ನವದೆಹಲಿ: ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷ ಮತ್ತು ಭಾರತದ ಇಂಧನ ಭದ್ರತೆಯ ಹಲವು ಅಂಶಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾಜ್ಯಸಭೆಯಲ್ಲಿ ಹೇಳಿಕೆ ನೀಡುವ ಸಾಧ್ಯತೆಯಿದೆ. ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಸೋಮವಾರ ಲೋಕಸಭೆಯಲ್ಲಿ ಹೇಳಿಕೆ ನೀಡಿದ ಪ್ರಧಾನಿ ಮೋದಿ, ಈ ಪ್ರದೇಶದಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಿದ್ದಾರೆ."ಜಾಗತಿಕ ಬಿಕ್ಕಟ್ಟುಗಳ ಹೊರೆ ರೈತರ ಮೇಲೆ ಬೀಳಲು ಎಂದಿಗೂ ಅವಕಾಶ ನೀಡಲಿಲ್ಲ. 76 ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯದ
ನವದೆಹಲಿ: ಪ್ರಸ್ತುತ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಹಗೆತನದಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಸ್ಥಿತಿಗೆ ಸಂಬಂಧಿಸಿದಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಸೋಮವಾರ ನಿರ್ಣಾಯಕ ಅಪ್ಡೇಟ್ ಅನ್ನು ನೀಡಿದೆ. ಗಾಯಗೊಂಡಿರುವ ವ್ಯಕ್ತಿ ಸೇರಿದಂತೆ ಎಲ್ಲಾ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದು ಹೇಳಿದ್ದಾರೆ."ಇಸ್ರೇಲ್ನಲ್ಲಿರುವ ಎಲ್ಲಾ ಭಾರತೀಯ ನಾಗರಿಕರು ಸುರಕ್ಷಿತವಾಗಿದ್ದಾರೆ. ಭಾರತೀಯ ಪ್ರಜೆಯೊಬ್ಬರು ಗಾಯಗೊಂಡಿರುವ ವರದಿಗಳಿವೆ. ನಮ್ಮ ರಾಯಭಾರ ಕಚೇರಿಯು ಈ ವಿಷಯವನ್ನು ಮೇಲ್ವಿಚಾರಣೆ ಮಾಡುತ್ತಿದೆ. ವ್ಯಕ್ತಿ ಸುರಕ್ಷಿತವಾಗಿದ್ದಾರೆ ಎಂದರು.
ನವದೆಹಲಿ: ಪ್ರಯಾಗ್ರಾಜ್ನ ಫಾಫಮೌ ಪ್ರದೇಶದಲ್ಲಿನ ಕೋಲ್ಡ್ ಸ್ಟೋರೇಜ್ನ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಅವರು ಸಾಮಾಜಿಕ ಜಾಲತಾನ ಎಕ್ಸ್ನಲ್ಲಿ ಬರೆದುಕೊಂಡು, ಘಟನೆ ಮತ್ತು ಗಾಯಾಳುಗಳ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸಿದರು.ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಕಟ್ಟಡದ ಕುಸಿತದಿಂದಾಗಿ ಸಂಭವಿಸಿದ ದುರ್ಘಟನೆಯಿಂದ ತೀವ್ರ ದುಃಖವಾಗಿದೆ.
ಬೆಂಗಳೂರು: ನಮ್ಮ ಮೆಟ್ರೋದ ಪಿಂಕ್ ಲೈನ್ ಶೀಘ್ರದಲ್ಲೇ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟಿದೆ. ಆರ್ಡಿಎಸ್ಒ ಪ್ರಯೋಗಗಳು ತಿಂಗಳ ಅಂತ್ಯದ ಮೊದಲು ಪ್ರಾರಂಭವಾಗಬಹುದು. ಇನ್ನೂ ಕೆಲವು ಔಪಚಾರಿಕತೆಗಳು ಉಳಿದಿವೆ. ತಪಾಸಣೆ ಪೂರ್ಣಗೊಳ್ಳಲು ಕನಿಷ್ಠ ಎರಡು ವಾರಗಳು ತೆಗೆದುಕೊಳ್ಳಬಹುದು ಎಂದು ಬಿಎಂಆರ್ಸಿಎಲ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಹೇಳಿದರು.ಪಿಂಕ್ ಮೆಟ್ರೋ ವಾಣಿಜ್ಯ ಸಂಚಾರಕ್ಕೆ ಬಿಎಂಆರ್ಸಿಎಲ್ ತಯಾರಿ ಆರಂಭಿಸಿದೆ. ಏಪ್ರಿಲ್ ಮೊದಲ ವಾರದಲ್ಲಿ ಆರ್ಡಿಎಸ್ಓ
ರಾಯಚೂರು: ರಾಜ್ಯದಲ್ಲಿ ನಡೆಯಲಿರುವ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲವು ಖಚಿತ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಯೊಂದಕ್ಕೂ ಹೈಕಮಾಂಡ್ ಅಂತಾರೆ. ಕಾಂಗ್ರೆಸ್ ಪಕ್ಷದಲ್ಲಿನ ಆಡಳಿತ ವ್ಯವಸ್ಥೆ ಸರಿಯಿಲ್ಲ ಅನ್ನೋದನ್ನ ಇದು ತೋರಿಸುತ್ತೆ . ಇನ್ನೂ ರಾಜ್ಯದ ಜನತೆ ರಾಜ್ಯ ಸರ್ಕಾರದ ದುರ್ಬಲ ಆಡಳಿತಕ್ಕೆ ಬೇಸತ್ತು ಹೋಗಿದ್ದಾರೆ. ಜನಸಾಮಾನ್ಯರ ಮೇಲೆ ತೆರಿಗೆ ಭಾರ
ಮಂಗಳೂರು: ದಕ್ಷಿಣ ಕನ್ನಡ (ದ.ಕ.) ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ತಾಪಮಾನ ಏರಿಕೆಯಾಗುತ್ತಿದ್ದು, ಇತ್ತೀಚೆಗೆ 39 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಬಿಸಿಗಾಳಿಯಿಂದ ಬಳಲುತ್ತಿರುವ ರೋಗಿಗಳಿಗೆ ಚಿಕಿತ್ಸೆ ನೀಡಲು ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ಸೇರಿದಂತೆ ಜಿಲ್ಲೆಯ ತಾಲೂಕು ಆಸ್ಪತ್ರೆಗಳಲ್ಲಿ ವಿಶೇಷ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ.ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಐದು ಹಾಸಿಗೆಗಳ ವಿಶೇಷ ವಾರ್ಡ್ ಸಿದ್ಧಗೊಂಡಿದೆ. ಬೆಳ್ತಂಗಡಿ, ಸುಳ್ಯ, ಪುತ್ತೂರು ಮತ್ತು ಬಂಟ್ವಾಳ ತಾಲೂಕು ಆಸ್ಪತ್ರೆಗಳಲ್ಲಿ ತಲಾ ಎರಡು ಹಾಸಿಗೆಗಳ ಪ್ರತ್ಯೇಕ ಚಿಕಿತ್ಸಾ ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ. ಈ ಕೊಠಡಿಗಳಲ್ಲಿ ಅಗತ್ಯ ಔಷಧಗಳು, ಹವಾನಿಯಂತ್ರಣ ಮತ್ತು ಇತರ ತುರ್ತು ಸೌಲಭ್ಯಗಳನ್ನು ಅಳವಡಿಸಲಾಗಿದೆ.
ನವದೆಹಲಿ: ಕನ್ನಡ ನಟಿ ರನ್ಯಾ ರಾವ್ ಅವರ ಚಿನ್ನಾಭರಣ ಕಳ್ಳಸಾಗಣೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ವಂಚನೆಯಲ್ಲಿ ಉಗಾಂಡಾಕ್ಕೆ ಅಂತರಾಷ್ಟ್ರೀಯ ಸಂಪರ್ಕವನ್ನು ಬಹಿರಂಗಪಡಿಸಿದ್ದಾರೆ ಮತ್ತು ವಂಚನೆಯಲ್ಲಿ ಅಂತ್ಯಗೊಂಡ 50 ಕೆಜಿ ಚಿನ್ನದ ಸಾಗಣೆ ವಿಫಲವಾಗಿರುವ ಬಗ್ಗೆ ಮಾಹಿತವಿಫಲವಾಗಿದೆ.ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಸುಮಾರು 102.55 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಅಕ್ರಮ ಆಮದು ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿವರವಾದ ಆರೋಪಪಟ್ಟಿ ಸಲ್ಲಿಸಿದೆ.
ಚೆನ್ನೈ: ರಾಷ್ಟ್ರೀಯ ಹೆದ್ದಾರಿಗಳಲ್ಲಿ 60 ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಎಂಟು ಟೋಲ್ ಪ್ಲಾಜಾಗಳಲ್ಲಿ ವಾಹನ ಬಳಕೆದಾರರ ಶುಲ್ಕವನ್ನು ಏಪ್ರಿಲ್ 1 ರಿಂದ 3% ರಿಂದ 5% ರಷ್ಟು ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿನ 60 ಟೋಲ್ ಪ್ಲಾಜಾಗಳು ಚೆನ್ನೈ-ಕನ್ನಿಯಾಕುಮಾರಿ, ತಿರುಚ್ಚಿ-ಸೇಲಂ ಮತ್ತು ಸೇಲಂ-ಕೊಯಂಬತ್ತೂರು ಸೇರಿದಂತೆ ಪ್ರಮುಖ ವಿಸ್ತರಣೆಗಳಲ್ಲಿವೆ. ರಾಜ್ಯ ಹೆದ್ದಾರಿಗಳಲ್ಲಿ, ಎಂಟು ಪ್ಲಾಜಾಗಳು 60-ಕಿಮೀ ವಂಡಲೂರ್-ಮಿಂಜೂರ್ ಹೊರ ವರ್ತುಲ ರಸ್ತೆಯಲ್ಲಿ ನಾಲ್ಕು, ಮಧುರೈ ರಿಂಗ್ ರಸ್ತೆಯಲ್ಲಿ ಎರಡು, ಮತ್ತು ಪೂರ್ವ ಕರಾವಳಿ ರಸ್ತೆಯ ಅಕ್ಕರೈ ಮತ್ತು ಹಳೆಯ ಮಹಾಬಲಿಪುರಂ ರಸ್ತೆಯ ನವಲೂರಿನಲ್ಲಿ ತಲಾ ಒಂದನ್ನು ಒಳಗೊಂಡಿದೆ.
ಉಡುಪಿ: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಒಳಗೊಂಡ ನಡೆಯುತ್ತಿರುವ ಸಂಘರ್ಷವು ಕರ್ನಾಟಕದ ಕರಾವಳಿಯ ಕರಾವಳಿ ಮೀನುಗಾರರ ಮೇಲೆ ತೀವ್ರವಾಗಿ ಪರಿಣಾಮ ಬೀರುತ್ತಿದೆ. ಮೀನನ ಬೆಲೆಯಲ್ಲಿ ಕುಸಿತಕಂಡಿದ್ದು, ನಷ್ಟವನ್ನು ಉಂಟು ಮಾಡಿದೆ.ಏಷ್ಯಾದ ಅತಿದೊಡ್ಡ ಮೀನುಗಾರಿಕಾ ಬಂದರುಗಳಲ್ಲಿ ಒಂದಾದ ಮಲ್ಪೆಯಲ್ಲಿ ಮೀನುಗಾರಿಕೆ ಉದ್ಯಮವು ತೀವ್ರ ಸಂಕಷ್ಟ ಎದುರಿಸುತ್ತಿದೆ. ಹೋಟೆಲ್ಗಳ ಮುಚ್ಚುವಿಕೆ ಮತ್ತು ಯುದ್ಧ ಮತ್ತು ವಾಣಿಜ್ಯ ಎಲ್ಪಿಜಿ ಕೊರತೆಯಿಂದಾಗಿ ಮೀನು ರಫ್ತು ಸ್ಥಗಿತಗೊಂಡಿರುವುದು ಮೀನಿನ ಬೆಲೆ ಕುಸಿಯಲು ಕಾರಣವಾಗಿದೆ. ಮೀನಿನ ಪ್ರಕಾರಕ್ಕೆ ಅನುಗುಣವಾಗಿ ಪ್ರತಿ ಕಿಲೋಗ್ರಾಂಗೆ ₹50 ರಿಂದ ₹200ವರೆಗೆ ಬೆಲೆ ಕುಸಿದಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರ ಗೆಲ್ಲುವ ಮಾನದಂಡ ಆಧಾರದ ಮೇಲೆ ಸಮರ್ಥ ಶಾಮನೂರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ ಎಂದರು. ಈ ಸಂಬಂಧ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, ಮುಸ್ಲಿಂ ಸಮುದಾಯದ ಮುಖಂಡರಿಗೆ ವಿಧಾನಪರಿಷತ್ ಹಾಗೂ ನಿಗಮ, ಮಂಡಳಿ ನೇಮಕಾತಿಯಲ್ಲಿ ಒತ್ತು ನೀಡಲಾಗುತ್ತದೆ ಎಂದು ಭರವಸೆ ನೀಡಿದರು. ಇನ್ನೂ ಸಮರ್ಥ ಶಾಮನೂರು ಪರವಾದ ಒಲವು ವ್ಯಕ್ತವಾದ ಹಿನ್ನೆಲೆ ಒಲವು ವ್ಯಕ್ತವಾಗಿದೆ.
ಬೆಂಗಳೂರು: ಈಚೆಗೆ ಸಂಚಲನ ಮೂಡಿಸಿದ ಮೂಡುಬಿದಿರೆ ಇನ್ಸ್ಪೆಕ್ಟರ್ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ಇದೀಗ ಗೃಹ ಸಚಿವ ಪರಮೇಶ್ವರ್ ಅವರು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಸರ್ಕಾರಕ್ಕೆ ಆದೇಶಿಸ ನೀಡಿದ್ದೇನೆ ಎಂದು ಪರಮೇಶ್ವರ್ ಹೇಳಿದರು. ಸದಾಶಿವನಗರ ಸರ್ಕಾರಿ ನಿವಾಸದಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಜೊತೆ ನಾಲ್ವರು ಸಂತ್ರಸ್ತೆಯರು ಪರಮೇಶ್ವರ್ ಭೇಟಿಯಾಗಿ ಮಾತುಕತೆ ನಡೆಸಿದರು. ಆ ಬಳಿಕ ಪ್ರತಿಕ್ರಿಯಿಸಿದ ಪರಮೇಶ್ವರ್ ಅವರು, ಸಂತ್ರಸ್ತೆಯರು ಭೇಟಿ ವೇಳೆ ಹಲವು ಮಾಹಿತಿ ನೀಡಿದ್ದಾರೆ. ಇನ್ನೂ ಇನ್ಸ್ಪೆಕ್ಟರ್
ಬೆಳ್ತಂಗಡಿ: ತಾಲ್ಲೂಕಿನ ಅಳದಂಗಡಿಯಲ್ಲಿ ತೋಟವೊಂದರಲ್ಲಿ ಕಾಣಿಸಿಕೊಂಡ ಬೃಹತ್ ಕಾಳಿಂಗ ಸರ್ಪವೊಂದು ಪತ್ತೆಯಾಗಿದೆ. ಇನ್ನೂ ಅದನ್ನು ಸೆರೆಹಿಡಿಯುವ ವೇಳೆ ಅದು ಉರಗತಜ್ಞನ ಮೇಲೆ ಆಕ್ರಮಣಕಾರಿಯಾಗಿ ದಾಳಿ ನಡೆಸಲು ಯತ್ನಿಸಿದೆ. ಆದರೆ ಉರಗ ತಜ್ಞ ಚಾಣಕ್ಷತನದಿಂದ ಬೃಹತ್ ಕಾಳಿಂಗವನ್ನು ಸೆರೆಹಿಡಿಯುವಲ್ಲಿ ಸಕ್ಸಸ್ ಆಗಿದ್ದಾನೆ. ಹಾವು ಸೆರೆ ಹಿಡಿಯುವ ವಿಡಿಯೋವನ್ನು ಅಲ್ಲೇ ಇದ್ದ ವ್ಯಕ್ತಿಯೊಬ್ಬರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ವೀರೇಂದ್ರ ಜೈನ್ ಎಂಬವರ ತೋಟದಲ್ಲಿ ಸುಮಾರು 13ಅಡಿ ಉದ್ದದ ಬೃಹತ್ ಗಾತ್ರದ
ಬೆಂಗಳೂರು: ಆದಿತ್ಯ ಧರ್ ನಿರ್ದೇಶನದಲ್ಲಿ ಮೂಡಿಬಂದ ನಟ ರಣವೀರ್ ಸಿಂಗ್ ಅಭಿನಯದ ಧುರಂದರ್ 2ಸಿನಿಮಾ ಮೊದಲ ವಾರದಲ್ಲಿಯೇ ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸುತ್ತಿದೆ. ಬಿಡುಗಡೆಯಾದ ಆರನೇ ದಿನಕ್ಕೆ ₹545ಕೋಟಿ ಬಾಚಿಕೊಂಡು ದೇಶದ ಎಲ್ಲ ಚಿತ್ರಮಂದಿರಗಳಲ್ಲೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಎಲ್ಲ ಕಡೆಯಿಂದಲೂ ಸ್ಪೈ-ಆಕ್ಷನ್ ಥ್ರಿಲ್ಲರ್ ಆಗಿರುವ ಧುರಂದರ್ ಸಿನಿಮಾಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಇದೀಗ ಸಿನಿಮಾಗೆ
ಶೇಕ್ ಹ್ಯಾಂಡ್ ಮಾಡಲು ಕೈ ಚಾಚಿದ ಮದುಮಗನಿಗೆ ಮದಮಗಳು ಥುಪಕ್ ಎಂದು ಉಗುಳಿದ್ದಾಳೆ. ಇದೀಗ ಮದುವೆಯೇ ಕ್ಯಾನ್ಸಲ್ ಆಗಿದೆ. ಇಂತಹದ್ದೊಂದು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೆಲವರು ಯಾರದ್ದೋ ಬಲವಂತಕ್ಕೆ ಮದುವೆಯಾಗಲು ಒಪ್ಪಿಕೊಳ್ಳುತ್ತಾರೆ. ಈ ಪೈಕಿ ಕೆಲವರು ತಮ್ಮ ಹೆತ್ತವರ ಮುಖ ನೋಡಿಕೊಂಡು ಹೊಂದಾಣಿಕೆ ಮಾಡಿಕೊಂಡು ಜೀವನ ಮಾಡುತ್ತಾರೆ. ಮತ್ತೆ ಕೆಲವು ಮದುವೆಗಳು ಮಂಟಪದವರೆಗೆ ಬಂದು ರದ್ದಾಗುತ್ತವೆ. ಅಂತಹದ್ದೇ ಘಟನೆಯಿದು. ಅದ್ಧೂರಿಯಾಗಿ ಮದುವೆ ಕಾರ್ಯಕ್ರಮ ಏರ್ಪಡಿಸಲಾಗಿರುತ್ತದೆ. ವಧು ಮತ್ತು ವರ ಇಬ್ಬರೂ ಮದುವೆ ಡ್ರೆಸ್ ನಲ್ಲಿದ್ದು ಫೋಟೋಗ್ರಾಫರ್ ಗಳು ಬೇರೆ ಬೇರೆ ಆಂಗಲ್ ನಿಂದ ಫೋಟೋ ತೆಗೆಯುತ್ತಿರುತ್ತಾರೆ.
ಬೆಂಗಳೂರು: 49ವರ್ಷವಾದ್ರೂ ಈಗಲೂ ಬಳುಕುವ ಬಳ್ಳಿಯಂತಿರುವ ಕನ್ನಡದ ಖ್ಯಾತ ನಟಿ ಪ್ರೇಮ ಅವರು ತಮ್ಮ ಫಿಟ್ನೆಸ್ ರಹಸ್ಯವನ್ನು ಹೇಳಿಕೊಂಡಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಪ್ರೇಮಾ ಬಳಿ ತಮ್ಮ ಫಿಟ್ನೆಸ್ ರಹಸ್ಯವನ್ನು ಕೇಳುತ್ತಾರೆ. ನೀವು ಜಿಮ್ ಮಾಡುತ್ತೀರಾ ಎಂದು ಪ್ರಶ್ನೆ ಮಾಡುತ್ತಾರೆ. ಅದಕ್ಕೆ ನಗುತ್ತಲೇ ಉತ್ತರಿಸಿದ ಪ್ರೇಮಾ ನೋ ಜಿಮ್, ಓನ್ಲಿ ಯೋಗಾ ಎಂದಿದ್ದಾರೆ. ನಾನು ಜಿಮ್ ಮಾಡುತ್ತಿಲ್ಲ, ಆದರೆ ಯೋಗವನ್ನು ದಿನನಿತ್ಯ ಮಾಡುತ್ತೇನೆ ಎಂದು ನಗುತ್ತಲೇ ಪ್ರತಿಕ್ರಿಯಿಸಿದ್ದಾರೆ.
ಲಕ್ನೋ: ತನ್ನ ಅಕ್ರಮ ಸಂಬಂಧಕ್ಕೆ ಅತ್ತೆ ಅಡ್ಡಿಯಾಗುತ್ತಿದ್ದಳೆಂದು ಪ್ರೇಮಿಯ ಜತೆ ಸೇರಿಕೊಂಡು ಅತ್ತೆಯನ್ನೇ ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ತನ್ನ ಪ್ರೀತಿಗೆ ಅಡ್ಡಿಯಾಗಿದ್ದಳೆಂದು ಅತ್ತೆಯನ್ನು ಕೊಲ್ಲಲು ಆರೋಪಿ ರಂಜನಾ ವರ್ಮಾ, ಪ್ರಿಯಕರ ರಾಜನ್ ಶರ್ಮಾನ ಸಹಾಯವನ್ನು ಕೋರಿದ್ದಾಳೆ. ಸಿಸಿಟಿವಿ ದೃಶ್ಯಾವಳಿಗಳಿಂದ ಆರೋಪಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. 36 ವರ್ಷದ ರಂಜನ ವರ್ಮಾ, 21ವರ್ಷದ ರಾಜನ್ ಶರ್ಮಾ ಜತೆ ಅಕ್ರಮ ಸಂಬಂಧವನ್ನು ಹೊಂದಿದ್ದಳು. ಈ ವಿಚಾರ ಅತ್ತೆಗೆ
ಬೆಂಗಳೂರು: ಬಾಲಿವುಡ್ ಅಂಕಣದಲ್ಲಿ ಧೂಳೆಬ್ಬಿಸುತ್ತಿರುವ ಧುರಂಧರ್-2 ಸಿನಿಮಾ ಇಂದಿನಿಂದ ಕನ್ನಡದಲ್ಲಿ ದರ್ಶನ ನೀಡುತ್ತಿದೆ. ಹಿಂದಿಯಲ್ಲಿ ಬಿಡುಗಡೆಯಾದ ಈ ಸಿನಿಮಾ ಕಳೆದ ನಾಲ್ಕು ದಿನಗಳಿಂದ ಬಾಕ್ಸ್ ಆಫೀಸ್ನಲ್ಲಿ ಭಾರೀ ಸದ್ದು ಮಾಡಿದೆ. ಈ ಮೊದಲು ಚಿತ್ರವನ್ನ ನೋಡಿದ ಕನ್ನಡಿಗರು ಈ ಚಿತ್ರವನ್ನ ಹಿಂದಿಯಲ್ಲಿಯೇ ನೋಡಿದ್ದಾರೆ. ಆದರೆ, ರಿಲೀಸ್ ಆದ ಐದನೇ ದಿನಕ್ಕೆ ಧುರಂಧರ್-2 ಕನ್ನಡ ವರ್ಶನ್ ಲಭ್ಯವಾಗುತ್ತಿದೆ. ಈ ಕುರಿತು ಚಿತ್ರ ವಿತರಣಾ ಸಂಸ್ಥೆ ಜಿಯೋ ಸ್ಟುಡಿಯೊ ಮಾಹಿತಿ ಹಂಚಿಕೊಂಡಿಕೊಂಡಿದೆ. ಆದಿತ್ಯಧರ್ ನಿರ್ದೇಶನದ ‘ಧುರಂಧರ್2’ ಚಿತ್ರವನ್ನು ಕರ್ನಾಟಕವು ಸೇರಿ ವಿದೇಶಗಳಲ್ಲೂ ಮಾರ್ಚ್19ರಂದು ಬಿಡುಗಡೆ ಮಾಡಲಾಗಿತ್ತು. ಇನ್ನೂ, ಈ ಚಿತ್ರ ಇಲ್ಲಿಯವರೆಗೂ ₹500 ಕೋಟಿಗೂ ಅಧಿಕ ಗಳಿಕೆ ಕಂಡಿದೆ.
ನವದೆಹಲಿ: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧಇನ್ನಷ್ಟು ದಿನ ಮುಂದುವರಿಯಬಹುದು. ಆದರೆ ಭಾರತಕ್ಕೆ ಏನೂ ಆಗಲ್ಲ ಎಂದು ಪ್ರಧಾನಿ ಮೋದಿ ಇಂದು ಲೋಕಸಭೆಯಲ್ಲಿ ಭರವಸೆ ನೀಡಿದ್ದಾರೆ. ಇರಾನ್, ಇಸ್ರೇಲ್ ನಡುವಿನ ಯುದ್ಧ ಮತ್ತು ಭಾರತಕ್ಕೆ ಇದರಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಇಂದು ಪ್ರಧಾನಿ ಮೋದಿ ಲೋಕಸಭೆಯಲ್ಲಿ ಮಾತನಾಡಿದ್ದಾರೆ. ಈ ವೇಳೆ ಯುದ್ಧ ಇನ್ನಷ್ಟು ದಿನ ಮುಂದುವರಿಯುವ ಸಾಧ್ಯತೆಯಿದೆ ಎಂದಿದ್ದಾರೆ. ಆದರೆ ನಮ್ಮ ದೇಶಕ್ಕೆ ಯಾವುದೇ ತೊಂದರೆಯಾಗಲ್ಲ. ತೈಲ, ಅನಿಲ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಇಂತಹ ಹಲವು ಕಠಿಣ ಪರಿಸ್ಥಿತಿಗಳನ್ನು ನಾವು ಎದುರಿಸಿದ್ದೇವೆ.
ಮುಂಬೈ: ನಾನು ನನ್ನ ಫೆರಾರಿ ಕಾರಿನಲ್ಲಿ ಸಂಚರಿಸುವಾಗಲೂ ಹನುಮಾನ್ ಚಾಲಿಸಾ ಮಂತ್ರವನ್ನು ಕೇಳುತ್ತಿರುತ್ತೇನೆ. ಅದು ನನಗೆ ಶಕ್ತಿ ಕೊಡುತ್ತದೆ ಎಂದು ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಹೇಳಿಕೊಂಡಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ಕಾರ್ಯಕ್ರಮವೊಂದರಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಚಿಟ್ ಚ್ಯಾಟ್ ನಡೆಸಿದರು. ಈ ವೇಳೆ ಸಂದರ್ಶಕರು ಅವರ ಕಾರಿನ ಕ್ರೇಜ್ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಆಗ ಹಾರ್ದಿಕ್ ಹೇಳಿದ ವಿಚಾರ ಎಲ್ಲರನ್ನೂ ಅಚ್ಚರಿಗೊಳಪಡಿಸಿದೆ. ಹಾರ್ದಿಕ್ ಪಾಂಡ್ಯ ಒಂಥರಾ ಫ್ಲೇಮ್ ಬಾಯ್ ಕ್ಯಾರೆಕ್ಟರ್ ಎಂದೇ ಎಲ್ಲರೂ ಅಂದುಕೊಂಡಿರೋದು. ಆದರೆ ಈ ಸಂವಾದದಲ್ಲಿ ಹಾರ್ದಿಕ್ ತಮಗೆ ದೇವರ ಮೇಲಿನ ಭಕ್ತಿ ಎಷ್ಟಿದೆ ಎಂದು ಓಪನ್ ಆಗಿ ಹೇಳಿಕೊಂಡಿದ್ದಾರೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ವಾರದ ಆರಂಭದಲ್ಲೇ ಅಡಿಕೆ ಬೆಲೆ ಕೊಂಚ ಇಳಿಕೆಯಾಗಿತ್ತು. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಕೆಯಾಗಿತ್ತು. ಇದು ಬೆಳೆಗಾರರಿಗೆ ಸಮಾಧಾನ ತಂದಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಸತತವಾಗಿ ಬೆಲೆ ಇಳಿಕೆ ಕಂಡುಬರುತ್ತಿದೆ. ಕೆಲವು ವರ್ಗದ ಅಡಿಕೆ ಬೆಲೆಯಲ್ಲಿ ಇಂದು ಮತ್ತೆ ಇಳಿಕೆ ಕಂಡುಬರುತ್ತಿದೆ. ಇಂದು ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 530 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿಯಲ್ಲಿದ್ದು 530 ರೂ.ಗಳಷ್ಟಾಗಿದೆ.
ಪಣಜಿ: ದುಬಾರಿ ಬೆಲೆಯ ಫಾರ್ಚ್ಯೂನರ್ ಕಾರನ್ನು ಯುವಕರ ಗುಂಪು ಬೀಚ್ ನಲ್ಲಿ ತೊಳೆಯಲು ತೆಗೆದುಕೊಂಡು ಹೋಗಿತ್ತು. ಮುಂದೆ ಆಗಿದ್ದೇನು ಎಂದು ನೋಡಲು ಇಲ್ಲಿದೆ ವಿಡಿಯೋ. ಇದು ಗೋವಾ ಬೀಚ್ ನಲ್ಲಿ ನಡೆದ ಘಟನೆ. ಇತ್ತೀಚೆಗಿನ ದಿನಗಳಲ್ಲಿ ಯುವ ಜನಾಂಗ ಏನೇನೋ ಹುಚ್ಚು ಸಾಹಸಕ್ಕೆ ಕೈ ಹಾಕುತ್ತಾರೆ. ದುಡ್ಡಿಗೆ ಬೆಲೆಯೇ ಇಲ್ಲ ಎನ್ನುವ ಕಾಲವಿದು. ಗುಜರಾತ್ ನ ಈ ಯುವಕರೂ ಇದೇ ರೀತಿ ತಮ್ಮ ಫಾರ್ಚ್ಯೂನರ್ ಕಾರನ್ನು ತೊಳೆಯಲು ಬೀಚ್ ಗೆ ತೆಗೆದುಕೊಂಡು ಹೋಗಿದ್ದರು. ಬೀಚ್ ನಲ್ಲಿ ನೀರಿನ ಅಲೆ ಬರುವಲ್ಲಿ ಕಾರು ತೆಗೆದುಕೊಂಡು ಹೋಗಿ ನಿಲ್ಲಿಸಿ ಅಲ್ಲಿ ತೊಳೆಯುವ ಐಡಿಯಾ ಈ ಯುವಕರದ್ದಾಗಿತ್ತು.
ಮುನ್ನಾರ್: ರಾತ್ರಿ ಸಂಚಾರ ಮಾಡುವಾಗ ಕಾಡಾನೆ ದಾಳಿಗೆ ಕಾರಿನ ಸಮೇತ ನೆಲಕಚ್ಚಬೇಕಾಗಿದ್ದವರು ಕೂದಲೆಳೆಯಲ್ಲಿ ಬಚಾವ್ ಆದ ವೈರಲ್ ವಿಡಿಯೋ ಇಲ್ಲಿದೆ ನೋಡಿ. ಇದು ನಡೆದಿರುವುದು ಕೇರಳದ ಮುನ್ನಾರ್ ಬಳಿ. ರಾತ್ರಿ ವೇಳೆ ಅರಣ್ಯ ಪ್ರದೇಶಗಳ ಬಳಿ ಹೆದ್ದಾರಿಗಳಲ್ಲಿ ಸಂಚರಿಸುವಾಗ ಮೈ ಎಲ್ಲಾ ಕಣ್ಣಾಗಿದ್ದರೂ ಸಾಲದು. ಕೆಲವೊಮ್ಮೆ ಕಾಡು ಪ್ರಾಣಿಗಳ ದಾಳಿಯಿಂದ ಎಷ್ಟೋ ಅವಘಡಗಳಾಗುವುದು ಇದೆ. ಇದೇ ರೀತಿ ಮುನ್ನಾರ್ ಬಳಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕುಟುಂಬವೊಂದು ಆನೆ ದಾಳಿಗೆ ಬಲಿಯಾಗುವುದರಲ್ಲಿತ್ತು. ಕಾರನ್ನು ಅಡ್ಡಗಟ್ಟಿದ್ದ ಗಜರಾಜ ತನ್ನ ಸೊಂಡಿಲಿನಿಂದ ಅದನ್ನು ನೂಕಿ ಪಲ್ಟಿ ಮಾಡುವುದರಲ್ಲಿತ್ತು.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಯಥಾಸ್ಥಿತಿಯಲ್ಲಿದೆ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ಇಂದು ಪರಿಶುದ್ಧ ಚಿನ್ನದ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಪರಿಶುದ್ಧ ಚಿನ್ನದ ದರ ನಿನ್ನೆ 1,52,285.00 ರೂ.ಗಳಿತ್ತು. ಆದರೆ ಇಂದು ಯಥಾಸ್ಥಿತಿಯಲ್ಲಿದ್ದು 1,52,285.00 ರೂ.ಗಳಷ್ಟಿದೆ.
ಬೆಂಗಳೂರು: ದಾವಣಗೆರೆ, ಬಾಗಲಕೋಟೆ ಎರಡೂ ಕಡೆ ನಾವೇ ಗೆಲ್ಲುತ್ತೇವೆ ಎಂದು ಉಪಚುನಾವಣೆ ಫಲಿತಾಂಶದ ಬಗ್ಗೆ ಬಿಜೆಪಿ ನಾಯಕ ಬಿ ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಬಿ ಶ್ರೀರಾಮುಲು ಎರಡೂ ಕಡೆ ಬಿಜೆಪಿ ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದಾರೆ. ‘30 ವರ್ಷದ ರಾಜಕೀಯ ಜೀವನದಲ್ಲಿ ಸಾಕಷ್ಟು ಉಪಚುನಾವಣೆ ನೋಡಿದ್ದೇನೆ. ಈ ಹಿಂದೆ ಒಂದೇ ಸಮಯಕ್ಕೆ 11 ಉಪಚುನಾವಣೆ ನಡೆದಿತ್ತು. ಆಗ 10 ರಲ್ಲಿ ಬಿಜೆಪಿ ಗೆದ್ದಿದ್ದೆವು. ಈಗಲೂ ಅದೇ ರೀತಿ ನಾವು ಗೆಲ್ತೇವೆ.
ಜ್ಯೋತಿಷ್ಯದ ಪ್ರಕಾರ ಕನ್ಯಾ ರಾಶಿಯವರು ಯಾವ ರೀತಿಯ ಆಹಾರ ಸೇವನೆ ಮಾಡಬೇಕು, ಯಾವ ರೀತಿಯ ದೇಹ ಪ್ರಕೃತಿ ಅವರದ್ದು ಎಂಬುದನ್ನು ಇಲ್ಲಿ ನೋಡಿ. ಕನ್ಯಾ ರಾಶಿಗೆ ಬುಧ ಆಳುವ ಗ್ರಹನಾಗಿದ್ದಾನೆ. ಈ ರಾಶಿಯವರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ಹೊಂದಿರುತ್ತಾರೆ. ಈ ರಾಶಿಯವರ ಜೀರ್ಣಕ್ರಿಯೆ ಮತ್ತು ಕರುಳು ಸೂಕ್ಷ್ಮವಾಗಿರುತ್ತದೆ. ಇದಕ್ಕೆ ಸಂಬಂಧಿಸಿದ ಅನಾರೋಗ್ಯ ಬರುವುದು ಹೆಚ್ಚು. ಹೀಗಾಗಿ ಈ ರಾಶಿಯವರು ಯಾವ ತರಕಾರಿ, ಯಾವ ಹಣ್ಣು, ಧಾನ್ಯ ಮತ್ತು ಮಸಾಲೆ ಪದಾರ್ಥ ಸೇವಿಸಿದರೆ ಆರೋಗ್ಯ ಚೆನ್ನಾಗಿರುತ್ತದೆ ಎಂದು ತಿಳಿದುಕೊಳ್ಳಿ.
ನವದೆಹಲಿ: ಇಸ್ರೇಲ್ ಇರಾನ್ ನಡುವೆ ಯುದ್ಧ ಮುಂದುವರಿದಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಭದ್ರತಾ ಸಮಿತಿ ಜೊತೆ ಬ್ಯಾಕ್ ಟು ಬ್ಯಾಕ್ ಮೀಟಿಂಗ್ ನಡೆಸುತ್ತಿದ್ದಾರೆ. ಇಸ್ರೇಲ್ ಮತ್ತು ಇರಾನ್ ಯುದ್ಧ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಇದರಿಂದ ನಮ್ಮ ದೇಶವೂ ತೊಂದರೆ ಅನುಭವಿಸುತ್ತಿದೆ. ಈಗಾಗಲೇ ತೈಲ, ಅನಿಲ, ಕಚ್ಚಾ ವಸ್ತುಗಳು ಸರಿಯಾಗಿ ಪೂರೈಕೆಯಾಗದೇ ತೊಂದರೆ ಎದುರಾಗಿದೆ. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಭದ್ರತಾ ಸಮಿತಿ ಮೀಟಿಂಗ್ ನಡೆಸಿದ್ದಾರೆ. ಯುದ್ಧ ಇನ್ನಷ್ಟು ದಿನ ಮುಂದುವರಿಯಬಹುದು. ಆದರೆ ದೇಶದ ಜನತೆಗೆ ಯಾವುದೇ ಕ್ಷೇತ್ರದಲ್ಲೂ ತೊಂದರೆಗಳು ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಮೋದಿ ಸೂಚನೆ ನೀಡಿದ್ದಾರೆ.
ಜಮ್ಮು ಕಾಶ್ಮೀರ: ಇರಾನ್ ಗೆ ಸಹಾಯ ಮಾಡಲು ಕಾಶ್ಮೀರಿ ಮುಸ್ಲಿಮರು ಮನೆಯಲ್ಲಿದ್ದ ಚಿನ್ನ, ಹಣ ಕೊಟ್ಟಿದ್ದಾರೆ. ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇರಾನ್ ಪರಮೋಚ್ಛ ನಾಯಕ ಆಯತೊಲ್ಲಾ ಖಮೇನಿಯನ್ನು ಇಸ್ರೇಲ್-ಅಮೆರಿಕಾ ಪಡೆಗಳು ಹತ್ಯೆ ಮಾಡಿದಾಗ ಭಾರತದಲ್ಲೂ ಮುಸ್ಲಿಮರು ಬೀದಿಗಳಿದು ಪ್ರತಿಭಟನೆ ನಡೆಸಿದ್ದರು. ಇದೀಗ ಕಾಶ್ಮೀರಿಗರು ನೇರವಾಗಿ ಇರಾನ್ ಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಕಾಶ್ಮೀರದ ಹಲವು ಕಡೆ ಈಗ ಬೀದಿ ಬೀದಿಯಲ್ಲಿ ಶಿಯಾ ಮುಸ್ಲಿಂ ಪಂಗಡದವರು ಯುದ್ಧ ಪೀಡಿತ ಇರಾನ್ ಜನರ ನೆರವಿಗಾಗಿ ನಗ-ನಗದು ಸಂಗ್ರಹ ಮಾಡುತ್ತಿದ್ದಾರೆ.
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅನಾರೋಗ್ಯ ಹಿನ್ನಲೆಯಲ್ಲಿ ದಿಡೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಆಗಿದ್ದೇನು ಇಲ್ಲಿದೆ ವಿವರ. ಸಚಿವ ಶಿವರಾಜ್ ತಂಗಡಗಿ ಆರೋಗ್ಯದ್ಇ ಏರುಪೇರಾಗಿದೆ. ತಮ್ಮ ಸ್ವ ಕ್ಷೇತ್ರದಲ್ಲಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ತೆರಳಿದ್ದ ಅವರು ಬೆಂಗಳೂರಿಗೆ ವಾಪಸಾಗುವಾಗ ದಿಡೀರ್ ಎದೆ ನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಶಿರಾ ದಾಟಿ ಕೋರ ಬಳಿ ಬಂದಾಗ ಅವರಿಗೆ ಎದೆ ನೋವು ಕಂಡುಬಂದಿದೆ. ಹೀಗಾಗಿ ತಕ್ಷನವೇ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟೆಹ್ರಾನ್: ಹೊರ್ಮುಜ್ ಜಲಸಂಧಿ ದಾಟಬೇಕಾದರೆ ಇರಾನ್ ವಿಧಿಸಿರುವ ಷರತ್ತಿಗೆ ಇತರೆ ರಾಷ್ಟ್ರಗಳು ನಿಜಕ್ಕೂ ಶಾಕ್ ಆಗಿವೆ. ಯಾವುದೋ ಎರಡು ರಾಷ್ಟ್ರಗಳು ತಮ್ಮ ಗುರಿ ಸಾಧನೆಗೆ ಮಾಡಿದ ಯುದ್ಧಕ್ಕೆ ಈಗ ವಿಶ್ವದ ಎಲ್ಲಾ ರಾಷ್ಟ್ರಗಳೂ ಬೆಲೆ ತೆರಬೇಕಾಗಿದೆ. ಪಶ್ಚಿಮ ಏಷ್ಯಾದಲ್ಲಿ ಯುದ್ಧದ ವಾತಾವರಣದಿಂದಾಗಿ ಇತರೆ ರಾಷ್ಟ್ರಗಳು ಅಗತ್ಯ ವಸ್ತುಗಳ ಸಾಗಾಟಕ್ಕೆ ತೊಂದರೆ ಅನುಭವಿಸುತ್ತಿದೆ. ತೈಲ, ಅನಿಲ, ಕಚ್ಚಾ ವಸ್ತುಗಳ ಸಾಗಾಟಕ್ಕೆ ತೊಂದರೆಯಾಗಿದ್ದು ಇಡೀ ಜಗತ್ತು ಬಿಕ್ಕಟ್ಟಿನಲ್ಲಿದೆ. ಇದರ ನಡುವೆ ಇಸ್ರೇಲ್, ಅಮೆರಿಕಾ ಮೇಲಿನ ಸಿಟ್ಟಿಗೆ ಇರಾನ್ ಹೊರ್ಮುಜ್ ಜಲಸಂಧಿಯನ್ನು ಬಂದ್ ಮಾಡಿದೆ. ಇದರಿಂದಾಗಿ ಈ ಮಾರ್ಗವಾಗಿ ಹಡಗುಗಳ ಸಂಚಾರ ಸಾಧ್ಯವಾಗುತ್ತಿಲ್ಲ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈಗ ನಿಮಗೆ ಈ ಒಂದು ಇಷ್ಟ ಐಟಂ ಸಿಗಲ್ಲ. ಇದಕ್ಕೆ ಕಾರಣ ಗ್ಯಾಸ್ ಸಿಲಿಂಡರ್ ಅಭಾವ. ರಾಜ್ಯದ ಶ್ರೀಮಂತ ದೇವಾಲಯವಾಗಿರುವ ಕುಕ್ಕೆ ಸುಬ್ರಹ್ಮಣ್ಯಕ್ಕೂ ಈಗ ಗ್ಯಾಸ್ ಸಿಲಿಂಡರ್ ಅಭಾವ ತಟ್ಟಿದೆ. ಸರಿಯಾಗಿ ಎಲ್ ಪಿಜಿ ಸಿಲಿಂಡರ್ ಪೂರೈಕೆಯಾಗದೇ ಭಕ್ತರಿಗೆ ಮೊದಲಿನಂತೆ ಪ್ರಸಾದ ಭೋಜನ ತಯಾರಿಸಲು ಸಾಧ್ಯವಾಗುತ್ತಿಲ್ಲ. ಕುಕ್ಕೆ ಸುಬ್ರಹ್ಮಣ್ಯ ಅನ್ನ ಪ್ರಸಾದಕ್ಕೆ ಕೂಡಾ ಫೇಮಸ್. ಅನ್ನದಾನವನ್ನೂ ದೇವರ ಸೇವೆ ಎಂದು ಭಕ್ತಿಯಿಂದ ಮಾಡಿಕೊಂಡು ಬರಲಾಗುತ್ತಿದೆ. ಹಾಗಂತ ಸಿಲಿಂಡರ್ ಇಲ್ಲ ಎಂಬ ಕಾರಣಕ್ಕೆ ಪ್ರಸಾದ ಭೋಜನಕ್ಕೆ ಸಂಪೂರ್ಣ ಕತ್ತರಿ ಹಾಕಿಲ್ಲ.
ಮುಂಬೈ: ಬಾಲಿವುಡ್ ನಟಿ ದಿಶಾ ಪಟಾನಿ ಕಾರ್ಯಕ್ರಮವೊಂದರಲ್ಲಿ ಉಟ್ಟುಕೊಂಡಿದ್ದ ತೊಡುಗೆ ಈಗ ಟೀಕೆಗೆ ಗುರಿಯಾಗಿದೆ. ತೊಟ್ಟುಕೊಂಡಿದ್ದು ಎದೆ ಕಾಣುವ ಡ್ರೆಸ್ ಆದೂ ಜಾರುವುದರಲ್ಲಿತ್ತು. ಈ ವಿಡಿಯೋ ಇಲ್ಲಿದೆ ನೋಡಿ. ಬಾಲಿವುಡ್ ನಟಿಯರು ಕೆಲವೊಂದು ಕಾರ್ಯಕ್ರಮಕ್ಕೆ ಗ್ಲಾಮರಸ್ ಆಗಿ ಕಾಣಬೇಕು ಎಂದು ಡ್ರೆಸ್ ಮಾಡಿಕೊಳ್ಳುತ್ತಾರೆ. ಆದರೆ ಕೆಲವೊಮ್ಮೆ ಡಿಸೈನರ್ ಗಳ ತಪ್ಪೋ, ನಟಿಯರ ತಪ್ಪೋ ಸಾರ್ವಜನಿಕವಾಗಿ ಡ್ರೆಸ್ ವಿಚಾರವಾಗಿ ಮುಜುಗರಕ್ಕೊಳಗಾಗುತ್ತಾರೆ. ಇದೀಗ ನಟಿ ದಿಶಾ ಪಟಾನಿ ಕೂಡಾ ಡ್ರೆಸ್ ಕಾರಣಕ್ಕೆ ಟೀಕೆಗೆ ಗುರಿಯಾಗಿದ್ದಾರೆ. ಕಾರ್ಯಕ್ರಮವೊಂದಕ್ಕೆ ದಿಶಾ ಸ್ಟೈಲಿಶ್ ಆಗಿ ಬಂದಿದ್ದಾರೆ. ಎದೆ ಕಾಣುವಂತಹ ಡ್ರೆಸ್ ಹಾಕಿಕೊಂಡು ಬಂದಿದ್ದರು.
ಬೆಂಗಳೂರು: ಕಳೆದ ವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಈ ವಾರ ರಾಜ್ಯದಲ್ಲಿ ಮಳೆಯಿರುತ್ತಾ? ಇಲ್ಲಿದೆ ಈ ವಾರದ ಹವಾಮಾನ ವರದಿ. ಕಳೆದ ವಾರ ದಕ್ಷಿಣ ಕನ್ನಡ, ಬೆಂಗಳೂರು, ಧಾರವಾಡ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿತ್ತು. ಅದರಲ್ಲೂ ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿ ರೈತರ ಬೆಳೆ ನಷ್ಟವಾಗಿತ್ತು. ಈ ವಾರ ಕೆಲವು ಜಿಲ್ಲೆಗಳಲ್ಲಿ ವಾರದ ಮಧ್ಯದಲ್ಲಿ ಮಳೆಯಾಗುವ ಸೂಚನೆಯಿದೆ. ವಿಶೇಷವಾಗಿ ಕೊಡಗು, ಹಾಸನ, ಶಿವಮೊಗ್ಗ, ರಾಯಚೂರು, ಬೀದರ್, ಹಾವೇರಿ, ಕೊಪ್ಪಳ, ಜಿಲ್ಲೆಗಳಲ್ಲಿ ವಾರದ ಮಧ್ಯ ಭಾಗದಲ್ಲಿ ಮಳೆಯಾಗುವ ಸೂಚನೆಯಿದೆ.
ಇಂದು ಸೋಮವಾರವಾಗಿದ್ದು ಶಿವನಿಗೆ ವಿಶೇಷವಾದ ದಿನವಾಗಿದೆ. ಇಂದು ಶಿವ ದೇವರ ಕುರಿತಾದ ಶಿವ ಪಂಚಾಕ್ಷರಿ ಸ್ತೋತ್ರವನ್ನು ಓದಿ. ಇದರಿಂದ ಆಯಸ್ಸು, ಆರೋಗ್ಯ ವೃದ್ಧಿಯಾಗುತ್ತದೆ.ಓಂ ನಮಃ ಶಿವಾಯ ಶಿವಾಯ ನಮಃ ಓಂಓಂ ನಮಃ ಶಿವಾಯ ಶಿವಾಯ ನಮಃ ಓಂ ನಾಗೇಂದ್ರಹಾರಾಯ ತ್ರಿಲೋಚನಾಯಭಸ್ಮಾಂಗರಾಗಾಯ ಮಹೇಶ್ವರಾಯ ।ನಿತ್ಯಾಯ ಶುದ್ಧಾಯ ದಿಗಂಬರಾಯತಸ್ಮೈ "ನ" ಕಾರಾಯ ನಮಃ ಶಿವಾಯ ॥ 1 ॥ ಮಂದಾಕಿನೀ ಸಲಿಲ ಚಂದನ ಚರ್ಚಿತಾಯನಂದೀಶ್ವರ ಪ್ರಮಥನಾಥ ಮಹೇಶ್ವರಾಯ ।ಮಂದಾರ ಮುಖ್ಯ ಬಹುಪುಷ್ಪ ಸುಪೂಜಿತಾಯತಸ್ಮೈ "ಮ" ಕಾರಾಯ ನಮಃ ಶಿವಾಯ ॥ 2 ॥
ಈ ಹಿಂದೆ ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ ದಾಖಲೆಯನ್ನು ಹಿಂದಿಕ್ಕುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಸರ್ಕಾರದ ಮುಖ್ಯಸ್ಥರಾಗುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದ್ದಾರೆ.ಭಾನುವಾರ, 22 ಮಾರ್ಚ್ 2026 ರಂದು, ಪ್ರಧಾನಿ ಮೋದಿ ಅವರು ಸರ್ಕಾರದ ಮುಖ್ಯಸ್ಥರಾಗಿ 8,931 ದಿನಗಳನ್ನು ಪೂರ್ಣಗೊಳಿಸಿದರು, ಚಾಮ್ಲಿಂಗ್ ಅವರ 8,930 ದಿನಗಳ ಗಡಿಯನ್ನು ದಾಟಿದರು.7 ಅಕ್ಟೋಬರ್ 2001 ರಿಂದ 21 ಮೇ 2014 ರವರೆಗೆ ಗುಜರಾತ್ನ ಮುಖ್ಯಮಂತ್ರಿಯಾಗಿ 13 ವರ್ಷಗಳಿಗಿಂತ ಹೆಚ್ಚು ಕಾಲ
ಚಂಡೀಗಢ: ನಾಲ್ಕು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ವರದಕ್ಷಿಣೆಗಾಗಿ ಹತ್ಯೆ ಮಾಡಿರುವ ಭೀಕರ ಘಟನೆ ಹರಿಯಾಣದ ಗುರುಗ್ರಾಮ್ನಲ್ಲಿ ವರದಿಯಾಗಿದೆ. ಹತ್ಯೆಯಾದ ಪತ್ನಿಯನ್ನು ಕಾಜಲ್ ಎಂದು ಗುರುತಿಸಲಾಗಿದೆ. ರೇಡಿಯಾಲಜಿಸ್ಟ್ ಆಗಿರುವ ಅರುಣ್ ಶರ್ಮಾ ಮತ್ತು ನರ್ಸ್ ಆಗಿದ್ದ ಕಾಜಲ್ ಗುರುಗ್ರಾಮ್ನ ನರ್ಸಿಂಗ್ ಹೋಂನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಸ್ನೇಹ ಪ್ರೀತಿಯಾಗಿ ತಿರುಗಿ ನವೆಂಬರ್ನಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬಳಿಕ ಪತಿ-ಪತ್ನಿಯ ನಡುವೆ ಕ್ಷುಲ್ಲಕ ವಿಷಯಕ್ಕೆ ಆಗಾಗ ಜಗಳ ನಡೆಯುತ್ತಿತ್ತು. ಅಲ್ಲದೇ ವರದಕ್ಷಿಣೆ ಕಿರುಕುಳ ಕೊಟ್ಟು ಆಕೆಯ ಮೇಲೆ ಅರುಣ್ ಹಲ್ಲೆ ನಡೆಸುತ್ತಿದ್ದ ಎಂದು ಕಾಜಲ್ ಸಹೋದರ ಆರೋಪ ಮಾಡಿದ್ದಾರೆ.
ಬೆಂಗಳೂರು: ಈಚೆಗೆ ಸಾಮಾಜಿಕ ಜಾಲತಾಣದಲ್ಲಿ ಹಲ್ಚಲ್ ಎಬ್ಬಿಸಿದ ಡಿಜಿಪಿ ರಾಮಚಂದ್ರರಾವ್ಗೆ ಸೇರಿದ ವಿಡಿಯೋಗಳು ವೈರಲ್ ಪ್ರಕರಣ ಸಂಬಂಧ ಎಸ್ಐಟಿಗೆ ವರದಿಯನ್ನು ಸಲ್ಲಿಸಿದ್ದಾರೆ. ಸರ್ಕಾರಕ್ಕೆ 100 ಪುಟಗಳ ವರದಿ ಸಲ್ಲಿಸಿದ ಎಸ್ಐಟಿ, ವಿಡಿಯೋಗಳು ಡೀಪ್ಫೇಕ್ ಅಥವಾ ಎಐ ಅಲ್ಲ ಅಂತ ರಿಪೋರ್ಟ್ ನೀಡಲಾಗಿದೆ.ಇದೀಗ ತನಿಖೆಯಲ್ಲಿ ವಿಡಿಯೋಗಳು ಡೀಪ್ಫೇಕ್, ಎಐ ಸೃಷ್ಟಿಯಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರು: "ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ ಅವರಿಗೆ ನೀಡಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.'ನಾನು, ಮುಖ್ಯಮಂತ್ರಿಯವರು ಹಾಗೂ ಜಮೀರ್ ಅಹಮದ್, ನಾಸೀರ್ ಹುಸೇನ್, ಸಲೀಂ ಅಹ್ಮದ್, ಹುಸೇನ್, ಹ್ಯಾರಿಸ್, ಜಬ್ಬಾರ್ ಅವರು ಎಲ್ಲ ಅಲ್ಪಸಂಖ್ಯಾತ ನಾಯಕರು, ಎಐಸಿಸಿ ಕಾರ್ಯದರ್ಶಿಗಳ ಜತೆ ಮಾತನಾಡಿ ಒಮ್ಮತದ ತೀರ್ಮಾನಕ್ಕೆ
ಮಧ್ಯಪ್ರದೇಶ: ಇಲ್ಲಿನ ಉಜ್ಜಯಿನಿಯ ಮಹರ್ಷಿ ಸಂದೀಪನಿ ರಾಷ್ಟ್ರೀಯ ವೇದಿಕ್ ಅಧ್ಯಯನ ಸಂಸ್ಥೆಯ ವಸತಿ ಶಾಲೆಯ ವಾರ್ಡನ್ ಒಬ್ಬರು ತನ್ನ ಶಾಲೆಯ ಬಾಲಕನ ಮೇಲೆ ಕ್ರೂರತನ ಮೆರೆದಿದ್ದಾರೆ.ಶಾಲೆಯ ವಿದ್ಯಾರ್ಥಿಯನ್ನು ಅಲ್ಲಿನ ವಾರ್ಡನ್ ಕೋಲಿನಿಂದ ಕ್ರೂರವಾಗಿ ಹೊಡೆಯುತ್ತಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಾರ್ಡನ್ ಈ ಕ್ರಮ ಕೈಗೊಂಡಿದ್ದಾರೆ. ಅದು ಅಶಿಸ್ತು ಎಂದು ಉಲ್ಲೇಖಿಸಿ ಕೋಲಿನಿಂದ ತಪ್ಪಿತಸ್ಥ ವಿದ್ಯಾರ್ಥಿಗೆ ನಾಲ್ಕಾರು ಜನರ ಎದುರು ವಾರ್ಡನ್ ಮನಸೋಇಚ್ಚೆ ಥಳಿಸಿದ್ದಾರೆ. ಘಟನೆಯನ್ನು ಅಲ್ಲಿಯೇ ಇದ್ದ ವ್ಯಕ್ತಿಯೊಬ್ಬರು ರಹಸ್ಯವಾಗಿ ಚಿತ್ರೀಕರಿಸಿದ್ದಾರೆ.
ಅಮರಾವತಿ: ಹೈದರಾಬಾದ್ನ ಪೂರ್ವ ಗೋದಾವರಿ ಜಿಲ್ಲೆಯ ರಾಜಮಹೇಂದ್ರವರಂನಲ್ಲಿ ಶಂಕಿತ ಕಲಬೆರಕೆ ಹಾಲು ಸೇವಿಸಿ ಮೃತಪಟ್ಟವರ ಸಂಖ್ಯೆ ಏರುತ್ತಲೇ ಇದೆ. ಫೆಬ್ರವರಿ 16ರಿಂದ ಮಾರ್ಚ್ 21ರವರೆಗೆ ಒಟ್ಟು 20 ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅವರಲ್ಲಿ 16 ಜನರು ಮೃತಪಟ್ಟಿದ್ದಾರೆ, ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಒಬ್ಬರು ಚೇತರಿಸಿಕೊಂಡಿದ್ದಾರೆ.ಅಂಗಡಿಯೊಂದರಲ್ಲಿ ಹಾಲು ಖರೀದಿಸಿದ ಹಲವು ಮಂದಿಯಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದಿತ್ತು. ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ ವೇಳೆ ಹಾಲು ಕಲಬೆರಕೆಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿತ್ತು. ಈ ಪ್ರಕರಣದಡಿಯಲ್ಲಿ ಅಂಗಡಿ ಮಾಲೀಕ ಎ.ಗಣೇಶ್ವರರಾವ್ (33) ಎಂಬುವವರನ್ನು ಬಂಧಿಸಲಾಗಿದೆ.
ಹೆಲ್ಮೆಟ್ ಯಾಕೆ ಹಾಕಿಲ್ಲ ಎಂದು ಬೈಕ್ ಸವಾರನನ್ನು ತಡೆದು ಕೇಳಿದ್ರೆ ಆತ ನೀಡಿದ ಉತ್ತರ ಕೇಳಿ ಪೊಲೀಸರೇ ದಂಗಾದ್ರು. ಜೊತೆಗೆ ಹೆಲ್ಮೆಟ್ ಕಂಪನಿಗಳಿಗೆ ಮನವಿ ಮಾಡಿದ್ದಾರೆ. ಇಂತಹದ್ದೊಂದು ಫನ್ನಿ ವಿಡಿಯೋ ಇಲ್ಲಿದೆ ನೋಡಿ. ರಸ್ತೆ ಸಂಚಾರಿ ನಿಯಮದ ಪ್ರಕಾರ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯ. ಭಾರತದ ಯಾವುದೇ ರಾಜ್ಯದಲ್ಲೂ ಇದು ಕಡ್ಡಾಯ ನಿಯಮವಾಗಿದ್ದು ತಪ್ಪಿದಲ್ಲಿ ಸಂಚಾರಿ ಪೊಲೀಸರು ದಂಡ ವಿಧಿಸಬಹುದಾಗಿದೆ. ಇದೇ ರೀತಿ ಸಂಚಾರಿ ಪೊಲೀಸರೊಬ್ಬರು ಬೈಕ್ ನಲ್ಲಿ ಬರುತ್ತಿದ್ದ ಮಧ್ಯವಯಸ್ಕ ವ್ಯಕ್ತಿಯನ್ನು ನೋಡಿ ಆತ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ತಡೆದರು.
ಹೈದರಾಬಾದ್: ಮನೆಯವರು ಬೆಕ್ಕು ಸಾಕಲು ಅನುಮತಿ ನಿರಾಕರಿಸಿದ್ದಕ್ಕೆ 23ವರ್ಷದ ಎಂಬಿಬಿಎಸ್ ಪದವೀಧರೆ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಈ ಘಟನೆ ಅಲ್ವಾಲ್ ನಲ್ಲಿ ನಡೆದಿದೆ. ಅಲ್ವಾಲ್ ಪೊಲೀಸರ ಪ್ರಕಾರ, ಮೃತರನ್ನು ರಿಸಾಲಾ ಬಜಾರ್ನ ಟಿ ಪ್ರಿನ್ಸಿ, ಅಲಿಯಾಸ್ ಶ್ರೇಷ್ಠಾ ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಎಂಬಿಬಿಎಸ್ ಪದವಿ ಮುಗಿಸಿ ಸ್ನಾತಕೋತ್ತರ ಅಧ್ಯಯನಕ್ಕೆ ತಯಾರಿ ನಡೆಸುತ್ತಿದ್ದಳು. ಅಲ್ವಾಲ್ ಎಸ್ಐ ಎನ್ ದೇವೆಂದರ್ ಪ್ರಕಾರ, ಪ್ರಿನ್ಸಿ ಇತ್ತೀಚೆಗೆ ಸಾಕು ಬೆಕ್ಕನ್ನು ತಂದಿದ್ದರು, ಇದು ಅವರ ಕುಟುಂಬ
ಇರಾನ್ನ ಮೇಲೆ ಯುಎಸ್-ಇಸ್ರೇಲ್ ಯುದ್ಧ ಪ್ರಾರಂಭವಾದಾಗಿನಿಂದ ದಕ್ಷಿಣ ಇಸ್ರೇಲ್ನ ಡಿವೋನಾ ಪಟ್ಟಣದ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆದಿದೆ. ಕನಿಷ್ಠ 88ಜನರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಇಸ್ರೇಲ್ನ ತುರ್ತು ಸೇವೆಗಳ ಪ್ರಕಾರ, ಅರಾದ್ನಲ್ಲಿ ಕನಿಷ್ಠ 88 ಜನರು ಗಾಯಗೊಂಡಿದ್ದಾರೆ, ಇದರಲ್ಲಿ 10 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ, ನಗರ ಕೇಂದ್ರದಲ್ಲಿ ವ್ಯಾಪಕ ಹಾನಿ ವರದಿಯಾಗಿದೆ.ಡಿಮೋನಾದಲ್ಲಿ 10 ವರ್ಷದ ಬಾಲಕ ಸೇರಿದಂತೆ 39 ಮಂದಿ ಗಾಯಗೊಂಡಿದ್ದಾರೆ, ಹಲವಾರು ವಸತಿ ಕಟ್ಟಡಗಳು ನಾಶವಾದ ನಂತರ ಅನೇಕ ಚೂರುಗಳ ಗಾಯಗಳೊಂದಿಗೆ ವೈದ್ಯಾಧಿಕಾರಿಗಳು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಹೇಳಿದರು.
ಬೆಂಗಳೂರು: ಕರ್ನಾಟಕದಲ್ಲಿ ಘೋಷಣೆಯಾಗಿರುವ ಎರಡು ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಹಾಗೂ ಬಾಗಲಕೋಟೆ ಕ್ಷೇತ್ರದಿಂದ ಉಮೇಶ್ ಮೇಟಿ ಅವರನ್ನು ಕಾಂಗ್ರೆಸ್ನಿಂದ ಕಣಕ್ಕಿಳಿಯಲಿದ್ದಾರೆ.ಇನ್ನೂ ರಾಜ್ಯದಲ್ಲಿ ಉಪಚುನಾವಣೆ ಉಪಚುನಾವಣೆ ಘೋಷಣೆಯಾಗುತ್ತಿದ್ದ ಹಾಗೇ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಅನ್ನು
ಚಿತ್ರದುರ್ಗ: ವ್ಯಕ್ತಿಯೊಬ್ಬ ನಡೆಸಿದ ಭೀಕರ ಆ್ಯಸಿಡ್ ದಾಳಿಯಲ್ಲಿ ಮಹಿಳೆ ಹಾಗೂ ಮೂವರು ಮಕ್ಕಳು ಸೇರಿ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗದ ಮಲಪ್ಪನಹಟ್ಟಿ ಪ್ರದೇಶದಲ್ಲಿ ನಡೆದಿದೆ. ಗಾಯಗೊಂಡರವನ್ನು ತಹಸೀನಾ ಭಾನು (47), ನಗ್ಮಾ ನಾಯಕ್ (49), ರೋಶ್ನಿ (12), ನೇಹಾ (27) ಮತ್ತು ಇಕ್ಸ್ರಾ ಫಾತಿಮಾ (4) ಆ್ಯಸಿಡ್ ದಾಳಿಯಲ್ಲಿ ಗಾಯಗೊಂಡಿದ್ದಾರೆ.ಚಿತ್ರದುರ್ಗ ನಗರದ ನೆಹರು ನಗರದ ಸುಹೈಲ್ ಬಾಷಾ ಅಲಿಯಾಸ್ ಸುಹೈಲ್ (50) ಈ ಹೇಯ ಕೃತ್ಯ ಎಸಗಿದ್ದಾನೆ ಎಂದು
ಬೆಂಗಳೂರು: ರಾಜ್ಯದ ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣಹವೆಯಿತ್ತು. ಆದರೆ ಇತ್ತೀಚಿಗೆ ಕೆಲ ಜಿಲ್ಲೆಗಳಲ್ಲಿ ಮಳೆ ಸುರಿದು ತಾಪಮಾನ ಸುಧಾರಿಸಿತ್ತು. ಇಂದೂ ಸಹ ಹಲವೆಡೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಲಿದೆ.ಬೆಂಗಳೂರಿನಿಂದ ಬೀದರ್ವರೆಗೆ ಒಟ್ಟೂ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಅದರಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಮಂಗಳೂರು: ಮೂಡುಬಿದಿರೆ ಸರ್ಕಲ್ ಇನ್ಸ್ಪೆಕ್ಟರ್ ಬಿ.ಜಿ. ಸಂದೇಶ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಶಿಕ್ಷಕಿಯೊಬ್ಬರು ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದ್ದ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಠಾಣೆಯಲ್ಲಿ ಸಂದೇಶ್ ವಿರುದ್ಧ ಸಂತ್ರಸ್ತೆ ಶಿಕ್ಷಕಿ ದೂರು ನೀಡಿದ್ದಾರೆ. ಆ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಎಫ್ಐಆರ್ ದಾಖಲಾಗಿದೆ. 2018 ರಿಂದ 2023ರವರೆಗೆ ಶಿಕ್ಷಕಿ ಮನೆಗೆ ಹೋಗಿ ಬೆದರಿಸಿ ಅತ್ಯಾಚಾರ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.2020ರಲ್ಲಿ ಸಂದೇಶ್ ಬೆಳ್ತಂಗಡಿ ಸರ್ಕಲ್ ವ್ಯಾಪ್ತಿಯಲ್ಲಿರುವ ವೇಣೂರು ಪೊಲೀಸ್ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಆಗಿದ್ದರು. ಹೀಗಾಗಿ, ವೇಣೂರು ಠಾಣಾ ವ್ಯಾಪ್ತಿಯಲ್ಲೇ ಅತ್ಯಾಚಾರ ಆರೋಪದಡಿ ಸೆಕ್ಷನ್ 376(2)(a)(1), 376(2)(n), 384, 506ರಡಿ ಕೇಸ್ ದಾಖಲಾಗಿದೆ.
ಮುಂಬೈ: ರಣವೀರ್ ಸಿಂಗ್ ಅಭಿನಯದ ಧುರಂಧರ್ ರಿವೆಂಜ್ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಮೊದಲ ಮೂರು ದಿನಗಳ ಕಲೆಕ್ಷನ್ನಲ್ಲಿ ಹೊಸ ದಾಖಲೆ ಬರೆದಿದೆ. ರಣವೀರ್ ಸಿಂಗ್, ಸಂಜಯ್ ದತ್, ಅರ್ಜುನ್ ರಾಮ್ಪಾಲ್, ರಾಕೇಶ್ ಬೇಡಿ, ಸಾರಾ ಅರ್ಜುನ್ ಮುಂತಾದವರು ‘ಧುರಂಧರ್ 2’ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ನಿರ್ದೇಶಕ ಆದಿತ್ಯ ಧಾರ್ ಅವರು ಈ ಸಿನಿಮಾದಿಂದ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಮಾರ್ಚ್ 19ರಂದು ಎಲ್ಲ ಕಡೆಗಳಲ್ಲಿ ಧುರಂಧರ್ 2 ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಯಿತು. ಈ ಸಿನಿಮಾ ಆರಂಭದಿಂದಲೇ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿತ್ತು. ರಣವೀರ್ ಸಿಂಗ್ ಅಭಿನಯದ ಈ ಸ್ಪೈ ಥ್ರಿಲ್ಲರ್ ಸಿನಿಮಾ ಪ್ರೇಕ್ಷಕರ ನಿರೀಕ್ಷೆಗಳನ್ನು ಪೂರೈಸಿದೆ.
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯ ಮೇಲೆ ಹಿಡಿತ ಸಾಧಿಸಿರುವ ಇರಾನ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್ ವಾರ್ನಿಂಗ್ ನೀಡಿದ್ದಾರೆ. ಈ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡುವಂತೆ ದೊಡ್ಡಣ್ಣ ಡೆಡ್ಲೈನ್ ಫಿಕ್ಸ್ ಮಾಡಿದ್ದಾರೆ.ಹಾರ್ಮುಜ್ ಜಲಸಂಧಿಯು ಪರ್ಷಿಯನ್ ಕೊಲ್ಲಿಯನ್ನು ಓಮನ್ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದೊಂದಿಗೆ ಸಂಪರ್ಕಿಸುವ ಅತ್ಯಂತ ಪ್ರಮುಖವಾದ ಜಾಗತಿಕ ತೈಲ ಸಾಗಣೆ ಮಾರ್ಗವಾಗಿದೆ. ಇರಾನ್ ಮತ್ತು ಒಮಾನ್/ಯುಎಇ ನಡುವೆ ಇರುವ ಈ ಕಿರಿದಾದ ಜಲಮಾರ್ಗವು ವಿಶ್ವದ ತೈಲ ಮತ್ತು ಅನಿಲದ ಸಾಗಣೆಗೆ ದಾರಿಯಗಿದೆ. ಇದು ಜಾಗತಿಕ ಇಂಧನ ಭದ್ರತೆಗೆ ನಿರ್ಣಾಯಕವಾಗಿದೆ.ಟ್ರಂಪ್ ಅವರ ಎಚ್ಚರಿಕೆಗೆ ತೀಷ್ಣವಾಗಿ ಪ್ರತಿಕ್ರಿಯಿಸಿರುವ ಇರಾನ್ ಸೇನೆಯು, ಈ ಪ್ರದೇಶದಲ್ಲಿ ಅಮೆರಿಕಕ್ಕೆ ಸೇರಿದ ಎಲ್ಲಾ ಇಂಧನ, ತಂತ್ರಜ್ಞಾನ ಮತ್ತು ಉಪ್ಪುನೀರಿನ ನಿರ್ಮೂಲನ ಮೂಲಸೌಕರ್ಯಗಳನ್ನು ಟಾರ್ಗೆಟ್ ಮಾಡಿ ಹೊಡೆಯುವುದಾಗಿ ಬೆದರಿಕೆ ಹಾಕಿದೆ.
ಬೆಂಗಳೂರು: ಇದೇ 28ರಂದು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗಲಿದೆ. ಮೊದಲ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.ಈ ಪ್ರಯುಕ್ತ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರು ಶನಿವಾರ ತೆರಳಿ, ಬಂದೋಬಸ್ತ್ ವ್ಯವಸ್ಥೆಗಳ ಕುರಿತು ಪರಿಶೀಲಿಸಿದರು. ಸ್ಟ್ಯಾಂಡ್ಗಳು, ಹೋಲ್ಡಿಂಗ್ ಏರಿಯಾ ಮತ್ತಿತರ ಇತರ ಸ್ಥಳಗಳಲ್ಲಿ ಭದ್ರತೆ ಕುರಿತು ಸಮಾಲೋಚನೆ ನಡೆಸಿದರು.ಈ ಮಧ್ಯೆ ಟಿಕೆಟ್ ಖರೀದಿ ಸಂದರ್ಭದಲ್ಲಿ ವಂಚನೆಗಳು ನಡೆಯುವ ಸಾಧ್ಯತೆಯಿದ್ದು, ನಕಲಿ ಲಿಂಕ್ ಗಳು ಅಥವಾ ಕೊನೆ ಕ್ಷಣದ ವ್ಯವಹಾರದ ವಂಚನೆಗಳ ಜಾಲಕ್ಕೆ ಬೀಳದಿರಿ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಚೈತ್ರ ನವರಾತ್ರಿಯ ಪ್ರಯುಕ್ತ ಕನ್ನಡದ ಭಕ್ತಿಗೀತೆಯೊಂದನ್ನು ತಮ್ಮ ಸಾಮಾಜಿಕ ತಾಣ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ಡಾ. ರಾಜಕುಮಾರ್ ಅಭಿನಯದ ಕನ್ನಡದ ಪ್ರಸಿದ್ಧ ‘ಶ್ರೀ ಕೃಷ್ಣದೇವರಾಯ’ ಸಿನಿಮಾದಲ್ಲಿನ ‘ಶ್ರೀ ಚಾಮುಂಡೇಶ್ವರಿ, ಅಮ್ಮ ಶ್ರೀ ಚಾಮುಂಡೇಶ್ವರಿ’ ಎಂಬ ವಿಡಿಯೊ ಭಕ್ತಿಗೀತೆಯ ಯೂಟ್ಯೂಬ್ ಲಿಂಕ್ನ್ನು ಪ್ರಧಾನಿ ಅವರು ಹಂಚಿಕೊಂಡಿದ್ದು ಗಮನ ಸೆಳೆದಿದೆ.ಇನ್ನೂ ಈ ಹಾಡನ್ನು ಹಂಚಿಕೊಂಡು ವಿಶ್ವಮಾತೆಯ ಮೇಲಿನ ಅಚಲ ನಂಬಿಕೆಯು ಆಕೆಯ ಭಕ್ತರಲ್ಲಿ ಹೊಸ ಪ್ರಜ್ಞೆ ಮತ್ತು ಚೈತನ್ಯವನ್ನು ತುಂಬುತ್ತದೆ ಎಂದು ಮೋದಿ ಅವರು ಚೈತ್ರ ನವರಾತ್ರಿಯ ಶುಭಾಶಯಗಳನ್ನು ಜನತೆಗೆ ತಿಳಿಸಿದ್ದಾರೆ.