Shorts

ಮೇ 1 ರಂದು ಕಾರ್ಮಿಕ ದಿನವನ್ನು ಭಾರತದ ಅನೇಕ ಭಾಗಗಳಲ್ಲಿ ಆಚರಿಸಲಾಗುತ್ತದೆ, ಆದರೆ ನಿಯಮಗಳು ಭಿನ್ನವಾಗಿರುತ್ತವೆ. ಬ್ಯಾಂಕ್‌ಗಳು, ಶಾಲೆಗಳು, ಸರ್ಕಾರಿ ಕಚೇರಿಗಳು, ಅಂಗಡಿಗಳು ಮತ್ತು ಸಾರಿಗೆ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆಯೇ ಎಂದು ಜನರು ಆಗಾಗ್ಗೆ ಆಶ್ಚರ್ಯ ಪಡುತ್ತಾರೆ. ಉತ್ತರವು ರಾಜ್ಯ, ಸ್ಥಳೀಯ ಅಧಿಸೂಚನೆಗಳು ಮತ್ತು ವಲಯವನ್ನು ಅವಲಂಬಿಸಿರುತ್ತದೆ. ಸ್ಥಿತಿಯನ್ನು ಮುಂಚಿತವಾಗಿ ತಿಳಿದುಕೊಳ್ಳುವುದು ಕೆಲಸಗಾರರು, ವಿದ್ಯಾರ್ಥಿಗಳು ಮತ್ತು ಕುಟುಂಬಗಳು ತಮ್ಮ ದಿನವನ್ನು ಯೋಜಿಸಲು ಸಹಾಯ ಮಾಡುತ್ತದೆ.ಕಾರ್ಮಿಕರ ದಿನವನ್ನು ಅಂತರಾಷ್ಟ್ರೀಯ ಕಾರ್ಮಿಕರ ದಿನ ಅಥವಾ ಮೇ ದಿನ ಎಂದೂ ಕರೆಯುತ್ತಾರೆ, ಕಾರ್ಮಿಕರು ಮತ್ತು ಕಾರ್ಮಿಕ ಚಳುವಳಿಗಳನ್ನು ಗೌರವಿಸುತ್ತಾರೆ. ಭಾರತದಲ್ಲಿ, ಇದು ಸಾಮಾಜಿಕ ಮತ್ತು ಐತಿಹಾಸಿಕ ಅರ್ಥವನ್ನು ಹೊಂದಿದೆ,

ಬೆಂಗಳೂರು: ಸಿಇಟಿ ಪರೀಕ್ಷೆ ಸಂದರ್ಭದಲ್ಲಿ ವಸ್ತ್ರಸಂಹಿತೆಯಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವ ಬಗ್ಗೆ ಶಿಕ್ಷಣ ಸಚಿವ ಎಂಸಿ ಸುಧಾಕರ್‌ ಅವರು ಬಿಗ್ ಅಪ್ಡೇಟ್‌ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ನಾಲ್ವರು ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಸಮಸ್ಯೆ ಆಗಿದೆ. ಹಾಗಾಗಿ ಆ ವಿದ್ಯಾರ್ಥಿಗಳಿಗೆ ಮಾತ್ರ ಮರುಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು. ಜನಿವಾರ ಹಾಗೂ ಹಿಜಬ್‌ಗೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ ಎರಡು ಪರೀಕ್ಷಾ ಕೇಂದ್ರದಲ್ಲಿ ಗೊಂದಲ ಉಂಟಾಗಿತ್ತು. ಈ ಹಿನ್ನೆಲೆ ಪರೀಕ್ಷಾರ್ಥಿಗಳಿಗೆ ಮರು ಪರೀಕ್ಷೆ ಮಾಡುವ ಬಗ್ಗೆ ಮನವಿ ಬಂದಿದ್ದು. ಆದ್ದರಿಂದ ಪರೀಕ್ಷಾರ್ಥಿಗಳು

ಬೆಂಗಳೂರು: ನಿನ್ನೆ ಸುರಿದ ಭಾರೀ ಮಳೆಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಬಳಿ ಕಂಪೌಂಡ್ ಕುಸಿದು ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಪ್ರಧಾನಿ ಮೋದಿ ಪರಿಹಾರ ಘೋಷಿಸಿದ್ದು ಬಿಜೆಪಿ ನಾಯಕರು ಧನ್ಯವಾದ ಸಲ್ಲಿಸಿದ್ದಾರೆ. ಬೌರಿಂಗ್ ಆಸ್ಪತ್ರೆ ಕಂಪೌಂಡ್ ಕುಸಿದು 7 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಆರ್ ಅಶೋಕ್ ಭೇಟಿ ನೀಡಿದ್ದರು. ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಮೃತಪಟ್ಟವರಿಗೆ ಪ್ರಧಾನಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಘೋಷಣೆ ಮಾಡಿದ್ದಾರೆ.