತದಿಂದಾಗಿ ನಿಧನರಾಗಿದ್ದಾರೆ.49 ವರ್ಷದ ಸ್ವಾಮಿಜಿ ಅವರಿಗೆ ಬೆಳಗಿನ ಜಾವ 3.40 ರ ಸುಮಾರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಲಿಂಗಸೂಗೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ. ಹಾಲುಮತದ ಪದ್ಧತಿಯಂತೆ ತಿಂಥಣಿಯ ಕನಕ ಗುರು ಪೀಠದಲ್ಲಿಯೇ ಸ್ವಾಮೀಜಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಭಕ್ತರು ತಿಳಿಸಿದ್ದಾರೆಸಿದ್ದರಾಮಾನಂದ ಸ್ವಾಮೀಜಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಲಮರಹಳ್ಳಿಯವರು. ಮಹದೇವಯ್ಯ ಮತ್ತು ಜಯಮ್ಮ ದಂಪತಿಯ 2ನೇ ಪುತ್ರರು. ಸಿದ್ದರಾಮನಂದ ಸ್ವಾಮೀಜಿಯ ಮೂಲ ಹೆಸರು ಮೋಹನ್ ಪ್ರದಾನ ಎಂಬುದಾಗಿತ್ತು.

ಬೆಂಗಳೂರು: ಕನ್ನಡದ ರಿಯಾಲಿಟಿ ಶೋ ಬಿಗ್‌ಬಾಸ್‌ ಮಾಜಿ ಸ್ಪರ್ಧಿ, ನಟಿ ಕಾರುಣ್ಯಾ ರಾಮ್ ಅವರು ತನ್ನ ಸ್ವಂತ ತಂಗಿ ಸಮೃದ್ಧಿ ರಾಮ್ ವಿರುದ್ಧವೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಹಿಂದೆ ಕಾರುಣ್ಯ ರಾಮ್ ಅವರು ಸಮೃದ್ಧಿ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಗ ಎನ್‌ಸಿಆರ್‌ ದಾಖಲಾಗಿತ್ತು. ಈಗ ಕಾರುಣ್ಯ ರಾಮ್‌ ಸಹೋದರಿ ವಿರುದ್ಧ ಸಿಸಿಬಿಯಲ್ಲಿ ದೂರು ನೀಡಿದ್ದಾರೆ.ಕಾರುಣ್ಯಾ ಅವರು ತನ್ನ ತಂಗಿ ಸಮೃದ್ಧಿ ರಾಮ್, ಪ್ರತಿಭಾ, ಕಪಿಲ್, ಪ್ರಜ್ವಲ್, ರಕ್ಷಿತ್ ಮತ್ತು ಸಾಗರ್ ಎಂಬುವವರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಿಸಿದ್ದಾರೆ.ಮೇಕಪ್ ಆರ್ಟಿಸ್ಟ್‌ ಆಗಿರುವ ಸಹೋದರಿ ಸಮೃದ್ಧಿ ರಾಮ್ ಬೆಟ್ಟಿಂಗ್ ಆಡಿ ಸುಮಾರು ₹ 25 ಲಕ್ಷ ಸಾಲ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ವ್ಯವಹಾರದಲ್ಲೂ ಅಪಾರ ನಷ್ಟ ಅನುಭವಿಸಿದ್ದಾರೆ. ಖಾಸಗಿ ವ್ಯಕ್ತಿಗಳಿಂದ ಸಾಲ ಪಡೆದಿದ್ದಾರೆ. ಹೀಗಾಗಿ ಮನೆಯಲ್ಲಿದ್ದ ಚಿನ್ನ ಹಾಗೂ ಹಣವನ್ನು ಸಾಲ ತೀರಿಸಲು ಬಳಸಿಕೊಂಡು ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮುಂಬೈ: ಭಾರತ ಕ್ರಿಕೆಟ್‌ ತಂಡದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ. ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ರೋಹಿತ್‌ ಶರ್ಮಾ ಅವರನ್ನು ಹಿಂದಿಕ್ಕಿ ಐಸಿಸಿ ಏಕದಿನ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.ರನ್‌ ಮಿಷಿನ್‌ ಖ್ಯಾತಿಯ ವಿರಾಟ್‌ ಅವರು 1,403 ದಿನಗಳ ಬಳಿಕ ಮತ್ತೆ ಅಗ್ರಸ್ಥಾನ ಪಡೆದಿದ್ದಾರೆ. ಅಗ್ರಸ್ಥಾನದಲ್ಲಿದ್ದ ರೋಹಿತ್‌ ಶರ್ಮಾ ಅವರು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿರುವ ರನ್‌ ಮಿಷಿನ್‌ ಕೊಹ್ಲಿ ಹೊಸ ಮೈಲುಗಲ್ಲು ಸಾಧಿಸಿದ್ದಾರೆ. ವಿರಾಟ್‌ ಅವರು 37ನೇ ವಯಸ್ಸಿನಲ್ಲಿ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ.1 ಬ್ಯಾಟರ್‌ ಆಗಿ ಹೊರಹೊಮ್ಮಿದ್ದಾರೆ. ಬುಧವಾರ ಬಿಡುಗಡೆಯಾದ ನೂತನ ಏಕದಿನ ರ‍್ಯಾಂಕಿಗ್‌ ಪಟ್ಟಿಯಲ್ಲಿ 785 ಅಂಕ ಪಡೆಯುವ ಮೂಲಕ ಅಗ್ರಸ್ಥಾನಕ್ಕೆ ಜಿಗಿದಿದ್ದಾರೆ. ನ್ಯೂಜಿಲೆಂಡ್‌ನ ಡೇರಿಲ್‌ ಮಿಚೆಲ್‌ ಎರಡನೇ ಸ್ಥಾನದಲ್ಲಿದ್ದಾರೆ.

ಬೆಂಗಳೂರು: ಬಳ್ಳಾರಿ ವಿಷಯ ರಾಜ್ಯದಲ್ಲಿ ದೊಡ್ಡ ಸದ್ದು ಮಾಡುವ ಸಂದರ್ಭದಲ್ಲೇ ಶಿಡ್ಲಘಟ್ಟದಲ್ಲೂ ಬ್ಯಾನರ್ ಹಾಕಿದ್ದಾರೆ. ಬ್ಯಾನರ್ ಹಾಕಲು ಅನುಮತಿ ಪಡೆದಿದ್ದೀರಾ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಪ್ರಶ್ನಿಸಿದ್ದಾರೆ. ಪತ್ರವನ್ನೂ ನೀಡಿಲ್ಲ ಹಣ ಕಟ್ಟಿಲ್ಲ; ಅನುಮತಿ ಪಡೆದಿಲ್ಲ ಎಂದು ಕಮೀಷನರ್ ಹೇಳಿದ್ದಾಗಿ ಗಮನ ಸೆಳೆದರು.ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಕಾಂಗ್ರೆಸ್ ನಾಯಕರ ಅಟ್ಟಹಾಸ ರಾಜ್ಯದಲ್ಲಿ ಹೆಚ್ಚಾಗಿದೆ. ದರ್ಪ ಹೆಚ್ಚಾಗಿದೆ. ಮುಖ್ಯಮಂತ್ರಿಗಳು ರಾಜೀವ್ ಗೌಡರನ್ನು ಬಂಧಿಸಬೇಕು. ಕಾನೂನು ಕೈಗೆತ್ತಿಕೊಳ್ಳುವ ಮಾತನಾಡಿದ ಇವರನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ತಕ್ಷಣ ಬಂಧಿಸಬೇಕು. ಇಲ್ಲವಾದರೆ, ಇದನ್ನು ನಾವು ರಾಜ್ಯಮಟ್ಟದ ವರೆಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಎಚ್ಚರಿಸಿದರು.

ಚಿತ್ರದುರ್ಗ: ಕಾಂಗ್ರೆಸ್ಸಿಗರ ಕುರ್ಚಿ ಕಾದಾಟದಿಂದ ರಾಜ್ಯದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ರಾಜ್ಯದಲ್ಲಿ ನಿಜವಾಗಿ ಏನೂ ಅಭಿವೃದ್ಧಿ ಆಗಿಲ್ಲ; ಕಾಂಗ್ರೆಸ್ಸಿನ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ನಿನ್ನೆ ಜರ್ಮನಿಯ ಚಾನ್ಸೆಲರ್ ಕರ್ನಾಟಕಕ್ಕೆ ಬಂದಿದ್ದರು. ಜರ್ಮನಿಯು ಉತ್ಪಾದನಾ ಹಬ್ ಆಗಿರುವ ತಂತ್ರಜ್ಞಾನದ ದೇಶ. ಅಂಥ ದೇಶದ ಚಾನ್ಸೆಲರ್ ಕರ್ನಾಟಕಕ್ಕೆ ಬಂದರೆ, ಇವರಲ್ಲಿ ಒಬ್ಬರು ಸಿಎಂ ಕುರ್ಚಿ ಉಳಿಸಿಕೊಳ್ಳಲು, ಇನ್ನೊಬ್ಬರು ಅದೇ ಕುರ್ಚಿ ಕಸಿದುಕೊಳ್ಳಲು ಹೋಗಿ ರಾಹುಲ್ ಗಾಂಧಿ ಜೊತೆ ನಿಂತುಕೊಂಡಿದ್ದಾರೆ. ಇದರಂದ ರಾಜ್ಯದ ಪರಿಸ್ಥಿತಿ ಏನಾಗಬೇಕು ಎಂದು ಕೇಳಿದರು.