ಮೇ 1 ರಂದು ಕಾರ್ಮಿಕ ದಿನವನ್ನು ಭಾರತದ ಅನೇಕ ಭಾಗಗಳಲ್ಲಿ ಆಚರಿಸಲಾಗುತ್ತದೆ, ಆದರೆ ನಿಯಮಗಳು ಭಿನ್ನವಾಗಿರುತ್ತವೆ. ಬ್ಯಾಂಕ್ಗಳು, ಶಾಲೆಗಳು, ಸರ್ಕಾರಿ ಕಚೇರಿಗಳು, ಅಂಗಡಿಗಳು ಮತ್ತು ಸಾರಿಗೆ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆಯೇ ಎಂದು ಜನರು ಆಗಾಗ್ಗೆ ಆಶ್ಚರ್ಯ ಪಡುತ್ತಾರೆ. ಉತ್ತರವು ರಾಜ್ಯ, ಸ್ಥಳೀಯ ಅಧಿಸೂಚನೆಗಳು ಮತ್ತು ವಲಯವನ್ನು ಅವಲಂಬಿಸಿರುತ್ತದೆ. ಸ್ಥಿತಿಯನ್ನು ಮುಂಚಿತವಾಗಿ ತಿಳಿದುಕೊಳ್ಳುವುದು ಕೆಲಸಗಾರರು, ವಿದ್ಯಾರ್ಥಿಗಳು ಮತ್ತು ಕುಟುಂಬಗಳು ತಮ್ಮ ದಿನವನ್ನು ಯೋಜಿಸಲು ಸಹಾಯ ಮಾಡುತ್ತದೆ.ಕಾರ್ಮಿಕರ ದಿನವನ್ನು ಅಂತರಾಷ್ಟ್ರೀಯ ಕಾರ್ಮಿಕರ ದಿನ ಅಥವಾ ಮೇ ದಿನ ಎಂದೂ ಕರೆಯುತ್ತಾರೆ, ಕಾರ್ಮಿಕರು ಮತ್ತು ಕಾರ್ಮಿಕ ಚಳುವಳಿಗಳನ್ನು ಗೌರವಿಸುತ್ತಾರೆ. ಭಾರತದಲ್ಲಿ, ಇದು ಸಾಮಾಜಿಕ ಮತ್ತು ಐತಿಹಾಸಿಕ ಅರ್ಥವನ್ನು ಹೊಂದಿದೆ,
ಬೃಹನ್ಮುಂಬೈ ಮುನಿಸಿಪಲ್ ಕಾರ್ಪೊರೇಶನ್ 2026ರ ಮೇ 5 ಮತ್ತು ಮೇ 6ರ ನಡುವೆ ಹಲವಾರು ಪ್ರದೇಶಗಳಲ್ಲಿ 30 ಗಂಟೆಗಳ ಮುಂಬೈ ನೀರಿನ ಕಡಿತವನ್ನು ನಿಗದಿಪಡಿಸಿದೆ. ಯೋಜಿತ ನೀರು ಸರಬರಾಜು ಸ್ಥಗಿತಗೊಳಿಸುವಿಕೆಯು ನಗರದ ನಡೆಯುತ್ತಿರುವ ನೀರು ಸರಬರಾಜು ಯೋಜನೆಯಡಿಯಲ್ಲಿ ಪ್ರಮುಖ ನಿರ್ವಹಣೆ ಮತ್ತು ಹೊಸ ಸುರಂಗ ಸಂಪರ್ಕಗಳಿಗೆ ಸಂಬಂಧಿಸಿದೆ, ಇದು ಉನ್ನತ ಮತ್ತು ಕೆಳಮಟ್ಟದ ನೆಟ್ವರ್ಕ್ಗಳ ಮೇಲೆ ಪರಿಣಾಮ ಬೀರುತ್ತದೆ.ಸ್ಥಗಿತಗೊಳಿಸುವಿಕೆಯು ಮಂಗಳವಾರ, ಮೇ 5, 2026 ರಂದು ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗುತ್ತದೆ ಮತ್ತು ಮೇ 6, 2026
ಮಂಗಳೂರು: ಕರಾವಳಿ ಭಾಗದಲ್ಲಿ ಬೇಸಿಗೆಯ ತೀವ್ರ ಬಿಸಿಲಿನ ತಾಪ ಮುಂದುವರಿದಿದ್ದು, ಹೆಚ್ಚುತ್ತಿರುವ ಬಿಸಿಲ ಧಗೆ ಜನರನ್ನು ಕಂಗಾಲಾಗಿಸಿದ್ದು, ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಇನ್ನೂ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆ ತುರ್ತು ಸಿದ್ಧತೆಗಳನ್ನು ಆರಂಭಿಸಿದೆ.ದಕ್ಷಿಣ ಕನ್ನಡ (ದ.ಕ.) ಜಿಲ್ಲೆಯಲ್ಲಿ ಬಿಸಿಲಿನ ತಾಪಕ್ಕೆ ಸಂಬಂಧಿಸಿದಂತೆ ಹವಾಮಾನ ಇಲಾಖೆ ಕಿತ್ತಳೆ ಮತ್ತು ಹಳದಿ ಎಚ್ಚರಿಕೆಯನ್ನು ನೀಡಿದೆ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆಯು ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಹಾಸಿಗೆಗಳನ್ನು ಮೀಸಲಿಟ್ಟಿದೆ. ತಾಲೂಕು ಆಸ್ಪತ್ರೆಗಳಲ್ಲಿ ತಲಾ ಐದು ಹಾಸಿಗೆಗಳು ಮತ್ತು
ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಾರ್ಷಿಕ ದಿನಾಚರಣೆ ವೇಳೆ ವಿದ್ಯಾರ್ಥಿಗಳು ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.ಅಶ್ಲೀಲ ಹಾಡುಗಳು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಅಂತಹ ವಿಷಯವು ಅಶಿಸ್ತಿಗೆ ಕಾರಣವಾಗಬಹುದು ಮತ್ತು ಶಿಕ್ಷಣ ಸಂಸ್ಥೆಗಳ ಘನತೆಗೆ ಧಕ್ಕೆ ತರಬಹುದು ಎಂದು ಅದು ಗಮನಿಸಿದೆ
ಕಲಬುರಗಿ: ಬುಧವಾರದ ಎಕ್ಸಿಟ್ ಪೋಲ್ ಭವಿಷ್ಯವಾಣಿಯ ನಂತರ ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟವು ಮತ್ತೆ ಅಧಿಕಾರಕ್ಕೆ ಬರಲಿದೆ ಮತ್ತು ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಶಾವಾದ ವ್ಯಕ್ತಪಡಿಸಿದ್ದಾರೆ. ಈಗ ಕೆಲವೆಡೆ ಫಲಿತಾಂಶ ಸ್ಪಷ್ಟವಾಗಿ ಗೋಚರಿಸುತ್ತಿದೆ. ಕೆಲವು ಫಲಿತಾಂಶಗಳು ಕೊಂಚ ಗೊಂದಲ ಸೃಷ್ಟಿಸಿವೆ. ಆದರೆ, ತಮಿಳುನಾಡಿನಲ್ಲಿ ಡಿಎಂಕೆಗೆ ಸ್ಪಷ್ಟ ಬಹುಮತ ಬರಬಹುದು ಎಂಬ ಭರವಸೆ ನನಗಿದೆ; ಅಲ್ಲಿಯೂ ಮಾತನಾಡಿದ್ದೇನೆ. ಅದೇ ರೀತಿ ಕೇರಳದಲ್ಲಿಯೂ ಯುಡಿಎಫ್ ಬಹುಮತ ಬರಲಿದೆ ಎಂದು ನಮ್ಮ ಜನ ಈಗಾಗಲೇ ಹೇಳಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದರು.
ಬೆಂಗಳೂರು: ಶಿವಾಜಿನಗರದಲ್ಲಿರುವ ಶ್ರೀ ಅಟಲ್ ಬಿಹಾರಿ ವಾಜಪೇಯಿ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಏಳು ಜನರು ಸಾವನ್ನಪ್ಪಿದ ದುರಂತದ ಬಳಿಕ ಆರೋಗ್ಯ ಇಲಾಖೆಯ ಅಡಿಯಲ್ಲಿರುವ ಎಲ್ಲಾ ಆಸ್ಪತ್ರೆ ಮತ್ತು ಕಾಂಪೌಂಡ್ ಗೋಡೆಗಳ ಸಂಪೂರ್ಣ ಪರಿಶೀಲನೆ ನಡೆಸಲು ಸರ್ಕಾರ ನಿರ್ದೇಶನ ನೀಡಿದೆ. ನಿನ್ನೆ ಭಾರೀ ಮಳೆಗೆ ಕಾಂಪೌಂಡ್ ಗೋಡೆ ಕುಸಿದು ಸಂಭವಿಸಿದ ಅಟಲ್ ಬಿಹಾರಿ ವಾಜಪೇಯಿ ಆಸ್ಪತ್ರೆ, ಹಿಂದೆ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಸ್ಥಳಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು. ಈ ಸಂಬಂಧ ಅಧಿಕಾರಿಗಳು ಮತ್ತು ವೈದ್ಯಕೀಯ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು.
ಪಂಜಾಬ್ ಕಿಂಗ್ಸ್ ವಿರುದ್ಧದ ಘರ್ಷಣೆಯ ಸಂದರ್ಭದಲ್ಲಿ ಡ್ರೆಸ್ಸಿಂಗ್ ರೂಮ್ನಲ್ಲಿ ವೇಪ್ ಮಾಡಿದ ರಾಜಸ್ಥಾನ ರಾಯಲ್ಸ್ ನಾಯಕ ರಿಯಾನ್ ಪರಾಗ್ ವಿರುದ್ಧ ಬಿಸಿಸಿಐನಿಂದ ಭಾರೀ ದಂಡವನ್ನು ಅನುಭವಿಸಿದರು. ಈ ಘಟನೆಯು ನೇರ ಪ್ರಸಾರದಲ್ಲಿ ಸಿಕ್ಕಿಬಿದ್ದ ನಂತರ ಸಾಮಾಜಿಕ ಮಾಧ್ಯಮದಲ್ಲಿ ತ್ವರಿತವಾಗಿ ಹರಡಿತು.ಕ್ಲಿಪ್ ಅಭಿಮಾನಿಗಳಿಂದ ಬಲವಾದ ಪ್ರತಿಕ್ರಿಯೆಗಳನ್ನು ಉಂಟುಮಾಡಿತು, ಅನೇಕರು ಈ ಕಾಯ್ದೆಯ ಸೂಕ್ತತೆಯನ್ನು ಪ್ರಶ್ನಿಸಿದರು ಮತ್ತು ಆಟವನ್ನು ವಿವಾದಕ್ಕೆ ತರಲು ಕಟ್ಟುನಿಟ್ಟಾದ ಕ್ರಮವನ್ನು ತೆಗೆದುಕೊಳ್ಳುವಂತೆ ಬಿಸಿಸಿಐಗೆ ಕರೆ ನೀಡಿದರು.
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಸಂಭವಿಸಿದ ಭೀಕರ ರಸ್ತೆ ಗೋಡೆ ಕುಸಿತದಲ್ಲಿ 7ಮಂದಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಎಂಜಿನಿಯರ್ ಅನ್ನು ಕೂಡಲೇ ಅಮಾನತು ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಿಎಂ ಸಭೆ ನಡೆಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಕೆಲ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆಂದು ಮಾಹಿತಿ ಲಭಿಸಿದೆ. ಗೋಡೆಗೆ ಹಾನಿ ಆಗಲಿದೆ ಅಂತ ಗೊತ್ತಿದ್ದರೂ ಕೂಡ ಕಾಮಗಾರಿ ಮಣ್ಣನ್ನು ಅಲ್ಲಿ ಸುರಿದಿದ್ದು ಯಾಕೆ ಎಂದು ಪ್ರಶ್ನಿಸಿ, ಸಂಬಂಧಪಟ್ಟ ಕಾರ್ಯಪಾಲಕ ಎಂಜಿನಿಯರ್ ಅನ್ನು ಅಮಾನತು ಮಾಡುವಂತೆ ಸೂಚನೆ ನೀಡಿದ್ದಾರೆ.
ಬೆಂಗಳೂರು: ಸಿಇಟಿ ಪರೀಕ್ಷೆ ಸಂದರ್ಭದಲ್ಲಿ ವಸ್ತ್ರಸಂಹಿತೆಯಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವ ಬಗ್ಗೆ ಶಿಕ್ಷಣ ಸಚಿವ ಎಂಸಿ ಸುಧಾಕರ್ ಅವರು ಬಿಗ್ ಅಪ್ಡೇಟ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ನಾಲ್ವರು ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಸಮಸ್ಯೆ ಆಗಿದೆ. ಹಾಗಾಗಿ ಆ ವಿದ್ಯಾರ್ಥಿಗಳಿಗೆ ಮಾತ್ರ ಮರುಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು. ಜನಿವಾರ ಹಾಗೂ ಹಿಜಬ್ಗೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ ಎರಡು ಪರೀಕ್ಷಾ ಕೇಂದ್ರದಲ್ಲಿ ಗೊಂದಲ ಉಂಟಾಗಿತ್ತು. ಈ ಹಿನ್ನೆಲೆ ಪರೀಕ್ಷಾರ್ಥಿಗಳಿಗೆ ಮರು ಪರೀಕ್ಷೆ ಮಾಡುವ ಬಗ್ಗೆ ಮನವಿ ಬಂದಿದ್ದು. ಆದ್ದರಿಂದ ಪರೀಕ್ಷಾರ್ಥಿಗಳು
2025ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿ ಇದೀಗ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಇನ್ನೂ ಧನ್ಯತಾ ಅವರು ಗರ್ಭಿಣಿಯಾಗಿದ್ದಾರೆ ಎಂದು ಸುದ್ದಿ ಬಿತ್ತಾರಗೊಂಡಿತು. ಆದರೆ ಈ ಬಗ್ಗೆ ನಟ ಯಾವುದೇ ಸ್ಪಷ್ಟನೆಯನ್ನು ನೀಡಿರಲಿಲ್ಲ. ಇದೀಗ ನಟ ಖುಷಿಯ ವಿಚಾರವನ್ನು ಇನ್ಸ್ಟಾಗ್ರಾಂನಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡ ಪೋಸ್ಟ್ನಲ್ಲಿ ಹೀಗೇ ಬರೆದುಕೊಂಡಿದ್ದಾರೆ. Our universe is expanding ಎಂದು
ಬೆಂಗಳೂರು: ಬುಧವಾರ ಸುರಿದ ಭಾರೀ ಮಳೆಗೆ ಬೆಂಗಳೂರಿನಾದ್ಯಂತ ನಡೆದ ಅವಘಡದಲ್ಲಿ 10 ಮಂದಿ ಸಾವನ್ನಪ್ಪಿದ ಬಳಿಕ ಇಂದು ಕೂಡಾ ಸಿಲಿಕಾನ್ ಸಿಟಿಯಲ್ಲಿ ವರುಣ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಇಂದು ಬೆಂಗಳೂರಿನಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ ಸೂಚನೆಯನ್ನು ನೀಡಿದೆ. ಇನ್ನೂ ನಾಳೆವರೆಗೂ ಮಳೆ ಮುಂದುವರೆಯಲಿದೆ ಎಂದರು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಕಳೆದ ಕೆಲ ದಿನಗಳಿಂದ ಉರಿಬಿಸಿಲಿಗೆ ಸುಸ್ತಾಗಿದ್ದ ಮಂದಿಗೆ ಬುಧವಾರ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ಹಲವು
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ನಿನ್ನೆ ಕಂಪೌಂಡ್ ಕುಸಿದು ಮೃತರಾದವರ ಕುಟುಂಬಕ್ಕೆ ರಾಜ್ಯ ಸರ್ಕಾರ ಘೋಷಿಸಿದ ಪರಿಹಾರ ಹಣದ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಿನ್ನೆ ಸಂಜೆ ಭಾರೀ ಮಳೆಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಬಳಿ ಕಂಪೌಂಡ್ ಕುಸಿದು 7 ಮಂದಿ ಸಾವನ್ನಪ್ಪಿದ್ದರು. ಮೃತರಾದವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇನ್ನು ಪ್ರಧಾನಿ ಮೋದಿ ಕೂಡಾ 2 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ.
ಪಂಜಾಬ್ನ ಹೋಶಿಯಾರ್ಪುರ ಜಿಲ್ಲೆಯಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಮೋಟಾರ್ಸೈಕಲ್ ಡಿಕ್ಕಿ ಹೊಡೆದು ಶಾಲಾ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.ಮಗು ಶಾಲಾ ಬಸ್ನಿಂದ ಇಳಿದು ರಸ್ತೆ ದಾಟಲು ಯತ್ನಿಸಿದ ಬಳಿಕ ಈ ಘಟನೆ ನಡೆದಿದೆ.ಘಟನೆಯು ಸಿಸಿಟಿವಿ ಫೂಟೇಜ್ನಲ್ಲಿ ಸೆರೆಯಾಗಿದೆ, ಇದು ಮೋಟಾರು ಸೈಕಲ್ಗೆ ಹಿಂದಿನಿಂದ ಡಿಕ್ಕಿ ಹೊಡೆಯುವ ಮೊದಲು ಮಗುವಿನ ನಿವಾಸದ ಬಳಿ ಬಸ್ ನಿಲ್ಲಿಸುವುದನ್ನು ತೋರಿಸುತ್ತದೆ.
ಹಾಸನ: ಪ್ರೀವೆಡ್ಡಿಂಗ್ ಶೂಟ್ಗೆ ತೆರಳಿದ್ದ ವೇಳೆ ಕೆಲವು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇನ್ನೇನು ಹಸೆಮಣೆ ಏರಬೇಕಿದ್ದ ಯುವಕ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದಲ್ಲಿ ವರದಿಯಾಗಿದೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಯುವಕನನ್ನು ಮನು.ಎಲ್.ಎನ್. (29) ಎಂದು ಗುರುತಿಸಲಾಗಿದೆ. ಇವರು ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿಯಾಗಿದ್ದಾರೆ. ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ನಿಶ್ಚಯವಾಗಿತ್ತು.
ಬೆಂಗಳೂರು: ರಾಜ್ಯ ರಾಜಧಾನಿಯನ್ನೇ ಬೆಚ್ಚಿಬೀಳಿಸಿದ ಬೀಳಿಸಿದ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿತ ಪ್ರಕರಣವನ್ನು ಲೋಕಾಯುಕ್ತ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಇನ್ನೂ 7ಮಂದಿಯನ್ನು ಬಲಿತೆಗೆದುಕೊಂಡ ಈ ಘಟನೆ ಬಗ್ಗೆ ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದೆ. ಇಂದು ಮಧ್ಯಾಹ್ನ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಮತ್ತು ಉಪಲೋಕಾಯುಕ್ತರು ದುರಂತ ಸಂಭವಿಸಿದ ಬೌರಿಂಗ್ ಆಸ್ಪತ್ರೆಯ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕು ಎಂದು ಹೇಳಿಕೆ ನೀಡಿದ್ದ ಗೃಹಸಚಿವ ಡಾ ಜಿ ಪರಮೇಶ್ವರ್ ಅದಕ್ಕೆ ಸೂಕ್ತ ಕಾರಣವನ್ನೂ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಈಗ ಮತ್ತೆ ಚಾಲ್ತಿಯಲ್ಲಿದೆ. ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಬಳಿಕ ಸಿಎಂ ಬದಲಾವಣೆ ಚರ್ಚೆ ಜೋರಾಗುವ ಸುಳಿವು ಸಿಕ್ಕಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹೇರುವ ಕೆಲಸ ಮಾಡುತ್ತಿದ್ದಾರೆ. ಇದರ ನಡುವೆ ಗೃಹಸಚಿವ ಡಾ ಜಿ ಪರಮೇಶ್ವರ್ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುವಾಗ ಮಲ್ಲಿಕಾರ್ಜುನ ಖರ್ಗೆ ಸಿಎಂ ಆದರೆ ಒಪ್ಪಿಕೊಳ್ಳುತ್ತೇವೆ ಎಂದಿದ್ದರು.
ಕೋಲ್ಕತ್ತಾ: ಪಶ್ಚಿಮ ಬಂಗಾಲ ಚುನಾವಣೆ ಫಲಿತಾಂಶದ ಏನಾಗಬಹುದೋ ಎಂದು ಇಡೀ ದೇಶವೇ ಕುತೂಹಲದಿಂದ ಕಾಯುತ್ತಿದ್ದು ಕೆಲವು ಮಹಿಳೆಯರು ಮಾಧ್ಯಮಗಳ ಮುಂದೆ ಮಮತಾ ಗೆದ್ದ ಮೇಲೆ ಮೋದಿಗೆ ಹಸಿರು ರಸಗುಲ್ಲಾ ಕೊಡ್ತೀವಿ ಎಂದ ವಿಡಿಯೋ ವೈರಲ್ ಆಗಿದೆ. ಪಶ್ಚಿಮ ಬಂಗಾಲದಲ್ಲಿ ನಿನ್ನೆ ಎರಡನೇ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು ಮೇ 4 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ಟಿಎಂಸಿ ಗೆಲ್ಲುವುದು ಕಷ್ಟ ಎಂದು ಎಕ್ಸಿಟ್ ಪೋಲ್ ವರದಿಗಳು ಹೇಳುತ್ತಿವೆ. ಆದರೆ ಇದರ ನಡುವೆ ಕೆಲವು ಮಹಿಳೆಯರು ಮಾಧ್ಯಮಗಳ ಮುಂದೆ ಟಿಎಂಸಿ ಗೆಲ್ಲೋದು ಪಕ್ಕಾ ಎಂದಿದ್ದಾರೆ.
ಬೆಂಗಳೂರು: ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಸರಕಾರ ರಚನೆ ಆಗುವುದು ಖಚಿತ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಇಂದು ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು. ಬಂಗಾಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೇಲೆ ಜನತೆ ವಿಶ್ವಾಸ ಇಟ್ಟಿದ್ದಾರೆ. ಅಸ್ಸಾಂನಲ್ಲಿ ಜನತೆ ಮೂರನೇ ಬಾರಿ ಸೇವೆ ಮಾಡುವ ಅವಕಾಶ ನೀಡಲಿದ್ದಾರೆ ಎಂದು ತಿಳಿಸಿದರು. ಬಂಗಾಳದಲ್ಲಿ ಈ ಬಾರಿ ರಾಷ್ಟ್ರವಾದಿಗಳ ಸರಕಾರ ರಚನೆ ಆಗಲಿದೆ ಎಂದು ನುಡಿದರು.ಪಾಂಡಿಚೇರಿಯಲ್ಲಿ ಎನ್ಡಿಎ ಸರಕಾರ ಬರಲಿದೆ. ತಮಿಳುನಾಡಿನಲ್ಲಿ ಒಳ್ಳೆಯದೇ ಆಗಲಿದೆ. ಕೇರಳದಲ್ಲಿ ಬಿಜೆಪಿ ಪ್ರಮುಖ ಶಕ್ತಿಯಾಗಿ ಹೊರಹೊಮ್ಮುತ್ತದೆ ಎಂದು ವಿವರಿಸಿದರು.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದ್ದು ಮತ್ತುಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,53,235.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,52,455.00 ರೂ.ಗಳಷ್ಟಿದೆ.
ಮಾವುತ ಮತ್ತು ಆನೆಯ ನಡುವೆ ಮನುಷ್ಯರ ನಡುವೆ ನಡೆಯುವಂತೆ ಆತ್ಮೀಯವಾಗಿ ನಡೆಯುವ ಮಾತುಕತೆಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಪ್ರಾಣಿ ಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ಪಳಗಿದ ಆನೆಗಳ ದೇಹ ದೈತ್ಯವಾದರೂ ಅವುಗಳ ಮನಸ್ಸು ಹೂವಿನಂತೆ ಮೃದು. ಅದರಲ್ಲೂ ತಮ್ಮ ಮಾವುತ ಎಂದರೆ ಅವುಗಳಿಗೆ ಅಚ್ಚುಮೆಚ್ಚು. ಅವರನ್ನು ಯಾರಿಗೂ ಬಿಟ್ಟುಕೊಡಲ್ಲ. ಅಂತಹದ್ದೇ ಪ್ರೀತಿಯ ಸನ್ನಿವೇಶದ ವಿಡಿಯೋವೊಂದು ಈಗ ವೈರಲ್ ಆಗಿದೆ. ಇದು ಶ್ರೀರಂಗಂನಲ್ಲಿ ನಡೆದ ಘಟನೆ. ಮಾವುತ ಮತ್ತು ಆನೆಯ ನಡುವೆ ಆತ್ಮೀಯವಾಗಿ ಮಾತುಕತೆ ನಡೆಯುತ್ತದೆ. ಮಾವುತನನ್ನು ಪ್ರೀತಿಯಿಂದ ಅಂಟಿಕೊಂಡು ನಿಂತಿರುವ ಆನೆ ಆತ ಕೇಳಿದ್ದಕ್ಕೆಲ್ಲಾ ಹೂಂ.. ಎನ್ನುತ್ತಾ ತಲೆ ಅಲ್ಲಾಡಿಸುತ್ತದೆ.
ಪ್ರಧಾನಿ ಮೋದಿ ಕಟೌಟ್ ನ್ನು ಮನೆಗೆ ಎತ್ತಿಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದಾಗ ಆತ ಆ ಕಟೌಟ್ ನ್ನು ಮನೆಯಲ್ಲಿಟ್ಟು ಪೂಜೆ ಮಾಡ್ತೀನಿ ಎಂದ ವೈರಲ್ ವಿಡಿಯೋವೊಂದು ಇಲ್ಲಿದೆ ನೋಡಿ. ಪ್ರಧಾನಿ ನರೇಂದ್ರ ಮೋದಿಗೆ ಅನೇಕ ಅಭಿಮಾನಿಗಳಿದ್ದಾರೆ. ಅವರನ್ನು ದೇವರಂತೆ ಪೂಜೆ ಮಾಡುವವರೂ ಇದ್ದಾರೆ. ಇದೇ ರೀತಿ ಇಲ್ಲೊಬ್ಬ ವ್ಯಕ್ತಿ ಪ್ರಧಾನಿ ಮೋದಿಯ ಅಪ್ಪಟ ಭಕ್ತನಿದ್ದಾನೆ. ಚುನಾವಣೆ ಪ್ರಚಾರವೊಂದರಲ್ಲಿ ಸಿಕ್ಕಿದ ಕಟೌಟ್ ನ್ನು ಆತ ಮನೆಗೆ ಒಯ್ಯುತ್ತಿದ್ದ. ಇದನ್ನು ಪತ್ರಕರ್ತರೊಬ್ಬರು ಪ್ರಶ್ನಿಸಿದಾಗ ಅದನ್ನು ಮನೆಗೆ ತೆಗೆದುಕೊಂಡು ಹೋಗಿ ಅಗರಬತ್ತಿ, ದೀಪ ಹಚ್ಚಿ ಪೂಜೆ ಮಾಡ್ತೀನಿ ಎಂದಿದ್ದಾನೆ. ನಾನು ಮೋದಿ ಭಕ್ತ. ನನಗೆ ಅವರೆಂದರೆ ತುಂಬಾ ಇಷ್ಟ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ಇಂದು ಯಥಾಸ್ಥಿತಿಯಲ್ಲಿದೆ. ಹೊಸ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 475 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 550 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 550 ರೂ.ಗಳಷ್ಟಾಗಿದೆ.
ಮಂಗಳೂರು: ಬಹುಭಾಷಾ ತಾರೆ ಪೂಜಾ ಹೆಗ್ಡೆ ಇಷ್ಟಪಡುವ ಕರಾವಳಿ ಮೂಲದ ಕನ್ನಡ ನಟ ಯಾರು ಎಂದು ಅವರೇ ರಿವೀಲ್ ಮಾಡಿದ್ದಾರೆ. ಮಂಗಳೂರಿಗೆ ಭೇಟಿ ನೀಡಿದ ವೇಳೆ ಅವರು ಸಂದರ್ಶನವೊಂದರಲ್ಲಿ ಈ ವಿಚಾರ ಹೇಳಿದ್ದಾರೆ. ಪೂಜಾ ಹೆಗ್ಡೆ ಮೂಲತಃ ಮಂಗಳೂರಿವರು. ತುಳು ಭಾಷೆಯನ್ನು ಚೆನ್ನಾಗಿ ಮಾತನಾಡುತ್ತಾರೆ. ಇತ್ತೀಚೆಗೆ ಅವರು ಮಂಗಳೂರಿಗೆ ಭೇಟಿ ನೀಡಿದ್ದು ಇಲ್ಲಿನ ಪ್ರಸಿದ್ಧ ದೇವಾಲಯಗಳು, ದೈವಾರಾಧನೆಯಲ್ಲಿ ಪಾಲ್ಗೊಂಡು ಭಕ್ತಿ ಮರೆದಿದ್ದಾರೆ. ಈ ವೇಳೆ ಕಹಳೆ ನ್ಯೂಸ್ ಗೆ ನೀಡಿದ್ದ ಸಂದರ್ಶನದಲ್ಲಿ ಅವರು ತಮ್ಮ ಮೆಚ್ಚಿನ ತುಳು ನಟ ಯಾರು ಎಂದು ರಿವೀಲ್ ಮಾಡಿದ್ದಾರೆ.
ಬೆಂಗಳೂರು: ನಿನ್ನೆ ಸುರಿದ ಭಾರೀ ಮಳೆಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಬಳಿ ಕಂಪೌಂಡ್ ಕುಸಿದು ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಪ್ರಧಾನಿ ಮೋದಿ ಪರಿಹಾರ ಘೋಷಿಸಿದ್ದು ಬಿಜೆಪಿ ನಾಯಕರು ಧನ್ಯವಾದ ಸಲ್ಲಿಸಿದ್ದಾರೆ. ಬೌರಿಂಗ್ ಆಸ್ಪತ್ರೆ ಕಂಪೌಂಡ್ ಕುಸಿದು 7 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಆರ್ ಅಶೋಕ್ ಭೇಟಿ ನೀಡಿದ್ದರು. ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಮೃತಪಟ್ಟವರಿಗೆ ಪ್ರಧಾನಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಘೋಷಣೆ ಮಾಡಿದ್ದಾರೆ.
ಮುಂಬೈ: ಹಿಟ್ ಮ್ಯಾನ್ ರೋಹಿತ್ ಶರ್ಮಾ ಹುಟ್ಟುಹಬ್ಬದ ದಿನವೇ ಮುಂಬೈ ಇಂಡಿಯನ್ಸ್ ಗೆ ಈ ಗತಿ ಬಂತಲ್ಲಾ ಎಂದು ಫ್ಯಾನ್ಸ್ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಇಂದು ಟೀಂ ಇಂಡಿಯಾ ಮತ್ತು ಮುಂಬೈ ಇಂಡಿಯನ್ಸ್ ತಂಡದ ಯಶಸ್ವೀ ನಾಯಕರಾಗಿದ್ದ ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಹುಟ್ಟುಹಬ್ಬ. ಅಭಿಮಾನಿಗಳು ಸೋಷಿಯಲ್ ಮೀಡಿಯಾ ಮೂಲಕ ತಮ್ಮ ನೆಚ್ಚಿನ ಕ್ರಿಕಟಿಗನಿಗೆ ಶುಭ ಹಾರೈಸುತ್ತಿದ್ದಾರೆ. ಆದರೆ ಇದರ ನಡುವೆಯೂ ರೋಹಿತ್ ಅಭಿಮಾನಿಗಳು ಮುಂಬೈ ಇಂಡಿಯನ್ಸ್ ಪರಿಸ್ಥಿತಿ ನೋಡಿ ಬೇಸರ ವ್ಯಕ್ತಪಡಿಸಿದ್ದಾರೆ. ನಿನ್ನೆ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಗೆದ್ದು ಮುಂಬೈ ಇಂಡಿಯನ್ಸ್ ರೋಹಿತ್ ಗೆ ಗಿಫ್ಟ್ ನೀಡಬಹುದು ಎಂದು ಫ್ಯಾನ್ಸ್ ಅಂದುಕೊಂಡಿದ್ದರು.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸಂಜೆ ಆಲಿಕಲ್ಲು ಮಳೆಯಾಗಿದ್ದನ್ನು ನೋಡಿ ಮಾಜಿ ಕ್ರಿಕೆಟಿಗ, ಕೆಎಸ್ ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮಕ್ಕಳಂತೆ ಕುಣಿದಾಡಿದ ವಿಡಿಯೋವೊಂದು ಇಲ್ಲಿದೆ ನೋಡಿ. ನಿನ್ನೆ ಸಂಜೆ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿತ್ತು. ಕಂಠೀರವ ಸ್ಟೇಡಿಯಂ ಸುತ್ತಮುತ್ತಲಂತೂ ಆಲಿಕಲ್ಲು ಮಳೆಯಾಗಿತ್ತು. ಭಾರೀ ಪ್ರಮಾಣದಲ್ಲಿ ಆಲಿಕಲ್ಲು ರಸ್ತತೆ ತುಂಬಾ ಬಿದ್ದು ಕಾಶ್ಮೀರದ ಫೀಲಿಂಗ್ ತಂದುಕೊಟ್ಟಿತ್ತು. ವಿಶೇಷವೆಂದರೆ ಇದೇ ಸಂದರ್ಭದಲ್ಲಿ ವೆಂಕಟೇಶ್ ಪ್ರಸಾದ್ ತಮ್ಮ ಕಾರಿನಲ್ಲಿ ತೆರಳುತ್ತಿದ್ದವರು ಆಲಿಕಲ್ಲು ಮಳೆ ನೋಡಿ ತಮ್ಮ ಚಾಲಕನಿಗೆ ಕಾರು ನಿಲ್ಲಿಸಲು ಸೂಚಿಸಿದ್ದಾರೆ.
ಢಾಕಾ: ಅಪ್ಪ ಎಂದರೆ ಕಣ್ಣೆದುರು ಇರುವ ರಿಯಲ್ ಹೀರೋ ಎಂದು ಮಕ್ಕಳು ಎಂದುಕೊಳ್ಳುತ್ತಾರೆ. ಈ ತಂದೆ ಅದನ್ನು ನಿಜ ಮಾಡಿದ್ದು ಮಗುವನ್ನು ರಕ್ಷಿಸಲು ಪ್ರಾಣವನ್ನೇ ಪಣಕ್ಕಿಟ್ಟಿದ್ದಾನೆ. ಈ ಘಟನೆ ನಡೆದಿರುವುದು ಬಾಂಗ್ಲಾದೇಶದಲ್ಲಿ. ತಂದೆ-ತಾಯಿ ಕಣ್ಣಿಗೆ ಕಾಣುವ ಪ್ರತ್ಯಕ್ಷ ದೇವರುಗಳು. ತಮ್ಮ ಮಕ್ಕಳಿಗೆ ಸಮಸ್ಯೆ ಬಂದಿದೆ ಎಂದರೆ ತಮ್ಮ ಜೀವವನ್ನೂ ಲೆಕ್ಕಿಸದೇ ಕಾಪಾಡುವ ಹೀರೋಗಳು. ಇಲ್ಲಿ ನಡೆದಿದ್ದೂ ಇದೇ ರೀತಿಯ ಘಟನೆ. ಮಗುವೊಂದು ರೈಲು ಹಳಿ ಮೇಲೆ ಅಕಸ್ಮಾತ್ತಾಗಿ ಬೀಳುತ್ತದೆ. ಇದನ್ನು ಗಮನಿಸಿದ ತಂದೆ ಹಿಂದೆ ಮುಂದೆ ನೋಡದೇ ರೈಲು ಹಳಿ ಮೇಲೆ ಹಾರಿ ಮಗುವನ್ನು ಕಾಪಾಡಲು ನೋಡುತ್ತಾನೆ.
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ನಿನ್ನೆ ಸಂಜೆ ಸಂಭವಿಸಿದ ಕಂಪೌಂಡ್ ಕುಸಿತಕ್ಕೆ ಎಂಜಿನಿಯರ್ ಗಳು ನೀಡಿದ ಕಾರಣ ಕೇಳಿ ಸಿಎಂ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದಾರೆ. ನಿನ್ನೆ ಘಟನೆ ನಡೆದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಬಳಿ ಕಂಪೌಂಡ್ ಕುಸಿದು 7 ಮಂದಿ ಸಾವನ್ನಪ್ಪಿದ್ದರು. ಹಲವರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಸಂಜೆಯೇ ಸಿಎಂ ಸ್ಥಳಕ್ಕೆ ಭೇಟಿ ನೀಡಿ ಕಂಪೌಂಡ್ ಕುಸಿತಕ್ಕೆ ಕಾರಣವೇನೆಂದು ಕೇಳಿದ್ದಾರೆ.
ನ್ಯೂಯಾರ್ಕ್: ಇರಾನ್ ಜೊತೆಗೆ ಯುದ್ಧ ಮುಂದುವರಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ದೊಡ್ಡ ಸಂಕಷ್ಟ ಎದುರಾಗಿದೆ. ಇರಾನ್ ಜೊತೆಗಿನ ಯುದ್ಧಕ್ಕೆ ಅಮೆರಿಕಾ ಸದ್ಯಕ್ಕೆ ಕದನ ವಿರಾಮ ನೀಡಿದೆ. ಆದರೆ ಯುದ್ಧ ಸಂಪೂರ್ಣವಾಗಿ ನಿಂತಿಲ್ಲ. ಇರಾನ್ ಮೇಲೆ ನಿರ್ಬಂಧ, ಬೆದರಿಕೆ ತಂತ್ರ ಅನುಸರಿಸಿದರೂ ಟ್ರಂಪ್ ಹೇಳಿದಂತೆ ಬಗ್ಗಲು ಆ ದೇಶ ರೆಡಿ ಇಲ್ಲ. ಇದರ ನಡುವೆ ಅಮೆರಿಕಾ ಅಧ್ಯಕ್ಷರಿಗೆ ಹೊಸ ಕಾನೂನು ಕಂಟಕ ಎದುರಾಗಿದೆ. ಅಮೆರಿಕಾದ ಕಾನೂನಿನ ಪ್ರಕಾರ 60 ದಿನಗಳಿಗಿಂತ ಹೆಚ್ಚು ಒಂದು ರಾಷ್ಟ್ರದ ಜೊತೆ ಯುದ್ಧ ಮಾಡಬೇಕಾದರೆ ಸಂಸತ್ತಿನ ಅನುಮೋದನೆ ಪಡೆಯಬೇಕು.
ಅಹ್ಮದಾಬಾದ್: ಐಪಿಎಲ್ 2026 ರಲ್ಲಿ ಇಂದು ಆರ್ ಸಿಬಿ ಮತ್ತು ಗುಜರಾತ್ ಟೈಟನ್ಸ್ ಮುಖಾಮುಖಿಯಾಗಲಿದೆ. ಈ ಪಂದ್ಯ ಗೆದ್ದರೆ ಆರ್ ಸಿಬಿ ಅದೃಷ್ಟ ಖುಲಾಯಿಸಲಿದೆ. ಆರ್ ಸಿಬಿ ಇದುವರೆಗೆ ತವರಿನಲ್ಲಿ ಒಂದು ಮತ್ತು ಹೊರಗಿನ ತಾಣದಲ್ಲಿ ಒಂದು ಪಂದ್ಯ ಬಿಟ್ಟರೆ 8 ಪಂದ್ಯಗಳ ಪೈಕಿ 6 ರಲ್ಲಿ ಗೆಲುವು ಸಾಧಿಸಿದೆ. ಕಳೆದ ಎರಡು ಪಂದ್ಯಗಳಲ್ಲಿ ಸತತ ಎರಡು ಗೆಲುವು ಕಂಡಿದೆ. ಅದರಲ್ಲೂ ಕಳೆದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ನೀಡಿದ ಪ್ರದರ್ಶನ ಎದುರಾಳಿಗಳ ಎದೆ ನಡುಗಿಸಿರುವುದು ಖಚಿತ. ಇಂದು ಗುಜರಾತ್ ತಂಡವನ್ನು ಅಹ್ಮದಾಬಾದ್ ನಲ್ಲಿ ಎದುರಿಸಲಿದೆ. ಇದುವರೆಗೆ ಗುಜರಾತ್ ಸಾಧಾರಣ ಪ್ರದರ್ಶನ ನೀಡುತ್ತಾ ಬಂದಿದೆಯಷ್ಟೇ.
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಮಳೆ ಇಂದೂ ಮುಂದುವರಿಯುವ ಸೂಚನೆಯಿದೆ. ಇಂದು ಯಾವ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ಇಲ್ಲಿದೆ ಹವಾಮಾನ ವರದಿ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಲ್ಲಿ ಸಣ್ಣ ಮಟ್ಟಿಗೆ ಮಳೆಯಾಗಿತ್ತು. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಂತೂ ನಿನ್ನೆ ಭಾರೀ ಗುಡುಗು ಸಹಿತ ಮಳೆಯಾಗಿತ್ತು. ಇಂದೂ ಕೆಲವು ಜಿಲ್ಲೆಗಳಲ್ಲಿ ಮಳೆಯ ಸೂಚನೆಯಿದ್ದರೆ ಮತ್ತೆ ಕೆಲವು ಜಿಲ್ಲೆಗಳಲ್ಲಿ ಉರಿಬಿಸಿಲಿನ ವಾತಾವರಣ ಮುಂದುವರಿಯಲಿದೆ. ವಿಶೇಷವಾಗಿ ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಮೈಸೂರು, ಬೆಂಗಳೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ಹಾವೇರಿ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಸೂಚನೆಯಿದೆ.
ಗುರುವಾರ ಗುರುವಿಗೆ ಸಂಬಂಧಿಸಿದ ಸ್ತೋತ್ರವನ್ನು ಓದುವುದರಿಂದ ಜೀವನದಲ್ಲಿ ಸನ್ಮಾರ್ಗದಲ್ಲಿ ನಡೆಯಲು ಸಾಧ್ಯವಾಗುತ್ತದೆ. ಅದಕ್ಕಾಗಿ ಇಂದು ತಪ್ಪದೇ ಗುರು ಅಷ್ಟಕಂ ಸ್ತೋತ್ರವನ್ನು ಓದಿ.ಶರೀರಂ ಸುರೂಪಂ ತಥಾ ವಾ ಕಲತ್ರಂಯಶಶ್ಚಾರು ಚಿತ್ರಂ ಧನಂ ಮೇರು ತುಲ್ಯಮ್ ।ಮನಶ್ಚೇನ ಲಗ್ನಂ ಗುರೋರಂಘ್ರಿಪದ್ಮೇತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ ॥ 1 ॥ ಕಲತ್ರಂ ಧನಂ ಪುತ್ರ ಪೌತ್ರಾದಿಸರ್ವಂಗೃಹೋ ಬಾಂಧವಾಃ ಸರ್ವಮೇತದ್ಧಿ ಜಾತಮ್ ।ಮನಶ್ಚೇನ ಲಗ್ನಂ ಗುರೋರಂಘ್ರಿಪದ್ಮೇತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ ॥ 2 ॥
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಸಂಜೆ ಸುರಿದ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಂಪೌಂಡ್ ಕುಸಿದು 8 ಮಂದಿ ಸಾವನ್ನಪ್ಪಿದ್ದಾರೆ. ಇದ್ದಕ್ಕಿದ್ದಂತೆ ಇಂದು ಸಂಜೆ ಸುರಿದ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಬಳಿಯ ಕಂಪೌಂಡ್ ಕುಸಿದು ಬಿದ್ದಿದ್ದು 8 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಇಬ್ಬರು ಮಕ್ಕಳೂ ಸೇರಿದ್ದಾರೆ. ಮೃತರೆಲ್ಲರೂ ಪಕ್ಕದಲ್ಲೇ ಬೀದಿ ವ್ಯಾಪಾರಿ ಮಾಡುತ್ತಿದ್ದವರು ಎನ್ನಲಾಗಿದೆ. ಅವಶೇಷದಡಿ ಇನ್ನಷ್ಟು ಜನ ಸಿಲುಕಿರುವ ಶಂಕೆಯಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ. ಸಿಎಂ ಸಿದ್ದರಾಮಯ್ಯ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.
ತಮಿಳುನಾಡು ಚುನಾವಣೆ ಫಲಿತಾಂಶ ಈ ಬಾರಿ ತೀವ್ರ ಕುತೂಹಲ ಕೆರಳಿಸಿದೆ. ಹೊಸದಾಗಿ ಪಕ್ಷ ಸ್ಥಾಪಿಸಿ ಸ್ಪರ್ಧಿಸಿರುವ ದಳಪತಿ ವಿಜಯ್ ಅವರ ಟಿವಿಕೆ ಕಿಂಗ್ ಮೇಕರ್ ಆಗುವ ವಿಶ್ವಾಸದಲ್ಲಿದೆ. ಇಲ್ಲಿ ಡಿಎಂಕೆ, ಎಐಡಿಎಂಕೆ ಮತ್ತು ಟಿವಿಕೆ ನಡುವೆ ಹಣಾಹಣಿಯಿದೆ. ಬಿಜೆಪಿ ಇಲ್ಲಿ ಮಿತ್ರ ಪಕ್ಷ ಎಐಡಿಎಂಕೆ ಜೊತೆ ಸರ್ಕಾರ ರಚಿಸುವ ಸರ್ಕಸ್ ಮಾಡುತ್ತಿದೆಯಾದರೂ ಅದು ಅಷ್ಟು ಸುಲಭವಲ್ಲ. ಡಿಎಂಕೆ ನಾಯಕತ್ವದ ವರ್ಚಸ್ಸು ತಮಿಳುನಾಡಿನಲ್ಲಿ ಪಕ್ಷದ ಕೈ ಹಿಡಿಯಬಹುದು. ಆದರೆ ದಳಪತಿ ವಿಜಯ್ ತಮ್ಮ ಸಿನಿಮಾ ಜನಪ್ರಿಯತೆ ಜೊತೆಗೆ ಈ ಬಾರಿ ಸಾಕಷ್ಟು ರೋಡ್ ಶೋ, ಪಾದಯಾತ್ರೆಗಳ ಮೂಲಕ ಜನರ ಗಮನ ಸೆಳೆದಿದ್ದಾರೆ.
ಅಸ್ಸಾಂ ಈ ಬಾರಿ ಹೆಚ್ಚು ಕುತೂಹಲ ಕೆರಳಿಸಿದ ಕ್ಷೇತ್ರ. ಇಲ್ಲಿ ಆಡಳಿತಾರೂಢ ಬಿಜೆಪಿ ಮತ್ತೆ ಅಧಿಕಾರಕ್ಕೇರುವ ಸಾಧ್ಯತೆ ಹೆಚ್ಚಿದೆ. ಕಾಂಗ್ರೆಸ್ ಪ್ರಿಯಾಂಕ್ ಖರ್ಗೆ, ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರಚಾರ ನಡೆಸಿದರೂ ಇಲ್ಲಿ ಸಿಎಂ ಹಿಮಂತ ಬಿಸ್ವಾ ಶರ್ಮಾ ವರ್ಚಸ್ಸು ಬಿಜೆಪಿ ಕೈ ಹಿಡಿಯಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ. ಜೊತೆಗೆ ಅಲ್ಪಸಂಖ್ಯಾತರ ಮತಗಳು ಸ್ವಲ್ಪ ಪ್ರಮಾಣದಲ್ಲಿ ಎಐಯುಡಿಎಫ್ ಪಾಲಾಗುವ ಸಾಧ್ಯತೆಯಿದೆ. ಹಾಗಿದ್ದರೂ ಅತಂತ್ರ ಸ್ಥಿತಿ ಬಂದರೆ ಈ ಪಕ್ಷ ಕಿಂಗ್ ಮೇಕರ್ ಆದರೂ ಅಚ್ಚರಿಯಿಲ್ಲ.
ಪಶ್ಚಿಮ ಬಂಗಾಲ: ಈ ಬಾರಿ ಅತೀ ಹೆಚ್ಚು ಕುತೂಹಲದಿಂದ ದೇಶವೇ ಎದಿರು ನೋಡುತ್ತಿರುವ ಚುನಾವಣೆ ಎಂದರೆ ಪಶ್ಚಿಮ ಬಂಗಾಲದಲ್ಲಿ ಈ ಬಾರಿ ಬಿಜೆಪಿ ಅಧಿಕಾರ ಹಿಡಿಯುವ ಯತ್ನದಲ್ಲಿದೆ. ಒಂದು ವೇಳೆ ಬಿಜೆಪಿ ಇಲ್ಲಿ ಗೆದ್ದರೆ ಅದು ಐತಿಹಾಸಿಕ ಗೆಲುವಾಗಲಿದೆ. ಆದರೆ ಪಶ್ಚಿಮ ಬಂಗಾಲದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸೋಲಿಸುವುದು ಅಷ್ಟು ಸುಲಭವಲ್ಲ. ಆದರೆ ಈ ಬಾರಿ ಇಲ್ಲಿ ಮತಪಟ್ಟಿ ಪರಿಷ್ಕರಣೆ, ಸಿಆರ್ ಪಿಎಫ್ ಯೋಧರಿಂದ ಬಿಗಿ ಭದ್ರತೆ ನಡುವೆ ನಡೆದ ಚುನಾವಣೆ, ಮಮತಾ ಆಡಳಿತದಲ್ಲಿ ಹಿಂದೂಗಳ ಮೇಲೆ ನಡೆದಿದ್ದ ಹಿಂಸಾಚಾರಗಳು ಫಲಿತಾಂಶದ ಮೇಲೆ ಪರಿಣಾಮ ಬೀರಬಹುದು ಎನ್ನಲಾಗಿದೆ.
ದೇವರ ನಾಡು ಎಂದೇ ಖ್ಯಾತಿ ಪಡೆದಿರುವ ಕೇರಳದಲ್ಲಿ ಈ ಬಾರಿ ಆಡಳಿತಾರೂಢ ಎಲ್ ಡಿಎಫ್, ವಿಪಕ್ಷ ಯುಡಿಎಫ್ ಜೊತೆಗೆ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಕೂಡಾ ಟಫ್ ಫೈಟ್ ನೀಡಿದೆ. ಈ ಬಾರಿ ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಅಧಿಕಾರ ಸಿಗುವ ಸಾಧ್ಯತೆ ಬಹುತೇಕ ನಿಚ್ಚಳವಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲೂ ಎಲ್ ಡಿಎಫ್ ಗೆ ಭಾರೀ ಹಿನ್ನಡೆಯಾಗಿತ್ತು. ಕೇರಳದಿಂದ ಯುಡಿಎಫ್ ಹೆಚ್ಚು ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇನ್ನೊಂದೆಡೆ ತಿರುವನಂತಪುರಂ ಮತ್ತು ಕಾಸರಗೋಡಿನಲ್ಲಿ ಒಂದು ಕ್ಷೇತ್ರ ಬಿಜೆಪಿ ಪಾಲಾಗಬಹುದು ಎಂಬ ನಿರೀಕ್ಷೆಯಿದೆ.
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಮಳೆ ಅಬ್ಬರಿಸುತ್ತಿದೆ. ಇಂದು ಸಂಜೆ ರಾಜ್ಯ ರಾಜಧಾನಿ ಬೆಂಗಳೂರಿನ ಬಹುತೇಕ ಕಡೆ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಮುಂದಿನ ಎರಡು-ಮೂರು ದಿನಗಳಿಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಸೂಚಿಸಿದ್ದವು. ಅದರಂತೆ ಇಂದು ಸಂಜೆಯಿಂದ ಬೆಂಗಳೂರಿನಲ್ಲಿ ಭಾರೀ ಗುಡುಗು, ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ನಗರದ ಕೆಲವು ಭಾಗಗಳಲ್ಲಿ ಆಲಿಕಲ್ಲು ಸಹಿತ ಮಳೆಯಾದ ವರದಿಯಾಗಿದೆ. ಮೆಜೆಸ್ಟಿಕ್, ಕೋರಮಂಗಲ, ಶಾಂತಿನಗರ, ಕೆಆರ್ ಪುರಂ, ಹೆಬ್ಬಾಳ ಸೇರಿದಂತೆ ಬಹುತೇಕ ಕಡೆ ಬಿರುಗಾಳಿ ಸಹಿತ ಎಡೆಬಿಡದೇ ಮಳೆ ಸುರಿಯುತ್ತಿದೆ.
ವಿಜಯನಗರ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಳೆದ 5 ದಶಕಗಳಿಂದ ಬಡವರು, ರೈತರ, ಶೋಷಿತರು, ಪೀಡಿತರ ಪರವಾಗಿ ಹೋರಾಟ ಮಾಡಿದವರು. ಇದು ಇಂದಿನ ಯುವಪೀಳಿಗೆ ಮತ್ತು ಎಲ್ಲ ರಾಜಕಾರಣಿಗಳಿಗೆ ಮಾದರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಬಿಎಸ್ವೈ ಅಭಿಮಾನೋತ್ಸವದ ಮುಖೇನ ಮತ್ತೊಮ್ಮೆ ಆ ಹೋರಾಟದ ಕಿಚ್ಚು ರಾಜ್ಯದಲ್ಲಿ ಬರಬೇಕಿದೆ. ಪ್ರಾಮಾಣಿಕವಾಗಿ ಎಲ್ಲ ಸಮುದಾಯದ ಪರವಾಗಿ ಧ್ವನಿ ಎತ್ತುವ ಕೆಲಸ ಆಗಬೇಕಿದೆ ಎಂದು ನುಡಿದರು. ಅವರು ಒಂದು ಸಮುದಾಯದ ನಾಯಕರಲ್ಲ. ನಾಡಿನ ಎಲ್ಲ ಸಮುದಾಯದವರು ಅವರನ್ನು ತಮ್ಮ ನಾಯಕರೆಂದು ಗುರುತಿಸಿದ್ದಾರೆ ಎಂದು ಹೇಳಿದರು.
ಬೆಂಗಳೂರು: ಮೇ 15 ರೊಳಗೆ ಹೈಕಮಾಂಡ್ ಸಿಹಿ ಸುದ್ದಿ ನೀಡುತ್ತದೆ ಎಂದು ನಾಯಕತ್ವ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ನ ಕೆಲವು ಶಾಸಕರ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಗೆ ಕೇಳಿದಾಗ ಏನು ಮಾಡಿದ್ರು ಗೊತ್ತಾ? ಇಂದು ಮಾಧ್ಯಮಗಳೊಂದಿಗೆ ಮಾತನಾಡುವಾಗ ಡಿಕೆ ಶಿವಕುಮಾರ್ ಗೆ ಪತ್ರಕರ್ತರು ಮೇ 15 ರೊಳಗೆ ಸಿಹಿ ಸುದ್ದಿ ಸಿಗುತ್ತದೆ ಎಂದು ಕಾಂಗ್ರೆಸ್ ನ ಕೆಲವು ಶಾಸಕರು ಹೇಳಿದ್ದಾರೆ. ಇಕ್ಬಾಲ್ ಹುಸೇನ್ ಅವರು ಹೇಳಿದ್ದಾರೆ ಸಾರ್. ಇದು ನಿಜಾನಾ ಸಾರ್ ಎಂದು ಪ್ರಶ್ನೆ ಮಾಡಿದ್ದಾರೆ. ಆದರೆ ಇದಕ್ಕೆ ಪ್ರತಿಕ್ರಿಯಿಸದ ಡಿಕೆ ಶಿವಕುಮಾರ್ ಕೇಳಿಯೂ ಕೇಳಿಸದವರಂತೆ ಮುಂದೆ ನಡೆದಿದ್ದಾರೆ.
ಬೆಂಗಳೂರು: ನಗರದ ಚಾಮರಾಜಪೇಟೆಯ ರಸ್ತೆಗಳಲ್ಲಿ 150 ಗುಂಡಿ ಇದ್ದು, 140 ಗುಂಡಿ ಮುಚ್ಚಲು 1.40 ಕೋಟಿ ಖರ್ಚು ಮಾಡಿದ್ದಾರೆ. ಒಂದು ಗುಂಡಿ ಮುಚ್ಚಲು 1 ಲಕ್ಷ ಖರ್ಚು ಮಾಡಿದ್ದಾಗಿ ತೋರಿಸಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಗುಂಡಿ ಇಪ್ಪತ್ತಡಿ, 10 ಅಡಿ ಅಥವಾ 5 ಅಡಿ ಇರಬಹುದೇ? ಇವರಿಗೆ ನಾಚಿಕೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು. ಜನ ಕಣ್ಮುಚ್ಚಿ ಕುಳಿತಿದ್ದಾರೆಂದು ತಿಳಿದಿದ್ದೀರಾ? ನೀವು ಹಾಕುವುದು ತೇಪೆ ಕೆಲಸ ಎಂದು ಆಕ್ಷೇಪಿಸಿದರು.
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ದರ್ಶನ್ ಮತ್ತೊಮ್ಮೆ ಜಾಮೀನು ನೀಡುವಂತೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಟ ದರ್ಶನ್ ಸೇರಿದಂತೆ ಪ್ರಮುಖ ಆರೋಪಿಗಳು ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಪ್ರಕರಣ ಇನ್ನೂ ವಿಚಾರಣೆ ಹಂತದಲ್ಲಿದೆ. ಆದರೆ ವಿಚಾರಣೆ ಮಂದಗತಿಯಲ್ಲಿ ಸಾಗುತ್ತಿದೆ. ಈ ಕಾರಣಕ್ಕೆ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ಸುಪ್ರೀಂಕೋರ್ಟ್ ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಮೇ 4 ಕ್ಕೆ ನಿಗದಿಯಾಗಿದೆ.
ಕೋಲ್ಕತ್ತಾ: ಪಶ್ಚಿಮ ಬಂಗಾಲದಲ್ಲಿ ಇಂದು ಎರಡನೇ ಹಂತದ ಚುನಾವಣೆ ಪ್ರಕ್ರಿಯೆ ಜಾರಿಯಲ್ಲಿದ್ದು ಹಲವು ಕಡೆ ಮತಯಂತ್ರಗಳಲ್ಲಿ ಬಿಜೆಪಿ ಚಿಹ್ನೆಗೆ ಟೇಪ್ ಹಾಕಿ ಮತದಾರರಿಗೆ ಕಾಣದಂತೆ ಮಾಡಲಾಗಿದೆ ಎಂದು ಆರೋಪ ಬಂದಿದ್ದು ಈ ಸಂಬಂಧ ಮರು ಮತದಾನ ಮಾಡುವಂತೆ ಬಿಜೆಪಿ ಆಗ್ರಹಿಸಿದೆ. ಪಶ್ಚಿಮ ಬಂಗಾಲದ ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಫಾಲ್ಟಾ ವಿಧಾನಸಭೆ ಕ್ಷೇತ್ರದಲ್ಲಿ ಈ ರೀತಿ ಮತಯಂತ್ರಗಳಲ್ಲಿ ಬಿಜೆಪಿ ಚಿಹ್ನೆಯನ್ನು ಟೇಪ್ ಅಳವಡಿಸಿ ಮುಚ್ಚಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬಿಜೆಪಿ ವಿಡಿಯೋಗಳನ್ನು ಬಿಡುಗಡೆ ಮಾಡಿದೆ.
ನವದೆಹಲಿ: ಒಂದೆಡೆ ಪಶ್ಚಿಮ ಬಂಗಾಲದಲ್ಲಿ ಚುನಾವಣೆ ಕಾವೇರುತ್ತಿದ್ದರೆ ಇತ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿಕೋಬಾರ್ ದ್ವೀಪದಲ್ಲಿ ಚಿಲ್ ಮಾಡುತ್ತಿದ್ದಾರೆ. ಕೇರಳ ಬಳಿಕ ತಮಿಳುನಾಡಿನಲ್ಲಿ ಚುನಾವಣೆ ಪ್ರಚಾರ ನಡೆಸಿದ ರಾಹುಲ್ ಗಾಂಧಿ ಪಶ್ಚಿಮ ಬಂಗಾಲದ ಕಡೆಗೆ ಹೆಚ್ಚು ಗಮನ ಕೊಟ್ಟಿರಲಿಲ್ಲ. ಇದೀಗ ಚುನಾವಣೆ, ರಾಜಕೀಯದಿಂದ ಕೊಂಚ ಬಿಡುವು ಪಡೆದಿರುವ ರಾಹುಲ್ ಪ್ರವಾಸದಲ್ಲಿದ್ದಾರೆ. ನಿಕೋಬಾರ್ ದ್ವೀಪದ ಕಡಲ ಕಿನಾರೆ, ಮರ ಗಿಡಗಳ ನಡುವೆ ಕಾಲ ಕಳೆಯುತ್ತಿದ್ದಾರೆ. ಇಲ್ಲಿನ ಸುಂದರ ಕಡಲ ಕಿನಾರೆಗೆ ತೆರಳಿದ್ದ ರಾಹುಲ್ ಲೈಟ್ ಹೌಸ್ ಬಳಿ ಪೋಸ್ ನೀಡಿದ್ದಾರೆ.
ವಾರಣಾಸಿ: ಒಂದೆಡೆ ಪಶ್ಚಿಮ ಬಂಗಾಲದಲ್ಲಿ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದ್ದರೆ ಇತ್ತ ಪ್ರಧಾನಿ ಮೋದಿ ಇಂದು ಕಾಶಿ ವಿಶ್ವನಾಥನ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪಶ್ಚಿಮ ಬಂಗಾಲದಲ್ಲಿ ಈ ಬಾರಿ ಹೇಗಾದರೂ ಬಿಜೆಪಿ ಗೆಲ್ಲಬೇಕು ಎಂದು ಪಣ ತೊಟ್ಟಿರುವ ಪ್ರಧಾನಿ ಮೋದಿ ಸತತವಾಗಿ ಅಲ್ಲಿ ಸಮಾವೇಶ, ರೋಡ್ ಶೋಗಳನ್ನು ಮಾಡಿ ಬಿಜೆಪಿ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಕೊನೆಯ ಬಾರಿಗೆ ಪ್ರಚಾರ ಭಾಷಣ ಮಾಡುವಾಗ ಮುಂದೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬರುತ್ತೇನೆ ಎಂದು ಪ್ರತಿಜ್ಞೆ ಮಾಡಿ ತೆರಳಿದ್ದರು.
ಬೆಂಗಳೂರು: ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ರಿಲೀಸ್ ದಿನಾಂಕ ಮತ್ತೆ ಮುಂದೂಡಿಕೆಯಾಗಿದೆ. ಮುಂದೂಡಲು ಕಾರಣವೇನೆಂದು ರಾಕಿಂಗ್ ಸ್ಟಾರ್ ಯಶ್ ತಿಳಿಸಿದ್ದಾರೆ. ಎಲ್ಲಾ ಸರಿ ಹೋಗಿದ್ದ ಟಾಕ್ಸಿಕ್ ಸಿನಿಮಾ ಮಾರ್ಚ್ ನಲ್ಲೇ ಬಿಡುಗಡೆಯಾಗಬೇಕಿತ್ತು. ಆದರೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ವಾತಾವರಣವಿದ್ದಿದ್ದರಿಂದ ಅಲ್ಲಿ ಸಿನಿಮಾ ರಿಲೀಸ್ ಮಾಡಲು ಕಷ್ಟವಾಗುತ್ತದೆ ಎಂದು ಜೂನ್ 4 ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿತ್ತು. ಆದರೆ ಈಗಿನ ಮಾಹಿತಿ ಪ್ರಕಾರ ಜೂನ್ 4 ಕ್ಕೂ ಸಿನಿಮಾ ಬಿಡುಗಡೆಯಾಗುತ್ತಿಲ್ಲ. ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ಯಶ್ ಸೋಷಿಯಲ್ ಮೀಡಿಯಾ ಮೂಲಕ ಪ್ರಕಟಣೆ ನೀಡಿದ್ದಾರೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದ್ದು ಮತ್ತುಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,55,645.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,53,235.00 ರೂ.ಗಳಷ್ಟಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಯಾಕೋ ಇತ್ತೀಚೆಗೆ ಕರಾವಳಿಯಂತೆ ವಿಪರೀತ ಸೆಖೆ, ಬಿಸಿಲು ಕಂಡುಬರುತ್ತಿದೆ? ಇದಕ್ಕೆ ಹಲವು ಕಾರಣಗಳಿವೆ. ಅವುಗಳ ಬಗ್ಗೆ ಇಲ್ಲಿದೆ ವಿವರ. ಬೆಂಗಳೂರು ಒಂದು ಕಾಲದಲ್ಲಿ ಎಲ್ಲಾ ಕಾಲದಲ್ಲೂ ತಂಪು ವಾತಾವರಣ ಹೊಂದಿದ್ದ ಪ್ರದೇಶವಾಗಿತ್ತು. ಬೇಸಿಗೆಯಲ್ಲೂ ಅಷ್ಟೇನೂ ಸೆಖೆ, ಉರಿಬಿಸಿಲು ಕಂಡುಬರುತ್ತಿರಲಿಲ್ಲ. 2000 ರಲ್ಲಿ ಸರಾಸರಿ ಗರಿಷ್ಠ ತಾಪಮಾನ ದಾಖಲಾಗಿದ್ದು 35 ಡಿಗ್ರಿಯಷ್ಟು. ಆದರೆ ಇತ್ತೀಚೆಗಿನ ದಿನಗಳಲ್ಲಿ ಏಪ್ರಿಲ್ ಆರಂಭದಲ್ಲಿಯೇ ಬೆಂಗಳೂರಿನಲ್ಲಿ ಈ ಪ್ರಮಾಣದ ಗರಿಷ್ಠ ತಾಪಮಾನ ಕಂಡುಬರುತ್ತಿದೆ. ಮೇ ತಿಂಗಳಲ್ಲಿ 40 ಡಿಗ್ರಿ ಆಸುಪಾಸು ಕಂಡುಬರುತ್ತದೆ.
ಚಂಢೀಘಡ: ಐಪಿಎಲ್ 2026 ರಲ್ಲಿ ನಿನ್ನೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ನಡುವೆ ರಾಜಸ್ತಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಡ್ರೆಸ್ಸಿಂಗ್ ರೂಂನಲ್ಲಿ ಇ ಸಿಗರೇಟು ಸೇದಿ ಸಿಕ್ಕಿಬಿದ್ದಿದ್ದಾರೆ. ನಿನ್ನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮೊದಲು ಬ್ಯಾಟಿಂಗ್ ಮಾಡಿ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ರಾಜಸ್ತಾನ್ ರಾಯಲ್ಸ್ 19.2 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 228 ರನ್ ಗಳಿಸಿ 6 ವಿಕೆಟ್ ಗಳ ಗೆಲುವು ದಾಖಲಿಸಿತು. ಆದರೆ ಈ ಪಂದ್ಯದ ನಡುವೆ ರಾಜಸ್ತಾನ್ ನಾಯಕ ರಿಯಾನ್ ಪರಾಗ್ ವರ್ತನೆ ಎಲ್ಲರ ಟೀಕೆಗೆ ಗುರಿಯಾಗಿದೆ.