ಹೈದರಾಬಾದ್: ಐಪಿಎಲ್ 2026 ರಲ್ಲಿ ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅಭಿಷೇಕ್ ಶರ್ಮಾ ಭರ್ಜರಿ ಶತಕ ಹೊಡೆದಾಗ ಅವರ ತಂದೆಯ ಸೆಲೆಬ್ರೇಷನ್ ವಿಡಿಯೋ ಈಗ ವೈರಲ್ ಆಗಿದೆ. ನಿನ್ನೆಯ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 242 ರನ್ ಗಳಿಸಿದರು. ಇದಕ್ಕೆ ಉತ್ತರವಾಗಿ ಡೆಲ್ಲಿ 195 ರನ್ ಗಳಿಸಿತು. ಈ ಪಂದ್ಯವನ್ನು ಹೈದರಾಬಾದ್ 47 ರನ್ ಗಳಿಂದ ಗೆದ್ದುಕೊಂಡಿತು. ಈ ಪಂದ್ಯದ ಹೈಲೈಟ್ ಎಂದರೆ ಅಭಿಷೇಕ್ ಶರ್ಮಾ ಶತಕ. ಸತತ ರನ್ ಬರಗಾಲ ಎದುರಿಸುತ್ತಿದ್ದ ಅಭಿಷೇಕ್ ಶರ್ಮಾ ಈ ಪಂದ್ಯದಲ್ಲಿ ತಮ್ಮ ಎಂದಿನ ಚಾರ್ಮ್ ಪ್ರದರ್ಶಿಸಿದರು.
ನವದೆಹಲಿ: ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದಿದ್ದಕ್ಕೆ ವಿವಾದವಾಗುತ್ತಿದ್ದಂತೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಹೇಳಿಕೆಗೆ ಸಮಜಾಯಿಷಿ ಕೊಟ್ಟಿದ್ದಾರೆ. ತಮಿಳುನಾಡು ಚುನಾವಣಾ ಪ್ರಚಾರದ ವೇಳೆ ಎಐಡಿಎಂಕೆ ಜೊತೆಗೆ ಬಿಜೆಪಿ ಮೈತ್ರಿಯನ್ನು ಟೀಕಿಸುವ ಭರದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಲಿಗೆ ಹರಿಬಿಟ್ಟಿದ್ದರು. ಮೋದಿ ಒಬ್ಬ ಭಯೋತ್ಪಾದಕ. ಅವರ ಜೊತೆ ಎಐಡಿಎಂಕೆ ಯಾಕೆ ಸೇರಿಕೊಂಡಿದೆ ಎಂದು ಪ್ರಶ್ನೆ ಮಾಡಿದ್ದರು. ಅವರ ಹೇಳಿಕೆಗೆ ರಾಷ್ಟ್ರ ಮಟ್ಟದಲ್ಲಿ ಭಾರೀ ಆಕ್ರೋಶ ಎದುರಾಯಿತು. ಪ್ರಧಾನಿ ಹುದ್ದೆಯಲ್ಲಿರುವ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಹಿರಿಯ ರಾಜಕಾರಣಿಯೊಬ್ಬರು ಕರೆದಿದ್ದು ಕಾಂಗ್ರೆಸ್ ಮನಸ್ಥಿತಿ ಸೂಚಿಸುತ್ತದೆ.
ನ್ಯೂಯಾರ್ಕ್: ಇರಾನ್ ಜೊತೆ ಈ ಹಿಂದೆ ಒಪ್ಪಂದವಾಗಿದ್ದ 15 ದಿನಗಳ ಕದನ ವಿರಾಮ ಕೊನೆಗೊಳ್ಳಲು ಕೆಲವೇ ಕ್ಷಣಗಳಿರುವಾಗ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ. ಇರಾನ್ ಮತ್ತು ಅಮೆರಿಕಾ ನಡುವೆ 15 ದಿನಗಳ ಕದನ ವಿರಾಮವಾಗಿತ್ತು. ಇದರ ನಡುವೆಯೂ ಎರಡೂ ದೇಶಗಳ ನಡುವೆ ಘರ್ಷಣೆಗಳು ಮುಂದುವರಿದೇ ಇತ್ತು. ಆದರೂ ಮಾತುಕತೆ ಪ್ರಯತ್ನವೂ ನಡೆದಿತ್ತು. ಆದರೆ ಇದು ಯಾವುದೂ ಫಲ ನೀಡಿಲ್ಲ. ಹೀಗಾಗಿ ಇಂದಿನಿಂದ ಮತ್ತೆ ಯುದ್ಧ ಶುರುವಾಗುತ್ತದೇನೋ ಎಂದು ಆತಂಕ ಎಲ್ಲರಲ್ಲಿತ್ತು.
ನವದೆಹಲಿ: ಪೆಹಲ್ಗಾಮ್ ನಲ್ಲಿ ಉಗ್ರರು ಪೈಶಾಚಿಕ ಕೃತ್ಯ ನಡೆಸಿ ಇಂದಿಗೆ ಒಂದು ವರ್ಷವಾಗಿದೆ. ಈ ಹಿನ್ನಲೆಯಲ್ಲಿ ಪೆಹಲ್ಗಾಮ್ ದಾಳಿ ಸಂತ್ರಸ್ತರಿಗೆ ನಮನ ಸಲ್ಲಿಸಿರುವ ಪ್ರಧಾನಿ ಮೋದಿ ಈ ಕೃತ್ಯವನ್ನು ಯಾವತ್ತೂ ನಾವು ಮರೆಯಲ್ಲ ಎಂದು ಖಡಕ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಏಪ್ರಿಲ್ 22, 2025 ರಂದು ಇದೇ ದಿನ ಬೈಸರಣ್ ವ್ಯಾಲಿಯಲ್ಲಿ ತಮ್ಮ ಕುಟುಂಬದವರ ಜೊತೆ ಸಂತೋಷದಿಂದ ಕಾಲ ಕಳೆಯುತ್ತಿದ್ದ ಭಾರತೀಯ ನಾಗರಿಕರ ಮೇಲೆ ಪಾಕ್ ಪ್ರೇರಿತ ಉಗ್ರರು ನೀನು ಹಿಂದೂನಾ, ಮುಸ್ಲಿಮಾ ಎಂದು ಧರ್ಮ ಕೇಳಿ ಕುಟುಂಬದವರ ಮುಂದೆಯೇ ಪುರುಷರನ್ನು ಗುಂಡಿಕ್ಕಿ ಕೊಂದಿದ್ದರು. ಘಟನೆಯಲ್ಲಿ 26 ಮಂದಿ ಸಾವನ್ನಪ್ಪಿದ್ದರು.
ಜಮ್ಮು ಕಾಶ್ಮೀರ: ಕಳೆದ ವರ್ಷ ಇದೇ ದಿನ ಪೆಹಲ್ಗಾಮ್ ನಲ್ಲಿ ಪಾಕ್ ಪ್ರೇರಿತ ಭಯೋತ್ಪಾದಕರು ಭೀಕರ ದಾಳಿ ನಡೆಸಿ 26 ಹಿಂದೂ ನಾಗರಿಕರನ್ನು ಕೊಂದು ಹಾಕಿದ್ದರು. ಈ ಹೇಯ ಕೃತ್ಯಕ್ಕೆ ಇಂದು ವರ್ಷವಾಗಿದ್ದು, ಇದೀಗ ಪ್ರವಾಸಿಗರು ಅಲ್ಲಿಗೆ ಬರುತ್ತಿದ್ದಾರಾ, ಸೆಕ್ಯುರಿಟಿ ಹೇಗಿದೆ ಇಲ್ಲಿದೆ ವಿವರ. ಪೆಹಲ್ಗಾಮ್ ನ ಬೈಸರಣ್ ಹುಲ್ಲುಗಾವಲಿನ ಮೇಲೆ ತಮ್ಮ ಕುಟುಂಬದವರ ಜೊತೆ ಸಂತೋಷವಾಗಿ ಕಾಲ ಕಳೆಯುತ್ತಿದ್ದ ಭಾರತೀಯ ಮುಗ್ಧ ನಾಗರಿಕರ ಮೇಲೆ ಅಡವಿ ಕಡೆಯಿಂದ ಬಂದ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿ ಹತ್ಯಾಕಾಂಡ ನಡೆಸಿದ್ದರು.
ಜಮ್ಮು ಕಾಶ್ಮೀರ: ನೀನು ಹಿಂದೂನಾ ಎಂದು ಮಹಿಳೆಯರ ಸಿಂಧೂರ ಅಳಿಸಿ ಹಾಕಿದ ಪೆಹಲ್ಗಾಮ್ ಉಗ್ರದಾಳಿಗೆ ಇಂದು ವರ್ಷ ತುಂಬಿದೆ. ಆ ದಿನವನ್ನು ಭಾರತ ಎಂದಿಗೂ ಮರೆಯದು. ಕಳೆದ ವರ್ಷ ಇದೇ ದಿನ ಕಾಶ್ಮೀರ ಕಣಿವೆಯ ಪೆಹಲ್ಗಾಮ್ ನಲ್ಲಿ ತಮ್ಮ ಕುಟುಂಬಸ್ಥರೊಂದಿಗೆ ಸಂತೋಷದಿಂದ ಕಾಲ ಕಳೆಯುತ್ತಿದ್ದ ಭಾರತೀಯ ಪ್ರವಾಸಿಗರ ಮೇಲೆ ಪಾಕಿಸ್ತಾನ ಪ್ರೇರಿತ ಉಗ್ರರು ಗುಂಡಿನ ಮಳೆಗೆರೆದಿದ್ದರು. ಪೆಹಲ್ಗಾಮ್ ಕಾಡು ಪ್ರದೇಶದಿಂದ ವ್ಯೂ ಪಾಯಿಂಟ್ ಕಡೆಗೆ ಬಂದ ಉಗ್ರರು ಅಲ್ಲಿ ಸಿಕ್ಕ ಸಿಕ್ಕವರನ್ನು ನೀನು ಹಿಂದೂನಾ, ಮುಸ್ಲಿಮಾ ಎಂದು ಕೇಳಿ ಗಂಡು ಮಕ್ಕಳನ್ನೇ ಟಾರ್ಗೆಟ್ ಮಾಡಿ ಗುಂಡಿಕ್ಕಿ ಹತ್ಯೆ ಮಾಡಿದ್ದರು.
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉರಿಬಿಸಿಲು ಹೆಚ್ಚಾಗುತ್ತಿದ್ದರೆ ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ಇಂದು ಯಾವ ಜಿಲ್ಲೆಗಳಿಗೆ ಬಿಸಿಲು, ಯಾವ ಜಿಲ್ಲೆಗಳಿಗೆ ಮಳೆಯಾಗಲಿದೆ ಇಲ್ಲಿದೆ ಹವಾಮಾನ ವರದಿ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ಸಣ್ಣ ಮಟ್ಟಿಗೆ ಮಳೆಯಾಗಿತ್ತು. ದಕ್ಷಿಣ ಕನ್ನಡ, ಚಿಕ್ಕಮಗಳೂರಿನ ಕೆಲವು ಕಡೆ ಆಲಿಕಲ್ಲು ಮಳೆಯಾದ ಘಟನೆಗಳೂ ಕಂಡುಬಂದಿದ್ದವು. ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸೂಚನೆಯಿದೆ.
ವಿದ್ಯಾಭ್ಯಾಸದಲ್ಲಿ ಎದುರಾಗುವ ತೊಡಕುಗಳನ್ನು ನಿವಾರಿಸಬೇಕು ಎಂದರೆ ಸರಸ್ವತಿ ದೇವಿಯ ಅನುಗ್ರಹ ಪಡೆಯಬೇಕು. ಅದಕ್ಕಾಗಿ ಇಂದು ಸರಸ್ವತೀ ದ್ವಾದಶ ನಾಮ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.ಸರಸ್ವತೀ ತ್ವಯಂ ದೃಷ್ಟ್ಯಾ ವೀಣಾಪುಸ್ತಕಧಾರಿಣೀ ।ಹಂಸವಾಹ ಸಮಾಯುಕ್ತಾ ವಿದ್ಯಾದಾನಕರೀ ಮಮ ॥ 1 ॥ ಪ್ರಥಮಂ ಭಾರತೀ ನಾಮಾ ದ್ವಿತೀಯಂ ಚ ಸರಸ್ವತೀ ।ತೃತೀಯಂ ಶಾರದಾದೇವೀ ಚತುರ್ಥಂ ಹಂಸವಾಹನಾ ॥ 2 ॥ ಪಂಚಮಂ ಜಗತೀಖ್ಯಾತಂ ಷಷ್ಠಂ ವಾಗೀಶ್ವರೀ ತಥಾ ।ಕೌಮಾರೀ ಸಪ್ತಮಂ ಪ್ರೋಕ್ತಮಷ್ಟಮಂ ಬ್ರಹ್ಮಚಾರಿಣೀ ॥ 3 ॥ ನವಮಂ ಬುದ್ಧಿಧಾತ್ರೀ ಚ ದಶಮಂ ವರದಾಯಿನೀ ।ಏಕಾದಶಂ ಕ್ಷುದ್ರಘಂಟಾ ದ್ವಾದಶಂ ಭುವನೇಶ್ವರೀ ॥ 4 ॥
ಹೈದರಾಬಾದ್: ಅಭಿಷೇಕ್ ಶರ್ಮಾ ಅವರ ಸ್ಟೋಟಕ ಶತಕದ ನೆರವಿನಿಂದ ಸನ್ರೈಸರ್ಸ್ ಹೈದರಾಬಾದ್ ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 31ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 47 ರನ್ಗಳ ಭರ್ಜರಿ ಗೆಲುವು ಸಾಧಿಸಿತು.ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಎಸ್ಆರ್ಎಚ್ ಪರ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಅವರು ಕೇವಲ 68 ಎಸೆತಗಳಲ್ಲಿ 10 ಬೌಂಡರಿ ಹಾಗೂ 10 ಸಿಕ್ಸರ್ ಸಹಿತ ಅಜೇಯ 135 ರನ್ ಗಳಿಸಿದರು. ಟ್ರಾವಿಸ್ ಹೆಡ್ (37 ರನ್), ನಾಯಕ ಇಶಾನ್ ಕಿಶನ್ (25 ರನ್) ಹಾಗೂ ಕ್ಲಾಸೆನ್ (37ರನ್) ಕೂಡ ಜವಾಬ್ದಾರಿಯುತ ಇನ್ನಿಂಗ್ಸ್ ಆಡಿದರು. 20 ಓವರ್ಗಳ ಅಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 242 ರನ್ ಗಳಿಸಿತು.
ಹೈದರಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ನ 31ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟರ್ ಅಭಿಷೇಕ್ ಅಬ್ಬರಿಸಿ ಬೊಬ್ಬಿರಿದಿದ್ದಾರೆ. 68 ಎಸೆತಗಳಲ್ಲಿ ಔಟಾಗದೇ 135 ರನ್ ಬಾರಿಸಿದ್ದಾರೆ. ಹೈದರಾಬಾದ್ ಪರ ಅಭಿಷೇಕ್ ಶರ್ಮಾ ಕೇವಲ 47 ಎಸೆತಗಳಲ್ಲಿ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಬೌಲಿಂಗ್ ಸ್ನೇಹಿ ಪಿಚ್ನಲ್ಲಿ, ನಿಧಾನಗತಿಯ ಆರಂಭದ ನಂತರ ಗೇರ್ ಬದಲಾಯಿಸಿ, ಈ ಆವೃತ್ತಿಯ ಮೊದಲ ಶತಕವನ್ನು ದಾಖಲಿಸಿದರು. ಇದು ಅವರ 9ನೇ ಟಿ20 ಶತಕವಾಗಿದೆ. ಅವರ ಶತಕದಲ್ಲಿ 10 ಬೌಂಡರಿ ಮತ್ತು 10 ಸಿಕ್ಸರ್ಗಳಿದ್ದವು. ಅವರ ಆಟದ ನೆರವಿನಿಂದ ಸನ್ರೈಸರ್ಸ್ ತಂಡವು 20 ಓವರ್ಗಳಲ್ಲಿ 2 ವಿಕೆಟ್ಗೆ 242 ರನ್ ಕಲೆ ಹಾಕಿದೆ.
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ-2026ರ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಬುಧವಾರದಿಂದ ಮನೆ-ಮನೆ ಪ್ರಚಾರ ನಡೆಯಲಿದೆ. ಗುರುವಾರ ಒಂದೇ ಹಂತದಲ್ಲಿ 234 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಚುನಾವಣೆಯು ಡಿಎಂಕೆ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಮತ್ತು ಎಐಎಡಿಎಂಕೆ ಮತ್ತು ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟದ ನಡುವೆ ನೇರ ಸ್ಪರ್ಧೆ ನಡೆಯಲಿದೆ. ಇದೇ ಮೊದಲ ಬಾರಿಗೆ ತಮಿಳು ಸೂಪರ್ ಸ್ಟಾರ್ ಟಿವಿಕೆ ಪಕ್ಷ ಕಟ್ಟಿ ಸ್ವತಂತ್ರವಾಗಿ ಸ್ಪರ್ಧಿಸಿ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ತಮಿಳುನಾಡಿನಲ್ಲಿ ಈ ಬಾರಿಯೂ ಆಡಳಿತಾರೂಢ ಡಿಎಂಕೆ, ಕಾಂಗ್ರೆಸ್, ಪ್ರತಿಸ್ಪರ್ಧಿ ಎನ್ ಡಿಎ ಮೈತ್ರಿಕೂಟದ ಎಐಎಡಿಎಂಕೆ ಹಾಗೂ ನಟ ವಿಜಯ್ ನೇತೃತ್ವದ ಟಿವಿಕೆ ಸೇರಿದಂತೆ ವಿವಿಧ ಪಕ್ಷಗಳು ಭರ್ಜರಿ ರೋಡ್ ಶೋ ನಡೆಸಿ ಚುನಾವಣ ಪ್ರಚಾರ ನಡೆಸಿದ್ದವು.
ತ್ರಿಶೂರ್: ಕೇರಳದ ಸುಪ್ರಸಿದ್ಧ ತ್ರಿಶೂರ್ ಪೂರಂ ಹಬ್ಬಕ್ಕಾಗಿ ಪಟಾಕಿಗಳನ್ನು ತಯಾರಿಸುತ್ತಿದ್ದ ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಮಂಗಳವಾರ ಮಧ್ಯಾಹ್ನ ಭೀಕರ ಸ್ಫೋಟ ಸಂಭವಿಸಿ ಸುಮಾರು 13 ಜನರು ಮೃತಪಟ್ಟು, 40ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.ಸ್ಫೋಟದ ತೀವ್ರತೆಗೆ ಪಟಾಕಿ ಸಂಗ್ರಹಣಾ ಕೇಂದ್ರ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಐವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಟ್ನಾ: ಸಂಸದ ಪಪ್ಪು ಯಾದವ್ ಅಲಿಯಾಸ್ ರಾಜೇಶ್ ರಂಜನ್ ನಾಲಗೆ ಹರಿಬಿಟ್ಟಿದ್ದಾರೆ. ಬಿಹಾರದ ಪೂರ್ಣಿಯದ ಸ್ವತಂತ್ರ ಸಂಸದ ಪಪ್ಪು ಯಾದವ್ ಮಹಿಳಾ ರಾಜಕಾರಣದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಭಾರತೀಯ ಸಮಾಜದಲ್ಲಿ ಮಹಿಳೆಯರನ್ನು ದೇವತೆಗಳೆಂದು ಪರಿಗಣಿಸಲಾಗಿದ್ದರೂ, ವಾಸ್ತವವು ಇದಕ್ಕೆ ವಿರುದ್ಧವಾಗಿದೆ. ರಾಜಕೀಯದಲ್ಲಿ ಹೆಚ್ಚಿನ ಮಹಿಳೆಯರು ಪ್ರಭಾವಿ ಜನರ ವೈಯಕ್ತಿಕ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸುತ್ತಾರೆ ಎನ್ನುತ್ತಾ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.ಮಹಿಳೆಯರ ಶೋಷಣೆ ಅಧಿಕಾರದ ಕಾರಿಡಾರ್ನಲ್ಲಿ ಆಳವಾಗಿ ಬೇರೂರಿದೆ ಎಂದು ಆರೋಪಿಸಿದರು. ಕಟು ಸತ್ಯವೆಂದರೆ ಶೇಕಡ 90ರಷ್ಟು ಮಹಿಳಾ ರಾಜಕೀಯ ವೃತ್ತಿಜೀವನವು ರಾಜಕಾರಣಿಗಳ ಹಾಸಿಗೆಯಲ್ಲಿ ಪ್ರಾರಂಭವಾಗುತ್ತದೆ ಎಂದು ಪಪ್ಪು ಯಾದವ್ ಹೇಳಿದ್ದಾರೆ.
ಚೆನ್ನೈ: ಹಾಲಿ ಐಪಿಎಲ್ ಟೂರ್ನಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಸತತ ಸೋಲುಗಳ ಬಳಿಕ ಎರಡು ಗೆಲುವುಗಳ ಮೂಲಕ ಹಳಿಗೆ ಮರಳಿದ್ದ ತಂಡಕ್ಕೆ ಇದೀಗ ಟೂರ್ನಿಯ ಮಧ್ಯದಲ್ಲೇ ಮತ್ತೆ ಸಂಕಷ್ಟ ಎದುರಾಗಿದೆ. ಸಿಎಸ್ಕೆ ಪರ ಅಧಿಕ ರನ್ ಕಲೆಹಾಕಿದ್ದ ಯುವ ಬ್ಯಾಟಿಂಗ್ ಸೆನ್ಸೇಷನ್ ಆಯುಷ್ ಮ್ಹಾತ್ರೆ ಇದೀಗ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಏಪ್ರಿಲ್ 18 ರಂದು ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಸಿಎಸ್ಕೆ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ 18 ವರ್ಷದ ಆರಂಭಿಕ ಆಟಗಾರ ಗಾಯಗೊಂಡರು. ಸೋಮವಾರ ಬಿಡುಗಡೆಯಾದ ಅಧಿಕೃತ ಹೇಳಿಕೆಯಲ್ಲಿ, ಫ್ರಾಂಚೈಸಿಯು ಮ್ಹಾತ್ರೆ ಅವರ ಗಾಯವು 6 ರಿಂದ 12 ವಾರಗಳ ಪುನರ್ವಸತಿ ಅವಧಿಯ ಅಗತ್ಯವಿರುವಷ್ಟು ತೀವ್ರವಾಗಿದೆ ಎಂದು ದೃಢಪಡಿಸಿದೆ.
ಇಸ್ಲಾಮಾಬಾದ್: ಇರಾನ್ ಮತ್ತು ಅಮೆರಿಕಾ ನಡುವಿನ ಮೊದಲ ಸುತ್ತಿನ ಮಾತುಕತೆ ಮುರಿದುಬಿದ್ದಿದೆ. ಇದೀಗ ಎರಡನೇ ಸುತ್ತಿನ ಮಾತುಕತೆಗೆ ಸಿದ್ಧತೆ ನಡೆಸಯುತ್ತಿದೆ. ಈ ಮಾತುಕತೆಗೆ ಖುದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಜರಾಗಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ಮಂಗಳವಾರ (ಏಪ್ರಿಲ್ 21ರಂದು) ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಅಮೆರಿಕದ ಮೂಲಗಳು ತಿಳಿಸಿವೆ. ಈ ಬಗ್ಗೆ ಖಚಿತವಾಗಿಲ್ಲ.ಯುರೇನಿಯಂ ವಿಚಾರ, ಅಮೆರಿಕದಿಂದ ಕದನ ವಿರಾಮ ಉಲ್ಲಂಘನೆ ಸೇರಿದಂತೆ ಹಲವು ಕಾರಣಗಳಿಂದಾಗಿ ಮಾತುಕತೆಯಲ್ಲಿ ಪಾಲ್ಗೊಳ್ಳಲು ಇರಾನ್ ನಿರಾಕರಿಸಿರುವ ಹೊತ್ತಲ್ಲಿ ಈ ರೀತಿಯ ವರದಿಗಳು ಪ್ರಕಟವಾಗಿವೆ. ಮಾತುಕತೆಯು ಬುಧವಾರ ಪುನರಾರಂಭಗೊಳ್ಳುವ ಸಾಧ್ಯತೆ ಇದೆ. ಹಾಗೇನಾದರೂ ಆದರೆ, ಟ್ರಂಪ್ ಅವರೇ ಭಾಗವಹಿಸಲಿದ್ದಾರೆ.
ಹೈದರಾಬಾದ್: ಇಂಡಿಯನ್ ಸೂಪರ್ ಲೀಗ್ನ ಇಂದಿನ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಸನ್ರೈಸರ್ಸ್ ತಂಡವು ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ.ಸನ್ರೈಸರ್ಸ್ ಮತ್ತು ಕ್ಯಾಪಿಟಲ್ಸ್ ತಂಡಗಳು ತಂಡಗಳು ತಲಾ ಆರು ಪಾಯಿಂಟ್ಸ್ ಪಡೆದಿವೆ. ಒಂದು ಪಂದ್ಯ ಹೆಚ್ಚು ಆಡಿರುವ ಡೆಲ್ಲಿ ತಂಡವು ಉತ್ತಮ ನೆಟ್ ರನ್ ರೇಟ್ ಆಧಾರದಲ್ಲಿ ಚೂರು ಮುಂದಿದೆ.ಸನ್ರೈಸರ್ಸ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅನುಪಸ್ಥಿತಿಯಲ್ಲಿ ತಂಡದ ಬೌಲಿಂಗ್ ಆರಂಭದಲ್ಲಿ ಪರಿಣಾಮಕಾರಿ ಎನಿಸಿರಲಿಲ್ಲ. ಆಸ್ಟ್ರೇಲಿಯಾದ ವೇಗಿ ತಂಡವನ್ನು ಸೇರಿಕೊಂಡಿದ್ದರೂ ಮಂಗಳವಾರದ ಪಂದ್ಯಕ್ಕೂ ಲಭ್ಯರಿಲ್ಲ. ಆದರೆ, ಪ್ರಫುಲ್ ಹಿಂಗೆ, ಸಾಕಿಬ್ ಹುಸೇನ್, ಶಿವಾಂಗ್ ಕುಮಾರ್ ಅವರು ಹುರುಪಿನಿಂದ ಬೌಲಿಂಗ್ ಮಾಡಿದ್ದಾರೆ.
ಚೆನ್ನೈ: ಹಲವು ಸೂಪರ್ ಹಿಟ್ ಸಿನಿಮಾ ನೀಡಿರುವ ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಅಟ್ಲಿ ಹಾಗೂ ಅವರ ಪತ್ನಿ ಪ್ರಿಯಾ ಅವರ ಮನೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗಿದೆ. ನಿರ್ದೇಶಕ, ನಿರ್ಮಾಪಕ ಅಟ್ಲೀ ಅವರ ಪತ್ನಿ ಪ್ರಿಯಾ ಅವರು ಸೋಮವಾರ ಎರಡನೇ ಮಗುವಿಗೆ ಜನ್ಮ ನೀಡಿದ್ದು, ದಂಪತಿ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ.ಈ ಕುರಿತು ಅಟ್ಲೀ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈಗಾಗಲೇ ದಂಪತಿಗೆ 3 ವರ್ಷದ ಮೀರ್ ಎಂಬ ಮಗನಿದ್ದು, ವಿಭಿನ್ನವಾಗಿ ಕಾರ್ಟೂನ್ ಮೂಲಕ ಸಿಹಿ ಸುದ್ದಿಯನ್ನು ತಿಳಿಸಿದ್ದಾರೆ. ಅಟ್ಲಿ ನಿರ್ದೇಶನದ ರಾಕಾ ಚಿತ್ರದ ನಾಯಕಿ ದೀಪಿಕಾ ಪಡುಕೋಣೆ ಅವರು ತಮ್ಮ ಎರಡನೇ ಪ್ರೆಗ್ನೆನ್ಸಿ ಸುದ್ದಿಯನ್ನು ಹಂಚಿಕೊಂಡ ಮರುದಿನವೇ ಸಿಹಿ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಲಖನೌ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಆಡುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರ ಜೋಶ್ ಇಂಗ್ಲಿಸ್ ತಮ್ಮ ದೀರ್ಘಕಾಲದ ಗೆಳತಿ ಮೇಗನ್ ಕಿನ್ಕಾರ್ಟ್ ಅವರನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಸ್ಟ್ರೇಲಿಯಾದ ಈ ಸ್ಪೋಟಕ ಬ್ಯಾಟರ್ ಇದೇ 18ರಂದು ಪಶ್ಚಿಮ ಆಸ್ಟ್ರೇಲಿಯಾದ ಮಾರ್ಗರೆಟ್ ರಿವರ್ನಲ್ಲಿರುವ ಐಷಾರಾಮಿ ರೆಸಾರ್ಟ್ನಲ್ಲಿ ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.ಸದ್ಯ 2026ರ ಐಪಿಎಲ್ ಟೂರ್ನಿಯಲ್ಲಿ ಜೋಶ್ ಇಂಗ್ಲಿಸ್ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಮದುವೆಯ ಕಾರಣಕ್ಕಾಗಿ ಆರಂಭಿಕ ಪಂದ್ಯಗಳಲ್ಲಿ ಇಂಗ್ಲಿಸ್ ಅಲಭ್ಯರಾಗಿದ್ದರು. ಈ ಆವೃತಿಗೂ ಮುನ್ನ ಲಖನೌ ತಂಡವು ₹8.60 ಕೋಟಿಗೆ ಜೋಶ್ ಇಂಗ್ಲಿಸ್ ಅವರನ್ನು ಖರೀದಿಸಿತ್ತು.
ಬೆಂಗಳೂರು: ಬಿಜೆಪಿಯು ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಸಂಸತ್ತಿನಲ್ಲಿ ಡಿಲಿಮಿಟೇಷನ್ ಮಸೂದೆಯ ಜೊತೆಗೆ ಮಹಿಳಾ ಮೀಸಲಾತಿ ಮಸೂದೆಯನ್ನು ಒಟ್ಟುಗೂಡಿಸಿ ಮಂಡಿಸಲು ಮುಂದಾಗಿದ್ದರಿಂದ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿತು. ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಾಮರಾನಗರದಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲು ಸಂವಿಧಾನದ 73, 74 ನೇ ಕಲಂಗೆ ತಿದ್ದುಪಡಿ ತಂದು ರಾಜ್ಯಸಭೆಯಲ್ಲಿ ಜಾರಿಗೊಳಿಸಲು ಮುಂದಾದಾಗ ಎನ್ಡಿಎ ಮೈತ್ರಿಕೂಟ ಅಡ್ಡಿಪಡಿಸಿತ್ತು. ಬಿಜೆಪಿ ನಿಜವಾದ ಮಹಿಳಾ ಮೀಸಲಾತಿಯ ವಿರೋಧಿ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರ ಇ.ಡಿ ದಾಳಿ ನಡೆಸುತ್ತಿದೆ. ಬಿಜೆಪಿ ನಾಯಕರ ನಾಯಕರ ಮೇಲೆ ಇಡಿ ದಾಳಿ ನಡೆಸುವುದಿಲ್ಲ ಏಕೆ ಎಂದು ಪ್ರಶ್ನಿಸಿದರು.
ಬೆಂಗಳೂರು: ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಜೊತೆ ವ್ಯವಹಾರ ಹೊಂದಿದ್ದರು ಎಂಬ ಆರೋಪದಲ್ಲಿ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ಮನೆ ಮೇಲೆ ಇಡಿ ದಾಳಿ ಮಾಡಿರುವುದರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಮೊಹಮ್ಮದ್ ನಲಪಾಡ್ ಮತ್ತು ಎನ್ ಎ ಹ್ಯಾರಿಸ್ ನಿವಾಸಗಳ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಹಲವು ಗಂಟೆಗಳ ಕಾಲ ತಪಾಸಣೆ ನಡೆಸಿ ದಾಖಲೆಗಳನ್ನು ಹೊತ್ತೊಯ್ದಿದ್ದಾರೆ. ಇನ್ನು, ಹಿರಿಯ ಕಾಂಗ್ರೆಸ್ ನಾಯಕ ರೆಹಮಾನ್ ಖಾನ್ ಮೊಮ್ಮಗನ ನಿವಾಸದ ಮೇಲೂ ದಾಳಿ ನಡೆಸಲಾಗಿತ್ತು.
ಚೆನ್ನೈ: ತಮಿಳುನಾಡು ಚುನಾವಣೆ ಪ್ರಚಾರ ಸಂದರ್ಭದಲ್ಲಿ ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆಯುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಕ್ಕೀಡಾಗಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿಯನ್ನು ವಿಷ ಸರ್ಪಕ್ಕೆ ಹೋಲಿಸಿದ್ದ ಮಲ್ಲಿಕಾರ್ಜುನ ಖರ್ಗೆ ಇದೀಗ ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ. ಅವರ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಎಐಡಿಎಂಕೆ ಜೊತೆಗಿನ ಬಿಜೆಪಿ ಮೈತ್ರಿ ಬಗ್ಗೆ ಟೀಕಿಸುವ ಭರದಲ್ಲಿ ಖರ್ಗೆ ಈ ರೀತಿ ನಾಲಿಗೆ ಹರಿಬಿಟ್ಟಿದ್ದಾರೆ. ‘ಈ ಎಐಡಿಎಂಕೆಯ ಅಣ್ಣಾದುರೈ ಫೋಟೋ ಹಾಕಿಕೊಳ್ಳುವ ಜನ ಮೋದಿ ಜೊತೆ ಸಖ್ಯ ಹೇಗೆ ಬೆಳೆಸುತ್ತಾರೆ? ಮೋದಿ ಒಬ್ಬ ಭಯೋತ್ಪಾದಕ.
ಬೆಂಗಳೂರು: ಮೇಕೆ ದಾಟು ಯೋಜನೆಗೆ ತಡೆ ಮಾಡ್ತೀವಿ ಎನ್ನುವ ಪ್ರಣಾಳಿಕೆ ಬಿಡುಗಡೆ ಮಾಡಿರುವ ಡಿಎಂಕೆ ಪರವಾಗಿ ತಮಿಳುನಾಡಿನಲ್ಲಿ ನಮ್ಮ ರಾಜ್ಯದ ಕಾಂಗ್ರೆಸ್ ನಾಯಕರು ಪ್ರಚಾರ ಮಾಡುತ್ತಿರುವುದಕ್ಕೆ ನಾಚಿಕೆಯಾಗಬೇಕು ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ. ತಮಿಳುನಾಡು ಚುನಾವಣೆಯಲ್ಲಿ ಮಿತ್ರ ಪಕ್ಷ ಡಿಎಂಕೆ ಪರವಾಗಿ ರಾಜ್ಯ ಕಾಂಗ್ರೆಸ್ ನಾಯಕರು ಪ್ರಚಾರ ನಡೆಸುತ್ತಿದ್ದಾರೆ. ಈ ವಿಚಾರವಾಗಿ ಜೆಡಿಎಸ್ ಟೀಕಾ ಪ್ರಹಾರ ನಡೆಸಿದೆ. ‘"ನಮ್ಮ ನೀರು, ನಮ್ಮ ಹಕ್ಕು" ಎಂದು ಮೇಕೆದಾಟು ಅಣೆಕಟ್ಟೆ ವಿಚಾರವಾಗಿ ಬೃಹನ್ ನಾಟಕ ಮಾಡಿದ ಕಾಂಗ್ರೆಸ್ ನಾಯಕರೇ ನಿಮಗೆ ನಾಚಿಕೆಯಾಗಬೇಕು.
ಬೆಂಗಳೂರು: ಬಾಲಿವುಡ್ನ ಖ್ಯಾತ ನಟ ಅಕ್ಷಯ್ ಕುಮಾರ್ ಅವರ ಭೂತ್ ಬಂಗ್ಲ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದೆ. ಬಿಡುಗಡೆಯಾದ ಮೂರನೇ ದಿನಕ್ಕೆ ನೂರು ಕೋಟಿ ಕ್ಲಬ್ ಸೇರಿದೆ. ಹಾರರ್-ಕಾಮಿಡಿ ಕಥಾಹಂದರದ ಭೂತ್ ಬಂಗ್ಲ ಸಿನಿಮಾ ಈಚೆಗೆ ಬಿಡುಗಡೆಯಾಗಿದೆ. ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ ಕೇವಲ ಮೂರು ದಿನದಲ್ಲಿ 100 ಕೋಟಿ ರೂಪಾಯಿ ಗಳಿಸಿದೆ. ಮುಂದಿನ ದಿನಗಳಲ್ಲಿ ಕಲೆಕ್ಷನ್ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಹಿರಿಯ ನಿರ್ದೇಶಕ ಪ್ರಿಯದರ್ಶನ್ ನಿರ್ದೇಶದನ ಭೂತ್ ಬಂಗ್ಲ ಸಿನಿಮಾ ಬಿಡುಗಡೆಯಾದ ಮೊದಲ ವಾರಾಂತ್ಯದಲ್ಲೇ ಈ ಚಿತ್ರವು ವಿಶ್ವಾದ್ಯಂತ 100 ಕೋಟಿ ರೂಪಾಯಿಗಳ ಗಡಿಯನ್ನು ದಾಟುವ ಮೂಲಕ ಗಮನ ಸೆಳೆದಿದೆ.
ಬೆಂಗಳೂರು: ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡುವ ರಾಜ್ಯ ಸರ್ಕಾರ ನಿರ್ಧಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ರಾಜ್ಯ ಸರ್ಕಾರ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಈ ಸಾಲಿನಿಂದಲೇ ಎಸ್ಎಸ್ಎಲ್ಸಿ ಮೂರನೇ ಭಾಷಾ ಪರೀಕ್ಷೆಯ ಉತ್ತರಪತ್ರಿಕೆಗಳನ್ನು ಮೌಲ್ಯಮಾಪನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಏಪ್ರಿಲ್ 15ರಂದು ನೀಡಿದ್ದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ. ರಾಜ್ಯ ಸರ್ಕಾರ ಪ್ರಸ್ತಾಪಿಸಿದ್ದ ಗ್ರೇಡಿಂಗ್ ಪದ್ಧತಿಗೆ ಬದಲಾವಣೆ ಮಾಡುವ ಬೇಡಿಕೆಯನ್ನು ನ್ಯಾಯಾಲಯ ತಳ್ಳಿ ಹಾಕಿದೆ.ನ್ಯಾಯಮೂರ್ತಿ ಇ.ಎಸ್. ಇಂಡಿರೇಶ್ ಅವರು, ಏಪ್ರಿಲ್ 15ರ ಆದೇಶವನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸುವ ಮೂಲಕ ಈ ಆದೇಶ ನೀಡಿದ್ದಾರೆ.
ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್ನ್ಯೂಸ್. ಪ್ರೇಮ್ ನಿರ್ದೇಶನದ ಧ್ರುವ ಸರ್ಜ ನಟನೆಯ ಬಹುನಿರೀಕ್ಷಿತ ಕೆಡಿ ಚಿತ್ರ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಚಿತ್ರದ ಟ್ರೈಲನ್ ನಾಳೆ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡು, ಪ್ರತಿ ಕಾಲದಲ್ಲೂ ಒಂದು ಹೆಸರು ಇರುತ್ತೆ, ಅದನ್ನ ಯಾರೂ ಮರೆಯಲ್ಲ ಎಂಬ ಅಡಿಬರಹ ನೀಡಲಾಗಿದೆ.ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿರುವ ಈ ಸಿನಿಮಾವು ಏಪ್ರಿಲ್ 30ಕ್ಕೆ ಚಿತ್ರ ತೆರೆಗೆ ಬರಲಿದೆ. ಚಿತ್ರಕ್ಕೆ ವಿಲಿಯಂ ಡೇವಿಡ್ ಅವರ ಛಾಯಾಚಿತ್ರಗ್ರಹಣ, ಸಂಕೇತ್ ಆಚಾರ್ ಸಂಕಲನವಿದೆ.
ಮುಂಬೈ: ಕನ್ನಡಕ ಬ್ರ್ಯಾಂಡ್ ಲೆನ್ಸ್ ಕಾರ್ಟ್ ನಲ್ಲಿ ಹಿಂದೂ ನೌಕರರಿಗೆ ತಿಲಕ, ಮಾಂಗಲ್ಯ ಸರ ಧರಿಸಲು ನಿಷೇಧ ಹೇರಲಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಮುಂಬೈನ ಶಾಖೆಯೊಂದಕ್ಕೆ ಭೇಟಿ ನೀಡಿದ ಬಿಜೆಪಿ ನಾಯಕಿ ನಾಜಿಯಾ ಇಲಾಹಿ ಖಾನ್ ಅವರು ನಮಾಜ್ ಮಾಡುವುದನ್ನು ಬಿಡ್ತಾರಾ ಎಂದು ಪ್ರಶ್ನೆ ಮಾಡಿದ್ದಾರೆ. ಜೈ ಶ್ರೀರಾಮ್ ಎನ್ನುತ್ತಲೇ ಲೆನ್ಸ್ ಕಾರ್ಟ್ ಮಳೆಗೆಯೊಳಗೆ ತಮ್ಮ ಸಂಗಡಿಗರೊಂದಿಗೆ ಬಂದ ನಾಜಿಯಾ ಇಲ್ಲಿನ ಮ್ಯಾನೇಜರ್ ಯಾರು ಎಂದು ಕರೆಯುತ್ತಾರೆ. ಆತನ ಹೆಸರು ಕೇಳಿದಾಗ ಆತ ಮೊಹ್ಸಿನ್ ಖಾನ್ ಎನ್ನುತ್ತಾನೆ. ನಿಮ್ಮ ಹೆಸರು ಮೊಹ್ಸಿನ್ ಖಾನ್ ಆಗಿರುವುದರಿಂದ ಹೀಗೆಲ್ಲಾ ರೂಲ್ಸ್ ಮಾಡುತ್ತಿದ್ದೀರಾ ಎಂದು ಪ್ರಶ್ನೆ ಮಾಡಿದ್ದಾರೆ.
ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟನೆ ಮಾಡಬೇಕಿದ್ದ ಪೆಟ್ರೋಲಿಯಂ ಉತ್ಪನ್ನ ಸಂಸ್ಕರಣ ಘಟಕ ಬೆಂಕಿಗೆ ಆಹುತಿಯಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸುಮಾರು ₹ 79,000 ಕೋಟಿ ಮೌಲ್ಯದ ರಿಫೈನರಿ ಘಟಕದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜಸ್ಥಾನ ಸಿಎಂ ಬಜನ್ ಲಾಲ್ ಶರ್ಮಾ ಸೇರಿದಂತೆ ಪ್ರಮುಖ ನಾಯಕರು ಪಾಲ್ಗೊಳ್ಳಬೇಕಿತ್ತು. ಸದ್ಯ ಅಗ್ನಿ ಅವಘಡದಲ್ಲಿ ರಿಫೈನರಿ ಘಟಕಕ್ಕೆ ಭಾರಿ ಹಾನಿಯಾಗಿದೆ. ಸದ್ಯ ಘಟಕಕ್ಕೆ ಬೆಂಕಿ ಬಿದ್ದಿರುವ ಪರಿಣಾಮ ನಾಳೆ ಮೋದಿ ಉದ್ಘಾಟನಾ ಕಾರ್ಯಕ್ರಮ ಮುಂದೂಡಲಾಗಿದೆ. ರಿಪೇರಿ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಉದ್ಘಾಟನೆ ಮಾಡಲಾಗುತ್ತದೆ. ರಾಜಸ್ಥಾನದ ಬಲೋತ್ರದಲ್ಲಿ ಅಭಿವೃದ್ಧಿಪಡಿಸಿದ್ದ ಅತ್ಯಾಧುನಿಕ ತಂತ್ರಜ್ಞಾನದ ಹಾಗೂ ಸುಸಜ್ಜಿತ ರಿಫೈನರಿ ಘಟಕ ಇದಾಗಿದೆ.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಎಂದರೆ ಟಗರು.. ಟಗರು ಎಂದು ಸಚಿವ ಜಮೀರ್ ಅಹ್ಮದ್ ಮಾಧ್ಯಮಗಳ ಮುಂದೆ ಹಾಡಿ ಹೊಗಳಿದ್ದಾರೆ. ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಮೀರ್ ಅಹ್ಮದ್ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯನವರು ಮುಸ್ಲಿಂ ನಾಯಕರನ್ನು ಕಿತ್ತು ಹಾಕುವಾಗಲೂ ಮೌನಕ್ಕೆ ಶರಣಾಗಿದ್ದಾರೆ ಎಂಬ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಿರಿಯ ಶಾಸಕ ಎನ್ ರಾಜಣ್ಣ ಯಾಕೋ ಸಿದ್ದರಾಮಯ್ಯ ಇತ್ತೀಚೆಗೆ ಮೊದಲಿನಂತಿಲ್ಲ. ಶರಣಾಗತಿಯಾಗಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದರ ಬಗ್ಗೆ ಮಾಧ್ಯಮಗಳು ಗಮನ ಸೆಳೆದಾಗ ‘ಹೇ.. ಸಿದ್ದರಾಮಯ್ಯನವರು ಟಗರು.. ಮೊದಲೂ ಟಗರು, ಈಗಲೂ ಟಗರು ಹಾಗೇ ಇದ್ದಾರೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ಇಂದು ಕೊಂಚ ವ್ಯತ್ಯಾಸವಾಗಿಲ್ಲ. ಹೊಸ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 480 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 550 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 550 ರೂ.ಗಳಷ್ಟಾಗಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದ್ದರೆ ಮತ್ತುಇತರೆ ಚಿನ್ನದ ದರ ಯಥಾಸ್ಥಿತಿಯಲ್ಲಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,57,600.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,57,210.00 ರೂ.ಗಳಷ್ಟಿದೆ.
ಚಿನ್ನದ ಅಂಗಡಿಯೊಂದಕ್ಕೆ ಕದಿಯಲು ಬಂದಿದ್ದ ಖತರ್ನಾಕ್ ಗಂಡ, ಹೆಂಡತಿ ಕೊನೆಗೆ ಸಿಕ್ಕಿ ಹಾಕಿಕೊಂಡ ರೋಚಕ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಳ್ಳರು, ಖದೀಮರು ಎಂದರೆ ಕೊಳಕು ಬಟ್ಟೆ ಹಾಕಿಕೊಂಡಿರುತ್ತಾರೆ ಎಂದು ಎಲ್ಲರ ಕಲ್ಪನೆಯಿರುತ್ತದೆ. ಆದರೆ ಇಲ್ಲಿ ಗಂಡ, ಹೆಂಡತಿ ಸೂಟು-ಬೂಟು ಹಾಕಿಕೊಂಡು ಮಾಡರ್ನ್ ಡ್ರೆಸ್ ನಲ್ಲಿ ಶ್ರೀಮಂತ ದಂಪತಿಯಂತೆ ಚಿನ್ನದ ಮಳಿಗೆಯೊಂದಕ್ಕೆ ಎಂಟ್ರಿ ಕೊಟ್ಟಿದ್ದರು. ಗ್ರಾಹಕರ ಸೋಗಿನಲ್ಲಿ ಚಿನ್ನದ ಮಳಿಗೆಗೆ ಬರುವ ದಂಪತಿ ಮೊದಲು ಉಂಗುರ ತೋರಿಸಲು ಹೇಳುತ್ತಾರೆ.
ಚೆನ್ನೈ: ತಮಿಳುನಾಡು ಚುನಾವಣಾ ಪ್ರಚಾರದ ವೇಳೆ ಮಿತ್ರ ಪಕ್ಷ ಡಿಎಂಕೆಯನ್ನು ಹೊಗಳುವ ಬದಲು ವಿರೋಧಿ ಎಐಡಿಎಂಕೆಯನ್ನು ಭರಪೂರ ಹೊಗಳಿದ ರಾಹುಲ್ ಗಾಂಧಿ ಜನರನ್ನೇ ಕನ್ ಫ್ಯೂಸ್ ಮಾಡಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರಾಹುಲ್ ಗಾಂಧಿ ತಮ್ಮ ಭಾಷಣದ ವೇಳೆ ಮಾಡುವ ಎಡವಟ್ಟುಗಳು ಹಲವು ಬಾರಿ ಟ್ರೋಲ್ ಗೊಳಗಾಗಿದ್ದು ಇದೆ. ನಿನ್ನೆ ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದ ವೇಳೆಯೂ ತಮ್ಮ ಮಿತ್ರ ಪಕ್ಷವನ್ನು ಹೊಗಳುವ ಬದಲು ವಿರೋಧೀ ಪಕ್ಷವನ್ನು ಹೊಗಳಿದ್ದಾರೆ. ಡಿಎಂಕೆ ಎನ್ನುವ ಬದಲು ಎಐಡಿಎಂಕೆ ತಮಿಳುನಾಡಿನ ಬೆಳವಣಿಗೆಯಲ್ಲಿ ಪ್ರಧಾನ ಪಾತ್ರ ವಹಿಸಿದೆ.
ಬೈಕ್ ನಲ್ಲಿ ಕುಳಿತುಕೊಂಡು ರಸ್ತೆಯಲ್ಲಿ ನಡೆದಾಡುತ್ತಿದ್ದ ಕಾಲೇಜು ವಿದ್ಯಾರ್ಥನಿಯರನ್ನು ಚುಡಾಯಿಸುತ್ತಿದ್ದ ಇಬ್ಬರು ಯುವಕರ ಕತೆ ಕೊನೆಗೆ ಏನಾಯ್ತು ಎಂದು ತಿಳಿಯಲು ಈ ವಿಡಿಯೋ ನೋಡಿ. ಇತ್ತೀಚೆಗೆ ಈ ರೀತಿಯ ರೋಡ್ ರೋಮಿಯೋಗಳ ಹಾವಳಿ ಹೆಚ್ಚಾಗುತ್ತಿದೆ. ಸಿನಿಮಾ ಸ್ಟೈಲ್ ನಲ್ಲಿ ಬೈಕ್ ನಲ್ಲಿ ಬಂದು ಹೋಗೋ, ಬರೋ ಹುಡುಗಿಯರನ್ನು ಚುಡಾಯಿಸುವುದನ್ನೇ ಹೀರೋಯಿಸಂ ಎಂದು ತಿಳಿದುಕೊಂಡಂತಿದೆ ಈ ಯುವಕರು. ಈ ಘಟನೆ ನಡೆದಿರುವುದು ಉತ್ತರ ಪ್ರದೇಶದಲ್ಲಿ. ಇಬ್ಬರು ಯುವಕರು ಬೈಕ್ ನಲ್ಲಿ ಕುಳಿತುಕೊಂಡು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ಕೂದಲು ಎಳೆಯುವುದು, ಮೈ ಮುಟ್ಟುವುದು ಇತ್ಯಾದಿ ಮಾಡಿ ಚುಡಾಯಿಸುತ್ತಿದ್ದರು.
ಕನ್ನಡ ಮಾತನಾಡು ಎಂದಿದ್ದಕ್ಕೆ ಹಿಂದಿ ಭಾಷಿಕ ಬ್ಯಾಂಕ್ ನೌಕರ ಗ್ರಾಹಕನಿಗೆ ಹೋಗಿ ನಿರ್ಮಲಾ ಸೀತಾರಾಮನ್ ಗೆ ದೂರು ಕೊಡು ಎಂದು ಉದ್ಧಟತನ ಮೆರೆದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ಕರ್ನಾಟಕದಲ್ಲಿದ್ದುಕೊಂಡೇ ಕನ್ನಡಕ್ಕೆ ಅಗೌರವ ತೋರುವ ಘಟನೆಗಳು ಸಾಕಷ್ಟು ನಡೆಯುತ್ತಿವೆ. ಅದರಲ್ಲೂ ಪರಭಾಷಿಕರು ಕನ್ನಡ ಮಾತಾಡಲ್ಲ ಎಂದು ದಬ್ಬಾಳಿಕೆ ನಡೆಸುವ ಸಾಕಷ್ಟು ಉದಾಹರಣೆಗಳು ನಡೆಯುತ್ತಲೇ ಇವೆ. ಅಂತಹದ್ದೇ ಘಟನೆ ಇದಾಗಿದೆ. ಕರ್ನಾಟಕದ ಬ್ಯಾಂಕ್ ಶಾಖೆಯೊಂದರಲ್ಲಿ ಗ್ರಾಹಕರೊಬ್ಬರು ಕನ್ನಡದಲ್ಲೇ ಮಾತನಾಡಿದಾಗ ನೌಕರ ಹಿಂದಿಯಲ್ಲಿ ಮಾತನಾಡುತ್ತಾರೆ.
ಮುಂಬೈ: ದೂರ ದೂರ ಎಂದವರು ಯಾರು ಎನ್ನುವ ಹಾಗೆ ವಿವಾಹ ವಾರ್ಷಿಕೋತ್ಸವಕ್ಕೆ ಫೋಟೋ ಹಂಚಿಕೊಂಡಿದ್ದಾರೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್. ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ನಿನ್ನೆ ತಮ್ಮ 19 ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಬಾಲಿವುಡ್ ಬಿಗ್ ಬಿ ಕುಟಂಬದ ಸೊಸೆಯಾಗಿರುವ ಐಶ್ವರ್ಯಾ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಪತಿ ಅಭಿಷೇಕ್ ಮತ್ತು ಮಗಳು ಆರಾಧ್ಯ ಜೊತೆಗಿರುವ ಕ್ಯೂಟ್ ಫೋಟೋ ಹಂಚಿಕೊಂಡಿದ್ದಾರೆ. ಬಹುಶಃ ಇದು ಆನಿವರ್ಸರಿ ಸೆಲೆಬ್ರೇಷನ್ ಪಾರ್ಟಿಯಲ್ಲಿ ತೆಗೆದ ಫೋಟೋ ಇರಬೇಕು.
ಅಹ್ಮದಾಬಾದ್: ಐಪಿಎಲ್ 2026 ರಲ್ಲಿ ನಿನ್ನೆ ಗುಜರಾತ್ ಟೈಟನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಆಟಗಾರ ತಿಲಕ್ ವರ್ಮ ಭರ್ಜರಿ ಶತಕ ಸಿಡಿಸಿದರೆ ನಾಯಕ ಹಾರ್ದಿಕ್ ಪಾಂಡ್ಯ ಕುಣಿದು ಕುಣಿದು ಬಾರೇ ಸ್ಟೈಲ್ ನಲ್ಲಿ ಸ್ಟೆಪ್ ಹಾಕಿ ಸಂಭ್ರಮಿಸಿದ್ದಾರೆ. ಮುಂಬೈ ಇಂಡಿಯನ್ಸ್ ಟೂರ್ನಿಯಿಂದಲೇ ಹೊರಹೋಗುವ ಭೀತಿಯಲ್ಲಿತ್ತು. ಆದರೆ ತಕ್ಕ ಸಮಯದಲ್ಲಿ ಶತಕ ಸಿಡಿಸಿದ ತಿಲಕ್ ವರ್ಮ ತಂಡದ ಮೊತ್ತ 200 ರ ಗಡಿ ತಲುಪುವಂತೆ ಮಾಡಿದ್ದರು. ಮುಂಬೈ ಇನಿಂಗ್ಸ್ ನ ಕೊನೆಯ ಎಸೆತದಲ್ಲಿ ಬೌಂಡರಿ ಹೊಡೆದು ತಿಲಕ್ ವರ್ಮ ಶತಕ ಪೂರ್ತಿ ಮಾಡಿದ್ದರು.
ಕೋಲ್ಕತ್ತಾ: ಪ್ರಧಾನಿ ಮೋದಿ ಜಲ್ ಮುರಿ ಖರೀದಿಸಿದ ಪಶ್ಚಿಮ ಬಂಗಾಲದ ಜಾರಗ್ರಾಮದ ಅಂಗಡಿಯಾತನಿಗೆ ಕಾಡುತ್ತಿದೆ ಈಗ ಇದೊಂದು ಕೊರಗು. ಪಶ್ಚಿಮ ಬಂಗಾಲದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಪ್ರಧಾನಿ ಮೋದಿ ಭಾನುವಾರ ಜಾರಗ್ರಾಮದ ಪುಟ್ಟ ಚ್ಯಾಟ್ ಅಂಗಡಿಯೊಂದಕ್ಕೆ ದಿಡೀರ್ ಭೇಟಿ ನೀಡಿದ್ದರು. ಇಲ್ಲಿ ಜಲ್ ಮುರಿ ಖರೀದಿಸಿ ಸ್ಥಳೀಯರೊಂದಿಗೆ ಹಂಚಿ ತಿಂದಿದ್ದರು. ಆ ಅಂಗಡಿಯಾತನೊಂದಿಗೂ ಆತ್ಮೀಯವಾಗಿ ಮಾತನಾಡಿಸಿದ್ದರು. ಇದಾದ ಬಳಿಕ ಈಗ ಆ ಅಂಗಡಿಯಾತನ ವ್ಯಾಪಾರವೂ ಜೋರಾಗಿದೆ. ಪ್ರಧಾನಿ ಭೇಟಿ ಕೊಟ್ಟ ಅಂಗಡಿ ಎಂದು ಸಾಕಷ್ಟು ಜನ ಇಲ್ಲಿಗೆ ಬಂದು ಜಲ್ ಮುರಿ ಖರೀದಿ ಮಾಡುತ್ತಿದ್ದಾರೆ.
ಟೆಹ್ರಾನ್: ಇರಾನ್ ಮತ್ತು ಅಮೆರಿಕಾ ನಡುವೆ ನಡೆದಿದ್ದ 15 ದಿನಗಳ ಕದನ ವಿರಾಮ ನಾಳೆಗೆ ಮುಗಿಯಲಿದೆ. ಇದೀಗ ಮತ್ತೆ ಉಭಯ ದೇಶಗಳ ನಡುವೆ ಯುದ್ಧದ ಭೀತಿ ಎದುರಾಗಿದೆ. ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಮತ್ತೊಂದು ಸುತ್ತಿನ ಮಾತುಕತೆಗೆ ಅಸ್ತು ಎನ್ನುತ್ತಲೇ ಅಮೆರಿಕಾ ಮತ್ತೊಂದೆಡೆ ಬೆದರಿಕೆ ಹಾಕುತ್ತಿರುವುದು ಇರಾನ್ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಬೆದರಿಕೆಗಳ ನಡುವೆ ಶಾಂತಿ ಒಪ್ಪಂದ ಸಾಧ್ಯವಿಲ್ಲ ಎಂದು ಇರಾನ್ ಖಡಕ್ ಸಂದೇಶ ರವಾನಿಸಿದೆ. ಕದನ ವಿರಾಮದ ನಡುವೆಯೇ ನಿನ್ನೆ ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ಹಡಗುಗಳನ್ನು ಅಮೆರಿಕಾ ವಶಕ್ಕೆ ಪಡೆದಿದ್ದು ಆ ದೇಶದ ಆಕ್ರೋಶ ಹೆಚ್ಚು ಮಾಡಿದೆ.
ಹಾವು ಕಂಡರೆ ಮಾರು ದೂರ ಓಡುವವರ ನಡುವೆ ಈ ವ್ಯಕ್ತಿ ಹಾವನ್ನು ಬರಿಗೈಯಲ್ಲಿ ಹಿಡಿದು ಬಾಯಿಯೊಳಗಿಟ್ಟು ಸರಸವಾಡುವುದನ್ನು ನೋಡಿ ಮೈ ಜುಮ್ ಎನಿಸುತ್ತದೆ. ಇಂತಹದ್ದೊಂದು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೆಲವರಿಗೆ ಹಾವು ಹಿಡಿಯುವುದು ಪ್ರವೃತ್ತಿಯಾದರೆ ಮತ್ತೆ ಕೆಲವರಿಗೆ ಅದು ಪರಿಸರದ ಮೇಲಿನ ಕಾಳಜಿ. ಇನ್ನು, ಕೆಲವರು ಇತ್ತೀಚೆಗಿನ ದಿನಗಳಲ್ಲಿ ರೀಲ್ಸ್ ಹುಚ್ಚಿಗಾಗಿ ಹಾವಿನ ಜೊತೆ ಸರಸವಾಡುತ್ತಾರೆ. ಇದೇ ರೀತಿ ಇಲ್ಲೊಬ್ಬ ವ್ಯಕ್ತಿ ಹಾವು ಹಿಡಿಯುವ ವೇಳೆ ಅದರ ಜೊತೆ ದುಸ್ಸಾಹಸವನ್ನೇ ಮಾಡಿದ್ದಾನೆ.
ಬೆಂಗಳೂರು: ಉಷ್ಣಗಾಳಿ ಜೊತೆಗೆ ಇಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ. ಇಂದು ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವರದಿ. ಕರ್ನಾಟಕದಲ್ಲಿ ಈಗ ವಿಪರೀತ ಬಿಸಿಲು, ತಾಪಮಾನ ಗರಿಷ್ಠ ಮಟ್ಟಕ್ಕೆ ತಲುಪುತ್ತಿದೆ. ಹಗಲು ಮನೆಯಿಂದ ಹೊರಗೆ ಕಾಲಿಡಲೂ ಆಗದಷ್ಟು ಬಿಸಿಲು ಕಂಡುಬರುತ್ತಿದೆ. ಇದರ ನಡುವೆಯೂ ಕೆಲವು ಜಿಲ್ಲೆಗಳಲ್ಲಿ ಮಳೆಯ ಸೂಚನೆ ಕಂಡುಬರುತ್ತಿದೆ. ವಿಶೇಷವಾಗಿ ಇಂದು ಕೊಡಗು, ಉಡುಪಿ, ಉತ್ತರ ಕನ್ನಡ, ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಬಿಸಿಲಿನ ಜೊತೆಗೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇಂದು ಮಂಗಳವಾರವಾಗಿದ್ದು ಆಂಜನೇಯ ಸ್ವಾಮಿಗೆ ವಿಶೇಷವಾದ ದಿನವಾಗಿದೆ. ಇಂದು ಜೀವನದಲ್ಲಿ ಬರುವ ಸಕಲ ಸಂಕಟಗಳ ನಿವಾರಣೆಗಾಗಿ ಆಂಜನೇಯ ಸ್ವಾಮಿಯ ಹನುಮದಷ್ಟಕಂ ಸ್ತೋತ್ರ ಓದಿ.ಶ್ರೀರಘುರಾಜಪದಾಬ್ಜನಿಕೇತನ ಪಂಕಜಲೋಚನ ಮಂಗಳರಾಶೇಚಂಡಮಹಾಭುಜದಂಡ ಸುರಾರಿವಿಖಂಡನಪಂಡಿತ ಪಾಹಿ ದಯಾಳೋ ।ಪಾತಕಿನಂ ಚ ಸಮುದ್ಧರ ಮಾಂ ಮಹತಾಂ ಹಿ ಸತಾಮಪಿ ಮಾನಮುದಾರಂತ್ವಾಂ ಭಜತೋ ಮಮ ದೇಹಿ ದಯಾಘನ ಹೇ ಹನುಮನ್ ಸ್ವಪದಾಂಬುಜದಾಸ್ಯಮ್ ॥ 1 ॥ ಸಂಸೃತಿತಾಪಮಹಾನಲದಗ್ಧತನೂರುಹಮರ್ಮತನೋರತಿವೇಲಂಪುತ್ರಧನಸ್ವಜನಾತ್ಮಗೃಹಾದಿಷು ಸಕ್ತಮತೇರತಿಕಿಲ್ಬಿಷಮೂರ್ತೇಃ ।ಕೇನಚಿದಪ್ಯಮಲೇನ ಪುರಾಕೃತಪುಣ್ಯಸುಪುಂಜಲವೇನ ವಿಭೋ ವೈತ್ವಾಂ ಭಜತೋ ಮಮ ದೇಹಿ ದಯಾಘನ ಹೇ ಹನುಮನ್ ಸ್ವಪದಾಂಬುಜದಾಸ್ಯಮ್ ॥ 2 ॥
ಅಹ್ಮದಾಬಾದ್: ಇಲ್ಲಿ ನಡೆಯುತ್ತಿರುವ ಐಪಿಎಲ್ 2026 ರ ಇಂದಿನ ಗುಜರಾತ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಪರ ತಿಲಕ್ ವರ್ಮ ಭರ್ಜರಿ ಶತಕ ದಾಖಲಿಸಿ ತಂಡಕ್ಕೆ ಟಾನಿಕ್ ನೀಡಿದ್ದಾರೆ. ರೋಹಿತ್ ಶರ್ಮಾ ಈ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಆದರೆ ಟಾಪ್ ಆರ್ಡರ್ ಬ್ಯಾಟಿಗರ ಪೈಕಿ ಸೂರ್ಯಕುಮಾರ್ ಯಾದವ್, ದ್ಯಾನಿಶ್, ಹಾರ್ದಿಕ್ ಪಾಂಡ್ಯ ವೈಫಲ್ಯ ಅನುಭವಿಸಿದರು. ಈ ವೇಳೆ ತಂಡಕ್ಕೆ ಆಧಾರವಾಗಿದ್ದು ನಮನ್ ಧೀರ್ ಮತ್ತು ತಿಲಕ್ ವರ್ಮ. ನಮನ್ ಧೀರ್ 45 ರನ್ ಗಳಿಸಿ ಔಟಾದರು. ಜೊತೆಗೆ ಕೊನೆಯ ಹಂತದಲ್ಲಿ ಕಗಿಸೊ ರಬಾಡ ತಂಡದ ರನ್ ವೇಗಕ್ಕೆ ಕಡಿವಾಣ ಹಾಕಿದ್ದರು.
ಬೆಂಗಳೂರು: ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ತಂದು ಪ್ರಧಾನಿ ಮೋದಿ ಮಾಸ್ಟರ್ ಪ್ಲ್ಯಾನ್ ಏನಿತ್ತು ಎಂಬುದನ್ನು ರಾಜ್ಯ ಬಿಜೆಪಿ ಘಟಕ ರಿವೀಲ್ ಮಾಡಿದೆ. ಮೊನ್ನೆಯಷ್ಟೇ ಲೋಕಸಭೆಯಲ್ಲಿ ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನಸಭೆಗೆ ಸ್ಪರ್ಧಿಸಲು ಶೇ.33 ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಮಂಡಿಸಲಾಗಿತ್ತು. ಆದರೆ ವಿಪಕ್ಷಗಳು ಇದನ್ನು ವಿರೋಧಿಸಿ ಮತ ಹಾಕಿದ್ದವು. ಪರಿಣಾಮ ಸಂಸತ್ ನಲ್ಲಿ ಬಹುಮತ ಸಿಗದೇ ಮಸೂದೆ ಬಿದ್ದು ಹೋಗಿತ್ತು. ಆದರೆ ಈ ಮಸೂದೆ ಜಾರಿಗೆ ತರುವ ಮೋದಿ ಮಾಸ್ಟರ್ ಪ್ಲ್ಯಾನ್ ಬೇರೆಯೇ ಇತ್ತು ಎಂದು ಬಿಜೆಪಿ ಹೇಳಿಕೊಂಡಿದೆ.
ಹುಬ್ಬಳ್ಳಿ: Fly91 ಏರ್ ಲೈನ್ಸ್ IC3401( ATRTURBOPROP AT7) ಸಂಖ್ಯೆಯ ಫ್ಲೈಟ್ ನಲ್ಲಿ ನಿಜಕ್ಕೂ ಆಗಿದ್ದೇನು, ದುರಂತ ತಪ್ಪಿದ್ದು ಹೇಗೆ ಇಲ್ಲಿದೆ ವಿವರ. ನಿನ್ನೆ ಮಧ್ಯಾಹ್ನ 3 ಗಂಟೆಗೆ ಹೈದರಾಬಾದ್ ನಿಂದ ಟೇಕ್ ಆಫ್ ಆಗಿದ್ದ ವಿಮಾನ 4.30 ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಿತ್ತು. ಆದರೆ ನಾಲ್ಕು ಗಂಟೆ ಅಗಸದಲ್ಲೇ ಚಕ್ಕರ್ ಹೊಡೆದು ಪ್ರಯಾಣಿಕರು ಜೀವ ಭಯದಲ್ಲಿ ಕಣ್ಣೀರಿಡುವಂತೆ ಮಾಡಿತ್ತು. ಅನೇಕರು ಸೋಷಿಯಲ್ ಮೀಡಿಯಾ ಮೂಲಕ ತಮ್ಮ ಮನೆಯವರಿಗೆ ಇದು ಕೊನೆಯ ಸಂದೇಶ ಎಂದು ಕಣ್ಣೀರಿಟ್ಟು ಸಂದೇಶ ರವಾನಿಸಿದ್ದರು. ಇದು ತಮ್ಮ ಜೀವನದ ಕೊನೆಯ ಗಳಿಗೆ ಎಂದು ವಿಡಿಯೋ ಹಂಚಿಕೊಂಡಿದ್ದರು.
ಬೆಂಗಳೂರು: ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎನ್ನುವುದು ನನ್ನ ಅಭಿಪ್ರಾಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ಕ್ಷೇತ್ರ ಮರುವಿಂಗಡಣೆ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎನ್ನುವುದು ನನ್ನ ಅಭಿಪ್ರಾಯ. ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ ಮಾಡಿದೆವು. ನಾವು ಎಂದಿಗೂ ಮಹಿಳಾ ಮೀಸಲಾತಿಯ ಪರವಾಗಿಯೇ ಇದ್ದೇವೆ. ಸಂವಿಧಾನಕ್ಕೆ 73, 74ನೇ ತಿದ್ದುಪಡಿಯನ್ನು ತಂದಿದ್ದು ಕಾಂಗ್ರೆಸ್ ನೇತೃತ್ವದ ಸರ್ಕಾರ. ಸ್ಥಳೀಯ ಸಂಸ್ಥೆಗಳಲ್ಲಿ 50% ಮಹಿಳಾ ಮೀಸಲಾತಿ ತಂದಿದ್ದು ಕೂಡ ಕಾಂಗ್ರೆಸ್ ಸರ್ಕಾರವೇ.
ಚಂಢೀಘಡ: ಐಪಿಎಲ್ 2026 ರಲ್ಲಿ ನಿನ್ನೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 54 ರನ್ ಗಳ ಗೆಲುವು ಸಾಧಿಸಿದ ಬಳಿಕ ಪಂಜಾಬ್ ಮಾಲಕಿ ಪ್ರೀತಿ ಜಿಂಟಾ ಬೌಲರ್ ಅರ್ಷ್ ದೀಪ್ ಸಿಂಗ್ ರನ್ನು ತಬ್ಬಿಕೊಂಡಿದ್ದಾರೆ. ಈ ವೇಳೆ ಅರ್ಷ್ ದೀಪ್ ರಿಯಾಕ್ಷನ್ ವಿಡಿಯೋ ವೈರಲ್ ಆಗಿದೆ. ಪಂಜಾಬ್ ಕಿಂಗ್ಸ್ ಈ ಸೀಸನ್ ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಶ್ರೇಯಸ್ ಅಯ್ಯರ್ ನೇತೃತ್ವದ ಟೀಂ ಸತತ ಗೆಲುವಿನಿಂದ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಖುಷಿ ಮಾಲಕಿ ಪ್ರೀತಿ ಜಿಂಟಾ ಮುಖದಲ್ಲಿ ಎದ್ದು ಕಾಣುತ್ತಿದೆ.
ಬೆಂಗಳೂರು: ರಾಜ್ಯದ ಉದ್ಯೋಗಾಂಕ್ಷಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಮಲ್ಲೇಶ್ವರದಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕರಾದ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಹೇಳಿದರು.ಮಲ್ಲೇಶ್ವರದ ಎಸ್.ಎಚ್.ವಿ.ಎನ್.ಎಂ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 'ಯುವೋತ್ಸವ' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಪಡೆಯಲು ಹಾಗೂ ಅವರಿಗೆ ನೆರವಾಗಲು ಇಂತಹ ಮೇಳಗಳು ಸಹಕಾರಿಯಾಗಿವೆ. ವಿದ್ಯಾರ್ಥಿಗಳಿಗೆ ಕರಿಯರ್ ಗೈಡೆನ್ಸ್ ನೀಡಲಾಗುವುದು. ನಮ್ಮ ಈ ಕಾರ್ಯಕ್ರಮಕ್ಕೆ ಹಲವಾರು ಸಂಸ್ಥೆಗಳು ಕೈ ಜೋಡಿಸಿವೆ ಎಂದು ಹೇಳಿದರು.
ಬೆಂಗಳೂರು: ಬಿಟ್ ಕಾಯಿನ್ ಮೂಲಕ ಬೇರೆ ಬೇರೆ ದೇಶಗಳಲ್ಲಿ ರಾಜಕಾರಣಿಗಳು ಹೂಡಿಕೆ ಮಾಡಿದ್ದಾರೆ. ವಿಶೇಷವಾಗಿ ಕಾಂಗ್ರೆಸ್ ರಾಜಕಾರಣಿಗಳು ಹೂಡಿಕೆ ಮಾಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು.ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎನ್.ಎ. ಹ್ಯಾರಿಸ್ ಅವರ ಮನೆ ಮೇಲೆ ಇಡಿ ದಾಳಿ ಕುರಿತು ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಇವರು, ನಿರಂತರವಾಗಿ ಕಾಂಗ್ರೆಸ್ ಆರ್ಥಿಕ ಅಪರಾಧಗಳನ್ನು ಮಾಡುತ್ತಲೇ ಬರುತ್ತಿದೆ. ಇದರಲ್ಲಿ ಬಿಟ್ ಕಾಯಿನ್ ಸಹ ಒಂದು. ಬಿಟ್ ಕಾಯಿನ್ ನಲ್ಲಿ ಹೂಡಿಕೆ ಆಗಿದೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆದಿದೆ ಎಂದರು.
ಚೆನ್ನೈ: ದಳಪತಿ ವಿಜಯ್ ವಿರುದ್ಧ ಪತ್ನಿ ಸಂಗೀತಾ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯ ಕೋರ್ಟ್ ವಿಚಾರಣೆ ಇಂದಿನಿಂದ ಶುರುವಾಗಲಿದೆ. ಈ ನಡುವೆ ವಿಜಯ್ ತಮ್ಮ ಪತ್ನಿಗೆ ದೊಡ್ಡ ಮೊತ್ತದ ಜೀವನಾಂಶ ನೀಡಬೇಕು ಎಂದು ವರದಿಯಾಗಿದೆ. ವಿಜಯ್ ವಿರುದ್ಧ ವಿವಾಹೇತರ ಸಂಬಂಧ, ಮಾನಸಿಕ ಹಿಂಸೆ ಇತ್ಯಾದಿ ಆರೋಪಗಳನ್ನು ಮಾಡಿರುವ ಸಂಗೀತಾ ಕೋರ್ಟ್ ನಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ನಟನಿಗೆ ನಟಿಯೊಬ್ಬರೊಂದಿಗೆ ವಿವಾಹೇತರ ಸಂಬಂಧವಿದೆ ಎಂದು ಪತ್ನಿ ಆರೋಪಿಸಿದ್ದು ದೊಡ್ಡ ಸುದ್ದಿಯಾಗಿತ್ತು. ಈ ಸಂಬಂಧ ಈಗ ಕೋರ್ಟ್ ವಿಚಾರಣೆ ನಡೆಸಲಿದೆ. ಚೆಂಗಲಪಟ್ಟು ಕೌಟುಂಬಿಕ ಕೋರ್ಟ್ ನಲ್ಲಿ ವಿಜಯ್-ಸಂಗೀತಾ ವಿಚ್ಛೇದನ ಅರ್ಜಿ ವಿಚಾರಣೆ ನಡೆಯಲಿದೆ.