Shorts

ಬೆಂಗಳೂರು: ಸರ್ಕಾರ ನೀಡಿದ ಭಾಷಣ ಓದದೇ ತಾವೇ ಸಿದ್ಧಪಡಿಸಿದ ಮೂರು ಸಾಲುಗಳ ಭಾಷಣ ಮಾಡಿದ ರಾಜ್ಯಪಾಲರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಇಂದು ವಿಶೇಷ ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣ ಓದದೇ ತಾವೇ ಸಿದ್ಧಪಡಿಸಿದ ಭಾಷಣ ಓದಿದ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಸರ್ಕಾರ ಸಿಟ್ಟಿಗೆದ್ದಿದೆ. ವಿಧಾನಸಭೆಯಲ್ಲಿ ಇಂದು ರಾಜ್ಯಪಾಲರನ್ನು ತಡೆಯುವ ಪ್ರಯತ್ನವೂ ನಡೆಯಿತು. ಈ ವೇಳೆ ಹೈಡ್ರಾಮಾವೇ ನಡೆದಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ‘ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ಮಾನ್ಯ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ.

ಇಂದು ಗುರುವಾರವಾಗಿದ್ದು ಮಹಾವಿಷ್ಣುವಿಗೆ ವಿಶೇಷವಾದ ದಿನವಾಗಿದೆ. ಆರೋಗ್ಯ, ಆಯುಷ್ಯ, ನೆಮ್ಮದಿಗಾಗಿ ಮಹಾವಿಷ್ಣುವಿನ ಕುರಿತ ಸ್ತೋತ್ರಗಳನ್ನು ಪಠಿಸಿದರೆ ಉತ್ತಮ. ಅದಕ್ಕಾಗಿ ಬಾಲ ಮುಕುಂದಾಷ್ಟಕಂ ಸ್ತೋತ್ರ ಇಲ್ಲಿದೆ ಮತ್ತು ಇದನ್ನು ಮಕ್ಕಳಿಗೆ ಹೇಳಿಸಿ.ಕರಾರವಿಂದೇನ ಪದಾರವಿಂದಂ ಮುಖಾರವಿಂದೇ ವಿನಿವೇಶಯಂತಮ್ ।ವಟಸ್ಯ ಪತ್ರಸ್ಯ ಪುಟೇ ಶಯಾನಂ ಬಾಲಂ ಮುಕುಂದಂ ಮನಸಾ ಸ್ಮರಾಮಿ ॥ 1 ॥ ಸಂಹೃತ್ಯ ಲೋಕಾನ್ವಟಪತ್ರಮಧ್ಯೇ ಶಯಾನಮಾದ್ಯಂತವಿಹೀನರೂಪಮ್ ।ಸರ್ವೇಶ್ವರಂ ಸರ್ವಹಿತಾವತಾರಂ ಬಾಲಂ ಮುಕುಂದಂ ಮನಸಾ ಸ್ಮರಾಮಿ ॥ 2 ॥ ಇಂದೀವರಶ್ಯಾಮಲಕೋಮಲಾಂಗಂ ಇಂದ್ರಾದಿದೇವಾರ್ಚಿತಪಾದಪದ್ಮಮ್ ।ಸಂತಾನಕಲ್ಪದ್ರುಮಮಾಶ್ರಿತಾನಾಂ ಬಾಲಂ ಮುಕುಂದಂ ಮನಸಾ ಸ್ಮರಾಮಿ ॥ 3 ॥ ಲಂಬಾಲಕಂ ಲಂಬಿತಹಾರಯಷ್ಟಿಂ ಶೃಂಗಾರಲೀಲಾಂಕಿತದಂತಪಂಕ್ತಿಮ್ ।ಬಿಂಬಾಧರಂ ಚಾರುವಿಶಾಲನೇತ್ರಂ ಬಾಲಂ ಮುಕುಂದಂ ಮನಸಾ ಸ್ಮರಾಮಿ ॥ 4 ॥

ಬೆಂಗಳೂರು: ಗೌರವಾನ್ವಿತ ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧದ ಅಂಶಗಳನ್ನು ಅಳವಡಿಕೆ ಮಾಡದೇ ಆರೋಗ್ಯಕರ ಪ್ರಜಾಪ್ರಭುತ್ವ, ಸಕಾರಾತ್ಮಕ ಒಕ್ಕೂಟ ವ್ಯವಸ್ಥೆಯಡಿ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನುವು ಮಾಡಿಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.ಮಾನ್ಯ ರಾಜ್ಯಪಾಲರು ಭಾಷಣ ಮಾಡಲು ಎಲ್ಲಿಯೂ ವಿರೋಧಿಸಿಲ್ಲ. ರಾಜ್ಯ ಸರ್ಕಾರವು ಸುಳ್ಳು ಹಾಗೂ ತಪ್ಪು ಮಾಹಿತಿಯನ್ನು ಹರಡುವುದಕ್ಕೆ ಮತ್ತು ಜನಸಾಮಾನ್ಯರನ್ನು ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದನ್ನು ಮಾತ್ರ ವಿರೋಧಿಸಿದ್ದಾರೆ ಎಂದು ಅವರು ಗಮನ ಸೆಳೆದಿದ್ದಾರೆ.

ಬೆಂಗಳೂರು: ಮುಂದಿನ ಎರಡು ತಿಂಗಳುಗಳಲ್ಲಿ ಶಾಲಾ ಬಾಲಕಿಯರಿಗೆ ಮುಟ್ಟಿನ ಕಪ್‌ಗಳನ್ನು ಪೂರೈಸಲು ಯೊಜನೆ ನಡೆಸುತ್ತಿರುವ ಹಿನ್ನೆಲೆ ಇದೀಗ ಕರ್ನಾಟಕ ಆರೋಗ್ಯ ಇಲಾಖೆಯು ಶಿಕ್ಷಕರು ಮತ್ತು ತಾಯಂದಿರಿಗೆ ತರಬೇತಿ ನೀಡಲು ಪ್ರಾರಂಭಿಸಲಿದೆ. ಇದು ಶಿಕ್ಷಣ ಸಂಸ್ಥೆಗಳಲ್ಲಿ ಮುಟ್ಟಿನ ನೈರ್ಮಲ್ಯ ನಿರ್ವಹಣೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಸೂಚಿಸುತ್ತದೆ.ಈ ಉಪಕ್ರಮವು 9 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ಹುಡುಗಿಯರ ಮೇಲೆ ಕೇಂದ್ರೀಕರಿಸಲಿದ್ದು, ಶಾಲೆಗಳು ಮತ್ತು ಕಾಲೇಜುಗಳಲ್ಲಿ ಮುಟ್ಟಿನ ಕಪ್‌ಗಳನ್ನು ಹಂತಹಂತವಾಗಿ ಬಿಡುಗಡೆ ಮಾಡಲು ಇಲಾಖೆ ಯೋಜಿಸಿದೆ. ವಿದ್ಯಾರ್ಥಿಗಳು ಆರಾಮವಾಗಿ ಪರಿವರ್ತನೆಗೊಳ್ಳಲು ಸಹಾಯ ಮಾಡಲು, ಆರು ತಿಂಗಳಿಗೆ ಸಾಕಾಗುವಷ್ಟು ಸ್ಯಾನಿಟರಿ ಪ್ಯಾಡ್‌ಗಳೊಂದಿಗೆ ಮುಟ್ಟಿನ ಕಪ್‌ಗಳನ್ನು ವಿತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಡುಪಿ: ಶೀರೂರು ಮಠದ ಪರ್ಯಾಯ ಮಹೋತ್ಸವ ಪ್ರಯುಕ್ತ ಉಡುಪಿಯ ಜೋಡುಕಟ್ಟೆಯಿಂದ ಆರಂಭವಾದ ಮೆರವಣಿಗೆಗೆ ಕೇಸರಿ ಧ್ವಜ ತೋರಿಸಿ ಉಡುಪಿ ಜಿಲ್ಲಾಧಿಕಾರಿ ಚಾಲನೆ ನೀಡಿದ್ದು, ಈ ವಿಚಾರ ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿದೆ. ಆರ್‌ಎಸ್‌ಎಸ್‌ ಧ್ವಜ ಪ್ರದರ್ಶಿಸಿದ ಜಿಲ್ಲಾಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಅಧ್ಯಕ್ಷ ಹರೀಶ್‌ ಶೆಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ.ಜ.18ರಂದು ಮುಂಜಾನೆ 3 ಗಂಟೆಗೆ ಉಡುಪಿ ನಗರದ ಜೋಡುಕಟ್ಟೆಯಿಂದ ಶ್ರೀಕೃಷ್ಣ ಮಠದವರೆಗೆ ಪರ್ಯಾಯ ಮೆರವಣಿಗೆ ನಡೆದಿದ್ದು, ಮೆರವಣಿಗೆ ಆರಂಭಕ್ಕೂ ಮೊದಲು ಶಾಸಕ ಯಶ್‌ಪಾಲ್‌ ಸುವರ್ಣ ಅವರು ಆರ್‌ಎಸ್‌ಎಸ್‌ ಧ್ವಜವನ್ನು ಜಿಲ್ಲಾಧಿಕಾರಿ ಕೈಗೆ ನೀಡಿದ್ದಾರೆ.

ಬೆಂಗಳೂರು: ಮಂತ್ಲಿ ಮನಿ ಬಹಿರಂಗ ಆದಾಗಲೇ ಅಬಕಾರಿ ಸಚಿವರನ್ನ ವಜಾ ಮಾಡಬೇಕಿತ್ತು. ಸಿದ್ದರಾಮಯ್ಯ ಸರ್ಕಾರ ಜನರ ವಿಶ್ವಾಸ ಸಹ ಕಳೆದುಕೊಂಡಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ.ಅಬಕಾರಿ ಇಲಾಖೆ ಭ್ರಷ್ಟಾಚಾರ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಪ್ರಸ್ತುತ ರಾಜ್ಯದಲ್ಲಿರುವ ಈ ಸರ್ಕಾವರೇ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದೆ. ಭ್ರಷ್ಟಾಚಾರದ ಚರಮಸೀಮೆಗೆ ಸರ್ಕಾರ ತಲುಪಿದೆ. ಸಿಎಂ ಕೂಡಾ ಇನ್ನೆಷ್ಟು ದಿನ ಇರ್ತೀನೋ? ಇರುವಷ್ಟು ದಿನ ಚೀಲ ತುಂಬಿಸಿಕೊಳ್ಳೋಣ ಅಂತ ಇದ್ದಾರೆ ಎಂದು ವ್ಯಂಗ್ಯವಾಡಿದರು. ಸರ್ಕಾರದ ವಿರುದ್ಧ ಜನಾಭಿಪ್ರಾಯ ಇದೆ. ಆ ಜನಾಭಿಪ್ರಾಯವನ್ನ ಈ ಸರ್ಕಾರ ಬದಲಾಯಿಸಲು ಆಗಲ್ಲ. ಸರ್ಕಾರ ಜನರ ವಿಶ್ವಾಸ ಗೆಲ್ಲುವಂಥ ಯಾವ ಕೆಲಸವನ್ನೂ ಕಳೆದ ಎರಡೂವರೆ ವರ್ಷದಲ್ಲಿ ಮಾಡಿಲ್ಲ ಎಂದು ದೂರಿದರು.

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಆವೃತ್ತಿಗೆ ದಿನಗಣನೆ ಆರಂಭವಾಗಿದೆ. ಆದರೆ, ಹಾಲಿ ಚಾಂಪಿಯನ್‌ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನೂ ಹೋಂ ಗ್ರೌಂಡ್‌ ಆಯ್ಕೆ ಮಾಡದಿರುವುದು ಬಿಸಿಸಿಐ ತಲೆನೋವಾಗಿದೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಸೀಸನ್​ನಲ್ಲಿ ಯಾವ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿದೆ ಎಂಬುದು ಇನ್ನೂ ಸಹ ಖಚಿತವಾಗಿಲ್ಲ. ಹೀಗಾಗಿಯೇ ಇದೀಗ ಬಿಸಿಸಿಐ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಆರ್​ಸಿಬಿ ಫ್ರಾಂಚೈಸಿಗೆ ಸೂಚನೆ ನೀಡಿದೆ.ಈ ಬಾರಿಯ 19ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದು ಎಲ್ಲ. ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ದೊರೆತಿಲ್ಲ. ಇದಕ್ಕೆ ಮುಖ್ಯ ಕಾರಣ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ಷರತ್ತುಗಳು.