ಸೀಬೆಕಾಯಿ ಕದ್ದು ತಿಂದ ತಪ್ಪಿಗೆ ಚಿಕ್ಕ ಹುಡುಗಿಯನ್ನು ಕಂಬಕ್ಕೆ ಅಮಾನವೀಯವಾಗಿ ಕಟ್ಟಿ ಹಾಕಿ ಕ್ರೌರ್ಯವೆಸಗಿದ ವಿಡಿಯೋವೊಂದು ಈಗ ವೈರಲ್ ಆಗಿದೆ. ಹಿಮಾಚಲ ಪ್ರದೇಶದಲ್ಲಿ ಉನಾದಲ್ಲಿ ಈ ಘಟನೆ ನಡೆದಿದೆ. ಚಿಕ್ಕವರಿದ್ದಾಗ ನಾವು ಅಕ್ಕಪಕ್ಕದ ಮನೆಯ ಮರದಿಂದ ಹಣ್ಣು, ಕಾಯಿ ಕಿತ್ತು ತಿನ್ನುವುದು ಸಾಮಾನ್ಯ. ಇದು ಮಕ್ಕಳ ತುಂಟಾಟವೂ ಹೌದು. ಆದರೆ ಅದಕ್ಕೆ ಮನೆಯಲ್ಲಿ ಏಟು ತಿಂದಿದ್ದೂ ಇದೆ. ಆದರೆ ಇಲ್ಲಿ ಇದು ಇನ್ನೊಂದು ಹಂತಕ್ಕೆ ಹೋಗಿದೆ. ಓರ್ವ ಪುಟಾಣಿ ಬಾಲಕಿ ಪಕ್ಕದ ಮನೆಯ ನಿವೃತ್ತ ಸೇನಾಧಿಕಾರಿಯೊಬ್ಬರ ಮನೆಯ ಮರದಿಂದ ಸೀಬೆಕಾಯಿ ಕಿತ್ತು ತಿಂದಿದ್ದಕ್ಕೆ ಆಕೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ.
ನಾಗ್ಪುರ: ಹೆಲ್ಮೆಟ್ ಹಾಕದೇ ಬೈಕ್ ಚಲಾಯಿಸಿದ್ದಲ್ಲದೇ ನಾಗರಿಕರೊಬ್ಬರು ಪ್ರಶ್ನೆ ಮಾಡಿದ್ದಕ್ಕೆ ಪೊಲೀಸ್ ಅಧಿಕಾರಿಯೊಬ್ಬರು ದರ್ಪ ಮೆರೆದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿರುವುದು ನಾಗ್ಪುರದಲ್ಲಿ. ಸಂಚಾರ ನಿಯಮದ ಬಗ್ಗೆ ಅಧಿಕಾರಿಗಳು ಜನರಲ್ಲಿ ಅರಿವು ಮೂಡಿಸಬೇಕು. ಆದರೆ ಕೆಲವೊಮ್ಮೆ ನಾಗರಿಕರಿಗೆ ಬುದ್ಧಿ ಹೇಳಬೇಕಾದ ಪೊಲೀಸರೇ ನಿಯಮಗಳನ್ನು ಪಾಲಿಸುವುದಿಲ್ಲ. ಅದಕ್ಕೆ ಸರಿಯಾದ ಉದಾಹರಣೆ ಈ ಘಟನೆ. ಓರ್ವ ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲಿರುವಾಗಲೇ ಹೆಲ್ಮೆಟ್ ಇಲ್ಲದೇ ಬೈಕ್ ಚಲಾಯಿಸುತ್ತಾ ಸಾಗುತ್ತಿರುತ್ತಾರೆ.
ನವದೆಹಲಿ: ಕೇರಳ ಚುನಾವಣೆ ಪ್ರಚಾರದ ವೇಳೆ ಗುಜರಾತಿಗಳು ಅನಕ್ಷರಸ್ಥರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವಮಾನ ಮಾಡಿದ್ದಾರೆ. ಕೇರಳವನ್ನು ಹೊಗಳುವ ಭರದಲ್ಲಿ ಮಲ್ಲಿಕಾರ್ಜುನ ಖರ್ಗೆ ಗುಜರಾತಿಗಳನ್ನು ಅವಮಾನ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಕೇರಳ ಚುನಾವಣೆ ಪ್ರಚಾರದ ವೇಳೆ ಮಲ್ಲಿಕಾರ್ಜುನ ಖರ್ಗೆ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಈ ವೇಳೆ ಎಡವಟ್ಟು ಮಾಡಿಕೊಂಡಿದ್ದಾರೆ. ‘ಮೋದಿ ನೀವು ಅನಕ್ಷರಸ್ಥ ಗುಜರಾತಿಗಳನ್ನು ಮೂರ್ಖರನ್ನಾಗಿಸಬಹುದು, ಆದರೆ ಸುಶಿಕ್ಷಿತ ಕೇರಳೀಯರನ್ನು ಯಾವತ್ತೂ ಮೂರ್ಖರಾಗಿಸಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಬೆಂಗಳೂರು: ಐಪಿಎಲ್ 2026 ರಲ್ಲಿ ನಿನ್ನೆ ಸಿಎಸ್ ಕೆ ವಿರುದ್ಧ ಟಿಮ್ ಡೇವಿಡ್ ಮೈದಾನದಾಚೆ ಹೊಡೆದ ಬಾಲ್ ಹುಡುಕಿ ಪಡೆದ ಫ್ಯಾನ್ಸ್ ಯಾರು ವಿಡಿಯೋ ನೋಡಿ. ಸಿಎಸ್ ಕೆ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ್ದ ಆರ್ ಸಿಬಿ 250 ರನ್ ಗಳಿಸಿತ್ತು. ಅದರಲ್ಲೂ ಡೆತ್ ಓವರ್ ಗಳಲ್ಲಿ ಟಿಮ್ ಡೇವಿಡ್ ಅಬ್ಬರಕ್ಕೆ ಮೈದಾನದಲ್ಲಿದ್ದ ಪ್ರೇಕ್ಷಕರು ಹುಚ್ಚೆದ್ದು ಕುಣಿದಿದ್ದರು. ಎದುರಾಳಿ ಬೌಲರ್ ಗಳು ಸುಸ್ತಾಗಿ ಹೋಗಿದ್ದರು. ಅದರಲ್ಲೂ ಒಂದು ಎಸೆತವನ್ನಂತೂ ಟಿಮ್ ಡೇವಿಡ್ ಬೀಸಿ ಹೊಡೆದ ರಭಸಕ್ಕೆ ಬಾಲ್ ಮೈದಾನದ ಛಾವಣಿಯನ್ನೂ ದಾಟಿ ಹೊರಗೆ ಹಾರಿತ್ತು.
ಚಂದ್ರ ದೋಷವಿದ್ದಾಗ ಪರಿಣಾಮ ಕಡಿಮೆ ಮಾಡಲು ನಾವು ಯಾವ ಬಣ್ಣದ ಬಟ್ಟೆ ಧರಿಸಬೇಕು ಮತ್ತು ಯಾವ ಬಟ್ಟೆಯನ್ನು ಅವಾಯ್ಡ್ ಮಾಡಬೇಕು ಎಂಬ ವಿವರ ಇಲ್ಲಿದೆ ನೋಡಿ. ಜಾತಕದಲ್ಲಿ ಚಂದ್ರ ಗ್ರಹ ದೋಷವಿದ್ದಾಗ ಬಿಳಿ ಬಣ್ಣದ ಬಟ್ಟೆ ಧರಿಸುವುದು ಸೂಕ್ತ. ಯಾಕೆಂದರೆ ಚಂದ್ರ ಬಿಳಿ ಬಣ್ಣವನ್ನು ಪ್ರತಿನಿಧಿಸುತ್ತಾನೆ. ಈ ಬಣ್ಣದ ಬಟ್ಟೆಗಳನ್ನು ವಿಶೇಷವಾಗಿ ಸೋಮವಾರಗಳಂದು ತೊಟ್ಟುಕೊಳ್ಳುವುದರಿಂದ ಪ್ರಭಾವ ಕಡಿಮೆಯಾಗುತ್ತದೆ. ಬಿಳಿ ಮತ್ತು ರಜತ ಬಣ್ಣದ ಶೇಡ್ ಇರುವ ಬಟ್ಟೆ ಧರಿಸಬೇಕು. ಬಿಳಿ ಬಣ್ಣದ ಜೊತೆಗೆ ತೆಳು ನೀಲಿ ಅಥವಾ ತೆಳು ಬೂದು ಬಣ್ಣವಿದ್ದರೂ ಸಮಸ್ಯೆಯಿಲ್ಲ. ಈ ಬಣ್ಣದ ಬಟ್ಟೆಗಳನ್ನು ಧರಿಸುವುದರಿಂದ ಮಾನಸಿಕವಾಗಿ ಶಾಂತಿ, ಸುಖ, ನೆಮ್ಮದಿ ಸಿಗುತ್ತದೆ.
ಬೆಂಗಳೂರು: ಐಪಿಎಲ್ 2026 ರ ನಿನ್ನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 43 ರನ್ ಗಳಿಂದ ಸೋಲಿಸಿದ ಆರ್ ಸಿಬಿ ಹಲವು ದಾಖಲೆಗಳನ್ನೇ ಮಾಡಿದೆ.ಆ ದಾಖಲೆಗಳ ಪಟ್ಟಿ ಇಲ್ಲಿದೆ ನೋಡಿ. ಮೊದಲು ಬ್ಯಾಟಿಂಗ್ ಮಾಡಿದ್ದ ಆರ್ ಸಿಬಿ ಟಿಮ್ ಡೇವಿಡ್, ರಜತ್ ಪಾಟೀದಾರ್ ಅಬ್ಬರದ ಬ್ಯಾಟಿಂಗ್ ನಿಂದಾಗಿ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 250 ರನ್ ಕಲೆ ಹಾಕಿತ್ತು. ಇದಕ್ಕೆ ಉತ್ತರವಾಗಿ ಸಿಎಸ್ ಕೆ 19.4 ಓವರ್ ಗಳಲ್ಲಿ 207 ರನ್ ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತ್ತು.
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ವಾರ ಅಲ್ಲಲ್ಲಿ ಮಳೆಯಾಗಿತ್ತು. ಈ ವಾರವೂ ಮಳೆಯ ಸಾಧ್ಯತೆಯಿದೆಯಾ, ಇಲ್ಲಿದೆ ವಾರದ ಹವಾಮಾನ ವರದಿ. ಬಿರು ಬೇಸಿಗೆಯ ನಡುವೆ ಕರಾವಳಿ, ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಕಳೆದ ವಾರ ಗುಡುಗು ಸಹಿತ ಮಳೆಯಾಗಿತ್ತು. ಇದರಿಂದ ವಾತಾವರಣ ಕೊಂಚ ತಂಪಾಗಿತ್ತು. ವಾರಂತ್ಯದಲ್ಲೂ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಆದರೆ ಈ ವಾರ ಮಳೆಯ ಸೂಚನೆಯಿಲ್ಲ. ಈ ವಾರಂತ್ಯಕ್ಕೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಬಿಟ್ಟರೆ ಉಳಿದ ದಿನಗಳಲ್ಲಿ ಮಳೆಯ ಸೂಚನೆಯಿಲ್ಲ. ಕರ್ನಾಟಕದಲ್ಲಿ ಈ ವಾರ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟು ಕಂಡುಬರಲಿದೆ.
ಇಂದು ಸೋಮವಾರವಾಗಿದ್ದು ಶಿವನ ಆರಾಧನೆಗೆ ಸೂಕ್ತವಾದ ದಿನ. ಇಂದು ಆಯಸ್ಸು, ಆರೋಗ್ಯ, ದೋಷ ನಿವಾರಣೆಗಾಗಿ ಶಿವನ ಕುರಿತು ಶಿವ ಭುಜಂಗ ಪ್ರಯಾತ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.ಕೃಪಾಸಾಗರಾಯಾಶುಕಾವ್ಯಪ್ರದಾಯಪ್ರಣಮ್ರಾಖಿಲಾಭೀಷ್ಟಸಂದಾಯಕಾಯ ।ಯತೀಂದ್ರೈರುಪಾಸ್ಯಾಂಘ್ರಿಪಾಥೋರುಹಾಯಪ್ರಬೋಧಪ್ರದಾತ್ರೇ ನಮಃ ಶಂಕರಾಯ ॥1॥ ಚಿದಾನಂದರೂಪಾಯ ಚಿನ್ಮುದ್ರಿಕೋದ್ಯ-ತ್ಕರಾಯೇಶಪರ್ಯಾಯರೂಪಾಯ ತುಭ್ಯಮ್ ।ಮುದಾ ಗೀಯಮಾನಾಯ ವೇದೋತ್ತಮಾಂಗೈಃಶ್ರಿತಾನಂದದಾತ್ರೇ ನಮಃ ಶಂಕರಾಯ ॥2॥ ಜಟಾಜೂಟಮಧ್ಯೇ ಪುರಾ ಯಾ ಸುರಾಣಾಂಧುನೀ ಸಾದ್ಯ ಕರ್ಮಂದಿರೂಪಸ್ಯ ಶಂಭೋಃಗಲೇ ಮಲ್ಲಿಕಾಮಾಲಿಕಾವ್ಯಾಜತಸ್ತೇವಿಭಾತೀತಿ ಮನ್ಯೇ ಗುರೋ ಕಿಂ ತಥೈವ ॥3॥ ನಖೇಂದುಪ್ರಭಾಧೂತನಮ್ರಾಲಿಹಾರ್ದಾ-ಂಧಕಾರವ್ರಜಾಯಾಬ್ಜಮಂದಸ್ಮಿತಾಯ ।ಮಹಾಮೋಹಪಾಥೋನಿಧೇರ್ಬಾಡಬಾಯಪ್ರಶಾಂತಾಯ ಕುರ್ಮೋ ನಮಃ ಶಂಕರಾಯ ॥4॥
ಬೆಂಗಳೂರು: ತವರು ನೆಲದಲ್ಲಿ ಸಿಎಸ್ಕೆ ವಿರುದ್ಧ ನಡೆದ ಪಂದ್ಯಾಟದಲ್ಲಿ ಆರ್ಸಿಬಿ 43ರನ್ಗಳ ಅಮೋಘ ಜಯ ಗಳಿಸಿದೆ. ಈ ಮೂಲಕ ಪಾಯಿಂಟ್ಸ್ ಟೇಬಲ್ನಲ್ಲಿ ಆರ್ಸಿಬಿ ಅಗ್ರಸ್ಥಾನಕ್ಕೇರಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಹಾಗೂ ಫಿಲಿಪ್ ಸಾಲ್ಟ್ ಉತ್ತಮ ಆರಂಭ ನೀಡಿದರು. ಬಳಿಕ ಬಂದ ದೇವದತ್ತ ಪಡಿಕ್ 51ರನ್, ಟಿಮ್ ಡೇವಿಡ್ 70ರನ್ ಹಾಗೂ ಕ್ಯಾಪ್ಟನ್ ರಜತ್ ಪಾಟಿದಾರ್48 ರನ್ ಗಳಿಸುವ ಮೂಲಕ ಆರ್ಸಿಬಿ 20ಓವರ್ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 250ರನ್ ಗಳಿಸಿತು.
ನವದೆಹಲಿ: ರಾಜ್ಯಸಭಾ ಸದಸ್ಯ, ಆಮ್ ಆದ್ಮಿ ಪಕ್ಷ ನಾಯಕ ರಾಘವ್ ಚಡ್ಡಾ ಮತ್ತೆ ತಮ್ಮ ಸ್ವಪಕ್ಷದ ವಿರುದ್ಧ ಸಿಡಿದೆದ್ದಿದ್ದಾರೆ. ಪಂಜಾಬ್ನ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಪ್ರಸ್ತಾವಿಸಲಿಲ್ಲ ಎಂಬ ತಮ್ಮ ಪಕ್ಷದ ಸಹೋದ್ಯೋಗಿಗಳ ಆರೋಪಕ್ಕೆ ವಿಡಿಯೊ ಮೂಲಕ ತಿರುಗೇಟು ನೀಡಿದ್ದಾರೆ. ಅವರು ಪಂಜಾಬ್ಗೆ ಸಂಬಂಧಿಸಿದ ವಿಷಯಗಳನ್ನು ಮೇಲ್ಮನೆಯಲ್ಲಿ ಪ್ರಸ್ತಾವಿಸುವ ವಿಡಿಯೊ ಬಿಡುಗಡೆ ಮಾಡಿ ತಮ್ಮ ಪಕ್ಷದವರಿಗೆ ಖಡಕ್ ಉತ್ತರ ನೀಡಿದ್ದಾರೆ.ಈ ವಿಡಿಯೊವು ಚಡ್ಡಾ ಅವರ ರಾಜ್ಯಸಭೆಯ ಭಾಷಣಗಳ ವಿವಿಧ ಕ್ಲಿಪ್ಗಳ ಸಂಗ್ರಹವಾಗಿದ್ದು, ಇದರಲ್ಲಿ ನಂಕಾನಾ ಸಾಹಿಬ್ ಕಾರಿಡಾರ್ಗಾಗಿ ಒತ್ತಾಯಿಸುವುದು, ರೈತರಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಆಗ್ರಹಿಸುವುದು, ಭಗತ್ ಸಿಂಗ್ಗೆ ಭಾರತ ರತ್ನವನ್ನು ಶಿಫಾರಸು ಮಾಡುವುದು ಹಾಗೂ ಮಹಾರಾಜ ರಂಜಿತ್ ಸಿಂಗ್ ಅವರ ರಾಜ ಸಿಂಹಾಸನವನ್ನು ಹಿಂದಿರುಗಿಸಲು ಆಗ್ರಹಿಸುವುದು ಸೇರಿ ಹಲವು ವಿಚಾರಗಳು ಸೇರಿವೆ.
ಭಾರತೀಯ ಕುಟುಂಬವೊಂದು ಮದುವೆಯ ಪ್ರವಾಸಕ್ಕಾಗಿ ಇಡೀ ರೈಲ್ವೇ ಕೋಚ್ ಅನ್ನು ಕಾಯ್ದಿರಿಸುವ ವೀಡಿಯೊ ವೈರಲ್ ಆಗಿದೆ. ಟ್ರೈನ್ಗೆ ಮದುವೆಯ ನಾಮಫಲಕವನ್ನು ಕಟ್ಟುವ ಮೂಲಕ ಸಂಭ್ರಮ ಶುರುವಾಗುತ್ತದೆ. ಕುಟುಂಬದ ಸದಸ್ಯರು ಹಾರವನ್ನು ಹಾಕುವ ಮೂಲಕ ಮತ್ತು ಅತಿಥಿಗಳನ್ನು ಸ್ವಾಗತಿಸುವ ಪೋಸ್ಟರ್ನೊಂದಿಗೆ ವೀಡಿಯೊ ಪ್ರಾರಂಭವಾಗುತ್ತದೆ.ಕುಟುಂಬವು ಶಕ್ತಿಯುತವಾದ ಬೀಟ್ಗಳಿಗೆ ನೃತ್ಯ ಮಾಡುವುದನ್ನು ಕಾಣಬಹುದು, ಮಕ್ಕಳಿಂದ ಅಜ್ಜಿಯರವರೆಗೆ ಎಲ್ಲರೂ ಭಾಗವಹಿಸುತ್ತಾರೆ.
ಆಂಧ್ರಪ್ರದೇಶದಲ್ಲಿ 22 ವರ್ಷದ ಯುವತಿಯೊಬ್ಬಳು ತನ್ನ ಪ್ರಿಯಕರನನ್ನು ಮದುವೆಯಾಗಿದ್ದಕ್ಕಾಗಿ ಹತ್ಯೆ ಮಾಡಿ, ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಸಹಾಯ ಮಾಡಿದ್ದ ಪೊಲೀಸ್ ಅಧಿಕಾರಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದು ಇದೀಗ ಸಸ್ಪೆಂಡ್ ಆದ ಘಟನೆ ಆಂಧ್ರಪ್ರದೇಶದಲ್ಲಿ ವರದಿಯಾಗಿದೆ. ಕಳೆದ ತಿಂಗಳು ಆಂಧ್ರಪ್ರದೇಶದ ಮಚೆರ್ಲಾ ಪಟ್ಟಣದಲ್ಲಿ ಈ ಘಟನೆ ನಡೆದಿತ್ತು.ಚೌಡೇಶ್ವರಿ ಎಂಬ ಯುವತಿ ಒಬ್ಬನನ್ನು ಪ್ರೀತಿಸಿದ್ದಳು. ಮಾರ್ಚ್ 4 ರಂದು ತನ್ನ ಮನೆಯನ್ನು ತೊರೆದು ತನ್ನ ಪೋಷಕರ ಇಚ್ಛೆಗೆ
ಬಾಗಲಕೋಟೆ: ಇಲ್ಲಿನ ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಸರಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಆಕ್ಷೇಪಿಸಿದ್ದಾರೆ.ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ನಿನ್ನೆ ಕಾಲೇಜು ಕ್ಯಾಂಪಸ್ಸಿಗೆ ಹೋಗಿ ನೀವು ಬಿಜೆಪಿಗೆ ಮತ ಕೊಟ್ಟರೆ ಜೈಲಿಗೆ ಹಾಕುತ್ತೇವೆ ಎಂಬ ಮಾಹಿತಿಯುಳ್ಳ ಒಂದು ಕರಪತ್ರವನ್ನು ಹಂಚಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿದರು. ಮಾಜಿ ಡಿಸಿಎಂ ಮತ್ತು ಸಂಸದ ಗೋವಿಂದ ಕಾರಜೋಳ ಅವರು ಪೊಲೀಸರಿಗೆ ದೂರು ನೀಡಿದ್ದು, ಅವರನ್ನು ಬಂಧಿಸಿದ್ದಾರೆ ಎಂದು ವಿವರಿಸಿದರು.
ಕೆಲಸ ಮಾಡಕ್ಕಾಗದೆ ಮೈಗಳ್ಳರು ಸುಲಭದಲ್ಲಿ ಹಣ ಪಡೆಯುವ ಸಲುವಾಗಿ ಕಳ್ಳತನದ ದಾರಿ ಹಿಡಿಯುತ್ತಾರೆ. ಖತರ್ನಾಕ್ ಖದೀಮರು ಮನೆಯ ಸುತ್ತಮುತ್ತವಿರುವ ವಸ್ತುಗಳನ್ನು ಯಾವುದನ್ನು ಬಿಡಲ್ಲ. ಅಂತಹದ್ದೇ ಘಟನೆ ಇದೀಗ ಬೆಂಗಳೂರಿನಲ್ಲಿ ನಡೆದಿದೆ. ಖತರ್ನಾಕ್ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ ಕೆ.ಜಿ.ಹಳ್ಳಿಯಲ್ಲಿ ಇಬ್ಬರು ಯುವಕರು ಕಟ್ಟಡದ ಹೊರಗೆ ಹಾಕಿದ್ದ ಬಲ್ಬ್ ಅನ್ನು ಕಳ್ಳತನ ಮಾಡಿದ್ದಾರೆ. ಇನ್ನು ಜನರಿಗೆ
ಹುಬ್ಬಳ್ಳಿ: ಇಲ್ಲಿನ ಲವ್ ಜಿಹಾದ್ ಪ್ರಕರಣ ಭಾರೀ ಸದ್ದು ಬೆನ್ನಲ್ಲೇ ಇದೀಗ ಅಂತಹುದ್ದೇ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಪ್ರೀತಿಯ ನಾಟಕವಾಡಿ ಯುವತಿ ಮೇಲೆ ನಿರಂತರ ಅತ್ಯಾಚಾರ ಎಸಗಿ ಬ್ಲ್ಯಾಕ್ಮೇಲೆ ಮಾಡಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಮುಫೀಸ್ ಮಿಯಾನ್ನವರ್ ಎಂಬಾತನ ವಿರುದ್ಧ ಆರೋಪ ಕೇಳಿಬಂದಿದೆ. ಳೆದ 5 ವರ್ಷಗಳ ಹಿಂದೆ ಕಾಲೇಜು ವಿದ್ಯಾರ್ಥಿನಿಯಾಗಿದ್ದ ಸಂತ್ರಸ್ತ ಯುವತಿಗೆ ಮತ್ತೊಂದು ಕಾಲೇಜಿನ ಸ್ಟೂಡೆಂಟ್ ಆಗಿದ್ದ ಕಮರಿಪೇಟೆಯ ಗವಿ ಓಣಿ ನಿವಾಸಿ ಮುಫೀಸ್ ಮಿಯಾನ್ನವರ್ ಪರಿಚಯ ಕಾರ್ಯಕ್ರಮವೊಂದರಲ್ಲಿ ಆಗಿತ್ತು.
ಬೆಂಗಳೂರು: ಕನ್ನಡ ಚಿತ್ರರಂಗದ ಭರವಸೆಯ ನಟ ಸುಮುಖ ತಮ್ಮ ಬಹುಕಾಲದ ಗೆಳತಿ ಮೈತ್ರಿ ಉಕಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉತ್ತರಾಖಂಡದ ರಿಷಿಕೇಶದ ಸುಂದರ ಪರಿಸರದಲ್ಲಿ, ಗಂಗಾ ನದಿಯ ತಟದಲ್ಲಿ ಈ ಜೋಡಿಯ ವಿವಾಹ ಮಹೋತ್ಸವ ಸುಂದರವಾಗಿ ನೆರವೇರಿದೆ. ಯೋಗರಾಜ್ ಭಟ್ ನಿರ್ದೇಶನದ ಮನದ ಕಡಲು ಸಿನಿಮಾದಲ್ಲಿ ನಟಿಸಿ ಫೇಮಸ್ ಆಗಿದ್ದ ಸುಮುಖ ಈಗ ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದಾರೆ. ಯಾವುದೇ ಅಬ್ಬರವಿಲ್ಲದೆ, ಕೇವಲ ಆಪ್ತರು ಮತ್ತು ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ. ರಿಷಿಕೇಶದ ಶಾಂತಿಯುತ ಪರಿಸರದಲ್ಲಿ ವಿವಾಹದಲ್ಲಿ ಬಹುಕಾಲದ ಗೆಳತಿ ಮೈತ್ರಿ ಉಕಾ ಜೊತೆಗೆ ಸುಮುಖ ಸಪ್ತಪದಿ ತುಳಿದಿದ್ದು, ಮದುವೆಯ ಸುಂದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಈಗ ವೈರಲ್ ಆಗುತ್ತಿವೆ.
ಬೆಂಗಳೂರು: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಹಾಲಿ ಐಪಿಎಲ್ ಆವೃತ್ತಿಯಲ್ಲಿ ಶುಭಾರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿದೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಕಳೆದ ಒಂದು ವಾರದಿಂದ ಚಿನ್ನಸ್ವಾಮಿ ಕ್ರೀಡಾಂಗಣ ಮತ್ತು ನಗರದ ಹೊರವಲಯದಲ್ಲಿರುವ ಕ್ರಿಕೆಟ್ ಮೈದಾನದಲ್ಲಿ ಅಭ್ಯಾಸ ಮಾಡುವುದರಲ್ಲಿ ಮಗ್ನರಾಗಿದ್ದರು.ಭಾನುವಾರ ಆರ್ಸಿಬಿ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಮೊದಲ ಪಂದ್ಯ ಮತ್ತು ಎರಡನೇ ಪಂದ್ಯಗಳ ನಡುವೆ ಎಂಟು ದಿನಗಳ ಬಿಡುವು ಇದ್ದುದರಿಂದ ಆರ್ಸಿಬಿ ತಂಡದ ನಾಯಕ ಈ ಮಧ್ಯೆ ತಿರುಪತಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ಬಂದಿದ್ದಾರೆ.
ಬೆಂಗಳೂರು: ಬೀದಿ ನಾಯಿಯೊಂದು ರಸ್ತೆಬದಿಯ ತಿಂಡಿ ವ್ಯಾಪಾರಿಯಿಂದ ಬೋಂಡಾ ಪಡೆಯಲು ಅಂಗವಿಕಲನಂತೆ ನಟಿಸಿ ತಿಂಡಿ ಗಿಟ್ಟಿಸಿಕೊಂಡ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಸ್ತೆಬದಿಯಲ್ಲಿ ತಳ್ಳುವ ಗಾಡಿಯಲ್ಲಿ ವ್ಯಕ್ತಿಯೊಬ್ಬರು ತಿಂಡಿಯನ್ನು ಮಾರಾಟ ಮಾಡುತ್ತಿರುತ್ತಾರೆ. ಅಂಗವಿಕಲ ನಾಯಿಯೊಂದು ತೇವಲುತ್ತಾ ಬಂದು ಆತನ ಬಳಿ ಬಂದು ತಿಂಡಿಗಾಗಿ ಕಾದು ಕುಳಿತುಕೊಳ್ಳುತ್ತದೆ. ಇದನ್ನು ನೋಡಿದ ಅಂಗಡಿಯವರು ಕರುಣೆಯಲ್ಲಿ ನಾಯಿಗೆ ತಿಂಡಿಯನ್ನು ನೀಡುತ್ತಾರೆ.
ಬೆಂಗಳೂರು: ಎಂ ಎಸ್ ಧೋನಿ ಇಂದು ಏನಾದರೂ ಆರ್ಸಿಬಿ ವಿರುದ್ಧ ಬ್ಯಾಟಿಂಗ್ಗೆ ಇಳಿದರೆ, ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೇ ಅವರ ಕೊನೆಯ ಪಂದ್ಯಾಟವಾಗಲಿದೆ ಎನ್ನಲಾಗಿದೆ. ಕಳೆದ ಕೆಲ ವರ್ಷಗಳಿಂದ ಎಂಎಸ್ ಧೋನಿ ಅವರು ಐಪಿಎಲ್ಗೆ ನಿವೃತ್ತಿ ಘೋಷಿಸುತ್ತಾರೆಂಬ ಸುದ್ದಿಯಾಗುತ್ತಲೇ ಇದೆ. ಕಳೆದ ಬಾರಿಯೇ ದೋನಿ ನಿವೃತ್ತಿಯನ್ನು ಘೋಷಣೆ ಮಾಡುತ್ತಾರೆಂದು ಊಹಿಸಲಾಗಿತ್ತು. ಆದರೆ ಈ ಬಾರಿ ಮತ್ತೇ ಐಪಿಎಲ್ನಲ್ಲಿ ಬ್ಯಾಟಿಂಗ್ ಪ್ರದರ್ಶನ ನೀಡುವುದಾಗಿ ತಂಡವು ಘೋಷಣೆ ಮಾಡಿತ್ತು.ಆದರೆ ಮುಂದಿನ ವರ್ಷಕ್ಕೆ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ದಾವಣಗೆರೆ: 5 ಗ್ಯಾರಂಟಿಗಳ ಬಂಡವಾಳ ಹೊರತುಪಡಿಸಿ ಕಳೆದ ಸುಮಾರು 3 ವರ್ಷದಲ್ಲಿ ಯಾವುದೇ ಸಾಧನೆ ಆಗಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಆಕ್ಷೇಪಿಸಿದ್ದಾರೆ.ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಿಕೆ ಗಮನಿಸಿದರೆ, ದೃಶ್ಯ ಮಾಧ್ಯಮಗಳನ್ನು ಗಮನಿಸುತ್ತ ಸಾಗಿದರೆ ಗ್ಯಾರಂಟಿ ಬಿಟ್ಟು ಬೇರೆ ಸಾಧನೆಯನ್ನು ಹುಡುಕಲು ಸಾಧ್ಯವಿಲ್ಲ ಎಂದು ನುಡಿದರು. ರಾಜ್ಯದ ಮುಖ್ಯಮಂತ್ರಿಗಳೂ ಬಿಜೆಪಿ ಬಗ್ಗೆ ಮುಖ್ಯಮಂತ್ರಿ ಪದವಿಯ ಘನತೆಗೆ ಮೀರಿ ಪದ ಬಳಸುವುದನ್ನು ನಾವು ಗಮನಿಸಿದ್ದೇನೆ ಎಂದು ತಿಳಿಸಿದರು.ಮುಖ್ಯಮಂತ್ರಿ ಕುರ್ಚಿಗೆ ಪ್ರಾಮುಖ್ಯತೆ ಕೊಟ್ಟದ್ದನ್ನು ಹೊರತುಪಡಿಸಿದರೆ, ಭ್ರಷ್ಟಾಚಾರಕ್ಕೆ ಪ್ರೇರಣೆ ಕೊಟ್ಟ ಘಟನೆಗಳನ್ನು ನಾವು
ಬೆಂಗಳೂರು: ರಾಜಧಾನಿ ಬೆಂಗಳೂರು ಮತ್ತು ಸುತ್ತಲಿನ ಭಾಗಗಳಲ್ಲಿ ಇಂದಿನಿಂದ ಏ.7ರವರೆಗೆಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರ್ನಾಟಕದ ಹಲವೆಡೆ, ವಿಶೇಷವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 21ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರಿನಲ್ಲಿ ಸಂಜೆಯ ನಂತರ ಮಳೆಯಾಗುವ ಮುನ್ಸೂಚನೆ ಇದೆ.ಮಳೆ ಎಚ್ಚರಿಕೆ: ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೊನ ಪಂದ್ಯದ ಟಿಕೆಟ್ ಅನ್ನು ಪಡೆಯಲು ಹೋದ ಟೆಕ್ಕಿಯೊಬ್ಬರಿಗೆ ಪಂಗನಾಮ ಹಾಕಲಾಗಿದೆ.ಮಹದೇವಪುರದ ಟೆಕ್ಕಿಯೊಬ್ಬರು ಬರೋಬ್ಬರಿ ₹ 1.46 ಲಕ್ಷ ಕಳೆದುಕೊಂಡಿದ್ದಾರೆ. ಐಪಿಎಲ್ ಟಿಕೆಟ್ಗೆ ಸಂಬಂಧಿಸಿದಂತೆ ಇನ್ಸ್ಟಾಗ್ರಾಮ್ನಲ್ಲಿ ಹಾಕಲಾಗಿದ್ದ ಒಂದು ಪೋಸ್ಟ್ ನೋಡಿದ ಟೆಕ್ಕಿ ಪೋಸ್ಟ್ ಹಾಕಿದ ವಂಚಕನನ್ನು ಸಂಪರ್ಕಿಸಿದ್ದಾರೆ. ವಂಚಕ ಪಂದ್ಯದ ಟಿಕೆಟ್ಗಳು, ಊಟದ ಕೂಪನ್ಗಳು ಮತ್ತು ವಿಐಪಿ ಸೌಲಭ್ಯಗಳನ್ನು ಹೊಂದಿರುವ ಟಿಕೆಟ್ಗಳನ್ನು ನೀಡುವುದಾಗಿ ಆಮಿಷ ಒಡ್ಡಿದ್ದಾನೆ. ಇದನ್ನು ನಂಬಿದ ಟೆಕ್ಕಿ, ತಾನು ಮತ್ತು ತನ್ನ ತಾಯಿಯ ಬ್ಯಾಂಕ್ ಖಾತೆಗಳಿಂದ ಹಣವನ್ನು ವರ್ಗಾಯಿಸಿದ್ದಾರೆ.
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಹಾಲಿ ಚಾಂಪಿಯನ್ ಆರ್ಸಿಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಹಿನ್ನಲೆಯಲ್ಲಿ ಬೆಂಗಳೂರು ಮೆಟ್ರೋ ಮತ್ತು ಬಿಎಂಟಿಸಿ ವಿಶೇಷ ಬಸ್ ಸೇವೆಗಳನ್ನು ಕಲ್ಪಿಸಿದೆ. ಪ್ರಯಾಣಿಕರಿಗೆ ಸುಲಭ ಮತ್ತು ಸುರಕ್ಷಿತ ಪ್ರಯಾಣಕ್ಕೆ ಮೆಟ್ರೋ ಸೇವೆಯನ್ನು ಮಧ್ಯರಾತ್ರಿ 2 ಗಂಟೆವರೆಗೆ ವಿಸ್ತರಿಸಿದೆ. ಮಾತ್ರವಲ್ಲದೆ ಕ್ರೀಡಾಂಗಣದ ಸುತ್ತಮುತ್ತಲ ರಸ್ತೆಗಳು, ಜಂಕ್ಷನ್ಗಳಲ್ಲಿ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ. ಐಪಿಎಲ್ ಟಿಕೆಟ್ ಹೊಂದಿರುವವರಿಗೆ ಮೆಟ್ರೊ ಸೇವೆ ಉಚಿತವಾಗಿದೆ.ವೈಟ್ಫೀಲ್ಡ್(ಕಾಡುಗೋಡಿ)ಯಿಂದ ರಾತ್ರಿ 12.30ಕ್ಕೆ ಮತ್ತು ಚಲ್ಲಘಟ್ಟದಿಂದ ರಾತ್ರಿ 12.45ಕ್ಕೆ. ರೇಷ್ಮೆ ಸಂಸ್ಥೆ ಹಾಗೂ ಮಾದಾವರದಿಂದ 12.45ಕ್ಕೆ. ಬೊಮ್ಮಸಂದ್ರ ದಿಂದ ರಾತ್ರಿ 1ಕ್ಕೆ ಹಾಗೂ ಆರ್.ವಿ. ರಸ್ತೆಯಿಂದ ರಾತ್ರಿ 2ಕ್ಕೆ. ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್ನಿಂದ ನಾಲ್ಕು ದಿಕ್ಕುಗಳಿಗೆ 1.30ಕ್ಕೆ ಕೊನೆಯ ರೈಲು ಹೊರಡಲಿದೆ.
ವಾಷಿಂಗ್ಟನ್: ಹೋರ್ಮುಜ್ ಜಲಸಂಧಿಯನ್ನು ತೆರೆಯುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಇರಾನ್ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆ ಟ್ರೂತ್ ಸೋಷಿಯಲ್ನಲ್ಲಿ ಪೋಸ್ಟ್ನಲ್ಲಿ ಟ್ರಂಪ್ ಇರಾನ್ಗೆ ಎಚ್ಚರಿಕೆ ನೀಡಿದ್ದಾರೆ. ಇರಾನ್ಗೆ ನೀಡಿದ್ದ ಗಡುವು 48 ಗಂಟೆಗಳಲ್ಲಿ ಮುಕ್ತಾಯಗೊಳ್ಳುತ್ತದೆ. ಅದರ ನಂತರ ಅಮೆರಿಕ ಇರಾನ್ ವಿರುದ್ಧ ಪ್ರಮುಖ ಮಿಲಿಟರಿ ಕ್ರಮಕೈಗೊಳ್ಳುತ್ತದೆ ಎಂದು ಟ್ರಂಪ್ ವಾರ್ನಿಂಗ್ ನೀಡಿದ್ದಾರೆ.ಇರಾನ್ 48 ಗಂಟೆಯೊಳಗಾಗಿ ಒಪ್ಪಂದಕ್ಕೆ ಬರಬೇಕು. ಇಲ್ಲವಾದಲ್ಲಿ ನರಕ ತೋರಿಸುತ್ತೇವೆ. ಮುಂದಿನ ಎರಡರಿಂದ ಮೂರು ವಾರಗಳವರೆಗೆ ಇರಾನ್ ವಿರುದ್ಧ ಇನ್ನಷ್ಟು ತೀವ್ರ ದಾಳಿಗಳನ್ನು ನಡೆಸಲಿದ್ದೇವೆ. ಆ ಮೂಲಕ ಅವರನ್ನು ಮರಳಿ ಶಿಲಾಯುಗದ ಸ್ಥಿತಿಗೆ ಕಳುಹಿಸಲಿದ್ದೇವೆ ಎಂದು ಟ್ರಂಪ್ ಪುನರುಚ್ಚರಿಸಿದ್ದರು.
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಇಂದು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.ಆರ್ಸಿಬಿ ತಂಡವು ಈಗಾಗಲೇ ಮೊದಲ ಪಂದ್ಯ ಗೆದ್ದು ಶುಭಾರಂಭ ಕಂಡಿದ್ದರೆ, ಚೆನ್ನೈ ತಂಡ ಸತತ ಎರಡು ಪಂದ್ಯಗಳನ್ನು ಸೋತು ಕಳೆದ ಸೀಸನ್ ನಂತೆಯೇ ಈ ಬಾರಿಯೂ ನಿರಾಸೆ ಅನುಭವಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಪಂದ್ಯ ಜಿದ್ದಾಜಿದ್ದಿನಿಂದ ಕೂಡಿರುವ ನಿರೀಕ್ಷೆ ಇದೆ. ಬಲಾಬಲ ಲೆಕ್ಕ ಹಾಕಿದರೆ ಆರ್ಸಿಬಿ ಹೆಚ್ಚು ಬಲಿಷ್ಠವಾಗಿದೆ. ಬ್ಯಾಟಿಂಗ್ ವಿಭಾಗದಲ್ಲಿ ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್ ಮತ್ತು ರಜತ್ ಪಾಟೀದಾರ್ ಉತ್ತಮ ಫಾರ್ಮ್ ನಲ್ಲಿದ್ದಾರೆ. ಬೌಲಿಂಗ್ನಲ್ಲಿ ಜೇಕಬ್ ಡಫಿ, ಭುವನೇಶ್ವರ್ ಕುಮಾರ್, ಕೃಣಾಲ್ ಪಾಂಡ್ಯ, ಸುಯಶ್ ಶರ್ಮಾ ಎದುರಾಳಿ ತಂಡವನ್ನು ಕಟ್ಟಿಹಾಕುವ ಸಾಮರ್ಥ್ಯ ಹೊಂದಿದ್ದಾರೆ.
ಯುಎಸ್, ಇಸ್ರೇಲಿ ಸ್ಟ್ರೈಕ್ಗಳು ಯುದ್ಧ ಪ್ರಾರಂಭವಾದಾಗಿನಿಂದ 30 ಇರಾನಿನ ವಿಶ್ವವಿದ್ಯಾಲಯಗಳನ್ನು ಗುರಿಯಾಗಿಸಿಕೊಂಡಿವೆ ಎಂದು ವಿಜ್ಞಾನ ಸಚಿವರು ಹೇಳುತ್ತಾರೆಫೆಬ್ರವರಿ ಅಂತ್ಯದಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಇರಾನ್ನಾದ್ಯಂತ 30 ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳ ಮೇಲೆ ಯುಎಸ್ ಇಸ್ರೇಲ್ ದಾಳಿ ನಡೆಸಿದೆ ಎಂದು ಇರಾನ್ನ ವಿಜ್ಞಾನ ಸಚಿವರು ಶನಿವಾರ ಹೇಳಿದ್ದಾರೆ."ಇಲ್ಲಿಯವರೆಗೆ, 30 ಕ್ಕೂ ಹೆಚ್ಚು ವಿಶ್ವವಿದ್ಯಾನಿಲಯಗಳನ್ನು ನೇರವಾಗಿ ಗುರಿಪಡಿಸಲಾಗಿದೆ" ಎಂದು ಹೊಸೈನ್ ಸಿಮೈ ಸರ್ರಾಫ್
ಬೆಂಗಳೂರು: ಶುಷ್ಕ ಕಾಲ, ಅಕಾಲಿಕ ಚಳಿ ಮತ್ತು ಆಲಿಕಲ್ಲು ಮಳೆಯಿಂದಾಗಿ ಕರ್ನಾಟಕದ ಮಾವಿನ ಬೆಳೆ ಶೇಕಡಾ 50 ರಿಂದ 60 ರಷ್ಟು ಕುಸಿಯುವ ನಿರೀಕ್ಷೆಯಿದೆ. ರೈತರು ಭಾರೀ ನಷ್ಟವನ್ನು ಎದುರಿಸುತ್ತಿದ್ದು, ಪೂರೈಕೆ ಕಡಿಮೆಯಾಗಿರುವುದರಿಂದ ಈ ಬೇಸಿಗೆಯಲ್ಲಿ ರಾಜ್ಯದಾದ್ಯಂತ ಮಾವಿನ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಕರ್ನಾಟಕದಲ್ಲಿ ಮಾವಿನ ಋತುವಿನ ಆಗಮನವು ರೈತರಿಗೆ ಮತ್ತು ಗ್ರಾಹಕರಿಗೆ ನಿರಾಶಾದಾಯಕ ಸುದ್ದಿ ತಂದಿದೆ, ಏಕೆಂದರೆ ಈ ವರ್ಷದ ಬೆಳೆ ಭಾರಿ ಹಿನ್ನಡೆ ಅನುಭವಿಸಿದೆ. ಇದೆಲ್ಲಾ ಹವಾಮಾನದ ಬದಲಾವಣೆಯ ಪರಿಣಾಮ ಎನ್ನಲಾಗಿದೆ. ಇದರಿಂದಾಗಿ ಉತ್ಪಾದನೆಯು 50 ರಿಂದ 60 ಪ್ರತಿಶತದಷ್ಟು
ಯಾದಗಿರಿ: ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದೆ ಆರೋಪದಡಿ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ತಾಲ್ಲೂಕಿನ ಗ್ರಾಮದಲ್ಲಿ ಶುಕ್ರವಾರ ಬಯಲು ಬಹಿರ್ದೆಸೆಗೆ ತೆರಳಿದ್ದ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.ಬಂಧಿತರನ್ನು ಬಸಪ್ಪ ನಿಂಗಪ್ಪ (25) ಹಾಗೂ ರಡೆಪ್ಪ ಗಂಜಲಪ್ಪ (30) ಎಂದು ಗುರುತಿಸಲಾಗಿದೆ.
ಬೆಂಗಳೂರು:ಸಿಎಂ ಸಿದ್ದರಾಮಯ್ಯನವರ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಕಟ್ ಹೇಳಿಕೆ ಬಿಜೆಪಿಯ ನೀಚ ರಾಜಕಾರಣವನ್ನು ತೋರಿಸಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು.ಬಾಗಲಕೋಟೆಯಲ್ಲಿ ಸಿಎಂ ವಿರುದ್ಧ ಹೀನಾಯ "ಕಟ್" ಹೇಳಿಕೆ ಬಿಜೆಪಿಯ ನೀಚ ರಾಜಕಾರಣವನ್ನು ಮತ್ತೊಮ್ಮೆ ಬಟಾಬಯಲು ಮಾಡಿದೆ. ಈ ಸಂಬಂಧ ಸುರ್ಜೇವಾಲಾ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಾಗಲಕೋಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ "ಕಟ್" ಹೇಳಿಕೆ ಬಿಜೆಪಿಯ
ಬೆಂಗಳೂರು: ಐಪಿಎಲ್ ಟಿಕೆಟ್ ಬೇಡವೆಂದಿರುವ ನಾನು ನನ್ನ ಟಿಕೆಟ್ ಅನ್ನು ಬೇರೆಯವರಿಗೆ ನೀಡಲು ಅನುಮತಿ ನೀಡುವುದಿಲ್ಲ ಎಂದು ಬಿಜೆಪಿ ಶಾಸಕ ಎಸ್ ಸುರೇಶ್ ಕುಮಾರ್ ಹೇಳಿದರು. ಐಪಿಎಲ್ ಟಿಕೆಟ್ ಕುರಿತ ತಮ್ಮ ನಿಲುವನ್ನು ಸ್ಪಷ್ಟಪಡಿಸಿ ವಿಧಾನಸಭೆ ಸಭಾಧ್ಯಕ್ಷರಿಗೆ ಬರೆದಿರುವ ಪತ್ರವನ್ನು ಸುರೇಶ್ ಕುಮಾರ್ ಅವರು, ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.ವಿಧಾನ ಸಭೆಯ ಮಾನ್ಯ ಸಭಾಧ್ಯಕ್ಷರಿಗೆ ಐಪಿಎಲ್ ಟಿಕೆಟ್ ಕುರಿತ ನನ್ನ ನಿಲುವನ್ನು ಸ್ಪಷ್ಟ ಪಡಿಸಿ ಬರೆದಿರುವ ಪತ್ರವನ್ನು ಮತ್ತೊಮ್ಮೆ ಹಂಚಿಕೊಳ್ಳುತ್ತಿದ್ದೇನೆ.
ಬೆಂಗಳೂರು: ರಾಜ್ಯದಲ್ಲಿ ಎದುರಿಸುತ್ತಿರುವ ಅಡುಗೆ ಅನಿಲ, ಆಟೋ ಗ್ಯಾಸ್ ಸಮಸ್ಯೆಗೆ ನಮ್ಮ ಕೈಯಲ್ಲಿ ಏನೂ ಇಲ್ಲ. ಈ ಸಮಸ್ಯೆಗೆ ಕೇಂದ್ರ ಸರ್ಕಾರ ಪರಿಹಾರ ನೀಡಬೇಕೆಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಆಟೋ ಚಾಲಕರಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿದ್ದೇವೆ. ಅಡುಗೆ ಅನಿಲ ಸಮಸ್ಯೆಯಿಂದ ಹೋಟೆಲ್ನವರಿಗೆ ತೊಂದರೆಯಾಗುತ್ತಿದೆ. ಮನೆಯಲ್ಲಿ ಹೇಗೋ ಸ್ಟೌವ್ನಲ್ಲಿ ಅಡುಗೆ ಮಾಡಿಕೊಳ್ಳುತ್ತಿದ್ದಾರೆ. ಹೋಟೆಲ್ನಲ್ಲಿ ಪಾಪ ಹೇಗೋ ಮಾಡಿಕೊಳ್ಳುತ್ತಿದ್ದಾರೆ. ಈ
ತಿರುವಲ್ಲ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಎನ್ಡಿಎ ಮೇಲೆ ಜನರ ನಂಬಿಕೆ ಮತ್ತು ಮಹಿಳೆಯರ ಅಪಾರ ಬೆಂಬಲ ರಾಜ್ಯಾದ್ಯಂತ ಗೋಚರಿಸುತ್ತಿದೆ ಎಂದು ಹೇಳಿದರು. ಆದರೆ ಈ ಬಾರಿಯ ಬದಲಾವಣೆಯ ಗಾಳಿಯು ಕೇರಳದಲ್ಲಿ ಈಗ ದೊಡ್ಡ ಪರಿವರ್ತನೆಯಾಗಲಿದ್ದು, ಮೇ 4 ರಂದು ಎಲ್ಡಿಎಫ್ ಸರ್ಕಾರದ ನಿರ್ಗಮನಕ್ಕೆ ಕ್ಷಣಗಣನೆ ಆರಂಭವಾಗಲಿದೆ ಎಂದು ಹೇಳಿದರು. ನನ್ನ ಆಗಮನದ ನಂತರ, ಈ ಸ್ಥಳಕ್ಕೆ ಇಡೀ ಮಾರ್ಗದಲ್ಲಿ ಜನಸಂದಣಿ ನಿಂತಿರುವುದನ್ನು ನಾನು ನೋಡಿದೆ. ಎಡಪಂಥೀಯರು
ಬೇಸಿಗೆ ಕಾಲದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ಭಾರತೀಯ ರೈಲ್ವೇಯು SMVT ಬೆಂಗಳೂರು ಮತ್ತು ಕಾನ್ಪುರ ನಡುವೆ ವಿಶೇಷ ರೈಲು ಸೇವೆಯನ್ನು ಘೋಷಿಸಿದೆ.ಈ ರೈಲು ಪ್ರಯಾಗರಾಜ್ ಮೂಲಕ ಚಲಿಸುತ್ತದೆ, ಈ ಮಾರ್ಗದಲ್ಲಿ ಪ್ರಯಾಣಿಕರಿಗೆ ಉತ್ತಮ ಸಂಪರ್ಕವನ್ನು ಒದಗಿಸುತ್ತದೆ. ಬೆಂಗಳೂರು-ಕಾನ್ಪುರ ವಿಶೇಷ ರೈಲು ಭಾರತೀಯ ರೈಲ್ವೇಯು ಬೇಸಿಗೆ ಕಾಲದಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ವಿಶೇಷ ರೈಲು ಸೇವೆಯನ್ನು ಪರಿಚಯಿಸಿದೆ
ಬೆಂಗಳೂರು: ಪ್ರಾಣಿ ಹಾಗೂ ಮನುಷ್ಯರ ನಡುವಿನ ಪ್ರೀತಿಯೇ ಹಾಗೇ. ಒಮ್ಮೆ ಪ್ರಾಣಿಗಳ ಜತೆ ಬಾಂಧವ್ಯ ಬೆಳೆದರೆ ಅದು ಯಾವತ್ತಿಗೂ ಮುರಿಯಲು ಸಾಧ್ಯವಿಲ್ಲ. ಪ್ರಾಣಿ ಹಾಗೂ ಮನುಷ್ಯನ ಪ್ರೀತಿಗೆ ಸಾಕ್ಷಿ ಎಂಬಂತೆ ಇಲ್ಲೊಬ್ಬ ಮಾವುತ ಆನೆಯೊಂದಿಗೆ ನಡೆಸಿಕೊಂಡ ರೀತಿಯೇ ಸಾಕ್ಷಿಯಾಗಿದೆ.ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಮಾವುತನೊಬ್ಬ ತಾನು ಐಸ್ಕ್ರೀ ತಿನ್ನುತ್ತಿದ್ದಾಗ, ತನ್ನ ಆನೆಗೂ ಅದೇ ಚಮಚದಲ್ಲಿ ಐಸ್ ಕ್ರೀಂ ಅನ್ನು ನೀಡಿದ್ದಾನೆ.
ಬೆಂಗಳೂರು: ಕುಳಿತಿದ್ದ ಗುಂಪಿನ ಮೇಲೆ ನಾಯಿಯೊಂದು ಏಕಾಏಕಿ ದಾಳಿ ನಡೆಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮನೆಯ ಹೊರಗಡೆ ಕೂತಿದ್ದ ಯುವಕರ ಗುಂಪಿನ ಮೇಲೆ ನಾಯಿಯೊಂದು ದಾಳಿ ನಡೆಸಿದೆ. ಗುಂಪಿನ ಬಳಿ ಹತ್ತಿರ ಬಂದ ನಾಯಿ ಏಕಾಏಕಿ ದಾಳಿ ಮಾಡಿದೆ. ಇದರಿಂದ ಭಯಗೊಂಡ ಯುವಕರು ನಾಯಿಯನ್ನು ಓಡಿಸಲು
ಬಾಗಲಕೋಟೆ: ಸಿದ್ದರಾಮಯ್ಯ ಅವರ ನಿಜ ಬಣ್ಣ ಮೈಸೂರಿನಲ್ಲಿ ಗೊತ್ತಾಗಿ ಅಲ್ಲಿನ ಮತದಾರರು ಸೋಲಿಸಿದರು. ಆಗ ಬಾದಾಮಿಗೆ ಓಡಿ ಬಂದರು. ಬಾದಾಮಿ ಕೈ ಹಿಡಿಯಿತು. ಆದರೆ ಇಲ್ಲಿಗೂ ಕೈ ಕೊಟ್ಟು ಓಡಿ ಹೋದರು. ಈಗ ಮತ್ತೆ ಬಾಗಲಕೋಟೆಗೆ ಬಂದಿದ್ದಾರೆ. ಇಲ್ಲಿಗೂ ಕೈ ಕೊಡುತ್ತಾರೆ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ವ್ಯಂಗ್ಯವಾಡಿದರು. ಇಂದು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಆಗ ಚುನಾವಣೆಗೆ ಬಾದಾಮಿಗೆ ಬಂದಿದ್ದರು. ಈಗ ಮತ್ತೆ ಬಂದಿದ್ದಾರೆ. ಬಾದಾಮಿ ಹಾಲು ಕುಡಿದು, ಬಿರಿಯಾನಿ ತಿಂದು ಟಾಟಾ ಬಾಯ್ ಬಾಯ್ ಹೇಳಿದರು. ಇನ್ನು ಎರಡು ವರ್ಷದಲ್ಲಿ ಅಭಿವೃದ್ಧಿಯ ಮಳೆ ಸುರಿಸುತ್ತೇನೆ ಅಂತ ಅವರು ಹೇಳುತ್ತಿದ್ದಾರೆ. ಮೂರು ವರ್ಷ ನಿಮ್ಮದೇ ಶಾಸಕರು ಬಾಗಲಕೋಟದಲ್ಲಿ
ಮಹ್ಮೋರಾ (ಅಸ್ಸಾಂ): ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಅನ್ನು "ನಿಯಂತ್ರಿಸುತ್ತಾರೆ" ಎಂದಿರುವ ರಾಹುಲ್ ಗಾಂಧಿ ವಿರುದ್ಧ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಗೆಲ್ಲುತ್ತದೆ ಎನ್ನವವರು ಹುಚ್ಚರು ಎಂದು ಬಿಸ್ವಾ ಲೇವಡಿ ಮಾಡಿದರು. ಇದು ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಕ್ ಸಮರವನ್ನು ಮತ್ತೇ ತೀವ್ರಗೊಳಿಸಿದೆ.
ದಾವಣಗೆರೆ: ಈ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗ್ಯಾರಂಟಿ ಸರ್ಕಾರಕ್ಕೆ ಗೆಲುವು ಸಹ ಗ್ಯಾರಂಟಿ. ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಅಭಿವೃದ್ಧಿಗೆ ಜನಮನ್ನಣೆ ಸಿಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.ನಗರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನತೆ ಶಾಮನೂರು ಶಿವಶಂಕರಪ್ಪ ಅವರ ಮೇಲೆ ಅಪಾರ ಗೌರವ ಹೊಂದಿದ್ದಾರೆ. ಎಲ್ಲಾ ಸಮುದಾಯದವರಿಗೂ ಸೌಲಭ್ಯ ಕಲ್ಪಿಸಿದ್ದಾರೆ. ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಕ್ಷೇತ್ರದಲ್ಲಿ ಅವರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಸಮರ್ಥ ಶಾಮನೂರು ಮಲ್ಲಿಕಾರ್ಜುನ ಅವರ ‘ಕೈʼ ಹಿಡಿಯಲಿದೆ.
ಸಿಎಸ್ಕೆ ವಿರುದ್ಧದ ಆರ್ಸಿಬಿ ಪಂದ್ಯಾಟ ನೋಡಲು ಶಾಸಕಗರಿಗೆಷ್ಟು ಕ್ರೇಜ್, ಟಿಕೆಟ್ಗಾಗಿ ಪಿಎಗಳನ್ನೇ ಕ್ಯೂ ನಿಲ್ಲಿಸಿದ ಶಾಸಕರುಬೆಂಗಳೂರು: ಒಂದೇಡೆ ಜನರು ಗ್ಯಾಸ್ಗಾಗಿ ರಾತ್ರಿಯಿಡಿ ಸರತಿಯಲ್ಲಿ ನಿಂತು ಪರದಾಡುತ್ತಿದ್ದರೆ, ಇತ್ತ ಶಾಸಕರು ಐಪಿಎಲ್ ಟಿಕೆಟ್ಗಾಗಿ ತಮ್ಮ ಪಿಎಗಳನ್ನು ಕ್ಯೂ ನಿಲ್ಲಿಸಿದ್ದಾರೆ. ಈಚೆಗೆ ಪ್ರತಿ ಶಾಸಕರಿಗೆ 3 ಐಪಿಎಲ್ ಟಿಕೆಟ್ಗಳನ್ನು ಘೋಷಿಸಿದ ಬೆನ್ನಲ್ಲೇ ಪಿಎಗಳನ್ನು ಟಿಕೆಟ್ ಪಡೆಯಲು ಶಾಸಕರು ಸರತಿ
ಇದೇ ಭಾನುವಾರ ಸಿಎಸ್ಕೆ ವಿರುದ್ಧದ ಪಂದ್ಯಾಟಕ್ಕೂ ಮುನ್ನಾ ಆರ್ಸಿಬಿ ನಾಯಕ ರಜತ್ ಪಾಟಿದಾರ್ ಹಾಗೂ ಬ್ಯಾಟರ್ ಜಿತೇಶ್ ಶರ್ಮಾ ಅವರು ಪವಿತ್ರ ತಿರುಮಲ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.ಪಾಟಿದಾರ್ ಮತ್ತು ಜಿತೇಶ್ ಈ ಹಿಂದೆ ಆಧ್ಯಾತ್ಮಿಕ ಸ್ಥಳಕ್ಕೆ ಭೇಟಿ ನೀಡಿದ್ದರು. ಈಚೆಗಷ್ಟೇ ತಂದೆಯಾದ ರಜತ್ ಪಾಟಿದಾರ್ ಅವತು ಮಾರ್ಚ್ 28 ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಹೆಚ್) ವಿರುದ್ಧ ಆಡಿದ ಆರ್ಸಿಬಿ ಆರಂಭಿಕ ಪಂದ್ಯದಲ್ಲಿ ಜಯಶಾಲಿಯಾಯಿತು.
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ಚಂದ್ ಗೆಹಲೋಟ್ ಅವರ ನಡೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಖಂಡಿಸಿದೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಕಿಡಿಕಾರಿದ್ದು, ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟು ಮೂಟೆ ಕಟ್ಟಿ ಹೊರಡಿ ಎಂದು ರಾಜ್ಯಪಾಲರಿಗೆ ಆಗ್ರಹಿಸಿದ್ದಾರೆ.ನೀವು ಹಿಂದಿ ಸಾಮ್ರಾಜ್ಯಶಾಹಿಯ ಲಾಬಿಯ ಪರವಾಗಿ ಮಾತನಾಡುತ್ತಿದ್ದೀರಿ ಎಂಬುದು ನಮಗೆ ಚೆನ್ನಾಗಿ ಗೊತ್ತಿದೆ. ಕನ್ನಡಿಗರು ಔದಾರ್ಯವಂತರು. ನಮ್ಮ ನೆಲದಲ್ಲಿ ನಿಮಗೆ ಐಶಾರಾಮಿ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದೇವೆ.
ಚೆನ್ನೈ: ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ಕಾವೇರುತ್ತಿದೆ. ಎಲ್ಲಾ ಪಕ್ಷಗಳು ಬಿರುಸಿನ ಮತಯಾಚನೆ ನಡೆಸುತ್ತಿವೆ. ಪಕ್ಷಗಳಿಂದ ಅಭ್ಯರ್ಥಿಗಳ ಘೋಷಣೆಯೂ ನಡೆದಿದೆ. ಈ ಮಧ್ಯೆ ಭಾರೀ ನಿರೀಕ್ಷೆ ಮೂಡಿಸಿದ್ದ ಬಿಜೆಪಿ ಮುಖಂಡ ಅಣ್ಣಾಮಲೈ ಅವರಿಗೆ ಟಿಕೆಟ್ ತಪ್ಪಿರುವುದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.ತಮಿಳುನಾಡು ವಿಧಾನಸಭಾ ಚುನಾವಣೆಗೆ ಏಪ್ರಿಲ್ 23 ರಂದು ಚುನಾವಣೆ ನಡೆಸಲಿದೆ. ಇದೀಗ ಬಿಜೆಪಿ ಟಿಕೆಟ್ ನಿರಾಕರಿಸಿದ್ದರ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿಯೂ ಆಗಿರುವ ತಮಿಳುನಾಡು ಬಿಜೆಪಿ ಘಟಕದ ಮಾಜಿ ಮುಖ್ಯಸ್ಥ ಅಣ್ಣಾಮಲೈ ಮೌನ ಮುರಿದಿದ್ದಾರೆ.ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಾನು ನಿರ್ಧರಿಸಿದ್ದೇನೆ. ಪಕ್ಷದ ಕೋರ್ ಕಮಿಟಿಗೆ ಈ ನಿರ್ಧಾರವನ್ನ ಮುಂಚಿತವಾಗಿ ತಿಳಿಸಿದ್ದೇನೆ. ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಲಿಖಿತವಾಗಿ ಕೊಟ್ಟಿದ್ದೇನೆ ಎಂದು ಹೇಳಿದ್ದಾರೆ.
ಬೆಂಗಳೂರು: ಚುನಾವಣಾ ಪ್ರಚಾರ ಮಾಡಲು ಬಂದಾಗ ಮಹಿಳೆಯರು ತಿಲಕವಿಡಲು ಹೋದಾಗ ಸಿಎಂ ಸಿದ್ದರಾಮಯ್ಯ ಬೇಡ ಎಂದು ಕೈ ಎತ್ತಿದ್ದಾರೆ. ಈ ವಿಡಿಯೋವನ್ನು ಹಂಚಿಕೊಂಡಿರುವ ವಿಪಕ್ಷ ನಾಯಕ ಆರ್ ಅಶೋಕ್ ಕುಂಕುಮ ಕಂಡರೆ ಇವರಿಗೆ ಭಯ ಎಂದು ವ್ಯಂಗ್ಯ ಮಾಡಿದ್ದಾರೆ. ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಚುನಾವಣಾ ಪ್ರಚಾರಕ್ಕೆ ಬಂದಿದ್ದಾಗ ಮಹಿಳೆಯರು ಆರತಿ ಎತ್ತಿ ಕುಂಕುಮವಿಡಲು ಬಂದಿದ್ದಾರೆ. ಈ ವೇಳೆ ತಡೆದ ಸಿದ್ದರಾಮಯ್ಯ ಬೇಡ ಎಂದಿದ್ದಾರೆ. ಇದು ಎರಡು ಮೂರು ಕಡೆ ಇದೇ ರೀತಿ ಆಗಿದೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ನಿನ್ನೆ ಕೊಂಚ ಏರಿಕೆಯಾಗಿತ್ತು. ಆದರೆ ಇಂದು ಯಥಾಸ್ಥಿತಿಯಲ್ಲಿದೆ ಹೊಸ ಅಡಿಕೆ ಬೆಲೆ 500 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 555 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 555 ರೂ.ಗಳಷ್ಟಾಗಿದೆ.
ನಮ್ಮ ದೈಹಿಕ ಆರೋಗ್ಯ ಚೆನ್ನಾಗಿರಬೇಕೆಂದರೆ ಬಿಳಿ ರಕ್ತ ಕಣ ಮತ್ತು ಕೆಂಪು ರಕ್ತ ಕಣ ಸಮತೋಲನದಲ್ಲಿರುವುದು ತುಂಬಾ ಮುಖ್ಯ. ಇವುಗಳಲ್ಲಿ ಯಾವುದಾದರೂ ಒಂದು ಹೆಚ್ಚು-ಕಡಿಮೆಯಾದರೂ ಅನೇಕ ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ. ಬಿಳಿ ರಕ್ತ ಕಣ ಮತ್ತು ಕೆಂಪು ರಕ್ತಕಣ ಸಮತೋಲನದಲ್ಲಿರಲು ದಿನಕ್ಕೆ 7-8 ಗಂಟೆ ಸಮಯ ನಿದ್ರೆ ತುಂಬಾ ಅವಶ್ಯಕ. ಜೊತೆಗೆ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಬೇಕು. ಧೂಮಪಾನ ಮತ್ತು ಮದ್ಯಪಾನ ಅಭ್ಯಾಸಗಳನ್ನು ತ್ಯಜಿಸಬೇಕು. -ವಿಶೇಷವಾಗಿ ಆಹಾರದಲ್ಲಿ ವಿಟಮಿನನ್ ಸಿ, ಕಬ್ಬಿಣದಂಶವಿರುವ ಆಹಾರಗಳನ್ನು ತೆಗೆದುಕೊಳ್ಳಬೇಕು. ಇವು ಬಿಳಿ ರಕ್ತ ಕಣಗಳ ಸಂಖ್ಯೆಯನ್ನು ಹೆಚ್ಚಿಸುತ್ತದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಯಥಾಸ್ಥಿತಿಯಲ್ಲಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಏರಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ನಿನ್ನೆ 1,51,650.00 ರೂ.ಗಳಿತ್ತು. ಆದರೆ ಇಂದು ಯಥಾಸ್ಥಿತಿಯಲ್ಲಿದ್ದು 1,51,650.00 ರೂ.ಗಳಷ್ಟಿದೆ.
ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರೊಂದು ಬಾವಿಗೆ ಉರುಳಿ ಬಿದ್ದ ಪರಿಣಾಮ ಮಕ್ಕಳು ಸೇರಿ ಒಂದೇ ಕುಟುಂಬದ 9 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ನಿನ್ನೆ ತಡರಾತ್ರಿ ಕಾರ್ಯಕ್ರಮವೊಂದನ್ನು ಮುಗಿಸಿ ಬರುವಾಗ ದುರಂತ ಸಂಭವಿಸಿದೆ. ಅಪಘಾತಕ್ಕೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ. ಆದರೆ ನೀರು ತುಂಬಿದ್ದ ಬಾವಿಗೆ ಕಾರು ಬಿದ್ದಿದ್ದರಿಂದ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ದಿಂಡೋರಿಯ ಶಿವಾಜಿನಗರದ ರಾಜ್ ಬ್ಯಾಂಕ್ವೆಟ್ ಹಾಲ್ ನಲ್ಲಿ ಶುಕ್ರವಾರ ಸಂಜೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೆಂಗಳೂರು: ಕರ್ನಾಟಕದಲ್ಲಿ ಎರಡು ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಗೆ ಇಂದು ಬಿಜೆಪಿ ಪರ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ. ಬಾಗಲಕೋಟೆ ಮತ್ತು ದಾವಣಗೆರೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಇದಕ್ಕಾಗಿ ಪ್ರಚಾರ ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಇದುವರೆಗೆ ಬಿಜೆಪಿ ಅಭ್ಯರ್ಥಿಗಳ ಪರ ಮಿತ್ರ ಪಕ್ಷ ಜೆಡಿಎಸ್ ನಾಯಕರು ಬಂದಿರಲಿಲ್ಲ. ಕುಮಾರಸ್ವಾಮಿ ಪ್ರಚಾರಕ್ಕೆ ಬರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ ನೀಡಿದ್ದರು. ಅದರಂತೆ ಇಂದು ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರವಾಗಿ ಎಚ್ ಡಿ ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ. ಕುಮಾರಸ್ವಾಮಿ ಜೊತೆಗೆ ರಾಜ್ಯದ ಪ್ರಮುಖ ಬಿಜೆಪಿ ನಾಯಕರೂ ಇಂದು ಪ್ರಚಾರಕ್ಕೆ ಸಾಥ್ ನೀಡಲಿದ್ದಾರೆ.
ಅರೆ ಕ್ಷಣವಾಗಿದ್ದರೂ ಆತ ರೈಲಿನಡಿಗೆ ಸಿಲುಕಿ ಪ್ರಾಣವೇ ಹೋಗುತ್ತಿತ್ತು. ಆದರೆ ಆತನ ಜೀವ ಗಟ್ಟಿಯಿತ್ತು. ಆತನನನ್ನು ಕಾಪಾಡಿದ್ದು ಯಾರು, ಹೇಗೆ ಎಂದು ಈ ವಿಡಿಯೋ ನೋಡಿ. ರೈಲ್ವೇ ನಿಲ್ದಾಣದಲ್ಲಿ ರೈಲು ಬರುವಾಗ ಮೈ ಎಲ್ಲಾ ಎಚ್ಚರವಾಗಿದ್ದರೂ ಸಾಲದು. ಕೆಲವರು ರೈಲು ಹತ್ತುವ ಗಡಿಬಿಡಿಯಲ್ಲಿ ಕಾಲು ಜಾರಿ ಬಿದ್ದು ಪ್ರಾಣವನ್ನೇ ಕಳೆದುಕೊಳ್ಳುವುದೂ ಇದೆ. ಇಂತಹದ್ದೇ ವಿಡಿಯೋವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದು ಮುಂಬೈನ ಬೊರಿವಲಿ ರೈಲ್ವೇ ನಿಲ್ದಾಣದಲ್ಲಿ ನಡೆದ ಘಟನೆ. ಓರ್ವ ವ್ಯಕ್ತಿ ಚಾಲನೆಯಲ್ಲಿರುವ ರೈಲಿನಿಂದ ಸ್ಲಿಪ್ ಆಗಿ ಕೆಳಗೆ ಇಳಿಯುತ್ತಾನೆ.