Shorts

ವಾಷಿಂಗ್ಟನ್: ಇರಾನ್‌ ಮತ್ತು ಅಮೆರಿಕ ನಡುವಿನ ಯುದ್ಧ ವಿರಾಮದ ಸಾಧ್ಯತೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಳ್ಳಿಹಾಕಿದ್ದಾರೆ. ಮಾತ್ರವಲ್ಲ, ಇರಾನ್‌ಗೆ ಹೊಸ ಎಚ್ಚರಿಕೆ ಸಂದೇಶವನ್ನು ಟ್ರಂಪ್‌ ರವಾನಿಸಿದ್ದಾರೆ. ಕದನ ವಿರಾಮ ಒಪ್ಪಂದವನ್ನು ಮಾಡಿಕೊಳ್ಳಲು ಇರಾನ್ಬಯಸುತ್ತಿದೆ. ನಿಯಮಗಳು ಇನ್ನೂ ಸಾಕಷ್ಟು ಉತ್ತಮವಾಗಿಲ್ಲದ ಕಾರಣ ನಾನು ಅದನ್ನು ಮಾಡಲು ಬಯಸುವುದಿಲ್ಲ. ಯಾವುದೇ ಭವಿಷ್ಯದ ಒಪ್ಪಂದ ಉತ್ತಮವಾಗಿರಬೇಕು ಎಂದು ಟ್ರಂಪ್‌ ಅವರು ಹೇಳಿದರು.ಇರಾನ್ ನ ಹೊಸ ಸರ್ವೋಚ್ಚ ನಾಯಕ ಜೀವಂತವಾಗಿಲ್ಲ ಎಂದು ಕೇಳಿದ್ದೇನೆ ಎಂದು ಹೇಳುವ ಮೂಲಕ ಇರಾನ್ ಶರಣಾಗತಿಗೆ ಒತ್ತಾಯಿಸಿದ್ದಾರೆ. ಎನ್‌ಬಿಸಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಇರಾನ್ ವಿರುದ್ಧದ ಯುದ್ಧ ಕೊನೆಗೊಳಿಸುವ ಸ್ಪಷ್ಟ ಆಸಕ್ತಿಯ ಹೊರತಾಗಿಯೂ ಸದ್ಯ ನಡೆಯುತ್ತಿರುವ ಪರಿಸ್ಥಿತಿಗಳಿಂದ ಅತೃಪ್ತರಾಗಿರುವುದಾಗಿ ತಿಳಿಸಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮೀಸಲು ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಮೂವರು ಮೀಸಲು ಸಬ್‌ ಇನ್ಸ್‌ಪೆಕ್ಟರ್‌ಗಳಾದ ಮಂಜುನಾಥ್, ಅಂಬರೀಷ್ ಮತ್ತು ಸಚಿನ್ ಎಂದು ಗುರುತಿಸಲಾಗಿದೆ. ಇದೇ ವೇಳೆ ಕಾರಿನಲ್ಲಿ ಇದ್ದ ಪಿಎಸ್‌ಐ ಈಶ್ವರ್ ಹಾಗೂ ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್ ಮಹಾಂತೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ತಿರುವನಂತಪುರಂ: ಕೇರಳ ವಿಧಾನಸಭೆ ಚುನಾವಣೆಗೆ ಕೇವಲೇ ತಿಂಗಳು ಬಾಕಿ ಇದೆ. ಈ ಮಧ್ಯೆ ಎಲ್ಲ ಪಕ್ಷಗಳಿಂದ ಚುನಾವಣೆಗೆ ಬಿರುಸಿನ ಸಿದ್ಧತೆ ನಡೆಯುತ್ತಿದೆ. ಈ ಮಧ್ಯೆ ಪಿಣರಾಯಿ ವಿಜಯನ್‌ ಸರ್ಕಾರ ಅಧಿಕಾರ ಉಳಿಸಿಕೊಳ್ಳಲು ಟೊಂಕಕಟ್ಟಿದೆ.ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಕೇರಳದಲ್ಲಿ ಸರ್ಕಾರದ ತನ್ನ ನಿಲುವುಗಳಲ್ಲಿ ಯೂಟರ್ನ್ ಹೊಡೆದಿದೆ. ಮಹಿಳೆಯರು ಶಬರಿಮಲೆ ದೇವಾಲಯ ಪ್ರವೇಶ ವಿಷಯದಲ್ಲಿ ತನ್ನ ಹಿಂದಿನ ನಿಲುವನ್ನು ಸರ್ಕಾರ ಬದಲಾಯಿಸಿಕೊಂಡಿದೆ.ಮಹತ್ವದ ಬೆಳವಣಿಗೆಯಲ್ಲಿ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರು ಅಯ್ಯಪ್ಪ ದೇವಾಲಯಕ್ಕೆ ಪ್ರವೇಶಕ್ಕೆ ಸಂಬಂಧಿಸಿದಂತೆ ಸಾಂಪ್ರದಾಯಿಕ ನಿರ್ಬಂಧ ಮುಂದುವರಿಸುವಿಕೆಗೆ ಬೆಂಬಲಿಸುವುದಾಗಿ ಘೋಷಿಸಿದೆ. ಈ ಮೂಲಕ ತನ್ನ ಹಿಂದಿನ ನಿಲುವಿನಿಂದ ಸರ್ಕಾರ ಹಿಂದೆ ಸರಿದಿದೆ.

ಮುಂಬೈ: ಭಾರತದಲ್ಲಿ ಎಲ್‌ಪಿಸಿ ಕೊರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬೆಳವಣಿಗೆ ನಡೆದಿದೆ. ಯುದ್ಧಪೀಡಿತ ಪ್ರದೇಶದ ಈ ಜಲಸಂಧಿಯಲ್ಲಿ ಭಾರತದ ಎರಡು ಹಡಗುಗಳಿಗೆ ಗ್ರೀನ್‌ ಸಿಗ್ನಲ್‌ ದೊರಕಿದೆ. ಈ ಮೊದಲು ಒಂದು ಹಡಗಿಗೆ ಹೊರ್ಮುಜ್‌ ಜಲಸಂಧಿಯಲ್ಲಿ ಹಸಿರು ನಿಶಾನೆ ತೋರಲಾಗಿದೆ. ಇದೀಗ ಮತ್ತೆರಡು ಹಡಗುಗಳು ಈ ಜಲಸಂಧಿಯನ್ನು ದಾಟಿ ಬಂದಿವೆ. ಜಲಸಂಧಿ ದಾಟಿರುವ ಭಾರತದ ಹಡಗುಗಳ ಒಟ್ಟು ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.ಜಲಸಂಧಿಯ ಪಶ್ಚಿಮ ಭಾಗದಲ್ಲಿ ಇನ್ನೂ ಭಾರತದ 22 ಹಡಗುಗಳು ತಮ್ಮ ಅವಕಾಶಕ್ಕಾಗಿ ಕಾಯುತ್ತ ನಿಂತಿವೆ. ಅವುಗಳಿಗೆ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಲು ನೆರವು ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಆ ಪ್ರದೇಶದ ವಿವಿಧ ದೇಶಗಳ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸುತ್ತಿದೆ.