ನಟಿ ಸುಷ್ಮಾ ರಾವ್ ಅವರು ಮೊದಲ ಬಾರಿ ತಮ್ಮ ಕುಟುಂಬವನ್ನು ಕಲರ್ಸ್ ಕನ್ನಡ ವೇದಿಕೆಯಲ್ಲಿ ಪರಿಚಯಿಸಿದ್ದಾರೆ. ಕಲಾ ಬದುಕಿನಲ್ಲಿ 25ವರ್ಷವನ್ನು ಪೂರೈಸಿರುವ ಸುಷ್ಮಾಗೆ ಕಲರ್ಸ್ ಕನ್ನಡದ ಅನುಬಂಧ ವೇದಿಕೆಯಲ್ಲಿ ವಿಶೇಷ ಗೌರವನ್ನು ನೀಡಿ ಗೌರವಿಸಲಾಯಿತು. ಈ ವೇದಿಕೆಗೆ ಸುಷ್ಮಾಗೆ ಸರ್ಪ್ರೈಸ್ ಆಗಿ ಅವರ ಪತಿ ಹಾಗೂ ಮಗನನ್ನು ಕರೆಸಿಕೊಳ್ಳಲಾಗಿತ್ತು. ಈ ವೇಳೆ ನಟಿ ಎಲ್ಲರಿಗೂ ತಮ್ಮ ಮಗ ಹಾಗೂ ಪತಿಯನ್ನು ಪರಿಚಯಿಸಿದ್ದಾರೆ. ಈ ವೇಳೆ ಸುಷ್ಮಾರ ಬಗ್ಗೆ ಅವರ ಮಗ ಹಾಗೂ ಪತಿಯ ಬಳಿ ನಿರೂಪಕ ಸೃಜನ್ ಲೋಕೇಶ್ ಪ್ರಶ್ನೆ ಕೇಳಿ ಕಾಲೆಳೆದಿದ್ದಾರೆ. ಈ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ. ಪ್ರೋಮೋ ನೋಡಿದ ಮಂದಿ ಶಾಕ್ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿರುವ ಸುಷ್ಮಾ ಅವರು ಇದುವರೆಗೆ
ವಡೋದರಾದಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ 2026ರ ಇಂದಿನ ಪಂದ್ಯಾಟದಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮಂಗಳವಾರ ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯಲಿರುವ WPL 2026 ಋತುವಿನಲ್ಲಿ ತನ್ನ ಮೂರನೇ ಗೆಲುವು ಸಾಧಿಸಲು ನೋಡುತ್ತಿದೆ.
ಗದಗ: ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಬಳಿಕ ಇದೀಗ ಆರಂಭಿಸಿರುವ ಉತ್ಖನನ ಕಾರ್ಯ ಐದನೇ ದಿನದಲ್ಲಿ ಮುಗಿದಿದ್ದು 2ನೇ ದಿನ ಗೋಚರವಾಗಿದ್ದ ಶಿವಲಿಂಗದ ಪಾಣಿಪೀಠವನ್ನು ಪುರಾತತ್ವ ಸಿಬ್ಬಂದಿ ಹೊರ ತೆಗೆದಿದ್ದಾರೆ.ಈ ಪಾಣಿಪೀಠ ಎರಡೂ ಭಾಗವಾಗಿ ಒಡೆದು ಹೋಗಿದೆ. ಶಿವಲಿಂಗ ಇರುವ ಮಧ್ಯದ ಭಾಗ ತುಂಡಾಗಿದ್ದು ಈಗ ಈ ಭಾಗದ ಶೋಧ ಕಾರ್ಯ ನಡೆಯುತ್ತಿದೆ. ಇನ್ನೂ ಸಿಕ್ಕಿರುವ ಶಿಲಾಕೃತಿಯು ಕೈಮುಗಿದು, ಪದ್ಮಾಸನದಲ್ಲಿ ಕುಳಿತ ರೀತಿಯಲ್ಲಿದೆ. ಇಂದು ಮುಂಜಾನೆ ಪುರಾತನ ಕಾಲದ ಮಡಿಕೆ ಹಾಗೂ ಕವಡೆ ಪತ್ತೆಯಾಗಿತ್ತು. ಈಗ ಪುರಾತತ್ವ ಇಲಾಖೆ ಸಿಬ್ಬಂದಿ ಫೋಟೋಗ್ರಾಫಿ ಹಾಗೂ ಅದರ ಕುರುಹುಗಳ ದಾಖಲು ಮಾಡಿದ್ದಾರೆ.
ನವದೆಹಲಿ: ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ತನ್ನ ಎಸ್ಯುವಿ ಬಿದ್ದು, ನೀರು ತುಂಬಿದ್ದ ಕಾರಣ 27 ವರ್ಷದ ಯುವರಾಜ್ ಮೆಹ್ತಾ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಲ್ಡರ್ ಒಬ್ಬನನ್ನು ಬಂಧಿಸಲಾಗಿದೆ. ವಿಶ್ಟೌನ್ ಪ್ಲಾನರ್ಸ್ ಪ್ರೈವೇಟ್ ಲಿಮಿಟೆಡ್ನ ಮಾಲೀಕರಲ್ಲಿ ಒಬ್ಬರಾದ ಅಭಯ್ ಕುಮಾರ್ ಅವರನ್ನು ಮಂಗಳವಾರ ಬಂಧಿಸಿರುವುದಾಗಿ ನೋಯ್ಡಾ ಪೊಲೀಸರು ಘೋಷಿಸಿದ್ದಾರೆ ಮತ್ತು ಮತ್ತೊಬ್ಬ ಮಾಲೀಕ ಮನೀಶ್ ಕುಮಾರ್ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. 2021ರಲ್ಲಿ ಮಾಲ್ನ ನೆಲಮಾಳಿಗೆಯ ಪ್ರದೇಶದ ನಿರ್ಮಾಣಕ್ಕಾಗಿ ನೋಯ್ಡಾದ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಮಧುರಾಂತಕಂನಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದೆ. ಈ ಸಾರ್ವಜನಿಕ ಸಭೆಯು ವಿಧಾನಸಭಾ ಚುನಾವಣೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ ಸ್ಪಷ್ಟ ಕರೆಯನ್ನು ನೀಡಲಿದೆ. ಪ್ರಧಾನಿ ನರೇಂದ್ರ ಮೋದಿ ವಿಶೇಷ ಭಾಷಣ ಮಾಡಲಿದ್ದು, ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ,
ನವದೆಹಲಿ: ಭಾರತೀಯ ಜನತಾ ಪಕ್ಷದ ಹೊಸ ನಾಯಕತ್ವದ ಉನ್ನತ ಸ್ಥಾನವನ್ನು ಒತ್ತಿಹೇಳುವ ಕ್ರಮವಾಗಿ, ಮಂಗಳವಾರದಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಔಪಚಾರಿಕವಾಗಿ ಆಯ್ಕೆಯಾದ ನಿತಿನ್ ನಬಿನ್ ಅವರಿಗೆ ಕೇಂದ್ರ ಸರ್ಕಾರ Z- ವರ್ಗದ ಭದ್ರತೆಯನ್ನು ಒದಗಿಸಿದೆ.ಗುಪ್ತಚರ ಬ್ಯೂರೋ ಬೆದರಿಕೆ ಗ್ರಹಿಕೆ ಮೌಲ್ಯಮಾಪನದ ಆಧಾರದ ಮೇಲೆ ಕೇಂದ್ರ ಗೃಹ ಸಚಿವಾಲಯ ತೆಗೆದುಕೊಂಡ ಈ ನಿರ್ಧಾರವು, ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷದ ಉನ್ನತ ಸಾಂಸ್ಥಿಕ ಹುದ್ದೆಗೆ ಏರಿದ ಸ್ವಲ್ಪ ಸಮಯದ ನಂತರ ಬಂದಿದೆ.
ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಹಿಂದಿ ಚಲನಚಿತ್ರಗಳಲ್ಲಿ ಕೋಮುವಾದಿ ವಿಷಯಗಳ ಕುರಿತು ಮಾಡಿದ ಕಾಮೆಂಟ್ಗಳ ವಿವಾದದ ಕೇಂದ್ರಬಿಂದುವಾಗಿ, ಆನ್ಲೈನ್ನಲ್ಲಿ ಗಮನಾರ್ಹ ಪ್ರತಿಕ್ರಿಯೆಯನ್ನು ಹುಟ್ಟುಹಾಕಿದರು. ಆದಾಗ್ಯೂ, ಮಲಯಾಳಂ ಸಂಗೀತ ರಂಗವು ಅವರನ್ನು ಸಮರ್ಥಿಸಿಕೊಂಡಿತು, ಕೈಲಾಸ್ ಮೆನನ್ ಮತ್ತು ಸಿತಾರಾ ಕೃಷ್ಣಕುಮಾರ್ ಅವರಂತಹ ಪ್ರಮುಖ ವ್ಯಕ್ತಿಗಳು ತಮ್ಮ ಆಲೋಚನೆಗಳನ್ನು ವ್ಯಕ್ತಪಡಿಸುವ ಹಕ್ಕನ್ನು ಪ್ರತಿಪಾದಿಸಿದರು ಮತ್ತು ಅವರ ವಿರುದ್ಧ ನಿರ್ದೇಶಿಸಲಾದ ದ್ವೇಷಪೂರಿತ ಪ್ರತಿಕ್ರಿಯೆಗಳನ್ನು ಖಂಡಿಸಿದರು.
ಬೆಂಗಳೂರು: ಕಳೆದೊಂದು ತಿಂಗಳಿನಿಂದ ಮನೆಯೂಟಕ್ಕಾಗಿ ಬೇಡಿಕೆಯಿಟ್ಟಿರುವ ನಟಿ ಪವಿತ್ರಾ ಗೌಡ್ಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಕಾನೂನಿ ಅಡಿಯಲ್ಲಿ ಮನೆಯಿಂದ ಊಟ ತರಿಸುವುದಕ್ಕೆ ಅವಕಾಶವಿಲ್ಲ. ಅದಲ್ಲದೆ ಮನೆಯೂಟ ನೀಡುವುದು ಸೂಕ್ತವಲ್ಲ ಎಂದು ಸೆಷನ್ಸ್ ಕೋರ್ಟ್ ಆದೇಶಕ್ಕೆ ತಡೆಯನ್ನು ನೀಡಲಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಜೈಲಿನ ಊಟ ತಿನ್ನುತ್ತಿದ್ದೇನೆ. ಜೈಲೂಟದಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು, ಮನೆಯೂಟ ನೀಡುವಂತೆ ಪವಿತ್ರಾ ಗೌಡ ನ್ಯಾಯಾಲಯಕ್ಕೆ ಅರ್ಜಿ ಹಾಕಿ ಊಟವನ್ನು ಯಶಸ್ವಿಯಾಗಿದ್ದರು. ಇನ್ನೂ ಕಾರಾಗೃಹ ಇಲಾಖೆ ಮನೆಯೂಟ ನೀಡುವುದಕ್ಕೆ ಒಪ್ಪಿರಲಿಲ್ಲ. ಒಬ್ಬರಿಗೆ ಊಟ ನೀಡಿದ್ದಲ್ಲಿ ಇತರರು ಊಟಕ್ಕಾಗಿ
ನವದೆಹಲಿ: ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ತನ್ನ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನಿತಿನ್ ನಬಿನ್ ಅವರನ್ನು ಔಪಚಾರಿಕವಾಗಿ ಘೋಷಿಸಿತು.ಪ್ರಧಾನಿ ನರೇಂದ್ರ ಮೋದಿ, ಮಾಜಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ನಿತಿನ್ ಗಡ್ಕರಿ ಅವರು ಕಾರ್ಯಕ್ರಮದಲ್ಲಿ ನಬಿನ್ ಅವರನ್ನು ಸ್ವಾಗತಿಸಿದರು.ಬಿಜೆಪಿ ಸಾಂಸ್ಥಿಕ ಚುನಾವಣೆಯ ಚುನಾವಣಾ ಅಧಿಕಾರಿ ಕೆ. ಲಕ್ಷ್ಮಣ್ ಅವರು ಸಾಂಸ್ಥಿಕ ಚುನಾವಣೆಯ ಫಲಿತಾಂಶಗಳನ್ನು
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಪೈಪೋಟಿ ಇನ್ನೂ ತಣ್ಣಗಾಗಿಲ್ಲ. ಸಿದ್ದರಾಮಯ್ಯ ಅವರು ಬಜೆಟ್ಗಾಗಿ ತಯಾರಿ ನಡೆಸುತ್ತಿದ್ದರೆ, ಡಿಕೆ ಶಿವಕುಮಾರ್ ಅವರು ದಾವೋಸ್ಗೆ ಪ್ರಯಾಣ ಬೆಳೆಸಿದ್ದಾರೆ. ಈ ನಡುವೆ ಸಂಸದ ಡಿಕೆ ಸುರೇಶ್ ಅವರ ಹೇಳಿಕೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ವರಿಷ್ಠ, ಲೋಕಸಭೆ ನಾಯಕ ರಾಹುಲ್ ಗಾಂಧಿ ಅವರು ತಾಳ್ಮೆಯಿಂದ ಇರಿ ಎಂದು ಹೇಳಿದ್ದಾರೆ. ಮೈಸೂರಿಗೆ ರಾಹುಲ್ ಗಾಂಧಿ ಬಂದಾಗಲೂ ಡಿಕೆ ಶಿವಕುಮಾರ್ ಜತೆ ಅದೇ ಮಾತನನ್ನು ಹೇಳಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಗೃಹ ಇಲಾಖೆ ಒಂದು ರೀತಿ ಸತ್ತಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ಟೀಕಿಸಿದ್ದಾರೆ. ಇವತ್ತು ಪೊಲೀಸ್ ಇಲಾಖೆಯು ರಿಯಲ್ ಎಸ್ಟೇಟ್ನ ಕಚೇರಿಯಂತಾಗಿದೆ ಎಂದು ದೂರಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ ಗೃಹ ಸಚಿವರಿಗೆ ತಮ್ಮ ಜವಾಬ್ದಾರಿ ಏನೆಂದೇ ಅರ್ಥ ಆಗಿಲ್ಲ. ಕೇವಲ ಝೀರೊ ಟ್ರಾಫಿಕ್ನಲ್ಲಿ ಓಡಾಡುವುದೇ ಗೃಹ ಸಚಿವರ ಜವಾಬ್ದಾರಿ ಅಂದುಕೊಂಡಿದ್ದಾರೆ ಎಂದು ಆಕ್ಷೇಪಿಸಿದರು.ಉನ್ನತ ಅಧಿಕಾರಿ ಕಚೇರಿಯಲ್ಲಿ ಯೂನಿಫಾರ್ಮ್ನಲ್ಲಿ ಮಹಿಳೆ ಜೊತೆ ಚಕ್ಕಂದ ಆಡುವ ಮಟ್ಟಕ್ಕೆ ಪೊಲೀಸ್ ಇಲಾಖೆ ಬಂದು ನಿಂತಿದೆ ಎಂದರೆ, ಗೃಹ ಸಚಿವರು ತಮ್ಮ ಹಿಡಿತ ಇಟ್ಟುಕೊಂಡಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ
ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ, ಮಂಗಳವಾರ (ಜನವರಿ 20, 2026) ವರ್ಷದ ಮೊದಲ ಅಧಿವೇಶನದ ಆರಂಭಿಕ ದಿನದಂದು, ರಾಜ್ಯಗೀತೆ ಬಳಿಕ, ರಾಷ್ಟ್ರಗೀತೆಗೆ ಅವಕಾಶ ಮಾಡಿಕೊಡದ ಕಾರಣ ಬೇಸರದಿಂದ ಹೊರನಡೆದಿದ್ದಾರೆ. ತಮಿಳುನಾಡು ವಿಧಾನಸಭಾ ಅಧಿವೇಶನದ ಮೊದಲ ದಿನವೇ ಹೈಡ್ರಾಮಾ ನಡೆದಿದೆ. ತಮಿಳುನಾಡಿನಲ್ಲಿ ಇಂದಿನಿಂದ ವಿಧಾನಸಭಾ ಅಧಿವೇಶನ ಆರಂಭವಾಗಿದ್ದು, ತಮಿಳು ನಾಡಗೀತೆಯೊಂದಿಗೆ ಅಧಿವೇಶನ ಆರಂಭಿಸಲಾಯಿತು. ಆದರೆ ರಾಷ್ಟ್ರಗೀತೆ ಹಾಡಲು ಅನುವು ಮಾಡಿಕೊಟ್ಟಿಲ್ಲ, ಇದರಿಂದ ಬೇಸರಗೊಂಡ ರಾಜ್ಯಪಾಲ ಆರ್ ಎನ್ ರವಿ ತಮ್ಮ ಭಾಷಣ ಮಾಡದೇ ಸಭೆಯಿಂದ ನಿರ್ಗಮಿಸಿದ್ದಾರೆ.
ಬೆಂಗಳೂರು: ಕರ್ನಾಟಕದ ಉನ್ನತ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿ ಯಲ್ಲಿ ಹಲವು ಮಹಿಳೆಯರ ಜತೆ ಸರಸವಾಡಿದ ವಿಡಿಯೋ ವೈರಲ್ ಬೆನ್ನಲ್ಲೇ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಮಾಡಿದೆ. ವಿಡಿಯೋ ಬಳಿಕ ಯುವತಿಯ ಜತೆಗಿನ ಆಡಿಯೋ ವೈರಲ್ ಬೆನ್ನಲ್ಲೇ ಅವರನ್ನು ಅಮಾನತುಗೊಳಿಸಲಾಗಿದೆ ಮತ್ತು ಅವರ ವಿರುದ್ಧ ತನಿಖೆ ಆರಂಭಿಸಲಾಗಿದೆ. ಆದಾಗ್ಯೂ, ಅಧಿಕಾರಿಯ ಸುತ್ತಲಿನ ವಿವಾದ ಇದೊಂದೇ ಅಲ್ಲ. ಅವರು ಎದುರಿಸಿದ ಇತರ ಪ್ರಮುಖ ವಿವಾದಗಳ ನೋಟ ಇಲ್ಲಿದೆ.ವೃತ್ತಿ ಹಿನ್ನೆಲೆ:
ಇಂಧೋರ್: ಭಿಕ್ಷುಕನೊಬ್ಬನ ಆಸ್ತಿಯನ್ನು ಕಂಡು ಇಡೀ ರಾಜ್ಯವೇ ಶಾಕ್ ಆಗಿದೆ. ಹೌದು ತಳ್ಳಿಕೊಂಡು ಹೋಗುವ ಕುರ್ಚಿಯಲ್ಲಿ ಭಿಕ್ಷೆ ಬೇಡುವ ಭಿಕ್ಷುಕನಿಗೆ 3 ಮನೆ, 3 ಆಟೋ ರಿಕ್ಷಾ ಹಾಗೂ ಡಿಜೈರ್ ಕಾರು ಇರುವುದು ಪತ್ತೆಯಾಗಿದೆ. ಹೆಗಲ ಮೇಲೆ ಬೆನ್ನುಹೊರೆ ಮತ್ತು ಒಂದು ಜೋಡಿ ಶೂಗಳ ಒಳಗೆ ಕೈಗಳನ್ನು ಹಿಡಿದು, ಇಂದೋರ್ನ ಜನನಿಬಿಡ ಮಾರುಕಟ್ಟೆಯಾದ ಸರಾಫಾ ಬಜಾರ್ನಲ್ಲಿ ತನ್ನನ್ನು ತಾನೇ ತಳ್ಳಿಕೊಳ್ಳುತ್ತಾ ಭಿಕ್ಷೆ ಬೇಡುವ ಮಂಗಿಲಾಲ್ನ ಆಸ್ತಿಯನ್ನು ಕೇಳಿ ಇಡೀ ಇಂದೋರ್ ಬೆಚ್ಚಿಬಿದ್ದಿದೆ. ದೈಹಿಕವಾಗಿ ಅಂಗವಿಕಲ ಕೋಟ್ಯಾಧಿಪತಿ, ಅವನ ಹೆಸರಿನಲ್ಲಿ ಸರ್ಕಾರದಿಂದ ಮಂಜೂರು ಮಾಡಲಾದ ಮನೆ, ಮೂರು ಆಟೋರಿಕ್ಷಾಗಳು ಮತ್ತು ಮಾರುತಿ ಸುಜುಕಿ ಡಿಜೈರ್ ಕಾರು ಸೇರಿದಂತೆ ಮೂರು ಮನೆಗಳನ್ನು ಹೊಂದಿದ್ದಾನೆ.
ಬೆಂಗಳೂರು: ಗುರು ರಾಘವೇಂದ್ರ ಸ್ವಾಮಿಗಳನ್ನು ಅಪಮಾನ ಮಾಡಿದವರು ಯಾವತ್ತೂ ಉದ್ದಾರವಾಗಲ್ಲ ಎಂದು ಸಿಎಂ ಸಿದ್ದರಾಮಯ್ಯಗೆ ನಟ, ಬಿಜೆಪಿ ರಾಜ್ಯಸಭಾ ಸದಸ್ಯ ಜಗ್ಗೇಶ್ ಖಡಕ್ ಸಂದೇಶ ಕೊಟ್ಟಿದ್ದಾರೆ. ನಿನ್ನೆ ಅಭಿಮಾನಿಯೊಬ್ಬರು ರಾಘವೇಂದ್ರ ಸ್ವಾಮಿಗಳ ಫೋಟೋ ಕೊಡಲು ಮುಂದಾದಾಗ ಸಿದ್ದರಾಮಯ್ಯ ಅದನ್ನು ಸ್ವೀಕರಿಸಲು ನಿರಾಕರಿಸಿದರು. ಕೊಂಚ ಕೋಪದಿಂದಲೇ ಫೋಟೋ ತಳ್ಳಿ ಆತನಿಗೇ ಮರಳಿಸಿದ್ದರು. ಸಿದ್ದರಾಮಯ್ಯ ವರ್ತನೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಇಂದು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡು ನವರಸನಾಯಕ ಜಗ್ಗೇಶ್ ಕಿಡಿ ಕಾರಿದ್ದಾರೆ. ಗುರು ರಾಯರ ಪರಮ ಭಕ್ತರಾಗಿರುವ ಜಗ್ಗೇಶ್, ರಾಯರಿಗೆ ಅವಮಾನ ಮಾಡಿದವರು ಯಾವತ್ತೂ ಉದ್ದಾರವಾಗಲ್ಲ ಎಂದಿದ್ದಾರೆ.
ವಡೋದರ: ಆರ್ ಸಿಬಿ ಪರ ಆಡುವ ಮಹಿಳಾ ಕ್ರಿಕೆಟ್ ಆಟಗಾರ್ತಿ ಗೌತಮಿ ನಾಯ್ಕ್ ಗೆ ಟೀಂ ಇಂಡಿಯಾ ಕ್ರಿಕೆಟಿಗ, ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಸರ್ಪೈಸ್ ಕೊಟ್ಟಿದ್ದಾರೆ. ಆರ್ ಸಿಬಿ ಪರ ನಿನ್ನೆ ಪದಾರ್ಪಣೆ ಮಾಡಿದ್ದ ಗೌತಮಿ ನಾಯ್ಕ್ ಮಹಾರಾಷ್ಟ್ರದವರು. ದೇಶೀಯ ಕ್ರಿಕೆಟ್ ನಲ್ಲಿ ಮಿಂಚಿದ್ದ ಅವರನ್ನು ಗುರುತಿಸಿ ಸ್ಮೃತಿ ಮಂಧಾನ ಆರ್ ಸಿಬಿ ಪರ ನಿನ್ನೆ ತಂಡದಲ್ಲಿ ಆಡಿಸಿದ್ದರು. ಸ್ಮೃತಿ ಭರವಸೆ ಹುಸಿ ಮಾಡದ ಗೌತಮಿ ಮೊದಲ ಪಂದ್ಯದಲ್ಲೇ ಅರ್ಧಶತಕ ಸಿಡಿಸಿ ಪಂದ್ಯ ಶ್ರೇಷ್ಟರಾದರು. ಗೌತಮಿ ಮೆಚ್ಚಿನ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯರಂತೆ. ಹಾರ್ದಿಕ್ ಒತ್ತಡದ ಸಂದರ್ಭದಲ್ಲಿಯೂ ನಿರ್ಭೀತಿಯಿಂದ ಬ್ಯಾಟಿಂಗ್ ಮಾಡುವ ಶೈಲಿ ಗೌತಮಿಗೆ ತುಂಬಾ ಇಷ್ಟವಂತೆ.
ನೆಲ್ಲಿಕಾಯಿಯನ್ನು ನಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಂಡರೆ ಸಾಕಷ್ಟು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು. ಇದರಲ್ಲಿ ವಿಟಮಿನ್ ಸಿ ಹೇರಳವಾಗಿದ್ದು, ಔಷಧೀಯ ಗುಣಗಳ ಗಣಿಯಾಗಿದೆ.1. ರೋಗನಿರೋಧಕ ಶಕ್ತಿ ಹೆಚ್ಚಳ: ಇದರಲ್ಲಿ ಕಿತ್ತಳೆ ಹಣ್ಣಿಗಿಂತ 20ಪಟ್ಟು ಹೆಚ್ಚು ವಿಟಮಿನ್ ಸಿ ಇರುವುದರಿಂದ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಶೀತ, ಕೆಮ್ಮು ಮತ್ತು ಇತರ ಸೋಂಕುಗಳಿಂದ ನಿಮ್ಮನ್ನು ರಕ್ಷಿಸುತ್ತದೆ.2. ಜೀರ್ಣಕ್ರಿಯೆಗೆ ಸಹಕಾರಿ: ನಾರಿನಾಂಶ ಸಮೃದ್ಧವಾಗಿರುವುದರಿಂದ ಮಲಬದ್ಧತೆಯನ್ನು ನಿವಾರಿಸಲು ಮತ್ತು
ಕೋಝಿಕ್ಕೋಡ್: ಕೇರಳದಲ್ಲಿ ಸಂಚಲನ ಮೂಡಿಸಿದ್ದ ಬಸ್ನಲ್ಲಿನ ಲೈಂಗಿಕ ಕಿರುಕುಳ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಪೋಸ್ಟ್ ಮಾಡಿದ್ದ ಮಹಿಳೆಗೆ ಕೇರಳ ಪೊಲೀಸರು ಬಿಗ್ಶಾಕ್ ನೀಡಿದೆ.ಬಸ್ ಪ್ರಯಾಣದ ವೇಳೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತ 42 ವರ್ಷದ ವ್ಯಕ್ತಿಯ ಆತ್ಮಹತ್ಯೆ ಬೆನ್ನಲ್ಲೇ ಮಹಿಳೆಯ ವಿರುದ್ಧ ಸೋಮವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ತನ್ನ ಕಂಟೆಂಟ್ಗಾಗಿ ಬಸ್ ಪ್ರಯಾಣದ ಸಮಯದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದ್ದು, ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.ವಡಕರದ ನಿವಾಸಿ ಶಿಮ್ಜಿತಾ ಮುಸ್ತಫಾ (35) ವಿರುದ್ಧ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನವದೆಹಲಿ: ತಮ್ಮ ಬಾಸ್ ಯಾರು ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿಕೊಂಡಿದ್ದಾರೆ. ನಾನು ಕೇವಲ ಪಕ್ಷದ ಕಾರ್ಯಕರ್ತನಷ್ಟೇ ಎಂದಿದ್ದಾರೆ. ಬಿಜೆಪಿ ಎಂದರೆ ನರೇಂದ್ರ ಮೋದಿ, ನರೇಂದ್ರ ಮೋದಿ ಎಂದರೆ ಬಿಜೆಪಿ ಎನ್ನುವಷ್ಟು ಪ್ರಭಾವಿ ನಾಯಕ ಅವರು. ಆದರೆ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಅಧಿಕಾರ ಸ್ವೀಕಾರ ವೇಳೆ ತಮ್ಮ ಬಾಸ್ ಯಾರು ಎಂದು ಮೋದಿ ಹೇಳಿಕೊಂಡಿದ್ದಾರೆ. ಇಂದು ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕರಿಸಿದರು. ಈ ವೇಳೆ ಮಾತನಾಡಿರುವ ಅವರು ನನ್ನ ಬಾಸ್ ನಿತಿನ್ ನಬಿನ್ ಅವರು.
ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ 45 ವರ್ಷ ನಿತಿನ್ ನಬಿನ್ ಚುನಾಯಿತರಾಗಿದ್ದಾರೆ. ಅವರಿಗೆ ಬಿಜೆಪಿ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ಪಕ್ಷದ 12 ನೇ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕರಿಸಿದ್ದಾರೆ. ವಿಶೇಷವೆಂದರೆ ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಕಿರಿಯ ವಯಸ್ಸಿನ ವ್ಯಕ್ತಿ ಎಂಬ ದಾಖಲೆಯನ್ನೂ ಅವರು ಮಾಡಿದ್ದಾರೆ. ಅವರೀಗ ಅವಿರೋಧವಾಗಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಿತಿನ್ ನಬಿನ್ ಬಿಜೆಪಿ ಮಾಜಿ ನಾಯಕ, ಬಿಹಾರದ ನಬಿನ್ ಕಿಶೋರ್ ಪ್ರಸಾದ್ ಸಿನ್ಹಾ ಅವರ ಪುತ್ರ. ನಬಿನ್ ಕಿಶೋರ್ ಸಾವಿನ ನಂತರ 2006 ರಲ್ಲಿ ನಿತಿನ್ ನಬಿನ್ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು. ಪಾಟ್ನಾ ಪಶ್ಚಿಮದಲ್ಲಿ ಚುನಾವಣೆ ಗೆದ್ದು ಮೊದಲ ಬಾರಿಗೆ ಶಾಸಕರಾಗಿದ್ದರು.
ಬೆಂಗಳೂರು: ಬಿಜೆಪಿಯಲ್ಲಿ ಮುಳುಗುತ್ತಿರುವವರಿಗೆ ಮೇಲೆ ಬರಲು ನನ್ನ ಹೆಸರೇ ಆಸರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ಕೊಟ್ಟಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆ ಅನುದಾನ ಬಿಡುಗಡೆ ವಿಚಾರಕ್ಕೆ ಬಿಜೆಪಿ ಮಾಡಿದ ಟೀಕೆಗೆ ಅವರು ತಿರುಗೇಟು ನೀಡಿದ್ದಾರೆ. ‘ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ "ಪ್ರಿಯಾಂಕ್ ಖರ್ಗೆ"ಯ ಹೆಸರೇ ಆಸರೆ! ಅಪ್ರಸ್ತುತಗೊಳ್ಳುತ್ತಿದ್ದೇವೆ ಎನಿಸಿದಾಗ ನನ್ನ ಹೆಸರು ಹಿಡಿದುಕೊಂಡು ಚಾಲ್ತಿಗೆ ಬರುವ ಪ್ರಯತ್ನ ನಡೆಸಿದ್ದಾರೆ ಬಿಜೆಪಿಯ ಮಾಜಿ ಶಾಸಕರೊಬ್ಬರು. ಪ್ರಜ್ಞೆ ಇಲ್ಲದವರ ತರ್ಕವಿಲ್ಲದ ಮಾತುಗಳಿಗೆ ಉತ್ತರ ನೀಡುವುದು ಸಮಯ ವ್ಯರ್ಥವೇ ಸರಿ, ಆದರೆ ಸಚಿವನಾಗಿ ಕುತರ್ಕಗಳಿಗೂ ಉತ್ತರಿಸುವುದು ನನ್ನ ಜವಾಬ್ದಾರಿಯಾಗಿದೆ.
ಮುಟ್ಟಿನ ದಿನಗಳಲ್ಲಿ ಬರುವ ದೈಹಿಕ ಸಮಸ್ಯೆಗಳ ನಿವಾರಣೆಗೆ ಹಲವು ಸಲಹೆಗಳನ್ನು ನೀಡಲಾಗುತ್ತದೆ. ಮುಟ್ಟಿನ ದಿನಗಳಲ್ಲಿ ನೀರು ಎಷ್ಟು ಕುಡಿಯಬೇಕು ಮತ್ತು ನೀರು ಸೇವನೆ ಎಷ್ಟು ಮುಖ್ಯ ಇಲ್ಲಿದೆ ನೋಡಿ ಟಿಪ್ಸ್. ಮುಟ್ಟಿನ ದಿನಗಳಲ್ಲಿ ಹೆಚ್ಚು ನೀರ ಕುಡಿಯುವುದರಿಂದ ಹೊಟ್ಟೆನೋವು, ಮಾಂಸಖಂಡಗಳಲ್ಲಿ ಸೆಳೆತ ಸೇರಿದಂತೆ ಅನೇಕ ದೈಹಿಕ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಮುಟ್ಟಿನ ದಿನಗಳಲ್ಲಿ ಮಹಿಳೆಯರು ಹೆಚ್ಚು ನೀರು ಸೇವನೆ ಮಾಡಬೇಕು. ಮುಟ್ಟಿನ ದಿನಗಳಲ್ಲಿ ನಿರ್ಜಲೀಕರಣದಿಂದ ಮಾಂಸಖಂಡಗಳು ಬಿಗಿಯಾಗುವಿಕೆ, ನೋವು ಕಾಣಿಸಿಕೊಳ್ಳಬಹುದು. ಹೀಗಾಗಿ ನೀರು ಹೆಚ್ಚು ಸೇವಿಸಬೇಕು.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಆದರೆ ಇಂದು ಮತ್ತೆ ಬೆಲೆ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಏರಿಕೆ ಆರಂಭವಾಗಿತ್ತು. ಸತತವಾಗಿ ನಾಲ್ಕು ದಿನಗಳ ಕಾಲ ಏರಿಕೆಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿತ್ತು. ಆದರೆ ಇಂದು ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ಇಂದು ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 535 ರೂ. ಗಳಾಗಿತ್ತು. ಇಂದೂ ಅಷ್ಟೇ ಇದೆ. ಡಬಲ್ ಚೋಲ್ ಬೆಲೆಯೂ 535 ರೂ.ಗಳಷ್ಟಾಗಿದೆ.
ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆ ಮತ್ತು ಇಳಿಕೆಯಾಗುತ್ತಲೇ ಇದೆ. ಆದರೆ ಇಂದು ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಏರಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಏರಿಕೆ ಮತ್ತು ಇಳಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಏರಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಭಾರೀ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,46,375.00 ರೂ.ಗಳಿತ್ತು. ಇಂದು 1,48,770.00 ರೂ.ಗಳಷ್ಟಾಗಿದೆ.
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ 2,500 ಕೋಟಿ ರೂ.ಗಳ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ ನಾಯಕ ಆರ್ ಅಶೋಕ್, ಮಂಥ್ಲಿ ಮನಿ ರೂಪದಲ್ಲಿ ವಸೂಲಿಯಾಗುತ್ತಿದೆ ಎಂದಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವಾಗುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಾ ಬಂದಿದೆ. ಈ ಸಂಬಂಧ ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸುತ್ತಿದೆ. ಭ್ರಷ್ಟಾಚಾರಕ್ಕೆ ಸಾಕ್ಷ್ಯಗಳಿವೆ ಎಂದು ಆರ್ ಅಶೋಕ್ ಹೇಳಿಕೆ ನೀಡಿದ್ದಾರೆ. ‘ಅಬಕಾರಿ ಇಲಾಖೆ ಕಾಂಗ್ರೆಸ್ ಪಾಲಿನ ಪರ್ಸೆಂಟೇಜ್ ದಂಧೆಯ ಎಟಿಎಂ ಯಂತ್ರವಾಗಿ ಬದಲಾಗಿದೆ.
ಬೆಂಗಳೂರು: ದೆಹಲಿಗೆ ಬಂದ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಗುಡ್ ನ್ಯೂಸ್ ಕೊಡೋದು ಯಾವಾಗ ಎಂದು ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಚರ್ಚೆಗಳು ನಡೆಯುತ್ತಲೇ ಇವೆ. ಅದರಲ್ಲೂ ಡಿಕೆ ಶಿವಕುಮಾರ್ ಮೊನ್ನೆಯೇ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಇದಾದ ಬಳಿಕ ಅವರು ದೆಹಲಿಯಲ್ಲಿ ಏನು ಚರ್ಚೆ ಮಾಡಿರಬಹುದು ಎಂಬ ಕುತೂಹಲ ಎಲ್ಲರಲ್ಲಿದೆ. ಈ ನಡುವೆ ಡಿಕೆ ಶಿವಕುಮಾರ್ ಮಾತ್ರ ನೇರವಾಗಿ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.
ಮುಂಬೈ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ಸಂಪೂರ್ಣ ವೇಳಾಪಟ್ಟಿ, ಸ್ಥಳ, ಲೈವ್ ವೀಕ್ಷಣೆ ಸಂಪೂರ್ಣ ವಿವರ ಇಲ್ಲಿದೆ ನೋಡಿ. ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಏಕದಿನ ಸರಣಿ ಮುಕ್ತಾಯವಾಗಿದ್ದು ಇದೀಗ ಟಿ20 ಸರಣಿ ಆರಂಭವಾಗಲಿದೆ. ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಐದು ಟಿ20 ಪಂದ್ಯಗಳ ಸುದೀರ್ಘ ಸರಣಿ ಆಡಲಿದೆ. ಈ ಸರಣಿ ಆರಂಭವಾಗುವುದು ಬುಧವಾರದಿಂದ. ಜನವರಿ 21 ಬುಧವಾರ ಮೊದಲ ಟಿ20 ಪಂದ್ಯ ನಡೆಯಲಿದೆ. ಈ ಪಂದ್ಯ ನಾಗ್ಪುರದಲ್ಲಿ ನಡೆಯಲಿದೆ.
ವಡೋದರಾ: ಡಬ್ಲ್ಯುಪಿಎಲ್ 2026 ರಲ್ಲಿ ನಿನ್ನೆ ಗುಜರಾತ್ ಜೈಂಟ್ಸ್ ವಿರುದ್ಧ ಗೆದ್ದ ಬಳಿಕ ಆರ್ ಸಿಬಿ ಕ್ಯಾಪ್ಟನ್ ಸ್ಮೃತಿ ಮಂಧಾನ ಮಾಡಿದ ಕೆಲಸಕ್ಕೆ ಎಲ್ಲರೂ ಫಿದಾ ಆಗಿದ್ದಾರೆ. ನಿನ್ನೆಯ ಪಂದ್ಯದಲ್ಲಿ 61 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದ ಆರ್ ಸಿಬಿ ಪ್ಲೇ ಆಫ್ ಗೆ ಸ್ಥಾನ ಭದ್ರಪಡಿಸಿತು. ಈ ಬಾರಿಯ ಡಬ್ಲ್ಯುಪಿಎಲ್ ಕೂಟದಲ್ಲಿ ಇದುವರೆಗೆ ಆರ್ ಸಿಬಿ ಸೋತೇ ಇಲ್ಲ. ಆಡಿದ ಎಲ್ಲಾ 5 ಪಂದ್ಯಗಳನ್ನೂ ಗೆದ್ದು ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ.
ಬೆಂಗಳೂರು: ಹೈಕಮಾಂಡ್ ಭೇಟಿಗೆ ದೆಹಲಿಗೆ ಹೋಗಿ ಬಂದಿದ್ದ ಡಿಕೆ ಶಿವಕುಮಾರ್ ದಿಡೀರ್ ಆಗಿ ಒಂದು ತೀರ್ಮಾನ ಕೈಗೊಂಡು ಎಲ್ಲರನ್ನೂ ಅಚ್ಚರಿಗೆ ದೂಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ನಡೆಸಲು ದೆಹಲಿಗೆ ಹೋಗಿ ಎರಡು ದಿನ ಅಲ್ಲೇ ಮೊಕ್ಕಾಂ ಹೂಡಿದ್ದರು. ಆದರೆ ದೆಹಲಿಯಲ್ಲಿ ಏನು ಮಾತುಕತೆಯಾಗಿದೆ, ಅಂದುಕೊಂಡಂತೇ ರಾಹುಲ್ ಗಾಂಧಿ ಭೇಟಿಯಾಗಿ ಮಾತನಾಡಿದ್ದಾರಾ ಎಂಬುದನ್ನು ಅವರು ಖಚಿತವಾಗಿ ಹೇಳಿಲ್ಲ. ಆದರೆ ದೆಹಲಿ ಭೇಟಿ ಗದ್ದಲದ ನಡುವೆ ಡಿಕೆ ಶಿವಕುಮಾರ್ ದಾವೋಸ್ ನಲ್ಲಿ ನಡೆಯುವ ಆರ್ಥಿಕ ಸಮ್ಮೇಳನದಲ್ಲಿ ಭಾಗಿಯಾಗಲ್ಲ ಎನ್ನಲಾಗಿತ್ತು.
ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜೊತೆಗೆ ಪರೀಕ್ಷಾರ್ಥಿಗಳಾಗಿ ಬರುವ ಶಿಕ್ಷಕರಿಗೂ ಈ ವರ್ಷದಿಂದ ಹೊಸ ರೂಲ್ಸ್ ಜಾರಿಗೆ ಬರಲಿದೆ. ಅದೇನು ಇಲ್ಲಿದೆ ವಿವರ. ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಮೊದಲ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನಲೆಯಲ್ಲಿ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಮತ್ತೆ ಇಂತಹ ಪ್ರಮಾದಗಳಾಗದೇ ಇರಲು ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರಿಗೂ ಹೊಸ ರೂಲ್ಸ್ ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳಿಗೆ ಏನು ಸೂಚನೆ?-ಪರೀಕ್ಷಾ ಸಮಯ ಬದಲಾವಣೆಯಾಗಲಿದೆ. ಇನ್ನು ಮುಂದೆ 10 ಕ್ಕಲ್ಲ 11 ಗಂಟೆಗೆ ಪರೀಕ್ಷೆ ಆರಂಭವಾಗಲಿದೆ.-ವಿದ್ಯಾರ್ಥಿಗಳು 9 ಗಂಟೆಗೆ ಶಾಲೆಗೆ ಬರಬೇಕು.
ಬೆಂಗಳೂರು: ಕಚೇರಿಯಲ್ಲಿ ಕರ್ತವ್ಯದಲ್ಲಿರುವಾಗಲೇ ಯುವತಿ ಜೊತೆ ಸರಸವಾಡುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರ ಸಸ್ಪೆಂಡ್ ಮಾಡಿದೆ. ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದು ಕರ್ನಾಟಕ ಪೊಲೀಸ್ ಇಲಾಖೆಯೇ ಮುಜುಗರಪಡುವಂತಾಗಿತ್ತು. ಇದರ ಬೆನ್ನಲ್ಲೇ ಸರ್ಕಾರ ಕ್ರಮ ಕೈಗೊಂಡಿದೆ. ಡಿಜಿಪಿ ರಾಮಚಂದ್ರ ರಾವ್ ಪ್ರಕರಣದ ಬಗ್ಗೆ ಪ್ರಾಥಮಿಕ ತನಿಖೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಗೃಹ ಇಲಾಖೆಗೆ ವರದಿ ನೀಡುವಂತೆ ಆದೇಶಿಸಿದ್ದರು. ಈ ವಿಚಾರವಾಗಿ ತಕ್ಷಣವೇ ಡಿಜಿಪಿ ತಲೆದಂಡವಾಗಬೇಕೆಂದು ವಿಪಕ್ಷಗಳು ಆಗ್ರಹಿಸಿದ್ದವು.
ನವದೆಹಲಿ: ದೆಹಲಿ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಮೂತ್ರಿಸಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಸಾಕಷ್ಟು ಆಕ್ರೋಶ ಕೇಳಿಬಂದಿದೆ. ನಮ್ಮ ರೈಲು, ಬಸ್ ನಿಲ್ದಾಣಗಳೂ ಅಂತಾರಾಷ್ಟ್ರೀಯ ದರ್ಜೆಗೇರಬೇಕು ಎಂದು ನಾವು ಅಂದುಕೊಳ್ಳುತ್ತೇವೆ. ಆದರೆ ಕೆಲವು ಸುಶಿಕ್ಷಿತರು ಎನಿಸಿಕೊಂಡವರೇ ಮಾಡುವ ಕೆಲವೊಂದು ಕೆಲಸಗಳು ನಾಗರಿಕ ಸಮಾಜ ತಲೆ ತಗ್ಗಿಸುವಂತಿರುತ್ತದೆ. ಇಂತಹದ್ದೇ ಘಟನೆ ದೆಹಲಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಮೆಟ್ರೋ ನಿಲ್ದಾಣದಲ್ಲಿ ಖಾಲಿ ಜಾಗವೊಂದರಲ್ಲಿ ಪಬ್ಲಿಕ್ ಟಾಯ್ಲೆಟ್ ನಂತೆ ಮೂತ್ರಿಸಿದ್ದಾನೆ. ಯಾರೋ ತನ್ನನ್ನು ವಿಡಿಯೋ ಮಾಡುತ್ತಿದ್ದಾರೆಂದು ಅರಿವಾದ ತಕ್ಷಣ ಅಲ್ಲಿಂದ ಜಾಗ ಖಾಲಿ ಮಾಡಿದ್ದಾನೆ.
ಬೆಂಗಳೂರು: ರಾಜ್ಯದಲ್ಲಿ ಕಳೆದ ವಾರ ಚಳಿ ಕೊಂಚ ಕಡಿಮೆಯಾಗಿತ್ತು. ಆದರೆ ಈ ವಾರ ಮತ್ತೆ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ವರದಿಗಳು ಎಚ್ಚರಿಸಿವೆ. ಕಳೆದ ವಾರ ವಾಯುಭಾರ ಕುಸಿತದ ಪರಿಣಾಮ ಮಳೆಯಾಗಿತ್ತು. ವಾರಂತ್ಯಕ್ಕೆ ಚಳಿ ಕೊಂಚ ಕಡಿಮೆಯಾಗಿತ್ತು. ಆದರೆ ಈ ವಾರದ ಆರಂಭದಿಂದಲೂ ಮತ್ತೆ ಚಳಿ, ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಹವಾಮಾನ ವರದಿಗಳ ಪ್ರಕಾರ ನಿನ್ನೆಗೆ ಹೋಲಿಸಿದರೆ ಇಂದು ಚಳಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಇಂದು ಗರಿಷ್ಠ ತಾಪಮಾನ 27 ಡಿಗ್ರಿಯಷ್ಟಿರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿಗೆ ಕುಸಿಯಲಿದೆ ಎಂದು ವರದಿಗಳು ಹೇಳುತ್ತಿವೆ.
ಇಂದು ಮಂಗಳವಾರವಾಗಿದ್ದು ದುರ್ಗಾದೇವಿಗೆ ವಿಶೇಷವಾದ ದಿನವಾಗಿದೆ. ದೇವಿಯ ಪ್ರಾರ್ಥನೆ, ಪೂಜೆ ಮಾಡುವಾಗ ಇಂದು ತಪ್ಪದೇ ದೇವಿ ಅಪರಾಜಿತ ಸ್ತೋತ್ರಂ ಓದಿ. ಕನ್ನಡದಲ್ಲಿ ಇಲ್ಲಿದೆ.ನಮೋ ದೇವ್ಯೈ ಮಹಾದೇವ್ಯೈ ಶಿವಾಯೈ ಸತತಂ ನಮಃ ।ನಮಃ ಪ್ರಕೃತ್ಯೈ ಭದ್ರಾಯೈ ನಿಯತಾಃ ಪ್ರಣತಾಃ ಸ್ಮತಾಮ್ ॥ 1 ॥ ರೌದ್ರಾಯೈ ನಮೋ ನಿತ್ಯಾಯೈ ಗೌರ್ಯೈ ಧಾತ್ರ್ಯೈ ನಮೋ ನಮಃ ।ಜ್ಯೋತ್ಸ್ನಾಯೈ ಚೇಂದುರೂಪಿಣ್ಯೈ ಸುಖಾಯೈ ಸತತಂ ನಮಃ ॥ 2 ॥ ಕಲ್ಯಾಣ್ಯೈ ಪ್ರಣತಾ ವೃದ್ಧ್ಯೈ ಸಿದ್ಧ್ಯೈ ಕುರ್ಮೋ ನಮೋ ನಮಃ ।ನೈರೃತ್ಯೈ ಭೂಭೃತಾಂ ಲಕ್ಷ್ಮ್ಯೈ ಶರ್ವಾಣ್ಯೈ ತೇ ನಮೋ ನಮಃ ॥ 3 ॥
ವಡೋದರ: ಇಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ನ 12ನೇ ಪಂದ್ಯದಲ್ಲಿ ಆರ್ಸಿಬಿ ಮತ್ತು ಗುಜರಾತ್ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದಿರುವ ಗುಜರಾತ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಇದುವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲೂ ಗೆಲುವು ಸಾಧಿಸಿರುವ ಆರ್ಸಿಬಿ ಇದೀಗ ಮತ್ತೇ ಗೆಲುವಿನ ಆತ್ಮವಿಶ್ವಾಸದೊಂದಿಗೆ ಫೀಲ್ಡ್ಗೆ ಇಳಿದಿದೆ. ಮತ್ತೊಂದು ಕಡೆ ಎರಡು ಸೋಲು ಹಾಗೂ ಎರಡು ಗೆಲವು ಸಾಧಿಸಿರುವ ಗುಜರಾತ್ ಇಂದು ಆರ್ಸಿಬಿ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಮೇಲೆ ಬರುವ ಪ್ರಯತ್ನದಲ್ಲಿದೆ.ಗುಜರಾತ್ ಜೈಂಟ್ಸ್ ಮಹಿಳಾ ತಂಡ: ಬೆತ್ ಮೂನಿ(ವಿಕೆಟ್ ಕೀಪರ್), ಸೋಫಿ ಡಿವೈನ್, ಅನುಷ್ಕಾ ಶರ್ಮಾ, ಕನಿಕಾ ಅಹುಜಾ,
ಬಿಪಿ ಅಥವಾ ರಕ್ತದೊತ್ತಡವನ್ನು ಸಮತೋಲದಲ್ಲಿದಡಲು ನಮ್ಮ ಆಹಾರ ಕ್ರಮದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಇನ್ನು ಸಾಮಾನ್ಯವಾಗಿ ನಮ್ಮ ಬಿಪಿಯಲ್ಲಿ ಹತೋಟಿಗೆ ತರಲು ಇಲ್ಲಿದೆ ಕೆಲ ಸಲಹೆಗಳು.ಆಹಾರ ಕ್ರಮದಲ್ಲಿ ಉಪ್ಪಿನ ಬಳಕೆಯನ್ನು ಆದಷ್ಟು ಕಡಿಮೆ ಮಾಡಿ. ದಿನಕ್ಕೆ ಒಂದು ಟೀಚಮಚಕ್ಕಿಂತ ಹೆಚ್ಚು ಉಪ್ಪು ಬಳಸಬೇಡಿ. ಉಪ್ಪಿನಕಾಯಿ, ಹಪ್ಪಳ ಮತ್ತು ಸಂಸ್ಕರಿಸಿದ ಆಹಾರಗಳನ್ನು ದೂರವಿಡಿ.ಪೊಟ್ಯಾಸಿಯಮ್ ಹೆಚ್ಚಿರುವ ಆಹಾರಗಳಾದ ಬಾಳೆಹಣ್ಣು, ಎಳನೀರು, ಪಾಲಕ್ ಸೊಪ್ಪು ಮತ್ತು ಗೆಡ್ಡೆಗೆಣಸುಗಳನ್ನು ಸೇವಿಸಿ. ಇವು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ.
ಬೆಂಗಳೂರು: ಅಬಕಾರಿ ಡಿಸಿಯೊಬ್ಬರು ₹25 ಲಕ್ಷ ಲಂಡ ಪಡೆದ ಪ್ರಕರಣದಡಿಯಲ್ಲಿ ಅಬಕಾರಿ ಸಚಿವರೂ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಸಚಿವ ಆರ್ ಬಿ ತಿಮ್ಮಾಪುರ ಅವರ ವಿರುದ್ಧ ಕರ್ನಾಟಕ ಲೋಕಾಯುಕ್ತಕ್ಕೆ ದೂರನ್ನು ನೀಡಲಾಗಿದೆ.ಇತ್ತೀಚೆಗೆ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯಕ್ ಅವರು ಬಾರ್ ಲೈಸೆನ್ಸ್ ನೀಡಲು ₹25 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಇನ್ನೂ ಜಗದೀಶ್ ಸೇರಿದಂತೆ ಐವರು ಅಬಕಾರಿ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ನಂದಗಡ: ಮರಾಠಿಯಲ್ಲಿ ಭಾಷಣ ಮಾಡಿದ ಖಾನಾಪುರ ಶಾಸಕ ವಿಠ್ಠಲ ಹಲಗೇಕರಗೆ ಸಿಎಂ ಸಿದ್ದರಾಮಯ್ಯ ಅದೇ ವೇದಿಕೆಯಲ್ಲಿ ಕನ್ನಡ ಪಾಠ ಮಾಡಿದರು. ಕರ್ನಾಟಕದಲ್ಲಿರುವ ಎಲ್ಲರೂ ಕನ್ನಡ ಕಲಿಯಲೇಬೇಕು ಎಂದು ಕನ್ನಡ ವಿರೋಧಿ ಎಂಇಎಸ್ ನಾಯಕರಿಗೆ ಎಚ್ಚರಿಕೆ ನೀಡಿದರು.ಖಾನಾಪುರ ತಾಲ್ಲೂಕಿನ ನಂದಗಡ ಗ್ರಾಮದಲ್ಲಿ ಸೋಮವಾರ ರಾಯಣ್ಣನ 'ವೀರಭೂಮಿ' ವಸ್ತು ಸಂಗ್ರಹಾಲಯ ಉದ್ಘಾಟಿಸಿ ಅವರು ಮಾತನಾಡಿದರು.ಕರ್ನಾಟಕದಲ್ಲಿರುವ ಎಲ್ಲರೂ ಕನ್ನಡ ಕಲಿಯುವಂಥ ವಾತಾವರಣ ನಿರ್ಮಾಣವಾಗಬೇಕು. ಯಾರು ಎಲ್ಲಿಂದಲೂ ಬರಲಿ, ಎಲ್ಲೇ
ಬೆಳಗಾವಿ: ಇಲ್ಲಿನ ಮಚ್ಚೆ ಗ್ರಾಮದಲ್ಲಿ ಅಖಂಡ ಹಿಂದೂ ಸಮ್ಮೇಳನದ ಅಂಗವಾಗಿ ಬೆಆಯೋಜಿಸಿದ್ದ ಶೋಭಾ ಯಾತ್ರೆ ವೇಳೆ ಅನ್ಯಕೋಮಿನ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಮಹಾರಾಷ್ಟ್ರದ ಹಿಂದೂ ನಾಯಕಿ ಹರ್ಷಿತಾ ಠಾಕೂರ ಸೇರಿ ಏಳು ಜನರ ಮೇಲೆ ಪ್ರಕರಣ ದಾಖಲಾಗಿದೆ.ಭಾನುವಾರ ನಡೆದ ಹಿಂದೂ ಸಮ್ಮೇಳನಕ್ಕೂ ಮುನ್ನ ಶೋಭಾ ಯಾತ್ರೆ ಮಾಡಲಾಯಿತು. ವಾಹನದ ಮೇಲೆ ನಿಂತ ಹರ್ಷಿತಾ ಅವರು ಅನ್ಸಾರಿ ದರ್ಗಾದ ಬಳಿ ಬಂದಾಗ ವಾಹನ ನಿಲ್ಲಿಸಿ ದರ್ಗಾದ ಕಡೆಗೆ ಬಾಣ ಬಿಟ್ಟಂತೆ ಕೈ ಮಾಡಿ ತೋರಿಸಿದ್ದಾರೆ. ಇದರಿಂದ ಧಾರ್ಮಿಕ ಭಾವನೆಗೆ ಧಕ್ಕೆಯನ್ನು ತಂದಿದ್ದಾರೆ, ಅದಲ್ಲದೆ ಸಮಾವೇಶದಲ್ಲಿಯೂ ಧಾರ್ಮಿಕ ಭಾವನೆ ಕೆರಳಿಸುವ ಭಾಷಣ ಮಾಡಿದ್ದಾರೆ ಎಂದು ಅಬ್ದುಲ್ ಖಾದರ್ ಮುಜಾವರ ಎನ್ನುವವರು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.
ಝಾನ್ಸಿ: ಈ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಿವೃತ್ತ ರೈಲ್ವೆ ಉದ್ಯೋಗಿಯೊಬ್ಬರು ತಮ್ಮ 35 ವರ್ಷದ ಲಿವ್-ಇನ್ ಸಂಗಾತಿಯನ್ನು ಕೊಂದು, ಆಕೆಯ ದೇಹವನ್ನು ಲೋಹದ ಟ್ರಂಕ್ನಲ್ಲಿ ತುಂಬಿಸಿ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ.ಆರೋಪಿ ರಾಮ್ ಸಿಂಗ್ ಪರಿಹಾರ್ ಎಂಬಾತ ಇಬ್ಬರು ಪತ್ನಿಯರೊಂದಿಗೆ ವಾಸಿಸುತ್ತಿದ್ದಾನೆ. ಮೊದಲ ಪತ್ನಿ ಸಿಪ್ರಿ ಬಜಾರ್ ಪ್ರದೇಶದಲ್ಲಿದ್ದರೆ, ಎರಡನೇ ಪತ್ನಿ ಅದೇ ನಗರದ ಸಿಟಿ ಕೊಟ್ವಾಲಿ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಇದರ ಹೊರತಾಗಿಯೂ ಆರೋಪಿ ರಾಮ್ ಸಿಂಗ್ ಇನ್ನೊಂದು ಮಹಿಳೆ ಜೊತೆ ಸಹಜೀವನ ಸಂಗಾತಿ ಹೊಂದಿದ್ದನು.
ಬಳ್ಳಾರಿ: ಪೋಕ್ಸೊ ಸಂತ್ರಸ್ತೆ ಹೆಸರು ಮತ್ತು ವಿಳಾಸ ಬಹಿರಂಗಪಡಿಸಿದ ಆರೋಪದಡಿಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮಲು ವಿರುದ್ಧ ದೂರು ದಾಖಲಾಗಿದೆ. ಬಳ್ಳಾರಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಮತ್ತು ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಭಾಷಣದ ವೇಳೆ ಸಂವೇದನಾ ಶೀಲ ವಿವರ ಉಲ್ಲೇಖಿಸಿ, ಪೋಕ್ಸೋ ಕಾಯ್ದೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿರುವುದಾಗಿ ದೂರಿನಲ್ಲಿ ಆರೋಪ ಮಾಡಲಾಗಿದೆ. ದೂರಿನ ಅನ್ವಯ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪೋಕ್ಸೋ ಅಡಿಯಲ್ಲಿ ಕೇಸ್ ದಾಖಲಾಗಿದೆ.
ಬೆಂಗಳೂರು: ಕಚೇರಿಯಲ್ಲಿ ಸಮವಸ್ತ್ರದಲ್ಲಿರುವಾಗಲೇ ಯುವತಿ ಜೊತೆ ಸರಸವಾಡಿರುವ ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ವೈರಲ್ ಆಗುತ್ತಿದ್ದಂತೇ ಜೆಡಿಎಸ್ ರಾಜ್ಯ ಘಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಡಿಜಿಪಿ ರಾಮಚಂದ್ರ ರಾವ್ ತಮ್ಮ ಕಚೇರಿಯಲ್ಲಿ ಕರ್ತವ್ಯದಲ್ಲಿರುವಾಗಲೇ ಯುವತಿ ಜೊತೆ ಸರಸವಾಡುತ್ತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿವೆ. ಈ ಬಗ್ಗೆ ತನಿಖೆ ನಡೆಸುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಆದರೆ ಇದು ನನ್ನನ್ನು ಸಿಲುಕಿಸಲು ಯಾರೋ ಮಾಡಿರುವ ಎಐ ವಿಡಿಯೋ ಎಂದು ಡಿಜಿಪಿ ರಾಮಚಂದ್ರ ರಾವ್ ಸ್ಪಷ್ಟನೆ ನೀಡಿದ್ದಾರೆ.
ಕೆಲವರು ಚಳಿಗಾಲದಲ್ಲಿ ಮೊಸರನ್ನು ಸೇವಿಸಲು ಹಿಂದೇಟು ಹಾಕುತ್ತಾರೆ. ಶೀತ ಆಗುವ ಭಯದಿಂದ ಮಕ್ಕಳಿಗೂ ಮೊಸರನ್ನು ನೀಡಲು ತಾಯಂದಿರು ಭಯ ಪಡುತ್ತಾರೆ. ಆದರೆ ಮೊಸರನ್ನು ಸೇವನೆ ಮಾಡುವುದರಿಂದ ಆರೋಗ್ಯಕ್ಕಾಗುವ ಪ್ರಯೋಜಗಳು ಏನೆಂಬುದನ್ನು ಇಲ್ಲಿ ವಿವರಿಸಲಾಗಿದೆ. ರೋಗನಿರೋಧಕ ಶಕ್ತಿ: ಮೊಸರಿನಲ್ಲಿರುವ 'ಪ್ರೊಬಯಾಟಿಕ್ಸ್' (ಒಳ್ಳೆಯ ಬ್ಯಾಕ್ಟೀರಿಯಾ) ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಚಳಿಗಾಲದ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆ: ಇದು ಜೀರ್ಣಾಂಗವ್ಯೂಹದ ಆರೋಗ್ಯವನ್ನು ಸುಧಾರಿಸುತ್ತದೆ.
ಬೆಂಗಳೂರು: ಚಿನ್ನ ಕಳ್ಳಸಾಗಣಿಕೆಯಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ತಂದೆ, ಡಿಜಿಪಿ ರಾಮಚಂದ್ರ ರಾವ್ ಕಚೇರಿಯಲ್ಲಿ ಸಮವಸ್ತ್ರದಲ್ಲಿರುವಾಗಲೇ ಸರಸ ಸಲ್ಲಾಪದಲ್ಲಿ ತೊಡಗಿಕೊಂಡಿದ್ದ ವಿಡಿಯೋಗಳು ವೈರಲ್ ಆಗುತ್ತಿದ್ದಂತೇ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಮಗಳು ನೋಡಿದ್ರೆ ದುಬೈನಿಂದ ಅಕ್ರಮ ಚಿನ್ನಸಾಗಣಿಕೆ ಮಾಡಿದ ಆರೋಪದಲ್ಲಿ ಜೈಲು ಸೇರಿದ್ದಾಳೆ. ಇತ್ತ ತಂದೆಯದ್ದು ರಾಸಲೀಲೆಯ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿವೆ. ಈ ವಿಡಿಯೋಗಳು ರಾಜ್ಯ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತೆ ಮಾಡಿದೆ. ಉನ್ನತ ಹುದ್ದೆಯಲ್ಲಿರುವ ಪೊಲೀಸ್ ಅಧಿಕಾರಿಯೊಬ್ಬರ ರಾಸಲೀಲೆಯ ವಿಡಿಯೋ ವೈರಲ್ ಆಗುತ್ತಿದ್ದಂತೇ ಸಿಎಂ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ.
ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ಪ್ರಕರಣ ಇವತ್ತು ಬೆಳಗ್ಗೆ ಗೊತ್ತಾಗಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ, ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳುತ್ತೇವೆಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ವಿಚಾರವಾಗಿ ಮಾಧ್ಯುಮಕ್ಕೆ ಪ್ರತಿಕ್ರಿಯಿಸಿದ ಅವರು, ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ರೂ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಯಾರನ್ನೂ ಸುಮ್ಮನೇ ಬಿಡಲ್ಲ ಎಂದರು. ಪೊಲೀಸ್ ಸಮವಸ್ತ್ರದಲ್ಲೇ ತಮ್ಮ ಕಚೇರಿಯಲ್ಲಿ ಹಲವು ಯುವತಿಯರ ಜತೆ ಸರಸವಾಡಿದ ವಿಡಿಯೋ ಸಾಮಾಜಿಕ
ಬೆಂಗಳೂರು: ಮಾಧ್ಯಮಗಳಲ್ಲಿ ಯುವತಿಯರ ಜತೆಗಿನ ಸರಸದಾಟದ ವಿಡಿಯೋ ಪ್ರಸಾರವಾಗುತ್ತಿದ್ದ ಹಾಗೇ ಗೃಹ ಸಚಿವರನ್ನು ಭೇಟಿಯಾಗಲು ಬಂದ ಡಿಜಿಪಿ ರಾಮಚಂದ್ರ ರಾವ್ ಅವರ ಭೇಟಿಗೆ ಪರಂ ನಿರಾಕರಿಸಿದ್ದಾರೆ. ಇನ್ನೂ ಈ ವಿಡಿಯೋ ವೈರಲ್ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿರುವ ಡಿಜಿಪಿ ರಾಮಚಂದ್ರ ರಾವ್ ಅವರು, ಇದು 8 ವರ್ಷದ ಹಳೆಯ ವಿಡಿಯೋ, ಈ ವಿಡಿಯೋ ಸುಳ್ಳು. ಈ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಹೇಳಿದರು. ಮಾಧ್ಯಮಗಳಲ್ಲಿ ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿಗಾಗಿ ಬಂದಿರುವ
ನವದೆಹಲಿ: ಸೆಪ್ಟೆಂಬರ್ 2025 ರಲ್ಲಿ 41 ಜೀವಗಳನ್ನು ಬಲಿ ಪಡೆದ ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ವಿಚಾರಣೆಗೆ ಬಂದಿರುವ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಅವರಿಗೆ ಬೆಂಬಲ ವ್ಯಕ್ತಪಡಿಸಲು ಕೇಂದ್ರ ತನಿಖಾ ದಳದ (CBI) ಕಚೇರಿಯ ಹೊರಗೆ ಅಭಿಮಾನಿಗಳು ಜಮಾಯಿಸಿದರು. ನಟ-ರಾಜಕಾರಣಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತಮ್ಮ ಅನುಕೂಲಕರ ನಿಲುವಿನ ಸಂಕೇತವಾಗಿ ಅಭಿಮಾನಿಗಳು ಟಿವಿಕೆ ಧ್ವಜಗಳನ್ನು ಕೈಯಲ್ಲಿ ಹಿಡಿದಿದ್ದರು. ANI ಜೊತೆ ಮಾತನಾಡಿದ ಅಭಿಮಾನಿಯೊಬ್ಬರು, ಕಾಲ್ತುಳಿತದಲ್ಲಿ ವಿಜಯ್ ಅವರ ಪಾತ್ರವನ್ನು ತಳ್ಳಿಹಾಕಿದರು ಮತ್ತು ಪಕ್ಷದ
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರನ್ಯಾ ರಾವ್ ಅವರ ಮಲತಂದೆ ಐಜಿಪಿ ರಾಮಚಂದ್ರ ರಾವ್ ಅವರ ಯುವತಿಯರ ಜತೆಗಿನ ಸರಸದಲ್ಲಿ ತೊಡಗಿರುವ ಹಸಿಬಿಸಿ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ರಾಮಚಂದ್ರ ರಾವ್ ಅವರಿಗೆ ಮಗಳ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲೂ ಸಂಕಷ್ಟ ಎದುರಾಗಿತ್ತು. ಇದೀಗ ಮಹಿಳೆಯರ ಜತೆ ಅಸಭ್ಯವಾಗಿ ವರ್ತನೆ ತೋರಿದ ಸಂಬಂಧ ಭಾರೀ ಟೀಕೆಗೆ ಗುರಿಯಾಗಿದ್ದಾರೆ.
ಇಂದೋರ್ನ ಏಕದಿನ ಶತಕದ ನಂತರ ಔಟ್ ಆದ ಡ್ಯಾರಿಲ್ ಮಿಚೆಲ್ ಅವರನ್ನು ವಿರಾಟ್ ಕೊಹ್ಲಿ ಮೈದಾನದಿಂದ ಹೊರಗೆ ತಳ್ಳುವ ಮೂಲಕ ತಮಾಷೆಯ ಕ್ಷಣವನ್ನು ಹಂಚಿಕೊಂಡರು. ಜನವರಿ 18 ರ ಭಾನುವಾರ ಇಂದೋರ್ನ ಹೋಲ್ಕರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಡ್ಯಾರಿಲ್ ಮಿಚೆಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಬಲಗೈ ಬೌಲರ್ 131 ಎಸೆತಗಳಲ್ಲಿ 137 ರನ್ ಗಳಿಸಿ ಕಿವೀಸ್ ತಂಡವನ್ನು ಅದ್ಭುತ ಮೊತ್ತಕ್ಕೆ ಕೊಂಡೊಯ್ದರು. ಮಿಚೆಲ್
ಇತ್ತೀಚೆಗಿನ ದಿನಗಳಲ್ಲಿ ವೈರಲ್ ಆಗುವ ಹುಚ್ಚು. ಇದೇ ರೀತಿ ತನಗೆ ಬಸ್ ನಲ್ಲಿ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆಂದು ವಿಡಿಯೋ ಮಾಡಿಕೊಂಡಿದ್ದಕ್ಕೆ ಆತ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದೀಪಕ್ ಎಂಬ ಕೋಝಿಕ್ಕೋಡ್ ನಿವಾಸಿ ಆತ್ಮಹತ್ಯೆ ಮಾಡಿಕೊಂಡಾತ. ಕೆಲವು ದಿನಗಳ ಹಿಂದೆ ಯುವತಿಯೊಬ್ಬಳು ರಶ್ ಇದ್ದ ಬಸ್ ನಲ್ಲಿ ದೀಪಕ್ ತನ್ನನ್ನು ಅನುಚಿತವಾಗಿ ಮುಟ್ಟಿದ್ದಾನೆಂದು ಹೇಳಿಕೊಂಡು ವಿಡಿಯೋ ಹಂಚಿಕೊಂಡಿದ್ದಳು. ಈ ವಿಡಿಯೋ ಲಕ್ಷಗಟ್ಟಲೆ ವ್ಯೂ ಪಡೆದುಕೊಂಡಿದೆ. ಇದರಿಂದ ದೀಪಕ್ ಅವಮಾನಿತನಾಗಿದ್ದ. ಇದರಿಂದ ಮನನೊಂದು ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.