Shorts

ಅಹಮದಾಬಾದ್‌: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಹೈ-ವೋಲ್ಟೇಜ್ ಪಂದ್ಯಕ್ಕಾಗಿ ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ. ಹಾಲಿ ಚಾಂಪಿಯನ್‌ ಭಾರತ ತಂಡವು ಟಿ20 ವಿಶ್ವಕಪ್‌ ಅನ್ನು ಉಳಿಸಿಕೊಳ್ಳಲು ಹೋರಾಟ ನಡೆಸಲಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ 253 ಗಳಿಸಿದ್ದ ಭಾರತ ಸದೃಢ ತಂಡವಾಗಿ ಫೈನಲ್‌ಗೆ ಪ್ರವೇಶಿಸಲಿದೆ. ನ್ಯೂಜಿಲೆಂಡ್ ತಂಡವು ಹಾಲಿ ರನ್ನರ್‌ ಅಪ್‌ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಪ್ರಶಸ್ತಿ ಸುತ್ತು ಪ್ರವೇಶಿಸಿದೆ.ಅಹಮದಾಬಾದ್‌ ಕ್ರೀಡಾಂಗಣದಲ್ಲಿ ಭಾರತೀಯ ಅಭಿಮಾನಿಗಳನ್ನು ಸ್ತಬ್ಧಗೊಳಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಹೇಳಿಕೆಗೆ ಭಾರತೀಯ ನಾಯಕ ಸೂರ್ಯಕುಮಾರ್ ಯಾದವ್‌ ಕೌಂಟರ್‌ ಕೊಟ್ಟಿದ್ದಾರೆ.

ಪಟ್ನಾ: ಬಿಹಾರ ರಾಜಕಾರಣದಲ್ಲಿ ಮಿಂಚಿನ ಸಂಚಲನ ನಡೆಯುತ್ತಿದೆ. ಕಳೆದ 20 ವರ್ಷಗಳಿಂದ ಮುಖ್ಯಮಂತ್ರಿಯಾಗಿದ್ದ ನಿತೀಶ್‌ ಕುಮಾರ್‌ ಅವರು ರಾಜ್ಯಸಭೆಗೆ ಪ್ರವೇಶಿಸಲು ಸಜ್ಜಾಗಿದ್ದಾರೆ. ಈ ಮಧ್ಯೆ ಅವರ ಪುತ್ರ ಜೆಡಿಯು ಪಕ್ಷ ಸೇರುವ ಮೂಲಕ ಹೊಸ ಅಲೆಯನ್ನು ಸೃಷ್ಟಿಸಿದ್ದಾರೆ. ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಇಂದು ಜನತಾದಳ ಯುನೈಟೆಡ್ ಸೇರುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ್ದಾರೆ. ಪಾಟ್ನಾದ ಜೆಡಿಯು ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿಶಾಂತ್ ಸದಸ್ಯತ್ವವನ್ನು ಸ್ವೀಕರಿಸಿದರು. ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಸಂಜಯ್ ಕುಮಾರ್ ಝಾ ಮತ್ತು ಕೇಂದ್ರ ಸಚಿವ ಲಲ್ಲನ್ ಸಿಂಗ್ ಸದಸ್ಯತ್ವವನ್ನು ನೀಡಿದರು. ಈ ಮೂಲಕ ನಿತೀಶ್‌ ಕುಮಾರ್‌ ಪುತ್ರನಿಗೆ ಪಟ್ಟಾಭಿಷೇಕ ಮಾಡಲು ವೇದಿಕೆ ಸಜ್ಜು ಮಾಡಿದ್ದಾರೆ.

ಅಹಮದಾಬಾದ್‌: ಟಿ20 ವಿಶ್ವಕಪ್‌ ಫೈನಲ್‌ ಹಣಾಹಣಿಗೆ ಕ್ಷಣಗಣನೆ ಆರಂಭವಾಗಲಿದೆ. ಇಂದು ಸಂಜೆ 7 ಗಂಟೆಗೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹೈವೋಲ್ಟೇಜ್‌ ಪಂದ್ಯ ನಡೆಯಲಿದೆ. ಈ ಮಧ್ಯೆ ಭಾರತೀಯರ ನೋಟ ಅಭಿಷೇಕ್‌ ಶರ್ಮಾ ಮೇಲಿದೆ. ವಿಶ್ವದ ನಂಬರ್‌ ಒನ್‌ ಬ್ಯಾಟರ್‌ ಆಗಿದ್ದ ಅಭಿಷೇಕ್‌ ಶರ್ಮಾ ಅವರು ಈ ಪಂದ್ಯದಲ್ಲಿ ಆಡುತ್ತಾರೋ? ಇಲ್ವೋ ಎನ್ನುವುದು ಈಗ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ ಕಾರಣ ಆರಂಭಿಕ ಆಟಗಾರನಾಗಿ ಅಭಿಷೇಕ್‌ ಶರ್ಮಾ ಕಳಪೆ ಪ್ರದರ್ಶನ ನೀಡುತ್ತಿರುವುದು. ಫೈನಲ್‌ ಪಂದ್ಯಕ್ಕೆ ಟೀಂ ಇಂಡಿಯಾ ಅಭಿಷೇಕ್‌ ಶರ್ಮಾ ಜಾಗಕ್ಕೆ ರಿಂಕು ಸಿಂಗ್‌ ಅವರನ್ನು ಆಡಿಸುತ್ತಾ ಎಂಬ ಪ್ರಶ್ನೆ ಎದ್ದಿದೆ.ಟಿ20 ವಿಶ್ವಕಪ್‌ ಟೂರ್ನಿಯಲ್ಲಿ 7 ಪಂದ್ಯಗಳಲ್ಲಿ ಕೇವಲ 89 ರನ್‌ ಹೊಡೆದಿದ್ದಾರೆ. ಈ ಪೈಕಿ ಅಮೆರಿಕ, ಪಾಕಿಸ್ತಾನ, ನೆದರ್‌ಲ್ಯಾಂಡ್ಸ್‌ ವಿರುದ್ಧ ಸೊನ್ನೆಗೆ ಔಟಾದರೆ ದಕ್ಷಿಣ ಆಫ್ರಿಕಾ ವಿರುದ್ಧ 15 ರನ್‌, ವೆಸ್ಟ್‌ ಇಂಡೀಸ್‌ ವಿರುದ್ಧ 10 ರನ್‌, ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ 9 ರನ್‌ ಗಳಿಸಿ ಔಟಾಗಿದ್ದಾರೆ

ವಾಷಿಂಗ್ಟನ್: ಅಮೆರಿಕಾ ಮತ್ತು ಇರಾನ್‌ ನಡುವೆ ಸಂಘರ್ಷ ತಣ್ಣಾಗಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇದೀಗ ಇರಾನ್‌ ವಿರುದ್ಧ ಸಿಡಿದೆದ್ದಿರುವ ಅಮೆರಿಕಾ ಗಂಭೀರ ಸಂದೇಶವನ್ನು ರವಾನಿಸಿದೆ.ಅಮೆರಿಕದ ರಕ್ಷಣಾ ಇಲಾಖೆಯ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸಾಮಾಜಿಕ ಮಾಧ್ಯಮ ಪೋಸ್ಟ್‌ ಮೂಲಕ ಹೊಸ ಬೆದರಿಕೆ ಹಾಕಿದ್ದಾರೆ. ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ವಾರ್ನಿಂಗ್‌ ನೀಡಿದ್ದಾರೆ. ತಮ್ಮ ನಾಗರಿಕರ ಭದ್ರತೆಯಲ್ಲಿ ಯಾವುದೇ ರಾಜಿ ಇಲ್ಲ ಎಂದಿದ್ದಾರೆ. ಭೂಮಿಯ ಮೇಲೆ ಎಲ್ಲಿಯಾದರೂ ಅಮೆರಿಕನ್ನರನ್ನು ಕೊಂದರೆ, ಬೆದರಿಕೆ ಹಾಕಿದರೆ, ನಾವು ಕ್ಷಮೆಗೆ ಅವಕಾಶ ನೀಡದೆ ಬೇಟೆಯಾಡುತ್ತೇವೆ. ನಿಮ್ಮನ್ನು ಕೊಲ್ಲುತ್ತೇವೆಎಂದು ಹೇಳಿದ್ದಾರೆ.

ಅಹಮದಾಬಾದ್‌: ಹಾಲಿ ಚಾಂಪಿಯನ್‌ ಭಾರತ ತಂಡವು ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ಇಂದು ನ್ಯೂಜಿಲೆಂಡ್‌ ತಂಡವನ್ನು ಎದುರಿಸಲಿದೆ. ಉಭಯ ತಂಡಗಳು ಈತನಕ ಒಟ್ಟು 30 ಬಾರಿ ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಅದರ ಫಲಿತಾಂಶ ಇಲ್ಲಿದೆ. ಟಿ20 ವಿಶ್ವಕಪ್​ನ ಫೈನಲ್ ಮ್ಯಾಚ್​ಗೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವೇದಿಕೆ ಸಿದ್ಧವಾಗಿದೆ. ಅಹಮದಾಬಾದ್​ನಲ್ಲಿ ಬ್ಯಾಟಿಂಗ್​ಗೆ ಪೂರಕವಾಗಿರುವ ಪಿಚ್​ ನಿರ್ಮಿಸಿರುವುದು ಬಹಿರಂಗವಾಗಿದೆ. ಹೀಗಾಗಿ ಈ ಮ್ಯಾಚ್​ನಲ್ಲಿ ಭರ್ಜರಿ ಬ್ಯಾಟಿಂಗ್ ನಿರೀಕ್ಷಿಸಬಹುದು.ಟಿ20 ಕ್ರಿಕೆಟ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡವು ಒಟ್ಟು 30 ಬಾರಿ ಮುಖಾಮುಖಿಯಾಗಿವೆ. ಅದರಲ್ಲಿ ಭಾರತ 18 ಬಾರಿ ಜಯ ಸಾಧಿಸಿದೆ. ನ್ಯೂಜಿಲೆಂಡ್ ತಂಡವು 11 ಬಾರಿ ಗೆಲುವು ಸಾಧಿಸಿದೆ. ಒಂದು ಬಾರಿ ಪಂದ್ಯ ಟೈ ಆಗಿದೆ.

ಅಹಮದಾಬಾದ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಬ್ಲಾಕ್‌ಬಸ್ಟರ್ ಹಣಾಹಣಿಗೆ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜಾಗಿದೆ. ಈ ಮಧ್ಯೆ ಐಸಿಸಿ ಪುರುಷರ ಟಿ20 ವಿಶ್ವಕಪ್ 2026 ಫೈನಲ್ ಪಂದ್ಯದ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದ್ದಕ್ಕಾಗಿ ಇಬ್ಬರನ್ನು ಬಂಧಿಸಲಾಗಿದೆ.ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡವು ತವರು ನೆಲದಲ್ಲಿ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡವಾಗುವ ಮತ್ತು ಸತತ ಎರಡು ಬಾರಿ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಳ್ಳುವ ಮೊದಲ ತಂಡವಾಗುವ ಅವಕಾಶವನ್ನು ಹೊಂದಿದೆ.ಅಹಮದಾಬಾದ್ ನಗರ ಅಪರಾಧ ಶಾಖೆ ಅಧಿಕಾರಿಗಳು ಉಸ್ಮಾನಪುರ ಗುಜರಾತ್ ವಿದ್ಯಾಪೀಠ ಎಸ್.ಟಿ. ಬಸ್ ನಿಲ್ದಾಣದ ಬಳಿ ಬಲೆ ಬೀಸಿತು. ಅಲ್ಲಿ ಇಬ್ಬರು ವ್ಯಕ್ತಿಗಳನ್ನು ತಡೆದು ತಪಾಸಣೆ ನಡೆಸಲಾಯಿತು. ಅವರಿಂದ ಪಂದ್ಯದ ಎಂಟು ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ನವದೆಹಲಿ: ಕೆಲವೇ ತಿಂಗಳಿನಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಲಿದೆ. ಎಲ್ಲಾ ಪಕ್ಷಗಳು ಭರ್ಜರಿ ತಾಲೀಮು ನಡೆಸುತ್ತಿದೆ. ಈ ಹೊತ್ತಿನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ನರೇಂದ್ರ ಮೋದಿ ಕೆಂಡ ಕಾರಿದ್ದಾರೆ.ರಾಷ್ಟ್ರಪತಿ ದ್ರೌಪದಿ ಮುರ್ಮು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದರು. ಅವರು ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಕೊನೆಯ ಕ್ಷಣದಲ್ಲಿ ಸ್ಥಳ ಬದಲಾವಣೆ ಮಾಡಿದ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು, ರಾಜ್ಯ ಆಡಳಿತವು ಎಲ್ಲಾ ಮಿತಿಗಳನ್ನು ಮೀರಿದೆ ಎಂದು ಆರೋಪಿಸಿದರು. ರಾಷ್ಟ್ರಪತಿಗಳಿಗೆ ಮಾಡಿದ ಅವಮಾನಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ಕಿಡಿಕಾರಿದರು.

ಅಹಮದಾಬಾದ್‌: ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ 2026 ರ T20 ವಿಶ್ವಕಪ್ ಫೈನಲ್‌ ಟ್ರೋಫಿಗಾಗಿ ಮುಖಾಮುಖಿಯಾಗಲಿದೆ. ಹೈವೋಲ್ಟೇಜ್‌ ಪಂದ್ಯದ ಹಿನ್ನೆಲೆ ಕ್ರಿಕೆಟ್ ಅಭಿಮಾನಿಗಳಿಗೆ ಇಂದಿನ ಪಂದ್ಯಾಟದ ಪ್ರತಿಯೊಂದು ಕ್ಷಣವೂ ಮುಖ್ಯ. ಕ್ರಿಕೆಟ್ ಅಭಿಮಾನಿಗಳಿಗೆ ಇಂದಿನ ಪಂದ್ಯಾಟಕ್ಕೆ ಮಳೆಯ ಅಡಚಣೆಯಾಗುತ್ತದೆಯಾ ಎಂಬ ಅನುಮಾನವಿದೆ. ಆದರೆ ಅಹಮದಾಬಾದ್ ಹವಾಮಾನ ವರದಿ ಪ್ರಕಾರ ಇಂದು ಮಳೆಯ ನಿರೀಕ್ಷೆಯಿಲ್ಲ ಎಂದು ಹೇಳಿದೆ. ಅದರಂತೆ ಕ್ರಿಕೆಟ್ ಅಭಿಮಾನಿಗಳು ಸ್ಪಷ್ಟವಾದ ಆಕಾಶದಲ್ಲಿ ಅಡೆತಡೆಯಿಲ್ಲದ ಕ್ರಿಕೆಟ್ ಅನ್ನು ನಿರೀಕ್ಷಿಸಬಹುದು. ಇತ್ತೀಚಿನ ಮುನ್ಸೂಚನೆಯ ಪ್ರಕಾರ, ರಾತ್ರಿಯ ಪಂದ್ಯದ ಪರಿಸ್ಥಿತಿಗಳು ಸ್ಪಷ್ಟ ಮತ್ತು ಬೆಚ್ಚಗಿರುತ್ತದೆ, ತಾಪಮಾನವು ಸುಮಾರು 23cಗೆ ಇಳಿಯುತ್ತದೆ, ಇದು ನಿಜವಾದ ತಾಪಮಾನಕ್ಕೆ ಹತ್ತಿರದಲ್ಲಿದೆ.

ಬೆಂಗಳೂರು: ಎಲ್‌ಪಿಜಿ ದರ ಏರಿಸಿದ್ದರಿಂದ ನೆಲಕ್ಕೆ ಬಿದ್ದವನಿಗೆ ಒದ್ದ ಹಾಗೇ ಆಗಿದೆ. ಈ ಮೂಲಕ ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಪ್ರಧಾನಿ ಮೋದಿ ರಾಜೀನಾಮೆ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದರು. ಈ ವಿಚಾರದ ಸಲುವಾಗಿ ಸಿದ್ದರಾಮಯ್ಯನವರು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಎಲ್‌ಪಿಜಿ ದರ ಏರಿಕೆ ಮಧ್ಯಮ ವರ್ಗದ ಕುಟುಂಬಗಳಿಗೆ ವೆಚ್ಚ ದುಬಾರಿಯಾಗಲಿದೆ. ಈ ಏರಿಕೆ ಅನಿವಾರ್ಯ ಕ್ರಮವೇನಲ್ಲ. ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ ಮತ್ತು ಬೆಲೆ ಏರಿಕೆಯಿಂದ ತತ್ತರಿಸಿಹೋಗಿವೆ. ಈ ಸಮಯದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಿಸಿರುವುದು ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ನಮಗೆ ಯಾರ ಅಪ್ಪಣೆಯೂ ಬೇಕಿಲ್ಲ: ರಷ್ಯಾ ತೈಲ ಖರೀದಿಗೆ ಅಮೆರಿಕ ವಿನಾಯಿತಿ ಬಗ್ಗೆ ಭಾರತ ಖಡಕ್‌ ಮಾತು

ದುಬೈ: ಅಮೆರಿಕಾ ಮತ್ತು ಇರಾನ್‌ ನಡುವಿನ ಸಂಘರ್ಷ ತಣ್ಣಗಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಅಮೆರಿಕದ ಮೇಲೆ ಕೋಪಗೊಂಡಿರುವ ಇರಾನ್‌ ತಮ್ಮ ಸುತ್ತಮುತ್ತಲಿನ ದೇಶಗಳಲ್ಲಿರುವ ಅಮೆರಿಕದ ನೆಲೆಗಳ ಮೇಲೆ ದಾಳಿ ಮುಂದುವರಿಸಿದೆ. ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನಲ್ಲಿರುವ ವಿಶ್ವದ ಎರಡನೇ ಅತ್ಯಂತ ಜನನಿಬಿಡ ದುಬೈ ವಿಮಾನ ನಿಲ್ದಾಣದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ ನಡೆಸಿದೆ. ಡ್ರೋನ್‌ ದಾಳಿಯ ಬೆನ್ನಲ್ಲೇ ದುಬೈ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಇರಾನಿಗೆ ಅಮೆರಿಕದ ಮೇಲೆ ನೇರವಾಗಿ ದಾಳಿ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ನೆಲೆಗಳಿರುವ ದೇಶಗಳ ಮೇಲೆ ಇರಾನ್‌ ದಾಳಿ ನಡೆಸುತ್ತಿದೆ. ನಿಮ್ಮ ನೆಲೆಗಳನ್ನು ಬಳಸಿ ನಮ್ಮ ಮೇಲೆ ಅಮೆರಿಕ ದಾಳಿ ನಡೆಸುತ್ತಿದೆ.

ಅಹಮದಾಬಾದ್‌: ಟಿ20 ವಿಶ್ವಕಪ್‌ನಲ್ಲಿ ನಾಳೆ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳು ಮುಖಾಮುಖಿಯಾಗಲಿದೆ. ಭಾರತ ತಂಡವು ದಾಖಲೆಯ ನಾಲ್ಕನೇ ಬಾರಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಹಾಕಿದ್ದು, ಮೂರನೇ ಬಾರಿ ಪ್ರಶಸ್ತಿ ಜಯಸುವ ಉತ್ಸಾಹದಲ್ಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಈ ಪಂದ್ಯಕ್ಕೆ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪಂದ್ಯದ ಅಧಿಕಾರಿಗಳನ್ನು ದೃಢಪಡಿಸಿದೆ. ಮಾರ್ಚ್ 8ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಆನ್-ಫೀಲ್ಡ್ ಅಂಪೈರ್‌ಗಳಾಗಿ ರಿಚರ್ಡ್ ಇಲ್ಲಿಂಗ್‌ವರ್ತ್ ಮತ್ತು ಅಲೆಕ್ಸ್ ವಾರ್ಫ್ ಅವರು ಹೈ-ಆಕ್ಟೇನ್ ಸೇವೆ ಸಲ್ಲಿಸಲಿದ್ದಾರೆ.ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2024 ರ ಆವೃತ್ತಿಯ ಫೈನಲ್‌ನಲ್ಲಿ ಕ್ರಿಸ್ ಗಫಾನಿ ಅವರೊಂದಿಗೆ ಕಾರ್ಯನಿರ್ವಹಿಸಿದ್ದ ಇಲ್ಲಿಂಗ್‌ವರ್ತ್‌ಗೆ ಇದು ಸತತ ಎರಡನೇ ಟಿ20 ವಿಶ್ವಕಪ್ ಫೈನಲ್ ಆಗಿದೆ.

ಟೆಹ್ರಾನ್: ಅಮೆರಿಕಾ ಮತ್ತು ಇಸ್ರೇಲ್‌ ಮೇಲಿನ ಕೋಪಕ್ಕೆ ನೆರೆ ರಾಷ್ಟ್ರಗಳ ಮೇಲೆ ದಾಳಿ ನಡೆಸಿದ್ದ ಇರಾನ್‌ ಈಗ ಉಲ್ಟಾ ಹೊಡೆದಿದೆ. ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ನೆರೆಯ ರಾಷ್ಟ್ರಗಳ ಮುಂದೆ ಮಂಡಿಯೂರಿದ್ದಾರೆ.ಇರಾನ್- ಇಸ್ರೇಲ್, ಅಮೆರಿಕ ಸಂಘರ್ಷ ಮುಂದುವರೆದಿರುವಂತೆಯೇ ಅಚ್ಚರಿ ಬೆಳವಣಿಗೆ ನಡೆದಿದೆ. ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ನೆರೆಯ ರಾಷ್ಟ್ರಗಳಿಗೆ ಕ್ಷಮೆಯಾಚಿಸಿದ್ದಾರೆ.ತಮ್ಮ ಮೇಲಿನ ದಾಳಿ ಮತ್ತು ತಮ್ಮ ಸರ್ವೋಚ್ಛ ನಾಯಕ ಆಯತೊಲ್ಲ ಅಲಿ ಖಮೇನಿ ವಿಚಾರವಾಗಿ ಕೆಂಡಾಮಂಡಲವಾಗಿರುವ ಇರಾನ್, ಇದೀಗಅಚ್ಚರಿ ಬೆಳವಣಿಗೆಯಲ್ಲಿ ತನ್ನ ನೆರೆಹೊರೆ ರಾಷ್ಟ್ರಗಳ ಕ್ಷಮೆಕೋರಿದೆ.ನೆರೆಹೊರೆಯ ರಾಷ್ಟ್ರಗಳಿಗೆ ಸಂದೇಶ ಕಳುಹಿಸಿ, ಕ್ಷಮಿಸಿ ಎಂದು ಮಸೌದ್ ಪೆಜೆಶ್ಕಿಯಾನ್ ಹೇಳಿದ್ದು,ಆ ಮೂಲಕ ಅಮೆರಿಕ-ಇಸ್ರೇಲ್ ಜೊತೆಗಿನ ಯುದ್ಧದ ಮಧ್ಯೆ ಉದ್ವಿಗ್ನತೆಯನ್ನು ಶಮನಗೊಳಿಸಲು ಮೊದಲ ಪ್ರಮುಖ ಹೆಜ್ಜೆ ಇಟ್ಟಿದೆ.

ವಿವಾಹ, ಸಂತಾನ, ನಾಗದೋಷ ಸಮಸ್ಯೆಯಿದ್ದಲ್ಲಿ ಸುಬ್ರಹ್ಮಣ್ಯನ ಪೂಜೆ ಮಾಡುವುದು ಅವಶ್ಯಕ. ಸುಬ್ರಹ್ಮಣ್ಯನ ಅನುಗ್ರಹಕ್ಕಾಗಿ ಕಾರ್ತಿಕೇಯ ಕರಾವಲಂಬ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.ಸಿಂಗಾರ ವೇಲ ಸಕಲೇಶ್ವರ ದೀನಬಂಧೋ ।ಸಂತಾಪನಾಶನ ಸನಾತನ ಶಕ್ತಿಹಸ್ತಶ್ರೀಕಾರ್ತಿಕೇಯ ಮಮ ದೇಹಿ ಕರಾವಲಂಬಮ್ ॥ 1 ಪಂಚಾದ್ರಿವಾಸ ಸಹಜಾ ಸುರಸೈನ್ಯನಾಥಪಂಚಾಮೃತಪ್ರಿಯ ಗುಹ ಸಕಲಾಧಿವಾಸ ।ಗಂಗೇಂದು ಮೌಳಿ ತನಯ ಮಯಿಲ್ವಾಹನಸ್ಥಶ್ರೀಕಾರ್ತಿಕೇಯ ಮಮ ದೇಹಿ ಕರಾವಲಂಬಮ್ ॥ 2 ಆಪದ್ವಿನಾಶಕ ಕುಮಾರಕ ಚಾರುಮೂರ್ತೇತಾಪತ್ರಯಾಂತಕ ದಾಯಾಪರ ತಾರಕಾರೇ ।ಆರ್ತಾಽಭಯಪ್ರದ ಗುಣತ್ರಯ ಭವ್ಯರಾಶೇಶ್ರೀಕಾರ್ತಿಕೇಯ ಮಮ ದೇಹಿ ಕರಾವಲಂಬಮ್ ॥ 3 ವಲ್ಲೀಪತೇ ಸುಕೃತದಾಯಕ ಪುಣ್ಯಮೂರ್ತೇಸ್ವರ್ಲೋಕನಾಥ ಪರಿಸೇವಿತ ಶಂಭು ಸೂನೋ ।ತ್ರೈಲೋಕ್ಯನಾಯಕ ಷಡಾನನ ಭೂತಪಾದಶ್ರೀಕಾರ್ತಿಕೇಯ ಮಮ ದೇಹಿ ಕರಾವಲಂಬಮ್ ॥ 4