ಅಹಮದಾಬಾದ್: ಭಾರತ ಹಾಗೂ ನೆದರ್ಲ್ಯಾಂಡ್ ತಂಡಗಳ ನಡುವೆ ಸಿ ಗುಂಪಿನ ಕೊನೆಯ ಲೀಗ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ತಂಡದ ಸ್ಫೋಟಕ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಅನಗತ್ಯ ದಾಖಲೆಯೊಂದನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ. ವಿಶ್ವನ ನಂಬರ್ ಒನ್ ಬ್ಯಾಟರ್ ಅಭಿಷೇಕ್ ಶರ್ಮಾ ಅವರು, ಟೂರ್ನಿಯಲ್ಲಿ ಲೀಗ್ ಹಂತದ 4 ಪಂದ್ಯಗಳ ಪೈಕಿ ಮೂರು ಪಂದ್ಯಗಳಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಸ್ಫೋಟಕ ಆಟಕ್ಕೆ ಹೆಸರುವಾಸಿಯಾಗಿರುವ ಅವರು, ಆಡಿರುವ ಮೂರು ಪಂದ್ಯಗಳಿಂದ ರನ್ ಖಾತೆಯನ್ನೇ ತೆರೆದಿಲ್ಲ. ಅಮೆರಿಕ ವಿರುದ್ಧ (0), ಪಾಕಿಸ್ತಾನ ವಿರುದ್ಧ (0) ಹಾಗೂ ಇಂದಿನ ಪಂದ್ಯದಲ್ಲಿ ನೆದರ್ಲ್ಯಾಂಡ್ ವಿರುದ್ಧವೂ ಖಾತೆ ತೆರೆಯದೆ ಪೆವಿಲಿಯನ್ ಸೇರಿಕೊಂಡಿದ್ದಾರೆ. ಇಂದಿನ ಪಂದ್ಯದಲ್ಲಿ ಶೂನ್ಯಕ್ಕೆ ಔಟ್ ಆಗುವ ಮೂಲಕ ಅಭಿಷೇಕ್ ಶರ್ಮಾ ಅವರು, ಟಿ20 ವಿಶ್ವಕಪ್ನಲ್ಲಿ ಸತತವಾಗಿ ಅತೀ ಹೆಚ್ಚು ಬಾರಿ ಶೂನ್ಯ ಸುತ್ತಿದ ಆರಂಭಿಕ ಬ್ಯಾಟರ್ ಎಂಬ ಅನಗತ್ಯ ದಾಖಲೆಗೆ ಒಳಗಾದರು ಹಾಗೂ ಈ ಅನಗತ್ಯ ದಾಖಲೆ ಮಾಡಿದ ವಿಶ್ವದ 4ನೇ ಆಟಗಾರ ಎನಿಸಿಕೊಂಡರು.
ಢಾಕಾ: ಬಾಂಗ್ಲಾದೇಶ ರಾಷ್ಟ್ರೀಯವಾದಿ ಪಕ್ಷವು(ಬಿಎನ್ಪಿ) ಅಧಿಕಾರಕ್ಕೆ ಬಂದು ಪಕ್ಷದ ಅಧ್ಯಕ್ಷ ತಾರಿಖ್ ರೆಹಮಾನ್ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದರು. ಹಸೀನಾ ಅವರು ದೇಶಬಿಟ್ಟ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ಸಂಸತ್ತಿನ 299 ಕ್ಷೇತ್ರಗಳ ಪೈಕಿ ಬಿಎನ್ಪಿ 212 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.ಫೆಬ್ರುವರಿ 12ರಂದು ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯೂ ದೇಶದ ರಾಜಕೀಯ ಚಿತ್ರಣವನ್ನೇ ಬದಲಿಸಿತು. ಈ ನಡುವೆ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂಸದರ ಪೈಕಿ ಏಕೈಕ ಹಿಂದೂ ನಿತಾಯಿ ರಾಯ್ ಚೌಧುರಿ. ಬಿಎನ್ಪಿಯ ಉಪಾಧ್ಯಕ್ಷರಾಗಿರುವ ಚೌಧರಿ, ಮಗುರಾ–2 ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.1949ರ ಜನವರಿ 7ರಂದು ಬಾಂಗ್ಲಾದ ಮಗುರಾ ಜಿಲ್ಲೆಯ ಹಟಬಾರಿಯಾ ಎಂಬ ಗ್ರಾಮದಲ್ಲಿ ಜನಿಸಿದ ಚೌಧುರಿ, ಅಲೋಕ್ಡಿಯಾ ಪುಖುರಿಯಾ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಮುಗಿಸಿದ್ದರು. ಬಳಿಕ, ಮಗುರಾದ ಸರ್ಕಾರಿ ಕಾಲೇಜಿನಲ್ಲಿ ಪದವಿ ಪಡೆದಿದ್ದರು.
ಕೊಲಂಬೊ: ಪಾಕಿಸ್ತಾನ ತಂಡವು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಎಂಟನೇ ತಂಡವಾಗಿ ಸೂಪರ್ ಎಂಟರ ಘಟ್ಟಕ್ಕೆ ಲಗ್ಗೆ ಹಾಕಿದೆ. ಬುಧವಾರ ನಡೆದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ನಮೀಬಿಯಾ ತಂಡವನ್ನು ಮಣಿಸಿ ಮುಂದಿನ ಸುತ್ತು ಪ್ರವೇಶಿಸಿದೆ.ಸಾಹಿಬ್ಝಾದ ಫರ್ಹಾನ್ ಅವರ ಶತಕ ಹಾಗೂ ಉಸ್ಮಾನ್ ತಾರಿಖ್ ಮತ್ತು ಶದಾಬ್ ಖಾನ್ ಅವರ ಸ್ಪಿನ್ ಮೋಡಿಯ ಸಹಾಯದಿಂದ ಪಾಕಿಸ್ತಾನ ತಂಡ, ನಮೀಬಿಯಾ ತಂಡವನ್ನು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ 102 ರನ್ಗಳಿಂದ ಮಣಿಸಿತು. ಸಲ್ಮಾನ್ ಅಲಿ ಆಘಾ ನಾಯಕತ್ವದ ಪಾಕ್ ತಂಡದ ಸೋಲನ್ನು ಬಯಸುತ್ತಿದ್ದ ಯುಎಸ್ಎ ತಂಡ ಅಧಿಕೃತವಾಗಿ ಚುಟುಕು ವಿಶ್ವಕಪ್ ಟೂರ್ನಿಯಿಂದ ಹೊರ ನಡೆಯಿತು. ನಮೀಬಿಯಾ ತಂಡ ಒಂದೂ ಗೆಲುವು ಕಾಣದೆ ಈ ಟೂರ್ನಿಯಲ್ಲಿನ ತನ್ನ ಅಭಿಯಾನವನ್ನು ಮುಗಿಸಿತು.
ಮುಂಬೈ: ಬಾಲಿವುಡ್ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ತಂದೆ, ಹಿಂದಿ ಸಿನಿಮಾ ದಂತಕಥೆ ಸಲೀಮ್ ಖಾನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.90 ವರ್ಷದ ಸಲೀಮ್ ಖಾನ್ ಅವರಿಗೆ ಮಂಗಳವಾರ ಸಣ್ಣ ಪ್ರಮಾಣದ ಮಿದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆಗೆ ಒಳಗಾಗಿದ್ದಾರೆ.ಪ್ರಸ್ತುತ ಸಲೀಂ ಖಾನ್ ಅವರಿಗೆ ಪ್ರಸ್ತುತ ವೆಂಟಿಲೇಟರ್ನಲ್ಲಿ ಚಿಕಿತ್ಸೆಗೊಳಪಡಿಸಲಾಗಿದೆ. ಅವರು ಮಿದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದು ತೀವ್ರ ನಿಗಾ ಘಟಕದಲ್ಲಿ ನಿಕಟ ವೀಕ್ಷಣೆಯಲ್ಲಿದ್ದಾರೆ.ಸಲೀಂ ಖಾನ್ ಅವರಿಗೆ ಸಣ್ಣ ಪ್ರಮಾಣದ ಮಿದುಳಿನ ರಕ್ತಸ್ರಾವವಿತ್ತು. ಬೆಳಿಗ್ಗೆ ಡಿಎಸ್ಎ ಎಂಬ ಶಸ್ತ್ರಚಿಕಿತ್ಸೆ ಮಾಡಲಾಯಿತು. ಅವರು ಇನ್ನೂ ವೆಂಟಿಲೇಟರ್ನಲ್ಲಿದ್ದಾರೆ.
ಅಹಮದಾಬಾದ್: ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಭಾರತ ಕ್ರಿಕೆಟ್ ತಂಡವು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಈಗಾಗಲೇ ಸೂಪರ್ ಎಂಟರ ಘಟ್ಟ ಪ್ರವೇಶಿಸಿದೆ. ಆದರೆ, ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಇದು ನೆದರ್ಲೆಂಡ್ಸ್ ತಂಡವನ್ನು ಎದುರಿಸಲಿದೆ.ಇಂದಿನ ಪಂದ್ಯಕ್ಕೆ ಹೆಚ್ಚಿನ ಮಹತ್ವವಿಲ್ಲ. ನೆದರ್ಲೆಂಡ್ಸ್ ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದೆ. ಭಾರತ ತಂಡವು ಈ ಪಂದ್ಯವನ್ನು ಗೆದ್ದು ಅಜೇಯವಾಗಿ ಸೂಪರ್ ಎಂಟರ ಘಟ್ಟ ಪ್ರವೇಶಿಸುವತ್ತ ಗಮನ ಹರಿಸಿದೆ.ಇಂದು ಟಾಸ್ ಗೆದ್ದ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ, ರನ್ ಮಳೆಯಾಗುವ ನಿರೀಕ್ಷೆಯಿದೆ. ಭಾರತದ ಆರಂಭಿಕ ಆಟಗಾರರಾದ ಇಶಾನ್ ಕಿಶನ್, ಅಭಿಷೇಕ್ ಶರ್ಮಾ ಮೇಲೆ ಹೆಚ್ಚಿನ ನಿರೀಕ್ಷೆಯಿದೆ.
ಇಂದೋರ್: 24 ವರ್ಷದ ಎಂಬಿಎ ವಿದ್ಯಾರ್ಥಿನಿ ಸೆಕ್ಸ್ಗೆ ಸಹಕರಿಸಲಿಲ್ಲವೆಂದು ಬಾಯ್ಫ್ರೆಂಡ್ ಆಕೆಯನ್ನು ಹತ್ಯೆ ಮಾಡಿದ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತು. ಇದೀಗ ಪ್ರಕರಣ ಸಂಬಂಧ ಆರೋಪಿ ಅರೆಸ್ಟ್ ಆಗಿದ್ದಾನೆ. ಈ ಸಂದರ್ಭದಲ್ಲಿ ಮಾಧ್ಯಮದವರು ಆತನನ್ನು ಪ್ರಶ್ನಿಸಿದಾಗ ಯಾವುದೇ ಪಾಪ ಪ್ರಜ್ಞೆಯಿಲ್ಲದೆ ಆತ ನಡೆದುಕೊಂಡಿದ್ದಾನೆ. ಕೊಲೆಯ ಹಿಂದಿನ ಅವನ ಉದ್ದೇಶದ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಆತ "ಏನೂ ಆಗಿಲ್ಲ, ಬಿಟ್ಟುಬಿಡಿ" ಎಂದು ಪ್ರಕರಣದ ಬಗ್ಗೆ ಯಾವುದೇ ಪಾಪಪ್ರಜ್ಞೆಯಿಲ್ಲದಂತ್ತೆ ನಡೆದುಕೊಂಡಿದ್ದಾನೆ. "ಮಾಡಿದ್ದು ಮುಗಿಯಿತು. ನನ್ನ ಉತ್ತರವನ್ನು ತಿಳಿದ ನಂತರ ನೀವು ಈಗ ಏನು ಮಾಡಬಹುದು?" ಇನ್ನೂ ಕೊಲೆ ಬಬಗ್ಗೆ
ರಾಜ್ಯ ರಾಜಧಾನಿಯಲ್ಲಿ ಚಳಿಯ ತೀವ್ರತೆ ಕಡಿಮೆಯಾಗುತ್ತಿದ್ದ ಹಾಗೇ ಬಿಸಿಲ ಬೇಗೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇದೆ. ಇನ್ನೂ ಇಂತಹ ಸಮಯದಲ್ಲಿ ನಮ್ಮ ದೇಹವನ್ನು ಆರೋಗ್ಯದಲ್ಲಿಡಲು ಆದಷ್ಟು ಮುತುವರ್ಜಿ ವಹಿಸಬೇಕು. ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಇಲ್ಲಿವೆ ಕೆಲವು ಉಪಯುಕ್ತ ಸಲಹೆಗಳು ಇಲ್ಲಿದೆ. ಹೈಡ್ರೇಶನ್ (ನೀರಿನಾಂಶ) ಅತಿ ಮುಖ್ಯಬಿಸಿಲಿನಲ್ಲಿ ದೇಹದ ನೀರಿನಾಂಶ ಬೇಗನೆ ಕಡಿಮೆಯಾಗುತ್ತದೆ . ಇದನ್ನು ತಡೆಗಟ್ಟಲು: ಹೆಚ್ಚು ನೀರು ಕುಡಿಯಿರಿ: ಬಾಯಾರಿಕೆ ಆಗದಿದ್ದರೂ ದಿನವಿಡೀ ಅಲ್ಪ ಪ್ರಮಾಣದಲ್ಲಿ ನೀರು ಕುಡಿಯುತ್ತಿರಿ.
ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಗೊಂಡ ದಕ್ಷಿಣ ಆಫ್ರಿಕಾದ ಚೀತಾ ಗಾಮಿನಿ ಮೂರು ಮರಿಗಳಿಗೆ ಜನ್ಮ ನೀಡಿದ್ದು, ಭಾರತದ ಚಿರತೆಯ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಕುನೋ ರಾಷ್ಟ್ರೀಯ ಉದ್ಯಾನವನದ ಹುಲ್ಲುಗಾವಲುಗಳಲ್ಲಿ, ಮೃದುವಾದ ಆರಂಭವು ಪ್ರಬಲ ಸಂದೇಶವನ್ನು ನೀಡಿದೆ. ದಕ್ಷಿಣ ಆಫ್ರಿಕಾದ ಚೀತಾ "ಗಾಮಿನಿ" ಈಗ ಎರಡನೇ ಬಾರಿಗೆ ತಾಯಿಯಾಗಿದೆ. ಮರುಪರಿಚಯ ಕಾರ್ಯಕ್ರಮದ ಅಡಿಯಲ್ಲಿ ಭಾರತದಲ್ಲಿ ಜನಿಸಿದ ಒಂಬತ್ತನೇ ಯಶಸ್ವಿ ಚೀತಾ ಇದಾಗಿದೆ. ತಾಯಿ ಚೀತಾ
ರೋಹ್ಟಕ್: ಜಜ್ಜರ್ ಜಿಲ್ಲೆಯ ಬಹದ್ದೂರ್ಘರ್ ಬಳಿ 27 ವರ್ಷದ ಬ್ಯಾಂಕ್ ಉದ್ಯೋಗಿಯೊಬ್ಬಳ ಕೊಲೆ ಪ್ರಕರಣವನ್ನು 18 ಗಂಟೆಗಳಲ್ಲಿ ಭೇದಿಸಲಾಗಿದ್ದು, ಪೊಲೀಸರು ಪ್ರಮುಖ ಆರೋಪಿ ಹಿಸಾರ್ನ ಚಾರ್ಟರ್ಡ್ ಅಕೌಂಟೆಂಟ್ ಪತಿಯನ್ನು ಬಂಧಿಸಿದ್ದಾರೆ. ಆರೋಪಿಯು ತನ್ನ ಪತ್ನಿಯ ಬಗ್ಗೆ ಪದೇ ಪದೇ ಅನುಮಾನಗೊಂಡು ಕೊಂದು ನಂತರ ಅದನ್ನು ದರೋಡೆ-ಕೊಲೆ ಎಂದು ನಂಬಿಸಲು ಯತ್ನಿಸಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಸಂತ್ರಸ್ತೆ, ಮಹಾಕ್, ಗುರ್ಗಾಂವ್ನ ಎಚ್ಡಿಎಫ್ಸಿ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದರು. ಅವರು ಚಾರ್ಟರ್ಡ್ ಅಕೌಂಟೆಂಟ್ ಮತ್ತು ಹಿಸಾರ್ ಸೆಕ್ಟರ್ 14 ರ ನಿವಾಸಿ ಅನ್ಶುಲ್ ಧವನ್ ಅವರನ್ನು ಸೆಪ್ಟೆಂಬರ್ 25, 2025 ರಂದು ಮದುವೆಯಾದರು.
ಬೆಂಗಳೂರು: ಇಲ್ಲಿನ ತಮ್ಮ ಅಪಾರ್ಟ್ಮೆಂಟ್ನಲ್ಲಿ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಆರೋಪದ ಮೇಲೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ದ 65 ವರ್ಷದ ನಿವೃತ್ತ ಉದ್ಯೋಗಿಯನ್ನು ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.ನಾಗೇಶ್ವರ್ ರಾವ್ ಎಂದು ಗುರುತಿಸಲಾದ ಆರೋಪಿಯು ಬೊಮ್ಮೇಹಳ್ಳಿ ಪ್ರದೇಶದಲ್ಲಿನ ಅವರ ನಿವಾಸದಲ್ಲಿ ಟವೆಲ್ ಬಳಸಿ ಪತ್ನಿ ಸಂದ್ಯಾ ಶ್ರೀ ಅವರ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ರಾವ್ ಅವರನ್ನು ಸ್ಥಳದಿಂದ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ರಶ್ಮಿಕಾ ಮಂದಣ್ಣ ಅವರು ಮದುವೆಗೆ ಆಹ್ವಾನಿಸಿದ್ದರೆ ಹೋಗುತ್ತಿದೆ. ಅವರು ನಮಗೆ ಆಹ್ವಾನ ನೀಡಲ್ಲ ಎಂಬ ವಿಚಾರ ಎಲ್ಲರಿಗೂ ಗೊತ್ತಿರುವುದು. ನನಗೆ ಆಹ್ವಾನ ಬಂದಿಲ್ಲ, ಬಂದಿದ್ರೆ ಹೋಗುತ್ತಿದ್ದೆ ಎಂದು ನಟ ಪ್ರಮೋದ್ ಶೆಟ್ಟಿ ನಗುತ್ತಲೇ ಪ್ರತಿಕ್ರಿಯಿಸಿದರು. ದಾವಣಗೆರೆಯಲ್ಲಿ ಮಾಧ್ಯಮದವರು ರಶ್ಮಿಕಾ ಮದುವೆಗೆ ಆಹ್ವಾನ ಸಿಕ್ಕಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರು ಆಹ್ವಾನ ನೀಡಿಲ್ಲ, ಇಲ್ಲದಿದ್ರೆ ಹೋಗುತ್ತಿದ್ದೆ ಎಂದು ನಗುತ್ತಲೇ ಪ್ರತಿಕ್ರಿಯಿಸಿದರು. ಇನ್ನೂ ರಕ್ಷಿತಾ ಶೆಟ್ಟಿ ಅವರು ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರು ಕಥೆಯಲ್ಲಿ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ವಿಧಾನಸೌಧದ ಒಳಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದು, ಇದು ಪ್ರಜಾಪ್ರಭುತ್ವ ಮತ್ತು ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಅವರು ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಭಾಷಣ ಮಾಡುವಾಗ ಪತ್ರಿಕಾ ರಂಗ ಸಂವಿಧಾನದ ನಾಲ್ಕನೇ ಅಂಗ ಎನ್ನುತ್ತೇವೆ. ಇದನ್ನು ನೋಡಿದರೆ ತುರ್ತು ಪರಿಸ್ಥಿತಿ ಜ್ಞಾಪಕ ಬರುತ್ತಿದೆ. ಅವತ್ತು ಮಾಧ್ಯಮಗಳಿಗೆ ಕಡಿವಾಣ ಹಾಕಿದ್ದರು ಎಂದು ಗಮನ ಸೆಳೆದರು. ನಿಮ್ಮ ಭದ್ರತಾ ಲೋಪ ಸರಿ ಮಾಡಿಕೊಳ್ಳಿ ಎಂದ ಅವರು, ಸರಕಾರವು ಸುತ್ತೋಲೆಯನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.
ಬೆಂಗಳೂರು: ಕಸ ವಿಲೇವಾರಿ ವಿಚಾರದಲ್ಲಿ ಸರ್ಕಾರದ ವಿರುದ್ಧ ಆರೋಪ ಮಾಡಿರುವ ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ಬಿವೈ ವಿಜಯೇಂದ್ರಗೆ ಮನೆ ಮುಂದೆನೇ ಕಸ ಹಾಕಿಸ್ತೀನಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾರ್ನಿಂಗ್ ಕೊಟ್ಟಿದ್ದಾರೆ. ಬೆಂಗಳೂರಿನ ಕಸವನ್ನು ನಿಯಮ ಬಾಹಿರವಾಗಿ ದೊಡ್ಡಬಳ್ಳಾಪುರಕ್ಕೆ ಸಾಗಿಸಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮಗಳು ಡಿಸಿಎಂ ಡಿಕೆ ಶಿವಕುಮಾರ್ ಗಮನ ಸೆಳೆದಿವೆ. ಇದಕ್ಕೆ ಉತ್ತರಿಸಿದ ಡಿಕೆಶಿ ವಿಪಕ್ಷ ನಾಯಕರಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಎಲ್ಲಾ ಶಾಸಕರೂ ಬ್ಲ್ಯಾಕ್ ಮೇಲ್ ಮಾಡ್ತಿದ್ದಾರೆ. ತಮ್ಮ ಕ್ಷೇತ್ರಕ್ಕೆ ಅನುದಾನ ಬೇಕು ಎಂದು ಆಕ್ಸಿಡೆಂಟ್ ವಿಚಾರ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ.
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ವಿಧಾನಸೌಧದ ಒಳಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದು, ಇದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ರಾಜ್ಯದ ಕಾಂಗ್ರೆಸ್ಸಿನದು ನಾಲಾಯಕ್ ಸರಕಾರ ಎಂದು ಜನರು ಮಾತನಾಡುತ್ತಿದ್ದಾರೆ. ಇದಕ್ಕೆ ಪುಷ್ಟಿ ಕೊಡುವಂತೆ ಮತ್ತೊಂದು ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಆಕ್ಷೇಪಿಸಿದರು. ಇದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಟೀಕಿಸಿದರು. ಇಂಥ ತೀರ್ಮಾನಗಳನ್ನು ಯಾಕೆ ತೆಗೆದುಕೊಳ್ಳುತ್ತಾರೆಂದು ನನಗಂತೂ ಅರ್ಥ ಆಗುತ್ತಿಲ್ಲ. ಕಳೆದ ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲಿ ದ್ವೇಷ ಭಾಷಣ ಸಂಬಂಧ ಕಾಯ್ದೆ ತಂದಿದ್ದರು.
ಬೆಂಗಳೂರು: ಕಸವನ್ನು ಎಲ್ಲಾದರೂ ಒಂದು ಕಡೆ ಹಾಕಲೇ ಬೇಕಾಗುತ್ತದೆ.ಅಲ್ಲೂ ಬೇಡ ಇಲ್ಲೂ ಬೇಡ ಅಂದ್ರೆ, ಆ ಕಸವನ್ನು ಅಶೋಕ್, ವಿಜಯೇಂದ್ರ ಅಥವಾ ಬಿಜೆಪಿ ಕಚೇರಿಗೆ ಹೋಗಬೇಕಾ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ಹೊರಹಾಕಿದರು. ಎಲ್ಲಾ ಶಾಸಕರು ಅನುದಾನ ಬೇಕೆಂದು ಆಕ್ಸಿಡೆಂಟ್ ವಿಚಾರವನ್ನು ಮುಂದಿಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಗೌರವದಿಂದ ನಡೆದುಕೊಂಡರೆ ಒಳಿತು, ಇಲ್ಲದಿದ್ದರೆ ಎಸ್ಮಾ (ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ) ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕಾಗುತ್ತೆ. ಅಶೋಕ್, ವಿಜಯೇಂದ್ರ ಮನೆ ಮುಂದೆನೇ ಕಸ ಹಾಕಿಸಬೇಕಾಗುತ್ತೆ ಅಂತ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದರು.
ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಗೆ ನಡೆಯುತ್ತಿರುವ ರಾಜಕೀಯ ಜಗಳದ ನಡುವೆಯೇ ರಾಜ್ಯದಲ್ಲಿ ಆಡಳಿತ ಹಿನ್ನಡೆಯಾಗಿದೆ ಎಂದು ಜನತಾದಳ (ಜಾತ್ಯತೀತ) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಕರ್ನಾಟಕದ ಜನತೆಗೆ ಉತ್ತಮ ಆಡಳಿತ ಬೇಕು, ಆದರೆ ಆಡಳಿತದಲ್ಲಿ ಹಿನ್ನಡೆಯಾಗಿದೆ ಎಂದು ಒತ್ತಿ ಹೇಳಿದರು. "ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಈ ಮೈತ್ರಿಯನ್ನು ರಚಿಸಲಾಗಿದೆ, ಮತ್ತು ನಾವು ಯಾವುದೇ ಸಮಯದಲ್ಲಿ ಅದರಿಂದ ಹಿಂದೆ ಸರಿಯುವುದಿಲ್ಲ ಎಂದು ನಾವು ಖಚಿತವಾಗಿ ಹೇಳುತ್ತೇವೆ. 2028 ರಲ್ಲಿ ಎನ್ಡಿಎ ಸರ್ಕಾರ ರಚಿಸುತ್ತದೆ ಮತ್ತು ನಾವು 140 ರಿಂದ 150 ಸ್ಥಾನಗಳನ್ನು ಗೆಲ್ಲುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದರು.
ಅಮೃತಸರ: ಪಾನಿಪೂರಿ ಸ್ಟಾಲ್ ಒಂದರಲ್ಲಿ ಪಾನಿಯೊಳಗಿನಿಂದ ಹಾರಿ ಹೋದ ಈ ಜೀವಿಯನ್ನು ನೋಡಿದರೆ ನೀವು ಇನ್ನು ಜೀವನದಲ್ಲಿ ಗೋಲ್ ಗಪ್ಪಾ ಸೇವಿಸಲು ಭಯಪಡ್ತೀರಿ. ಈ ವೈರಲ್ ವಿಡಿಯೋ ನೋಡಿ. ಅಮೃತಸರದ ಪಾನಿಪೂರಿ ಸ್ಟಾಲ್ ನಲ್ಲಿ ಈ ಘಟನೆ ನಡೆದಿದೆ. ಪಾನಿಪೂರಿ ಸೇವಿಸಲು ಹೋದ ವ್ಯಕ್ತಿಯೊಬ್ಬರು ಈ ವಿಡಿಯೋವನ್ನು ಮಾಡಿದ್ದಾರೆ. ಪಾನಿಪೂರಿಗೆ ಬಳಸುತ್ತಿದ್ದ ಪಾನಿಯಲ್ಲಿ ಜೀವಂತ ಇಲಿಯೊಂದು ಸೇರಿಕೊಂಡಿತ್ತು. ಪಾನಿಪೂರಿ ತಿನ್ನಲೆಂದು ಹೋದವರಿಗೆ ಪಾನಿಯೊಳಗಿದ್ದ ಜೀವಂತ ಇಲಿಯನ್ನು ನೋಡಿ ಗಾಬರಿಯಾಗಿತ್ತು. ಇದಕ್ಕಿಂತ ದೊಡ್ಡ ಶಾಕಿಂಗ್ ವಿಚಾರವೆಂದರೆ ಆ ಇಲಿಯನ್ನು ಥಟ್ಟನೆ ಹೊರಗೆ ಹಾಕಿದ ಅಂಗಡಿಯಾತ ಅದೇ ಪಾನಿಯನ್ನು ಚೆನ್ನಾಗಿ ಕಲಸಿ ಮತ್ತೆ ಗ್ರಾಹಕರಿಗೆ ನೀಡುತ್ತಿದ್ದ!
ಜೈಪುರ: ರಾಜಸ್ಥಾನದಲ್ಲಿ ಚಲಿಸುತ್ತಿದ್ದ ಟ್ರಕ್ ಮೇಲೆ ಕೂತಿದ್ದ ವ್ಯಕ್ತಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿದ ಭಯಾನಕ ವಿಡಿಯೋವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬೃಹತ್ ಗಾತ್ರದ ಸರಕು ಟ್ರಕ್ ಗಳ ಮೇಲೆ ಹಾಯಾಗಿ ಮಲಗಿಕೊಂಡು ಅಥವಾ ಕುಳಿತುಕೊಂಡು ಸಂಚಾರ ಮಾಡುವವರನ್ನು ನಾವು ಅನೇಕ ಬಾರಿ ನೋಡುತ್ತೇವೆ. ಆದರೆ ಇದು ಎಷ್ಟು ಅಪಾಯಕಾರಿ ಎನ್ನುವುದಕ್ಕೆ ಈ ವಿಡಿಯೋವೇ ಸಾಕ್ಷಿಯಾಗಿದೆ. ರಾಜಸ್ಥಾನದ ಬಿಲ್ವಾರಾದಲ್ಲಿ ಘಟನೆ ನಡೆದಿದೆ. ಬೃಹತ್ ಸರಕು ಸಾಗಣೆ ಟ್ರಕ್ ನ ಮೇಲ್ಛಾವಣಿಯಲ್ಲಿ ಓರ್ವ ವ್ಯಕ್ತಿ ಕೂತಿದ್ದ. ಟ್ರಕ್ ಚಲಿಸುತ್ತಿದ್ದ ಮಾರ್ಗದಲ್ಲಿ ಹೈಟೆನ್ಷನ್ ವಿದ್ಯುತ್ ವೈರ್ ಇತ್ತು. ಮೇಲೆ ಕೂತಿದ್ದ ವ್ಯಕ್ತಿಗೆ ಈ ತಂತಿ ತಗುಲಿದೆ.
ನವದೆಹಲಿ: ಹ್ಯಾಟ್ರಿಕ್ ಗೆಲುವು ಸಾಧಿಸಿದ ಭಾರತ ತಂಡವು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಈಗಾಗಲೇ ಸೂಪರ್ ಎಂಟರ ಹಂತಕ್ಕೆ ಮುನ್ನಡೆದಿದೆ. ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಇಂದು ನೆದರ್ಲೆಂಡ್ಸ್ ತಂಡವನ್ನು ಎದುರಿಸಲಿದೆ. ಸೂಪರ್ ಎಂಟರ ಹಂತದ ಚಿತ್ರಣ ಈಗಾಗಲೇ ಗೊತ್ತಾಗಿದೆ. ಮೊದಲ ಗುಂಪಿನಲ್ಲಿ ಭಾರತ, ಜಿಂಬಾಬ್ವೆ, ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ಸ್ಥಾನ ಪಡೆದಿವೆ.ಮಂಗಳವಾರ ಜಿಂಬಾಬ್ವೆ ಮತ್ತು ಐರ್ಲೆಂಡ್ ನಡುವಿನ 32ನೇ ಪಂದ್ಯ ಮಳೆಯಿಂದ ರದ್ದಾದ ಬಳಿಕ ಜಿಂಬಾಬ್ವೆ ತಂಡವು ಸೂಪರ್ ಎಂಟಕ್ಕೆ ಅರ್ಹತೆ ಪಡೆದಿದೆ. ಇದರೊಂದಿಗೆ ಆಸ್ಟ್ರೇಲಿಯಾ ತಂಡವು ಟಿ20 ವಿಶ್ವಕಪ್ ಪಂದ್ಯಾವಳಿಯಿಂದಲೇ ಹೊರಬಿದ್ದಿದೆ.
ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಸರ್ಕಾರದ ಆದೇಶದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದು ಇದು ಭ್ರಷ್ಟಾಚಾರ ಮುಚ್ಚಿಟ್ಟುಕೊಳ್ಳಲು ಹೊಸ ನಾಟಕ ಎಂದಿದ್ದಾರೆ. ವಿಧಾನಸೌಧದೊಳಗೆ ಮಾಧ್ಯಮಗಳು ಇನ್ನು ಮುಂದೆ ಎಲ್ಲಿ ಬೇಕಾದರೂ ಪ್ರವೇಶಿಸುವಂತಿಲ್ಲ. ನಿಗದಿತ ಸ್ಥಳದಲ್ಲಿ ಮಾತ್ರ ಶಾಸಕರು, ಸಚಿವರ ಸಂದರ್ಶನ, ಪ್ರತಿಕ್ರಿಯೆಗಳನ್ನು ಪಡೆಯಬಹುದಾಗಿದೆ ಎಂದು ಸರ್ಕಾರ ವಿವಾದಿತ ಆದೇಶ ಹೊರಡಿಸಿದೆ. ಇದರ ವಿರುದ್ಧ ಎಲ್ಲಾ ಮಾಧ್ಯಮಗಳೂ ಸಿಡಿದೆದ್ದಿವೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಆರ್ ಅಶೋಕ್ ‘ತನ್ನ ವೈಫಲ್ಯಗಳನ್ನ, ಯಡವಟ್ಟುಗಳನ್ನ, ಭ್ರಷ್ಟಾಚಾರವನ್ನ ಮುಚ್ಚಿಟ್ಟುಕೊಳ್ಳುವ ಸಲುವಾಗಿ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲು ಹೊರಟಿರುವ ಕಾಂಗ್ರೆಸ್ ಸರ್ಕಾರ ತನ್ನ ಪ್ರಜಾಪ್ರಭುತ್ವ ವಿರೋಧಿ, ಸರ್ವಾಧಿಕಾರಿ ಧೋರಣೆಯನ್ನು ಮತ್ತೊಮ್ಮೆ ಪ್ರದರ್ಶನ ಮಾಡಿದೆ.
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರು ವಿಚಾರಣೆ ವೇಳೆ ಫುಲ್ ಸೈಲೆಂಟ್ ಆಗಿದ್ದಾರೆಂಬ ಮಾಹಿತಿಯಿದೆ. ಕೊಲೆ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಭೈರತಿ . ವಿಚಾರಣೆ ವೇಳೆ ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಬೈರತಿ ಫುಲ್ ಸೈಲೆಂಟ್ ಆಗಿರುವುದು ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಇಲ್ಲಿವರೆಗೂ ಇಪ್ಪತ್ತು ಜನ ಆರೋಪಿಗಳು ಬಂಧನವಾಗಿದ್ದಾರೆ. ತನಿಖೆ ವೇಳೆ ಸಿಐಡಿ ಪೊಲೀಸರು
ಮುಖದಲ್ಲಿ ಮೊಡವೆ ಬಂದರೆ ಮುಖವೇ ಅಸಹ್ಯವಾಗಿ ಕಾಣುತ್ತದೆ ಎಂಬ ಚಿಂತೆ ಕಾಡುತ್ತದೆ. ಮುಖದಲ್ಲಿ ಮೊಡವೆ ಕಾಣಬಾರದು ಎಂದರೆ ಇಂಥಾ ಆಹಾರ ಸೇವಿಸಬೇಡಿ. ಬಿಳಿ ಆಹಾರ ವಸ್ತುಗಳುವಿಶೇಷವಾಗಿ ಸಂಸ್ಕರಿತ ಬಿಳಿ ಆಹಾರ ವಸ್ತುಗಳಾದ ಸಕ್ಕರೆ, ಬ್ರೆಡ್, ಕೇಕ್ ಪಾಸ್ತಾದಂತಹ ಆಹಾರ ಸೇವಿಸಬೇಡಿ. ಇದರಿಂದ ರಕ್ತದಲ್ಲಿ ಸಕ್ಕರೆ ಅಂಶ ಇದ್ದಕ್ಕಿದ್ದಂತೆ ಏರಿಕೆಯಾಗುತ್ತದೆ. ಸಹಜವಾಗಿಯೇ ಇನ್ಸುಲಿನ್ ಅಧಿಕ ಉತ್ಪತ್ತಿಯಾಗುತ್ತದೆ. ಇದರಿಂದ ಆಯಿಲ್ ಗ್ರಂಥಿಗಳು ಹೆಚ್ಚು ಜಿಡ್ಡು ಬಿಡುಗಡೆ ಮಾಡುತ್ತವೆ. ಸಹಜವಾಗಿಯೇ ಇದರಿಂದ ಮೊಡವೆ ಹೆಚ್ಚಾಗುತ್ತದೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ನಿನ್ನೆ ವಾರದ ಆರಂಭದಲ್ಲೇ ಅಡಿಕೆ ಬೆಲೆ ಕೊಂಚ ಏರಿಕೆಯಾಗಿತ್ತು. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಕೆಯಾಗಿತ್ತು. ಇದು ಬೆಳೆಗಾರರಿಗೆ ಸಮಾಧಾನ ತಂದಿತ್ತು. ಮತ್ತೆ ಅಡಿಕೆ ಬೆಲೆಯಲ್ಲಿ ಚೇತರಿಕೆ ಕಂಡುಬರುತ್ತಿದೆ. ಆದರೆ ಇಂದು ಯಥಾ ಸ್ಥಿತಿಯಲ್ಲಿದೆ. ಇಂದು ಹೊಸ ಅಡಿಕೆ ಬೆಲೆ 485 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 550 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 550 ರೂ.ಗಳಷ್ಟಾಗಿದೆ.
ಬೆಂಗಳೂರು: ಮೊದಲ ಮಗಳು ಗೌರಿ ಜೊತೆ ತಮ್ಮ ಸಂಬಂಧ ಹೇಗಿದೆ ಎಂಬುದನ್ನು ನಿರ್ದೇಶಕ ಎಸ್ ಮಹೇಂದರ್ ಯೂಟ್ಯೂಬ್ ಸಂದರ್ಶನದಲ್ಲಿ ಬಿಚ್ಚಿಟ್ಟಿದ್ದಾರೆ. ಬಿಯೋಂಡ್ ಲಿಮಿಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಖ್ಯಾತ ಸಿನಿ ಪತ್ರಕರ್ತ ಗಣೇಶ್ ಕಾಸರಗೋಡು ಅವರ ಜೊತೆಗಿನ ಸಂದರ್ಶನದಲ್ಲಿ ಎಸ್ ಮಹೇಂದರ್ ತಮ್ಮ ಮೊದಲ ಮಗಳು ಮತ್ತು ಈಗಿನ ಪತ್ನಿ ಜೊತೆಗಿನ ಸಂಬಂಧದ ಬಗ್ಗೆ ಮನದಾಳದ ಮಾತನಾಡಿದ್ದಾರೆ. ‘ನಮ್ಮ ಸಂಬಂಧ ತುಂಬಾ ಚೆನ್ನಾಗಿದೆ. ಅವಳು ಬೇಕೆಂದಾಗಲೆಲ್ಲಾ ಇಲ್ಲಿಗೆ ಬಂದು ಹೋಗುತ್ತಿರುತ್ತಾಳೆ. ಅವಳು ತುಂಬಾ ಸಂಸ್ಕಾರವಂತ ಮಗು.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಯಥಾಸ್ಥಿತಿಯಲ್ಲಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ದಾಖಲೆಯ ಏರಿಕೆ ಕಂಡಿತ್ತು. ಈ ವಾರ ಅದೇ ರೀತಿ ಬೆಲೆ ಏರಿಳಿಕೆಯಾಗುವ ಲಕ್ಷಣವಿದೆ. ಇಂದು ಪರಿಶುದ್ಧ ಚಿನ್ನದ ದರ ಇಂದು ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,59,310.00 ರೂ.ಗಳಿತ್ತು. ಇಂದೂ 1,56,655.00 ರೂ.ಗಳಷ್ಟಿದೆ.
ಬೆಂಗಳೂರು: ಶಾಸಕರು ವಿದೇಶ ಪ್ರವಾಸ ಹೋಗಿದ್ದು, ಯಾಕೆ ಹೋಗಿದ್ದಾರೋ ನನಗೆ ಗೊತ್ತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದು ಇದಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಟಾಂಗ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯಲ್ಲಿರುವಾಗಲೇ ಬಹುತೇಕ ಸಿದ್ದರಾಮಯ್ಯ ಆಪ್ತ ಬಣದ ಶಾಸಕರು ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಪ್ರವಾಸ ತೆರಳಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಇದರ ಬಗ್ಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಗೆ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಉತ್ತರಿಸಿದ್ದ ಅವರು ಶಾಸಕರು ಯಾಕೆ ಹೋಗಿದ್ದಾರೆ, ಅವರಾಗಿಯೇ ಹೋಗಿದ್ದಾರೋ, ಯಾರಾದರೂ ಕಳಿಸಿದ್ದಾರೋ ನನಗೆ ಗೊತ್ತಿಲ್ಲ. ಯಾರಾದರೂ ಸ್ಪಾನ್ಸರ್ ಮಾಡಿ ಕಳುಹಿಸಿರಬಹುದು.
ಮುಂಬೈ: ವಿಶ್ವಕಪ್ ಕ್ರಿಕೆಟ್ ಯಾವುದೇ ಫಾರ್ಮ್ಯಾಟ್ ಆಗಿರಲಿ, ಆಸ್ಟ್ರೇಲಿಯಾ ಪ್ಲೇ ಆಫ್ ಹಂತಕ್ಕೆ ಬರದೇ ಇರಲ್ಲ. ಆದರೆ ಈ ಬಾರಿ ಟಿ20 ವಿಶ್ವಕಪ್ ನಲ್ಲಿ ಲೀಗ್ ಹಂತದಲ್ಲೇ ಆಸ್ಟ್ರೇಲಿಯಾ ಆಘಾತಕಾರಿಯಾಗಿ ಹೊರಬಿದ್ದಿದೆ. ಆಸ್ಟ್ರೇಲಿಯಾಕ್ಕೆ ಬಹುಶಃ ಇಂತಹ ದಯನೀಯ ಅವಸ್ಥೆ ಸದ್ಯಕ್ಕೆ ಎಂದಿಗೂ ಬಂದಿರಲಿಲ್ಲ. ಪ್ರತೀ ಬಾರಿ ಫೈನಲ್ ನಲ್ಲಿ ಒಂದು ತಂಡ ಆಸ್ಟ್ರೇಲಿಯಾವೇ ಇರುತ್ತಿತ್ತು. ಆದರೆ ಕಳೆದ ಎರಡು ವರ್ಷಗಳಿಂದ ಆಸ್ಟ್ರೇಲಿಯಾ ತಂಡ ಐಸಿಸಿ ಟೂರ್ನಿಗಳಲ್ಲಿ ಎಡವುತ್ತಿದೆ. ಭಾರತೀಯ ಫ್ಯಾನ್ಸ್ ಮಾತ್ರ 2024 ರ ಏಕದಿನ ವಿಶ್ವಕಪ್ ಗೆಲುವಿನ ನಂತರ ಮಿಚೆಲ್ ಮಾರ್ಷ್ ಟ್ರೋಫಿ ಮೇಲೆ ಕಾಲಿಟ್ಟು ಕೂತಿದ್ದ ಘಟನೆಯನ್ನೇ ನೆನಪಿಸುತ್ತಿದ್ದಾರೆ.
ಮುಂಬೈ: ಟೀಂ ಇಂಡಿಯಾ ಕೋಚ್ ಹುದ್ದೆಗೆ ಗೌತಮ್ ಗಂಭೀರ್ ವಿಶ್ವಕಪ್ ಬಳಿಕ ಗುಡ್ ಬೈ ಹೇಳುವ ಸಾಧ್ಯತೆಯಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಕಾರಣವೂ ಇದೆ. ರಾಹುಲ್ ದ್ರಾವಿಡ್ ಬಳಿಕ ಟೀಂ ಇಂಡಿಯಾ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗಿದ್ದರು. ಕಳೆದ ಟಿ20 ವಿಶ್ವಕಪ್ ಬಳಿಕ ಅವರು ತಂಡ ಸೇರಿಕೊಂಡಿದ್ದರು. ಆದರೆ ಈಗ ಈ ಟಿ20 ವಿಶ್ವಕಪ್ ಬಳಿಕ ಅವರು ಕೋಚ್ ಹುದ್ದೆಗೆ ಗುಡ್ ಬೈ ಹೇಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಮೆಂಟರ್ ಕಮ್ ಪಾರ್ಟನರ್ ಆಗಿ ಸೇರಿಕೊಳ್ಳುವಂತೆ ಗಂಭೀರ್ ಗೆ ಭಾರೀ ಮೊತ್ತದ ಆಫರ್ ಬಂದಿದೆ.
ಬೆಂಗಳೂರು: ನಾಳೆ ಕೆಎಸ್ಆರ್ ಟಿಸಿ ಬಸ್ ಗೆ ಕಾದರೆ ನಿಮಗೆ ತೊಂದರೆ ಗ್ಯಾರಂಟಿ. ಯಾಕೆಂದರೆ ನಾಳೆ ಸಾಕಷ್ಟು ಬಸ್ ರಸ್ತೆಗಿಳಿಯುವುದೇ ಅನುಮಾನ. ಇದಕ್ಕೆ ಇಲ್ಲಿದೆ ಕಾರಣ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ ಟಿಸಿ ನೌಕರರು ನಾಳೆ ಬೆಂಗಳೂರು ಚಲೋ ಧರಣಿ ನಡೆಸಲಿದ್ದಾರೆ. ಈ ಧರಣಿಯಲ್ಲಿ ಸಾಕಷ್ಟು ಕೆಎಸ್ಆರ್ ಟಿಸಿ ನೌಕರರು ಭಾಗಿಯಾಗುವ ಸಾಧ್ಯತೆಯಿದೆ. ಹೀಗಾಗಿ ರಾಜ್ಯದ ಬಹುತೇಕ ಕಡೆ ಕೆಎಸ್ಆರ್ ಟಿಸಿ ಬಸ್ ಸಂಚಾರಕ್ಕೆ ಸಮಸ್ಯೆಯಾಗಬಹುದು. ಮುಷ್ಕರದಲ್ಲಿ ಪಾಲ್ಗೊಳ್ಳದಂತೆ ಕೆಎಸ್ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿರುವಾಗಲೇ ತಮ್ಮ ಒಂದು ಹೇಳಿಕೆಯಿಂದಲೇ ಸಿಎಂ ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ಶಾಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಈಗ ಭಾರೀ ಸದ್ದು ಮಾಡುತ್ತಿದೆ. ಇದರ ನಡುವೆ ಕೆಲವು ಶಾಸಕರು ವಿದೇಶ ಪ್ರವಾಸ ಮಾಡಿದ್ದಾರೆ. ಇನ್ನು, ಸಿಎಂ ಆಪ್ತ ಬಳಗದಲ್ಲಿರುವ ಸಚಿವ ಮಹದೇವಪ್ಪ ಬಾಲವೇ ನಾಯಿಯನ್ನು ಅಲ್ಲಾಡಿಸಕ್ಕೆ ಆಗಲ್ಲ. ಎಲ್ಲವೂ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದಿದ್ದರು. ಮಹದೇವಪ್ಪನಿಗೆ ನಾನು ಉತ್ತರ ಕೊಡಕ್ಕೆ ಹೋಗಲ್ಲ. ಯಾರಿಗೂ ಉತ್ತರ ಕೊಡಲ್ಲ. ನಾಯಕತ್ವ ಕುರಿತಂತೆ ಸಿಎಂ, ನಾನು ಮತ್ತು ಹೈಕಮಾಂಡ್ ಸೇರಿ ನಾವೆಲ್ಲಾ ತೆಗೆದುಕೊಂಡಿರೋ ತೀರ್ಮಾನ.
ಬೆಂಗಳೂರು: ಇಂದು ಬೆಳ್ಳಂ ಬೆಳಿಗ್ಗೆಯೇ ಯೂಟ್ಯೂಬ್ ಕೈ ಕೊಟ್ಟಿದೆ. ಯೂಟ್ಯೂಬ್ ಓಪನ್ ಮಾಡಿದರೆ ಸರ್ವರ್ ಡೌನ್ ಎಂಬ ಸಂದೇಶ ಬರುತ್ತಿದೆ. ಕೇವಲ ಭಾರತದಲ್ಲಿ ಮಾತ್ರವಲ್ಲ ಜಗತ್ತಿನಾದ್ಯಂತ ಇಂದು ಬೆಳಿಗ್ಗೆಯೇ ಯೂಟ್ಯೂಬ್ ಓಪನ್ ಆಗುತ್ತಿಲ್ಲ. ತಾಂತ್ರಿಕ ಸಮಸ್ಯೆಯಾಗಿದೆ ಎಂದು ಸಂದೇಶ ಬರುತ್ತಿದೆ. ಬಹುತೇಕರು ಇದರಿಂದ ಸಾಕಷ್ಟು ಗೊಂದಲಕ್ಕೊಳಗಾಗಿದ್ದಾರೆ. ಆದರೆ ಇದಕ್ಕೆ ನಿಖರ ಕಾರಣವೇನೆಂದು ಯೂಟ್ಯೂಬ್ ಕಡೆಯಿಂದ ಸ್ಪಷ್ಟನೆ ಸಿಕ್ಕಿರಲಿಲ್ಲ. ವ್ಯಾಟ್ಸಪ್, ಫೇಸ್ ಬುಕ್, ಇನ್ ಸ್ಟಾಗ್ರಾಂನಂತೇ ಯೂಟ್ಯೂಬ್ ಹಳೆಯ ಮತ್ತು ಜನಪ್ರಿಯ ಸೋಷಿಯಲ್ ಮೀಡಿಯಾ ಆಪ್.
ಅಹ್ಮದಾಬಾದ್: ಟಿ20 ವಿಶ್ವಕಪ್ 2026 ರ ಇಂದಿನ ಪಂದ್ಯದಲ್ಲಿ ಸೋಲೇ ಕಾಣದ ಟೀಂ ಇಂಡಿಯಾಗೆ ಗೆಲುವೇ ಕಾಣದ ನೆದರ್ಲ್ಯಾಂಡ್ಸ್ ಎದುರಾಳಿಯಾಗಿರಲಿದೆ. ಕಳೆದ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸಿದ್ದ ಟೀಂ ಇಂಡಿಯಾ 3 ಪಂದ್ಯಗಳಿಂದ 3 ಗೆಲುವು ಕಂಡಿದ್ದು ಈಗಾಗಲೇ ಎ ಗುಂಪಿನಲ್ಲಿ ಅಗ್ರಸ್ಥಾನಿಯಾಗಿ ಸೂಪರ್ 8 ಕ್ಕೆ ಕಾಲಿಟ್ಟಿದೆ. ಟೀಂ ಇಂಡಿಯಾ ಕಳೆದ ಪಂದ್ಯದಲ್ಲಿ ಬೌಲಿಂಗ್ ನಲ್ಲಿ ತನ್ನ ಅಬ್ಬರ ತೋರಿಸಿದೆ. ಆದರೆ ಬ್ಯಾಟಿಂಗ್ ನಲ್ಲಿ ಒಬ್ಬರು ಅಥವಾ ಇಬ್ಬರನ್ನು ಮಾತ್ರ ಅವಲಂಬಿಸಿದೆ. ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ ತಮ್ಮ ಬ್ಯಾಟಿಂಗ್ ಝಲಕ್ ತೋರಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಸಂಜೆ ಕೆಲವು ಕಡೆ ಮೋಡ ಕವಿದ ವಾತಾವರಣವಿತ್ತು. ಇಂದು ಹವಾಮಾನದಲ್ಲಿ ಏನು ಬದಲಾವಣೆಯಿರಲಿದೆ, ಇಲ್ಲಿದೆ ಇಂದಿನ ಹವಾಮಾನ ವರದಿ. ರಾಜ್ಯದಲ್ಲಿ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದೆ. ಇದರ ನಡುವೆ ಕೇರಳದಲ್ಲಿ ವಾರಂತ್ಯಕ್ಕೆ ಮಳೆಯ ಸೂಚನೆಯೂ ಇದೆ. ಇದರ ಬೆನ್ನಲ್ಲೇ ಕರಾವಳಿ ಜಿಲ್ಲೆಗಳಲ್ಲೂ ನಿನ್ನೆ ಕೊಂಚ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಉಳಿದ ಜಿಲ್ಲೆಗಳಲ್ಲಿ ವಿಪರೀತ ಬಿಸಿಲಿತ್ತು. ಇಂದು ಬೆಳಿಗ್ಗೆ ಮೋಡ ಕವಿದ ವಾತಾವರಣವಿತ್ತು. ಆದರೆ ಹಗಲು ಬಹುತೇಕ ಜಿಲ್ಲೆಗಳಲ್ಲಿ ಹಗಲು ವಿಪರೀತ ಬಿಸಿಲು ಕಂಡುಬರಲಿದೆ. ಬೆಳಿಗ್ಗಿನ ಜಾವ ಸಣ್ಣ ಮಟ್ಟಿಗೆ ಚಳಿಯೂ ಕಂಡುಬರುವುದು.
ಜಾತಕದಲ್ಲಿ ಬುಧ ಗ್ರಹನ ದೋಷಗಳಿದ್ದರೆ ವಿದ್ಯಾಭ್ಯಾಸಕ್ಕೆ, ವೃತ್ತಿ ಜೀವನಕ್ಕೆ, ಆರೋಗ್ಯಕ್ಕೆ ಸಂಬಂಧಿಸಿದಂತೆ ತೊಂದರೆಗಳು ಎದುರಾದೀತು. ಇದರ ನಿವಾರಣೆಗೆ ಬುಧ ಗ್ರಹ ಕವಚಂ ಸ್ತೋತ್ರ ಓದಿ.ಅಸ್ಯ ಶ್ರೀಬುಧಕವಚಸ್ತೋತ್ರಮಂತ್ರಸ್ಯ, ಕಶ್ಯಪ ಋಷಿಃ,ಅನುಷ್ಟುಪ್ ಛಂದಃ, ಬುಧೋ ದೇವತಾ, ಬುಧಪ್ರೀತ್ಯರ್ಥಂ ಜಪೇ ವಿನಿಯೋಗಃ । ಅಥ ಬುಧ ಕವಚಂಬುಧಸ್ತು ಪುಸ್ತಕಧರಃ ಕುಂಕುಮಸ್ಯ ಸಮದ್ಯುತಿಃ ।ಪೀತಾಂಬರಧರಃ ಪಾತು ಪೀತಮಾಲ್ಯಾನುಲೇಪನಃ ॥ 1 ॥ ಕಟಿಂ ಚ ಪಾತು ಮೇ ಸೌಮ್ಯಃ ಶಿರೋದೇಶಂ ಬುಧಸ್ತಥಾ ।ನೇತ್ರೇ ಜ್ಞಾನಮಯಃ ಪಾತು ಶ್ರೋತ್ರೇ ಪಾತು ನಿಶಾಪ್ರಿಯಃ ॥ 2 ॥
ಮುಂಬೈ: ಭಾರತ-ಫ್ರಾನ್ಸ್ ಇನ್ನೋವೇಶನ್ ಫೋರಂಗೆ ಹೋಗುವ ಮಾರ್ಗದಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಒಟ್ಟಿಗೆ ಕಾರಿನಲ್ಲಿ ಪ್ರಯಾಣ ಬೆಳೆಸಿದರು. ತಮ್ಮ ದ್ವಿಪಕ್ಷೀಯ ಮತ್ತು ನಿಯೋಗ ಮಟ್ಟದ ಮಾತುಕತೆಯ ನಂತರ ಭಾರತ-ಫ್ರಾನ್ಸ್ ಇನ್ನೋವೇಶನ್ ಫೋರಂಗೆ ನಾಯಕರು ತೆರಳುತ್ತಿರುವಾಗ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಬೆಚ್ಚಗಿನ ಮತ್ತು ವೈಯಕ್ತಿಕ ಬಾಂಧವ್ಯವನ್ನು ಪ್ರದರ್ಶಿಸಿದರು. ಮ್ಯಾಕ್ರನ್ ಮತ್ತು ನಾನು ಭಾರತ-ಫ್ರಾನ್ಸ್ ಇನ್ನೋವೇಶನ್ ಫೋರಮ್ ಸೇರಿದಂತೆ ಇತರ ಕಾರ್ಯಕ್ರಮಗಳ ಹಾದಿಯಲ್ಲಿದ್ದೇವೆ.
ಹಾಸನ: ಇಲ್ಲಿನ ಸೈಟ್ ವಿಚಾರವಾಗಿ ಯಾವುದೇ ಕಾರಣಕ್ಕೂ ಸುಮ್ಮನಿರಲ್ಲ ಎಂದು ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪಾ ಅರುಣ್ಕುಮಾರ್ ಇದೀಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿ ದೂರನ್ನು ನೀಡಿದ್ದಾರೆ. ಸೈಟ್ ಮಾಲೀಕತ್ವ ಜಟಾಪಟಿಗೆ ಸಂಬಂಧಿಸಿದಂತೆ ಕೋರ್ಟ್ನಿಂದ ಸ್ಟೇ ಸಿಕ್ಕ ಬಳಿಕ, ಆಮೇಲೆ ಕಾಂಪೌಂಡ್ ಕೆಡವಿದ ಮಾಲೀಕ ಹಾಗೂ ಪುಷ್ಪಾ ನಡುವೆ ಗಲಾಟೆ ನಡೆದಿತ್ತು. ಇದಗ ಗಲಾಟೆ ವೀಡಿಯೋ ಇರುವ ಪೆನ್ಡ್ರೈವ್, ಆದೇಶ ಪ್ರತಿ, ತಾವು ಸೈಟ್ ಖರೀದಿ ಮಾಡಿರುವ ಕ್ರಯ ಪತ್ರಗಳ ದಾಖಲೆ
ಬೆಂಗಳೂರು: ಬಿಜೆಪಿ ಕೇಂದ್ರ ಸಚಿವ ವಿ ಸೋಮಣ್ಣ ಅವರನ್ನು ರಾಜ್ಯ ಸಚಿವ ಜಮೀರ್ ಅಹ್ಮದ್ ಖಾನ್ ಕೊಂಡಾಡಿದ್ದಾರೆ. ಬೆಂಗಳೂರಿನ ವಿಜಯನಗರ-ಮೈಸೂರು ರಸ್ತೆಯ ನಾಯಂಡಹಳ್ಳಿ ಬಳಿ ನೂತನ ರಸ್ತೆ ಮೇಲ್ಸೇತುವೆಯನ್ನು ಸೋಮಣ್ಣ ಅವರು ಇಂದು ಲೋಕಾರ್ಪಣೆ ಮಾಡಿದರು. ಈ ರಸ್ತೆ ಮೇಲ್ಸೇತುವೆ ಈ ಭಾಗದ ಜನರ ಬಹುದಿನದ ಬೇಡಿಕೆಯಾಗಿತ್ತು. ನೂತನ ಮೇಲ್ಸೇತುವೆಯು ವಿಜಯನಗರ ಹಾಗೂ ಪಾದರಾಯನಪುರದ ಜನತೆಗೆ ಸಹಕಾರಿಯಾಗಲಿದೆ ಎಂದು ಸಚಿವ ಸೋಮಣ್ಣ ತಿಳಿಸಿದರು.
ಮಂಗಳೂರಿನ ಉಳ್ಳಾಲದ ಕಿನ್ಯಾ ಸಂಕೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ಅತಿವೇಗವಾಗಿ ಬಂದ ಬೈಕ್ ಸಾವರ, ನಿಯಂತ್ರಣಗೆ ಸಿಗದೆ ಇದ್ದಾಗ ರಸ್ತೆ ಬಳಿಯಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ. ಇನ್ನೂ ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಕ್ಕೆ ತುಂಡಾಗಿ ನೆಲಕ್ಕೆ ಬಿದ್ದಿದೆ. ಪವಾಡ ಸದೃಶ್ಯ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿದ್ದರು. ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಸೋಮವಾರ ಸಂಜೆ 5:00 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಅತಿ ವೇಗದಲ್ಲಿ ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ
ಕೋಝಿಕ್ಕೋಡ್: ಕೋಝಿಕ್ಕೋಡ್ನ ಪಾಳಯಂನಲ್ಲಿರುವ ಜಯಲಕ್ಷ್ಮಿ ಸಿಲ್ಕ್ಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಇತರ ಭಾಗಗಳಿಗೆ ಬೆಂಕಿಯ ಬೆಂಕಿಯು ಎರಡನೇ ಮಹಡಿಗೆ ವ್ಯಾಪಿಸಿದೆ. ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿ ಸ್ಥಳದಲ್ಲಿದ್ದು, ಬೆಂಕಿಯನ್ನು ಹತೋಟಿಗೆ ತರಲು ಶ್ರಮಿಸಿದರು. ಕೋಝಿಕ್ಕೋಡ್ ರೈಲು ನಿಲ್ದಾಣದ ಸಮೀಪವಿರುವ ಮೂರು ಅಂತಸ್ತಿನ ಜಯಲಕ್ಷ್ಮಿ ಸಿಲ್ಕ್ಸ್ ಕಟ್ಟಡದಲ್ಲಿ ಸಂಜೆ 6 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಆವರಣವು ಗ್ರಾಹಕರಿಂದ ಕಿಕ್ಕಿರಿದು ತುಂಬಿತ್ತು.ಅಗ್ನಿಶಾಮಕ ಮತ್ತು ಪಾರುಗಾಣಿಕಾ ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಹತ್ತಿರದ ಎರಡು ನಿಲ್ದಾಣಗಳಿಂದ ಕನಿಷ್ಠ ಮೂರು
ಕೇರಳ: ಸೋಶಿಯಲ್ ಮೀಡಿಯಾ ಇನ್ಪುಲೆಯೆನ್ಸರ್ ಚಿನ್ನು ಪಾಪು ಎಂದೇ ಖ್ಯಾತರಾಗಿದ್ದ ಕೆ ರೇಷ್ಮಾ ಅವರ ಸಾವು ಪ್ರಕರಣದ ವಾರದ ಬಳಿಕ ಆಕೆಯ ಸ್ನೇಹಿತ ಮನೆಯೊಳಗೆ ಶವವಾಗಿ ಪತ್ತೆಯಾಗಿದ್ದಾಳೆ. ಮೃತರನ್ನು ಸಂದೇಶ್ ಎಂದು ಗುರುತಿಸಲಾಗಿದ್ದು, 29 ವರ್ಷದ ಕಾಸರಗೋಡಿನ ಉಳಿಯತ್ತಡುಕ ಮೂಲದವರಾಗಿದ್ದಾರೆ. ಈ ಹಿಂದೆ ರೇಷ್ಮಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡು ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದ್ದು, ಅದೇ ದಿನ ಬಿಡುಗಡೆಗೊಂಡಿದ್ದರು.ಕಾಸರಗೋಡು ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಪ್ರಕಾರ, ರೇಷ್ಮಾಳ ಸಾವಿನಿಂದ ಉಂಟಾದ ಮನನೊಂದ ಸಂದೇಶ್
ಹೌರಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಚುನಾವಣಾ ಆಯೋಗದ ಮೇಲೆ ಮಂಗಳವಾರ ವಾಗ್ದಾಳಿ ನಡೆಸಿದ್ದು, ಅದು ರಾಜ್ಯದ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಮತ್ತು ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದೆ ಎಂದು ಆರೋಪಿಸಿದೆ.ಯಾರೇ ಮಾಡಿದರೂ "ಪ್ರಜಾಪ್ರಭುತ್ವವನ್ನು ಕೊಲ್ಲುವ" ಯಾವುದೇ ಪ್ರಯತ್ನಕ್ಕೆ "ತಕ್ಕ ಉತ್ತರ ನೀಡಲಾಗುವುದು" ಎಂದು ಹೇಳಿದರು. ಇಲ್ಲಿ, ಬ್ಯಾನರ್ಜಿ ಚುನಾವಣಾ ಸಂಸ್ಥೆಯು ಅತಿಕ್ರಮಣ ಮತ್ತು ಕಿರುಕುಳವನ್ನು ಆರೋಪಿಸಿದರು.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರು ಯಾವಾಗ ಜೈಲಿನಿಂದ ಬಿಡುಗಡೆಯಾಗುತ್ತಾರೆಂಬ ಕಾಯುವಿಕೆಯಲ್ಲಿ ಅಭಿಮಾನಿಗಳಿದ್ದಾರೆ. ಈ ನಡುವೆ ಕನ್ನಡ ಸಿನಿಮಾ ರಂಗದ ಹಿರಿಯ ನಟ ರವಿಚಂದ್ರನ್ ಅವರು ದರ್ಶನ್ ಬಿಡುಗಡೆ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಫೆ.16ರಂದು 49ನೇ ಹುಟ್ಟುಹಬ್ಬವನ್ನು ದರ್ಶನ್ ಜೈಲಿನಲ್ಲೇ ಆಚರಿಸಿಕೊಂಡರು. ಅದೇ ದಿನ ರವಿಚಂದ್ರನ್ ಅವರು ವೇದಿಕೆಯಲ್ಲಿ ಕಾನಿಸಿಕೊಂಡರು. ಈ ವೇಳೆ ದರ್ಶನ್ ಅಭಿಮಾನಿಗಳು ಡಿಬಾಸ್ ಡಿಬಾಸ್ ಎಂದು ಕೂಗಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ರವಿಚಂದ್ರನ್ ನೋಡ್ತಿರಿ ದರ್ಶನ್ ಇನ್ನೆರಡು ತಿಂಗಳಲ್ಲಿ ಆಚೆ ಬರ್ತಾರೆ. ನನ್ನ ನಾಲಿಗೆಯಿಂದ ಹೇಳಿದೆ ಅಂದ್ಮೇಲೆ ಆಚೆ ಬಂದೇ ಬರುತ್ತಾರೆ. ನಿಮಗೆಲ್ಲ ಅವನು ಡಿ ಬಾಸ್, ನನಗೆ ಮಗ, ನೆನಪಿಟ್ಟುಕೊಳ್ಳಿ. ಇದೆಲ್ಲ ಕೆಟ್ಟ ಘಳಿಗೆ ಅಷ್ಟೇ. ಕೆಟ್ಟ
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಭಾರತೀಯ ಜನತಾ ಪಕ್ಷ (ಬಿಜೆಪಿ) ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಮುಖ್ಯವಾಹಿನಿಯ ಇಂಗ್ಲಿಷ್ ಮತ್ತು ಕನ್ನಡ ದೈನಿಕಗಳ ಮುಖಪುಟದಲ್ಲಿ ಹಾಗೂ ಎಕ್ಸ್ನಲ್ಲಿ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಅವರು ಆಧಾರರಹಿತ ಆರೋಪಗಳನ್ನು ಹಂಚಿಕೊಂಡಿದ್ದಾರೆ ಎಂದು ಪಕ್ಷದ ರಾಜ್ಯ ಘಟಕ ಆರೋಪಿಸಿದೆ. ಬೆಂಗಳೂರು, "ವಿಚಾರಣಾ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿಸುವುದು ಕಾನೂನು ಪ್ರಕ್ರಿಯೆಯ
ಇಂದೋರ್ನ 24 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯನ್ನು ಆಕೆಯ ಗೆಳೆಯ ಕೊಲೆ ಮಾಡಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಆವರಣದಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ನೆರೆಹೊರೆಯವರು ಎಚ್ಚರಿಸಿದ ಪೊಲೀಸರು ಜನವರಿ 13 ರಂದು ಬಲಿಪಶುವಿನ ಶವವನ್ನು ಪತ್ತೆ ಮಾಡಿದರು.ಫ್ಲಾಟ್ಗೆ ಪ್ರವೇಶಿಸಿದಾಗ, ಅಧಿಕಾರಿಗಳು ಹಾಸಿಗೆಯ ಮೇಲೆ ಬಟ್ಟೆಯಿಲ್ಲದೆ ಮಲಗಿರುವುದು ಕಂಡುಬಂತು. ಪ್ರಾಥಮಿಕ ಪರೀಕ್ಷೆಗಳಲ್ಲಿ ಮಹಿಳೆಯ ಕತ್ತು ಹಿಸುಕಿ ಕೊಲ್ಲಲಾಗಿದೆ ಎಂದು ಸೂಚಿಸಲಾಗಿದೆ, ಏಕೆಂದರೆ ಆಕೆಯ ಕುತ್ತಿಗೆಯ ಸುತ್ತಲೂ ಹಗ್ಗವನ್ನು ಬಳಸುವುದನ್ನು ಸೂಚಿಸುವ ಗುರುತುಗಳು ಗೋಚರಿಸುತ್ತವೆ. ಅನಾರೋಗ್ಯ ಹಿನ್ನೆಲೆ ಆಕೆ ಲೈಂಗಿಕ ಕ್ರಿಯೆಗೆ ಸಮ್ಮತಿ ಸೂಚಿಸಲಿಲ್ಲ. ಇದರಿಂದ ಕೋಪಗೊಂಡ ಆತ ಆಕೆಯ ಮೇಲೆ
ಭಾರತಕ್ಕೆ ಈಚೆಗೆ ವಾಪಾಸ್ಸಾದ ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟರ್ ವಿರಾಟ್ ಕೊಹ್ಲಿ ಭಕ್ತಿಯಲ್ಲಿ ಮುಳುಗಿದ್ದಾರೆ.ಆಗಾಗ ಪ್ರೇಮಾನಂದ ಜಿ ಮಹಾರಾಜ್ ಅವರನ್ನು ಭೇಟಿಯಾಗುವ ಈ ದಂಪತಿ, ಇದೀಗ ಮತ್ತೇ ಪ್ರೇಮಾನಂದ ಅವರನ್ನು ಭೇಟಿಯಾಗಿದ್ದಾರೆ. ಅವರ ಭೇಟಿಯ ವೀಡಿಯೊಗಳು ಮತ್ತು ಚಿತ್ರಗಳು ಮತ್ತೆ ಅಂತರ್ಜಾಲದಲ್ಲಿ ವೈರಲ್ ಆಗಿವೆ. ಅನುಷ್ಕಾ ಕುರ್ತಾ ಸೆಟ್ನಲ್ಲಿ ಕಾಣಿಸಿಕೊಂಡರೆ, ವಿರಾಟ್ ತಿಳಿ ನೀಲಿ ಬಣ್ಣದ ಶರ್ಟ್ ಮತ್ತು ಬಿಳಿ ಪ್ಯಾಂಟ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್ಪಿ) ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಬಾಂಗ್ಲಾದೇಶದ ಹೊಸ ಪ್ರಧಾನ ಮಂತ್ರಿಯಾಗಿ ಐದು ದಿನಗಳ ನಂತರ ಅಧಿಕೃತವಾಗಿ ಸಾರ್ವತ್ರಿಕ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ. ಅಧ್ಯಕ್ಷ ಮೊಹಮ್ಮದ್ ಶಹಬುದ್ದೀನ್ ಅವರು ಕ್ಯಾಬಿನೆಟ್ ಸಚಿವರಾಗಿ ಅಧಿಕಾರ ವಹಿಸಿಕೊಳ್ಳುವ ಅವರ ಪಕ್ಷದ ಸದಸ್ಯರೊಂದಿಗೆ ರೆಹಮಾನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.ಬಿಎನ್ಪಿಯ ಸದಸ್ಯರು ಅವರನ್ನು ಸಂಸದೀಯ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದರಿಂದ ಇದು ಸಂಭವಿಸಿತು.
ಬೆಂಗಳೂರು: ಕಾಂಗ್ರೆಸ್ ಸರಕಾರವು ಬಡವರಿಗೆ ಮನೆ ಕೊಡಬೇಕು; ಭೂರಹಿತರಿಗೆ ಭೂಮಿ ಕೊಡಬೇಕಿತ್ತು. ಆದರೆ, ಈ ಕೆಲಸವನ್ನು ಮಾಡುತ್ತಿಲ್ಲ. ತಾನೇ ಭೂಮಿ ಕಬಳಿಸುವ ಕೆಲಸ ಮಾಡುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಭೂಕಬಳಿಕೆಯಲ್ಲಿ ಸರಕಾರವೇ ನಿರತವಾಗಿದೆ. ಸರಕಾರವು ತಾಲ್ಲೂಕು, ಜಿಲ್ಲೆ, ಮಂಡಲ, ಪಂಚಾಯಿತಿ- ಹೀಗೆ ಎಲ್ಲ ಕಡೆ ನಿವೇಶನ ಪಡೆಯಲು ಅದಕ್ಕೆ ಅಧಿಕಾರ ಇಲ್ಲ. ಕಾನೂನು ಉಲ್ಲಂಘಿಸಿ ಅದು ಕಾಂಗ್ರೆಸ್ ಪಕ್ಷದ ಕಚೇರಿ ನಿರ್ಮಾಣಕ್ಕೆ ಲೀಸ್ಗೆ ಮುಧೋಳದಲ್ಲಿ ನಿವೇಶನ ಪಡೆಯಲು ಮುಂದಾಗಿತ್ತು. ಆದರೆ, ಇಲಾಖೆಯು ಅದನ್ನು ತಿರಸ್ಕರಿಸಿತ್ತು ಎಂದು ಗಮನ ಸೆಳೆದರು.
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (KIA) ಈ ವ್ಯಾಲೆಂಟೈನ್ಸ್ ಸಮಯದಲ್ಲಿ 26 ಅಂತರಾಷ್ಟ್ರೀಯ ಮತ್ತು 47 ದೇಶೀಯ ಸ್ಥಳಗಳಿಗೆ ಸುಮಾರು 60 ಮಿಲಿಯನ್ ಗುಲಾಬಿ ಹೂವುಗಳನ್ನು ರಫ್ತು ಮಾಡುವ ಮೂಲಕ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಬೆಂಗಳೂರು ಇಂಟರ್ನ್ಯಾಶನಲ್ ಏರ್ಪೋರ್ಟ್ ಲಿಮಿಟೆಡ್ ಪ್ರಕಾರ, ಈ ಋತುವಿನಲ್ಲಿ ವರ್ಷದಿಂದ ವರ್ಷಕ್ಕೆ 38% ಹೆಚ್ಚಳ ಮತ್ತು ಒಟ್ಟು ಟನ್ಗಳಲ್ಲಿ 64% ಏರಿಕೆ ಕಂಡುಬಂದಿದೆ. ಇದು KIA ಯ ಸ್ಥಾನಮಾನವನ್ನು ಸತತ ಐದನೇ ವರ್ಷಕ್ಕೆ ನಾಶವಾಗುವ ರಫ್ತಿಗೆ ಭಾರತದ ಪ್ರಮುಖ ಗೇಟ್ವೇ ಎಂದು ಪುನರುಚ್ಚರಿಸಿದೆ.
ಹಿರಿಯ ಚಿತ್ರಕಥೆಗಾರ ಸಲೀಂ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಟ ಸಲ್ಮಾನ್ ಖಾನ್ ಅವರ ತಂದೆ, ಹಿರಿಯ ಚಿತ್ರಕಥೆಗಾರ ಸಲೀಂ ಖಾನ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ತಂದೆಯ ಆರೋಗ್ಯವನ್ನು ವಿಚಾರಿಸಲು ಸಲ್ಮಾನ್ ಖಾನ್ ಆಸ್ಪತ್ರೆಗೆ ಬಂದಿದ್ದಾರೆ. ಬಳಿಕ ಬೇಸರದಿಂದಲೇ ಆಸ್ಪತ್ರೆಯಿಂದ ಸಲ್ಮಾನ್ ಹೊರನಡೆದಿದ್ದಾರೆ.
ನವದೆಹಲಿ: ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವಿಗೆ ಕಾರಣವಾದ ವಿಮಾನ ದುರಂತದ ತನಿಖೆಯ ವೇಗವನ್ನು ಅಜಿತ್ ಪವಾರ್ ಅವರ ಪುತ್ರ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಎಸ್ಪಿ ಶಾಸಕ ರೋಹಿತ್ ಪವಾರ್ ಮಂಗಳವಾರ ಪ್ರಶ್ನಿಸಿದ್ದು, 20 ದಿನಗಳ ವಿಳಂಬವು ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಎಂದು ಪ್ರಶ್ನೆ ಮಾಡಿದ್ದಾರೆ. ಸಂಜಯ್ ರಾವತ್ ಅಜಿತ್ ಪವಾರ್ ವಿಮಾನ ಅಪಘಾತದ ಬಗ್ಗೆ ಅನುಮಾನಗಳನ್ನು ಎತ್ತಿದ್ದಾರೆ, ಸಂಪೂರ್ಣ ತನಿಖೆಗೆ ಕೋರಿದ್ದಾರೆಎಕ್ಸ್ನಲ್ಲಿನ ಪೋಸ್ಟ್ನಲ್ಲಿ, ರೋಹಿತ್ ಪವಾರ್ ಬರೆದಿದ್ದಾರೆ, "ಅಜಿತ್ ದಾದಾ ಅವರ ಮೌಲ್ಯವು ಸಾಮಾನ್ಯ ನಾಗರಿಕರಿಗೆ