ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ತಮಗೆ ಬಂದ ಹೇಟ್ ಮೆಸೇಜ್ ಗಳ ವಿರುದ್ಧ ದೂರು ನೀಡಿದ ಬಳಿಕ ಇನ್ ಸ್ಟಾಗ್ರಾಂನಲ್ಲಿ ಸಂದೇಶ ಬರೆದಿರುವ ವಿಜಯಲಕ್ಷ್ಮಿ ದರ್ಶನ್ ಎಲ್ಲಾ ಕ್ಲಾಸ್ ಅಭಿಮಾನಿಗಳಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಿಚ್ಚ ಸುದೀಪ್ ಹುಬ್ಬಳ್ಳಿಯಲ್ಲಿ ಯುದ್ಧಕ್ಕೆ ಸಿದ್ಧ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೆಲವರು ವೇದಿಕೆ ಮೇಲೆ ದರ್ಶನ್ ಇಲ್ಲದೇ ಇದ್ದಾಗ ಏನೇನೋ ಹೇಳಿಕೆ ನೀಡುತ್ತಾರೆ. ಅಂತಹವರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಡಿಬಾಸ್ ಅಭಿಮಾನಿಗಳಿಗೆ ಹೇಳಿದ್ದರು.
ಬೆಂಗಳೂರು: ವಿಜಯ್ ಹಜಾರೆ ಟ್ರೋಫಿಯಲ್ಲಿ ತಮ್ಮ ರಾಜ್ಯ ತಂಡದ ಪರ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಆಡುತ್ತಿದ್ದಾರೆ. ರೋಹಿತ್, ಕೊಹ್ಲಿ ಬ್ಯಾಟಿಂಗ್ ನೋಡಲು ಅಭಿಮಾನಿಗಳು ಮರವೇರಿ ಕೂತ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ಡೆಲ್ಲಿ ಪರ ಬೆಂಗಳೂರಿನಲ್ಲಿ ಆಡುತ್ತಿದ್ದರೆ, ರೋಹಿತ್ ಶರ್ಮಾ ಮುಂಬೈ ಪರ ಜೈಪುರದ ಮೈದಾನದಲ್ಲಿ ಆಡಿದ್ದಾರೆ. ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯ ನಡೆಸಲು ಅನುಮತಿ ಸಿಗದ ಕಾರಣ ಕೆಎಸ್ ಸಿಎ ಮೈದಾನದಲ್ಲಿ ಪಂದ್ಯ ನಡೆಸಲಾಯಿತು.
ಬೆಂಗಳೂರು: ವಿಜಯ್ ಹಜಾರೆ ಟ್ರೋಫಿಯಲ್ಲಿ ಡೆಲ್ಲಿ ಪರ ವಿರಾಟ್ ಕೊಹ್ಲಿ, ಮುಂಬೈ ಪರ ರೋಹಿತ್ ಶರ್ಮಾ ಶತಕ ಸಿಡಿಸಿ ಮಿಂಚಿದ್ದಾರೆ. ಸಿಕ್ಕಿಂ ವಿರುದ್ಧ ಇಂದು ಪಂದ್ಯವಾಡಿದ ಮುಂಬೈ ತಂಡ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತು. 237 ರನ್ ಗಳ ಮೊತ್ತ ಬೆನ್ನತ್ತಿದ ಮುಂಬೈಗೆ ರೋಹಿತ್ ಸಿಡಿಲಬ್ಬರದ ಆರಂಭ ನೀಡಿದರು. ಸಿಕ್ಕಿಂ ಬೌಲರ್ ಗಳನ್ನು ಮನಸೋ ಇಚ್ಛೆ ದಂಡಿಸಿದ ಹಿಟ್ ಮ್ಯಾನ್ ಕೇವಲ 62 ಎಸೆತಗಳಿಂದ 100 ರನ್ ಗಳಿಸಿ ಅಜೇಯರಾಗುಳಿದರು. ವಿಶೇಷವೆಂದರೆ ಇದೇ ವೇಳೆ ಮತ್ತೊಂದು ಪಂದ್ಯದಲ್ಲಿ ಇಂದು ವಿರಾಟ್ ಕೊಹ್ಲಿ ಕೂಡಾ ಶತಕ ಗಳಿಸಿ ಮಿಂಚಿದರು.
ಬೆಂಗಳೂರು: ಗ್ಯಾರಂಟಿ ಯೋಜನೆಯಲ್ಲಿ ಭ್ರಷ್ಟಾಚಾರವಾಗಿರುವ ಅನುಮಾನವಾಗಿದ್ದು ಉತ್ತರ ಕೊಡುವಂತೆ ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್ ಅಶೋಕ್ ಪತ್ರ ಬರೆದಿದ್ದಾರೆ. ಬೆಳಗಾವಿಯ ವಿಧಾನಮಂಡಲ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಪಾವತಿ ಬಗ್ಗೆ ಸುಳ್ಳು ಮಾಹಿತಿ ನೀಡಿದಾಗಿನಿಂದಲೂ ಗ್ಯಾರೆಂಟಿ ಯೋಜನೆಯ ಹಣದಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ, ಅವ್ಯವಹಾರ, ಅಕ್ರಮ ನಡೆಯುತ್ತಿರುವ ಅನುಮಾನವಿದ್ದು, ಈ ನಿಟ್ಟಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಬಜೆಟ್ ಅನುದಾನ ಹಂಚಿಕೆ ಸೇರಿದಂತೆ ಸಂಬಂಧಪಟ್ಟ ಅಂಕಿ-ಅಂಶಗಳ ಬಗ್ಗೆ ಅಧಿಕೃತ ಮಾಹಿತಿ ನೀಡುವಂತೆ ಕೋರಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ.
ಬೆಂಗಳೂರು: ಕಿಚ್ಚ ಸುದೀಪ್ ಮಾತಿಗೆ ಕೌಂಟರ್ ಕೊಟ್ಟ ಬಳಿ ದರ್ಶನ್-ಸುದೀಪ್ ಫ್ಯಾನ್ಸ್ ವಾರ್ ಹೆಚ್ಚಾಗಿದ್ದು ಇದರ ನಡುವೆ ವಿಜಯಲಕ್ಷ್ಮಿ ದರ್ಶನ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕಿಚ್ಚ ಸುದೀಪ್ ಹುಬ್ಬಳ್ಳಿಯಲ್ಲಿ ಯುದ್ಧಕ್ಕೆ ರೆಡಿ ಎಂಬ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ವಿಜಯಲಕ್ಷ್ಮಿ ಕೆಲವರ ಮಾತಿಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಕೌಂಟರ್ ಕೊಟ್ಟಿದ್ದರು. ಇದಾದ ಬಳಿಕ ತಣ್ಣಗಾಗಿದ್ದ ಸುದೀಪ್-ದರ್ಶನ್ ಫ್ಯಾನ್ ವಾರ್ ತಾರಕಕ್ಕೇರಿದೆ. ಇದರ ನಡುವೆ ವಿಜಯಲಕ್ಷ್ಮಿ ತಮಗೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಜನ ನೆಗೆಟಿವ್ ಕಾಮೆಂಟ್ ಮಾಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
ಬೆಂಗಳೂರು: ಒಂದೆಡೆ ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಸಿದ್ದು-ಡಿಕೆಶಿ ಬಣದ ನಡುವೆ ಕಿತ್ತಾಟ ನಡೆಯುತ್ತಿದ್ದರೆ ಇತ್ತ ಸ್ವತಃ ಡಿಕೆ ಶಿವಕುಮಾರ್ ಶಾಕಿಂಗ್ ನಿರ್ಧಾರ ಪ್ರಕಟಿಸಿದ್ದಾರೆ. ಹೈಕಮಾಂಡ್ ನಾಯಕರ ಮೇಲೆ ಒತ್ತಡ ತಂದು, ರಾಜ್ಯ ನಾಯಕರ ಮನವೊಲಿಸಿ ಸುಸ್ತಾದ ಡಿಕೆ ಶಿವಕುಮಾರ್ ಈಗ ನಾನು ಪಕ್ಷದ ಕಾರ್ಯರ್ತನಾಗಿಯೇ ಮುಂದುವರಿಯುತ್ತೇನೆ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ಅಚ್ಚರಿ ಮೂಡಿಸಿದೆ. ಹಾಗಿದ್ದರೆ ಸಿಎಂ ಆಸೆ ಕೈಬಿಟ್ಟರಾ ಎಂಬ ಅನುಮಾನ ಮೂಡಿಸಿದೆ. ಅಧಿಕಾರ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ.
ಬೆಂಗಳೂರು: ಚಿನ್ನದ ಬೆಲೆ ಪ್ರತಿನಿತ್ಯ ಏರಿಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಭಾರೀ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಇಳಿಕೆ ಕಂಡಿತ್ತು. ಆದರೆ ವಾರಂತ್ಯಕ್ಕೆ ಚಿನ್ನದ ದರ ಏರಿಕೆ-ಇಳಿಕೆಯಾಗುತ್ತಲೇ ಇತ್ತು. ಈ ವಾರವೂ ಇದೇ ಟ್ರೆಂಡ್ ಮುಂದುವರಿಯುವ ಲಕ್ಷಣವಿದೆ. ಇಂದು ಪರಿಶುದ್ಧ ಚಿನ್ನದ ದರ ಭಾರೀ ಏರಿಕೆಯಾಗಿದೆ.
ಬೆಂಗಳೂರು: ಅಡಿಕೆ ಬೆಲೆ ಒಂದು ವಾರದಿಂದ ಯಥಾಸ್ಥಿತಿಯಲ್ಲಿತ್ತು. ಇಂದೂ ಅಡಿಕೆ ಮತ್ತು ಕಾಳುಮೆಣಸು ಬೆಲೆ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಅಡಿಕೆ ಬೆಲೆ ಏರಿಕೆಯೂ ಅಲ್ಲ ಇಳಿಕೆಯೂ ಇಲ್ಲ ಎನ್ನುವ ಸ್ಥಿತಿಯಲ್ಲಿತ್ತು. ಒಂದೆಡೆ ಬೆಳೆ ಕಡಿಮೆ, ಇನ್ನೊಂದೆಡೆ ಬೆಲೆ ಏರಿಕೆಯಾಗದೇ ಇರುವುದು ರೈತರ ಚಿಂತೆಗೆ ಕಾರಣವಾಗಿದೆ. ಅಡಿಕೆ ಬೆಲೆ ಇಳಿಕೆಯಾಗುತ್ತಿದೆಯೇ ಹೊರತು ಏರಿಕೆಯಾಗುತ್ತಿಲ್ಲ ಎಂಬ ಚಿಂತೆ ಬೆಳೆಗಾರರದ್ದು. ಇಂದು ಹೊಸ ಅಡಿಕೆ ಬೆಲೆ 415 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 520 ರೂ. ಗಳಷ್ಟಿದೆ.
ದ್ವಾದಶ ರಾಶಿಯವರ ಗ್ರಹಗತಿಗೆ ಅನುಗುಣವಾಗಿ ಆಯಾ ದೇವರ ಪೂಜೆ ಮಾಡುವುದು ಸೂಕ್ತ. ಅದೇ ರೀತಿ 2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪೂಜೆ ಮಾಡಬೇಕು ಇಲ್ಲಿದೆ ವಿವರ.ಮೇಷ ರಾಶಿ: ಹನುಮಂತ, ಶನಿ ದೇವರ ಪೂಜೆ, ಮಂತ್ರಗಳನ್ನು ಪಠಿಸಿ. ಯಾಕೆಂದರೆ ಈ ರಾಶಿಯವರಿಗೆ ಸಾಡೇ ಸಾತಿ ಶನಿ ದೆಸೆ ಚಾಲ್ತಿಯಲ್ಲಿದೆ.ವೃಷಭ: ಲಕ್ಷ್ಮೀ ದೇವಿಯ ಪೂಜೆ ಸೂಕ್ತ. ಹಣಕಾಸಿನ ಸಮಸ್ಯೆಗಳನ್ನು ನಿವಾರಿಸಲು ಲಕ್ಷ್ಮೀ ಪೂಜೆ ಮಾಡಿದರೆ ಉತ್ತಮ.ಮಿಥುನ: ಶ್ರೀಕೃಷ್ಣನ ಮಂತ್ರ ಪಠಿಸುವುದು, ನವಿಲುಗರಿ ಇಟ್ಟು ಪೂಜೆ ಮಾಡುವುದರಿಂದ ಒಳಿತಾಗುವುದು.ಕರ್ಕಟಕ: ಈ ರಾಶಿಯವರಿಗೆ ಗುರು ಗ್ರಹನ ಪ್ರವೇಶವಾಗುವುದರಿಂದ ಶಿವನ ಪೂಜೆ ಮಾಡುವುದು, ಸ್ತೋತ್ರ ಪಠಿಸುವುದು ಉತ್ತಮ.ಸಿಂಹ: ಮಹಾವಿಷ್ಣುವಿನ ಪೂಜೆ ಮಾಡಬೇಕು. ಇದರಿಂದ ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸುವಿರಿ.
ಮುಂಬೈ: ವಿಜಯ್ ಹಜಾರೆ ಟ್ರೋಫಿಯಲ್ಲಿ ಶತಕ ಸಿಡಿಸಿ 14 ವರ್ಷದ ಯಂಗ್ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ವಿಶ್ವ ದಾಖಲೆಯನ್ನೇ ಮಾಡಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ದೇಶೀಯ ಕ್ರಿಕೆಟ್ ಮತ್ತು ಭಾರತ ಎ ತಂಡಗಳಲ್ಲಿ ಭರ್ಜರಿ ಪ್ರದರ್ಶನದ ಮೂಲಕ ಸದ್ದು ಮಾಡುತ್ತಿರುವ ವೈಭವ್ ಸೂರ್ಯವಂಶಿ ಇಂದು ಮತ್ತೊಮ್ಮೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ದಾಖಲೆ ಮಾಡಿದ್ದಾರೆ. ಅರುಣಾಚಲ ಪ್ರದೇಶದ ವಿರುದ್ಧ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಬಿಹಾರ ಆಟಗಾರ ವೈಭವ್ ಇಂದು ಕೇವಲ 36 ಎಸೆತಗಳಲ್ಲಿ ಶತಕ ಸಿಡಿಸಿ ವಿಶ್ವ ದಾಖಲೆ ಮಾಡಿದ್ದಾರೆ.
ಬೆಂಗಳೂರು: ರಾಜ್ಯದ ಒಟ್ಟು 4 ಪಟ್ಟಣ ಪಂಚಾಯಿತಿಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸಂತಸ ವ್ಯಕ್ತಪಡಿಸಿದ್ದಾರೆ.ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದಿದೆ. ಇದಲ್ಲದೇ ದೊಡ್ಡಬಳ್ಳಾಪುರ ನಗರಸಭೆಯ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ, ಕಿನ್ನಿಗೋಳಿ, ಉತ್ತರ ಕನ್ನಡ ಜಿಲ್ಲೆಯ ಮಂಕಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲೂ ಬಿಜೆಪಿ ಬಹುಮತ ಸಾಧಿಸಿದೆ.
ಚಳಿಗಾಲದಲ್ಲಿ ದೇಹದ ಮಾಂಸಖಂಡಗಳು ಸಂಕುಚಿತವಾಗಿರುತ್ತದೆ. ಹೀಗಾಗಿ ಜಿಮ್ ಮಾಡುವವರು ಚಳಿಗಾಲದಲ್ಲಿ ತಪ್ಪದೇ ಈ ಎಚ್ಚರಿಕೆಯನ್ನು ಗಮನಿಸಿ. ಚಳಿಗಾಲದಲ್ಲಿ ಕೀಲುಗಳು ಮತ್ತು ಮಾಂಸಖಂಡಗಳು ಸ್ಟಿಫ್ ಆಗಿರುತ್ತವೆ. ಈ ಸಮಯದಲ್ಲಿ ರಕ್ತ ಸಂಚಾರ ಕಡಿಮೆಯಾಗಿರುತ್ತದೆ. ಹೀಗಾಗಿ ಜಿಮ್ ಮಾಡುವವರು ವಿಶೇಷ ಕಾಳಜಿ ವಹಿಸಬೇಕು. ಚಳಿಗಾಲದಲ್ಲಿ ಕಠಿಣ ವ್ಯಾಯಾಮಗಳನ್ನು ಮಾಡುವ ಮೊದಲು ವಾರ್ಮ್ ಅಪ್ ಸ್ವಲ್ಪ ಹೆಚ್ಚು ಹೊತ್ತು ಮಾಡಬೇಕು. ಇದರಿಂದ ದೇಹ ಸಡಿಲವಾಗುತ್ತದೆ. ಒಂದು ವೇಳೆ ನೀವು 5 ನಿಮಿಷ ವಾರ್ಮ್ ಅಪ್ ಮಾಡುತ್ತಿದ್ದಲ್ಲಿ 10 ನಿಮಿಷಕ್ಕೆ ಹೆಚ್ಚಿಸಬೇಕು.
ನವದೆಹಲಿ: ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಧಾನಿಯಾಗಬೇಕು ಎಂಬ ಆಸೆ ಹಲವರಿಗಿದೆ ಎಂದು ಪತಿ ರಾಬರ್ಟ್ ವಾದ್ರಾ ಪತ್ನಿ ಪರ ಬ್ಯಾಟಿಂಗ್ ಮಾಡಿದ್ದಾರೆ. ಹೀಗಾದ್ರೆ ರಾಹುಲ್ ಗಾಂಧಿ ಗತಿಯೇನು ಎಂಬ ಪ್ರಶ್ನೆ ಮೂಡಿದೆ. ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ನಿನ್ನೆಯಷ್ಟೇ ಪ್ರಿಯಾಂಕ ಪ್ರಧಾನಿಯಾಗಬೇಕು ಎಂದಿದ್ದರು. ಅವರು ಪ್ರಧಾನಿಯಾಗಿದ್ದರೆ ಇಷ್ಟೊತ್ತಿಗೆ ಬಾಂಗ್ಲಾದೇಶಕ್ಕೆ ಇಂದಿರಾ ಗಾಂಧಿಯಂತೆ ತಕ್ಕ ಉತ್ತರ ನೀಡುತ್ತಿದ್ದರು ಎಂದು ಹೇಳಿದ್ದರು. ಇದೀಗ ಮಸೂದ್ ಬಳಿಕ ಸ್ವತಃ ರಾಬರ್ಟ್ ವಾದ್ರಾ ಈ ಮಾತು ಹೇಳಿದ್ದಾರೆ.
ಬೆಂಗಳೂರು: ಎರಡು ಮಹತ್ವದ ನಿರ್ಧಾರ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಬೆಂಬಲಿಗರು ಕಾರ್ಯಾಚರಣೆ ಶುರು ಮಾಡಿದ್ದಾರೆ. ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕದನ ಇನ್ನೂ ಚಾಲ್ತಿಯಲ್ಲಿದೆ. ಡಿಕೆ ಶಿವಕುಮಾರ್ ಬಣ ಇನ್ನಿಲ್ಲದಂತೆ ಪ್ರಯತ್ನ ಪಡುತ್ತಿದ್ದಾರೆ. ಇದರ ನಡುವೆ ಇದೇ ವಾರ ದೆಹಲಿಯಲ್ಲಿ ಎಐಸಿಸಿ ಕಾರ್ಯಕಾರಿಣಿ ನಡೆಯಲಿದ್ದು, ಈ ವೇಳೆ ರಾಹುಲ್ ಗಾಂಧಿಯವರನ್ನು ರಾಜ್ಯ ನಾಯಕರು ಭೇಟಿ ಮಾಡುವ ಸಾಧ್ಯತೆಯಿದೆ. ಇದರ ನಡುವೆ ಸಿದ್ದರಾಮಯ್ಯ ಬುಲಾವ್ ನೀಡದೇ ಹೈಕಮಾಂಡ್ ನಾಯಕರನ್ನು ಭೇಟಿಯಾಗದೇ ಇರಲು ತೀರ್ಮಾನಿಸಿದ್ದಾರೆ.
ಬೆಂಗಳೂರು: ವಿಚ್ಛೇದನ ನೋಟಿಸ್ ಕೊಟ್ಟಿದ್ದ ಪತ್ನಿಯನ್ನು ನಡು ರಸ್ತೆಯಲ್ಲೇ ಶೂಟ್ ಮಾಡಿ ಕೊಂಡ ಘಟನೆ ಬೆಂಗಳೂರಿನ ಮಾಗಡಿ ರಸ್ತೆ ಬಳಿ ಘಟನೆ ನಡೆದಿದೆ. 39 ವರ್ಷದ ಭುವನೇಶ್ವರಿ ಮೃತರು. ಅವರ ಪತಿ 40 ವರ್ಷದ ಬಾಲಮುರುಗನ್ ಕೊಲೆ ಆರೋಪಿ. ಭುವನೇಶ್ವರಿ ಸ್ಥಳೀಯ ಬ್ಯಾಂಕ್ ಒಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಭುವನೇಶ್ವರಿ ಮತ್ತು ಬಾಲಮುರುಗನ್ ನಡುವೆ ಎರಡು ವರ್ಷಗಳಿಂದ ಮನಸ್ತಾಪವಿತ್ತು. ಹೀಗಾಗಿ ಭುವನೇಶ್ವರಿ ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಇತ್ತೀಚೆಗೆ ವಿಚ್ಛೇದನ ನೋಟಿಸ್ ನೀಡಿದ್ದರು ಎಂದು ವರದಿಯಾಗಿದೆ.
ಬೆಂಗಳೂರು: ಕೆಆರ್ ಪುರಂ ಶಾಸಕ ಬೈರತಿ ಬಸವರಾಜು ಅವರನ್ನು ಯಾವುದೇ ಕ್ಷಣದಲ್ಲೂ ಪೊಲೀಸರು ಬಂಧಿಸುವ ಸಾಧ್ಯತೆಯಿದೆ. ಬಿಕ್ಲು ಶಿವು ಮರ್ಡರ್ ಕೇಸ್ ನಲ್ಲಿ ಬೈರತಿ ಬಸವರಾಜುಗಾಗಿ ಸಿಐಡಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಮರ್ಡರ್ ಕೇಸ್ ನಲ್ಲಿ ಬೈರತಿ ಬಸವರಾಜು ಹೆಸರೂ ಕೇಳಿಬಂದಿದೆ. ಈ ಹಿನ್ನಲೆಯಲ್ಲಿ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದನ್ನು ಮೊನ್ನೆಯಷ್ಟೇ ನ್ಯಾಯಾಲಯ ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ಶಾಸಕರು ತಲೆಮರೆಸಿಕೊಂಡಿದ್ದರು. ಕೆಲವು ಮೂಲಗಳ ಪ್ರಕಾರ ಮಹಾರಾಷ್ಟ್ರಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ.
ಮುಂಬೈ: ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ಟಿ20 ತಂಡದ ನಾಯಕತ್ವದಿಂದ ಸೂರ್ಯಕುಮಾರ್ ಯಾದವ್ ಗೆ ಕೊಕ್ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗುತ್ತಿದೆ. ಹಾಗಿದ್ದರೆ ಯಾರಾಗ್ತಾರೆ ಟೀಂ ಇಂಡಿಯಾ ಮುಂದಿನ ನಾಯಕ? ಕಳೆದ ಟಿ20 ವಿಶ್ವಕಪ್ ಬಳಿಕ ಸೂರ್ಯಕುಮಾರ್ ಯಾದವ್ ಟಿ20 ತಂಡದ ನಾಯಕರಾಗಿದ್ದರು. ಆದರೆ ನಾಯಕರಾದ ಬಳಿಕ ಸೂರ್ಯ ಬ್ಯಾಟಿಂಗ್ ನ್ನೇ ಮರೆತಿದ್ದಾರೆ. ಕಳೆದ 22 ಪಂದ್ಯಗಳಿಂದ ಅವರ ಸ್ಕೋರ್ 300 ರನ್ ಕೂಡಾ ದಾಟಿಲ್ಲ. ಇಷ್ಟು ಕಳಪೆ ದಾಖಲೆ ಹೊಂದಿರುವ ಅವರನ್ನು ತಂಡದಿಂದ ಹೊರಹಾಕಬೇಕು ಎಂದು ಒತ್ತಾಯ ಕೇಳಿಬರುತ್ತಿದೆ.
ಬೆಂಗಳೂರು: ಕಳೆದ ಕೆಲವು ಸಮಯದಿಂದ ಚಿನ್ನಸ್ವಾಮಿ ಮೈದಾನದಲ್ಲಿ ಯಾವುದೇ ಪಂದ್ಯವಾಗುತ್ತಿಲ್ಲ ಎಂಬ ಬೇಸರದಲ್ಲಿದ್ದ ಬೆಂಗಳೂರು ಕ್ರಿಕೆಟ್ ಅಭಿಮಾನಿಗಳಿಗೆ ವಿಜಯ್ ಹಜಾರೆ ಟ್ರೋಫಿ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವುದು ಮತ್ತು ವಿರಾಟ್ ಕೊಹ್ಲಿ ಆಡುತ್ತಿರುವ ಸುದ್ದಿ ಖುಷಿ ನೀಡಿತ್ತು. ಆದರೆ ಖುಷಿ ಹೆಚ್ಚು ಸಮಯ ನಿಲ್ಲಲಿಲ್ಲ. ಪಂದ್ಯಕ್ಕೆ ಒಂದು ದಿನ ಮುಂಚೆ ಪೊಲೀಸ್ ಮತ್ತು ಗೃಹ ಇಲಾಖೆ ಭದ್ರತೆ ಕಾರಣ ನೀಡಿ ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯ ಆಯೋಜಿಸಲು ನಿರಾಕರಿಸಿತು. ಇದು ಅಭಿಮಾನಿಗಳನ್ನು ತೀವ್ರ ನಿರಾಶೆಗೊಳಪಡಿಸಿದೆ.
ಬೆಂಗಳೂರು: ಕರ್ನಾಟಕದಲ್ಲಿ ಈಗ ವಿಪರೀತ ಚಳಿಯ ವಾತಾವರಣ ಕಂಡುಬರುತ್ತಿದೆ. ಅದರಲ್ಲೂ ಈ ಕೆಲವು ಜಿಲ್ಲೆಗಳಿಗೆ ಶೀತ ಅಲೆಯ ಎಚ್ಚರಿಕೆ ನೀಡಲಾಗಿದ್ದು ವಿಪರೀತ ಚಳಿಯಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಹುತೇಕ ಮೋಡ ಕವಿದ ವಾತಾವರಣವಿರುತ್ತದೆ. ಅಪರೂಪಕ್ಕೆ ಬಿಸಿಲು ಕಂಡುಬರುತ್ತಿದೆ. ಬೆಳಿಗ್ಗೆ ದಟ್ಟ ಮಂಜು ಮುಸುಕಿದ ವಾತಾವರಣವಿರುತ್ತದೆ. ಇಂದೂ ಅದೇ ಹವಾಮಾನ ಮುಂದುವರಿಯಲಿದೆ. ಇಂದು ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 16 ಡಿಗ್ರಿಯಷ್ಟು ದಾಖಲಾಗುವವ ಸಾಧ್ಯತೆಯಿದೆ. ಇನ್ನು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಶೀತ ಅಲೆಯ ಎಚ್ಚರಿಕೆ ನೀಡಲಾಗಿದೆ.
ವಿದ್ಯಾಭ್ಯಾಸದಲ್ಲಿ ತೊಂದರೆಯಾಗುತ್ತಿದ್ದರೆ, ಜೀವನದಲ್ಲಿ ಯಾವುದೇ ಕೆಲಸಕ್ಕೆ ವಿಘ್ನಗಳು ಎದುರಾಗುತ್ತಿದ್ದರೆ ವಿಘ್ನ ವಿನಾಶಕ ವಿನಾಯಕನ ಗಣೇಶ ಕವಚ ಸ್ತೋತ್ರವನ್ನು ತಪ್ಪದೇ ಓದಿ.ಏಷೋತಿ ಚಪಲೋ ದೈತ್ಯಾನ್ ಬಾಲ್ಯೇಪಿ ನಾಶಯತ್ಯಹೋ ।ಅಗ್ರೇ ಕಿಂ ಕರ್ಮ ಕರ್ತೇತಿ ನ ಜಾನೇ ಮುನಿಸತ್ತಮ ॥ 1 ॥ ದೈತ್ಯಾ ನಾನಾವಿಧಾ ದುಷ್ಟಾಸ್ಸಾಧು ದೇವದ್ರುಮಃ ಖಲಾಃ ।ಅತೋಸ್ಯ ಕಂಠೇ ಕಿಂಚಿತ್ತ್ಯಂ ರಕ್ಷಾಂ ಸಂಬದ್ಧುಮರ್ಹಸಿ ॥ 2 ॥ ಧ್ಯಾಯೇತ್ ಸಿಂಹಗತಂ ವಿನಾಯಕಮಮುಂ ದಿಗ್ಬಾಹು ಮಾದ್ಯೇ ಯುಗೇತ್ರೇತಾಯಾಂ ತು ಮಯೂರ ವಾಹನಮಮುಂ ಷಡ್ಬಾಹುಕಂ ಸಿದ್ಧಿದಮ್ । ಈದ್ವಾಪರೇತು ಗಜಾನನಂ ಯುಗಭುಜಂ ರಕ್ತಾಂಗರಾಗಂ ವಿಭುಂ ತುರ್ಯೇತು ದ್ವಿಭುಜಂ ಸಿತಾಂಗರುಚಿರಂ ಸರ್ವಾರ್ಥದಂ ಸರ್ವದಾ ॥ 3 ॥
ವಿಶಾಖಪಟ್ಟಣ: ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಅವರ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ಭಾರತ ಮಹಿಳಾ ತಂಡವು ಮಂಗಳವಾರ ಶ್ರೀಲಂಕಾ ವಿರುದ್ಧ ಎರಡನೇ ಟಿ20 ಪಂದ್ಯದಲ್ಲಿ ಏಳು ವಿಕೆಟ್ಗಳ ಜಯ ಸಾಧಿಸಿದೆ.ಈ ಗೆಲುವಿನೊಂದಿಗೆ ಹರ್ಮನ್ಪ್ರೀತ್ ಕೌರ್ ನಾಯಕತ್ವದ ಭಾರತ ತಂಡವು ಐದು ಪಂದ್ಯಗಳ ಸರಣಿಯಲ್ಲಿ 2–0 ಮುನ್ನಡೆ ಪಡೆದಿದೆ. ಭಾನುವಾರ ನಡೆದ ಮೊದಲ ಪಂದ್ಯದಲ್ಲಿ ಭಾರತ ಎಂಟು ವಿಕೆಟ್ಗಳಿಂದ ಗೆದ್ದು ಶುಭಾರಂಭ ಮಾಡಿತ್ತು.ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 129 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತ, ಯುವ ಸ್ಫೋಟಕ ಬ್ಯಾಟರ್ ಶಫಾಲಿ ವರ್ಮಾ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಇನ್ನು 49 ಎಸೆತಗಳು ಬಾಕಿ ಇರುವಂತೆಯೇ ಜಯ ಸಾಧಿಸಿತು.
ಬೆಂಗಳೂರು: ನಟ ವಿಜಯ್ ದೇವರಕೊಂಡ ಅವರ ಅಭಿನಯದ ‘ರೌಡಿ ಜನಾರ್ಧನ್’ ಸಿನಿಮಾದ ಮೊದಲ ಟೀಸರ್ ಬಿಡುಗಡೆಯಾಗಿದ್ದು, ಇದರಲ್ಲಿ ನಟ ರಗಡ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಕಿಂಗ್ಡಮ್ ನಂತರ ವಿಜಯ್ ದೇವರಕೊಂಡ ನಡೆಸುತ್ತಿರುವ ಭಾರೀ ನಿರೀಕ್ಷೆಯಲ್ಲಿ ಮೂಡಿಬರುತ್ತಿರುವ ಸಿನಿಮಾ ಇದಾಗಿದೆ. 'ವಿಡಿ 15' ಎಂದು ತಾತ್ಕಾಲಿಕವಾಗಿ ಹೆಸರಿಸಲಾಗಿದ್ದ ಮುಂಬರುವ ಚಿತ್ರಕ್ಕೆ ಈಗ 'ರೌಡಿ ಜನಾರ್ದನ' ಎಂದು ಹೆಸರಿಡಲಾಗಿದೆ. ರವಿ ಕಿರಣ್ ಕೋಲಾ ಅವರ ಆ್ಯಕ್ಷನ್ ಕಟ್ನಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ವಿಜಯ್ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆಯನ್ನು ಮೂಡಿಸುತ್ತಿದೆ.
ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಮತ್ತು ಅವರ ಪತ್ನಿಯನ್ನು ಅವರ ನಿವಾಸದಲ್ಲಿ ಭೇಟಿಯಾದರು. ಅವರೊಂದಿಗೆ ಕ್ರೀಡೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಂವಾದ ನಡೆಸಿದ್ದೇನೆ ಎಂದು ಮೋದಿ ಹೇಳಿದರು.ಪ್ರಧಾನಮಂತ್ರಿಯವರು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ಬರೆದಿದ್ದಾರೆ, "ನೀರಜ್ ಚೋಪ್ರಾ ಮತ್ತು ಅವರ ಪತ್ನಿ ಹಿಮಾನಿ ಮೋರ್ ಅವರನ್ನು ಇಂದು ಮುಂಜಾನೆ 7, ಲೋಕ ಕಲ್ಯಾಣ ಮಾರ್ಗದಲ್ಲಿ ಭೇಟಿಯಾದರು. ನಾವು ಕ್ರೀಡೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಉತ್ತಮ ಸಂವಾದ ನಡೆಸಿದ್ದೇವೆ ಎಂದು ಬರೆದುಕೊಂಡಿದ್ದಾರೆ.
ಬೆಂಗಳೂರು: ಖ್ಯಾತ ಹಿಂದಿ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ವಿನೋದ್ ಕುಮಾರ್ ಶುಕ್ಲಾ(88) ಇಂದು ರಾಯ್ಪುರದಲ್ಲಿ ಮಂಗಳವಾರ ನಿಧನರಾದರು.ಹೆಸರಾಂತ ಹಿಂದಿ ಬರಹಗಾರ, ಕವಿ ಮತ್ತು ಕಾದಂಬರಿಕಾರ ಶುಕ್ಲಾ ಅವರು ಛತ್ತೀಸ್ಗಢದಿಂದ ಈ ಪ್ರಶಸ್ತಿಯನ್ನು ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ.ಶುಕ್ಲಾ ಅವರು ಸಂಜೆ 4:58 ಕ್ಕೆ ನಿಧನರಾದರೆಂದು ಏಮ್ಸ್ ರಾಯ್ಪುರದ ಪಿಆರ್ಒ ಲಕ್ಷ್ಮೀಕಾಂತ್ ಚೌಧರಿ ಅವರು ದೃಢಪಡಿಸಿದರು.
ಬೆಂಗಳೂರು: ಬೆಂಗಳೂರು ಮತ್ತು ಮಂಗಳೂರು ನಡುವೆ ಕೆಲ ರೈಲುಗಳು ಸಂಚರಿಸುತ್ತಿದ್ದು, ಆದರೂ ಬಸ್ಗಳಲ್ಲಿ ವಾರಾಂತ್ಯದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಿರುತ್ತದೆ. ಈ ಎರಡು ನಗರಗಳ ಮಧ್ಯೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಆರಂಭಿಸುವ ಜನರ ಬೇಡಿಕೆಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ದನಿಗೂಡಿಸಿದ್ದಾರೆ. ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಬೆಂಗಳೂರು ನಗರದಿಂದ ಹಾಸನ- ಮಂಗಳೂರು ಜಂಕ್ಷನ್- ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್ವರೆಗೆ ಅತಿವೇಗದ ವಂದೇ ಭಾರತ್ ರೈಲು ಸೇವೆ ಆರಂಭಿಸುವಂತೆ ಎಚ್.ಡಿ. ಕುಮಾರಸ್ವಾಮಿ ಅವರು ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಪತ್ರದಲ್ಲಿ ಕೋರಿದ್ದಾರೆ.
ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆನ್ನಲ್ಲೇ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ಕ್ಕೆ ರಾಜ್ಯಪಾಲರು ಯಾವುದೇ ಕಾರಣಕ್ಕೂ ಅಂಕಿತ ಹಾಕಬಾರದೆಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮನವಿ ಮಾಡಿದರು.ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂ ನಾಯಕರನ್ನು, ಹಿಂದೂ ಸಂಘಟನೆಗಳನ್ನು ಜೈಲಿಗೆ ಕಳಿಸುವ ವ್ಯವಸ್ಥಿತ ಕಾರಣಕ್ಕಾಗಿ ಈ ಮಸೂದೆ ರೂಪಿಸಿದೆ ಎಂದು ಹೇಳಿದರು.
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಯ್ದಿರಿಸಿದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಕೋರಿ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ್ದರು.ಕೊಲೆ ಪ್ರಕರಣ ದಾಖಲಾಗಿ ಐದು ತಿಂಗಳು 10 ದಿನ ಆಗಿದೆ. 18 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಏಳರಿಂದ ಎಂಟು ಆರೋಪಿಗಳು ಕೊಲೆ ಸಂದರ್ಭದಲ್ಲಿ ಅಪರಿಚಿತರರು ಇದ್ದಾರೆ. ಆದರೆ, ಬಸವರಾಜ್ ಅವರನ್ನ ಎ-5 ಎಂದು
ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಇದೀಗ ತೀವ್ರ ಸ್ವರೂಪಕ್ಕೆ ತಿರುಗಿದ್ದು, ಗುಂಪೊಂದು ಹಿಂದೂಗಳ ಸೇರಿದ ಮನೆಗೆ ಬೆಂಕಿ ಹಚ್ಚಿದ ಬಗ್ಗೆ ವರದಿಯಾಗಿದೆ. ಇನ್ನೂ ಮನೆಯಲ್ಲಿದ್ದವರು ಕಾಂಪೌಂಡ್ ಜಿಗಿದು ತಮ್ಮ ಜೀವವನ್ನು ಉಳಿಸಿಕೊಂಡಿದ್ದಾರೆ. ದುರಾದೃಷ್ಟವಶಾತ್ ಮನೆಯಲ್ಲಿದ್ದ ಸಾಕು ಪ್ರಾಣಿಗಳು ಮೃತಪಟ್ಟಿದೆ. ಇನ್ನೂ ಈ ಪ್ರದೇಶದಲ್ಲಿ ಹಿಂದೂಗಳನ್ನು ಬೆದರಿಸುವ ಬ್ಯಾನರ್ ಕೂಡಾ ಪತ್ತೆಯಾಗಿದ್ದು, ಇದೂ ಭಾರೀ ಆತಂಕಕ್ಕೆ ಕಾರಣವಾಗಿದೆ.
ರಾಜ ಗಾಂಭೀರ್ಯದಲ್ಲಿ ಸಿಂಹವೊಂದು ಜನರು ಹೋಗುತ್ತಿದ್ದ ಪ್ರದೇಶಕ್ಕೆ ಎಂಟ್ರಿ ಕೊಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ಇದು ಗುಜರಾತ್ನ ಗುಜರಾತ್ನ ಭಾವನಗರ ಜಿಲ್ಲೆಯ ಪಾಲಿಟಾನಾ ನಗರದ ಸಮೀಪವಿರುವ ಸತ್ರುಂಜಯ ಬೆಟ್ಟದಲ್ಲಿ ಸೆರೆ ಹಿಡಿಯಲಾಗಿದೆ ಎನ್ನಲಾಗಿದೆ.ಭಾರತೀಯ ಅರಣ್ಯ ಸೇವೆಯ ನಿವೃತ್ತ ಅಧಿಕಾರಿಯೊಬ್ಬರು ಹಂಚಿಕೊಂಡ ವಿಡಿಯೋವು ಗುಜರಾತ್ನಲ್ಲಿ ಸಾರ್ವಜನಿಕ ಹಾದಿಯಲ್ಲಿ ಸಿಂಹವು ಆಕಸ್ಮಿಕವಾಗಿ ನಡೆದುಕೊಂಡು ಹೋಗುವುದನ್ನು ತೋರಿಸುತ್ತದೆ.
ಬೆಂಗಳೂರು: ಭಾರತ ಹಿಂದೂ ರಾಷ್ಟ್ರ ಎನ್ನಲು ಯಾವುದೇ ಸಂವಿಧಾನದಲ್ಲಿ ಉಲ್ಲೇಖವಾಗುವ ಅಗತ್ಯವಿಲ್ಲ ಎಂಬ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಇಂದು ಕರ್ನಾಟಕ ಭವನದಲ್ಲಿ ಗ್ರಾಮೀಣ ಉದ್ಯೋಗ ಖಾತ್ರ ಯೋಜನೆ ಬಗ್ಗೆ ಸಮಾಲೋಚನಾ ಸಭೆಯಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಹಿಂದೂ ಧರ್ಮದ ರಕ್ಷಕನಾಗಲು ಆರ್ ಎಸ್ಎಸ್ ಗೆ ಅಧಿಕಾರ ಕೊಟ್ಟಿದ್ದು ಯಾರು ಎಂದು ಪ್ರಶ್ನೆ ಮಾಡಿದ್ದಾರೆ. ‘ನಮ್ಮ ದೇಶ ಸಂವಿಧಾನದ ಮೇಲೆ ಕಾರ್ಯನಿರ್ವಹಿಸುತ್ತಿದೆ ಹೊರತು ಯಾವುದೇ ಧರ್ಮಗ್ರಂಥದ ಆಧಾರದಲ್ಲಿ ಅಲ್ಲ. ಬಿಜೆಪಿ, ಕಾಂಗ್ರೆಸ್, ಆರ್ ಎಸ್ಎಸ್ ಗೂ ಅನ್ವಯಿಸುತ್ತದೆ. ಆರ್ ಎಸ್ಎಸ್ ಸಂವಿಧಾನೇತರ ಸಂಸ್ಥೆಯಲ್ಲ’ ಎಂದಿದ್ದಾರೆ.
ಬೆಂಗಳೂರು: ವಿಜಯ್ ಹಜಾರೆ ಟ್ರೋಫಿಯಲ್ಲಿ ಡೆಲ್ಲಿ ಪರ ಕಣಕ್ಕಿಳಿಯಲಿರುವ ವಿರಾಟ್ ಕೊಹ್ಲಿ ನಾಳೆ ಬೆಂಗಳೂರಿನಲ್ಲಿ ಪಂದ್ಯವಾಡಲಿದ್ದಾರೆ. ಆದರೆ ನೋಡುವ ಅವಕಾಶ ಫ್ಯಾನ್ಸ್ ಗಿರಲ್ಲ. ವಿಜಯ್ ಹಜಾರೆ ಟ್ರೋಫಿಯಲ್ಲಿ ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯದಲ್ಲಿ ದೆಹಲಿ ಮತ್ತು ಆಂಧ್ರಪ್ರದೇಶ ಮುಖಾಮುಖಿಯಾಗಲಿದೆ. ದೆಹಲಿ ತಂಡಕ್ಕೆ ರಿಷಭ್ ಪಂತ್ ನಾಯಕರಾಗಿದ್ದರೆ ಕೊಹ್ಲಿ ಪ್ರಮುಖ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದಾರೆ. ವಿರಾಟ್ ಕೊಹ್ಲಿ ಬೆಂಗಳೂರಿನಲ್ಲಿ ಆಡಲಿದ್ದಾರೆ ಎಂದು ತಿಳಿದೇ ಸಾಕಷ್ಟು ಫ್ಯಾನ್ಸ್ ಮೈದಾನಕ್ಕೆ ಬಂದು ಪಂದ್ಯ ವೀಕ್ಷಿಸಬಹುದು ಎಂದು ಅಂದುಕೊಂಡಿದ್ದರು.
ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಕ್ಕೆ ಅನುಮತಿ ಇಲ್ಲದಿರುವ ಬಗ್ಗೆ ಪರಿಶೀಲಿಸಲು ಗೃಹ ಸಚಿವರು ಸಮಿತಿಯನ್ನು ರಚಿಸಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತಿಳಿಸಿದ್ದಾರೆ. ಗೃಹ ಸಚಿವರಿಂದ ಸಮಿತಿ ರಚನೆಯಾಗಿದ್ದು, ಅದನ್ನು ಪರಿಶೀಲಿಸಲಾಗುವುದು. ಸಮಿತಿಯ ಶಿಫಾರಸ್ಸಿನಂತೆ ಎಲ್ಲವೂ ನಡೆಯಲಿದೆ ಎಂದರು. ಮಂಗಳವಾರ ದಿಲ್ಲಿಗೆ ಭೇಟಿ ನೀಡಿರುವ ಕುರಿತು ಸ್ಪಷ್ಟನೆ ನೀಡಿದ ಅವರು, ಇದು ಕೇವಲ ನೀರಾವರಿ, ನಗರಾಭಿವೃದ್ಧಿಯಂತಹ
ಮಲ್ಕನಗಿರಿ: ಮಲ್ಕನಗಿರಿಯಲ್ಲಿ ಮಂಗಳವಾರ ಒಡಿಶಾ ಪೊಲೀಸರ ಮುಂದೆ ಒಟ್ಟು 22 ನಕ್ಸಲರು ಶರಣಾಗಿದ್ದು, ಎಡಪಂಥೀಯ ಉಗ್ರವಾದವನ್ನು ಹತ್ತಿಕ್ಕಲು ಮತ್ತು ಪ್ರದೇಶದಲ್ಲಿ ಶಾಶ್ವತ ಶಾಂತಿಯನ್ನು ಮರುಸ್ಥಾಪಿಸುವ ಕೇಂದ್ರ ಸರ್ಕಾರದ ಪ್ರಯತ್ನಕ್ಕೆ ಮತ್ತೊಂದು ಯಶಸ್ಸು ಸಿಕ್ಕಿದಂತಾಗಿದೆ. ಕಳೆದ ವಾರ, ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ 34 ನಕ್ಸಲರು ಶರಣಾಗಿದ್ದರು. ಶರಣಾದ ಮಾವೋವಾದಿ ಕಾರ್ಯಕರ್ತರು ಒಟ್ಟಾಗಿ 84 ಲಕ್ಷ ರೂಪಾಯಿ ಬಹುಮಾನವನ್ನು ಹೊಂದಿದ್ದರು ಎಂದು ಬಿಜಾಪುರ ಪೊಲೀಸರು ತಿಳಿಸಿದ್ದಾರೆ.
ಕಲಬುರಗಿ: ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಮುಂದಾಗಿರುವ ದ್ವೇಷ ಭಾಷಣ ತಡೆ ಮಸೂದೆಯಡಿಯಲ್ಲಿ ಯಾರನ್ನೂ ಯಾವಾಗ ಬೇಕಾದರೂ ಒಳಗೆ ಹಾಕಬಹುದಾದಂತಹ ಕಾನೂನು ಇದಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಟೀಕೆ ಮಾಡಿದರು. ಈ ವಿಚಾರವಾಗಿ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಥಿಕವಾಗಿ ದಿವಾಳಿಯರುವ ಕಾಂಗ್ರೆಸ್ ಸರ್ಕಾರ, ಎಲ್ಲ ರಂಗದಲ್ಲೂ ವಿಫಲವಾಗಿದೆ. ಹಳ್ಳಿಯಿಂದ ವಿಧಾನಸೌಧದ ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ. ಈಗಾಗಲೆ ಬಿಎನ್ಎಸ್ ಕಾಯ್ದಯಲ್ಲಿ ಈ ವಿಚಾರವಿದೆ. ಹಾಗಿದ್ದಾಗ ಈ ವಿಶೇಷ ಕಾನೂನು ತರುವಂತಹ ಅಗತ್ಯ ಏನಿದೆ ಎಂದು ಪ್ರಶ್ನೆ ಮಾಡಿದರು.
ಹಾಸನ: ಚಾಕಲೇಟ್ ನೀಡಿ, ಅಪ್ರಾಪ್ತ ಬಾಲಕಿ ಜತೆ ಸಲಿಗೆ ಬೆಳೆಸಿ ಆಕೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಇದೀಗ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಹಾಸನ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಶಾಲಾ ಬಸ್ ಚಾಲಕನಾದ ಆರೋಪಿ ರಂಜಿತ್ ಎಂಬಾತ ಅಪ್ರಾಪ್ತ ವಯಸ್ಸಿನ ಬಾಲಕಿಗೆ ನಿತ್ಯ ಚಾಕೋಲೆಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಸದ್ಯ ಶಂಕಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿಯು ಖಾಸಗಿ ಶಾಲೆಯೊಂದರ 10ನೇ
ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರ, ಭಾರತದ ಸಂವಿಧಾನವನ್ನುನಿರ್ಮೂಲನೆ ಮಾಡಲು ಯತ್ನಿಸುತ್ತಿದೆಯೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಕಳೆದ ವಾರ ಜರ್ಮನಿಯ ಬರ್ಲಿನ್ನಲ್ಲಿ ರಾಹುಲ್ ಈ ಕುರಿತು ಭಾಷಣ ಮಾಡಿರುವುದನ್ನು ಕಾಂಗ್ರೆಸ್ ಪಕ್ಷ ವಿಡಿಯೋ ಹಂಚಿಕೊಂಡಿದೆ. 'ದೇಶದ ಸಾಂಸ್ಥಿಕ ಸಂಸ್ಥೆಗಳ ಮೇಲೆ ಬಿಜೆಪಿ ಪೂರ್ಣ ಪ್ರಮಾಣದ ದಾಳಿಯನ್ನು ನಡೆಸುತ್ತಿದ್ದು, ಸಂವಿಧಾನದ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ' ಎಂದು ರಾಹುಲ್ ಹೇಳಿದ್ದಾರೆ.
ನವದೆಹಲಿ: ಪ್ರಿಯಾಂಕ ಗಾಂಧಿ ವಾದ್ರಾ ಪ್ರಧಾನಿಯಾಗಿದ್ದಿದ್ದರೆ ಇಷ್ಟೊತ್ತಿಗೆ ಬಾಂಗ್ಲಾದೇಶಕ್ಕೆ ಮುಟ್ಟಿಕೊಳ್ಳುವಂತಹ ಪಾಠ ಕಲಿಸುತ್ತಿದ್ದರು ಎಂದು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂರ್ ಹೊಗಳಿದ್ದಾರೆ. ಪ್ಯಾಲೆಸ್ತೀನ್ ಬಗ್ಗೆ ಧ್ವನಿಯೆತ್ತುವ ಪ್ರಿಯಾಂಕ ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಮಾತನಾಡಲ್ಲ ಎಂದು ಬಿಜೆಪಿ ಟೀಕಿಸುತ್ತಿರುವುದರ ಬಗ್ಗೆ ಕಾಂಗ್ರೆಸ್ ಸಂಸದ ಈ ರೀತಿ ಹೇಳಿಕೆ ನೀಡಿದ್ದಾರೆ. ‘ಕಳೆದ ಬಾರಿ ಬಾಂಗ್ಲಾದೇಶದಲ್ಲಿ ಹಿಂಸಾಚಾರವಾದಾಗಲೂ ಪ್ರಿಯಾಂಕ ಮೊದಲಿಗರಾಗಿ ಅಲ್ಲಿನ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಪ್ರಿಯಾಂಕರನ್ನು ಪ್ರಧಾನಿ ಮಾಡಿ.
ಬೆಂಗಳೂರು: ಬಹುಭಾಷಾ ತಾರೆ ಪ್ರಕಾಶ್ರಾಜ್ ಅವರನ್ನು ಬೆಂಗಳೂರಿನಲ್ಲಿ ನಡೆಯುವ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ರಾಜ್ಯ ಸರ್ಕಾರ ಆಯ್ಕೆ ಮಾಡಲಾಗಿದೆ.ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜ.29 ರಿಂದ ಫೆ.6ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಉದ್ಘಾಟನೆಯಾಗಲಿದೆ. ಕಾರ್ಯಕ್ರಮಕ್ಕೆ ತಾನೇ ಚಾಲನೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಸಮಿತಿ ನಿರ್ಧರಿಸಿದಂತೆ ಪ್ರಕಾಶ್ ರಾಜ್ ಅವರನ್ನು ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ಚಲನಚಿತ್ರೋತ್ಸವದಲ್ಲಿ 60 ದೇಶಗಳ 200 ಚಲನಚಿತ್ರಗಳು ಪ್ರದರ್ಶನ ಆಗಲಿದೆ. 400 ಪ್ರದರ್ಶನಗಳು ಇರಲಿವೆ. ಈ ವರ್ಷ ಆಸ್ಕರ್ ಪ್ರಶಸ್ತಿಗಳಿಗೆ ಶಾರ್ಟ್ ಲಿಸ್ಟ್ ಆಗಿರೋ ಚಿತ್ರಗಳು ಪ್ರದರ್ಶನ ಆಗಲಿವೆ ಎಂದು ಮಾಹಿತಿ ನೀಡಿದರು.
ಬೆಂಗಳೂರು: ಕಿಚ್ಚ ಸುದೀಪ್ ಮತ್ತು ದರ್ಶನ್ ಫ್ಯಾನ್ಸ್ ನಡುವೆ ನಡೆಯುತ್ತಿರುವ ವಾರ್ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಚಲನಚಿತ್ರ ಅಕಾಡಮಿ ಅಧ್ಯಕ್ಷರಾಗಿರುವ ನಟ ಸಾಧು ಕೋಕಿಲ ಗರಂ ಆಗಿದ್ದಾರೆ. ಇಂದು ವಿಧಾನಸೌಧಕ್ಕೆ ಭೇಟಿ ನೀಡಿದ ಸಾಧುಕೋಕಿಲಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ತಯಾರಿ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಮಾಧ್ಯಮಗಳು ಅವರನ್ನು ದರ್ಶನ್ ಮತ್ತು ಸುದೀಪ್ ಫ್ಯಾನ್ಸ್ ನಡುವೆ ನಡೆಯುತ್ತಿರುವ ಕಲಹದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಇದರಿಂದ ಗರಂ ಆದ ಅವರು ‘ನಾನು ವಿಧಾನಸೌಧಕ್ಕೆ ಬಂದಿದ್ದು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಬಗ್ಗೆ ಚರ್ಚೆ ನಡೆಸಲು.
ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಗಂಗವಾಡಿ ಗ್ರಾಮದ ಹೊರವಲಯದಲ್ಲಿ ಚಿರತೆ ಸೆರೆಗೆ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿನಲ್ಲಿ ವ್ಯಕ್ತಿಯೊಬ್ಬರು ಸಿಲುಕಿಕೊಂಡ ಘಟನೆ ನಡೆದಿದೆ.ಈ ಭಾಗದಲ್ಲಿ ಚಿರತೆ ಕಾಟ ಹೆಚ್ಚಿದೆ. ಹೀಗಾಗಿ, ಚಿರತೆಯ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟಿದ್ದರು. ಕಿಟ್ಟಿ ಎಂಬ ವ್ಯಕ್ತಿ ಕುತೂಹಲದಿಂದ ಚಿರತೆ ಹಿಡಿಯಲು ಇಟ್ಟಿದ್ದ ಬೋನಿನ ಒಳಗೆ ತೆರಳಿದ್ದಾಗ, ಆಕಸ್ಮಿಕವಾಗಿ ಬೋನಿನ ಗೇಟ್ ಲಾಕ್ ಆಗಿ ಅವರು ಒಳಗೇ ಸಿಲುಕಿಕೊಂಡಿದ್ದಾರೆ.ಬೋನಿನೊಳಗೆ ಕಾಲಿಟ್ಟ ಕೂಡಲೇ ಗೇಟ್ ಮುಚ್ಚಿಕೊಂಡ ಪರಿಣಾಮ, ಕಿಟ್ಟಿ ಸುಮಾರು ಮೂರು ಗಂಟೆಗಳ ಕಾಲ ಒಳಗೇ ಒದ್ದಾಡಿದ್ದಾರೆ. ಮೊಬೈಲ್ ಸಹ ತೆಗೆದುಕೊಂಡು ಹೋಗದ ಕಾರಣ ಕಾಲ್ ಮಾಡಿ ಯಾರಿಗೂ ತಿಳಿಸುವ ಸ್ಥಿತಿಯಲ್ಲಿ ಅವರಿರಲಿಲ್ಲ. ಸಾಕಷ್ಟು ಬೊಬ್ಬೆ ಹಾಕಿದ್ದಾರೆ.
ಬೆಂಗಳೂರು: ಚಿನ್ನಸ್ವಾಮಿ ಮೈದಾನದಲ್ಲಿ ನಾಳೆಯಿಂದ ನಡೆಯಲಿರುವ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಆಡುವುದನ್ನು ನೋಡಬಹುದು ಎಂದು ಕಾದಿದ್ದವರಿಗೆ ನಿರಾಸೆ ಎದುರಾಗಿದೆ. ಚಿನ್ನಸ್ವಾಮಿ ಮೈದಾನದಲ್ಲಿ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ ಬಳಿಕ ಯಾವುದೇ ಟೂರ್ನಿ ನಡೆದಿರಲಿಲ್ಲ. ಆದರೆ ಈಗ ವಿಜಯ್ ಹಜಾರೆ ಟ್ರೋಫಿಯಲ್ಲಿ ಡೆಲ್ಲಿ ಮತ್ತು ಆಂಧ್ರಪ್ರದೇಶ ತಂಡಗಳ ಪಂದ್ಯ ನಾಳೆಗೆ ಈ ಮೈದಾನದಲ್ಲಿ ನಿಗದಿಯಾಗಿತ್ತು.ಈ ಪಂದ್ಯದಲ್ಲಿ ಡೆಲ್ಲಿ ಪರ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರಿಷಭ್ ಪಂತ್ ಆಡಬೇಕಿತ್ತು.
ಬೆಂಗಳೂರು: ಕರ್ನಾಟಕ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಅನ್ನು ಯಾವುದೇ ಕಾರಣಕ್ಕೆ ಅಂಗೀಕರಿಸದಂತೆ ಬಿಜೆಪಿ ವತಿಯಿಂದ ನಾಡಿದ್ದು ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಅವರು ತಿಳಿಸಿದ್ದಾರೆ.ನಗರದಲ್ಲಿ ಇಂದು ಕೆ.ಜಿ. ರಸ್ತೆ ಬಳಿ ಇರುವ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ನಾಡಿದ್ದು ಮಾನ್ಯ ರಾಜ್ಯಪಾಲರಿಗೆ ಮನವಿ ಕೊಡಲಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರು ನೇತೃತ್ವ ವಹಿಸುವರು.
ಬೆಂಗಳೂರು: ಕಾಂಗ್ರೆಸ್ ನಾಯಕರು ನಮ್ಮ ನಡುವೆ ಗೊಂದಲ ಇಲ್ಲ ಎಂದು ಪದೇ ಪದೇ ಹೇಳುತ್ತಿರುವುದನ್ನು ನೋಡಿದರೇ ಯಾಕೋ ಅನುಮಾನವಾಗುತ್ತಿದೆ ಎಂದು ಬಿಜೆಪಿ ಶಾಸಕ ಸಿಟಿ ರವಿ ವ್ಯಂಗ್ಯ ಮಾಡಿದ್ದಾರೆ. ರಾಜ್ಯದಲ್ಲಿ ಈಗ ಮತ್ತೆ ಸಿದ್ದು-ಡಿಕೆಶಿ ಬಣದ ನಡುವೆ ನಾಯಕತ್ವ ವಿಚಾರ ಸದ್ದು ಮಾಡುತ್ತಿದೆ. ಇದರ ನಡುವೆಯೂ ನಮ್ಮಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹೇಳುತ್ತಿದ್ದಾರೆ. ಇದರ ಬಗ್ಗೆ ಸಿಟಿ ರವಿ ವ್ಯಂಗ್ಯ ಮಾಡಿದ್ದಾರೆ. ‘ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ ಎಂಬ ಮಾತಿದೆ.
ಬೆಂಗಳೂರು: ಅಡಿಕೆ ಬೆಲೆ ಒಂದು ವಾರದಿಂದ ಯಥಾಸ್ಥಿತಿಯಲ್ಲಿತ್ತು. ಇಂದೂ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದರೆ ಕಾಳುಮೆಣಸು ಕೊಂಚ ಏರಿಕೆಯಾಗಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಅಡಿಕೆ ಬೆಲೆ ಏರಿಕೆಯೂ ಅಲ್ಲ ಇಳಿಕೆಯೂ ಇಲ್ಲ ಎನ್ನುವ ಸ್ಥಿತಿಯಲ್ಲಿತ್ತು. ಒಂದೆಡೆ ಬೆಳೆ ಕಡಿಮೆ, ಇನ್ನೊಂದೆಡೆ ಬೆಲೆ ಏರಿಕೆಯಾಗದೇ ಇರುವುದು ರೈತರ ಚಿಂತೆಗೆ ಕಾರಣವಾಗಿದೆ. ಅಡಿಕೆ ಬೆಲೆ ಇಳಿಕೆಯಾಗುತ್ತಿದೆಯೇ ಹೊರತು ಏರಿಕೆಯಾಗುತ್ತಿಲ್ಲ ಎಂಬ ಚಿಂತೆ ಬೆಳೆಗಾರರದ್ದು. ಇಂದು ಹೊಸ ಅಡಿಕೆ ಬೆಲೆ 415 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 520 ರೂ. ಗಳಷ್ಟಿದೆ. ಆದರೆ ಡಬಲ್ ಚೋಲ್ ಬೆಲೆ ಯಥಾಸ್ಥಿತಿಯಲ್ಲಿದ್ದು 530 ರೂ.ಗಳಷ್ಟಾಗಿದೆ.
ಬೆಂಗಳೂರು: ಹೊಸ ವರ್ಷದವರೆಗೂ ಇನ್ನೀಗ ಟೀಂ ಇಂಡಿಯಾ ಪುರುಷರ ತಂಡದ ಕ್ರಿಕೆಟ್ ಪಂದ್ಯಾವಳಿಯಿಲ್ಲ. ಆದರೆ ವರ್ಷಾಂತ್ಯಕ್ಕೆ ವಿರಾಟ್ ಕೊಹ್ಲಿ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲೇ ಪಂದ್ಯವಾಡಲಿದ್ದಾರೆ. ಇದರ ಡೀಟೈಲ್ಸ್ ಇಲ್ಲಿದೆ. ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಈ ಬಾರಿ ಟೀಂ ಇಂಡಿಯಾ ಪ್ರತಿನಿಧಿಸುವ ಬಹುತೇಕ ಆಟಗಾರರೂ ತಮ್ಮ ತಮ್ಮ ರಾಜ್ಯದ ಪರ ಬ್ಯಾಟಿಂಗ್ ಮಾಡಲಿದ್ದಾರೆ. ಈ ಪೈಕಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ರಿಷಭ್ ಪಂತ್ ಅವರಂತಹ ಸ್ಟಾರ್ ಆಟಗಾರರೂ ಇದ್ದಾರೆ.
ದುಬೈ: ಭಾರತ ಕ್ರಿಕೆಟ್ ತಂಡದ ಮೇಲೆ ಮತ್ತೆ ಕೆಂಡ ಕಾರಲು ಪಿಸಿಬಿ ಅಧ್ಯಕ್ಷರೂ ಆಗಿರುವ ಎಸಿಸಿ ಮುಖಸ್ಥ ಮೊಹ್ಸಿನ್ ನಖ್ವಿ ಐಸಿಸಿಗೆ ದೂರು ನೀಡಲು ಮುಂದಾಗಿದೆ. ಮೊನ್ನೆಯಷ್ಟೇ ಅಂಡರ್ 19 ಏಷ್ಯಾ ಕಪ್ ಫೈನಲ್ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿತ್ತು. ಕೊನೆಗೆ ಪಂದ್ಯವನ್ನು ಪಾಕಿಸ್ತಾನ ಗೆದ್ದುಕೊಂಡಿತು. ಈ ಪಂದ್ಯದಲ್ಲಿ ಭಾರತೀಯ ಆಟಗಾರ ವೈಭವ್ ಸೂರ್ಯವಂಶಿ ವಿಕೆಟ್ ಕಿತ್ತ ಬಳಿಕ ಪಾಕಿಸ್ತಾನ ಬೌಲರ್ ಅವರತ್ತ ನೋಡಿ ಅಗ್ರೆಸಿವ್ ಆಗಿ ಸೆಲೆಬ್ರೇಷನ್ ಮಾಡಿದ್ದಾರೆ. ಇದಕ್ಕೆ ವೈಭವ್ ನೀನೆಂದಿದ್ದರೂ ನನ್ನ ಕಾಲಿನ ಪಾದದ ಕೆಳಗೇ ಇರಲು ಲಾಯಕ್ಕು ಎಂದು ಸನ್ನೆ ಮಾಡಿ ತಿರುಗೇಟು ಕೊಟ್ಟಿದ್ದರು.
ದಕ್ಷಿಣ ಕನ್ನಡ: ಜಿಲ್ಲೆಯ ಪ್ರಸಿದ್ಧ ದೇವಾಲಯ ಪುತ್ತೂರು ಮಹಾಲಿಂಗೇಶ್ವರ ದೇವಾಲಯ ಬಳಿಕ ಡೆವಿಲ್ ಸಿನಿಮಾದ ರಚನಾ ರೈ ತೊಡೆ ತೋರಿಸುವ ಪೋಸ್ಟರ್ ಹಾಕಿದ್ದಕ್ಕೆ ಸ್ಥಳೀಯರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ದರ್ಶನ್ ತೂಗುದೀಪ ನಾಯಕರಾಗಿರುವ ಡೆವಿಲ್ ಸಿನಿಮಾಗೆ ರಚನಾ ರೈ ನಾಯಕಿ. ಈಕೆ ಮೂಲತಃ ದಕ್ಷಿಣ ಕನ್ನಡದವರು. ಹೀಗಾಗಿ ತಮ್ಮ ಮನೆ ಮಗಳ ಬಿಗ್ ಸಿನಿಮಾ ಬಿಡುಗಡೆಯಾದ ಖುಷಿಯಲ್ಲಿ ಕುಟುಂಬಸ್ಥರು ತಮ್ಮೂರಿನಲ್ಲಿ ಬ್ಯಾನರ್ ಹಾಕಿ ಸಂತೋಷ ಪಟ್ಟಿದ್ದಾರೆ. ಆದರೆ ಬ್ಯಾನರ್ ಹಾಕಿದ ಜಾಗ ಮಾತ್ರ ದೇವಾಲಯದ ಸಮೀಪವಾಗಿದೆ.
ಬೆಂಗಳೂರು: ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಲು ಹೇಳಿದ್ದಕ್ಕೆ ಧ್ವೇಷ ಭಾಷಣ ಎಂದು ಕೇಸ್ ಹಾಕ್ತೀರಾ? ಇದಕ್ಕೆ ಕೇಸ್ ಆದ್ರೂ ಹೇಗೆ ಹಾಕ್ತೀರಿ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ವಕೀಲರನ್ನು ತರಾಟೆಗೆ ತೆಗೆದುಕೊಂಡ ವಿಡಿಯೋ ಈಗ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ನ್ಯಾಯಾಧೀಶರು ವಕೀಲರನ್ನು ಧ್ವೇಷ ಭಾಷಣ ವಿರೋಧಿ ನಿಯಮದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಭಾರತ್ ಮಾತಾ ಕೀ ಜೈ ಎಂದರೆ ತಪ್ಪಾಗುತ್ತಾ? ಇದಕ್ಕೆ ಕಂಪ್ಲೇಂಟ್ ಆದ್ರೂ ಹೇಗೆ ರಿಜಿಸ್ಟರ್ ಮಾಡಿದ್ರಿ? ಎಂದು ಪ್ರಶ್ನೆ ಮಾಡುತ್ತಾರೆ.
ಬೆಂಗಳೂರು: ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಡಿಕೆ ಶಿವಕುಮಾರ್ ಈಗ ಹೊಸ ರಣತಂತ್ರ ಹೆಣೆಯುತ್ತಿದ್ದಾರೆ. ಅವರ ಈ ಹೊಸ ವೈಖರಿ ಸಿದ್ದು ಬಣದ ನಿದ್ದೆಗೆಡಿಸೋದು ಖಂಡಿತಾ. ಸಿಎಂ ಪಟ್ಟಕ್ಕಾಗಿ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹಾಕಿದ್ದಾಗಿದೆ. ತಮ್ಮ ಆಪ್ತ ಬಣದ ಮೂಲಕ ಹೇಳಿಸಿದ್ದಾರೆ. ಆಪ್ತರ ಜೊತೆ ಸಭೆ ನಡೆಸಿ ಒತ್ತಡ ತಂದಿದ್ದಾರೆ. ಆದರೆ ಯಾವುದಕ್ಕೂ ಹೈಕಮಾಂಡ್ ಬಗ್ಗುತ್ತಿಲ್ಲ. ಇದಕ್ಕೆ ಮುಖ್ಯ ಕಾರಣ ಸಿದ್ದರಾಮಯ್ಯ ಅವರನ್ನು ಎದುರು ಹಾಕಿಕೊಂಡರೆ ಸರ್ಕಾರ ಉಳಿಯಲ್ಲ ಎನ್ನುವ ಭಯ ಹೈಕಮಾಂಡ್ ಗಿದೆ. ಇದು ಡಿಕೆ ಶಿವಕುಮಾರ್ ಗೂ ಚೆನ್ನಾಗಿಯೇ ಗೊತ್ತು.