ವಡೋದರಾ: ಈ ಸಲ ಕಪ್ ನಮ್ದು ಎನ್ನುತ್ತಿದ್ದ ಅಭಿಮಾನಿಗಳಿಗೆ ಆರ್ ಸಿಬಿ ಮಹಿಳೆಯರು ಎರಡನೇ ಸಲ ಕಪ್ ನಮ್ದು ಎಂದಿದ್ದಾರೆ. ಡಬ್ಲ್ಯುಪಿಎಲ್ 2026 ಫೈನಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 6 ವಿಕೆಟ್ ಗಳಿಂದ ಸೋಲಿಸಿದ ಆರ್ ಸಿಬಿ ಎರಡನೇ ಬಾರಿಗೆ ಚಾಂಪಿಯನ್ ಆಗಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ 204 ರನ್ ಗಳ ಗುರಿ ನೀಡಿತ್ತು. ಈ ಮೊತ್ತ ಬೆನ್ನತ್ತಿದ ಆರ್ ಸಿಬಿ ಆರಂಭದಲ್ಲೇ ಗ್ರೇಸ್ ಹ್ಯಾರಿಸ್ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು.
ವಡೋದರಾ: ಡಬ್ಲ್ಯುಪಿಎಲ್ 2026 ಫೈನಲ್ ಪಂದ್ಯವನ್ನು ಗೆಲ್ಲಲು ಆರ್ ಸಿಬಿಗೆ ಡೆಲ್ಲಿ ಕ್ಯಾಪಿಟಲ್ಸ್ 204 ರನ್ ಗಳ ಗುರಿ ನೀಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 203 ರನ್ ಗಳಿಸಿದೆ. ಇಂದು ಟಾಸ್ ಗೆದ್ದ ಆರ್ ಸಿಬಿ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಡೆಲ್ಲಿ ಕ್ಯಾಪಿಟಲ್ಸ್ ಆರಂಭ ಉತ್ತಮವಾಗಿತ್ತು. ಆದರೆ 13 ಎಸೆತಗಳಲ್ಲಿ 20 ರನ್ ಗಳಿಸಿದ ಶಫಾಲಿ ವರ್ಮ ಔಟಾದರು. ಅವರ ಬೆನ್ನಲ್ಲೇ ಲಿಝಲ್ಲೆ ಲೀ 30 ರನ್ ಗಳಿಸಿ ಔಟಾದರು.
ಬೆಂಗಳೂರು, 5 ಫೆಬ್ರವರಿ, 2026: ಸೆಂಕೋ ಸಮೂಹದ ಸಮಕಾಲೀನ ಐಷಾರಾಮಿ ಜೀವನಶೈಲಿ ಬ್ರ್ಯಾಂಡ್ ಆದ 'ಸೆನೆಸ್', ಬೆಂಗಳೂರಿನ ಜನಪ್ರಿಯ ಫೀನಿಕ್ಸ್ ಮಾಲ್ನಲ್ಲಿ ತನ್ನ ಚೊಚ್ಚಲ ಮಳಿಗೆಯನ್ನು ಆರಂಭಿಸಿದೆ. ಈ ಉದ್ಘಾಟನೆಯೊಂದಿಗೆ, ಸೆನೆಸ್ ತನ್ನ ಅಖಿಲ ಭಾರತ ಉಪಸ್ಥಿತಿಯನ್ನು 10 ಮಳಿಗೆಗಳಿಗೆ ವಿಸ್ತರಿಸಿದೆ. ಕೋಲ್ಕತ್ತಾ, ನವದೆಹಲಿ, ಹೈದರಾಬಾದ್, ಭುವನೇಶ್ವರ, ಚಂಡೀಗಢ ಮತ್ತು ಪಾಟ್ನಾದಲ್ಲಿ ಈಗಾಗಲೇ ತನ್ನ ಹೆಜ್ಜೆಗುರುತು ಮೂಡಿಸಿರುವ ಈ ಬ್ರ್ಯಾಂಡ್, ಈಗ ಬೆಂಗಳೂರನ್ನು ತನ್ನ ಪಟ್ಟಿಗೆ ಸೇರಿಸಿಕೊಂಡಿದೆ.ಸೆಂಕೋ ಸಂಸ್ಥೆಯ ಸೆನೆಸ್ ಬ್ರ್ಯಾಂಡ್, ನೀವು ಬದುಕುವ ರೀತಿಗೆ ತಕ್ಕಂತೆ ವಿನ್ಯಾಸಗೊಳಿಸಲಾದ ಆಧುನಿಕ ಐಷಾರಾಮಿಯನ್ನು ಪ್ರತಿನಿಧಿಸುತ್ತದೆ.
ವಡೋದರಾ: ಮಹಿಳಾ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯದಲ್ಲೂ ಮಾಜಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟಾಸ್ ಗೆದ್ದಿದೆ. ಆರ್ಸಿಬಿ ನಾಯಕಿ ಸ್ಮೃತಿ ಮಂದಾನ ಅವರು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. 2024ರಲ್ಲಿ ಚಾಂಪಿಯನ್ ಆಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಒಂದು ಬಾರಿ ಟ್ರೋಫಿ ಗೆದ್ದಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸತತ ನಾಲ್ಕನೇ ಬಾರಿ ಫೈನಲ್ ತಲುಪಿದೆ. ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಒಮ್ಮೆ ಕೂಡ ಟ್ರೋಫಿ ಜಯಿಸಿಲ್ಲ. ದೆಹಲಿ ತನ್ನ ಚೋಕರ್ಸ್ ಟ್ಯಾಗ್ ಅನ್ನು ಕಳೆದುಕೊಂಡು ಮೊದಲ ಬಾರಿಗೆ ಟ್ರೋಫಿಯನ್ನು ಎತ್ತುತ್ತದೆಯೇ ಅಥವಾ ಬೆಂಗಳೂರು ತನ್ನ ಪ್ರಾಬಲ್ಯವನ್ನು ಮುಂದುವರಿಸುತ್ತದೆಯೇ ಎಂಬುದು ಕುತೂಹಲ ಕೆರಳಿಸಿದೆ.
ನವದೆಹಲಿ: ಮೆಟ್ರೋ ರೈಲು ಪ್ರಯಾಣಿಕರಿಗೆ ಸರ್ಕಾರ ಶಾಕ್ ನೀಡಿದ್ದು, ಮತ್ತೆ ಟಿಕೆಟ್ ದರ ಏರಿಕೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಅದರ ಬೆನ್ನಲ್ಲೇ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ ವಿಶೇಷ ಮನವಿ ಮಾಡಿದ್ದಾರೆ. ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯನ್ನು ವಿರೋಧಿಸಿರುವ ಸಂಸದ ತೇಜಸ್ವಿ ಸೂರ್ಯ, ಮೆಟ್ರೋ ಪ್ರಯಾಣ ದರ ಏರಿಕೆಯನ್ನು ಜಾರಿಗೆ ತಂದಿದ್ದು, ವ್ಯಾಪಕ ಸಾರ್ವಜನಿಕ ವಿರೋಧವನ್ನು ಕಡೆಗಣಿಸಿ ಪ್ರಯಾಣಿಕರ ಮೇಲೆ ಅನಗತ್ಯ ಹೊರೆಯನ್ನು ಹೇರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಕ್ತಿಯೊಬ್ಬ ಬೃಹತ್ ನಾಗರಹಾವನ್ನು ಬಾಯಿಯಲ್ಲಿ ಹಿಡಿದು, ಹುಚ್ಚಾಟ ಮೆರೆದ ವಿಡಿಯೋವೊಂದು ವೈರಲ್ ಆಗಿದೆ. ಇದನ್ನು ನೋಡಿದ ವೀಕ್ಷಕರು ದಿಗ್ಬ್ರಮೆಗೊಂಡಿದ್ದಾರೆ. ಈ ವೀಡಿಯೊದಲ್ಲಿ ಭಾರತದ ಅತ್ಯಂತ ವಿಷಕಾರಿ ಹಾವುಗಳಲ್ಲಿ ಒಂದಾದ ನಾಗರ ಹಾವನ್ನು ಕೈಯ ಸಹಾಯವಿಲ್ಲದೆ, ಬಾಯಲ್ಲಿ ಹಿಡಿದು ಆಘಾತಕಾರಿ ಸಾಹಸವನ್ನು ಮಾಡಿದ್ದಾನೆ.ಈ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯ ರೆಮುನಾ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. "ಖಾಗಾ" ಎಂದು ಗುರುತಿಸಲ್ಪಟ್ಟ ವ್ಯಕ್ತಿ, ಅಪಾಯಕಾರಿ ಸಹಾಯವನ್ನು ಮಾಡಿದ್ದಾನೆ. ಏನಾದರೂ ಹಾವು ಆತನಿಗೆ ಕಚ್ಚುತ್ತಿದ್ದರೆ ಅದು ಆತನ ಪ್ರಾಣಕ್ಕೆ ಅಪಾಯವಾಗುತ್ತಿತ್ತು.
ನವದೆಹಲಿ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕರು ತಮ್ಮ ಮತ್ತು ಸರ್ಕಾರದ ಬಗ್ಗೆ ಮಾಡುತ್ತಿರುವ ಟೀಕೆಗಳಿಗೆ ಇಂದು ಪ್ರಧಾನಿ ಮೋದಿ ರಾಜ್ಯ ಸಭೆ ಭಾಷಣದಲ್ಲಿ ತಿರುಗೇಟು ನೀಡಿದ್ದಾರೆ. ಕೆಲವರು ತಮ್ಮನ್ನು ತಾವು ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ ಎಂದಿದ್ದಾರೆ. ರಾಜ್ಯಸಭೆಯಲ್ಲಿ ಇಂದು ಸುದೀರ್ಘ ಭಾಷಣ ಮಾಡಿದ ಪ್ರಧಾನಿ ಮೋದಿ ವಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿದ್ದಲ್ಲದೆ ತಮ್ಮ ಸರ್ಕಾರದ ಸಾಧನೆಯನ್ನು ಒತ್ತಿ ಹೇಳಿದರು. ನುಸುಳುಕೋರರ ಪರವಾಗಿ ಇರುವ ಇವರನ್ನು ಯುವಕರು ಹೇಗೆ ಕ್ಷಮಿಸುತ್ತಾರೆ? ನುಸುಳುಕೋರರನ್ನು ಇವರು ಗುರಾಣಿಯಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.
ಮೈಸೂರು: ಕೆಲ ತಿಂಗಳ ಹಿಂದೆ ಮಚ್ಚು ಹಿಡಿದು ಶೋ ಮಾಡಿ, ಜೈಲು ಹಕ್ಕಿಯಾಗಿದ್ದ ಬಿಗ್ಬಾಸ್ ಖ್ಯಾತಿಯ ರಜತ್ ಬುಜ್ಜಿ ಇದೀಗ ಮತ್ತೇ ಟೀಕೆಗೆ ಗುರಿಯಾಗಿದ್ದಾರೆ. ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನ ಪಾರಂಪರಿಕ ಕಟ್ಟಡದ ಎದುರು ಸಿಗರೇಟ್ ಸೇದುತ್ತಾ ಫೋಟೋಶೂಟ್ ಮಾಡಿಸಿಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಬಂಧ ಕನ್ನಡಪರ ಸಂಘಟನೆಗಳು ಪೋಲಿಸ್ ಠಾಣೆಯ ಮೆಟ್ಟಿಲೇರಿವೆ.ಇನ್ನೂ ಮೈಸೂರಿನ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಒಂದು ಪಾರಂಪರಿಕ ಕಟ್ಟಡವಾಗಿದ್ದು, ಇಂತಹ ಐತಿಹಾಸಿಕ ಮಹತ್ವವುಳ್ಳ ಕಟ್ಟಡದ ಆವರಣದಲ್ಲಿ ರಜತ್ ಅವರು ಕಾರಿನಿಂದ ಇಳಿಯುತ್ತಾ, ಕೈಯಲ್ಲಿ ಸಿಗರೇಟ್ ಹಿಡಿದು ಹೊಗೆ ಬಿಡುತ್ತಾ 'ವಿಲನ್ ಲುಕ್'ನಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧವಿದ್ದರೂ, ನಿಯಮಗಳನ್ನು ಗಾಳಿಗೆ ತೂರಿ ರಜತ್ ಅವರು
ನವದೆಹಲಿ: ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಬಂದು ಕಾಂಗ್ರೆಸ್ನವರು ಗಲಾಟೆ ಮಾಡಲು ಯೋಜನೆ ಹಾಕಿಕೊಂಡಿರುವ ಬಗ್ಗೆ ಸ್ಪೀಕರ್ ಓಂ ಬಿರ್ಲಾ ಅವರು ಸ್ಪೋಟಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಲೋಕಸಭೆ ಭಾಷಣವನ್ನು ಏಕೆ ತಪ್ಪಿಸಿಕೊಂಡರು ಎಂಬ ವಿಚಾರಕ್ಕೆ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯಿಸಿದ್ದಾರೆ. ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ಉತ್ತರಿಸಲು ನಿಗದಿಪಡಿಸಿದಾಗ ಈ ಗಲಾಟೆ ನಡೆಸಲು ತೀರ್ಮಾನಿಸಿರುವುದಾಗಿ ಬಿರ್ಲಾ ಹೇಳಿದರು.
ಉಡುಪಿ: ಒಂದು ಲಾಟರಿ ಟಿಕೆಟ್ನಿಂದ ಉಡುಪಿ ಜಿಲ್ಲೆಯ ಕಾಪು ತಾಲೂಕು ಕಟಪಾಡಿ ಮಟ್ಟು ಮೂಲದ ಶಾಂತನು ಶೆಟ್ಟಿಗಾರ್ ಅವರ ಜೀವನವೇ ಬದಲಾಗಿದೆ. 33 ವರ್ಷ ಯುವಕನಿಗೆ 20 ಮಿಲಿಯನ್ ದಿರಾಮ್ ಬಹುಮಾನ ಲಭಿಸಿದೆ. ಅಂದರೆ ಸುಮಾರು ₹49 ಕೋಟಿ ಬಹುಮಾನ ಜೇಬಿಗಿಸಿಕೊಂಡಿದ್ದಾರೆ. ದುಬೈನ ಪ್ರತಿಷ್ಠಿತ ಲಾಟರಿಯಾದ ಬಿಗ್ ಟಿಕೆಟ್ ನ ಲಕ್ಕಿ ಡ್ರಾದಲ್ಲಿ ಉಡುಪಿಯ ಶಾಂತನು ಅವರಿಗೆ ಭರ್ಜರಿ 49 ಕೋಟಿ ರೂ. ಬಹುಮಾನ ಸಿಕ್ಕಿದೆ. ಓಮನ್ನಲ್ಲಿ ಚಿಲ್ಲರೆ ವ್ಯಾಪಾರದ ಸೇಲ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಉಡುಪಿಯ ಕಾಪು ತಾಲೂಕು ಕಟಪಾಡಿ ಮಟ್ಟು ಮೂಲದ ಶಾಂತನು ಶೆಟ್ಟಿಗಾರ್ ಅವರಿಗೆ ಲಾಟರಿ ಹೊಡೆದಿದೆ.33 ವರ್ಷದ ಶಾಂತನು ಅವರು ಓಮನ್ನಲ್ಲಿ ರಿಟೇಲ್ ವಲಯದ ಉದ್ಯೋಗದಲ್ಲಿದ್ದು, ಇದೇ ಜನವರಿ 20ರಂದು ಬಿಗ್ ಟಿಕೆಟ್ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು.
ರಾಜ್ಯ ಸರ್ಕಾರ ಆಗಾಗ ಪೊಲೀಸ್ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶವನ್ನು ಹೊರಡಿಸುತ್ತಲೇ ಇರುತ್ತದೆ. ಇದೀಗ ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದಾರೆ.ಇನ್ನೂ ರವಿ ಡಿ ಚನ್ನಣ್ಣನವರ್ ಅವರು ರಾಜ್ಯದ ಅತ್ಯಂತ ಜನಪ್ರಿಯ ಮತ್ತು ದಕ್ಷ ಅಧಿಕಾರಿಗಳಲ್ಲಿ ಒಬ್ಬರಾಗಿದ್ದಾರೆ. ತಮ್ಮ ಕಟ್ಟುನಿಟ್ಟಿನ ಕೆಲಸದ ವೈಖರಿ ಹಾಗೂ ಸಮಾಜಮುಖಿ ಕಾರ್ಯಗಳಿಂದಾಗಿ ಅವರು ಯುವಜನತೆಗೆ ಸ್ಪೂರ್ತಿಯಾಗಿದ್ದಾರೆ.ಗದಗ ಜಿಲ್ಲೆಯ ರೋಣ ತಾಲ್ಲೂಕಿನ ನೀಲಗುಂದ ಗ್ರಾಮದವರಾಗಿದ್ದು, ಇವರು ಅತ್ಯಂತ ಬಡತನದ
ಬೆಂಗಳೂರು: ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅಕ್ರಮ ಅದಿರು ರಪ್ತು ಕೇಸಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿದ್ದಂತ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.ಶಾಸಕ ಸತೀಶ್ ಸೈಲ್ ಅವರಿಗೆ ಹೈಕೋರ್ಟ್ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ. ಲಿವರ್ ಕಸಿ ಮಾಡಿಸಬೇಕಿರುವುದರಿಂದ ಜಾಮಿನು ನೀಡಲಾಗುತ್ತಿದೆ ಎಂದು ಹೈಕೋರ್ಟ್ ತಿಳಿಸಿದೆ. ಅನಾರೋಗ್ಯದ ಕಾರಣ ನೀಡಿ ಶಾಸಕ ಸತೀಶ್ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ನ್ಯಾಯಪೀಠವು, ಲಿವರ್ ಸಮಸ್ಯೆಯಿರುವ ಕಾರಣ ಚಿಕಿತ್ಸೆಗೆ ಅಗತ್ಯತೆಯ ಕಾರಣ ನೀಡಿ, ವೈದ್ಯಕೀಯ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿದೆ.
ಮುಂಬೈ: ಕಳೆದ ವಾರ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ಅಪಘಾತಕ್ಕೀಡಾದ ದಿನದಂದು ತಾವು ಅವರೊಂದಿಗೆ ಪ್ರಯಾಣಿಸಬೇಕಿತ್ತು, ಆದರೆ ಅವರು ಮುಂಬೈಗೆ ತಡವಾಗಿ ತಲುಪಿದ್ದರಿಂದ ಅಲ್ಲಿಗೆ ಹೋಗಲು ಸಾಧ್ಯವಾಗಲಿಲ್ಲ ಎಂದು ಮಹಾರಾಷ್ಟ್ರದ ಮಾಜಿ ಸಚಿವ ಮಹಾದೇವ್ ಜಂಕರ್ ಹೇಳಿದ್ದಾರೆ.ಜನವರಿ 28 ರಂದು ಬೆಳಿಗ್ಗೆ 8.45 ರ ಸುಮಾರಿಗೆ ಪುಣೆ ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಟೇಬಲ್ಟಾಪ್ ರನ್ವೇಯ ಅಂಚಿನಿಂದ ಕೇವಲ 200 ಮೀಟರ್ ದೂರದಲ್ಲಿ ಮುಂಬೈನಿಂದ ಬಂದ ಚಾರ್ಟರ್ಡ್ ವಿಮಾನ ಅಪಘಾತಕ್ಕೀಡಾಗಿ ಅಜಿತ್ ಪವಾರ್ ಮತ್ತು ಅದರಲ್ಲಿದ್ದ ಇತರ ನಾಲ್ವರು ಸಾವನ್ನಪ್ಪಿದರು.
ಮುಂಬೈ: ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಗುರುವಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ, ತಂಡದ ತವರು ಟಿ20 ವಿಶ್ವಕಪ್ ಅಭಿಯಾನಕ್ಕೂ ಮುನ್ನ ಗಣೇಶನ ಆಶೀರ್ವಾದ ಪಡೆದರು. ಅವರೊಂದಿಗೆ ಬ್ಯಾಟಿಂಗ್ ಕೋಚ್ ಸೀತಾಂಶು ಹರ್ಗೋವಿಂದ್ಭಾಯ್ ಕೊಟಕ್ ಕೂಡ ಇದ್ದರು.ವಾಂಖೆಡೆ ಕ್ರೀಡಾಂಗಣದಲ್ಲಿ ಶನಿವಾರ ಅಮೆರಿಕ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ಪಂದ್ಯಾವನ್ನು ಆಡಲಿದೆ. ಇದಕ್ಕೂ ಮೊದಲು, ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯ ಮೂರನೇ ಟಿ20 ಪಂದ್ಯಕ್ಕೂ
ನವದೆಹಲಿ: ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಗುರುವಾರ ನವದೆಹಲಿಯ 10 ರಾಜಾಜಿ ಮಾರ್ಗದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್ನ ಪಶ್ಚಿಮ ಬಂಗಾಳ ನಾಯಕತ್ವದೊಂದಿಗೆ ನಿರ್ಣಾಯಕ ಸಭೆ ನಡೆಸಿದರು. ಈ ವರ್ಷದ ಕೊನೆಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿರುವ ಕಾರಣ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಬಿಸಿಯಾಗಿದೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಭಾರತೀಯ ಜನತಾ ಪಕ್ಷದಿಂದ ಪ್ರಮುಖ ಸವಾಲನ್ನು ಎದುರಿಸುತ್ತಿದೆ.ಇದರ ನಡುವೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ, ವಿರೋಧ ಪಕ್ಷದ ಇಂಡಿಯಾ
ಮುಂಬೈ: ಚಲನಚಿತ್ರ ನಿರ್ಮಾಪಕ ರೋಹಿತ್ ಶೆಟ್ಟಿ ಅವರ ನಿವಾಸದಲ್ಲಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮುಂಬೈ ಅಪರಾಧ ವಿಭಾಗದ ಸುಲಿಗೆ ವಿರೋಧಿ ಘಟಕವು ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪರಾಧ ವಿಭಾಗದ ಪ್ರಕಾರ, ರೋಹಿತ್ ಶೆಟ್ಟಿ ಅವರ ಮನೆಯಲ್ಲಿ ನಡೆದ ಗುಂಡಿನ ದಾಳಿಗೆ ಬಳಸಲಾದ ಆಯುಧವನ್ನು ಈಗ ಬಂಧಿತ ಆರೋಪಿಯೇ ಪೂರೈಸಿದ್ದಾನೆ. ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ನಿವಾಸದಲ್ಲಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ
ಮುಂಬೈ: ಒಪ್ಪಿಗೆಯಿಲ್ಲದೇ ಡ್ರೆಸ್ಸಿಂಗ್ ರೂಂನಲ್ಲಿ ತನ್ನ ವಿಡಿಯೋ ಮಾಡಿದ ಅರ್ಷ್ ದೀಪ್ ಸಿಂಗ್ ಮೇಲೆ ಟೀಂ ಇಂಡಿಯಾ ಕ್ರಿಕೆಟಿಗ ತಿಲಕ್ ವರ್ಮಾ ಸಿಟ್ಟಾದ ವಿಡಿಯೋ ವೈರಲ್ ಆಗಿದೆ. ನಿನ್ನೆ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯವಿತ್ತು. ಈ ಪಂದ್ಯದ ನಂತರ ಅರ್ಷ್ ದೀಪ್ ಸಿಂಗ್ ಡ್ರೆಸ್ಸಿಂಗ್ ರೂಂನಲ್ಲಿ ಫನ್ ಆಗಿ ಮಾತನಾಡುತ್ತಾ ವಿಡಿಯೋ ಮಾಡುತ್ತಿದ್ದರು. ಮೊದಲು ಇಶಾನ್ ಕಿಶನ್ ಜೊತೆ ಮಾತನಾಡಿದ ಅರ್ಷ್ ದೀಪ್ ಬಳಿಕ ಊಟ ಮಾಡುತ್ತಿದ್ದ ತಿಲಕ್ ವರ್ಮಾ ಕಡೆಗೆ ಕ್ಯಾಮರಾ ಹಾಯಿಸಿದರು. ಮೊದಲು ತಿಲಕ್ ವರ್ಮ ವಿಡಿಯೋ ಕಡೆಗೆ ಗಮನ ಕೊಟ್ಟಿರಲಿಲ್ಲ. ಬಳಿಕ ಇಶಾನ್ ಕಿಶನ್ ಅವರನ್ನು ಕರೆದರು.
ಬೆಂಗಳೂರು: ಬಿಗ್ಬಾಸ್ ಸೀಸನ್ 12ನ್ನು ಯಶಸ್ವಿಯಾಗಿ ಮುಗಿಸಿದ ಕಿಚ್ಚ ಸುದೀಪ್ ಬಳಿಕ ತನ್ನ ನಾಯಕತ್ವದಲ್ಲಿ ಸಿಸಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ಕಪ್ ಎತ್ತಿಕೊಂಡಿತು. ಇತ್ತೀಚೆಗೆ ಸುದೀಪ್ ಚಿತ್ರರಂಗದಲ್ಲಿ 30 ವರ್ಷವನ್ನು ಪೂರೈಸಿದ್ದಾರೆ. 1997ರಿಂದ ಇಲ್ಲಿಯವರೆಗೆ ಕಿಚ್ಚ ಸುಮಾರು 76 ಚಿತ್ರಗಳಲ್ಲಿ ಸುದೀಪ್ ನಟಿಸಿದ್ದಾರೆ. ಸೋಲು – ಗೆಲುವು ಎರಡರ ಅನುಭವ ಸುದೀಪ್ ಅವರಿಗೆ ಈ 30 ವರ್ಷದಲ್ಲಾಗಿದೆ. ಇನ್ನೂ ಸುದೀಪ್ ಅವರ ಸಿನಿ ಪಯಣಕ್ಕೆ ಸಿನಿಮಾ ರಂಗದವರು ಸೇರಿದಂತೆ ಗಣ್ಯರು ಶುಭಕೋರಿದ್ದರು. ಕಿಚ್ಚ ಸುದೀಪ್ ಅವರಿಗೆ ಸಿಎಂ ಸಿದ್ದರಾಮಯ್ಯ ಕೂಡ ಶುಭ ಹಾರೈಸಿದ್ದರು. ಸುದೀಪ್ ಇದಕ್ಕಾಗಿ ಅವರಿಗೆ
ಬೆಂಗಳೂರು: ನಿನ್ನೆ ವಿಧಾನಸಭೆಯಲ್ಲಿ ಶಾಸಕ ಶರಣು ಸಲಗರ ಅವರ ಪತ್ನಿ ವಿಚಾರವಾಗಿ ವಿವಾದಾತ್ಮಕವಾಗಿ ಮಾತನಾಡಿದ್ದ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಕೊನೆಗೂ ಈಗ ತಮ್ಮ ಮಾತಿಗೆ ವಿಷಾಧ ವ್ಯಕ್ತಪಡಿಸಿದ್ದಾರೆ. ನಿನ್ನೆ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ತಮ್ಮನ್ನು ಕೊಬ್ಬರಿ ಕಳ್ಳ ಎಂದಿದ್ದಕ್ಕೆ ಸಿಟ್ಟಿಗೆದ್ದ ಶಿವಲಿಂಗೇಗೌಡರು ವಿಪಕ್ಷ ಸದಸ್ಯರಿಗೆ ಬಾಯಿಗೆ ಬಂದಂತೆ ಬೈದಿದ್ದಾರೆ. ಈ ವೇಳೆ ಶಾಸಕ ಶರಣು ಸಲಗರಿಗೆ ನಿಮ್ಮ ಪತ್ನಿಯನ್ನು ಬಿಟ್ಟುಕೊಂಡು ದುಡ್ಡು ಮಾಡ್ತಿದ್ದೀಯಾ ಎಂದು ಹೇಳಿದ್ದರು.
ವಿಪರೀತ ಸೆಖೆಯಾಗುತ್ತಿದೆ ಎಂದರೆ ಹವಾಮಾನದಿಂದಾಗಿ ಎಂದು ನಿರ್ಲ್ಯಕ್ಷ ಮಾಡಬೇಡಿ. ಹವಾಮಾನದ ಹೊರತಾಗಿಯೂ ಬೆವರುವುದಕ್ಕೆ ಹಲವು ಕಾರಣಗಳಿವೆ. ಯಾವೆಲ್ಲಾ ಕಾರಣಗಳಿಗೆ ಮತ್ತು ಸಂದರ್ಭಗಳಲ್ಲಿ ವಿಪರೀತ ಬೆವರುತ್ತೇವೆ ನೋಡಿ. ಭಯವಾದಾಗ: ಮಾನಸಿಕವಾಗಿ ಯಾವುದೋ ಭಯ ಕಾಡುತ್ತಿರುವಾಗ, ಒತ್ತಡದಲ್ಲಿದ್ದಾಗ, ಆತಂಕದ ಖಾಯಿಲೆಯಿದ್ದಾಗ ವಿಪರೀತ ಬೆವರು ಕಂಡುಬರುವುದು ಸಹಜ. ಆಹಾರದ ಕಾರಣಗಳು: ವಿಪರೀತ ಬಿಸಿ, ಖಾರ, ಆಲ್ಕೋಹಾಲ್ ಅಂಶವಿರುವ ಆಹಾರ ಸೇವನೆ ಮಾಡಿದಾಗ ಮೈ ಬೆವರುವುದು ಕಂಡುಬರುತ್ತದೆ. ಹಾರ್ಮೋನ್ ಸಮಸ್ಯೆ: ಮಹಿಳೆಯರಲ್ಲಿ ಮುಟ್ಟು ನಿಲ್ಲುವ ಸೂಚನೆಯಿದ್ದಾಗ, ಗರ್ಭಾವಸ್ಥೆಯಲ್ಲಿ, ಥೈರಾಯ್ಡ್ ಸಮಸ್ಯೆಯಿದ್ದಾಗ ಅಸಹಜವಾಗಿ ಬೆವರುವುದು.
ಬೆಂಗಳೂರು: ಜೆಡಿಎಸ್ ಮುಖಂಡ, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೆ.ಆರ್. ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ಶಾಕ್ ನೀಡಿದೆ. ಪ್ರಕರಣ ರದ್ದು ಕೋರಿದ್ದ ಎಚ್.ಡಿ.ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ, ಎಚ್.ಡಿ.ರೇವಣ್ಣ ವಿರುದ್ಧ ದೋಷಾರೋಪ ಹೊರಿಸದಂತೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವು ಮಾಡಿದೆ.ರೇವಣ್ಣ ಪರ ವಕೀಲರು ವಾದಮಂಡನೆಗೆ ಕಾಲಾವಕಾಶ ಕೋರಿದ್ದರು. ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿದ್ದಾರೆಂಬ ಕಾರಣ ನೀಡಿ ಮನವಿ ಮಾಡಿದ್ದರು. ಎಚ್.ಡಿ.ರೇವಣ್ಣ ಪರ ವಕೀಲರ ಮನವಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ ದೋಷಾರೋಪ ಹೊರಿಸದಂತೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ತೆರವು ಮಾಡಿದೆ.
ಬೆಂಗಳೂರು: ದಾಖಲೆಯ 17ನೇ ಬಾರಿ ರಾಜ್ಯದ ಬಜೆಟ್ ಮಂಡಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಯಾರಿ ಆರಂಭಿಸಿದ್ದಾರೆ. ಮುಂದಿನ ತಿಂಗಳು ಬಕೆಟ್ ಮಂಡಿಸುವ ಸಾಧ್ಯತೆಯಿದೆ.ಹಣಕಾಸು ಇಲಾಖೆಯ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದ್ದಾರೆ. ವಿಧಾನ ಮಂಡಲ ಅಧಿವೇಶನ ಮುಕ್ತಾಯವಾದ ಬೆನ್ನಲ್ಲೇ ಈ ಕಾರ್ಯಕ್ಕೆ ಕೈಹಾಕಿದ್ದಾರೆ. ಮುಂದಿನ ಸಾಲಿನ ಆಯವ್ಯಯದ ಪೂರ್ವಭಾವಿ ಸಭೆಯ ಭಾಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅರಣ್ಯ ಮತ್ತು ಪರಿಸರ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ವಿಧಾನಮಂಡಲ ಜಂಟಿ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ.
ಇಸ್ಲಾಮಾಬಾದ್: ಭಾರತದ ಜೊತೆ ನಾವು ಟಿ20 ವಿಶ್ವಕಪ್ ಆಡಲ್ಲ ಎಂದು ಘೋಷಿಸಿರುವ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಕ್ರೀಡೆ ಜೊತೆ ರಾಜಕೀಯ ಬೆರೆಸಬಾರದು ಎಂದು ಬಿಟ್ಟಿ ಉಪದೇಶವನ್ನೂ ನೀಡಿದ್ದಾರೆ. ಟಿ20 ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯ ಕೊಲೊಂಬೋದಲ್ಲಿ ನಿಗದಿಯಾಗಿದೆ. ಆದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಈಗಾಗಲೇ ನಾವು ಆಡಲ್ಲ ಎಂದು ಘೋಷಿಸಿದ್ದಾರೆ. ಇದೀಗ ಪಾಕಿಸ್ತಾನ ಪ್ರಧಾನಿಯೇ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದಾರೆ. ‘ಟಿ20 ವಿಶ್ವಕಪ್ ನಲ್ಲಿ ನಾವು ಭಾರತದ ವಿರುದ್ಧ ಪಂದ್ಯವಾಡಲ್ಲ. ಕ್ರೀಡೆಯಲ್ಲಿ ರಾಜಕೀಯ ಇರಬಾರದು.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಆದರೆ ಇದೀಗ ಅಡಿಕೆ ದರ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಏರಿಕೆ ಆರಂಭವಾಗಿತ್ತು. ಸತತವಾಗಿ ನಾಲ್ಕು ದಿನಗಳ ಕಾಲ ಏರಿಕೆಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿತ್ತು. ಆದರೆ ಇಂದು ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ಇಂದು ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 535 ರೂ. ಗಳಾಗಿತ್ತು. ಇಂದೂ ಅಷ್ಟೇ ಇದೆ. ಡಬಲ್ ಚೋಲ್ ಬೆಲೆಯೂ 535 ರೂ.ಗಳಷ್ಟಾಗಿದೆ.
ಬೆಂಗಳೂರು: ಕೇಂದ್ರ ಬಜೆಟ್ ಗೆ ಮುನ್ನ ಚಿನ್ನದ ದರ ಭರ್ಜರಿ ಇಳಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಏರಿಕೆಯಾದರೆ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ದಾಖಲೆಯ ಏರಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಇಳಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,56,850.00 ರೂ.ಗಳಿತ್ತು. ಇಂದೂ 1,63,535.00 ರೂ.ಗಳಷ್ಟಿದೆ.
ಬೆಂಗಳೂರು: ಡಾ ರಾಜ್ ಕುಮಾರ್ ಅವರ ಎದುರು ಸಿಗರೇಟು ಸೇದುತ್ತಿದ್ದಾಗ ನಡೆದ ಹಳೆಯ ಘಟನೆಯೊಂದನ್ನು ಹಿರಿಯ ನಟ ಸಿಹಿಕಹಿ ಚಂದ್ರು ರೇಡಿಯೋ ಸಿಟಿ ಸಂದರ್ಶನದಲ್ಲಿ ಹಿಂದೊಮ್ಮೆ ಹೀಗೆ ಹೇಳಿದ್ದರು. ಅದನ್ನು ಅವರ ಮಾತಲ್ಲೇ ಓದಿ. ಅಣ್ಣಾವ್ರನ್ನು ನಾನು ಯಾವತ್ತೂ ನೋಡಿರಲಿಲ್ಲ. ಫೋಟೋದಲ್ಲಿ ಮಾತ್ರ ನೋಡಿದ್ದೆ ಅಷ್ಟೇ. ಆಗ ಶಿವ ಮೆಚ್ಚಿದ ಕಣ್ಣಪ್ಪ ಶೂಟಿಂಗ್ ನಡೆಯುತ್ತಿತ್ತು. ಅವರು ಶಿವನ ಗೆಟಪ್ ನಲ್ಲಿದ್ದರು. ನಾನು ಸಿಗರೇಟು ಸೇದುತ್ತಿದ್ದೆ. ಅವರು ಸೀದಾ ನನ್ನ ಎದುರಿಗೆ ಬಂದು ನಮಸ್ಕಾರ ಮಾಡಿದ್ರು. ನಾನು ಯಾರೋ ಆರ್ಟಿಸ್ಟ್ ಶಿವನ ಗೆಟಪ್ ನಲ್ಲಿದ್ದಾರೆ ನಮಸ್ಕಾರ ಮಾಡಿದ್ದಾರೆ ಎಂದು ತಲೆ ಅಲ್ಲಾಡಿಸಿದೆ. ನನಗೆ ಯಾರು ಅಂತ ಗೊತ್ತಾಗಲಿಲ್ಲ.
ಮುಂಬೈ: ಟಿ20 ವಿಶ್ವಕಪ್ ನಲ್ಲಿ ಭಾರತದ ವಿರುದ್ಧ ಆಡಲ್ಲ ಎಂದ ಪಾಕಿಸ್ತಾನಕ್ಕೆ ಐಸಿಸಿ ದೊಡ್ಡ ಶಾಕ್ ನೀಡಿದೆ. ಇನ್ನು ಬಾಯಿ ಬಡಿದುಕೊಳ್ಳುವುದೊಂದೇ ದಾರಿ ಎಂಬಂತಾಗಿದೆ. ಟಿ20 ವಿಶ್ವಕಪ್ ನಲ್ಲಿ ಬಾಂಗ್ಲಾದೇಶ ಭಾರತದಲ್ಲಿ ಆಡಲ್ಲ ಎಂದಿದ್ದಕ್ಕೆ ಐಸಿಸಿ ಆ ತಂಡವನ್ನೇ ಟೂರ್ನಿಯಿಂದ ಹೊರ ಹಾಕಿತ್ತು. ಇದನ್ನು ಪ್ರತಿಭಟಿಸಿ ಪಾಕಿಸ್ತಾನ ನಾವು ಭಾರತದ ವಿರುದ್ಧ ಪಂದ್ಯವನ್ನು ಆಡಲ್ಲ ಎಂದು ಬಹಿಷ್ಕಾರದ ನಿರ್ಧಾರ ಘೋಷಿಸಿದೆ. ಪಾಕಿಸ್ತಾನಕ್ಕಾಗಿ ಈ ಪಂದ್ಯವನ್ನು ಶ್ರೀಲಂಕಾದ ಕೊಲೊಂಬೋದಲ್ಲಿ ಆಯೋಜಿಸಲಾಗಿತ್ತು. ಆದರೆ ಪಾಕ್ ಈ ಪಂದ್ಯವನ್ನು ಆಡದೇ ಇದ್ದಲ್ಲಿ ಆಯೋಜಕರು, ನೇರಪ್ರಸಾರಕರಿಗೆ ಭಾರೀ ನಷ್ಟವಾಗಲಿದೆ.
ಮುಂಬೈ: ಅಭ್ಯಾಸ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ರನ್ನು ಹೊರಗಿಟ್ಟು ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ದೊಡ್ಡ ಮೆಸೇಜ್ ಕೊಟ್ಟಿದೆ. ಟಿ20 ವಿಶ್ವಕಪ್ ಗೆ ಪೂರ್ವಭಾವಿಯಾಗಿ ನಿನ್ನೆ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಮುಂಬೈನಲ್ಲಿ ಅಭ್ಯಾಸ ಪಂದ್ಯವಾಡಿದೆ. ಈ ಪಂದ್ಯವನ್ನು ಟೀಂ ಇಂಡಿಯಾ 30 ರನ್ ಗಳಿಂದ ಗೆದ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 240 ರನ್ ಗಳಿಸಿದ್ದರೆ ಆಫ್ರಿಕಾ 210 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಪಂದ್ಯದಿಂದ ಕಳಪೆ ಫಾರ್ಮ್ ನಲ್ಲಿರುವ ಸಂಜು ಸ್ಯಾಮ್ಸನ್ ರನ್ನು ಹೊರಗಿಡುವ ಮೂಲಕ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ದೊಡ್ಡ ಸಂದೇಶ ರವಾನಿಸಿದೆ.
ನವದೆಹಲಿ: ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾತನಾಡಿದ ಬಳಿಕವಷ್ಟೇ ಪ್ರಧಾನಿ ಮೋದಿ ಮಾತನಾಡಿದರೆ ಸಾಕು ಎಂದು ಕಾಂಗ್ರೆಸ್ ಪಟ್ಟು ಹಿಡಿದಿದೆ. ನಿನ್ನೆ ಪ್ರಧಾನಿ ಮೋದಿ ಮಾತನಾಡಬೇಕಿತ್ತು. ಆದರೆ ಪ್ರಧಾನಿ ಮೋದಿ ಮಾತನಾಡಲು ಕೆಲವೇ ಸೆಕೆಂಡುಗಳಿದ್ದಾಗ ವಿಪಕ್ಷಗಳಿಂದ ತೀವ್ರ ಗದ್ದಲವೇರ್ಪಟ್ಟ ಹಿನ್ನಲೆಯಲ್ಲಿ ಕಲಾಪವನ್ನು ಮುಂದೂಡಲಾಯಿತು. ನಿನ್ನೆಯ ಕಲಾಪದಲ್ಲಿ ಪ್ರಧಾನಿ ಮೋದಿಗೆ ಮಾತನಾಡಲು ಸಾಧ್ಯವಾಗಲೇ ಇಲ್ಲ. ಸಂಸತ್ ನ ಬಾವಿಗಿಳಿದು ವಿಪಕ್ಷ ಸಂಸದರು ಜೋರಾಗಿ ಘೋಷಣೆಗಳನ್ನು ಕೂಗಿ, 8 ಸಂಸದರ ಅಮಾನತಿನ ವಿಚಾರವಾಗಿ ಪ್ರತಿಭಟನೆ ನಡೆಸಿದರು.
ಮುಂಬೈ: ಲಿಫ್ಟ್ ನಲ್ಲಿ ಹೈಡ್ರೋಜನ್ ಬಲೂನ್ ಗೊಂಚಲು ಹಿಡಿದುಕೊಂಡು ವ್ಯಕ್ತಿಯೊಬ್ಬ ಬಂದಿದ್ದು ಇದ್ದಕ್ಕಿದ್ದಂತೆ ಅದು ಸಿಡಿದ ಭೀಕರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮುಂಬೈನ ಜನವಸತಿ ಸಮುಚ್ಚಯವೊಂದರ ಲಿಫ್ಟ್ ನಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಹೈಡ್ರೋಜನ್ ಬಲೂನ್ ವ್ಯಾಪಾರಿಯೊಬ್ಬ ದೊಡ್ಡ ಗೊಂಚಲು ಬಲೂನ್ ಹಿಡಿದುಕೊಂಡು ಲಿಫ್ಟ್ ನೊಳಗೆ ಬರುತ್ತಾನೆ. ಈ ವೇಳೆ ಲಿಫ್ಟ್ ನಲ್ಲಿ ಓರ್ವ ಯುವತಿ ಸೇರಿದಂತೆ ಬೇರೆ ಇಬ್ಬರೂ ಇರುತ್ತಾರೆ. ಬಲೂನ್ ಹಿಡಿದುಕೊಂಡು ಲಿಫ್ಟ್ ನೊಳಗೆ ವ್ಯಾಪಾರಿ ಬಂದ ಸೆಕೆಂಡುಗಳಲ್ಲೇ ಅದು ಇದ್ದಕ್ಕಿದ್ದಂತೆ ಸ್ಪೋಟವಾಗಿ ಬೆಂಕಿ ಕಾಣಿಸಿಕೊಳ್ಳುತ್ತದೆ. ತಕ್ಷಣವೇ ಬಲೂನ್ ವ್ಯಾಪಾರಿ, ಯುವತಿ ಸೇರಿದಂತೆ ಲಿಫ್ಟ್ ನಲ್ಲಿದ್ದವರೆಲ್ಲರೂ ಪ್ರಾಣ ಭಯದಿಂದ ಓಡುತ್ತಾರೆ.
ಬೆಂಗಳೂರು: ನಿನ್ನೆ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇ ಗೌಡ ಅಸಂಸದೀಯ ಪದ ಬಳಸಿ ಬಿಜೆಪಿ ಶಾಸಕರಿಗೆ ಬೈತಿದ್ದರೆ ಇತ್ತ ಸ್ಪೀಕರ್ ಯುಟಿ ಖಾದರ್ ತಮ್ಮ ಸ್ಥಾನದಲ್ಲಿ ಕೂತು ತಮಾಷೆ ಕೇಳಿದವರಂತೆ ನಗುತ್ತಿದ್ದರು. ಇದಕ್ಕೆ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಸ್ಪೀಕರ್ ಆದವರು ಸದನವನ್ನು ಮುನ್ನಡೆಸುವ ನಾಯಕ. ಅವರು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಶಾಸಕರು ಪರಸ್ಪರ ಗಲಾಟೆ ಮಾಡುತ್ತಿದ್ದಾರೆ ಎಂದರೆ ಅವರು ಸದನವನ್ನು ನಿಯಂತ್ರಿಸಬೇಕಾಗುತ್ತದೆ. ಆದರೆ ನಿನ್ನೆ ಬಿಜೆಪಿ ಶಾಸಕರು ಕೊಬ್ಬರಿ ಕಳ್ಳ ಎಂದಿದ್ದಕ್ಕೆ ಸಿಟ್ಟಿಗೆದ್ದ ಶಿವಲಿಂಗೇಗೌಡರು ‘ಥೂ ನಿಮ್ಮ ಜನ್ಮಕ್ಕೆ ಬೆಂಕಿ ಹಾಕ...’ ಎಂದಿದ್ದಲ್ಲದೆ ಬಿಜೆಪಿ ಶಾಸಕರೊಬ್ಬರ ಪತ್ನಿಯ ವಿಚಾರವನ್ನೂ ಎಳೆದು ತಂದು ಬಾಯಿಗೆ ಬಂದಂತೆ ಬೈದಿದ್ದಾರೆ.
ಬೆಂಗಳೂರು: ಬೆಳ್ಳಂ ಬೆಳಿಗ್ಗೆಯೇ ಬೆಂಗಳೂರಿಗರಿಗೆ ಮೆಟ್ರೋ ಶಾಕ್ ಸಿಕ್ಕಿದೆ. ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ 5 ಏರಿಕೆಯಾಗಲಿದೆ. ಒಂದು ವರ್ಷದ ಹಿಂದಷ್ಟೇ ಮೆಟ್ರೋ ಪ್ರಯಾಣ ದರ 71.5 ರಷ್ಟು ಏರಿಕೆಯಾಗಿತ್ತು. ಆಗ ಪ್ರಯಾಣಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಮತ್ತೆ ಒಂದೇ ವರ್ಷ ಕಳೆಯುವಷ್ಟರಲ್ಲಿ ಮತ್ತೆ ಮೆಟ್ರೋ ಪ್ರಯಾಣ ದರ ಏರಿಕೆಯಾಗುತ್ತಿದೆ. ಈ ಬಾರಿ ಶೇಕಡಾ 5 ರಷ್ಟು ಏರಿಕೆಯಾಗಲಿದೆ. ಕಳೆದ ವರ್ಷವೇ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಸಮಿತಿ ಪ್ರತೀ ವರ್ಷ 5 ಶೇಕಡಾದಷ್ಟು ಹೆಚ್ಚಳ ಮಾಡಲು ಅನುಮತಿ ನೀಡಿತ್ತು. ಅದರಂತೆ ಈಗ ಒಂದು ವರ್ಷ ಕಳೆಯುವಷ್ಟರಲ್ಲಿ 5 ಶೇಕಡಾ ಹೆಚ್ಚಳವಾಗುತ್ತಿದೆ.
ವಡೋದರಾ: ಡಬ್ಲ್ಯುಪಿಎಲ್ 2026 ಬಹುನಿರೀಕ್ಷಿತ ಫೈನಲ್ ಪಂದ್ಯ ಇಂದು ನಡೆಯಲಿದೆ. ಆರ್ ಸಿಬಿ ಈಗಾಗಲೇ ಫೈನಲ್ ಗೇರಿದ್ದು 2024 ರ ಅದೇ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅಂತಿಮ ಹೋರಾಟ ನಡೆಸಲಿದೆ. ಇದುವರೆಗೆ ಮೂರು ಡಬ್ಲ್ಯುಪಿಎಲ್ ಆವೃತ್ತಿ ನಡೆದಿದೆ. ಈ ಪೈಕಿ ಎರಡು ಬಾರಿ ಮುಂಬೈ ಒಮ್ಮೆ ಆರ್ ಸಿಬಿ ಕಪ್ ಗೆದ್ದಿದೆ. ಆರ್ ಸಿಬಿ ಪುರುಷರ ತಂಡವೂ ಕಪ್ ಗೆದ್ದಿರಲಿಲ್ಲ. ಅದಕ್ಕೆ ಮೊದಲೇ 2024 ರಲ್ಲಿ ಮೊದಲ ಬಾರಿಗೆ ಡಬ್ಲ್ಯುಪಿಎಲ್ ಕಪ್ ಗೆದ್ದು ಮಹಿಳೆಯರು ಇತಿಹಾಸ ಬರೆದಿದ್ದರು.
ಬೆಂಗಳೂರು: ರಾಜ್ಯದಲ್ಲಿ ಇಂದೂ ಒಣ ಹವೆ ಮುಂದುವರಿಯಲಿದೆ. ಎಲ್ಲೂ ಮಳೆಯ ಸಾಧ್ಯತೆಯಿಲ್ಲ. ಉಳಿದಂತೆ ಇಂದಿನ ಹವಾಮಾನ ಹೇಗಿರಲಿದೆ ಇಲ್ಲಿ ಸಂಪೂರ್ಣ ವಿವರ. ಕಳೆದ ಎರಡು-ಮೂರು ದಿನಗಳಿಂದ ರಾಜ್ಯದಲ್ಲಿ ಸರಾಸರಿ ಕನಿಷ್ಠ ತಾಪಮಾನ 16 ಡಿಗ್ರಿಗೆ ಇಳಿಕೆಯಾಗಿದ್ದು ರಾತ್ರಿ ವೇಳೆ ಚಳಿಯ ವಾತಾವರಣ ಕಂಡುಬರುತ್ತಿದೆ. ಇದರ ಜೊತೆಗೆ ದಟ್ಟ ಮಂಜೂ ಇದೆ. ಆದರೆ ಹಗಲಿಡೀ ವಿಪರೀತ ಬಿಸಿಲಿನ ವಾತಾವರಣವಿದೆ. ಇಂದೂ ರಾಜ್ಯದ ಕನಿಷ್ಠ ತಾಪಮಾನ 16 ಡಿಗ್ರಿಯಷ್ಟಿರಲಿದ್ದು ಗರಿಷ್ಠ ತಾಪಮಾನ 28 ಡಿಗ್ರಿಯಷ್ಟು ಕಂಡುಬರಲಿದೆ. ಇಂದೂ ರಾತ್ರಿ ಚಳಿಯಿದ್ದು ಹಗಲು ಬಿಸಿಲಿನ ವಾತಾವರಣವಿರಲಿದೆ. ಬೆಂಗಳೂರಿನಲ್ಲೂ ಇದೇ ವಾತಾವರಣವಿರಲಿದೆ.
ಭಯ, ಶತ್ರುಗಳಿಂದ ತೊಂದರೆ, ಮಾನಸಿಕವಾಗಿ ಸಮಸ್ಯೆಗಳು, ಕೆಲಸದಲ್ಲಿ ಅಡೆತಡೆಗಳಾಗುತ್ತಿದ್ದರೆ ನರಸಿಂಹ ಕವಚ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.ನೃಸಿಂಹಕವಚಂ ವಕ್ಷ್ಯೇ ಪ್ರಹ್ಲಾದೇನೋದಿತಂ ಪುರಾ ।ಸರ್ವರಕ್ಷಾಕರಂ ಪುಣ್ಯಂ ಸರ್ವೋಪದ್ರವನಾಶನಮ್ ॥ 1 ॥ ಸರ್ವಸಂಪತ್ಕರಂ ಚೈವ ಸ್ವರ್ಗಮೋಕ್ಷಪ್ರದಾಯಕಮ್ ।ಧ್ಯಾತ್ವಾ ನೃಸಿಂಹಂ ದೇವೇಶಂ ಹೇಮಸಿಂಹಾಸನಸ್ಥಿತಮ್ ॥ 2 ॥ ವಿವೃತಾಸ್ಯಂ ತ್ರಿನಯನಂ ಶರದಿಂದುಸಮಪ್ರಭಮ್ ।ಲಕ್ಷ್ಮ್ಯಾಲಿಂಗಿತವಾಮಾಂಗಂ ವಿಭೂತಿಭಿರುಪಾಶ್ರಿತಮ್ ॥ 3 ॥ ಚತುರ್ಭುಜಂ ಕೋಮಲಾಂಗಂ ಸ್ವರ್ಣಕುಂಡಲಶೋಭಿತಮ್ ।ಸರೋಜಶೋಭಿತೋರಸ್ಕಂ ರತ್ನಕೇಯೂರಮುದ್ರಿತಮ್ ॥ 4 ॥ [ರತ್ನಕೇಯೂರಶೋಭಿತಂ] ತಪ್ತಕಾಂಚನಸಂಕಾಶಂ ಪೀತನಿರ್ಮಲವಾಸನಮ್ ।ಇಂದ್ರಾದಿಸುರಮೌಳಿಸ್ಥಸ್ಫುರನ್ಮಾಣಿಕ್ಯದೀಪ್ತಿಭಿಃ ॥ 5 ॥
ಇಂಫಾಲ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿದ್ದಾರೆ, ಇದರಿಂದಾಗಿ ಯುಮ್ನಾಮ್ ಖೇಮ್ಚಂದ್ ಸಿಂಗ್ ನೇತೃತ್ವದ ಬಿಜೆಪಿ-ಎನ್ಡಿಎ ಸರ್ಕಾರ ರಾಜ್ಯದಲ್ಲಿ ಅಧಿಕಾರ ವಹಿಸಿಕೊಳ್ಳಲು ದಾರಿ ಸುಗಮವಾಗಿದೆ ಎಂದು ಅಧಿಕಾರಿಗಳು ಬುಧವಾರ ದೃಢಪಡಿಸಿದ್ದಾರೆ. ದೀರ್ಘಕಾಲದ ಜನಾಂಗೀಯ ಅಶಾಂತಿಯ ನಡುವೆ ಆಗಿನ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಂತರ ನೇರ ಕೇಂದ್ರ ಆಡಳಿತ ಹೇರಿದ ಸುಮಾರು ಒಂದು ವರ್ಷದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.ಫೆಬ್ರವರಿ 13, 2025 ರಂದು ಹೊರಡಿಸಲಾದ 356 ನೇ ವಿಧಿಯ ಅಡಿಯಲ್ಲಿ ಘೋಷಣೆಯನ್ನು ಫೆಬ್ರವರಿ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ವಿಬಿ, ಜಿ ರಾಮ್ ಜಿ ಹೆಸರನ್ನು ಬಳಸಿಕೊಂಡು ತನ್ನ ರಾಜಕೀಯ ಲಾಭಕ್ಕಾಗಿ ವಿಶೇಷ ಅಧಿವೇಶನವನ್ನು ಕರೆದು, ಅಲ್ಲಿ ಯಾವುದೇ ಗಂಭೀರ ಚರ್ಚೆ ನಡೆಸದೆ ಕೇವಲ ದಿನಗಳನ್ನು ದೂಡಿ ಕಾಲಹರಣ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.ಈ ಸಂಬಂಧ ಬಿಜೆಪಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿ ಆಕ್ರೋಶ ಹೊರಹಾಕಿದೆ. ಪೋಸ್ಟ್ನಲ್ಲಿ ಹೀಗಿದೆ: ರಾಜ್ಯದ ಕಾಂಗ್ರೆಸ್ ಸರ್ಕಾರವು ವಿಬಿ–ಜಿ ರಾಮ್ ಜಿ ಹೆಸರನ್ನು ಬಳಸಿಕೊಂಡು ತನ್ನ ರಾಜಕೀಯ ಲಾಭಕ್ಕಾಗಿ ವಿಶೇಷ ಅಧಿವೇಶನವನ್ನು ಕರೆದು, ಅಲ್ಲಿ ಯಾವುದೇ ಗಂಭೀರ ಚರ್ಚೆ
ತಿರುಪತಿ: ಕಲೆಕ್ಟರೇಟ್ನಲ್ಲಿ ಪ್ರತಿಭಟನೆ ನಡೆಸಲು ತೆರಳುತ್ತಿದ್ದಾಗ ಭಾರತೀಯ ವಿದ್ಯಾರ್ಥಿ ಒಕ್ಕೂಟದ (ಎಸ್ಎಫ್ಐ) ವಿದ್ಯಾರ್ಥಿ ನಾಯಕರ ಮೇಲೆ ಚಲನಚಿತ್ರ ನಟ ಮೋಹನ್ ಬಾಬು ಅವರ ಅನುಯಾಯಿಗಳು ಹಲ್ಲೆ ನಡೆಸಿ ಅಪಹರಿಸಿದ್ದಾರೆ ಎಂದು ಮಂಗಳವಾರ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಮುಖಂಡರು ತಿಳಿಸಿದ್ದಾರೆ.ಮೋಹನ್ ಬಾಬು ನೇತೃತ್ವದ ವಿಶ್ವವಿದ್ಯಾಲಯದಲ್ಲಿ ನಡೆದ ಅಕ್ರಮಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಮೋಹನ್ ಬಾಬು ನಡೆಸುತ್ತಿರುವ ವಿಶ್ವವಿದ್ಯಾಲಯದಲ್ಲಿ ನಡೆದ ಅಕ್ರಮಗಳನ್ನು ಪ್ರತಿಭಟಿಸಲು
ಉಡುಪಿ: ಈಚೆಗೆ ದಕ್ಷಿಣ ಕನ್ನಡ (ದ.ಕ.) ಮತ್ತು ಉಡುಪಿ ಜಿಲ್ಲೆಗಳ ಮೂಲಕ ಹಾದುಹೋಗುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಇನ್ನೂ ಕಳೆದ ತಿಂಗಳುಗಳಲ್ಲಿ, ಹೆದ್ದಾರಿಗಳು ಮತ್ತು ಇತರ ರಸ್ತೆಗಳಲ್ಲಿ ಸಂಭವಿಸುವ ಅಪಘಾತಗಳಲ್ಲಿ ಅಮೂಲ್ಯ ಜೀವಗಳು ಕಳೆದುಕೊಂಡಿದೆ. ಇನ್ನೂ ಕಳೆದ ಡಿಸೆಂಬರ್ನಲ್ಲಿ ಕೊನೆಗೊಂಡ ಒಂದು ವರ್ಷದ ಅವಧಿಯಲ್ಲಿ, ಎರಡೂ ಜಿಲ್ಲೆಗಳಲ್ಲಿ ಒಟ್ಟು 4,026 ಅಪಘಾತಗಳು ವರದಿಯಾಗಿವೆ, 1,010 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಸಿಕ್ಕಿರುವ ಮಾಹಿತಿ ಪ್ರಕಾರ 2021 ರಲ್ಲಿ 2,199 ಅಪಘಾತಗಳು 560 ಸಾವುಗಳಿಗೆ ಕಾರಣವಾಗಿವೆ,
ಬೆಂಗಳೂರು: ಸೋಮವಾರ ರಾತ್ರಿ ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ನಡೆದಿರುವ ಬಗ್ಗೆ ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರನ್ನು ಸ್ಪಷ್ಟನೆಯನ್ನು ನೀಡಿದ್ದಾರೆ. ಈ ಸಂಬಂದ ವಿಧಾನಸೌಧದ ಆವರಣದಲ್ಲಿ ಮಾತನಾಡಿದ ಅವರು, ಸಮುದಾಯದ ಹಿತಾಸಕ್ತಿ ರಕ್ಷಣೆಗಾಗಿ ಸೋಮವಾರ ರಾತ್ರಿ ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ನಡೆದಿರುವುದು ನಿಜ. ಇದರಲ್ಲಿ ನಾಯಕತ್ವದ ವಿಚಾರವಾಗಲಿ, ವೈಯಕ್ತಿಕ ಅಜೆಂಡಾಗಳಾಗಲಿ ಇರಲಿಲ್ಲ. ಎಲ್ಲಾ ಸಮುದಾಯಗಳ ಶಾಸಕರೂ ಹೀಗೆ ಆಗಿಂದಾಗ್ಗೆ ಸಭೆ ಸೇರುವುದು ಸರ್ವೇ ಸಾಮಾನ್ಯ ಎಂದು ವಿವರಣೆ ನೀಡಿದರು. ಕರ್ನಾಟಕ ರಾಜ್ಯದಲ್ಲಿ ಲಿಂಗಾಯತ ಸಮುದಾಯವು ಅತ್ಯಂತ ದೊಡ್ಡ ಸಮುದಾಯವಾಗಿದೆ. ಹೋದ
ಬೆಂಗಳೂರು: ವಿಪಕ್ಷ ನಾಯಕರ ವಿರುದ್ಧ ವಿಧಾನಸಭೆಯಲ್ಲಿಂದು ಆಡಳಿತ ಪಕ್ಷದ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಏಕವಚನದಲ್ಲೇ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಆಕ್ರೋಶ ಹೊರಹಾಕಿದ ವಿಚಾರ ಸಂಬಂಧ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಮರು ಸ್ಥಾಪಿಸಬೇಕು. ವಿಬಿ ಜಿ ರಾಮ್ ಜಿ ಯೋಜನೆಯನ್ನು ರದ್ದು ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸುವ ಸರ್ಕಾರದ ಅಧಿಕೃತ ನಿರ್ಣಯದ ಮೇಲಿನ ಚರ್ಚೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಕೇಂದ್ರದಿಂದ ರಾಜ್ಯಕ್ಕಾಗಿರುವ ಅನ್ಯಾಯಗಳ ಬಗ್ಗೆ ಶಿವಲಿಂಗೇಗೌಡ
ನವದೆಹಲಿ: ಕೇಂದ್ರ ಬಜೆಟ್ನಲ್ಲಿ ದೇಶದಲ್ಲಿ 7 ಹೈಸ್ಪೀಡ್ ರೈಲು ಕಾರಿಡಾರ್ ಅನ್ನು ಘೋಷಿಸಿದ ಬೆನ್ನಲ್ಲೇ ಇದೀಗ ಬೆಂಗಳೂರು ಮತ್ತು ಪುಣೆ ನಡುವೆ ಮತ್ತೊಂದು ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ.ಸಂಸತ್ ಭವನದಲ್ಲಿ ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಜೋಶಿ ಅವರು, ಬೆಂಗಳೂರು-ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣ ಮಾಡಿದ್ದಲ್ಲಿ ಕರ್ನಾಟಕ ರಾಜ್ಯದ ಬಹುತೇಕ ಪ್ರದೇಶದ ಒಟ್ಟಾರೆ ಅಭಿವೃದ್ಧಿಯಾಗುತ್ತದೆ ಎಂದು ಪ್ರಹ್ಲಾದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಠ್ಮಂಡುವಿನಿಂದ ಇಸ್ತಾನ್ಬುಲ್ಗೆ ಹಾರುತ್ತಿದ್ದ ಟರ್ಕಿಶ್ ಏರ್ಲೈನ್ಸ್ ಏರ್ಬಸ್ A330 ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅದರ ಬಲ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಕೋಲ್ಕತ್ತಾದಲ್ಲಿ ತುರ್ತು ಭೂಸ್ಪರ್ಶವಾಯಿತು.ನಾಗರಿಕ ವಿಮಾನಯಾನ ಸಚಿವಾಲಯದ ಪ್ರಕಾರ, ಸಿಬ್ಬಂದಿ ಮಧ್ಯಾಹ್ನ 1:31 ಕ್ಕೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು, ಆದರೆ ವಿಮಾನವು ಒಂದು ಎಂಜಿನ್ ಅನ್ನು ಸ್ಥಗಿತಗೊಳಿಸಿ ಮುಂದುವರಿಯಿತು."ಬಲ ಎಂಜಿನ್ ಬೆಂಕಿಗೆ ಆಹುತಿಯಾದ ಕಾರಣ ವಿಮಾನವು ಪ್ಯಾನ್ ಪ್ಯಾನ್, ಅಂತರರಾಷ್ಟ್ರೀಯ
ಬೆಳಗಾವಿ: ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆಗೈದ ಪ್ರಕರಣ ಸಂಬಂಧ 12 ಜನ ಅಪರಾಧಿಗಳಿಗೆ ಐದು ವರ್ಷ ಕಠಿಣ ಶಿಕ್ಷೆ ಪ್ರಕಟಗೊಂಡಿದೆ.ಬೆಳಗಾವಿ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾ.ಎಚ್.ಎಸ್.ಮಂಜುನಾಥ ಅವರು ಅಪರಾಧಿಗಳಿಗೆ ಆಯಾ ಸೆಕ್ಷನ್ ಅಡಿ ಶಿಕ್ಷೆ ಮತ್ತು ದಂಡ ವಿಧಿಸಿದರು.ಬಸಪ್ಪ, ರಾಜು, ಕೆಂಪಣ್ಣ, ಪಾರ್ವತಿ, ಯಲ್ಲವ್ವ, ಲಕ್ಕಪ್ಪ, ಗಂಗವ್ವ, ಸಂಗೀತಾ, ಸಂತೋಷ, ಶೋಭಾ, ಲಕ್ಕವ್ವ, ಶಿವಪ್ಪ ವನ್ನೂರಿಗೆ ಶಿಕ್ಷೆ ವಿಧಿಸಲಾಗಿದೆ. ಇನ್ನೂ ಅಪರಾಧಿಗಳಿಗೆ ಕೋರ್ಟ್ ಶಿಕ್ಷ ಪ್ರಕಟಿಸುತ್ತಿದ್ದಂತ್ತೆ ಅಪರಾಧಿಗಳು ಮತ್ತು ಅವರ ಕುಟುಂಬಸ್ಥರು ಕಣ್ಣೀರಿಟ್ಟರು.
ನವದೆಹಲಿ: ನಾನು ಮೋದಿ ಬಗ್ಗೆ ಮಾಜಿ ಸೇನಾಧಿಕಾರಿ ನರಾವಣೆ ಬರೆದ ಪುಸ್ತಕ ತಂದಿದ್ದೇನೆ ಎಂದು ಕ್ಯಾಮರಾಗಳಿಗೆ ರಾಹುಲ್ ಗಾಂಧಿ ಪುಸ್ತಕ ಎತ್ತಿ ತೋರಿಸಿದರೆ ಇದೀಗ ಬಿಜೆಪಿ ಸಂಸದ ನಿಶಿಕಾಂತ್ ದುಬೆ ನಾನು ನೆಹರೂ ಕುಟುಂಬದವರ ಬರೆದ ಕೆಲವು ಪುಸ್ತಕ ತಂದಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ. ಲೋಕಸಭೆಯಲ್ಲಿ ಈಗ ಪುಸ್ತಕದ ಏಟು-ಎದಿರೇಟು ನಡೆಯುತ್ತಿದೆ. ಚೀನಾ ಜೊತೆಗಿನ ಸಂಘರ್ಷದ ಬಗ್ಗೆ ಮೋದಿ ಮತ್ತು ರಾಜನಾಥ್ ಸಿಂಗ್ ಬರೆದಿದ್ದಾರೆ ಎನ್ನಲಾದ ಮಾಜಿ ಸೇನಾಧಿಕಾರಿ ನರಾವಣೆ ಅವರ ಪುಸ್ತಕ ಹಿಡಿದು ರಾಹುಲ್ ಗಾಂಧಿ ಕಳೆದ ಮೂರು ದಿನಗಳಿಂದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.
ಬೆಂಗಳೂರು: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ವಿರುದ್ಧ ಭಾರತೀಯ ಜನತಾ ಪಕ್ಷ (ಬಿಜೆಪಿ) ಮಾಡಿರುವ ಭ್ರಷ್ಟಾಚಾರ ಆರೋಪಗಳನ್ನು ಬುಧವಾರ ಕರ್ನಾಟಕದ ಸಚಿವ ಜಿ. ಪರಮೇಶ್ವರ ನಿರಾಕರಿಸಿದ್ದಾರೆ. ಸಾಬೀತುಪಡಿಸದೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು. ವಿಬಿ-ಜಿ-ರಾಮ್-ಜಿ ಕಾಯ್ದೆಯ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಕರ್ನಾಟಕ ಸಚಿವರು ಹೇಳಿದ್ದಾರೆ.
ಪಾಕ್ನಲ್ಲಿ ಪ್ರದರ್ಶನಗೊಳ್ಳದ ನಟ ರಣವೀರ್ ಸಿಂಗ್ ಅಭಿನಯದ ಸೂಪರ್ ಹಿಟ್ ಸಿನಿಮಾ ಧುರಂದರ್ ಸಿನಿಮಾ ನೆಟ್ಫ್ಲಿಕ್ಸ್ನಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ.ರಣವೀರ್ ಸಿಂಗ್, ಅಕ್ಷಯ್ ಖನ್ನಾ, ಸಂಜಯ್ ದತ್, ಸಾರಾ ಅರ್ಜುನ್ ನಟನೆಯ ಈ ಸಿನಿಮಾ 2025ರ ಡಿಸೆಂಬರ್ 25ರಂದು ಭಾರತ ಸೇರಿ ಜಗತ್ತಿನಾದ್ಯಂತ ಬಿಡುಗಡೆಯಾಗಿತ್ತು. ಆದರೆ ಈ ಸಿನಿಮಾಗೆ ಪಾಕಿಸ್ತಾನ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ಬಿಡುಗಡೆಗೊಂಡಿರಲಿಲ್ಲ. ಇದೀಗ ಒಟಿಟಿಗೆ ಬಿಡುಗಡೆಯಾದ ಸಿನಿಮಾಗೆ ಭಾರೀ ವೀಕ್ಷಣೆ ಕಂಡಿದೆ. ಜನವರಿ 30ರಂದು ನೆಟ್ಫ್ಲಿಕ್ಸ್ನಲ್ಲಿ ತೆರೆಕಂಡ ಧುರಂಧರ್ ನೋಡಿ ಪಾಕ್ ಸಿನಿ ಪ್ರಿಯರು ಮೆಚ್ಚಿಕೊಂಡಿದ್ದಾರೆ.ಈ ಚಿತ್ರವನ್ನು ವೀಕ್ಷಿಸಿದ ಪಾಕ್ ಪ್ರೇಕ್ಷಕರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ರೆಡ್ಡಿಟ್
ಬೆಂಗಳೂರು: ಸಿದ್ಧಾಪುರದಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧ ಬಂಧಿಯಾಗಿರುವ ಜ್ಯೋತಿಷಿ ಕಮಲಾಕರ್ ಭಟ್ನನ್ನು ಬಿಜೆಪಿ ಶಾಸಕ ಸುರೇಶ್ ಕುಮಾರ್ ಪ್ರೋತ್ಸಾಹಿಸಿ ಬೆಳೆಸಿದ್ದು, ಇದರಲ್ಲಿ ಅವರ ಪಾತ್ರವು ಮುಖ್ಯವಾಗುತ್ತದೆಂಬ ಕೈ ನಾಯಕ ಬಿಕೆ ಹರಿಪ್ರಸಾದ್ ಆರೋಪಕ್ಕೆ ಬಿಜೆಪಿ ಮುಖಂಡ ಎಸ್. ಸುರೇಶ್ ಕುಮಾರ್ ಅವರು, ಫೇಸ್ಬುಕ್ ಪೋಸ್ಟ್ ಮೂಲಕ ತೀಕ್ಷ್ಣ ಪ್ರತಿಕ್ರಿಯಿಸಿದ್ದಾರೆ. ಬಿ.ಕೆ. ಹರಿಪ್ರಸಾದ್ ಅವರೇ, ನಿಮ್ಮ ಫೇಸ್ಬುಕ್ ಬರಹವನ್ನು ಗಮನಿಸಿದೆ. ಕಾರವಾರದ ಸಿದ್ದಾಪುರದಲ್ಲಿ ನಡೆದ ಹೇಯ ಕೃತ್ಯವೊಂದನ್ನು ಮುಂದಿಟ್ಟುಕೊಂಡು, ಅದಕ್ಕೆ ರಾಜಕೀಯ ಬಣ್ಣ ಬಳಿದು, ನನ್ನ ಹೆಸರನ್ನು ತಳುಕು ಹಾಕಲು ನೀವು ನಡೆಸಿರುವ ಪ್ರಯತ್ನ ನಿಮ್ಮ "ಬೌದ್ಧಿಕ ದಿವಾಳಿತನ"ವನ್ನು ಎತ್ತಿ ತೋರಿಸುವಂತಿದೆ ಎಂದು ಕಿಡಿಕಾರಿದ್ದಾರೆ.