Shorts

ನವದೆಹಲಿ: ಪ್ರಯಾಣಿಕರ ದಟ್ಟಣೆಯ ನಿರೀಕ್ಷಿತ ಉಲ್ಬಣವನ್ನು ನಿರ್ವಹಿಸಲು ಮತ್ತು ಹೆಚ್ಚಿನ ಬೇಡಿಕೆಯ ಮಾರ್ಗಗಳಲ್ಲಿ ಸುಗಮ ಸಂಪರ್ಕವನ್ನು ಖಚಿತಪಡಿಸಿಕೊಳ್ಳಲು ಭಾರತೀಯ ರೈಲ್ವೇಯು ಬೇಸಿಗೆಯ ಗರಿಷ್ಠ ಪ್ರಯಾಣದ ಅವಧಿಯಲ್ಲಿ 18,262 ವಿಶೇಷ ರೈಲು ಟ್ರಿಪ್‌ಗಳನ್ನು ನಿರ್ವಹಿಸಲು ಸಿದ್ಧವಾಗಿದೆ ಎಂದು ರೈಲ್ವೆ ಸಚಿವಾಲಯ ಶುಕ್ರವಾರ ತಿಳಿಸಿದೆ.ಎಂಆರ್ ಅಶ್ವಿನಿ ವೈಷ್ಣವ್ ಅವರು ನವದೆಹಲಿಯಲ್ಲಿ ಬೇಸಿಗೆ ವಿಶೇಷ ರೈಲುಗಳ ಕಾರ್ಯಾಚರಣೆಯನ್ನು ಪರಿಶೀಲಿಸಿದ್ದಾರೆ, ಏಕೆಂದರೆ ಭಾರತೀಯ ರೈಲ್ವೇಯು ಗರಿಷ್ಠ ಬೇಸಿಗೆ ಪ್ರಯಾಣದ ಅವಧಿಯಲ್ಲಿ ಪ್ರಯಾಣಿಕರ ಚಲನೆಯನ್ನು ಸರಾಗಗೊಳಿಸುವ ಮತ್ತು ಹೆಚ್ಚಿನ ಬೇಡಿಕೆಯ ಮಾರ್ಗಗಳಲ್ಲಿ ಸಂಪರ್ಕವನ್ನು ಬಲಪಡಿಸಲು 18,262 ವಿಶೇಷ ರೈಲು ಪ್ರಯಾಣಗಳನ್ನು ಯೋಜಿಸಿದೆ ಎಂದು ರೈಲ್ವೇ ಸಚಿವಾಲಯವು ಎಕ್ಸ್‌ನಲ್ಲಿ ಬರೆದಿದೆ.

ಬೆಂಗಳೂರು: ಪದವಿ ಮುಗಿಸಿ ಕೆಲಸಕ್ಕಾಗಿ ಕಾಯುತ್ತಿರುವ ಯುವ ಸಮೂಹಕ್ಕೆ ಆರ್ಥಿಕ ಶಕ್ತಿ ನೀಡುವ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಯುವನಿಧಿ’ ಯೋಜನೆ ಯಶಸ್ವಿಯಾಗಿ ಮೂರು ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ 2025-26ನೇ ಸಾಲಿನಲ್ಲಿ ತೇರ್ಗಡೆಯಾದ ಹೊಸ ಪದವೀಧರರು ತಡಮಾಡದೆ ಯೋಜನೆಯಡಿ ನೋಂದಾಯಿಸಿಕೊಂಡು ಭತ್ಯೆ ಪಡೆಯುವಂತೆ ಶಾಸಕ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅವರು ಕರೆ ನೀಡಿದ್ದಾರೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ, ಕಾಂಗ್ರೆಸ್‌ ಪಕ್ಷವು ಸದಾ ಜನಪರ ಚಿಂತನೆಯುಳ್ಳದ್ದು ಎಂಬುದು ಪದೇ ಪದೆ ಸಾಬೀತಾಗುತ್ತಲೇ ಬಂದಿದೆ.

ಬೆಂಗಳೂರು: ಯಡಿಯೂರಪ್ಪನವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ. ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ ವ್ಯವಸ್ಥೆಗಳನ್ನು ಪ್ರಾರಂಭಿಸಲು ಭೂಮಿಪೂಜೆ ನಡೆಯಲಿದೆ ಎಂದರು.ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ" ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂಮಿಪೂಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ಆಹ್ವಾನಿಸಿದ್ದೇವೆ. ಅವರು, ಸಂಸದರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಚೆನ್ನೈ:ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಮಧ್ಯೆ ಚೆನ್ನೈ ಸೂಪರ್ ಕಿಂಗ್ಸ್‌ ಸ್ಟಾರ್ ಬೌಲರ್ ಮುಖೇಶ್ ಚೌಧರಿ ಅವರಿಗೆ ದೊಡ್ಡ ಆಘಾತ ಎದುರಾಗಿದೆ. ಅವರ ತಾಯಿ ಮಂಗಳವಾರ ನಿಧನರಾಗಿದ್ದಾರೆ.ಅನಾರೋಗ್ಯದ ಬಳಲುತ್ತಿದ್ದ ತಾಯಿ ಪ್ರೇಮ್ ದೇವಿ ಅವರು ಮುಂಬೈನ ಟಾಟಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಈ ಆವೃತ್ತಿಯಲ್ಲಿ ಈವರೆಗೆ ಮುಖೇಶ್ ಚೌಧರಿ ಒಂದೇ ಒಂದು ಪಂದ್ಯವನ್ನು ಆಡಿದ್ದು, ಗುರುವಾರ ಮುಂಬೈ ವಿರುದ್ಧದ ಪಂದ್ಯದ ಬಳಿಕ ತಂಡಕ್ಕೆ ಮರಳುವ ಸಾಧ್ಯತೆಯಿದೆ ಎನ್ನಲಾಗಿದೆ.ಶನಿವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಸಿಎಸ್‌ಕೆ ಪಂದ್ಯದ ನಂತರ ಮುಖೇಶ್ ಚೌಧರಿ ಅವರು ರಾಜಸ್ಥಾನದ ಭಿಲ್ವಾರಾದ ತಮ್ಮ ಊರಿಗೆ ತೆರಳಿದರು. ಬಳಿಕ ಅಣ್ಣ ಡಾ. ರಾಜೇಶ್ ಚೌಧರಿ ಅವರೊಂದಿಗೆ ಸೇರಿ ಬುಧವಾರ ತಾಯಿಯ ಅಂತ್ಯಕ್ರಿಯೆಯನ್ನು ನೆರವೇರಿಸಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿ: ಇಂಡಿಯನ್‌ ಪ್ರೀಮಿಯರ್‌ ಲೀಗ್ ಆಡುವ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಆನೆಬಲ ಬಂದಿದೆ. ವಿಶ್ವದ ಪ್ರಮುಖ ವೇಗದ ಬೌಲರ್‌ ಮಿಚೆಲ್‌ ಸ್ಟಾರ್ಕ್‌ ಡೆಲ್ಲಿ ತಂಡವನ್ನು ಸೇರಿಕೊಳ್ಳಲು ಸಜ್ಜಾಗಿದ್ದಾರೆ. ಸ್ಟಾರ್ಕ್ ಅವರು ಭುಜ ಮತ್ತು ಮೊಣಕೈ ಗಾಯದಿಂದಾಗಿ 2026ರ ಐಪಿಎಲ್ ಆವೃತಿಯ ಆರಂಭಿಕ ಕೆಲ ಪಂದ್ಯಗಳಿಗೆ ಅಲಭ್ಯರಾಗಿದ್ದರು. ಇದೀಗ ಮೇ 1ರ ವೇಳೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.ಆಸ್ಟ್ರೇಲಿಯಾದ ಪ್ರಮುಖ ಎಡಗೈ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಮಾರಕ ಇನ್‌ಸ್ವಿಂಗಿಂಗ್ ಯಾರ್ಕರ್‌ಗಳಿಗೆ ಹೆಸರುವಾಸಿ. ಟೆಸ್ಟ್ ಮತ್ತು ಏಕದಿನ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾದ ಅಗ್ರ ವಿಕೆಟ್ ಟೇಕರ್‌ಗಳಲ್ಲಿ ಒಬ್ಬರು. 2024ರ ಐಪಿಎಲ್‌ನಲ್ಲಿ ದಾಖಲೆ ಬೆಲೆಗೆ (₹24.75 ಕೋಟಿ) ಕೆಕೆಆರ್‌ ತಂಡಕ್ಕೆ ಸೇರಿದ್ದರು. ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದಲ್ಲಿದ್ದಾರೆ.

ಬೆಂಗಳೂರು: ಇಡೀ ವಿಶ್ವವೇ ನರೇಂದ್ರ ಮೋದಿಜೀ ಅವರ ನಾಯಕತ್ವವನ್ನು ಒಪ್ಪಿಕೊಳ್ಳುವ ಸಂದರ್ಭದಲ್ಲಿ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿಜೀ ಅವರನ್ನು ಭಯೋತ್ಪಾದಕರೆಂದು ಹೇಳಿದ್ದು ಬಿಜೆಪಿ ಮಾತ್ರವಲ್ಲದೇ ಇಡೀ ದೇಶ ಇದನ್ನು ಬಲವಾಗಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಉಗ್ರವಾದಿ ಎಂದು ಹೇಳಿದ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇಂದು ಏರ್ಪಡಿಸಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಖರ್ಗೆಯವರು ಮತ್ತು ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ತಿಳಿಸಿದರು.