ಬೆಂಗಳೂರು: ಅಡುಗೆ ಹಾಗೂ ವಾಣಿಜ್ಯ ಸಿಲಿಂಡರ್ಗೆ ದೇಶದಲ್ಲಿ ಯಾವುದೇ ಕೊರತೆ ಇಲ್ಲ. ಆದರೆ ಸಿಲಿಂಡರ್ ಪೂರೈಕೆ ವಿಷಯದಲ್ಲಿ ಕಾಂಗ್ರೆಸ್, ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಾ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗ್ಯಾಸ್ ಸಿಲಿಂಡರ್ ಸಂಬಂಧ ಜನರನ್ನು ಗೊಂದಲಕ್ಕೀಡು ಮಾಡುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಾ ಇದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಸಹ ಆಗುತ್ತದೆ ಎಂದು ರಾಹುಲ್ ಗಾಂಧಿ ಅವರು ನಿನ್ನೆ ಹೇಳಿದ್ದಾರೆ. ಇದು ಸುಳ್ಳು. ಇಡೀ ದೇಶದಲ್ಲಿ ಈಗಲೂ ಮತ್ತು ಮುಂದೆಯೂ ಪೆಟ್ರೋಲಿಯಂ ಉತ್ಪನ್ನಗಳ ಕೊರತೆ ಆಗುವುದಿಲ್ಲ. ಕೊರತೆ ಆಗದಂತೆ ಪ್ರಧಾನಿ
ಗುವಾಹಟಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ 4,570 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಿದರು ಮತ್ತು ಅಸ್ಸಾಂನ ಕೊಕ್ರಜಾರ್ ಮತ್ತು ಈಶಾನ್ಯ ಪ್ರದೇಶದಲ್ಲಿ ಸಂಪರ್ಕವನ್ನು ಸುಧಾರಿಸುವ ಉದ್ದೇಶದಿಂದ ಮೂರು ಹೊಸ ರೈಲು ಸೇವೆಗಳಿಗೆ ಚಾಲನೆ ನೀಡಿದರು. ಮೂರು ರೈಲುಗಳು ಕಾಮಾಖ್ಯ-ಚರ್ಲಪಲ್ಲಿ ಅಮೃತ್ ಭಾರತ್ ಎಕ್ಸ್ಪ್ರೆಸ್, ಗುವಾಹಟಿ-ನ್ಯೂ ಜಲ್ಪೈಗುರಿ ಎಕ್ಸ್ಪ್ರೆಸ್ ಮತ್ತು ನಾರಂಗಿ-ಅಗರ್ತಲಾ ಎಕ್ಸ್ಪ್ರೆಸ್. ವಿಧಾನಸಭೆ ಚುನಾವಣೆಗೆ ಮುನ್ನ ಪ್ರಧಾನಿ ಅಸ್ಸಾಂಗೆ 2 ದಿನಗಳ ಭೇಟಿಯಲ್ಲಿದ್ದಾರೆ.ಪ್ರತಿಕೂಲ ಹವಾಮಾನದ ಕಾರಣ ಕೊಕ್ರಜಾರ್ಗೆ ಹೋಗಲು ಸಾಧ್ಯವಾಗದ ಕಾರಣ ಗುವಾಹಟಿಯಿಂದ ವಿಡಿಯೋ ಕಾನ್ಫರೆನ್ಸಿಂಗ್
ಫ್ಲೋರಿಡಾ: ಪಶ್ಚಿಮ ಇರಾಕ್ನಲ್ಲಿ ಗುರುವಾರ ಯುಎಸ್ ಇಂಧನ ತುಂಬುವ ವಿಮಾನವೊಂದು ಪತನಗೊಂಡ ನಂತರ ನಾಲ್ವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಯುನೈಟೆಡ್ ಸ್ಟೇಟ್ಸ್ ಸೆಂಟ್ರಲ್ ಕಮಾಂಡ್ (ಯುಎಸ್ ಸೆಂಟ್ಕಾಮ್) ಶುಕ್ರವಾರ ದೃಢಪಡಿಸಿದೆ. ಬೋಯಿಂಗ್ ಕೆಸಿ -135 ಸ್ಟ್ರಾಟೊಟ್ಯಾಂಕರ್ ಮಾರ್ಚ್ 21 ರ ಸಮಯಕ್ಕೆ ಪೂರ್ವ ವಿಮಾನದಲ್ಲಿ ಸುಮಾರು 21 ಗಂಟೆಗೆ ವಿಮಾನದಲ್ಲಿ ಪತನಗೊಂಡಿತು ಎಂದು ಯುಎಸ್ ಸೆಂಟ್ಕಾಮ್ ತಿಳಿಸಿದೆ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಅದು ಹೇಳಿದೆ.
ತಿರುಮಲ ಲಡ್ಡು ತಯಾರಿಕೆಗೆ ಬಳಸುವ ತುಪ್ಪದ ಕಲಬೆರಕೆ ಕುರಿತ ವಿವಾದಕ್ಕೆ ಸಂಬಂಧಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದ್ದು, ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆ ಇನ್ನೂ ನಡೆಯುತ್ತಿರುವಾಗ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿದೆ.ಸಾಂವಿಧಾನಿಕ ಸ್ಥಾನದಲ್ಲಿರುವ ವ್ಯಕ್ತಿಗಳು ಲಡ್ಡು ವಿವಾದದ ಕುರಿತು ಹೇಳಿಕೆ ನೀಡದಂತೆ ತಡೆಯಲು ನಿರ್ದೇಶನ ನೀಡುವಂತೆ ಕೋರಿ ಮಣೂರು ಶ್ರೀನಿವಾಸ್ ಅವರು ಅರ್ಜಿ ಸಲ್ಲಿಸಿದ್ದರು.ಪ್ರಾಣಿಗಳ ಕೊಬ್ಬಿನೊಂದಿಗೆ ತುಪ್ಪವನ್ನು ಕಲಬೆರಕೆ ಮಾಡುವ ಕುರಿತು ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮತ್ತು ಇತರರು
ಪ.ಬಂಗಾಳ: ಸಾಮಾಜಿಕ ಜಾಲತಾಣದಲ್ಲಿ ಹಿರಿಯ ಮಹಿಳೆಯೊಬ್ಬರು ಪ್ರಧಾನಿ ನರೇಂದ್ರ ಮೋದಿಯ ಚಿತ್ರದ ಪೋಸ್ಟರ್ ಅನ್ನು ಹಿಡಿದುಕೊಂಡು ಮುಗ್ಧವಾಗಿ ಮಾತನಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಪ್ರಧಾನಿ ಮೋದಿಗೆ ಜತೆಗೆ ಮಾತನಾಡುತ್ತಿರುವಂತೆ ಪೋಸ್ಟರ್ ಅನ್ನು ಹಿಡಿದು ಹಿರಿ ಜೀವದ ಮುಗ್ಧತೆ ಸಾಮಾಜಿಕ ಜಾಲತಾಣದಲ್ಲಿ ಮನ ಗೆದ್ದಿದೆ.ಈ ವಿಡಿಯೋದಲ್ಲಿ ಮಹಿಳೆ ‘ಜೈ ಶ್ರೀ ರಾಮ್... ನಾನು ನಿಮಗೆ ಸಾವಿರಾರು ಆಶೀರ್ವಾದಗಳನ್ನು ನೀಡುತ್ತೇನೆ. ನನ್ನ ಮಗ ಬೇರೆ
ನವದೆಹಲಿ: ಸ್ಟೆಪ್ಸ್ ನಲ್ಲಿ ಕೂತುಕೊಳ್ಳೋದು, ಚಹಾ ಸೇವಿಸಿಕೊಂಡು ಎಲ್ ಪಿಜಿ ಬಗ್ಗೆ ಮಾತನಾಡೋದು.. ಹೀಗೆಂದು ಇಂದು ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿಪಕ್ಷ ನಾಯಕ ರಾಹುಲ್ ಗಾಂಧಿಯನ್ನು ಟ್ರೋಲ್ ಮಾಡಿದ್ದಾರೆ. ಎಲ್ ಪಿಜಿ ಅಭಾವದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ನಿನ್ನೆ ರಾಹುಲ್ ಗಾಂಧಿ ನೇತೃತ್ವದಲ್ಲಿ ವಿಪಕ್ಷ ನಾಯಕರು ಸಂಸತ್ ಭವನದ ಮೆಟ್ಟಿಲ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಾಹುಲ್ ಮತ್ತು ಇತರೆ ಸಂಸದರು ಚಹಾ, ಬಿಸ್ಕತ್ ಸೇವಿಸುತ್ತಾ ಕೂತಿದ್ದ ವಿಡಿಯೋ ವೈರಲ್ ಆಗಿತ್ತು. ಇಂದು ಲೋಕಸಭೆಯಲ್ಲಿ ಎಲ್ ಪಿಜಿ ಅಭಾವದ ಬಗ್ಗೆ ಚರ್ಚೆ ನಡೆಯುತ್ತಿತ್ತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡುತ್ತಿದ್ದರು.
ಈಚೆಗೆ ಸಾಮಾಜಿಕ ಜಾಲತಾಣದಲ್ಲಿ ಬಾಲಿವುಡ್ನ ಹಿರಿಯ ನಟಿ ನೀನಾ ಗುಪ್ತಾ ಅವರು 66ನೇ ವಯಸ್ಸಿನಲ್ಲಿ ಮಗುವಿನ ನಿರೀಕ್ಷೆಯಲ್ಲಿದ್ದಾರೆಂಬ ಸುದ್ದಿ ಹರಿದಾಡಿತ್ತು. ಆದರೆ ಈ ಎಲ್ಲ ಟ್ರೋಲ್ಗೆ ನೀನಾ ಅವರು ತಮ್ಮ ಟ್ರೇಡ್ಮಾರ್ಕ್ ಹಾಸ್ಯದೊಂದಿಗೆ ವದಂತಿಗಳಿಗೆ ಪ್ರತಿಕ್ರಿಯಿಸಿ, ವದಂತಿಯನ್ನು ತಳ್ಳಿಹಾಕಿದರು.ನೀನಾ ಗುಪ್ತಾ ಮತ್ತು ಪತಿ ವಿವೇಕ್ ಮೆಹ್ರಾ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ವಿವಾಹದ ಆರತಕ್ಷತೆಯಲ್ಲಿ
ಮೈಸೂರು: ಕೊನೆಯ ಉಸಿರು ಇರುವವರೆಗೂ ರಾಜಕೀಯ ಜೀವನದಲ್ಲಿರುತ್ತೇನೆಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಲ್ಲಿನ ಮರಕೋಡು ಗ್ರರಾಮದಲ್ಲಿ ಶುಕ್ರವಾರ ಬೀರೇಶ್ವರ ದೇವರ ದೇವಸ್ಥಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ರಾಜಕೀಯ ಬದುಕಿನಲ್ಲಿ ಸೋಲು ಹಾಗೂ ಗೆಲುವು ಎರಡನ್ನೂ ನೋಡಿರುವ ನಾನು, ಜನರ ಸೇವೆ ಮಾಡುವುದನ್ನು ಮಾತ್ರ ಮರೆತಿಲ್ಲ. ಕೈಲಾದಷ್ಟು ಜನ ಸೇವೆ ಮಾಡಿಕೊಂಡು ಬರುತ್ತಿದ್ದೇನೆ ಎಂದರು.ನಾನು ಕ್ಷೇತ್ರಕ್ಕೆ ಈಗ ಜಾಸ್ತಿ ಬರಲು ಆಗುತ್ತಿಲ್ಲ. ಯತೀಂದ್ರ ಸಿದ್ದರಾಮಯ್ಯ ಕ್ಷೇತ್ರವನ್ನು ನೋಡಿಕೊಳ್ಳುತ್ತಾನೆ. ಅಭಿವೃದ್ಧಿ
ಬೆಂಗಳೂರು: ಸರಕಾರವು ಕೂಡಲೇ ಒಳ ಮೀಸಲಾತಿಯ ಗೊಂದಲ ಸರಿಪಡಿಸಬೇಕೆಂದು ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಮಾರ್ಗದರ್ಶಿ ಸೂಚನೆಯಡಿ ಶೇ 56 ಒಳ ಮೀಸಲಾತಿ ನೀಡುವಂತೆ ನಾವು ಒತ್ತಾಯಿಸುತ್ತೇವೆ. ಇದಕ್ಕೆ ಎಲ್ಲ ರೀತಿಯ ಜನಜಾಗೃತಿಗೆ ನಾವು ಸಿದ್ಧರಿದ್ದೇವೆ. ನಿನ್ನೆ ಮುನಿಯಪ್ಪನವರು 27ರಂದು ವಿಶೇಷ ಸಂಪುಟ ಸಭೆ ಮಾಡುವುದಾಗಿ ಹೇಳಿದ್ದಾರೆ. ಅದನ್ನು ಕಾದು ನೋಡುತ್ತೇವೆ. ಇಲ್ಲವಾದರೆ, ಈ ಜನಾಂಗವೇ ಎದ್ದು ನಿಂತು ಹೋರಾಟ ಮಾಡಲಿದೆ. ಈಗಾಗಲೇ ಒಂದು ದೊಡ್ಡ ಹೋರಾಟ ನಿನ್ನೆ ನಡೆದಿದೆ ಎಂದು ತಿಳಿಸಿದರು.
ಕಾಠ್ಮಂಡು: ನೇಪಾಳ ಚುನಾವಣೆಯಲ್ಲಿ ಬಾಲೇಂದ್ರ ಶಾ ಅವರು ಝಾಪಾ-5 ಕ್ಷೇತ್ರದಿಂದ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಈಗ ಅವರು ಪ್ರಧಾನಿ ಹುದ್ದೆಯ ರೇಸ್ನಲ್ಲಿದ್ದಾರೆ.ನೇಪಾಳದಲ್ಲಿ ವಿದ್ಯಾರ್ಥಿಗಳ ದಂಗೆಯ ಬಳಿಕ ಪ್ರಧಾನಿಯಾಗಿದ್ದ ಕೆ.ಪಿ. ಓಲಿ ಅವರು ರಾಜೀನಾಮೆ ಸಲ್ಲಿಸಿ ಕೆಳಗಿಳಿದರು. ಬಳಿಕ ನಡೆದ ಚುನಾವಣೆಯಲ್ಲಿ ಬಾಲೇಂದ್ರ ಶಾ ಪ್ರತಿನಿಧಿಸುತ್ತಿರುವ ಪಕ್ಷವು ಬಹುಮತ ಪಡೆದಿದೆ. ಈಗ ಬಾಲೇಂದ್ರ ಅವರೇ ಪ್ರಧಾನಿಯಾಗುತ್ತಾರೆ ಎನ್ನಲಾಗುತ್ತಿದೆ. ವಿಶೇಷವೆಂದರೆ ಬಾಲೇಂದ್ರ ಅವರು ಪುನೀತ್ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿ. 35 ವರ್ಷದ ಅವರು 2016 ರಿಂದ 2018ರ ಅವಧಿಯಲ್ಲಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ನಿಟ್ಟೆ ಮೀನಾಕ್ಷಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸ್ಟ್ರಕ್ಚರಲ್ ಎಂಜಿನಿಯರಿಂಗ್ನಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದಾರೆ.
ಲಖನೌ: ಭಾರತ ತಂಡದ ಅನುಭವಿ ಸ್ಪಿನ್ನರ್ ಕುಲದೀಪ್ ಯಾದವ್ ಇದೇ ಶನಿವಾರ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ. ಮಾರ್ಚ್ 14 ರಂದು ಮಸ್ಸೂರಿಯ ರೆಸಾರ್ಟ್ನಲ್ಲಿ ತಮ್ಮ ಬಾಲ್ಯದ ಗೆಳತಿ ವಂಶಿಕಾ ಅವರೊಂದಿಗೆ ವಿವಾಹವಾಗಲಿದ್ದಾರೆ. ಟಿ20 ವಿಶ್ವಕಪ್ ಗೆದ್ದ ತಂಡದಲ್ಲಿದ್ದ ಕುಲದೀಪ್ ಅವರ ಮದುವೆಗೆ ಭರ್ಜರಿ ಸಿದ್ಧತೆಗಳು ನಡೆಯುತ್ತಿದೆ. ಈ ವಿವಾಹ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸಲಾಗಿದೆ. ಭಾರತದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಭಾಗವಹಿಸುವ ಸಾಧ್ಯತೆಯಿದೆ. ಕೊಹ್ಲಿ, ರೋಹಿತ್ ಮತ್ತು ವೇಗಿ ಜಸ್ಪ್ರೀತ್ ಬುಮ್ರಾ ಸೇರಿದಂತೆ ಹಲವಾರು ಕ್ರಿಕೆಟಿಗರು ದಂಪತಿ ಸಮೇತವಾಗಿ ನಿರೀಕ್ಷೆಯಿದೆ. ಕುಲದೀಪ್ ಮದುವೆಗಾಗಿ ಇಡೀ ಹೋಟೆಲ್ ಅನ್ನು ಬುಕ್ ಮಾಡಲಾಗಿದೆ. ದಿ ಸವೊಯ್ನಲ್ಲಿ ಸುಮಾರು 80 ಕೊಠಡಿಗಳನ್ನು ಕಾಯ್ದಿರಿಸಲಾಗಿದೆ ಎಂದು ಹೋಟೆಲ್ ಆಡಳಿತ ಮಂಡಳಿ ದೃಢಪಡಿಸಿದೆ.
ಬೆಂಗಳೂರು: ರಕ್ಷಿತ್ ಶೆಟ್ಟಿ ಜೊತೆಗೆ ಬ್ರೇಕಪ್ ಆಗಲು ಕಾರಣವೇನು ಎಂದು ರಶ್ಮಿಕಾ ಮಂದಣ್ಣ ತಾಯಿ ಮಾತನಾಡಿದ್ದಾರೆ ಎನ್ನಲಾದ ಅಡಿಯೋವೊಂದನ್ನು ವೈರಲ್ ಮಾಡಿದವರ ವಿರುದ್ಧ ನಟಿ ರಶ್ಮಿಕಾ ಮಂದಣ್ಣ ಸಿಡಿದೆದ್ದಿದ್ದು ಕನ್ನಡದಲ್ಲೇ ತಿರುಗೇಟು ಕೊಟ್ಟಿದ್ದಾರೆ. 8 ವರ್ಷಗಳ ಹಿಂದಿನ ಕತೆಯನ್ನು ಈಗ ಎಳೆದು ತಂದು ನನ್ನ ಬಗ್ಗೆ ಮತ್ತು ನನ್ನ ಕುಟುಂಬದ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಸಹಿಸಿಕೊಂಡು ಕೂರಲು ಸಾಧ್ಯವಿಲ್ಲ. ಈಗಾಗಲೇ ಅಡಿಯೋ ಹರಿಬಿಟ್ಟವರು 24 ಗಂಟೆಯೊಳಗೆ ಅದನ್ನು ಡಿಲೀಟ್ ಮಾಡಬೇಕು ಎಂದು ರಶ್ಮಿಕಾ ಎಚ್ಚರಿಕೆ ಕೊಟ್ಟಿದ್ದಾರೆ.
ನವದೆಹಲಿ: ನಮ್ಮ ಸರ್ಕಾರವಿದ್ದರೂ ಕೆಲಸವಾಗ್ತಿಲ್ಲ ಎಂದು ಕೈ ಶಾಸಕ ನಾರಾಯಣಸ್ವಾಮಿ ನೀಡಿರುವ ಹೇಳಿಕೆ ಉಲ್ಲೇಖಿಸಿ ವಿಪಕ್ಷ ನಾಯಕ ಆರ್ ಅಶೋಕ್ ದಲಿತ ಸಿಎಂ ಎನ್ನುವುದೆಲ್ಲಾ ನಾಟಕ ಎನ್ನುವುದಕ್ಕೆ ಇದೇ ಸಾಕ್ಷಿ ಎಂದು ವ್ಯಂಗ್ಯ ಮಾಡಿದ್ದಾರೆ. ಕ್ಷೇತ್ರದ ಕೆಲಸಗಳಿಗೆ ನಾವೇ ಅಧಿಕಾರಿಗಳನ್ನು ಭೇಟಿ ಮಾಡಿದರೂ ಕೆಲಸವಾಗುತ್ತಿಲ್ಲ. ಸಮಸ್ಯೆ ಹೇಳಲು ಹೋದರೆ ಸಚಿವರೂ ಸಿಗುತ್ತಿಲ್ಲ ಎಂದು ಶಾಸಕ ನಾರಾಯಣಸ್ವಾಮಿ ಬಹಿರಂಗವಾಗಿ ಅಳಲು ತೋಡಿಕೊಂಡಿದ್ದರು. ಇದಕ್ಕೆ ಟಾಂಗ್ ಕೊಟ್ಟಿರುವ ಆರ್ ಅಶೋಕ್ ‘ದಲಿತ ಮುಖ್ಯಮಂತ್ರಿ" ಎಂಬುದು ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲ ಸಿದ್ದರಾಮಯ್ಯ ಅವರು ಉರುಳಿಸುವ ದಾಳ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ?
ಮುಂಬೈ: ಒಂದು ಕಡೆ ಪಾಕಿಸ್ತಾನವೇ ನಮ್ಮ ಜೊತೆ ಕ್ರಿಕೆಟ್ ಆಡಲ್ಲ ಎಂದು ಡ್ರಾಮಾ ಮಾಡುತ್ತಿರುವಾಗ ಸನ್ ರೈಸರ್ಸ್ ಹೈದರಾಬಾದ್ ತಂಡದ ಮಾಲಕಿಯಾಗಿರುವ ಕಾವ್ಯಾ ಮಾರನ್ ಗೆ ಇದೆಲ್ಲಾ ಬೇಕಿತ್ತಾ ಎಂದು ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಂಡ್ರೆಡ್ಸ್ ಹರಾಜು 2026 ರಲ್ಲಿ ಸನ್ ರೈಸರ್ಸ್ ಲೀಡ್ಸ್ ತಂಡವಿದೆ. ಐಪಿಎಲ್ ನ ಸನ್ ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯಾ ಮಾರನ್ ಒಡೆತನದ ತಂಡವಿದು. ಈ ಲೀಗ್ ಹರಾಜು ಪ್ರಕ್ರಿಯೆಯಲ್ಲಿ ಸನ್ ರೈಸರ್ಸ್ ಗೆ ಕಾವ್ಯಾ ಪಾಕಿಸ್ತಾನದ ಆಟಗಾರನನ್ನು ಖರೀದಿಸಿದ್ದಾರೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ವಾರದ ಆರಂಭದಲ್ಲೇ ಅಡಿಕೆ ಬೆಲೆ ಕೊಂಚ ಇಳಿಕೆಯಾಗಿತ್ತು. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಕೆಯಾಗಿತ್ತು. ಇದು ಬೆಳೆಗಾರರಿಗೆ ಸಮಾಧಾನ ತಂದಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಸತತವಾಗಿ ಬೆಲೆ ಇಳಿಕೆ ಕಂಡುಬರುತ್ತಿದೆ. ಕೆಲವು ವರ್ಗದ ಅಡಿಕೆ ಬೆಲೆಯಲ್ಲಿ ಇಂದು ಮತ್ತೆ ಇಳಿಕೆ ಕಂಡುಬರುತ್ತಿದೆ. ಇಂದು ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 530 ರೂ. ಗಳಾಗಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ಈ ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ಭಾರೀ ಏರಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ನಿನ್ನೆ 1,66,060.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,65,745.00 ರೂ.ಗಳಷ್ಟಿದೆ.
ಆಂದ್ರಪ್ರದೇಶ: ಹೆದ್ದಾರಿಯಲ್ಲಿ ಗೋ ಸಾಗಣೆ ಮಾಡುತ್ತಿದ್ದವರಿಂದ ಪೊಲೀಸ್ ಅಧಿಕಾರಿಯೊಬ್ಬರು ಬಿಂದಾಸ್ ಆಗಿ ಲಂಚ ಪಡೆಯುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆಂಧ್ರಪ್ರದೇಶ ಕೃಷ್ಣ ಜಿಲ್ಲೆಯಲ್ಲಿ ನಡೆದ ಘಟನೆ ಇದು ಎನ್ನಲಾಗಿದೆ. ಪೊಲೀಸರು ರಕ್ಷಣೆ ಮಾಡಬೇಕಾದವರು. ಕಳ್ಳತನ ತಡೆಯಬೇಕಾದವರು. ಆದರೆ ಇತ್ತೀಚೆಗೆ ನಮ್ಮ ದೇಶದಲ್ಲಿ ದಕ್ಷ ಪೊಲೀಸರ ನಡುವೆ ಒಬ್ಬೊಬ್ಬ ಇಂತಹ ಭ್ರಷ್ಟರೂ ಇರುತ್ತಾರೆ. ತೆಲಂಗಾಣದ ಕೃಷ್ಣ ಜಿಲ್ಲೆಯ ಹೆದ್ದಾರಿಯೊಂದರಲ್ಲಿ ಒಂದು ಟ್ರಕ್ ನಲ್ಲಿ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಈ ಲಾರಿಯನ್ನು ಪೊಲೀಸ್ ಅಧಿಕಾರಿಯೊಬ್ಬ ಅಡ್ಡಗಟ್ಟುತ್ತಾರೆ.
ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಟಿ ಸಂಜನಾ ಬುರ್ಲಿ ಈಗ ಕಲರ್ಸ್ ಕನ್ನಡ ವಾಹಿನಿ ಧಾರವಾಹಿಯಲ್ಲಿ ಪ್ರಸಾರವಾಗುತ್ತಿರುವ ಶ್ರೀಗಂಧದ ಗುಡಿ ಧಾರವಾಹಿಯಿಂದಲೂ ಹೊರಬಂದಿದ್ದಾರೆ. ಈ ಹಿಂದೆ ಪುಟ್ಟಕ್ಕನ ಮಕ್ಕಳು ಧಾರವಾಹಿಯಲ್ಲಿ ಸ್ನೇಹ ಪಾತ್ರ ಮಾಡುತ್ತಿದ್ದ ಸಂಜನಾ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದರು. ಆದರೆ ಧಾರವಾಹಿ ರೋಚಕ ಘಟ್ಟದಲ್ಲಿದ್ದಾಗ ತಮ್ಮ ವಿದ್ಯಾಭ್ಯಾಸದ ಕಾರಣಕ್ಕೆ ಧಾರವಾಹಿಯಿಂದ ಹೊರಬಂದಿದ್ದರು. ಈ ಧಾರವಾಹಿಯಿಂದ ಹೊರಬಂದ ಕೆಲವು ಸಮಯದ ನಂತರ ಸಂಜನಾ ಕಲರ್ಸ್ ವಾಹಿನಿಯ ಶ್ರೀಗಂಧದ ಗುಡಿ ಧಾರವಾಹಿಗೆ ನಾಯಕಿಯಾಗಿದ್ದರು.
ರೈಲಿನಲ್ಲಿ ಸೀಟ್ ವಿಚಾರದಲ್ಲಿ ಓರ್ವ ಮಹಿಳೆ ಮತ್ತು ಪುರುಷನ ನಡುವೆ ಕಿತ್ತಾಟ ನಡೆದಿದ್ದು ಹೊಡೆದಾಡುವ ಹಂತಕ್ಕೆ ಹೋಗಿದೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರೈಲಿನಲ್ಲಿ ಪ್ರಯಾಣಿಸುವಾಗ ಅದರಲ್ಲೂ ಜನರಲ್ ಭೋಗಿಯಲ್ಲಿ ಪ್ರಯಾಣ ಮಾಡುವಾಗ ಸೀಟ್ ಗಾಗಿ ಕಿತ್ತಾಡುವ ಅನೇಕ ಘಟನೆಗಳು ನಮ್ಮ ಕಣ್ಣ ಮುಂದೆ ಕಾಣುತ್ತದೆ. ಇಂತಹದ್ದೇ ಒಂದು ಘಟನೆ ಇಲ್ಲಿ ಅತಿರೇಕಕ್ಕೆ ಹೋಗಿದೆ. ಸೀಟ್ ವಿಚಾರಕ್ಕೆ ಓರ್ವ ಮಹಿಳೆ ಮತ್ತೊಬ್ಬ ಯುವಕನ ಜೊತೆ ವಾಗ್ವಾದ ನಡೆಸುತ್ತಿರುತ್ತಾಳೆ. ಆ ಮಹಿಳೆ ಎಷ್ಟು ರೊಚ್ಚಿಗೆದ್ದಿದ್ದಳು ಎಂದರೆ ಕೈಯಲ್ಲಿ ಚಪ್ಪಲಿ ತೆಗೆದುಕೊಂಡು ಹೊಡೆಯುವುದಾಗಿ ಯುವಕನಿಗೆ ಬೈಗುಳ ಸುರಿಮಳೆಗೈಯುತ್ತಲೇ ಇದ್ದಳು.
ಬೆಂಗಳೂರು: ಕರ್ನಾಟಕದಲ್ಲಿ ರೆಸಾರ್ಟ್ ರಾಜಕೀಯ ಶುರುವಾಗಿದೆ. ಡಿಕೆ ಶಿವಕುಮಾರ್ ಅವರೇ ನೇತೃತ್ವ ವಹಿಸಿದ್ದಾರೆ. ಆದರೆ ರೆಸಾರ್ಟ್ ಗೆ ಶಿಫ್ಟ್ ಆಗಿರುವವರು ಕರ್ನಾಟಕ ಕಾಂಗ್ರೆಸ್ ಶಾಸಕರಲ್ಲ. ಅಸ್ಸಾಂ ಶಾಸಕರು. ಅಸ್ಸಾಂನಲ್ಲಿ ಚುನಾವಣೆಗೆ ಮೊದಲೇ ಕಾಂಗ್ರೆಸ್ ಶಾಸಕರಿಗೆ ಆಪರೇಷನ್ ಕಮಲದ ಭೀತಿ ಎದುರಾಗಿದೆ. ಕಾಂಗ್ರೆಸ್ ಶಾಸಕರನ್ನು ತನ್ನತ್ತ ಸೆಳೆಯಲು ಬಿಜೆಪಿ ಪ್ರಯತ್ನ ಮಾಡಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಅಸ್ಸಾಂನ 14 ಶಾಸಕರನ್ನು ಕರ್ನಾಟಕಕ್ಕೆ ಕರೆ ತರಲಾಗಿದೆ. ನಿನ್ನೆ ರಾತ್ರಿ ಭುವನೇಶ್ವರದಿಂದ ವಿಮಾನದಲ್ಲಿ ಬೆಂಗಳೂರಿಗೆ ಬಂದಿಳಿದಿರುವ ಶಾಸಕರನ್ನು ಬಿಗಿ ಬಂದೋಬಸ್ತ್ ನಲ್ಲಿ ಬಿಡದಿಯ ವಂಡರ್ ಲಾ ರೆಸಾರ್ಟ್ ಗೆ ಕರೆದೊಯ್ಯಲಾಗಿದೆ.
ನ್ಯೂಯಾರ್ಕ್: ತೈಲ ಬೆಲೆ ಹೆಚ್ಚಾದಷ್ಟು ಅಮೆರಿಕಾಗೆ ಹೆಚ್ಚು ಹಣ ಬರುತ್ತದೆ ಎನ್ನುವ ಮೂಲಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಅಸಲಿ ಬಣ್ಣ ಬಯಲು ಮಾಡಿದ್ದಾರೆ. ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಸನ್ನಿವೇಶದಿಂದ ಜಾಗತಿಕವಾಗಿ ತೈಲ ಪೂರೈಕೆ ಸರಿಯಾಗಿ ಆಗುತ್ತಿಲ್ಲ. ಇದರಿಂದಾಗಿ ಬಹುತೇಕ ರಾಷ್ಟ್ರಗಳಲ್ಲಿ ತೈಲ ಬೆಲೆ ಭಾರೀ ಹೆಚ್ಚಾಗಿದೆ. ಭಾರತಕ್ಕೂ ತೈಲ ಬೆಲೆಯ ಬಿಸಿ ತಾಕಿದೆ. ಇದರ ನಡುವೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೈಲ ಬೆಲೆ ಹೆಚ್ಚಾದರೆ ನಮಗೇ ಲಾಭ ಎಂದಿದ್ದಾರೆ. ತೈಲ ಬೆಲೆ ಹೆಚ್ಚಾದಾಗ ಅಮೆರಿಕಾ ಸಹಜವಾಗಿಯೇ ಹೆಚ್ಚು ಹಣ ಗಳಿಸುತ್ತದೆ.
ಮಂಗನೊಂದು ಆಹಾರ ಅರಸಿಕೊಂಡು ಅಡುಗೆ ಮನೆಗೇ ನುಗ್ಗಿತ್ತು. ಬಾಳೆಹಣ್ಣಿಗಾಗಿ ಹುಡುಕಾಡಿದ ಮಂಗನ ಫನ್ನಿ ವಿಡಿಯೋ ಇಲ್ಲಿದೆ ನೋಡಿ. ಮಂಗಗಳು ಆಹಾರ ಅರಸಿಕೊಂಡು ಕೆಲವೊಮ್ಮೆ ಮನೆಯೊಳಗೇ ನುಗ್ಗಿಬಿಡುತ್ತವೆ. ಮಂಗಗಳಿಗೆ ಬಾಳೆಹಣ್ಣು ಎಂದರೆ ಪ್ರಾಣ. ಅಷ್ಟೊಂದು ಇಷ್ಟಪಟ್ಟು ತಿನ್ನುತ್ತವೆ. ಅದೇ ರೀತಿ ಇಲ್ಲೊಂದು ಮಂಗ ಬಾಳೆಹಣ್ಣು ಅರಸಿಕೊಂಡು ಅಡುಗೆ ಮನೆಯೊಳಗೇ ಬಂದಿದೆ.ಅಡುಗೆ ಮನೆಯೊಳಗೆ ಮಂಗ ಎಲ್ಲಾ ವಸ್ತುಗಳನ್ನು ತಡಕಾಡಿ ಬಾಳೆಹಣ್ಣಿಗಾಗಿ ಹುಡುಕಾಡಿದೆ. ಆದರೆ ಸಿಕ್ಕಿಲ್ಲ. ಈ ವೇಳೆ ಮನೆ ಮಾಲಿಕನೂ ಮಂಗನಿಗೆ ಜೊತೆಯಾಗಿದ್ದಾರೆ. ಪ್ರತಿಯೊಂದು ವಸ್ತುವನ್ನೂ ತೆರೆದು ತೋರಿಸಿದ್ದಾರೆ.
ತಿರುವನಂತಪುರಂ: ಇತ್ತೀಚೆಗೆ ನಡೆದ ಟಿ20 ವಿಶ್ವಕಪ್ 2026 ರಲ್ಲಿ ಟೀಂ ಇಂಡಿಯಾ ಕಪ್ ಗೆಲ್ಲಲು ಪ್ರಮುಖ ಕಾರಣವಾಗಿದ್ದ ಹೀರೋ ಸಂಜು ಸ್ಯಾಮ್ಸನ್. ಇದೀಗ ಅವರು ಲೋಕಲ್ ಟೀ ಅಂಗಡಿಯೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ವಿಶ್ವಕಪ್ ಗೆದ್ದ ಬಳಿಕ ಎಲ್ಲಾ ಆಟಗಾರರೂ ತಮ್ಮ ತವರಿಗೆ ಹೋಗಿದ್ದು ಅದ್ಧೂರಿ ಸ್ವಾಗತ ಸಿಕ್ಕಿದೆ. ಸಂಜು ಸ್ಯಾಮ್ಸನ್ ಕೂಡಾ ಇದಕ್ಕೆ ಹೊರತಲ್ಲ. ಬಹುತೇಕ ಕ್ರಿಕೆಟಿಗರು ವಿಶ್ವಕಪ್ ಮುಗಿದ ಬೆನ್ನಲ್ಲೇ ವಿದೇಶ ಪ್ರವಾಸ ಹೋಗಿದ್ದಾರೆ. ಆದರೆ ಸಂಜು ಸ್ಯಾಮ್ಸನ್ ತಮ್ಮ ಕುಟುಂಬದವರ ಜೊತೆ ಕೇರಳದ ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ.
ಬೆಂಗಳೂರು: ಕರ್ನಾಟಕದಲ್ಲಿ ಬಿಸಿಲಿನ ತಾಪ ದಿನೇ ದಿನೇ ಹೆಚ್ಚಾಗುತ್ತಿದೆ. ಇಂದು ಕೆಲವು ಜಿಲ್ಲೆಗಳಲ್ಲಿ ತಾಪಮಾನ ಮತ್ತಷ್ಟು ಹೆಚ್ಚಾಗಲಿದ್ದು ಜನರಿಗೆ ಎಚ್ಚರಿಕೆಯಿಂದಿರುವುದು ಅಗತ್ಯ. ಇಂದಿನ ಹವಾಮಾನ ವರದಿ ಇಲ್ಲಿದೆ ನೋಡಿ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ವಿಪರೀತ ಬಿಸಿಲು, ತಾಪಮಾನದಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ. ಮುಂದಿನ ಮೂರು ದಿನಗಳಿಗೆ ತಾಪಮಾನದಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಮಾರ್ಚ್ 12 ರಿಂದ 15 ರೊಳಗೆ ಬಿಸಿಲು ಮತ್ತಷ್ಟು ಹೆಚ್ಚಾಗಲಿದೆ. ಅದರಲ್ಲೂ ವಿಶೇಷವಾಗಿ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ತಲುಪುವ ಸಾಧ್ಯತೆಯಿದೆ.
ಶುಕ್ರವಾರ ಮಹಾಲಕ್ಷ್ಮೀ ದೇವಿಗೆ ವಿಶೇಷವಾದ ದಿನವಾಗಿದೆ. ಜೀವನದಲ್ಲಿ ಸುಖ, ಸೌಖ್ಯ, ಐಶ್ವರ್ಯ, ಸಮೃದ್ಧಿಯಾಗಬೇಕೆಂದರೆ ಲಕ್ಷ್ಮೀ ದೇವಿಯ ಪೂಜೆ ಮಾಡಿ. ಇಂದು ಲಕ್ಷ್ಮೀ ದೇವಿಯ ಕಲ್ಯಾಣವೃಷ್ಟಿ ಸ್ತವಃ ಸ್ತೋತ್ರವನ್ನು ಓದಿ.ಕಲ್ಯಾಣವೃಷ್ಟಿಭಿರಿವಾಮೃತಪೂರಿತಾಭಿ--ರ್ಲಕ್ಷ್ಮೀಸ್ವಯಂವರಣಮಂಗಲದೀಪಿಕಾಭಿಃ ।ಸೇವಾಭಿರಂಬ ತವ ಪಾದಸರೋಜಮೂಲೇನಾಕಾರಿ ಕಿಂ ಮನಸಿ ಭಾಗ್ಯವತಾಂ ಜನಾನಾಮ್ ॥ 1 ॥ ಏತಾವದೇವ ಜನನಿ ಸ್ಪೃಹಣೀಯಮಾಸ್ತೇತ್ವದ್ವಂದನೇಷು ಸಲಿಲಸ್ಥಗಿತೇ ಚ ನೇತ್ರೇ ।ಸಾಂನಿಧ್ಯಮುದ್ಯದರುಣಾಯುತಸೋದರಸ್ಯತ್ವದ್ವಿಗ್ರಹಸ್ಯ ಪರಯಾ ಸುಧಯಾಪ್ಲುತಸ್ಯ ॥ 2 ॥ ಈಶತ್ವನಾಮಕಲುಷಾಃ ಕತಿ ವಾ ನ ಸಂತಿಬ್ರಹ್ಮಾದಯಃ ಪ್ರತಿಭವಂ ಪ್ರಲಯಾಭಿಭೂತಾಃ ।ಏಕಃ ಸ ಏವ ಜನನಿ ಸ್ಥಿರಸಿದ್ಧಿರಾಸ್ತೇಯಃ ಪಾದಯೋಸ್ತವ ಸಕೃತ್ಪ್ರಣತಿಂ ಕರೋತಿ ॥ 3 ॥
ಬೆಂಗಳೂರು: ಕಳೆದ ನವೆಂಬರ್ನಲ್ಲಿ ಬಂಡೀಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಬಗ್ಗೆ ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಅವರು ಸಮರ್ಥಿಸಿಕೊಂಡಿದ್ದಾರೆ. ಇಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಖಂಡ್ರೆ, ರಾಜ್ಯ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿ, ವನ್ಯಜೀವಿಗಳ ಸರಣಿ ದಾಳಿಯ ನಂತರ ಮಾನವ ಜೀವಗಳನ್ನು ರಕ್ಷಿಸಲು ಈ ಕ್ರಮ ತೆಗೆದುಕೊಳ್ಳಲಾಗಿತ್ತು ಎಂದರು.ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು, ಸಫಾರಿಗಳ ಅಮಾನತುಗೊಳಿಸುವಿಕೆಯಿಂದ 4,000ಕ್ಕೂ ಹೆಚ್ಚು ಜನ ತಮ್ಮ
ಬೆಂಗಳೂರು: ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ.ಅದರಂತೆ ಶುಕ್ರವಾರ ಪರಪ್ಪನ ಅಗ್ರಹಾರ ಜೈಲಿನಿಂದ 14 ಮಂದಿ, ಮೈಸೂರು 2, ಬೆಳಗಾವಿ 2, ಕಲಬುರಗಿ 2, ಶಿವಮೊಗ್ಗ 1, ವಿಜಯಪುರ 5, ಬಳ್ಳಾರಿ 3, ಧಾರವಾಡ 1, ಶಿವಮೊಗ್ಗ ಮಹಿಳಾ ಬ್ಯಾರೆಕ್ನಿಂದ ಒಬ್ಬರನ್ನು ಬಿಡುಗಡೆಗೆ ಆದೇಶ ಮಾಡಲಾಗಿದೆ. 54 ಜೀವಾವಧಿ ಶಿಕ್ಷಾ ಬಂಧಿಗಳ ವ್ಯಕ್ತಿತ್ವ & ನಡತೆ ಪರಿಶೀಲಿಸಿ 31 ಜನ ಕೈದಿಗಳ ಬಿಡುಗಡೆಗೆ ಆದೇಶಿಸಲಾಗಿದೆ.
ಬೆಂಗಳೂರು: ಎಲ್ಪಿಜಿ ಸಿಲಿಂಡರ್ ಕೊರತೆ ಸಂಬಂದ ರಾಜ್ಯದ ಸಂಸದರು ನ್ಯಾಯ ಒದಗಿಸಲಿ ಎಂದು ಡಿಕೆ ಶಿವಕುಮಾರ್ ಹೇಳಿದರು. ಈ ಸಂಬಂಧ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಲ್ಪಿಜಿ ಸಿಲಿಂಡರ್ ಕೊರತೆಯಿಂದ ಸಾರ್ವಜನಿಕರು ತೊಂದರೆ ಎದುರಿಸುತ್ತಿದ್ದಾರೆ. ಈ ವಿಚಾರವಾಗಿ ಬಿಜೆಪಿಯ ಯಾವುದೇ ಸಂಸದರು ಬಾಯಿ ಬಿಡುತ್ತಿಲ್ಲ ಎಂದರು.ಇಂಧನ ಬೆಲೆ ಏರಿಕೆಯಿಂದ ಜನರು ಪರದಾಡುತ್ತಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಏನೂ ಮಾಡಲು ಆಗುವುದಿಲ್ಲ. ಕೇಂದ್
ಕನ್ನಡದ ಹಿರಿಯ ಪತ್ರಕರ್ತ ಕೆ.ಜೆ.ಕುಮಾರ್ ನಿಧನಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಭಾವುಕ ಸಂದೇಶವನ್ನು ಬರೆದುಕೊಂಡು ಹಂಚಿಕೊಂಡಿದ್ದಾರೆ. ತಮ್ಮ ಬಣ್ಣದ ಬದುಕಿನ ಆರಂಭಿಕ ಪ್ರಯಾಣದದಲ್ಲಿ ಕುಮಾರ್ ಅವರ ಬೆಂಬಲವನ್ನು ನೆನಪಿಸಿಕೊಂಡು ರಜನಿಕಾಂತ್ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಕನ್ನಡದಲ್ಲಿ ತಮ್ಮ ಗೌರವವನ್ನು ಪೋಸ್ಟ್ ಮಾಡಿದ್ದಾರೆ.ಕುಮಾರ್ ಅವರು 74 ನೇ ವಯಸ್ಸಿನಲ್ಲಿ ತೀವ್ರ ಹೃದಯಾಘಾತದಿಂದ ಬುಧವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರ
ಡಿಸೆಂಬರ್ 4, 2022 ರಂದು ಉದ್ಯಮಿ ಸೊಹೈಲ್ರನ್ನು ಕೈಹಿಡಿದ ನಟಿ ಹನ್ಸಿಕಾ ಮೋಟ್ವಾನಿ ಅವರು ದಾಂಪತ್ಯ ಜೀವನದಲ್ಲಿ ಬಿರುಕು ಹಿನ್ನೆಲೆ ಇದೀಗ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದಾರೆ.ಕಳೆದ ವರ್ಷ ಆಗಸ್ಟ್ನಲ್ಲಿ ಹನ್ಸಿಕಾ ತನ್ನ ಇನ್ಸ್ಟಾಗ್ರಾಮ್ ಖಾತೆಯಿಂದ ತನ್ನ ಮದುವೆಯ ಫೋಟೋಗಳನ್ನು ಅಳಿಸಿಹಾಕಿದ್ದರು. ಇದು ಅವರ ಮದುವೆಯಲ್ಲಿ ತೊಂದರೆಯ ಬಗ್ಗೆ ವದಂತಿಗಳನ್ನು ಹುಟ್ಟುಹಾಕಿತು. ದಂಪತಿಗಳು ಸ್ವಲ್ಪ ಸಮಯದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ವರದಿಗಳು ಸೂಚಿಸಿವೆ.
ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣ ಆರೋಪಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ್ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ವಜಾ ಬಳಿಕ ಅವರನ್ನು ಬಂಧಿಸಲಾಗಿತ್ತು. ಫೆ.12 ರಂದು ಅಹಮದಾಬಾದ್ನಿಂದ ಬೆಂಗಳೂರಿಗೆ ಆಗಮಿಸಿದ್ದ ಬೈರತಿ ಬಸವರಾಜ್ ಅವರನ್ನು ಪೊಲೀಸರು ಬಂಧಿಸಿದ್ದರು.
ನವದೆಹಲಿ: ಹಾರ್ದಿಕ್ ಪಾಂಡ್ಯ ಅವರಿಗೆ ಭಾರತ ಧ್ವಜಕ್ಕೆ ಅವಮಾನ ಮಾಡಿದ್ದಾರೆಂದು ಪುಣೆಯ ವಕೀಲ ವಾಜಿದ್ ಖಾನ್ ಅವರು ಆರೋಪ ಮಾಡಿದ್ದಾರೆ. ಧ್ವಜವನ್ನು ಹೆಗಲ ಮೇಲೆ ಇಟ್ಟುಕೊಂಡು ಗೆಳತಿ ಜತೆಗೆ ಅನುಚಿತ ಸನ್ನೆಗಳನ್ನು ಮಾಡುವ ಮೂಲಕ ಅಗೌರವ ತೋರಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪುಣೆಯ ವಕೀಲ ವಾಜಿದ್ ಖಾನ್ ಆರೋಪ ಮಾಡಿದ್ದಾರೆ.T20 ವಿಶ್ವಕಪ್ ಫೈನಲ್ನಲ್ಲಿ ನ್ಯೂಜಿಲೆಂಡ್ ರಾಷ್ಟ್ರೀಯ ಕ್ರಿಕೆಟ್ ತಂಡದ ವಿರುದ್ಧ ಐತಿಹಾಸಿಕ ವಿಜಯದ ನಂತರ, ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಜರಿದ್ದ ಆಟಗಾರರ ಕುಟುಂಬಗಳು ಸಹ ಮೈದಾನಕ್ಕೆ ಬಂದವು.
ಬೆಂಗಳೂರು: ರಕ್ಷಿತ್ ಶೆಟ್ಟಿ ಜತೆಗಿನ ಮದುವೆ ಮುರಿದು ಬೀಳಲು ಕಾರಣ ಹೇಳಿರುವ ಬಗ್ಗೆ ರಶ್ಮಿಕಾ ಮಂದಣ್ಣರ ತಾಯಿ ಮಾತನಾಡಿದ್ದು ಎನ್ನಲಾದ ಆಡಿಯೋ ಬಗ್ಗೆ ನಟಿ ಗರಂ ಆಗಿದ್ದಾರೆ. ಮಾನಹಾನಿಕರ ಅಥವಾ ಗೌಪ್ಯತೆಯನ್ನು ಉಲ್ಲಂಘಿಸುವ ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ "ವ್ಯಕ್ತಿಗಳು, ಪ್ರಭಾವಿಗಳು ಮತ್ತು ವೇದಿಕೆಗಳ" ಮೇಲೆ ರಶ್ಮಿಕಾ ಮಂದಣ್ಣ ವಾಗ್ದಾಳಿ ನಡೆಸಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಈ ಸಂಬಂಧ ಆಕ್ರೋಶ ಹೊರಹಾಕಿ ಬರೆದುಕೊಂಡಿದ್ದಾರೆ.
ನವದೆಹಲಿ: ಭಾರತದ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಕರ್ನಲ್ ಸಿಕೆ ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ಸ್ವೀಕರಿಸುವ ಸಾಧ್ಯತೆಯಿದೆ.ಆದರೆ ಮಾರ್ಚ್ 15 ರಂದು ರಾಷ್ಟ್ರ ರಾಜಧಾನಿಯಲ್ಲಿ ಬಿಸಿಸಿಐ ಪ್ರಶಸ್ತಿ ಪ್ರದಾನ ನಡೆಯುವಾಗ ಟೆಸ್ಟ್ ಮತ್ತು ಏಕದಿನ ತಂಡದ ನಾಯಕ ಶುಭಮನ್ ಗಿಲ್ ಅವರನ್ನು ವರ್ಷದ ಪುರುಷರ ಕ್ರಿಕೆಟಿಗ ಎಂದು ಹೆಸರಿಸಬಹುದು.‘ನಮನ್’ ಹೆಸರಿನ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಇತ್ತೀಚಿನ ಪುರುಷರ T20 ವಿಶ್ವಕಪ್ ವಿಜೇತ ತಂಡ, 2025 ಪುರುಷರ
ಮಡಿಕೇರಿ: ಈಚೆಗೆ ಕೊಡಗಿನಲ್ಲಿ ಕಾಡಾನೆ ದಾಳಿ ಹೆಚ್ಚುತ್ತಿರುವ ಬೆನ್ನಲ್ಲೇ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪ ಹೈಸ್ಕೂಲ್ ಪೈಸಾರಿಯಲ್ಲಿ ಕಾಫಿ ತೋಟಕ್ಕೆ ತೆರಳಿದ್ದ ಕಾಫಿ ಬೆಳೆಗಾರನ ಮೇಲೆ ಆನೆ ದಾಳಿ ನಡೆದಿದೆ.ಆನೆ ದಾಳಿಗೆ ರೈತ ಗಣಪತಿ(49) ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಡಹಗಲೇ ಕಾಫಿ ತೋಟದಲ್ಲಿ ಕಾಡಾನೆ ಕಾಣಿಸಿಕೊಂಡ ಪರಿಣಾಮ ಸ್ಥಳಕ್ಕೆ ಪೊಲೀಸರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಹಸಿದವರಿಗೆ ಅತಿ ಕಡಿಮೆ ಬೆಲೆಯಲ್ಲಿ ಊಟ ಹಾಗೂ ತಿಂಡಿ ಒದಗಿಸುತ್ತಿದ್ದ ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಅನ್ನು ಇದೀಗ ಬಂದ್ ಮಾಡಲಾಗಿದೆ. ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆ ಇದೀಗ ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ಹೇಳಲಾಗಿದೆ. ಈ ಸಂಬಂಧ ಜೆಡಿಎಸ್ ವಿಧಾನ ಪರಿಷತ್ ಸದಸ್ಯರಾದ ಟಿಎ ಶರವಣ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ
ನವದೆಹಲಿ: ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ನಡುವೆಯೂ ಭಾರತದ ತೈಲ ಟ್ಯಾಂಕರ್ ಮುಂಬೈಗೆ ಬಂದಿದೆ. ಇದು ವಿಶ್ವಮಟ್ಟದಲ್ಲಿ ದೊರೆದ ದೊಡ್ಡ ರಾಜತಾಂತ್ರಿಕ ಗೆಲುವು ಎಂದು ಬಣ್ಣಿಸಲಾಗುತ್ತಿದೆ. ಕಂಟೈನರ್ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯ ಮೂಲಕ ಸಂಚರಿಸಲು ಇರಾನ್ ಅನುಮತಿ ನೀಡಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಾಗ್ಚಿ ನಡುವಿನ ದೂರವಾಣಿ ಮಾತುಕತೆಯ ನಂತರ ಅನುಮತಿ ಸಿಕ್ಕಿದೆ. ಇದಾದ ನಂತರ ಭಾರತೀಯ ಟ್ಯಾಂಕರ್ಗಳು ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತವಾಗಿ ಹಾದುಹೋಗುತ್ತಿವೆ ಎಂದು ವರದಿಯಾಗಿದೆ. ಈ ಮಧ್ಯೆ ಹಾರ್ಮುಜ್ ಜಲಸಂಧಿಯಿಂದ ಕಚ್ಚಾ ತೈಲ ಹೊತ್ತ ಹಡಗು ಭಾರತಕ್ಕೆ ಆಗಮಿಸಿದೆ. ಸೌದಿ ಅರೇಬಿಯಾದಿಂದ ಕಚ್ಚಾ ತೈಲವನ್ನು ಹೊತ್ತ ಲೈಬೀರಿಯನ್ ಧ್ವಜದ ಟ್ಯಾಂಕರ್ ಮುಂಬೈ ಬಂದರಿಗೆ ಬಂದಿದೆ.
ತನ್ನ ಪುಟಾಣಿ ಮಗುವನ್ನು ಸ್ಕೂಟಿ ಡಿಕ್ಕಿಯಲ್ಲಿಟ್ಟುಕೊಂಡು ಈ ಮಹಾತಾಯಿ ಸ್ಕೂಟಿ ಚಲಾಯಿಸಿದ್ದಾಳೆ. ಇಂತಹದ್ದೊಂದು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ತಾಯಿ ಬಗ್ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಕ್ಕಳನ್ನು ಸ್ಕೂಟಿಯಲ್ಲಿ ಏಕಾಂಗಿಯಾಗಿ ಕರೆದುಕೊಂಡು ಹೋಗುವುದು ಸುಲಭವಲ್ಲ. ಒಂದು ವೇಳೆ ಕರೆದುಕೊಂಡು ಹೋಗುವುದಿದ್ದರೂ ಮಕ್ಕಳ ಸುರಕ್ಷತೆ ಬಗ್ಗೆ ಹೆಚ್ಚು ಗಮನ ಕೊಡಬೇಕಾಗಿರುವುದು ಪೋಷಕರ ಕರ್ತವ್ಯ. ಆದರೆ ಈ ಹೆಣ್ಣುಮಗಳು ಅದನ್ನು ಮರೆತಿದ್ದಾಳೆ. ಓರ್ವ ಮಹಿಳೆ ತನ್ನ ಮಗುವನ್ನು ಎತ್ತಿಕೊಂಡು ಸ್ಕೂಟಿ ಚಲಾಯಿಸಲು ಬರುತ್ತಾಳೆ. ಆ ಮಗುವಿಗೆ ಇನ್ನೂ ಒಂದು ವರ್ಷವೂ ತುಂಬಿದಂತಿಲ್ಲ.
ನವದೆಹಲಿ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವನ್ನು ಬುಧವಾರ ಧ್ವನಿ ಮತದ ಮೂಲಕ ಸೋಲಿಸಲಾಯಿತು. ಇದರಿಂದ ಪ್ರತಿಪಕ್ಷಗಳಿಗೆ ತೀವ್ರ ಮುಖಭಂಗವಾಗಿದೆ.ಇದರಿಂದ ಆತ್ಮವಿಶ್ವಾಸ ವೃದ್ಧಿಸಿಕೊಂಡಿರುವ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ವಿಪಕ್ಷಗಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಯಾರು ಒಪ್ಪಿದರೂ, ಒಪ್ಪದೇ ಹೋದರೂ ನಿಯಮಗಳ ಪ್ರಕಾರವೇ ಲೋಕಸಭೆ ಕಾರ್ಯನಿರ್ವಹಿಸಲಿದೆ. ಭವಿಷ್ಯದಲ್ಲೂ ಹಾಗೆಯೇ ಮುಂದುವರೆಯುತ್ತದೆ ಎಂದುಹೇಳಿದ್ದಾರೆ.ಲೋಕಸಭೆಯ ಕಾರ್ಯವೈಖರಿ ನಿಯಮಾನುಸಾರ ನಡೆಯುತ್ತಿದೆ. ಮುಂದೆಯೂ ಇದೇ ರೀತಿಯಲ್ಲಿ ನಡೆಯಲಿದೆ. ನಾನು ನನ್ನ ಕರ್ತವ್ಯವನ್ನು ಪೂರ್ಣ ನಿಷ್ಠೆ, ನ್ಯಾಯಪೂರ್ಣತೆ ಮತ್ತು ಪಾರದರ್ಶಕತೆಯಿಂದ ನಿರ್ವಹಿಸುತ್ತೇನೆಂದು ತಿಳಿಸಿದರು.
ನವದೆಹಲಿ: ನ್ಯಾಷನಲ್ ಕಾನ್ಫರೆನ್ಸ್ನ ಮುಖಂಡ ಫಾರೂಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಕೊಲೆ ಯತ್ನ ನಡೆದಿದೆ. ಅದರ ಬೆನ್ನಲ್ಲೇ ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಗಿಬಿದ್ದಿದ್ಧರೆ. ಕಾಶ್ಮೀರದ ಜನರು ನಿಮ್ಮ ಆಡಳಿತದಲ್ಲಿ ಸುರಕ್ಷಿತವಾಗಿಲ್ಲ ಎಂದು ರಾಜ್ಯ ಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ರಾಜ್ಯಸಭೆಯಲ್ಲಿ ಗುರುವಾರ ಆರೋಪಿಸಿದ್ದಾರೆ. ಮದುವೆ ಸಮಾರಂಭಕ್ಕೆ ತೆರಳಿದ್ದ ವೇಳೆ ನ್ಯಾಷನಲ್ ಕಾನ್ಫರೆನ್ಸ್(ಎನ್ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹಾಗೂ ಜಮ್ಮು–ಕಾಶ್ಮೀರದ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರ ಮೇಲೆ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಲು ಯತ್ನಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.
ನವದೆಹಲಿ: ಸಂಸತ್ ಭವನದ ಮುಂಭಾಗ ವಿಪಕ್ಷ ಸದಸ್ಯರೊಂದಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಚಹಾ, ಬಿಸ್ಕತ್ ಸೇವಿಸುತ್ತಾ ದೇಶದಲ್ಲಿ ಎಲ್ ಪಿಜಿ ಸಿಲಿಂಡರ್ ಅಭಾವದ ವಿರುದ್ದ ಪ್ರತಿಭಟನೆ ನಡೆಸಿದರು. ಇಂದು ಸಂಸತ್ ಕಲಾಪಕ್ಕೆ ಮುನ್ನ ಎಲ್ ಪಿಜಿ ಅಭಾವ ಸೃಷ್ಟಿಯಾಗಿರುವುದರ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ರಾಹುಲ್ ಗಾಂಧಿ ಬಳಿಕ ಸಂಸತ್ ಭವನದ ಹೊರಗೆ ವಿಪಕ್ಷ ಸದಸ್ಯರೊಂದಿಗೆ ಧರಣಿ ಕೂತಿದ್ದಾರೆ. ಮುಂದೆ ಎಲ್ ಪಿಜಿ ಅಭಾವದಿಂದ ಮತ್ತಷ್ಟು ಸಮಸ್ಯೆಗಳು ಎದುರಾಗಲಿವೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.
ಮುಂಬೈ: ವಿಶ್ವ ಶ್ರೇಷ್ಠ ಬೌಲರ್ ಎನಿಸಿದ ಜಸ್ಪ್ರೀತ್ ಬೂಮ್ರಾ ಅವರು ತನ್ನ ವಿಭಿನ್ನ ಬೌಲಿಂಗ್ ಶೈಲಿಯಿಂದಲೇ ಎಲ್ಲರ ಗಮನ ಸೆಳೆದವರು. ಹಲವು ಟೂರ್ನಿಗಳಲ್ಲಿ ಮಿಂಚಿರುವ ಅವರು ಟಿ20 ವಿಶ್ವಕಪ್ನ ಫೈನಲ್ನಲ್ಲಿ ನಾಲ್ಕು ವಿಕೆಟ್ ಪಡೆದು ಮಿಂಚಿದ್ದರು.ತಾರಾ ಬೌಲರ್ ಬೂಮ್ರಾ ಅವರಿಗೆ ನಿಧಾನಗತಿಯ ಎಸೆತಗಳನ್ನು ಬೌಲಿಂಗ್ ಮಾಡಲು ಹೇಳಿಕೊಟ್ಟಿರುವುದು ನಾನೇ ಎಂದು ಪಾಕಿಸ್ತಾನ ಮೂಲದ ಯುಎಇ ಬೌಲರ್ ಜಹೂರ್ ಖಾನ್ ಶಾಕಿಂಗ್ ಮಾಹಿತಿ ಹೊರಹಾಕಿದ್ದಾರೆ. ಈ ಕುರಿತ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ಬೆಂಗಳೂರು: ಮಾನ್ಯ ಮುಖ್ಯಮಂತ್ರಿಗಳು ಮಂಡಿಸಿದ 2026-27ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.ವಿಧಾನಸಭೆಯಲ್ಲಿ ಇಂದು ಸಂಬಂಧ ಮಾತನಾಡಿದ ಅವರು, ಈ ಬಜೆಟ್ ಗಮನಿಸಿದರೆ ಈ ಸರಕಾರದ ಆರ್ಥಿಕ- ಬೌದ್ಧಿಕ ದಿವಾಳಿತನವು ಕೂಡ ಪ್ರದರ್ಶನಗೊಂಡಿದೆ. ಹಣಕಾಸಿನ ಸಚಿವರಾದ ಮುಖ್ಯಮಂತ್ರಿಗಳು ತನ್ನ ರಾಜಕೀಯ ಸಂಧ್ಯಾಕಾಲದಲ್ಲಿರುವ ಈ ಸಂದರ್ಭದಲ್ಲಿ 17ನೇ ಬಜೆಟ್ ಮಂಡಿಸಿದ್ದಾರೆ. ಅವರಿಗೆ ಒಂದು ಸುವರ್ಣಾವಕಾಶ ಇತ್ತು. ತಮ್ಮ ರಾಜಕೀಯ ಜೀವನದ ಸುದೀರ್ಘ ಅನುಭವದ ಆಧಾರದ ಮೇಲೆ ರಾಜ್ಯದ ಸಂಕಷ್ಟಗಳಿಗೆ ನಾಡಿನ ಜನರ ಅಪೇಕ್ಷೆಗೆ ತಕ್ಕಂತೆ ಉತ್ತರ ಕಂಡುಕೊಳ್ಳುವ ಅವಕಾಶ ಇತ್ತು.
ನವದೆಹಲಿ: ದೇಶದ ಜನರಿಗೆ ಎಲ್ ಪಿಜಿ ಅಭಾವದ ಬಗ್ಗೆ ಭಯ ಬೇಡ ಎಂದು ಹೇಳುತ್ತಾರೆ, ಆದರೆ ತಾವೇ ಬೇರೊಂದು ಕಾರಣಕ್ಕೆ ಹೆದರಿದ್ದಾರೆ ಎಂದು ಪ್ರಧಾನಿ ಮೋದಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಟಾಂಗ್ ಕೊಟ್ಟಿದ್ದಾರೆ. ಲೋಕಸಭೆ ಕಲಾಪಕ್ಕೆ ಮುನ್ನ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೋದಿಗೆ ಎಪ್ ಸ್ಟೀನ್, ಅದಾನಿ ಮೇಲಿರುವ ಕೇಸ್ ನ ಭಯ ಎಂದು ವ್ಯಂಗ್ಯ ಮಾಡಿದ್ದಾರೆ. ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ಸನ್ನಿವೇಶದಿಂದ ದೇಶದಾದ್ಯಂತ ಎಲ್ ಪಿಜಿ ಸಿಲಿಂಡರ್ ಅಭಾವ ಎದುರಾಗಿದೆ.
ಸ್ಕೂಟಿಗೆ ಡಿಕ್ಕಿ ಹೊಡೆದು ಚೈನು ಕದ್ದು ಕಳ್ಳನೊಬ್ಬ ಓಡಲೆತ್ನಸಿದಾಗ ಆತನನ್ನು ಬೆನ್ನಟ್ಟಿ ನೆರೆಮನೆಯ ಯುವಕ ಮಾಡಿದ ಕೆಲಸಕ್ಕೆ ನೀವು ಶಹಬ್ಬಾಶ್ ಹೇಳಲೇಬೇಕು. ಇಲ್ಲಿದೆ ಆ ವೈರಲ್ ವಿಡಿಯೋ.ಸಾಮಾನ್ಯವಾಗಿ ಬೈಕ್ ನಲ್ಲಿ ಬರುವ ಕಳ್ಳರು ರಸ್ತೆ ಪಕ್ಕದಲ್ಲಿ ಓಡಾಡುವ ಮಹಿಳೆಯರ ಸರಗಳ್ಳತನ ಮಾಡುವ ಸಾಕಷ್ಟು ಘಟನೆಗಳನ್ನು ನೋಡಿದ್ದೇವೆ. ಆದರೆ ಈ ಕಳ್ಳ ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯನ್ನೇ ಅಡ್ಡಗಟ್ಟಿ ಕಳ್ಳತನ ಮಾಡಿದ್ದಾನೆ. ಮಹಿಳೆಯೊಬ್ಬರು ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬೈಕ್ ನಲ್ಲಿ ಬರುವ ಕಳ್ಳ ಢಿಕ್ಕಿ ಹೊಡೆದು ಬೀಳಿಸುತ್ತಾನೆ.
ಬೆಂಗಳೂರು: ಪೊಲೀಸರಾಗಿ ಇಂಥಾ ಕೆಲಸ ಮಾಡಲು ನಾಚಿಕೆಯಾಗಲ್ವಾ ಎಂದು ಜನರೇ ಪ್ರಶ್ನೆ ಮಾಡುವಂತಹ ಕೆಲಸ ಮಾಡಿದ್ದಾರೆ ಉತ್ತರ ಪ್ರದೇಶದ ಈ ಪೊಲೀಸರು. ಇದು ನಡೆದಿರುವುದು ಉತ್ತರ ಪ್ರದೇಶದ ಅಮ್ರೋಹದಲ್ಲಿ. ನಮ್ಮಲ್ಲಿಯೂ ಬೀದಿ ವ್ಯಾಪಾರಿಗಳಿಂದ ಪೊಲೀಸರು ಸುಲಿಗೆ ಮಾಡುವ ಅನೇಕ ಘಟನೆಗಳನ್ನು ನೋಡಿದ್ದೇವೆ. ಕೆಲವು ಬಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಹಾಕಿಕೊಂಡು ಸಸ್ಪೆಂಡ್ ಆದ ಅಧಿಕಾರಿಗಳೂ ಇದ್ದಾರೆ. ಆದರೆ ಎಲ್ಲಾ ಪೊಲೀಸರೂ ಹೀಗೇ ಅಂತಲ್ಲ. ಆದರೆ ಕೆಲವರು ಪೊಲೀಸ್ ಪದವಿಗೇ ನಾಚಿಕೆಯಾಗುವಂತೆ ನಡೆದುಕೊಳ್ಳುತ್ತಾರೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ಈ ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ಭಾರೀ ಏರಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ನಿನ್ನೆ 1,66,165.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,66,060.00 ರೂ.ಗಳಷ್ಟಿದೆ.
ಟೆಹ್ರಾನ್: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧಕ್ಕೆ ಮಹತ್ವದ ಟ್ವಿಸ್ಟ್ ಸಿಕ್ಕಿದೆ. ನಾವು ಯುದ್ಧ ಕೊನೆಗೊಳಿಸಲು ರೆಡಿ ಎಂದು ಇರಾನ್ ಹೇಳಿದೆ. ಆದರೆ ಇದಕ್ಕೆ ಷರತ್ತೂ ವಿಧಿಸಿದೆ. ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕಾ ಜಂಟಿಯಾಗಿ ನಡೆಸುತ್ತಿರುವ ದಾಳಿಯಿಂದ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಯುದ್ಧದ ಪರಿಣಾಮ ಭಾರತ ಸೇರಿದಂತೆ ಜಗತ್ತಿನ ಬಹುತೇಕ ರಾಷ್ಟ್ರಗಳಿಗೆ ತಟ್ಟಿದೆ. ಈ ನಡುವೆ ಮೊನ್ನೆ ಡೊನಾಲ್ಡ್ ಟ್ರಂಪ್ ಯುದ್ಧ ಸದ್ಯದಲ್ಲೇ ಕೊನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಇದೀಗ ಇರಾನ್ ಇದಕ್ಕೆ ಪ್ರತ್ಯುತ್ತರ ನೀಡಿದ್ದು ಯುದ್ಧ ಕೊನೆಗೊಳಿಸಲು ನಾವು ರೆಡಿ, ಆದರೆ ಮೂರು ಷರತ್ತುಗಳನ್ನು ಒಪ್ಪಿಬೇಕು ಎಂದು ಬೇಡಿಕೆ ಮುಂದಿಟ್ಟಿದೆ.
ಬೆಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ಸನ್ನಿವೇಶದಿಂದಾಗಿ ಭಾರತದಲ್ಲಿ ಅಡುಗೆ ಅನಿಲ ಕೊರತೆ ಉಂಟಾಗಿದೆ. ಇದೀಗ ಇದೇ ವಿಚಾರವಾಗಿ ಬೆಂಗಳೂರಿನ ಹೋಟೆಲ್ ಒಂದು ವಿಶಿಷ್ಟವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಈಗ ಕಮರ್ಷಿಯಲ್ ಮತ್ತು ಗೃಹಬಳಕೆ ಸಿಲಿಂಡರ್ ಕೊರತೆ ಎದುರಾಗಿದೆ. ಸೂಕ್ತ ಪ್ರಮಾಣದಲ್ಲಿ ಎಲ್ ಪಿಜಿ ಪೂರೈಕೆಯಾಗದೇ ಬಹುತೇಕ ಹೋಟೆಲ್ ಗಳು ಎಂದಿನಂತೆ ಗ್ರಾಹಕರಿಗೆ ಆಹಾರ ತಯಾರಿಸಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣಕ್ಕೆ ಬೆಂಗಳೂರಿನ ಹೋಟೆಲ್ ಮಾಲಿಕರು ಸಂಕಷ್ಟಕ್ಕೀಡಾಗಿದ್ದಾರೆ. ಈ ನಿಟ್ಟಿನಲ್ಲಿ ಹೋಟೆಲ್ ಒಂದರಲ್ಲಿ ಮುಂಭಾಗದಲ್ಲಿಯೇ ಖಾಲಿ ಸಿಲಿಂಡರ್ ಗಳನ್ನು ಇಡಲಾಗಿದ್ದು ಇದರ ಮೇಲೆ ಎಲ್ ಪಿಜಿ ಇಲ್ಲ..
ಈ ಪೆಟ್ರೋಲ್ ಬಂಕ್ ಸಿಬ್ಬಂದಿಯದ್ದು ಎಂಥಾ ಧೈರ್ಯ ನೋಡಿ. ದೊಡ್ಡ ಅನಾಹುತವಾಗುತ್ತಿದ್ದ ವೇಳೆ ಕೂಲ್ ಆಗಿ ಪರಿಸ್ಥಿತಿ ನಿಭಾಯಿಸಿದ ವೈರಲ್ ವಿಡಿಯೋ ಇಲ್ಲಿದೆ ನೋಡಿ. ಕೆಲವೊಮ್ಮೆ ನಾವು ಅವಘಡಗಳಾದಾಗ ಆತಂಕ ಪಡುವುದರಿಂದಲೇ ಅನಾಹುತಗಳಾಗುತ್ತವೆ. ಆದರೆ ಆ ಸಮಯದಲ್ಲಿ ನಮ್ಮ ಸಮಯ ಪ್ರಜ್ಞೆ, ಧೈರ್ಯವೇ ನಮ್ಮನ್ನು ಉಳಿಸುತ್ತದೆ. ಅಂತಹದ್ದೇ ಒಂದು ಘಟನೆಯ ವಿಡಿಯೋವೊಂದು ಇಲ್ಲಿದೆ ನೋಡಿ. ಪೆಟ್ರೋಲ್ ಬಂಕ್ ಒಂದರಲ್ಲಿ ಓರ್ವ ಬೈಕ್ ಸವಾರ ಪೆಟ್ರೋಲ್ ತುಂಬಿಸಲು ಬರುತ್ತಾನೆ. ಪೆಟ್ರೋಲ್ ತುಂಬುತ್ತಿರುವಾಗಲೇ ಇದ್ದಕ್ಕಿದ್ದಂತೆ ಬೈಕ್ ನ ಟ್ಯಾಂಕ್ ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತದೆ.