Shorts

ದಿಬ್ರುಗಢ್: ಚುನಾವಣೆ ನಡೆಯಲಿರುವ ಅಸ್ಸಾಂನಲ್ಲಿ ನೆಹರೂ-ಗಾಂಧಿ ಕುಟುಂಬದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸೋಮವಾರ ತೀವ್ರ ವಾಗ್ದಾಳಿ ನಡೆಸಿರು.ಕಾಂಗ್ರೆಸ್‌ನ ಮೊದಲ ಕುಟುಂಬವು ದೇಶದ ಅತ್ಯಂತ ಭ್ರಷ್ಟ ಕುಟುಂಬವಾಗಿದ್ದು, ಅಂತವರು ಅಸ್ಸಾಂಗೆ ಬಂದು ಇತರರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆಂದು ಆಕ್ರೋಶ ಹೊರಹಾಕಿದರು. ಕಾಂಗ್ರೆಸ್ ಭ್ರಷ್ಟ ಮಾತ್ರವಲ್ಲ, ಕೆಲಸ ಮಾಡಲು ಸಿದ್ಧರಿಲ್ಲ. ಪರಿಣಾಮವಾಗಿ, ಅಸ್ಸಾಂನಲ್ಲಿ ತಲೆಮಾರುಗಳು ನಿರುದ್ಯೋಗದಿಂದ ಹೋರಾಡುತ್ತಿವೆ. ಇದಕ್ಕೆ ವ್ಯತಿರಿಕ್ತವಾಗಿ, ಬಿಜೆಪಿ-ಎನ್‌ಡಿಎ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಮಗ್ರತೆಯಿಂದ ಕೆಲಸ ಮಾಡುತ್ತಿದೆ. ಅಸ್ಸಾಂ ಅನ್ನು ಪ್ರಮುಖ ರಾಜಧಾನಿಯನ್ನಾಗಿ ಪರಿವರ್ತಿಸಲು ನಾವು ಬದ್ಧರಾಗಿದ್ದೇವೆ. "ಕಾಂಗ್ರೆಸ್ ಆಡಳಿತದಲ್ಲಿ

ನವದೆಹಲಿ: ಅರುಣಾಚಲ ಪ್ರದೇಶ ಸಿಎಂ ಪೆಮಾ ಖಂಡು ಅವರಿಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದೆ. ವಿವಿಧ ಸಾರ್ವಜನಿಕ ಕಾಮಗಾರಿಗಳ ಗುತ್ತಿಗೆಗಳನ್ನು ಕುಟುಂಬಸ್ಥರ ಕಂಪನಿಗಳಿಗೆ ನೀಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶನ ನೀಡಿದೆ. ಸರ್ಕಾರಿ ಗುತ್ತಿಗೆಗಳನ್ನು ಸಿಎಂ ಮತ್ತು ಅವರ ಆಪ್ತ ಕುಟುಂಬ ಸದಸ್ಯರಿಗೆ ಕಾನೂನುಬಾಹಿರವಾಗಿ ನೀಡಲಾಗಿದೆ ಎಂದು ಆರೋಪಿಸಿ ಎನ್‌ಜಿಒಗಳು, ಸೇವ್ ಮಾನ್ ರೀಜನ್ ಫೆಡರೇಶನ್ ಹಾಗೂ ವಾಲಂಟರಿ ಅರುಣಾಚಲ ಸೇನಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ನ ನ್ಯಾ. ವಿಕ್ರಮ್ ನಾಥ್ ನೇತೃತ್ವದ ಪೀಠ ಈ ಆದೇಶವನ್ನು ನೀಡಿದೆ.ಈ ಆರೋಪದ ಕುರಿತು ನಾವು ಸಿಬಿಐಗೆ ಪ್ರಾಥಮಿಕ ತನಿಖೆ ನಡೆಸುವಂತೆ ಆದೇಶಿಸುತ್ತೇವೆ.

ಬೆಂಗಳೂರು: ಬಾರ್‌ನಲ್ಲಿ ನಡೆದ ಗಲಾಟೆಯಲ್ಲಿ ಬಿಯರ್ ‌ಬಾಟಲಿಯಿಂದ ಚಿತ್ರನಟರೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ‌. ಈ ಸಂಬಂಧ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಡೆಯ ಚಿತ್ರದಲ್ಲಿ ನಟ ದರ್ಶನ್ ಅವರ ತಮ್ಮನ ಪಾತ್ರದಲ್ಲಿ ನಟಿಸಿದ್ದ ನಿರಂಜನ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಬಾರ್‌ನಲ್ಲಿ ನಡೆದ ಗಲಾಟೆಯಲ್ಲಿ ಬಿಯರ್ ‌ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ‌ ಎಂದು ದೂರಲಾಗಿದೆ.ಮಾರ್ಚ್ 28ರಂದು ಸ್ನೇಹಿತ ಯಶಸ್ ಸೂರ್ಯ ಅವರ ಮನೆಯಿಂದ ಉತ್ತರಹಳ್ಳಿ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದೆ. ಮಂತ್ರಿ ಆಲೈನ್ ಬಳಿ ಬಂದಾಗ ನೀರು ಕುಡಿಯಬೇಕು ಅನಿಸಿದ್ದರಿಂದ ಪಕ್ಕದಲ್ಲಿ ಇದ್ದ ಬಾರ್ ಆ್ಯಂಡ್ ಕಿಚನ್ ಬಳಿ ಹೋಗಿ ನೀರನ್ನು ತೆಗೆದುಕೊಳ್ಳುತ್ತಿರಬೇಕಾದರೆ, ಯಾರೋ ಒಬ್ಬ ವ್ಯಕ್ತಿ ಬಂದು ತನ್ನನ್ನು ತಳ್ಳಿದ. ಆಗ ನಾನು ಆತನಿಗೆ ಯಾಕೆ ನನ್ನನ್ನು ತಳ್ಳುತ್ತೀಯಾ ಎಂದು ಕೇಳಿದ್ದೆ.

ಇಂದು ಸೋಮವಾರವಾಗಿದ್ದು ಶಿವನ ಆರಾಧನೆಗೆ ಸೂಕ್ತವಾದ ದಿನ. ಇಂದು ಆಯಸ್ಸು, ಆರೋಗ್ಯ, ದೋಷ ನಿವಾರಣೆಗಾಗಿ ಶಿವನ ಕುರಿತು ಶಿವ ಭುಜಂಗ ಪ್ರಯಾತ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.ಕೃಪಾಸಾಗರಾಯಾಶುಕಾವ್ಯಪ್ರದಾಯಪ್ರಣಮ್ರಾಖಿಲಾಭೀಷ್ಟಸಂದಾಯಕಾಯ ।ಯತೀಂದ್ರೈರುಪಾಸ್ಯಾಂಘ್ರಿಪಾಥೋರುಹಾಯಪ್ರಬೋಧಪ್ರದಾತ್ರೇ ನಮಃ ಶಂಕರಾಯ ॥1॥ ಚಿದಾನಂದರೂಪಾಯ ಚಿನ್ಮುದ್ರಿಕೋದ್ಯ-ತ್ಕರಾಯೇಶಪರ್ಯಾಯರೂಪಾಯ ತುಭ್ಯಮ್ ।ಮುದಾ ಗೀಯಮಾನಾಯ ವೇದೋತ್ತಮಾಂಗೈಃಶ್ರಿತಾನಂದದಾತ್ರೇ ನಮಃ ಶಂಕರಾಯ ॥2॥ ಜಟಾಜೂಟಮಧ್ಯೇ ಪುರಾ ಯಾ ಸುರಾಣಾಂಧುನೀ ಸಾದ್ಯ ಕರ್ಮಂದಿರೂಪಸ್ಯ ಶಂಭೋಃಗಲೇ ಮಲ್ಲಿಕಾಮಾಲಿಕಾವ್ಯಾಜತಸ್ತೇವಿಭಾತೀತಿ ಮನ್ಯೇ ಗುರೋ ಕಿಂ ತಥೈವ ॥3॥ ನಖೇಂದುಪ್ರಭಾಧೂತನಮ್ರಾಲಿಹಾರ್ದಾ-ಂಧಕಾರವ್ರಜಾಯಾಬ್ಜಮಂದಸ್ಮಿತಾಯ ।ಮಹಾಮೋಹಪಾಥೋನಿಧೇರ್ಬಾಡಬಾಯಪ್ರಶಾಂತಾಯ ಕುರ್ಮೋ ನಮಃ ಶಂಕರಾಯ ॥4॥

ನವದೆಹಲಿ: ರಾಜ್ಯಸಭಾ ಸದಸ್ಯ, ಆಮ್ ಆದ್ಮಿ ಪಕ್ಷ ನಾಯಕ ರಾಘವ್ ಚಡ್ಡಾ ಮತ್ತೆ ತಮ್ಮ ಸ್ವಪಕ್ಷದ ವಿರುದ್ಧ ಸಿಡಿದೆದ್ದಿದ್ದಾರೆ. ಪಂಜಾಬ್‌ನ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಪ್ರಸ್ತಾವಿಸಲಿಲ್ಲ ಎಂಬ ತಮ್ಮ ಪಕ್ಷದ ಸಹೋದ್ಯೋಗಿಗಳ ಆರೋಪಕ್ಕೆ ವಿಡಿಯೊ ಮೂಲಕ ತಿರುಗೇಟು ನೀಡಿದ್ದಾರೆ. ಅವರು ಪಂಜಾಬ್‌ಗೆ ಸಂಬಂಧಿಸಿದ ವಿಷಯಗಳನ್ನು ಮೇಲ್ಮನೆಯಲ್ಲಿ ಪ್ರಸ್ತಾವಿಸುವ ವಿಡಿಯೊ ಬಿಡುಗಡೆ ಮಾಡಿ ತಮ್ಮ ಪಕ್ಷದವರಿಗೆ ಖಡಕ್‌ ಉತ್ತರ ನೀಡಿದ್ದಾರೆ.ಈ ವಿಡಿಯೊವು ಚಡ್ಡಾ ಅವರ ರಾಜ್ಯಸಭೆಯ ಭಾಷಣಗಳ ವಿವಿಧ ಕ್ಲಿಪ್‌ಗಳ ಸಂಗ್ರಹವಾಗಿದ್ದು, ಇದರಲ್ಲಿ ನಂಕಾನಾ ಸಾಹಿಬ್ ಕಾರಿಡಾರ್‌ಗಾಗಿ ಒತ್ತಾಯಿಸುವುದು, ರೈತರಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಆಗ್ರಹಿಸುವುದು, ಭಗತ್ ಸಿಂಗ್‌ಗೆ ಭಾರತ ರತ್ನವನ್ನು ಶಿಫಾರಸು ಮಾಡುವುದು ಹಾಗೂ ಮಹಾರಾಜ ರಂಜಿತ್ ಸಿಂಗ್ ಅವರ ರಾಜ ಸಿಂಹಾಸನವನ್ನು ಹಿಂದಿರುಗಿಸಲು ಆಗ್ರಹಿಸುವುದು ಸೇರಿ ಹಲವು ವಿಚಾರಗಳು ಸೇರಿವೆ.

ಬೆಂಗಳೂರು: ಕನ್ನಡ ಚಿತ್ರರಂಗದ ಭರವಸೆಯ ನಟ ಸುಮುಖ ತಮ್ಮ ಬಹುಕಾಲದ ಗೆಳತಿ ಮೈತ್ರಿ ಉಕಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉತ್ತರಾಖಂಡದ ರಿಷಿಕೇಶದ ಸುಂದರ ಪರಿಸರದಲ್ಲಿ, ಗಂಗಾ ನದಿಯ ತಟದಲ್ಲಿ ಈ ಜೋಡಿಯ ವಿವಾಹ ಮಹೋತ್ಸವ ಸುಂದರವಾಗಿ ನೆರವೇರಿದೆ. ಯೋಗರಾಜ್‌ ಭಟ್‌ ನಿರ್ದೇಶನದ ಮನದ ಕಡಲು ಸಿನಿಮಾದಲ್ಲಿ ನಟಿಸಿ ಫೇಮಸ್‌ ಆಗಿದ್ದ ಸುಮುಖ ಈಗ ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದಾರೆ. ಯಾವುದೇ ಅಬ್ಬರವಿಲ್ಲದೆ, ಕೇವಲ ಆಪ್ತರು ಮತ್ತು ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ. ರಿಷಿಕೇಶದ ಶಾಂತಿಯುತ ಪರಿಸರದಲ್ಲಿ ವಿವಾಹದಲ್ಲಿ ಬಹುಕಾಲದ ಗೆಳತಿ ಮೈತ್ರಿ ಉಕಾ ಜೊತೆಗೆ ಸುಮುಖ ಸಪ್ತಪದಿ ತುಳಿದಿದ್ದು, ಮದುವೆಯ ಸುಂದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಈಗ ವೈರಲ್ ಆಗುತ್ತಿವೆ.

ಬೆಂಗಳೂರು: ರಾಜಧಾನಿ ಬೆಂಗಳೂರು ಮತ್ತು ಸುತ್ತಲಿನ ಭಾಗಗಳಲ್ಲಿ ಇಂದಿನಿಂದ ಏ.7ರವರೆಗೆಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರ್ನಾಟಕದ ಹಲವೆಡೆ, ವಿಶೇಷವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 21ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರಿನಲ್ಲಿ ಸಂಜೆಯ ನಂತರ ಮಳೆಯಾಗುವ ಮುನ್ಸೂಚನೆ ಇದೆ.ಮಳೆ ಎಚ್ಚರಿಕೆ: ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು: ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ನಡುವೊನ ಪಂದ್ಯದ ಟಿಕೆಟ್‌ ಅನ್ನು ಪಡೆಯಲು ಹೋದ ಟೆಕ್ಕಿಯೊಬ್ಬರಿಗೆ ಪಂಗನಾಮ ಹಾಕಲಾಗಿದೆ.ಮಹದೇವಪುರದ ಟೆಕ್ಕಿಯೊಬ್ಬರು ಬರೋಬ್ಬರಿ ₹ 1.46 ಲಕ್ಷ ಕಳೆದುಕೊಂಡಿದ್ದಾರೆ. ಐಪಿಎಲ್ ಟಿಕೆಟ್‌ಗೆ ಸಂಬಂಧಿಸಿದಂತೆ ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಲಾಗಿದ್ದ ಒಂದು ಪೋಸ್ಟ್ ನೋಡಿದ ಟೆಕ್ಕಿ ಪೋಸ್ಟ್ ಹಾಕಿದ ವಂಚಕನನ್ನು ಸಂಪರ್ಕಿಸಿದ್ದಾರೆ. ವಂಚಕ ಪಂದ್ಯದ ಟಿಕೆಟ್‌ಗಳು, ಊಟದ ಕೂಪನ್‌ಗಳು ಮತ್ತು ವಿಐಪಿ ಸೌಲಭ್ಯಗಳನ್ನು ಹೊಂದಿರುವ ಟಿಕೆಟ್‌ಗಳನ್ನು ನೀಡುವುದಾಗಿ ಆಮಿಷ ಒಡ್ಡಿದ್ದಾನೆ. ಇದನ್ನು ನಂಬಿದ ಟೆಕ್ಕಿ, ತಾನು ಮತ್ತು ತನ್ನ ತಾಯಿಯ ಬ್ಯಾಂಕ್ ಖಾತೆಗಳಿಂದ ಹಣವನ್ನು ವರ್ಗಾಯಿಸಿದ್ದಾರೆ.

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಹಾಲಿ ಚಾಂಪಿಯನ್‌ ಆರ್‌ಸಿಬಿ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು ಮುಖಾಮುಖಿಯಾಗಲಿವೆ. ಈ ಹಿನ್ನಲೆಯಲ್ಲಿ ಬೆಂಗಳೂರು ಮೆಟ್ರೋ ಮತ್ತು ಬಿಎಂಟಿಸಿ ವಿಶೇಷ ಬಸ್ ಸೇವೆಗಳನ್ನು ಕಲ್ಪಿಸಿದೆ. ಪ್ರಯಾಣಿಕರಿಗೆ ಸುಲಭ ಮತ್ತು ಸುರಕ್ಷಿತ ಪ್ರಯಾಣಕ್ಕೆ ಮೆಟ್ರೋ ಸೇವೆಯನ್ನು ಮಧ್ಯರಾತ್ರಿ 2 ಗಂಟೆವರೆಗೆ ವಿಸ್ತರಿಸಿದೆ. ಮಾತ್ರವಲ್ಲದೆ ಕ್ರೀಡಾಂಗಣದ ಸುತ್ತಮುತ್ತಲ ರಸ್ತೆಗಳು, ಜಂಕ್ಷನ್‌ಗಳಲ್ಲಿ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ. ಐಪಿಎಲ್‌ ಟಿಕೆಟ್‌ ಹೊಂದಿರುವವರಿಗೆ ಮೆಟ್ರೊ ಸೇವೆ ಉಚಿತವಾಗಿದೆ.ವೈಟ್‌ಫೀಲ್ಡ್(ಕಾಡುಗೋಡಿ)ಯಿಂದ ರಾತ್ರಿ 12.30ಕ್ಕೆ ಮತ್ತು ಚಲ್ಲಘಟ್ಟದಿಂದ ರಾತ್ರಿ 12.45ಕ್ಕೆ. ರೇಷ್ಮೆ ಸಂಸ್ಥೆ ಹಾಗೂ ಮಾದಾವರದಿಂದ 12.45ಕ್ಕೆ. ಬೊಮ್ಮಸಂದ್ರ ದಿಂದ ರಾತ್ರಿ 1ಕ್ಕೆ ಹಾಗೂ ಆರ್‌.ವಿ. ರಸ್ತೆಯಿಂದ ರಾತ್ರಿ 2ಕ್ಕೆ. ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಿಂದ ನಾಲ್ಕು ದಿಕ್ಕುಗಳಿಗೆ 1.30ಕ್ಕೆ ಕೊನೆಯ ರೈಲು ಹೊರಡಲಿದೆ.

ವಾಷಿಂಗ್ಟನ್: ಹೋರ್ಮುಜ್ ಜಲಸಂಧಿಯನ್ನು ತೆರೆಯುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆ ಟ್ರೂತ್ ಸೋಷಿಯಲ್‌ನಲ್ಲಿ ಪೋಸ್ಟ್‌ನಲ್ಲಿ ಟ್ರಂಪ್ ಇರಾನ್‌ಗೆ ಎಚ್ಚರಿಕೆ ನೀಡಿದ್ದಾರೆ. ಇರಾನ್‌ಗೆ ನೀಡಿದ್ದ ಗಡುವು 48 ಗಂಟೆಗಳಲ್ಲಿ ಮುಕ್ತಾಯಗೊಳ್ಳುತ್ತದೆ. ಅದರ ನಂತರ ಅಮೆರಿಕ ಇರಾನ್ ವಿರುದ್ಧ ಪ್ರಮುಖ ಮಿಲಿಟರಿ ಕ್ರಮಕೈಗೊಳ್ಳುತ್ತದೆ ಎಂದು ಟ್ರಂಪ್ ವಾರ್ನಿಂಗ್‌ ನೀಡಿದ್ದಾರೆ.ಇರಾನ್‌ 48 ಗಂಟೆಯೊಳಗಾಗಿ ಒಪ್ಪಂದಕ್ಕೆ ಬರಬೇಕು. ಇಲ್ಲವಾದಲ್ಲಿ ನರಕ ತೋರಿಸುತ್ತೇವೆ. ಮುಂದಿನ ಎರಡರಿಂದ ಮೂರು ವಾರಗಳವರೆಗೆ ಇರಾನ್‌ ವಿರುದ್ಧ ಇನ್ನಷ್ಟು ತೀವ್ರ ದಾಳಿಗಳನ್ನು ನಡೆಸಲಿದ್ದೇವೆ. ಆ ಮೂಲಕ ಅವರನ್ನು ಮರಳಿ ಶಿಲಾಯುಗದ ಸ್ಥಿತಿಗೆ ಕಳುಹಿಸಲಿದ್ದೇವೆ ಎಂದು ಟ್ರಂಪ್ ಪುನರುಚ್ಚರಿಸಿದ್ದರು.