ರಾಜ್ ಕೋಟ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋತ ಬಳಿಕ ಈ ಒಬ್ಬ ಬೌಲರ್ ನ ಅನುಪಸ್ಥಿತಿ ಕಾಡುತ್ತಿದೆ. ದ್ವಿತೀಯ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್ ಗಳಿಂದ ಸೋತಿದೆ. ಭಾರತ ನೀಡಿದ್ದ 285 ರನ್ ಗಳ ಗುರಿಯನ್ನು ನ್ಯೂಜಿಲೆಂಡ್ 47.3 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ತಲುಪಿತು. ಡೆರಿಲ್ ಮಿಚೆಲ್ ಮತ್ತು ವಿಲ್ ಯಂಗ್ ಭರ್ಜರಿ ಜೊತೆಯಾಟ ಕಿವೀಸ್ ಗೆಲುವಿಗೆ ಕಾರಣವಾಯ್ತು.
ರಾಜ್ ಕೋಟ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಒತ್ತಡದ ಸಂದರ್ಭದಲ್ಲಿ ಅದ್ಭುತ ಇನಿಂಗ್ಸ್ ಆಡಿದ ಕೆಎಲ್ ರಾಹುಲ್ ಗೆ ಫ್ಯಾನ್ಸ್ ಬಹುಪರಾಕ್ ಹೇಳಿದ್ದಾರೆ. ಇಂದು ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಬೇಕಾಯಿತು. ರೋಹಿತ್ ಶರ್ಮಾರಿಂದ ಎಂದಿನಂತೆ ಅಬ್ಬರದ ಆರಂಭ ಸಿಗಲಿಲ್ಲ. ಅವರು 24 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಇನ್ನೊಂದೆಡೆ ಉತ್ತಮ ಆಟವಾಡಿದ ನಾಯಕ ಶುಭಮನ್ ಗಿಲ್ 56 ರನ್ ಗಳಿಸಿ ಔಟಾದರು. ಅವರ ಹಿಂದೆಯೇ ಕೊಹ್ಲಿ 23, ಶ್ರೇಯಸ್ ಅಯ್ಯರ್ 8 ರನ್ ಗಳಿಗೆ ವಿಕೆಟ್ ಒಪ್ಪಿಸಿದರು.
ಚಿತ್ರದುರ್ಗ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶಿಕಾರಿಪುರದಲ್ಲಿ ಪಾದಯಾತ್ರೆ ಮಾಡುವುದು ಬೇಡ. ಅವರೇ ಬಂದು ಸ್ಪರ್ಧಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸವಾಲು ಹಾಕಿದ್ದಾರೆ. ಇಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಯೊಂದಕ್ಕೆ ಉತ್ತರ ಕೊಡುವಾಗ, ಜೆಡಿಎಸ್, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನರೇಂದ್ರ ಮೋದಿಯವರ ಕೈಯನ್ನು ಬಲಪಡಿಸಲು ಎನ್ಡಿಎ ಮೈತ್ರಿಕೂಟ ಸೇರಿದ್ದಾರೆ. ಹಾಗಾಗಿ, ಸ್ಥಳೀಯವಾಗಿ ಸ್ಪರ್ಧೆ ಕುರಿತು ರಾಷ್ಟ್ರೀಯ ನಾಯಕರು ನಮ್ಮ ಜೊತೆ, ಜೆಡಿಎಸ್ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು: ಬಳ್ಳಾರಿ ವಿಷಯ ರಾಜ್ಯದಲ್ಲಿ ದೊಡ್ಡ ಸದ್ದು ಮಾಡುವ ಸಂದರ್ಭದಲ್ಲೇ ಶಿಡ್ಲಘಟ್ಟದಲ್ಲೂ ಬ್ಯಾನರ್ ಹಾಕಿದ್ದಾರೆ. ಬ್ಯಾನರ್ ಹಾಕಲು ಅನುಮತಿ ಪಡೆದಿದ್ದೀರಾ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಪ್ರಶ್ನಿಸಿದ್ದಾರೆ. ಪತ್ರವನ್ನೂ ನೀಡಿಲ್ಲ ಹಣ ಕಟ್ಟಿಲ್ಲ; ಅನುಮತಿ ಪಡೆದಿಲ್ಲ ಎಂದು ಕಮೀಷನರ್ ಹೇಳಿದ್ದಾಗಿ ಗಮನ ಸೆಳೆದರು.ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಕಾಂಗ್ರೆಸ್ ನಾಯಕರ ಅಟ್ಟಹಾಸ ರಾಜ್ಯದಲ್ಲಿ ಹೆಚ್ಚಾಗಿದೆ. ದರ್ಪ ಹೆಚ್ಚಾಗಿದೆ. ಮುಖ್ಯಮಂತ್ರಿಗಳು ರಾಜೀವ್ ಗೌಡರನ್ನು ಬಂಧಿಸಬೇಕು. ಕಾನೂನು ಕೈಗೆತ್ತಿಕೊಳ್ಳುವ ಮಾತನಾಡಿದ ಇವರನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ತಕ್ಷಣ ಬಂಧಿಸಬೇಕು. ಇಲ್ಲವಾದರೆ, ಇದನ್ನು ನಾವು ರಾಜ್ಯಮಟ್ಟದ ವರೆಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಎಚ್ಚರಿಸಿದರು.
ಬೆಂಗಳೂರು: ನಿನ್ನೆ ಮೈಸೂರಿನಲ್ಲಿ ರಾಹುಲ್ ಗಾಂಧಿ ಜೊತೆ ಏರ್ ಪೋರ್ಟ್ ನಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ರಹಸ್ಯ ಮಾತುಕತೆ ನಡೆಸಿದ್ದರು. ಈ ಮಾತುಕತೆ ಬಗ್ಗೆ ಇಂದು ಮಾಧ್ಯಮಗಳು ಡಿಕೆಶಿಯನ್ನು ಪ್ರಶ್ನೆ ಮಾಡಿದ್ದಾರೆ. ರಾಹುಲ್ ಗಾಂಧಿ ಜೊತೆ ರಹಸ್ಯವಾಗಿ ಏನು ಮಾತನಾಡಿದ್ರಿ? ಅಧಿಕಾರ ಹಂಚಿಕೆ ಬಗ್ಗೆ ಕೇಳಿದ್ದೀರಾ ಎಂದು ಮಾಧ್ಯಮಗಳು ನೇರವಾಗಿ ಪ್ರಶ್ನೆ ಮಾಡಿವೆ. ಇದಕ್ಕೆ ಉತ್ತರಿಸಿದ ಡಿಕೆಶಿ ‘ನಾನು ಕಾಂಗ್ರೆಸ್ ಅಧ್ಯಕ್ಷ. ಅವರು ನಮ್ಮ ರಾಷ್ಟ್ರೀಯ ನಾಯಕರು. ನಾವು ಭೇಟಿ ಮಾಡೋದು, ಗೌರವ ಕೊಡೋದು, ಔಪಚಾರಿಕವಾಗಿ ಸ್ವಾಗತ ಕೋರುವುದು ಮಾತನಾಡುವುದು ಎಲ್ಲಾ ಸಹಜ. ನಾವು ಏನೆಲ್ಲಾ ಮಾತನಾಡಿದ್ದೇವೆ ಎಂದು ಎಲ್ಲಾ ಪಬ್ಲಿಕ್ ನಲ್ಲಿ ಹೇಳಕ್ಕಾಗುತ್ತಾ?
ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಮತ್ತೆ ವಿಶ್ವ ಕ್ರಿಕೆಟ್ ನಲ್ಲಿ ನಂ1 ಶ್ರೇಯಾಂಕಕ್ಕೇರಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ಕೊಹ್ಲಿ ನಂ1 ಶ್ರೇಯಾಂಕಕ್ಕೆ ಬಡ್ತಿ ಪಡೆದಿದ್ದಾರೆ. ಕಳೆದ ದಕ್ಷಿಣ ಆಫ್ರಿಕಾ ಸರಣಿ ಬಳಿಕ ಈಗ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲೂ ಕೊಹ್ಲಿ ಅದ್ಭುತ ಫಾರ್ಮ್ ಮುಂದವರಿಸಿದ್ದಾರೆ. ಕಳೆದ ಪಂದ್ಯದಲ್ಲಿ ಅವರು 93 ರನ್ ಗಳ ಭರ್ಜರಿ ಇನಿಂಗ್ಸ್ ಆಡಿದ್ದರು. ಇದರ ಬೆನ್ನಲ್ಲೇ ಅವರಿಗೆ ಐಸಿಸಿ ಶ್ರೇಯಾಂಕದಲ್ಲಿ ಬಡ್ತಿ ಸಿಕ್ಕಿದೆ. ವಿರಾಟ್ ಕೊಹ್ಲಿ ನಂ1 ಆಗುತ್ತಿರುವುದು ಇದೇ ಮೊದಲಲ್ಲ. ಆದರೆ ಈಗ ಬಹಳ ದೀರ್ಘ ಸಮಯದ ನಂತರ 1 ನೇ ಶ್ರೇಯಾಂಕಕ್ಕೇರಿದ್ದಾರೆ.
ಕೆಲವೊಂದು ಆಹಾರ ವಸ್ತುಗಳನ್ನು ಸೇವಿಸಿದ ತಕ್ಷಣ ನೀರು ಸೇವಿಸಬಾರದು ಎನ್ನುತ್ತಾರೆ. ಅದರಲ್ಲಿ ಬಜ್ಜಿ ಕೂಡಾ ಒಂದು. ಬಜ್ಜಿ ತಿಂದ ತಕ್ಷಣ ನೀರು ಕುಡಿದ್ರೆ ಏನಾಗುತ್ತದೆ ಇಲ್ಲಿ ನೋಡಿ. ಬಜ್ಜಿ ಎಂದರೆ ಎಣ್ಣೆಯಲ್ಲಿ ಡೀಪ್ ಫ್ರೈ ಮಾಡಿ ಮಾಡುವಂತಹ ಆಹಾರ ವಸ್ತು. ಇದನ್ನು ಸೇವಿಸುವಾಗ ನೀರು ಅಥವಾ ನೀರಿನಂಶ ಏನಾದರೂ ಸೇವಿಸಬೇಕು ಅನಿಸುವುದು ಸಹಜ. ಇಲ್ಲದೇ ಹೋದರೆ ಗಂಟಲು ಕಟ್ಟಿದಂತಾಗುತ್ತದೆ. ಆದರೆ ಬಜ್ಜಿ ಸೇವಿಸಿದ ತಕ್ಷಣ ನೀರು ಸೇವನೆ ಮಾಡಬಾರದು. ಇದಕ್ಕೆ ಕಾರಣವೂ ಇದೆ. -ಬಜ್ಜಿ ಸೇವಿಸಿದ ತಕ್ಷಣ ನೀರು ಸೇವನೆ ಮಾಡುವುದರಿಂದ ಜೀರ್ಣ ಕ್ರಿಯೆಗೆ ಸಮಸ್ಯೆಯಾಗಬಹುದು.-ಹೊಟ್ಟೆಯಲ್ಲಿ ಗುಳು ಗುಳು ಆದಂತೆ ಅಥವಾ ಹೊಟ್ಟೆಯ ಕಿರಿ ಕಿರಿ ಆಗಬಹುದು.
ಚಿತ್ರದುರ್ಗ: ಕಾಂಗ್ರೆಸ್ಸಿಗರ ಕುರ್ಚಿ ಕಾದಾಟದಿಂದ ರಾಜ್ಯದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ರಾಜ್ಯದಲ್ಲಿ ನಿಜವಾಗಿ ಏನೂ ಅಭಿವೃದ್ಧಿ ಆಗಿಲ್ಲ; ಕಾಂಗ್ರೆಸ್ಸಿನ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ನಿನ್ನೆ ಜರ್ಮನಿಯ ಚಾನ್ಸೆಲರ್ ಕರ್ನಾಟಕಕ್ಕೆ ಬಂದಿದ್ದರು. ಜರ್ಮನಿಯು ಉತ್ಪಾದನಾ ಹಬ್ ಆಗಿರುವ ತಂತ್ರಜ್ಞಾನದ ದೇಶ. ಅಂಥ ದೇಶದ ಚಾನ್ಸೆಲರ್ ಕರ್ನಾಟಕಕ್ಕೆ ಬಂದರೆ, ಇವರಲ್ಲಿ ಒಬ್ಬರು ಸಿಎಂ ಕುರ್ಚಿ ಉಳಿಸಿಕೊಳ್ಳಲು, ಇನ್ನೊಬ್ಬರು ಅದೇ ಕುರ್ಚಿ ಕಸಿದುಕೊಳ್ಳಲು ಹೋಗಿ ರಾಹುಲ್ ಗಾಂಧಿ ಜೊತೆ ನಿಂತುಕೊಂಡಿದ್ದಾರೆ. ಇದರಂದ ರಾಜ್ಯದ ಪರಿಸ್ಥಿತಿ ಏನಾಗಬೇಕು ಎಂದು ಕೇಳಿದರು.
ರಾಜ್ ಕೋಟ್: ನ್ಯೂಜಿಲೆಂಡ್ ವಿರುದ್ಧ ದ್ವಿತೀಯ ಏಕದಿನ ಪಂದ್ಯವಾಡಲು ರಾಜ್ ಕೋಟ್ ನಲ್ಲಿರುವ ಟೀಂ ಇಂಡಿಯಾ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಚಿನ್ನದಿಂದ ಮಾಡಿದ ಮೊಬೈಲ್ ಕವರ್ ಕೊಡಲು ಅಭಿಮಾನಿಯೊಬ್ಬ ಬಂದಿದ್ದಾನೆ. ಇದರ ಬೆಲೆ ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತೀರಿ. ನಾವೆಲ್ಲಾ ಮೊಬೈಲ್ ಕವರ್ ಎಂದರೆ ಐನೂರೋ, ಒಂದು ಸಾವಿರ ರೂ.ಗಳಿಗೋ ದುಬಾರಿ ಎಂದು ಚಿನ್ನದಂತೆ ನೋಡಿಕೊಳ್ಳುತ್ತೇವೆ. ಆದರೆ ಗುಜರಾತ್ ನ ಅಂಕಿತ್ ಪಟೇಲ್ ಎನ್ನುವ ಅಪ್ಪಟ ವಿರಾಟ್ ಕೊಹ್ಲಿ ಅಭಿಮಾನಿ ಚಿನ್ನದಿಂದಲೇ ಮಾಡಿದ ಮೊಬೈಲ್ ಕವರ್ ತಂದಿದ್ದಾರೆ.
ಬೆಂಗಳೂರು: ಶಬರಿಮಲೆಗೆ ಹೋಗುವ ಕರ್ನಾಟಕದ ವಾಹನಗಳನ್ನು ತಡೆದು ಕೇರಳ ಉದ್ಧಟತನ ಮೆರೆಯುತ್ತಿದೆ ಎಂದು ವರದಿಯಾಗಿದೆ. ಇದರ ಬಗ್ಗೆ ಜೆಡಿಎಸ್ ಘಟಕ ಆಕ್ರೋಶ ವ್ಯಕ್ತಪಡಿಸಿದೆ. ಮೊನ್ನೆಯಷ್ಟೇ ಕನ್ನಡ ಶಾಲೆಗಳಲ್ಲಿ ಮಲಯಾಳಂ ಹೇರಿಕೆ ಮಾಡಲು ಹೊರಟಿದ್ದು ಕೇರಳ ಮತ್ತು ಕರ್ನಾಟಕ ನಡುವಿನ ಸಂಘರ್ಷಕ್ಕೆ ಕಾರಣವಾಗಿತ್ತು. ಇದು ತಣ್ಣಗಾಗುತ್ತಿದ್ದಂತೇ ಈಗ ಕೇರಳ ಸರ್ಕಾರ ಮತ್ತೊಂದು ತಗಾದೆ ತೆಗೆದಿದೆ. ಹಿಂದೂಗಳ ಪವಿತ್ರ ಸ್ಥಳ ಶಬರಿಮಲೆಗೆ ತೆರಳುವ ಭಕ್ತರಿಗೆ ಕೇರಳ ಸರ್ಕಾರ ಕಾಟ ಕೊಡುತ್ತಿದೆ. ಕರ್ನಾಟಕದಿಂದ ತೆರಳುವ ವಾಹನಗಳನ್ನು ಅನತಿ ದೂರದಲ್ಲೇ ತಡೆದು ತೊಂದರೆ ಕೊಡುತ್ತಿದೆ.
ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆ ಮತ್ತು ಇಳಿಕೆಯಾಗುತ್ತಲೇ ಇದೆ. ಆದರೆ ಇಂದು ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ಇಳಿಕೆಯಾದರೆ ಮತ್ತು ಇತರೆ ಚಿನ್ನದ ದರ ಏರಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಏರಿಕೆ ಮತ್ತು ಇಳಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಏರಿಕೆಯಾಗಿದೆ. ಇಂದು ಮತ್ತೆ ಪರಿಶುದ್ಧ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,44,790.00 ರೂ.ಗಳಿತ್ತು. ಇಂದು 1,44,560.00 ರೂ.ಗಳಷ್ಟಾಗಿದೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ಕೆಲವು ದಿನಗಳಿಂದ ಏರಿಕೆಯಾಗುತ್ತಿತ್ತು. ಆದರೆ ಇಂದು ಮತ್ತೆ ಬೆಲೆ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಏರಿಕೆ ಆರಂಭವಾಗಿತ್ತು. ಸತತವಾಗಿ ನಾಲ್ಕು ದಿನಗಳ ಕಾಲ ಏರಿಕೆಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿತ್ತು. ಆದರೆ ಇಂದು ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ಇಂದು ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ನಿನ್ನೆ ಯಥಾಸ್ಥಿತಿಯಲ್ಲಿದ್ದು 545 ರೂ. ಗಳಾಗಿತ್ತು. ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿಯಲ್ಲಿದ್ದು 545 ರೂ.ಗಳಷ್ಟಾಗಿದೆ.
ಬೆಂಗಳೂರು: ಏರ್ ಪೋರ್ಟ್ ನಲ್ಲಿ ಹೈಕಮಾಂಡ್ ಮುಂದೆ ಮಂಡಿಯೂರಿದ್ರೂ ಪ್ರಯತ್ನಗಳೆಲ್ಲಾ ವಿಫಲವಾಯ್ತು ಎಂದು ಡಿಕೆಶಿಯೇ ಒಪ್ಪಿಕೊಂಡ್ರು ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ವ್ಯಂಗ್ಯ ಮಾಡಿದೆ. ಮೈಸೂರಿನಲ್ಲಿ ನಿನ್ನೆ ರಾಹುಲ್ ಗಾಂಧಿ ಜೊತೆ ಏರ್ ಪೋರ್ಟ್ ನಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಗಹನವಾಗಿ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಇಂದು ಡಿಕೆ ಶಿವಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಪ್ರಯತ್ನಗಳು ವಿಫಲವಾದರೂ ಪ್ರಾರ್ಥನೆ ವಿಫಲವಾಗಲ್ಲ ಎಂದು ಸಂದೇಶ ಹಂಚಿಕೊಂಡಿದ್ದಾರೆ. ಇದಕ್ಕೆ ಬಿಜೆಪಿ ವ್ಯಂಗ್ಯ ಮಾಡಿದೆ.
ರಾಜ್ ಕೋಟ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದು ಎರಡನೇ ಏಕದಿನ ಪಂದ್ಯ ನಡೆಯಲಿದೆ. ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಘರ್ಜಿಸಿದ್ರು, ಇದೀಗ ಎರಡನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಸರದಿ ಎನ್ನುತ್ತಿದ್ದಾರೆ ಫ್ಯಾನ್ಸ್. ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 93 ರನ್ ಗಳ ನೆರವಿನಿಂದ ಭಾರತ ರೋಚಕ ಗೆಲುವು ಸಾಧಿಸಿತ್ತು. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಅಂತರದಿಂದ ಮುನ್ನಡೆಯಲ್ಲಿದೆ. ಎರಡನೇ ಪಂದ್ಯ ಇಂದು ರಾಜ್ ಕೋಟ್ ನಲ್ಲಿ ನಡೆಯಲಿದೆ.
ಸೋಷಿಯಲ್ ಮೀಡಿಯಾಗಳಲ್ಲಿ ಹಲವು ಬಾರಿ ಹೆಂಡತಿಯ ಮೇಲೆ ಗಂಡ ಹಲ್ಲೆ ಮಾಡುವ ವಿಡಿಯೋಗಳನ್ನು ನೋಡುತ್ತೇವೆ. ಆದರೆ ಇಲ್ಲಿ ಪತ್ನಿಯೇ ನಡು ರಸ್ತೆಯಲ್ಲಿ ದ್ವಿಚಕ್ರವಾಹನ ಚಲಾಯಿಸುತ್ತಿರುವಾಗಲೇ ಹಿಗ್ಗಾ ಮುಗ್ಗಾ ಥಳಿಸುತ್ತಿರುವ ದೃಶ್ಯ ವೈರಲ್ ಆಗಿದೆ.ಗಂಡ ಮತ್ತು ಹೆಂಡತಿ ಜನ ನಿಬಿಡ ರಸ್ತೆಯಲ್ಲಿ ರಾತ್ರಿ ವೇಳೆ ಸ್ಕೂಟಿಯಲ್ಲಿ ಸಂಚಾರ ಮಾಡುತ್ತಿರುತ್ತಾರೆ. ಈ ವೇಳೆ ಹಿಂದೆ ಕೂತಿದ್ದ ಪತ್ನಿ ಯಾಕೋ ಗಂಡನ ಮೇಲೆ ಭಾರೀ ಸಿಟ್ಟಾಗಿರುತ್ತಾಳೆ. ಇದೇ ಕೋಪದಲ್ಲಿ ಆತನ ತಲೆಗೆ ಹಿಗ್ಗಾ ಮುಗ್ಗಾ ಹೊಡೆಯುತ್ತಿರುತ್ತಾಳೆ. ಈ ವಿಡಿಯೋವನ್ನು ಯಾರೋ ಹಿಂಬದಿಯಿಂದ ಬೇರೊಂದು ವಾಹನದಲ್ಲಿ ಸವಾರಿ ಮಾಡುತ್ತಿರುವವರು ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟಿದ್ದಾರೆ.
ಬೆಂಗಳೂರು: ನಿನ್ನೆ ಮೈಸೂರಿನಲ್ಲಿ ರಾಹುಲ್ ಗಾಂಧಿ ಭೇಟಿಯಾದ ಬೆನ್ನಲ್ಲೇ ಇಂದು ಡಿಸಿಎಂ ಡಿಕೆ ಶಿವಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪೋಸ್ಟ್ ಒಂದು ಹಲ್ ಚಲ್ ಎಬ್ಬಿಸಿದೆ. ಮೈಸೂರಿನಲ್ಲಿ ರಾಹುಲ್ ಗಾಂಧಿ ಜೊತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ರಹಸ್ಯ ಮಾತುಕತೆ ನಡೆಸಿದ್ದರು. ಈ ವೇಳೆ ರಾಹುಲ್ ಗಾಂಧಿ ಬಳಿ ಡಿಕೆ ಶಿವಕುಮಾರ್ ನಾಯಕತ್ವ ವಿಚಾರವಾಗಿ ಗೊಂದಲ ನಿವಾರಿಸಿ ಎಂದು ಕೇಳಿಕೊಂಡಿದ್ದಾರೆ ಎನ್ನಲಾಗಿದೆ. ಇದಕ್ಕೆ ರಾಹುಲ್ ಗಾಂಧಿ ಇಬ್ಬರೂ ದೆಹಲಿಗೆ ಬನ್ನಿ ಮಾತನಾಡೋಣ ಎಂದಿದ್ದಾರೆ ಎಂದು ಸುದ್ದಿ ಹಬ್ಬಿದೆ.
ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ ಎನ್ನಲಾಗಿದ್ದು ಈ ಸಂಬಂಧ ನಿನ್ನೆ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗುತ್ತಿದೆ. ಮೈಸೂರಿಗೆ ಬಂದಿದ್ದ ರಾಹುಲ್ ಗಾಂಧಿ ನಿನ್ನೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆ ಗಹನವಾಗಿ ಮಾತನಾಡಿದ್ದರು. ಈ ಮಾತುಕತೆ ವೇಳೆ ನಾಯಕತ್ವ ವಿಚಾರ ಚರ್ಚೆಯಾಗಿದೆ ಎನ್ನಲಾಗಿದೆ. ಇಬ್ಬರನ್ನೂ ದೆಹಲಿಗೆ ಕರೆದಿದ್ದಾರೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ ಜನವರಿ 17 ಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ರನ್ನು ರಾಹುಲ್ ಗಾಂಧಿ ದೆಹಲಿಗೆ ಕರೆದಿದ್ದಾರೆ.
ಮೈಸೂರು: ತಮಿಳುನಾಡಿಗೆ ಹೋಗುವ ಮಾರ್ಗದಲ್ಲಿ ಮೈಸೂರಿಗೆ ಬಂದಿದ್ದ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ರಹಸ್ಯ ಮಾತುಕತೆ ನಡೆದ ವಿಡಿಯೋ ವೈರಲ್ ಆಗಿದೆ. ಈ ಮಾತುಕತೆ ಬಗ್ಗೆ ಈಗ ಹೀಗೊಂದು ಸುದ್ದಿ ಕೇಳಿಬರುತ್ತಿದೆ. ರಾಹುಲ್ ಗಾಂಧಿ ಹೆಲಿಕಾಪ್ಟರ್ ಏರುವ ಮುನ್ನಇಬ್ಬರೂ ಮಾತುಕತೆ ನಡೆಸುತ್ತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿವೆ. ಒಮ್ಮೆ ಇಬ್ಬರೂ ನಾಯಕರೂ ಜೊತೆಯಾಗಿ ನಂತರ ಇಬ್ಬರನ್ನೂ ಪ್ರತ್ಯೇಕ ಪ್ರತ್ಯೇಕವಾಗಿ ಕರೆದು ರಾಹುಲ್ ಮಾತುಕತೆ ನಡೆಸುತ್ತಾರೆ.
ಬೆಂಗಳೂರು: ಸಂಕ್ರಾಂತಿ ಹಬ್ಬದ ಸಡಗರ ಎಲ್ಲೆಡೆ ಮನೆ ಮಾಡಿದೆ. ಸಂಕ್ರಾಂತಿ ಹಬ್ಬದ ದಿನ ಈ ಮೂರು ವಸ್ತುಗಳನ್ನು ದಾನ ಮಾಡಲು ಮರೆಯಬೇಡಿ. ಸಂಕ್ರಾಂತಿ ಎಂದರೆ ಸೂರ್ಯನು ಮಕರ ರಾಶಿಗೆ ಪ್ರವೇಶಿಸುವ ಕಾಲ. ದಕ್ಷಿಣಾಯನ ಮುಗಿದು ಉತ್ತರಾಯಣ ಕಾಲ ಶುರುವಾಗುತ್ತದೆ. ಈ ಸಂದರ್ಭದಲ್ಲಿ ಸಕಲ ದೋಷಗಳ ನಿವಾರಣೆಗೆ ಬಡವರಿಗೆ ದಾನ ಮಾಡುವುದು ಅತ್ಯಂತ ಶ್ರೇಷ್ಠವೆಂದು ಪರಿಗಣಿಸಲಾಗಿದೆ. ವಿಶೇಷವಾಗಿ ಇಂದು ಮೂರು ವಸ್ತುಗಳನ್ನು ದಾನ ಮಾಡಲು ಮರೆಯಬೇಡಿ ಎಳ್ಳು, ಬೆಲ್ಲ ಮತ್ತು ಮೊಸರು. ಇದಕ್ಕೆ ಕಾರಣವೂ ಇದೆ.ಎಳ್ಳು ದಾನ: ಕಪ್ಪು ಎಳ್ಳು ದಾನ ಮಾಡುವುದರಿಂದ ಪಾಪ ತೊಡೆದು ಹೋಗುವುದು. ಜೊತೆಗೆ ಸಂಪತ್ತು ವೃದ್ಧಿಯಾಗಿ ಹಿರಿಯರ ಆಶೀರ್ವಾದ ಸಿಗುವುದು.
ಬೆಂಗಳೂರು: ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ತುಂತುರು ಮಳೆಯಾಗುತ್ತಿದೆ. ಇಂದೂ ಕೂಡಾ ಮಳೆಯಾಗುವ ಸಾಧ್ಯತೆಯಿದೆಯಾ ಇಲ್ಲಿದೆ ಹವಾಮಾನ ವರದಿ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ತುಂತುರು ಮಳೆಯಾಗಿತ್ತು. ಜೊತೆಗೆ ದಿನವಿಡೀ ದಟ್ಟ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಇಂದೂ ಕರಾವಳಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 27 ಡಿಗ್ರಿಯಷ್ಟಿರಲಿದೆ. ಕನಿಷ್ಠ ತಾಪಮಾನ 19 ಡಿಗ್ರಿಯಷ್ಟಿರಲಿದೆ ಎನ್ನಲಾಗಿದೆ.
ವಿದ್ಯೆಯ ಅಧಿದೇವತೆ ಸರಸ್ವತೀ ದೇವಿ. ವಿದ್ಯಾಭ್ಯಾಸದಲ್ಲಿ ಏಕಾಗ್ರತೆಯ ಕೊರತೆ, ಅಡ್ಡಿ ಎದುರಾಗುತ್ತಿದ್ದರೆ ತಪ್ಪದೇ ಈ ಪವರ್ ಫುಲ್ ಮಹಾ ಸರಸ್ವತಿ ಸ್ತವಂ ಸ್ತೋತ್ರವನ್ನು ಓದಿ.ಅಶ್ವತರ ಉವಾಚ ।ಜಗದ್ಧಾತ್ರೀಮಹಂ ದೇವೀಮಾರಿರಾಧಯಿಷುಃ ಶುಭಾಮ್ ।ಸ್ತೋಷ್ಯೇ ಪ್ರಣಮ್ಯ ಶಿರಸಾ ಬ್ರಹ್ಮಯೋನಿಂ ಸರಸ್ವತೀಮ್ ॥ 1 ॥ ಸದಸದ್ದೇವಿ ಯತ್ಕಿಂಚಿನ್ಮೋಕ್ಷವಚ್ಚಾರ್ಥವತ್ಪದಮ್ ।ತತ್ಸರ್ವಂ ತ್ವಯ್ಯಸಂಯೋಗಂ ಯೋಗವದ್ದೇವಿ ಸಂಸ್ಥಿತಮ್ ॥ 2 ॥ ತ್ವಮಕ್ಷರಂ ಪರಂ ದೇವಿ ಯತ್ರ ಸರ್ವಂ ಪ್ರತಿಷ್ಠಿತಮ್ ।ಅಕ್ಷರಂ ಪರಮಂ ದೇವಿ ಸಂಸ್ಥಿತಂ ಪರಮಾಣುವತ್ ॥ 3 ॥ ಅಕ್ಷರಂ ಪರಮಂ ಬ್ರಹ್ಮ ವಿಶ್ವಂಚೈತತ್ಕ್ಷರಾತ್ಮಕಮ್ ।ದಾರುಣ್ಯವಸ್ಥಿತೋ ವಹ್ನಿರ್ಭೌಮಾಶ್ಚ ಪರಮಾಣವಃ ॥ 4 ॥
ನಾವು ನಿದ್ರೆಗೆ ಜಾರುವ ಮುನ್ನಾ ಅನುಭವಿಸಿದ ಒತ್ತಡ, ಆತಂಕ ಮತ್ತು ನಕಾರಾತ್ಮಕ ಯೋಚನೆಗಳನ್ನು ಮರೆಯುವುದು ನಾಳಿನ ದಿನದ ಒಳಿತಿಗಾಗಿ ತುಂಬಾನೇ ಒಳ್ಳೆಯದು. *ದಿನದ ಕಹಿ ಘಟನೆಗಳನ್ನು ಮರೆತುಬಿಡುವುದು ಒಳಿತು:ಆ ದಿನದಲ್ಲಿ ಯಾರಿಂದ ಆದರೂ ಟೀಕಿಗೆ ಒಳಗಾಗಿದ್ದರೆ, ಕೆಲಸದಲ್ಲಿ ಸಣ್ಣ ತಪ್ಪುಗಳಾಗಿದ್ದರೆ ಅಥವಾ ಯಾರದೋ ಜೊತೆ ಮನಸ್ತಾಪವಾಗಿದ್ದರೆ ಅದನ್ನು ಅಲ್ಲೇ ಮರೆತು ಬಿಡಿ. *ನಾಳೆಯ ಬಗ್ಗೆ ಅತಿಯಾದ ಆತಂಕಇನ್ನೂ ನಾಳಿನ ಬಗ್ಗೆ ಯೋಚನೆ ಮಾಡುತ್ತಾ ಮಲಗಬೇಡಿ. ನಾಳೆಯ ಸವಾಲುಗಳನ್ನು ಎದುರಿಸಲು ಇಂದು ನಿಮಗೆ ಗಾಢವಾದ
ಬೆಂಗಳೂರು: ಗ್ರಾಮೀಣ ಭಾಗದ ಅಭಿವೃದ್ಧಿಗೆ ನೆರವಾಗಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಕೊಂದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು.ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ “ಮನರೇಗಾ ಬಚಾವ್ ಸಂಗ್ರಾಮ” ಹೋರಾಟದ ಪೂರ್ವಸಿದ್ಧತಾ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು. ಶ್ರೀಮತಿ ಸೋನಿಯಾ ಗಾಂಧಿ ಅವರು ಮನಮೋಹನ್ ಸಿಂಗ್ ಅವರ ಸರ್ಕಾರದಲ್ಲಿ ಸಂವಿಧಾನದ ಮೂಲಕ ಬಡವರಿಗೆ ಉದ್ಯೋಗ ಖಾತರಿ ಹಕ್ಕನ್ನು ನೀಡಿದ್ದರು. ಇದರಿಂದ ನಮ್ಮ ರಾಜ್ಯದ ಪಂಚಾಯಿತಿ ಹಾಗೂ ಗ್ರಾಮಗಳ ಮಟ್ಟದಲ್ಲಿ ಪ್ರತಿ ವರ್ಷ 6
ಇರಾನ್ನಾದ್ಯಂತ ನಡೆದ ಪ್ರತಿಭಟನೆಗಳಲ್ಲಿ ಇಲ್ಲಿಯವರೆಗೆ ಸುಮಾರು 2,000 ಜನರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಅಧಿಕಾರಿಯೊಬ್ಬರು ಮಂಗಳವಾರ (ಜನವರಿ 13, 2026) ತಿಳಿಸಿದ್ದಾರೆ. ಇದು ಅಧಿಕೃತವಾಗಿ ದೃಢಪಡಿಸಿದ ಅತಿ ಹೆಚ್ಚು ಸಾವಿನ ಸಂಖ್ಯೆಯಾಗಿದೆ.ಮೃತರಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಾಗರಿಕರು ಸೇರಿದ್ದಾರೆ ಎಂದು ಹೆಸರು ಹೇಳಲು ನಿರಾಕರಿಸಿದ ಅಧಿಕಾರಿಯೊಬ್ಬರು, ಸಾವುಗಳು ಮತ್ತು ದೀರ್ಘಕಾಲದ ಪ್ರತಿಭಟನೆಗಳು ಎರಡನ್ನೂ "ಭಯೋತ್ಪಾದಕ ಚಟುವಟಿಕೆಗಳಿಗೆ" ಕಾರಣವೆಂದು ಹೇಳಿದರು.ನಾಗರಿಕರು ಮತ್ತು ಭದ್ರತಾ ಸಿಬ್ಬಂದಿಗಳ ಸಂಖ್ಯೆಯ ಕುರಿತು ಅಧಿಕಾರಿ ಯಾವುದೇ ಹೆಚ್ಚಿನ ವಿವರಗಳನ್ನು ನೀಡಿಲ್ಲ. ಎರಡು
ಮಥುರಾ: ತನಗೆ ಕಚ್ಚಿದ ನಾಗರ ಹಾಹಾವನ್ನು ಹಿಡಿದುಕೊಂಡೆ ರಿಕ್ಷಾ ಚಾಲಕನೊಬ್ಬ ಆಸ್ಪತ್ರೆಗೆ ಬಂದಿರುವ ಘಟನೆ ಮಥುರಾದಲ್ಲಿ ವರದಿಯಾಗಿದೆ. ತನ್ನ ಜೇಬಿನಲ್ಲಿ 1.5 ಅಡಿ ಉದ್ದದ ಹಾವನ್ನು ಹಿಡಿದುಕೊಂಡು ಜಿಲ್ಲಾ ಆಸ್ಪತ್ರೆಗೆ ನಡೆದು ಹೋಗಿದ್ದಾನೆ, ಆ ಹಾವು ಅವನಿಗೆ ಕಚ್ಚಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿಯೂ ಕಾಣಿಸಿಕೊಂಡಿದೆ.ಸ್ಥಳೀಯರಾದ ದೀಪಕ್ (39) ಅವರನ್ನು ಸೋಮವಾರ (ಜನವರಿ 12, 2026) ರಂದು ಹಾವು ಕಚ್ಚಿತು ಮತ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದಾನೆ.
ಮೈಸೂರು: ಎಚ್.ಡಿ. ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ‘ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಇದೀಗ ರಾಜಕೀಯದಲ್ಲಿ ಕ್ರಿಯಾಶೀಲರಾಗಿದ್ದಾರೆ. ಇನ್ನೂ ಅವರು ರಾಜ್ಯ ರಾಜಕಾರಣಕ್ಕೆ ಬರುತ್ತಾರೋ, ಇಲ್ಲವೋ ನಮಗೆ ಗೊತ್ತಿಲ್ಲ. ಅದೆಲ್ಲವನ್ನೂ ಮಾಧ್ಯಮಗಳೇ ಹೇಳಬೇಕೆಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ ಗ್ರೇಟರ್ ಬೆಂಗಳೂರು ಜೊತೆಗೆ ಪಾಲಿಕೆ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ನಾವು ತಯಾರಾಗಿದ್ದಿ, ನಮ್ಮ ಮೇಲೆ ಜೆಡಿಎಸ್, ಬಿಜೆಪಿ ಮೈತ್ರಿ ಯಾವುದೇ ಪರಿಣಾಮ ಬೀರುವುದಿರಲ್ಲ ಎಂದರು.
ಬೆಂಗಳೂರು: ಮನರೇಗಾ ಬಚಾಶವ್ ಸಂಗ್ರಾಮ ಹೋರಾಟಕ್ಕೆ ಆಸಕ್ತಿ ತೋರದವರನ್ನು ಕಿತ್ತು ಹಾಕಲಾಗುವುದೆಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ “ಮನರೇಗಾ ಬಚಾವ್ ಸಂಗ್ರಾಮ” ಹೋರಾಟದ ಪೂರ್ವಸಿದ್ಧತಾ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು. ಎಐಸಿಸಿಯವರು ಕಾರ್ಯಕಾರಿ ಸಮಿತಿ ಸಭೆ ಮಾಡಿ, ಈ ವಿಚಾರವಾಗಿ ಪಕ್ಷದ ವತಿಯಿಂದ ಯಾವ ರೀತಿ ಹೋರಾಟ ಮಾಡಬೇಕು ಎಂದು ನಿರ್ದೇಶನ ನೀಡಿದ್ದಾರೆ. ಮೊದಲ ಹಂತದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರುಗಳು ಬಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಲಿದ್ದಾರೆ. ತಾಲ್ಲೂಕು ಮಟ್ಟಗಳಲ್ಲಿ ನೀವುಗಳು ಮಾಧ್ಯಮಗೋಷ್ಠಿ ಮಾಡಬೇಕು. ಪರಿಷತ್
ಅಸ್ತಾನಾ [ಕಝಾಕಿಸ್ತಾನ್]: ಪೂರ್ವ ಕಝಾಕಿಸ್ತಾನ್ನ ಅಲ್ಟಾಯ್ ಪರ್ವತಗಳಿಗೆ ವಿಹಾರ ಪ್ರವಾಸದಿಂದ ಹಿಂತಿರುಗುತ್ತಿದ್ದಾಗ ಓಸ್ಕೆಮೆನ್ನಲ್ಲಿ ಸೆಮಿ ವೈದ್ಯಕೀಯ ವಿಶ್ವವಿದ್ಯಾಲಯದ 11 ಭಾರತೀಯ ವಿದ್ಯಾರ್ಥಿಗಳು ರಸ್ತೆ ಅಪಘಾತದಲ್ಲಿ ಸಿಲುಕಿದ್ದಾರೆ ಎಂದು ಕಝಾಕಿಸ್ತಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಂಗಳವಾರ ತಿಳಿಸಿದೆ.ಎಕ್ಸ್ನಲ್ಲಿನ ಪೋಸ್ಟ್ನಲ್ಲಿ ವಿವರಗಳನ್ನು ಹಂಚಿಕೊಂಡ ರಾಯಭಾರ ಕಚೇರಿ, "ಓಸ್ಕೆಮೆನ್ನಲ್ಲಿ ನಡೆದ ದುರಂತ ಅಪಘಾತದಲ್ಲಿ, ಅಲ್ಟಾಯ್ ಪರ್ವತಗಳಿಗೆ (ಪೂರ್ವ ಕಝಾಕಿಸ್ತಾನ್) ವಿಹಾರ ಪ್ರವಾಸದಲ್ಲಿದ್ದ ಸೆಮಿ ವೈದ್ಯಕೀಯ ವಿಶ್ವವಿದ್ಯಾಲಯದ 11 ಭಾರತೀಯ ವಿದ್ಯಾರ್ಥಿಗಳ ಗುಂಪು ಓಸ್ಕೆಮೆನ್ ನಗರಕ್ಕೆ ಹಿಂತಿರುಗುವಾಗ ಅಪಘಾತವನ್ನು ಎದುರಿಸಿತು" ಎಂದು ಹೇಳಿದೆ.
ಚಳಿಗಾಲದ ಸಮಯದಲ್ಲಿ ವಾರಕ್ಕೆ ಒಂದು ಬಾರಿ ಹುರುಳಿ ಕಾಳನ್ನು ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನವನ್ನು ಪಡೆಯಬಹುದು. ಇನ್ನೂ ಹುರುಳಿ ಕಾಳನ್ನು "ಸೂಪರ್ ಫುಡ್" ಎಂದೇ ಪರಿಗಣಿಸಲಾಗುತ್ತದೆ. ವಿಶೇಷವಾಗಿ ಇದನ್ನು ಮೊಳಕೆ ಬರಿಸಿ ತಿನ್ನುವುದರಿಂದ ಅದರ ಶಕ್ತಿ ಮತ್ತು ಪೋಷಕಾಂಶಗಳು ಇನ್ನಷ್ಟು ಹೆಚ್ಚಾಗುತ್ತದೆ. ಹುರುಳಿ ಕಾಳು ಮೊಳಕೆ ಬರಿಸಿ ತಿನ್ನುವುದರಿಂದ ಆಗುವ ಪ್ರಯೋಜನ ಇಲ್ಲಿದೆ: ನಮ್ಮ ದೇಹದಲ್ಲಿನ ಅನಗತ್ಯ ಕೊಬ್ಬನ್ನು ಕರಗಿಸಲು ತುಂಬಾ ಸಹಕಾರಿಯಾಗಿದೆ. ಇದರಲ್ಲಿ ಪ್ರೋಟೀನ್ ಮತ್ತು ನಾರಿನಂಶ ಹೆಚ್ಚಾಗಿ ಇರುವುದರಿಂದ ಇದು ಹಸಿವನ್ನು ನಿಯಂತ್ರಿಸುತ್ತದೆ ಮತ್ತು ಮೆಟಬಾಲಿಸಂ ಹೆಚ್ಚಿಸಿ ತೂಕ ಇಳಿಸಲು ಸಹಾಯ ಮಾಡುತ್ತದೆ.
ಮೈಸೂರು: ತಮಿಳುನಾಡಿಗೆ ತೆರಳುವ ಮಾರ್ಗದಲ್ಲಿ ಮೈಸೂರಿಗೆ ಬಂದಿದ್ದ ರಾಹುಲ್ ಗಾಂಧಿ ಭೇಟಿ ಬಳಿಕ ಸಿಎಂ ಬದಲಾವಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಇಂದು ರಾಹುಲ್ ಗಾಂಧಿ ರಾಜ್ಯಕ್ಕೆ ಬರುತ್ತಿದ್ದಾರೆ ಎಂಬ ಸುದ್ದಿ ಬರುತ್ತಿದ್ದಂತೇ ನಾಯಕತ್ವ ಬದಲಾವಣೆ ಬಗ್ಗೆ ಏನು ತೀರ್ಮಾನವಾಗಬಹುದು ಎಂದು ಎಲ್ಲರೂ ಕುತೂಹಲದಿಂದ ಎದಿರು ನೋಡಿದ್ದರು. ಆದರೆ ರಾಹುಲ್ ಕೆಲವೇ ನಿಮಿಷ ಮೈಸೂರಿನಲ್ಲಿದ್ದು ವಾಪಸ್ ಆಗಿದ್ದರು. ಇದರ ನಡುವೆ ನಾಯಕತ್ವ ಬದಲಾವಣೆ ಬಗ್ಗೆ ಏನಾದರೂ ಚರ್ಚೆಯಾಗಿದೆಯೇ ಎಂದು ಮಾಧ್ಯಮಗಳು ಸಿಎಂ ಸಿದ್ದರಾಮಯ್ಯನವರನ್ನು ಪ್ರಶ್ನೆ ಮಾಡಿವೆ.
ನವದೆಹಲಿ: ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯ ಅವರು, ನಿರಂತರ ಮಧ್ಯಸ್ಥಿಕೆಗಳ ನಂತರ ಕ್ವಿಕ್, ಕಾಮರ್ಸ್ ಪ್ಲಾಟ್ಫಾರ್ಮ್ ಬ್ಲಿಂಕಿಟ್ನ ಕಡ್ಡಾಯವಾದ 10 ನಿಮಿಷಗಳ ವಿತರಣಾ ಗಡುವನ್ನು ತೆಗೆದುಹಾಕಲು ಪ್ರಮುಖ ವಿತರಣಾ ಸಂಗ್ರಾಹಕರನ್ನು ಮನವೊಲಿಸಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.ವಿತರಣಾ ಸಮಯಕ್ಕೆ ಸಂಬಂಧಿಸಿದ ಕಳವಳಗಳನ್ನು ಪರಿಹರಿಸಲು ಬ್ಲಿಂಕಿಟ್, ಜೆಪ್ಟೊ, ಜೊಮಾಟೊ ಮತ್ತು ಸ್ವಿಗ್ಗಿ ಸೇರಿದಂತೆ ಪ್ರಮುಖ ವೇದಿಕೆಗಳೊಂದಿಗೆ ಸಭೆ ನಡೆಸಲಾಯಿತು. ಮೂಲಗಳ ಪ್ರಕಾರ, ಬ್ಲಿಂಕಿಟ್ ಈಗಾಗಲೇ ನಿರ್ದೇಶನದ ಮೇರೆಗೆ ಕಾರ್ಯನಿರ್ವಹಿಸಿದೆ ಮತ್ತು ತನ್ನ ಬ್ರ್ಯಾಂಡಿಂಗ್ನಿಂದ 10 ನಿಮಿಷಗಳ ವಿತರಣಾ ಭರವಸೆಯನ್ನು ತೆಗೆದುಹಾಕಿದೆ.
ಮೈಸೂರು: ಸಿಎಂ ಕುರ್ಚಿ ಬದಲಾವಣೆ ವಿಚಾರದಿಂದ ಡಿಕೆ ಶಿವಕುಮಾರ್ ಅವರು ರಾಹುಲ್ ಗಾಂಧಿಯಿಂದ ದೂರವಾಗಿದ್ದಾರೆಂಬ ಮಾತು ರಾಜ್ಯ ರಾಜಕಾರಣದಲ್ಲಿ ಹರಿದಾಡುತ್ತಿದೆ. ಇದಕ್ಕೆಲ್ಲ ಕಾರಣ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ. ತಮಿಳುನಾಡಿನಲ್ಲಿ ವಿವಿಧ ಕಾರ್ಯಕ್ರಮಕ್ಕೆ ಭಾಗಿಯಾಗಲು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಮೈಸೂರಿಗೆ ಆಗಮಿಸಿದರು. ರಾಹುಲ್ ಗಾಂಧಿಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ವಾಗತಿಸಿದರು. ಆದರೆ ಡಿಕೆ ಶಿವಕುಮಾರ್ ಅವರು ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯಿಂದ ಅಂತವರನ್ನು ಕಾಯ್ದುಕೊಂಡಿದ್ದರು. ಸಿಎಂ ಕುರ್ಚಿ ಗುದ್ದಾಟದಿಂದಾಗಿ ಡಿಕೆ ಶಿವಕುಮಾರ್ ಅವರು ರಾಹುಲ್ ಗಾಂಧಿಯಿಂದ ದೂರವಾಗಿದ್ದಾರೆಂದು ಎಂದು
ಬೆಂಗಳೂರು: ಬಿಜೆಪಿ ಎಸ್ಐಆರ್ ಕಡೆ ಹೆಚ್ಚಿನ ಗಮನ ಕೊಡಲಿದೆ; ಅಲ್ಲದೇ ಮುಂದಿನ ದಿನಗಳಲ್ಲಿ ವಿಬಿ ಜಿ ರಾಮ್ ಜಿ ಕುರಿತು ಜಾಗೃತಿ ಮೂಡಿಸಲು ಮುಂದಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ 5ನೇ ತಾರೀಕಿನಿಂದ ಬೆಂಗಳೂರಿನಲ್ಲಿ ನಮ್ಮೆಲ್ಲ ವಿವಿಧ ಜಿಲ್ಲೆಗಳ ಸಭೆಗಳನ್ನು ಮಾಡುತ್ತಿದ್ದೇವೆ. ರಾಜ್ಯದ 39 ಸಂಘಟನಾತ್ಮಕ ಜಿಲ್ಲೆಗಳ ಸರಣಿ ಸಭೆ ನಡೆಸಲಾಗಿದೆ. ಇವತ್ತಿಗೆ ಬಹುತೇಕ 35 ಜಿಲ್ಲೆಗಳ ಸಭೆ ಪೂರ್ಣಗೊಳ್ಳುತ್ತಿದೆ ಎಂದು ವಿವರಿಸಿದರು.
ನವದೆಹಲಿ: ವಿಜಯ್ ಅಭಿನಯದ ಜನ ನಾಯಗನ್ ಚಿತ್ರವನ್ನು ಬೆಂಬಲಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಚಿತ್ರದ ಪ್ರಮಾಣೀಕರಣವನ್ನು ತಡೆಹಿಡಿದ ನಂತರ ಕೇಂದ್ರದ ಮೇಲೆ ವಾಗ್ದಾಳಿ ನಡೆಸಿದರು.ಇದು ತಮಿಳು ಸಂಸ್ಕೃತಿಯ ಮೇಲಿನ ದಾಳಿ ಎಂದು ಕರೆದರು. ತಮಿಳು ಜನರ ಧ್ವನಿಯನ್ನು ಹತ್ತಿಕ್ಕುವಲ್ಲಿ ಪ್ರಧಾನಿ ಮೋದಿ ಯಶಸ್ವಿಯಾಗುವುದಿಲ್ಲ ಎಂದು ಕಿಡಿಕಾರಿದರು.‘ಜನ ನಾಯಗನ್’ ಚಿತ್ರವನ್ನು ನಿರ್ಬಂಧಿಸಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪ್ರಯತ್ನವು ತಮಿಳು ಸಂಸ್ಕೃತಿಯ
ಚೆನ್ನೈ (ತಮಿಳುನಾಡು): ಕರೂರ್ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ದೆಹಲಿಯ ಸಿಬಿಐ ಪ್ರಧಾನ ಕಚೇರಿಯಲ್ಲಿ ವಿಚಾರಣೆಗೆ ಒಳಗಾದ ಒಂದು ದಿನದ ನಂತರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಮಂಗಳವಾರ ಚೆನ್ನೈಗೆ ಮರಳಿದರು. ಸಿಬಿಐ ಮೂಲಗಳ ಪ್ರಕಾರ, ಟಿವಿಕೆ ಮುಖ್ಯಸ್ಥರನ್ನು ನಂತರದ ದಿನಾಂಕದಲ್ಲಿ ಮತ್ತೊಮ್ಮೆ ವಿಚಾರಣೆಗೆ ಕರೆಯಲಾಗುವುದು. ಸೋಮವಾರ ಸಿಬಿಐ ಪ್ರಧಾನ ಕಚೇರಿಯಲ್ಲಿ ನಟ-ರಾಜಕಾರಣಿಯನ್ನು 7 ಗಂಟೆಗಳಿಗೂ ಹೆಚ್ಚು ಕಾಲ ಸಿಬಿಐ ಕಠಿಣ ವಿಚಾರಣೆಗೆ ಒಳಪಡಿಸಿತು. ಸೆಪ್ಟೆಂಬರ್ 2025 ರಲ್ಲಿ 41 ಜೀವಗಳನ್ನು ಬಲಿ ಪಡೆದ ಕರೂರ್ ಕಾಲ್ತುಳಿತದ ಮೇಲೆ ತನಿಖೆ ಕೇಂದ್ರೀಕೃತವಾಗಿದೆ.
ಬೆಂಗಳೂರು: ಮನ್ರೇಗಾ ಯೋಜನೆಗೆ ಗಾಂಧೀಜಿ ಹೆಸರು ಕಿತ್ತು ಹಾಕಿ ಅವರನ್ನು ಕೊಲೆ ಮಾಡಿದ್ದಾರೆ ಎಂದು ಕೇಂದ್ರದ ವಿರುದ್ಧ ಹೋರಾಟಕ್ಕಿಳಿದಿರುವ ಕಾಂಗ್ರೆಸ್ ಈಗ ತಾನೇ ತುಮಕೂರಿನ ಕ್ರೀಡಾಂಗಣಕ್ಕೆ ಗಾಂಧೀಜಿ ಹೆಸರು ಕಿತ್ತು ಡಾ ಜಿ ಪರಮೇಶ್ವರ್ ಹೆಸರಿಟ್ಟಿದ್ದಾರೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ. ‘ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ತುಮಕೂರಿನಲ್ಲಿ ಸುಮಾರು 60 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾದ ಮಹಾತ್ಮ ಗಾಂಧಿ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣಕ್ಕಿದ್ದ ಮಹಾತ್ಮ ಗಾಂಧೀಜಿಯವರ ಹೆಸರನ್ನು ತೆಗೆದು ಕಾಂಗ್ರೆಸ್ ಸರ್ಕಾರ ಸಚಿವ ಡಾ. ಜಿ. ಪರಮೇಶ್ವರ್ ಅವರ ಹೆಸರನ್ನು ಇಟ್ಟಿರುವುದು ಖಂಡನೀಯ.
ಬೆಂಗಳೂರು: ಸಿದ್ದರಾಮಯ್ಯ ಅವರು ಲೀಸ್ ಬೇಸ್ ಸಿಎಂ ಎಂದು ಕುಮಾರಸ್ವಾಮಿ ಟೀಕೆ ಮಾಡಿದ ಬೆನ್ನಲ್ಲೇ ಎಚ್ಡಿಕೆಗೆ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಕೌಂಟರ್ ನೀಡಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಲೀಸ್ ಬೇಸ್ ಸಿಎಂ ಆದ್ರೆ ಕುಮಾರಸ್ವಾಮಿ ಏನು. ಎಚ್ಡಿಕೆ 2 ಬಾರಿ ಸಿಎಂ ಆಗಿದ್ದರು. ಅವರು ಲೀಸ್ ಬೇಸ್ ಮೇಲೆ ಆಗಿದ್ದರು ತಾನೇ. ಸುಮ್ಮನೆ ಟೀಕೆ ಮಾಡಲು ಮಾತಾನಾಡುವುದು ಬೇಡ. ಕುಮಾರಸ್ವಾಮಿ ಅವರು ಯಾವತ್ತು 113 ತೆಗೆದುಕೊಂಡು ಸಿಎಂ ಆದವರಲ್ಲ.
ಬೆಂಗಳೂರು: ಜನವರಿ 8ರಂದು ನಟ ಯಶ್ ಅವರು 40ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಇದೀಗ ತಮ್ಮ ನೆಚ್ಚಿನ ನಟನಿಗೆ ಶುಭಕೋರಲು ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ ಪ್ರಕರಣವೊಂದು ದಾಖಲಾದ ಬಗ್ಗೆ ವರದಿಯಾಗಿದೆ. ವೇಣು ಕ್ರಿಯೇಶನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.ಜ.8ರಂದು ನಟ ಯಶ್ ಹುಟ್ಟುಹಬ್ಬದ ಹಿನ್ನೆಲೆ ಗಾಲ್ಫ್ ಕ್ಲಬ್ ಮುಂದೆ ಅವರ ಮನೆಯ ಎದುರು ಬ್ಯಾನರ್ ಹಾಕಲಾಗಿತ್ತು. ಹುಟ್ಟುಹಬ್ಬ ಶುಭಕೋರಿ ಹಾಕಲಾಗಿದ್ದ ಸಾಕಷ್ಟು ಫ್ಲೆಕ್ಸ್ಗಳನ್ನು ಹಾಕಿಸಲಾಗಿತ್ತು. ಈ ಹಿನ್ನೆಲೆ ಜಿಬಿಎ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.
ವಡೋದರಾ: ನ್ಯೂಜಿಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯವಾಡಲು ವಡೋದರಾಗೆ ಬಂದಿದ್ದ ವಿರಾಟ್ ಕೊಹ್ಲಿಗೆ ತನ್ನನ್ನೇ ಹೋಲುವ ಬಾಲಕನನ್ನು ನೋಡಿ ನಿಜಕ್ಕೂ ಅಚ್ಚರಿಯಾಗಿತ್ತು. ಈ ಹುಡುಗನನ್ನು ನೋಡಿ ರೋಹಿತ್ ಶರ್ಮಾ ಬಳಿ ಕೊಹ್ಲಿ ಏನು ಹೇಳಿದ್ರು ಎಂಬುದನ್ನು ಆ ಬಾಲಕನೇ ಈಗ ಹೇಳಿದ್ದಾನೆ ನೋಡಿ. ವಡೋದರಾ ಮೈದಾನದ ಬಳಿ ಕೊಹ್ಲಿ ಆಟೋಗ್ರಾಫ್ ಗಾಗಿ ಕೆಲವು ಹುಡುಗರು ನಿಂತಿದ್ದರು. ಅವರ ನಡುವೆ ಕೊಹ್ಲಿಗೆ ಈ ಬಾಲಕ ಗಮನ ಸೆಳೆದಿದ್ದ. ಯಾಕೆಂದರೆ ಆತನನ್ನು ನೋಡುವಾಗ ವಿರಾಟ್ ಚಿಕ್ಕವರಿದ್ದಾಗ ಇದ್ದಂತೇ ಇದ್ದ. ಥೇಟ್ ತನ್ನದೇ ಡುಪ್ಲಿಕೇಟ್ ಹುಡುಗನನ್ನು ನೋಡಿ ಕೊಹ್ಲಿಗೆ ನಗುವೋ ನಗು.
ಬೆಂಗಳೂರು: ಭಾರತದ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕೂಡಾ ಒಂದು. ಭಾರತದ ಮೂರನೇ ಅತಿ ದಟ್ಟಣೆಯ ವಿಮಾನ ನಿಲ್ದಾಣವಾಗಿ ಗುರುತಿಸಿಕೊಂಡಿದೆ. ಇಲ್ಲಿನ ವಿಮಾನ ನಿಲ್ದಾಣ ಮಹತ್ವದ ದಾಖಲೆ ಬರೆದಿದೆ. ಈ ನಿಲ್ದಾಣದ ಮೂಲಕ 2025ರಲ್ಲೇ 4.3 ಕೋಟಿ ಪ್ರಯಾಣಿಕರು ಓಡಾಟ ನಡೆಸಿದ್ದು, ಜಾಗತಿಕ ಮಟ್ಟದಲ್ಲಿ ಹೊಸ ದಾಖಲೆ ನಿರ್ಮಿಸಿದೆ. ಬೆಂಗಳೂರು ವಿಮಾನ ನಿಲ್ದಾಣದ ಪ್ರಯಾಣಿಕರ ಸಂಖ್ಯೆಯಲ್ಲಿ ಕಳೆದ ವರ್ಷ ಶೇ 8ರಷ್ಟು ಹೆಚ್ಚಳವಾಗಿದೆ. 2025ರಲ್ಲಿ 4.3 ಕೋಟಿ ಪ್ರಯಾಣಿಕರು ಓಡಾಟ ನಡೆಸಿದ್ದು, ಪ್ರಯಾಣಿಕರ ಸೇವೆ, ಕಾರ್ಯಕ್ಷಮತೆ, ಸರಕು ಹಾಗೂ ಸಾಗಾಣೆಯು ಏರಿಕೆಯಾಗಿದೆ. ಈ ಮೂಲಕ 2025ರಲ್ಲೇ ಪ್ರಯಾಣಿಕರು ಮತ್ತು ಸರಕು ಎರಡರಲ್ಲೂ ದಾಖಲೆಯ ಬೆಳವಣಿಗೆಯಾಗಿದೆ.
ಬೆಂಗಳೂರು: ಅನುದಾನ ಕೊಡಿ ಎಂದು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ಬೇಡಿಕೊಳ್ಳುವ ಸ್ಥಿತಿ ಕಾಂಗ್ರೆಸ್ ಸರ್ಕಾರದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವ್ಯಂಗ್ಯ ಮಾಡಿದ್ದಾರೆ. ನಿನ್ನೆ ಕಲಬುರಗಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ವೇದಿಕೆಯಲ್ಲೇ ಡಿಕೆ ಶಿವಕುಮಾರ್ ಗೆ ನಿಮ್ಮ ಕ್ಷೇತ್ರದಂತೆ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಅನುದಾನ ಕೊಡಿ ಎಂದು ಮಲ್ಲಿಕಾರ್ಜುನ ಖರ್ಗೆ ಕೇಳಿಕೊಂಡಿದ್ದರು. ಇದಕ್ಕೆ ವಿಜಯೇಂದ್ರ ವ್ಯಂಗ್ಯ ಮಾಡಿದ್ದಾರೆ. ‘ಕಾಂಗ್ರೆಸ್ ಪಕ್ಷದ ನಾಟಕಗಳನ್ನು ನೋಡಿ ನೋಡಿ ಜನರು ಬೇಸತ್ತಿದ್ದಾರೆ.
ಬೆಂಗಳೂರು: ನಟ ರಾಕಿಂಗ್ ಸ್ಟಾರ್ ಯಶ್ ತಮ್ಮ ವೃತ್ತಿ ಜೀವನದ ಆರಂಭದಲ್ಲಿ ರೊಮ್ಯಾನ್ಸ್ ಮಾಡೋದನ್ನು ಕಲಿಯುವುದಕ್ಕೆಂದೇ ಹೆಲ್ಮೆಟ್ ಹಾಕಿಕೊಂಡು ಪಾರ್ಕ್ ಗೆ ಹೋಗಿ ಕುಳಿತುಕೊಳ್ಳುತ್ತಿದ್ದರಂತೆ. ಹೀಗಂತ ಅವರೇ ಈ ಹಿಂದೆ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದರು. ರಾಕಿಂಗ್ ಸ್ಟಾರ್ ಯಶ್ ಟಾಕ್ಸಿಕ್ ಟೀಸರ್ ನಲ್ಲಿ ಬೆಡಗಿಯ ಜೊತೆ ಕಾರಿನಲ್ಲಿ ಸರಸದ ದೃಶ್ಯವೊಂದು ಫುಲ್ ವೈರಲ್ ಆಗಿದೆ. ಆದರೆ ಈ ಹಿಂದೆ ಅವರು ರೊಮ್ಯಾನ್ಸ್ ದೃಶ್ಯದಲ್ಲಿ ನಟಿಸಲು ಎಷ್ಟು ಕಷ್ಟಪಟ್ಟಿದ್ದರು ಎಂಬುದನ್ನು ಅವರು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದರು.
ಬೆಂಗಳೂರು, ಜನವರಿ 13, 2026: ವಿಕೇರ್ ಭಾರತದ ಮೊದಲ ಒಂದೇ ದಿನದ ಫೇಷಿಯಲ್ ಆರ್ಕಿಟೆಕ್ಚರ್ ಹೊಂದಿರುವ ಬೆಂಗಳೂರು ಸೆಂಟರ್ ಆಫ್ ಎಕ್ಸೆಲೆನ್ಸ್ ಪ್ರಾರಂಭಿಸಿದ್ದು ಇದು ಭಾರತದಲ್ಲಿ ಸುಧಾರಿತ ಚರ್ಮ ಮತ್ತು ಸೌಂದರ್ಯದ ಆರೈಕೆಯಲ್ಲಿ ಪ್ರಮುಖ ಹೆಜ್ಜೆಯಾಗಿದೆ.ಈ ಹೊಸ ಕೇಂದ್ರವನ್ನು ಭಾರತಕ್ಕೆ ಅಂತಾರಾಷ್ಟ್ರೀಯ ಚರ್ಮದ ಚಿಕಿತ್ಸೆಗಳನ್ನು ತರಲು ವಿನ್ಯಾಸಗೊಳಿಸಿದ್ದು ಜಾಗತಿಕ ತಂತ್ರಜ್ಞಾನವನ್ನು ವೈಯಕ್ತಿಕಗೊಳಿಸಿದ ಚರ್ಮದ ಆರೈಕೆಯೊಂದಿಗೆ ಸಂಯೋಜಿಸುತ್ತದೆ. ಹೈದರಾಬಾದ್ ಮತ್ತು ಬೆಂಗಳೂರುಗಳಲ್ಲಿ ದೃಢೀಕರಿಸಿದ ವಿಸ್ತರಣೆಯ ಯೋಜನೆಗಳನ್ನು ಹೊಂದಿರುವ ವಿಕೇರ್ ದಕ್ಷಿಣ ಭಾರತದಾದ್ಯಂತ ಪ್ರಮುಖ ಮೆಟ್ರೋಪಾಲಿಟನ್ ನಗರಗಳಲ್ಲಿ ಉಪಸ್ಥಿತಿ ವಿಸ್ತರಿಸಲಿದ್ದು ಅಂತಾರಾಷ್ಟ್ರೀಯ ಶ್ರೇಷ್ಠತೆಯ ಮಾನದಂಡಗಳಿಗೆ ಅನುಗುಣವಾದ ಸುಧಾರಿತ ಸೌಂದರ್ಯ ಆರೈಕೆಯನ್ನು ನೀಡುತ್ತದೆ.
ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆ ಮತ್ತು ಇಳಿಕೆಯಾಗುತ್ತಲೇ ಇದೆ. ಆದರೆ ಇಂದು ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಏರಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಏರಿಕೆ ಮತ್ತು ಇಳಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಏರಿಕೆಯಾಗಿದೆ. ಇಂದು ಮತ್ತೆ ಪರಿಶುದ್ಧ ಚಿನ್ನದ ದರ ಭಾರೀ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,42,715.00 ರೂ.ಗಳಿತ್ತು. ಇಂದು 1,44,790.00 ರೂ.ಗಳಷ್ಟಾಗಿದೆ.
ಮೈಸೂರು: ತಮಿಳುನಾಡಿಗೆ ಪ್ರಯಾಣ ಬೆಳೆಸುವ ಮಾರ್ಗ ಮಧ್ಯದಲ್ಲಿ ರಾಹುಲ್ ಗಾಂಧಿ ಇಂದು ಮೈಸೂರಿಗೆ ಬರಲಿದ್ದಾರೆ. ಆದರೆ ಅವರು ಹೆಚ್ಚು ಹೊತ್ತು ಮೈಸೂರಿನಲ್ಲಿ ಇರಲ್ಲ. ರಾಹುಲ್ ಗಾಂಧಿಗೆ ಮೈಸೂರಿನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸ್ವಾಗತ ಕೋರಲಿದ್ದಾರೆ. ಈ ವೇಳೆ ರಾಜ್ಯ ರಾಜಕೀಯದ ಬಗ್ಗೆ ಚರ್ಚೆಯಾಗಬಹದು, ನಾಯಕತ್ವ ಬದಲಾವಣೆ ಬಗ್ಗೆ ರಾಹುಲ್ ತಮ್ಮ ನಿಲುವು ಹೇಳಬಹುದು ಎಂದು ಎಲ್ಲರ ನಿರೀಕ್ಷೆಯಾಗಿತ್ತು. ಆದರೆ ಮೈಸೂರಿನಲ್ಲಿ ರಾಹುಲ್ ಇರೋದು ಕೇವಲ 15 ನಿಮಿಷ ಮಾತ್ರ ಎನ್ನಲಾಗಿದೆ. ಹೀಗೆ ಬಂದು ಹಾಗೇ ಹೋಗಲಿದ್ದಾರೆ ಕಾಂಗ್ರೆಸ್ ಅಧಿನಾಯಕ. ಹೀಗಾಗಿ ಈ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ಯಾವುದೇ ಚರ್ಚೆ ನಡೆಸಲು ಅವಕಾಶವೇ ಸಿಗದು.
ಬೆಂಗಳೂರು: ಗ್ಯಾರಂಟಿ ಯೋಜನೆಗಳು ನಿಮಗೆ ತಲುಪುತ್ತಿದೆಯಲ್ವಾ ಎಂದು ಡಿಕೆ ಶಿವಕುಮಾರ್ ಜನರನ್ನು ಕೇಳಿದಾಗ ಅವರು ಇಲ್ಲ ಎಂದು ಕೈ ತೋರಿಸಿದ ವಿಡಿಯೋವೊಂದನ್ನು ಹಂಚಿಕೊಂಡು ಬಿಜೆಪಿ ಟೀಕೆ ಮಾಡಿದೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಡಿಕೆ ಶಿವಕುಮಾರ್, ಗೃಹಲಕ್ಷ್ಮಿ ಹಣ ಬರ್ತಿದೆ ತಾನೇ ಎಂದು ಜನರನ್ನುದ್ದೇಶಿಸಿ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಕೆಲವು ಸಭೆಯಲ್ಲಿದ್ದ ಮಹಿಳೆಯರು ಇಲ್ಲ.. ಇಲ್ಲ ಎಂದು ಕೈ ತೋರಿಸಿದ್ದಾರೆ. ಈ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಬಿಜೆಪಿ ವ್ಯಂಗ್ಯ ಮಾಡಿದೆ.
ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕಿ ಸ್ಮೃತಿ ಮಂಧಾನ ತಮ್ಮ ನಿಕ್ ನೇಮ್ ಏನು ಮತ್ತು ಆ ಹೆಸರಿನಿಂದ ತಮ್ಮನ್ನು ಕರೆಯಲು ಕಾರಣವೇನೆಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಎಲ್ಲಾ ಕ್ರಿಕೆಟಿಗರಿಗೂ ವಿಶೇಷ ಅಡ್ಡ ಹೆಸರುಗಳಿರುತ್ತವೆ. ಉದಾಹರಣೆಗೆ ವಿರಾಟ್ ಕೊಹ್ಲಿಗೆ ಚೀಕು, ರಾಹುಲ್ ದ್ರಾವಿಡ್ ಗೆ ಜ್ಯಾಮಿ ಹೀಗೆ.. ಅದೇ ರೀತಿ ಸ್ಮೃತಿ ಮಂಧಾನಗೂ ಒಂದು ನಿಕ್ ನೇಮ್ ಇದೆಯಂತೆ. ಅದನ್ನು ಅವರೇ ಹೇಳಿಕೊಂಡಿದ್ದಾರೆ. ಸ್ಮೃತಿ ಮಂಧಾನಗೆ ಅವರ ತಂದೆ ಇಟ್ಟಿರುವ ನಿಕ್ ನೇಮ್ ಬೇಬೂ. ಈ ಹೆಸರಿನಿಂದ ಕರೆಯುವುದಕ್ಕೆ ಒಂದು ಕಾರಣವೂ ಇದೆ ಎಂದು ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.
ವಡೋದರ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಗಾಯವಿದ್ದರೂ ವಾಷಿಂಗ್ಟನ್ ಸುಂದರ್ ರನ್ನು ಕೋಚ್ ಗೌತಮ್ ಗಂಭೀರ್ ಅಪಾಯಕ್ಕೆ ದೂಡಿದ್ದು ಯಾಕೆ ಎಂದು ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊದಲ ಏಕದಿನ ಪಂದ್ಯದ ಗೆಲುವಿನಲ್ಲಿ ವಾಷಿಂಗ್ಟನ್ ಸುಂದರ್ ಬೌಲಿಂಗ್ ವೇಳೆ ಗಾಯಗೊಂಡಿದ್ದರು. ಅವರಿಗೆ ಕಾಲು ನೋವಿದ್ದರೂ ಬ್ಯಾಟಿಂಗ್ ಗಿಳಿಸಲಾಗಿತ್ತು. ಕೆಎಲ್ ರಾಹುಲ್ ಜೊತೆ ಅವರಿಗೆ ವಿಕೆಟ್ ನಡುವೆ ರನ್ ಗಾಗಿ ಓಡಲೂ ಕಷ್ಟವಾಗಿತ್ತು.ಇಂತಹ ಸಂದರ್ಭದಲ್ಲಿ ಕುಲದೀಪ್ ಯಾದವ್ ರನ್ನು ಮೊದಲು ಬ್ಯಾಟಿಂಗ್ ಗೆ ಕಳುಹಿಸಬಹುದಿತ್ತಿಲ್ಲವೇ?
ಕಲಬುರಗಿ: ಚುನಾವಣೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮನಾಥ ಮಂದಿರ ಸಂಭ್ರಮಾಚರಣೆ ಮಾಡ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ಸೋಮನಾಥ ಮಂದಿರದ ಮೇಲೆ ದಾಳಿಯಾದ ಬಳಿಕ 1000 ವರ್ಷಗಳ ಸಂಭ್ರಮಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದರು. ದೇಶದ ಜನತೆಗೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಆಹ್ವಾನ ನೀಡಿದ್ದರು. ಇದರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ಇದೆಲ್ಲಾ ಚುನಾವಣೆ ಗಿಮಿಕ್ ಎಂದು ಹೇಳಿದ್ದಾರೆ. ಪಂಚ ರಾಜ್ಯ ಚುನಾವಣೆ ಹತ್ತಿರ ಬರುತ್ತಿದೆ. ಇದಕ್ಕಾಗಿ ಮೋದಿ ಈ ಗಿಮಿಕ್ ಮಾಡುತ್ತಿದ್ದಾರೆ ಎಂದಿದ್ದಾರೆ.