ಕೋಲ್ಕತ್ತಾ: ಪಶ್ಚಿಮ ಬಂಗಾಲದಲ್ಲಿ ವಕ್ಫ್ ತಿದ್ದುಪಡಿ ಬಿಲ್ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪ ತಾಳಿದೆ. ಈ ನಡುವೆ ಹಿಂದೂಗಳನ್ನು ಮನೆಯಿಂಧ ಹೊರಗೆಳೆದು ಹತ್ಯೆ ಮಾಡಲಾಗಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ. ವಕ್ಫ್ ಕಾಯಿದೆ ವಿಚಾರದಲ್ಲಿ ವಿರೋಧ ಪಕ್ಷಗಳು ಮುಸ್ಲಿಮರ ದಾರಿ ತಪ್ಪಿಸುತ್ತಿದೆ. ವಕ್ಫ್ ಕಾನೂನು ಪ್ರತಿಭಟನೆ ಹೆಸರಿನಲ್ಲಿ ಹಿಂಸಾಚಾರ ನಡೆಸಲಾಗುತ್ತಿದೆ ಎಂದು ಅವರು ಮುರ್ಷಿದಾಬಾದ್ ನಲ್ಲಿ ನಡೆದ ಹಿಂಸಾಚಾರವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ. ವಕ್ಫ್ ಹೆಸರಿನಲ್ಲಿ ಪಶ್ಚಿಮ ಬಂಗಾಲದಲ್ಲಿ ಸಾವಿರಾರು ಎಕರೆ ದಲಿತರ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಮುರ್ಷಿದಾಬಾದ್ ನಲ್ಲಿ ಹಿಂದೂಗಳನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ.

ಬೆಂಗಳೂರು: ಮಾಸ್ ಮಹಾರಾಜ ರವಿತೇಜ ಅವರ ಮಕ್ಕಳು ಸಹ ಚಿತ್ರರಂಗದಲ್ಲಿ ವಿವಿಧ ಪಾತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಯೋಜಿಸುತ್ತಿದ್ದಾರೆ. ಈಗಾಗಲೇ, ಅವರ ಮಗ ಮಹಾಧನ್ ರಾಜಾ ದಿ ಗ್ರೇಟ್ ಚಿತ್ರದಲ್ಲಿ ಬಾಲ ಕಲಾವಿದನಾಗಿ ಪಾದಾರ್ಪಣೆ ಮಾಡಿದ್ದಾರೆ. ಅವರು ಶೀಘ್ರದಲ್ಲೇ ಚಲನಚಿತ್ರ ನಿರ್ದೇಶಕರಾಗಲು ಯೋಜಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಈಗ, ರವಿತೇಜ ಅವರ ಮಗಳ ಬಗ್ಗೆ ಸುದ್ದಿಗಳು ಕೇಳಿಬರುತ್ತಿವೆ.ವರದಿಗಳು ನಿಜವೆಂದು ನಂಬಿದ್ದರೆ, ರವಿತೇಜ ಅವರ ಮಗಳು ಮೋಕ್ಷಧಾ ನಿರ್ಮಾಪಕಿಯಾಗಲು ಆಶಿಸಿದ್ದಾರೆ. ಇತ್ತೀಚಿನ ಸುದ್ದಿಗಳ ಪ್ರಕಾರ, ಆನಂದ್ ದೇವರಕೊಂಡ ಅವರ ಮುಂದಿನ ಚಿತ್ರವನ್ನು ವಿನೋದ್ ಅನಂತೋಜು ನಿರ್ದೇಶನದಲ್ಲಿ ನಿರ್ಮಿಸಲು ಅವರು ಯೋಜಿಸಿದ್ದಾರೆ. ಈ ಜೋಡಿ ಈ ಹಿಂದೆ ಮಿಡಲ್ ಕ್ಲಾಸ್ ಮೆಲೋಡೀಸ್ ಚಿತ್ರವನ್ನು ನಿರ್ಮಿಸಿದ್ದರು.

ಕಿಶ್ತ್ವಾರ್ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಭಯೋತ್ಪಾದಕ ದಾಳಿಗಳ ಮಧ್ಯೆ ಬೆನ್ನಲ್ಲೇ ಭಾರತೀಯ ಸೇನೆಯು "ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವವರೆಗೆ ಕಾರ್ಯಾಚರಣೆ ಮುಂದುವರೆಯುತ್ತದೆ ಎಂದು ಕಿಶ್ತ್ವಾರ್-ದೋಡಾ ರಾಂಬನ್ ಶ್ರೇಣಿಯ ಮಹಾನಿರ್ದೇಶಕ ಶ್ರೀಧರ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ, "ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವವರೆಗೆ, ಕಾರ್ಯಾಚರಣೆಗಳು ಮುಂದುವರಿಯುತ್ತವೆ. ಪ್ರದೇಶದ ಜನರು ಭದ್ರತಾ ಪಡೆಗಳಿಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ಈ ಕಾರ್ಯಾಚರಣೆಗಳು ಭದ್ರತಾ ಪಡೆಗಳ ಉತ್ತಮ ಸಮನ್ವಯವನ್ನು ತೋರಿಸುತ್ತವೆ" ಎಂದು ಹೇಳಿದರು.ಶನಿವಾರ, ಕಿಶ್ತ್ವಾರ್‌ನಲ್ಲಿ ಭದ್ರತಾ ಪಡೆಗಳು ಒಟ್ಟು 3 ಪಾಕಿಸ್ತಾನಿ ಭಯೋತ್ಪಾದಕರನ್ನು ತಟಸ್ಥಗೊಳಿಸಿದರು.

ಚೆನ್ನೈ: ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ಸ್ಥಳೀಯ ಪಕ್ಷ ಎಐಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದೆ. ಇದರ ಹಿಂದೆ ಬಿಜೆಪಿ ಹೈಕಮಾಂಡ್ ಭಾರೀ ಲೆಕ್ಕಾಚಾರ ಹೊಂದಿದೆ. ಅಣ್ಣಾಮಲೈ ನಾಯಕತ್ವದಲ್ಲಿ ಸಿಗದ ಗೆಲುವುತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅಧಿಕಾರ ಸ್ವೀಕರಿಸಿದಾಗ ಬಿಜೆಪಿಗೆ ಭಾರೀ ನಿರೀಕ್ಷೆಯಿತ್ತು. ಆದರೆ ಲೋಕಸಭೆ ಚುನಾವಣೆಯಲ್ಲಿ ಸ್ವತಃ ಅಣ್ಣಾಮಲೈ ಸೋತರು. ಇದರಿಂದಾಗಿ ಏಕಾಂಗಿಯಾಗಿ ಸ್ಪರ್ಧಿಸಿ ಗೆಲ್ಲುವುದು ಕಷ್ಟ ಎಂದು ಬಿಜೆಪಿ ಅರ್ಥ ಮಾಡಿಕೊಂಡಿದೆ. ತಮಿಳುನಾಡಿನಲ್ಲಿ ಸ್ಥಳೀಯ ಪಕ್ಷದ ನೆರವು ಬೇಕೇ ಬೇಕುತಮಿಳುನಾಡು ರಾಜಕೀಯವೇ ಹಾಗೆ. ಹಿಂದಿನಿಂದಲೂ ಇಲ್ಲಿ ರಾಷ್ಟ್ರೀಯ ಪಕ್ಷಗಳಿಗಿಂತ ಸ್ಥಳೀಯ ಪಕ್ಷಗಳೇ ಮೇಲುಗೈ ಸಾಧಿಸುತ್ತಿವೆ.