ಮುಂಬೈ: ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಡಬ್ಲ್ಯುಪಿಎಲ್ 2026 ರ ಮೊದಲ ಪಂದ್ಯವನ್ನು ಆರ್ ಸಿಬಿ ರೋಚಕವಾಗಿ 3 ವಿಕೆಟ್ ಗಳಿಂದ ಗೆದ್ದುಕೊಂಡಿದೆ. ಕೊನೆಯ ಎಸೆತದಲ್ಲಿ ಮುಂಬೈ ಬೌಲರ್ ಸಿವರ್ ಬ್ರಂಟ್ ಮಾಡಿದ ಆ ಒಂದು ತಪ್ಪಿನಿಂದ ನಡಿನ್ ಡಿ ಕ್ಲರ್ಕ್ ಗೆಲುವಿನ ರನ್ ಗಳಿಸುವಂತಾಯಿತು. ಗೆಲ್ಲಲು 155 ರನ್ ಗಳ ಸುಲಭ ಗುರಿ ಬೆನ್ನತ್ತಿದ್ದರೂ ಆರ್ ಸಿಬಿ ಟಾಪ್ ಬ್ಯಾಟಿಗರ ವೈಫಲ್ಯದಿಂದ ಸೋಲಿನ ಭೀತಿಯಲ್ಲಿತ್ತು. ಸ್ಮೃತಿ ಮಂಧಾನ-ಗ್ರೇಸ್ ಹ್ಯಾರಿಸ್ 40 ರನ್ ಗಳ ಉತ್ತಮ ಆರಂಭ ನೀಡಿದರು. ಆದರೆ 18 ರನ್ ಗಳಿಸಿದ್ದ ನಾಯಕಿ ಸ್ಮೃತಿ ಮಂಧಾನ ಔಟಾಗುವುದರೊಂದಿಗೆ ಆರ್ ಸಿಬಿ ಟಾಪ್ ಆರ್ಡರ್ ಕುಸಿತ ಆರಂಭವಾಯಿತು.
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ವಿಪರೀತ ಚಳಿಯಾಗಿತ್ತು. ಆದರೆ ಈ ವಾರಂತ್ಯಕ್ಕೆ ಕೆಲವು ಜಿಲ್ಲೆಗಳಿಗೆ ತುಂತುರು ಮಳೆಯ ಸೂಚನೆಯೂ ಇದೆ. ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ, ವಾರದ ಹವಾಮಾನ ವರದಿ ಇಲ್ಲಿದೆ ನೋಡಿ. ಇಂದು ಮತ್ತೆ ನಾಳೆ ರಾಜ್ಯದ ಕನಿಷ್ಠ ತಾಪಮಾನದಲ್ಲಿ ಕೊಂಚ ಏರಿಕೆಯಾಗಲಿದೆ. ಆದರೆ ಚಳಿಯ ಜೊತೆಗೆ ಮೋಡ ಕವಿದ ವಾತಾವರಣ ಮತ್ತು ಕೆಲವೆಡೆ ಮಳೆಯ ಸೂಚನೆಯೂ ಇದೆ. ಇಂದು ರಾಜ್ಯದ ಕನಿಷ್ಠ ತಾಪಮಾನ 18 ಡಿಗ್ರಿಯಷ್ಟಿದ್ದರೆ ಗರಿಷ್ಠ ತಾಪಮಾನ 23 ಡಿಗ್ರಿಯಷ್ಟು ಕಂಡುಬರಲಿದೆ.
ಇಂದು ಶನಿವಾರವಾಗಿದ್ದು ಶನಿದೋಷ ನಿವಾರಣೆಗೆ ದಶರಥ ಕೃತ ಶನೈಶ್ಚರ ಮಂತ್ರವನ್ನು ಪಠಿಸುವುದು ಶ್ರೇಯಸ್ಕರ. ಶನಿವಾರ ಮಾತ್ರವಲ್ಲದೆ ಪ್ರತಿನಿತ್ಯ ಪಠಿಸುವುದರಿಂದಲೂ ಶನಿ ದೋಷ ನಿವಾರಣೆಯಾಗುವುದು. ಕನ್ನಡದಲ್ಲಿ ಇಲ್ಲಿದೆ.ನಮಃ ಕೃಷ್ಣಾಯ ನೀಲಾಯ ಶಿಖಿಖಂಡನಿಭಾಯ ಚ ।ನಮೋ ನೀಲಮಧೂಕಾಯ ನೀಲೋತ್ಪಲನಿಭಾಯ ಚ ॥ 1 ॥ ನಮೋ ನಿರ್ಮಾಂಸದೇಹಾಯ ದೀರ್ಘಶ್ರುತಿಜಟಾಯ ಚ ।ನಮೋ ವಿಶಾಲನೇತ್ರಾಯ ಶುಷ್ಕೋದರ ಭಯಾನಕ ॥ 2 ॥ ನಮಃ ಪೌರುಷಗಾತ್ರಾಯ ಸ್ಥೂಲರೋಮಾಯ ತೇ ನಮಃ ।ನಮೋ ನಿತ್ಯಂ ಕ್ಷುಧಾರ್ತಾಯ ನಿತ್ಯತೃಪ್ತಾಯ ತೇ ನಮಃ ॥ 3 ॥
ಬೆಂಗಳೂರು: ರಾಜ್ಯ ಸರ್ಕಾರ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಿ ರಾಜ್ಯಪಾಲರಿಂದ ಅನುಮೋದನೆಗಾಗಿ ಕಳುಹಿಸಿದ್ದ ಒಟ್ಟು 22 ಮಸೂದೆಗಳ ಪೈಕಿ 19ಕ್ಕೆ ವಿಧೇಯಕಗಳಿಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. ವಿಪಕ್ಷಗಳಿಂದ ಭಾರೀ ವಿರೋಧಕ್ಕೆ ಕಾರಣವಾದ ದ್ವೇಷ ಭಾಷಣ ಮಸೂದೆಗೆ ರಾಜ್ಯಪಾಲರು ಸಹಿ ಹಾಕದಿರುವುದರಿಂದ ಇನ್ನೂ ಪರಿಶೀಲನೆಯಲ್ಲಿದೆ.ಈ ಬಗ್ಗೆ ಲೋಕಭವನ ಶುಕ್ರವಾರ ಮಾಹಿತಿ ಹಂಚಿಕೊಂಡು, ಎರಡು ಮಸೂದೆಗಳಾದ ಕರ್ನಾಟಕ ಪರಿಶಿಷ್ಟ ಜಾತಿ(SC ಒಳ
ಬಳ್ಳಾರಿ: ಎರಡು ಗುಂಪುಗಳ ನಡುವೆ ನಡೆದ ಗಲಭೆಯಲ್ಲಿ ಓರ್ವನ ಹತ್ಯೆಗೆ ಕಾರಣವಾದ ಬಳ್ಳಾರಿ ಶೂಟೌಟ್ ಪ್ರಕರಣ ಸಂಬಂಧ ಇದೀಗ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ವಹಿಸಿದೆ. ಇನ್ನೂ ಕೈ ಕಾರ್ಯಕರ್ತ ರಾಜಶೇಖರ್ ಸಾವಿಗೆ ಶಾಸಕ ನಾರಾ ಭರತ್ ರೆಡ್ಡಿ, ಸತೀಶ್ ರೆಡ್ಡಿಯೇ ನೇರ ಕಾರಣ, ಇಬ್ಬರನ್ನೂ ತಕ್ಷಣ ಬಂಧಿಸಬೇಕು ಅಂತ ಜನಾರ್ದನ ರೆಡ್ಡಿ ಆಗ್ರಹಿಸಿದ್ದಾರೆ. ಮೊನ್ನೆಯಷ್ಟೇ ಎರಡು ಬಾರಿ ರಾಜಶೇಖರ್ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದಿದ್ದ ರೆಡ್ಡಿ ಈಗ ಅಂತ್ಯಕ್ರಿಯೆ ಸಂಬಂಧ ಇನ್ನೊಂದು ವಿಡಿಯೋ ರಿಲೀಸ್ ಮಾಡಿದ್ದಾರೆ. ಜನಾರ್ದನ ರೆಡ್ಡಿ ಅವರು ಗಲಭೆಯಲ್ಲಿ ಮೃತಪಟ್ಟ ರಾಜಶೇಖರ್ ಅಂತ್ಯಕ್ರಿಯೆಯಲ್ಲಿ ಸಾಕ್ಷ್ಯನಾಶದ ಪ್ರಯತ್ನ ನಡೆದಿದೆ ಎಂದು
ಮುಂಬೈ: ಡಬ್ಲ್ಯುಪಿಎಲ್ 2026 ರಲ್ಲಿ ಇಂದು ಮುಂಬೈ ಇಂಡಿಯನ್ಸ್ ವಿರುದ್ಧ ಆರಂಭಿಕ ಪಂದ್ಯದಲ್ಲಿ ಆರ್ ಸಿಬಿ ಪರ ಅದ್ಭುತ ಬೌಲಿಂಗ್ ಮಾಡಿದ ವಿದೇಶೀ ತಾರೆಯರು ಎದುರಾಳಿಯನ್ನು 154 ರನ್ ಗಳಿಗೆ ಕಟ್ಟಿ ಹಾಕಿದೆ. ಮೊದಲ ಪಂದ್ಯದಲ್ಲೇ ಆರ್ ಸಿಬಿ ನಾಯಕಿ ಸ್ಮೃತಿ ಮಂಧಾನ ಟಾಸ್ ಗೆದ್ದು ಶುಭಾರಂಭ ಮಾಡಿದ್ದಾರೆ. ತೇವಾಂಶವಿರುವ ಕಾರಣಕ್ಕೆ ಸ್ಮೃತಿ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ನಾಯಕಿಯ ಆಯ್ಕೆ ಸಮರ್ಥಿಸುವಂತೆ ಆಡಿದ ಆರ್ ಸಿಬಿ ಬೌಲರ್ ಗಳು ಅದರಲ್ಲೂ ವಿಶೇಷವಾಗಿ ನಡಿನ್ ಡಿ ಕ್ಲರ್ಕ್ 4 ವಿಕೆಟ್ ಕಬಳಿಸಿ ಮಿಂಚಿದರು.
ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಒಂಬತ್ತು ಜನರು ಸಾವನ್ನಪ್ಪಿದ್ದು, ಸುಮಾರು 40 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿಮ್ಲಾದಿಂದ ರಾಜ್ಗಢ ಮೂಲಕ ಕುಪ್ವಿಗೆ ತೆರಳುತ್ತಿದ್ದ ಬಸ್, ಜಿಲ್ಲಾ ಕೇಂದ್ರವಾದ ನಹಾನ್ನಿಂದ ಸುಮಾರು 95 ಕಿಲೋಮೀಟರ್ ದೂರದಲ್ಲಿರುವ ಹರಿಪುರ್ಧರ್ ಗ್ರಾಮದ ಬಳಿ ರಸ್ತೆಯಿಂದ ಹೊರಗುಳಿದು ಕಂದಕಕ್ಕೆ ಉರುಳಿ ತಲೆಕೆಳಗಾಗಿ ಬಿದ್ದಿದೆ.ರಕ್ಷಣಾ ಕಾರ್ಯಾಚರಣೆ ಯುದ್ಧೋಪಾದಿಯಲ್ಲಿ ನಡೆಯುತ್ತಿದೆ ಮತ್ತು ಎಲ್ಲಾ ಗಾಯಾಳುಗಳು ಮತ್ತು ಶವಗಳನ್ನು ಹತ್ತಿರದ ಸಂಗ್ರಾಹ್ ಮತ್ತು ದಾದಾಹು ಆಸ್ಪತ್ರೆಗಳಿಗೆ ಸಾಗಿಸಲಾಗುತ್ತಿದೆ ಎಂದು ಅವರು ಹೇಳಿದರು.
ಶ್ರೀನಗರ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು "ಹುಲಿ" ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಶುಕ್ರವಾರ ಬಣ್ಣಿಸಿದ್ದು, ಟಿಎಂಸಿ ಮುಖ್ಯಸ್ಥೆ "ತುಂಬಾ ಧೈರ್ಯಶಾಲಿ" ಮತ್ತು ಯಾವುದೇ ಕಾರಣಕ್ಕೂ ಶರಣಾಗುವುದಿಲ್ಲ ಎಂದು ಹೇಳಿದರು.ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ ಕಚೇರಿ ಮತ್ತು ಕೋಲ್ಕತ್ತಾದಲ್ಲಿರುವ ಅದರ ನಿರ್ದೇಶಕ ಪ್ರತೀಕ್ ಜೈನ್ ಅವರ ನಿವಾಸದಲ್ಲಿ ಗುರುವಾರ ಇಡಿ ನಡೆಸಿದ ದಾಳಿಗೆ ಮುಫ್ತಿ ಪ್ರತಿಕ್ರಿಯಿಸಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ದಾಳಿ ಸ್ಥಳಕ್ಕೆ ನುಗ್ಗಿ, ರಾಜ್ಯ ಚುನಾವಣೆಗೆ ಮುನ್ನ ಕೇಂದ್ರ ಸಂಸ್ಥೆ ಟಿಎಂಸಿಯ ಸೂಕ್ಷ್ಮ
ಬೆಂಗಳೂರು: ಬೊಮ್ಮನಹಳ್ಳಿಯ ಪ್ರತಿಷ್ಠಿತ ಖಾಸಗಿ ಡೇಂಟಲ್ ಕಾಲೇಜಿನಲ್ಲಿ ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಭಾರೀ ಅನುಮಾನ ವ್ಯಕ್ತವಾಗಿದೆ. ಇದೀಗ ವಿದ್ಯಾರ್ಥಿ ಆತ್ಮಹತ್ಯೆ ಹಿಂದೆ ಡೆಂಟಲ್ ಕಾಲೇಜು ಆಡಳಿತ ಮಂಡಳಿಯ ಕಿರುಕುಳ ಆರೋಪ ವ್ಯಕ್ತವಾಗಿದೆ. ಮೃತ ವಿದ್ಯಾರ್ಥಿನಿಯನ್ನು 23 ವರ್ಷದ ಯಶಸ್ವಿನಿ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ಸ್ನೇಹಿತರು ನ್ಯಾಯಕ್ಕಾಗಿ ಆಗ್ರಹಿಸಿ ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಸೆಮಿನಾರ್ ಗೆ ಅವಕಾಶ ನೀಡದೇ ವಿದ್ಯಾರ್ಥಿನಿಗೆ ಕಾಲೇಜಿನಲ್ಲಿ ಕಿರುಕುಳ ನೀಡಿ ಅವಮಾನ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ.
ಮಂಗಳೂರು: ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವು ಚುನಾವಣಾ ಬಾಂಡ್ ಹಾಗೂ ಪಿಎಂ ಕೇರ್ಸ್ ನಿಧಿಯ ಮೇಲಿನ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದೆಯೆಂದು ಸರ್ಕಾರ ಚುನಾವಣಾ ಬಾಂಡ್ಗಳು ಮತ್ತು ಪಿಎಂ ಕೇರ್ಸ್ ನಿಧಿಯ ಮೇಲಿನ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪ ಮಾಡಿದರು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಜಾಹೀರಾರತು ನೀಡಿರುವ ಪ್ರಕರಣ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವಿರಾರು ಕೋಟಿ ರೂಪಾಯಿಗಳನ್ನು ಒಳಗೊಂಡಿರುವ ಚುನಾವಣಾ ಬಾಂಡ್ ಯೋಜನೆಗೆ ಹಣವನ್ನು ಯಾರು ದಾನ ಮಾಡಿದರು ಅಥವಾ ಅದರಿಂದ ಯಾರು ಲಾಭ ಪಡೆದರು ಎಂಬುದರ ಕುರಿತು ಇನ್ನೂ ಸ್ಪಷ್ಟತೆಯಿಲ್ಲ ಎಂದು ಹೇಳಿದರು.
ಪುಣೆ (ಮಹಾರಾಷ್ಟ್ರ): ಪುಣೆ ಮಹಾನಗರ ಪಾಲಿಕೆ ಚುನಾವಣೆಗೆ ಮುನ್ನ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಶಿವಸೇನಾ ಮುಖ್ಯಸ್ಥ ಏಕನಾಥ್ ಶಿಂಧೆ ಶುಕ್ರವಾರ ಪುಣೆಯಲ್ಲಿ ಪ್ರಚಾರ ನಡೆಸಿದ್ದು, ಮಹಾಯುತಿ ಮೈತ್ರಿಕೂಟವು ಅಭಿವೃದ್ಧಿಯ ನೆಲೆಯಲ್ಲಿ ನಾಗರಿಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ ಮತ್ತು ಮುಂಬೈ ಮತ್ತು ಪುಣೆ ಎರಡರಲ್ಲೂ ವಿಜಯಶಾಲಿಯಾಗಲಿದೆ ಎಂದು ಪ್ರತಿಪಾದಿಸಿದರು. ಕತ್ರಾಜ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿಂಧೆ, ಯಾವುದೇ ವೈಯಕ್ತಿಕ ಪಕ್ಷದ ಕಾರ್ಯಕರ್ತರು ನೀಡಿದ ಹೇಳಿಕೆಗಳ ಬಗ್ಗೆ ತನಗೆ ತಿಳಿದಿಲ್ಲ ಎಂದು ಹೇಳಿದರು, ಆದರೆ ಶಿವಸೇನೆ ಮತ್ತು ಭಾರತೀಯ ಜನತಾ ಪಕ್ಷವು ಪೂರ್ಣ ಶಕ್ತಿಯಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿವೆ ಎಂದು ಒತ್ತಿ ಹೇಳಿದರು.
ಚಳಿಗಾಲದಲ್ಲಿ ಮಕ್ಕಳಿಗೆ ಸ್ಥಾನ ಮಾಡಿಸುವಾಗ ತುಂಬಾನೇ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಆದ್ದರಿಂದ, ಚಳಿಗಾಲದಲ್ಲಿ ಮಕ್ಕಳಿಗೆ ಸ್ನಾನ ಮಾಡಿಸುವಾಗ ಕೆಲವು ಮುನ್ನೆಚ್ಚರಿಕೆಗಳನ್ನು ವಹಿಸುವುದು ಬಹಳ ಮುಖ್ಯ.ಮಕ್ಕಳ ಸುರಕ್ಷಿತ ಸ್ನಾನಕ್ಕಾಗಿ ಇಲ್ಲಿದೆ ಕೆಲವೊಂದು ಟಿಪ್ಸ್ಗಳು*ನೀರಿನ ತಾಪಮಾನ ಹೇಗಿರಬೇಕು? ಈ ಸಂದರ್ಭದಲ್ಲಿ ಉಗುರುಬೆಚ್ಚಗಿನ ನೀರನ್ನು ಬಳಸಿ ಸ್ಥಾನ ಮಾಡಿಸಿ. ಚಳಿಯೆಂದು ಅತಿಯಾದ ಬಿಸಿ ನೀರಿನಲ್ಲೂ ಸ್ಥಾನ ಮಾಡಿಸಬಾರದು. ಏಕೆಂದರೆ ಅತಿಯಾದ ಬಿಸಿ ನೀರು ಮಗುವಿನ ಚರ್ಮದ ನೈಸರ್ಗಿಕ ತೈಲವನ್ನು ತೆಗೆದುಹಾಕಿ ಚರ್ಮವನ್ನು ಇನ್ನಷ್ಟು ಒಣಗಿಸುತ್ತದೆ.
ತಿರುವನಂತಪುರಂ: ಶಬರಿಮಲೆಯಲ್ಲಿ ನಡೆದ ಭಾರೀ ಸುದ್ದಿಯಾಗಿದ್ದ ಚಿನ್ನ ಕಳ್ಳತನ ಪ್ರಕರಣದಲ್ಲಿ ಶಬರಿಮಲೆಯ ಮಾಜಿ ತಂತ್ರಿ ಕಂದರಾರು ರಾಜೀವರು ಅವರನ್ನು ಬಂಧಿಸಲಾಗಿದೆ. ವಿಶೇಷ ತನಿಖಾ ತಂಡ (ಎಸ್ಐಟಿ) ಬಂಧನ ದಾಖಲಿಸಿದೆ. ಶುಕ್ರವಾರ ವಿಚಾರಣೆಗಾಗಿ ಎಸ್ಐಟಿ ಕಚೇರಿಗೆ ಕರೆತಂದ ನಂತರ ರಾಜೀವರು ಅವರನ್ನು ವಶಕ್ಕೆ ಪಡೆಯಲಾಗಿದೆ.ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷ ಎ. ಪದ್ಮಕುಮಾರ್ ಮತ್ತು ಇತರರು ನೀಡಿದ ಹಿಂದಿನ ಹೇಳಿಕೆಗಳಲ್ಲಿ, ಮೊದಲ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಅವರನ್ನು ಶಬರಿಮಲೆಗೆ ಕರೆತಂದವರು ಆಗಿನ ತಂತ್ರಿ ಕಂದರಾರು ರಾಜೀವರು ಎಂದು ಹೇಳಿದ್ದರು. ಸವೆತದಿಂದಾಗಿ ತಾಮ್ರ ಕಾಣಿಸಿಕೊಳ್ಳಲು ಪ್ರಾರಂಭಿಸಿದ ಚಿನ್ನದ ಲೇಪಿತ ಫಲಕಗಳನ್ನು ಮರು-ಲೇಪಿಸುವಿಕೆಗಾಗಿ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ವಿಚಾರ ದೇಶದ ಸುದ್ದಿಯಾಗಿದೆ. ಜನರು ಇದರ ಸತ್ಯಾಂಶ ತಿಳಿಯಲು ಬಯಸುತ್ತಿದ್ದಾರೆ. ಆದ್ದರಿಂದ ಘಟನೆಯ ನ್ಯಾಯಾಂಗ ತನಿಖೆ ಮಾಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಗ್ರಹಿಸಿದ್ದಾರೆ.ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ ಸಂಬಂಧ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಭಾರತಿ ಶೆಟ್ಟಿ ಅವರು ಇಂದು ಸಂತ್ರಸ್ತ ಮಹಿಳೆಯ ಮನೆಗೆ ಭೇಟಿ ನೀಡಿದ್ದರು. ಬಳಿಕ ಆರ್.ಅಶೋಕ್ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.
ಲಕ್ನೋ (ಉತ್ತರ ಪ್ರದೇಶ): ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಲಕ್ನೋದಲ್ಲಿರುವ ಅಶೋಕ್ ಲೇಲ್ಯಾಂಡ್ನ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿದರು. ಇವಿ ಸ್ಥಾವರ ಉದ್ಘಾಟನೆಗೆ ಭೇಟಿ ನೀಡಿದ ಸಂದರ್ಭದಲ್ಲಿ, ಅವರು ಸೌಲಭ್ಯದಲ್ಲಿ ತಯಾರಿಸಲಾದ ಲಘು ಯುದ್ಧತಂತ್ರದ ವಾಹನಗಳು, ಮಾನವರಹಿತ ನೆಲದ ವಾಹನಗಳು, ಗಣಿ ಸಂರಕ್ಷಿತ ವಾಹನಗಳು ಮತ್ತು ಲಾಜಿಸ್ಟಿಕ್ಸ್ ಡ್ರೋನ್ಗಳ ಉತ್ಪಾದನೆಯನ್ನು ಪರಿಶೀಲಿಸಿದರು.
ಬೆಂಗಳೂರು: ರಾಜ್ಯದಲ್ಲಿ ಕುಸ್ತಿ ಕದನದ ನಡುವೆಯೇ ಡಿಸಿಎಂ ಡಿಕೆ ಶಿವಕುಮಾರ್ ಗೆ ಕಾಂಗ್ರೆಸ್ ಹೈಕಮಾಂಡ್ ನಾಯಕ ರಾಹುಲ್ ಗಾಂಧಿ ಮಹತ್ವದ ಜವಾಬ್ಧಾರಿಯೊಂದನ್ನು ಕೊಟ್ಟಿದ್ದಾರೆ. ಒಂದೆಡೆ ಹೊಸ ವರ್ಷದಲ್ಲಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಬಹುದೇ ಎಂದು ಜನರು ಕುತೂಹಲದಿಂದ ನೋಡುತ್ತಿದ್ದಾರೆ. ಇತ್ತ ಡಿಕೆ ಶಿವಕುಮಾರ್ ಬೆಂಬಲಿಗರು ಹೇಗಾದರೂ ತಮ್ಮ ನಾಯಕನನ್ನು ಸಿಎಂ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಎಲ್ಲಾ ನಿರ್ಧಾರವೂ ಹೈಕಮಾಂಡ್ ಕೈಯಲ್ಲಿದೆ. ಹೈಕಮಾಂಡ್ ಹೇಳಿದರೆ ಮಾತ್ರ ಬದಲಾವಣೆಯಾಗಲಿದೆ. ಇದರ ನಡುವೆ ರಾಹುಲ್ ಗಾಂಧಿ ವಿದೇಶದಿಂದ ಬಂದ ಮೇಲೆ ನಿರ್ಧಾರವಾಗಲಿದೆ ಎಂಬ ಸುದ್ದಿಗಳಿತ್ತು.
ನವದೆಹಲಿ: ಮಹಿಳಾ ಪ್ರೀಮಿಯರ್ ಲೀಗ್ನ ನಾಲ್ಕನೇ ಆವೃತ್ತಿಯು ಅದ್ದೂರಿಯಾಗಿ ಆರಂಭವಾಗಲಿದ್ದು, ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮಹಿಳಾ ತಂಡವು ಶುಕ್ರವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡವನ್ನು ಎದುರಿಸಲಿದೆ. ಉತ್ಸಾಹಭರಿತವಾಗಿ, ಪಂದ್ಯಾವಳಿಯು ವರ್ಣರಂಜಿತ ಉದ್ಘಾಟನಾ ಸಮಾರಂಭದೊಂದಿಗೆ ಪ್ರಾರಂಭವಾಗುತ್ತದೆ. ಸಂಜೆ 7:30 ಕ್ಕೆ ಮೊದಲ ಚೆಂಡು ಬೌಲ್ ಮಾಡುವ ಮೊದಲು, ಕ್ರೀಡಾಂಗಣದಲ್ಲಿರುವ ಪ್ರೇಕ್ಷಕರು ಮತ್ತು ಮನೆಯಿಂದ ವೀಕ್ಷಿಸುವ ವೀಕ್ಷಕರು ಸಂಜೆ 6:45 ಕ್ಕೆ ಪ್ರಾರಂಭವಾಗುವ ವಿಶೇಷ ಪೂರ್ವ-ಪಂದ್ಯ ಪ್ರದರ್ಶನವನ್ನು ವೀಕ್ಷಿಸಬಹುದು.
ಬೆಂಗಳೂರು : ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಮಹಿಳೆ ವಿವಸ್ತ್ರ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯಿಸಿ, ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಗಳ ಅನುಮತಿ ಪಡೆದು ಸಿಐಡಿಗೆ ವಹಿಸಲಾಗುವುದು ಎಂದರು. ಈ ಸಂಬಂಧ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಘಟನೆಯ ಸತ್ಯಾಸತ್ಯತೆಯನ್ನು ಸಿಐಡಿಯವರು ತನಿಖೆ ಮಾಡಿ ಸರ್ಕಾರಕ್ಕೆ ವರದಿ ಕೊಡಬೇಕು. ಆನಂತರ ಸರ್ಕಾರ, ಯಾರು ತಪ್ಪಿತಸ್ಥರು, ಘಟನೆಯಲ್ಲಿ ಯಾರ ನಿರ್ಲಕ್ಷದ ಬಗ್ಗೆ ಹೇಳಲಾಗುತ್ತದೆ ಎಂದರು.
ಮದ್ರಾಸ್: ಹೈಕೋರ್ಟ್ನ ಏಕ ಸದಸ್ಯ ನ್ಯಾಯಾಧೀಶರು ಕೆವಿಎನ್ ಪ್ರೊಡಕ್ಷನ್ಸ್ ಎಲ್ಎಲ್ಪಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಪುರಸ್ಕರಿಸಿ, ನಟ ವಿಜಯ್ ಅಭಿನಯದ ಜನ ನಾಯಗನ್ ಚಿತ್ರಕ್ಕೆ ಯು/ಎ 16+ ಪ್ರಮಾಣಪತ್ರ ನೀಡುವಂತೆ ಆದೇಶಿಸಿದೆ.ಆದಾಗ್ಯೂ, ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್ಸಿ) ಆದೇಶದ ವಿರುದ್ಧ ಸಲ್ಲಿಸಬೇಕಾದ ರಿಟ್ ಮೇಲ್ಮನವಿಯ ತುರ್ತು ವಿಚಾರಣೆಗಾಗಿ ಮುಖ್ಯ ನ್ಯಾಯಮೂರ್ತಿಗಳ ಪೀಠದ ಮುಂದೆ ತಕ್ಷಣ ಪ್ರಸ್ತಾಪಿಸಿತು.ನ್ಯಾಯಮೂರ್ತಿ ಪಿ.ಟಿ. ಆಶಾ ಅವರು ನೀಡಿದ ಆದೇಶದ ವಿರುದ್ಧ ಹೆಚ್ಚುವರಿ ಸಾಲಿಸಿಟರ್ ಜನರಲ್ ಎ.ಆರ್.ಎಲ್. ಸುಂದರೇಶನ್ ಅವರು ಸಿಬಿಎಫ್ಸಿಯ ರಿಟ್ ಮೇಲ್ಮನವಿಯ ತುರ್ತು ವಿಚಾರಣೆಗಾಗಿ ಮಾಡಿದ ವಿನಂತಿಯನ್ನು ಪರಿಗಣಿಸಲು
ಉಕ್ರೇನ್: ಈ ಪ್ರದೇಶದಲ್ಲಿ ರಷ್ಯಾದ ಇತ್ತೀಚಿನ ದಾಳಿಗಳಲ್ಲಿ ನಾಲ್ಕು ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 24 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನಿಯನ್ ವಿದೇಶಾಂಗ ಸಚಿವ ಆಂಡ್ರಿ ಸಿಬಿಹಾ ಹೇಳಿದ್ದಾರೆ. ರಷ್ಯಾದ ಕ್ಷಿಪಣಿಗಳು ತನ್ನ ವಸತಿ ಪ್ರದೇಶಗಳ ಮೇಲೆ ದಾಳಿ ಮಾಡಿ ನೀರು ಸರಬರಾಜು ಮತ್ತು ತಾಪನವನ್ನು ಅಡ್ಡಿಪಡಿಸಿವೆ ಎಂದು ಸಿಬಿಹಾ ಶುಕ್ರವಾರ ಹೇಳಿದ್ದಾರೆ. ರಷ್ಯಾದ ದಾಳಿಯ ಭಯಾನಕ ರಾತ್ರಿಯ ನಂತರ ಕೈವ್ನಲ್ಲಿ ವೈದ್ಯ ಸೇರಿದಂತೆ ನಾಲ್ಕು ನಾಗರಿಕರು ಸಾವನ್ನಪ್ಪಿದರು ಮತ್ತು ಎರಡು ಡಜನ್ಗಿಂತಲೂ ಹೆಚ್ಚು ಜನರು ಗಾಯಗೊಂಡರು. ವಸತಿ ಪ್ರದೇಶಗಳು, ನಿರ್ಣಾಯಕ ಮೂಲಸೌಕರ್ಯ, ವಿದ್ಯುತ್,
ಬಹುನಿರೀಕ್ಷೆಯನ್ನು ಮೂಡಿಸಿದ್ದ ನಟ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಟೀಸರ್ ಸಂಬಂಧ ಭಾರೀ ಟ್ರೋಲ್ ಮಾಡಲಾಗುತ್ತಿದ್ದ. ಕೆಜಿಎಫ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗದ ಕಡೆ ಭಾರತೀಯ ಸಿನಿಮಾ ರಂಗವನ್ನು ನೋಡುವಂತೆ ಮಾಡಿದ ಯಶ್ ಅವರು ಕೆಜಿಎಫ್ 2 ಕೂಡಾ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿಂಚಿತು. ಇದೀಗ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಭಾರೀ ನಿರೀಕ್ಷೆಯನ್ನು ಮೂಡಿಸಿದೆ. ಟೀಸರ್ ಯಶ್ ಬರ್ತಡೇ ದಿನದಂದು
ಆನ್ ಲೈನ್ ಮೂಲಕ ಯಾವುದೇ ವಸ್ತುವನ್ನು ಆರ್ಡರ್ ಮಾಡಿದಲ್ಲಿ ತಕ್ಷಣವೇ ಮನೆಗೆ ಬರುತ್ತದೆ. ಆದರೆ ಇದೇ ರೀತಿ ಮಹಿಳೆಯೊಬ್ಬರು ಮಾಡಿದ್ದ ಇಲಿ ಪಾಷಾಣ ಆರ್ಡರ್ ಕೊಡಲು ಹೋಗಿ ಡೆಲಿವರಿ ಬಾಯ್ ಹೀರೋ ಆದ ರೋಚಕ ಕಹಾನಿ ಇಲ್ಲಿದೆ. ಈ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಹೀಗೇ ತಡರಾತ್ರಿಯಲ್ಲಿ ಮಹಿಳೆಯೊಬ್ಬರು ಮೂರು ಪ್ಯಾಕೆಟ್ ಇಲಿ ಪಾಷಾಣಕ್ಕೆ ಆರ್ಡರ್ ಕೊಟ್ಟಿದ್ದಾರೆ. ಆಕೆ ಆರ್ಡರ್ ಕೊಟ್ಟಂತೆ ಇಲಿ ಪಾಷಾಣ ಪ್ಯಾಕ್ ಮಾಡಿ ವಿಳಾಸದಲ್ಲಿ ಕೊಂಚ ಗೊಂದಲವಾದ ಕಾರಣ ಡೆಲಿವರಿ ಬಾಯ್ ನೇರವಾಗಿ ಮಹಿಳೆಗೆ ಕರೆ ಮಾಡಿ ಕೇಳಿದ್ದಾನೆ.
ಬೆಂಗಳೂರು: ಮನರೇಗಾ ಯೋಜನೆ ಬದಲಾವಣೆಗೆ ಕೇಂದ್ರದ ವಿರುದ್ಧ ಸೆಡ್ಡು ಹೊಡೆದಿರುವ ರಾಜ್ಯ ಸರ್ಕಾರ ವಿಧೇಶ ಅಧಿವೇಶನ ನಡೆಸಲಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಮನರೇಗಾ ಯೋಜನೆಗೆ ಬದಲಾವಣೆ ತಂದು ಕೇಂದ್ರ ಸರ್ಕಾರ ಜಿ ರಾಮ್ ಜಿ ಎಂದು ಬದಲಾಯಿಸಿದೆ. ಇದರ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದೆ. ಹೀಗಾಗಿ ಈ ಯೋಜನೆಯ ಮರುಜಾರಿಗೆ ನಿರ್ಣಯ ಕೈಗೊಳ್ಳಲು ಸದ್ಯದಲ್ಲೇ ವಿಶೇಷ ಅಧಿವೇಶನ ಕರೆಯುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ‘ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿದಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು.
ಅಸಿಡಿಟಿ ಸಮಸ್ಯೆ ಹೆಚ್ಚಾದಾಗ ಹೊಟ್ಟೆ ತೊಳೆಸಿದಂತಾಗಿ ಏನೂ ತಿನ್ನಲು ಸೇರದ ಪರಿಸ್ಥಿತಿಯಾಗುತ್ತದೆ. ಅಸಿಡಿಟಿಯಿಂದ ಹೊಟ್ಟೆ ತೊಳೆಸಿದಂತಾಗುತ್ತಿದ್ದರೆ ಏನು ಮಾಡಬೇಕು ಇಲ್ಲಿದೆ ಟಿಪ್ಸ್. ಶುಂಠಿ ಬಳಸಿ: ಯಾವುದೇ ರೀತಿಯ ವಾಕರಿಕೆ ತಡೆಯಲು ಶುಂಠಿ ಬೆಸ್ಟ್ ಮದ್ದು. ಒಂದು ಪೀಸ್ ಶುಂಠಿಯನ್ನು ಬಾಯಲ್ಲಿಟ್ಟುಕೊಂಡು ಜಗಿಯುತ್ತಿರಿ. ಇದರಿಂದ ಹೊಟ್ಟೆ ತೊಳೆಸುವಿಕೆ ಕಡಿಮೆಯಾಗುತ್ತದೆ. ಕೋಲ್ಡ್ ಹಾಲು: ಸ್ವಲ್ಪ ಕೋಲ್ಡ್ ಹಾಲು ಸೇವಿಸುವುದರಿಂದ ಅಸಿಡಿಟಿಯ ಕಿರಿ ಕಿರಿ ಕಡಿಮೆಯಾಗುವುದಲ್ಲದೆ ವಾಕರಿಕೆ ಕಡಿಮೆಯಾಗುವುದು. ಸೋಪು ಕಾಳು: ಒಂದು ಟೀ ಸ್ಪೂನ್ ನಷ್ಟು ಸೋಂಪು ಕಾಳುಗಳನ್ನು ಬಾಯಿಗೆ ಹಾಕಿಕೊಳ್ಳಿ. ಇದನ್ನು ಜಗಿಯುವುದರಿಂದ ಅಸಿಡಿಟಿಯೂ ಕಡಿಮೆಯಾಗುತ್ತದೆ.
ಬೆಂಗಳೂರು: ಜೆಡಿಎಸ್ ಪಕ್ಷವನ್ನು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದಿದ್ದ ಡಿಕೆ ಶಿವಕುಮಾರ್ ಗೆ ಎಚ್ ಡಿ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದು ಮೊದಲು ನನ್ನ ಮತ್ತು ನಿಮ್ಮ ಅನುಭವದ ಬಗ್ಗೆ ಮಾತನಾಡೋಣ ಎಂದಿದ್ದಾರೆ. ಮೊನ್ನೆಯಷ್ಟೇ ಬಿಜೆಪಿ ಮತ್ತು ಜೆಡಿಎಸ್ ಒಂದೇ ಪಕ್ಷ. ವಿಲೀನವಾಗೋದು ಒಂದೇ ಬಾಕಿ. ರಾಜ್ಯದಲ್ಲಿ ಇರೋದು ಎರಡೇ ಪಕ್ಷ. ಮೂರನೆಯದ್ದು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ಅದಕ್ಕೀಗ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. ‘ಡಿಸಿಎಂ ಡಿಕೆ ಶಿವಕುಮಾರ್ ರವರೇ.. ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ.
ಬೆಂಗಳೂರು: ಅಡಿಕೆ ಬೆಲೆ ಕಳೆದ ಕೆಲವು ದಿನಗಳಿಂದ ಏರಿಕೆಯಾಗುತ್ತಿದೆ. ಇಂದು ಮತ್ತೆ ಬೆಲೆ ಏರಿಕೆಯಾಗಿರುವುದು ಬೆಳೆಗಾರರಿಗೆ ಖುಷಿ ತಂದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಅಡಿಕೆ ಬೆಲೆ ಏರಿಕೆಯೂ ಅಲ್ಲ ಇಳಿಕೆಯೂ ಇಲ್ಲ ಎನ್ನುವ ಸ್ಥಿತಿಯಲ್ಲಿತ್ತು. ಒಂದೆಡೆ ಬೆಳೆ ಕಡಿಮೆ, ಇನ್ನೊಂದೆಡೆ ಬೆಲೆ ಏರಿಕೆಯಾಗದೇ ಇರುವುದು ರೈತರ ಚಿಂತೆಗೆ ಕಾರಣವಾಗಿತ್ತು. ಅಡಿಕೆ ಬೆಲೆ ಇಂದು ಸತತ ಐದನೇ ದಿನ ಏರಿಕೆಯಾಗಿರುವುದು ರೈತರ ಸಂತಸಕ್ಕೆ ಕಾರಣವಾಗಿದೆ. ಆದರೆ ನಿನ್ನೆ ಹೊಸ ಅಡಿಕೆ ಬೆಲೆ 10 ರೂ.ಗಳಷ್ಟು ಏರಿಕೆಯಾಗಿ 460 ರೂ.ಗಳಷ್ಟಾಗಿತ್ತು.
ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆ ಮತ್ತು ಇಳಿಕೆಯಾಗುತ್ತಲೇ ಇದೆ. ಆದರೆ ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದೆ ಮತ್ತು ಇತರೆ ಚಿನ್ನದ ದರ ಏರಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಇಳಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಿಂದಲೂ ಚಿನ್ನದ ದರ ಏರಿಕೆಯಾಗುತ್ತಲೇ ಇದೆ. ಆದರೆ ಇಂದು ಪರಿಶುದ್ಧ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,40,525.00 ರೂ.ಗಳಿತ್ತು. ಇಂದು 1,39,835.00 ರೂ.ಗಳಷ್ಟಾಗಿದೆ.
ವಡೋದರಾ: ಬರೋಬ್ಬರಿ ಎರಡು ವರ್ಷಗಳ ಬಳಿಕ ವಿರಾಟ್ ಕೊಹ್ಲಿ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಟ್ರೈನಿಂಗ್ ನಡೆಸುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ. ಅಷ್ಟಕ್ಕೂ ಅವರ ನಿಲ್ಲಿಸಿದ್ದು ಯಾಕೆ? ಇದರ ಹಿಂದಿದೆ ಕಾರಣ. ನ್ಯೂಜಿಲೆಂಡ್ ವಿರುದ್ಧ ಏಕದಿನ ಪಂದ್ಯವಾಡಲು ಕೊಹ್ಲಿ ವಡೋದರಾದಲ್ಲಿದ್ದಾರೆ. ನಿನ್ನೆ ನೆಟ್ಸ್ ನಲ್ಲಿ ಕಠಿಣ ತರಬೇತಿ ನಡೆಸಿದ್ದಾರೆ. ಈ ಸಂದರ್ಭದ ಚಿತ್ರಗಳನ್ನು ಅವರು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಇದು ಅನೇಕರಿಗೆ ಸರ್ಪೈಸ್ ಆಗಿದೆ. ಯಾಕೆಂದರೆ ಕೊಹ್ಲಿ ಇತ್ತೀಚೆಗಿನ ಕೆಲವು ಸಮಯದಿಂದ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಭಾರತ ತಂಡಕ್ಕೆ ಅಭ್ಯಾಸ ನಡೆಸುತ್ತಿರುವ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿಕೊಳ್ಳುತ್ತಿರಲಿಲ್ಲ.
ಬೆಂಗಳೂರು: ಶ್ರೀರಂಗಪಟ್ಟಣದ ರಂಗನಾಥ ಸ್ವಾಮಿ ದರ್ಶನ ಟಿಕೆಟ್ ನ್ನು ಏಕಾಏಕಿ ಭಾರೀ ಏರಿಕೆ ಮಾಡಿರುವದರ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದು ನಿಮಗೆ ಹಿಂದೂಗ ಮೇಲೆ ಯಾಕಿಷ್ಟು ಧ್ವೇಷ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಶೇಷ ದರ್ಶನದ ಪ್ರವೇಶ ಟಿಕೆಟ್ ದರ ಈ ಮೊದಲು 100 ರೂ. ಇತ್ತು. ಆದರೆ ಈಗ ಏಕಾಏಕಿ 500 ರೂ. ಗೆ ಏರಿಕೆ ಮಾಡಲಾಗಿದೆ. ಇದರ ವಿರುದ್ಧ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ದೇವಸ್ಥಾನ ಪ್ರವೇಶ ಟಿಕೆಟ್ ನಲ್ಲಿಯೂ ಲೂಟಿ ಹೊಡೆಯಲು ಹೊರಟಿದೆ ಈ ಕಾಂಗ್ರೆಸ್ ಸರ್ಕಾರ!
ಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಾಣದ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ್ದ ಕಾಂತಾರ ಚಾಪ್ಟರ್ 1 ಸಿನಿಮಾ ಈಗ ಆಸ್ಕರ್ ರೇಸ್ ನಲ್ಲಿದೆ. ಇದು ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ. ಕಾಂತಾರ ಚಾಪ್ಟರ್ 1 ಮತ್ತು ಮಹಾವತಾರ್ ನರಸಿಂಹ ಸಿನಿಮಾ ಆಸ್ಕರ್ ಜನರಲ್ ಎಂಟ್ರಿ ಲಿಸ್ಟ್ ನಲ್ಲಿ ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷ ತೆರೆ ಕಂಡಿದ್ದ ಈ ಎರಡೂ ಸಿನಿಮಾಗಳೂ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿದ್ದವು. ಈ ಎರಡೂ ಚಿತ್ರಗಳನ್ನು ಕರ್ನಾಕಟದಲ್ಲಿ ಹೊಂಬಾಳೆ ಫಿಲಂಸ್ ಬಿಡುಗಡೆ ಮಾಡಿತ್ತು.
ಬೆಂಗಳೂರು: ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ವಾರ್ ನಡೆದು ಒಗ್ಗಟ್ಟಿನ ಬಗ್ಗೆ ಸಂಶಯ ಮೂಡುವಂತೆ ಮಾಡಿತ್ತು. ಆದರೆ ಟಾಕ್ಸಿಕ್ ಟೀಸರ್ ಬಿಡುಗಡೆಯಾದ ಬೆನ್ನಲ್ಲೇ ಕಿಚ್ಚ ಸುದೀಪ್ ಮಾಡಿದ ಕೆಲಸಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಹಿನ್ನಲೆಯಲ್ಲಿ ನಿನ್ನ ಟಾಕ್ಸಿಕ್ ಟೀಸರ್ ಬಿಡುಗಡೆಯಾಗಿತ್ತು. ಸಿನಿಮಾದ ಟೀಸರ್ ಹಾಲಿವುಡ್ ಸಿನಿಮಾಗಳನ್ನು ನೆನಪಿಸುವಂತಿದೆ. ಅದರಲ್ಲೂ ಚಿತ್ರದ ಹಸಿಬಿಸಿ ದೃಶ್ಯಗಳನ್ನು ಇಷ್ಟು ಬೋಲ್ಡ್ ಆಗಿ ತೋರಿಸಿರುವುದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದರ ನಡುವೆ ಕಿಚ್ಚ ಸುದೀಪ್ ಟಾಕ್ಸಿಕ್ ಸಿನಿಮಾದ ಪ್ರಯತ್ನವನ್ನು ಶ್ಲಾಘಿಸಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು: ಕರ್ನಾಟಕದಲ್ಲಿ ಪ್ರಸಾರವೇ ಇಲದಲ ಕಾಂಗ್ರೆಸ್ ಪಕ್ಷದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ರಾಜ್ಯ ಸರ್ಕಾರದಿಂದ ಕೋಟಿಗಟ್ಟಲೇ ಜಾಹೀರಾತು ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. 2023-24 ರಲ್ಲಿ 1.9 ಕೋಟಿ ರೂ., 2024-25 ರಲ್ಲಿ 99 ಲಕ್ಷ ರೂ. ಜಾಹೀರಾತುಗಳನ್ನು ನೀಡಿದೆ ಎಂದು ವರದಿಯಾಗಿದೆ. ಇದು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಪ್ರಸಾರವೇ ಇಲ್ಲದ ಕಾಂಗ್ರೆಸ್ ಪಕ್ಷದ ಪತ್ರಿಕೆಗೆ ರಾಜ್ಯದ ಬೊಕ್ಕಸದಿಂದ ಯಾಕೆ ಕೋಟಿಗಟ್ಟಲೆ ಹಣ ನೀಡಬೇಕು ಎಂದು ಬಿಜೆಪಿ ನಾಯಕರು ಪ್ರಶ್ನೆ ಮಾಡಿದ್ದಾರೆ.
ಬಳ್ಳಾರಿ: ಹೊಸ ವರ್ಷದಂದು ಬಳ್ಳಾರಿಯಲ್ಲಿ ನಡೆದಿದ್ದ ಬ್ಯಾನರ್ ಗಲಾಟೆಯಲ್ಲಿ ಮೃತಪಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತನ ಮರಣೋತ್ತರ ಪರೀಕ್ಷೆಯಲ್ಲಿ ಭಯಾನಕ ವಿಚಾರಗಳು ಹೊರಬಿದ್ದಿವೆ. ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್ ಮ್ಯಾನ್ ಗುಂಡಿನಿಂದಲೇ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ರೆಡ್ಡಿ ಸಾವನ್ನಪ್ಪಿದ್ದಾರೆ ಎನ್ನುವುದು ಖಚಿತವಾಗಿತ್ತು. ಇದರ ಬೆನ್ನಲ್ಲೇ ಈಗ ಮರಣೋತ್ತರ ಪರೀಕ್ಷೆ ವರದಿಗಳು ಬಹಿರಂಗವಾಗಿದೆ. ಭರತ್ ರೆಡ್ಡಿ ಆಪ್ತನಿಂದ ಅತೀ ಹತ್ತಿರದಲ್ಲೇ ರಾಜಶೇಖರ ರೆಡ್ಡಿಗೆ ಗುಂಡು ಹೊಡೆಯಲಾಗಿದೆ ಎನ್ನುವುದು ಗೊತ್ತಾಗಿದೆ. ಆತನ ಬೆನ್ನಿಗೆ 17 ಗುಂಡಿನ ಚೂರು ಹೊಕ್ಕಿತ್ತು.
ಮುಂಬೈ: ಮಹಿಳೆಯರ ಐಪಿಎಲ್ ಎಂದೇ ಜನಜನಿತವಾಗಿರುವ ಡಬ್ಲ್ಯುಪಿಎಲ್ ಟೂರ್ನಿ ಇಂದಿನಿಂದ ಶುರುವಾಗಲಿದೆ. ಇಂದು ಆರ್ ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಎಷ್ಟೊತ್ತಿಗೆ ಆರಂಭವಾಗಲಿದೆ ಇಲ್ಲಿದೆ ವಿವರ. ಮೊದಲ ಪಂದ್ಯದಲ್ಲೇ ಸ್ಮೃತಿ ಮಂಧಾನ ನೇತೃತ್ವದ ಆರ್ ಸಿಬಿ ಮತ್ತು ಹರ್ಮನ್ ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಮುಖಾಮುಖಿಯಾಗುತ್ತಿದೆ. ಪುರುಷರ ಕ್ರಿಕೆಟ್ ನಂತೆ ಮಹಿಳೆಯರ ಕ್ರಿಕೆಟ್ ನಲ್ಲೂ ಆರ್ ಸಿಬಿ ಮತ್ತು ಮುಂಬೈ ಪಂದ್ಯವೆಂದರೆ ಅದೇ ರೋಚಕತೆಯಿರುತ್ತದೆ.
ಬೆಂಗಳೂರು: ಕೋಗಿಲು ಲೇಔಟ್ ನಲ್ಲಿ ಅಕ್ರಮ ವಲಸಿಗರ ಮನೆ ತೆರವು ಮಾಡಿದ್ದಕ್ಕೆ ಅನ್ಯಾಯವಾಗಿದೆ ಎಂದು ಆಕಾಶ ಭೂಮಿ ಒಂದು ಮಾಡಿದ್ದ ಕೇರಳ ಸಿಎಂ ಈಗ ಕಾಸರಗೋಡಿನ ಕನ್ನಡಿಗರ ವಿಚಾರದಲ್ಲಿ ನಡೆದುಕೊಳ್ಳುತ್ತಿರುವ ರೀತಿಗೆ ಸಿದ್ದರಾಮಯ್ಯ ಠಕ್ಕರ್ ನೀಡಿದ್ದಾರೆ. ಕೋಗಿಲು ಲೇಔಟ್ ನಲ್ಲಿ ಅಕ್ರಮ ವಲಸಿಗರ ವಸತಿಗಳನ್ನು ನೆಲಸಮ ಮಾಡಿದ್ದಕ್ಕೆ ಕರ್ನಾಟಕ ಶೋಷಣೆ ಮಾಡುತ್ತಿದೆ ಎಂದು ಟ್ವೀಟ್ ಮಾಡಿ ರಂಪ ಮಾಡಿದ್ದ ಕೇರಳ ಸಿಎಂ ಈಗ ತಮ್ಮದೇ ರಾಜ್ಯದ ಕನ್ನಡಿಗರಿಗೆ ಅನ್ಯಾಯ ಮಾಡುತ್ತಿದ್ದಾರೆ. ಗಡಿನಾಡಿನ ಕನ್ನಡ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ ಮಾಡಿ ಮಲಯಾಳ ಭಾಷಾ ಮಸೂದೆ 2025 ಜಾರಿಗೆ ತರಲು ಹೊರಟಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಈಗ ಬೂದಿ ಮುಚ್ಚಿದ ಕೆಂಡದಂತಿದೆ. ಈ ನಡುವೆ ಮೊನ್ನೆ ಹಾವೇರಿಯಲ್ಲಿ ಸಿದ್ದರಾಮಯ್ಯನವರ ಎದುರೇ ಡಿಕೆ ಶಿವಕುಮಾರ್ ಕೊಟ್ಟ ಮಾತನ್ನು ನೆನಪಿಸಿದ್ದಾರೆ. ಇದನ್ನು ನೋಡಿದರೆ ಸಂಕ್ರಾಂತಿಗೆ ಕ್ರಾಂತಿಯಾಗುತ್ತಾ ಎಂಬ ಅನುಮಾನ ಮೂಡುತ್ತದೆ. ಹೈಕಮಾಂಡ್ ನಾಯಕರ ವಿದೇಶ ಪ್ರವಾಸ, ಅಡೆತಡೆಗಳಿಂದಾಗಿ ಅಧಿಕಾರ ಹಂಚಿಕೆ ವಿಚಾರ ಕೊಂಚ ತಣ್ಣಗಾಗಿದೆ. ಆದರೆ ಹೊಸ ವರ್ಷದಲ್ಲಿ ಈ ಬಗ್ಗೆ ಮಾತನಾಡೋಣ ಎಂದು ಡಿಕೆ ಶಿವಕುಮಾರ್ ಹೇಳಿದ್ದರು. ಹೀಗಾಗಿ ಸಂಕ್ರಾಂತಿ ವೇಳೆಗೆ ಸಿಹಿ ಸುದ್ದಿ ಸಿಗಬಹುದೇ ಎಂದು ಡಿಕೆಶಿ ಬೆಂಬಲಿಗರು ಎದಿರು ನೋಡುತ್ತಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ವಾರಂತ್ಯಕ್ಕೆ ಹವಾಮಾನದಲ್ಲಿ ಭಾರೀ ಬದಲಾವಣೆ ಕಂಡುಬರಲಿದೆ. ಇಂದು ವಿಪರೀತ ಚಳಿ ಜೊತೆಗೆ ಈ ಜಿಲ್ಲೆಗೆ ಮೋಡ ಕವಿದ ವಾತಾವರಣವಿರಲಿದೆ. ರಾಜ್ಯದಲ್ಲಿ ಇಂದು ನಿನ್ನೆಗೆ ಹೋಲಿಸಿದರೆ ಕನಿಷ್ಠ ತಾಪಮಾನ ಕೊಂಚ ಏರಿಕೆಯಾಗಲಿದೆ. ಹಾಗಿದ್ದರೂ ವಿಪರೀತ ಚಳಿ ಮುಂದುವರಿಯಲಿದೆ. ಇಂದು ಸರಾಸರಿ ಕನಿಷ್ಠ ತಾಪಮಾನ 17 ಡಿಗ್ರಿಯಷ್ಟಿರಲಿದೆ. ಗರಿಷ್ಠ ತಾಪಮಾನ 24 ಡಿಗ್ರಿಯಷ್ಟಿರಲಿದೆ. ಕೋಲಾರ, ಬೆಳಗಾವಿ ಜಿಲ್ಲೆಯಲ್ಲಿ ಇಂದು ಬಹುತೇಕ ಮೋಡ ಕವಿದ ವಾತಾವರಣವಿರಲಿದೆ. ಉಳಿದಂತೆ ಬೆಂಗಳೂರು, ಕೊಡಗು, ಚಿಕ್ಕಮಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.
ಇಂದು ಶುಕ್ರವಾರವಾಗಿದ್ದು ಮಹಾಲಕ್ಷ್ಮಿಗೆ ವಿಶೇಷವಾದ ದಿನವಾಗಿದೆ. ಮನೆಯಲ್ಲಿ ಅಭಿವೃದ್ಧಿ, ನೆಮ್ಮದಿ, ಐಶ್ವರ್ಯ ನೆಲೆಸಬೇಕೆಂದರೆ ಲಕ್ಷ್ಮೀ ದೇವಿಯ ಕುರಿತಾದ ಕಲ್ಯಾಣವೃಷ್ಟಿ ಸ್ತವಃ ಸ್ತೋತ್ರವನ್ನು ಓದಿ.ಕಲ್ಯಾಣವೃಷ್ಟಿಭಿರಿವಾಮೃತಪೂರಿತಾಭಿ--ರ್ಲಕ್ಷ್ಮೀಸ್ವಯಂವರಣಮಂಗಲದೀಪಿಕಾಭಿಃ ।ಸೇವಾಭಿರಂಬ ತವ ಪಾದಸರೋಜಮೂಲೇನಾಕಾರಿ ಕಿಂ ಮನಸಿ ಭಾಗ್ಯವತಾಂ ಜನಾನಾಮ್ ॥ 1 ॥ ಏತಾವದೇವ ಜನನಿ ಸ್ಪೃಹಣೀಯಮಾಸ್ತೇತ್ವದ್ವಂದನೇಷು ಸಲಿಲಸ್ಥಗಿತೇ ಚ ನೇತ್ರೇ ।ಸಾಂನಿಧ್ಯಮುದ್ಯದರುಣಾಯುತಸೋದರಸ್ಯತ್ವದ್ವಿಗ್ರಹಸ್ಯ ಪರಯಾ ಸುಧಯಾಪ್ಲುತಸ್ಯ ॥ 2 ॥ ಈಶತ್ವನಾಮಕಲುಷಾಃ ಕತಿ ವಾ ನ ಸಂತಿಬ್ರಹ್ಮಾದಯಃ ಪ್ರತಿಭವಂ ಪ್ರಲಯಾಭಿಭೂತಾಃ ।ಏಕಃ ಸ ಏವ ಜನನಿ ಸ್ಥಿರಸಿದ್ಧಿರಾಸ್ತೇಯಃ ಪಾದಯೋಸ್ತವ ಸಕೃತ್ಪ್ರಣತಿಂ ಕರೋತಿ ॥ 3 ॥ ಲಬ್ಧ್ವಾ ಸಕೃತ್ತ್ರಿಪುರಸುಂದರಿ ತಾವಕೀನಂಕಾರುಣ್ಯಕಂದಲಿತಕಾಂತಿಭರಂ ಕಟಾಕ್ಷಮ್ ।ಕಂದರ್ಪಕೋಟಿಸುಭಗಾಸ್ತ್ವಯಿ ಭಕ್ತಿಭಾಜಃಸಂಮೋಹಯಂತಿ ತರುಣೀರ್ಭುವನತ್ರಯೇಽಪಿ ॥ 4 ॥
ಬೆಳಗಾವಿ: ಇಲ್ಲಿನ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮ್ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಇಂದು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಈ ಸಂಬಂದ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಮೃತ ದುರ್ದೈವಿಗಳನ್ನು ಅಕ್ಷಯ ತೋಪಡೆ, ದೀಪಕ್ ಮುನವಳ್ಳಿ, ಸುದರ್ಶನ ಬನೋಶಿ, ಬೈಲಹೊಂಗಲ ತಾಲೂಕಿನ ಅರವಳ್ಳಿ ನಿವಾಸಿ ಮಂಜುನಾಥ ಮಡಿವಾಳಪ್ಪ ಕಾಜಗಾರ್, ಗೋಕಾಕ್ ತಾಲೂಕಿನ ಗೊಡಚಿನಮಲ್ಕಿ ಗ್ರಾಮದ ನಿವಾಸಿ ಭರತೇಶ ಸಾರವಾಡಿ, ತೇರದಾಳ ಅಥಣಿ ಪಟ್ಟಣದ ನಿವಾಸಿ ಮಂಜುನಾಥ್ ತೇರದಾಳ, ಬಾಗಲಕೋಟ ಜಿಲ್ಲೆಯ ಮರೆಗುದ್ದಿ ಗ್ರಾಮದ ಗುರುಪಾದಪ್ಪ ತಮ್ಮನ್ನವರ್ ಎಂದು ಗುರುತಿಸಲಾಗಿದೆ.
ಅಸ್ಸಾಂ: ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಹಿರಿಯ ವೀಕ್ಷಕರಾಗಿ ನೇಮಕಗೊಂಡಿರುವ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ, ಕಾಂಗ್ರೆಸ್ಸಿಗರಾಗಿ ಪಕ್ಷಕ್ಕಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.ಛತ್ತೀಸ್ಗಢದ ಮಾಜಿ ಸಿಎಂ ಭೂಪೇಶ್ ಬಾಘೇಲ್ ಮತ್ತು ಜಾರ್ಖಂಡ್ನ ಮಾಜಿ ಶಾಸಕ ಬಂಧು ಟಿರ್ಕಿ ಅವರೊಂದಿಗೆ ಶಿವಕುಮಾರ್ ಅವರನ್ನು ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಪಕ್ಷದ ಹಿರಿಯ ವೀಕ್ಷಕರಾಗಿ ಕಾಂಗ್ರೆಸ್ ಬುಧವಾರ ನೇಮಿಸಿದೆ."ಕಾಂಗ್ರೆಸ್ಸಿಗನಾಗಿರುವುದರಿಂದ ನಾನು ಪಕ್ಷಕ್ಕಾಗಿ ಕೆಲಸ ಮಾಡಬೇಕು. ನಾನು ಎಐಸಿಸಿ ಪತ್ರಿಕಾ ಪ್ರಕಟಣೆಯನ್ನು ನೋಡಿದ್ದೇನೆ.
ಜೈಪುರ: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಇಂದೋರ್ನಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. ಈ ಘಟನೆ ಜನವರಿ ರಂದು ವರದಿಯಾಗಿದೆ. IX1240 ವಿಮಾನ ಜೈಪುರದಿಂದ ಬೆಂಗಳೂರಿಗೆ ಹೊರಟಿತ್ತು. ವಿಮಾನ ಹಾರಾಟದಲ್ಲಿದ್ದಾಗ ವಿಮಾನದೊಳಗೆ ಒಂದು ವರ್ಷದ ಮಗುವಿಗೆ ಏಕಾಏಕಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಈ ವೇಳೆ ವಿಮಾನದಲ್ಲಿದ್ದ ವೈದ್ಯರೊಬ್ಬರು ಶಿಶುವಿಗೆ ಸಿಪಿಆರ್ ಮಾಡಿದ್ದರು. ಬಳಿಕ ಚಿಕಿತ್ಸೆಗಾಗಿ ಇಂದೋರ್ನಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು.
ಕಣ್ಣೂರು (ಕೇರಳ): 2008ರಲ್ಲಿ ನಡೆದಿದ್ದ ಸಿಪಿಐ(ಎಂ) ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧ ತಲಶ್ಶೇರಿಯ ನ್ಯಾಯಾಲಯವು ಗುರುವಾರ ಏಳು ಆರ್ಎಸ್ಎಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿದೆ.ವಿಮಲ್ ಜೆ. ಸುಮಿತ್ ಅಲಿಯಾಸ್ ಕುಟ್ಟನ್, ಕೆ.ಕೆ ಪ್ರಜೇಶ್ ಬಾಬು, ಬಿ.ನಿಧಿನ್, ಕೆ.ಸನಲ್, ಸ್ಮಿಜೋಶ್, ಸಜೀಶ್ ಮತ್ತು ವಿ ಜಯೇಶ್ ಅವರನ್ನು ತಪ್ಪಿತಸ್ಥರು ಎಂದು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಘೋಷಿಸಿ, ಶಿಕ್ಷೆಯನ್ನು ಪ್ರಕಟಿಸಿದ್ದಾರೆ. ಇನ್ನೂ ಈ ಪ್ರಕರಣದಲ್ಲಿ ಆರೋಪಿಗಳಾದ ಸಂತೋಷ್ ಕುಮಾರ್, ಬಿ.ಶರತ್, ಇ.ಕೆ. ಸನೀಶ್ ಮತ್ತು ಕುನ್ನುಂಪ್ರತ್ ಅಜೇಶ್
ಕೋಲ್ಕತ್ತಾ: ನಕಲಿ ಸರ್ಕಾರಿ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ಬುಧವಾರ ಐಪಿಎಸಿ ಕಚೇರಿಯ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದ ನಂತರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜನವರಿ 9 ರಂದು ಕೋಲ್ಕತ್ತಾದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಕೋಲ್ಕತ್ತಾದಲ್ಲಿ ನಡೆಯುತ್ತಿರುವ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಪಶ್ಚಿಮ ಬಂಗಾಳ ಸಿಎಂ ಬ್ಯಾನರ್ಜಿ ಅವರು ಉನ್ನತ ರಾಜಕೀಯ ಸಲಹಾ ಗುಂಪು ಐ-ಪಿಎಸಿಯ ನಿರ್ದೇಶಕ ಪ್ರತೀಕ್ ಜೈನ್ ಅವರ ನಿವಾಸಕ್ಕೆ ಪ್ರವೇಶಿಸಿ ಭೌತಿಕ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಸಾಧನಗಳು ಸೇರಿದಂತೆ "ಪ್ರಮುಖ ಪುರಾವೆಗಳನ್ನು" ಕದ್ದಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ED) ಆರೋಪಿಸಿದೆ.
ಮೈಸೂರು: ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತ ಅಪ್ರಾಪ್ತೆಯೊಬ್ಬಳು ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ನೀಲಕಂಠ ನಗರದಲ್ಲಿ ನಡೆದಿದೆ. ಮೃತ ಅಪ್ರಾಪ್ತೆಯನ್ನು ದಿವ್ಯ (17) ಎಂದು ಗುರುತಿಸಲಾಗಿದೆ. ದೇಬೂರು ಗ್ರಾಮದ ಆದಿತ್ಯ ಎಂಬಾತ ದಿವ್ಯಳಿಗೆ ಪ್ರೀತಿಸುವಂತೆ ಕಿರುಕುಳ ನೀಡಿದ್ದ ಎಂಬ ಆರೋ ಕೇಳಿಬಂದಿದೆ. ನಂಜನಗೂಡಿನ ಸರ್ಕಾರಿ ಕಾಲೇಜಿನ ಪ್ರಥಮ ವರ್ಷದ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ದಿವ್ಯಳನ್ನು ಪ್ರೀತಿಸುವಂತೆ ಆದಿತ್ಯ
ಬೆಂಗಳೂರು: ಬಾಕಿಯಾಗಿ ಉಳಿದಿರುವ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳುವ ಮೂಲಕ ಗುಡ್ನ್ಯೂಸ್ ನೀಡಿದ್ದಾರೆ. ಇಂದು ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಈ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಜತೆ ಮಾತುಕತೆ ನಡೆಸಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಸದನದಲ್ಲಿ ಉತ್ತರ ಕೊಟ್ಟಿದ್ದಾರೆ ಎಂದರು. ಅನರ್ಹ ರೇಷನ್ ಕಾರ್ಡ್ ರದ್ದಾಗಿರುವ ಕಾರಣ ಕೆಲವರಿಗೆ ಹಣ ಸಂದಾಯವಾಗಿಲ್ಲ. ಆಹಾರ ಇಲಾಖೆಯಿಂದ ಹೊಸ ಡೇಟಾ ಬಂದ
ಬೆಂಗಳೂರು: ನಾಯಿಯ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ' ಎಂದು ಸುಪ್ರೀಂ ಕೋರ್ಟ್ ರಸ್ತೆಗಳು ನಾಯಿಗಳಿಂದ ಮುಕ್ತವಾಗಿರಬೇಕು ಎಂದು ಹೇಳಿದ ಒಂದು ದಿನದ ನಂತರ, ಈ ವಿಚಾರವಾಗಿ ನಟಿ ದಿವ್ಯಾ ಸ್ಪಂದನ ಹೇಳಿಕೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. "ಮನುಷ್ಯನ ಮನಸ್ಸನ್ನು ಓದಲು ಸಾಧ್ಯವಿಲ್ಲ, ಅವನು ಯಾವಾಗ ಅತ್ಯಾಚಾರ ಮಾಡುತ್ತಾನೆಂದು ತಿಳಿದಿಲ್ಲ, ಹಾಗಾಗಿ, ಎಲ್ಲಾ ಪುರುಷರನ್ನ ಜೈಲಿಗೆ ಹಾಕಲಾಗುತ್ತಾ ಎಂದು ಕೇಳಿದ್ದಾರೆ. ಬೀದಿ ನಾಯಿಗಳ ಬಗ್ಗೆ ನಾಗರಿಕ ಸಂಸ್ಥೆಗಳು ಪಾಲಿಸದಿರುವುದನ್ನು ಸುಪ್ರೀಂ ಕೋರ್ಟ್ ಬುಧವಾರ ಟೀಕಿಸಿದೆ, ರಸ್ತೆಗಳಲ್ಲಿ ಅವು ಉಂಟುಮಾಡುವ ಅಪಾಯಗಳನ್ನು ಗಮನಿಸಿ.
ಮಡಿಕೇರಿ: ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರವಾದ ಸಿದ್ದರಾಮಯ್ಯ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ್ ಅವರು ಸಿದ್ದರಾಮಯ್ಯ ಅವರು ದೇವರಾಜ ಅರಸು ಆಗಲು ಸಾಧ್ಯವಿಲ್ಲ. ದೇವರಾಜ ಅರಸು ಅವರ ಹತ್ತಿರ ಬರಲು ಕೂಡ ಆಗೋದಿಲ್ಲ ಎಂದು ಟೀಕಿಸಿದರು.ಮಡಿಕೇರಿಯಲ್ಲಿ ಮಾತಾನಾಡಿದ ಅವರು, ದೇವರಾಜು ಅರಸು ಅವರು ನಮ್ಮನ್ನು ಅಗಲಿ ನಾಲ್ಕು ದಶಕಗಳು ಕಳೆದು ಹೋಗಿವೆ. ಅವರಿಲ್ಲದೆ ನಾಲ್ಕು ದಶಕ ಕಳೆದರೂ ಇಂದಿಗೂ ಅವರನ್ನು ಪೂಜ್ಯನೀಯ ಭಾವನೆಯಿಂದ ನೋಡುತ್ತಾರೆ. ಅವರ ವ್ಯಕ್ತಿತ್ವ ಆ ರೀತಿ ಇದೆ. ಸುಮ್ಮನೆ ಇದ್ರೂ ವಯಸ್ಸು ಆಗುತ್ತದೆ. ಸಿದ್ದರಾಮಯ್ಯ ಅವರು ಸಿಎಂ ಕುರ್ಚಿಯಲ್ಲಿ ಕುಳಿತು ಕಾಲ ತಳ್ಳುತ್ತಿದ್ದಾರೆ ಅಷ್ಟೆ. ಹೊಸ ದಾಖಲೆ ಬರೆದಿದ್ದಾರೆ ಎಂದು ಹೇಳುತ್ತಾರೆ. ಆದರೆ, ಸಿದ್ದರಾಮಯ್ಯ ಅವರು ದೇವರಾಜ ಅರಸು ಆಗಲೂ ಸಾಧ್ಯವಿಲ್ಲ ಎಂದು ಟೀಕೆ ಮಾಡಿದರು.
ಬೆಂಗಳೂರು: ಹುಬ್ಬಳ್ಳಿಯಲ್ಲಿ ಎಸ್ಐಆರ್ (ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ) ಬದಲಾಗಿ ಎಫ್ಐಆರ್ ಮಾಡಲು ಚುನಾವಣಾ ಆಯೋಗ ಹೇಳಿದೆ ಎಂದು ಇವರೆಲ್ಲ ಭಾವಿಸಿರಬೇಕು. ಕಮೀಷನರ್ಗೆ ಗೊಂದಲ ಆಗಿರಬೇಕು. ಇವರೆಲ್ಲರದು ಅತ್ಯಂತ ಬೇಜವಾಬ್ದಾರಿ ನಡವಳಿಕೆ; ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿದ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾತ್ರಿ 3 ಗಂಟೆಗೆ ಈ ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆದಿದ್ದರು. ಆಗ ಅಲ್ಲಿ ಕಾರ್ಪೊರೇಟರ್ ಕೂಡ ಇದ್ದರು. ಏನು ಉದ್ಯೋಗ ನಿಮ್ಮದು ಎಂದು ಪ್ರಶ್ನಿಸಿದರು.
ಬೆಂಗಳೂರು: ಕಾಂಗ್ರೆಸ್ಸಿನವರು ಯಾವ ಪುರುಷಾರ್ಥಕ್ಕಾಗಿ ಮತ್ತು ಯಾವ ನೈತಿಕತೆ ಇಟ್ಟುಕೊಂಡು ವಿಬಿ-ಜಿ ರಾಮ್ ಜಿ ವಿರುದ್ಧ ಹೋರಾಟಕ್ಕೆ ಕರೆ ನೀಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಸವಾಲು ಹಾಕಿದ್ದಾರೆ.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಜೀವನೋಪಾಯ ಮಿಷನ್ (ವಿಬಿ-ಜಿ ರಾಮ್ ಜಿ) ಇದರ ಬಗ್ಗೆ ಕಾಂಗ್ರೆಸ್ ಪಕ್ಷವು 10ರಿಂದ ಹೋರಾಟ ಮಾಡಲು ಕರೆ ನೀಡಿದೆ. 20 ವರ್ಷಗಳ ಹಿಂದೆ ಯೋಜನೆ ಮಾಡಿದಾಗ ವಿಕಸಿತ ಭಾರತ, ಆಸ್ತಿ ನಿರ್ಮಾಣದ ಕಲ್ಪನೆಯೇ ಇರಲಿಲ್ಲ.
ಚಿತ್ರದುರ್ಗಾ: ತಂದೆ ಸರಿಯಾದ ಸಮಯಕ್ಕೆ ಮದುವೆ ಮಾಡಿಲ್ಲವೆಂದು ಆಕ್ರೋಶಗೊಂಡ ಪಾಪಿ ಪುತ್ರನೋರ್ವ ತಂದೆಯನ್ನೇ ಕೊಂದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಅತಿಘಟ್ಟ ಗ್ರಾಮದಲ್ಲಿ ನಡೆದಿದೆ. ಮಗನಿಂದ ಕೊಲೆಯಾದ ತಂದೆಯನ್ನು ಗ್ರಾಮದ ಸಣ್ಣನಿಂಗಪ್ಪ ಎಂದು ಗುರುತಿಸಲಾಗಿದೆ. ಈತನ ಪುತ್ರ ನಿಂಗರಾಜ್ ತನ್ನೊಟ್ಟಿಗೆ ಬೆಳೆದ ಸ್ನೇಹಿತರೆಲ್ಲರೂ ಮದುವೆಯಾಗಿದೆ. ಆದರೆ ತನಗೆ ಮದುವೆಯಾಗಿಲ್ಲವೆಂದು ಆಗಾಗ ತಂದೆಯ ಜಗಳ ಮಾಡುತ್ತಿದ್ದ. ಈ ವಿಚಾರವಾಗಿ ಅಣ್ಣ, ಅಕ್ಕ, ತಾಯಿ, ಕುಟುಂಬಸ್ಥರು ಎಷ್ಟೇ ಬುದ್ಧಿವಾದ ಹೇಳಿದರೂ ಜಗಳ ಮಾತ್ರ ನಿಲ್ಲಿಸಿರಲಿಲ್ಲ. ಇದೇ ವಿಚಾರಕ್ಕೆ ಸಿಟ್ಟಾಗಿದ್ದ ನಿಂಗರಾಜ್ (36) ಬುಧವಾರ ರಾತ್ರಿ ತಂದೆ ಸಣ್ಣನಿಂಗಪ್ಪ (65) ಮಲಗಿದ್ದ ವೇಳೆ ಕಬ್ಬಿಣದ ರಾಡ್ನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.