ಬೆಂಗಳೂರು: ಮೇ 15 ರೊಳಗೆ ಹೈಕಮಾಂಡ್ ಸಿಹಿ ಸುದ್ದಿ ನೀಡುತ್ತದೆ ಎಂದು ನಾಯಕತ್ವ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ನ ಕೆಲವು ಶಾಸಕರ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಗೆ ಕೇಳಿದಾಗ ಏನು ಮಾಡಿದ್ರು ಗೊತ್ತಾ? ಇಂದು ಮಾಧ್ಯಮಗಳೊಂದಿಗೆ ಮಾತನಾಡುವಾಗ ಡಿಕೆ ಶಿವಕುಮಾರ್ ಗೆ ಪತ್ರಕರ್ತರು ಮೇ 15 ರೊಳಗೆ ಸಿಹಿ ಸುದ್ದಿ ಸಿಗುತ್ತದೆ ಎಂದು ಕಾಂಗ್ರೆಸ್ ನ ಕೆಲವು ಶಾಸಕರು ಹೇಳಿದ್ದಾರೆ. ಇಕ್ಬಾಲ್ ಹುಸೇನ್ ಅವರು ಹೇಳಿದ್ದಾರೆ ಸಾರ್. ಇದು ನಿಜಾನಾ ಸಾರ್ ಎಂದು ಪ್ರಶ್ನೆ ಮಾಡಿದ್ದಾರೆ. ಆದರೆ ಇದಕ್ಕೆ ಪ್ರತಿಕ್ರಿಯಿಸದ ಡಿಕೆ ಶಿವಕುಮಾರ್ ಕೇಳಿಯೂ ಕೇಳಿಸದವರಂತೆ ಮುಂದೆ ನಡೆದಿದ್ದಾರೆ.
ಬೆಂಗಳೂರು: ನಗರದ ಚಾಮರಾಜಪೇಟೆಯ ರಸ್ತೆಗಳಲ್ಲಿ 150 ಗುಂಡಿ ಇದ್ದು, 140 ಗುಂಡಿ ಮುಚ್ಚಲು 1.40 ಕೋಟಿ ಖರ್ಚು ಮಾಡಿದ್ದಾರೆ. ಒಂದು ಗುಂಡಿ ಮುಚ್ಚಲು 1 ಲಕ್ಷ ಖರ್ಚು ಮಾಡಿದ್ದಾಗಿ ತೋರಿಸಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಗುಂಡಿ ಇಪ್ಪತ್ತಡಿ, 10 ಅಡಿ ಅಥವಾ 5 ಅಡಿ ಇರಬಹುದೇ? ಇವರಿಗೆ ನಾಚಿಕೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು. ಜನ ಕಣ್ಮುಚ್ಚಿ ಕುಳಿತಿದ್ದಾರೆಂದು ತಿಳಿದಿದ್ದೀರಾ? ನೀವು ಹಾಕುವುದು ತೇಪೆ ಕೆಲಸ ಎಂದು ಆಕ್ಷೇಪಿಸಿದರು.
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ದರ್ಶನ್ ಮತ್ತೊಮ್ಮೆ ಜಾಮೀನು ನೀಡುವಂತೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಟ ದರ್ಶನ್ ಸೇರಿದಂತೆ ಪ್ರಮುಖ ಆರೋಪಿಗಳು ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಪ್ರಕರಣ ಇನ್ನೂ ವಿಚಾರಣೆ ಹಂತದಲ್ಲಿದೆ. ಆದರೆ ವಿಚಾರಣೆ ಮಂದಗತಿಯಲ್ಲಿ ಸಾಗುತ್ತಿದೆ. ಈ ಕಾರಣಕ್ಕೆ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ಸುಪ್ರೀಂಕೋರ್ಟ್ ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಮೇ 4 ಕ್ಕೆ ನಿಗದಿಯಾಗಿದೆ.
ಕೋಲ್ಕತ್ತಾ: ಪಶ್ಚಿಮ ಬಂಗಾಲದಲ್ಲಿ ಇಂದು ಎರಡನೇ ಹಂತದ ಚುನಾವಣೆ ಪ್ರಕ್ರಿಯೆ ಜಾರಿಯಲ್ಲಿದ್ದು ಹಲವು ಕಡೆ ಮತಯಂತ್ರಗಳಲ್ಲಿ ಬಿಜೆಪಿ ಚಿಹ್ನೆಗೆ ಟೇಪ್ ಹಾಕಿ ಮತದಾರರಿಗೆ ಕಾಣದಂತೆ ಮಾಡಲಾಗಿದೆ ಎಂದು ಆರೋಪ ಬಂದಿದ್ದು ಈ ಸಂಬಂಧ ಮರು ಮತದಾನ ಮಾಡುವಂತೆ ಬಿಜೆಪಿ ಆಗ್ರಹಿಸಿದೆ. ಪಶ್ಚಿಮ ಬಂಗಾಲದ ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಫಾಲ್ಟಾ ವಿಧಾನಸಭೆ ಕ್ಷೇತ್ರದಲ್ಲಿ ಈ ರೀತಿ ಮತಯಂತ್ರಗಳಲ್ಲಿ ಬಿಜೆಪಿ ಚಿಹ್ನೆಯನ್ನು ಟೇಪ್ ಅಳವಡಿಸಿ ಮುಚ್ಚಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬಿಜೆಪಿ ವಿಡಿಯೋಗಳನ್ನು ಬಿಡುಗಡೆ ಮಾಡಿದೆ.
ನವದೆಹಲಿ: ಒಂದೆಡೆ ಪಶ್ಚಿಮ ಬಂಗಾಲದಲ್ಲಿ ಚುನಾವಣೆ ಕಾವೇರುತ್ತಿದ್ದರೆ ಇತ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿಕೋಬಾರ್ ದ್ವೀಪದಲ್ಲಿ ಚಿಲ್ ಮಾಡುತ್ತಿದ್ದಾರೆ. ಕೇರಳ ಬಳಿಕ ತಮಿಳುನಾಡಿನಲ್ಲಿ ಚುನಾವಣೆ ಪ್ರಚಾರ ನಡೆಸಿದ ರಾಹುಲ್ ಗಾಂಧಿ ಪಶ್ಚಿಮ ಬಂಗಾಲದ ಕಡೆಗೆ ಹೆಚ್ಚು ಗಮನ ಕೊಟ್ಟಿರಲಿಲ್ಲ. ಇದೀಗ ಚುನಾವಣೆ, ರಾಜಕೀಯದಿಂದ ಕೊಂಚ ಬಿಡುವು ಪಡೆದಿರುವ ರಾಹುಲ್ ಪ್ರವಾಸದಲ್ಲಿದ್ದಾರೆ. ನಿಕೋಬಾರ್ ದ್ವೀಪದ ಕಡಲ ಕಿನಾರೆ, ಮರ ಗಿಡಗಳ ನಡುವೆ ಕಾಲ ಕಳೆಯುತ್ತಿದ್ದಾರೆ. ಇಲ್ಲಿನ ಸುಂದರ ಕಡಲ ಕಿನಾರೆಗೆ ತೆರಳಿದ್ದ ರಾಹುಲ್ ಲೈಟ್ ಹೌಸ್ ಬಳಿ ಪೋಸ್ ನೀಡಿದ್ದಾರೆ.
ವಾರಣಾಸಿ: ಒಂದೆಡೆ ಪಶ್ಚಿಮ ಬಂಗಾಲದಲ್ಲಿ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದ್ದರೆ ಇತ್ತ ಪ್ರಧಾನಿ ಮೋದಿ ಇಂದು ಕಾಶಿ ವಿಶ್ವನಾಥನ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪಶ್ಚಿಮ ಬಂಗಾಲದಲ್ಲಿ ಈ ಬಾರಿ ಹೇಗಾದರೂ ಬಿಜೆಪಿ ಗೆಲ್ಲಬೇಕು ಎಂದು ಪಣ ತೊಟ್ಟಿರುವ ಪ್ರಧಾನಿ ಮೋದಿ ಸತತವಾಗಿ ಅಲ್ಲಿ ಸಮಾವೇಶ, ರೋಡ್ ಶೋಗಳನ್ನು ಮಾಡಿ ಬಿಜೆಪಿ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಕೊನೆಯ ಬಾರಿಗೆ ಪ್ರಚಾರ ಭಾಷಣ ಮಾಡುವಾಗ ಮುಂದೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬರುತ್ತೇನೆ ಎಂದು ಪ್ರತಿಜ್ಞೆ ಮಾಡಿ ತೆರಳಿದ್ದರು.
ಬೆಂಗಳೂರು: ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ರಿಲೀಸ್ ದಿನಾಂಕ ಮತ್ತೆ ಮುಂದೂಡಿಕೆಯಾಗಿದೆ. ಮುಂದೂಡಲು ಕಾರಣವೇನೆಂದು ರಾಕಿಂಗ್ ಸ್ಟಾರ್ ಯಶ್ ತಿಳಿಸಿದ್ದಾರೆ. ಎಲ್ಲಾ ಸರಿ ಹೋಗಿದ್ದ ಟಾಕ್ಸಿಕ್ ಸಿನಿಮಾ ಮಾರ್ಚ್ ನಲ್ಲೇ ಬಿಡುಗಡೆಯಾಗಬೇಕಿತ್ತು. ಆದರೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ವಾತಾವರಣವಿದ್ದಿದ್ದರಿಂದ ಅಲ್ಲಿ ಸಿನಿಮಾ ರಿಲೀಸ್ ಮಾಡಲು ಕಷ್ಟವಾಗುತ್ತದೆ ಎಂದು ಜೂನ್ 4 ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿತ್ತು. ಆದರೆ ಈಗಿನ ಮಾಹಿತಿ ಪ್ರಕಾರ ಜೂನ್ 4 ಕ್ಕೂ ಸಿನಿಮಾ ಬಿಡುಗಡೆಯಾಗುತ್ತಿಲ್ಲ. ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ಯಶ್ ಸೋಷಿಯಲ್ ಮೀಡಿಯಾ ಮೂಲಕ ಪ್ರಕಟಣೆ ನೀಡಿದ್ದಾರೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ಇಂದು ಯಥಾಸ್ಥಿತಿಯಲ್ಲಿದೆ. ಹೊಸ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 475 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 550 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 550 ರೂ.ಗಳಷ್ಟಾಗಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದ್ದು ಮತ್ತುಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,55,645.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,53,235.00 ರೂ.ಗಳಷ್ಟಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಯಾಕೋ ಇತ್ತೀಚೆಗೆ ಕರಾವಳಿಯಂತೆ ವಿಪರೀತ ಸೆಖೆ, ಬಿಸಿಲು ಕಂಡುಬರುತ್ತಿದೆ? ಇದಕ್ಕೆ ಹಲವು ಕಾರಣಗಳಿವೆ. ಅವುಗಳ ಬಗ್ಗೆ ಇಲ್ಲಿದೆ ವಿವರ. ಬೆಂಗಳೂರು ಒಂದು ಕಾಲದಲ್ಲಿ ಎಲ್ಲಾ ಕಾಲದಲ್ಲೂ ತಂಪು ವಾತಾವರಣ ಹೊಂದಿದ್ದ ಪ್ರದೇಶವಾಗಿತ್ತು. ಬೇಸಿಗೆಯಲ್ಲೂ ಅಷ್ಟೇನೂ ಸೆಖೆ, ಉರಿಬಿಸಿಲು ಕಂಡುಬರುತ್ತಿರಲಿಲ್ಲ. 2000 ರಲ್ಲಿ ಸರಾಸರಿ ಗರಿಷ್ಠ ತಾಪಮಾನ ದಾಖಲಾಗಿದ್ದು 35 ಡಿಗ್ರಿಯಷ್ಟು. ಆದರೆ ಇತ್ತೀಚೆಗಿನ ದಿನಗಳಲ್ಲಿ ಏಪ್ರಿಲ್ ಆರಂಭದಲ್ಲಿಯೇ ಬೆಂಗಳೂರಿನಲ್ಲಿ ಈ ಪ್ರಮಾಣದ ಗರಿಷ್ಠ ತಾಪಮಾನ ಕಂಡುಬರುತ್ತಿದೆ. ಮೇ ತಿಂಗಳಲ್ಲಿ 40 ಡಿಗ್ರಿ ಆಸುಪಾಸು ಕಂಡುಬರುತ್ತದೆ.
ಚಂಢೀಘಡ: ಐಪಿಎಲ್ 2026 ರಲ್ಲಿ ನಿನ್ನೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ನಡುವೆ ರಾಜಸ್ತಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಡ್ರೆಸ್ಸಿಂಗ್ ರೂಂನಲ್ಲಿ ಇ ಸಿಗರೇಟು ಸೇದಿ ಸಿಕ್ಕಿಬಿದ್ದಿದ್ದಾರೆ. ನಿನ್ನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮೊದಲು ಬ್ಯಾಟಿಂಗ್ ಮಾಡಿ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ರಾಜಸ್ತಾನ್ ರಾಯಲ್ಸ್ 19.2 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 228 ರನ್ ಗಳಿಸಿ 6 ವಿಕೆಟ್ ಗಳ ಗೆಲುವು ದಾಖಲಿಸಿತು. ಆದರೆ ಈ ಪಂದ್ಯದ ನಡುವೆ ರಾಜಸ್ತಾನ್ ನಾಯಕ ರಿಯಾನ್ ಪರಾಗ್ ವರ್ತನೆ ಎಲ್ಲರ ಟೀಕೆಗೆ ಗುರಿಯಾಗಿದೆ.
ಕೋಲ್ಕತ್ತಾ: ಪಶ್ಚಿಮ ಬಂಗಾಲ ಚುನಾವಣೆ ಫಲಿತಾಂಶದ ಮೇಲೆ ಈ ಬಾರಿ ದೇಶವೇ ಕುತೂಹಲದಿಂದ ಕಾಯುತ್ತಿದೆ. ಬಂಗಾಲದಲ್ಲಿ ದೀದಿ ಆಡಳಿತ ಕೊನೆಯಾಗಬಹುದು ಎಂದು ಬಿಜೆಪಿ ಲೆಕ್ಕಾಚಾರ ಹಾಕಿದೆ. ಮಮತಾ ಬ್ಯಾನರ್ಜಿ ಸೋಲಿಗೆ ಕಾರಣವಾಗಬಹುದಾದ 5 ಅಂಶಗಳು ಯಾವುವು ಇಲ್ಲಿದೆ ನೋಡಿ ವಿಶ್ಲೇಷಣೆ. ಮಮತಾ ಬ್ಯಾನರ್ಜಿ ಅವರು ಇನ್ನೂ ಬಲವಾದ ಜನಬೆಂಬಲ ಹೊಂದಿದ್ದರೂ, ಈ ಬಾರಿ ಭ್ರಷ್ಟಾಚಾರ, ನಿರುದ್ಯೋಗ ಮತ್ತು ಸಂಘಟಿತ ವಿರೋಧ ಪಕ್ಷದ ಹೋರಾಟವು ಅವರ ಹಾದಿಯನ್ನು ಕಠಿಣಗೊಳಿಸಿದೆ. ಮೇ 4ರ ಫಲಿತಾಂಶವು ಬಂಗಾಳದ ಈ 'ದೀದಿ' ಯುಗ ಮುಂದುವರಿಯುತ್ತದೆಯೇ ಅಥವಾ ಅಂತ್ಯವಾಗುತ್ತದೆಯೇ ಎಂಬುದನ್ನು ನಿರ್ಧರಿಸಲಿದೆ.
ಕೆಲವೊಮ್ಮೆ ಟೈಮ್ ಎನ್ನೋದು ಪಕ್ಕಾ 420 ಎನ್ನುವುದಕ್ಕೆ ಇದೇ ಉದಾಹರಣೆ. ಮದುವೆ ಮಂಟಪದಲ್ಲೇ ವರನ ಪೈಜಾಮ ಪ್ಯಾಂಟ್ ಜಾರಿ ಹೋದ ಫನ್ನಿ ವಿಡಿಯೋವೊಂದು ಇಲ್ಲಿದೆ. ಮದುವೆ ಎಂದ ಮೇಲೆ ತಮಾಷೆ ಪ್ರಸಂಗಗಳು, ಎಡವಟ್ಟುಗಳು ಸಾಮಾನ್ಯ. ಉತ್ತರ ಭಾರತದ ಮದುವೆ ಮನೆಯೊಂದರಲ್ಲಿ ಇಂತಹದ್ದೇ ತಮಾಷೆ ಪ್ರಸಂಗ ನಡೆದಿದೆ. ಇದರಿಂದ ವರ ಎಲ್ಲರ ಎದುರು ಮುಜುಗರಕ್ಕೀಡಾಗಿದ ಸಂದರ್ಭ ಬಂದಿದೆ. ಮದುವೆ ಮನೆಯಲ್ಲಿ ವರ ಮಂಟಪದಲ್ಲಿ ನಿಂತಿದ್ದರೆ ವಧು ಮಂಟಪಕ್ಕೆ ಬರುತ್ತಿದ್ದಳು. ಸಂಪ್ರದಾಯದ ಪ್ರಕಾರ ವರ ನಿಂತಿದ್ದ. ಈ ವೇಳೆ ಸುತ್ತಮುತ್ತಲೂ ಸಾಕಷ್ಟು ಜನ ಬಂಧುಗಳೂ ಇದ್ದರು.
ಕೋಲ್ಕತ್ತಾ: ಪಶ್ಚಿಮ ಬಂಗಾಲದಲ್ಲಿ ಇಂದು ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಈ ಬಗ್ಗೆ ಪ್ರಧಾನಿ ಮೋದಿ ಮತದಾರರಿಗೆ ಸಂದೇಶ ರವಾನಿಸಿದ್ದಾರೆ. ಪಶ್ಚಿಮ ಬಂಗಾದಲ್ಲಿ ಈಗಾಗಲೇ ಮೊದಲ ಹಂತದ ಮತದಾನ ಪ್ರಕ್ರಿಯೆ ಏಪ್ರಿಲ್ 23 ರಂದು ನಡೆದಿತ್ತು. ಇದೀಗ ಎರಡನೇ ಹಂತದಲ್ಲಿ ಉಳಿದ 142 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಎರಡನೇ ಹಂತದಲ್ಲಿ ಹೌರಾ, ಕೋಲ್ಕತ್ತಾ, ಹೂಗ್ಲಿ, ಬರ್ಧಮಾನ್ ಸೇರಿದಂತೆ 7 ಪ್ರಮುಖ ಜಿಲ್ಲೆಗಳಿವೆ. ಮೊದಲ ಹಂತದಲ್ಲಿ ಶೇ.93.19 ರಷ್ಟು ಮತದಾನವಾಗಿತ್ತು. ಎರಡನೇ ಹಂತದಲ್ಲಿ ಎಷ್ಟು ಮತದಾನವಾಗುತ್ತದೆ ಕಾದು ನೋಡಬೇಕಿದೆ.
ಬೆಂಗಳೂರು: ರಾಜ್ಯದಲ್ಲಿ ಉರಿಬಿಸಿಲಿನ ನಡುವೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಲೇ ಇದೆ. ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಸೂಚನೆಯಿದ್ದು ಇಂದಿನ ಹವಾಮಾನ ವರದಿ ಇಲ್ಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗ ಕಡುಬೇಸಿಗೆ ತಾಂಡವವಾಡುತ್ತಿದೆ. ಹಗಲಿಡೀ ಜನ ಬೆವರು ಸುರಿಸುವಂತಾಗಿದೆ. ಹಾಗಿದ್ದರೂ ಕೆಲವು ಜಿಲ್ಲೆಗಳಿಗೆ ಮಾತ್ರ ಮಳೆಯ ಸಿಂಚನವಾಗುತ್ತಿದೆ. ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ. ವಿಶೇಷವಾಗಿ ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸೂಚನೆಯಿದೆ.
ಬುಧವಾರ ವಿಘ್ನ ವಿನಾಶಕ ಗಣೇಶನಿಗೆ ವಿಶೇಷವಾದ ದಿನವಾಗಿದೆ. ಇಂದು ಗಣೇಶನ ಅನುಗ್ರಹಕ್ಕಾಗಿ ಶ್ರೀ ವಿನಾಯಕ ಸ್ತವರಾಜ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.ಬೀಜಾಪೂರಗದೇಕ್ಷುಕಾರ್ಮುಕರುಜಾ ಚಕ್ರಾಬ್ಜಪಾಶೋತ್ಪಲ--ವ್ರೀಹ್ಯಗ್ರಸ್ವವಿಷಾಣರತ್ನಕಲಶಪ್ರೋದ್ಯತ್ಕರಾಂಭೋರುಹಃ ।ಧ್ಯೇಯೋ ವಲ್ಲಭಯಾ ಸಪದ್ಮಕರಯಾಶ್ಲಿಷ್ಟೋಜ್ಜ್ವಲದ್ಭೂಷಯಾವಿಶ್ವೋತ್ಪತ್ತಿವಿಪತ್ತಿಸಂಸ್ಥಿತಿಕರೋ ವಿಘ್ನೇಶ ಇಷ್ಟಾರ್ಥದಃ ॥ 1 ॥ ನಮಸ್ತೇ ಸಿದ್ಧಿಲಕ್ಷ್ಮೀಶ ಗಣಾಧಿಪ ಮಹಾಪ್ರಭೋ ।ವಿಘ್ನೇಶ್ವರ ಜಗನ್ನಾಥ ಗೌರೀಪುತ್ರ ಜಗತ್ಪ್ರಭೋ ॥ 2 ॥ ಜಯ ವಿಘ್ನೇಶ್ವರ ವಿಭೋ ವಿನಾಯಕ ಮಹೇಶ್ವರ ।ಲಂಬೋದರ ಮಹಾಬಾಹೋ ಸರ್ವದಾ ತ್ವಂ ಪ್ರಸೀದ ಮೇ ॥ 3 ॥ ಮಹಾದೇವ ಜಗತ್ಸ್ವಾಮಿನ್ ಮೂಷಿಕಾರೂಢ ಶಂಕರ ।ವಿಶಾಲಾಕ್ಷ ಮಹಾಕಾಯ ಮಾಂ ತ್ರಾಹಿ ಪರಮೇಶ್ವರ ॥ 4 ॥
ಬೆಂಗಳೂರು: 2020 ರ ದೆಹಲಿ ದಂಗೆ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯಡಿ ತಿಹಾರ್ ಜೈಲಿನಲ್ಲಿರುವ ಉಗ್ರ ಉಮರ್ ಖಾಲಿದ್ ಕುರಿತ ಪುಸ್ತಕ ಬಿಡುಗಡೆಗೆ ರಾಜ್ಯ ಸರ್ಕಾರ ಅವಕಾಶ ನೀಡಿದ್ದನ್ನು ವಿರೋಧಿಸಿ ಬಿಜೆಪಿ ರಾಜ್ಯ ಯುವ ಮೋರ್ಚಾ ವತಿಯಿಂದ ಇಂದು ದೊಮ್ಮಲೂರಿನ ಬೆಂಗಳೂರು ಇಂಟರ್ ನ್ಯಾಷನಲ್ ಸೆಂಟರ್ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾನಿರತರನ್ನು ಪೊಲೀಸರು ಬಂಧಿಸಿದರು.ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ನಿನ್ನೆ ಮಾಡಲಾಗಿತ್ತು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಪಿ.ಸಿ ಮೋಹನ್ ಅವರು, ದೇಶದ್ರೋಹಿ ಉಮರ್ ಖಾಲಿದ್ 2020 ರ ದೆಹಲಿ ದಂಗೆಯ ಪ್ರಮುಖ ಆಪಾದಿತ. ಅಂದು ನಡೆದ ಸ್ಫೋಟದಲ್ಲಿ ಸಾಕಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಬೆಂಗಳೂರು: ಕಲಬುರಗಿಯಲ್ಲಿ ತಳವಾರ ಸಮುದಾಯದವರಿಗೆ ಪರಿಶಿಷ್ಟ ಪಂಗಡ (ಎಸ್ಟಿ) ಪ್ರಮಾಣ ಪತ್ರಕ್ಕಾಗಿ ಹೋರಾಟ ನಡೆಸುತ್ತಿದ್ದವರ ಮೇಲೆ ಲಾಠಿ ಪ್ರಹಾರ ಮಾಡಿ ಬಂಧಿಸಿ ಎಫ್ಐಆರ್ ದಾಖಲಿಸಿರುವುದು ಸರಿಯಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ತಿನ ವಿರೋಧಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು. ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣಪತ್ರ ಕೊಡುತ್ತಿಲ್ಲ ಎಂದು ಆ ಸಮುದಾಯದ ಅನೇಕ ಯುವಕರು, ಮುಖಂಡರು ಪ್ರತಿಭಟನೆ ನಡೆಸುತ್ತಿದ್ದರು. ಅವರ ಮೇಲೆ ಲಾಠಿಪ್ರಹಾರ ನಡೆಸಲಾಗಿದೆ.
ಇತ್ತೀಚೆಗೆ ನಡೆದ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಇಡೀ ದೇಶವೇ ಕುತೂಹಲದಿಂದ ಕಾಯುತ್ತಿದೆ. ಬಹುತೇಕ ರಾಜ್ಯಗಳಲ್ಲಿ ಸ್ಥಳೀಯ ಪಕ್ಷ ಮತ್ತು ಎನ್ ಡಿಎ ಕೂಟದ ನಡುವೆ ಪ್ರಬಲ ಪೈಪೋಟಿಯಿದೆ. ಪಶ್ಚಿಮ ಬಂಗಾಲ, ತಮಿಳುನಾಡು, ಕೇರಳ ಮತ್ತು ಅಸ್ಸಾಂ ರಾಜ್ಯಗಳ ಎಕ್ಸಿಟ್ ಪೋಲ್ ಫಲಿತಾಂಶ ಏನಾಗಬಹುದು ನೋಡಿ. 2026ರ ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳ ಎಕ್ಸಿಟ್ ಪೋಲ್ (ಮತಗಟ್ಟೆ ಸಮೀಕ್ಷೆ) ಫಲಿತಾಂಶಗಳ ಕುರಿತಾದ ಸಮಗ್ರ ಮಾಹಿತಿ ಇಲ್ಲಿದೆ:
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಹಾಗೂ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿರುವ ಬೆನ್ನಲ್ಲೇ ಸಿಎಂ, ಡಿಸಿಎಂ ಇಬ್ಬರೂ ಒಂದೇ ಕಾರಿನಲ್ಲಿ ಪ್ರಯಾಣಿಸಿರುವುದು ಭಾರೀ ಕುತೂಹಲವನ್ನು ಮೂಡಿಸಿದೆ. ರಾಜ್ಯದಲ್ಲಿ ಕೆಲ ಕೈ ಶಾಸಕರು ಸಚಿವ ಸಂಪುಟ ವಿಸ್ತರಣೆಗೆ ಭೇಡಿಕೆಯನ್ನಿಟ್ಟಿದ್ದಾರೆ. ಇನ್ನೂ ಕೆಲ ಶಾಸಕರು ಮೇಯಲ್ಲಿ ಸಿಎಂ ಕುರ್ಚಿ ಬದಲಾವಣೆಯಾಗುವ ಸಾಧ್ಯತೆಯನ್ನು ವ್ಯಕ್ತಪಡಿಸಿದ್ದಾರೆ. ಈ ನಡುವೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಒಟ್ಟಿಗೆ ಪ್ರಯಾಣಿಸಿರುವುದು ರಾಜಕೀಯ ವಲಯದಲ್ಲಿ ಭಾರೀ
ಬೆಂಗಳೂರು: ಮೇ 15ರ ರೊಳಗೆ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಸಿಹಿ ಸುದ್ದಿ ಸಿಗಲಿದೆ ಎಂದು ಕೈ ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ ಹೇಳಿದರು. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನರ್ ರಚನೆ ಆಗಲೇಬೇಕು. ಇನ್ನೂ ದೆಹಲಿಗೆ ಹೋಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ್ವಿ. ಅವರು ನಮಗೆ ಭರವಸೆ ಕೊಟ್ಟಿದ್ದು, ಕೆಲಸ ಮಾಡದ ಮಂತ್ರಿಗಳನ್ನು ಕೈಬಿಟ್ಟು ಹೊಸಬರನ್ನು ಸೇರಿಸಬೇಕಾಗುತ್ತದೆ. 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದ್ರೆ ಸಂಪುಟ ಪುನರ್ ರಚನೆ ಆಗಲೇಬೇಕು. ಮಂತ್ರಿ ಸ್ಥಾನ ಕೇಳೋದು ನಮ್ಮ
ಬೆಂಗಳೂರು: ತನ್ನ ಆಟೋ ಹತ್ತಿದ್ದ ಗ್ರಾಹಕ ಒಳಗೆಲ್ಲಾ ಗಲೀಜು ಮಾಡಿ ಹೋಗಿದ್ದಕ್ಕೆ ಆಟೋ ಚಾಲಕ ವಾಪಸ್ ಕರೆಸಿ ಕ್ಲೀನ್ ಮಾಡಿ ಹೋಗಿ ಸಾರ್ ಎಂದ ವಿಡಿಯೋವೊಂದು ವೈರಲ್ ಆಗಿದ್ದು ಇದು ಅನೇಕರಿಗೆ ಪಾಠವಾಗಲಿದೆ.ಸಾಮಾನ್ಯವಾಗಿ ಆಟೋ ಮಾತ್ರವಲ್ಲ, ಸಾರ್ವಜನಿಕ ಸಾರಿಗೆಗಳಲ್ಲೂ ಹಲವರು ಇದೇ ರೀತಿ ಮಾಡುತ್ತಾರೆ. ಸರ್ಕಾರೀ ಬಸ್, ರೈಲುಗಳಲ್ಲಿ ಜನ ತಿಂದು ಬಿಸಾಕುವ ಪ್ಲಾಸ್ಟಿಕ್ ಕಸಗಳು, ಕಡಲೆ ಬೀಜದ ಸಿಪ್ಪೆ ಕಾಣಬಹುದು. ಅದೇ ರೀತಿ ಕೆಲವರು ಆಟೋಗಳಲ್ಲೂ ಇದೇ ದುರಾಭ್ಯಾಸ ಮಾಡುತ್ತಾರೆ.
ಬೆಂಗಳೂರು : ಡಾ ರಾಜ್ಕುಮಾರ್ ಸಮಾಧಿ ಬಗ್ಗೆ ಪ್ರಶ್ನಿಸಿ ವಿವಾದಕ್ಕೆ ಸಿಲುಕಿರುವ ನಟ, ಸಾಮಾಜಿಕ ಕಾರ್ಯಕರ್ತ ಚೇತನಾ ಅಹಿಂಸಾ ವಿರುದ್ಧ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದರು. ಇದೀಗ ಇವರಿಬ್ಬರ ನಡುವೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವಾರ್ ನಡೆಯುತ್ತಿದೆ. ಅಣ್ಣಾವ್ರ ಹೆಸರು ಹೇಳಲು ಯೋಗ್ಯರಲ್ಲ ಎಂಬ ನಿಖಿಲ್ ಕುಮಾರಸ್ವಾಮಿ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಚೇತನ್, ಚುನಾವಣೆಯಲ್ಲಿ ಮೂರು ಬಾರಿ ಸೋತವರಿಗೆ ಯೋಗ್ಯತೆ ಇದೆಯಾ? ಎಂದು ಕೇಳಿದ್ದರು.ಈ ಪೋಸ್ಟ್ಗೆ ನಿಖಿಲ್ ಕುಮಾರಸ್ವಾಮಿ ಅವರು
ನವದೆಹಲಿ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ , ಅಂತರಾಷ್ಟ್ರೀಯ ಮತ್ತು ಭಾರತೀಯ ಗುಪ್ತಚರ ಸಂಸ್ಥೆಗಳ ನಿಕಟ ಸಮನ್ವಯದಲ್ಲಿ, 'ಆಪರೇಷನ್ ಗ್ಲೋಬಲ್-ಹಂಟ್' ಅಡಿಯಲ್ಲಿ ಟರ್ಕಿಯೆಯಿಂದ ಮೋಸ್ಟ್ ವಾಂಟೆಡ್ ಡ್ರಗ್ ದಂಧೆಕೋರ ಮೊಹಮ್ಮದ್ ಸಲೀಂ ಡೋಲಾನನ್ನು ವಶಕ್ಕೆ ಪಡೆಯಲಾಗಿದೆ. ಇಂದು ಮುಂಜಾನೆ ದೆಹಲಿಯ ಐಜಿಐ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಆತನನ್ನು ಬಂಧಿಸಲಾಯಿತು. ಗೃಹ ಸಚಿವಾಲಯದ (MHA) ಪ್ರಕಾರ, "ಮಾರ್ಚ್, 2024 ರಲ್ಲಿ ಭಾರತದ ಕೋರಿಕೆಯ ಮೇರೆಗೆ ಇಂಟರ್ಪೋಲ್ ರೆಡ್
ವಿರಾಟ್ ಕೊಹ್ಲಿಯಿಂದ ಆಟೋಗ್ರಾಫ್ ಪಡೆಯಲು ವಿಫಲರಾಗಿದ್ದ ಕೋಪಗೊಂಡ ಬಾಲಕನೊಬ್ಬ ಕಣ್ಣೀರು ಹಾಕಿ, ಬ್ಯಾಟ್ ಅನ್ನು ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೊಟೇಲ್ಗೆ ಪ್ರವೇಶಿಸುತ್ತಿದ್ದ ವಿರಾಟ್ ಕೊಹ್ಲಿ ಬಳಿ ತನ್ನ ಬ್ಯಾಟ್ಗೆ ಆಟೋಗ್ರಾಫ್ ಅನ್ನು ಪಡೆಯಲು ಬಾಲಕ ಮುಂದಾಗಿದ್ದಾನೆ. ಆದರೆ ಇದನ್ನು ವಿರಾಟ್ ಗಮನಿಸದೆ ಮುಂದೆ ಸಾಗಿದರು. ಮಗು ಒಂದೆರಡು ಬಾರಿ ಕೊಹ್ಲಿ ಬಳಿ ಬಂದರೂ ಅಧಿಕಾರಿಗಳು ತಡೆದರು.ಇದರಿಂದ ಬೇಜಾರಾದ ಯುವ ಅಭಿಮಾನಿ ಅತ್ತುಕೊಂಡು ಬ್ಯಾಟ್ ಅನ್ನು ನೆಲಕ್ಕೆ ಎಸೆದಿದ್ದಾನೆ. ಜೋರಾಗಿ ಅತ್ತುಕೊಂಡು ತನ್ನ
ನವದೆಹಲಿ: ಗಾಳಿಯಲ್ಲಿ ನೆಲಕ್ಕೆ ಬೀಳುತ್ತಿದ್ದ ಡಿಸಿ ಭಾವುಟಕ್ಕೆ ಆರ್ಸಿಬಿ ಆಟಗಾರ ಜಿತೇಶ್ ಶರ್ಮಾ ತೋರಿದ ಗೌರವ ಭಾರೀ ಮೆಚ್ಚುಗೆ ಪಾತ್ರವಾಗಿದೆ. ಈ ಸಂಬಂಧದ ವಿಡಿಯೋ ಕೂಡಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೀಸಿದ ಜೋರು ಗಾಳಿಗೆ ಡಿಲ್ಲಿ ಭಾವುಟ ಹಾರಿಕೊಂಡು ಗ್ರೌಂಡ್ಗೆ ಬಂದಿದೆ. ಇದನ್ನು ಗಮನಿಸಿದ ಜಿತೇಶ್, ನೆಲಕ್ಕೆ ಬೀಳುವುದನ್ನು ತಪ್ಪಿಸಲು ಓಡಿ ಹೋಗಿದ್ದಾನೆ. ಕೂಡಲೇ ಅದನ್ನು ಹಿಡಿದು, ತನ್ನ ಜೇಬಿನಲ್ಲಿ ಇಟ್ಟುಕೊಂಡಿದ್ದಾನೆ.
ನವದೆಹಲಿ: 1 ಮೇ 2026 ರಿಂದ ಎಲ್ಪಿಜಿ ನಿಯಮ ಬದಲಾವಣೆ: ದೇಶಾದ್ಯಂತ ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಎಲ್ಪಿಜಿಯ ನಿರಂತರ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹೇಳಿದೆ. ಹಾರ್ಮುಜ್ ಜಲಸಂಧಿಯಲ್ಲಿ ನಡೆಯುತ್ತಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಪೆಟ್ರೋಲಿಯಂ ಸಚಿವಾಲಯವು ಎಲ್ಪಿಜಿ ಗ್ರಾಹಕರು ಡಿಜಿಟಲ್ ಬುಕಿಂಗ್ ಪ್ಲಾಟ್ಫಾರ್ಮ್ಗಳನ್ನು ಬಳಸಲು ಮತ್ತು ವಿತರಕರನ್ನು ಭೇಟಿ ಮಾಡುವುದನ್ನು ತಪ್ಪಿಸುವಂತೆ ವಿನಂತಿಸಿದೆ. PNG ಮತ್ತು ಎಲೆಕ್ಟ್ರಿಕ್ ಅಥವಾ ಇಂಡಕ್ಷನ್ ಕುಕ್ಟಾಪ್ಗಳಂತಹ ಪರ್ಯಾಯ ಇಂಧನಗಳನ್ನು ಬಳಸಲು ಸರ್ಕಾರವು ನಾಗರಿಕರನ್ನು ನಿರಂತರವಾಗಿ ಪ್ರೋತ್ಸಾಹಿಸಿದೆ.
ದಾವಣಗೆರೆ: ವಚನಾನಂದ ಶ್ರೀಗಳ ಬದಲು ಪಂಚಮಸಾಲಿ ಪೀಠಕ್ಕೆ ನಾನು ಬರೋದು ಭಕ್ತರು ಹಾಗೂ ಟ್ರಸ್ಟಿಗಳಿಗೆ ಬಿಟ್ಟ ವಿಚಾರವಾಗಿದೆ ಎಂದು ಮನಗುಳಿ ಸಂಗನಬಸವ ಸ್ವಾಮೀಜಿ ಹೇಳಿದರು. ಹರಿಹರ ಪಂಚಮಸಾಲಿ ಪೀಠದ ವಿವಾದ ಹಿನ್ನೆಲೆ ಹರಿಹರಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಹರಜಾತ್ರೆಯಲ್ಲಿ ಈ ಹಿಂದೆ ಸಹ ವಚನಾನಂದ ಸ್ವಾಮೀಜಿಗಳ ವಿರುದ್ಧ ಅವರು ಅಸಮಾಧಾನ ಹೊರಹಾಕಿದ್ದರು.ಹರಜಾತ್ರೆಯಲ್ಲಿ ವಚನಾನಂದ ಸ್ವಾಮೀಜಿ ಗಣ್ಯರಿಗೆ ಅಪಮಾನ ಮಾಡಿದ್ದಾರೆ. ಭಕ್ತರಲ್ಲಿ ಒಡಕು ತರುವ ಕೆಲಸ ಮಾಡಿದ್ದಾರೆ
ಬೆಂಗಳೂರು: 2019 ರ ಘಟನೆಯಲ್ಲಿ ಎನ್ಎಚ್ಎಐ ಇಂಜಿನಿಯರ್ಗೆ ಅವಮಾನ ಮಾಡಿದ್ದಕ್ಕಾಗಿ ಸಿಂಧುದುರ್ಗ ನ್ಯಾಯಾಲಯ ನಿತೇಶ್ ರಾಣೆಗೆ ಒಂದು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಲಯವು ಈ ಕೃತ್ಯವನ್ನು "ಅಧಿಕಾರದ ದುರುಪಯೋಗ" ಎಂದು ಕರೆದಿದೆ ಆದರೆ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಸಮಯವನ್ನು ಅನುಮತಿಸಲು ಶಿಕ್ಷೆಯನ್ನು ಅಮಾನತುಗೊಳಿಸಿತು.2019 ರಲ್ಲಿ ಎನ್ಎಚ್ಎಐ ಎಂಜಿನಿಯರ್ ಮೇಲೆ ಮಣ್ಣು ಸುರಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಸಚಿವ ಮತ್ತು ಬಿಜೆಪಿ ನಾಯಕ
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮೇ 15ರ ಒಳಗೆ ಹೈಕಮಾಂಡ್ ಗಿಫ್ಟ್ ನೀಡಲಿದ್ದಾರೆ ಡಿಕೆ ಬಣದ ಶಾಸಕರು ಹೇಳುತ್ತಿದ್ದಾರೆಂದು ಮಾಜಿ ಸಚಿವ ಕೆಎನ್ ರಾಜಣ್ಣ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಬೆಂಬಲಿಗ ಶಾಸಕರು ಮುಂದೆ ಕರ್ನಾಟಕದಲ್ಲಿ ದಲಿತರು ಮುಖ್ಯಮಂತ್ರಿಯಾಗಬೇಕೆಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.ಅಧಿಕಾರ ಮುಂದುವರಿಸಲು ಅಥವಾ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಇನ್ನೂ
ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶದದ ಕೆಡಿ ದಿ ಡೆವಿಲ್ ಚಿತ್ರವು ಬಿಡುಗಡೆಗೆ ಮುನ್ನವೇ ಭಾರೀ ಸದ್ದು ಮಾಡುತ್ತಿದೆ. ಅದರಲ್ಲೂ ಸರ್ಕೆ ಚುನರ್ ತೇರಿ ಸರ್ಕೆ ಹಾಡಿನ ವಿವಾದ ದೇಶದಾದ್ಯಂತ ಸುದ್ದಿಯಾಗಿತ್ತು. ಇದೀಗ ಈ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಂಜಯ್ ದತ್ ಸೋಮವಾರ ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ಹಾಜರಾಗಿ ಲಿಖಿತ ಕ್ಷಮೆಯಾಚಿಸಿದರು. ಕೆಡಿ: ದಿ ಡೆವಿಲ್ ಕನ್ನಡ ಚಿತ್ರವಾಗಿದ್ದು, ಹಿಂದಿ ಸೇರಿದಂತೆ ನಾಲ್ಕು ಭಾಷೆಗಳಿಗೆ ಡಬ್ ಮಾಡಲಾಗಿದೆ. ಇದು ಏಪ್ರಿಲ್ 30 ರಂದು ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಧ್ರುವ ಸರ್ಜಾ, ವಿ ರವಿಚಂದ್ರನ್, ರಮೇಶ್ ಅರವಿಂದ್ ಮತ್ತು ಶಿಲ್ಪಾ ಶೆಟ್ಟಿ ಕೂಡ ನಟಿಸಿದ್ದಾರೆ.ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಅವರಿಗೂ ಸಮನ್ಸ್ ನೀಡಲಾಗಿದೆ. ಆದರೆ ಅವರು ವಿದೇಶದಲ್ಲಿ ಇರುವುದರಿಂದ ಹಾಜರಾಗಲು ಸಾಧ್ಯವಾಗಲಿಲ್ಲ ಮತ್ತು ವಿಚಾರಣೆಗೆ ಹೊಸ ದಿನಾಂಕವನ್ನು ಕೋರಿದ್ದಾರೆ. ಸಂಜಯ್ ದತ್ತ ಹಾಜರಾಗಿ ಕ್ಷಮೆಯಾಚಿಸಿದರು.
ಬೆಂಗಳೂರು: ಅಣ್ಣಾವ್ರ ಬಗ್ಗೆ ಮಾತನಾಡಲು ಚೇತನ್ಗೆ ಯೋಗ್ಯತೆಯಿಲ್ಲ ಎಂದ ನಟ ಚೇತನ್ ಹೇಳಿಕೆಗೆ ಜೆಡಿಎಸ್ಗೆ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಆಕ್ರೋಶ ಹೊರಹಾಕಿದ್ದಾರೆ. ಸ್ಮಾರಕದ ಜಾಗದ ವಿಚಾರವಾಗಿ ಚೇತನ್ ಅವರು ಎತ್ತಿದ್ದ ಆಕ್ಷೇಪಕ್ಕೆ ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದ ನಿಖಿಲ್, ‘ಅಣ್ಣಾವ್ರ ಬಗ್ಗೆ ಮಾತನಾಡಲು ಚೇತನ್ಗೆ ಯೋಗ್ಯತೆಯಿಲ್ಲ ಎಂದರು.ಈ ಕುರಿತು ಫೇಸ್ಬುಕ್ನಲ್ಲಿ ತಿರುಗೇಟು ನೀಡಿರುವ ಚೇತನ್, ‘ಪ್ರಜಾಪ್ರಭುತ್ವದಲ್ಲಿ ನಾವೆಲ್ಲರೂ ಮಾತನಾಡಲು ಯೋಗ್ಯರೇ.
ಬೆಂಗಳೂರು: ಕಳೆದ 18 ವರ್ಷಗಳಿಂದ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿರುವ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ 9 ಸಾವಿರ ರನ್ಗಳ ಮೈಲುಗಲ್ಲು ದಾಟಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸೋಮವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಈ ಮೇಲಿಗಲ್ಲು ತಲುಪಿದರು.ಈ ಪಂದ್ಯಕ್ಕೂ ಮುನ್ನ 9 ಸಾವಿರ ರನ್ಗಳಿಗೆ 11 ರನ್ ಕೊರತೆಯಿತ್ತು. ಅಕ್ಷರ್ ಪಟೇಲ್ ಬೌಲಿಂಗ್ನಲ್ಲಿ ಒಂಟಿ ರನ್ ಪಡೆಯುವ ಮೂಲಕ ಈ ಸಾಧನೆ ಮಾಡಿದರು. ಐಪಿಎಲ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ 7,183 ರನ್ ಗಳಿಸಿದ್ದು, ನಂತರದ ಸ್ಥಾನಗಳಲ್ಲಿ ಶಿಖರ್ ಧವನ್ (6,769), ಡೇವಿಡ್ ವಾರ್ನರ್ (6,565) ಹಾಗೂ ಕೆ.ಎಲ್. ರಾಹುಲ್ (5,579) ಇದ್ದಾರೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,56,170.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,55,645.00 ರೂ.ಗಳಷ್ಟಿದೆ.
ಬೆಂಗಳೂರು: ಕರ್ನಾಟಕದಲ್ಲಿರುವ ಸರ್ಕಾರಿ ಶಾಲೆಗಳ ಬಲವರ್ಧನೆಗೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆಯಿಟ್ಟಿದೆ. ಸರ್ಕಾರಿ ಶಾಲೆಗಳ ಪುನರುಜ್ಜಿವನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂಟು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇತ್ತೀಚಿನ ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಗಳ ಉತ್ತಮ ಫಲಿತಾಂಶಗಳನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಈ ಸಮಗ್ರ ಯೋಜನೆಯನ್ನು ರೂಪಿಸಲಾಗಿದೆ. ಪೋಷಕರು ಮತ್ತು ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಪ್ರವೇಶ ಪಡೆದು ಈ ಪರಿವರ್ತನೆಯ ಭಾಗವಾಗಬೇಕು ಎಂದು ಮುಖ್ಯಮಂತ್ರಿಗಳು ಕರೆ ನೀಡಿದ್ದಾರೆ.
ಗ್ಯಾಂಗ್ಟಕ್: 75 ನೇ ವಯಸ್ಸಿನಲ್ಲೂ ಯುವಕನಂತೆ ಪ್ರಧಾನಿ ಮೋದಿ ಮಕ್ಕಳೊಂದಿಗೆ ಫುಟ್ ಬಾಲ್ ಆಡಿ ಗಮನ ಸೆಳೆದಿದ್ದಾರೆ. ಸಿಕ್ಕಿಂ ಭೇಟಿ ವೇಳೆ ಗ್ಯಾಂಗ್ಟಕ್ ನಲ್ಲಿ ಫುಟ್ಬಾಲ್ ಆಡಿದ್ದಾರೆ. ಪಶ್ಚಿಮ ಬಂಗಾಲದಲ್ಲಿ ಪ್ರಚಾರ ಮುಗಿಸಿದ ಪ್ರಧಾನಿ ಮೋದಿ ಗ್ಯಾಂಗ್ಟಕ್ ನಲ್ಲಿ ಇಂದು ಬೆಳಿಗ್ಗೆ ಮಕ್ಕಳೊಂದಿಗೆ ಫುಟ್ಬಾಲ್ ಆಡಿದ್ದಾರೆ. ಪಕ್ಕಾ ಪ್ರೊಫೆಷನಲ್ ಆಟಗಾರನಂತೆ ಟ್ರ್ಯಾಕ್ ಸೂಟ್ ಹಾಕಿಕೊಂಡು ಮಕ್ಕಳೊಂದಿಗೆ ತಾವೂ ಮಗುವಾಗಿ ಆಡಿದ್ದಾರೆ. ಇಂದು ಇಲ್ಲಿ ಸುಮಾರು 4,000 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿರುವ ಅವರು ಮಕ್ಕಳೊಂದಿಗೆ ಕೆಲವು ಕ್ಷಣ ಕಳೆದಿದ್ದಾರೆ. ಪಶ್ಚಿಮ ಬಂಗಾಲದಂತೆ ಸಿಕ್ಕಿಂನಲ್ಲೂ ಫುಟ್ಬಾಲ್ ಕ್ರೀಡೆ ಜನಪ್ರಿಯವಾಗಿದೆ.
ಮುಂಬೈ: ಐಪಿಎಲ್ 2026 ರಲ್ಲಿ ಬೇರೆ ಬೇರೆ ತಂಡಗಳಲ್ಲಿ ದುಬಾರಿ ಬೆಲೆಗೆ ಖರೀದಿಯಾದ ಆಟಗಾರರಿದ್ದಾರೆ. ಆದರೆ ಕೊಟ್ಟ ಕಾಸಿಗೆ ತಕ್ಕ ಹಾಗೆ ಆಡುತ್ತಿರುವವರು ಶ್ರೇಯಸ್ ಅಯ್ಯರ್ ಮಾತ್ರ ಎಂದು ಅಭಿಮಾನಿಗಳು ಅಭಿಪ್ರಾಯಪಡುತ್ತಿದ್ದಾರೆ. ಶ್ರೇಯಸ್ ಅಯ್ಯರ್ ಐಪಿಎಲ್ 2026 ರ ದುಬಾರಿ ಆಟಗಾರಲ್ಲಿ ಒಬ್ಬರು. ಅವರನ್ನು ಕಳೆದ ಬಾರಿ ಪಂಜಾಬ್ ಕಿಂಗ್ಸ್ 26.75 ಕೋಟಿ ರೂ. ಕೊಟ್ಟು ತಂಡಕ್ಕೆ ಖರೀದಿ ಮಾಡಿತ್ತು. ಜೊತೆಗೆ ನಾಯಕನ ಪಟ್ಟವನ್ನೂ ನೀಡಿತ್ತು. ಕಳೆದ ಸೀಸನ್ ನಲ್ಲಿಯೇ ಅವರು ತಮ್ಮ ಬೆಲೆಗೆ ತಕ್ಕ ಆಟವಾಡಿ ತಂಡವನ್ನು ಫೈನಲ್ ತನಕ ತಲುಪಿಸಿದ್ದಾರೆ.
ಸಹೋದರಿ ತೀರಿಕೊಂಡಿದ್ದಾಳೆ, ಅವಳ ಖಾತೆಯಲ್ಲಿರುವ ಹಣ ಕೊಡಿ ಎಂದು ಹೇಳಿದರೂ ನಂಬದ ಬ್ಯಾಂಕ್ ಸಿಬ್ಬಂದಿಯ ವರ್ತನೆಯಿಂದ ಬೇಸತ್ತ ವ್ಯಕ್ತಿಯೊಬ್ಬರು ಆಕೆಯ ಅಸ್ಥಿಪಂಜರವನ್ನು ತಂದ ವಿಡಿಯೋವೊಂದು ಸೋಷಿಯಲ್ ಮೀಡಿಯದಲ್ಲಿ ವೈರಲ್ ಆಗಿದೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕೆಲವೊಮ್ಮೆ ಬ್ಯಾಂಕ್ ಸಿಬ್ಬಂದಿಗಳು ಸಾಲ ನೀಡಲು ಮಾತ್ರವಲ್ಲ ನಮ್ಮದೇ ಬ್ಯಾಂಕ್ ಖಾತೆಯ ವ್ಯವಹಾರ ನಡೆಸಲೂ ನೂರೆಂಟು ಸಾಕ್ಷಿ, ದಾಖಲೆಗಳನ್ನು ಕೇಳುತ್ತಾರೆ. ಇದೇ ರೀತಿ ಒಡಿಶಾದಲ್ಲಿ ಮೃತ ಮಹಿಳೆಯ ಸಹೋದರನಿಗೆ ಬ್ಯಾಂಕ್ ಸಿಬ್ಬಂದಿಗಳು ದಾಖಲೆ ಕೇಳಿದ್ದಾರೆ. ಸಹೋದರಿಯ ಖಾತೆಯಲ್ಲಿ 20,000 ರೂ.ಗಳಿತ್ತು. ಅದನ್ನು ವಿತ್ ಡ್ರಾ ಮಾಡಲು ಆತ ಬ್ಯಾಂಕ್ ಗೆ ಸಾಕಷ್ಟು ಬಾರಿ ಅಲೆದಿದ್ದಾನೆ.
ಅಮರಾವತಿ: ತಿರುಪತಿ ತಿಮ್ಮಪ್ಪನ ಮೂರ್ತಿಯನ್ನು ಸ್ಮರಣಿಕೆಯಾಗಿ ಪಡೆಯುವ ಮೊದಲು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ ಆಗಿದ್ದಾರೆ. ನಿನ್ನೆ ಆಂಧ್ರಪ್ರದೇಶದಲ್ಲಿ ಆಂಧ್ರ ಯೂನಿವರ್ಸಿಟಿಯ ಶತಮಾನೋತ್ಸವ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ಸಚಿನ್ ತೆಂಡುಲ್ಕರ್ ವಿಶೇಷ ಅತಿಥಿಯಾಗಿ ಆಗಮಿಸಿದ್ದರು. ವೇದಿಕೆಯಲ್ಲಿ ಸಿಎಂ ಚಂದ್ರಬಾಬು ನಾಯ್ಡು, ನರಾ ಲೋಕೇಶ್, ಕೇಂದ್ರ ಸಚಿವ ರಾಮಮೋಹನ ನಾಯ್ಡು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ವೇಳೆ ಅತಿಥಿಯಾಗಿ ಬಂದಿದ್ದ ಸಚಿನ್ ಗೆ ಸಿಎಂ ಚಂದ್ರಬಾಬು ನಾಯ್ಡು ಗೌರವಪೂರ್ವಕವಾಗಿ ತಿರುಪತಿ ತಿಮ್ಮಪ್ಪನ ಮೂರ್ತಿ ಸ್ಮರಣಿಕೆಯೊಂದನ್ನು ನೀಡಿ ಗೌರವಿಸಿದ್ದಾರೆ.
ಬೆಂಗಳೂರು: ಸಿಎಂ ಬದಲಾವಣೆ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಡಿಕೆ ಶಿವಕುಮಾರ್ ಬಳಿಕ ಈಗ ಸಿಎಂ ಸಿದ್ದರಾಮಯ್ಯ ಬಣ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟಿದೆ. ಅಸ್ಸಾಂ, ಕೇರಳ ಚುನಾವಣೆ ಬಳಿಕ ಮತ್ತೆ ರಾಜ್ಯದಲ್ಲಿ ಅಧಿಕಾರ ಹಸ್ತಾಂತರ ವಿಚಾರ ಸದ್ದು ಮಾಡುವ ಸೂಚನೆ ಸಿಕ್ಕಿದೆ. ಈಗಾಗಲೇ ಡಿಕೆ ಶಿವಕುಮಾರ್ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿ ಬಂದಿದ್ದಾರೆ. ಇದರ ನಡುವೆ ನಿನ್ನೆ ಡಿಕೆ ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕರು ಮೇ ಎರಡನೇ ವಾರದಲ್ಲಿ ಹೈಕಮಾಂಡ್ ಸಿಹಿ ಸುದ್ದಿ ನೀಡಲಿದೆ ಎಂದು ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆದಾಗ ಕುಕ್ಕರ್ ಬಾಂಬ್ ಬ್ಲಾಸ್ಟ್ ಅಂತೆ ಎಂದು ಇದೆಲ್ಲಾ ಸುಳ್ಳು ಎಂಬಂತೆ ವ್ಯಂಗ್ಯ ಮಾಡಿದ್ದ ಡಿಕೆ ಶಿವಕುಮಾರ್ ಹಳೇ ವಿಡಿಯೋ ಹಂಚಿಕೊಂಡು ಬಿಜೆಪಿ ಟಾಂಗ್ ಕೊಟ್ಟಿದೆ. ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಉಗ್ರ ಶಾರಿಕ್ ಗೆ ನಿನ್ನೆ ಎನ್ಐಎ ಕೋರ್ಟ್ ಆರೋಪ ಸಾಬೀತಾದ ಹಿನ್ನಲೆಯಲ್ಲಿ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಅಂದು ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆದಾಗ ಡಿಕೆ ಶಿವಕುಮಾರ್ ‘ಕುಕ್ಕರ್ ಬ್ಲಾಸ್ಟ್ ಅಂತೆ, ಕುಕ್ಕರ್ ಬ್ಲಾಸ್ಟ್, ಇದೆಲ್ಲಾ ಡೈವರ್ಶನ್ ಪಾಲಿಟಿಕ್ಸ್’ ಎಂದು ವ್ಯಂಗ್ಯ ಮಾಡಿದ್ದರು.
ದೆಹಲಿ: ವಿರಾಟ್ ಕೊಹ್ಲಿ ಆಟೋಗ್ರಾಫ್ ಕೊಡಲಿಲ್ಲ ಎಂದು ತೀರಾ ಬೇಸರಗೊಂಡ ಮಗು ಬಿಕ್ಕಿ ಬಿಕ್ಕಿ ಅತ್ತ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ.ಐಪಿಎಲ್ ವೇಳೆ ವಿರಾಟ್ ಕೊಹ್ಲಿ ತಮ್ಮ ಟೀಂ ಹೋಟೆಲ್ ಗೆ ಬರುತ್ತಿದ್ದರು. ಸಾಕಷ್ಟು ಜನ ಈ ಸಂದರ್ಭದಲ್ಲಿ ಕೊಹ್ಲಿಗಾಗಿ ಕಾದು ಆಟೋಗ್ರಾಫ್ ಪಡೆಯುತ್ತಾರೆ. ಅದೇ ರೀತಿ ಈ ಪುಟ್ಟ ಹುಡುಗನೂ ಗಂಟೆಗಟ್ಟಲೇ ಕಾದು ನಿಂತಿತ್ತು. ಪುಟಾಣಿ ಬ್ಯಾಟ್ ತಂದು ಅದಕ್ಕೆ ಕೊಹ್ಲಿಯಿಂದ ಆಟೋಗ್ರಾಫ್ ಪಡೆಯಬೇಕು ಎಂದು ಕಾದು ನಿಂತಿತ್ತು. ವಿರಾಟ್ ಕೊಹ್ಲಿ ಬರುತ್ತಿದ್ದಂತೇ ಓಡಿ ಹೋಗಿ ಆಟೋಗ್ರಾಫ್ ಪಡೆಯಲು ಬಂದಿತ್ತು.
ದೆಹಲಿ: ಐಪಿಎಲ್ 2026 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್ ಸಿಬಿ ಭರ್ಜರಿ ಬೌಲಿಂಗ್ ಬಳಿಕ ವಿರಾಟ್ ಕೊಹ್ಲಿ ನಡೆದುಕೊಂಡ ರೀತಿ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಈ ಕ್ಷಣದ ವಿಡಿಯೋ ಇಲ್ಲಿದೆ ನೀವೇ ಗಮನಿಸಿ. ನಿನ್ನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಕೇವಲ 75 ರನ್ ಗಳಿಗೆ ಕಟ್ಟಿ ಹಾಕಿದ ಆರ್ ಸಿಬಿ 76 ರನ್ ಗಳ ಗುರಿಯನ್ನು ಕೇವಲ 6.3 ಓವರ್ ಗಳಲ್ಲೇ ಕೇವಲ 1 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತ್ತು. ಭರ್ಜರಿ ಬೌಲಿಂಗ್ ಪ್ರದರ್ಶನದ ಬಳಿಕ ಭರ್ಜರಿ ಬ್ಯಾಟಿಂಗ್ ಕೂಡಾ ಮಾಡಿ ಆರ್ ಸಿಬಿ ಎಲ್ಲಾ ವಿಭಾಗಗಳಲ್ಲಿ ಸೈ ಎನಿಸಿಕೊಂಡಿತು.
ನವದೆಹಲಿ: ದೇಶದ ಎರಡನೇ ಮಹಿಳಾ ರಾಷ್ಟ್ರಪತಿಯಾಗಿರುವ ದ್ರೌಪದಿ ಮುರ್ಮು ಬಳಿಕ ಭಾರತದ ರಾಷ್ಟ್ರಪತಿಯಾಗಬಹುದಾದ ಅಭ್ಯರ್ಥಿ ಯಾರು ಗೊತ್ತೇ? ಇದೀಗ ಈ ಬಗ್ಗೆ ಚರ್ಚೆ ಶುರುವಾಗಿದೆ. 2022 ರಲ್ಲಿ ಎನ್ ಡಿಎ ಅಭ್ಯರ್ಥಿಯಾಗಿದ್ದ ದ್ರೌಪದಿ ಮುರ್ಮು ದೇಶದ ಎರಡನೇ ಮಹಿಳಾ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರು. ಅವರ ಅಧಿಕಾರವಧಿ ಇನ್ನೇನು ಮುಗಿಯಲಿದೆ. ಭಾರತದ ಸಂವಿಧಾನದ ಪ್ರಕಾರ ರಾಷ್ಟ್ರಪತಿಗಳ ಅಧಿಕಾರವಧಿ 5 ವರ್ಷಗಳದ್ದಾಗಿದೆ. 2027 ಜುಲೈ 25 ಕ್ಕೆ ದ್ರೌಪದಿ ಮುರ್ಮು ಅಧಿಕಾರವಧಿ ಮುಕ್ತಾಯವಾಗಲಿದೆ. ಹೀಗಾಗಿ ಮುಂದಿನ ವರ್ಷಕ್ಕೆ ದೇಶಕ್ಕೆ ಹೊಸ ರಾಷ್ಟ್ರಪತಿ ಆಯ್ಕೆಯಾಗಲಿದ್ದಾರೆ.
ಬೆಂಗಳೂರು: ವಿಪರೀತ ಬಿಸಿಲಿನ ಶಾಖದ ನಡುವೆಯೂ ಕೆಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಇಂದು ಯಾವ ಜಿಲ್ಲೆಗಳಿಗೆ ಮಳೆ ಇಲ್ಲಿದೆ ಹವಾಮಾನ ವರದಿ. ಕಳೆದ ಎರಡು, ಮೂರು ವಾರಗಳಿಂದ ಕರ್ನಾಟಕದಲ್ಲಿ ಬಿಸಿಲು ನೆತ್ತಿ ಸುಡುತ್ತಿದೆ. ಹೊರಗೆ ಕಾಲಿಡಲಾಗದ ವಾತಾವರಣವಿದೆ. ಇದರ ನಡುವೆಯೂ ಕೆಲವೆಡೆ ಮಳೆಯಾಗುತ್ತಿರುವುದು ವಿಶೇಷವಾಗಿದೆ. ಇಂದೂ ಕೆಲವು ಜಿಲ್ಲೆಗಳಿಗೆ ಉರಿಬಿಸಿಲಿದ್ದರೆ ಮತ್ತೆ ಕೆಲವು ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ಕೊಪ್ಪಳ, ಶಿವಮೊಗ್ಗ, ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸೂಚನೆಯಿದೆ. ಇನ್ನು ಕೊಡಗು, ಹಾಸನ, ಮೈಸೂರು, ಮಂಡ್ಯ, ಬೆಂಗಳೂರು, ಚಾಮರಾಜನಗರ, ರಾಮನಗರ, ವಿಜಯಪುರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.
ಇಂದು ಮಂಗಳವಾರವಾಗಿದ್ದು ದುರ್ಗಾದೇವಿಗೆ ವಿಶೇಷವಾದ ದಿನವಾಗಿದೆ. ಇಂದು ದುರ್ಗಾ ದೇವಿಯ ಅನುಗ್ರಹಕ್ಕಾಗಿ ಚುಟುಕಾದ ಈ ನವದುರ್ಗಾ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.ಈಶ್ವರ ಉವಾಚ । ಶೃಣು ದೇವಿ ಪ್ರವಕ್ಷ್ಯಾಮಿ ಕವಚಂ ಸರ್ವಸಿದ್ಧಿದಮ್ ।ಪಠಿತ್ವಾ ಪಾಠಯಿತ್ವಾ ಚ ನರೋ ಮುಚ್ಯೇತ ಸಂಕಟಾತ್ ॥ 1 ॥ ಅಜ್ಞಾತ್ವಾ ಕವಚಂ ದೇವಿ ದುರ್ಗಾಮಂತ್ರಂ ಚ ಯೋ ಜಪೇತ್ ।ನ ಚಾಪ್ನೋತಿ ಫಲಂ ತಸ್ಯ ಪರಂ ಚ ನರಕಂ ವ್ರಜೇತ್ ॥ 2 ॥ ಉಮಾದೇವೀ ಶಿರಃ ಪಾತು ಲಲಾಟೇ ಶೂಲಧಾರಿಣೀ ।ಚಕ್ಷುಷೀ ಖೇಚರೀ ಪಾತು ಕರ್ಣೌ ಚತ್ವರವಾಸಿನೀ ॥ 3 ॥
ಬೆಂಗಳೂರು: ಸಾಹಸಸಿಂಹ ಡಾ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆಯಾಗಿ ತಿಂಗಳುಗಳೇ ಕಳೆದಿವೆ. ಆದರೆ ಇದುವರೆಗೆ ಪ್ರಶಸ್ತಿ ಪ್ರಧಾನವಾಗಿಲ್ಲ. ಈ ಬಗ್ಗೆ ಸಿಎಂ ಸಿದ್ದರಾಮಯ್ಯರಿಂದ ಅಳಿಯ, ನಟ ಅನಿರುದ್ಧ ಜತ್ಕರ್ ಗೆ ಸಿಕ್ಕ ಭರವಸೆಯೇನು ಇಲ್ಲಿದೆ ವಿವರ. ಕಳೆದ ವರ್ಷ ಸಾಹಸಸಿಂಹ ಡಾ ವಿಷ್ಣುವರ್ಧನ್ ಅವರ 75 ನೇ ಜನ್ಮ ಜಯಂತಿ ಸಂದರ್ಭದಲ್ಲಿ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಅವರ ಜೊತೆಗೆ ದಿವಂಗತ ನಟಿ ಬಿ ಸರೋಜ ದೇವಿ ಅವರಿಗೂ ಕರ್ನಾಟಕ ರತ್ನ ಘೋಷಣೆಯಾಗಿತ್ತು.
ದೆಹಲಿ: ಐಪಿಎಲ್ 2026 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಬಿರುಗಾಳಿಯಂತಹ ಬೌಲಿಂಗ್ ಮಾಡಿದ ಆರ್ ಸಿಬಿ ಎದುರಾಳಿಗಳನ್ನು ಸಂಪೂರ್ಣವಾಗಿ ಧೂಳೀಪಟ ಮಾಡಿದ್ದಾರೆ. ಇಂದು ಟಾಸ್ ಗೆದ್ದ ಆರ್ ಸಿಬಿ ಮೊದಲು ಬೌಲಿಂಗ್ ಆಯ್ದುಕೊಂಡಿತು. ಅದಕ್ಕೆ ತಕ್ಕಂತೆ ಬೌಲಿಂಗ್ ಮಾಡಿದ ಜೋಶ್ ಹೇಝಲ್ ವುಡ್, ಭುವನೇಶ್ವರ್ ಕುಮಾರ್ ಜೋಡಿ ಕನಸಿನಂತೆ ಬೌಲಿಂಗ್ ಮಾಡಿದರು. ಡೆಲ್ಲಿ ಒಂದು ಹಂತದಲ್ಲಿ ರನ್ ಗಳಿಸಿದ್ದಕ್ಕಿಂತ ಹೆಚ್ಚು ವಿಕೆಟ್ ಕಳೆದುಕೊಂಡಿತ್ತು. ಆರ್ ಸಿಬಿ ಬೌಲಿಂಗ್ ಯಾವ ಮಟ್ಟಿಗಿತ್ತು ಎಂದರೆ ಕೇವಲ 8 ರನ್ ಗೆ ಡೆಲ್ಲಿ 6 ವಿಕೆಟ್ ಕಳೆದುಕೊಂಡಿತ್ತು.
ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಈ ಬಾರಿ ದಾಖಲೆಯ ಫಲಿತಾಂಶ ಪಡೆಯಲು ಪರೀಕ್ಷಾ ಕೇಂದ್ರದಲ್ಲಿ ವೆಬ್ಕ್ಯಾಸ್ಟಿಂಗ್ ಸ್ಥಗಿತಗೊಳಿಸಿ ಕಾಪಿ ಹೊಡೆಯಲಾಗಿದೆ ಎಂಬ ಎಚ್ ವಿಶ್ವನಾಥ್ ಆರೋಪಕ್ಕೆ ಮಧುಬಂಗಾರಪ್ಪ ಪ್ರತಿಕ್ರಿಯಿಸಿ, ಅವರಿಗೆ ವಯಸ್ಸಾಗಿದೆ. ಅದನ್ನು ಅರಳುಮರಳು ಎಂದು ಹೇಳಲಾಗುವುದಿಲ್ಲ ಎಂದು ಹೇಳಿದರು. ಅವರ ಈ ಹೇಳಿಕೆ ನಾಡಿನ ಮಕ್ಕಳು ಶೈಕ್ಷಣಿಕ ಸಾಧನೆ ಒಪ್ಪಲಾಗದೇ ಮಾಡಿರುವ ಉದ್ದೇಶಪೂರ್ವಕ ಅಪಮಾನ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಕಿಡಿಕಾರಿದರು.