ನಟ ಯುವರಾಜ್‌ಕುಮಾರ್ ನಟನೆಯ ಬ್ಯಾಂಗಲ್ ಬಂಗಾರಿ ಸಿನಿಮಾ ಹಾಡು ಇದೀಗ ಟ್ರೆಂಡಿಗ್‌ನಲ್ಲಿದೆ. ಈ ಗೀತೆ ಎಲ್ಲೆಡೆ ವೈರಲ್ ಆಗಿದ್ದು, ಅನೇಕ ಸೆಲೆಬ್ರಿಟಿಗಳು ಈ ಹಾಡಿನ ರೀಲ್ಸ್‌ಗೆ ಸ್ಟೆಪ್ ಹಾಕಿದ್ದಾರೆ. ನಾಯಕ ಯುವರಾಜ್ ಕುಮಾರ್ ಹಾಗೂ ನಾಯಕಿ ಸಂಜನಾ ಆನಂದ್ ಬ್ಯಾಂಗಲ್ ಬಂಗಾರಿ ಅಂತಾ ಕುಣಿದು ಕುಪ್ಪಳಿಸಿದ್ದರು.ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದ ಪದಕ್ಕೆ ಆಂತೋನಿ ದಾಸ್ ಹಾಡಿದ್ದಾರೆ. ಚರಣ್ ರಾಜ್ ಸಂಗೀತ, ಯುವ-ಸಂಜನಾ ಕುಣಿದ ಬಂಗಾಲ್ ಬಂಗಾರಿ ಗೀತೆ ಸಖತ್ ಹಿಟ್ ಕಂಡಿದೆ. ಕೇವಲ 22 ದಿನಗಳಲ್ಲಿ ಬರೋಬ್ಬರಿ 10 ಮಿಲಿಯನ್ ವೀಕ್ಷಣೆ ಕಂಡಿರುವ ಹಾಡು, ಟಾಪ್ ಮ್ಯೂಸಿಕ್ ವಿಡಿಯೋ ಕೆಟಗರಿಯಲ್ಲಿ 29ನೇ ಸ್ಥಾನವನ್ನು ಪಡೆದುಕೊಂಡಿದೆ. ಅತಿ ಕಡಿಮೆ ಸಮಯದಲ್ಲಿ ಬ್ಯಾಂಗಲ್ ಬಂಗಾರಿ ದಾಖಲೆ ಬರೆದಿದ್ದು, ಸಿನಿಮಾ ಇದೀಗ ಭಾರೀ ನಿರೀಕ್ಷೆಯನ್ನು ಮೂಡಿಸಿದೆ. ‌

ಬೆಂಗಳೂರು: ಹಾಸನದಲ್ಲಿ ಸರಣಿ ಹೃದಯಾಘಾತದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಇದಕ್ಕೂ ಕೊವಿಡ್ ಲಸಿಕೆಗೂ ಸಂಬಂಧವಿದೆಯೇ ಎಂಬ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ‘ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ರವೀಂದ್ರನಾಥ್ ಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.

ಬೆಂಗಳೂರು: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯಿಂದಾಗಿ ಗ್ಯಾಸ್ ಸಿಲಿಂಡರ್ ಸೇರಿದಂತೆ ದಿನಬಳಕೆಯ ವಸ್ತುಗಳಿಗೆ ಕೆಲವೇ ದಿನಗಳಲ್ಲಿ ʼಝಡ್ ಪ್ಲಸ್ʼ ಸೆಕ್ಯೂರಿಟಿ ನೀಡಬೇಕಾದ ಪರಿಸ್ಥಿತಿ ಎದುರಾಗಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಟೀಕೆ ಮಾಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ‘ಹೆದ್ದಾರಿಗಳ ಟೋಲ್ ನಿಂದ ರೈಲ್ವೇ ತನಕ, ಅಡುಗೆ ಸಿಲಿಂಡರ್ ನಿಂದ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿ ದೇಶದ ಜನಸಾಮಾನ್ಯನ ಪರಿಸ್ಥಿತಿಯನ್ನು ಜರ್ಜರಿತಗೊಳಿಸಿದೆ. ಮೋದಿ ಹಾಗೂ ಬಿಜೆಪಿ ಜನಸಾಮಾನ್ಯರ ಜೇಬಿಗೆ ಕೈ ಹಾಕಿ ದಾಳಿ ಮಾಡಿದೆ. ಇದು ಒಂದು ರೀತಿಯ ಕ್ರೂರ ನೀತಿ’ ಎಂದಿದ್ದಾರೆ.

ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಚಿಕ್ಕವಯಸ್ಸಿನವರಲ್ಲೂ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಹೃದ್ರೋಗ ತಜ್ಞರೂ ಆಗಿರುವ ಸಂಸದ ಡಾ ಮಂಜುನಾಥ್ ನಮ್ಮ ಹೃದಯ ಕಾಪಾಡಿಕೊಳ್ಳಲು ಯಾವತ್ತೂ ಹೇಳುವ ಈ ಟಿಪ್ಸ್ ತಪ್ಪದೇ ಪಾಲಿಸಬೇಕು. ಹೃದಯ ರೋಗ ತಜ್ಞರೆಂದರೆ ಮೊದಲು ನೆನಪಿಗೆ ಬರುವವರೇ ಡಾ ಸಿ ಮಂಜುನಾಥ್. ಜಯದೇವ ಆಸ್ಪತ್ರೆಯ ಆಡಳಿತಾಧಿಕಾರಿಯಾಗಿ ಅವರು ಮಾಡಿರುವ ಸಾಧನೆಗಳೇ ಅಂತಹದ್ದು. ಇದೀಗ ಸಂಸದರಾಗಿದ್ದರೂ ವೈದ್ಯ ವೃತ್ತಿಯನ್ನು ಸಂಪೂರ್ಣವಾಗಿ ಬಿಟ್ಟಿಲ್ಲ. ಇತ್ತೀಚೆಗೆ ಯುವಜನಾಂಗದಲ್ಲೂ ಕಾಡುತ್ತಿರುವ ಹೃದಯಾಘಾತದ ಬಗ್ಗೆ ಅವರು ಅಮೂಲ್ಯ ಸಲಹೆಗಳನ್ನು ಹಿಂದಿನಿಂದಲೂ ನೀಡುತ್ತಾ ಬಂದಿದ್ದಾರೆ. -ರಕ್ತದೊತ್ತಡ ಬಾರದಂತೆ ನಮ್ಮ ಜೀವನ ಶೈಲಿಯಿರಬೇಕು. ರಕ್ತದೊತ್ತಡವೇ ಹೃದಯಾಘಾತಕ್ಕೆ ಪ್ರಮುಖ ಕಾರಣವಾಗಬಹುದು.