ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ನಡೆಯುತ್ತಿದ್ದ ಅಧಿಕಾರ ಹಂಚಿಕೆ ಫೈಟ್ ಈಗ ಮತ್ತೊಂದು ಹಂತಕ್ಕೆ ಹೋಗಿದೆ. ಡಿಕೆಶಿ ಟ್ವೀಟ್ ಗೆ ಪ್ರತಿಯಾಗಿ ಈಗ ಸಿದ್ದರಾಮಯ್ಯ ಹೊಸ ಟ್ವೀಟ್ ಮಾಡಿದ್ದಾರೆ. ಇಂದು ಬೆಳಿಗ್ಗೆಯೇ ಡಿಸಿಎಂ ಡಿಕೆ ಶಿವಕುಮಾರ್ ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ಇದು ಸಿದ್ದರಾಮಯ್ಯ ಬಗ್ಗೆಯೇ ಪರೋಕ್ಷವಾಗಿ ಕುಟುಕಿರಬಹುದೇ ಎಂದು ಹಲವರು ವಿಶ್ಲೇಷಿಸಿದ್ದರು. ಇದರ ಬೆನ್ನಲ್ಲೇ ಇದೀಗ ಸಂಜೆ ವೇಳೆಗೆ ಸಿಎಂ ಸಿದ್ದರಾಮಯ್ಯ ಕೂಡಾ ಸೋಷಿಯಲ್ ಮೀಡಿಯಾದಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದು ಇದು ಡಿಕೆಶಿಗೆ ಕೊಟ್ಟ ಕೌಂಟರ್ ಇರಬಹುದೇ ಎಂದು ವಿಶ್ಲೇಷಿಸಲಾಗುತ್ತಿದೆ.
ಮೈಸೂರು: ರಾಜ್ಯದಲ್ಲಿ ಕುಸ್ತಿ ತಿಕ್ಕಾಟದ ನಡುವೆ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ಐದು ವರ್ಷವೂ ನನ್ನ ತಂದೆಯೇ ಸಿಎಂ ಎಂದಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕಾಳಗ ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ಈ ನಡುವೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ತಂದೆಯ ಪರ ಬ್ಯಾಟಿಂಗ್ ಮಾಡಿದ್ದಾರೆ. ತಂದೆಯವರು ಹೈಕಮಾಂಡ್ ನೀಡಿದ್ದ ಕೆಲಸವನ್ನು ಮಾಡಿದ್ದಾರೆ. ಅವರು ಯಾವುದೇ ಹಗರಣ ಮಾಡಿಲ್ಲ. ಅವರ ವಿರುದ್ಧ ಯಾವುದೇ ಭ್ರಷ್ಟಾಚಾರ ಆರೋಪಗಳಿಲ್ಲ.
ಬೆಂಗಳೂರು: ಮೊನ್ನೆಯಷ್ಟೇ ಅಪಘಾತದಲ್ಲಿ ಸಾವಿಗೀಡಾದ ಹಿರಿಯ ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ ನೀಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಬಡತನದಲ್ಲೇ ಬೆಳೆದು ಮೇಲೆ ಬಂದಿದ್ದ ಮಹಂತೇಶ ಒಬ್ಬ ದಕ್ಷ, ಪ್ರಾಮಾಣಿಕ ಅಧಿಕಾರಿಯಾಗಿದ್ದರು. ದೊಡ್ಡ ಹುದ್ದೆಯಲ್ಲಿದ್ದರೂ ಒಂದೇ ಒಂದು ಕಳಂಕವಿಲ್ಲದೇ ಆದರ್ಶ ಅಧಿಕಾರಿಯಾಗಿದ್ದವರು. ಈಗ ಅವರ ಕುಟುಂಬಕ್ಕೆ ಆಧಾರ ಬೇಕಾಗಿದೆ. ಹೀಗಾಗಿ ಮಹಂತೇಶ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಪತ್ರ ಮುಖೇನ ಮನವಿ ಮಾಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕುರ್ಚಿ ಫೈಟ್ ನಡೆಯುತ್ತಿರುವ ಬೆನ್ನಲ್ಲೇ ಹೈಕಮಾಂಡ್ ನಾಯಕರು ಇಂದು ಸಭೆ ನಡೆಸಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದಾರೆ. ಇದರ ನಡುವೆ ಡಿಕೆ ಶಿವಕುಮಾರ್ ಗೆ ಪಟ್ಟ ಕಟ್ಟಿದರೆ ಹೈಕಮಾಂಡ್ ಗೆ ಮತ್ತೊಂದು ಭಯ ಶುರುವಾಗಿದೆ. ಮುಖ್ಯಮಂತ್ರಿ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ಗೆ ಹುದ್ದೆ ಕೊಡುವುದು ಹೈಕಮಾಂಡ್ ಗೆ ಸುಲಭದ ಕೆಲಸವಲ್ಲ. ಅದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಬದಲಾಗಿ ಹೊಸ ಸಮಸ್ಯೆಗಳು ಶುರುವಾಗುತ್ತವೆ. ಡಿಕೆ ಶಿವಕುಮಾರ್ ಗೆ ಸಿಎಂ ಹುದ್ದೆ ಬಿಟ್ಟು ಕೊಡಿ ಎಂದು ಹೈಕಮಾಂಡ್ ಕೇಳಿದರೆ ಏನು ಮಾಡಬೇಕು ಎಂದು ಸಿದ್ದರಾಮಯ್ಯ ಬಣ ಈಗಾಗಲೇ ತೀರ್ಮಾನಿಸಿದೆ.
ಉಡುಪಿ: ನಾಳೆ ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಕರಾವಳಿ ಬಿಜೆಪಿ ನಾಯಕರು ಫುಲ್ ಆಕ್ಟಿವ್ ಆಗಿದ್ದಾರೆ. ಮೋದಿ ಬರುತ್ತಿರುವ ಹಿನ್ನಲೆಯಲ್ಲಿ ಇಂದಿನಿಂದಲೇ ಉಡುಪಿಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ನಾಳೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 3 ಗಂಟೆಯವರೆಗೆ ಉಡುಪಿ ಕೃಷ್ಣ ಮಠದ ಸುತ್ತಮುತ್ತ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಸೂಚಿಸಲಾಗಿದೆ. ದ್ರೋಣ್ ಹಾರಾಟ ನಿಷೇಧಿಸಲಾಗಿದೆ. ಭದ್ರತೆಗಾಗಿ 3,000 ಪೊಲೀಸರು, ಎನ್ ಎಸ್ ಜಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಉಡುಪಿ ಈಗ ಅಕ್ಷರಶಃ ಪೊಲೀಸರ ಭದ್ರಕೋಟೆಯಾಗಿದೆ.
ನವದೆಹಲಿ: ದೇಶದಲ್ಲಿ ಈಗ ಎಸ್ಐಆರ್ ಬಗ್ಗೆ ಭಾರೀ ಚರ್ಚೆಗಳಾಗುತ್ತಿವೆ. ಇದರ ನಡುವೆ ಇದನ್ನು ವಿರೋಧಿಸಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ದೇಶದ ನಾಗರಿಕಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನದ ಅವಕಾಶ ನೀಡಬೇಕೇ ಎಂದು ತಪರಾಕಿ ನೀಡಿದೆ. ಚುನಾವಣಾ ಆಯೋಗ ಎಸ್ಐಆರ್ ಪ್ರಕ್ರಿಯೆ ನಡೆಸುತ್ತಿದೆ. ಇದಕ್ಕೆ ಪ್ರತಿಪಕ್ಷಗಳ ವಿರೋಧವಿದೆ. ಸುಪ್ರೀಂಕೋರ್ಟ್ ನಲ್ಲಿ ಎಸ್ಐಆರ್ ವಿರೋಧಿಸಿ ಹಲವು ಅರ್ಜಿಗಳು ದಾಖಲಾಗಿವೆ. ಇದರ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಚುನಾವಣಾ ಆಯೋಗದ ಕರ್ತವ್ಯದಲ್ಲಿ ನಾವು ಮೂಗು ತೂರಿಸಲು ಸಾಧ್ಯವಿಲ್ಲ. ಕೆಲವೊಂದು ನ್ಯೂನ್ಯತೆಗಳಿದ್ದರೆ ಸರಿಪಡಿಸಬಹುದಷ್ಟೇ ಎಂದಿದೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ಮೊನ್ನೆಯಷ್ಟೇ ಕೊಂಚ ಏರಿಕೆಯಾಗಿತ್ತು. ಆದರೆ ಇಂದು ಅಡಿಕೆ ಮತ್ತು ಕಾಳುಮೆಣಸು ದರ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಅಡಿಕೆ ಬೆಲೆ ಏರಿಕೆಯೂ ಅಲ್ಲ ಇಳಿಕೆಯೂ ಇಲ್ಲ ಎನ್ನುವ ಸ್ಥಿತಿಯ್ಲಿತ್ತು. ಒಂದೆಡೆ ಬೆಳೆ ಕಡಿಮೆ, ಇನ್ನೊಂದೆಡೆ ಬೆಲೆ ಏರಿಕೆಯಾಗದೇ ಇರುವುದು ರೈತರ ಚಿಂತೆಗೆ ಕಾರಣವಾಗಿತ್ತು. ಆದರೆ ಇಂದು ಅಡಿಕೆ ಬೆಲೆ ದಿಡೀರ್ ಏರಿಕೆಯಾಗಿತ್ತು. ಆದರೆ ಇಂದು ಮತ್ತೆ ಯಥಾಸ್ಥಿತಿಯಲ್ಲಿದೆ. ಹೊಸ ಅಡಿಕೆ ಬೆಲೆ 410 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು ಇಂದು 530 ರೂ. ಗಳಷ್ಟಿದೆ.
ಬೆಂಗಳೂರು: ಚಿನ್ನದ ಬೆಲೆ ಪ್ರತಿನಿತ್ಯ ಏರಿಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಏರಿಕೆಯಾಗಿದೆ. ಇತರೆ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಇಳಿಕೆ ಕಂಡಿತ್ತು. ಆದರೆ ವಾರಂತ್ಯಕ್ಕೆ ಚಿನ್ನದ ದರ ಏರಿಕೆ-ಇಳಿಕೆಯಾಗುತ್ತಲೇ ಇತ್ತು. ಈ ವಾರವೂ ಇದೇ ಟ್ರೆಂಡ್ ಮುಂದುವರಿದಿದೆ. ಇಂದು ಪರಿಶುದ್ಧ ಚಿನ್ನದ ದರ ಭಾರೀ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,28,945.00 ರೂ.ಗಳಿತ್ತು. ಇಂದು 1,29,920.00 ರೂ.ಗಳಷ್ಟಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ನಡೆಯುತ್ತಿರುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಒಂದನ್ನು ಕೊಟ್ಟಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ನಡೆಯುತ್ತಿದೆ ಎನ್ನಲಾಗಿರುವ ಸಿಎಂ ಕುರ್ಚಿ ತಿಕ್ಕಾಟ ಈಗ ಹೈಕಮಾಂಡ್ ಅಂಗಳಕ್ಕೆ ಬಂದಿದೆ. ಇದರ ಬಗ್ಗೆ ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬ ಕುತೂಹಲ ಈಗ ಎಲ್ಲರದ್ದು.ಇದರ ನಡುವೆ ಇಂದು ಮಲ್ಲಿಕಾರ್ಜುನ ಖರ್ಗೆ ಮಾಧ್ಯಮಗಳ ಮುಂದೆ ಅಧಿಕಾರ ಹಂಚಿಕೆ ಬಗ್ಗೆ ಮಹತ್ವದ ಅಪ್ ಡೇಟ್ ಕೊಟ್ಟಿದ್ದಾರೆ.
ಬೆಂಗಳೂರು: ಟೊಮೆಟೊ ದರ ನಿನ್ನೆ ಮೊನ್ನೆಯಷ್ಟೇ 10-20 ರೂ.ಗಳಷ್ಟಿತ್ತು. ಆದರೆ ಈಗ ದಿಡೀರ್ ಏರಿಕೆಯಾಗಿದೆ. ಟೊಮೆಟೊ ಈಗ ಬಲು ದುಬಾರಿಯಾಗಿದ್ದು ಎಷ್ಟಾಗಿದೆ ಇಲ್ಲಿದೆ ನೋಡಿ ವಿವರ. ಮೊನ್ನೆ ಮೊನ್ನೆಯಷ್ಟೇ ಟೊಮೆಟೊ ಖರೀದಿಸುವವರೇ ಇಲ್ಲ ಎಂದು ರೈತರು ಚಿಂತೆಗೀಡಾಗಿದ್ದರು. ಕೆಲವರು ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ ವ್ಯಕ್ತಪಡಿಸುವ ಘಟನೆಗಳೂ ಕಂಡುಬಂದಿದ್ದವು. ಆದರೆ ಈಗ ದಿಡೀರ್ ಬೆಲೆ ಏರಿಕೆಯಾಗಿದೆ. ಇದರಿಂದ ರೈತರಿಗೆ ಖುಷಿಯಾಗಿದೆ. ಆದರೆ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಟೊಮೆಟೊ ದರ ಈಗ ಮಾರುಕಟ್ಟೆಯಲ್ಲಿ ಶತಕದ ಅಂಚಿಗೆ ತಲುಪಿದೆ.
ಅಯೋಧ್ಯೆ: ರಾಮಮಂದಿರದಲ್ಲಿ ಮೊನ್ನೆ ಪ್ರಧಾನಿ ಮೋದಿ ಕೇಸರಿ ಧ್ವಜಾರೋಹಣ ಮಾಡಿದ್ದಕ್ಕೆ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ತಗಾದೆ ತೆಗೆದಿದ್ದಾರೆ. ಇದಕ್ಕೆ ಭಾರತ ತಿರುಗೇಟು ನೀಡಿದ್ದು ನಿಮ್ಮದು ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ ಎಂದಿದೆ. ಅಯೋಧ್ಯೆಯಲ್ಲಿ ಮೊನ್ನೆಯಷ್ಟೇ ರಘುವಂಶದ ಚಿಹ್ನೆಯುಳ್ಳ ಕೇಸರಿ ಧ್ವಜಾರೋಹಣವನ್ನು ಪ್ರಧಾನಿ ಮೋದಿ ನೆರವೇರಿಸಿದ್ದರು. ಈ ಘಟನೆ ಬಗ್ಗೆ ಪಾಕಿಸ್ತಾನ ಪ್ರಧಾನಿ ಶಹಬಾಜ್ ಪ್ರತಿಕ್ರಿಯಿಸಿದ್ದು, ಇದು ಭಾರತದಲ್ಲಿ ಮುಸ್ಲಿಮರಿಗೆ ಆಗುತ್ತಿರುವ ಅನ್ಯಾಯ ಎಂದಿದೆ. ಭಾರತದಲ್ಲಿ ಮುಸ್ಲಿಮರ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ ಎನ್ನುವುದಕ್ಕೆ ಇದು ಸಾಕ್ಷಿ. ಈ ವಿಚಾರದಲ್ಲಿ ವಿಶ್ವಸಂಸ್ಥೆ ಮಧ್ಯಪ್ರವೇಶಿಸಬೇಕು ಎಂದೆಲ್ಲಾ ಹಲುಬಿಕೊಂಡಿದ್ದರು.
ಮುಂಬೈ: ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದ ತಕ್ಷಣ ಕನ್ನಡಿಗ, ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆದರೆ ಗಂಭೀರ್ ಕತೆ ಏನು? ಗೌತಮ್ ಗಂಭೀರ್ ಟಿ20 ಕ್ರಿಕೆಟ್ ಗೆ ಉತ್ತಮ ಕೋಚ್ ಆಗಿರಬಹುದು. ಆದರೆ ಏಕದಿನ ಮತ್ತು ಟೆಸ್ಟ್ ಮಾದರಿಯಲ್ಲಿ ಕೋಚ್ ಆಗಿ ಅವರು ಸಂಪೂರ್ಣ ವಿಫಲರಾಗಿದ್ದಾರೆ. ತವರಿನಲ್ಲೇ ಟೆಸ್ಟ್ ಸರಣಿಯಲ್ಲಿ ವೈಟ್ ವಾಶ್ ಆಗುತ್ತಿರುವುದಕ್ಕಿಂತ ದೊಡ್ಡ ಸಾಕ್ಷಿ ಇನ್ನೇನು ಬೇಕಿದೆ? ಗೌತಮ್ ಗಂಭೀರ್ ಆದರೂ ತಮ್ಮ ಹುಳುಕು ಒಪ್ಪಿಕೊಳ್ಳಲು ತಯಾರಿಲ್ಲ.
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಫೈಟ್ ನಡೆಯುತ್ತಿದೆ. ಇದರ ನಡುವೆ ಇಂದು ದೆಹಲಿಯಲ್ಲಿ ಈ ನಾಲ್ವರು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಭವಿಷ್ಯ ತೀರ್ಮಾನಿಸಲಿದ್ದಾರೆ. ಅಧಿಕಾರ ಹಂಚಿಕೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಪಟ್ಟು ಬಿಡುತ್ತಿಲ್ಲ. ರಾಜ್ಯಕ್ಕೆ ಬಂದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಲ್ಲಿನ ನಾಯಕರೊಂದಿಗೆ ಮಾತುಕತೆ ನಡೆಸಿ ದೆಹಲಿಗೆ ತೆರಳಿದ್ದಾರೆ. ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ರಾಹುಲ್ ಗಾಂಧಿ ಜೊತೆಗೆ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸುರ್ಜೇವಾಲ ಮತ್ತು ಕೆಸಿ ವೇಣುಗೋಪಾಲ್ ಸೇರಿದಂತೆ ನಾಲ್ವರು ಮಹತ್ವದ ಸಭೆ ನಡೆಯಲಿದೆ.
ಬೆಂಗಳೂರು: ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಸಂದೇಶವೊಂದನ್ನು ರವಾನಿಸಿದ್ದಾರೆ. ಅಧಿಕಾರ ಹಂಚಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಒಳಗೊಳಗೇ ತಿಕ್ಕಾಟ ನಡೆಯುತ್ತಿದೆ. ಈ ನಡುವೆ ಇದರ ಲಾಭವನ್ನು ಹೇಗೆ ಪಡೆಯಬಹುದು ಎಂದು ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಯೋಜನೆ ಹಾಕುತ್ತಿದೆ. ಮೊನ್ನೆಯಷ್ಟೇ ಬಿಜೆಪಿ ನಾಯಕ ಸದಾನಂದ ಗೌಡನವರು ಡಿಕೆ ಶಿವಕುಮಾರ್ ನಮಗೆ ಬಾಹ್ಯ ಬೆಂಬಲ ಕೊಡುವುದಿದ್ದರೆ ಸರ್ಕಾರ ರಚಿಸಲು ರೆಡಿ ಎಂದಿದ್ದರು.
ಗುವಾಹಟಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯವನ್ನೂ ಸೋತು ಸರಣಿ ವೈಟ್ ವಾಶ್ ಮಾಡಿಸಿಕೊಂಡ ಮೇಲೆ ಟೀಂ ಇಂಡಿಯಾ ಅಭಿಮಾನಿಗಳ ಸಿಟ್ಟು ಗೌತಮ್ ಗಂಭೀರ್ ಮೇಲೆ ಮೇರೆ ಮೀರಿದೆ. ನಿನ್ನೆ ಆಫ್ರಿಕಾ ವಿರುದ್ಧ ಸೋತ ಬಳಿಕ ಕೋಚ್ ಗೌತಮ್ ಗಂಭೀರ್ ಸೇರಿದಂತೆ ಟೀಂ ಇಂಡಿಯಾ ಆಟಗಾರರೂ ಮೈದಾನದಲ್ಲಿದ್ದರು. ಈ ವೇಳೆ ಹತಾಶೆಗೊಂಡಿದ್ದ ಕೆಲವು ಪ್ರೇಕ್ಷಕರು ಗೌತಮ್ ಗಂಭೀರ್ ಗೆ ಛೀಮಾರಿ ಹಾಕಿದ್ದಾರೆ. ಗೌತಮ್ ಗಂಭೀರ್ ಹಾಯ್ ಹಾಯ್ ಎಂದು ಪ್ರೇಕ್ಷಕರು ಮೈದಾನದಲ್ಲಿದ್ದ ಅವರಿಗೆ ಕೇಳಿಸುವಂತೆ ಕಿರುಚಿದ್ದಾರೆ.
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಈಗ ಅಧಿಕಾರ ಹಂಚಿಕೆ ವಿಚಾರ ಭಾರೀ ಸದ್ದು ಮಾಡುತ್ತಿದೆ. ಇದರ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಇಂದು ಮಾಡಿರುವ ಟ್ವೀಟ್ ಒಂದು ಸಂಚಲನ ಸೃಷ್ಟಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಕುರ್ಚಿ ಫೈಟ್ ಈಗ ಗುಟ್ಟಾಗಿಯೇನೂ ಉಳಿದಿಲ್ಲ. ಇದೀಗ ರಾಜ್ಯದ ಅಧಿಕಾರ ಹಂಚಿಕೆ ಕಲಹ ದೆಹಲಿಯಲ್ಲಿ ಹೈಕಮಾಂಡ್ ಅಂಗಳಕ್ಕೆ ಬಂದು ತಲುಪಿದೆ. ಹೈಕಮಾಂಡ್ ನಾಯಕರೇ ಈಗ ಸಮಸ್ಯೆ ಬಗೆಹರಿಸಲಿದ್ದಾರೆ. ಇದರ ನಡುವೆ ಡಿಕೆ ಶಿವಕುಮಾರ್ ಈ ಹಿಂದೆ ತಮ್ಮ ಮತ್ತು ಹೈಕಮಾಂಡ್ ನಡುವೆ ನಡೆದ ಮಾತುಕತೆಗಳನ್ನೆಲ್ಲಾ ಮಾಧ್ಯಮಗಳ ಮುಂದೆ ಹೇಳಲ್ಲ ಎಂದಿದ್ದರು.
ನ್ಯೂಯಾರ್ಕ್: ಪಹಲ್ಗಾಮ್ ದಾಳಿಯನ್ನು ಆಂತರಿಕ ದಂಗೆ, ಭಯೋತ್ಪಾದಕ ಕೃತ್ಯವಲ್ಲ ಎಂದಿದ್ದ ಅಮೆರಿಕಾ ಈಗ ತನ್ನ ದೇಶದ ಶಕ್ತಿ ಕೇಂದ್ರ ವೈಟ್ ಹೌಸ್ ಮೇಲೆ ದಾಳಿ ಮಾಡಲು ಬಂದವರನ್ನು ಉಗ್ರರು ಎಂದು ಕುದಿಯುತ್ತಿದೆ. ಅಮೆರಿಕಾದ ವೈಟ್ ಹೌಸ್ ಪಕ್ಕದಲ್ಲೇ ರಾಷ್ಟ್ರೀಯ ರಕ್ಷಣಾ ಪಡೆ ಯೋಧರ ಮೇಲೆ ಗುಂಡಿನ ದಾಳಿ ನಡೆದಿದೆ. ಶ್ವೇತಭವನದ ಬಳಿ 17 ನೇ ಸ್ಟ್ರೀಟ್ ಮತ್ತು ಐ ಸ್ಟ್ರೀಟ್ ಎನ್ ಡಬ್ಲ್ಯೂ ಬಳಿ ಗಸ್ತು ತಿರುಗುತ್ತಿದ್ದ ಯೋಧರ ಮೇಲೆ ಮೂಲೆಯಿಂದ ಬಂದ ಶಂಕಿತನೋರ್ವ ಇದ್ದಕ್ಕಿದ್ದಂತೆ ಗುಂಡಿನ ದಾಳಿ ನಡೆಸಿದ್ದಾನೆ.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕುರ್ಚಿ ಕದನ ಜೋರಾಗುತ್ತಿದೆ. ಈ ನಡುವೆ ಡಿಕೆ ಶಿವಕುಮಾರ್ ಗೆ ರಾಹುಲ್ ಗಾಂಧಿ ಸಂದೇಶ ಬಂದಿದೆ ಎನ್ನಲಾಗಿದೆ. ಅಷ್ಟು ಬೇಗ ಡಿಕೆ ಶಿವಕುಮಾರ್ ರನ್ನು ರಾಹುಲ್ ಮೂಲೆಗುಂಪು ಮಾಡಲ್ಲ. ಅದಕ್ಕೆ ಕಾರಣವೂ ಇದೆ. ಡಿಕೆ ಶಿವಕುಮಾರ್ ಕೇವಲ ಕರ್ನಾಟಕ ಮಾತ್ರವಲ್ಲ, ದೇಶದ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಗೆ ಸಂಕಷ್ಟ ಬಂದಾಗ ಟ್ರಬಲ್ ಶೂಟರ್ ಆಗಿ ರಾಹುಲ್ ಗಾಂಧಿಗೆ ನೆರವಾಗಿದ್ದಾರೆ. ಈ ಹಿಂದೆ ಗುಜರಾತ್ ನಲ್ಲಿ, ತೆಲಂಗಾಣದಲ್ಲಿ, ರಾಜಸ್ಥಾನ್ ನಲ್ಲಿ ಸಂಕಷ್ಟ ಬಂದಾಗಲೆಲ್ಲಾ ಶಾಸಕರನ್ನು ಹಿಡಿದಿಟ್ಟುಕೊಳ್ಳಲು, ಚುನಾವಣೆ ಸಂದರ್ಭದ ಪ್ರಚಾರದಲ್ಲಿ ಎಲ್ಲದಕ್ಕೂ ಡಿಕೆಶಿ ರಾಹುಲ್ ಗೆ ಸಾಥ್ ನೀಡಿದ್ದಾರೆ.
ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಸೋಲಿನ ಬಳಿಕ ಫ್ಯಾನ್ಸ್ ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ಮೇಲೆ ಸಿಟ್ಟಿಗೆದ್ದಿದ್ದಾರೆ. ಮೊದಲು ಗಂಭೀರ್ ತೊಲಗಬೇಕು ಎಂದಿದ್ದಾರೆ. ಗೌತಮ್ ಗಂಭೀರ್ ಕೆಲವು ದಿನಗಳ ಹಿಂದೆ ನನ್ನ ತಂಡ ಒಂದೇ ದಿನದಲ್ಲಿ 400 ರನ್ ಚೇಸ್ ಮಾಡಲೂ ರೆಡಿ ಇರಬೇಕು, ಎರಡು ದಿನದಲ್ಲೇ ಟೆಸ್ಟ್ ಪಂದ್ಯ ಮುಗಿಸುವ ಸಾಮರ್ಥ್ಯವನ್ನೂ ಪಡೆಯಬೇಕು ಎಂದು ಹೇಳಿಕೊಂಡಿದ್ದರು. ಅವರ ಅದೇ ಹೇಳಿಕೆ ಇಟ್ಟುಕೊಂಡು ಈಗ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.
ಬೆಂಗಳೂರು: ರಾಜ್ಯದಲ್ಲಿ ಈಗ ಒಂದೊಂದು ಜಿಲ್ಲೆಗಳಿಗೆ ಮಳೆಯಾದರೆ ಮತ್ತೆ ಕೆಲವು ಜಿಲ್ಲೆಗಳಿಗೆ ವಿಪರೀತ ಚಳಿಯ ವಾತಾವರಣವಿದೆ. ಇಂದಿನ ಹವಾಮಾನ ವರದಿ ಇಲ್ಲಿದೆ ನೋಡಿ. ಬಂಗಾಳದಲ್ಲಿ ಚಂಡಮಾರುತದ ಪರಿಣಾಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈ ಮಳೆ ಇನ್ನಷ್ಟು ದಿನ ವಿಸ್ತರಣೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಕರಾವಳಿ ಜಿಲ್ಲೆ, ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳಲ್ಲೂ ಮಳೆ ಕಂಡುಬರುತ್ತಿದೆ. ಆದರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮತ್ತು ಚಳಿ ಹೆಚ್ಚಾಗಿದೆ. ಮೈಸೂರು, ಮಂಡ್ಯ, ಕೋಲಾರ, ತುಮಕೂರು, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದೊಡ್ಡ ಬಳ್ಳಾಪುರ ಜಿಲ್ಲೆಗಳಲ್ಲಿ ಇಂದು ದಟ್ಟ ಮೋಡ ಕವಿದ ಮತ್ತು ಕೆಲವೆಡೆ ಸಣ್ಣ ಮಳೆಯಾಗುವ ಸಾಧ್ಯತೆಯಿದೆ.
ಭಗವಾನ್ ಕೃಷ್ಣನ ಕುರಿತಾದ ಬಾಲ ಮುಕುಂದಾಷ್ಟಕಂ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ. ಇದರಿಂದ ಅವರಿಗೆ ಏಕಾಗ್ರತೆ, ಆರೋಗ್ಯ, ಯಶಸ್ಸು ಎಲ್ಲವೂ ವೃದ್ಧಿಯಾಗುತ್ತದೆ. ಕನ್ನಡದಲ್ಲಿ ಇಲ್ಲಿದೆ.ಕರಾರವಿಂದೇನ ಪದಾರವಿಂದಂ ಮುಖಾರವಿಂದೇ ವಿನಿವೇಶಯಂತಮ್ ।ವಟಸ್ಯ ಪತ್ರಸ್ಯ ಪುಟೇ ಶಯಾನಂ ಬಾಲಂ ಮುಕುಂದಂ ಮನಸಾ ಸ್ಮರಾಮಿ ॥ 1 ॥ ಸಂಹೃತ್ಯ ಲೋಕಾನ್ವಟಪತ್ರಮಧ್ಯೇ ಶಯಾನಮಾದ್ಯಂತವಿಹೀನರೂಪಮ್ ।ಸರ್ವೇಶ್ವರಂ ಸರ್ವಹಿತಾವತಾರಂ ಬಾಲಂ ಮುಕುಂದಂ ಮನಸಾ ಸ್ಮರಾಮಿ ॥ 2 ॥ ಇಂದೀವರಶ್ಯಾಮಲಕೋಮಲಾಂಗಂ ಇಂದ್ರಾದಿದೇವಾರ್ಚಿತಪಾದಪದ್ಮಮ್ ।ಸಂತಾನಕಲ್ಪದ್ರುಮಮಾಶ್ರಿತಾನಾಂ ಬಾಲಂ ಮುಕುಂದಂ ಮನಸಾ ಸ್ಮರಾಮಿ ॥ 3 ॥ ಲಂಬಾಲಕಂ ಲಂಬಿತಹಾರಯಷ್ಟಿಂ ಶೃಂಗಾರಲೀಲಾಂಕಿತದಂತಪಂಕ್ತಿಮ್ ।ಬಿಂಬಾಧರಂ ಚಾರುವಿಶಾಲನೇತ್ರಂ ಬಾಲಂ ಮುಕುಂದಂ ಮನಸಾ ಸ್ಮರಾಮಿ ॥ 4 ॥
ಬೆಂಗಳೂರು: ಕರ್ನಾಟಕದ ಪ್ರಸಿದ್ಧ ಬ್ರ್ಯಾಂಡ್ ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಈ ಜಾಲದ ಕಿಂಗ್ ಪಿನ್ ದಂಪತಿ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಪ್ರಮುಖ ಆರೋಪಿಗಳಾದ ಶಿವಕುಮಾರ್ ಮತ್ತು ರಮ್ಯ ಎಂಬಾಕೆಯನ್ನು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತ ದಂಪತಿ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಒಡೆತನದ ನಂದಿನಿ ಹೆಸರಿನಲ್ಲಿ ನಕಲಿ ತುಪ್ಪವನ್ನು ತಯಾರಿಸುವ ಘಟಕವನ್ನು ಹೊಂದಿದ್ದಾರೆ.ಸೆಂಟ್ರಲ್ ಕ್ರೈಂ ಬ್ರ್ಯಾಂಚ್ ಪೊಲೀಸರು ಬುಧವಾರ ನಕಲಿ ತುಪ್ಪ ತಯಾರಿಕಾ ಘಟಕದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಅಪಾರ ಪ್ರಮಾಣದ ನಕಲಿ ನಂದಿನಿ ತುಪ್ಪ, ಅತ್ಯಾಧುನಿಕ ಯಂತ್ರಗಳನ್ನು ಬಳಸಿಕೊಂಡಿರುವುದು ಪತ್ತೆಯಾಗಿತ್ತು.
ರಾವಲ್ಪಿಂಡಿ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಜೈಲಿನಲ್ಲಿಯೇ ಸಾವನ್ನಪ್ಪಿದ್ದಾರೆ ಎಂಬ ವದಂತಿಯ ಹಿನ್ನೆಲೆಯಲ್ಲಿ ಅಡಿಯಾಲಾ ಜೈಲಿನ ಅಭಿಮಾನಿಗಳು ಸೇರಿದ್ದು ಭಾರೀ ಹೈಡ್ರಾಮಾ ನಡೆದಿದೆ. ಇಮ್ರಾನ್ ಖಾನ್ ಅವರು ಪ್ರತ್ಯೇಕ ಬಂಧನದಲ್ಲಿದ್ದಾರೆಂಬ ವರದಿಗಳ ನಡುವೆಯೇ, ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವದಂತಿಗಳು ಬುಧವಾರ ದೇಶದಲ್ಲಿ ರಾಜಕೀಯ ಉದ್ವಿಗ್ನತೆ ಉಂಟಾಗಿದೆ.ಭ್ರಷ್ಟಾಚಾರ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ 2023ರಿಂದ ಜೈಲಿನಲ್ಲಿರುವ 72 ವರ್ಷದ ಇಮ್ರಾನ್ ಖಾನ್, ಜೈಲು ಅಧಿಕಾರಿಗಳ ವಿರುದ್ಧ ದೌರ್ಜನ್ಯ ಮತ್ತು ಕಿರುಕುಳದ ಬಗ್ಗೆ ಹಿಂದೆ ಹಲವು ಬಾರಿ ಆರೋಪಿಸಿದ್ದರು.
ನವದೆಹಲಿ: ಎಐಸಿಸಿ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಸಾಧ್ಯತೆಯ ಕುರಿತು ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಮತ್ತು ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸುವುದಾಗಿ ಹೇಳಿದ್ದಾರೆ.ಎಎನ್ಐ ಜೊತೆ ಮಾತನಾಡಿದ ಅವರು, ಪಕ್ಷದ ನಾಯಕತ್ವವು ಸಮಸ್ಯೆಯನ್ನು ಪರಿಹರಿಸುತ್ತದೆ ಮತ್ತು ಪರಿಸ್ಥಿತಿಯನ್ನು ಪರಿಗಣಿಸಲು ಮತ್ತು ಅಗತ್ಯವಿರುವ ಯಾವುದೇ ಮಧ್ಯಸ್ಥಿಕೆಯನ್ನು ಒದಗಿಸಲು ನಾನು, ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗುತ್ತೇವೆ ಎಂದು ಅವರು ಹೇಳಿದರು.
ಚಂಡೀಗಢ: ಹರ್ಯಾಣದ ರೋಹ್ಟಕ್ನಲ್ಲಿ 16 ವರ್ಷದ ರಾಷ್ಟ್ರೀಯ ಮಟ್ಟದ ಬ್ಯಾಸ್ಕೆಟ್ಬಾಲ್ ಆಟಗಾರನೊಬ್ಬ ಅಭ್ಯಾಸದ ವೇಳೆ ಬ್ಯಾಸ್ಕೆಟ್ಬಾಲ್ ಕಂಬ ಎದೆಯ ಮೇಲೆ ಬಿದ್ದು ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ಹಾರ್ದಿಕ್ ರಾಠಿ ಅವರು ನಿನ್ನೆ ಲಖನ್ ಮಜ್ರಾದಲ್ಲಿ ಅಭ್ಯಾಸ ನಡೆಸುತ್ತಿದ್ದಾಗ ಕಂಬವು ಅವರ ಮೇಲೆ ಬಿದ್ದಿದೆ. ಕುಸಿದು ಬಿದ್ದ ಹಾರ್ದಿಕ್ರ ಸಹಾಯಕ್ಕೆ ಸ್ನೇಹಿತರು ಓಡೋಡಿ ಬಂದಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಹಾರ್ದಿಕ್ ಕೋರ್ಟ್ನಲ್ಲಿ ಏಕಾಂಗಿಯಾಗಿ ಅಭ್ಯಾಸ ಮಾಡುತ್ತಿರುವುದನ್ನು ತೋರಿಸುತ್ತದೆ. ಅವನು
ನವದೆಹಲಿ: ದೆಹಲಿ ಕಾರು ಸ್ಪೋಟ ಪ್ರಕರಣ ಸಂಬಂಧ ಭಯೋತ್ಪಾದಕನಿಗೆ ಆಸರೆ ನೀಡಿದ ಸಂಬಂಧ ಫರಿದಾಬಾದ್ನಲ್ಲಿ ಇಂದು ವ್ಯಕ್ತಿಯನ್ನು ಬಂಧಿಸಲಾಗಿದೆ.ಇದೀಗ ಬಂಧಿಯಾಗಿರುವ ಆರೋಪಿ ಬಗ್ಗೆ ಮಾಹಿತಿ ಹೊರಬಿದ್ದಿದೆ. ಈತ ಫರಿದಾಬಾದ್ನ ಅಲ್ಫಲಾ ವಿಶ್ವವಿದ್ಯಾಲಯದಲ್ಲಿ ಲ್ಯಾಬ್ ಅಸಿಸ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದ. ಉಮರ್ಗೆ ವಿಶ್ವವಿದ್ಯಾಲಯದ ಪ್ರಯೋಗಾಲಯದಿಂದ ರಾಸಾಯನಿಕಗಳನ್ನು ಸಂಗ್ರಹಿಸಲು ಸಹಾಯ ಮಾಡಿದ್ದ ಎಂದು ತಿಳಿದುಬಂದಿದೆ.
ಚಿತ್ರದುರ್ಗ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಸಂಬಂಧ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇಂದು ಪ್ರಕರಣದ ತೀರ್ಪನ್ನು ಪ್ರಕಟಿಸಿದ ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯವು ಮಹತ್ವದ ಆದೇಶ ನೀಡಿದೆ. ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಕೋರ್ಟ್ ಇವತ್ತಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಅದರಂತೆ ಇದೀಗ ಪೋಕ್ಸೋದ ಮೊದಲ ಪ್ರಕರಣದಲ್ಲಿ ಮುರುಘಾಶ್ರೀ ಅವರು ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದ್ದಾರೆ.
ಮುಂಬೈ: ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ ಮಹಿಳೆಯ ಶವವು ಪುಣೆಯ ದೇಸಾಯಿ ಗ್ರಾಮದ ಬಳಿ ಸೇತುವೆ ಕೆಳಗೆ ಸಿಕ್ಕ ಸೂಟ್ಕೇಸ್ನಲ್ಲಿ ಪತ್ತೆಯಾಗಿದೆ. ಈ ಸಂಬಂಧ ಆಕೆಯ ಸಂಗಾತಿ ಪೊಲೀಸರ ಅತಿಥಿಯಾಗಿದ್ದಾನೆ. 22 ವರ್ಷದ ಪ್ರಿಯಾಂಕಾ ವಿಶ್ವಕರ್ಮ22 ಕೊಲೆಯಾದ ಮಹಿಳೆ. ಆಕೆಯ ಶವ ಸೋಮವಾರ ಸೇತುವೆ ಕೆಳಗೆ ಪತ್ತೆಯಾಗಿತ್ತು. ಮೃತಳ ಮಣಿಕಟ್ಟಿನ ಮೇಲೆ ಪಿ. ವಿ. ಎಸ್ ಎಂದು ಹೆಚ್ಚೆ ಹಾಕಲಾಗಿದೆ. ಪ್ರಿಯಾಂಕ ಅವರನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಸ್ಥಳೀಯ ಸಿಸಿಟಿವಿ ನೆರವಿನಿಂದ ಆರೋಪಿ ವಿನೋದ್ ಶ್ರೀನಿವಾಸ್ ವಿಶ್ವಕರ್ಮನನ್ನು ಬಂಧಿಸಿರುವ ಪೊಲೀಸರು, ವಿಚಾರಣೆಗೆ ಒಳಪಡಿಸಿದ್ದಾರೆ.
ಗುವಾಹಟಿ: ದಕ್ಷಿಣ ಆಫ್ರಿಕಾ ತಂಡವು ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲೂ ಅಮೋಘ ಜಯ ಸಾಧಿಸಿದೆ. ಈ ಮೂಲಕ ಬರೋಬ್ಬರಿ 26 ವರ್ಷಗಳ ಬಳಿಕ ಭಾರತದಲ್ಲಿ ಟೆಸ್ಟ್ ಸರಣಿ ವಶಮಾಡಿಕೊಂಡಿದೆ.ಈ ಗೆಲುವಿನೊಂದಿಗೆ ಎರಡು ಪಂದ್ಯಗಳ ಸರಣಿಯನ್ನು ಸೌತ್ ಆಫ್ರಿಕಾ 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಇದರಿಂದಿಗೆ ಭಾರತ ತಂಡಕ್ಕೆ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ಗೆ ಭಾರೀ ಮುಖಭಂಗವಾಗಿದೆ.1999 ರಲ್ಲಿ ದಕ್ಷಿಣ ಆಫ್ರಿಕಾ ತಂಡವು ಕೊನೆಯ ಬಾರಿ ಭಾರತದಲ್ಲಿ ಸರಣಿ ಗೆದ್ದಿತ್ತು. ನಂತರದಲ್ಲಿ ಟೀಮ್ ಇಂಡಿಯಾವನ್ನು ಬಗ್ಗು ಬಡಿಯಲು ಸಾಧ್ಯವಾಗಿರಲಿಲ್ಲ. ಇದೀಗ ಎರಡು ದಶಕಗಳ ಬಳಿಕ ಭಾರತ ತಂಡವನ್ನು ಹೀನಾಯವಾಗಿ ಸೋಲಿಸಿ ಟೆಂಬಾ ಬವುಮಾ ಪಡೆ ಹೊಸ ಇತಿಹಾಸ ನಿರ್ಮಿಸಿದೆ.
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರ ಸ್ವಯಂಕೃತ ಅಪರಾಧದಿಂದ ರಾಜ್ಯದಲ್ಲಿ ಸರ್ಕಾರ ಬಿದ್ದು ಹೋದರೆ ಬಿಜೆಪಿ ವರಿಷ್ಠರು ನೀಡುವ ಆದೇಶ ಜಾರಿಗೊಳಿಸುತ್ತೇವೆ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಆಗಬಾರದು, ಏನಾದರೂ ಮಾಡಿ ಎಂದು ಪಕ್ಷದ ವರಿಷ್ಠರು ಸೂಚನೆ ನೀಡಿದರೆ ನಾವು ಸರ್ಕಾರ ರಚನೆಗೆ ಪ್ರಯತ್ನಿಸುತ್ತೇವೆ ಎಂದರು.ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಸತ್ತು ಹೋಗಿದೆ. ರಾಜ್ಯದ ಜನರು ಕಂಗಾಲಾಗಿದ್ದಾರೆ. ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವುದು ಸೇರಿದಂತೆ ರೈತರ ಹಲವು ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕೆ ಸರ್ಕಾರ ಮುಂದಾಗುತ್ತಿಲ್ಲ. ಆದ್ದರಿಂದ ಈ ಸರ್ಕಾರ ಇರಬಾರದು ಎಂದು ಹೇಳಿದರು.
ನವದೆಹಲಿ: ನವೆಂಬರ್ 10 ರಂದು ದೆಹಲಿಯ ಕೆಂಪು ಕೋಟೆಯ ಹೊರಗೆ ಸ್ಫೋಟಗೊಂಡ ಸ್ಫೋಟಕ ತುಂಬಿದ ಕಾರನ್ನು ಓಡಿಸಿದ ವ್ಯಕ್ತಿ ಡಾ ಉಮರ್-ಉನ್ ನಬಿಗೆ ಆಶ್ರಯ ನೀಡಿದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆಯು ಫರಿದಾಬಾದ್ ನಿವಾಸಿಯನ್ನು ಬಂಧಿಸಿದೆ. ಅಧಿಕೃತ ವಕ್ತಾರರ ಪ್ರಕಾರ, ಹರಿಯಾಣದ ನಾಬಿರಿಸ್ಟ್ ಉನ್ಮಾರಿಸ್ಟಿಕ್ಗೆ ಬೆಂಬಲ ನೀಡಿದ ಆರೋಪದ ಮೇಲೆ ಏಜೆನ್ಸಿಯು ಸೋಯಾಬ್ ಎಂಬಾತನನ್ನು ಬಂಧಿಸಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭೇದಿಸಿರುವ 'ವೈಟ್ ಕಾಲರ್' ಭಯೋತ್ಪಾದನಾ ಘಟಕದ ಭಾಗವಾಗಿರುವ ಪ್ರಕರಣದಲ್ಲಿ
ತುಮಕೂರು: ನಾಯಕತ್ವ ಬದಲಾವಣೆ ಜೋರಾಗಿಸುವ ಬೆನ್ನಲ್ಲೇ ಈ ಸಂಬಂಧ ಪ್ರತಿಕ್ರಿಯಿಸಿದ ಪಾವಗಡ ಶಾಸಕ ಎಚ್ವಿ ವೆಂಕಟೇಶ್ ಅವರು ಪವರ್ ಶೇರಿಂಗ್ ಆಗೋದಾದರೆ ದಲಿತ ಸಿಎಂಗೆ ಅವಕಾಶ ಕೊಟ್ಟರೆ ಖುಷಿಯ ವಿಚಾರ ಎಂದಿದ್ದಾರೆ. ದಲಿತ ಸಿಎಂ ಕೂಗು ಕುರಿತು ತುಮಕೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯನವರು, ಅದಲ್ಲದೆ ಸಿಎಂ ಸ್ಥಾನ ಡಿಕೆ ಶಿವಕುಮಾರ್ ಅವರಿಗೆ ಕೊಟ್ಟರೂ, ಅಥವಾ ದಲಿತರನ್ನು ಸಿಎಂ ಆಗಿ ಮಾಡಿದರೂ ನಮಗೆ ಖುಷಿಯಿದೆ ಎಂದು ಅವರು ಹೇಳಿದರು. 2013ರಲ್ಲಿ ನಾಣು ಚುನಾವಣೆಯಲ್ಲಿ ಸೋತ ಸಮಯದಲ್ಲಿ ಸಚಿವ ಪರಮೇಶ್ವರ್ ಅವರು ಕೂಡಾ ಸೋತಿದ್ದರು. ಒಂದು ವೇಳೆ ಆ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿಗಾಗಿ ಗುದ್ದಾಟ ನಡೆಯುತ್ತಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮನೆಗೆ ಆರಾಧ್ಯ ಅಜ್ಜಯ್ಯನ ಗದ್ದುಗೆ ಪ್ರವೇಶವಾಗಿದೆ. ಸದ್ಯ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಶೀತಲ ಸಮರ ತೀವ್ರಗೊಂಡಿದೆ. ಸಿದ್ದರಾಮಯ್ಯ ನಾನೇ ಮುಂದಿನ ಬಜೆಟ್ ಮಂಡಿಸುತ್ತೇನೆ ಎನ್ನುವ ಮೂಲಕ ಸಿಎಂ ಸ್ಥಾನದಿಂದ ಇಳಿಯುವುದಿಲ್ಲ ಎನ್ನುವ ಸೂಚನೆಯನ್ನು ನೀಡುತ್ತಿದ್ದಾರೆ.
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರು ನೂರು ದಿನಗಳನ್ನು ಜೈಲಿನಲ್ಲಿ ಪೂರೈಸಿದ್ದಾರೆ. ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿ ಜಾಮೀನು ಮೂಲಕ ಬಿಡುಗಡೆಯಾಗಿದ್ದ ದರ್ಶನ್ ಮತ್ತೇ ಜೈಲು ಸೇರಿದ್ದರು. ಇದೀಗ ದರ್ಶನ್ ಪರಪ್ಪನ ಅಗ್ರಹಾರ ಸೇರಿ 105 ದಿನಗಳನ್ನು ಪೂರೈಸಿದ್ದಾರೆ. ಆಗಸ್ಟ್ 15ರಂದು ಜಾಮೀನು ರದ್ದಾದ ಹಿನ್ನೆಲೆ ಅಂದೇ ದರ್ಶನ್ರನ್ನು ಪೊಲೀಸರು ಮತ್ತೇ ಅರೆಸ್ಟ್ ಮಾಡಿದ್ದರು. ಇನ್ನೂ ದರ್ಶನ್ ಪರಪ್ಪನ ಅಗ್ರಹಾರ ಸೇರಿದ್ಮೇಲೆ ಕನಿಷ್ಠ ಮೂಲ ಸೌಕರ್ಯ ನೀಡುತ್ತಿಲ್ಲವೆಂದು ಆರೋಪ ಮಾಡಿದ್ದರು.
ಚಿತ್ರದುರ್ಗಾ: ಫೋಕ್ಸೋ ಕೇಸ್ನಲ್ಲಿ ಸಿಲುಕಿರುವ ಚಿತ್ರದುರ್ಗಾದ ಮುರುಘಾ ಮಠದ ಶ್ರೀಗಳಿಗೆ ಇಂದು ಮಹತ್ವದ ದಿನವಾಗಿದೆ. 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಮುರುಘಾ ಶ್ರೀ ಪ್ರಕರಣ ಸಂಬಂಧ ಮಹತ್ವದ ತೀರ್ಪು ಇಂದು ಮಧ್ಯಾಹ್ನ 12ರ ಒಳಗೆ ಹೊರಬೀಳಲಿದೆ. ನ್ಯಾಯಮೂರ್ತಿ ಗಂಗಾಧರಪ್ಪ ಚನ್ನಬಸಪ್ಪ ಹಡಪದ್ ಅವರು ತೀರ್ಪನ್ನು ಪ್ರಕಟಿಸಲಿದ್ದಾರೆ. ಚಿತ್ರದುರ್ಗಾದ ಮುರುಘಾ ಮಠದ ಶ್ರೀಗಳ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಸಂಬಂಧ ಪ್ರಕರಣ ದಾಖಲಾಗಿ 3
ಬೆಂಗಳೂರು: ನಿನ್ನೆ ಅಪಘಾತದಲ್ಲಿ ಸಾವನ್ನಪ್ಪಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಊರಲ್ಲಿ ನೀರವ ಮೌನ ಆವರಿಸಿದೆ. ಮಹಾಂತೇಶ್ ಅವರು ಬಡತನ ಕುಟುಂಬದಲ್ಲಿ ಹುಟ್ಟಿ ತಾಯಿಯ ಪರಿಶ್ರಮದಿಂದ ಸಾಧನೆ ಮಾಡಿದ ವ್ಯಕ್ತಿ. ಇವರನ್ನು ಸಾಕುವ ಸಲುವಾಗಿ ತಾಯಿ ರೊಟ್ಟಿಯನ್ನು ಮಾರಾಟ ಮಾಡಿ, ತನ್ನ ಮಗನಿಗೆ ವಿದ್ಯಾಭ್ಯಾಸವನ್ನು ನೀಡಿದ್ದರು. ಇನ್ನೂ ಮಹಾಂತೇಶ್ ಅವರಿಗೂ ತಾಯಿ ಅಂದರೆ ವಿಶೇಷವಾದ ಪ್ರೀತಿ. ತನ್ನ ತಾಯಿ ಅನುಭವಿಸಿದ ಕಷ್ಟ ಯಾರಿಗೂ ಬರಬಾರದೆಂದು ಮಹಾಂತೇಶ್ ಅವರು ಅಧಿಕಾರಿಯಾದ ಆರಂಭದಲ್ಲೇ "ಪಿಂಚಣಿ ಅದಾಲತ್ ಕಾರ್ಯಕ್ರಮ"ವನ್ನು ಯೋಜನೆಯನ್ನು ತಂದಿದ್ದರು. ಈ ವಿಚಾರವನ್ನು ಅವರೇ ಹೇಳಿಕೊಂಡಿದ್ದಾರೆ.
ನವದೆಹಲಿ: 2008, ನವೆಂಬರ್ 26 ಪಾಕಿಸ್ತಾನ ಬೆಂಬಲಿತ ಲಷ್ಕರ್-ಎ-ತೈಬಾದ (ಎಲ್ಇಟಿ) ಭಯೋತ್ಪಾದಕರು ಭಾರತದ ಆರ್ಥಿಕ ರಾಜಧಾನಿ ಮುಂಬೈನ 12ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ವಿದೇಶಿಗರು ಸೇರಿದಂತೆ 174 ಮಂದಿ ನಾಗರೀಕರು ದುರ್ಮರನಾದರು. ಇದೀಗ ಈ ದುರ್ಘಟನೆಗೆ 17 ವರ್ಷಗಳಾಗಿದ್ದು, ಅಮಾಯಕ ಜನರು, ಹುತ್ಮಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನವನ್ನು ದೇಶ ನೆನೆಯುತ್ತಿದೆ. ಭಯೋತ್ಪಾದಕರು ನವೆಂಬರ್ 26, 2008ರ ರಾತ್ರಿ ಸಮುದ್ರ ಮಾರ್ಗದ ಮೂಲಕ ಮುಂಬೈಗೆ ಪ್ರವೇಶಿಸಿದ್ದರು ಮತ್ತು ನಾಲ್ಕು
ಕಲಬುರಗಿ: ನಾವು ಅನುಭವಿಸಿದ ಅವಮಾನ, ಬಡತನ, ಕಷ್ಟ ಇತ್ತಲ್ಲಾ.. ಅದು ಸಮಾಜದೊಳಗೆ ಯಾರಿಗೂ ಬರಬಾರದು ಎಂದು ಸಂವಾದವೊಂದರಲ್ಲಿ ಹೇಳಿದ್ದರು ಹಿರಿಯ ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿ. ಮಹಂತೇಶ್ ಬೀಳಗಿ ಪ್ರಸ್ತುತ ಕರ್ನಾಟಕ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೂಲತಃ ಬೆಳಗಾವಿಯವರಾದ 51 ವರ್ಷದ ಮಹಂತೇಶ್ ಬೀಳಗಿ ಬಾಲ್ಯ ತೀರಾ ಕಡುಬಡತನದಲ್ಲಿ ಕಳೆದಿತ್ತು. ಅವರಿಗೆ ಎರಡು ಹೊತ್ತಿನ ಊಟಕ್ಕೂ ಗತಿಯಿರಲಿಲ್ಲ. ತಮ್ಮ ಬಾಲ್ಯದ ಕಡುಬಡತನದ ಬಗ್ಗೆ ಅವರು ಸಂವಾದವೊಂದರಲ್ಲಿ ಹೇಳಿಕೊಂಡಿದ್ದರು.
ಕಲಬುರಗಿ: ನಿನ್ನೆ ಜೇವರ್ಗಿ ಬೈಪಾಸ್ ಬಳಿ ಕಾರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ ಹಿರಿಯ ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿಯವರದ್ದು ಮರ್ಡರ್ ಎಂದು ಬಾಂಬ್ ಹಾಕಲಾಗಿದೆ. ಇಂತಹದ್ದೊಂದು ಆರೋಪ ಮಾಡಿದವರು ಯಾರು ಗೊತ್ತಾ? ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಮಹಂತೇಶ್ ಬೀಳಗಿ, ಅವರ ಸಹೋದರ ಸೇರಿದಂತೆ ಐವರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಕಾರಿಗೆ ನಾಯಿ ಅಡ್ಡ ಬಂದಿದ್ದರಿಂದ ತಪ್ಪಿಸಲು ಹೋದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಓರ್ವನ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರು: ಚಿನ್ನದ ಬೆಲೆ ಪ್ರತಿನಿತ್ಯ ಏರಿಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಏರಿಕೆಯಾಗಿದೆ. ಇತರೆ ಚಿನ್ನದ ದರ ಕೊಂಚ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಇಳಿಕೆ ಕಂಡಿತ್ತು. ಆದರೆ ವಾರಂತ್ಯಕ್ಕೆ ಚಿನ್ನದ ದರ ಏರಿಕೆ-ಇಳಿಕೆಯಾಗುತ್ತಲೇ ಇತ್ತು. ಈ ವಾರವೂ ಇದೇ ಟ್ರೆಂಡ್ ಮುಂದುವರಿದಿದೆ. ಇಂದು ಪರಿಶುದ್ಧ ಚಿನ್ನದ ದರ ಭಾರೀ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,27.270.00 ರೂ.ಗಳಿತ್ತು. ಇಂದು 1,28,945.00 ರೂ.ಗಳಷ್ಟಾಗಿದೆ.
ಬೆಂಗಳೂರು: ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ನಡೆಯುತ್ತಿರುವ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು ಸಿಗಲಿದೆ. ಇಂದು ರಾಜ್ಯ ರಾಜಕೀಯದ ಕುರ್ಚಿ ಕದನಕ್ಕೆ ಕ್ಲೈಮ್ಯಾಕ್ಸ್ ಸಿಗುವ ಸಾಧ್ಯತೆಯಿದೆ. ಸಿಎಂ ಪಟ್ಟಕ್ಕಾಗಿ ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದು ಹೈಕಮಾಂಡ್ ಗೆ ನುಂಗಲಾರದ ಬಿಸಿ ತುಪ್ಪವಾಗಿದೆ. ಈ ನಡುವೆ ಇಂದು ರಾಜ್ಯದ ನಾಯಕರ ಅಭಿಪ್ರಾಯ ಸಂಗ್ರಹಿಸಿ ದೆಹಲಿಗೆ ತೆರಳಿರುವ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಈಗಾಗಲೇ ರಾಹುಲ್ ರಾಜ್ಯದ ಹಿರಿಯ ನಾಯಕ ಬಿಕೆ ಹರಿಪ್ರಸಾದ್, ಸಚಿವ ಪ್ರಿಯಾಂಕ್ ಖರ್ಗೆಯವರನ್ನು ಕರೆಸಿಕೊಂಡು ಮಾಹಿತಿ ಪಡೆದುಕೊಂಡಿದ್ದಾರೆ.
ಗುವಾಹಟಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾಗಿದ್ದರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ. ನಿನ್ನೆ ನಾಲ್ಕನೇ ದಿನದಲ್ಲಿ ಭಾರತ 549 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿತ್ತು. ಸೋಲಿನ ಸುಳಿಯಲ್ಲಿರುವ ಟೀಂ ಇಂಡಿಯಾಗೆ ಕೆಎಲ್ ರಾಹುಲ್ ಆಧಾರವಾಗಬೇಕಿತ್ತು. ಆದರೆ ಸ್ಪಿನ್ ಬೌಲಿಂಗ್ ನಲ್ಲಿ ಕಳಪೆ ಹೊಡೆತಕ್ಕೆ ಕೈ ಹಾಕಿ ರಾಹುಲ್ ಕೇವಲ 6 ರನ್ ಗಳಿಸಿ ಔಟಾದರು. ಈ ಹೊಡೆತದ ಬಗ್ಗೆ ಕಾಮೆಂಟರಿ ಮಾಡುತ್ತಿದ್ದ ಪಾರ್ಥಿವ್ ಪಟೇಲ್ ಮತ್ತು ಅನಿಲ್ ಕುಂಬ್ಳೆ ವಿಶ್ಲೇಷಣೆ ನಡೆಸುತ್ತಿದ್ದರು.
ಬೆಂಗಳೂರು: ಸೈಕ್ಲೋನ್ ಇಫೆಕ್ಟ್ ನಿಂದಾಗಿ ಕರ್ನಾಟಕದಲ್ಲಿ ಮೊನ್ನೆಯಿಂದ ಸಾಧಾರಣ ಮಳೆ ಮತ್ತು ಮೋಡಕವಿದ ವಾತಾವರಣವಿದೆ. ಇನ್ನೆಷ್ಟು ದಿನ ಮಳೆಯಿರಲಿದೆ, ಇಂದು ಮಳೆ ಬರುತ್ತಾ ಇಲ್ಲಿದೆ ಹವಾಮಾನ ವರದಿ. ರಾಜ್ಯದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ನವಂಬರ್ ನಲ್ಲೂ ಮಳೆಯಾಗುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಣ್ಣ ಮಟ್ಟಿಗೆ ಮಳೆಯಾಗಿತ್ತು. ಜೊತೆಗೆ ದಿನವಿಡೀ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಬಂಗಾಳದಲ್ಲಿ ರೂಪುಗೊಂಡಿರುವ ಸೈಕ್ಲೋನ್ ನಿಂದಾಗಿ ಈ ವಾರಂತ್ಯದವರೆಗೂ ಇದೇ ವಾತಾವರಣವಿರಲಿದೆ ಎನ್ನಲಾಗುತ್ತಿದೆ.
ಜೀವನದಲ್ಲಿ ಹಣಕಾಸಿನ ಸಮಸ್ಯೆ, ಸಾಲ ಬಾಧೆಯಾಗುತ್ತಿದ್ದರೆ ಅದರ ನಿವಾರಣೆಗಾಗಿ ಗಣೇಶನ ಕುರಿತಾದ ದಾರಿದ್ರ್ಯ ದಹನ ಗಣಪತಿ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ. ಸುವರ್ಣ ವರ್ಣ ಸುಂದರಂ ಸಿತೈಕ ದಂತ-ಬಂಧುರಂಗೃಹೀತ ಪಾಶ-ಮಂಕುಶಂ ವರಪ್ರದಾ-ಽಭಯಪ್ರಧಮ್ ।ಚತುರ್ಭುಜಂ ತ್ರಿಲೋಚನಂ ಭುಜಂಗ-ಮೋಪವೀತಿನಂಪ್ರಫುಲ್ಲ ವಾರಿಜಾಸನಂ ಭಜಾಮಿ ಸಿಂಧುರಾನನಮ್ ॥ ಕಿರೀಟ ಹಾರ ಕುಂಡಲಂ ಪ್ರದೀಪ್ತ ಬಾಹು ಭೂಷಣಂಪ್ರಚಂಡ ರತ್ನ ಕಂಕಣಂ ಪ್ರಶೋಭಿತಾಂಘ್ರಿ-ಯಷ್ಟಿಕಮ್ ।ಪ್ರಭಾತ ಸೂರ್ಯ ಸುಂದರಾಂಬರ-ದ್ವಯ ಪ್ರಧಾರಿಣಂಸರತ್ನ ಹೇಮನೂಪುರ ಪ್ರಶೋಭಿತಾಂಘ್ರಿ-ಪಂಕಜಮ್ ॥ ಸುವರ್ಣ ದಂಡ ಮಂಡಿತ ಪ್ರಚಂಡ ಚಾರು ಚಾಮರಂಗೃಹ ಪ್ರತೀರ್ಣ ಸುಂದರಂ ಯುಗಕ್ಷಣ ಪ್ರಮೋದಿತಮ್ ।
ಕಲಬುರಗಿ: ಇಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಒಂದೇ ಕುಟಂಬದ ಮೂವರು ಮೃತಪಟ್ಟಿದ್ದಾರೆ.51 ವರ್ಷದ ಬೀಳಗಿ ಅವರು ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಅವರು ಬೆಸ್ಕಾಂ ಎಂಡಿ ಆಗಿ, ದಾವಣಗೆರೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಮಹಾಂತೇಶ್ ಬೀಳಗಿ ಹಾಗೂ ಅವರ ಸಹೋದರರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಇಂದು ಜೇವರ್ಗಿ ಬೈಪಾಸ್ ಬಳಿ ಅಪಘಾತಕ್ಕೀಡಾಗಿದೆ.
ಟೀಂ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ- ಮ್ಯೂಸಿಕ್ ಡೈರೆಕ್ಟರ್ ಪಲಾಶ್ ಮುಚ್ಚಲ್ ಅವರ ವಿವಾಹ ಸಮಾರಂಭವೂ ಮುಂದೂಡಲಾಗಿರುವ ಹಿನ್ನೆಲೆ ಹಲವು ಗೊಂದಲಗಳು ಹರಿದಾಡುತ್ತಿದೆ. ಸ್ಮೃತಿ ಮಂಧಾನ ಅವರ ತಂದೆಗೆ ಹೃದಯಾಘಾತವಾಗಿದ್ದರಿಂದ ಮದುವೆಯನ್ನು ಮುಂದೂಡಲಾಗಿದೆ ಎಂಬ ಸುದ್ದಿಯಿತ್ತು. ಆದರೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸ್ಮೃತಿ ಮದುವೆಯಾಗಬೇಕಿದ್ದ ಪಲಾಶ್ಗೆ ಬೇರೆ ಯುವತಿಯೊಂದಿಗೆ ಪ್ರಣಯದಿಂದ ಮಾತನಾಡಿರುವ ಚಾಟ್ಲಿಸ್ಟ್ ವೈರಲ್ ಆಗಿದೆ. ಈ ವಿಚಾರವಾಗಿಯೇ ಸ್ಮೃತಿ ತಂದೆ ಹಾಗೂ ಮಲಾಶ್ ನಡುವೆ ದೊಡ್ಡ ಜಗಳವಾಗಿದೆ ಎಂಬ ಸುದ್ದಿಯಿದೆ.
ಬಂಗಾಂವ್: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ, ರಾಜ್ಯದಲ್ಲಿ ಇನ್ನೂ ಚುನಾವಣೆಗಳು ಪ್ರಾರಂಭವಾಗಬೇಕಾಗಿದ್ದರೂ, "ಘರ್ಷಣೆ" ಈಗಾಗಲೇ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ.ಬಂಗಾಂವ್ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಬ್ಯಾನರ್ಜಿ, ಹೆಲಿಕಾಪ್ಟರ್ ಬಳಸಲು ಅನುಮತಿ ನಿರಾಕರಿಸಲಾಗಿದೆ ಎಂದು ಆರೋಪಿಸಿದರು, ಇದರಿಂದಾಗಿ ಅವರು ಆಗಮಿಸುವುದು ವಿಳಂಬವಾಯಿತು. ಆಕೆಯನ್ನು ತನ್ನತ್ತ ಸೆಳೆದುಕೊಳ್ಳುವ ಯಾವುದೇ ಪ್ರಯತ್ನ ಸಫಲವಾಗುವುದಿಲ್ಲ ಎಂದು ಬಿಜೆಪಿಗೆ ಎಚ್ಚರಿಕೆ ನೀಡಿದರು.
ಬೆಂಗಳೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ವಿಷಯ ಸಾರ್ವಜನಿಕವಾಗಿ ಚರ್ಚಿಸುವ ವಿಷಯವಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಹೇಳಿದ್ದಾರೆ.ನವೆಂಬರ್ 26 ರಂದು ನಡೆಯಲಿರುವ ಸಂವಿಧಾನ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿದ್ದ ಖರ್ಗೆ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, "ಇದು ಇಲ್ಲಿ ಮತ್ತು ಸಾರ್ವಜನಿಕವಾಗಿ ಚರ್ಚಿಸಬೇಕಾದ ವಿಷಯವಲ್ಲ, ನವೆಂಬರ್ 26 ರ ಸಂವಿಧಾನ ದಿನಾಚರಣೆಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ವಿಶೇಷವಾಗಿ ಇಲ್ಲಿಗೆ ಬಂದಿದ್ದೇನೆ. ಕಾರ್ಯಕ್ರಮಕ್ಕೆ ನನಗೆ ಆಹ್ವಾನವಿದೆ. ಸಮಾರಂಭದಲ್ಲಿ ಭಾಗವಹಿಸಲು ನಾನು ಪರಿಶೀಲನಾ ಸಭೆಗಳನ್ನು ಹೊಂದಿದ್ದೇನೆ ಎಂದರು.
ಗುಜರಾತ್: ಮೀನುಗಾರಿಕಾ ವಲಯವು ಅಭೂತಪೂರ್ವ ಬೆಳವಣಿಗೆಯನ್ನು ಅನುಭವಿಸುತ್ತಿದೆ, ಇದು ಉತ್ಪಾದನೆ, ವಿಸ್ತರಣೆಯ ರಫ್ತು ಮತ್ತು ಗಮನಾರ್ಹ ರಾಜ್ಯ ಬೆಂಬಲಿತ ಹೂಡಿಕೆಯಿಂದ ಗುರುತಿಸಲ್ಪಟ್ಟಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ ಗುಜರಾತ್ನಿಂದ ಮೀನು ರಫ್ತು ಮೌಲ್ಯವು 2001 ರಲ್ಲಿ 625 ಕೋಟಿ ರೂಪಾಯಿಗಳಿಂದ 2023-24 ರಲ್ಲಿ 6,000 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ, ಇದು ಭಾರತದ ಸಮುದ್ರ ಆರ್ಥಿಕತೆಯಲ್ಲಿ ರಾಜ್ಯದ ಹೆಚ್ಚುತ್ತಿರುವ ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತದೆ, ಇದು ಸುಮಾರು ಹತ್ತು ಪಟ್ಟು ಹೆಚ್ಚಳವಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಸರಾಸರಿ 8.56 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯನ್ನು ಸಾಧಿಸಿದೆ.'ಭಾರತದ ಸಮುದ್ರ ಆರ್ಥಿಕತೆಯಲ್ಲಿ ರಾಜ್ಯದ ಹೆಚ್ಚುತ್ತಿರುವ ಪ್ರಾಮುಖ್ಯತೆಯನ್ನು ಒತ್ತಿಹೇಳುವ ಸುಮಾರು ಹತ್ತು ಪಟ್ಟು
ಗದಗ: ರೈತರಿಗಾಗಿ ಬೆಂಬಲ ಬೆಲೆ ಘೋಷಿಸಿ ಖರೀದಿ ಕೇಂದ್ರ ಆರಂಭ ಮಾಡಿ ಎಂದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಈಗ ಶಾಸಕರ ಖರೀದಿಗಾಗಿ ಕೇಂದ್ರ ತೆರೆದಿದೆ ಎಂದು ಸಂಸದ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯ ಮಾಡಿದ್ದಾರೆ.ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖರೀದಿಗಾಗಿ ಒಬ್ಬೊಬ್ಬ ಶಾಸಕರಿಗೆ 50 ರಿಂದ 60 ಕೋಟಿ ಹಣ ಕೊಟ್ಟಿದ್ದಾರಂತೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕೊಡುವ ಬಗ್ಗೆ ಹೇಳಿದ್ದಾರೆ. ಶಾಸಕರ ಖರೀದಿ ಮಾಡಲು ಖರೀದಿ ಕೇಂದ್ರ ಆರಂಭ ಮಾಡಿದ್ದಾರೆ ವಿನಾ: ರೈತರು ಬೆಳೆದ ಬೆಳೆಗೆ ಖರೀದಿ ಕೇಂದ್ರ ಆರಂಭಿಸಿಲ್ಲ ಎಂದು ಆಕ್ರೋಶ ಹೊರಹಾಕಿದರು.