ಬೆಂಗಳೂರು: 2020 ರ ದೆಹಲಿ ದಂಗೆ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯಡಿ ತಿಹಾರ್ ಜೈಲಿನಲ್ಲಿರುವ ಉಗ್ರ ಉಮರ್ ಖಾಲಿದ್ ಕುರಿತ ಪುಸ್ತಕ ಬಿಡುಗಡೆಗೆ ರಾಜ್ಯ ಸರ್ಕಾರ ಅವಕಾಶ ನೀಡಿದ್ದನ್ನು ವಿರೋಧಿಸಿ ಬಿಜೆಪಿ ರಾಜ್ಯ ಯುವ ಮೋರ್ಚಾ ವತಿಯಿಂದ ಇಂದು ದೊಮ್ಮಲೂರಿನ ಬೆಂಗಳೂರು ಇಂಟರ್ ನ್ಯಾಷನಲ್ ಸೆಂಟರ್ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾನಿರತರನ್ನು ಪೊಲೀಸರು ಬಂಧಿಸಿದರು.ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ನಿನ್ನೆ ಮಾಡಲಾಗಿತ್ತು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಪಿ.ಸಿ ಮೋಹನ್ ಅವರು, ದೇಶದ್ರೋಹಿ ಉಮರ್ ಖಾಲಿದ್ 2020 ರ ದೆಹಲಿ ದಂಗೆಯ ಪ್ರಮುಖ ಆಪಾದಿತ. ಅಂದು ನಡೆದ ಸ್ಫೋಟದಲ್ಲಿ ಸಾಕಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಬೆಂಗಳೂರು: ಕಲಬುರಗಿಯಲ್ಲಿ ತಳವಾರ ಸಮುದಾಯದವರಿಗೆ ಪರಿಶಿಷ್ಟ ಪಂಗಡ (ಎಸ್ಟಿ) ಪ್ರಮಾಣ ಪತ್ರಕ್ಕಾಗಿ ಹೋರಾಟ ನಡೆಸುತ್ತಿದ್ದವರ ಮೇಲೆ ಲಾಠಿ ಪ್ರಹಾರ ಮಾಡಿ ಬಂಧಿಸಿ ಎಫ್ಐಆರ್ ದಾಖಲಿಸಿರುವುದು ಸರಿಯಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ತಿನ ವಿರೋಧಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು. ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣಪತ್ರ ಕೊಡುತ್ತಿಲ್ಲ ಎಂದು ಆ ಸಮುದಾಯದ ಅನೇಕ ಯುವಕರು, ಮುಖಂಡರು ಪ್ರತಿಭಟನೆ ನಡೆಸುತ್ತಿದ್ದರು. ಅವರ ಮೇಲೆ ಲಾಠಿಪ್ರಹಾರ ನಡೆಸಲಾಗಿದೆ.
ಇತ್ತೀಚೆಗೆ ನಡೆದ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಇಡೀ ದೇಶವೇ ಕುತೂಹಲದಿಂದ ಕಾಯುತ್ತಿದೆ. ಬಹುತೇಕ ರಾಜ್ಯಗಳಲ್ಲಿ ಸ್ಥಳೀಯ ಪಕ್ಷ ಮತ್ತು ಎನ್ ಡಿಎ ಕೂಟದ ನಡುವೆ ಪ್ರಬಲ ಪೈಪೋಟಿಯಿದೆ. ಪಶ್ಚಿಮ ಬಂಗಾಲ, ತಮಿಳುನಾಡು, ಕೇರಳ ಮತ್ತು ಅಸ್ಸಾಂ ರಾಜ್ಯಗಳ ಎಕ್ಸಿಟ್ ಪೋಲ್ ಫಲಿತಾಂಶ ಏನಾಗಬಹುದು ನೋಡಿ. 2026ರ ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳ ಎಕ್ಸಿಟ್ ಪೋಲ್ (ಮತಗಟ್ಟೆ ಸಮೀಕ್ಷೆ) ಫಲಿತಾಂಶಗಳ ಕುರಿತಾದ ಸಮಗ್ರ ಮಾಹಿತಿ ಇಲ್ಲಿದೆ:
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಹಾಗೂ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿರುವ ಬೆನ್ನಲ್ಲೇ ಸಿಎಂ, ಡಿಸಿಎಂ ಇಬ್ಬರೂ ಒಂದೇ ಕಾರಿನಲ್ಲಿ ಪ್ರಯಾಣಿಸಿರುವುದು ಭಾರೀ ಕುತೂಹಲವನ್ನು ಮೂಡಿಸಿದೆ. ರಾಜ್ಯದಲ್ಲಿ ಕೆಲ ಕೈ ಶಾಸಕರು ಸಚಿವ ಸಂಪುಟ ವಿಸ್ತರಣೆಗೆ ಭೇಡಿಕೆಯನ್ನಿಟ್ಟಿದ್ದಾರೆ. ಇನ್ನೂ ಕೆಲ ಶಾಸಕರು ಮೇಯಲ್ಲಿ ಸಿಎಂ ಕುರ್ಚಿ ಬದಲಾವಣೆಯಾಗುವ ಸಾಧ್ಯತೆಯನ್ನು ವ್ಯಕ್ತಪಡಿಸಿದ್ದಾರೆ. ಈ ನಡುವೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಒಟ್ಟಿಗೆ ಪ್ರಯಾಣಿಸಿರುವುದು ರಾಜಕೀಯ ವಲಯದಲ್ಲಿ ಭಾರೀ
ಬೆಂಗಳೂರು: ಮೇ 15ರ ರೊಳಗೆ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಸಿಹಿ ಸುದ್ದಿ ಸಿಗಲಿದೆ ಎಂದು ಕೈ ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ ಹೇಳಿದರು. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನರ್ ರಚನೆ ಆಗಲೇಬೇಕು. ಇನ್ನೂ ದೆಹಲಿಗೆ ಹೋಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ್ವಿ. ಅವರು ನಮಗೆ ಭರವಸೆ ಕೊಟ್ಟಿದ್ದು, ಕೆಲಸ ಮಾಡದ ಮಂತ್ರಿಗಳನ್ನು ಕೈಬಿಟ್ಟು ಹೊಸಬರನ್ನು ಸೇರಿಸಬೇಕಾಗುತ್ತದೆ. 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದ್ರೆ ಸಂಪುಟ ಪುನರ್ ರಚನೆ ಆಗಲೇಬೇಕು. ಮಂತ್ರಿ ಸ್ಥಾನ ಕೇಳೋದು ನಮ್ಮ
ಬೆಂಗಳೂರು: ತನ್ನ ಆಟೋ ಹತ್ತಿದ್ದ ಗ್ರಾಹಕ ಒಳಗೆಲ್ಲಾ ಗಲೀಜು ಮಾಡಿ ಹೋಗಿದ್ದಕ್ಕೆ ಆಟೋ ಚಾಲಕ ವಾಪಸ್ ಕರೆಸಿ ಕ್ಲೀನ್ ಮಾಡಿ ಹೋಗಿ ಸಾರ್ ಎಂದ ವಿಡಿಯೋವೊಂದು ವೈರಲ್ ಆಗಿದ್ದು ಇದು ಅನೇಕರಿಗೆ ಪಾಠವಾಗಲಿದೆ.ಸಾಮಾನ್ಯವಾಗಿ ಆಟೋ ಮಾತ್ರವಲ್ಲ, ಸಾರ್ವಜನಿಕ ಸಾರಿಗೆಗಳಲ್ಲೂ ಹಲವರು ಇದೇ ರೀತಿ ಮಾಡುತ್ತಾರೆ. ಸರ್ಕಾರೀ ಬಸ್, ರೈಲುಗಳಲ್ಲಿ ಜನ ತಿಂದು ಬಿಸಾಕುವ ಪ್ಲಾಸ್ಟಿಕ್ ಕಸಗಳು, ಕಡಲೆ ಬೀಜದ ಸಿಪ್ಪೆ ಕಾಣಬಹುದು. ಅದೇ ರೀತಿ ಕೆಲವರು ಆಟೋಗಳಲ್ಲೂ ಇದೇ ದುರಾಭ್ಯಾಸ ಮಾಡುತ್ತಾರೆ.
ಬೆಂಗಳೂರು : ಡಾ ರಾಜ್ಕುಮಾರ್ ಸಮಾಧಿ ಬಗ್ಗೆ ಪ್ರಶ್ನಿಸಿ ವಿವಾದಕ್ಕೆ ಸಿಲುಕಿರುವ ನಟ, ಸಾಮಾಜಿಕ ಕಾರ್ಯಕರ್ತ ಚೇತನಾ ಅಹಿಂಸಾ ವಿರುದ್ಧ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದರು. ಇದೀಗ ಇವರಿಬ್ಬರ ನಡುವೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವಾರ್ ನಡೆಯುತ್ತಿದೆ. ಅಣ್ಣಾವ್ರ ಹೆಸರು ಹೇಳಲು ಯೋಗ್ಯರಲ್ಲ ಎಂಬ ನಿಖಿಲ್ ಕುಮಾರಸ್ವಾಮಿ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಚೇತನ್, ಚುನಾವಣೆಯಲ್ಲಿ ಮೂರು ಬಾರಿ ಸೋತವರಿಗೆ ಯೋಗ್ಯತೆ ಇದೆಯಾ? ಎಂದು ಕೇಳಿದ್ದರು.ಈ ಪೋಸ್ಟ್ಗೆ ನಿಖಿಲ್ ಕುಮಾರಸ್ವಾಮಿ ಅವರು
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ಇಂದು ಯಥಾಸ್ಥಿತಿಯಲ್ಲಿದೆ. ಹೊಸ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 475 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 550 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 550 ರೂ.ಗಳಷ್ಟಾಗಿದೆ.
ನವದೆಹಲಿ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ , ಅಂತರಾಷ್ಟ್ರೀಯ ಮತ್ತು ಭಾರತೀಯ ಗುಪ್ತಚರ ಸಂಸ್ಥೆಗಳ ನಿಕಟ ಸಮನ್ವಯದಲ್ಲಿ, 'ಆಪರೇಷನ್ ಗ್ಲೋಬಲ್-ಹಂಟ್' ಅಡಿಯಲ್ಲಿ ಟರ್ಕಿಯೆಯಿಂದ ಮೋಸ್ಟ್ ವಾಂಟೆಡ್ ಡ್ರಗ್ ದಂಧೆಕೋರ ಮೊಹಮ್ಮದ್ ಸಲೀಂ ಡೋಲಾನನ್ನು ವಶಕ್ಕೆ ಪಡೆಯಲಾಗಿದೆ. ಇಂದು ಮುಂಜಾನೆ ದೆಹಲಿಯ ಐಜಿಐ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಆತನನ್ನು ಬಂಧಿಸಲಾಯಿತು. ಗೃಹ ಸಚಿವಾಲಯದ (MHA) ಪ್ರಕಾರ, "ಮಾರ್ಚ್, 2024 ರಲ್ಲಿ ಭಾರತದ ಕೋರಿಕೆಯ ಮೇರೆಗೆ ಇಂಟರ್ಪೋಲ್ ರೆಡ್
ವಿರಾಟ್ ಕೊಹ್ಲಿಯಿಂದ ಆಟೋಗ್ರಾಫ್ ಪಡೆಯಲು ವಿಫಲರಾಗಿದ್ದ ಕೋಪಗೊಂಡ ಬಾಲಕನೊಬ್ಬ ಕಣ್ಣೀರು ಹಾಕಿ, ಬ್ಯಾಟ್ ಅನ್ನು ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೊಟೇಲ್ಗೆ ಪ್ರವೇಶಿಸುತ್ತಿದ್ದ ವಿರಾಟ್ ಕೊಹ್ಲಿ ಬಳಿ ತನ್ನ ಬ್ಯಾಟ್ಗೆ ಆಟೋಗ್ರಾಫ್ ಅನ್ನು ಪಡೆಯಲು ಬಾಲಕ ಮುಂದಾಗಿದ್ದಾನೆ. ಆದರೆ ಇದನ್ನು ವಿರಾಟ್ ಗಮನಿಸದೆ ಮುಂದೆ ಸಾಗಿದರು. ಮಗು ಒಂದೆರಡು ಬಾರಿ ಕೊಹ್ಲಿ ಬಳಿ ಬಂದರೂ ಅಧಿಕಾರಿಗಳು ತಡೆದರು.ಇದರಿಂದ ಬೇಜಾರಾದ ಯುವ ಅಭಿಮಾನಿ ಅತ್ತುಕೊಂಡು ಬ್ಯಾಟ್ ಅನ್ನು ನೆಲಕ್ಕೆ ಎಸೆದಿದ್ದಾನೆ. ಜೋರಾಗಿ ಅತ್ತುಕೊಂಡು ತನ್ನ
ನವದೆಹಲಿ: ಗಾಳಿಯಲ್ಲಿ ನೆಲಕ್ಕೆ ಬೀಳುತ್ತಿದ್ದ ಡಿಸಿ ಭಾವುಟಕ್ಕೆ ಆರ್ಸಿಬಿ ಆಟಗಾರ ಜಿತೇಶ್ ಶರ್ಮಾ ತೋರಿದ ಗೌರವ ಭಾರೀ ಮೆಚ್ಚುಗೆ ಪಾತ್ರವಾಗಿದೆ. ಈ ಸಂಬಂಧದ ವಿಡಿಯೋ ಕೂಡಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೀಸಿದ ಜೋರು ಗಾಳಿಗೆ ಡಿಲ್ಲಿ ಭಾವುಟ ಹಾರಿಕೊಂಡು ಗ್ರೌಂಡ್ಗೆ ಬಂದಿದೆ. ಇದನ್ನು ಗಮನಿಸಿದ ಜಿತೇಶ್, ನೆಲಕ್ಕೆ ಬೀಳುವುದನ್ನು ತಪ್ಪಿಸಲು ಓಡಿ ಹೋಗಿದ್ದಾನೆ. ಕೂಡಲೇ ಅದನ್ನು ಹಿಡಿದು, ತನ್ನ ಜೇಬಿನಲ್ಲಿ ಇಟ್ಟುಕೊಂಡಿದ್ದಾನೆ.
ನವದೆಹಲಿ: 1 ಮೇ 2026 ರಿಂದ ಎಲ್ಪಿಜಿ ನಿಯಮ ಬದಲಾವಣೆ: ದೇಶಾದ್ಯಂತ ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಎಲ್ಪಿಜಿಯ ನಿರಂತರ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹೇಳಿದೆ. ಹಾರ್ಮುಜ್ ಜಲಸಂಧಿಯಲ್ಲಿ ನಡೆಯುತ್ತಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಪೆಟ್ರೋಲಿಯಂ ಸಚಿವಾಲಯವು ಎಲ್ಪಿಜಿ ಗ್ರಾಹಕರು ಡಿಜಿಟಲ್ ಬುಕಿಂಗ್ ಪ್ಲಾಟ್ಫಾರ್ಮ್ಗಳನ್ನು ಬಳಸಲು ಮತ್ತು ವಿತರಕರನ್ನು ಭೇಟಿ ಮಾಡುವುದನ್ನು ತಪ್ಪಿಸುವಂತೆ ವಿನಂತಿಸಿದೆ. PNG ಮತ್ತು ಎಲೆಕ್ಟ್ರಿಕ್ ಅಥವಾ ಇಂಡಕ್ಷನ್ ಕುಕ್ಟಾಪ್ಗಳಂತಹ ಪರ್ಯಾಯ ಇಂಧನಗಳನ್ನು ಬಳಸಲು ಸರ್ಕಾರವು ನಾಗರಿಕರನ್ನು ನಿರಂತರವಾಗಿ ಪ್ರೋತ್ಸಾಹಿಸಿದೆ.
ದಾವಣಗೆರೆ: ವಚನಾನಂದ ಶ್ರೀಗಳ ಬದಲು ಪಂಚಮಸಾಲಿ ಪೀಠಕ್ಕೆ ನಾನು ಬರೋದು ಭಕ್ತರು ಹಾಗೂ ಟ್ರಸ್ಟಿಗಳಿಗೆ ಬಿಟ್ಟ ವಿಚಾರವಾಗಿದೆ ಎಂದು ಮನಗುಳಿ ಸಂಗನಬಸವ ಸ್ವಾಮೀಜಿ ಹೇಳಿದರು. ಹರಿಹರ ಪಂಚಮಸಾಲಿ ಪೀಠದ ವಿವಾದ ಹಿನ್ನೆಲೆ ಹರಿಹರಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಹರಜಾತ್ರೆಯಲ್ಲಿ ಈ ಹಿಂದೆ ಸಹ ವಚನಾನಂದ ಸ್ವಾಮೀಜಿಗಳ ವಿರುದ್ಧ ಅವರು ಅಸಮಾಧಾನ ಹೊರಹಾಕಿದ್ದರು.ಹರಜಾತ್ರೆಯಲ್ಲಿ ವಚನಾನಂದ ಸ್ವಾಮೀಜಿ ಗಣ್ಯರಿಗೆ ಅಪಮಾನ ಮಾಡಿದ್ದಾರೆ. ಭಕ್ತರಲ್ಲಿ ಒಡಕು ತರುವ ಕೆಲಸ ಮಾಡಿದ್ದಾರೆ
ಬೆಂಗಳೂರು: 2019 ರ ಘಟನೆಯಲ್ಲಿ ಎನ್ಎಚ್ಎಐ ಇಂಜಿನಿಯರ್ಗೆ ಅವಮಾನ ಮಾಡಿದ್ದಕ್ಕಾಗಿ ಸಿಂಧುದುರ್ಗ ನ್ಯಾಯಾಲಯ ನಿತೇಶ್ ರಾಣೆಗೆ ಒಂದು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಲಯವು ಈ ಕೃತ್ಯವನ್ನು "ಅಧಿಕಾರದ ದುರುಪಯೋಗ" ಎಂದು ಕರೆದಿದೆ ಆದರೆ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಸಮಯವನ್ನು ಅನುಮತಿಸಲು ಶಿಕ್ಷೆಯನ್ನು ಅಮಾನತುಗೊಳಿಸಿತು.2019 ರಲ್ಲಿ ಎನ್ಎಚ್ಎಐ ಎಂಜಿನಿಯರ್ ಮೇಲೆ ಮಣ್ಣು ಸುರಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಸಚಿವ ಮತ್ತು ಬಿಜೆಪಿ ನಾಯಕ
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮೇ 15ರ ಒಳಗೆ ಹೈಕಮಾಂಡ್ ಗಿಫ್ಟ್ ನೀಡಲಿದ್ದಾರೆ ಡಿಕೆ ಬಣದ ಶಾಸಕರು ಹೇಳುತ್ತಿದ್ದಾರೆಂದು ಮಾಜಿ ಸಚಿವ ಕೆಎನ್ ರಾಜಣ್ಣ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಬೆಂಬಲಿಗ ಶಾಸಕರು ಮುಂದೆ ಕರ್ನಾಟಕದಲ್ಲಿ ದಲಿತರು ಮುಖ್ಯಮಂತ್ರಿಯಾಗಬೇಕೆಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.ಅಧಿಕಾರ ಮುಂದುವರಿಸಲು ಅಥವಾ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಇನ್ನೂ
ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶದದ ಕೆಡಿ ದಿ ಡೆವಿಲ್ ಚಿತ್ರವು ಬಿಡುಗಡೆಗೆ ಮುನ್ನವೇ ಭಾರೀ ಸದ್ದು ಮಾಡುತ್ತಿದೆ. ಅದರಲ್ಲೂ ಸರ್ಕೆ ಚುನರ್ ತೇರಿ ಸರ್ಕೆ ಹಾಡಿನ ವಿವಾದ ದೇಶದಾದ್ಯಂತ ಸುದ್ದಿಯಾಗಿತ್ತು. ಇದೀಗ ಈ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಂಜಯ್ ದತ್ ಸೋಮವಾರ ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ಹಾಜರಾಗಿ ಲಿಖಿತ ಕ್ಷಮೆಯಾಚಿಸಿದರು. ಕೆಡಿ: ದಿ ಡೆವಿಲ್ ಕನ್ನಡ ಚಿತ್ರವಾಗಿದ್ದು, ಹಿಂದಿ ಸೇರಿದಂತೆ ನಾಲ್ಕು ಭಾಷೆಗಳಿಗೆ ಡಬ್ ಮಾಡಲಾಗಿದೆ. ಇದು ಏಪ್ರಿಲ್ 30 ರಂದು ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಧ್ರುವ ಸರ್ಜಾ, ವಿ ರವಿಚಂದ್ರನ್, ರಮೇಶ್ ಅರವಿಂದ್ ಮತ್ತು ಶಿಲ್ಪಾ ಶೆಟ್ಟಿ ಕೂಡ ನಟಿಸಿದ್ದಾರೆ.ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಅವರಿಗೂ ಸಮನ್ಸ್ ನೀಡಲಾಗಿದೆ. ಆದರೆ ಅವರು ವಿದೇಶದಲ್ಲಿ ಇರುವುದರಿಂದ ಹಾಜರಾಗಲು ಸಾಧ್ಯವಾಗಲಿಲ್ಲ ಮತ್ತು ವಿಚಾರಣೆಗೆ ಹೊಸ ದಿನಾಂಕವನ್ನು ಕೋರಿದ್ದಾರೆ. ಸಂಜಯ್ ದತ್ತ ಹಾಜರಾಗಿ ಕ್ಷಮೆಯಾಚಿಸಿದರು.
ಬೆಂಗಳೂರು: ಅಣ್ಣಾವ್ರ ಬಗ್ಗೆ ಮಾತನಾಡಲು ಚೇತನ್ಗೆ ಯೋಗ್ಯತೆಯಿಲ್ಲ ಎಂದ ನಟ ಚೇತನ್ ಹೇಳಿಕೆಗೆ ಜೆಡಿಎಸ್ಗೆ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಆಕ್ರೋಶ ಹೊರಹಾಕಿದ್ದಾರೆ. ಸ್ಮಾರಕದ ಜಾಗದ ವಿಚಾರವಾಗಿ ಚೇತನ್ ಅವರು ಎತ್ತಿದ್ದ ಆಕ್ಷೇಪಕ್ಕೆ ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದ ನಿಖಿಲ್, ‘ಅಣ್ಣಾವ್ರ ಬಗ್ಗೆ ಮಾತನಾಡಲು ಚೇತನ್ಗೆ ಯೋಗ್ಯತೆಯಿಲ್ಲ ಎಂದರು.ಈ ಕುರಿತು ಫೇಸ್ಬುಕ್ನಲ್ಲಿ ತಿರುಗೇಟು ನೀಡಿರುವ ಚೇತನ್, ‘ಪ್ರಜಾಪ್ರಭುತ್ವದಲ್ಲಿ ನಾವೆಲ್ಲರೂ ಮಾತನಾಡಲು ಯೋಗ್ಯರೇ.
ಬೆಂಗಳೂರು: ಕಳೆದ 18 ವರ್ಷಗಳಿಂದ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿರುವ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ 9 ಸಾವಿರ ರನ್ಗಳ ಮೈಲುಗಲ್ಲು ದಾಟಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸೋಮವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಈ ಮೇಲಿಗಲ್ಲು ತಲುಪಿದರು.ಈ ಪಂದ್ಯಕ್ಕೂ ಮುನ್ನ 9 ಸಾವಿರ ರನ್ಗಳಿಗೆ 11 ರನ್ ಕೊರತೆಯಿತ್ತು. ಅಕ್ಷರ್ ಪಟೇಲ್ ಬೌಲಿಂಗ್ನಲ್ಲಿ ಒಂಟಿ ರನ್ ಪಡೆಯುವ ಮೂಲಕ ಈ ಸಾಧನೆ ಮಾಡಿದರು. ಐಪಿಎಲ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ 7,183 ರನ್ ಗಳಿಸಿದ್ದು, ನಂತರದ ಸ್ಥಾನಗಳಲ್ಲಿ ಶಿಖರ್ ಧವನ್ (6,769), ಡೇವಿಡ್ ವಾರ್ನರ್ (6,565) ಹಾಗೂ ಕೆ.ಎಲ್. ರಾಹುಲ್ (5,579) ಇದ್ದಾರೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,56,170.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,55,645.00 ರೂ.ಗಳಷ್ಟಿದೆ.
ಬೆಂಗಳೂರು: ಕರ್ನಾಟಕದಲ್ಲಿರುವ ಸರ್ಕಾರಿ ಶಾಲೆಗಳ ಬಲವರ್ಧನೆಗೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆಯಿಟ್ಟಿದೆ. ಸರ್ಕಾರಿ ಶಾಲೆಗಳ ಪುನರುಜ್ಜಿವನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂಟು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇತ್ತೀಚಿನ ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಗಳ ಉತ್ತಮ ಫಲಿತಾಂಶಗಳನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಈ ಸಮಗ್ರ ಯೋಜನೆಯನ್ನು ರೂಪಿಸಲಾಗಿದೆ. ಪೋಷಕರು ಮತ್ತು ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಪ್ರವೇಶ ಪಡೆದು ಈ ಪರಿವರ್ತನೆಯ ಭಾಗವಾಗಬೇಕು ಎಂದು ಮುಖ್ಯಮಂತ್ರಿಗಳು ಕರೆ ನೀಡಿದ್ದಾರೆ.
ಗ್ಯಾಂಗ್ಟಕ್: 75 ನೇ ವಯಸ್ಸಿನಲ್ಲೂ ಯುವಕನಂತೆ ಪ್ರಧಾನಿ ಮೋದಿ ಮಕ್ಕಳೊಂದಿಗೆ ಫುಟ್ ಬಾಲ್ ಆಡಿ ಗಮನ ಸೆಳೆದಿದ್ದಾರೆ. ಸಿಕ್ಕಿಂ ಭೇಟಿ ವೇಳೆ ಗ್ಯಾಂಗ್ಟಕ್ ನಲ್ಲಿ ಫುಟ್ಬಾಲ್ ಆಡಿದ್ದಾರೆ. ಪಶ್ಚಿಮ ಬಂಗಾಲದಲ್ಲಿ ಪ್ರಚಾರ ಮುಗಿಸಿದ ಪ್ರಧಾನಿ ಮೋದಿ ಗ್ಯಾಂಗ್ಟಕ್ ನಲ್ಲಿ ಇಂದು ಬೆಳಿಗ್ಗೆ ಮಕ್ಕಳೊಂದಿಗೆ ಫುಟ್ಬಾಲ್ ಆಡಿದ್ದಾರೆ. ಪಕ್ಕಾ ಪ್ರೊಫೆಷನಲ್ ಆಟಗಾರನಂತೆ ಟ್ರ್ಯಾಕ್ ಸೂಟ್ ಹಾಕಿಕೊಂಡು ಮಕ್ಕಳೊಂದಿಗೆ ತಾವೂ ಮಗುವಾಗಿ ಆಡಿದ್ದಾರೆ. ಇಂದು ಇಲ್ಲಿ ಸುಮಾರು 4,000 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿರುವ ಅವರು ಮಕ್ಕಳೊಂದಿಗೆ ಕೆಲವು ಕ್ಷಣ ಕಳೆದಿದ್ದಾರೆ. ಪಶ್ಚಿಮ ಬಂಗಾಲದಂತೆ ಸಿಕ್ಕಿಂನಲ್ಲೂ ಫುಟ್ಬಾಲ್ ಕ್ರೀಡೆ ಜನಪ್ರಿಯವಾಗಿದೆ.
ಮುಂಬೈ: ಐಪಿಎಲ್ 2026 ರಲ್ಲಿ ಬೇರೆ ಬೇರೆ ತಂಡಗಳಲ್ಲಿ ದುಬಾರಿ ಬೆಲೆಗೆ ಖರೀದಿಯಾದ ಆಟಗಾರರಿದ್ದಾರೆ. ಆದರೆ ಕೊಟ್ಟ ಕಾಸಿಗೆ ತಕ್ಕ ಹಾಗೆ ಆಡುತ್ತಿರುವವರು ಶ್ರೇಯಸ್ ಅಯ್ಯರ್ ಮಾತ್ರ ಎಂದು ಅಭಿಮಾನಿಗಳು ಅಭಿಪ್ರಾಯಪಡುತ್ತಿದ್ದಾರೆ. ಶ್ರೇಯಸ್ ಅಯ್ಯರ್ ಐಪಿಎಲ್ 2026 ರ ದುಬಾರಿ ಆಟಗಾರಲ್ಲಿ ಒಬ್ಬರು. ಅವರನ್ನು ಕಳೆದ ಬಾರಿ ಪಂಜಾಬ್ ಕಿಂಗ್ಸ್ 26.75 ಕೋಟಿ ರೂ. ಕೊಟ್ಟು ತಂಡಕ್ಕೆ ಖರೀದಿ ಮಾಡಿತ್ತು. ಜೊತೆಗೆ ನಾಯಕನ ಪಟ್ಟವನ್ನೂ ನೀಡಿತ್ತು. ಕಳೆದ ಸೀಸನ್ ನಲ್ಲಿಯೇ ಅವರು ತಮ್ಮ ಬೆಲೆಗೆ ತಕ್ಕ ಆಟವಾಡಿ ತಂಡವನ್ನು ಫೈನಲ್ ತನಕ ತಲುಪಿಸಿದ್ದಾರೆ.
ಸಹೋದರಿ ತೀರಿಕೊಂಡಿದ್ದಾಳೆ, ಅವಳ ಖಾತೆಯಲ್ಲಿರುವ ಹಣ ಕೊಡಿ ಎಂದು ಹೇಳಿದರೂ ನಂಬದ ಬ್ಯಾಂಕ್ ಸಿಬ್ಬಂದಿಯ ವರ್ತನೆಯಿಂದ ಬೇಸತ್ತ ವ್ಯಕ್ತಿಯೊಬ್ಬರು ಆಕೆಯ ಅಸ್ಥಿಪಂಜರವನ್ನು ತಂದ ವಿಡಿಯೋವೊಂದು ಸೋಷಿಯಲ್ ಮೀಡಿಯದಲ್ಲಿ ವೈರಲ್ ಆಗಿದೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕೆಲವೊಮ್ಮೆ ಬ್ಯಾಂಕ್ ಸಿಬ್ಬಂದಿಗಳು ಸಾಲ ನೀಡಲು ಮಾತ್ರವಲ್ಲ ನಮ್ಮದೇ ಬ್ಯಾಂಕ್ ಖಾತೆಯ ವ್ಯವಹಾರ ನಡೆಸಲೂ ನೂರೆಂಟು ಸಾಕ್ಷಿ, ದಾಖಲೆಗಳನ್ನು ಕೇಳುತ್ತಾರೆ. ಇದೇ ರೀತಿ ಒಡಿಶಾದಲ್ಲಿ ಮೃತ ಮಹಿಳೆಯ ಸಹೋದರನಿಗೆ ಬ್ಯಾಂಕ್ ಸಿಬ್ಬಂದಿಗಳು ದಾಖಲೆ ಕೇಳಿದ್ದಾರೆ. ಸಹೋದರಿಯ ಖಾತೆಯಲ್ಲಿ 20,000 ರೂ.ಗಳಿತ್ತು. ಅದನ್ನು ವಿತ್ ಡ್ರಾ ಮಾಡಲು ಆತ ಬ್ಯಾಂಕ್ ಗೆ ಸಾಕಷ್ಟು ಬಾರಿ ಅಲೆದಿದ್ದಾನೆ.
ಅಮರಾವತಿ: ತಿರುಪತಿ ತಿಮ್ಮಪ್ಪನ ಮೂರ್ತಿಯನ್ನು ಸ್ಮರಣಿಕೆಯಾಗಿ ಪಡೆಯುವ ಮೊದಲು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ ಆಗಿದ್ದಾರೆ. ನಿನ್ನೆ ಆಂಧ್ರಪ್ರದೇಶದಲ್ಲಿ ಆಂಧ್ರ ಯೂನಿವರ್ಸಿಟಿಯ ಶತಮಾನೋತ್ಸವ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ಸಚಿನ್ ತೆಂಡುಲ್ಕರ್ ವಿಶೇಷ ಅತಿಥಿಯಾಗಿ ಆಗಮಿಸಿದ್ದರು. ವೇದಿಕೆಯಲ್ಲಿ ಸಿಎಂ ಚಂದ್ರಬಾಬು ನಾಯ್ಡು, ನರಾ ಲೋಕೇಶ್, ಕೇಂದ್ರ ಸಚಿವ ರಾಮಮೋಹನ ನಾಯ್ಡು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ವೇಳೆ ಅತಿಥಿಯಾಗಿ ಬಂದಿದ್ದ ಸಚಿನ್ ಗೆ ಸಿಎಂ ಚಂದ್ರಬಾಬು ನಾಯ್ಡು ಗೌರವಪೂರ್ವಕವಾಗಿ ತಿರುಪತಿ ತಿಮ್ಮಪ್ಪನ ಮೂರ್ತಿ ಸ್ಮರಣಿಕೆಯೊಂದನ್ನು ನೀಡಿ ಗೌರವಿಸಿದ್ದಾರೆ.
ಬೆಂಗಳೂರು: ಸಿಎಂ ಬದಲಾವಣೆ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಡಿಕೆ ಶಿವಕುಮಾರ್ ಬಳಿಕ ಈಗ ಸಿಎಂ ಸಿದ್ದರಾಮಯ್ಯ ಬಣ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟಿದೆ. ಅಸ್ಸಾಂ, ಕೇರಳ ಚುನಾವಣೆ ಬಳಿಕ ಮತ್ತೆ ರಾಜ್ಯದಲ್ಲಿ ಅಧಿಕಾರ ಹಸ್ತಾಂತರ ವಿಚಾರ ಸದ್ದು ಮಾಡುವ ಸೂಚನೆ ಸಿಕ್ಕಿದೆ. ಈಗಾಗಲೇ ಡಿಕೆ ಶಿವಕುಮಾರ್ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿ ಬಂದಿದ್ದಾರೆ. ಇದರ ನಡುವೆ ನಿನ್ನೆ ಡಿಕೆ ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕರು ಮೇ ಎರಡನೇ ವಾರದಲ್ಲಿ ಹೈಕಮಾಂಡ್ ಸಿಹಿ ಸುದ್ದಿ ನೀಡಲಿದೆ ಎಂದು ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆದಾಗ ಕುಕ್ಕರ್ ಬಾಂಬ್ ಬ್ಲಾಸ್ಟ್ ಅಂತೆ ಎಂದು ಇದೆಲ್ಲಾ ಸುಳ್ಳು ಎಂಬಂತೆ ವ್ಯಂಗ್ಯ ಮಾಡಿದ್ದ ಡಿಕೆ ಶಿವಕುಮಾರ್ ಹಳೇ ವಿಡಿಯೋ ಹಂಚಿಕೊಂಡು ಬಿಜೆಪಿ ಟಾಂಗ್ ಕೊಟ್ಟಿದೆ. ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಉಗ್ರ ಶಾರಿಕ್ ಗೆ ನಿನ್ನೆ ಎನ್ಐಎ ಕೋರ್ಟ್ ಆರೋಪ ಸಾಬೀತಾದ ಹಿನ್ನಲೆಯಲ್ಲಿ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಅಂದು ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆದಾಗ ಡಿಕೆ ಶಿವಕುಮಾರ್ ‘ಕುಕ್ಕರ್ ಬ್ಲಾಸ್ಟ್ ಅಂತೆ, ಕುಕ್ಕರ್ ಬ್ಲಾಸ್ಟ್, ಇದೆಲ್ಲಾ ಡೈವರ್ಶನ್ ಪಾಲಿಟಿಕ್ಸ್’ ಎಂದು ವ್ಯಂಗ್ಯ ಮಾಡಿದ್ದರು.
ದೆಹಲಿ: ವಿರಾಟ್ ಕೊಹ್ಲಿ ಆಟೋಗ್ರಾಫ್ ಕೊಡಲಿಲ್ಲ ಎಂದು ತೀರಾ ಬೇಸರಗೊಂಡ ಮಗು ಬಿಕ್ಕಿ ಬಿಕ್ಕಿ ಅತ್ತ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ.ಐಪಿಎಲ್ ವೇಳೆ ವಿರಾಟ್ ಕೊಹ್ಲಿ ತಮ್ಮ ಟೀಂ ಹೋಟೆಲ್ ಗೆ ಬರುತ್ತಿದ್ದರು. ಸಾಕಷ್ಟು ಜನ ಈ ಸಂದರ್ಭದಲ್ಲಿ ಕೊಹ್ಲಿಗಾಗಿ ಕಾದು ಆಟೋಗ್ರಾಫ್ ಪಡೆಯುತ್ತಾರೆ. ಅದೇ ರೀತಿ ಈ ಪುಟ್ಟ ಹುಡುಗನೂ ಗಂಟೆಗಟ್ಟಲೇ ಕಾದು ನಿಂತಿತ್ತು. ಪುಟಾಣಿ ಬ್ಯಾಟ್ ತಂದು ಅದಕ್ಕೆ ಕೊಹ್ಲಿಯಿಂದ ಆಟೋಗ್ರಾಫ್ ಪಡೆಯಬೇಕು ಎಂದು ಕಾದು ನಿಂತಿತ್ತು. ವಿರಾಟ್ ಕೊಹ್ಲಿ ಬರುತ್ತಿದ್ದಂತೇ ಓಡಿ ಹೋಗಿ ಆಟೋಗ್ರಾಫ್ ಪಡೆಯಲು ಬಂದಿತ್ತು.
ದೆಹಲಿ: ಐಪಿಎಲ್ 2026 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್ ಸಿಬಿ ಭರ್ಜರಿ ಬೌಲಿಂಗ್ ಬಳಿಕ ವಿರಾಟ್ ಕೊಹ್ಲಿ ನಡೆದುಕೊಂಡ ರೀತಿ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಈ ಕ್ಷಣದ ವಿಡಿಯೋ ಇಲ್ಲಿದೆ ನೀವೇ ಗಮನಿಸಿ. ನಿನ್ನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಕೇವಲ 75 ರನ್ ಗಳಿಗೆ ಕಟ್ಟಿ ಹಾಕಿದ ಆರ್ ಸಿಬಿ 76 ರನ್ ಗಳ ಗುರಿಯನ್ನು ಕೇವಲ 6.3 ಓವರ್ ಗಳಲ್ಲೇ ಕೇವಲ 1 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತ್ತು. ಭರ್ಜರಿ ಬೌಲಿಂಗ್ ಪ್ರದರ್ಶನದ ಬಳಿಕ ಭರ್ಜರಿ ಬ್ಯಾಟಿಂಗ್ ಕೂಡಾ ಮಾಡಿ ಆರ್ ಸಿಬಿ ಎಲ್ಲಾ ವಿಭಾಗಗಳಲ್ಲಿ ಸೈ ಎನಿಸಿಕೊಂಡಿತು.
ನವದೆಹಲಿ: ದೇಶದ ಎರಡನೇ ಮಹಿಳಾ ರಾಷ್ಟ್ರಪತಿಯಾಗಿರುವ ದ್ರೌಪದಿ ಮುರ್ಮು ಬಳಿಕ ಭಾರತದ ರಾಷ್ಟ್ರಪತಿಯಾಗಬಹುದಾದ ಅಭ್ಯರ್ಥಿ ಯಾರು ಗೊತ್ತೇ? ಇದೀಗ ಈ ಬಗ್ಗೆ ಚರ್ಚೆ ಶುರುವಾಗಿದೆ. 2022 ರಲ್ಲಿ ಎನ್ ಡಿಎ ಅಭ್ಯರ್ಥಿಯಾಗಿದ್ದ ದ್ರೌಪದಿ ಮುರ್ಮು ದೇಶದ ಎರಡನೇ ಮಹಿಳಾ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರು. ಅವರ ಅಧಿಕಾರವಧಿ ಇನ್ನೇನು ಮುಗಿಯಲಿದೆ. ಭಾರತದ ಸಂವಿಧಾನದ ಪ್ರಕಾರ ರಾಷ್ಟ್ರಪತಿಗಳ ಅಧಿಕಾರವಧಿ 5 ವರ್ಷಗಳದ್ದಾಗಿದೆ. 2027 ಜುಲೈ 25 ಕ್ಕೆ ದ್ರೌಪದಿ ಮುರ್ಮು ಅಧಿಕಾರವಧಿ ಮುಕ್ತಾಯವಾಗಲಿದೆ. ಹೀಗಾಗಿ ಮುಂದಿನ ವರ್ಷಕ್ಕೆ ದೇಶಕ್ಕೆ ಹೊಸ ರಾಷ್ಟ್ರಪತಿ ಆಯ್ಕೆಯಾಗಲಿದ್ದಾರೆ.
ಬೆಂಗಳೂರು: ವಿಪರೀತ ಬಿಸಿಲಿನ ಶಾಖದ ನಡುವೆಯೂ ಕೆಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಇಂದು ಯಾವ ಜಿಲ್ಲೆಗಳಿಗೆ ಮಳೆ ಇಲ್ಲಿದೆ ಹವಾಮಾನ ವರದಿ. ಕಳೆದ ಎರಡು, ಮೂರು ವಾರಗಳಿಂದ ಕರ್ನಾಟಕದಲ್ಲಿ ಬಿಸಿಲು ನೆತ್ತಿ ಸುಡುತ್ತಿದೆ. ಹೊರಗೆ ಕಾಲಿಡಲಾಗದ ವಾತಾವರಣವಿದೆ. ಇದರ ನಡುವೆಯೂ ಕೆಲವೆಡೆ ಮಳೆಯಾಗುತ್ತಿರುವುದು ವಿಶೇಷವಾಗಿದೆ. ಇಂದೂ ಕೆಲವು ಜಿಲ್ಲೆಗಳಿಗೆ ಉರಿಬಿಸಿಲಿದ್ದರೆ ಮತ್ತೆ ಕೆಲವು ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ಕೊಪ್ಪಳ, ಶಿವಮೊಗ್ಗ, ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸೂಚನೆಯಿದೆ. ಇನ್ನು ಕೊಡಗು, ಹಾಸನ, ಮೈಸೂರು, ಮಂಡ್ಯ, ಬೆಂಗಳೂರು, ಚಾಮರಾಜನಗರ, ರಾಮನಗರ, ವಿಜಯಪುರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.
ಇಂದು ಮಂಗಳವಾರವಾಗಿದ್ದು ದುರ್ಗಾದೇವಿಗೆ ವಿಶೇಷವಾದ ದಿನವಾಗಿದೆ. ಇಂದು ದುರ್ಗಾ ದೇವಿಯ ಅನುಗ್ರಹಕ್ಕಾಗಿ ಚುಟುಕಾದ ಈ ನವದುರ್ಗಾ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.ಈಶ್ವರ ಉವಾಚ । ಶೃಣು ದೇವಿ ಪ್ರವಕ್ಷ್ಯಾಮಿ ಕವಚಂ ಸರ್ವಸಿದ್ಧಿದಮ್ ।ಪಠಿತ್ವಾ ಪಾಠಯಿತ್ವಾ ಚ ನರೋ ಮುಚ್ಯೇತ ಸಂಕಟಾತ್ ॥ 1 ॥ ಅಜ್ಞಾತ್ವಾ ಕವಚಂ ದೇವಿ ದುರ್ಗಾಮಂತ್ರಂ ಚ ಯೋ ಜಪೇತ್ ।ನ ಚಾಪ್ನೋತಿ ಫಲಂ ತಸ್ಯ ಪರಂ ಚ ನರಕಂ ವ್ರಜೇತ್ ॥ 2 ॥ ಉಮಾದೇವೀ ಶಿರಃ ಪಾತು ಲಲಾಟೇ ಶೂಲಧಾರಿಣೀ ।ಚಕ್ಷುಷೀ ಖೇಚರೀ ಪಾತು ಕರ್ಣೌ ಚತ್ವರವಾಸಿನೀ ॥ 3 ॥
ಬೆಂಗಳೂರು: ಸಾಹಸಸಿಂಹ ಡಾ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆಯಾಗಿ ತಿಂಗಳುಗಳೇ ಕಳೆದಿವೆ. ಆದರೆ ಇದುವರೆಗೆ ಪ್ರಶಸ್ತಿ ಪ್ರಧಾನವಾಗಿಲ್ಲ. ಈ ಬಗ್ಗೆ ಸಿಎಂ ಸಿದ್ದರಾಮಯ್ಯರಿಂದ ಅಳಿಯ, ನಟ ಅನಿರುದ್ಧ ಜತ್ಕರ್ ಗೆ ಸಿಕ್ಕ ಭರವಸೆಯೇನು ಇಲ್ಲಿದೆ ವಿವರ. ಕಳೆದ ವರ್ಷ ಸಾಹಸಸಿಂಹ ಡಾ ವಿಷ್ಣುವರ್ಧನ್ ಅವರ 75 ನೇ ಜನ್ಮ ಜಯಂತಿ ಸಂದರ್ಭದಲ್ಲಿ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಅವರ ಜೊತೆಗೆ ದಿವಂಗತ ನಟಿ ಬಿ ಸರೋಜ ದೇವಿ ಅವರಿಗೂ ಕರ್ನಾಟಕ ರತ್ನ ಘೋಷಣೆಯಾಗಿತ್ತು.
ದೆಹಲಿ: ಐಪಿಎಲ್ 2026 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಬಿರುಗಾಳಿಯಂತಹ ಬೌಲಿಂಗ್ ಮಾಡಿದ ಆರ್ ಸಿಬಿ ಎದುರಾಳಿಗಳನ್ನು ಸಂಪೂರ್ಣವಾಗಿ ಧೂಳೀಪಟ ಮಾಡಿದ್ದಾರೆ. ಇಂದು ಟಾಸ್ ಗೆದ್ದ ಆರ್ ಸಿಬಿ ಮೊದಲು ಬೌಲಿಂಗ್ ಆಯ್ದುಕೊಂಡಿತು. ಅದಕ್ಕೆ ತಕ್ಕಂತೆ ಬೌಲಿಂಗ್ ಮಾಡಿದ ಜೋಶ್ ಹೇಝಲ್ ವುಡ್, ಭುವನೇಶ್ವರ್ ಕುಮಾರ್ ಜೋಡಿ ಕನಸಿನಂತೆ ಬೌಲಿಂಗ್ ಮಾಡಿದರು. ಡೆಲ್ಲಿ ಒಂದು ಹಂತದಲ್ಲಿ ರನ್ ಗಳಿಸಿದ್ದಕ್ಕಿಂತ ಹೆಚ್ಚು ವಿಕೆಟ್ ಕಳೆದುಕೊಂಡಿತ್ತು. ಆರ್ ಸಿಬಿ ಬೌಲಿಂಗ್ ಯಾವ ಮಟ್ಟಿಗಿತ್ತು ಎಂದರೆ ಕೇವಲ 8 ರನ್ ಗೆ ಡೆಲ್ಲಿ 6 ವಿಕೆಟ್ ಕಳೆದುಕೊಂಡಿತ್ತು.
ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಈ ಬಾರಿ ದಾಖಲೆಯ ಫಲಿತಾಂಶ ಪಡೆಯಲು ಪರೀಕ್ಷಾ ಕೇಂದ್ರದಲ್ಲಿ ವೆಬ್ಕ್ಯಾಸ್ಟಿಂಗ್ ಸ್ಥಗಿತಗೊಳಿಸಿ ಕಾಪಿ ಹೊಡೆಯಲಾಗಿದೆ ಎಂಬ ಎಚ್ ವಿಶ್ವನಾಥ್ ಆರೋಪಕ್ಕೆ ಮಧುಬಂಗಾರಪ್ಪ ಪ್ರತಿಕ್ರಿಯಿಸಿ, ಅವರಿಗೆ ವಯಸ್ಸಾಗಿದೆ. ಅದನ್ನು ಅರಳುಮರಳು ಎಂದು ಹೇಳಲಾಗುವುದಿಲ್ಲ ಎಂದು ಹೇಳಿದರು. ಅವರ ಈ ಹೇಳಿಕೆ ನಾಡಿನ ಮಕ್ಕಳು ಶೈಕ್ಷಣಿಕ ಸಾಧನೆ ಒಪ್ಪಲಾಗದೇ ಮಾಡಿರುವ ಉದ್ದೇಶಪೂರ್ವಕ ಅಪಮಾನ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಕಿಡಿಕಾರಿದರು.
ಭುವನೇಶ್ವರ: ಒಡಿಶಾದಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಜನಗಣತಿ ಕಾರ್ಯದಲ್ಲಿ ನಿರತರಾಗಿದ್ದ ಇಬ್ಬರು ಶಾಲಾ ಶಿಕ್ಷಕರು ಎರಡು ದಿನಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.ಮಯೂರ್ಭಂಜ್ ಮತ್ತು ಸುಂದರ್ಗಢ ಜಿಲ್ಲೆಗಳಲ್ಲಿ ಈ ಘಟನೆಗಳು ಸಂಭವಿಸಿದ್ದು, ತಾಪಮಾನವು 37 ಡಿಗ್ರಿ ಸೆಲ್ಸಿಯಸ್ಗೆ ತಲುಪಿದೆ.ರಾಜ್ಯದಲ್ಲಿ ಇದು ಮೂರನೇ ಘಟನೆ.ಬೆಟ್ನೋಟಿ ಬ್ಲಾಕ್ನ ಬೈದ್ಯನಾಥ ಪ್ರೌಢಶಾಲೆಯ ಶಿಕ್ಷಕ ರಾಜಕಪೂರ್ ಹೆಂಬ್ರಾಮ್ ಭಾನುವಾರ ಸಂಜೆ ಬರಿಪಾದದ ಆಸ್ಪತ್ರೆಯಲ್ಲಿ
ಬೇಸಿಗೆ ಸಮಯದಲ್ಲಿ ಹಣ್ಣು ಹಾಗೂ ತರಕಾರಿಗಳನ್ನು ಸೇವಿಸುವುದು ಆರೋಗ್ಯದ ಮೇಲೆ ಉತ್ತಮವಾಗುತ್ತದೆ. ನೀರು, ನಾರಿನಂಶ ಮತ್ತು ಪೋಷಕಾಂಶಗಳಿಂದ ತುಂಬಿರುವ ಅವರು ಒಳಗಿನಿಂದ ನಿಮ್ಮನ್ನು ರಿಫ್ರೆಶ್ ಮಾಡಬಹುದು. ಈ ಋತುವಿನಲ್ಲಿ ಸೇವಿಸಲೇಬೇಕಾದ ಆಹಾರಗಳ ಬಗ್ಗೆ ಮಾಹಿತಿ ಇಲ್ಲಿದೆ. ಕಲ್ಲಂಗಡಿಕಲ್ಲಂಗಡಿ ಇಲ್ಲದೆ ಯಾವುದೇ ಬೇಸಿಗೆಯ ಹಣ್ಣಿನ ಪಟ್ಟಿ ಪೂರ್ಣಗೊಂಡಿಲ್ಲ. ಇದರ ಹೆಚ್ಚಿನ ನೀರಿನ ಅಂಶದಿಂದಾಗಿ, ಇದು ಬಿಸಿ ದಿನಗಳಲ್ಲಿ ದೇಹವನ್ನು ಹೈಡ್ರೀಕರಿಸಲು ಸಹಾಯ ಮಾಡುತ್ತದೆ.ಮಾವು
ದಕ್ಷಿಣ ಭಾರತದ ಚಿತ್ರರಂಗದಲ್ಲಿ ತಾರೆಯಾಗಿರುವ ಸಾಯಿ ಪಲ್ಲವಿ, ಥಾಯ್ ಚಿತ್ರ ಒನ್ ಡೇ ನ ರೂಪಾಂತರವಾದ ಅಮೀರ್ ಖಾನ್ ನಿರ್ಮಾಣದ ಜುನೈದ್ ಖಾನ್ ಜೊತೆಗಿನ ಏಕ್ ದಿನ್ನಲ್ಲಿ ಹಿಂದಿ ಚಿತ್ರರಂಗಜ್ಜೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಕ್ಯಾಮೆರಾ ಮುಂದೆ ವರ್ಷಗಳನ್ನು ಕಳೆದಿರುವವರಿಗೂ ಹೊಸ ಉದ್ಯಮಕ್ಕೆ ಕಾಲಿಡುವುದು ಸುಲಭವಲ್ಲ. ಮತ್ತು ಸಾಯಿ ಪಲ್ಲವಿಗೆ, ಈ ಕ್ಷಣವು ಮತ್ತೊಂದು ಚಿತ್ರ ಬಿಡುಗಡೆಗಿಂತ ಹೊಸ ಆರಂಭದಂತೆ ಭಾಸವಾಗುತ್ತದೆ.ಕಳೆದ ಒಂದು ದಶಕದಲ್ಲಿ ಮಲಯಾಳಂ, ತಮಿಳು ಮತ್ತು ತೆಲುಗು ಚಿತ್ರರಂಗದಾದ್ಯಂತ ಸದೃಢವಾದ ವೃತ್ತಿಜೀವನವನ್ನು
ಕೋಲ್ಕತ್ತಾ ನೈಟ್ ರೈಡರ್ಸ್ ಬ್ಯಾಟರ್ ಅಂಗ್ಕ್ರಿಶ್ ರಘುವಂಶಿ ಅವರು ಐಪಿಎಲ್ 2026ರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಅಂಪೈರ್ ಜತೆ ಅಶಿಸ್ತು ತೋರಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಅಂಗ್ ಕ್ರಿಶ್ ರಘುವಂಶಿಗೆ ದಂಡವನ್ನು ವಿಧಿಸಲಾಗಿದೆ. ಭಾನುವಾರ ಲಕ್ನೋದಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸೂಪರ್ ಜೈಂಟ್ಸ್ ನಡುವಿನ ಪಂದ್ಯಾಟದ ವೇಳೆ IPL ನ ನೀತಿ ಸಂಹಿತೆಯ ಹಂತ 1 ಅನ್ನು ಉಲ್ಲಂಘಿಸಿದ್ದಕ್ಕಾಗಿ ಒಂದು ಡಿಮೆರಿಟ್ ಪಾಯಿಂಟ್ ಅನ್ನು ಸಂಗ್ರಹಿಸಿದರು.ಭಾನುವಾರ ಕೋಲ್ಕತ್ತಾ ಮೊದಲು ಬ್ಯಾಟಿಂಗ್ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಐದನೇ ಓವರ್ನ ಕೊನೆಯ ಎಸೆತದಲ್ಲಿ
ರಾಜ್ಯದಲ್ಲಿ ದಿನದಿಂದ ದಿನ ಬಿಸಿಲ ಧಗೆ ಏರುತ್ತಲೇ ಇದೆ. ಇನ್ನೂ ಈ ಸಂದರ್ಭದಲ್ಲಿ ನಾವು ಸೇವಿಸುವ ಆಹಾರ ತುಂಬಾನೇ ಮುಖ್ಯ. ಇದು ನಮ್ಮ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದ. ಇನ್ನೂ ಈ ಬಿಸಿಲ ತಾಪಕ್ಕೆ ಫ್ರಿಜ್ನಿಂದ ತೆಗೆದ ತಣ್ಣನೆಯ ನೀರು ಕುಡಿಯುವುದು ಸ್ವರ್ಗದಂತೆ ಅನ್ನಿಸಬಹುದು. ಆದರೆ, ಆ ಕ್ಷಣದ ಆರಾಮದ ಜೊತೆಗೆ ಇದು ನಮ್ಮ ದೇಹದ ಮೇಲೆ ಕೆಲವು ಪರಿಣಾಮಗಳನ್ನು ಬೀರುತ್ತದೆ.ಇನ್ನೂ ಈ ಲೇಖನದಲ್ಲಿ ಪ್ರಿಡ್ಜ್ ನೀರು ಕುಡಿಯುವುದರಿಂದ ಆರೋಗ್ಯದ ಮೇಲೆ ಆಗುವ ಪರಿಣಾಮಗಳ ಬಗ್ಗೆ ಇಲ್ಲಿದೆ ಮಾಹಿತಿ:
ದೆಹಲಿ: ಐಪಿಎಲ್ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಈ ಮಧ್ಯೆ ಆರ್ಸಿಬಿ ಆಟಗಾರರು ಡೆಲ್ಲಿನಲ್ಲಿ ಗಲ್ಲಿ ಕ್ರಿಕೆಟ್ ಆಡಿ ಸಂಭ್ರಮಿಸಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಲೀಗ್ ಪಂದ್ಯಕ್ಕಾಗಿ ಆರ್ಸಿಬಿ ತಂಡ ದೆಹಲಿಯಲ್ಲಿ ಬೀಡುಬಿಟ್ಟಿದೆ. ವಿರಾಮದ ಸಮಯದಲ್ಲಿ ಆರ್ಸಿಬಿ ಆಟಗಾರರು ದೆಹಲಿಯ ಬೀದಿಗಳನ್ನು ಸುತ್ತಾಡಿ ಬಂದಿದ್ದಾರೆ.ವಸಂತ್ ಕುಂಜ್ ಪ್ರದೇಶದಲ್ಲಿ ಸುತ್ತಾಡುವಾಗ ಟಿಮ್ ಡೇವಿಡ್ ಮತ್ತು ರೊಮಾರಿಯೊ ಶೆಫರ್ಡ್, ಕೆಲ ಮಕ್ಕಳು ಗಲ್ಲಿ ಕ್ರಿಕೆಟ್ ಆಡುವುದನ್ನು ನೋಡಿ, ಅವರೊಂದಿಗೆ ತಾವು ಕೂಡ ಆಡಿದ್ದಾರೆ.
ರಾಮನಗರ: ಸಿದ್ದರಾಮಯಯ್ಯ ಬಳಿಕ ಸಿಎಂ ರೇಸ್ನಲ್ಲಿರುವುದು ಡಿಕೆ ಶಿವಕುಮಾರ್ ಮಾತ್ರ. ಇನ್ನೂ ಬೇರೆಯವರೂ ರೇಸ್ನಲ್ಲಿದ್ದಾರೆ, ಆದರೆ ಅದು ಕಾಲಕ್ಕೆ ತಕ್ಕ ಹಾಗೇ ತೀರ್ಮಾನವಾಗುತ್ತದೆ ಎಂದು ರಾಮನಗರದಲ್ಲಿ ಶಾಸಕ ಎಚ್ ಸಿ ಬಾಲಕೃಷ್ಣ ಹೇಳಿದರು. ಸದ್ಯಕ್ಕೆ ಸಿದ್ದರಾಮಯ್ಯನವರು ಬೇಡ ಅಂದಾಗ ಆ ಸ್ಥಾನದ ರೇಸ್ನಲ್ಲಿರೋದು ಡಿಕೆಶಿ. ಈ ಅವಧಿಯಲ್ಲೇ ಡಿಕೆಶಿಗೆ ಅವಕಾಶ ಸಿಗುತ್ತೆ. ನಮ್ಮ ಹೈಕಮಾಂಡ್ ಈ ಬಗ್ಗೆ ಸೂಕ್ತ ತೀರ್ಮಾನ ಮಾಡುತ್ತದೆ ಎಂದರು.
ಬೆಂಗಳೂರು: ದೇಶವನ್ನೇ ಬೆಚ್ಚಿಬೀಳಿಸಿದ ಮಂಗಳೂರಿನ ಕುಕ್ಕರ್ ಸ್ಪೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಂತೆ ಉಗ್ರ ಶಾರಿಕ್ಗೆ 10ವರ್ಷ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ. ಎನ್ಐಎ ಸ್ಪೆಷಲ್ ಕೋರ್ಟ್ ಮಹತ್ವದ ಆದೇಶವನ್ನು ಹೊರಡಿಸಿದೆ.ಸೆಕ್ಷನ್ 121 ಎ, ಸೆಕ್ಷನ್ 122, ಸೆಕ್ಷನ್ 326 ಹಾಗೂ ಯುಎಪಿಎ ಸೇರಿದಂತೆ ಹಲವು ಸೆಕ್ಷನ್ಗಳ ಅಡಿಯಲ್ಲಿ ಕೋರ್ಟ್ 10 ವರ್ಷ ಕಠಿಣ ಶಿಕ್ಷೆ, 10 ಸಾವಿರ ದಂಡ ವಿಧಿಸಿದೆ.‘ಓರ್ವ ಮಗಳಿದ್ದಾಳೆ, ಮನೆಯಲ್ಲಿ ದುಡಿಯುವವನು ನಾನೊಬ್ಬನೇ.. ಹೀಗಾಗಿ ಶಿಕ್ಷೆ ಕಡಿಮೆ ಮಾಡುವಂತೆ’ ಶಾರಿಕ್ ಮನವಿ
ರಾತ್ರಿ ಬಿರಿಯಾನಿ ಸೇವಿಸಿ, ಕಲ್ಲಂಗಡಿ ತಿಂದ ಬಳಿಕ ಒಂದೇ ಕುಟುಂಬದ ನಾಲ್ವರು ಅನುಮಾನಸ್ಪದವಾಗಿ ಸಾವನ್ನಿಪ್ಪಿರುವ ಘಟನೆ ಮುಂಬೈನಲ್ಲಿ ವರದಿಯಾಗಿದೆ. ಫುಡ್ ಪಾಯಿಸನ್ ಪ್ರಕರಣವು ಇದೀಗ ಮಹಾರಾಷ್ಟವನ್ನೇ ಬೆಚ್ಚಿಬೀಳಿಸಿದೆ. ಪೇಧುನಿ ಪ್ರದೇಶದಿಂದ ಈ ಘಟನೆ ವರದಿಯಾಗಿದ್ದು, ಅಬ್ದುಲ್ಲಾ ದೊಕಾಡಿಯಾ (40), ಅವರ ಪತ್ನಿ ನಸ್ರೀನ್ ದೋಕಾಡಿಯಾ (35), ಮತ್ತು ಅವರ ಇಬ್ಬರು ಪುತ್ರಿಯರಾದ ಆಯೇಷಾ (16) ಮತ್ತು ಜೈನಾಬ್ (13) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.
ಬೆಂಗಳೂರು: ದೆಹಲಿ ಗಲಭೆ ಪ್ರಕರಣದಲ್ಲಿ ಯುಎಪಿಎ ಅಡಿಯಲ್ಲಿ ಬಂಧಿತನಾಗಿರುವ ಉಮರ್ ಖಾಲಿದ್ ಹಾಗೂ ಶಾರ್ಜಿಲ್ ಇಮಾಮ್ ಕುರಿತ ಪುಸ್ತಕ ಬಿಡುಗಡೆಗೆ ಭಾರತೀಯ ಜನತಾ ಪಾರ್ಟಿ ವಿರೋಧವಿದೆ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಇದಕ್ಕೆ ಅವಕಾಶ ಕೊಡಬಾರದು. ಒಂದು ವೇಳೆ ಅವಕಾಶ ನೀಡಿದರೆ ಬಿಜೆಪಿ ಖಂಡಿಸಲಿದೆ ಎಂದು ವಿಧಾನ ಪರಿಷತ್ತಿನಲ್ಲಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್ ಹೇಳಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಯೋತ್ಪಾದಕರ ಕುರಿತು ಪುಸ್ತಕ ಬಿಡುಗಡೆಗೆ ಸಿದ್ಧತೆ ನಡೆದಿದೆ.
ಮಂಗಳೂರು: 2022 ರಲ್ಲಿ ನಡೆದಿದ್ದ ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಉಗ್ರ ಶಾರಿಕ್ ಗೆ ಎನ್ಐಎ ವಿಶೇಷ ಕೋರ್ಟ್ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 2022 ರ ನವಂಬರ್ 19 ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು. ಆರೋಪಿ ಶಾರಿಕ್ ಬಾಂಬ್ ಸಾಗಿಸುತ್ತಿರುವಾಗಲೇ ಸ್ಪೋಟಗೊಂಡಿತ್ತು. ಈ ಘಟನೆಯಲ್ಲಿ ಶಾರಿಕ್ ಮತ್ತು ಆಟೋ ಚಾಲಕನಿಗೆ ಗಾಯಗಳಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ಭದ್ರತೆಗೆ ಧಕ್ಕೆ ತರಲು ಸಂಚು ರೂಪಿಸಿದ ಅಪರಾಧದ ಮೇರೆಗೆ ಉಗ್ರ ಶಾರಿಕ್ ಗೆ ಎನ್ಐಎ ಕೋರ್ಟ್ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಪ್ರಕರಣವನ್ನು ಎನ್ಐಎ ತಂಡ ತನಿಖೆ ನಡೆಸಿತ್ತು.
ಗುಜರಾತ್: ಪತ್ನಿ ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ ಪೊಲೀಸರಿಗೆ ಪತಿಯ ಖತರ್ನಾಕ್ ಕೃತ್ಯ ಬಯಲಾಗಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿ ಮರದ ಬಾಕ್ಸ್ಗೆ ಶವ ತುಂಬಿ ಸಿಮೆಂಟ್ನಲ್ಲಿ ಸೀಲ್ ಮಾಡಿ, ನಂತರ ಠಾಣೆಗೆ ತೆರಳಿ ನಾಪತ್ತೆ ನಾಟಕವಾಡಿದ ಪೊಲೀಸರಿಗೆ ಪತಿಯ ಹೈಡ್ರಾಮಾ ಬಯಲಾಗಿದೆ. ಈ ಘಟನೆ ಸೂರತ್ ಅನ್ನು ಬೆಚ್ಚಿಬೀಳಿಸಿದೆ. ಒಬ್ಬ ವ್ಯಕ್ತಿ ತನ್ನ ಹೆಂಡತಿಯನ್ನು ಕೊಂದ ಬಳಿಕ ಮೃತದೇಹವನ್ನು ಮರದ ವಾಕ್ಸ್ನಲ್ಲಿ ತುಂಬಿಸಿ, ಸಿಮೆಂಟ್ನಲ್ಲಿ ಸೀಲ್ ಮಾಡಿದ್ದಾನೆ. ಇನ್ನೂ ಪ್ರಕರಣವನ್ನು ತಪ್ಪು ದಾರಿಗೆಳೆಯಲು ನಾಪತ್ತೆ ದೂರನ್ನು ದಾಖಲಿಸಿದ್ದಾನೆ. ಆರೋಪಿಯನ್ನು 40 ವರ್ಷದ ವಿಶಾಲ್ ಸಾಲ್ವಿ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಶಿಲ್ಪಾ ಸಾಲ್ವಿ (39) ಕೊಲೆಯಾದ
ನವದೆಹಲಿ: 98% LPG ರೀಫಿಲ್ ಬುಕಿಂಗ್ಗಳು ಡಿಜಿಟಲ್ನಲ್ಲಿ ನಡೆಯುತ್ತಿವೆ, ಆದರೆ 94% ವಿತರಣೆಗಳು ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು ಮತ್ತು ಅಡುಗೆ ಅನಿಲದ ದಿಕ್ಕು ತಪ್ಪಿಸುವುದನ್ನು ತಡೆಯಲು ಡೆಲಿವರಿ ದೃಢೀಕರಣ ಕೋಡ್ (DAC) ಆಧರಿಸಿವೆ ಎಂದು ಸರ್ಕಾರ ಭಾನುವಾರ ತಿಳಿಸಿದೆ. ಇಂಧನ ಕೊರತೆ ಇಲ್ಲ: ಮಾರ್ಚ್ನಲ್ಲಿ ಭಾರತದ ಎಲ್ಪಿಜಿ ಬೇಡಿಕೆ 13% ಕುಸಿದಿರುವುದರಿಂದ 100% ದೇಶೀಯ ಅನಿಲ ಪೂರೈಕೆಗೆ ಸರ್ಕಾರ ಭರವಸೆ ನೀಡುತ್ತದೆ.ಮೊಬೈಲ್ ಅಪ್ಲಿಕೇಶನ್ಗಳು, IVRS ಕರೆಗಳು ಮತ್ತು SMS ಮೂಲಕ 71% ರಷ್ಟು ಮರುಪೂರಣಗಳನ್ನು ಈ ಹಿಂದೆ
ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಮಹಿಳೆಯರ ಹಿಂಬದಿ ವಿಡಿಯೋವನ್ನು ಚಿತ್ರೀಕರಣ ಮಾಡುತ್ತಿದ್ದ ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಣೆ ಮಾಡಿದೆ. ಮೆಟ್ರೋದಲ್ಲಿ ರಹಸ್ಯವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಆರೋಪಿ ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಮೆಟ್ರೋದಲ್ಲಿ ಮಹಿಳೆಯರ ಹಿಂಬದಿ ಫೋಟೊ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತೀರಾ, ಏನಿದು ಅಸಹ್ಯ ನಡವಳಿಕೆ. ಮೆಟ್ರೋದಲ್ಲೂ ಮಹಿಳೆಯರಿಗೆ ಸುರಕ್ಷತೆ ಇಲ್ವಾ ಎಂದು ಕೋರ್ಟ್ ಬೇಸರವನ್ನು ವ್ಯಕ್ತಪಡಿಸಿದೆ.
ಕೋಲ್ಕತ್ತಾ (ಪಶ್ಚಿಮ ಬಂಗಾಳ): ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ತಮ್ಮ ಬೆಂಬಲವನ್ನು ನೀಡಿದರು, ವಿಶೇಷ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದಲ್ಲಿ 90 ಲಕ್ಷ ಮತಗಳನ್ನು ಕಡಿತಗೊಳಿಸಿದ ಭಾರತೀಯ ಜನತಾ ಪಕ್ಷಕ್ಕೆ ಬಂಗಾಳದ ಜನರು ಸೇಡು ತೀರಿಸಿಕೊಳ್ಳುತ್ತಾರೆ ಎಂದು ಅಭಿಪ್ರಾಯ ಹೊರಹಾಕಿದರು. ರಾಜ್ಯದಲ್ಲಿ ದೊಡ್ಡ ಪ್ರಮಾಣದ ಮತದಾರರ ಪಟ್ಟಿ ದುರ್ಬಳಕೆಯಾಗಿದೆ. ಕೋಲ್ಕತ್ತಾದಲ್ಲಿ ಸಾರ್ವಜನಿಕ ಸಂವಾದವನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, "ಈ ಚುನಾವಣೆಗಳಿಗಾಗಿ ನಾನು ಮಮತಾ ಬ್ಯಾನರ್ಜಿಯವರಿಗೆ ನನ್ನ ಶುಭಾಶಯಗಳನ್ನು ಹೇಳಲು ಬಯಸುತ್ತೇನೆ. ಪಶ್ಚಿಮ ಬಂಗಾಳದ ಜನರು ಈ ಸರ್ವಾಧಿಕಾರದ ವಿರುದ್ಧ ಹೋರಾಡುತ್ತಿರುವ ರೀತಿಗೆ ನಾನು ಅಭಿನಂದಿಸುತ್ತೇನೆ
ಮುಂಬೈ: ಸೈಫ್ ಅಲಿಖಾನ್ ತಮ್ಮ ಮಕ್ಕಳಿಗಾಗಿ ಖರೀದಿಸಿದ್ದ ಡೋನಟ್ ನೋಡಿ ಬಡ ಮಕ್ಕಳು ಆಸೆಯಿಂದ ಕೈ ಚಾಚಿದ್ದು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದೆ. ಇದೀಗ ಮಕ್ಕಳಿಗೆ ರಜಾ ಸಮಯ. ಸೆಲೆಬ್ರಿಟಿಯಾಗಿದ್ದರೂ ಸೈಫ್ ಅಲಿಖಾನ್ ಕೂಡಾ ತಮ್ಮ ಮಕ್ಕಳನ್ನು ಕರೆದುಕೊಂಡು ಹಾಗೇ ಒಂದು ರೌಂಡ್ ಹೋಗಿರಬೇಕು. ಮುಂಬೈನ ಡೋನಟ್ ಔಟ್ ಲೆಟ್ ನಲ್ಲಿ ಕೆಲವು ಹೊತ್ತು ಇದ್ದು ತಮ್ಮ ಮಕ್ಕಳಿಗೆ ಮೆಚ್ಚಿನ ಡೋನಟ್ ಖರೀದಿಸಿದ್ದಾರೆ. ಸೈಫ್ ಅಲಿ ಖಾನ್ ಬಂದಿದ್ದಾರೆ ಎಂದು ತಿಳಿದು ಸಾಕಷ್ಟು ಜನ ಅಂಗಡಿ ಹೊರಗೆ ಅವರನ್ನು ನೋಡಲು ನಿಂತಿದ್ದರು. ಈ ಪೈಕಿ ಸಾಕಷ್ಟು ಮಕ್ಕಳೂ ಅಲ್ಲಿ ನಿಂತಿದ್ದರು.