ದಾವಣಗೆರೆ: ಹದಿನಾರು ಬಜೆಟ್ ಮಂಡಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಣ್ಕಟ್ಟು ವಿದ್ಯೆ ಕಲಿತಿದ್ದಾರೆ. ಅಭಿವೃದ್ಧಿಗೆ ಹಣ ನೀಡದೆ, ಗ್ಯಾರಂಟಿಗಳನ್ನೂ ಸರಿಯಾಗಿ ಅನುಷ್ಠಾನ ಮಾಡದೆ ಆರ್ಥಿಕ ಶಿಸ್ತು ಪಾಲಿಸುತ್ತಿದ್ದೇವೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ವಿರೋಧಪಕ್ಷದ ನಾಯಕ ಆರ್ ಅಶೋಕ್ ಅವರು ದೂರಿದ್ದಾರೆ.ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಸರ್ಕಾರಕ್ಕೆ ಶಿಸ್ತೇ ಇಲ್ಲ. ಒಂದೇ ಒಂದು ಅಭಿವೃದ್ಧಿ ಕಾರ್ಯವನ್ನು ಈ ಸರ್ಕಾರ ಮಾಡಿಲ್ಲ. ಸುಳ್ಳು ಹೇಳಿಕೊಂಡೇ ಮೂರು ವರ್ಷ ಕಳೆದಿದೆ ಎಂದರು. ಸಿದ್ದರಾಮಯ್ಯ ಅವರಿಗೆ ಸುಳ್ಳು ರಾಮಯ್ಯ ಎಂಬ ಬಿರುದು ಕೊಡಬೇಕು. ಗ್ಯಾರಂಟಿಗಳ ವಿಚಾರವಾಗಿಯಂತೂ ಅವರು ಸುಳ್ಳಿನ ಪುಂಗಿ ಊದುತ್ತಿದ್ದಾರೆ.
ಮಂಗಳೂರು: ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ ಪಿಲಿಕುಳ ನಿಸರ್ಗಧಾಮದ ಜೈವಿಕ ಉದ್ಯಾನವನವನ್ನು ಏಪ್ರಿಲ್ 1 ರಿಂದ ಏಪ್ರಿಲ್ 8 ರವರೆಗೆ ಸಾರ್ವಜನಿಕರಿಗೆ ನಿರ್ಬಂಧಿಸಲಾಗಿದೆ.ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಅಧಿಕೃತ ಪತ್ರಿಕಾ ಪ್ರಕಟಣೆಯ ಪ್ರಕಾರ, ಅಗತ್ಯ ಮೂಲಸೌಕರ್ಯ ದುರಸ್ತಿಗೆ ಅನುಕೂಲವಾಗುವಂತೆ ಮತ್ತು ಸೌಲಭ್ಯದ ಸುರಕ್ಷತೆ ಮತ್ತು ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ತಾತ್ಕಾಲಿಕವಾಗಿ ಮುಚ್ಚುವುದು ಅವಶ್ಯಕ.ಈ ಅವಧಿಯಲ್ಲಿ ಮೃಗಾಲಯವು ಸಾರ್ವಜನಿಕ ವೀಕ್ಷಣೆಗೆ ಲಭ್ಯವಿರುವುದಿಲ್ಲ. ಪ್ರವಾಸಿಗರು ಮತ್ತು ಪ್ರವಾಸಿಗರು ದಿನಾಂಕಗಳನ್ನು
ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ಕೇಂದ್ರ ಸಚಿವ ಅಮಿತ್ ಶಾ ಅವರು ಅಸ್ಸಾಂನ ರ್ಯಾಲಿಯನ್ನು ರದ್ದುಗೊಳಿಸಲಾಗಿದೆ.ಅಸ್ಸಾಂನ ಧುಬ್ರಿ ಜಿಲ್ಲೆಯ ಗೋಲಕ್ಗುಂಜ್ನಲ್ಲಿ ತಮ್ಮ ನಿಗದಿತ ರ್ಯಾಲಿಯನ್ನು ರದ್ದುಗೊಂಡಿದ್ದರಿಂದ 2026 ರ ಅಸ್ಸಾಂ ವಿಧಾನಸಭಾ ಚುನಾವಣೆಯ ಪ್ರಚಾರವು ಶುಕ್ರವಾರ ಅನಿರೀಕ್ಷಿತ ಅಡಚಣೆಯನ್ನು ಎದುರಿಸಿತು.ಪಕ್ಷದ ಮೂಲಗಳ ಪ್ರಕಾರ, ಷಾ ಅವರು ಗುವಾಹಟಿಯಿಂದ ಗೋಲಕ್ಗುಂಜ್ಗೆ ತೆರಳಿದ್ದರು ಆದರೆ ಅವರ ವಿಮಾನವನ್ನು
ಸ್ಕೂಟರ್ನಲ್ಲಿ ಹೋಗುತ್ತಿದ್ದ ಯುವಕನ ಮೇಲೆ ಗೂಳಿಯೊಂದು ದಾಳಿ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಜರಾತ್ನ ರಾಜ್ಕೋರ್ಟ್ನ ವೆರಾವಲ್ನಲ್ಲಿ ನಡೆದಿದೆ. ಈ ಭಯಾನಕ ಘಟನೆಯ ದೃಶ್ಯ ಅಲ್ಲೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವಕನೊಬ್ಬ ಸ್ಕೂಟರ್ನಲ್ಲಿ ಬರುತ್ತಿದ್ದಾಗ ಗೂಳಿ ಎದುರಾಗಿದೆ. ಗೂಳಿ ಹತ್ತಿರ ಬಂದು ಯುವಕನಿದ್ದ ಸ್ಕೂಟರ್ ಮೇಲೆ ದಾಳಿ ನಡೆಸಿದೆ. ಬಳಿಕ ಯುವಕನ ಮೇಲೂ ದಾಳಿ ನಡೆಸಲು ಆರಂಭಿಸಿದೆ.
ಆ ವ್ಯಕ್ತಿ ಮೇಲೆ ಆ ಬೀಡಾಡಿ ದನಕ್ಕೆ ಅದೇನು ಕಾರಣಕ್ಕೆ ಕೋಪವಿತ್ತೋ.. ಒಟ್ಟಿನಲ್ಲಿ ದಾರಿಯಲ್ಲಿ ಹೋಗುತ್ತಿದ್ದವನನ್ನು ದನವೊಂದು ತುಳಿದು ಚಚ್ಚಿ ಹಾಕಿದೆ. ಈ ಭಯಾನಕ ವಿಡಿಯೋ ಇಲ್ಲಿದೆ ನೋಡಿ. ಗೋವುಗಳು ತುಂಬಾ ಸಾತ್ವಿಕ ಪ್ರಾಣಿಗಳು ಎನ್ನಲಾಗುತ್ತದೆ. ಅವುಗಳ ದೇಹ ಮಾತ್ರ ದೈತ್ಯ. ಆದರೆ ಬೀದಿಯಲ್ಲಿ ಸುತ್ತಾಡುವ ಗೋವುಗಳು ಕೆಲವೊಮ್ಮೆ ಆಹಾರ ಸಿಗದ ಕೋಪಕ್ಕೋ, ತನ್ನ ಮೇಲೆ ಹೊಡೆದ, ಓಡಿಸಿದ ಸಿಟ್ಟಿಗೋ ಧ್ವೇಷ ತೀರಿಸಿಕೊಳ್ಳುತ್ತವೆ. ಇಲ್ಲಿಯೂ ಆಗಿದ್ದು ಇದೇ.ಇದು ರಾಜ್ ಕೋಟ್ ನ ಕೋಡ್ತಾ ಸಾಂಘನಿ ಎಂಬಲ್ಲಿ. ಓರ್ವ ವ್ಯಕ್ತಿ ದ್ವಿಚಕ್ರ ವಾಹನದಲ್ಲಿ ಬರುವಾಗ ಎದುರಿನಿಂದ ಬರುವ ದನ ಆತನಿಗೆ ಗುದ್ದಿ ಕೆಳಕ್ಕೆ ಬೀಳಿಸುತ್ತದೆ. ಬಳಿಕ ಆತನನ್ನು ತನ್ನ ಕಾಲ ಕೆಳೆಗೆ ಹಾಕಿ ತುಳಿದುಬಿಡುತ್ತದೆ.
ಕೇರಳದ ಕೊಯಿಲಾಂಡಿಯ ಸ್ಥಳೀಯ ಉತ್ಸವದ ವೇಳೆ ಆನೆಯೊಂದು ಹಠಾತ್ ನಿಯಂತ್ರಣ ತಪ್ಪಿ, ಜನರ ಮೇಲೆ ಮುಗಿಬಿದ್ದ ಘಟನೆಯ ವೀಡಿಯೊ ವೈರಲ್ ಆಗಿದೆ. ಸಂಭ್ರಮಾಚರಣೆ ನಡೆಯುತ್ತಿರುವಾಗಲೇ ಈ ಘಟನೆ ನಡೆದಿದ್ದು, ಕಾರ್ಯಕ್ರಮದಲ್ಲಿ ನೆರೆದಿದ್ದ ಜನರಲ್ಲಿ ಮುಗಿ ಬಿದ್ದಿದ್ದು, ಇದರಿಂದ ನೆರೆದಿದ್ದವರಿಗೆ ಆತಂಕ ಸೃಷ್ಟಿಸಿದೆ. ಈ ವೀಡಿಯೊ ಪ್ರಾಣಿ ಹಿಂಸೆಯ ಬಗ್ಗೆ ಚರ್ಚೆಗೆ ಕಾರಣವಾಯಿತು ಮತ್ತು ಆಚರಣೆಗಳಲ್ಲಿ ಆನೆಗಳ ಪಾಲ್ಗೊಳ್ಳುವಿಕೆ ಬಗ್ಗೆ ಪ್ರಶ್ನೆ
ನವದೆಹಲಿ: ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಮುನ್ನ ರಾಜಕೀಯ ಉದ್ವಿಗ್ನತೆ ಹೆಚ್ಚಿದ್ದು, ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ನಾಯಕರಿಗೆ "ಸೂಟ್ಕೇಸ್ ರಾಜಕೀಯ" ಆರೋಪವನ್ನು ಸಾಬೀತುಪಡಿಸುವಂತೆ ಸವಾಲು ಎಸೆದರು. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಬಹಿರಂಗವಾಗಿ ಆರೋಪ ಮಾಡಿದರೂ ಕಾನೂನು ಕ್ರಮಕ್ಕೆ ಮುಂದಾಗಿಲ್ಲ ಏಕೆ ಎಂದು ಪ್ರಶ್ನಿಸಿದರು. ಹಕ್ಕುಗಳ ಹಿಂದೆ ನಂಬಲರ್ಹವಾದ ಪುರಾವೆಗಳಿದ್ದರೆ, ಚುನಾವಣಾ ಪ್ರಚಾರದ ಸಮಯದಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವ ಬದಲು ಈಗಾಗಲೇ ದೂರು ದಾಖಲಿಸಬೇಕಿತ್ತು ಎಂದು ಅವರು ಟೀಕಿಸಿದರು.
ಕೋಲ್ಕತ್ತ: ಪಂದ್ಯ ನಡೆಯುವ ವೇಳೆ ಅಂಪೈರ್ ಜೊತೆ ವಾಗ್ವಾಗ ನಡೆಸಿದ ಸನ್ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಅವರಿಗೆ ಬಿಸಿಸಿಐ ಬಿಗ್ಶಾಕ್ ನೀಡಿದೆ.ಈಡನ್ ಗಾರ್ಡನ್ನಲ್ಲಿ ಕೋಲ್ಕತ್ತಾ ನೈಟ್ರೈಡರ್ಸ್ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ಅಭಿಷೇಕ್ ಅಬ್ಬರಿಸಿದ್ದರು. ಈ ಪಂದ್ಯದಲ್ಲಿ 228.57 ಸ್ಟ್ರೈಕ್ರೇಟ್ನಲ್ಲಿ ಬ್ಯಾಸ್ ಬೀಸಿ 48 ರನ್ ಗಳಿಸಿದ್ದರು. ಅವರಿಗೆ ಈಗ ದಂಡದ ಬಿಸಿ ತಟ್ಟಿದೆ.ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಎಸ್ಆರ್ಹೆಚ್ ತಂಡದ ಆಲ್ರೌಂಡರ್ ಅಭಿಷೇಕ್ ಬಿಸಿಸಿಐ ನಿಂದ ಶಿಕ್ಷೆಗೆ ಗುರಿಯಾಗಿದ್ದಾರೆ. ಪಂದ್ಯದ ವೇಳೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಕ್ಕಾಗಿ ಅಭಿಗೆ ಬಿಸಿಸಿಐ, ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ಹಾಗೂ 1 ಡಿಮೆರಿಟ್ ಪಾಯಿಂಟ್ ಅನ್ನು ಕೂಡ ಸಂಗ್ರಹಿಸಿದೆ.
ಬಾಗಲಕೋಟೆ: ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯನವರು ತಮ್ಮ ಅಧಿಕಾರವನ್ನು ಸ್ವಂತಕ್ಕೋಸ್ಕರ, ಸ್ವಾರ್ಥಕ್ಕೋಸ್ಕರ ಮತ್ತು ರಾಜ್ಯದ ಜನರಿಗೆ ವಂಚನೆ ಮಾಡುವ ಕೆಲಸ ಮಾಡಿ, ಈ ರಾಜ್ಯವನ್ನು ಕತ್ತಲೆ ಕೋಣೆಯಲ್ಲಿಡುವ ಕೆಲಸ ಮಾಡಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅವರು ಆರೋಪಿಸಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಬೆಂಗಳೂರು ನಗರದ ಅಭಿವೃದ್ಧಿಯಲ್ಲಿ ನಮ್ಮದೇ ಆದ ಪಾಲುದಾರಿಕೆಯನ್ನು ಕೊಟ್ಟಿದ್ದೇವೆ ಎಂದು ತಿಳಿಸಿದರು. ಯಾವುದೇ ಶಾಸಕರೂ ತನ್ನ ಕಾರ್ಯಕ್ಷೇತ್ರಕ್ಕೆ ಹೋಗಿ ನಾನು ಒಳ್ಳೆಯ ಕೆಲಸ ಮಾಡಿದ್ದೇನೆ; ನನ್ನಿಂದ ಇಷ್ಟು ಕೆಲಸ ಆಗಿದೆ ಎಂದು ಹೇಳುವ ನೈತಿಕತೆಯನ್ನು ಕೇವಲ ವಿಪಕ್ಷದವರಷ್ಟೇ ಅಲ್ಲ; ಆಡಳಿತ ಪಕ್ಷದವರೂ ಕಳಕೊಂಡಿದ್ದಾರೆ ಎಂದು ನುಡಿದರು.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದ್ದರೆ ಮತ್ತುಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಏರಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ನಿನ್ನೆ 1,55,290.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,51,650.00 ರೂ.ಗಳಷ್ಟಿದೆ.
ಕಾಸರಗೋಡು: ಕೇರಳ ವಿಧಾನಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಪರ ಮತಯಾಚನೆ ಮಾಡಲು ನಟ, ಕೇಂದ್ರ ಸಚಿವ ಸುರೇಶ್ ಗೋಪಿ ಕಾಸರಗೋಡಿಗೆ ಬಂದಿದ್ದಾರೆ. ಇಂದು ಇಲ್ಲಿನ ಇತಿಹಾಸ ಪ್ರಸಿದ್ಧ ಮಧೂರು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿದ್ದಾರೆ. ಕೇರಳ ಸ್ಥಳೀಯ ಸಂಸ್ಥೆಗಳಲ್ಲಿ ಜಯಭೇರಿ ಭಾರಿಸಿದ ಹುಮ್ಮಸ್ಸಿನಲ್ಲಿರುವ ಬಿಜೆಪಿ ವಿಧಾನಸಭೆಯಲ್ಲೂ ಅದೇ ರೀತಿಯ ಪ್ರದರ್ಶನ ತೋರುವ ವಿಶ್ವಾಸದಲ್ಲಿದೆ. ಇದೇ ಕಾರಣಕ್ಕೆ ಸ್ಟಾರ್ ಪ್ರಚಾರಕರನ್ನು ಕರೆಸಿ ಬಿಜೆಪಿ ಗೆಲ್ಲುವ ಸಾಧ್ಯತೆಯಿರುವ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ನಿನ್ನೆ ಯಾವುದೇ ವ್ಯತ್ಯಾಸ ಕಂಡುಬಂದಿರಲಿಲ್ಲ. ಆದರೆ ಇಂದು ಕೊಂಚ ಏರಿಕೆಯಾಗಿದೆ.. ಹೊಸ ಅಡಿಕೆ ಬೆಲೆ 10 ರೂ. ಏರಿಕೆಯಾಗಿದ್ದು 500 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 555 ರೂ. ಗಳಾಗಿದೆ.
ಬಾಗಲಕೋಟೆ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದಷ್ಟು ಲಜ್ಜೆಗೇಡಿ ಸರ್ಕಾರವನ್ನು ನಾವು ಎಂದೂ ನೋಡಿರಲಿಲ್ಲ. ಸರ್ಕಾರದ ನೀತಿಗಳಿಂದ ಬೇಸತ್ತ ಮತದಾರ ಈ ಉಪ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಲಿದ್ದಾರೆ ಎಂದು ಸಂಸದ ರಮೇಶ್ ಜಿಗಜಿಣಗಿ ಅವರು ಹೇಳಿದ್ದಾರೆ.ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಶಾಸಕರಾಗಿದ್ದ ವೀರಣ್ಣ ಚರಂತಿಮಠ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅವರು ಕ್ಷೇತ್ರಕ್ಕಾಗಿ ದುಡಿದಿದ್ದಾರೆ. ಈ ಬಾರಿಯೂ ಅವರನ್ನು ಮತದಾರರು ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸ ಇದೆ ಎಂದರು.
ಬಾಯಾರಿದ್ದ ತನ್ನ ಮಗುವಿಗೆ ನೀರು ಕೊಟ್ಟ ಯುವಕನಿಗೆ ಅಮ್ಮ ಆನೆ ತನ್ನದೇ ಶೈಲಿಯಲ್ಲಿ ಧನ್ಯವಾದ ಸಲ್ಲಿಸಿದ ಹೃದಯಸ್ಪರ್ಶಿ ವಿಡಿಯೋವೊಂದು ಇಲ್ಲಿದೆ. ಆನೆಗಳು ಆಕಾರದಲ್ಲಿ ಮಾತ್ರ ದೈತ್ಯವಲ್ಲ. ಅವುಗಳ ಮನಸ್ಸೂ ಅಷ್ಟೇ ವಿಶಾಲ ಎಂದು ಈ ಆನೆ ತೋರಿಸುತ್ತದೆ. ತನಗೆ ಉಪಕಾರ ಮಾಡಿದವರನ್ನು ಮನುಷ್ಯರು ಮರೆಯಬಹುದು. ಆದರೆ ಪ್ರಾಣಿಗಳು ತಮಗೆ ಅನ್ನ, ನೀರು ಕೊಟ್ಟವರನ್ನು ಎಂದಿಗೂ ಮರೆಯಲ್ಲ. ಅದಕ್ಕೆ ಈ ಆನೆಯೇ ಸಾಕ್ಷಿ. ಆನೆ ಮತ್ತು ಅದರ ಮರಿ ಆನೆ ಮಾವುತನ ಜೊತೆಗೆ ರಸ್ತೆಯಲ್ಲಿ ಬರುತ್ತಿರುತ್ತದೆ. ನಡೆದಾಡಿ ಮರಿ ಆನೆಗೆ ವಿಪರೀತ ಬಾಯಾರಿಕೆಯಾಗಿರುತ್ತದೆ.
ನವದೆಹಲಿ: ರಾಜ್ಯಸಭೆಯಲ್ಲಿ ಉಪ ನಾಯಕನ ಸ್ಥಾನದಿಂದ ಎಎಪಿ ತನ್ನ ಸಂಸದ ರಾಘವ್ ಚಡ್ಡಾರನ್ನು ಎಎಪಿ ತೆಗೆದು ಹಾಕಲು ಆಪ್ ಪತ್ರ ಬರೆದಿದೆ. ಇದರ ಬೆನ್ನಲ್ಲೇ ಈಗ ಸೋಷಿಯಲ್ ಮೀಡಿಯಾದಲ್ಲಿ ಇದರ ಹಿಂದಿನ ಕಾರಣ ಭಾರೀ ಚರ್ಚೆಯಾಗುತ್ತಿದೆ. ದೊಡ್ಡ ಉದ್ಯಮ ಸಂಸ್ಥೆಗಳ ಕಾರ್ಯನಿರ್ವಹಣೆ ಬಗ್ಗೆ ರಾಘವ್ ಚಡ್ಡಾ ಸಂಸತ್ ನಲ್ಲಿ ಮಾತನಾಡುತ್ತಿದ್ದರು. ಡೆಲಿವರಿ ಬಾಯ್ ಗಳ ಕಷ್ಟದ ಬಗ್ಗೆ, ಟೆಲಿಕಾಂ ಸಂಸ್ಥೆಗಳ ವಂಚನೆ ಬಗ್ಗೆ, ವಿಮಾನ ಯಾನದ ವೇಳೆ ಲಗೇಜ್ ಶುಲ್ಕ ವಿಧಿಸುವ ಬಗ್ಗೆ ಇತ್ಯಾದಿ ವಿಚಾರಗಳ ಬಗ್ಗೆ ಮಾತನಾಡಿ ರಾಘವ್ ಚಡ್ಡಾ ಜನರ ಮನಗೆದ್ದಿದ್ದರು.
ಇಸ್ಲಾಮಾಬಾದ್: ಪಹಲ್ಗಾಮ್ ದಾಳಿ ಆನಿವರ್ಸರಿ ನೆಪದಲ್ಲಿ ದಾಳಿ ಮಾಡಿದ್ರೆ ನಾವು ಸುಮ್ಮನಿರಲ್ಲ ಎಂದು ಭಾರತಕ್ಕೆ ಪಾಕಿಸ್ತಾನ ಸಚಿವ ಖ್ವಾಜಾ ಆಸಿಫ್ ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ತಾನ ಯಾವುದೇ ದುಸ್ಸಾಹಸ ಮಾಡಿದರೆ ತಕ್ಕ ಪಾಠ ಕಲಿಸಲಾಗುವುದು ಎಂದು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆ ನೀಡಿದ್ದರು. ಅವರ ಹೇಳಿಕೆಗೆ ಈಗ ಪಾಕಿಸ್ತಾನದ ವಿದೇಶಾಂಗ ಸಚಿವ ಖ್ವಾಜಾ ಆಸಿಫ್ ತಿರುಗೇಟು ನೀಡಿದ್ದಾರೆ. ಇದಕ್ಕೆ ಈಗ ಖ್ವಾಜಾ ಆಸಿಫ್ ತಿರುಗೇಟು ನೀಡಿದ್ದಾರೆ. ‘ಇಂತಹ ಬೆದರಿಕೆಗಳು ನಮಗೆ ಹೊಸದೇನಲ್ಲ. ರಾಜಕೀಯ ಹಿತಾಸಕ್ತಿಗಾಗಿ ಆ ಕಡೆಯಿಂದ ಇಂತಹ ಪ್ರಚೋದನಕಾರಿ ಹೇಳಿಕೆಗಳು ಬರುತ್ತಲೇ ಇರುತ್ತವೆ.
ಬೆಂಗಳೂರು: ನಿಮ್ಮ ತಾಯಿಯ ನಂಬಿಕೆಗೆ ಬೆಲೆ ಕೊಟ್ಟು ನಾಸ್ತಿಕ ಎನ್ನುವ ನೀವು ಕ್ರಿಶ್ಚಿಯನ್ ಧರ್ಮದ ಸಂಪ್ರದಾಯದಂತೆ ಅವರ ಅಂತ್ಯ ಸಂಸ್ಕಾರ ಮಾಡಿದ್ರಿ. ಎಲ್ಲರ ನಂಬಿಕೆಯೂ ಅಷ್ಟೇ ಮುಖ್ಯ ಅಲ್ವಾ ಎಂದು ನಟ ಪ್ರಕಾಶ್ ರಾಜ್ ಗೆ ನೆಟ್ಟಿಗರು ಟಾಂಗ್ ಕೊಟ್ಟಿದ್ದಾರೆ. ನಟ ಪ್ರಕಾಶ್ ರಾಜ್ ತಾಯಿ ಮೊನ್ನೆಯಷ್ಟೇ ತೀರಿಕೊಂಡಿದ್ದರು. ಅವರ ತಾಯಿಯ ಅಂತ್ಯ ಸಂಸ್ಕಾರವನ್ನು ಕ್ರಿಶ್ಚಿಯನ್ ಸಂಪ್ರದಾಯದಂತೆ ಮಾಡಲಾಯಿತು. ಚರ್ಚ್ ನಲ್ಲಿ ತಾಯಿಯ ಮೃತದೇಹವಿಟ್ಟು ಪ್ರಾರ್ಥನೆ ಮಾಡುತ್ತಿರುವ ವಿಡಿಯೋಗಳು ಮಾಧ್ಯಮಗಳಲ್ಲಿ ಬಂದಿತ್ತು.
ಕೋಲ್ಕತ್ತಾ: ಕೆಕೆಆರ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದ ವೇಳೆ ಮೈದಾನದಲ್ಲಿ ಅಭಿಷೇಕ್ ಶರ್ಮಾ, ರಿಂಕು ಸಿಂಗ್ ನಡುವೆ ತಮಾಷೆಯ ಪ್ರಸಂಗವೊಂದು ನಡೆದಿದೆ. ನಿನ್ನೆಯ ಪಂದ್ಯವನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ 65 ರನ್ ಗಳಿಂದ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ 226 ರನ್ ಗಳ ಬೃಹತ್ ಮೊತ್ತ ಪೇರಿಸಿತ್ತು. ಅಭಿಷೇಕ್ ಶರ್ಮಾ ಎಂದಿನಂತೆ ಸ್ಪೋಟಕ ಆರಂಭ ನೀಡಿದ್ದರು. ಈ ವೇಳೆ ರಿಂಕು ಸಿಂಗ್ ಅವರ ಬಳಿ ಬಂದು ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ. 21 ಎಸೆತಗಳಿಂದ ಅವರು 4 ಸಿಕ್ಸರ್ ಸಹಿತ 48 ರನ್ ಗಳಿಸಿದರು.
ಬೆಚ್ಚಗೆ ಸುಖವಾಗಿ ಮಲಗಿ ನಿದ್ರೆ ಮಾಡುತ್ತಿದ್ದ ಮರಿ ಆನೆಯನ್ನು ಅಮ್ಮ ಆನೆ ಎದ್ದೇಳೋ ಎಂದು ಏಳಿಸಿದ ಕ್ಯೂಟ್ ವಿಡಿಯೋವೊಂದು ಇಲ್ಲಿದೆ ನೋಡಿ. ಶಾಲೆಗೆ ಹೋಗುವ ಮಕ್ಕಳಿಗೆ ಬೆಳಿಗ್ಗೆ ಎದ್ದೇಳುವುದೇ ಕಷ್ಟ. ಏನೇ ಮಾಡಿದ್ರೂ ಇನ್ನೂ ಐದು ನಿಮಿಷ ಎಂದು ಹೇಳಿ ಮತ್ತೆ ಮುಸುಕಿ ಹಾಕಿ ಮಲಗಿಕೊಳ್ಳುತ್ತಾರೆ. ಈ ಮರಿ ಆನೆಯ ಕತೆಯೂ ಇದೇ ಆಗಿತ್ತು. ಆದರೆ ಪ್ರಾಣಿಗಳು ಈ ರೀತಿ ಮಾಡುವುದನ್ನು ನೋಡಲು ಕ್ಯೂಟ್ ಆಗಿರುತ್ತದೆ. ಮೃಗಾಲಯವೊಂದರಲ್ಲಿ ಅಮ್ಮ ಆನೆ ಮಲಗಿದ್ದ ತನ್ನ ಮರಿ ಆನೆಯನ್ನು ಎಬ್ಬಿಸಲು ಸಾಕಷ್ಟು ಪ್ರಯತ್ನ ಮಾಡುತ್ತದೆ. ಮೊದಲು ಬಾಲ ಹಿಡಿದು ಎಬ್ಬಿಸುವ ಪ್ರಯತ್ನ ಮಾಡುತ್ತದೆ.
ಬೆಂಗಳೂರು: ರಾಜ್ಯದಲ್ಲಿ ಈಗ ಕೆಲವು ಕಡೆ ಬಿಸಿಲಿದ್ದರೆ ಮತ್ತೆ ಕೆಲವು ಕಡೆ ಮಳೆಯಾಗುತ್ತಿದೆ. ಇಂದು ರಾಜ್ಯದ ಹವಾಮಾನದಲ್ಲಿ ಆಗಲಿರುವ ಈ ಮಹತ್ವದ ಬದಲಾವಣೆಯನ್ನು ತಪ್ಪದೇ ಗಮನಿಸಿ. ಇಷ್ಟು ದಿನ ಕೆಲವು ಕಡೆ ಮಳೆಯಿದ್ದರೆ ಮತ್ತೆ ಕೆಲವು ಕಡೆ ಬಿಸಿಲಿನ ವಾತಾವರಣವಿತ್ತು. ಆದರೆ ಇಂದು ಕೆಲವು ಕಡೆ ಗುಡುಗು ಸಹಿತ ಮಳೆಯಿದ್ದರೆ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ವರದಿಗಳು ಸೂಚಿಸುತ್ತಿವೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಅಥವಾ ಸಾಧಾರಣ ಮಳೆಯಾಗಲಿದೆ.
ಶುಕ್ರವಾರವೆಂದರೆ ಲಕ್ಷ್ಮೀ ದೇವಿಗೆ ವಿಶೇಷವಾದ ದಿನವಾಗಿದೆ. ಲಕ್ಷ್ಮೀ ದೇವಿಯ ಪೂಜೆ ಮಾಡುವಾಗ ಹಾಲಿನ ನೈವೇದ್ಯ ಮಾಡಲಾಗುತ್ತದೆ. ಲಕ್ಷ್ಮೀ ದೇವಿಗೆ ಹಾಲಿನ ನೈವೇದ್ಯ ವಿಶೇಷ ಯಾಕೆ? ಹಾಲು ಸಾತ್ವಿಕ ಆಹಾರ ವಸ್ತು. ಇದು ಪರಿಶುದ್ಧತೆಯ ಸಂಕೇತ. ದೇವಿಗೆ ನೈವೇದ್ಯ ನೀಡುವಾಗ ಪರಿಶುದ್ಧ ಮನಸ್ಸಿನಿಂದ ಹಾಲಿನಷ್ಟೇ ಶುದ್ಧ ಮನಸ್ಸಿನಿಂದ ನೀಡಬೇಕು. ಲಕ್ಷ್ಮೀ ದೇವಿಗೆ ಹಾಲು ವಿಶೇಷವಾಗಿರುವುದಕ್ಕೆ ಕಾರಣವೂ ಇದೆ. ಪೌರಾಣಿಕ ಹಿನ್ನಲೆ ಪ್ರಕಾರ ಸಮುದ್ರ ಮಥನ ಸಂದರ್ಭದಲ್ಲಿ ಲಕ್ಷ್ಮೀ ದೇವಿಯು ಕ್ಷೀರ ಸಾಗರದಿಂದ ಉದ್ಭವವಾಗುತ್ತಾಳೆ. ಸಂಸ್ಕೃತದಲ್ಲಿ ಕ್ಷೀರ ಎಂದರೆ ಹಾಲು ಎಂದರ್ಥ.
ಜಾತಕದಲ್ಲಿ ಶುಕ್ರ ಗ್ರಹದ ದೋಷವಿದ್ದರೆ ಯಾವ ಬಣ್ಣದ ಬಟ್ಟೆ ಧರಿಸಬೇಕು, ಯಾವ ಬಟ್ಟೆ ಧರಿಸಬಾರದು ಇದರಿಂದ ಏನು ಬದಲಾವಣೆಯಾಗುತ್ತದೆ ಇಲ್ಲಿದೆ ನೋಡಿ ಸಂಪೂರ್ಣ ವಿವರ. ಶುಕ್ರ ದೋಷದ (ಶುಕ್ರನ ಬಾಧೆ) ಪರಿಣಾಮಗಳನ್ನು ಸಮತೋಲನಗೊಳಿಸಲು ಅಥವಾ ತಗ್ಗಿಸಲು, ಧರಿಸಬೇಕಾದ ಪ್ರಾಥಮಿಕ ಬಣ್ಣ ಬಿಳಿ. ಶುಕ್ರನು ಸೌಂದರ್ಯ, ಐಷಾರಾಮಿ, ಪ್ರೀತಿ ಮತ್ತು ಪರಿಷ್ಕರಣೆಯನ್ನು ಪ್ರತಿನಿಧಿಸುತ್ತಾನೆ. ಈ ಗ್ರಹವು ದುರ್ಬಲವಾಗಿದ್ದಾಗ, ಅದು ನಿಮ್ಮ ಸಂಬಂಧಗಳು, ಆರ್ಥಿಕ ಸೌಕರ್ಯ ಅಥವಾ ಸೃಜನಶೀಲ ಶಕ್ತಿಯ ಮೇಲೆ ಪರಿಣಾಮ ಬೀರಬಹುದು. ಶುಕ್ರನ "ಸಾತ್ತ್ವಿಕ" (ಶುದ್ಧ) ಮತ್ತು ಪ್ರಕಾಶಮಾನವಾದ ಸ್ವಭಾವವನ್ನು ಪ್ರತಿಧ್ವನಿಸುವ ಬಣ್ಣಗಳನ್ನು ಧರಿಸುವುದರಿಂದ ಅದರ ಸಕಾರಾತ್ಮಕ ಪ್ರಭಾವವನ್ನು ಬಲಪಡಿಸಲು ಸಹಾಯ ಮಾಡುತ್ತದೆ.
ಗುರುವಾರ ಅಸ್ಸಾಂನ ಬೊಕಜಾನ್ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುವ ವೇಳೆ ಮಹಿಳೆಯರು ತನಗೆ ತೋರಿದ ಅಪಾರ ಪ್ರೀತಿಗೆ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಗ್ಯಾರಂಟಿ ಮಹಿಳೆಯರಿಗಾಗಿ ಐ ಲವ್ ಯೂ ಟೂ ಎಂದು ಹೇಳಿದರು. ಇದಕ್ಕೆ ನೆರೆದಿದ್ದ ಮಹಿಳೆಯರೆಲ್ಲರೂ ಹರ್ಷದಿಂದ ಕೂಗಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಭ್ಯರ್ಥಿ ರಾಟನ್ ಎಂಗ್ಟಿ ಪರ ಅಬ್ಬರದ ಪ್ರಚಾರದಲ್ಲಿ ಭಾಗಿಯಾದರು. ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಅವರನ್ನು ಗುರಿಯಾಗಿಸಿಕೊಂಡು ಪ್ರಚಾರವನ್ನು ತೀವ್ರಗೊಳಿಸಿದ್ದಾರೆ.
ಗುವಾಹಟಿ: ಪಶ್ಚಿಮ ಏಷ್ಯಾ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ ದೇಶದಲ್ಲಿ "ಅನಿಲ ಅಥವಾ ಇಂಧನದ ಕೊರತೆಯಿಲ್ಲ" ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗುರುವಾರ ಭರವಸೆ ನೀಡಿದ್ದಾರೆ, ಏಕೆಂದರೆ ಜನರು ಯಾವುದೇ ಸಮಸ್ಯೆಗಳನ್ನು ಎದುರಿಸದಂತೆ ಸರ್ಕಾರವು ವಿವಿಧ ಕ್ರಮಗಳನ್ನು ಅಳವಡಿಸಿಕೊಂಡಿದೆ. ಎಎನ್ಎಯೊಂದಿಗೆ ಮಾತನಾಡಿದ ಗಡ್ಕರಿ ಅವರು, ಭಾರತವು ತನ್ನ ಇಂಧನ ಅಗತ್ಯಗಳನ್ನು ಪೂರೈಸಲು ಆಮದುಗಳ ಮೇಲೆ ಅವಲಂಬಿತವಾಗಿದೆ ಎಂದು ಒಪ್ಪಿಕೊಂಡರು ಆದರೆ ಹೆಚ್ಚು ರಫ್ತು-ಕೇಂದ್ರಿತ ವ್ಯಾಪಾರಕ್ಕೆ ತಳ್ಳಲು ಪರ್ಯಾಯ ಆಯ್ಕೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಸರ್ಕಾರದ ಸ್ವಾವಲಂಬನೆಯ ವಿಧಾನವನ್ನು ಎತ್ತಿ ತೋರಿಸಿದರು. ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಇಂದು ದೇಶದಲ್ಲಿ ಗ್ಯಾಸ್, ಇಂಧನದ ಕೊರತೆ ಇಲ್ಲ.ಹೌದು ಕಷ್ಟಗಳಿವೆ.ಆದರೆ
IPL 2026 ರಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ದೊಡ್ಡ ಪಂದ್ಯದ ಮೊದಲು ಒಂದು ಮೋಜಿನ ಕ್ಷಣದಲ್ಲಿ, ಸೂರ್ಯಕುಮಾರ್ ಯಾದವ್ ಎಲ್ಲರ ಗಮನ ಸೆಳೆದರು.ಅವರು ಧುರಂಧರ ಚಿತ್ರದ ಜನಪ್ರಿಯ ಹಾಡಿಗೆ ಹೆಜ್ಜೆಯನ್ನು ಹಾಕಿದ್ದಾರೆ. ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ ಮತ್ತು ಅಭಿಮಾನಿಗಳಲ್ಲಿ ಶೀಘ್ರವಾಗಿ ಜನಪ್ರಿಯವಾಯಿತು. ಇದು ಅವರ ವಿನೋದ ಮತ್ತು ಉತ್ಸಾಹಭರಿತ ವ್ಯಕ್ತಿತ್ವವನ್ನು ತೋರಿಸಿತು.ಮುಂಬೈ ಇಂಡಿಯನ್ಸ್ ಆಟಗಾರ ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ ನಡೆಸಿಕೊಂಡ ತೀತಿ ಇದೀಗ ಭಾರೀ ವೈರಲ್ ಆಗಿದೆ.
ಕೊಲ್ಲಂ: ಇತ್ತೀಚಿನ ಎಲ್ಪಿಜಿ ಮತ್ತು ಇತರ ಇಂಧನಗಳ ಬೆಲೆ ಏರಿಕೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಪರವಾಗಿ ನಿಲ್ಲುವ ಬದಲು ಇಸ್ರೇಲ್, ಅಮೆರಿಕಕ್ಕೆ ತಲೆ ಬಾಗಿದ್ದಾರೆ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು. ಎಲ್ಪಿಜಿ ಮತ್ತು ಇಂಧನ ಬೆಲೆಗಳು ಏರುತ್ತಿವೆ, ಈ ಪರಿಸ್ಥಿತಿಯಲ್ಲಿ ವ್ಯಾಪಾರವು ಕಷ್ಟಕರವಾಗಲಿದೆ. ಇದೆಲ್ಲದರ ಮಧ್ಯೆ, ನರೇಂದ್ರ ಮೋದಿ ನೇತೃತ್ವದ ನಮ್ಮ ಕೇಂದ್ರ ಸರ್ಕಾರದ ನೀತಿ ಏನು? ಅವರು ತಮ್ಮ ಜನರಿಗಾಗಿ ಹೋರಾಡುತ್ತಿಲ್ಲ. ಅವರು ಭಾರತಕ್ಕಾಗಿ ಹೋರಾಡುತ್ತಿಲ್ಲ. ಅವರು ಭಾರತಕ್ಕಾಗಿ ಹೋರಾಡುತ್ತಿಲ್ಲ. ಅವರು ಭಾರತದ ಪರವಾಗಿ ನಿಲ್ಲುತ್ತಿಲ್ಲ. ಅವರು ಮಾಡುತ್ತಿರುವುದು ಅಮೆರಿಕ ಹಾಗೂ ಇಸ್ರೇಲ್ಗೆ ತಲೆ ಬಾಗಿರುವುದುಎ ಎಂದು ಅಸಮಾಧಾನ ಹೊರಹಾಕಿದರು.
ಚಾಮರಾಜನಗರ: ಪ್ರೇಮಿಗಳಿಬ್ಬರು ಆತ್ಮಹತ್ಯೆಮಾಡಿಕೊಂಡ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇರಟ್ಟಿ ಗ್ರಾಮದಲ್ಲಿವರದಿಯಾಗಿದೆ. ಆತ್ಮಹತ್ಯೆಗೆ ಶರಣಾದ ಜೋಡಿಗಳನ್ನು ಹನೂರು ತಾಲೂಕಿನ ಮಿಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಕ್ಕುಂದಿ ಗ್ರಾಮದ ನಾಗೇಂದ್ರ (21) ಪಾಲಾರ್ ಗ್ರಾಮದ ನದಿಯಾ (19) ಎಂದು ಗುರುತಿಸಲಾಗಿದೆ. ಏನಿದು ಪ್ರಕರಣ: ಪಾಲಾರ್ ಗ್ರಾಮದ ಮಾದೇವರ ಪುತ್ರಿ ನದಿಯಾ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಐಪಿಹೆಚ್ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ, ಇದ್ದಕ್ಕಿದ್ದ ಹಾಗೇ ನಾಪತ್ತೆಯಾಗಿದ್ದರು. ಈ ವಿಚಾರವಾಗಿ ಐಪಿಹೆಚ್
ಐಪಿಎಲ್ ಪಂದ್ಯಾಟದ ವೇಳೆ ಎಂಆರ್ಪಿ ಬೆಲೆಗಿಂತ ಹೆಚ್ಚಿನ ಬೆಲೆಯಲ್ಲಿ ನೀರು ಹಾಗೂ ಅಗತ್ಯ ವಸ್ತುಗಳನ್ನು ಮಾರಾಟ ಮಾಡುತ್ತಿದ್ದಾರೆಂದು ಯುವಕರು ಆಕ್ರೋಶ ಹೊರಹಾಕಿದ್ದಾರೆ. ಲಕ್ನೋದ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನೀರು ಮತ್ತು ಇತರ ಅಗತ್ಯ ವಸ್ತುಗಳ ಅತಿಯಾದ ಬೆಲೆಯ ವಿರುದ್ಧ ಯುವಕರು ವಾದ ನಡೆದಸಿದರು.
ಬೆಂಗಳೂರು: ಏಪ್ರಿಲ್ 5ರಂದು 2ಗಂಟೆಗಳ ಕಾಲ ನಮ್ಮ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಬಿಎಂಆರ್ಸಿಎಲ್ ತಿಳಿಸಿದೆ. ಇನ್ನೂ ಮೆಟ್ರೋ ಸ್ಥಗಿತಕೊಳ್ಳಲು ಕಾರಣ ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿ ನಡೆಯಲಿದೆ. ಹೀಗಾಗಿ ಭಾನುವಾರ (ಏ.5ರಂದು) ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಮೆಜೆಸ್ಟಿಕ್ನಿಂದ ಮೈಸೂರು ರಸ್ತೆವರೆಗೆ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ ಎಂದರು.
ಚಿತ್ರಕಲೆಯಿಂದಲೇ ಪ್ರಸಿದ್ಧಿ ಪಡೆದಿರುವ ರಾಜಾ ರವಿವರ್ಮ ಅವರು ರಚಿಸಿದ್ದ ಚಿತ್ರವು ₹167ಕೋಟಿಗೆ ಮಾರಾಟವಾಗಿದೆ. ಈ ಚಿತ್ರವನ್ನು 1890ರಲ್ಲಿ ಈ ಚಿತ್ರವನ್ನು ರಚಿಸಿದ್ದರು. ಈ ಚಿತ್ರವು ಯಶೋಧಾ ಮತ್ತು ಕೃಷ್ಣನ ತೈಲವರ್ಣ ಕಲಾಕೃತಿಯಾಗಿದೆ. ಈ ಮೂಲಕ ಇದು ಹರಾಜಿನಲ್ಲಿ ಮಾರಾಟವಾದ ದುಬಾರಿ ಕಲಾಕೃತಿಯಾಗಿದೆ. ಪ್ರಕಾಶಮಾನವಾದ ಪ್ರದರ್ಶಿಸಲಾದ ಶಿಶು ಕೃಷ್ಣ, ತನ್ನ ತಾಯಿ ಯಶೋದೆಯೊಂದಿಗಿನ ಕ್ಷಣದ ಚಿತ್ರಣವಾಗಿದೆ. ರಕ್ಷಣೆ ಮತ್ತು ದೈವತ್ವ ಎರಡನ್ನೂ ಒಳಗೊಂಡಿರುವ ಕೋಮಲ ದೃಶ್ಯ. ರವಿವರ್ಮನು ತನ್ನ ವೃತ್ತಿಜೀವನದ ಉತ್ತುಂಗದಲ್ಲಿ 1890 ರ ದಶಕದಲ್ಲಿ
ಬೆಂಗಳೂರು: ಮಗನ ಸಾವಿನಿಂದ ಆಘಾತಕ್ಕೊಳಗಾದ ತಾಯೊಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಚಂದ್ರಾಲೇಜೌಟ್ನ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ನಡೆದಿದೆ. ಮಗು ತಾಯಿ, ಸಾಫ್ಟ್ವೇರ್ ಉದ್ಯೋಗಿ ಪ್ರತಿಭಾ ವಾಲಿ (29) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಹಾಂತೇಶ್ ವಾಲಿ ಅವರು ಪೀಣ್ಯ ಎರಡನೇ ಹಂತದಲ್ಲಿರುವ ಏಸ್ ಡಿಸೈನರ್ನಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರ ಪತ್ನಿ ಪ್ರತಿಭಾ ವಾಲಿ ಅವರು ಸಿಲ್ಕ್ ಬೋರ್ಡ್ ಬಳಿಯ ಟೈಮ್ ಟೆಕ್ ಎಂಬ ಕಂಪನಿಯಲ್ಲಿ ವರ್ಕ್ಫ್ರಮ್ ಹೋಂ ಕೆಲಸ ಮಾಡಿಕೊಂಡಿದ್ದರು.
ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ 2026 ರ ಪಂದ್ಯಾಟದ ವೇಳೆ ಫ್ಯಾನ್ಸ್ಗಳು ಕೈ ಕೈ ಮಿಲಾಯಿಸಿಕೊಂಡ ಘಟನೆ ನಡೆದಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗಿದೆ. ವಾಗ್ವಾದದ ವೀಡಿಯೊಗಳು ಈಗಾಗಲೇ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಬಿಸಿಯಾದ ಜಗಳದಲ್ಲಿ ಭಾಗಿಯಾಗಿದ್ದು, ಕ್ರೀಡಾಂಗಣದೊಳಗೆ ಪೂರ್ಣ ಪ್ರಮಾಣದ ಹೋರಾಟಕ್ಕೆ ಕಾರಣವಾಯಿತು. ದೈಹಿಕ ಘರ್ಷಣೆಗೆ ಕಾರಣ ತಕ್ಷಣವೇ ಸ್ಪಷ್ಟವಾಗಿಲ್ಲ, ಆದರೆ ಜಗಳವನ್ನು ಬಿಡಿಸಲು ಪೊಲೀಸರು ಮಧ್ಯ ಪ್ರವೇಶಿಸಿದ್ದಾರೆ.
ಮೂಕ ಪ್ರಾಣಿಗಳ ಪ್ರೀತಿಯು ನಿಸ್ವಾರ್ಥದಿಂದಿರುತ್ತದೆ. ನಾವು ಸಾಸಿವೆಕಾಳಷ್ಟು ಪ್ರೀತಿಯನ್ನು ನೀಡಿದ್ರೆ, ಅದು ಬೆಟ್ಟದಷ್ಟು ಪ್ರೀತಿಯನ್ನು ನೀಡುತ್ತದೆ. ಮನೆ ಮಗಳು ಮದುವೆಯಾಗಿ ಹೋಗುವಾಗ ಬಿಟ್ಟೋಗ್ಬೇಡ ಎಂದು ಶ್ವಾನವೊಂದು ಭಾವುಕರಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮನೆ ಮಗಳಿಗೆ ಮದುವೆಯಾಗಿ ಸಂಜೆ ವೇಳೆ ಗಮಡನ ಮನೆಗೆ ಹೊರಡುವ ವೇಳೆ ಆಕೆ ಸಾಕಿದ್ದ ನಾಯಿಗಳು ಹೊರಡುವಾಗ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಂಪಿ ಬಳಿಯಿರುವ ಅಂಜನಾದ್ರಿ ಬೆಟ್ಟವು ಹನುಮಂತನ ಜನ್ಮಸ್ಥಳ ಎಂದು ಹೇಳಲಾಗುತ್ತದೆ. ಹನುಮಂತನ ದೇವಸ್ಥಾನವನ್ನು ತಲುಪಲು ಸುಮಾರು 570ರಿಂದ 575ಮೆಟ್ಟಿಲುಗಳನ್ನು ಹತ್ತಬೇಕಾಗುತ್ತದೆ. ಏಪ್ರಿಲ್ 2ರಂದು ಹನುಮ ಜಯಂತಿಯನ್ನು ದೇಶದಾದ್ಯಂತ ಆಚರಿಸಲಾಗುತ್ತದೆ. ಈ ವಿಶೇಷ ದಿನದಂದು ಅಂಜನಾದ್ರಿ ಬೆಟ್ಟಗೆ ಹಲವು ಮಂದಿ ಹರಕೆ ತೀರಿಸಲು ಬೆಟ್ಟವನ್ನು ಏರುತ್ತಾರೆ.
ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಕಾಂಗ್ರೆಸ್ ಕೊಡುಗೆ ದೊಡ್ಡ ಸೊನ್ನೆ. ಈ ಕ್ಷೇತ್ರದಲ್ಲಿ ಒಂದೇ ಕುಟುಂಬದ ಸದಸ್ಯರೇ ಹಲವು ವರ್ಷಗಳಿಂದ ಆಡಳಿತದಲ್ಲಿ ಇದ್ದರೂ ಅಭಿವೃದ್ಧಿಗೆ ಏನೂ ಮಾಡಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಆರೋಪಿಸಿದರು.ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕ್ಷೇತ್ರಕ್ಕೆ ಕಾಂಗ್ರೆಸ್ ಶಾಸಕರು, ಸಂಸದರು ಏನು ಮಾಡಲಿಲ್ಲ. ಅಭಿವೃದ್ಧಿ ಏನಿದ್ದರೂ ಬಿಜೆಪಿ ಅವಧಿಯಲ್ಲೇ ಆಗಿರುವುದು. ಜಿ ಎಂ ಸಿದೇಶ್ವರ ಅವರು ಸಂಸದರಾಗಿದ್ದಾಗ ನಾನು ಕೇಂದ್ರ ರೈಲ್ವೆ ಸಚಿವನಾಗಿದ್ದ ವೇಳೆ ತುಮಕೂರು -ಚಿತ್ರದುರ್ಗ- ದಾವಣಗೆರೆ ನೇರ ರೈಲ್ವೆ ಮಾರ್ಗಕ್ಕೆ ಮನವಿ ಸಲ್ಲಿಸಲು ನಿಯೋಗದಲ್ಲಿ ಬಂದಿದ್ದರು.
ಅಮ್ರೋಹಾದಲ್ಲಿ ನಿರ್ಮಾಣ ಕಾರ್ಯದ ವೇಳೆ ಇದ್ದಕ್ಕಿದ್ದಂತೆ ಗೋಡೆ ಕುಸಿದು ಹಲವು ಕಾರ್ಮಿಕರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಈ ಘಟನೆಯೂ ಅಲ್ಲೇ ಸಮೀಪದಲ್ಲೇ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಮ್ರೋಹ ನಗರ ಕೊತ್ವಾಲಿ ಪ್ರದೇಶದ ಬೈಪಾಸ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಅವಘಡ ಸಂಭವಿಸಿದಾಗ ಕಾರ್ಮಿಕರು ಗೋಡೆ ನಿರ್ಮಿಸುತ್ತಿದ್ದರು.
ನವದೆಹಲಿ: ಜನರ ಪರವಾಗಿ ಸಂಸತ್ ನಲ್ಲಿ ಕೆಲವೊಂದು ಪ್ರಮುಖ ಪ್ರಶ್ನೆಗಳನ್ನು ಕೇಳಿ ಜನಪ್ರಿಯರಾಗಿದ್ದ ಸಂಸದ ರಾಘವ್ ಚಡ್ಡಾರನ್ನು ಆಮ್ ಆದ್ಮಿ ಪಕ್ಷ ತನ್ನ ರಾಜ್ಯ ಸಭೆ ಉಪ ನಾಯಕ ಸ್ಥಾನದಿಂದ ಬಿಡುಗಡೆಗೊಳಿಸಿದೆ. ಇದರ ಹಿಂದಿರುವ ಕಾರಣ ಏನು ಎಂದು ಈಗ ಭಾರೀ ಚರ್ಚೆಯಾಗುತ್ತಿದೆ. ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಅವರ ಪತಿಯೂ ಆಗಿರುವ ಯುವ ಸಂಸದ ರಾಘವ್ ಚಡ್ಡಾ, ಸಂಸತ್ ನಲ್ಲಿ ಟೆಲಿಕಾಂ ಸಂಸ್ಥೆಗಳು ಉಳಿದಿರುವ ಡಾಟಾ ಮರುದಿನಕ್ಕೆ ನೀಡಬೇಕು, ರಿಚಾರ್ಜ್ ಮಾಡದೇ ಇದ್ದರೆ ಇನ್ ಕಮಿಂಗ್ ಕರೆಗಳನ್ನೂ ಸ್ಥಗಿತಗೊಳಿಸಬಾರದು ಎಂಬಿತ್ಯಾದಿ ವಿಚಾರಗಳ ಬಗ್ಗೆ ಮಾತನಾಡಿ ಜನರ ಮನಗೆದ್ದಿದ್ದರು.
ಜಕಾರ್ತ: ಇಂಡೊನೇಷ್ಯಾದಲ್ಲಿ ಮತ್ತೆ ಪ್ರಬಲ ಭೂಕಂಪನ ಸಂಭವಿಸಿದೆ. ಇಲ್ಲಿನ ಉತ್ತರ ಭಾಗದಲ್ಲಿ ಗುರುವಾರ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿತ್ತು. ಕೆಲವು ತಾಸಿನ ಬಳಿಕ ಸುನಾಮಿ ಆತಂಕ ದೂರವಾಗಿದೆ ಎಂದು ಇಂಡೋನೇಷ್ಯಾದ ಹವಾಮಾನ ಇಲಾಖೆ ತಿಳಿಸಿದೆ.ಸಾಗರದಾಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ. ಹಲವು ಕಡೆಗಳಲ್ಲಿ ಕಟ್ಟಡಗಳಿಗೆ ಹಾನಿಯಾಗಿದೆ. ಉತ್ತರ ಸುಲವೇಸಿ ಪ್ರಾಂತ್ಯದ ಬಿಟುಂಗ್ ಹಾಗೂ ಉತ್ತರ ಮಾನಡೊ ಪ್ರಾಂತ್ಯದಲ್ಲಿ 10ರಿಂದ 20 ಸೆಕೆಂಡುಗಳ ಕಾಲ ಬಲವಾದ ಕಂಪನ ಉಂಟಾಗಿದೆ.
ಮುಂಬೈ: ಬಹುನಿರೀಕ್ಷಿತ ನಿತೀಶ್ ತಿವಾರಿ ನಿರ್ದೇಶನದ ರಾಮಾಯಣ ಸಿನಿಮಾದ ಟೀಸರ್ ಕೊನೆಗೂ ರಿಲೀಸ್ ಆಗಿದೆ. ಮರ್ಯಾದಾ ಪುರುಷೋತ್ತಮನ ಪಾತ್ರಕ್ಕೆ ಬಾಲಿವುಡ್ ನಟ ರಣಬೀರ್ ಕಪೂರ್ ಜೀವತುಂಬಿದ್ದಾರೆ.ನಿತೇಶ್ ತಿವಾರಿ ನಿರ್ದೇಶಿಸಿರುವ `ರಾಮಾಯಣ ಚಿತ್ರವನ್ನ ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಹಾಗೂ ನಮಿತ್ ಮಲ್ಲೋತ್ರಾ ಜಂಟಿಯಾಗಿ ನಿರ್ಮಿಸಿದ್ದಾರೆ. ಹನುಮಂತನ ಲುಕ್ನ್ನ ಸೀಕ್ರೆಟಾಗಿ ಇಡಲಾಗಿದೆ. ಹನುಮಂತನ ಪಾತ್ರದಲ್ಲಿ ಸನ್ನಿ ಡಿಯೋಲ್ ನಟಿಸಿದ್ದಾರೆ. ಬಹುತಾರಾಗಣದ ರಾಮಾಯಣದ ಫಸ್ಟ್ ಪಾರ್ಟ್ ನವೆಂಬರ್ ತಿಂಗಳಲ್ಲಿ ತೆರೆಗೆ ಬರಲಿದೆ.ಹನುಮ ಜಯಂತಿ ಹಿನ್ನೆಲೆ ಸಿನಿಮಾದ ಟೀಸರ್ನ್ನು ಇಂದು ರಿಲೀಸ್ ಮಾಡಲಾಗಿದೆ. 2:38 ನಿಮಿಷದ ಝಲಕ್ ಹಂಚಿಕೊಂಡಿದ್ದು, ಮರ್ಯಾದಾ ಪುರುಷೋತ್ತಮ ರಾಮನ ರಾಜ್ಯಭಾರದಿಂದ ಹಿಡಿದು ವನವಾಸಕ್ಕೆ ತೆರಳುವವರೆಗಿನ ಸಣ್ಣ ತುಣುಕನ್ನ ವಿವರಿಸಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯ ಪೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವುದಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ಪ್ರಸ್ತಾವ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.ಬೆಂಗಳೂರಿನ ಎಚ್ ಎನ್ ಚಂದನಾ ಮತ್ತು ಎಸ್ ವೆಂಕಟೇಶ್ ಅವರು ಅರ್ಜಿ ಸಲ್ಲಿಸಿದ್ದು, ಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಆಯುಕ್ತರು, ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರನ್ನು ಪ್ರತಿವಾದಿಗಳನ್ನಾಗಿಸಲಾಗಿದೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ, ಹಿಂದಿ ಭಾಷೆ ಸೇರಿದಂತೆ ತೃತೀಯ ಭಾಷೆಗಳು ಕಡ್ಡಾಯವಲ್ಲ. ಈ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ಗಳನ್ನಾಗಿ ಪರಿಗಣಿಸಲಾಗುತ್ತದೆ.
ಚಿಕ್ಕಮಗಳೂರು: ನೀವು ಖರ್ಚಿಗೆ ಸ್ವಲ್ಪ ಕೊಟ್ಟರೆ ಜಾಸ್ತಿ ದುಡ್ಡು ಬರೀತೀನಿ, ಇಲ್ಲಾಂದ್ರೆ ಎಷ್ಟಿದೆಯೋ ಅಷ್ಟೇ ಬರೀತೀನಿ ಎಂದು ಫಾರೆಸ್ಟ್ ಆಫೀಸರ್ ಓಪನ್ ಆಗಿ ಲಂಚ ಕೇಳಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಮ್ಮ ದೇಶದಲ್ಲಿ ಸರ್ಕಾರೀ ಅಧಿಕಾರಿಗಳು ಲಂಚ ಕೇಳುವುದು ಮಾಮೂಲಾಗಿಬಿಟ್ಟಿದೆ. ಎಲ್ಲಾ ಇಲಾಖೆಯಲ್ಲೂ ಜನ ಸಾಮಾನ್ಯರು ತಮ್ಮ ಕೆಲಸವಾಗಬೇಕೆಂದರೆ ಲಂಚ ಕೊಡುವ ಪರಿಸ್ಥಿತಿ ಬಂದಿದೆ. ಇದೀಗ ಅಂತಹದ್ದೇ ಲಂಚಕೋರ ಅಧಿಕಾರಿಯ ವಿಡಿಯೋ ವೈರಲ್ ಆಗಿದೆ. ಚಿಕ್ಕಮಗಳೂರಿನ ಫಾರೆಸ್ಟ್ ಅಧಿಕಾರಿಯೊಬ್ಬರು ಓಪನ್ ಆಗಿಯೇ ರೈತರಿಂದ ಲಂಚ ಕೇಳಿದ್ದಾರೆ.
ಜಾತಕದಲ್ಲಿ ಗುರು ಗ್ರಹದ ದೋಷವಿದ್ದರೆ ಯಾವ ಬಣ್ಣದ ಬಟ್ಟೆ ಧರಿಸಬೇಕು, ಇದರಿಂದ ಏನು ಬದಲಾವಣೆಯಾಗುತ್ತದೆ ಇಲ್ಲಿದೆ ನೋಡಿ ಸಂಪೂರ್ಣ ವಿವರ. ಹಳದಿ ಬಣ್ಣವು ಗುರುವಿನ ಬಣ್ಣವಾಗಿದ್ದು, ಬುದ್ಧಿವಂತಿಕೆ, ವಿಸ್ತರಣೆ, ಸಮೃದ್ಧಿ ಮತ್ತು ಆಧ್ಯಾತ್ಮಿಕ ಬೆಳವಣಿಗೆಯನ್ನು ಪ್ರತಿನಿಧಿಸುತ್ತದೆ. ಹಳದಿ ಬಣ್ಣದ ಉಡುಪುಗಳನ್ನು ಧರಿಸುವುದರಿಂದ ಗುರು ಗ್ರಹ ದೋಷದ ಪರಿಣಾಮ ಕಡಿಮೆಯಾಗುವುದು. ಹಳದಿ ಬಣ್ಣ ಎಂಬುದು ಸಾತ್ವಿಕ ಬಣ್ಣವಾಗಿದ್ದು ಇದರಿಂದ ಬೃಹಸ್ಪತಿ ದೇವರು ಪ್ರಸನನ್ನಾಗುತ್ತಾನೆ. ವಿಶೇಷವಾಗಿ ಗುರುವಾರಗಳಂದು ಹಳದಿ ಬಟ್ಟೆ ಧರಿಸಬೇಕು. ಒಂದು ವೇಳೆ ಹಳದಿ ಬಣ್ಣದ ಬಟ್ಟೆ ಧರಿಸಲು ಸಾಧ್ಯವಾಗುತ್ತಿಲ್ಲ ಎಂದರೆ ಪಾಕೆಟ್ ನಲ್ಲಿ ಹಳದಿ ಕರ್ಚಿಫ್ ಆದರೂ ಇಟ್ಟುಕೊಂಡಲ್ಲಿ ಉತ್ತಮ.
ಬಾಗಲಕೋಟೆ: ಸುರ್ಜೇವಾಲಾ ಅವರೇ, ಸರಕಾರ ನಿಮ್ಮದೇ ಇದೆ. ನಿಮಗೆ ತಾಕತ್ತಿದ್ದರೆ ವಿದ್ಯಾರ್ಥಿ ಮತದಾರರನ್ನು ಇವತ್ತೇ ಬಂಧಿಸಿ ತೋರಿಸಿ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ಸವಾಲು ಹಾಕಿದ್ದಾರೆ.ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಯುವಕರು, ಕಾಲೇಜು ವಿದ್ಯಾರ್ಥಿಗಳು ಮತ ಹಾಕಿದರೆ ಬಂಧಿಸುವುದಾಗಿ ಹೇಳುವ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಅವರು ಭಯ ಸೃಷ್ಟಿಸುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಖಂಡಿಸಿದರು. ರಾಜ್ಯದಲ್ಲಿ ಇನ್ನೂ ಎಸ್.ಐ.ಆರ್.ಆಗಿಲ್ಲ ಎಂದು ತಿಳಿಸಿದರು.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಇದೀಗ ಈ ವಾರ ಮತ್ತೆ ಕೆಲವು ವರ್ಗದ ಅಡಿಕೆ ಬೆಲೆಯಲ್ಲಿ ನಿನ್ನೆ ಏರಿಕೆಯಾಗಿತ್ತು. ಆದರೆ ಇಂದು ಯಥಾಸ್ಥಿತಿಯಲ್ಲಿದೆ. ಹೊಸ ಅಡಿಕೆ ಬೆಲೆ 490 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 555 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 555 ರೂ.ಗಳಷ್ಟಾಗಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಏರಿಕೆಯಾಗಿದ್ದರೆ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಏರಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ನಿನ್ನೆ 1,54,910.00 ರೂ.ಗಳಿತ್ತು. ಆದರೆ ಇಂದು ಏರಿಕೆಯಾಗಿದ್ದು 1,55,290.00 ರೂ.ಗಳಷ್ಟಿದೆ.
ಮುಂಬೈ: ರಣಬೀರ್ ಕಪೂರ್ ನಾಯಕರಾಗಿರುವ ರಾಮಾಯಣ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ರಾಮಾಯಣ ಟೀಸರ್ ನಲ್ಲಿ ಯಶ್ ಇದ್ದಾರಾ ಎಂದು ತಿಳಿಯಬೇಕಿದ್ದರೆ ಈ ವಿಡಿಯೋ ನೋಡಿ. ನಿತೀಶ್ ತಿವಾರಿ ನಿರ್ದೇಶನದ ರಾಮಾಯಣ ಸಿನಿಮಾದಲ್ಲಿ ರಣಬೀರ್ ಕಪೂರ್ ರಾಮನಾಗಿ ಅಭಿನಯಿಸಿದ್ದಾರೆ. ಇನ್ನು ಲಂಕಾಧೀಶ ರಾವಣನಾಗಿ ನಮ್ಮ ಕನ್ನಡದ ಹೆಮ್ಮೆಯ ನಟ ರಾಕಿಂಗ್ ಸ್ಟಾರ್ ಯಶ್ ನಟಿಸಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಸೀತೆಯಾಗಿ ಅಭಿನಯಿಸಿದ್ದಾರೆ. ಇದುವರೆಗೆ ಹಲವು ರಾಮಾಯಣ ಆಧರಿತ ಸಿನಿಮಾಗಳು ಮೂಡಿಬಂದಿವೆ. ಆದರೆ ಈ ಸಿನಿಮಾದಲ್ಲಿ ವಿಶೇಷವಾಗಿ ಅರಣ್ಯ ಕಾಂಡ, ಬಾಲಕಾಂಡಗಳನ್ನು ಹೈಲೈಟ್ ಮಾಡಲಾಗಿದ್ದು ಸಾಹಸ ದೃಶ್ಯಗಳನ್ನು ವಿಭಿನ್ನವಾಗಿ ತೋರಿಸಲಾಗಿದೆ.
ಬಿಸಿಲಿಗೆ ಪ್ರಜ್ಞೆ ತಪ್ಪಿ ಬಿದ್ದಿದ್ದ ತಾಯಿಗೆ ಈ ಬಾಲಕ ಮಾಡಿದ ಕೆಲಸ ನೋಡಿದ್ರೆ ನಿಜಕ್ಕೂ ನಮಗೆ ಪಾಠವಾಗಬೇಕು. ಪುಟ್ಟ ಬಾಲಕನಾದರೂ ಈತನಲ್ಲಿ ಅಮ್ಮನ ಬಗ್ಗೆ ಎಷ್ಟು ಕಾಳಜಿಯಿದೆ ಎನಿಸುತ್ತದೆ. ಅಮ್ಮ ಎಂದರೆ ನಮ್ಮ ಸರ್ವಸ್ವವಾಗಿರುತ್ತಾಳೆ. ಮಕ್ಕಳಿಗಾಗಿ ನಮ್ಮ ಮನಸ್ಸು ಎಷ್ಟು ಮಿಡಿಯುತ್ತದೋ ಬಹುಶಃ ಎಲ್ಲರಿಗೂ ಅಮ್ಮನ ಬಗ್ಗೆಯೂ ಅದೇ ವಿಶೇಷ ಕಾಳಜಿಯಿರುತ್ತದೆ. ಅದಕ್ಕೆ ಬಡತನ, ಸಿರಿತನ ಯಾವುದೂ ಅಡ್ಡಿ ಬರಲ್ಲ. ಇದೇ ರೀತಿ ಪುಟ್ಟ ಬಾಲಕನೊಬ್ಬ ತನ್ನ ತಾಯಿಯನ್ನು ಟ್ರೀಟ್ ಮಾಡಿದ ರೀತಿ ನಮ್ಮ ಹೃದಯ ಕರಗಿಸುತ್ತದೆ. ಇನ್ನೂ 9-10 ವರ್ಷದ ಪುಟ್ಟ ಬಾಲಕ ಕೈಯಲ್ಲಿ ನೀರು ಹಿಡಿದುಕೊಂಡು ಸುಡು ಬಿಸಿಲಿನಲ್ಲಿ ಬರಿಗಾಲಿನಲ್ಲಿ ಓಡುತ್ತಿರುತ್ತಾನೆ.
ಬೆಂಗಳೂರು: ಆರ್ ಸಿಬಿ ತಂಡದ ರೊಮಾರಿಯೋ ಶೆಫರ್ಡ್ ಹೇಗೆ ಬ್ಯಾಟಿಂಗ್ ಮಾಡ್ತಾರೆ ಎಂದು ವಿರಾಟ್ ಕೊಹ್ಲಿ ಅನುಕರಿಸಿದ ಫನ್ನಿ ವಿಡಿಯೋವೊಂದು ಇಲ್ಲಿದೆ ನೋಡಿ. ವಿರಾಟ್ ಕೊಹ್ಲಿ ಅಭ್ಯಾಸದ ವೇಳೆಯೂ ನೋಡುಗರಿಗೆ ಮನರಂಜನೆ ನೀಡುತ್ತಲೇ ಇರುತ್ತಾರೆ. ಹಲವು ಕ್ರಿಕೆಟಿಗರ ವಿಶಿಷ್ಟ ಶೈಲಿಯನ್ನು ಅನುಕರಿಸುವುದರಲ್ಲಿ ಕೊಹ್ಲಿ ಎತ್ತಿದ ಕೈ. ಭಾರತದವರೇ ಆದ ಅನೇಕ ಕ್ರಿಕೆಟಿಗರನ್ನು ಕೊಹ್ಲಿ ಅನುಕರಿಸಿದ್ದು ಇದೆ. ಕೆಲವೊಮ್ಮೆ ಪಂದ್ಯದ ನಡುವೆ ಎದುರಾಳಿ ಆಟಗಾರನನ್ನು ಅನುಕರಿಸಿ ಎಲ್ಲರ ಮುಖದಲ್ಲಿ ನಗು ತರಿಸಿಬಿಡುತ್ತಾರೆ.
ಬೆಂಗಳೂರು: ರಾಜ್ಯ ಮತ್ತು ಕೇಂದ್ರದ ಆರ್ಥಿಕತೆ ಬಗ್ಗೆ ಒಂದೇ ಸುಳ್ಳನ್ನು ನೂರು ಬಾರಿ ಹೇಳಿ ಸಣ್ಣವರಾಗಬೇಡಿ ಎಂದು ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್ ಅಶೋಕ್ ಟಾಂಗ್ ಕೊಟ್ಟಿದ್ದಾರೆ.ರಾಜ್ಯಕ್ಕೆ ಕೇಂದ್ರದಿಂದ ಯಾವುದೇ ಅನುದಾನ ಸಿಗುತ್ತಿಲ್ಲ, ರಾಜ್ಯದ ಬಜೆಟ್ ಕೇಂದ್ರದ ಬಜೆಟ್ ಗಿಂತಲೂ ಉತ್ತಮ ಎಂದು ಸಿಎಂ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಇದೀಗ ಯುಪಿಎ ಅವಧಿಗಿಂತಲೂ ಎನ್ ಡಿಎ ಅವಧಿಯಲ್ಲಿ ರಾಜ್ಯಕ್ಕೆ ಹೆಚ್ಚು ಅನುದಾನ ಸಿಕ್ಕಿದೆ ಎಂಬ ವರದಿಗಳನ್ನು ಉಲ್ಲೇಖಿಸಿ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಹೆಗಲ ಮೇಲಿನ ಭಾರ, ಮನಸ್ಸಿನಲ್ಲಿರುವ ನೋವಿನಿಂದ ವ್ಯಕ್ತಿಯೊಬ್ಬ ಕಣ್ಣೀರು ಹಾಕುತ್ತಾ ಭಾರದ ವಸ್ತು ಹೊರುವ ಕೆಲಸ ಮಾಡುತ್ತಾನೆ. ಈತನ ವಿಡಿಯೋ ಈಗ ನೆಟ್ಟಿಗರ ಮನಗೆದ್ದಿದೆ.ಸೋಷಿಯಲ್ ಮೀಡಿಯಾದಲ್ಲಿ ಕೆಲವೊಂದು ದೃಶ್ಯಗಳು ನಿಜಕ್ಕೂ ನಮ್ಮ ಕಣ್ಣು ತೇವವಾಗಿಸುತ್ತದೆ. ಅಂತಹದ್ದೇ ಘಟನೆಯಿದು. ನಮ್ಮ ಕುಟುಂಬ ಚೆನ್ನಾಗಿರಬೇಕು, ಸಲಹಬೇಕು ಎಂದು ಹಲವರು ಎಷ್ಟೇ ಕಷ್ಟವಾದರೂ ಕೆಲಸ ಮಾಡುತ್ತಾರೆ.ಅದೇ ರೀತಿ ಈ ವ್ಯಕ್ತಿಯೂ ತನ್ನ ಕುಟುಂಬದ ನಿರ್ವಹಣೆಗಾಗಿ ಮನಸ್ಸಿನಲ್ಲಿ ನೋವಿದ್ದರೂ ಭಾರವಾದ ಫ್ರಿಡ್ಜ್ ಹೊರುವ ಕೆಲಸ ಮಾಡುತ್ತಾನೆ.