Shorts

ಬೆಂಗಳೂರು: ಕನ್ನಡತಿ, ಆಫ್ ಸ್ಪಿನ್ನರ್ ಶ್ರೇಯಾಂಕ ಪಾಟೀಲ ಅವರು ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ಮಿಂಚುತ್ತಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ಅವರು ಮತ್ತೆ ಸ್ಪರ್ಧಾ ಕಣಕ್ಕೆ ಮರಳಿದ್ದಾರೆ. ಆರ್‌ಸಿಬಿಗೆ ಆಡುತ್ತಿರುವ ಶ್ರೇಯಾಂಕ ಕಳೆದ ನಾಲ್ಕು ಪಂದ್ಯಗಳಲ್ಲಿ ಎಂಟು ವಿಕೆಟ್ ಕಬಳಿಸಿದ್ದಾರೆ. ಅದರಲ್ಲೂ ಗುಜರಾತ್‌ ಜೈಂಟ್ಸ್‌ ವಿರುದ್ಧ ಐದು ವಿಕೆಟ್‌ ಗೊಂಚಲು ಪಡೆದು, ವೈಯಕ್ತಿಕ ಶ್ರೇಷ್ಠ ಸಾಧನೆ ಮೆರೆದಿದ್ದಾರೆ. ಅದರ ಬೆನ್ನಲ್ಲೇ ಅವರಿಗೆ ಭಾರತ ಟಿ20 ತಂಡಕ್ಕೆ ಪ್ರವೇಶ ಪಡೆದಿದ್ದಾರೆ. 23 ವರ್ಷದ ಶ್ರೇಯಾಂಕ ಅವರು 2024ರಲ್ಲಿ ಡಬ್ಲ್ಯುಪಿಎಲ್‌ನಲ್ಲಿ ಗರಿಷ್ಠ ವಿಕೆಟ್‌ ಪಡೆದ ಬೌಲರ್‌ ಎನಿಸಿದ್ದರು. ನಂತರದಲ್ಲಿ ಅವರು ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದರು. ಕಳೆದ ಒಂದು ವರ್ಷದಿಂದ ಗಾಯದಿಂದ ಬಳಲುತ್ತಿದ್ದ ಅವರು ಚೇತರಿಸಿಕೊಂಡು, ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ನವದೆಹಲಿ: ಕಳೆದ ತಿಂಗಳು ವಿಮಾನಯಾನ ಸೇವೆಯಲ್ಲಿ ಆಗಿರುವ ಭಾರಿ ವ್ಯತ್ಯಯಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನಗಳ ಮಹಾನಿರ್ದೇಶನಾಲಯ‌ವು ಇಂಡಿಗೋ ವಿಮಾನಯಾನ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಬರೋಬ್ಬರಿ ₹ 22.2 ಕೋಟಿ ದಂಡ ವಿಧಿಸಿದೆ.ಡಿಸೆಂಬ‌ರ್ 3 ರಿಂದ 5 ರ ವರೆಗೆ ಇಂಡಿಗೋ ವಿಮಾನಗಳ ಕಾರ್ಯಾಚರಣೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿತ್ತು. 2,507 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು, ಜೊತೆಗೆ 1,852 ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿತ್ತು. ಇದರಿಂದ 3 ಲಕ್ಷಕ್ಕೂ ಅಧಿಕ ಪ್ರಯಾಣಿಕರು ವಿವಿಧ ವಿಮಾನ ನಿಲ್ದಾಣಗಳಲ್ಲಿ ಸಿಲುಕಿದ್ದರು. ಕಳೆದ ತಿಂಗಳು ಇಂಡಿಗೋ ವಿಮಾನಗಳ ವೇಳಾಪಟ್ಟಿಯಲ್ಲಿ ಭಾರಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ರಚಿಸಲಾಗಿದ್ದ ನಾಲ್ವರು ಸದಸ್ಯರ ಸಮಿತಿ ನೀಡಿದ ವರದಿಯನ್ನು ಶನಿವಾರ ರಾತ್ರಿ ನಿಯಂತ್ರಕ ಸಂಸ್ಥೆ ಬಿಡುಗಡೆ ಮಾಡಿದೆ.

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ನ ಹಾಲಿ ಆವೃತ್ತಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಗೆಲುವಿನ ಓಟ ಮುಂದುವರಿದಿದೆ.ಸ್ಮೃತಿ ಮಂದಾನ ನಾಯಕತ್ವದ ಆರ್‌ಸಿಬಿ ತಂಡವು ಶನಿವಾರ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಎಂಟು ವಿಕೆಟ್‌ಗಳಿಂದ ಮಣಿಸಿತು. ಇದರೊಂದಿಗೆ ಸತತ ನಾಲ್ಕನೇ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಭದ್ರಪಡಿಸಿಕೊಂಡಿದೆ.ನಾಯಕಿ ಸ್ಮೃತಿ ಮಂದಾನ (96;61ಎ) , ಜಾರ್ಜಿಯಾ ವೋಲ್ (54;42ಎ) ಅರ್ಧಶತಕಗಳ‌ ಬ್ಯಾಟಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಎಂಟು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.ಮುಂಬೈನ ಡಿವೈ ಪಾಟೀಲ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಶಫಾಲಿ ವರ್ಮಾ ಅವರ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 166 ರನ್‌ಗಳಿಗೆ ಆಲೌಟ್‌ ಆಯಿತು. ಗುರಿ ಬೆನ್ನಟ್ಟಿದ ಆರ್‌ಸಿಬಿ 18.2 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 169 ರನ್‌ ಬಾರಿಸಿ ಗೆಲುವು ಸಾಧಿಸಿತು.

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಸರಣಿ ನಿರ್ಣಾಯಕ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಶನಿವಾರ ಉಜ್ಜಯಿನಿಯ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ, ಸ್ಪಿನ್ನರ್ ಕುಲದೀಪ್ ಯಾದವ್ ಅವರೊಂದಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದೇವಾಲಯ ಭೇಟಿಯ ನಂತರ, ಕೊಹ್ಲಿ "ಜೈ ಶ್ರೀ ಮಹಾಕಾಲ್" ಎಂದು ಹೇಳಿ ಅಲ್ಲಿ ನೆರೆದಿದ್ದವರನ್ನು ಸಂಕ್ಷಿಪ್ತವಾಗಿ ಸ್ವಾಗತಿಸಿದರು.ಜನವರಿ 18 ರಂದು ಹೋಳ್ಕರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರು ಪಂದ್ಯಗಳ ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಈ ಇಬ್ಬರು ಆಟಗಾರರು ಆಡಲಿದ್ದಾರೆ. ರಾಜ್‌ಕೋಟ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಮೈಕೆಲ್ ಬ್ರೇಸ್‌ವೆಲ್ ನೇತೃತ್ವದ ನ್ಯೂಜಿಲೆಂಡ್ ತಂಡವು ಬಲವಾಗಿ

ಬೆಂಗಳೂರು: 2024ರ ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಗರಿಷ್ಠ ವಿಕೆಟ್‌ ಪಡೆದಿದ್ದ ಟಗರು ಪುಟ್ಟಿ ಖ್ಯಾತಿಯ ಶ್ರೇಯಾಂಕಾ ಪಾಟೀಲ್ ಈ ಬಾರಿ ಮತ್ತೊಂದು ದಾಖಲೆ ಬರೆದಿದ್ದಾರೆ.23 ವರ್ಷದ ಶ್ರೇಯಾಂಕಾ ಪಾಟೀಲ್ ಈವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 18 ಪಂದ್ಯಗಳನ್ನಾಡಿದ್ದಾರೆ. ಈ ಹದಿನೆಂಟು ಪಂದ್ಯಗಳಲ್ಲಿ 317 ಎಸೆತಗಳನ್ನು ಎಸೆದಿರುವ ಶ್ರೇಯಾಂಕಾ ಒಟ್ಟು 27 ವಿಕೆಟ್ ಕಬಳಿಸಿದ್ದಾರೆ. ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ಶುಕ್ರವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 5 ವಿಕೆಟ್​ ಕಬಳಿಸುವ ಮೂಲಕ. ಈ ಐದು ವಿಕೆಟ್​ಗಳೊಂದಿಗೆ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಗುಜರಾತ್ ಜೈಂಟ್ಸ್ ವಿರುದ್ಧ 3.5 ಓವರ್​ ಎಸೆದ ಶ್ರೇಯಾಂಕಾ ಪಾಟೀಲ್ ಕೇವಲ 23 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಇದರೊಂದಿಗೆ ಡಬ್ಲ್ಯುಪಿಎಲ್‌ನಲ್ಲಿ 5 ವಿಕೆಟ್ ಕಬಳಿಸಿದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆ ಶ್ರೇಯಾಂಕಾ ಪಾಲಾಯಿತು.

ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಫೈನಲ್‌ ವಾರ ನಡೆಯುತ್ತಿದೆ. ಭಾನುವಾರ ಫೈನಲ್‌ ಎಪಿಸೋಡ್‌ ಪ್ರಸಾರವಾಗಲಿದ್ದು, ಕಪ್‌ ಯಾರ ಪಾಲಾಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. ಬಿಗ್‌ಬಾಸ್‌ ಪ್ರೀ ಫಿನಾಲೆ ಇಂದು ನಡೆಯಲಿದ್ದು, ನಾಳೆ ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ. ಫಿನಾಲೆಯಲ್ಲಿ ಅಶ್ವಿನಿ ಗೌಡ, ಗಿಲ್ಲಿ ನಟ, ರಘು, ರಕ್ಷಿತಾ, ಧನುಷ್‌, ಕಾವ್ಯಾ ಇದ್ದಾರೆ. ಬಿಗ್‌ಬಾಸ್‌ನ ಕೊನೆಯ ಏಳನೇ ಸ್ಥಾನದಲ್ಲಿ ಧ್ರುವಂತ್‌ ಹೊರಬಿದ್ದಿದ್ದರು.ಬಿಗ್‌ಬಾಸ್‌ ಫೈನಲ್‌ ಹೊಸ್ತಿಲಲ್ಲೇ ಕಲಾವಿದ ಧ್ರುವಂತ್‌ ಅವರು ಮಿಡ್‌ವೀಕ್‌ ಎಲಿಮಿನೇಷನ್‌ನಲ್ಲಿ ಹೊರಬಿದ್ದಿದ್ದರು. ಬಿಗ್‌ಬಾಸ್‌ ಕನ್ನಡದ 12ನೇ ಆವೃತ್ತಿಯಲ್ಲಿ ಜೈ ಮಹಾಕಾಲ್‌ ಎನ್ನುವ ಸಾಲಿನಿಂದಲೇ ಖ್ಯಾತಿಗಳಿಸಿದ್ದ ಧ್ರುವಂತ್‌ 108ನೇ ದಿನ ನಡೆದ ಮಿಡ್ ವೀಕ್ ಎಲಿಮಿನೇಷನ್‌ನಲ್ಲಿ ನಿರ್ಗಮಿಸಿದ್ದರು.

ಮುಂಬಯಿ: ನನ್ನನ್ನು ನಿಂದಿಸಿದ, ನನ್ನ ಮನೆಯನ್ನು ಕೆಡವಿದವರು, ಮಹಾರಾಷ್ಟ್ರ ತೊರೆಯುವಂತೆ ಬೆದರಿಕೆ ಹಾಕಿದವರಿಗೆ ಇಂದು ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಇಂದು ಅವರನ್ನೇ ಮಹಾರಾಷ್ಟ್ರ ತೊರೆಯುವಂತೆ ಮಾಡಿದೆ ಎಂದು ನಟಿ ಮತ್ತು ಸಂಸದೆ ಕಂಗನಾ ರನೌತ್ ಹೇಳಿದ್ದಾರೆ.ದೇಶದ ಅತ್ಯಂತ ಶ್ರೀಮಂತ ಪುರಸಭೆಯಾದ ಬೃಹತ್ ಮುಂಬಯಿ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಐತಿಹಾಸಿಕ ಗೆಲುವಿಗಾಗಿ ಕಂಗನಾ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಬಿಜೆಪಿ ನಾಯಕರನ್ನು ಅಭಿನಂದಿಸಿದ್ದಾರೆ.2020ರಲ್ಲಿ ಅವಿಭಜಿತ ಶಿವಸೇನೆ ಅಧಿಕಾರದಲ್ಲಿದ್ದಾಗ ಬೃಹತ್ ಮುಂಬಯಿ ಮುನ್ಸಿಪಲ್ ಕಾರ್ಪೊರೇಷನ್ ಮುಂಬೈನಲ್ಲಿರುವ ಅವರ ಬಂಗಲೆಗೆ ಹೊಂದಿಕೊಂಡ ಕಚೇರಿಯನ್ನು ಕೆಡವಿದ್ದ ನಟಿಗೆ ಇಂದು ನ್ಯಾಯ ಸಿಕ್ಕಿದೆ ಎನ್ನಲಾಗಿದೆ. ಬಿಎಂಸಿ ಚುನಾವಣೆಯಲ್ಲಿ ಶಿವಸೇನೆಯನ್ನು ಕೆಳಗಿಳಿಸಲಾಗಿದೆ.

ಬೀದರ್: ಕರ್ನಾಟಕದ ಮಾಜಿ ಸಚಿವ, ಬೀದರ್‌ನ ಧೀಮಂತ ರಾಜಕಾರಣಿ ಶತಾಯುಷಿ ಭೀಮಣ್ಣ ಖಂಡ್ರೆ (102) ಅವರು ಶುಕ್ರವಾರ ‌ನಿಧನರಾದರು.ಭೀಮಣ್ಣ ಖಂಡ್ರೆ ಅವರಿಗೆ ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಸೇರಿದಂತೆ ಇಬ್ಬರು ಪುತ್ರರು, ಐದು ಜನ ಪುತ್ರಿಯರು ಇದ್ದಾರೆ. ಪತ್ನಿ ಲಕ್ಷ್ಮೀಬಾಯಿ ಖಂಡ್ರೆ, ಗಂಡು ಮಕ್ಕಳ ಪೈಕಿ ಹಿರಿಯ ಮಗ, ಮಾಜಿ ಶಾಸಕ ವಿಜಯಕುಮಾರ್‌ ಖಂಡ್ರೆ ಆವರು ಅನಾರೋಗ್ಯದಿಂದ ಈ ಹಿಂದೆಯೇ ಮೃತಪಟ್ಟಿದ್ದಾರೆ.ಸಮಾಜವಾದಿ ಪಕ್ಷದ ಕಾರ್ಯಕರ್ತರಾಗಿ ರಾಜಕೀಯ ಜೀವನ ಆರಂಭಿಸಿದ ಅವರು, 1953ರಲ್ಲಿ ಭಾಲ್ಕಿ ಪುರಸಭೆ ಅಧ್ಯಕ್ಷರಾಗಿದ್ದರು. ಬಳಿಕ ನಾಲ್ಕು ಸಲ ಶಾಸಕರಾಗಿ, ಎರಡು ಸಲ ವಿಧಾನ ಪರಿಷತ್ ಸದಸ್ಯರಾಗಿದ್ದ ಭೀಮಣ್ಣ ಖಂಡ್ರೆ ಅವರು ಎಂ. ವೀರಪ್ಪ ಮೊಯ್ಲಿ ಅವರ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಕೆಲಸ ನಿರ್ವಹಿಸಿದ್ದರು.

ನವಿ ಮುಂಬೈ: ರಾಧಾ ಯಾದವ್ ಭರ್ಜರಿ ಅರ್ಧಶತಕ ಹಾಗೂ ಕನ್ನಡತಿ ಶ್ರೇಯಾಂಕ ಪಾಟೀಲ್‌ ಅವರ ಕೈಚಳಕದ ನೆರವಿನಿಂದ ಶುಕ್ರವಾರ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಹ್ಯಾಟ್ರಿಕ್‌ ಗೆಲುವು ಸಾಧಿಸಿತು.ಡಿ.ವೈ,. ಪಾಟೀಲ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ತಂಡವು ತನ್ನ ಮೂರನೇ ಪಂದ್ಯದಲ್ಲಿ 32 ರನ್‌ಗಳಿಂದ ಗುಜರಾತ್‌ ಜೈಂಟ್ಸ್ ತಂಡವನ್ನು ಮಣಿಸಿತು. ಈ ಮೂಲಕ ಸ್ಮೃತಿ ಪಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಭದ್ರಪಡಿಸಿಕೊಂಡಿತು.183 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಗುಜರಾತ್ ಜೈಂಟ್ಸ್ ತಂಡಕ್ಕೆ ಶ್ರೇಯಾಂಕ ಬಲವಾದ ಪೆಟ್ಟಿ ನೀಡಿದರು. ಐದು ವಿಕೆಟ್‌ ಪಡೆದ ಅವರು ಎದುರಾಳಿ ಬ್ಯಾಟರ್‌ಗಳಿಗೆ ಕಡಿವಾಣ ಹಾಕಿದರು. ಅಂತಿಮವಾಗಿ ಗುಜರಾತ್ ಜೈಂಟ್ಸ್ ತಂಡ 150 ರನ್‌ಗಳಿಗೆ ಆಲೌಟ್ ಆಯಿತು. ಶ್ರೇಯಾಂಕ 3.5 ಓವರ್‌ ಬೌಲಿಂಗ್ ನಡೆಸಿ 23 ರನ್ ನೀಡಿ 5 ವಿಕೆಟ್‌ ಪಡೆದರು.