ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಹಾಕಿದ್ದ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಪ್ರಕರಣ ಸಂಬಂಧ ಬೆಂಗಳೂರಿನ ಸಿಸಿಬಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆ ಮೂಲಕ ಪ್ರಕರಣದಲ್ಲಿ ಈವರೆಗೆ ಬಂಧಿತರ ಸಂಖ್ಯೆ 4ಕ್ಕೆ ಏರಿಕೆ ಆಗಿದೆ.ನಾಗರಾಜ್ ತಳವಾರ ಮತ್ತು ಪ್ರಶಾಂತ್ ತಳವಾರ ಎಂಬುದವರು ಬಂಧಿತರು. ಹುಬ್ಬಳ್ಳಿಯಲ್ಲಿ ಪೆಟ್ರೋಲ್ ಬಂಕ್ ಮ್ಯಾನೇಜರ್ ಆಗಿರುವ ನಾಗರಾಜ್ ಹಾಗೂ ಧಾರವಾಡದಲ್ಲಿ ಆಡಿಟರ್ ಆಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ತಳವಾರ ಅವರನ್ನು ಬಂಧಿಸಲಾಗಿದೆ.
ಕೆಲವೊಮ್ಮೆ ಪ್ರಾಣಿಗಳು ಮನುಷ್ಯರಿಗಿಂತಲೂ ಹೆಚ್ಚು ಸಂವೇದನೆ ಹೊಂದಿರುತ್ತಾರೆ ಎಂಬುದಕ್ಕೆ ಈ ವಿಡಿಯೋವೇ ಸಾಕ್ಷಿ. ಗಾಯವಾಗಿದೆ ಟ್ರೀಟ್ಮೆಂಟ್ ಕೊಡಿ ಎಂದು ನಾಯಿಯೊಂದು ಪಶುವೈದ್ಯರ ಆಸ್ಪತ್ರೆಗೇ ಬಂದ ವಿಡಿಯೋವೊಂದು ವೈರಲ್ ಆಗಿದೆ. ಇದು ಈಶಾನ್ಯ ಬ್ರೆಜಿಲ್ ನಲ್ಲಿರವ ಜುವಾಝೈರೊ ಡೊ ನಾರ್ಟಿ ನಗರದಲ್ಲಿ ಈ ಘಟನೆ ನಡೆದಿದೆ. ಕ್ಲಿನಿಕ್ ನ ಸಿಸಿಟಿವಿ ದೃಶ್ಯಾವಳಿ ಈಗ ವೈರಲ್ ಆಗಿದೆ. ನಾಯಿಯೊಂದು ಕುಂಟುತ್ತಾ ಕ್ಲಿನಿಕ್ ಒಳಗೇ ಬಂದು ಕುಸಿದು ಕುಳಿತುಕೊಳ್ಳುತ್ತದೆ. ಅಲ್ಲಿದ್ದ ಸಿಬ್ಬಂದಿ ಅಚ್ಚರಿಗೊಂಡರೂ ತಕ್ಷಣವೇ ನಾಯಿ ಬಳಿ ಹೋಗಿ ಪರೀಕ್ಷಿಸುತ್ತಾರೆ.
ಬಳ್ಳಾರಿ: ಬಳ್ಳಾರಿ ಫೈರಿಂಗ್ ಪ್ರಕರಣ ಮಹತ್ವದ ತಿರುವು ಪಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸತೀಶ್ ರೆಡ್ಡಿಯ ಮೂವರು ಗನ್ಮ್ಯಾನ್ಗಳನ್ನು ಪೊಲೀಸರು ವಶಕ್ಕೆ ಪಡೆದು ಡ್ರಿಲ್ ನಡೆಸುತ್ತಿದ್ದಾರೆ. ಬ್ಯಾನರ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಫೈರಿಂಗ್ನಿಂದ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವೀಡಿಯೋ ಆಧರಿಸಿ ಹಲವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಬೆನ್ನಲ್ಲೇ ಸತೀಶ್ ರೆಡ್ಡಿ ಗನ್ಮ್ಯಾನ್ಗಳು ನಾಪತ್ತೆಯಾಗಿದ್ದರು. ಈಗ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವದೆಹಲಿ: ಬಾಂಗ್ಲಾದೇಶ ಹಿಂದೂಗಳ ಪರಿಸ್ಥಿತಿ ಬಗ್ಗೆ ಕೇಳಿದಾಗ ಕಾಂಗ್ರೆಸ್ ನಾಯಕರಾದ ಜೈರಾಂ ರಮೇಶ್ ಮತ್ತು ಕೆಸಿ ವೇಣುಗೋಪಾಲ್ ಪತ್ರಿಕಾಗೋಷ್ಠಿಯಲ್ಲಿ ಉತ್ತರಿಸದೇ ಎದ್ದು ಹೋದ ವಿಡಿಯೋ ಈಗ ವೈರಲ್ ಆಗಿದೆ. ಈ ವಿಡಿಯೋಗಳನ್ನು ಬಿಜೆಪಿ ನಾಯಕರು ಹಂಚಿಕೊಂಡಿದ್ದು ಇದು ಹಿಂದೂಗಳ ಬಗ್ಗೆ ಕಾಂಗ್ರೆಸ್ ಧೋರಣೆಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ. ಜೈರಾಂ ರಮೇಶ್ ಮತ್ತು ಕೆಸಿ ವೇಣುಗೋಪಾಲ್ ಪತ್ರಿಕಾಗೋಷ್ಠಿ ನಡೆಸುತ್ತಿದ್ದರು. ಕೊನೆಯಲ್ಲಿ ಪತ್ರಕರ್ತರೊಬ್ಬರು ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯವಾಗುತ್ತಿದೆ. ಇದರ ಬಗ್ಗೆ ನಿಲುವು ಹೇಳಿ ಎಂದು ಪ್ರಶ್ನಿಸಿದ್ದಾರೆ. ಆಗ ಉತ್ತರಿಸದೇ ಜೈರಾಂ ರಮೇಶ್ ಮತ್ತು ಕೆಸಿ ವೇಣುಗೋಪಾಲ್ ಎದ್ದು ಹೋಗಿದ್ದಾರೆ.
ಹಾಸನ: ತಮ್ಮ ಮನೆಯ ಪಕ್ಕದಲ್ಲಿ ಹಾಕಲಾಗಿದ್ದ ಕಾಂಪೌಂಡ್ ಧ್ವಂಸಗೊಳಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ಯಶ್ ತಾಯಿ ಪುಷ್ಪಾ ಅರುಣ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.ಹಾಸನದ ವಿದ್ಯಾನಗರದಲ್ಲಿರುವ ನಿವೇಶನದಲ್ಲಿ ಅಕ್ರಮವಾಗಿ ಕಾಂಪೌಂಡ್ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ ಇಂದು ಬೆಳ್ಳಂಬೆಳಿಗ್ಗೆ ಜೆಸಿಬಿ ಮೂಲಕ ತೆರವು ಮಾಡಲಾಗಿದೆ. ಇದೀಗ ಕಾಂಪೌಂಡ್ ತೆರವುಗೊಳಿಸಿದವರ ವಿರುದ್ಧ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ಕೆಂಡಕಾರಿದ್ದಾರೆ. ಪಿಡಿಒ ನಟರಾಜ್ ಅಂತಾ ಇದ್ದಾರೆ. ಇದೆಲ್ಲ ಅವರ ಕುಮ್ಮಕ್ಕಿನಿಂದ ನಡೀತಿದೆ. ನಾವು ಜಾಗಕ್ಕೆ ಟ್ಯಾಕ್ಸ್ ಕಟ್ಟಿದ್ದೀವಿ. ಎಲ್ಲ ದಾಖಲೆ ನನ್ ಕಡೆ ಇದೆ. ಕಾನೂನು ಮುಖಾಂತರ ಎಲ್ಲದಕ್ಕೂ ಉತ್ತರ ಕೊಡುತ್ತೇನೆ. ಜೊತೆಗೆ ಅವರ ಮೇಲೆ ಮಾನಹಾನಿ ಮೊಕದ್ದಮೆ ಹಾಕುತ್ತೇನೆ ಎಂದು ಪುಷ್ಪಾ ಎಚ್ಚರಿಸಿದ್ದಾರೆ.
ಢಾಕಾ: ಬಾಂಗ್ಲಾದೇಶದ ಎಡಗೈ ವೇಗಿ ಮುಸ್ತಾಫಿಜುರ್ ರಹಮಾನ್ ಅವರನ್ನು ಪಿಪಿಎಲ್ನಿಂದ ಹೊರಹಾಕಿದ ಬೆನ್ನಲ್ಲೇ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಹೊಸ ವರಸೆ ತೆಗೆದಿದೆ.ಬಾಂಗ್ಲಾದೇಶ ವಿರುದ್ಧ ದ್ವಿಪಕ್ಷೀಯ ಸರಣಿ ಆಡದಿರಲು ಬಿಸಿಸಿಐ ಚಿಂತನೆ ನಡೆಸುತ್ತಿದೆ ಎನ್ನುವ ಸುದ್ದಿ ಹೊರಬೀಳುತ್ತಿದ್ದಂತೆ ವಿಚಲಿತಗೊಂಡಿರುವ ಬಾಂಗ್ಲಾ ಕ್ರಿಕೆಟ್ ಮಂಡಳಿ ಫೆ.7ರಿಂದ ಆರಂಭಗೊಳ್ಳಲಿರುವ ಟಿ20 ವಿಶ್ವಕಪ್ನಲ್ಲಿ ತನ್ನ ಪಂದ್ಯಗಳನ್ನು ಭಾರತದಿಂದ ಸ್ಥಳಾಂತರಿಸುವಂತೆ ಐಸಿಸಿಗೆ ಒತ್ತಾಯಿಸಿದೆ. ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಔಪಚಾರಿಕವಾಗಿ ತಿಳಿಸಲು ಮತ್ತು ಟೂರ್ನಮೆಂಟ್ನಲ್ಲಿ ಬಾಂಗ್ಲಾದೇಶದ ಪಂದ್ಯಗಳಿಗೆ ಪರ್ಯಾಯ ಸ್ಥಳವಾಗಿ ಶ್ರೀಲಂಕಾವನ್ನು ಪ್ರಸ್ತಾಪಿಸಲು ಮಧ್ಯಂತರ ಸರ್ಕಾರವು ಬಿಸಿಬಿಗೆ ನಿರ್ದೇಶನ ನೀಡಿದೆ.
ಹಾಸನ: ನಟ ಯಶ್ ತಾಯಿ ಪುಷ್ಪಾ ಮನೆ ಮುಂದೆ ಬೆಳ್ಳಂಬೆಳಿಗ್ಗೆ ಜೆಸಿಬಿ ಗರ್ಜಿಸಿದೆ. ಅಕ್ರಮ ಕಾಂಪೌಂಡ್ ನಿರ್ಮಾಣ ಆರೋಪ ಪ್ರಕರಣದಲ್ಲಿ ಪುಷ್ಪಾ ಅವರಿಗೆ ಶಾಕ್ ಎದುರಾಗಿದೆ.ಬೇರೆಯವರ ಜಾಗದಲ್ಲಿ ನಿರ್ಮಿಸಿದ್ದಾರೆ ಎನ್ನಲಾದ ಕಾಂಪೌಂಡ್ ಅನ್ನು ಕೆಡವಿ ಹಾಕಲಾಗಿದೆ. ಹಾಸನ ನಗರದ ವಿದ್ಯಾನಗರದಲ್ಲಿ ಪುಷ್ಪಾ ಅವರ ಮನೆ ಇದೆ. ಇವರು ನಿರ್ಮಿಸಿದ್ದ ಕಾಂಪೌಂಡ್ ಅನ್ನು ಮೂಲ ಮಾಲೀಕ ಧ್ವಂಸಗೊಳಿಸಿದ್ದಾರೆ. 1,500 ಅಡಿ ಜಾಗವನ್ನು ಒತ್ತುವರಿ ಮಾಡಿದ ಆರೋಪ ಪುಷ್ಪಾ ಅವರ ಮೇಲಿದೆ. ಕೋರ್ಟ್ ಅನುಮತಿಯ ಮೇರೆಗೆ ಕಾಂಪೌಂಡ್ ತೆರವುಗೊಳಿಸಲಾಗಿದೆ. ಲಕ್ಷ್ಮಮ್ಮ ಎಂಬವರ ಜಾಗದಲ್ಲಿ ಅಕ್ರಮ ಕಾಂಪೌಂಡ್ ನಿರ್ಮಿಸಿದ್ದಾರೆಂದು ಆರೋಪಿಸಲಾಗಿತ್ತು. ಸುಮಾರು 1,500 ಅಡಿ ಜಾಗವನ್ನು ಒತ್ತುವರಿ ಮಾಡಲಾಗಿದೆ ಎಂದು ಮಾಲೀಕ ದೇವರಾಜು ಕಿಡಿಕಾರಿದ್ದಾರೆ.
ಬಳ್ಳಾರಿ: ಎರಡು ದಿನಗಳ ಹಿಂದೆ ಬಳ್ಳಾರಿಯಲ್ಲಿ ನಡೆದ ಗುಂಡಿನ ಘರ್ಷಣೆಯ ಬೆನ್ನಲ್ಲೇ ಗಂಗಾವತಿ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಸರ್ಕಾರಕ್ಕೆ ಹೊಸ ಬೇಡಿಕೆ ಮುಂದಿಟ್ಟಿದ್ದಾರೆ.ತನ್ನ ಜೀವಕ್ಕೆ ಅಪಾಯವಿದ್ದು, ತುರ್ತಾಗಿ ಝಡ್ ಶ್ರೇಣಿಯ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ಜನಾರ್ದನ ರೆಡ್ಡಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಜಿ.ಪರಮೇಶ್ವರ್ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.ತುರ್ತಾಗಿ ನನಗೆ ಹಾಗೂ ನನ್ನ ಕುಟುಂಬಕ್ಕೆ ಝಡ್ ಶ್ರೇಣಿ ಅಥವಾ ಅದಕ್ಕೆ ಸಮಾನವಾದ ಉನ್ನತ ಪೊಲೀಸ್ ಭದ್ರತೆ ಒದಗಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ಮಾಡಿ ಒಂದು ವೇಳೆ ಮತ್ತೆ ದಾಳಿ ನಡೆದರೆ ಅದಕ್ಕೆ ಸರ್ಕಾರವೇ ಹೊಣೆ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು: ಕಳೆದ ವಾರ ಮಂಗಳೂರು ಕಂಬಳದಲ್ಲಿ ಹಿರಿಯ ತೀರ್ಪುಗಾರ ಗುಣಪಾಲ ಕಡಂಬರಿಗೆ ಅವಮಾನ ಮಾಡಿದ ಸಂಬಂಧ ಇದೀಗ ಸುಖಾಂತ್ಯವಾಗಿದೆ. ಮಂಗಳೂರು ಕಂಬಳದಲ್ಲಿ ಗುಣಪಾಲ ಕಡಂಬರಿಗೆ ಅವಮಾನಿಸಿದ ವಿಚಾರಕ್ಕೆ ಸಂಬಂಧಿಸಿ ಜಾಲತಾಣದಲ್ಲಿ ಭಾರೀ ವಿರೋಧ ಕೇಳಿಬಂದಿತ್ತು. ಗುಣಪಾಲ ಕಡಂಬರ ಅಭಿಮಾನಿಗಳು ಎಂಬ ಹೆಸರಲ್ಲಿ ಪ್ರತ್ಯೇಕ ಗ್ರೂಪ್ ರಚಿಸಿಕೊಂಡು ಅವಮಾನಿಸಿದ ಮುಚ್ಚೂರು ಲೋಕೇಶ್ ಶೆಟ್ಟಿ ಮತ್ತು ಅರುಣ್ ಶೆಟ್ಟಿ ಬಹಿರಂಗ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಗುಣಪಾಲರು ಕಮೆಂಟರಿ ಮಾಡುವಾಗ ಅರುಣ್ ಶೆಟ್ಟಿ ಮಧ್ಯಪ್ರವೇಶಿಸಿ, ಅವರಿಗೆ ಅವಮಾನ ಮಾಡಿದ್ದರು. ಈ ವಿಚಾರ ಬಂಟ- ಜೈನರ ತಿಕ್ಕಾಟ ಎಂಬಷ್ಟರ ಮಟ್ಟಿಗೆ ಭಾರೀ ಸುದ್ದಿಯೂ ಆಗಿತ್ತು.
ನಾವು ಸರಿಯಾದ ಆಹಾರ ಕ್ರಮವನ್ನು ದಿನನಿತ್ಯದಲ್ಲಿ ಅನುಸರಿಸಿದರೆ ನಮ್ಮ ಆರೋಗ್ಯವೂ ಉತ್ತಮವಾಗಿರುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸರಿಯಾದ ಆಹಾರ ಪದ್ಧತಿ ಬಹಳ ಮುಖ್ಯ. ಇನ್ನೂ ಹೃದಯ ಕಾಳಜಿ ಹಿನ್ನೆಲೆ, ಉತ್ತಮವಾದ ಪ್ರಮುಖ ಹಣ್ಣುಗಳ ಮಾಹಿತಿ ಇಲ್ಲಿದೆ.*ಸೇಬು: ಪೆಕ್ಟಿನ್ ಎಂಬ ಕರಗುವ ನಾರಿನಂಶವಿರುವುದರಿಂದ ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ದಿನಕ್ಕೊಂದು ಸೇಬು ತಿಂದರೆ ಹೃದಯದ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ.*ಬೆರ್ರಿ ಹಣ್ಣುಗಳು : ಸ್ಟ್ರಾಬೆರಿ, ಬ್ಲೂಬೆರಿ ಮತ್ತು ರಾಸ್ಬೆರಿಗಳಲ್ಲಿ ಆಂಥೋಸಯಾನಿನ್ಗಳಂತಹ ಆಂಟಿ-ಆಕ್ಸಿಡೆಂಟ್ಗಳು ಸಮೃದ್ಧವಾಗಿವೆ. ಇವು ರಕ್ತನಾಳಗಳ ಉರಿಯೂತವನ್ನು ಮಾಡುವುದರಿಂದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ.
ಬೆಂಗಳೂರು: ಈ ವಾರ ಕರಾವಳಿ ಮತ್ತು ಮಲೆನಾಡು ಭಾಗದಲ್ಲೂ ಮಳೆಯಾಗುವ ಸಾಧ್ಯತೆ ತೀರಾ ಕಡಿಮೆಯಾಗಿದೆ. ರಾಜ್ಯದ ಸಿಲಿಕಾನ್ ಸಿಟಿ ಮಂದಿ ತಮ್ಮ ಆರೋಗ್ಯದ ಬಗ್ಗೆ ಎಚ್ಚರ ವಹಿಸುವುದು ಅಗತ್ಯವಿದೆ. ಮುಂಜಾನೆ ದಟ್ಟ ಆವರಿಸಿದ ಮಂಜಿನಿಂದ ವಾತಾವರಣ ಕೂಡಿದ್ದು, ಮಧ್ಯಾಹ್ನ ಭಾಗಶಃ ಮೋಡ ಕವಿದ ವಾತಾವರಣ ಇರುತ್ತದೆ. ಇದರಿಂದ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಯಿದೆ. ಆದ್ದರಿಂದ ಆರೋಗ್ಯದಲ್ಲಿ ಹುಷಾರಾಗಿರುಬೇಕು.ಕಳೆದೊಂದು ವಾರದಿಂದ ತೀವ್ರಮಟ್ಟಕ್ಕೆ ಏರಿದ್ದ ಚಳಿಯ ತೀವ್ರತೆ ಇದೀಗ ಕೊಂಚ ಇಳಿಕೆಯಾಗಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ರಾಜ್ಯದಲ್ಲಿ ಕನಿಷ್ಠ ತಾಪಮಾನ ಏರಿಕೆಯಾಗುತ್ತಿದ್ದು, ಜನ ನಿಟ್ಟುಸಿರು ಬಿಡುವಂತಾಗಿದೆ.ಜಿಲ್ಲೆಯಲ್ಲಿ ಎಲ್ಲೆಲ್ಲಿ ಚಳಿ ಹೇಗಿದೆ. ಬೆಳಗ್ಗಿನ ಜಾವ ಮನೆಯಿಂದ ಹೊರಬರಲಾರದಷ್ಟು ಬೀದರ್ ಮತ್ತು ವಿಜಯಪುರದಲ್ಲಿ ಚಳಿ ಇತ್ತು. ಆದರೆ ಇದೀಗ ಅಲ್ಲಿಯೂ ತಾಪಮಾನ ಸಾಮಾನ್ಯಕ್ಕಿಂತ 1 ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಿದೆ.ಕನಿಷ್ಠ ತಾಪಮಾನ (11°C – 16°C): ಧಾರವಾಡ, ಬೆಳಗಾವಿ, ವಿಜಯಪುರ, ಬೀದರ್, ಹಾಸನ, ದಾವಣಗೆರೆ, ಚಿಂತಾಮಣಿ ಮತ್ತು ಮೈಸೂರು. ಇಲ್ಲಿ ಚಳಿ ಸಾಧಾರಣ ಸ್ಥಿತಿಗೆ ಬಂದಿದೆ.
ತಮಿಳುನಾಡು: ಟಿಕೆಟ್ ಟು ಫಿನಾಲೆ ಟಾಸ್ಕ್ನಲ್ಲಿ ಸ್ಪರ್ಧಿ ಸಾಂಡ್ರಾ ಜತೆಗೆ ಸ್ಪರ್ಧಿಗಳಾದ ಕಮ್ರುದಿನ್ ಮತ್ತು ಪಾರ್ವತಿ ಅವರ ಕ್ರೂರನೀಯ ವರ್ತನೆ ಸಂಬಂಧ ಇದೀಗ ಅವರನ್ನು ರೆಡ್ ಕಾರ್ಡ್ ನೀಡಿ ವಿಜಯ್ ಸೇತುಪತಿ ಮನೆಗೆ ಕಳುಹಿಸಿದ್ದಾರೆ. ಈ ಘಟನೆ ಇದೀಗ ಬಿಗ್ಬಾಸ್ ಇತಿಹಾಸದಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದೆ. ವಿಜಯ್ ನಡುವಳಿಕೆ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.ಬಿಗ್ ಬಾಸ್ ತಮಿಳು ರಿಯಾಲಿಟಿ ಶೋ ಆಗಿದ್ದು ಅದು ಯಾವಾಗಲೂ ತಂತ್ರಗಾರಿಕೆ, ಭಾವನೆಗಳು, ಸ್ನೇಹ ಮತ್ತು ಸಂಘರ್ಷಗಳ ನಡುವಿನ ಸಂಘರ್ಷದ ಸಂಬಂಧವನ್ನು ಎತ್ತಿ ತೋರಿಸುತ್ತದೆ.
ಬೆಂಗಳೂರು: ಗರೋಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರದ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ಕೋಳಿ ಅಂಕ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೂ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನನ್ನ ಹೆಸರಿನ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ತಿನ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.ಶನಿವಾರ ಈ ಕುರಿತು ತಮ್ಮ ಎಕ್ಸ್ ಖಾತೆಯಿಂದ ಪ್ರತಿಕ್ರಿಯಿಸಿರುವ ಅವರು, ಗರೋಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರದ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ಕೋಳಿ ಅಂಕವನ್ನು ಪೊಲೀಸ್ ಬಲದ ಬಿ ಕೆ ಹರಿಪ್ರಸಾದ್ ತಡೆಯಲು ಹೊರಟಿದ್ದಾರೆ ಎಂದು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ, ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ.ಗರೋಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರದ ಜಾತ್ರಾ ಮಹೋತ್ಸವದಲ್ಲಿ ಕೋಳಿ ಅಂಕ ನಡೆಯುತ್ತಿದೆಯೋ ಇಲ್ಲವೋ ಎಂಬ ವಿಚಾರವೇ
ಮಹಾರಾಷ್ಟ್ರ: ಗಡ್ಚಿರೋಲಿಯಲ್ಲಿರುವ ತನ್ನ ಗ್ರಾಮವು ಮುಖ್ಯ ರಸ್ತೆಯಿಂದ ಸಂಪರ್ಕ ಕಡಿತಗೊಂಡಿದ್ದರಿಂದ ಗರ್ಭಿಣಿ ಮಹಿಳೆ 6 ಕಿಲೋಮೀಟರ್ ನಡೆದುಕೊಂಡು ಹೋದ ಗರ್ಭಿಣಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಶುಕ್ರವಾರ ವರದಿಯಾಗಿದೆ. ಗಡ್ಚಿರೋಲಿ ಜಿಲ್ಲೆಯ ಎಟಪಲ್ಲಿ ತಾಲೂಕಿನ ಆಲದಂಡಿ ತೋಲಾ ನಿವಾಸಿ ಆಶಾ ಸಂತೋಷ್ ಕಿರಂಗ (24) ಒಂಬತ್ತು ತಿಂಗಳ ಗರ್ಭಿಣಿ ಮೃತ ಮಹಿಳೆ."ಆಕೆಯ ಸ್ಥಳೀಯ ಆಲದಂಡಿ ಟೋಲಾ ಗ್ರಾಮವು ಮುಖ್ಯ ರಸ್ತೆಯಿಂದ ಸಂಪರ್ಕ ಕಡಿತಗೊಂಡಿದೆ, ಅಲ್ಲಿ ಯಾವುದೇ ವಿತರಣಾ
ರಾಯಚೂರು: ಸಿಎಂ ಸಿದ್ದರಾಮಯ್ಯ ಅವರು ಜಿಲ್ಲೆಯ ಸಿಂಧನೂರಿನ ಐತಿಹಾಸಿಕ ಅಂಬಾದೇವಿ ಜಾತ್ರೆಯ ಮಹಾರಥೋತ್ಸವ ಹಾಗೂ ಅಂಬಾ ಮಾತೆಯ ಜಂಬೂ ಸವಾರಿಗೆ ಚಾಲನೆ ನೀಡಿದರು. ಇನ್ನೂ ಈ ಮಹಾ ರಥೋತ್ಸವದಲ್ಲಿ ರಾಜ್ಯ ಮಾತ್ರವಲ್ಲದೇ ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಿಂದಲೂ ಲಕ್ಷಾಂತರ ಭಕ್ತಾಧಿಗಳು ಪಾಲ್ಗೊಂಡಿದ್ದರು. ಜನವರಿ 2 ರಿಂದ ಜನವರಿ 6ರ ವರೆಗೆ ನಡೆಯಲಿರುವ ಅಂಬಾದೇವಿ ಜಾತ್ರೆಯಲ್ಲಿ ನಿತ್ಯ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿವಿಧೆಡೆಯಿಂದ ಆಗಮಿಸುವ ಭಕ್ತರು ಭಾಗವಹಿಸಿ ಅಂಬಾದೇವಿ ಅನುಗ್ರಹ ಪಡೆಯುತ್ತಿದ್ದಾರೆ.
ಬೆಂಗಳೂರು: ಬಳ್ಳಾರಿಯ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ಮನೆ ಮುಂದೆ ಕಾಂಗ್ರೆಸ್ಸಿನವರೇ ಗಲಾಟೆ ಮಾಡಿದ್ದಾರೆ. ಕಾಂಗ್ರೆಸ್ಸಿನವರ ಬಂದೂಕಿನಿಂದ ಒಬ್ಬರ ಹತ್ಯೆ ಆಗಿದೆ. ಆದರೆ, ಜನಾರ್ಧನ ರೆಡ್ಡಿ ಮೇಲೆ ಕೇಸ್. ಇದ್ಯಾವ ಪ್ರಜಾಪ್ರಭುತ್ವ? ಇದ್ಯಾವ ವ್ಯವಸ್ಥೆ ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಪ್ರಶ್ನಿಸಿದ್ದಾರೆ.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಿದ್ದರಾಮಯ್ಯನವರು ಪ್ರಜಾಪ್ರಭುತ್ವದ ಆಡಳಿತ ನಡೆಸುತ್ತಿದ್ದಾರಾ? ಸರ್ವಾಧಿಕಾರದ ಆಡಳಿತ ನಡೆಸುತ್ತಿದ್ದಾರಾ ಎಂದು ಕೇಳಿದರು.
ಉದಯಪುರ: ದೇಶದಲ್ಲಿ ವೈಟ್ ಕಾಲರ್ ಭಯೋತ್ಪಾದನೆಯ ಆತಂಕಕಾರಿ ಪ್ರವೃತ್ತಿ ಕಾಣಿಸಿಕೊಂಡಿದ್ದು, ಉನ್ನತ ಶಿಕ್ಷಣ ಪಡೆದ ವ್ಯಕ್ತಿಗಳು ಸಮಾಜ ವಿರೋಧಿ ಮತ್ತು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಸಿದ್ದಾರೆ. ಶುಕ್ರವಾರ ಭೂಪಾಲ್ ನೋಬಲ್ಸ್ ವಿಶ್ವವಿದ್ಯಾನಿಲಯದ 104 ನೇ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಂಗ್, ನವೆಂಬರ್ 10 ರಂದು ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರ್ ಬಾಂಬ್ ಸ್ಫೋಟವನ್ನು ಉಲ್ಲೇಖಿಸಿ, ಆರೋಪಿಗಳು ವೈದ್ಯರೆಂದು ಕಂಡುಬಂದಿದೆ."ಇಂದು, ದೇಶದಲ್ಲಿ ವೈಟ್ ಕಾಲರ್ ಭಯೋತ್ಪಾದನೆಯ ಆತಂಕಕಾರಿ ಪ್ರವೃತ್ತಿ ಹೊರಹೊಮ್ಮುತ್ತಿದೆ. ಉನ್ನತ ಶಿಕ್ಷಣ ಪಡೆದ
ಬೆಂಗಳೂರು: ಕೋಗಿಲು ಬಡಾವಣೆ ಕುರಿತ ವರದಿಯನ್ನು ಇನ್ನೆರಡು ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ನೀಡುವುದಾಗಿ ಶಾಸಕ ಎಸ್ಆರ್ ವಿಶ್ವನಾಥ್ ಅವರು ತಿಳಿಸಿದ್ದಾರೆ. ಈ ಜಾಗ ಬಿಬಿಎಂಪಿಗೆ ಹಸ್ತಾಂತರ ಆದ ವಿವರ, ಸರ್ವೇ ನಂಬರ್, ಗೂಗಲ್ ಮ್ಯಾಪ್, ಎಲ್ಲ ಕಾನೂನು ಮತ್ತಿತರ ವಿವರವನ್ನು ಅದು ಒಳಗೊಂಡಿರುತ್ತದೆ ಎಂದು ವಿವರಿಸಿದರು.ಯಲಹಂಕದ ಕೋಗಿಲು ಲೇಔಟ್ ಬಳಿಯಿರುವ ಫಕೀರ್ ಕಾಲೋನಿ ಮತ್ತು ವಾಸೀಮ್ ಬಡಾವಣೆಯಲ್ಲಿ ಮನೆ- ಗುಡಿಸಲುಗಳ
ಕೊಪ್ಪಳ: ಬ್ಯಾನರ್ ವಿಚಾರವಾಗಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ನಡುವಿನ ಗಲಾಟೆ ಬೆನ್ನಲ್ಲೇ ಜನಾರ್ದನ ರೆಡ್ಡಿ ಪತ್ನಿ ದೇವರ ಮೊರೆ ಹೋಗಿದ್ದಾರೆ. ತಮ್ಮ ನಿವಾಸದ ಎದುರು ನಡೆದ ಗಲಭೆಯಲ್ಲಿ ಕೈ ಕಾರ್ಯಕರ್ತ ಸಾವನ್ನಪ್ಪಿ, ಘಟನೆ ಇದೀಗ ಭಾರೀ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಪತಿ ಜನಾರ್ದನ ರೆಡ್ಡಿ ಸುರಕ್ಷತೆ ದೃಷ್ಟಿಯಿಂದ ಪತ್ನಿ ದೇವರ ಮೊರೆ ಹೋಗಿದ್ದಾರೆ. ಪತ್ನಿ ಅರುಣಾ ಲಕ್ಷ್ಮಿ ಅವರು ಕೊಪ್ಪಳದ ಆನೆಗೊಂದಿಯ ಅಂಜನಾದ್ರಿ ಹನುಮನ ದೇಗುಲಕ್ಕೆ ಭೇಟಿ ನೀಡಿದ ವಿಶೇಷವಾಗಿ ಪೂಜೆ
ಲಕ್ನೋ: ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯ ಸಿಕಂದರಾಬಾದ್ ಪ್ರದೇಶದಲ್ಲಿ 6 ವರ್ಷದ ಬಾಲಕಿಯನ್ನು ಗ್ಯಾಂಗ್ ರೇಪ್ ಮಾಡಿ, ಬಳಿಕ ಹತ್ಯೆ ಮಾಡಿ, ಆಕೆಯ ಮೃತದೇಹವನ್ನು ಮನೆಯ ಛಾವಣಿಯಿಂದ ಎಸೆದಿದ್ದಾರೆ. ಘಟನೆಗೆ ಸಂಬಂಧಿಸಿದ ಆರೋಪಿಗಳನ್ನ ಪೊಲೀಸರು ಎನ್ಕೌಂಟರ್ ಬಳಿಕ ಅರೆಸ್ಟ್ ಮಾಡಿದ್ದಾರೆ. ಘಟನೆಯು ಶುಕ್ರವಾರ ಸಂಜೆ ನಡೆದಿದೆ. ಫಿರೋಜಾಬಾದ್ ಜಿಲ್ಲೆಯ ಕಾರ್ಮಿಕನ ಮಗಳಾದ ಈ ಬಾಲಕಿ ಮನೆಯ ಮೇಲ್ಛಾವಣಿಯಲ್ಲಿ ಆಟವಾಡುತ್ತಿದ್ದಳು. ಅಲ್ಲೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಾಜೂ ಮತ್ತು ವೀರು ಕಶ್ಯಪ್ ಎಂಬ ವ್ಯಕ್ತಿಗಳು ಮದ್ಯದ ಅಮಲಿನಲ್ಲಿ ಬಾಲಕಿಯನ್ನು ರೇಪ್ ಮಾಡಿದ್ದಾರೆ.
ಕಲಬುರಗಿ: ನಗರದ ಹೊರ ವಲಯದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಅಕ್ರಮ ಚಟುವಟಿಕೆಯಲ್ಲಿ ತೊಡಗಿರುವ ವಿಡಿಯೋ ವೈರಲ್ ಬೆನ್ನಲ್ಲೇ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಅವರು ಭೇಟಿ, ನೀಡಿ ಪರಿಶೀಲನೆ ನಡೆಸಿದರು. ವೈರಲ್ ವಿಡಿಯೋ ಪ್ರಕರಣದ ಬಳಿಕ ಅಲೋಕ್ ಕುಮಾರ್ ಅವರ ಭೇಟಿ ಭಾರೀ ಮಹತ್ವವನ್ನು ಪಡೆದುಕೊಂಡಿದೆ. ಇನ್ನೂ ಅಧಿಕಾರಿಗಳೊಂದಿಗೆ ಜೈಲಿನ ಪ್ರತಿಯೊಂದು ಬ್ಯಾರಕ್ಗಳನ್ನು ಕೂಲಂಕಷವಾಗಿ ತಪಾಸಣೆ ನಡೆಸಿ, ಜೈಲಿನೊಳಗೆ ಅಕ್ರಮ ವಸ್ತುಗಳ ಸರಬರಾಜು ಹೇಗೆ ನಡೆಯುತ್ತಿದೆ, ಭದ್ರತಾ ಲೋಪಕ್ಕೆ ಕಾರಣರಾದವರು ಯಾರು ಹಾಗೂ ಕೈದಿಗಳು ಐಷಾರಾಮಿ
ಹಾವೇರಿ: ಇನ್ನೇನು ಸಚಿವ ಸತೀಶ್ ಜಾರಕಿಹೊಳಿ ಕಾರ್ಯಕ್ರಮ ಮುಗಿಸಿ ತೆರಳುಬೇಕೆನ್ನುಷ್ಟರಲ್ಲಿ ಪೆಂಡಲ್ ಕುಸಿದು ಬಿದ್ದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರಿನಲ್ಲಿ ನಡೆದಿದೆ.ಅಂಬೇಡ್ಕರ್ ಪ್ರತಿಮೆ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿ ಶಂಕುಸ್ಥಾಪನೆಯ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ತೆರಳುವ ಮೊದಲು ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಿದ್ದರು. ಈ ವೇಳೆ ಹಾಕಿದ್ದ ಪೆಂಡಾಲ್ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ತೊಂದರೆಗಳು ಆಗಿಲ್ಲ. ಕಾರ್ಯಕ್ರಮ ನಡೆಯುವಾಗಲೇ ಕುಸಿದಿದ್ದರೆ ಹಲವು ಮಂದಿಗೆ ಗಾಯವಾಗುವ ಸಾಧ್ಯತೆ ಇತ್ತು.
ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು ಮತ್ತೊಮ್ಮೆ ಹಿರಿಯ ವೇಗಿ ಮೊಹಮ್ಮದ್ ಶಮಿಯನ್ನು ಕಡೆಗಣಿಸಲಾಗಿದೆ. ಶುಭಮನ್ ಗಿಲ್ ನಾಯಕತ್ವದ 15 ಸದಸ್ಯರ ತಂಡವನ್ನು ಬಿಸಿಸಿಐ ಇಂದು ಪ್ರಕಟಿಸಿದೆ. ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. ಕೆಎಲ್ ರಾಹುಲ್ ಮತ್ತು ರಿಷಭ್ ಪಂತ್ ವಿಕೆಟ್ ಕೀಪರ್ ಗಳಾಗಿದ್ದಾರೆ. ಇಶಾನ್ ಕಿಶನ್ ಗೆ ಸ್ಥಾನ ಸಿಕ್ಕಿಲ್ಲ. ವಿಶೇಷವೆಂದರೆ ವಿಜಯ್ ಹಜಾರೆ ಟ್ರೋಫಿಯಲ್ಲೂ ಉತ್ತಮ ಪ್ರದರ್ಶನ ನೀಡಿಯೂ ಮೊಹಮ್ಮದ್ ಶಮಿಯನ್ನು ಮತ್ತೆ ಅವಗಣಿಸಲಾಗಿದೆ.
ಬೆಂಗಳೂರು: ವದಂತಿಗೆ ಕಾರಣವಾಗಿದ್ದ ಬಳ್ಳಾರಿ ಎಸ್ಪಿ ಪವನ್ ನಿಜ್ಜೂರ್ ಆತ್ಮಹತ್ಯೆ ಸಂಬಂಧ ಸ್ನೇಹಿತ, ಬೆಂಗಳೂರು ಸಿಸಿಬಿ ಡಿಸಿಪಿ ಶ್ರೀಹರಿಬಾಬು ಅವರು ಪ್ರತಿಕ್ರಿಯಿಸಿ ಅವರು ವಿಶ್ರಾಂತಿಯಲ್ಲಿದ್ದಾರೆಂದರು. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈಗ ಶಿರಾ ಬಳಿಯ ಫಾರ್ಮ್ಹೌಸ್ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬುದು ಸುಳ್ಳು ಎಂದು ಹೇಳಿದರು. ಸರ್ಕಾರ ಅಮಾನುತು ಆದೇಶ ಪ್ರಕಟಿಸಿದ ಬಳಿಕ ಬಳ್ಳಾರಿ ಎಸ್ಪಿ ಪವನ್ ನಿಜ್ಜೂರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಹರಡಿತ್ತು. ಜ.1 ರಂದು ಅಧಿಕಾರ ಸ್ವೀಕರಿಸಿದ್ದ ಪವನ್ ನಿಜ್ಜೂರ್ ಅವರನ್ನು ಕರ್ತವ್ಯ ಲೋಪದ ಆರೋಪದ ಅಡಿ ಸರ್ಕಾರ ನಿನ್ನೆ
ಬೆಂಗಳೂರು: ಬಿಜೆಪಿಯವರು ನಮಗೆ ಪಾಠ ಹೇಳಿಕೊಡುವುದು ಬೇಡ, ಅವರೇ ಬಳ್ಳಾರಿಯನ್ನ ʻರಿಪಬ್ಲಿಕ್ ಆಫ್ ಬಳ್ಳಾರಿʼ ಮಾಡಿದ್ದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ವಾಗ್ದಾಳಿ ನಡೆಸಿದರು. ಬಳ್ಳಾರಿ ಗಲಾಟೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ವೈಯಕ್ತಿಕ ಯಾವುದು ಇಲ್ಲ. ಅಲ್ಲಿ ಗಲಾಟೆ ಆಗಿದ್ದು ನಿಜ, ಬಳ್ಳಾರಿ ಎಸ್ಪಿ ಕರ್ತವ್ಯ ಲೋಪ ಮಾಡಿದ್ದಕ್ಕೆ ಅಮಾನತು ಮಾಡಲಾಗಿದೆ. ಈಗಾಗಲೇ ಸಿಎಂ, ಡಿಸಿಎಂ, ಗೃಹ ಸಚಿವರು ಕಾನೂನು ಪ್ರಕಾರ ಕ್ರಮ ಆಗುತ್ತದೆ ಎಂದ ಹೇಳಿದರು.ನಮಗೆ ಕಾನೂನು ಪಾಠ ಹೇಳ್ತಾರಾ. ಆ ಭಾಗ ಹಾಳು ಮಾಡಿದವರು ನಮಗೆ ಕಾನೂನು ಸಂವಿಧಾನ ಹೇಳಿ ಕೊಡ್ತಾರಾ.
ಬೆಂಗಳೂರು: ದರ್ಶನ್ ಜೈಲಿಗೆ ಹೋದ್ಮೇಲೆ ಕಿಚ್ಚ ಸುದೀಪ್ ಜಾಸ್ತಿ ನಿಗರಾಡ್ತಾವ್ರೇ ಎಂದು ನಾಲಿಗೆ ಹರಿಬಿಟ್ಟಿದ್ದ ಆರ್ಯವರ್ಧನ್ ಗುರೂಜಿ ಈಗ ಕಿಚ್ಚನ ಫ್ಯಾನ್ಸ್ ಎಚ್ಚರಿಕೆ ಬೆನ್ನಲ್ಲೇ ತಪ್ಪಾಯ್ತು ಎಂದು ಕೈ ಮುಗಿದು ಕ್ಷಮೆ ಯಾಚಿಸಿದ್ದಾರೆ. ಸಂಖ್ಯಾ ಶಾಸ್ತ್ರದ ಮೂಲಕವೇ ಜನಪ್ರಿಯವಾಗಿರುವ ಆರ್ಯವರ್ಧನ್ ಗುರೂಜಿ ಈ ಹಿಂದೆ ಬಿಗ್ ಬಾಸ್ ಗೂ ಹೋಗಿ ಬಂದಿದ್ದವರು. ವಾಹಿನಿಯೊಂದರ ಭವಿಷ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆರ್ಯವರ್ಧನ್ ಗುರೂಜಿ ಸುದೀಪ್ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿದ್ದರು. ದರ್ಶನ್ ಜೈಲಿಗೆ ಹೋದ ಮೇಲೆ ಸುದೀಪ್ ಜಾಸ್ತಿ ನಿಗರಾಡ್ತಾವ್ರೇ. ಮಾಧ್ಯಮಗಳ ಮುಂದೆ ಜಾಸ್ತಿ ಮಾತಾಡ್ತಾವ್ರೇ. ಮೊನ್ನೆ ಅದ್ಯಾರೋ ಮುಂದೆ ಪ್ಯಾಂಟ್ ಬಿಚ್ಚಿ ತೋರಿಸ್ಲಾ ಎಂದಿದ್ದರು’ ಎಂದೆಲ್ಲಾ ಹೇಳಿದ್ದರು.
ನವದೆಹಲಿ: ಕೇಂದ್ರವು ಹೊಸದಾಗಿ ಜಾರಿಗೆ ತಂದಿರುವ ವಿಕ್ಷಿತ್ ಭಾರತ್ -- ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮಿನ್) (ವಿಬಿ-ಜಿ ರಾಮ್ ಜಿ) ಕಾಯ್ದೆಯ ನಂತರ (ವಿಬಿ-ಜಿ ರಾಮ್ ಜಿ) ಕಾಯ್ದೆಯ ನಂತರ ಕಾಂಗ್ರೆಸ್ ಶನಿವಾರ ರಾಷ್ಟ್ರವ್ಯಾಪಿ "ಎಂಜಿಎನ್ಆರ್ಇಜಿಎ ಬಚಾವೋ" ಎಂಬ ಮೂರು ಹಂತದ ಆಂದೋಲನವನ್ನು ಘೋಷಿಸಿತು. ವೇಣುಗೋಪಾಲ್ ಮತ್ತು ಜೈರಾಮ್ ರಮೇಶ್ ಅವರು ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರೀಕರಣಗೊಳಿಸಲು ಪ್ರಯತ್ನಿಸುತ್ತಿದೆ ಮತ್ತು ನಿರಂಕುಶವಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು. "ಹಂತ 1 ಜನವರಿ 8 ರಂದು ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಕಚೇರಿಯಲ್ಲಿ ಪ್ರಧಾನ ಕಾರ್ಯದರ್ಶಿಗಳು ಮತ್ತು
ಬಳ್ಳಾರಿ: ಇಲ್ಲಿ ನಡೆದ ಗಲಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದು, ಇದೀಗ ಈ ಕೊಲೆಗೆ ಬಿಜೆಪಿಯೇ ಕಾರಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೇರ ಆರೋಪ ಮಾಡಿದರು. ಅಲ್ಲದೇ ನಮ್ಮ ಪಕ್ಷ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಪರ ನಿಲ್ಲಲಿದೆ ಎಂದು ಹೇಳಿದರು.ಈ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಯಾರದ್ದೋ ಮನೆ ಮುಂದೆ ಬ್ಯಾನರ್ ಅನ್ನು ಕಟ್ಟಿದ್ರೆ ಇವರಿಗೇನೂ ಸಮಸ್ಯೆ. ನಮ್ಮ ಮನೆ ಮುಂದೆ, ಸಿಎಂ ಮನೆ ಮುಂದೆ ಬಿಜೆಪಿಯವರು ಬ್ಯಾನರ್ ಹಾಕ್ತಾರೆ. ಅದು ಸಾರ್ವಜನಿಕ ರಸ್ತೆ. ಸಂಭ್ರಮದಿಂದ ಕಾರ್ಯಕ್ರಮ ಮಾಡಲು ನಾವು ಬ್ಯಾನರ್ ಹಾಕಿದ್ದು ಅಷ್ಟೇ. ಈ ಘಟನೆಯಿಂದ ನಮ್ಮ ಕಾರ್ಯಕರ್ತರನ್ನು ಕಳೆದುಕೊಂಡಿದ್ದೇವೆ ಇದಕ್ಕೆ ಬಿಜೆಪಿ ಕಾರಣ ಎಂದು ಆರೋಪ ಮಾಡಿದರು.
ಮಧ್ಯಾಹ್ನದ ವೇಳೆ ಮಾಡುವ ನಿದ್ದೆಯಿಂದ ಆರೋಗ್ಯದ ಮೇಲೆ ಧನಾತ್ಮಕ ಹಾಗೂ ಋಣಾತ್ಮಕ ಎರಡೂ ರೀತಿಯ ಪರಿಣಾಮವನ್ನು ಬೀರುವ ಸಾಧ್ಯತೆಯಿದೆ. ಈ ಲೇಖನದಲ್ಲಿ ಆ ಎರಡೂ ರೀತಿಯ ಪರಿಣಾಮಗಳನ್ನು ತಿಳಿಸಲಾಗಿದೆ. ಧನಾತ್ಮಕ ಪರಿಣಾಮ: ತಕ್ಷಣದ ಚೈತನ್ಯ: ಬೆಳಗ್ಗಿನ ಕೆಲಸದ ನಂತರ ಸುಸ್ತಾಗಿದ್ದರೆ, ಒಂದು ಚಿಕ್ಕ ನಿದ್ದೆ ಮೆದುಳಿಗೆ ಮತ್ತು ದೇಹಕ್ಕೆ ಹೊಸ ಚೈತನ್ಯ ನೀಡುತ್ತದೆ. ಏಕಾಗ್ರತೆ ಹೆಚ್ಚಳ: ಕೆಲಸದಲ್ಲಿ ಗಮನ ಕೇಂದ್ರೀಕರಿಸಲು ಮತ್ತು ನೆನಪಿನ ಶಕ್ತಿ ವೃದ್ಧಿಸಲು ಇದು ಸಹಕಾರಿ.
ಬೆಂಗಳೂರು: ಗೃಹಲಕ್ಷ್ಮಿ ಹಣದಲ್ಲಿ ಮಹಿಳೆಯೊಬ್ಬರು ಫ್ರಿಡ್ಜ್ ಖರೀದಿ ಮಾಡಿದ್ದನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖುಷಿಯಿಂದ ಫೋಟೋ ಹಂಚಿಕೊಂಡಿದ್ದರು. ಆದರೆ ಇದಕ್ಕೆ ಟಾಂಗ್ ಕೊಟ್ಟಿರುವ ನೆಟ್ಟಿಗರು ಬಾಕಿ ದುಡ್ಡೂ ಕೊಟ್ಟಿದ್ರೆ ಮಿಕ್ಸಿನೂ ತಗೋತಿದ್ರು ಎಂದಿದ್ದಾರೆ. ‘ಸಿಂಧನೂರು ತಾಲೂಕಿನ ಉಪ್ಪಲದೊಡ್ಡಿ ಗ್ರಾಮದ ನಿವಾಸಿ ಹನುಮಮ್ಮ ಅವರು ಪ್ರತಿ ತಿಂಗಳು ಬರುತ್ತಿದ್ದ 2,000 ರೂ. ಹಣವನ್ನು ಕೂಡಿಟ್ಟು, ಇಂದು ತಮ್ಮ ಮನೆಗೆ ಹೊಸ ಫ್ರಿಡ್ಜ್ ಖರೀದಿಸಿದ್ದಾರೆ. ಸಣ್ಣ ಉಳಿತಾಯದ ಮೂಲಕ ದೊಡ್ಡ ಬದಲಾವಣೆ ತಂದ ಹನುಮಮ್ಮನವರ ಈ ಸಾಧನೆ ಕೋಟ್ಯಂತರ ಮಹಿಳೆಯರಿಗೆ ಸ್ಫೂರ್ತಿ.
ರಾಯಪುರ: ಛತ್ತೀಸ್ಗಢದಲ್ಲಿ ಮತ್ತೆ ಗುಂಡಿನ ಮೊರೆತ ಮೊಗಳಿದೆ. ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಯ ಎನ್ಕೌಂಟರ್ಗೆ 14 ನಕ್ಸಲರು ಉಸಿರು ಚೆಲ್ಲಿದ್ದಾರೆ.ಮಾರ್ಚ್ 31 ರೊಳಗೆ ಭಾರತದಲ್ಲಿ ನಕ್ಸಲಿಸಂ ಅನ್ನು ಕೊನೆಗೊಳಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಡುವು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ, ಛತ್ತೀಸ್ಗಢದಲ್ಲಿ ಭದ್ರತಾ ಪಡೆಗಳು ನಕ್ಸಲ್ ವಿರೋಧಿ ಕಾರ್ಯಾಚರಣೆಗಳನ್ನು ತೀವ್ರಗೊಳಿಸಿವೆ. ಈ ವರ್ಷ ಛತ್ತೀಸ್ಗಢದಲ್ಲಿ ನಡೆದ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಒಟ್ಟು 285 ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದಂತಾಗಿದೆ.ರಾಜ್ಯದಲ್ಲಿ ಎರಡು ಪ್ರತ್ಯೇಕ ಕಡೆಗಳಲ್ಲಿ ಎನ್ಕೌಂಟರ್ ನಡೆಸಲಾಗಿದೆ. ಉಗ್ರರ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ನಂತರ ಜಿಲ್ಲಾ ಮೀಸಲು ಪಡೆ ಬಸ್ತಾರ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.
ಬೆಂಗಳೂರು: ನರೇಗಾ ಯೋಜನೆಯನ್ನು ಬದಲಾಯಿಸಿರುವ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ ಗಾಂಧೀಜಿಯನ್ನು ಎರಡನೇ ಬಾರಿ ಕೊಲ್ಲಲು ಹೊರಟಿದ್ದಾರೆ ಎಂದಿದ್ದಾರೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ರದ್ಧತಿ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಮನುಸ್ಮೃತಿಯಿಂದ ಪ್ರೇರಣೆ ಪಡೆದಿರುವ ಆರ್.ಎಸ್.ಎಸ್ ಬಿಜೆಪಿ ಸರ್ಕಾರಕ್ಕೆ ಮಾರ್ಗದರ್ಶಕವಾಗಿದೆ. ಮಹಾತ್ಮ ಗಾಂಧಿಯನ್ನು ಗೋಡ್ಸೆ ಮೊದಲ ಬಾರಿ ಕೊಂದು ಹಾಕಿದರೆ, ಇದೀಗ ನರೇಗಾ ಕಾಯ್ದೆಯಲ್ಲಿ ಇದ್ದ ಮಹಾತ್ಮ ಗಾಂಧಿ ಹೆಸರನ್ನು ತೆಗೆದು ಹಾಕುವ ಮೂಲಕ ಬಿಜೆಪಿ ಅವರನ್ನು ಮತ್ತೆ ಮತ್ತೆ ಕೊಲ್ಲುವ ಕೆಲಸ ಮಾಡುತ್ತಿದೆ.
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ವಿಚಾರ ಚರ್ಚೆಯಲ್ಲಿರುವಾಗಲೇ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಇಂದು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಭೇಟಿ ಮಾಡಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಭೇಟಿಯ ಉದ್ದೇಶವೇನೆಂದು ಬಹಿರಂಗಪಡಿಸಿದ್ದಾರೆ. ಇದು ರಾಜಕೀಯ ವಿಚಾರಕ್ಕೆ ಆದ ಭೇಟಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ‘ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದೇವೆ. ಭದ್ರಾ ಜಲಾಶಯ ಕರ್ನಾಟಕ ನೀರಾವರಿ ನಿಗಮದಲ್ಲಿದೆ. ಒಟ್ಟು 1 5 ಸಾವಿರ ಹೆಕ್ಟೇರ್ ಪ್ರದೇಶದಲ್ಲಿದೆ. ಅದನ್ನು ವಿಜೆನಲ್ಲಿ ವಿಶ್ವೇಶ್ವರಯ್ಯದ್ದಕ್ಕೆ ಸೇರಿಸಲು ಹೊರಟಿದ್ದಾರೆ.
ಬೆಂಗಳೂರು: ಇತ್ತೀಚೆಗೆ ಅಪಘಾತದಲ್ಲಿ ಸಾವನ್ನಪ್ಪಿದ್ದ ದಕ್ಷ ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಅವರ ಪುತ್ರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು ಇದಕ್ಕೆ ಜನರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.ನಾಡು ಕಂಡ ಶ್ರೇಷ್ಠ ಐಎಎಸ್ ಅಧಿಕಾರಿಗಳಲ್ಲಿ ಮಹಂತೇಶ ಬೀಳಗಿ ಕೂಡಾ ಒಬ್ಬರು. ಇತ್ತೀಚೆಗೆ ಅವರು ಸಂಬಂಧಿಕರ ಮದುವೆಗೆ ಹೋಗಿ ಬರುವಾಗ ಕಾರು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದರು. ಅವರ ಸಾವಿಗೆ ಜನ ಕಂಬನಿ ಮಿಡಿದಿದ್ದರು. ಮಹಂತೇಶ ಬೀಳಗಿ ಬಡತನದಿಂದ ಮೇಲೆ ಬಂದವರು. ಕಷ್ಟಪಟ್ಟು ಐಎಎಸ್ ಅಧಿಕಾರಿಯಾದವರು.
ಈಗೆಲ್ಲಾ ಮಾರುಕಟ್ಟೆಯಲ್ಲಿ ಸೀಬೆಕಾಯಿ ಸಾಕಷ್ಟು ಸಿಗುತ್ತದೆ. ಹೆಚ್ಚಿನವರಿಗೆ ಸೀಬೆಕಾಯಿ ಎಂದರೆ ಇಷ್ಟ. ಆದರೆ ಯಾವೆಲ್ಲಾ ಆರೋಗ್ಯ ಸಮಸ್ಯೆ ಇರುವವರು ಸೀಬೆಕಾಯಿ ಸೇವಿಸಬಾರದು ನೋಡಿ. ಸೀಬೆಕಾಯಿಯಲ್ಲಿ ವಿಟಮಿನ್ ಸಿ ಅಂಶ ಹೆಚ್ಚಿದ್ದು ರೋಗ ನಿರೋಧಕ ಶಕ್ತಿ ಹೊಂದಿದೆ. ಆದರೆ ಕೆಲವೊಂದು ರೋಗ ಇರುವವರಿಗೆ ಸೀಬೆಕಾಯಿ ತಿನ್ನುವುದು ಉತ್ತಮವಲ್ಲ. ಯಾವೆಲ್ಲಾ ರೋಗಿಗಳು ತಿನ್ನಬಾರದು ನೋಡಿ.-ಅಜೀರ್ಣ ಸಮಸ್ಯೆ ಇರುವವರು ವಿಶೇಷವಾಗಿ ಪೇರಳೆ ಹಣ್ಣು ತಿನ್ನಬಾರದು. ಅದರಲ್ಲೂ ವಿಶೇಷವಾಗಿ ಇದರ ಬೀಜಗಳು ಜೀರ್ಣವಾಗುವುದಿಲ್ಲ. ಅಸಿಡಿಟಿ, ಹೊಟ್ಟೆ ಕಿರಿ ಕಿರಿ, ಬೇಧಿಯಾಗುತ್ತಿದ್ದರೆ ಸೀಬೆಕಾಯಿ ತಿನ್ನಬೇಡಿ.
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಇರುವ ಗೊಂದಲಗಳಿಗೆ ತೆರೆ ಯಾವಾಗ ಎಂಬ ಕುತೂಹಲ ಜನರಲ್ಲಿದೆ. ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೋ, ಇಲ್ಲವೋ ಎಂಬ ಕುತೂಹಲಕ್ಕೆ ತೆರೆ ಎಳೆಯಬೇಕೆಂದರೆ ಈ ಒಬ್ಬರು ವಿದೇಶದಿಂದ ಬರಬೇಕು. ಹೊಸ ವರ್ಷದಲ್ಲಿ ಸಿಎಂ ಪಟ್ಟ ಸಿಗಬಹುದು ಎಂಬ ಭರವಸೆಯಲ್ಲಿ ಡಿಕೆ ಶಿವಕುಮಾರ್ ಇದ್ದಾರೆ. ಇತ್ತ ಸಿದ್ದರಾಮಯ್ಯ ಬಣ ಯಾವುದೇ ಕಾರಣಕ್ಕೂ ಸಿಎಂ ಸ್ಥಾನ ಕೈ ತಪ್ಪದಂತೆ ಪ್ಲ್ಯಾನ್ ಮಾಡುತ್ತಿದ್ದಾರೆ. ಈ ನಡುವೆ ಸಿದ್ದರಾಮಯ್ಯ ಮತ್ತೊಂದು ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿದ್ದಾರೆ. ಆದರೆ ಕರ್ನಾಟಕದ ಸಿಎಂ ಕುರ್ಚಿ ಕಿತ್ತಾಟಕ್ಕೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ.
ಬೆಂಗಳೂರು: ಅಡಿಕೆ ಬೆಲೆ ಒಂದು ವಾರದಿಂದ ಯಥಾಸ್ಥಿತಿಯಲ್ಲಿತ್ತು. ಇಂದು ಕೊಂಚ ದರ ಏರಿಕೆಯಾಗಿರುವುದು ಸಮಾಧಾನ ತಂದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಅಡಿಕೆ ಬೆಲೆ ಏರಿಕೆಯೂ ಅಲ್ಲ ಇಳಿಕೆಯೂ ಇಲ್ಲ ಎನ್ನುವ ಸ್ಥಿತಿಯಲ್ಲಿತ್ತು. ಒಂದೆಡೆ ಬೆಳೆ ಕಡಿಮೆ, ಇನ್ನೊಂದೆಡೆ ಬೆಲೆ ಏರಿಕೆಯಾಗದೇ ಇರುವುದು ರೈತರ ಚಿಂತೆಗೆ ಕಾರಣವಾಗಿದೆ. ಅಡಿಕೆ ಬೆಲೆ ಇಳಿಕೆಯಾಗುತ್ತಿದೆಯೇ ಹೊರತು ಏರಿಕೆಯಾಗುತ್ತಿಲ್ಲ ಎಂಬ ಚಿಂತೆ ಬೆಳೆಗಾರರದ್ದು. ಆದರೆ ಮೊನ್ನೆ ಹೊಸ ಅಡಿಕೆ ಬೆಲೆ 10 ರೂ.ಗಳಷ್ಟು ಏರಿಕೆಯಾಗಿತ್ತು. ಆದರೆ ಇಂದು ಯಥಾಸ್ಥಿತಿಯಲ್ಲಿದ್ದು 425 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 525 ರೂ. ಗಳಷ್ಟಿದೆ.
ಬೆಂಗಳೂರು: ಹೊಸ ವರ್ಷದ ಮೊದಲ ದಿನವೇ ಚಿನ್ನದ ಬೆಲೆ ಇಳಿಕೆಯಾಗಿತ್ತು. ಆದರೆ ಇಂದು ಪರಿಶುದ್ಧ ಚಿನ್ನದ ದರ ಏರಿಕೆಯಾದರೆ ಮತ್ತು ಇತರೆ ಚಿನ್ನದ ದರ ಇಳಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಇಳಿಕೆ ಕಂಡಿತ್ತು. ಆದರೆ ವಾರಂತ್ಯಕ್ಕೆ ಚಿನ್ನದ ದರ ಏರಿಕೆ-ಇಳಿಕೆಯಾಗುತ್ತಲೇ ಇತ್ತು. ಈ ವಾರ ಆರಂಭದಿಂದಲೇ ಇಳಿಕೆಯತ್ತ ಸಾಗಿದೆ. ಆದರೆ ಇಂದು ಪರಿಶುದ್ಧ ಚಿನ್ನದ ದರ ಕೊಂಚ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,37,510.00 ರೂ.ಗಳಿತ್ತು. ಇಂದು 1,38,840.00 ರೂ.ಗಳಷ್ಟಾಗಿದೆ.
ಬಳ್ಳಾರಿ: ಜನಾರ್ಧನ ರೆಡ್ಡಿ ಮನೆ ಬಳಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ಈಗ ನಾಪತ್ತೆಯಾಗಿದ್ದಾರೆ. ಮೊನ್ನೆ ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಅವರ ಮತ್ತು ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಬೆಂಬಲಿಗರ ನಡುವೆ ಕಿತ್ತಾಟವಾಗಿತ್ತು. ಈ ನಡುವೆ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ಫೈರಿಂಗ್ ನಡೆಸಿದ್ದರು. ಘಟನೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದ. ಆದರೆ ಯಾರ ಗನ್ ನಿಂದ ಫೈರ್ ಆಗಿದ್ದರಿಂದ ಕಾರ್ಯಕರ್ತ ಸಾವನ್ನಪ್ಪಿದ್ದಾನೆ ಎಂಬುದು ತನಿಖೆಯಿಂದಷ್ಟೇ ಖಚಿತವಾಗಿದೆ.
ಪತಿ ತೀರಿಕೊಂಡ ಬಳಿಕ ಮಹಿಳೆಯರು ಆರ್ಥಿಕವಾಗಿ ದುರ್ಬಲರಾಗದಂತೆ ಸರ್ಕಾರ ವಿಧವಾ ವೇತನ ನೀಡುತ್ತದೆ. ವಿಧವಾ ವೇತನಕ್ಕೆ ಕರ್ನಾಟಕದಲ್ಲಿ ಅರ್ಜಿ ಸಲ್ಲಿಸಲು ಏನು ಮಾಡಬೇಕು, ಎಷ್ಟು ರೂಪಾಯಿ ಸಿಗುತ್ತದೆ ಇಲ್ಲಿದೆ ವಿವರ. ಕರ್ನಾಟಕದಲ್ಲಿ ಸಾಮಾನ್ಯವಾಗಿ ಯಾವುದೇ ಸರ್ಕಾರೀ ಸೇವೆಗಳನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್ ಗೆ ಲಾಗಿನ್ ಆಗಬೇಕು. ವಿಧವಾ ವೇತನಕ್ಕೆ ಅರ್ಜಿ ಸಲ್ಲಿಸಲೂ ಸೇವಾ ಸಿಂಧು ಪೋರ್ಟಲ್ ಗೆ ಲಾಗಿನ್ ಆಗಿ ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದು. ವಿಧವಾ ವೇತನದಲ್ಲಿ ಪತಿ ಕಳೆದುಕೊಂಡ ಮಹಿಳೆಯರಿಗೆ ಮಾಸಿಕ 8,00 ರೂ. ಪೆನ್ಷನ್ ಸಿಗುತ್ತದೆ.
ಬೆಂಗಳೂರು: ಎಂಜಿನಿಯರಿಂಗ್ ಪದವಿ ಸೇರಿದಂತೆ ವೃತ್ತಿಪರ ಕೋರ್ಸ್ ಗಳಿಗೆ ನಡೆಯುವ ಸಿಇಟಿ ಪ್ರವೇಶ ಪರಿಕ್ಷೆ ದಿನಾಂಕ ಘೋಷಣೆ ಮಾಡಲಾಗಿದೆ. ಪರೀಕ್ಷೆ ಯಾವಾಗ ನಡೆಯಲಿದೆ ಸಂಪೂರ್ಣ ವಿವರ ಇಲ್ಲಿದೆ.ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ಮಾಡಲಾಗುವ ಸಿಇಟಿ ಪರೀಕ್ಷೆ ದಿನಾಂಕವನ್ನು ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ಪ್ರಕಟಿಸಿದ್ದಾರೆ. ಏಪ್ರಿಲ್ 23 ಮತ್ತು 24 ರಂದು ಸಿಇಟಿ ಪರೀಕ್ಷೆಗಳು ನಡೆಯಲಿವೆ ಎಂದು ಸಚಿವರು ಘೋಷಿಸಿದ್ದಾರೆ. ಜನವರಿ 17 ರಿಂದ ಆನ್ ಲೈನ್ ನಲ್ಲಿ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು ಎಂದು ಸಚಿವರು ಹೇಳಿದ್ದಾರೆ.
ಭೋಪಾಲ್: ನಾವು ಬಿಜೆಪಿಯ ರಿಮೋಟ್ ಕಂಟ್ರೋಲ್ ಅಲ್ಲ. ಬಿಜೆಪಿ ಸ್ವತಂತ್ರವಾಗಿ ಕೆಲಸ ಮಾಡುತ್ತದೆ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಕೇಂದ್ರ ಸರ್ಕಾರದ ರಿಮೋಟ್ ಕಂಟ್ರೋಲ್ ಆರ್ ಎಸ್ಎಸ್ ಎಂದು ಯಾವತ್ತೂ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಟೀಕಿಸುತ್ತಲೇ ಇರುತ್ತವೆ. ಇದೀಗ ಆ ಪಕ್ಷಗಳಿಗೆ ಮೋಹನ್ ಭಾಗವತ್ ಈ ರೀತಿ ಉತ್ತರ ನೀಡಿದ್ದಾರೆ. ಬಿಜೆಪಿ, ವಿಎಚ್ ಪಿ, ವಿದ್ಯಾ ಭಾರತದಂತಹ ಸಂಸ್ಥೆಗಳು ಸ್ವತಂತ್ರವಾಗಿ ಕೆಲಸ ನಿರ್ವಹಿಸುತ್ತವೆ. ಇದು ಯಾವುದೂ ಆರ್ ಎಸ್ಎಸ್ ನಿಯಂತ್ರಣದಲ್ಲಿಲ್ಲ ಎಂದು ಅವರು ಹೇಳಿದ್ದಾರೆ.
ಗಲ್ಲಿ ಕ್ರಿಕೆಟ್ ನಲ್ಲಿ ಅದೆಂತಾ ಅದ್ಭುತ ಪ್ರತಿಭೆಗಳಿರುತ್ತಾರೆ ಎಂಬುದಕ್ಕೆ ಹಲವು ಉದಾಹರಣೆಗಳನ್ನು ನೋಡಿದ್ದೇವೆ. ಅದೇ ರೀತಿ ಇಲ್ಲೊಬ್ಬ ಪುಟ್ಟ ಪೋರ ಥೇಟ್ ಬ್ರೆಟ್ ಲೀಯಂತೆ ಬೌಲಿಂಗ್ ಮಾಡಿ ಗಮನ ಸೆಳೆದಿದ್ದಾನೆ. ಭಾರತದ ಗಲ್ಲಿಯೊಂದರಲ್ಲಿ ಗೆಳೆಯರೊಂದಿಗೆ ಗಲ್ಲಿ ಕ್ರಿಕೆಟ್ ಆಡುವ ಪುಟ್ಟ ಬಾಲಕನೊಬ್ಬ ಬೌಲಿಂಗ್ ಮಾಡುವ ಶೈಲಿ ಈಗ ಸೋಷಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಇದಕ್ಕೆ ಕಾರಣವೂ ಇದೆ. 90-2000 ರ ದಶಕದಲ್ಲಿ ಆಸ್ಟ್ರೇಲಿಯಾದಲ್ಲಿದ್ದ ಬ್ರೆಟ್ ಲೀ ಎಂಬ ವೇಗಿಯನ್ನು ಎಲ್ಲರಿಗೂ ಗೊತ್ತಿರುತ್ತದೆ.
ಬೆಂಗಳೂರು: ಗ್ಯಾರಂಟಿಯಿಂದ ಯಾವುದಕ್ಕೂ ದುಡ್ಡಿಲ್ಲ. ನಾನಿನ್ನೂ ಬದುಕಿದ್ದೀನಿ, ಹೋರಾಟ ಮಾಡ್ತೀನಿ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಯೋಜನೆಗಳಿಗೆ ದುಡ್ಡು ಸಾಕಾಗ್ತಿಲ್ಲ. ಇದರಿಂದ ಯಾವುದೇ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ. ಈ ದೇವೇಗೌಡ ಇನ್ನೂ ಜೀವಂತವಾಗಿದ್ದೇನೆ. ಸರ್ಕಾರದ ವಿರುದ್ಧ ಹಾಸನದಲ್ಲಿ ಸಮಾವೇಶ ನಡೆಸಿ ಹೋರಾಟ ನಡೆಸುವುದಾಗಿ ದೇವೇಗೌಡರು ಗುಡುಗಿದ್ದಾರೆ. ಇನ್ನು ಕೋಗಿಲು ಲೇಔಟ್ ನಲ್ಲಿ ಅಕ್ರಮ ಮನೆಗಳ ತೆರವು ಬಗ್ಗೆ ಪ್ರತಿಕ್ರಿಯಿಸಿದ ಅವರು ರಾಜ್ಯದಲ್ಲಿ ಅನಧಿಕೃತ ಕೊಳಚೆ ಪ್ರದೇಶಗಳ ಸಂಖ್ಯೆ ಹೆಚ್ಚಾಗಿದೆ.
ಚೆನ್ನೈ: ಈ ಬಾರಿ ಟಿ20 ವಿಶ್ವಕಪ್ ಯಾರು ನೋಡ್ತಾರೆ? ಹೀಗಂತ ಟೀಂ ಇಂಡಿಯಾ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಬೇಸರ ಹಂಚಿಕೊಂಡಿದ್ದಾರೆ. ಇದಕ್ಕೆ ಕಾರಣವೂ ಇದೆ. ರವಿಚಂದ್ರನ್ ಅಶ್ವಿನ್ ಕ್ರಿಕೆಟ್ ನಿಂದ ನಿವೃತ್ತಿಯಾದರೂ ತಮ್ಮ ಯೂ ಟ್ಯೂಬ್ ಚಾನೆಲ್ ನಲ್ಲಿ ಕ್ರಿಕೆಟ್ ವಿಶ್ಲೇಷಣೆ ನಡೆಸುತ್ತಿರುತ್ತಾರೆ. ಇದೀಗ ಟಿ20 ವಿಶ್ವಕಪ್ ವೇಳಾಪಟ್ಟಿಯ ಬಗ್ಗೆಯೂ ಅವರ ಮಾತನಾಡಿದ್ದು ಬೇಸರ ವ್ಯಕ್ತಪಡಿಸಿದ್ದಾರೆ. ‘ಈ ಬಾರಿ ಟಿ20 ವಿಶ್ವಕಪ್ ಯಾರು ನೋಡ್ತಾರೆ ರೀ... ಇಂಡಿಯಾ ವರ್ಸಸ್ ನಮೀಬಿಯಾ, ಇಂಡಿಯಾ ವರ್ಸಸ್ ಯುಎಸ್ಎ... ಇಂತಹ ಮ್ಯಾಚ್ ಗಳನ್ನು ಜನ ಖಂಡಿತಾ ನೋಡಕ್ಕೆ ಇಷ್ಟಪಡಲ್ಲ.
ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಚಳಿ ಕೊಂಚ ಮಟ್ಟಿಗೆ ಕಡಿಮೆಯಾಗಿತ್ತು. ವಾರಂತ್ಯದಲ್ಲಿ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ. ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ಹಲವೆಡೆ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ತಾಪಮಾನದಲ್ಲಿ ಕೊಂಚ ಏರಿಕೆಯಾಗಿತ್ತು. 16 ಡಿಗ್ರಿಯಷ್ಟು ಕನಿಷ್ಠ ತಾಪಮಾನ ಹೊಂದಿದ್ದ ರಾಜ್ಯದಲ್ಲಿ ಕಳೆದ ಮೂರು ದಿನಗಳಲ್ಲಿ 18 ಡಿಗ್ರಿಯವರೆಗೆ ತಲುಪಿದ್ದೂ ಇತ್ತು. ಅದರೆ ಇಂದಿನಿಂದ ಮತ್ತೆ ಚಳಿ ತೀವ್ರವಾಗಲಿದೆ. ವಾರಂತ್ಯದಲ್ಲಿ ರಾಜ್ಯದ ಸರಾಸರಿ ಕನಿಷ್ಠ ತಾಪಮಾನ 17 ಡಿಗ್ರಿಯಷ್ಟಿರಲಿದೆ.
ಜಾತಕದಲ್ಲಿ ಶನಿ ದೋಷವಿದ್ದರೆ ಶನಿವಾರಗಳಂದು ವಿಶೇಷವಾಗಿ ಶನಿ ಪೂಜೆ ಮಾಡಿ ಮಂತ್ರ ಪಠಿಸಿ. ಶನಿದೋಷ ನಿವಾರಣೆಗೆ ಈ ಒಂದು ಮಂತ್ರ ಪಠಿಸಿದರೆ ಸಾಕು. ಶನಿದೇವನ ಕುರಿತಾದ ಅನೇಕ ಮಂತ್ರಗಳಿವೆ. ಆದರೆ ಚಿಕ್ಕದಾಗಿ ಮತ್ತು ಸರಳವಾಗಿ ಹೇಳಬೇಕೆಂದರೆ ಪಿಪ್ಪಲಾದ ಕೃತ ಶನಿ ಸ್ತೋತ್ರವನ್ನು ಹೇಳಬಹುದು. ಇದು ಕನ್ನಡದಲ್ಲಿ ಇಲ್ಲಿದೆ ನೋಡಿ. ನಮೋಽಸ್ತು ಕೋಣಸಂಸ್ಥಾಯ ಪಿಂಗಳಾಯ ನಮೋಽಸ್ತು ತೇ । [ಕ್ರೋಧ]ನಮಸ್ತೇ ಬಭ್ರುರೂಪಾಯ ಕೃಷ್ಣಾಯ ಚ ನಮೋಽಸ್ತು ತೇ ॥ 1 ॥ ನಮಸ್ತೇ ರೌದ್ರದೇಹಾಯ ನಮಸ್ತೇ ಚಾಂತಕಾಯ ಚ ।ನಮಸ್ತೇ ಯಮಸಂಜ್ಞಾಯ ನಮಸ್ತೇ ಸೌರಯೇ ವಿಭೋ ॥ 2 ॥
ಉದಯಪುರ: ದೇಶದ ಶ್ರೀಮಂತ ನಾಗರಿಕ ಪರಂಪರೆಯನ್ನು ಶ್ಲಾಘಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಆಧುನಿಕ ಭಾರತವು ತನ್ನ ಪ್ರಾಚೀನ ಮತ್ತು ಸಾಂಸ್ಕೃತಿಕ ಸಂಪ್ರದಾಯಗಳನ್ನು ಗುರುತಿಸುವುದರಿಂದ ಶಕ್ತಿ ಮತ್ತು ಹೆಮ್ಮೆಯನ್ನು ಪಡೆಯುತ್ತದೆ ಎಂದು ಶುಕ್ರವಾರ ಹೇಳಿದ್ದಾರೆ. 1923 ರಲ್ಲಿ, ಬಿಜೆಪಿಯ ಹಿರಿಯ ನಾಯಕರು ವಿಜ್ಞಾನ, ವೈದ್ಯಕೀಯ, ಗಣಿತ, ವ್ಯಾಕರಣ, ತತ್ವಶಾಸ್ತ್ರ ಮತ್ತು ನೀತಿಶಾಸ್ತ್ರದಂತಹ ಜ್ಞಾನ ವ್ಯವಸ್ಥೆಗಳಿಗೆ ಭಾರತದ ನಿರಂತರ ಕೊಡುಗೆಗಳನ್ನು ಎತ್ತಿ ತೋರಿಸಿದರು. ಇಂದಿನ ಭಾರತವು ತನ್ನ ಗತಕಾಲದ ಬಗ್ಗೆ ಹೆಮ್ಮೆ ಪಡುತ್ತದೆ. ಇಂದಿನ ಭಾರತವು ತನ್ನ ಸಂಪ್ರದಾಯಗಳನ್ನು ಗೌರವಿಸುತ್ತದೆ ಮತ್ತು ಅದರ ಶ್ರೀಮಂತ ಸಂಸ್ಕೃತಿಯ ಪರಂಪರೆಯನ್ನು ಗೌರವಿಸುತ್ತದೆ.
ಬಳ್ಳಾರಿ: ಬ್ಯಾನರ್ ವಿಚಾರವಾಗಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ನಡುವಿನ ಗಲಭೆ ಸಂಬಂಧ ರಾಜ್ಯ ಮಟ್ಟದಲ್ಲಿ ಸುದ್ದಿಯಾಗುತ್ತಿರುವ ಬೆನ್ನಲ್ಲೇ ಇದೀಗ ಜನಾರ್ದನ ಮನೆಯಲ್ಲಿ ಮತ್ತೊಂದು ಬುಲೆಟ್ ಪತ್ತೆಯಾಗಿದೆ.ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ಆಪ್ತ ಸಹಾಯಕ ಚಾನೆಲ್ ಶೇಖರ್ ನೀಡಿದ ದೂರಿನ ಆಧಾರದ ಮೇಲೆ ಇಂದು ಎಫ್ಐಆರ್ ದಾಖಲಿಸಲಾಗಿದೆ.ಎಫ್ಐಆರ್ನಲ್ಲಿ ಜನಾರ್ದನ ರೆಡ್ಡಿ ಅವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದೆ.